Tag: education minister

  • ಶಿಕ್ಷಣ ಸಚಿವರ ಉಸ್ತುವಾರಿ ಜಿಲ್ಲೆಯಲ್ಲಿ ಪಾಳು ಬಿದ್ದ ಶಿಕ್ಷಕರ ವಸತಿ ಗೃಹ

    ಶಿಕ್ಷಣ ಸಚಿವರ ಉಸ್ತುವಾರಿ ಜಿಲ್ಲೆಯಲ್ಲಿ ಪಾಳು ಬಿದ್ದ ಶಿಕ್ಷಕರ ವಸತಿ ಗೃಹ

    – ಶಿಕ್ಷಕರ ವಸತಿ ಗೃಹದಲ್ಲಿ ಅನೈತಿಕ ಚಟುವಟಿಕೆ

    ಚಾಮರಾಜನಗರ: ರಾಜ್ಯದ ವಿವಿಧ ಜಿಲ್ಲೆಗಳಿಂದ ಬರುವ ಶಿಕ್ಷಕರಿಗಾಗಿ ಗ್ರಾಮಗಳಲ್ಲಿ ವಸತಿ ಗೃಹ ನಿರ್ಮಿಸಲಾಗಿರುತ್ತದೆ. ಆದರೆ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಉಸ್ತುವಾರಿ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಶಿಕ್ಷಕರ ವಸತಿ ಗೃಹಗಳು ಪಾಳು ಬಿದ್ದಿದೆ. ಅಷ್ಟೇ ಅಲ್ಲದೆ ವಸತಿ ಗೃಹಗಳು ಅನೈತಿಕ ಚಟುವಟಿಗಳ ಕೇಂದ್ರವಾಗಿ ಮಾರ್ಪಟ್ಟಿವೆ.

    ಚಾಮರಾಜನಗರ ಜಿಲ್ಲೆಯ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಂಗಳ ಗ್ರಾಮದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರಿಗಾಗಿ 2015ರಲ್ಲಿ ವಸತಿ ಗೃಹಗಳನ್ನ ನಿರ್ಮಿಸಲಾಗಿದೆ. ಅಂದಿನ ಸ್ಥಳೀಯ ಶಾಸಕ, ಸಚಿವರಾಗಿದ್ದ ದಿವಂಗತ ಮಹದೇವ ಪ್ರಸಾದ್ ಅವರು, ಸುಮಾರು 8 ಕುಟುಂಬ ವಾಸಿಸುವ ಸುಸಜ್ಜಿತ ಶಿಕ್ಷಕರ ವಸತಿ ಗೃಹವನ್ನು ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿಕೊಟ್ಟಿದ್ದರು. ಉದ್ಘಾಟನೆಯಾದ 4 ವರ್ಷಗಳಲ್ಲಿ ಕಟ್ಟಡ ಪಾಳು ಬಿದ್ದು ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಇಲ್ಲಿ ಶಿಕ್ಷಕರು ಯಾರೂ ವಾಸಮಾಡಲು ಮುಂದೆ ಬಾರದ ಕಾರಣ ಅದು ಹಾಗೆ ಪಾಳು ಬಿದ್ದು ಕುಡುಕರ, ಜೂಜುಕೋರರ ಕೇಂದ್ರವಾಗಿ ಸುತ್ತ ಮುತ್ತಲಿನ ಜನರಿಗೆ ಕಿರಿಕಿರಿ ಉಂಟು ಮಾಡಿದೆ. ಇದರಿಂದಾಗಿ ಸ್ಥಳೀಯರು ಶಿಕ್ಷಣ ಇಲಾಖೆಯ ನಿರ್ಲಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾರೆ.

    ಒಂದು ಕೋಟಿ ರೂಪಾಯಿ ವೆಚ್ದದಲ್ಲಿ ಕಟ್ಟಿದ ವಸತಿ ಗೃಹದಲ್ಲಿ ಯಾರು ವಾಸವಿಲ್ಲದೆ ಇರುವುದರಿಂದ ಪಾಳು ಬಿದ್ದು ವಾಸ್ತವ್ಯಕ್ಕೆ ಯೋಗ್ಯವಾಗಿಲ್ಲ. ಕುಡಿಯುವ ನೀರು, ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಅದನ್ನ ಸರಿಪಡಿಸಬೇಕಿದೆ. ಪಾಳು ಬಿದ್ದು ಅನೈತಿಕ ಚಟುವಟಿಕೆ ಕೇಂದ್ರವಾಗಿರುವ ವಿಚಾರ ಗಮನಕ್ಕೆ ಬಂದಿದ್ದು, ಪರಿಶೀಲನೆ ನಡೆಸಿದ್ದೇನೆ. ಕಟ್ಟಡ ಈಗ ದುರಸ್ತಿಗೆ ಬಂದಿದ್ದು, ಮುಂದಿನ ದಿನಗಳಲ್ಲಿ ಮೇಲಾಧಿಕಾರಿಗೆ ವರದಿ ಸಲ್ಲಿಸಲಾಗುವುದು. ಕಟ್ಟಡ ದರುಸ್ತಿಯ ಬಳಿಕ ವಾಸ್ತವ್ಯಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಗುಂಡ್ಲುಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

    ಸರ್ಕಾರ ಯಾವುದೇ ಇಲಾಖೆಯ ಸಿಬ್ಬಂದಿ ತಾವು ಕೆಲಸ ಮಾಡುವ ಸ್ಥಳದಲ್ಲೇ ಇದ್ದು ಸ್ಥಳೀಯರ ಸಮಸ್ಯೆಗಳಿಗೆ ಸ್ಪಂದಿಸಲಿ ಎನ್ನುವ ಸಲುವಾಗಿ ವಸತಿ ಗೃಹಗಳನ್ನ ನಿರ್ಮಾಣ ಮಾಡಲಾಗುತ್ತದೆ. ಆದರೆ ನಗರ ಪ್ರದೇಶಗಳ ವ್ಯಾಮೋಹಕ್ಕೆ ಒಳಗಾಗುವ ಸರ್ಕಾರಿ ನೌಕರರು ಬಾಡಿಗೆ ತೆತ್ತಾದರೂ ಪಟ್ಟಣ ಪ್ರದೇಶಗಳಲ್ಲಿ ವಾಸ್ತವ್ಯ ಹೂಡುತ್ತಾರೆ. ಇನ್ನಾದರೂ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಕಟ್ಟುವ ವಸತಿ ಗೃಹಗಳಲ್ಲೇ ಆಯಾ ಇಲಾಖೆಯ ನೌಕರರು ಕಡ್ಡಾಯವಾಗಿ ವಾಸ ಮಾಡುವಂತೆ ಕಟ್ಟಿನಿಟ್ಟಿನ ಕ್ರಮವಹಿಸಬೇಕು ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

  • ವಸತಿ ಶಾಲೆಗೆ ಸೇರಿಸಿದ ಪ್ರಾಥಮಿಕ ಸಚಿವರಿಗೆ ಧನ್ಯವಾದ ತಿಳಿಸಿದ ಬಾಲಕಿ

    ವಸತಿ ಶಾಲೆಗೆ ಸೇರಿಸಿದ ಪ್ರಾಥಮಿಕ ಸಚಿವರಿಗೆ ಧನ್ಯವಾದ ತಿಳಿಸಿದ ಬಾಲಕಿ

    ರಾಮನಗರ: ವಸತಿ ಶಾಲೆಗೆ ಸೇರಿಸಿದ ಪ್ರಾಥಮಿಕ ಸಚಿವ ಸುರೇಶ್ ಕುಮಾರ್ ಅವರಿಗೆ ಹೂವು ಮಾರುತ್ತಿದ್ದ ಬಾಲಕಿ ಧನ್ಯವಾದ ತಿಳಿಸಿದ್ದಾಳೆ. ಶಾಲೆ ಮುಗಿದ ಬಳಿಕ ತಾಯಿ ಕಟ್ಟಿಕೊಡುತ್ತಿದ್ದ ಹೂವು ಮಾರುತ್ತಿದ್ದ ಬಾಲಕಿಯನ್ನು ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡುವ ಮೂಲಕ ವಸತಿ ಶಾಲೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

    ಮಂಡ್ಯ ಜಿಲ್ಲೆಯ ಹೊಳಲು ಗ್ರಾಮದ ನಿವಾಸಿ ಶ್ರೀನಿವಾಸ್ ನಾಯ್ಕ್ ಹಾಗೂ ಲಕ್ಷ್ಮಿಬಾಯಿ ದಂಪತಿಯ ಪುತ್ರಿ ಸಂಗೀತಾ ಕೆಲಸವನ್ನು ಬಿಡಿಸಿ ಶಾಲೆಗೆ ಸೇರಿದ ಬಾಲಕಿ. ಇತ್ತೀಚೆಗೆ ಬೆಂಗಳೂರಿನ ಕೆಂಗೇರಿ ಬಳಿ ಹೂವು ಮಾರಾಟ ಮಾಡುತ್ತಿದ್ದ ಬಾಲಕಿ ಸಂಗೀತಾಳನ್ನು ಅದೇ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್‍ರವರು ನೋಡಿದ್ದರು. ಅಲ್ಲದೇ ಬಾಲಕಿ ಬಗ್ಗೆ ಸಚಿವರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ನಿರ್ದೆಶನದಂತೆ ಸಂಬಂಧಿಸಿದ ಅಧಿಕಾರಿಗಳು ಬಾಲಕಿಯ ಪೂರ್ವಾಪರವನ್ನು ಸಂಗ್ರಹಿಸಿ ಮಾಹಿತಿ ನೀಡಿದ್ದರು. ಬಳಿಕ ಬಾಲಕಿ ಹಾಗೂ ಆಕೆಯ ತಾಯಿಯನ್ನ ವಿಚಾರಣೆ ನಡೆಸಿ ಬಾಲಕಿಯ ಇಚ್ಛೆ ಮೇರೆಗೆ ರಾಮನಗರದ ಕೈಲಾಂಚದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ 7ನೇ ತರಗತಿಗೆ ಸೇರಿಸಿದ್ದಾರೆ.  

    ಸಂಗೀತಾಳ ತಂದೆ ಶ್ರೀನಿವಾಸ್ ನಾಯ್ಕ್ ಮನೆಯ ಜವಾಬ್ದಾರಿಯನ್ನ ತೆಗೆದುಕೊಳ್ಳದೇ ಪತ್ನಿ, ಮಗಳನ್ನು ತೊರೆದಿದ್ದಾನೆ. ಮಗಳ ಹೊಣೆ ಹೊತ್ತಿರುವ ಲಕ್ಷ್ಮಿಬಾಯಿ ಅವರು ಕೆಂಗೇರಿಯಲ್ಲಿನ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದು, ಅಲ್ಲಿಯೇ ಮಗಳನ್ನು ಸರ್ಕಾರಿ ಶಾಲೆಗೆ ಸೇರಿಸಿದ್ದರು. ಸ್ವಗ್ರಾಮ ಹೊಳಲಿನಲ್ಲಿ ಅಂಗನವಾಡಿಯಲ್ಲಿ ಕೆಲಸ ಮಾಡುತ್ತಿರುವ ಲಕ್ಷ್ಮಿಬಾಯಿ ದಿನನಿತ್ಯ ಕೆಂಗೇರಿಯಿಂದ ಹೊಳಲು ರೈಲಿನಲ್ಲಿ ಗ್ರಾಮಕ್ಕೆ ಓಡಾಡುತ್ತಿದ್ದಾರೆ. ಇದರ ನಡುವೆ ಹೂವು ಕಟ್ಟಿಕೊಟ್ಟು ತನ್ನ ಮಗಳಿಗೆ ಅಕ್ಕಪಕ್ಕದ ಮನೆಗಳಿಗೆ ಕೊಡುವುದು, ಅಲ್ಲದೇ ಮಾರಾಟ ಮಾಡುವುದಕ್ಕೆ ತಿಳಿಸಿದ್ದರು. ತನ್ನ ತಾಯಿಗೆ ನೆರವಾಗಲು ಸಂಗೀತಾ ಹೂವು ಮಾರಾಟ ಮಾಡುವ ಕೆಲಸವನ್ನ ಮಾಡುತ್ತಿದ್ದಳು. ಇದೀಗ ವಸತಿ ಶಾಲೆಗೆ ಸೇರಿರುವ ಸಂಗೀತಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಧನ್ಯವಾದ ತಿಳಿಸಿದ್ದಾಳೆ. ಇದನ್ನೂ ಓದಿ: ಗಾಡಿಗೆ ಬೀಗ ಹಾಕಿದ್ದಾರೆ: ಸಚಿವರ ಮುಂದೆ ಬೀಗಿದ ಪುಟಾಣಿಗಳು

    ಓದುವ ವಯಸ್ಸಿನಲ್ಲಿ ಮಕ್ಕಳು ದುಡಿಯುವ ಕೆಲಸಕ್ಕೆ ಹೋಗುತ್ತಿರುವುದು ದುರದೃಷ್ಟಕರವಾಗಿದೆ. ಬಾಲ್ಯದಲ್ಲೇ ತಮ್ಮ ಜೀವನವನ್ನ ದುಡಿಮೆಯಲ್ಲಿ ತೊಡಗಿಸಿಕೊಳ್ಳುತ್ತಿರುವುದು ವಿದ್ಯಾಭ್ಯಾಸಕ್ಕೂ ಎಳ್ಳುನೀರು ಬಿಡುವಂತಾಗುತ್ತಿದೆ. ಬೆಂಗಳೂರು ಸೇರಿದಂತೆ ಹಲವಾರು ಮಕ್ಕಳು ಪೆನ್, ಮೊಬೈಲ್ ವಸ್ತುಗಳು, ಹೂವು, ಸಣ್ಣಪುಟ್ಟ ವಸ್ತುಗಳನ್ನ ಹೆದ್ದಾರಿ ಸಿಗ್ನಲ್‍ಗಳಲ್ಲಿ, ಬಸ್ ನಿಲ್ದಾಣಗಳಲ್ಲಿ ಮಾರಾಟ ಮಾಡುವಂತಹ ಕೆಲಸ ಮಾಡುತ್ತಿದ್ದಾರೆ. ಅಂತಹ ಮಕ್ಕಳನ್ನು ವಿದ್ಯಾಭ್ಯಾಸದ ಕಡೆಗೆ ಮುಖ ಮಾಡಬೇಕಿದೆ.

  • ಗಡಿಗ್ರಾಮ ಗೋಪಿನಾಥಂ ವಿದ್ಯಾರ್ಥಿಗಳ ಬೇಡಿಕೆ ಈಡೇರಿಸಿದ ಸಚಿವ ಸುರೇಶ್ ಕುಮಾರ್

    ಗಡಿಗ್ರಾಮ ಗೋಪಿನಾಥಂ ವಿದ್ಯಾರ್ಥಿಗಳ ಬೇಡಿಕೆ ಈಡೇರಿಸಿದ ಸಚಿವ ಸುರೇಶ್ ಕುಮಾರ್

    ಚಾಮರಾಜನಗರ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೊಟ್ಟ ಮಾತನ್ನು ತಪ್ಪದೆ ಗಡಿಗ್ರಾಮ ಗೋಪಿನಾಥಂ ವಿದ್ಯಾರ್ಥಿಗಳ ಬೇಡಿಕೆಯನ್ನು ಈಡೇರಿಸಿದ್ದಾರೆ.

    ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಗ್ರಾಮದಲ್ಲಿ 1ರಿಂದ 4ನೇ ತರಗತಿವರೆಗೆ ಕನ್ನಡ ಮಾಧ್ಯಮ ಶಾಲೆ ಆರಂಭಿಸಲು ಆದೇಶ ನೀಡಿದ್ದಾರೆ. ನವೆಂಬರ್ 18ರಂದು ಶಾಲಾ ವಾಸ್ತವ್ಯ ಸಂದರ್ಭದಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ವಿದ್ಯಾರ್ಥಿಗಳು ಬೇಡಿಕೆ ಇಟ್ಟಿದ್ದರು.

    ಪ್ರಸ್ತುತ 1ರಿಂದ 4ನೇ ತರಗತಿವರೆಗೆ ತಮಿಳು ಮಾಧ್ಯಮ, 5 ರಿಂದ 8ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಶಾಲೆ ನಡೆಯುತ್ತಿದೆ. 5ನೇ ತರಗತಿಯಿಂದ ಕನ್ನಡ ಮಾಧ್ಯಮದಲ್ಲಿ ಕಲಿಯಲು ಕಷ್ಟವೆಂದು ವಿದ್ಯಾರ್ಥಿಗಳು ಸಚಿವರ ಬಳಿ ಹೇಳಿಕೊಂಡಿದ್ದರು. ಈಗ ಸುರೇಶ್ ಕುಮಾರ್ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ್ದಾರೆ.

    ಸುರೇಶ್ ಕುಮಾರ್ ವಾಸ್ತವ್ಯ ಮಾಡಿದ ಎರಡೇ ವಾರದಲ್ಲಿ ಶಿಕ್ಷಣ ಇಲಾಖೆ ಕ್ರಮಕೈಗೊಂಡಿದೆ. 2020-21ನೇ ಸಾಲಿನಿಂದ ಕನ್ನಡ ಮಾಧ್ಯಮದಲ್ಲಿ ಶಾಲೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕ ಡಿಡಿಪಿಐಗೆ ಆದೇಶ ನೀಡಿದ್ದಾರೆ.

  • ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್‍ಗೆ ತಡೆ – ನೂತನ ಸಚಿವರ ಆದೇಶ

    ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್‍ಗೆ ತಡೆ – ನೂತನ ಸಚಿವರ ಆದೇಶ

    ಬೆಂಗಳೂರು: ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಕೌನ್ಸಿಲಿಂಗ್‍ನ್ನು ತಡೆ ಹಿಡಿಯುವಂತೆ ನೂತನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶಿಸಿದ್ದಾರೆ.

    ವರ್ಗಾವಣೆಯಲ್ಲಿರುವ ಗೊಂದಲ ನಿವಾರಣೆಗಾಗಿ ವರ್ಗಾವಣೆ ಪ್ರಕ್ರಿಯೆ ತಡೆ ಹಿಡಿಯಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ತಡೆ ಹಿಡಿಯಲು ನೂತನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ನಾಳೆಯಿಂದಲೇ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ನಡೆಯಬೇಕಿತ್ತು.

    ಶಿಕ್ಷಕರ ಕಡ್ಡಾಯ ವರ್ಗಾವಣೆ ಕುರಿತು ಅನೇಕ ಶಿಕ್ಷಕರು, ವಿಶೇಷವಾಗಿ ಶಿಕ್ಷಕಿಯರು ಮನವಿಗಳನ್ನು ಸಲ್ಲಿಸಿ ತಮ್ಮ ಸಮಸ್ಯೆಗಳನ್ನು ವಿವರಿಸಿ ಕೆಲವು ನ್ಯಾಯಯುತ ಪ್ರಸ್ತಾವನೆಗಳನ್ನು ನನ್ನ ಮುಂದೆ ಇಟ್ಟಿದ್ದಾರೆ. ಈ ವರ್ಗಾವಣೆ ವ್ಯವಸ್ಥೆಯಲ್ಲಿರುವ ಕೆಲವು ದೋಷಗಳನ್ನೂ ಗಮನಕ್ಕೆ ತಂದಿದ್ದಾರೆ. ಆದ್ದರಿಂದ ಕೆಲ ಗೊಂದಲಗಳನ್ನು ನಿವಾರಿಸಿ, ಎಲ್ಲರಿಗೂ ಅನುಕೂಲವಾಗುವ ರೀತಿಯ ವ್ಯವಸ್ಥೆ ಕುರಿತು ಚಿಂತನೆ ಮತ್ತು ಪ್ರಯತ್ನ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಕೇವಲ ಕೆಲದಿನಗಳ ಮಟ್ಟಿಗೆ ಮಾತ್ರ ಹಾಲಿ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ಬಹಳ ಬೇಗ ಸುಧಾರಿತ ವರ್ಗಾವಣೆ ಪ್ರಕ್ರಿಯೆ ಜಾರಿ ತರಲು ಕ್ರಮ ಕೈಗೊಳ್ಳಲಾಗುತ್ತದೆ. ಯಾರಿಗೂ ಆತಂಕ ಬೇಡ ಎಂದು ನೂತನ ಶಿಕ್ಷಣ ಸಚಿವರು ತಿಳಿಸಿದ್ದಾರೆ.

  • ವಿದ್ಯಾರ್ಥಿಗಳಿಗೆ ಈ ವರ್ಷವೂ ಉಚಿತ ಬಸ್ ಪಾಸ್ ಇಲ್ಲ

    ವಿದ್ಯಾರ್ಥಿಗಳಿಗೆ ಈ ವರ್ಷವೂ ಉಚಿತ ಬಸ್ ಪಾಸ್ ಇಲ್ಲ

    ಬೆಂಗಳೂರು: ವಿದ್ಯಾರ್ಥಿಗಳಿಗೆ ಈ ವರ್ಷವೂ ಉಚಿತ ಬಸ್ ಪಾಸ್ ಸಿಗುವುದಿಲ್ಲ ಎಂದು ನೂತನ ಶಿಕ್ಷಣ ಸಚಿವ ಗುಬ್ಬಿ ಶ್ರೀನಿವಾಸ್ ಪರೋಕ್ಷವಾಗಿ ಹೇಳಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ವಿದ್ಯಾರ್ಥಿಗಳಿಗೆ ಉಚಿತ ಬಸ್ ನೀಡುವ ಪ್ರಶ್ನೆಗೆ ಸೂಕ್ತ ಉತ್ತರ ನೀಡದೆ ಜಾರಿಕೊಂಡರು. ಹಿಂದಿನ ಸರ್ಕಾರದಲ್ಲಿ ಉಚಿತ ಪಾಸ್ ನೀಡಲಾಗುತ್ತಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅದನ್ನು ತಡೆ ಹಿಡಿಯಲಾಗಿದೆ. ಈ ಸಂಬಂಧ ಸಿಎಂ ಜೊತೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

    ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಸಮಸ್ಯೆಗಳಿವೆ. ಈ ಕುರಿತು ಮುಖ್ಯಮಂತ್ರಿಗಳ ಜೊತೆ ಈಗಾಗಲೇ ಸಭೆ ನಡೆಸಿ ಚರ್ಚೆ ಮಾಡಿದ್ದೇವೆ. ಮೂಲ ಸೌಕರ್ಯ ವಂಚಿತ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಚಿಂತನೆ ನಡೆದಿದೆ. ಅನುದಾನವನ್ನು ನೋಡಿಕೊಂಡು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

    ಕನ್ನಡ ಮಾಧ್ಯಮ ಶಾಲೆಗಳು ಉತ್ತಮ ಸ್ಥಿತಿಯಲ್ಲಿವೆ. ಆದರೂ ಪ್ರತಿವರ್ಷ 20 ರಿಂದ 30 ಶಾಲೆಗಳು ಮುಚ್ಚುತ್ತಿವೆ. ಶಿಕ್ಷಣ ವ್ಯಾಪಾರೀಕರಣ ಆಗುತ್ತಿರುವುದು ಇದಕ್ಕೆ ಕಾರಣ. ಖಾಸಗಿ ಶಿಕ್ಷಣ ಸಂಸ್ಥೆಗಳು ಹಳ್ಳಿಗಳಿಗೂ ವ್ಯಾನ್ ಕಳಿಸಿ ಮಕ್ಕಳನ್ನು ಕರೆತರುತ್ತಿವೆ. ಇದೆಲ್ಲವನ್ನು ಗಮದಲ್ಲಿಟ್ಟುಕೊಂಡು ಕನ್ನಡ ಶಾಲೆಗಳ ಅಭಿವೃದ್ಧಿಗೊಳಿಸಬೇಕಿದೆ ಎಂದರು.

    ಸಿಬಿಎಸ್‍ಸಿ, ಐಸಿಎಸ್‍ಸಿ ಗಳಲ್ಲಿ ಕೂಡ ಕನ್ನಡ ಕಡ್ಡಾಯಗೊಳಿಸಿ, ಅನುಷ್ಠಾನಕ್ಕೆ ತರಲಾಗುವುದು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ರಾಜ್ಯದ ಪಠ್ಯಪುಸ್ತಕ ಬದಲಾವಣೆ ಮಾಡುತ್ತೇವೆ. ಪ್ರಾದೇಶಿಕತೆ ಒಳಗೊಂಡ ಪಠ್ಯ ರಚನೆಗೆ ನಿರ್ಧಾರ ನಡೆದಿದೆ. ದೆಹಲಿ ಹಾಗೂ ಕೇರಳ ಶಿಕ್ಷಣ ಪದ್ಧತಿಯ ಬಗ್ಗೆ ಅಧ್ಯಯನ ನಡೆಸಲು ನಿಯೋಗ ಕಳಿಸಲಾಗುತ್ತದೆ. ಅಲ್ಲಿನ ವ್ಯವಸ್ಥೆ, ಪಠ್ಯ ಪುಸ್ತಕ ಅಧ್ಯಯನ ಮಾಡಿ ಪುಸ್ತಕ ಬದಲಾವಣೆ ಮಾಡುವ ಚಿಂತನೆ ನಡೆದಿದೆ ಎಂದು ಮಾಹಿತಿ ನೀಡಿದರು.

    ಗ್ರಂಥ ಪಾಲಕರ ವೇತನ ಹೆಚ್ಚಳದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಗ್ರಂಥ ಪಾಲಕರು ಮಂಗಳವಾರ ನನ್ನನ್ನು ಭೇಟಿ ಮಾಡಿದರು. ಈ ಮೂಲಕ ವೇತನ ಹೆಚ್ಚಳ ಬೇಡಿಕೆ ಸಲ್ಲಿಸಿದ್ದಾರೆ. ಆದರೆ ಕೆಲವು ಗ್ರಂಥಾಲಯಗಳು ಆರ್ ಡಿಪಿಆರ್ ಅಡಿ ಬರುತ್ತವೆ. ಹೀಗಾಗಿ ಆ ಇಲಾಖೆ ಜೊತೆಗೂ ಚರ್ಚೆ ಮಾಡಿ, ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

  • ವಿದ್ಯಾರ್ಥಿನಿಯರು ಕಾಲ್ಗೆಜ್ಜೆ ಧರಿಸಿದ್ರೆ ಹುಡುಗರ ಮನಸ್ಸು ಕದಡುತ್ತೆ: ಶಿಕ್ಷಣ ಮಂತ್ರಿ

    ವಿದ್ಯಾರ್ಥಿನಿಯರು ಕಾಲ್ಗೆಜ್ಜೆ ಧರಿಸಿದ್ರೆ ಹುಡುಗರ ಮನಸ್ಸು ಕದಡುತ್ತೆ: ಶಿಕ್ಷಣ ಮಂತ್ರಿ

    ಚೆನ್ನೈ: ಶಾಲೆಯಲ್ಲಿ ವಿದ್ಯಾರ್ಥಿನಿಯರು ಕಾಲಿನ ಗೆಜ್ಜೆ ಧರಿಸಿದ್ರೆ, ಹುಡುಗರ ಮನಸ್ಸು ಕದಡುತ್ತೆ ಎಂದು ತಮಿಳುನಾಡು ಶಿಕ್ಷಣ ಮಂತ್ರಿ ಕೆ.ಎ.ಸೆಂಗೌಟಯ್ಯನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಶಿಕ್ಷಣ ಮಂತ್ರಿಗಳು ತಮ್ಮ ವಿಧಾನಸಭಾ ಕ್ಷೇತ್ರದ ಗೋಬಿಚೆಟ್ಟಿಪಾಲಯಂ ನಲ್ಲಿ ನಡೆದ ಸೈಕಲ್ ವಿತರಣಾ ಸಮಾರಂಭದಲ್ಲಿ ಭಾಗಿಯಾಗಿದ್ದರು. ಮಕ್ಕಳಿಗೆ ಸೈಕಲ್ ವಿತರಿಸಿ ಮಾತನಾಡಿದ ಸಚಿವರು, ವಿದ್ಯಾರ್ಥಿನಿಯರು ಕಾಲಿನಲ್ಲಿ ಗೆಜ್ಜೆ ಹಾಕುವುದರಿಂದ ಅದರ ಸದ್ದಿನಿಂದ ವಿದ್ಯಾರ್ಥಿಗಳ ಪಠ್ಯದಲ್ಲಿನ ಏಕಾಗ್ರತೆ ಹಾಳಾಗುತ್ತದೆ. ಇನ್ನು ಉಂಗರು ಧರಿಸಿದ್ರೆ ಕಳೆದು ಹೋಗುವ ಸಾಧ್ಯತೆಗಳಿವೆ. ಹಾಗಾಗಿ ಕಾಲ್ಗೆಜ್ಜೆ ಮತ್ತು ಉಂಗುರ ಎರಡನ್ನು ಶಾಲೆಯಲ್ಲಿ ನಿಷೇಧಿಸಿಬೇಕಿದೆ. ವಿದ್ಯಾರ್ಥಿನಿಯರು ಹೂ ಧರಿಸುವುದಕ್ಕೆ ಯಾವುದೇ ಅಭ್ಯಂತರವಿಲ್ಲ ಅಂತಾನೂ ಹೇಳಿದರು.

     

    ಸಚಿವರ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಹುಡುಗಿಯರಿಗೆ ಮಾತ್ರ ಯಾಕೆ ನಿಯಮಗಳು. ಹುಡುಗರು ಶಾಲೆಗಳಿಗೆ ಉದ್ದ ಕೂದಲು ಬಿಟ್ಟುಕೊಂಡು ಬರುತ್ತಾರೆ. ಸ್ಟೈಲಿಶ್ ಬಟ್ಟೆ ಧರಿಸುತ್ತಾರೆ. ಅವರಿಗಿಲ್ಲದ ನಿಯಮ ನಮಗ್ಯಾಕೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.

    ಸಚಿವರು ಕೇವಲ ಮಾಧ್ಯಮಗಳ ಜೊತೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಕಾಲಗೆಜ್ಜೆ ಧರಿಸದಂತೆ ಯಾವುದೇ ಸುತ್ತೋಲೆಯನ್ನು ಹೊರಡಿಸಿಲ್ಲ ಎಂದು ತಮಿಳುನಾಡು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚಾಮರಾಜನಗರದಲ್ಲಿ ಲೋಕಾರ್ಪಣೆಯಾಯ್ತು ಡಿಜಿಟಲ್ ಲೈಬ್ರರಿ

    ಚಾಮರಾಜನಗರದಲ್ಲಿ ಲೋಕಾರ್ಪಣೆಯಾಯ್ತು ಡಿಜಿಟಲ್ ಲೈಬ್ರರಿ

    ಚಾಮರಾಜನಗರ: 1 ರಿಂದ 12 ನೇ ತರಗತಿ ವರೆಗಿನ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲೆಯ ಕೊಳ್ಳೇಗಾಲದಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆಯಾಗಿದೆ.

    ಸಾರ್ವಜನಿಕ ಗ್ರಂಥಾಲಯ ಹಾಗೂ ಕೇರಳದ ಸಾಯಿ ಸಂಜೀವಿನಿ ಚಾರಿಟೇಬಲ್ ಸಹಯೋಗದಲ್ಲಿ ಡಿಜಿಟಲ್ ಗ್ರಂಥಾಲಯವನ್ನು ಕೊಳ್ಳೇಗಾಲ ನಗರದಲ್ಲಿ ನಿರ್ಮಿಸಲಾಗಿತ್ತು. ಇಂದು ಶಿಕ್ಷಣ ಸಚಿವ ಎನ್ ಮಹೇಶ್ ಡಿಜಿಟಲ್ ಗ್ರಂಥಾಲಯವನ್ನು ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದ್ದಾರೆ.

    ಡಿಜಿಟಲ್ ಗ್ರಂಥಾಲಯದಲ್ಲಿ 1 ರಿಂದ 12ನೇ ತರಗತಿವರೆಗಿನ ಎಲ್ಲಾ ರೀತಿಯ ಪಠ್ಯ ಪುಸ್ತಕಗಳನ್ನು ಸಂಗ್ರಹಿಸಲಾಗಿದೆ. ಇದಲ್ಲದೇ ಕೆಎಎಸ್ ಮತ್ತು ಐಎಎಸ್ ಸೇರಿದಂತೆ ವಿವಿಧ ಬಗೆಯ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕ ಭಂಡಾರ ಹಾಗೂ ನೂರಕ್ಕೂ ಹೆಚ್ಚು ಅಂತರಾಷ್ಟ್ರೀಯ ನಿಯತಕಾಲಿಕೆಗಳನ್ನು ಒಳಗೊಂಡಿದೆ.

    ಬೆರಳ ತುದಿಯಲ್ಲಿಯೇ ಎಲ್ಲಾ ರೀತಿಯ ಮಾಹಿತಿಗಳನ್ನು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಈ ಡಿಜಿಟಲ್ ಗ್ರಂಥಾಲಯದಲ್ಲಿ ಪಡೆದುಕೊಳ್ಳಬಹುದಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಂಗ್ರೆಸ್ ಗಿಡ ಅಪಾಯಕಾರಿಯಂತ ಕಿತ್ತು ಹಾಕಿದ್ದೀವಿ ಅಂದ್ರು ಸಚಿವ ಎನ್.ಮಹೇಶ್: ವಿಡಿಯೋ ನೋಡಿ

    ಕಾಂಗ್ರೆಸ್ ಗಿಡ ಅಪಾಯಕಾರಿಯಂತ ಕಿತ್ತು ಹಾಕಿದ್ದೀವಿ ಅಂದ್ರು ಸಚಿವ ಎನ್.ಮಹೇಶ್: ವಿಡಿಯೋ ನೋಡಿ

    ಚಾಮರಾಜನಗರ: ಕಾಂಗ್ರೆಸ್ ಗಿಡವನ್ನು ಕಡಿಯುವ ಕೆಲಸವನ್ನು ಮಾಡಿದ್ದೇವೆ ಎನ್ನುವ ಮೂಲಕ ಶಿಕ್ಷಣ ಸಚಿವ ಎನ್.ಮಹೇಶ್ ಕಾಂಗ್ರೆಸ್ ಪಕ್ಷದ ವಿರುದ್ಧ ವಿಡಂಬನಾತ್ಮಕ ಹೇಳಿಕೆ ನೀಡಿದ್ದಾರೆ.

    ನಗರದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಗಿಡ ತುಂಬಾ ಅಪಾಯಕಾರಿ, ಹೀಗಾಗಿ ಅದನ್ನು ಕಡಿಯುವ ಕೆಲಸ ಮಾಡಿದ್ದೇವೆ ಎಂದು ಹೇಳುತ್ತಲೇ ಕಾರ್ಯಕರ್ತರು ಸಾರ್ ಅದು ಪಾರ್ತೇನಿಯಂ ಗಿಡ ಎಂದರು. ಆದರೂ ಸಹ ಅದು ಕಾಂಗ್ರೆಸ್ ಗಿಡ ಅದಕ್ಕೆ ಕಿತ್ತಿ ಹಾಕಿದ್ದೀವಿ ಎನ್ನುವ ಹೇಳಿಕೆ ನೀಡಿದರು.

    ಕೊಳ್ಳೆಗಾಲ ನಗರಸಭೆಯಲ್ಲಿ ಬಿಎಸ್‍ಪಿ ಜೊತೆ ಕಾಂಗ್ರೆಸ್ ಸೇರಿ ಮೈತ್ರಿಗೆ ಮುಂದಾದರೆ ನಿರ್ಲಕ್ಷ್ಯವಾಗುವ ಸಾಧ್ಯತೆ ಇದೆ. ಹೀಗಾಗಿ ಬಿಜೆಪಿಯೊಂದಿಗೆ ಬಿಎಸ್‍ಪಿಯವರು ಮೈತ್ರಿ ಮಾಡಿಕೊಳ್ಳಲು ತೀರ್ಮಾನಿಸಿದ್ದಾರೆ. ಹೀಗಾಗಿ ಪರೋಕ್ಷವಾಗಿ ನಾವು ಕಾಂಗ್ರೆಸ್‍ನನ್ನು ಕೊಳ್ಳೆಗಾಲದಲ್ಲಿ ನಿರ್ಮೂಲನೆ ಮಾಡಿದ್ದೇವೆ ಎನ್ನುವ ಅರ್ಥದಲ್ಲಿ ಸಚಿವರ ಈ ರೀತಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಆದರೆ ದೋಸ್ತಿ ಸರ್ಕಾರದ ಪ್ರಭಾವಿ ಸಚಿವರೇ ಕಾಂಗ್ರೆಸ್ ನಿರ್ಮೂಲನೆ ಹೇಳಿಕೆ ಸಾಕಷ್ಟು ಕುತೂಹಲ ಕೆರೆಳಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಕೊಳ್ಳೇಗಾಲದ ಎಂಜಿಎಸ್‍ವಿ ಶಾಲೆಯನ್ನು ದತ್ತು ಪಡೆದ ಶಿಕ್ಷಣ ಸಚಿವ

    ಕೊಳ್ಳೇಗಾಲದ ಎಂಜಿಎಸ್‍ವಿ ಶಾಲೆಯನ್ನು ದತ್ತು ಪಡೆದ ಶಿಕ್ಷಣ ಸಚಿವ

    ಚಾಮರಾಜನಗರ: ತಾನು ವಿದ್ಯಾಭ್ಯಾಸ ಮಾಡಿದ ಶಾಲೆಯನ್ನು ದತ್ತು ಪಡೆದು ಶಾಲೆಯನ್ನು ಹೈಟೆಕ್ ಆಗಿ ನಿರ್ಮಾಣ ಮಾಡಲು ಶಿಕ್ಷಣ ಸಚಿವ ಎನ್.ಮಹೇಶ್ ಚಿಂತನೆ ನಡೆಸಿದ್ದಾರೆ.

    ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿರುವ ಎಂಜಿಎಸ್‍ವಿ ಶಾಲೆಯೂ ಸದ್ಯ ಶಿಥಿಲಾವಸ್ಥೆಯಲ್ಲಿದೆ. ಈ ಶಾಲೆಯ ವೀಕ್ಷಣೆಗೆಂದು ಆಗಮಿಸಿದ್ದ ಸಚಿವ ಎನ್.ಮಹೇಶ್ ಇದು ನಾನು ಓದಿದ ಶಾಲೆ ಈಗ ಸ್ಥಿತಿಯಲ್ಲಿರುವುದು ನಿಜಕ್ಕೂ ಬೇಸರ ತಂದಿದೆ. ಹೀಗಾಗಿ ಶಾಲೆಯನ್ನು ದತ್ತು ಪಡೆದು ಹೈಟೆಕ್ ಆಗಿ ಅಭಿವೃದ್ಧಿ ಮಾಡುತ್ತೇನೆ ಎಂದಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸಚಿವರು, ನನು ನನ್ನ ಹೈಸ್ಕೂಲ್ ಓದನ್ನ ಇಲ್ಲೇ ಮುಗಿಸಿದ್ದೇನೆ. ಅಲ್ಲದೇ 2 ವರ್ಷ ಪಿಯುಸಿ ಕೂಡ ಇಲ್ಲೇ ಮಾಡಿದ್ದೇನೆ. ಮುಡುಗುಂಡದ ಗುರ್ಕಾರ್ ಸುಬ್ಬಪ್ಪ ವೀರಪ್ಪ ಹಾಗೂ ಕುಟುಂಬ ಕಟ್ಟಿದ ಅದ್ಭುತವಾದಂತಹ ಶಾಲೆಯಾಗಿದೆ. ದಾನಿಗಳು ಆ ಕಾಲದಲ್ಲೇ ಇಷ್ಟೊಂದು ದೊಡ್ಡ ಸಾಧನೆಯನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರದಲ್ಲಿದ್ದುಕೊಂಡು ಇದನ್ನು ಅಭಿವೃದ್ಧಿ ಪಡಿಸಲು ಸಾಧ್ಯವಾಗಿಲ್ಲವೆಂದರೆ ನನ್ನಂತಹ ಹಳೇಯ ವಿದ್ಯಾರ್ಥಿಗಳಿಗೆ ಅವಮಾನ ಅಂತ ಅನಿಸಿದೆ. ಹೀಗಾಗಿ ಎಂಜಿಎಸ್‍ವಿ ಶಾಲೆ ಹಾಗೂ ಮೈದಾನ ಎಲ್ಲವನ್ನು ಹೈಟೆಕ್ ಮಾಡುವ ಜವಾಬ್ದಾರಿಯನ್ನು ಶಿಕ್ಷಣ ಸಚಿವನಾಗಿ ನಾನೇ ಹೊತ್ತುಕೊಂಡಿದ್ದೇನೆ ಅಂದ್ರು.

    ಶಾಲೆಯಲ್ಲಿ ಏನೇನು ಕೆಲಸಗಳಾಗಬೇಕು ಎಂಬುದನ್ನು ಪಿಡಬ್ಯುಡಿ ಎಂಜಿನಿಯರ್ ಗೆ ಬಂದು ಪರಿಶೀಲನೆ ನಡೆಸಲು ಹೇಳಿದ್ದೇನೆ. ಇಲ್ಲಿರುವ ಕಲೆಗೆ ಯಾವುದೇ ಹಾನಿಯಾಗದಂತೆ ಕಟ್ಟಡವನ್ನು ಸುಭದ್ರಪಡಿಸಬೇಕು. ಈ ವರ್ಷದಲ್ಲಿ ಇದನ್ನು ಮುಗಿಸಬೆಕು ಅಂತ ಯೋಜನೆ ಹಾಕಿಕೊಂಡಿರುವುದಾಗಿ ಸಚಿವರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಚೀನಾ ನ್ಯೂ ಇಯರ್ ಮಾಡಲು ಮುಂದಾಗಿದ್ದು ತಪ್ಪಲ್ಲ- ಡೆಲ್ಲಿ ಪಬ್ಲಿಕ್ ಸ್ಕೂಲ್ ಪರ ಸಚಿವ ತನ್ವೀರ್ ಸೇಠ್ ಬ್ಯಾಟಿಂಗ್

    ಚೀನಾ ನ್ಯೂ ಇಯರ್ ಮಾಡಲು ಮುಂದಾಗಿದ್ದು ತಪ್ಪಲ್ಲ- ಡೆಲ್ಲಿ ಪಬ್ಲಿಕ್ ಸ್ಕೂಲ್ ಪರ ಸಚಿವ ತನ್ವೀರ್ ಸೇಠ್ ಬ್ಯಾಟಿಂಗ್

    ಬೆಂಗಳೂರು: ಚೀನಾ ನ್ಯೂ ಇಯರ್ ಆಚರಣೆಗೆ ಮುಂದಾಗಿದ್ದು ತಪ್ಪಲ್ಲ ಎಂದು ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳುವ ಮೂಲಕ ನಗರದ ಡೆಲ್ಲಿ ಪಬ್ಲಿಕ್ ಸ್ಕೂಲ್ ಪರ ಬ್ಯಾಟಿಂಗ್ ಮಾಡಿದ್ದಾರೆ.

    ಡೆಲ್ಲಿ ಪಬ್ಲಿಕ್ ಸ್ಕೂಲ್ ನಲ್ಲಿ ಚೀನಾ ದೇಶದ ನ್ಯೂ ಇಯರ್ ಆಚರಣೆ ಮಾಡುವುದು ತಪ್ಪಲ್ಲ. ಅದು ದೇಶ ವಿರೋಧಿ ನಡೆ ಅಲ್ಲ. ದೇಶಗಳು ಯಾವ ರೀತಿ ನ್ಯೂ ಇಯರ್ ಆಚರಿಸುತ್ತವೆ ಅನ್ನೋದು ತೋರಿಸೊ ಉದ್ದೇಶ ಅಷ್ಟೆ ಅಂತ ಅವರು ಹೇಳಿಕೆ ನೀಡಿದ್ದರು.

    ಆದ್ರೆ ಈ ಬಗ್ಗೆ ಪ್ರತಿಕ್ರಿಯೆ ನಿಡಲು ಸಚಿವರು ಹಿಂದೇಟು ಹಾಕುತ್ತಿದ್ದು, ಇದರಲ್ಲಿ ಶಾಲೆಯದ್ದು ಏನೂ ತಪ್ಪಿಲ್ಲ ಅನ್ನೊ ಶಾಲೆಯ ಹೇಳಿಕೆಯನ್ನ ಪ್ರತಿಕ್ರಿಯೆ ರೂಪದಲ್ಲಿ ಕಳುಹಿಸಿದ್ದಾರೆ.

    ಶುಕ್ರವಾರ ಚೀನಾ ನ್ಯೂ ಇಯರ್ ಸೆಲೆಬ್ರೇಷನ್‍ಗಾಗಿ ಮಕ್ಕಳಿಗೆ ಚೀನಾ ಡ್ರೆಸ್ ಹಾಕಿಕೊಂಡು ಬರಬೇಕು. ಅಷ್ಟೇ ಅಲ್ಲದೇ ಊಟಕ್ಕೆ ನೂಡಲ್ಸ್, ಫ್ರೈಡ್ ರೈಸ್, ಮಂಚೂರಿಯಂತಹ ಚೈನೀಸ್ ಫುಡ್ ತರಬೇಕು ಎಂದು ಆಗಸ್ಟ್ 3ನೇ ತಾರೀಕಿನಂದು ಡೆಲ್ಲಿ ಪಬ್ಲಿಕ್ ಸ್ಕೂಲ್ ಸುತ್ತೋಲೆ ಹೊರಡಿಸಿತ್ತು.

    ಈ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಉತ್ತರ ವಲಯ 4 ಬಿಇಓ ನಾರಾಯಣ, ಡೆಲ್ಲಿ ಪಬ್ಲಿಕ್ ಸ್ಕೂಲ್ ನಲ್ಲಿ ನಾಳಿನ ಚೀನಾ ನ್ಯೂ ಇಯರ್ ಕ್ರಾರ್ಯಕ್ರಮವನ್ನ ರದ್ದು ಮಾಡಿಸ್ತೀವಿ. ಕಾರ್ಯಕ್ರಮ ನಡೆಯುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಇದಕ್ಕೆ ನಮ್ಮ ಅನುಮತಿ ಪಡೆದಿಲ್ಲ. ಮಾಧ್ಯಮಗಳಲ್ಲಿ ನೋಡಿ ವಿಷಯ ಗೊತ್ತಾಗಿದೆ. ಶಾಲೆ ಹೊರಡಿಸಿರುವ ಸುತ್ತೋಲೆ ಗಮನಿಸಿದ್ದೇನೆ. ಕೂಡಲೇ ಕಾರ್ಯಕ್ರಮವನ್ನು ರದ್ದು ಮಾಡಿಸ್ತೀನಿ ಅಂತ ಹೇಳಿದ್ದರು.