ಬೆಂಗಳೂರು: ಎಸ್ಎಸ್ಎಲ್ಸಿಯಲ್ಲಿ ನಡೆಯುವ 3 ಪರೀಕ್ಷೆಗಳಲ್ಲಿ ಫೇಲ್ ಆಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ (Karnataka Government) ಸಿಹಿಸುದ್ದಿಯೊಂದನ್ನು ನೀಡಿದೆ.
ಎಸ್ಎಸ್ಎಲ್ಸಿಯಲ್ಲಿ ಫೇಲಾದ ವಿದ್ಯಾರ್ಥಿಗಳು ಇಚ್ಛೆಪಟ್ಟರೆ ಎಲ್ಲಾ ಮಕ್ಕಳಂತೆ ಶಾಲೆಗೆ ಹೋಗಿ ಮತ್ತೆ ಕಲಿಯುವ ಅವಕಾಶ ನೀಡಿದೆ. ಈ ಮೂಲಕ ಇದೇ ವರ್ಷದಿಂದ ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್ ನೀಡಿದೆ.ಇದನ್ನೂ ಓದಿ: IPL Final – ಮೀಸಲು ದಿನವೂ ಮಳೆಯಿಂದ ಪಂದ್ಯ ರದ್ದಾದ್ರೆ ಚಾಂಪಿಯನ್ ಯಾರು?
ಈ ವರ್ಷದಿಂದ ಅವಕಾಶ ನೀಡುತ್ತಿದ್ದು, ಕೆಲವು ನಿಯಮಗಳನ್ನು ಜಾರಿ ಮಾಡಿದೆ.
ನಿಯಮಗಳೇನು?
>ಎಸ್ಎಸ್ಎಲ್ಸಿಯಲ್ಲಿ ನಡೆಯೋ 3 ಪರೀಕ್ಷೆಯಲ್ಲಿ ಫೇಲ್ ಆಗೋ ವಿದ್ಯಾರ್ಥಿ ಮತ್ತೆ ಶಾಲೆಗೆ ಹೋಗಿ ಕಲಿಯಬಹುದು.
> ಸರ್ಕಾರಿ ಶಾಲೆಯಲ್ಲಿ ಮಾತ್ರ ಈ ಅವಕಾಶ ಸಿಗಲಿದೆ
> ಮತ್ತೆ ಓದೋಕೆ ಇಷ್ಟಪಡುವ ವಿದ್ಯಾರ್ಥಿ ಶಾಲೆಗೆ ಹೋಗಿ ಮಾಹಿತಿ ಕೊಟ್ಟು ಮರು ದಾಖಲಾತಿ ಆಗಬೇಕು.
> ಶಾಲೆಯಲ್ಲಿ ಸಾಮಾನ್ಯ ವಿದ್ಯಾರ್ಥಿಯಂತೆ ದಾಖಲಾತಿ ಆಗಬೇಕು.
> ಎಲ್ಲಾ ವಿದ್ಯಾರ್ಥಿಗಳಿಗೆ ಸಿಗುವ ಸವಲತ್ತುಗಳನ್ನ ಮತ್ತೆ ದಾಖಲಾತಿ ಆಗುವ ವಿದ್ಯಾರ್ಥಿಗೆ ಕೊಡಲಾಗುತ್ತದೆ
> ಬೇರೆ ಮಕ್ಕಳಂತೆ ತರಗತಿಯಲ್ಲಿ ಕೂತು ಪಾಠ ಕೇಳಬಹುದು.ಇದನ್ನೂ ಓದಿ: ಸಂಜೆ ಟೀ ಜೊತೆ ಸವಿಯಿರಿ ಕ್ರಿಸ್ಪಿ ಬೇಬಿಕಾರ್ನ್ ಫ್ರೈ
ಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯ ಆಗುವಂತೆ ಒಂದನೇ ತರಗತಿಗೆ ಮಾತ್ರ ದಾಖಲಾತಿ ವಯಸ್ಸಿನ ಮಿತಿ (Age Limit) ಸಡಿಲ ಮಾಡಲಾಗಿದೆ. ಎಲ್ಕೆಜಿ-ಯುಕೆಜಿಗೆ ವಯಸ್ಸಿನ ಮಿತಿ ಸಡಿಲ ಇಲ್ಲ ಎಂದು ಸರ್ಕಾರ ಸ್ಪಷ್ಟವಾಗಿ ಆದೇಶ ಹೊರಡಿಸಿದೆ.
ಇತ್ತೀಚಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಒಂದನೇ ತರಗತಿ ದಾಖಲಾತಿ ಮಿತಿಯನ್ನು 5 ವರ್ಷ 5 ತಿಂಗಳಿಗೆ ಕಡಿತ ಮಾಡಿ ಆದೇಶ ಮಾಡಿದ್ದರು. ಈ ಆದೇಶ ಎಲ್ಕೆಜಿ-ಯುಕೆಜಿ (LKG-UKG) ಮಕ್ಕಳ ದಾಖಲಾತಿಗೆ ಗೊಂದಲ ಉಂಟು ಮಾಡಿಸಿತ್ತು. ಹೀಗಾಗಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಿಕ್ಷಣ ಇಲಾಖೆ (Education Department), ವಯಸ್ಸಿನ ಮಿತಿ ಸಡಿಲ ಒಂದನೇ ತರಗತಿಗೆ ಈ ವರ್ಷಕ್ಕೆ ಮಾತ್ರ ಅನ್ವಯ. 2025-26ನೇ ಸಾಲಿಗೆ ಎಲ್ಕೆಜಿ-ಯುಕೆಜಿಗೆ ದಾಖಲಾತಿ ಆಗುವ ಮಕ್ಕಳಿಗೆ ಈ ನಿಯಮ ಅನ್ವಯ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಇದನ್ನೂ ಓದಿ: ದ್ವೇಷರಹಿತ ಸಮಾಜಕ್ಕೆ ಬಸವಣ್ಣ ಸಂದೇಶ ಅಗತ್ಯ: ದಕ್ಷಿಣ ಕನ್ನಡ ಜಿಪಂ ಸಿಇಒ
ಎಲ್ಕೆಜಿಗೆ ದಾಖಲಾಗಲು 4 ವರ್ಷ, ಯುಕೆಜಿಗೆ ದಾಖಲಾಗಲು 5 ವರ್ಷ ಕಡ್ಡಾಯವಾಗಿ ತುಂಬಿರಬೇಕು ಎಂದು ಆದೇಶ ಹೊರಡಿಸಿದೆ. ಸರ್ಕಾರದ ಆದೇಶವನ್ನು ಎಲ್ಲಾ ಜಿಲ್ಲೆಯ ಡಿಡಿಪಿಐಗಳು, ಬಿಇಒಗಳು ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇದನ್ನೂ ಓದಿ: ಪಾಕ್ ವಿರುದ್ಧ ಜಲಯುದ್ಧ – ಚೆನಾಬ್ ನದಿಯ ನೀರಿನ ಮಟ್ಟ ಭಾರೀ ಇಳಿಕೆ
ಇನ್ಮುಂದೆ ಶಾಲೆಯವರು ಪೋಷಕರಿಗೆ ಸಂದರ್ಶನ ಮಾಡುವಂತಿಲ್ಲ. ಮನಸೋ ಇಚ್ಛೆ ಶುಲ್ಕ ನಿಗದಿ ಮಾಡುವಂತೆಯೂ ಇಲ್ಲ. ಫೀಸ್ ಫಿಕ್ಸ್ ಮಾಡೋದಕ್ಕೂ ಕೂಡ ಇದೀಗ ಸರ್ಕಾರ ಹೊಸ ನಿಯಮ ಘೋಷಣೆ ಮಾಡಿದ್ದು, ಕಡ್ಡಾಯವಾಗಿ ಖಾಸಗಿ ಶಾಲೆಗಳು ನಿಯಮವನ್ನು ಪಾಲನೆ ಮಾಡಬೇಕು ಎಂದು ಎಚ್ಚರಿಕೆ ನೀಡಿದೆ. ನಿಯಮ ಪಾಲನೆ ಮಾಡದಿದ್ದಲ್ಲಿ ಅಂತಹ ಶಾಲೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಾರ್ನಿಂಗ್ ನೀಡಿದೆ.
ಖಾಸಗಿ ಶಾಲೆಗಳಿಗೆ ರೂಲ್ಸ್ ಏನು?
> ಶಾಲಾ ಪ್ರವೇಶಕ್ಕಾಗಿ ವಿದ್ಯಾರ್ಥಿಯನ್ನಾಗಲಿ ಅಥವಾ ಅವರ ಪೋಷಕರನ್ನಾಗಲಿ ಪರೀಕ್ಷಿಸುವಂತಿಲ್ಲ
> ಪೋಷಕರು ಅಥವಾ ವಿದ್ಯಾರ್ಥಿಗಳಿಗೆ ಸಂದರ್ಶನ ಮಾಡುವಂತಿಲ್ಲ.
> ಶಾಲೆಗಳು ತಮ್ಮ ಶಾಲಾ ಶುಲ್ಕವನ್ನು ಕಡ್ಡಾಯವಾಗಿ ನೋಟಿಸ್, ಶಾಲಾ ಜಾಲತಾಣ, ಎಸ್ಎಟಿಎಸ್ನಲ್ಲಿ ಪ್ರಕಟಿಸಬೇಕು.
> ಶುಲ್ಕದ ಸಂಪೂರ್ಣ ಮಾಹಿತಿಯನ್ನು ಶಾಲೆಯ ಮಾಹಿತಿ ಪುಸ್ತಕದಲ್ಲಿ ಮುದ್ರಿಸಬೇಕು.
> ಶಾಲಾ ಆಡಳಿತ ಮಂಡಳಿಯೂ ತಾವು ಅಧಿಸೂಚಿಸಿದ ಶುಲ್ಕವನ್ನು ಹೊರತುಪಡಿಸಿ ವಿದ್ಯಾರ್ಥಿಗಳು ಅಥವಾ ಪೋಷಕರಿಂದ ಇತರೇ ಯಾವುದೇ ಶುಲ್ಕ ಪಡೆಯುವಂತೆ ಇಲ್ಲ.
> ಖಾಸಗಿ ಶಾಲೆಗಳು ಕಡ್ಡಾಯವಾಗಿ 25% ಆರ್ಟಿಇ ಸೀಟು ಮೀಸಲಿಡಬೇಕು.
> ಎಸ್ಸಿ-ಎಸ್ಟಿ ವರ್ಗದ ಆಡಳಿತ ಮಂಡಳಿಯ ಶಾಲೆಗಳಲ್ಲಿ ಕಡ್ಡಾಯ 50% ಎಸ್ಸಿ-ಎಸ್ಟಿ ವಿದ್ಯಾರ್ಥಿಗಳು ಇರಬೇಕು.
> ಸಹ ಶಿಕ್ಷಣ ಹೊಂದಿರುವ ಶಾಲೆಗಳಲ್ಲಿ ಕಡ್ಡಾಯವಾಗಿ ಮೀಸಲಾತಿ ಅನ್ವಯ ಒಟ್ಟು ಪ್ರದೇಶದಲ್ಲಿ 50% ಹೆಣ್ಣುಮಕ್ಕಳಿಗೆ ಕಡ್ಡಾಯವಾಗಿ ನೀಡಬೇಕು.ಇದನ್ನೂ ಓದಿ: KRIDLನಲ್ಲಿ ಬಹುಕೋಟಿ ಹಗರಣ – ಬಿಜೆಪಿ ಮಾಜಿ ಶಾಸಕನ ವಿರುದ್ಧ ಅಕ್ರಮ ಆರೋಪ
ಬೆಂಗಳೂರು: ಒಂದನೇ ತರಗತಿ (1st Class) ದಾಖಲಾತಿಗೆ 6 ವರ್ಷ ವಯಸ್ಸು ಕಡ್ಡಾಯ ನಿಯಮ ಸಡಿಲಿಕೆ ಸಾಧ್ಯವಿಲ್ಲ ಅಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, 6 ವರ್ಷದ ನಿಯಮ ಸಡಿಲಿಕೆ ಸಾಧ್ಯವಿಲ್ಲ. ನಾನೇನು ಮಾಡಲು ಆಗೊಲ್ಲ. ಅನೇಕರು ಈ ಸಂಬಂಧ ಕೋರ್ಟ್ ಗೆ ಹೋಗಿದ್ರು. ಕೋರ್ಟ್ ಕೂಡಾ ಅವರ ಅರ್ಜಿ ವಜಾ ಮಾಡಿದೆ. ಕೋರ್ಟ್ ನಲ್ಲಿ ಏನೇ ಆದೇಶ ಬಂದರೂ ನಾವು ಪಾಲನೆ ಮಾಡ್ತೀವಿ ಅಂತ ತಿಳಿಸಿದರು.
6 ವರ್ಷದ ನಿಯಮದಿಂದ ಬೇಜಾರ್ ಆಗುತ್ತದೆ. ಆದರೆ ನಿಯಮದ ಪ್ರಕಾರ ನಾವು ನಡೆಯಬೇಕು. 1 ತಿಂಗಳು, 2 ತಿಂಗಳು ಕಡಿಮೆ ಇರೋರಿಗೆ ಕೊಟ್ಟರೆ ಮತ್ತೊಬ್ಬರು ಕೇಳ್ತಾರೆ. ಇದೆಲ್ಲವೂ ಬಹಳ ಚರ್ಚೆ ಆಗೋ ವಿಷಯ. ಎಷ್ಟೋ ಪೋಷಕರು 7 ದಿನ ಕಡಿಮೆ ಅಂತಿದ್ದಾರೆ. ಆದರೆ ಅದು ಕಾನೂನಿನಲ್ಲಿ ಇಲ್ಲ. ನಾವು ಅದನ್ನು ಪರಿಗಣಿಸಲು ಸಾಧ್ಯವಿಲ್ಲ. ಈಗ ಈ ವಿಷಯ ಕೋರ್ಟ್ ನಲ್ಲಿ ಇದೆ. ಕೋರ್ಟ್ ನಲ್ಲಿ ನಿರ್ಧಾರ ಬಂದರೆ ನಾವು ತೀರ್ಮಾನ ಮಾಡಬಹುದು. ಕೋರ್ಟ್ ತೀರ್ಮಾನದಂತೆ ನಾವು ನಡೆದುಕೊಳ್ತೀವಿ ಅಂತ ತಿಳಿಸಿದರು.
ಈ ವಯಸ್ಸಿನ ಮಿತಿ ಬಗ್ಗೆ ದೊಡ್ಡ ಚರ್ಚೆ ಆಗಬೇಕು. ಮಕ್ಕಳ ವಿಷಯದಲ್ಲಿ ನಾವು ಹುಷಾರಾಗಿ ನಿರ್ಧಾರ ಮಾಡಬೇಕು. ಮಗು ಹುಟ್ಟಿದ 3 ವರ್ಷ ಒಂದನೇ ತರಗತಿಗೆ ಸೇರಿಸಿದ್ರೆ ಕಷ್ಟ ಆಗುತ್ತದೆ. ನಿಯಮ ಸಡಿಲ ಮಾಡಿ ಅಂತ ಕೇಳ್ತಾರೆ. ಆದರೆ ನಾವು ಅದನ್ನ ಮಾಡಲು ಸಾಧ್ಯವಿಲ್ಲ ಅಂತ ಸ್ಪಷ್ಟಪಡಿಸಿದರು.
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ (ಮಾರ್ಚ್ 1) ದ್ವಿತೀಯ ಪಿಯುಸಿ ಪರೀಕ್ಷೆ (2nd PUC Exam) ಆರಂಭವಾಗಲಿದ್ದು, ಮಾರ್ಚ್ 20ರ ವರೆಗೆ ಪರೀಕ್ಷೆ ನಡೆಯಲಿದೆ. ಈಗಾಗಲೇ ಶಿಕ್ಷಣ ಇಲಾಖೆ ಮತ್ತು ಎಕ್ಸಾಂ ಬೋರ್ಡ್ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಪರೀಕ್ಷಾ ಅಕ್ರಮ ತಡೆಗೆ ಮೊದಲ ಬಾರಿಗೆ ದ್ವಿತೀಯ ಪಿಯುಸಿ ಎಕ್ಸಾಂಗೂ ವೆಬ್ ಕಾಸ್ಟಿಂಗ್ ಕಣ್ಗಾವಲು ಇರಲಿದೆ. ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ಪೈಕಿ 3,35,468 ಗಂಡು ಮಕ್ಕಳು, 3,78,389 ಹೆಣ್ಣು ಮಕ್ಕಳು ಹಾಗೂ ಐವರು ತೃತೀಯ ಲಿಂಗಿಗಳಿದ್ದಾರೆ.
ಒಟ್ಟು 1,171 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಇದರೊಂದಿಗೆ 2,342 ಸ್ಥಾನಿಕ ಜಾಗೃತದಳ, 76 ಉತ್ತರ ಪತ್ರಿಕೆ ಮೌಲ್ಯಮಾಪನ ಕೇಂದ್ರಗಳು ಹಾಗೂ 31,000 ಮೌಲ್ಯಮಾಪಕರನ್ನ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಪರೀಕ್ಷಾ ನಿಯಮಗಳು?
>. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ 200 ಮೀಟರ್ ನಿಷೇಧಾಜ್ಞೆ.
>. ಪಿಯುಸಿ ಎಕ್ಸಾಂ ಎಲ್ಲಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ, ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಇರಲಿದೆ.
>. ಪರೀಕ್ಷಾ ಕೇಂದ್ರದ ಸುತ್ತ ಜೆರಾಕ್ಸ್, ಸೈಬರ್ ಸೆಂಟರ್, ಕಂಪ್ಯೂಟರ್ ಸೆಂಟರ್ ಮುಚ್ಚಬೇಕು.
>. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಭದ್ರತೆ ವ್ಯವಸ್ಥೆ.
>. ಪ್ರಶ್ನೆ ಪತ್ರಿಕೆ ಲೀಕ್ ಮಾಡುವ, ಅಕ್ರಮ ಮಾಡುವವರ ವಿರುದ್ಧ ಕ್ರಮ.
>. ಪ್ರಶ್ನೆ ಪತ್ರಿಕೆ ರವಾನೆ ಮಾಡೋದ್ರೀಂದ ಹಿಡಿದು ಪರೀಕ್ಷಾ ಕೇಂದ್ರಕ್ಕೆ ತೆರಳೋವರೆಗೂ ಕ್ಯಾಮೆರಾ ರೆಕಾರ್ಡ್.
>. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ವಾಚ್, ಎಲೆಕ್ಟ್ರಾನಿಕ್ ಉಪಕರಣಗಳು ನಿಷೇಧ.
ದ್ವೀತಿಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ
>. ಮಾರ್ಚ್ 1- ಕನ್ನಡ, ಅರೇಬಿಕ್.
>. ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
>. ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
>. ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
>. ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ
>. ಮಾರ್ಚ್-10- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.
>. ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ.
>. ಮಾರ್ಚ್ 13- ಅರ್ಥಶಾಸ್ತ್ರ
>. ಮಾರ್ಚ್ 15- ಇಂಗ್ಲಿಂಷ್
>. ಮಾರ್ಚ್ 17- ಭೂಗೋಳಶಾಸ್ತ್ರ.
>. ಮಾರ್ಚ್ 18- ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
>. ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
>. ಮಾರ್ಚ್ 20- ಹಿಂದಿ
– ಮೊಲದ ಬಾರಿಗೆ ವೆಬ್ ಕ್ಯಾಸ್ಟಿಂಗ್ ಕಣ್ಗಾವಲು
– ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತ ನಿಷೇಧಾಜ್ಞೆ
ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 1 ರಿಂದ (ಶನಿವಾರ) ದ್ವಿತೀಯ ಪಿಯುಸಿ ಪರೀಕ್ಷೆ (2nd PUC Exam) ಆರಂಭವಾಗಲಿದ್ದು, ಮಾರ್ಚ್ 20ರ ವರೆಗೆ ಪರೀಕ್ಷೆ ನಡೆಯಲಿದೆ.
ವೆಬ್ಕಾಸ್ಟಿಂಗ್ ಕಣ್ಗಾವಲು:
ಈಗಾಗಲೇ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿರುವ ಶಿಕ್ಷಣ ಇಲಾಖೆ (Education Department) ಇದೇ ಮೊದಲ ಬಾರಿಗೆ ವೆಬ್ಕಾಸ್ಟಿಂಗ್ ಕಣ್ಗಾವಲು ವ್ಯವಸ್ಥೆ ಮಾಡಿದೆ. ಕಳೆದ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಗೆ ವೆಬ್ಕ್ಯಾಸ್ಟಿಂಗ್ ವ್ಯವಸ್ಥೆ ಜಾರಿ ಮಾಡಲಾಗಿತ್ತು. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೂ ವ್ಯವಸ್ಥೆ ಮಾಡುವ ಮೂಲಕ ಪರೀಕ್ಷಾ ಚಟುವಟಿಕೆಗಳ ಮೇಲೆ ನಿಗಾ ಇಟ್ಟಿದೆ. ಪರೀಕ್ಷಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಶಿಕ್ಷಣ ಇಲಾಖೆ ಹೇಳಿದೆ. ಹಾಗಾದ್ರೆ ಎಕ್ಸಾಂಗೆ ಬೋರ್ಡ್ ಸಿದ್ಧತೆ ಹೇಗಿದೆ ಎಂಬುದನ್ನಿಲ್ಲಿ ನೋಡೋಣ…
ದ್ವಿತೀಯ ಪಿಯುಸಿ ಎಕ್ಸಾಂ ಸಿದ್ಧತೆ ಏನು?
ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. 3,35,468 ಗಂಡು ಮಕ್ಕಳು, 3,78,389 ಹೆಣ್ಣು ಮಕ್ಕಳು ಹಾಗೂ ಐವರು ತೃತೀಯ ಲಿಂಗಿಗಳಿದ್ದಾರೆ. ಒಟ್ಟು 1,171 ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ. ಇದರೊಂದಿಗೆ 2,342 ಸ್ಥಾನಿಕ ಜಾಗೃತದಳ, 76 ಉತ್ತರ ಪತ್ರಿಕೆ ಮೌಲ್ಯಮಾಪನ ಕೇಂದ್ರಗಳು ಹಾಗೂ 31,000 ಮೌಲ್ಯಮಾಪಕರನ್ನ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಪರೀಕ್ಷಾ ನಿಯಮಗಳು?
>. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ 200 ಮೀಟರ್ ನಿಷೇಧಾಜ್ಞೆ.
>. ಪಿಯುಸಿ ಎಕ್ಸಾಂ ಎಲ್ಲಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ, ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಇರಲಿದೆ.
>. ಪರೀಕ್ಷಾ ಕೇಂದ್ರದ ಸುತ್ತ ಜೆರಾಕ್ಸ್, ಸೈಬರ್ ಸೆಂಟರ್, ಕಂಪ್ಯೂಟರ್ ಸೆಂಟರ್ ಮುಚ್ಚಬೇಕು.
>. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಭದ್ರತೆ ವ್ಯವಸ್ಥೆ.
>. ಪ್ರಶ್ನೆ ಪತ್ರಿಕೆ ಲೀಕ್ ಮಾಡುವ, ಅಕ್ರಮ ಮಾಡುವವರ ವಿರುದ್ಧ ಕ್ರಮ.
>. ಪ್ರಶ್ನೆ ಪತ್ರಿಕೆ ರವಾನೆ ಮಾಡೋದ್ರೀಂದ ಹಿಡಿದು ಪರೀಕ್ಷಾ ಕೇಂದ್ರಕ್ಕೆ ತೆರಳೋವರೆಗೂ ಕ್ಯಾಮೆರಾ ರೆಕಾರ್ಡ್.
>. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ವಾಚ್, ಎಲೆಕ್ಟ್ರಾನಿಕ್ ಉಪಕರಣಗಳು ನಿಷೇಧ.
ದ್ವೀತಿಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ
>. ಮಾರ್ಚ್ 1- ಕನ್ನಡ, ಅರೇಬಿಕ್.
>. ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
>. ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
>. ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
>. ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ
>. ಮಾರ್ಚ್-10- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.
>. ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ.
>. ಮಾರ್ಚ್ 13- ಅರ್ಥಶಾಸ್ತ್ರ
>. ಮಾರ್ಚ್ 15- ಇಂಗ್ಲಿಂಷ್
>. ಮಾರ್ಚ್ 17- ಭೂಗೋಳಶಾಸ್ತ್ರ.
>. ಮಾರ್ಚ್ 18- ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
>. ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
>. ಮಾರ್ಚ್ 20- ಹಿಂದಿ
ಬೆಂಗಳೂರು: ಪ್ರಸಕ್ತ ಸಾಲಿನ (2024-25) ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟ ಮಾಡಿದೆ. ಮಾರ್ಚ್ 1 ರಿಂದ 19ರ ವರೆಗೆ ದ್ವೀತಿಯ ಪಿಯುಸಿ ಪರೀಕ್ಷೆಗಳು ನಡೆದರೆ, ಮಾರ್ಚ್ 20 ರಿಂದ ಏಪ್ರಿಲ್ 2ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿದ್ದು, ಬಹುತೇಕ ತಾತ್ಕಾಲಿಕ ವೇಳಾಪಟ್ಟಿಯೇ ಅಂತಿಮವಾಗಲಿದೆ. ಪಿಡಿಎಫ್ಗಾಗಿ ಈ ಲಿಂಕ್ ಕ್ಲಿಕ್ ಮಾಡಿ – 2025 SSLC and II PUC Exam-1 Press Note & Time Table_0001_0001
ಸಾಂದರ್ಭಿಕ ಚಿತ್ರ
ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಿಲಾಗಿದ್ದು, ಡಿ.16ರ ಒಳಗೆ ಆಕ್ಷೇಪಣೆಯಲ್ಲಿ ಬೋರ್ಡ್ ಸಲ್ಲಿಕೆ ಮಾಡಬಹುದಾಗಿದೆ. ತಾತ್ಕಾಲಿಕ ವೇಳಾಪಟ್ಟಿ ಹೀಗಿದೆ….
ದ್ವೀತಿಯ ಪಿಯುಸಿ ಪರೀಕ್ಷೆ- ವೇಳಾಪಟ್ಟಿ
ಮಾರ್ಚ್ 1- ಕನ್ನಡ, ಅರೇಬಿಕ್.
ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ,ಮರಾಠಿ, ಉರ್ದು,ಸಂಸ್ಕೃತ,ಫ್ರೆಂಚ್.
ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ
ಮಾರ್ಚ್ 8- ಹಿಂದಿ.
ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ,ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.
ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ,ಮೂಲ ಗಣಿತ.
ಮಾರ್ಚ್ 13- ಅರ್ಥಶಾಸ್ತ್ರ
ಮಾರ್ಚ್ 15- ಇಂಗ್ಲೀಷ್
ಮಾರ್ಚ್ 17- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾರ್ಚ್ 18- ಸಮಾಜಶಾಸ್ತ್ರ,ವಿದ್ಯುನ್ಮಾನಶಾಸ್ತ್ರ,ಗಣಕ ವಿಜ್ಞಾನ
ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್,ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್.
ದಾವಣಗೆರೆ: ತಂದೆ ತಾಯಿಯಲ್ಲದೇ ದೊಡ್ಡಮ್ಮನ ಆಶ್ರಯದಲ್ಲಿ ಬೆಳೆಯುತ್ತಿದ್ದ ಅನಾಥ ಬಾಲಕನಿಗೆ ಶಿಕ್ಷಣ ಸಿಗದೇ ಪರದಾಡುತ್ತಿರುವ ಕುರಿತು ಪಬ್ಲಿಕ್ ಟಿವಿ ವರದಿ (PUBLiC TV Report) ಮಾಡಿತ್ತು. ವರದಿ ಬೆನ್ನಲ್ಲೇ ಶಿಕ್ಷಣ ಇಲಾಖೆ ಅಧಿಕಾರಿಗಳು (Education Department) ಎಚ್ಚೆತ್ತಿದ್ದಾರೆ. ಸದ್ಯ ಅನಾಥ ಬಾಲಕನಿಗೆ ಶಿಕ್ಷಣ ಭಾಗ್ಯ ದೊರೆತಿದೆ.
ಆ ಬಾಲಕ ಆರು ತಿಂಗಳು ಇರುವಾಗಲೇ ತಾಯಿಯನ್ನು ಕಳೆದುಕೊಂಡಿದ್ದ. ಹೆಂಡತಿಯನ್ನು ಕೊಂದು ಆ ಬಾಲಕನ ತಂದೆ ಜೈಲು ಸೇರಿದ್ದ. ಅನಾಥವಾಗಿದ್ದ ಬಾಲಕನು ದೊಡ್ಡಮ್ಮನ ಆಶ್ರಯದಲ್ಲಿ ಬೆಳೆಯುತ್ತಿದ್ದ. ಶಾಲೆಗೆ ಸೇರಿಸಲು ಹೋದಾಗ ಶಾಲಾ ಮುಖ್ಯ ಶಿಕ್ಷಕಿ ಆತನನ್ನು ಶಾಲೆಗೆ ಸೇರಿಸಿಕೊಳ್ಳದೇ ಸತಾಯಿಸುತ್ತಿದ್ದರು. ಈ ಸಮಯದಲ್ಲಿ ಈ ಕುರಿತು ಪಬ್ಲಿಕ್ ಟಿವಿ ವರದಿಯೊಂದನ್ನು ಬಿತ್ತರಿಸಿತ್ತು. ಇದರ ಬೆನ್ನಲ್ಲೇ ಅನಾಥ ಬಾಲಕನಿಗೆ ಶಾಲೆಯ ಪ್ರವೇಶಾತಿ ಸಿಗುವುದರ ಜೊತೆಗೆ ವಿದ್ಯಾಭ್ಯಾಸ ಕೂಡ ಸಿಕ್ಕಿದೆ.ಇದನ್ನೂ ಓದಿ: 5 ಲಕ್ಷ ಪಾವತಿಸಿ ಇಲ್ಲವೇ ದುರ್ಗಾ ಪೂಜೆ ಆಚರಿಸಬೇಡಿ: ಬಾಂಗ್ಲಾ ಹಿಂದೂ ದೇವಾಲಯಗಳಿಗೆ ಬೆದರಿಕೆ
ದಾವಣಗೆರೆಯ (Davanagere) ಶಾಮನೂರು ಹೊಸ ಬಡಾವಣೆಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಸನ್ನಿವೇಶ ಕಂಡು ಬಂದಿದೆ. ಕಳೆದ ಎರಡು ದಿನಗಳ ಹಿಂದೆ ಶಾಲೆಗೆ ಸೇರಿಸಿಕೊಳ್ಳದೇ ಇದ್ದಿದ್ದಕ್ಕೆ ಶಾಲೆಯ ಹೊರಗೆ ಕೂತಿದ್ದ ಬಾಲಕ ಇಂದು ಶಾಲೆಯಲ್ಲಿ ಕೂತು ಪಾಠ ಕೇಳುತ್ತಿದ್ದಾನೆ. ಇದಕ್ಕೆ ಪಬ್ಲಿಕ್ ಟಿವಿಯ ವರದಿಯೇ ಕಾರಣ. ಅಕ್ಷಯ್ ಎನ್ನುವ ಬಾಲಕನಿಗೆ ಶಾಲೆಗೆ ಸೇರಿಸಿಕೊಳ್ಳದೇ ಶಾಲಾ ಮುಖ್ಯ ಶಿಕ್ಷಕರು ಸತಾಯಿಸುತ್ತಿದ್ದರು. ಇದಕ್ಕೆ ಕಾರಣ ಅಕ್ಷಯ್ ತಾಯಿಯನ್ನು ಆತನ ತಂದೆ ಕೊಲೆ ಮಾಡಿ ಜೈಲು ಸೇರಿದ್ದ.
ಅನಾಥವಾಗಿದ್ದ ಆ ಬಾಲಕನನ್ನು ದೊಡ್ಡಮ್ಮ ರೂಪ ತನ್ನ ಮಕ್ಕಳಂತೆ ಸಾಕುತ್ತಿದ್ದಳು. ಶಾಲೆಗೆ ಸೇರಿಸಲು ಹೋದಾಗ ತಂದೆ ತಾಯಿಯ ಆಧಾರ್ ಕಾರ್ಡ್ ಬೇಕು ಇಲ್ಲವಾದ್ರೆ ಸೇರಿಸಿಕೊಳ್ಳೋದಿಲ್ಲ ಎಂದು ಸತಾಯಿಸಿದ್ದರು. ಇದರಿಂದ ದಿಕ್ಕು ತೋಚದ ಸ್ಥಿತಿಯಲ್ಲಿ ಕುಟುಂಬವಿದ್ದು, ಆ ಕುಟುಂಬದ ನೆರವಿಗೆ ಪಬ್ಲಿಕ್ ಟಿವಿ ನಿಂತಿದೆ. ಕೂಡಲೇ ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದೇ ತಡ ಆ ಬಾಲಕನನ್ನು ಒಂದನೇ ತರಗತಿಗೆ ದಾಖಲು ಮಾಡಿಕೊಂಡು ವಿದ್ಯಾಭ್ಯಾಸ ಕೊಡಿಸುತ್ತಿದ್ದಾರೆ. ಇದರಿಂದ ಸ್ಥಳೀಯರು ಪಬ್ಲಿಕ್ ಟಿವಿಗೆ ಧನ್ಯವಾದ ತಿಳಿಸಿದರು.
ಇನ್ನು ಯಾವಾಗ ಬಾಲಕನ ಸಮಸ್ಯೆ ಬಗ್ಗೆ ಪಬ್ಲಿಕ್ ಟಿವಿ ವರದಿ ಬಿತ್ತರವಾಯ್ತೋ ಕೂಡಲೇ ಎಚ್ಚೆತ್ತ ಅಧಿಕಾರಿಗಳು, ಅದರಲ್ಲೂ ದಕ್ಷಿಣ ಕ್ಷೇತ್ರ ವಲಯದ ಬಿಇಒ ಪುಷ್ಪಲತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಲಕನನ್ನು ಶಾಲೆಗೆ ಸೇರಿಸಿಕೊಂಡಿದ್ದಾರೆ. ಅಲ್ಲದೆ ಶಿಕ್ಷಣ ಇಲಾಖೆಯ ವರದಿಯಲ್ಲಿ ಕೂಡ ಪಬ್ಲಿಕ್ ಟಿವಿ ಬಿತ್ತರಿಸಿದ ಸುದ್ದಿಯ ಬಗ್ಗೆ ಕೂಡ ಉಲ್ಲೇಖವಾಗಿದೆ. ಇದರಿಂದ ಬಿಇಒ ಪುಷ್ಪಲತ ಆ ಬಾಲಕನಿಗೆ ಧೈರ್ಯ ಹೇಳುವ ಮೂಲಕ ಶಾಲೆಗೆ ಸೇರಿಸಿಕೊಂಡಿದ್ದಾರೆ. ಈಗ ಬಾಲಕ ತರಗತಿಯಲ್ಲಿ ಕೂತು ಮಕ್ಕಳ ಜೊತೆ ವಿದ್ಯಾಭ್ಯಾಸ ಕಲಿಯುವಂತಾಗಿದೆ. ಇನ್ನು ಇದಕ್ಕೆ ಸಹಕಾರಿಯಾದ ಪಬ್ಲಿಕ್ ಟಿವಿಗೆ ಬಾಲಕನ ಕುಟುಂಬಸ್ಥರು ಧನ್ಯವಾದ ತಿಳಿಸಿದ್ದಾರೆ.ಇದನ್ನೂ ಓದಿ: ಯಾದಗಿರಿಯಲ್ಲಿ ಗುಡುಗು ಸಹಿತ ಬಾರಿ ಮಳೆ : ಸಿಡಿಲು ಬಡಿದು ನಾಲ್ವರು ಸಾವು
ಜೈಪುರ: ಉದಯ್ಪುರದ (Udaipur) ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಯೋರ್ವ ಸಹಪಾಠಿಗೆ ಚಾಕು ಇರಿದ ಘಟನೆಯ ಬಳಿಕ ರಾಜಸ್ಥಾನ (Rajsthan) ಶಿಕ್ಷಣ ಇಲಾಖೆ ಫುಲ್ ಅಲರ್ಟ್ ಆಗಿದೆ. ಇದೀಗ ಶಾಲೆಗಳಿಗೆ ಚಾಕು ಅಥವಾ ಕತ್ತರಿಗಳಂತಹ ಹರಿತವಾದ ಉಪಕರಣಗಳನ್ನು (Sharp Edged Weapons) ಒಯ್ಯುವುದನ್ನು ನಿಷೇಧಿಸಿ ರಾಜಸ್ಥಾನ ಶಿಕ್ಷಣ ಇಲಾಖೆ ಶನಿವಾರ ಮಾರ್ಗಸೂಚಿಯನ್ನು (Guidelines) ಹೊರಡಿಸಿದೆ.
ಇದರ ಪ್ರಕಾರ, ಚಾಕು, ಕತ್ತರಿಗಳಂತಹ ಯಾವುದೇ ಹರಿತವಾದ ಉಪಕರಣಗಳನ್ನು ವಿದ್ಯಾರ್ಥಿಗಳು ಶಾಲೆಗೆ ಒಯ್ಯುವಂತಿಲ್ಲ. ವಿದ್ಯಾರ್ಥಿಗಳು ತರಗತಿಗೆ ತೆರಳುವ ವೇಳೆ ಶಿಕ್ಷಕರು ಅವರ ಬ್ಯಾಗ್ ಪರಿಶೀಲಿಸಿ ಹರಿತವಾದ ಉಪಕರಣಗಳು ಇದೆಯಾ ಎಂದು ಖಚಿತಪಡಿಸಿಕೊಂಡು ಬಳಿಕ ತರಗತಿ ಒಳಗೆ ಬಿಡಬೇಕು. ಈ ಮಾರ್ಗಸೂಚಿಯನ್ನು ಉಲ್ಲಂಘಿಸುವ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಉದಯ್ಪುರದಲ್ಲಿ ಸಹಪಾಠಿಗೆ ಚಾಕು ಇರಿತ – ಅಕ್ರಮವಾಗಿ ನಿರ್ಮಿಸಿದ್ದ ಆರೋಪಿ ಮನೆ ಧ್ವಂಸ
ಈ ಬಗ್ಗೆ ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕ ಆಶಿಶ್ ಮೋದಿ ಮಾತನಾಡಿ, ಪೋಷಕರು ಮಕ್ಕಳನ್ನು ಓದಲೆಂದು ಶಾಲೆಗೆ ಕಳುಹಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಶಾಲಾ ಆವರಣಗಳು ವಿದ್ಯಾರ್ಥಿಗಳಿಗೆ ಸುರಕ್ಷಿತ ಸ್ಥಳವಾಗಬೇಕು. ಯಾವುದೇ ರೀತಿಯ ಹಿಂಸಾಚಾರ ಇಲ್ಲಿ ನಡೆಯಬಾರದು. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ಇಲಾಖೆ ಈ ಮಾರ್ಗಸೂಚಿಯನ್ನು ಹೊರಡಿಸಿದೆ. ಹೊಸ ಮಾರ್ಗಸೂಚಿಯನ್ನು ಶಾಲಾ ಸೂಚನಾ ಫಲಕಗಳಲ್ಲಿ ಅಂಟಿಸಲಾಗುತ್ತದೆ ಮತ್ತು ಪ್ರಾರ್ಥನಾ ಸಭೆಗಳಲ್ಲಿ ವಿದ್ಯಾರ್ಥಿಗಳಿಗೆ ಅದರ ಬಗ್ಗೆ ತಿಳಿಸಲಾಗುವುದು ಎಂದು ವಿವರಿಸಿದರು. ಇದನ್ನೂ ಓದಿ: ನಾನು ಶುದ್ಧಹಸ್ತ ಎಂದು ಪದೇಪದೆ ಹೇಳುವ ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ನಿಖಿಲ್ ಆಗ್ರಹ
ಪ್ರಕರಣ ಏನು?
ಸರ್ಕಾರಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಶುಕ್ರವಾರ ಕ್ಷುಲ್ಲಕ ಕಾರಣಕ್ಕೆ ತನ್ನ ಸಹಪಾಠಿಗೆ ಚಾಕುವಿನಿಂದ ಇರಿದಿದ್ದು, ಮಧುಬನ್ ಪ್ರದೇಶದಲ್ಲಿ ಕೋಮುಗಲಭೆ ಸೃಷ್ಠಿಸಿದೆ. ಘಟನೆಯ ಬಳಿಕ ಹಲವಾರು ಹಿಂದೂ ಸಂಘಟನೆಯ ಸದಸ್ಯರು ಗ್ಯಾರೇಜ್ನಲ್ಲಿ ನಿಲ್ಲಿಸಿದ್ದ ಕನಿಷ್ಟ ಮೂರು ಕಾರುಗಳಿಗೆ ಬೆಂಕಿ ಹಚ್ಚಿದ್ದಲ್ಲದೇ ಕಲ್ಲು ತೂರಾಟ ನಡೆಸಿ ಕೋಮುಗಲಭೆ ಸೃಷ್ಠಿಸಿದ್ದರು. ಇದನ್ನೂ ಓದಿ: TB Dam | ಮೂರನೇ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ – ಎಲ್ಲಾ ಗೇಟ್ ಬಂದ್
ಪ್ರಕರಣದಲ್ಲಿ ವಿದ್ಯಾರ್ಥಿಗಳು ವಿವಿಧ ಸಮುದಾಯದವರಾಗಿದ್ದರಿಂದ ನಗರದಲ್ಲಿ ಉದ್ವಿಗ್ನತೆ ಹೆಚ್ಚಾಯಿತು. ಕಾರುಗಳಿಗೆ ಬೆಂಕಿ ಹಚ್ಚಿ ಕಲ್ಲು ತೂರಾಟದ ಬಳಿಕ ಗುಂಪನ್ನು ಚದುರಿಸುವ ಸಲುವಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು. ಇನ್ನು ಮಧುಬನ್ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತ (BNSS) ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ಹೇರಲಾಗಿದೆ. ಇದನ್ನೂ ಓದಿ: ಬೆಳಗ್ಗೆ ಎದ್ದರೆ ನೈತಿಕತೆ ಬಗ್ಗೆ ಮಾತನಾಡೋ ಸಿಎಂ ರಾಜೀನಾಮೆ ನೀಡಲಿ: ಜನಾರ್ದನ ರೆಡ್ಡಿ
ಬೆಂಗಳೂರು: ಆಹಾರ ಇಲಾಖೆ ಮತ್ತು ಶಿಕ್ಷಣ ಇಲಾಖೆ (Education Department) ಅಕ್ಕಿ ಖರೀದಿಸಿದ್ದರಲ್ಲಿ ದೊಡ್ಡ ಪ್ರಮಾಣದಲ್ಲಿ ಹಣದ ವ್ಯತ್ಯಾಸವಾಗಿದೆ ಎಂದು ಬಿಜೆಪಿ (BJP) ಮುಖಂಡ ಎನ್.ರವಿಕುಮಾರ್ (N.Ravikumar) ಆರೋಪಿಸಿದ್ದಾರೆ.
ವಿಧಾನ ಪರಿಷತ್ ಕಲಾಪದಲ್ಲಿ ಆಹಾರ ಸಚಿವ ಮುನಿಯಪ್ಪರಿಗೆ ಪ್ರಶ್ನಿಸಿದ ಅವರು, ಆಹಾರ ಇಲಾಖೆ ಒಂದು ಕೆಜಿಗೆ 34 ರೂ. 60 ಪೈಸೆ ಖರ್ಚು ಮಾಡುತ್ತಿದೆ. ಶಿಕ್ಷಣ ಇಲಾಖೆ ಅಕ್ಷರ ದಾಸೋಹಗೆ ಪ್ರತಿ ಕೆಜಿ ಅಕ್ಕಿಗೆ 29ರೂ. 30 ಪೈಸೆ ಕೊಡ್ತಿದ್ದಾರೆ. ಸರ್ಕಾರ ಒಂದೇ ಇದ್ದರೂ ಯಾಕೆ ಬೇರೆ ದರದಲ್ಲಿ ಅಕ್ಕಿ ಖರೀದಿ ಆಗ್ತಿದೆ? ಅಕ್ಕಿ ಖರೀದಿಯಲ್ಲಿ ಸುಮಾರು 5 ರೂ. ಹಣ ಎಲ್ಲಿಗೆ ಹೋಗುತ್ತಿದೆ ಎಂದು ಗೊತ್ತಿಲ್ಲ. ಸುಮಾರು 120 ಕೋಟಿ ರೂ. ಹಣ ವ್ಯತ್ಯಾಸ ಬರುತ್ತಿದೆ. ಇದಕ್ಕೆ ಉತ್ತರ ಕೊಡಿ ಎಂದು ಅವರು ಕೇಳಿದರು. ಇದನ್ನೂ ಓದಿ: ಕಾವೇರಿ ನೀರು ಬಿಡುಗಡೆ ವಿಚಾರ; ರಾಜ್ಯ ಸರ್ಕಾರ ನಿರ್ಧಾರದ ಬೆನ್ನಲ್ಲೇ ಸರ್ವಪಕ್ಷಗಳ ಸಭೆ ಕರೆದ ತ.ನಾಡು ಸರ್ಕಾರ
ಈ ವೇಳೆ ಉತ್ತರಿಸಿದ ಸಚಿವ ಮುನಿಯಪ್ಪ, ಆಹಾರ ಇಲಾಖೆ, ಎನ್ಸಿಎಫ್ ಮತ್ತು ಕೇಂದ್ರ ಭಂಡಾರದ ಮೂಲಕವೇ ಅಕ್ಕಿ ಖರೀದಿ ಮಾಡ್ತಿದೆ. ಕೇಂದ್ರವೇ ನಿಗದಿ ಮಾಡಿದ ಮೊತ್ತವನ್ನು ಪ್ರತಿ ಕೆಜಿಗೆ 34 ರೂ. 60 ಪೈಸೆ ಕೊಡಲಾಗುತ್ತಿದೆ. ನಾವು ಕೇಂದ್ರ ಸರ್ಕಾರಕ್ಕೆ 5 ಕೆಜಿ ಅಕ್ಕಿ ಕೊಡಿ ಎಂದರೂ ಕೊಡಲಿಲ್ಲ. ನಾವು ಖರೀದಿ ಮಾಡುತ್ತಿರುವ ಅಕ್ಕಿ ನಾವು ಟೆಂಡರ್ ಕರೆದಿಲ್ಲ. ಕೇಂದ್ರ ನಿಗದಿ ಮಾಡಿದ ಹಣವನ್ನೇ ಕೊಟ್ಟು ಅಕ್ಕಿ ಖರೀದಿ ಮಾಡ್ತಿದ್ದೇವೆ. ಇದರಲ್ಲಿ ಯಾವುದೇ ಅಕ್ರಮ ಆಗಿಲ್ಲ ಎಂದು ಅವರು ಹೇಳಿದರು.
2 ಕೋಟಿ ಮೆಟ್ರಿಕ್ ಟನ್ ಕೇಂದ್ರದ ಬಳಿ ಅಕ್ಕಿ ದಾಸ್ತಾನಿದೆ. 28 ರೂ.ಗೆ ಅಕ್ಕಿ ಮಾರ್ಕೆಟ್ನಲ್ಲಿ ಮಾರಾಟ ಮಾಡ್ತಿದ್ದಾರೆ. ನಮಗೆ ಅಕ್ಕಿ ಕೊಡಿ ಎಂದರೂ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಮಾರ್ಕೆಟ್ ಹಾಳು ಮಾಡುತ್ತಿದೆ. ಲಕ್ಷಾಂತರ ರೂ. ಹಣವನ್ನ ಕೇಂದ್ರ ನಷ್ಟ ಮಾಡ್ತಿದೆ ಎಂದು ಅವರು ಆರೋಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ರವಿಕುಮಾರ್, ಸಚಿವ ಮಧು ಬಂಗಾರಪ್ಪ ಮಕ್ಕಳಿಗೆ ಯಾವ ಗ್ರೇಡ್ ಅಕ್ಕಿಯನ್ನು ಕೊಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಈ ವೇಳೆ ಮಧು ಬಂಗಾರಪ್ಪ ಒಳ್ಳೆಯ ಅಕ್ಕಿಯನ್ನು ಕೊಡುತ್ತಿದ್ದೇವೆ ಎಂದರು. ಈ ವೇಳೆ ಮಧ್ಯ ಪ್ರವೇಶಿಸಿದ ಸಭಾಪತಿ ಬಸವರಾಜ್ ಹೊರಟ್ಟಿ, ಇದು ಗಂಭೀರ ವಿಚಾರ, ಸರ್ಕಾರ ಇದ್ಕಕೆ ಸ್ಪಷ್ಟನೆ ನೀಡಬೇಕು ಎಂದು ಸೂಚಿಸಿದರು. ಇದನ್ನೂ ಓದಿ: Assembly Session: ಪರಿಷತ್ನಲ್ಲಿ ವಾಲ್ಮೀಕಿ ನಿಗಮ ಹಗರಣದ ಗದ್ದಲ; ಚರ್ಚೆಗೆ ಅವಕಾಶ ಕೊಡುವಂತೆ ಬಿಜೆಪಿ ಬಿಗಿಪಟ್ಟು!