Tag: ED

  • ಸಚಿವ ಸೆಂಥಿಲ್‌ ಬಾಲಾಜಿಗೆ ಶೀಘ್ರವೇ ಬೈಪಾಸ್‌ ಸರ್ಜರಿ ಅಗತ್ಯ – ಇಡಿ ಅರೆಸ್ಟ್‌ ಬೆನ್ನಲ್ಲೇ ವೈದ್ಯರ ಸಲಹೆ

    ಸಚಿವ ಸೆಂಥಿಲ್‌ ಬಾಲಾಜಿಗೆ ಶೀಘ್ರವೇ ಬೈಪಾಸ್‌ ಸರ್ಜರಿ ಅಗತ್ಯ – ಇಡಿ ಅರೆಸ್ಟ್‌ ಬೆನ್ನಲ್ಲೇ ವೈದ್ಯರ ಸಲಹೆ

    ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೆ ಒಳಗಾದ ತಮಿಳುನಾಡು ಸಚಿವ ಸೆಂಥಿಲ್‌ ಬಾಲಾಜಿ (Senthil Balaji) ಅವರಿಗೆ ಶೀಘ್ರವೇ ಬೈಪಾಸ್‌ ಸರ್ಜರಿ (Bypass Surgery) ನಡೆಸಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ.

    ಇಂದು ಬೆಳಗ್ಗೆ ಅಬಕಾರಿ ಮತ್ತು ಇಂಧನ ಸಚಿವರಾಗಿದ್ದ ಸೆಂಥಿಲ್‌ ಬಾಲಾಜಿ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಬಂಧನವಾಗಿ ಕಾರಿನಲ್ಲಿ ಹೋಗುತ್ತಿದ್ದಾಗ ಹೈಡ್ರಾಮವೇ ಸೃಷ್ಟಿಯಾಗಿತ್ತು. ಎದೆಯ ಮೇಲೆ ಕೈಯನ್ನು ಇಟ್ಟು ಸೆಂಥಿಲ್‌ ಬಾಲಾಜಿ ಕಣ್ಣೀರು ಹಾಕಿ ಗೋಳಾಡಿದ್ದರು. ನಂತರ ಅವರನ್ನು ಚೆನ್ನೈನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಸೆಂಥಿಲ್‌ ಅವರನ್ನು ಪರೀಕ್ಷಿಸಿದ ಬಳಿಕ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ದೇಶಕರು ಮೆಡಿಕಲ್‌ ಬುಲೆಟಿನ್‌ ಪ್ರಕಟಿಸಿದ್ದಾರೆ. ಬೆಳಗ್ಗೆ 10:40ಕ್ಕೆ ಕೊರೊನರಿ ಆಂಜಿಯೋಗ್ರಾಮ್ ನಡೆಯಿತು. ಈ ವೇಳೆ ಹೃದಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಬೈಪಾಸ್‌ ಶಸ್ತ್ರಚಿಕಿತ್ಸೆ ಮಾಡಬೇಕೆಂದು ಸಲಹೆ ನೀಡಲಾಗಿದೆ.

    ರಾಜ್ಯ ಸಚಿವ ಶೇಖರ್‌ ಬಾಬು ಪ್ರತಿಕ್ರಿಯಿಸಿ, ಸೆಂಥಿಲ್‌ ಬಾಲಾಜಿ ಈಗ ಐಸಿಯುನಲ್ಲಿದ್ದಾರೆ. ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಮತ್ತು ಅವರ ಹೆಸರನ್ನು ಕರೆದಾಗ ಅವರು ಪ್ರತಿಕ್ರಿಯಿಸಲಿಲ್ಲ. ಈಗ ಅವರು ವೈದ್ಯರ ನಿಗಾದಲ್ಲಿದ್ದಾರೆ ಎಂದು ತಿಳಿಸಿದರು.  ಇದನ್ನೂ ಓದಿ: ತಮಿಳುನಾಡು ಅಬಕಾರಿ ಸಚಿವರ ಬಂಧನ; ಇದು BJP ಸೇಡಿನ ರಾಜಕಾರಣ – ಎಂ.ಕೆ ಸ್ಟಾಲಿನ್‌


    ಎಐಎಡಿಎಂಕೆ ನಾಯಕರಾಗಿದ್ದ ಸೆಂಥಿಲ್‌ ಬಾಲಾಜಿ ಜಯಲಲಿತಾ ಆಪ್ತರಾಗಿದ್ದರು. ಜಯಲಲಿತಾ ನಿಧನದ ಬಳಿಕ ಪಕ್ಷ ತೊರೆದು ಡಿಎಂಕೆ ಸೇರಿದ್ದರು.

  • ತಮಿಳುನಾಡು ಅಬಕಾರಿ ಸಚಿವರ ಬಂಧನ; ಇದು BJP ಸೇಡಿನ ರಾಜಕಾರಣ – ಎಂ.ಕೆ ಸ್ಟಾಲಿನ್‌

    ತಮಿಳುನಾಡು ಅಬಕಾರಿ ಸಚಿವರ ಬಂಧನ; ಇದು BJP ಸೇಡಿನ ರಾಜಕಾರಣ – ಎಂ.ಕೆ ಸ್ಟಾಲಿನ್‌

    – ಆಸ್ಪತ್ರೆಗೆ ಭೇಟಿ ಮಾಡಿ ಸೆಂಥಿಲ್ ಬಾಲಾಜಿ ಆರೋಗ್ಯ ವಿಚಾರಿಸಿದ ಸಿಎಂ
    – ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡನೆ

    ಚೆನ್ನೈ: ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಇಡಿ ಬಂಧನಕ್ಕೊಳಗಾದ ತಮಿಳುನಾಡು ಸಚಿವ ವಿ.ಸೆಂಥಿಲ್ ಬಾಲಾಜಿ (V Senthil Balaji) ಅವರನ್ನ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ (MK Stalin) ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.‌ ಇಡಿ ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ ಕೆಲ ಗಂಟೆಗಳಲ್ಲೇ ಭೇಟಿ ಮಾಡಿ ಆರೋಗ್ಯ ಸ್ಥಿತಿಗತಿಯನ್ನ ವೀಕ್ಷಿಸಿದ್ದಾರೆ. ಅಲ್ಲದೇ ಇದು ಬಿಜೆಪಿ ಸೇಡಿನ ರಾಜಕಾರಣ ಎಂದು ಕಿಡಿ ಕಾರಿದ್ದಾರೆ.

    ಸಚಿವ ವಿ.ಸೆಂಥಿಲ್ ಬಾಲಾಜಿ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಬುಧವಾರ ಶೋಧ ನಡೆಸಿದ ನಂತರ ಮನಿ ಲಾಂಡರಿಂಗ್ ತಡೆ ಕಾಯ್ದೆ (PMLA) ಅಡಿಯಲ್ಲಿ ಬಂಧಿಸಲು ಮುಂದಾಯಿತು. ಸತತ 24 ಗಂಟೆಗಳ ಕಾರ್ಯಾಚರಣೆ ನಡೆಸಿದ ಇಡಿ ತಂಡ ಮಧ್ಯರಾತ್ರಿ 1:30ರ ಸುಮಾರಿಗೆ ಸಚಿವರನ್ನ ಬಂಧಿಸಲು ಮುಂದಾದಾಗ ತಕ್ಷಣವೇ ಎದು ನೋವು ಕಾಣಿಸಿಕೊಂಡಿತ್ತು. ಕಾರಿನಲ್ಲೇ ಎದೆ ಬಿಗಿಹಿಡಿದುಕೊಂಡು ಅತ್ತು ಗೋಗರೆದಿದ್ದರು. ಆ ನಂತರ ಅವರನ್ನ ಚೆನ್ನೈನ ಒಮಂದೂರಾರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಆಸ್ಪತ್ರೆಗೆ ದಾಖಲಿಸಿದ ಕೆಲ ಗಂಟೆಗಳ ನಂತರ ಸಿಎಂ ಎಂ.ಕೆ ಸ್ಟಾಲಿನ್‌, ಸಚಿವರನ್ನ ಭೇಟಿ ಮಾಡಿದರು. ಇತರ ಸಚಿವರಾದ ಐ.ಪೆರಿಯಸಾಮಿ, ಪೊನ್ಮುಡಿ, ಅನ್ಬಿಲ್ ಮಹೇಶ್ ಪೊಯ್ಯಮೊಳಿ ಮತ್ತು ಆರ್.ಗಾಂಧಿ ಸೇರಿದಂತೆ ಇತರ ಗಣ್ಯರೂ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ: EDಯಿಂದ ತಮಿಳುನಾಡು ಅಬಕಾರಿ ಸಚಿವ ಅರೆಸ್ಟ್ – ಕಾರಿನಲ್ಲಿ ಭಾರೀ ಹೈಡ್ರಾಮಾ, ಆಸ್ಪತ್ರೆಗೆ ಶಿಫ್ಟ್

    ಇದೇ ವೇಳೆ ಆಸ್ಪತ್ರೆ ಮುಂಭಾಗ ನೆರೆದಿದ್ದ ಕಾರ್ಯಕರ್ತರು, ತನಿಖಾ ಸಂಸ್ಥೆಯೊಂದಿಗೆ ಸಹಕರಿಸಿದರೂ ಸೆಂಥಿಲ್ ಬಾಲಾಜಿ ಅವರ ಮೇಲೆ ಒತ್ತಡ ಹೇರಲಾಗಿತ್ತು. ಇದೇ ಅವರ ಎದೆ ನೋವಿಗೆ ಕಾರಣ ಎಂದು ರಾಜ್ಯಪಾಲ ಆರ್.ಎನ್ ರವಿ ವಿರುದ್ಧ ದೂರಿದರು. ಸೆಂಥಿಲ್ ಬಾಲಾಜಿ ವಕೀಲರು ಮತ್ತು ಡಿಎಂಕೆ ನಾಯಕ ಎನ್.ಆರ್ ಎಲಾಂಗೋ ಸಹ ಇದು ಸಂಪೂರ್ಣ ಅಸಾಂವಿಧಾನಿಕ ಹಾಗೂ ಕಾನೂನು ಬಾಹಿರವಾದ ಬಂಧನ. ನಾವು ಕಾನೂನಿನ ಮೂಲಕವೇ ಹೋರಾಡುತ್ತೇವೆ ಎಂದು ಗುಡುದರು.

    ಮತ್ತೋರ್ವ ಸಚಿವ ಉದಯನಿಧಿ ಸ್ಟಾಲಿನ್, ಏನೇ ಬಂದರೂ ನಾವು ಕಾನೂನಾತ್ಮಕವಾಗಿ ಎದುರಿಸುತ್ತೇವೆ. ಬಿಜೆಪಿ (BJP) ನೇತೃತ್ವದ ಕೇಂದ್ರ ಸರ್ಕಾರದ ಬೆದರಿಕೆ ರಾಜಕೀಯಕ್ಕೆ ನಾವು ಹೆದರುವುದಿಲ್ಲ ಎಂದು ತಿರುಗೇಟು ನೀಡಿದರು. ಈ ಬೆನ್ನಲ್ಲೇ ಸಿಎಂ ತಮ್ಮ ನಿವಾಸದಲ್ಲಿ ಹಿರಿಯ ಸಚಿವರು ಮತ್ತು ಕಾನೂನು ತಂಡದೊಂದಿಗೆ ಸಮಾಲೋಚನೆ ನಡೆಸಿದರು. ಇದನ್ನೂ ಓದಿ: ಹಿಮಾಚಲದಲ್ಲಿ ಆರ್ಥಿಕ ಸಂಕಷ್ಟ – 15 ಸಾವಿರ ಮಂದಿಗೆ ಇನ್ನೂ ಪಾವತಿಯಾಗಿಲ್ಲ ಸಂಬಳ

    ತನಿಖಾ ಸಂಸ್ಥೆ ನಡೆಸಿದ ದಾಳಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮತ್ತು ಹಲವಾರು ವಿರೋಧ ಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೇಂದ್ರದ ತ ನಿಖಾ ಏಜೆನ್ಸಿಗಳನ್ನ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ದಾಳಿಗಳು ಕೇವಲ ರಾಜಕೀಯ ಪ್ರೇರಿತವಲ್ಲ, ಸೇಡಿನ ರಾಜಕಾರಣದ ಕ್ರಮ. ಇದರಿಂದ ಒಕ್ಕೂಟ ವ್ಯವಸ್ಥೆಗೆ ಅಪಮಾನವಾಗಿದೆ. ಪಶ್ಚಿಮ ಬಂಗಾಳ, ದೆಹಲಿಯಂತ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳ ವಿರುದ್ಧ ಕೇಂದ್ರ ಸರ್ಕಾರ ದಾಳಿ ಮಾಡುತ್ತಿದೆ. ಮೋದಿ (Narendra Modi) ಸರ್ಕಾರವನ್ನು ವಿರೋಧಿಸುವವರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದೆ ಎಂದು ವಿಪಕ್ಷ ನಾಯಕರು ಬಿಜೆಪಿ ವಿರುದ್ಧ ಮುಗಿಬಿದ್ದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ಸೆಂಥಿಲ್‌ ಅವರನ್ನ ಇಡಿ ಬಂಧಿಸಿರುವುದನ್ನ ಖಂಡಿಸಿದ್ದಾರೆ.

  • EDಯಿಂದ ತಮಿಳುನಾಡು ಅಬಕಾರಿ ಸಚಿವ ಅರೆಸ್ಟ್ – ಕಾರಿನಲ್ಲಿ ಭಾರೀ ಹೈಡ್ರಾಮಾ, ಆಸ್ಪತ್ರೆಗೆ ಶಿಫ್ಟ್

    EDಯಿಂದ ತಮಿಳುನಾಡು ಅಬಕಾರಿ ಸಚಿವ ಅರೆಸ್ಟ್ – ಕಾರಿನಲ್ಲಿ ಭಾರೀ ಹೈಡ್ರಾಮಾ, ಆಸ್ಪತ್ರೆಗೆ ಶಿಫ್ಟ್

    ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ತಮಿಳುನಾಡು ವಿದ್ಯುತ್ ಮತ್ತು ಅಬಕಾರಿ ಸಚಿವ ವಿ.ಸೆಂಥಿಲ್ ಬಾಲಾಜಿ (V Senthil Balaji) ಅವರನ್ನ ಬಂಧಿಸಿದೆ. ಸೆಂಥಿಲ್ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧಕಾರ್ಯ ನಡೆಸಿದ ನಂತರ ಬಂಧಿಸಲಾಗಿದೆ.

    ಇಡಿ ಸಚಿವರನ್ನ ಬಂಧಿಸುತ್ತಿದ್ದಂತೆ ಎದೆನೋವು ಎಂದು ಹೇಳಿ ಕಾರಿನಲ್ಲಿ ಕಣ್ಣೀರಿಟ್ಟಿದ್ದಾರೆ. ಭಾರೀ ಹೈಡ್ರಾಮಾದ ಬಳಿಕ ಬುಧವಾರ ಮುಂಜಾನೆ ಅವರನ್ನ ಚೆನ್ನೈನ ಒಮಂದೂರಾರ್ ಸರ್ಕಾರಿ ಆಸ್ಪತ್ರೆಗೆ (Omandurar Government Hospital) ದಾಖಲಿಸಲಾಗಿದೆ. ಇದನ್ನೂ ಓದಿ: ಕರಾವಳಿಯಲ್ಲಿ ಬಿಪರ್‌ಜಾಯ್‌ ಅಬ್ಬರ – ತೀರಕ್ಕೆ ಅಪ್ಪಳಿಸುತ್ತಿದೆ ರಕ್ಕಸ ಅಲೆಗಳು, ಆತಂಕದಲ್ಲಿ ನಿವಾಸಿಗಳು

    ಭಾರೀ ಹೈಡ್ರಾಮ: ಡಿಎಂಕೆ ನಾಯಕನನ್ನ ಆಸ್ಪತ್ರೆಗೆ ಕರೆತರುತ್ತಿದ್ದಂತೆ ಆಸ್ಪತ್ರೆ ಹೊರಗೂ ಜಮಾಯಿಸಿದ್ದ ಬೆಂಬಲಿಗರು ಭಾರೀ ಹೈಡ್ರಾಮಾ ಮಾಡಿದ್ದಾರೆ. ಇಡಿ ಕ್ರಮ ವಿರೋಧಿಸಿ ಸೆಂಥಿಲ್ ಅವರ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಕಾರಿನಲ್ಲಿ ಮಲಗಿದ್ದಾಗಲೇ ಎದೆಯನ್ನು ಹಿಡಿದುಕೊಂಡು ನೋವು ಅಂತಾ ಕಣ್ಣೀರಿಟ್ಟಿದ್ದಾರೆ. ಈ ಕುರಿತ ವೀಡಿಯೋ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.

    ಸದ್ಯ ಚೆನ್ನೈನ ಓಮಂದೂರರ್ ಸರ್ಕಾರಿ ಆಸ್ಪತ್ರೆಯಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆ ನಿಯೋಜಿಸಲಾಗಿದ್ದು, ಸೆಂಥಿಲ್ ಬಾಲಾಜಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಮುಸ್ಲಿಂ ಹುಡುಗಿಯನ್ನು ಪ್ರೀತಿಸಿದ್ದಕ್ಕೆ 7 ತುಂಡು – ಮೃತದೇಹ ಚರಂಡಿಯಲ್ಲಿ ಪತ್ತೆ

  • ಹವಾಲಾ ಹಣದ ಮೇಲೆ ED, IT ನಿಗಾ – ಪೆಟ್ರೋಲ್ ಬಂಕ್ ಮೇಲೆ ಕಣ್ಣು

    ಹವಾಲಾ ಹಣದ ಮೇಲೆ ED, IT ನಿಗಾ – ಪೆಟ್ರೋಲ್ ಬಂಕ್ ಮೇಲೆ ಕಣ್ಣು

    ನವದೆಹಲಿ: 2,000 ರೂ. ಮುಖಬೆಲೆಯ ನೋಟುಗಳನ್ನು (Rs. 2000 Note) ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ (RBI) ಹಿಂಪಡೆದಿದ್ದು, ಮಂಗಳವಾರದಿಂದ ಸಾರ್ವಜನಿಕರಿಗೆ ಬ್ಯಾಂಕುಗಳಿಂದ (Bank) ನೋಟ್ ವಿನಿಮಯ ಮಾಡಿಕೊಳ್ಳು ಅನುಮತಿಸಿದೆ. ಇದರ ಬೆನ್ನಲ್ಲೇ ಜಾರಿ ನಿರ್ದೇಶನಾಲಯ (ED) ಹಾಗೂ ಆದಾಯ ತೆರಿಗೆ ಇಲಾಖೆ (IT) ಹವಾಲಾ ಹಣದ (Hawala Money) ಮೇಲೆ ಕಣ್ಣಿಟ್ಟಿದೆ.

    ಸದ್ಯ ಆರ್‌ಬಿಐ 3 ತಿಂಗಳು ನೋಟು ವಿನಿಮಯಕ್ಕೆ ಅವಕಾಶ ಕೊಟ್ಟಿದೆ. ಈ ನಡುವೆ ಹವಾಲಾ ದಂಧೆಕೋರರಿಂದ ನೋಟು ವಿನಿಮಯದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಹೀಗಾಗಿ ಇಡಿ ಹಾಗೂ ಐಟಿ ಇಲಾಖೆಗಳು ಹವಾಲಾ ದಂಧೆಕೋರರ ಮೇಲೆ ನಿಗಾ ಇರಿಸಿದ್ದು, ಈ ಕುರಿತು ಪೊಲೀಸರಿಗೆ ಸೂಚನೆ ನೀಡಲಾಗಿದೆ.

    ಹವಾಲಾ ದಂಧೆಕೋರರು ಅಪಾರ ಪ್ರಮಾಣದಲ್ಲಿ ಹಣ ಸಂಗ್ರಹಿಸಿದ್ದು, ಹೀಗಾಗಿ ನೋಟು ಹಿಂಪಡೆಯಲು ಮುಂದಾಗಿರುವ ಬಗ್ಗೆ ಮಾಹಿತಿ ದೊರಕಿದೆ. ಕಾಳಸಂತೆಯಲ್ಲಿ ಹವಾಲಾ ದಂಧೆಕೋರರ ಮೇಲೆ ನಿಗಾ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ಹೀಗಾಗಿ ನಗರ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಪ್ರಮುಖವಾಗಿ ಪೆಟ್ರೋಲ್ ಬಂಕ್‌ಗಳ ಮೇಲೆ ಪೊಲೀಸರು ನಿಗಾ ಇಟ್ಟಿದ್ದಾರೆ. ಇದನ್ನೂ ಓದಿ: ಚಿಲ್ಲರೆ ವ್ಯಾಪಾರಿಗಳು ಗ್ರಾಹಕರ ಮೊಬೈಲ್ ನಂಬರ್ ಕೇಳುವಂತಿಲ್ಲ – ಕೇಂದ್ರ ಸರ್ಕಾರ

    ನೋಟು ವಿನಿಮಯಕ್ಕೆ ಸೆಪ್ಟೆಂಬರ್ 30ರ ವರೆಗೆ ಆರ್‌ಬಿಐ ಅವಕಾಶ ನೀಡಿದೆ. ಆದರೆ ನೋಟು ಬದಲಾವಣೆ ವೇಳೆ ಸಾರ್ವಜನಿಕರು ಯಾವುದೇ ದಾಖಲಾತಿ ನೀಡುವ ಅಗತ್ಯವಿಲ್ಲ. ಹೀಗಾಗಿ ಕಾಳಸಂತೆಯ ಹವಾಲಾ ದಂಧೆಕೋರರಿಗೆ ನೋಟುಗಳನ್ನು ಸುಲಭವಾಗಿ ಬದಲಾಯಿಸಿಕೊಳ್ಳಲು ಸುವರ್ಣ ಅವಕಾಶವಾಗಿದೆ. ಆದರೆ ಒಬ್ಬರಿಗೆ ದಿನಕ್ಕೆ 20 ಸಾವಿರ ರೂ. ಮಾತ್ರವೇ ಬದಲಾಯಿಸಿಕೊಳ್ಳಲು ಅವಕಾಶವಿದ್ದು, ಹೀಗಾಗಿ ಹವಾಲಾ ದಂಧೆಕೋರರು ಸಾರ್ವಜನಿಕರ ಮೂಲಕ ನೋಟು ಬದಲಾಯಿಸಿಕೊಳ್ಳಲು ಮುಂದಾಗಿದ್ದಾರೆ.

    ಈ ಹಿಂದೆ ಹವಾಲಾ ಹಣದೊಂದಿಗೆ ಸಿಕ್ಕಿರವವರ ಮೇಲೆ ಪೊಲೀಸರು ಹೆಚ್ಚಿನ ನಿಗಾ ವಹಿಸಿದ್ದು, ಬ್ಯಾಂಕ್‌ಗಳ ಬಳಿ ಮಫ್ತಿಯಲ್ಲಿದ್ದಾರೆ. ಇದನ್ನೂ ಓದಿ: ಆರ್‌ವಿ ರಸ್ತೆ, ಬೊಮ್ಮಸಂದ್ರ ಪ್ರಯಾಣಿಕರಿಗೆ ಗುಡ್ ನ್ಯೂಸ್ – ವರ್ಷಾಂತ್ಯಕ್ಕೆ ಹಳದಿ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭ

  • ಬೈಜೂಸ್‌ ಸಂಸ್ಥಾಪಕ ರವೀಂದ್ರನ್ ಮೇಲೆ ಇಡಿ ದಾಳಿ

    ಬೈಜೂಸ್‌ ಸಂಸ್ಥಾಪಕ ರವೀಂದ್ರನ್ ಮೇಲೆ ಇಡಿ ದಾಳಿ

    ಬೆಂಗಳೂರು: ಎಜ್ಯುಟೆಕ್‌ ಕಂಪನಿ ಬೈಜೂಸ್‌ (BYJU’s) ಕಂಪನಿಯ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬೈಜು ರವೀಂದ್ರನ್ (Raveendran) ಅವರ ಕಚೇರಿ ಮತ್ತು ಮನೆಯ ಮೇಲೆ ಜಾರಿ ನಿರ್ದೇಶಾನಲಯ (Enforcement Directorate) ದಾಳಿ ಮಾಡಿ ದಾಖಲೆ ಪರಿಶೀಲಿಸುತ್ತಿದೆ.

    ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘನೆ ಗಂಭೀರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬೈಜು ರವೀಂದ್ರನ್‌ ಅವರ ಕಚೇರಿ ಮೇಲೆ ದಾಳಿ ಮಾಡಿದೆ. ಇದನ್ನೂ ಓದಿ: ಬಾಗಲಕೋಟೆಯಲ್ಲಿ ದಾಖಲೆಯಿಲ್ಲದ 5 ಕೋಟಿ ರೂ. ಹಣ ಜಪ್ತಿ

    ಕಂಪನಿಯು 2011 ಮತ್ತು 2023 ರ ನಡುವೆ 28,000 ಕೋಟಿ ರೂ. ಮೌಲ್ಯದ ವಿದೇಶಿ ನೇರ ಹೂಡಿಕೆಯನ್ನು (FDI) ಸ್ವೀಕರಿಸಿದೆ. ಸಾಗರೋತ್ತರ ನೇರ ಹೂಡಿಕೆಯ ಹೆಸರಿನಲ್ಲಿ ಅದೇ ಅವಧಿಯಲ್ಲಿ ವಿದೇಶಿ ನ್ಯಾಯವ್ಯಾಪ್ತಿಗೆ ಸರಿಸುಮಾರು 9,754 ಕೋಟಿ ರೂ. ಕಳುಹಿಸಿದೆ.

    ವಿದೇಶಿ ನ್ಯಾಯವ್ಯಾಪ್ತಿಗೆ ರವಾನೆಯಾದ ಹಣ ಸೇರಿದಂತೆ ಜಾಹೀರಾತು ಮತ್ತು ಮಾರುಕಟ್ಟೆ ವೆಚ್ಚಗಳ ಹೆಸರಿನಲ್ಲಿ ಸುಮಾರು 944 ಕೋಟಿ ರೂ. ಲೆಕ್ಕ ತೋರಿಸಿದೆ. ಹೀಗಿದ್ದರೂ ಕಂಪನಿಯು 2020-21ರ ಆರ್ಥಿಕ ವರ್ಷದಿಂದ ತನ್ನ ಹಣಕಾಸಿನ ಹೇಳಿಕೆಗಳನ್ನು ಸಿದ್ಧಪಡಿಸಿಲ್ಲ ಮತ್ತು ಖಾತೆಗಳನ್ನು ಲೆಕ್ಕಪರಿಶೋಧನೆ ಮಾಡಿಲ್ಲ.

    ಖಾಸಗಿ ವ್ಯಕ್ತಿಗಳ ದೂರುಗಳ ಆಧಾರದ ಮೇಲೆ ಇಡಿ ತನಿಖೆ ಆರಂಭಿಸಿದೆ. ಈ ಹಿಂದೆ ಬೈಜು ರವೀಂದ್ರನ್‌ಗೆ ವಿಚಾರಣೆಗೆ ಹಾಜರಾಗುವಂತೆ ಹಲವಾರು ಸಮನ್ಸ್‌ ಜಾರಿ ಮಾಡಲಾಗಿತ್ತು. ಆದರೆ ವಿಚಾರಣೆಗೆ ಹಾಜರಾಗಿರಲಿಲ್ಲ.

  • ಟ್ವಿಟರ್ ಬ್ಲೂಟಿಕ್ ತೆಗೆದ ಬೆನ್ನಲ್ಲೇ ಎಲೋನ್ ಮಸ್ಕ್ ಗೆ ಮತ್ತೊಂದು ಬೇಡಿಕೆ ಇಟ್ಟ ಅಮಿತಾಭ್

    ಟ್ವಿಟರ್ ಬ್ಲೂಟಿಕ್ ತೆಗೆದ ಬೆನ್ನಲ್ಲೇ ಎಲೋನ್ ಮಸ್ಕ್ ಗೆ ಮತ್ತೊಂದು ಬೇಡಿಕೆ ಇಟ್ಟ ಅಮಿತಾಭ್

    ಟ್ವಿಟರ್ ಸಂಸ್ಥೆಯ ಮಾಲೀಕ ಎಲೋನ್ ಮಸ್ಕ್ (Elon Musk) ಬ್ಲೂಟಿಕ್ (BlueTick) ತೆಗೆದು ಹಾಕಿ ಸಾಕಷ್ಟು ಸೆಲೆಬ್ರಿಟಿಗಳಿಗೆ ಅಚ್ಚರಿ ಮೂಡಿಸಿದ್ದರು. ಸಬ್ ಸ್ಕ್ರೈಬ್ ಮಾಡಿಕೊಂಡವರಿಗೆ ಮಾತ್ರ ಬ್ಲೂ ಟಿಕ್ ನೀಡುವುದಾಗಿ ಈ ಹಿಂದೆಯೇ ಪ್ರಕಟಿಸಿದ್ದ ಎಲೋನ್ ಮಸ್ಕ್ ತಾವು ಕೊಟ್ಟ ಗಡುವು ಮುಗಿಯುತ್ತಿದ್ದಂತೆಯೇ ಏಕಾಏಕಿ ಬ್ಲೂ ಟಿಕ್ ತೆಗೆದು ಹಾಕಿದ್ದರು. ಇದರಿಂದಾಗಿ ಸಾಕಷ್ಟು ಜನರು ಗೊಂದಲವಾಗಿದ್ದರು.

    ಭಾರತೀಯ ಸಿನಿಮಾ ರಂಗ  ಅದೆಷ್ಟೋ ನಟ ನಟಿಯರಿಗೆ ಮತ್ತು ತಂತ್ರಜ್ಞರಿಗೆ ಹಾಗೂ ಕ್ರಿಕೆಟ್ ದಿಗ್ಗಜರಿಗೂ ಕೂಡ ಬ್ಲೂ ಟಿಕ್ ಯಾಕೆ ಹೋಯಿತು ಎನ್ನುವ ಕುರಿತು ಅರಿವಿರಲಿಲ್ಲ. ಹಾಗಾಗಿ ಬಹುತೇಕರು ಬ್ಲೂ ಟಿಕ್ ಎಲ್ಲಿ ಹೋಯಿತು ಎಂದು ಪ್ರಶ್ನೆ ಮಾಡಿದ್ದರು. ಈಗಾಗಲೇ ಹಣ ಕೊಟ್ಟು ಖರೀದಿ ಮಾಡಿರುವವರನ್ನು ತೋರಿಸಿ, ನಮ್ಮದು ಯಾಕೆ ಇಲ್ಲ ಎಂದು ಕೇಳಿದ್ದರು. ಆಮೇಲೆ ಅವರಿಗೆ ಮನವರಿಕೆ ಆಗಿದೆ.

    ಬ್ಲೂಟಿಕ್ ತೆಗೆದು ಹಾಕಿದ ಬೆನ್ನಲ್ಲೆ ಬಿಗ್ ಬಿ ಅಮಿತಾಭ್ ಬಚ್ಚನ್ (Amitabh Bachchan) ಅದೇ ಟ್ವಿಟರ್ ಮೂಲಕ ಎಲೋನ್ ಮಸ್ಕ್ ಗೆ ಪ್ರಶ್ನೆಯೊಂದನ್ನು ಮಾಡಿದ್ದಾರೆ. ಅಲ್ಲದೇ ಬೇಡಿಕೆಯನ್ನೂ ಇಟ್ಟಿದ್ದಾರೆ. ಟ್ವಿಟರ್ ಖಾತೆಯಲ್ಲಿ ಎಡಿಟ್ ಮಾಡುವಂತಹ ಅವಕಾಶವಿಲ್ಲ. ಹಾಗಾಗಿ ಎಡಿಟ್ ಮಾಡುವಂತ ಅವಕಾಶವನ್ನು ನೀಡಿ ಎಂದು ಕೇಳಿಕೊಂಡಿದ್ದಾರೆ. ಅದನ್ನು ನೇರವಾಗಿ ಮಸ್ಕ್ ಗೆ ಬರೆದು ಟ್ಯಾಗ್ ಮಾಡಿದ್ದಾರೆ. ಇದನ್ನೂ ಓದಿ:ನಯನತಾರಾ ಬಗ್ಗೆ ಕನ್ನಡದ ‘ಗೂಳಿ’ ನಟಿ ಶಾಕಿಂಗ್ ಹೇಳಿಕೆ

    ಬಹುತೇಕ ಟ್ವೀಟ್ ಅನ್ನು ಹಿಂದಿಯಲ್ಲಿ ಬರೆದಿರುವ ಅಮಿತಾಭ್, ಟ್ವಿಟರ್ ಮಾಲೀಕರಿಗೆ ಹಿಂದಿ ಅರ್ಥ ಮಾಡಿಸೋರು ಯಾರು ಎನ್ನುವ ಪ್ರಶ್ನೆಯನ್ನೂ ಅಭಿಮಾನಿಗಳು ಮಾಡಿದ್ದಾರೆ. ಹಿಂದಿಯಿಂದ ಇಂಗ್ಲಿಷ್ ಗೆ ತರ್ಜುಮೆ ಮಾಡಿ ಹೇಳುವವರು ಯಾರು ಎನ್ನುವ ಪ್ರಶ್ನೆಯನ್ನೂ ಹಲವರು ಮಾಡಿದ್ದಾರೆ.

  • ‘ಪುಷ್ಪ’ ಟೀಮ್ ಗೆ ED ಶಾಕ್: ನಿರ್ದೇಶಕ, ನಿರ್ಮಾಪಕರ ಕಚೇರಿ ಮೇಲೆ ಅಧಿಕಾರಿಗಳು ದಾಳಿ

    ‘ಪುಷ್ಪ’ ಟೀಮ್ ಗೆ ED ಶಾಕ್: ನಿರ್ದೇಶಕ, ನಿರ್ಮಾಪಕರ ಕಚೇರಿ ಮೇಲೆ ಅಧಿಕಾರಿಗಳು ದಾಳಿ

    ಲ್ಲು ಅರ್ಜುನ್ ನಟನೆಯ ‘ಪುಷ್ಪ’ (Pushpa) ಸಿನಿಮಾ ಭಾರತೀಯ ಸಿನಿಮಾ ರಂಗದಲ್ಲಿ ಭಾರೀ ಸದ್ದು ಮಾಡಿತ್ತು. ಸಾವಿರಾರು ಕೋಟಿ ಕಲೆಕ್ಷನ್ ಮಾಡುವ ಮೂಲಕ ದಾಖಲೆ ಬರೆದಿತ್ತು. ಈ ಗೆಲುವಿನ ಖುಷಿಯಲ್ಲೇ ನಿರ್ದೇಶಕ ಸುಕುಮಾರನ್ (Sukumaran) ‘ಪುಷ್ಪ 2’ ಸಿನಿಮಾವನ್ನು ಶುರು ಮಾಡಿದ್ದರು. ಈಗಾಗಲೇ ಹಲವು ಹಂತದ ಚಿತ್ರೀಕರಣ ಕೂಡ ಮುಗಿದಿದೆ. ಈ ಸಮಯದಲ್ಲಿ ಜಾರಿ ನಿರ್ದೇಶನಾಲಯ (Enforcement Directorate) ಅಧಿಕಾರಿಗಳು ನಿರ್ಮಾಪಕರ ಮತ್ತು ನಿರ್ದೇಶಕರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.

    ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ (Mythri Movie Makers)ಈ ಸಿನಿಮಾವನ್ನು ನಿರ್ಮಾಣ ಮಾಡಿತ್ತು. ನವೀನ್ ಯೆರ್ನೇನಿ ಹಾಗೂ ಯಲಮಂಚಿಲಿ ರವಿಶಂಕರ್ ಈ ಸಂಸ್ಥೆಯ ನಿರ್ಮಾಪಕರು. ಬೆಳಗಿನ ಜಾವ ಇವರ ಮನೆ ಹಾಗೂ ಕಚೇರಿಯಲ್ಲಿ ಇಡಿ (ED) ಅಧಿಕಾರಿಗಳು ಶೋಧ ಕಾರ್ಯ ಶುರು ಮಾಡಿದ್ದಾರೆ. ಇನ್ನೂ ಪರಿಶೀಲನೆ ನಡೆಯುತ್ತಿದೆ ಎಂದು ವರದಿ ಆಗಿದೆ. ಇದನ್ನೂ ಓದಿ:‘ಎಂದೆಂದಿಗೂ ಆರ್‌ಸಿಬಿ’ ಎಂದ ನಟಿ ದಿವ್ಯಾ ಉರುಡುಗ

    ವಾಲ್ತೇರು ವೀರಯ್ಯ, ವೀರಸಿಂಹ ರೆಡ್ಡಿ ಅಂತ ಬಹುಕೋಟಿ ವೆಚ್ಚದ ಸಿನಿಮಾಗಳನ್ನು ಈ ಸಂಸ್ಥೆ ನಿರ್ಮಾಣ ಮಾಡಿದ್ದು ವಿದೇಶಗಳಲ್ಲಿ ದೊಡ್ಡಬಜೆಟ್ ನ ಚಿತ್ರಗಳನ್ನು ವಿತರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಲಾ ಮಾರ್ಗದಲ್ಲಿ ಹಣದ ಸಂಗ್ರಹಣೆ ಮೂಲಕ ಪ್ರಮೋಟರ್ಸ್ ಮನಿ ಲ್ಯಾಂಡರಿಂಗ್ ಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ.

    ಇಷ್ಟೇ ಅಲ್ಲದೇ ಆದಾಯ ತೆರಿಗೆ (IT) ಪಾವತಿಯಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು ಇಡಿ ಅಧಿಕಾರಿಗಳ ಜೊತೆ ಐಟಿ ಅಧಿಕಾರಿಗಳು ಕೂಡ ಜೊತೆಯಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಸಿನಿಮಾ ನಿರ್ಮಾಣ ಸಂಸ್ಥೆಯ ಜೊತೆಗೆ ಪುಷ್ಪ ಚಿತ್ರದ ಸುಕುಮಾರನ್ ಮನೆಯಲ್ಲೂ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರಂತೆ.

  • ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ ಆರೋಪ – ಸುಪ್ರೀಂಕೋರ್ಟ್ ಮೆಟ್ಟಿಲೇರಿದ ವಿಪಕ್ಷಗಳು

    ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ ಆರೋಪ – ಸುಪ್ರೀಂಕೋರ್ಟ್ ಮೆಟ್ಟಿಲೇರಿದ ವಿಪಕ್ಷಗಳು

    ನವದೆಹಲಿ: ಕೇಂದ್ರೀಯ ತನಿಖಾ ದಳ (CBI) ಮತ್ತು ಜಾರಿ ನಿರ್ದೇಶನಾಲಯ (ED) ನಂತಹ ಕೇಂದ್ರೀಯ ಸಂಸ್ಥೆಗಳನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ 14 ರಾಜಕೀಯ ಪಕ್ಷಗಳು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿವೆ.

    ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (Congress), ತೃಣಮೂಲ ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಜಗಮ್ ಮತ್ತು ರಾಷ್ಟ್ರೀಯ ಜನತಾ ದಳವೂ ಸೇರಿ 14 ವಿಪಕ್ಷಗಳು ಒಳಗೊಂಡಿರುವ ಅರ್ಜಿದಾರರು ಬಂಧನಕ್ಕೆ ಪೂರ್ವ ಮಾರ್ಗಸೂಚಿಗಳನ್ನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಸಂಸದ ಸ್ಥಾನದಿಂದ ರಾಹುಲ್‌ ಗಾಂಧಿ ಅನರ್ಹ

    ಪ್ರಕರಣವನ್ನು ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ, ಸಿಜೆಐ ಡಿ.ವೈ ಚಂದ್ರಚೂಡ್ (D.Y.Chandrachud) ಪೀಠದ ಮುಂದೆ ಮನವಿ ಮಾಡಿದರು. ಕೇಂದ್ರೀಯ ತನಿಖಾ ಸಂಸ್ಥೆಗಳ 95 ಪ್ರತಿಶತ ತನಿಖೆಗಳು ವಿರೋಧ ಪಕ್ಷಗಳ ನಾಯಕರ ವಿರುದ್ಧವಾಗಿವೆ. ಸಿಬಿಐ ಇಡಿಯನ್ನು ಸಂಪೂರ್ಣವಾಗಿ ನಮ್ಮ ವಿರುದ್ಧ ಬಳಸಲಾಗುತ್ತಿದೆ ಎಂದು ವಾದಿಸಿದರು.

    ವಾದ ಆಲಿಸಿದ ಸಿಜೆಐ ಡಿ.ವೈ ಚಂದ್ರಚೂಡ್, ತುರ್ತು ವಿಚಾರಣೆ ಸಾಧ್ಯವಿಲ್ಲ. ಏಪ್ರಿಲ್ 5 ರಂದು ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: 12 ಗಂಟೆಗೊಮ್ಮೆ ಸ್ಥಳ ಬದಲಾವಣೆ – ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿರುವ ಅಮೃತ್‌ಪಾಲ್ ಸಿಂಗ್

  • ದೆಹಲಿ ಹೊಸ ಮದ್ಯ ನೀತಿ ಹಗರಣ – ಕೆ. ಕವಿತಾ ಮೊಬೈಲ್ ವಶಕ್ಕೆ ಪಡೆದ ಇಡಿ

    ದೆಹಲಿ ಹೊಸ ಮದ್ಯ ನೀತಿ ಹಗರಣ – ಕೆ. ಕವಿತಾ ಮೊಬೈಲ್ ವಶಕ್ಕೆ ಪಡೆದ ಇಡಿ

    ನವದೆಹಲಿ: ಹೊಸ ಮದ್ಯನೀತಿಯಲ್ಲಿ (Delhi excise policy) ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ವಿಚಾರಣೆಗೆ ಹಾಜರಾದ ತೆಲಂಗಾಣ ಪರಿಷತ್ ಸದಸ್ಯೆ, ಮುಖ್ಯಮಂತ್ರಿ ಕೆ.ಸಿ ಆರ್ ಚಂದ್ರಶೇಖರ್ ರಾವ್ (KC Chandrasekhar Rao) ಪುತ್ರಿ ಕೆ. ಕವಿತಾ (K Kavitha) ಅವರ ಮೊಬೈಲ್ ಫೋನ್‌ಗಳನ್ನು (Mobile Phones) ಇಡಿ (ED) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

    ಇಂದು ನಡೆದ ವಿಚಾರಣೆ ವೇಳೆ ಒಟ್ಟು ಮೂರು ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ಹೇಳಿವೆ. ಮೊಬೈಲ್ ಫೋನ್ ಜೊತೆಗೆ ಪತ್ರವನ್ನು ನೀಡಿರುವ ಕೆ. ಕವಿತಾ ಗೌಪ್ಯತೆ ಧಕ್ಕೆಯಾಗುವ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

    ವಿಚಾರಣೆಗೆ ತೆರಳುವ ಮುನ್ನ ಮಾತನಾಡಿದ ಅವರು, ದಾಖಲೆಗಾಗಿ ಏಜೆನ್ಸಿಯಿಂದ ನನ್ನನ್ನು ಮೊದಲ ಬಾರಿಗೆ ವಿಚಾರಣೆಗೆ ಕರೆಯಲಾಯಿತು. 2022ರ ನವೆಂಬರ್‌ನಲ್ಲಿ ನನ್ನ ವಿರುದ್ಧ ಮಾಡಿದ ಆರೋಪವು ದುರುದ್ದೇಶಪೂರಿತವಾಗಿದೆ, ತಪ್ಪಾಗಿ ಗ್ರಹಿಸಲ್ಪಟ್ಟಿದೆ. ತಮ್ಮ ವಿರುದ್ಧದ ‘ಸುಳ್ಳು’ ಆರೋಪ ಮಾಡಲಾಗುತ್ತಿದೆ ಎಂದು ಆರೋಪಿಸಿದರು‌. ಇದನ್ನೂ ಓದಿ: ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ನಂತೆ ಅಮೆರಿಕದ 186 ಬ್ಯಾಂಕ್‌ಗಳು ಅಪಾಯದಲ್ಲಿ – ಅಧ್ಯಯನ

    ಮಾರ್ಚ್ 11 ಮತ್ತು ಮಾರ್ಚ್ 20ರಂದು ಎರಡು ಬಾರಿ ಈ ಹಿಂದೆ ಇಡಿ ಅಧಿಕಾರಿಗಳು 18-19 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು‌. ಸೋಮವಾರ ಸುಮಾರು ಹತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು. ಮಂಗಳವಾರದ ನಾಲ್ಕನೇ ದಿನದ ವಿಚಾರಣೆ ವೇಳೆ ಅವರ ಫೋನ್‌ಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮುಂದುವರಿಸಲಾಗುತ್ತಿದೆ. ಇದನ್ನೂ ಓದಿ: ಮರಣದಂಡನೆಗೆ ಯಾವ ವಿಧಾನ ಸೂಕ್ತ?- ತಜ್ಞರ ವರದಿ ಕೇಳಿದ ಸುಪ್ರೀಂಕೋರ್ಟ್

  • ಮಾಡಾಳ್ ಭ್ರಷ್ಟಾಚಾರ ಪಕ್ಷಕ್ಕೆ ಮುಜುಗರ; ಆರೋಪಿಗಳ ಪರ ಜೈಕಾರ ಹಾಕೋದು ಡಿಕೆಶಿ ಸಂಸ್ಕೃತಿ – ಸಿ.ಟಿ ರವಿ

    ಮಾಡಾಳ್ ಭ್ರಷ್ಟಾಚಾರ ಪಕ್ಷಕ್ಕೆ ಮುಜುಗರ; ಆರೋಪಿಗಳ ಪರ ಜೈಕಾರ ಹಾಕೋದು ಡಿಕೆಶಿ ಸಂಸ್ಕೃತಿ – ಸಿ.ಟಿ ರವಿ

    ಯಾದಗಿರಿ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Maadal Virupakshappa) ಭ್ರಷ್ಟಾಚಾರ ಪ್ರಕರಣ ನಮ್ಮ ಪಕ್ಷಕ್ಕೆ ಮುಜುಗರ ತಂದಿದೆ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಬೇಸರ ವ್ಯಕ್ತಪಡಿಸಿದ್ದಾರೆ.

    ಯಾದಗಿರಿಯ ಶಹಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣದಲ್ಲಿ ಕಾನೂನು ತನ್ನ ಕೆಲಸ ಮಾಡ್ತಿದೆ. ಯಾರನ್ನೂ ರಕ್ಷಿಸುವ ಅಥವಾ ಟಾರ್ಗೆಟ್ ಮಾಡೋ ಕೆಲಸ ಮಾಡಲ್ಲ. ಇದೇ ಪರಿಸ್ಥಿತಿ ಕಾಂಗ್ರೆಸ್ (Congress) ಶಾಸಕರಿಗೆ ಆಗಿದ್ದರೆ ಇ.ಡಿ, ಐಟಿ, ಸಿಬಿಐ (CBI) ಆಯ್ತು ಈಗ ಲೋಕಾಯುಕ್ತಗೂ ಛೂ ಬಿಟ್ಟಿದ್ದಾರೆ ಅಂತಿದ್ರು. ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಅನುಭವಿಸ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ಮಾಡಾಳ್‌ ಮನೆಗೆ ವಾಪಸ್‌ – ತೆರೆದ ವಾಹನದಲ್ಲಿ ಮೆರವಣಿಗೆ

    KSDL Corruption Case BJP MLA Madal Virupakshappa returns home

    ಮಾಡಾಳ್ ಅಂತಹವರ ಪರ ಜೈಕಾರ ಹಾಕಿ ಸಂಭ್ರಮಿಸೋದು ನಮ್ಮ ಪಕ್ಷದ ಸಂಸ್ಕೃತಿ ಅಲ್ಲ. ಅದು ಡಿಕೆ ಶಿವಕುಮಾರ್ (DK Shivakumar), ಕಾಂಗ್ರೆಸ್ ಸಂಸ್ಕೃತಿ, ಅದನ್ನ ಯಾರೂ ಅನುಸರಿಸಬಾರದು. ಡಿಕೆಶಿ ಜೈಲಿನಿಂದ ಹೊರ ಬಂದಾಗ ಅವರ ಬೆಂಬಲಿಗರು ಈ ರೀತಿ ಸಂಭ್ರಮಿಸಿದ್ದರು. ಆ ರೀತಿ ವೈಭವಿಕರಿಸೋದು ತಪ್ಪು. ಅದನ್ನ ಯಾರೂ ಮಾಡಬಾರದು ಎಂದು ಪಕ್ಷದ ಕಾರ್ಯಕರ್ತರಿಗೆ ಹಾಗೂ ಮಾಡಾಳ್ ಬೆಂಬಲಿಗರಿಗೆ ಖಡಕ್ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಪಾಕ್ ಇತಿಹಾಸ ಪುಸ್ತಕಗಳಲ್ಲಿ ಭಾರತ, ಹಿಂದೂ ವಿರೋಧಿ ನಿಲುವು – ಪಠ್ಯದಲ್ಲಿ ಗಾಂಧಿ ಹಿಂದೂ ನಾಯಕ ಎಂದು ಪರಿಚಯ

    Congress 1

    ಸಂಸದೆ ಸುಮಲತಾ (Sumalatha) ಬಿಜೆಪಿ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿ.ಟಿ ರವಿ, ಅದಕ್ಕಿನ್ನೂ 24 ಗಂಟೆ ಸಮಯವಿದೆ. ಗೊತ್ತಿಲ್ಲದ ಮಾಹಿತಿಯ ಬಗ್ಗೆ ನಾನು ಹ್ಹಾ ಅಂತಾನೂ ಹೇಳಲ್ಲ, ಹೂ ಅಂತಾನೂ ಹೇಳಲ್ಲ. ಪ್ರತಿಯೊಬ್ಬ ವ್ಯಕ್ತಿಗೂ ತನ್ನದೇ ಸಾಮರ್ಥ್ಯ ಇರುತ್ತೆ. ಸಾಮರ್ಥ್ಯ ಇದ್ದವರು ಸೇರಿದಾಗ ಪಕ್ಷಕ್ಕೆ ಸಹಾಯ ಆಗುತ್ತೆ ಎಂದ ಅವರು, ಸೋಮಣ್ಣ ಪಕ್ಷ ಬಿಡ್ತಾರೆ ಅನ್ನೋದು ಊಹಾಪೋಹ. ಅದಕ್ಕೆ ನಾನು ಉತ್ತರಿಸಲ್ಲ ಎಂದು ಜಾರಿಕೊಂಡರು.