Tag: Education Minister BC Nagesh

  • ಮಾಸ್ಕ್ ಹಾಕದ ವಿದ್ಯಾರ್ಥಿಗಳ ಮೇಲೆ ಸಚಿವ ನಾಗೇಶ್ ಗರಂ

    ಮಾಸ್ಕ್ ಹಾಕದ ವಿದ್ಯಾರ್ಥಿಗಳ ಮೇಲೆ ಸಚಿವ ನಾಗೇಶ್ ಗರಂ

    ಯಾದಗಿರಿ: ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಆಗಮಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಸ್ಕ್ ಹಾಕದ ವಿದ್ಯಾರ್ಥಿಗಳ ಮೇಲೆ ಗರಂ ಆಗಿ ಬಳಿಕ, ಕಾಲೇಜ್ ವಿದ್ಯಾರ್ಥಿಗಳಿಗೆ ಮಾಸ್ಕ್ ಬಗ್ಗೆ ಪಾಠ ಮಾಡಿದ್ದಾರೆ.

    ಧ್ವಜಾರೋಹಣಕ್ಕೆ ಯಾದಗಿರಿಗೆ ಆಗಮಿಸಿದ ನಾಗೇಶ್ ಅವರು ನಗರದ ಸ್ವಪ್ನಾ ಮೈದಾನದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮಕ್ಕೆ ಬಂದಿದ್ದರು. ಈ ವೇಳೆ ಮಾಸ್ಕ್ ಧರಿಸದ ವಿದ್ಯಾರ್ಥಿಗಳನ್ನು ಕಂಡು ಗರಂ ಆಗಿದ್ದು, ಕೋಪದಿಂದ ಮಕ್ಕಳಿಗೆ ಮಾಸ್ಕ್ ಹಾಕೋಳಿ ಎಂದು ಗದರಿಸಿದ್ದಾರೆ. ಇದನ್ನೂ ಓದಿ:  ರಾಹುಲ್‍ಗೆ ಪಿಸ್ತೂಲ್ ಬಳಸಲು ತರಬೇತಿಯನ್ನು ನೀಡಲಾಗಿತ್ತು: ಡಿಸಿಪಿ ಅನುಚೇತ್

    ವೇದಿಕೆಯಿಂದ ಇಳಿದು ಮಕ್ಕಳ ಬಳಿ ತೆರಳಿ ನಿಮಗೆ ಸ್ಕೂಲ್ ಆರಂಭ ಮಾಡಬೇಕಾ ಬೇಡ್ವಾ, ಮಾಸ್ಕ್ ಹಾಕಿಲ್ಲ ಎಂದರೆ ಸ್ಕೂಲ್ ಓಪನ್ ಮಾಡಲ್ಲ ಎಂದು ಮಕ್ಕಳಿಗೆ ಎಚ್ಚರಿಕೆ ನೀಡಿ ಮಾಸ್ಕ್ ಜಾಗೃತಿ ಮೂಡಿಸಿದ್ದಾರೆ. ಇದನ್ನೂ ಓದಿ:  ಮುಂದಿನ ದಿನಗಳಲ್ಲಿ ಕ್ಷೇತ್ರವಾರು ಶಾಸಕರ ಜೊತೆ ಸಭೆ ಮಾಡಿ ಲಸಿಕೆ ಅಭಿಯಾನ ಮಾಡ್ತೇವೆ: ಆರ್.ಅಶೋಕ್

    ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ವೆಂಕಟರೆಡ್ಡಿ ಮುದ್ನಾಳ್, ಜಿಲ್ಲಾಧಿಕಾರಿ, ಎಸ್‍ಪಿ ಉಪಸ್ಥಿತರಿದ್ದರು.

  • ಪಾಸಿಟಿವಿಟಿ ರೇಟ್ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಆ.23ರಿಂದ ಶಾಲೆ ಆರಂಭ: ಶಿಕ್ಷಣ ಸಚಿವ ನಾಗೇಶ್

    ಪಾಸಿಟಿವಿಟಿ ರೇಟ್ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಆ.23ರಿಂದ ಶಾಲೆ ಆರಂಭ: ಶಿಕ್ಷಣ ಸಚಿವ ನಾಗೇಶ್

    ಯಾದಗಿರಿ: ಆಗಸ್ಟ್ 23 ರಿಂದ ಶಾಲೆ ಆರಂಭ ಮಾಡುತ್ತೇವೆ, ಪಾಸಿಟಿವಿಟಿ ರೇಟ್ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ಆರಂಭ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

    ಧ್ವಜಾರೋಹಣ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭ ಮಾಡಬೇಕು, ಪೋಷಕರು ಧೈರ್ಯವಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಿ. ಮಕ್ಕಳ ಊರಿನ ಪಾಸಿಟಿವಿಟಿ ರೇಟ್ ಚೆಕ್ ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.

    ಹೊರಗುತ್ತಿಗೆಯ ಮೂಲಕ ಶಿಕ್ಷಕರನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು, ಶಿಕ್ಷಕರ ವರ್ಗಾವಣೆ ಅಧಿಸೂಚನೆ ಬಂದಿದೆ ಆದಷ್ಟು ಬೇಗ ಈ ಕಾರ್ಯ ಆರಂಭವಾಗುತ್ತೆ. ಎಲ್ಲವನ್ನೂ ಅವಲೋಕಿಸಿ ಶಾಲೆ ಆರಂಭಿಸಲಾಗುವುದು ಎಂದರು.

    ಸಿ.ಟಿ.ರವಿ ಪ್ರಿಯಾಂಕ ಖರ್ಗೆ ಜಟಾಪಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಷ್ಟ್ರೀಯ ಯೋಜನೆಗಳಿಗೆ ಕೇವಲ ಒಂದೇ ಕುಟುಂಬದ ಮೂರು ಜನರ ಹೆಸರು ಇಟ್ಟರೆ ಹೇಗೆ? ವ್ಯಕ್ತಿಯ ಹಿಂದೆ ನಮ್ಮ ಸರ್ಕಾರ ಹೊಗಿಲ್ಲ. ಇದು ಸಮಾಜದ ದುಡ್ಡು, ಇಲ್ಲಿ ವ್ಯಕ್ತಿಯ ವಯಕ್ತಿಕ ಬೆಳವಣಿಗೆ ಮುಖ್ಯ ಅಲ್ಲ, ದೇಶಕ್ಕಾಗಿ ಬಹಳ ಜನ ಪ್ರಾಣ ಕೊಟ್ಟಿದ್ದಾರೆ. ನಾವು ಅಂತಹವರನ್ನು ಸ್ಮರಿಸಿಕೊಳ್ಳಬೇಕಿದೆ ಎಂದರು.