Tag: education

  • ಮದ್ವೆ ಇಲ್ಲ, ಮನೆನೂ ಇಲ್ಲ-ಶಾಲೆಯ ಮಕ್ಕಳಿಗಾಗಿಯೇ ಜೀವನ ಮುಡಿಪು

    ಮದ್ವೆ ಇಲ್ಲ, ಮನೆನೂ ಇಲ್ಲ-ಶಾಲೆಯ ಮಕ್ಕಳಿಗಾಗಿಯೇ ಜೀವನ ಮುಡಿಪು

    ಹಾಸನ: ಮದ್ವೆ ಆಗದೇ, ಮನೆಯನ್ನು ಹೊಂದದೆ ಕಳೆದ 18 ವರ್ಷಗಳಿಂದ ಜಿಲ್ಲೆಯ ವ್ಯಕ್ತಿಯೊಬ್ಬರು ತಮ್ಮ ಸಂಬಳವನ್ನು ಶಾಲೆಗೆ ನೀಡಿ ಅಲ್ಲಿಯ ಮಕ್ಕಳನ್ನು ತಮ್ಮ ಮಕ್ಕಳಂತೆಯೇ ಪೋಷಿಸುತ್ತಿದ್ದಾರೆ.

    ಹಾಸನದ ಕಂದಲಿ ಬಳಿಯಿರೋ ಮೋರಾರ್ಜಿ ಶಾಲೆಯ ಪ್ರಾಂಶುಪಾಲ ತಮ್ಮಣ್ಣಗೌಡರಿಗೆ ಮದುವೆಯಾಗಿಲ್ಲ. 54 ವರ್ಷದ ತಮ್ಮಣ್ಣಗೌಡರು ಮನೆಯನ್ನು ಹೊಂದಿಲ್ಲ. ತಮಗೆ ಬರುವ ವೇತನವನ್ನು ಶಾಲೆ ಮತ್ತು ಶಾಲಾ ಮಕ್ಕಳಿಗೆ ಮೀಸಲಿಟ್ಟಿದ್ದು, ಶಾಲೆಯಲ್ಲೇ ವಾಸವಾಗಿದ್ದಾರೆ. ವಸತಿ ಶಾಲೆಯ ಮಕ್ಕಳನ್ನು ತಮ್ಮ ಮಕ್ಕಳಂತೆಯೇ ಪೋಷಿಸಿ ಒಳ್ಳೆಯ ಪ್ರಜೆಗಳನ್ನಾಗಿಸಲು ಶ್ರಮಿಸುತ್ತಿದ್ದಾರೆ. ಈ ಕಾಯಕ ಬರೋಬ್ಬರಿ 18 ವರ್ಷಗಳಿಂದ ನಡೆಯುತ್ತಿರುವುದು ವಿಶೇಷ.

    ಈ ಶಾಲೆ ಜಿಲ್ಲೆಯಲ್ಲಿಯೇ ಒಂದು ಮಾದರಿ ಶಾಲೆಯಾಗಿದ್ದು ಸತತ 12 ವರ್ಷಗಳಿಂದ ಎಸ್‍ಎಸ್‍ಎಲ್‍ಸಿಯಲ್ಲಿ ಶೇಕಡಾ 100ರಷ್ಟು ಫಲಿತಾಂಶ ಬಂದಿದೆ. ಇದರಲ್ಲಿ ತಮ್ಮಣ್ಣಗೌಡರ ಪಾತ್ರ ಬಹುದೊಡ್ಡದು. ಶಾಲಾ ಕಲಿಕೆಗೆ ವಿಶೇಷವಾದ ಮಾದರಿಗಳನ್ನು ಅಳವಡಿಸಿದ್ದಾರೆ. ಪ್ರತಿ ವರ್ಷ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಕೊಟ್ಟು ಪ್ರೋತ್ಸಾಹಿಸುತ್ತಾರೆ.

    ಚನ್ನರಾಯಪಟ್ಟಣದಲ್ಲಿ ತಮ್ಮ ಸಹೋದರರು, ಸಂಬಂಧಿಕರು ಇದ್ದರೂ ಅಲ್ಲಿಗೇ ಹೋಗೋದು ಕೆಲಸ ಇದ್ದರೆ ಮಾತ್ರ. ಉಳಿದಂತೆ ತಮ್ಮಣ್ಣಗೌಡರಿಗೆ ಶಾಲೆಯೇ ಕುಟುಂಬ.

    ಇನ್ನು ಕೆಲವೇ ದಿನಗಳಲ್ಲಿ ತಮ್ಮಣ್ಣಗೌಡರು ಬಿಇಓ ಆಗಿ ಬಡ್ತಿ ಪಡೆಯಲಿದ್ದಾರೆ. ತಮ್ಮಣ್ಣ ಗೌಡರು, 2000ನೇ ಇಸವಿಯಲ್ಲಿ ಈ ಶಾಲೆಗೆ ಬಂದಾಗ ಬೆಂಗಾಡಾಗಿತ್ತು. ಸದ್ಯ ಶಾಲಾ ಆವರಣವೀಗ ಸಸ್ಯಗಳಿಂದ ನಳನಳಿಸುತ್ತಿದೆ. 1,200ಕ್ಕೂ ಹೆಚ್ಚು ಗಿಡಗಳನ್ನು ತಮ್ಮಣ್ಣಗೌಡರು ತಮ್ಮ ಸ್ವಂತ ಖರ್ಚಿನಲ್ಲಿ ಬೆಳೆಸಿದ್ದಾರೆ. ಆ ಗಿಡಗಳು ಇದೀಗ ಫಲವನ್ನು ಕೊಡುತ್ತಿವೆ.

  • ಕಾಲೇಜು ಹುಡುಗಿಯರನ್ನು ಚುಡಾಯಿಸೋರನ್ನ ಒದ್ದು ಒಳಗೆ ಹಾಕಿ: ಎಚ್‍ಡಿ ರೇವಣ್ಣ

    ಕಾಲೇಜು ಹುಡುಗಿಯರನ್ನು ಚುಡಾಯಿಸೋರನ್ನ ಒದ್ದು ಒಳಗೆ ಹಾಕಿ: ಎಚ್‍ಡಿ ರೇವಣ್ಣ

    ಹಾಸನ: ಕಾಲೇಜು ಆವರಣದಲ್ಲಿ ಮದ್ಯಪಾನ ಮಾಡುವ ಹಾಗೂ ವಿದ್ಯಾರ್ಥಿನಿಯರನ್ನು ಚುಡಾಯಿಸುವ ಕಿಡಿಗೇಡಿಗಳನ್ನು ಒದ್ದು ಒಳಗೆ ಹಾಕಿ ಎಂದು ಸಚಿವ ರೇವಣ್ಣ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಪ್ರಕಾಶ್ ಗೌಡ ಅವರಿಗೆ ಸೂಚನೆ ನೀಡಿದ್ದಾರೆ.

    ಇಂದು ಹಾಸನದ ಜಿಲ್ಲಾ ಸಭಾಂಗಣದಲ್ಲಿ ಶಾಲಾ-ಕಾಲೇಜು ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಸಚಿವರು ಚರ್ಚೆ ನಡೆಸಿದ್ದರು. ಈ ವೇಳೆ ಕಾಲೇಜಿನ ಮುಖ್ಯೋಪಾಧ್ಯಾಯರೊಬ್ಬರು ತಮ್ಮ ಕಾಲೇಜು ಆವರಣದಲ್ಲಿ ಮದ್ಯಪಾನ ಮಾಡಿ, ವಿದ್ಯಾರ್ಥಿನಿಯರನ್ನು ಚುಡಾಯಿಸುವ ಪುಂಡರ ಬಗ್ಗೆ ಮಾಹಿತಿ ನೀಡಿ ಸಚಿವರ ಗಮನ ಸೆಳೆದರು.

    ಮುಖ್ಯೋಪಾದ್ಯಾಯರಿಂದ ಮಾಹಿತಿ ಪಡೆಯುತ್ತಿದಂತೆ ಗರಂ ಆದ ಸಚಿವರು, ವಿದ್ಯಾರ್ಥಿನಿಯರಿಗೆ ಚುಡಾಯಿಸುವ ಮತ್ತು ಕಾಲೇಜು ಆವರಣದಲ್ಲಿ ಮದ್ಯಪಾನ ಮಾಡುವ ಕಿಡಿಗೇಡಿಗಳನ್ನು ಪೊಲೀಸರು ಮಫ್ತಿಯಲ್ಲಿ ಹೋಗಿ ಹಿಡಿದು ಒದ್ದು ಒಳಗೆ ಹಾಕುವಂತೆ ಸೂಚನೆ ನೀಡಿದರು. ಇಂತಹ ವಿಚಾರದಲ್ಲಿ ಯಾರೇ ಆಗಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುವುದು ಕಂಡು ಬಂದರೆ ಕೂಡಲೇ ಕ್ರಮಕೈಗೊಳ್ಳಿ, ಅದ್ಯಾವನ್ ಬರ್ತಾನೆ ನಾನು ನೋಡ್ತಿನಿ. 15 ದಿನಗಳಲ್ಲಿ ಈ ಬಗ್ಗೆ ಮಾಹಿತಿ ನೀಡಿ ಎಂದು ತಮ್ಮದೇ ಶೈಲಿಯಲ್ಲಿ ಸೂಚನೆ ನೀಡಿದರು.

    ಇದೇ ವೇಳೆ ರಾಜ್ಯದ ಶಿಕ್ಷಣದ ಫಲಿತಾಂಶದಲ್ಲಿ ನಮ್ಮ ಜಿಲ್ಲೆ 7 ಸ್ಥಾನದಲ್ಲಿ ಇದ್ದು, ಮೊದಲ ಸ್ಥಾನಕ್ಕೆ ತೆಗೆದುಕೊಂಡು ಹೋಗುವಂತೆ ಶಿಕ್ಷಕರಿಗೆ ಮನವಿ ಮಾಡಿದರು. ಹಳ್ಳಿ ಮಕ್ಕಳು ಹೆಚ್ಚು ಶಿಕ್ಷಣ ಪಡೆಯಲು ಸರ್ಕಾರಿ ಶಾಲೆ, ಕಾಲೇಜುಗಳಿಗೆ ಬರುತ್ತಾರೆ. ಆದ್ದರಿಂದ ನಿಮಗೆ ಯಾವುದೇ ಸೌಲಭ್ಯ ಬೇಕಾದರು ನೀಡುತ್ತೇನೆ. ಎಲ್ಲಾ ಮಕ್ಕಳಿಗೆ ಭಾನುವಾರವೂ ವಿಶೇಷ ತರಗತಿ ನಡೆಸಿ ಎಂದರು. ಈ ಬಾರಿ ಫಲಿತಾಂಶದಲ್ಲಿ ಮುಂದೆ ಬಾರದಿದ್ದರೆ ನಿಮ್ಮ ಮೇಲೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಳ್ಳಿ ಮಕ್ಕಳ ಅಕ್ಷರ ಆಸಕ್ತಿಗೆ ಬೇಕಿದೆ ಸೂರು

    ಹಳ್ಳಿ ಮಕ್ಕಳ ಅಕ್ಷರ ಆಸಕ್ತಿಗೆ ಬೇಕಿದೆ ಸೂರು

    ಕೋಲಾರ: ಬಿರುಕು ಬಿಟ್ಟಿರುವ ಶಾಲಾ ಕೊಠಡಿ, ಬೀಳುವ ಸ್ಥಿತಿಯಲ್ಲಿರೋ ಕಿಟಕಿಗಳು ಇದು ಕೋಲಾರ ತಾಲೂಕಿನ ತಲಗುಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿ. ಶಾಲೆ ಯಾವಾಗ ಬೀಳುತ್ತೋ ಎಂಬ ಭಯದಲ್ಲಿ ಶಿಕ್ಷಕರು ಪಾಠ ಮಾಡಿದ್ರೆ, ಜೀವದ ಹಂಗು ತೊರೆದು ಮಕ್ಕಳು ಪಾಠ ಕೇಳುತ್ತಾರೆ.

    ಈ ಶಾಲೆಯಲ್ಲಿ 1 ರಿಂದ 7ನೇ ತರಗತಿಯವರೆಗೆ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಬರೋಬ್ಬರಿ 65 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುದ್ದಾರೆ. ಖಾಸಗಿ ಶಾಲೆಗಳ ಪ್ರಬಲ ಪೈಪೋಟಿಯ ಮಧ್ಯೆಯೂ ಈ ಶಾಲೆಗೆ ವಿದ್ಯಾರ್ಥಿಗಳು ಉತ್ಸಾಹದಿಂದ ಬರುತ್ತಿದ್ದಾರೆ. ಕಿತ್ತು ತಿನ್ನುವ ಬಡತನವಿದ್ದರೂ ಓದಿ ಸಾಧಿಸಬೇಕೆಂಬ ಛಲವನ್ನು ಈ ಶಾಲೆಯ ವಿದ್ಯಾರ್ಥಿಗಳು ಹೊಂದಿದ್ದಾರೆ.

    ಶಾಲೆಯ ಕಟ್ಟಡ ಸಂಪೂರ್ಣ ಹಾಳಾಗಿದ್ದು, ಎರಡು ಕೊಠಡಿಗಳ ಕಿಟಕಿ ಬಾಗಿಲುಗಳು ಕಿತ್ತು ಹೋಗಿದ್ದು ಬೀಳುವ ಹಂತ ತಲುಪಿದೆ. ಮಕ್ಕಳು ಯಾವಾಗ ಗೋಡೆ ಕುಸಿಯುತ್ತೋ ಎಂಬ ಭಯದಲ್ಲೇ ದಿನ ದೂಡುತ್ತಿದ್ದಾರೆ. ಸದ್ಯ ಶಿಕ್ಷಕರು ವರಾಂಡದಲ್ಲಿ ಪಾಠ ಹೇಳಿ ಕೊಡುತ್ತಿದ್ದಾರೆ. ಮಳೆ ಬಂತೆಂದರೆ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗುತ್ತಿದೆ. ಇನ್ನೂ ಈ ಸಮಸ್ಯೆ ಬಗ್ಗೆ ಮೇಲಾಧಿಕಾರಿಗಳಿಗೆ ತಿಳಿಸಿದ್ರೂ ಪ್ರಯೋಜನವಾಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

    ಹಲವೆಡೆ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಇಲ್ಲದೇ ಶಾಲೆಯನ್ನು ಮುಚ್ಚಲಾಗುತ್ತಿದೆ. ಆದ್ರೆ ಇಲ್ಲಿ ಮೂಲಭೂತ ಸೌಕರ್ಯ ಇಲ್ಲದಿದ್ದರೂ ಕಲಿಯಬೇಕೆಂದು ಬರುವ ಈ ಬಡ ವಿದ್ಯಾರ್ಥಿಗಳಿಗೆ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಸಮಸ್ಯೆ ಪರಿಹರಿಸಿಲ್ಲ. ದಯವಿಟ್ಟು ಬೆಳಕು ಮೂಲಕವಾದ್ರೂ ನಮಗೆ ಸಹಾಯ ಮಾಡಿ ಅಂತ ಈ ಮಕ್ಕಳು ಪಬ್ಲಿಕ್ ಟಿವಿಗೆ ಬಂದಿದ್ದಾರೆ.

    https://www.youtube.com/watch?v=dVXklPj4W28

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೊಡಗಿನ ನಿರಾಶ್ರಿತ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಚಲನಚಿತ್ರ ಪ್ರದರ್ಶನ

    ಕೊಡಗಿನ ನಿರಾಶ್ರಿತ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಚಲನಚಿತ್ರ ಪ್ರದರ್ಶನ

    ಬೆಂಗಳೂರು: ಕೊಡಗಿನ ನೊಂದ ಹೆಣ್ಣು ಮಕ್ಕಳ ವಿದ್ಯಾಭ್ಯಾಸದ ಸಹಾಯಾರ್ಥ `ಪೀಪಲ್ ಫಾರ್ ಪೀಪಲ್’ ತಂಡ ಕನ್ನಡದ `ಸಾವಿತ್ರಿಬಾಯಿ ಫುಲೆ’ ಚಿತ್ರದ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಈ ಕಾರ್ಯಕ್ರಮವು ಇಂದು ಸಂಜೆ 6 ಘಂಟೆಗೆ, ನಗರದ ಕರ್ನಾಟಕ ಚಲನಚಿತ್ರ ಕಲಾವಿದರ ಒಕ್ಕೂಟದ ಅಡಿಟೋರಿಯಂ, ಚಾಮರಾಜಪೇಟೆಯಲ್ಲಿ ನಡೆಯಲಿದೆ.

    ಈಗಾಗಲೇ `ಪೀಪಲ್ ಫಾರ್ ಪೀಪಲ್’ ತಂಡದವರು ಮಲ್ಲತ್ ಹಳ್ಳಿಯ ಕಲಾಗ್ರಾಮದಲ್ಲಿ ಕೊಡಗಿನ ಸಂತ್ರಸ್ತರ ಮಕ್ಕಳ ವಿದ್ಯಾಭ್ಯಾಸದ ಸಲುವಾಗಿ `ಕೊಡಗಿಗಾಗಿ ರಂಗಸಪ್ತಾಹ’ ಹಾಗೂ `ಕೊಡಗಿಗಾಗಿ ರಂಗೋತ್ಸವ’ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ.

    ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದ್ದು, ಈ ಪ್ರದರ್ಶನಕ್ಕೆ ಕೊಡಗಿನ ನೊಂದ ಹೆಣ್ಣುಮಕ್ಕಳು, ರಾಜಕೀಯ ನಾಯಕರು ನಾಡಿನ ವಿಚಾರವಾದಿಗಳು, ಪ್ರಗತಿಪರ ಹೋರಾಟಗಾರರು, ದಲಿತಪರ ಚಿಂತಕರು ಸೇರಿದಂತೆ ಎಲ್ಲಾ ಬಗೆಯ ನಾಯಕರು ಆಗಮಿಸಲಿದ್ದಾರೆ.

    ಬ್ರಿಟಿಷರಿಂದ “ಭಾರತದ ಮೊದಲ ಮಹಿಳಾ ಶಿಕ್ಷಕಿ” ಎಂಬ ಬಿರುದನ್ನು ಪಡೆದಿರುವ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜೀವನಾಧಾರಿತ ಚಿತ್ರವಾಗಿದೆ. ಈ `ಸಾವಿತ್ರಿಬಾಯಿ ಫುಲೆ-ಪ್ರೈಡ್ ಆಫ್ ನೇಶನ್’. ಈ ಚಿತ್ರದಲ್ಲಿ ತಾರಾ `ಸಾವಿತ್ರಿಬಾಯಿ’ ಪಾತ್ರದಲ್ಲಿ ಮತ್ತು ಮಹಾತ್ಮ ಜ್ಯೋತಿಬಾ ಫುಲೆ ಪಾತ್ರದಲ್ಲಿ ಸುಚೇಂದ್ರ ಪ್ರಸಾದ್ ಅಭಿನಯಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪಬ್ಲಿಕ್ ಟಿವಿ ಆಯೋಜನೆಯಲ್ಲಿ ಡ್ರೀಮ್ಸ್ ಸ್ಕೂಲ್ ಎಕ್ಸ್ ಪೋ-ಇವತ್ತೇ ಕೊನೆ ದಿನ, ಮಿಸ್ ಮಾಡಿಕೊಳ್ಳದೇ ಬನ್ನಿ

    ಪಬ್ಲಿಕ್ ಟಿವಿ ಆಯೋಜನೆಯಲ್ಲಿ ಡ್ರೀಮ್ಸ್ ಸ್ಕೂಲ್ ಎಕ್ಸ್ ಪೋ-ಇವತ್ತೇ ಕೊನೆ ದಿನ, ಮಿಸ್ ಮಾಡಿಕೊಳ್ಳದೇ ಬನ್ನಿ

    ಬೆಂಗಳೂರು: ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಪಬ್ಲಿಕ್ ಟಿವಿ ಡ್ರೀಮ್ಸ್ ಸ್ಕೂಲ್ ಎಕ್ಸ್ ಪೋ ಆಯೋಜಿಸಿದೆ. ಈ ಎಜುಕೇಷನ್ ಎಕ್ಸ್ ಪೋಗೆ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಈ ಎಜುಕೇಶನ್ ಎಕ್ಸ್ ಪೋ ಗೆ ಪೋಷಕರು ಉತ್ತಮ ರೆಸ್ಪಾನ್ಸ್ ಕೊಟ್ಟಿದ್ದಾರೆ. ಎಕ್ಸ್ ಪೋ ಉದ್ಘಾಟನೆಯನ್ನ ಬಿಜಿಎಸ್ ಶಿಕ್ಷಣ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಪ್ರಕಾಶ್ ನಾಥ್ ಸ್ವಾಮೀಜಿ, ಗಾರ್ಡನ್ ಸಿಟಿ ಯುನಿವರ್ಸಿಟಿಯ ಚೇರ್ಮನ್ ಡಾ. ವಿ.ಜೆ.ಜೋಸೆಫ್, ಕೆಂಬ್ರಿಡ್ಜ್ ಸಂಸ್ಥೆಯ ಚಕ್ರವರ್ತಿ, ಪಬ್ಲಿಕ್ ಟಿವಿಯ ಸಿಇಓ ಅರುಣ್ ಕುಮಾರ್ ಹಾಗೂ ಪಬ್ಲಿಕ್ ಟಿವಿ ಮಾರ್ಕೆಟಿಂಗ್ ಹೆಡ್ ಹರೀಶ್ ನೆರವೇರಿಸಿದರು.

    ಇಂದು ಈ ಎಜುಕೇಶನ್ ಎಕ್ಸ್ ಪೋಗೆ ಎರಡನೇ ಹಾಗೂ ಕೊನೆ ದಿನ. ಮೊದಲ ದಿನವೇ 1000 ಕ್ಕೂ ಹೆಚ್ವು ಪೋಷಕರು ಎಕ್ಸ್ ಪೋ ಆಗಮಿಸಿ ತಮ್ಮ ಮಕ್ಕಳಿಗೆ ಸೂಕ್ತವಾದ ಶಾಲೆಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಒಂದು ಜಾಗದಲ್ಲಿ ಇಷ್ಟೊಂದು ಶಾಲೆಗಳ ಬಗ್ಗೆ ಮಾಹಿತಿ ಸಿಗುತ್ತಿದ್ದು ಇದು ಅತ್ಯುತ್ತಮ ಕೆಲಸ ಎಂದು ಪೋಷಕರು ಹೇಳುತ್ತಿದ್ದಾರೆ.

    ಇಂದು ಬೆಳಗ್ಗೆ 9:30 ಯಿಂದ ಸಂಜೆ 6:30 ವರೆಗೂ ಏಕ್ಸ್ ಪೋ ನಡೆಯಲಿದೆ. ಸೆಕೆಂಡ್ ಡೇಯಲ್ಲಿ ಎಕ್ಸ್ ಪೋಗೆ ಬರುವ ಪೋಷಕರಿಗಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ. ಪ್ರೊಫೆಸರ್ ಶ್ರೀಧರ್ ಮೂರ್ತಿ ಅವರು ಉಪನ್ಯಾಸ ನೀಡಲಿದ್ದಾರೆ. ಜೊತೆಗೆ ಮಕ್ಕಳ ಮೇಲೆ ಶಿಕ್ಷಣದ ಜೊತೆ ಮ್ಯೂಸಿಕ್ ಎಷ್ಟು ಪ್ರಭಾವ ಬೀರುತ್ತೆ..? ಮ್ಯೂಸಿಕ್‍ನ ಅಗತ್ಯದ ಬಗ್ಗೆ ವಿಶ್ವನಾಥ್ ಪ್ರಸಾದ್ ವಿಚಾರ ವಿನಿಮಯ ಮಾಡಿಕೊಳ್ಳಲಿದ್ದಾರೆ. ಇದರೊಂದಿಗೆ ಮಕ್ಕಳಿಗಾಗಿ ಡ್ರಾಯಿಂಗ್ ಅಂಡ್ ಪೇಂಟಿಂಗ್ ಸ್ಪರ್ಧೆ ಕೂಡ ಇರಲಿದೆ.

    ಪಬ್ಲಿಕ್ ಟಿವಿ ಆಯೋಜಿಸಿರುವ ಎಕ್ಸ್ ಪೋನಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರತಿಷ್ಠಿತ 25 ಕ್ಕೂ ಹೆಚ್ಚು ವಿದ್ಯಾಕೇಂದ್ರಗಳು ಒಂದೇ ಸೂರಿನಡಿಯಲ್ಲಿ ತಮ್ಮ ಸಂಸ್ಥೆಯ ಬಗ್ಗೆ ವಿವರಗಳನ್ನ ಪೋಷಕರಿಗೆ ತಿಳಿಸುತ್ತಿದ್ದಾರೆ. ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್‍ನ ಕಾಳಿಂಗ ಹಾಲ್‍ನಲ್ಲಿ ನಡೆಯುತ್ತಿರುವ ಈ ಎಕ್ಸ್ ಪೋಗೆ ಎಲ್ಲರಿಗೂ ಉಚಿತ ಪ್ರವೇಶವಿದೆ. ತಮ್ಮ ಮಕ್ಕಳಿಗಾಗಿ ಪೋಷಕರು ಮಿಸ್ ಮಾಡ್ದೇ ಈ ಎಕ್ಸ್ ಪೋ ಗೆ ಬಂದು ತಮಗೆ ಬೇಕಾದ ಡ್ರೀಮ್ ಸ್ಕೂಲ್ ಬಗ್ಗೆ ಮಾಹಿತಿ ಪಡೆದುಕೊಂಡು, ಅಡ್ಮಿಶನ್ ಕೂಡ ಮಾಡಿಕೊಳ್ಳಬಹುದಾಗಿದೆ. ಮತ್ತೆಕೇ ತಡ ಮಾಡ್ತಿದ್ದೀರಾ ಬನ್ನೀ ಪಬ್ಲಿಕ್ ಟಿವಿ ಆಯೋಜಿಸಿರೋ ಸಾಮಾಜಿಕ ಕಳಕಳಿಯ ಡ್ರೀಮ್ಸ್ ಸ್ಕೂಲ್ ಎಜುಕೇಶನ್ ನಲ್ಲಿ ಭಾಗಿಯಾಗಿ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಸಾದ ವಿಷ ದುರಂತ – ತಬ್ಬಲಿಯಾದ ಮೂವರು ಮಕ್ಕಳಿಗೆ ಆಳ್ವಾಸ್ ಆಸರೆ

    ಪ್ರಸಾದ ವಿಷ ದುರಂತ – ತಬ್ಬಲಿಯಾದ ಮೂವರು ಮಕ್ಕಳಿಗೆ ಆಳ್ವಾಸ್ ಆಸರೆ

    ಮಂಗಳೂರು: ಸುಳ್ವಾಡಿ ದೇವಸ್ಥಾನದಲ್ಲಿ ಪ್ರಸಾದದಲ್ಲಿ ವಿಷ ಪ್ರಾಶನ ಪ್ರಕರಣದ ದುರಂತದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡಿರುವ ಮೂರು ಮಕ್ಕಳಿಗೆ ಆಳ್ವಾಸ್ ಸಂಸ್ಥೆ ಆಸರೆಯಾಗಲು ಮುಂದಾಗಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಮೂವರು ಮಕ್ಕಳನ್ನು ದತ್ತು ಪಡೆಯಲು ನಿರ್ಧಾರ ಮಾಡಿದ್ದು, ಮೂವರು ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚನ್ನು ಭರಿಸಲು ಆಳ್ವಾಸ್ ಸಂಸ್ಥೆ ತೀರ್ಮಾನ ಮಾಡಿದೆ. ಅಷ್ಟೇ ಅಲ್ಲದೇ ಉಚಿತ ಶಿಕ್ಷಣ ನೀಡುವುದಾಗಿ ಘೋಷಣೆ ಮಾಡಿದೆ. ಇದನ್ನೂ ಓದಿ: ಅಂದು ತಂದೆ, ಇಂದು ತಾಯಿ – ದೇವಿ ಪ್ರಸಾದದಿಂದ ಮಕ್ಕಳು ಅನಾಥರಾದ್ರು!

    ಮಾಧ್ಯಮಗಳಲ್ಲಿ ಸುಳ್ವಾಡಿ ದೇವಾಲಯ ವಿಷಪ್ರಸಾದದ ಸುದ್ದಿ ಪ್ರಸಾರವಾಗುತ್ತಿತ್ತು. ಇದನ್ನು ನೋಡಿದ ಆಳ್ವಾಸ್ ಮುಖ್ಯಸ್ಥ ಡಾ. ಮೋಹನ್ ಆಳ್ವಾ ಅವರು ಸ್ಪಂದಿಸಿದ್ದು, ದುರಂತದಿಂದ ಅನಾಥರಾಗಿರುವ ಮೂವರು ಮಕ್ಕಳನ್ನು ದತ್ತು ಪಡೆಯುತ್ತೇವೆ. ಅವರ ತಂದೆ-ತಾಯಿ ಜಾಗದಲ್ಲಿ ನಿಂತು ಅವರು ವಿದ್ಯಾಭ್ಯಾಸದ ಖರ್ಚನ್ನು ಭರಿಸುತ್ತೇವೆ. ಈಗ ಅವರು ಕಲಿಯುತ್ತಿದ್ದ ಸ್ಥಳದಿಂದ ನಮ್ಮ ಸಂಸ್ಥೆಗೆ ವರ್ಗಾವಣೆ ಮಾಡಿಸಿಕೊಳ್ಳುತ್ತೇವೆ. ಬಳಿಕ ಅವರ ವಿದ್ಯಾಭ್ಯಾಸ ಮುಗಿಸಿ, ಉದ್ಯೋಗ ಪಡೆಯುವವರೆಗೂ ನಾವು ಮೂವರ ಮಕ್ಕಳ ಜವಬ್ದಾರಿಯನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

    ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ದೇವಾಯಲದಲ್ಲಿ ವಿಷಪ್ರಸಾದ ದುರಂತಕ್ಕೆ ಕೋಟೆಪುದೆ ಗ್ರಾಮದ ಕೃಷ್ಣ ನಾಯಕ್ ಮೃತಪಟ್ಟಿದ್ದರು. ಆದರೆ ಇಂದು ಅವರು ಪತ್ನಿ ಮೈಲಿಬಾಯಿ ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈಗ ತಂದೆ-ತಾಯಿ ಇಬ್ಬರನ್ನು ಕಳೆದುಕೊಂಡಿರುವ ಮೂವರು ಮಕ್ಕಳು ಅನಾಥರಾಗಿದ್ದಾರೆ. ಕೃಷ್ಣ ನಾಯ್ಕ್ ಮತ್ತು ಮೈಲಿಬಾಯಿ ದಂಪತಿಗೆ ಹೆಣ್ಣು ಮಕ್ಕಳಿಬ್ಬರು ಮತ್ತು ಒಬ್ಬ ಮಗನಿದ್ದಾನೆ. ಇಬ್ಬರು ಹೆಣ್ಣು ಮಕ್ಕಳು ನರ್ಸಿಂಗ್ ಮಾಡುತ್ತಿದ್ದು, ಮಗ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಮೂಲಭೂತ ಸೌಲಭ್ಯ ವಂಚಿತ ಗ್ರಾಮಕ್ಕೆ ಬೇಕಿದೆ ರಸ್ತೆ!

    ಮೂಲಭೂತ ಸೌಲಭ್ಯ ವಂಚಿತ ಗ್ರಾಮಕ್ಕೆ ಬೇಕಿದೆ ರಸ್ತೆ!

    ಬೀದರ್: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 60 ವರ್ಷ ಕಳೆದರೂ ಇನ್ನೂ ಗ್ರಾಮೀಣ ಪ್ರದೇಶಗಳು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಎನ್ನುವ ಸುದ್ದಿಗೆ ಹಳ್ಳಿ ಸಾಕ್ಷಿಯಾಗಿದೆ. ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ನೀಲಂಹಳ್ಳಿ ಗ್ರಾಮದಲ್ಲಿ 1,300 ಮಂದಿ ವಾಸವಾಗಿದ್ದು, ಸರಿಯಾದ ರಸ್ತೆ ಇಲ್ಲದೇ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣದಿಂದ ದೂರ ಉಳಿದಿದ್ದಾರೆ.

    ಗ್ರಾಮದ ಜನರಿಗೆ ಕುಡಿಯುವ ನೀರು, ರಸ್ತೆ, ಒಳಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯಗಳೇ ಇಲ್ಲ. ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಿಗೆ ಹೋಗಬೇಕಾದರೆ ನಡೆದುಕೊಂಡೆ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಗ್ರಾಮದ ಮಕ್ಕಳು ಶಾಲೆಗೆ ಹೋಗಬೇಕಾದರೆ 4 ರಿಂದ 5 ಕಿಲೋ ಮೀಟರ್ ದೂರ ಕಡಿದಾದ ಕಾಲುದಾರಿಯಲ್ಲಿ ನಡೆದು ಸಾಗಬೇಕಿದೆ.

    ಈ ಹಿಂದೆ ಕುಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿದ್ದರೂ ಸದ್ಯ ಗ್ರಾಮದ ರಸ್ತೆ ಸಂಪೂರ್ಣ ಹಾಳಾಗಿ ಕಚ್ಚಾ ರಸ್ತೆಯಾಗಿ ಮಾರ್ಪಟ್ಟಿದೆ. ರಸ್ತೆ ದುರಸ್ಥಿಗಾಗಿ ಅಧಿಕಾರಿಗಳು, ಜನಪ್ರತಿನಿಧಿಗಳ ಬಳಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೇ ಧನ್ನೂರು – ರುದ್ಧನೂರ್ – ನೀಲಂಹಳ್ಳಿ ಮೂಲಕ ಮುಖ್ಯ ರಸ್ತೆಗೆ ಸಂಪರ್ಕವಾಗುವ ರಸ್ತೆಯನ್ನು ರಾಜಕೀಯ ವ್ಯಕ್ತಿಗಳು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಮನೆಗಳನ್ನು ನಿರ್ಮಾಣ ಮಾಡಿದ್ದಾರೆ.

    ಇತ್ತ ಗ್ರಾಮದಲ್ಲಿ ಸಮಸ್ಯೆಗಳಿದ್ದರೂ ರಸ್ತೆ ಒತ್ತುವರಿ ತೆರವುಗೊಳಿಸಿ ಗ್ರಾಮಸ್ಥರ ನೆರವಿಗೆ ಬರಬೇಕಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಸ್ಥಳೀಯ ಶಾಸಕರೂ ಆದ ಈಶ್ವರ್ ಖಂಡ್ರೆ ಮೌನಕ್ಕೆ ಶರಣಾಗಿದ್ದಾರೆ. ಜನಪ್ರತಿನಿಧಿಗಳ ಹಾಗು ಅಧಿಕಾರಿಗಳಿಗೆ ನಿರ್ಲಕ್ಷ್ಯಕ್ಕೆ ಈ ಗ್ರಾಮದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಸದ್ಯ ಇಲ್ಲಿನ ಗ್ರಾಮಸ್ಥರು ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದ ಮೂಲಕ ರಸ್ತೆ ಮಾಡಿಸಿಕೊಡಿ ಎಂದು ಮನವಿ ಮಾಡಿದ್ದಾರೆ.

    https://www.youtube.com/watch?v=QorJplaN5-w

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com

  • ಅಲೆಮಾರಿಗಳು, ಅನಾಥರ ಆಶಾಕಿರಣ ಡಾ.ಶಿವಾನಂದ ಸ್ವಾಮೀಜಿ ನಮ್ಮ ಪಬ್ಲಿಕ್ ಹೀರೋ

    ಅಲೆಮಾರಿಗಳು, ಅನಾಥರ ಆಶಾಕಿರಣ ಡಾ.ಶಿವಾನಂದ ಸ್ವಾಮೀಜಿ ನಮ್ಮ ಪಬ್ಲಿಕ್ ಹೀರೋ

    ಕಲಬುರಗಿ: ಉತ್ತರ ಕರ್ನಾಟಕದ ಅಲೆಮಾರಿ ಜನಾಂಗದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಹಲವು ಯೋಜನೆಯನ್ನು ಸರ್ಕಾರ ರೂಪಿಸಿದೆ. ಇಂದಿಗೂ ಸಹ ಆ ಮಕ್ಕಳು ಶಾಲೆಯಿಂದ ವಂಚಿತರಾಗಿದ್ದಾರೆ. ಇದನ್ನು ಅರಿತ ಕಲಬುರಗಿಯ ಸೊನ್ನ ಮಠದ ಶ್ರೀಗಳು ಅಲೆಮಾರಿ ಮತ್ತು ಅನಾಥ ಮಕ್ಕಳ ಪಾಲಿನ ಬೆಳಕಾಗಿದ್ದಾರೆ.

    ಶಾಲೆಯಲ್ಲಿ ಮಕ್ಕಳ ಲಾಲನೆ ಪಾಲನೆ ಜೊತೆಗೆ ಶಿಕ್ಷಣಕ್ಕೆ ಒತ್ತು ನೀಡುತ್ತಿರುವ ಡಾ.ಶಿವಾನಂದ ಸ್ವಾಮೀಜಿ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಸೊನ್ನ ಗ್ರಾಮದ ವಿರಕ್ತ ಮಠದ ಪೀಠಾಧಿಪತಿಗಳು. ಪ್ರವಚನದ ಮೂಲಕ ಸಮಾಜದಲ್ಲಿನ ಅಂಕು-ಡೊಂಕು ತಿದ್ದುವ ಜೊತೆಗೆ, ಖುದ್ದು ಸೊನ್ನ ಗ್ರಾಮದಲ್ಲಿ ಶಾಲೆ ಆರಂಭಿಸಿದ್ದಾರೆ. ಶಾಲೆಯಲ್ಲಿ ನೂರಾರು ಅನಾಥ ಮಕ್ಕಳು ಹಾಗು ಅಲೆಮಾರಿ ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿಯನ್ನೂ ಕಲ್ಪಿಸಿದ್ದಾರೆ.

    ಶ್ರೀಗಳ ಕಾರ್ಯ ಕಂಡ ರಾಜ್ಯ ಸರ್ಕಾರ 25 ಅಲೆಮಾರಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅಲೆಮಾರಿ ಶಾಲೆಯ ಅನುಮತಿ ನೀಡಿದೆ. ಶಾಲೆಯಲ್ಲಿ ನೂರಕ್ಕೂ ಹೆಚ್ಚು ಅಲೆಮಾರಿ ಮಕ್ಕಳು ವಿದ್ಯಾಭ್ಯಾಸ ಮಾಡ್ತಿದ್ದಾರೆ. ಅಲೆಮಾರಿ ಮತ್ತು ಅನಾಥ ಮಕ್ಕಳ ನಂದಾದೀಪ ಅಂತಾನೆ ಖ್ಯಾತಿ ಪಡೆದಿರೋ ಸ್ವಾಮೀಜಿಗಳ ಸಮಾಜಮುಖಿ ಕಾರ್ಯಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯ 2013ರಲ್ಲಿ ಗೌರವ ಡಾಕ್ಟರೇಟ್ ನೀಡಿದೆ.

    https://www.youtube.com/watch?v=wVqJyzWs94w

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸುಳ್ಳು ಅಡ್ಮಿಷನ್ ಮಾಡಿಸಿ ಗ್ರಾಮೀಣ  ವಿದ್ಯಾರ್ಥಿಗಳಿಗೆ ಮಹಾವಂಚನೆ

    ಸುಳ್ಳು ಅಡ್ಮಿಷನ್ ಮಾಡಿಸಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಮಹಾವಂಚನೆ

    – ಜಾನಪದ ವಿವಿಗೆ ಎಲ್ಲಾ ವಿಷಯ ತಿಳಿದಿದ್ರೂ ಜಾಣ ಕುರುಡು?
    – ಪಕ್ಕ ಪಕ್ಕದಲ್ಲೇ ಕೂರಿಸಿ ಬರೀಸ್ತಾರೆ ಪರೀಕ್ಷೆ

    ಶಿವಮೊಗ್ಗ: ಶಿಗ್ಗಾಂವ್ ಸಮೀಪ ಇರುವ ಕರ್ನಾಟಕ ಜನಪದ ವಿಶ್ವವಿದ್ಯಾಲಯದ ಹೆಸರಿನಲ್ಲಿ ವಂಚನೆ ನಡೆಯುತ್ತಿದ್ದರೂ ವಿವಿ ಮಾತ್ರ ಜಾಣ-ಕಿವುಡು, ಜಾಣ ಕುರುಡುತನ ತೋರುತ್ತಿದೆ.

    ಹೌದು. ಶಿವಮೊಗ್ಗದ ವಿನೋಭಾ ನಗರದಲ್ಲಿ ಇರುವ ಕಟ್ಟಡದಲ್ಲಿ ಪುಟ್ಟ ಕೊಠಡಿಯಲ್ಲಿ ಒಬ್ಬರ ಪಕ್ಕ ಒಬ್ಬರು ಕುಳಿತು ಪರೀಕ್ಷೆ ಬರೆದಿದ್ದಾರೆ. ಅದೂ ಅಂತಿಂಥ ಪರೀಕ್ಷೆ ಅಲ್ಲ. ಕರ್ನಾಟಕ ಜನಪದ ವಿಶ್ವವಿದ್ಯಾಲಯ ಡಿಪ್ಲೋಮಾ ಇನ್  ಅಗ್ರಿಕಲ್ಚರ್ ಪರೀಕ್ಷೆ.

    ಪ್ಯಾರಾ ಮೆಡಿಕಲ್ ಕಾಲೇಜು ಎಂಬ ಬೋರ್ಡ್ ಹಾಕಿರುವ ಈ ಕಟ್ಟಡದ ಈ ಪುಟ್ಟ ಪುಟ್ಟ ಕೊಠಡಿಗಳಲ್ಲಿ ಒಟ್ಟು 145 ಜನ ಪರೀಕ್ಷೆ ಬರೆಯುತ್ತಿದ್ದಾರೆ. ಕಳೆದ ವರ್ಷ ರಾಜ್ಯ ಆರು ಸೆಂಟರ್ ಗಳಲ್ಲಿ ಒಂದು ಸಾವಿರ ಜನ ಇದೇ ರೀತಿ ಪರೀಕ್ಷೆ ಬರೆದಿದ್ದಾರೆ.

    ಈ ವರ್ಷ ರಾಜ್ಯಾದ್ಯಂತ 550 ಜನ ಪರೀಕ್ಷೆ ಬರೆಯುತ್ತಿದ್ದಾರೆ. ಜನಪದ ವಿವಿ ಈ ಪರೀಕ್ಷೆ ನಡೆಸಲು ಬೀದರ್ ಶ್ರೀಮಹಾಂತ ಎಜುಕೇಷನ್ ಟ್ರಸ್ಟ್ ಜೊತೆ ಒಪ್ಪಂದ ಮಾಡಿಕೊಂಡಿದೆ. ರಾಜ್ಯಾದ್ಯಂತ ಈ ಸೊಸೈಟಿ ವತಿಯಿಂದಲೇ ತರಗತಿ ಹಾಗೂ ಪರೀಕ್ಷೆ ನಡೆಸಲಾಗುತ್ತಿದೆ. ಶಿವಮೊಗ್ಗದಲ್ಲಿ ನಡೆಯುತ್ತಿರುವ ಪರೀಕ್ಷಾ ಕೇಂದ್ರದಲ್ಲಿ ವಿವಿಯ ಯಾವುದೇ ಪ್ರತಿನಿಧಿ ಇರಲಿಲ್ಲ. ಪಕ್ಕಪಕ್ಕವೇ ಕೂತು ಪರೀಕ್ಷೆ ಬರೆಸುತ್ತಿದ್ದರು.

    ಎಲ್ಲಕ್ಕಿಂತ ಮುಖ್ಯವಾಗಿ ಈ ಪರೀಕ್ಷೆ ಬರೆದರೆ ಗೊಬ್ಬರದ ಅಂಗಡಿ ಲೈಸೆನ್ಸ್ ಮಾಡಿಸಬಹುದು ಎಂದು ಸಂಸ್ಥೆಯ ಕೋ-ಆರ್ಡಿನೇಟರ್ ಹೇಳಿದ್ದಾನೆ. ಇದು ಪಬ್ಲಿಕ್ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಈ ಪರೀಕ್ಷೆ ಪಾಸು ಮಾಡಿದಲ್ಲಿ ಗೊಬ್ಬರ ಅಂಗಡಿ ಲೈಸೆನ್ಸ್ ಪಡೆಯಲು ಅಥವಾ ನವೀಕರಿಸಲು ಸಾಧ್ಯವೇ ಇಲ್ಲ. ಈ ಬಗ್ಗೆ ಬೆಂಗಳೂರು ಕೃಷಿ ವಿವಿ ನಡೆಸಿದ ರಾಜ್ಯದ ಎಲ್ಲಾ ಕೃಷಿ ವಿವಿಗಳ ಶೈಕ್ಷಣಿಕ ಸಮನ್ವಯ ಸಮಿತಿ ಸ್ಪಷ್ಟವಾದ ವರದಿ ನೀಡಿದೆ. ಆದರೂ ಕೂಡ ಈ ಸಂಸ್ಥೆಯವರು ಸುಳ್ಳು ಹೇಳಿ ಅಡ್ಮಿಷನ್ ಮಾಡಿಕೊಳ್ಳುತ್ತಿದ್ದಾರೆ. ಈ ಎಲ್ಲಾ ವಿಷಯ ತಿಳಿದಿದ್ದೂ ಜನಪದ ವಿವಿ ಯಾವುದೇ ಕ್ರಮಕೈಗೊಳ್ಳದೇ ಜಾಣ ಕಿವುಡು- ಜಾಣ ಮೌನ ವಹಿಸಿದೆ.

    ಈ ಪರೀಕ್ಷೆ ಪಾಸ್ ಮಾಡಿಕೊಳ್ಳಲು ರಾಜ್ಯಾದ್ಯಂತ ಸಾವಿರಾರು ಜನ ಕ್ಯೂನಲ್ಲಿ ನಿಂತಿದ್ದಾರೆ. ಏಕೆಂದರೆ, ಕೇಂದ್ರ ಸರ್ಕಾರದ ಕೃಷಿ ಸಚಿವಾಲಯದ ಅಧಿಸೂಚನೆ ಪ್ರಕಾರ ಗೊಬ್ಬರ, ಔಷಧ ಹಾಗೂ ಕ್ರಿಮಿಕೀಟ ನಾಶಕ ಮಾರಾಟಗಾರರ ಲೈಸೆನ್ಸ್ ಪಡೆಯಲು ಈ ಸರ್ಟಿಫಿಕೇಟ್ ಕಡ್ಡಾಯ. ಈ ಕಡ್ಡಾಯವನ್ನೇ ಮಹಾಂತ ಎಜುಕೇಷನ್ ಟ್ರಸ್ಟ್ ಹಣ ಮಾಡುವ ದಂಧೆಯನ್ನಾಗಿಸಿಕೊಂಡಿದೆ.

    ಕಳೆದ ವರ್ಷ ಸಾವಿರ, ಈ ವರ್ಷ ಐನೂರು ಜನ ನೋಂದಣಿಯಾಗಿದ್ದಾರೆ. ಬೇಕಾಬಿಟ್ಟಿ ಹಣ ವಸೂಲಿ ಮಾಡಲಾಗಿದೆ. ಸಂಸ್ಥೆಯನ್ನು ನಂಬಿ, ಗೊಬ್ಬರದಂಗಡಿ ಲೈಸೆನ್ಸ್ ಪಡೆಯಬಹುದು ಎಂದು ಗ್ರಾಮೀಣ ಪ್ರದೇಶದ ಜನ ಮೋಸ ಹೋಗುತ್ತಲೇ ಇದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

     

  • ತಾಯಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದನ್ನು ಪ್ರಶ್ನಿಸಿದ ಮಗನ ಮೇಲೆ ಮಾರಣಾಂತಿಕ ಹಲ್ಲೆ

    ತಾಯಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದನ್ನು ಪ್ರಶ್ನಿಸಿದ ಮಗನ ಮೇಲೆ ಮಾರಣಾಂತಿಕ ಹಲ್ಲೆ

    ಚಿತ್ರದುರ್ಗ: ತಾಯಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದನ್ನು ಪ್ರಶ್ನಿಸಿದ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಹೊಸದುರ್ಗ ತಾಲೂಕಿನ ಮಾಡದಕೆರೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

    ಗೊಲ್ಲರಹಟ್ಟಿ ನಿವಾಸಿ ಚಿದಾನಂದ(26) ಹಲ್ಲೆಗೊಳಗಾದ ಯುವಕ. ಆರೋಪಿಗಳಾದ ಶ್ರೀನಿವಾಸ, ಸುನಿಲ್, ಮಂಜ, ಪ್ರವೀಣ್ ಸೇರಿದಂತೆ ಏಳು ಜನರು ಹಲ್ಲೆ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ವೇಳೆ ಚಿದಾನಂದ ತಾಯಿ ಸಿದ್ದಮ್ಮ ಅವರ ಮೇಲೂ ಹಲ್ಲೆ ನಡೆದಿದೆ.

    ಆಗಿದ್ದೇನು?:
    ಚಿದಾನಂದ ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಮುಂದುವರಿಯುತ್ತಿದ್ದರು. ಇದನ್ನು ಸಹಿಸದ ಅದೇ ಗ್ರಾಮದ ಮತ್ತೊಂದು ಕೋಮಿನ ಯುವಕರು ಇಂದು ಮದ್ಯ ಸೇವನೆ ಮಾಡಿ ಚಿದಾನಂದ ಮನೆಗೆ ಬಂದಿದ್ದರು. ಮನೆಯ ಮುಂದೆ ನಿಂತು ಸಿದ್ದಮ್ಮ ಅವರ ಜೊತೆಗೆ ಅಸಭ್ಯ ವರ್ತಿಸಿ, ನಿಂದಿಸಿದ್ದಾರೆ. ಈ ವೇಳೆ ಚಿದಾನಂದ ಮಧ್ಯ ಪ್ರವೇಶಿಸುತ್ತಿದ್ದಂತೆ ಅವರ ತಲೆಗೆ ಇಟ್ಟಿಗೆಯಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾರೆ.

    ಘಟನೆಯಿಂದಾಗಿ ಚಿದಾನಂದ ಅವರ ಎದೆಗೆ ಬಲವಾದ ಪೆಟ್ಟು ಬಿದ್ದಿದ್ದು, ತಲೆಗೆ ಗಂಭೀರ ಗಾಯವಾಗಿದೆ. ಇದನ್ನು ತಡೆಯಲು ಬಂದಿದ್ದ ಸಿದ್ದಮ್ಮ ಅವರಿಗೂ ದುಷ್ಕರ್ಮಿಗಳು ಹೊಡೆದಿದ್ದಾರೆ. ಈ ವೇಳೆ ಗ್ರಾಮಸ್ಥರು ಸ್ಥಳಕ್ಕೆ ಬರುತ್ತಿದ್ದಂತೆ ಅಲ್ಲಿಂದ ಯುವಕರು ಪರಾರಿಯಾಗಿದ್ದಾರೆ. ತಕ್ಷಣವೇ ಗಾಯಾಳು ಚಿದಾನಂದ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಮಗನ ಶೈಕ್ಷಣಿಕ ಹಾಗೂ ಆರ್ಥಿಕಾಭಿವೃದ್ಧಿ ಸಹಿಸಲಾಗದೇ ಈ ಕೃತ್ಯ ಎಸಗಿದ್ದಾರೆ ಎಂದು ಚಿದಾನಂದ ತಾಯಿ ಸಿದ್ದಮ್ಮ ಆರೋಪಿಸಿದ್ದಾರೆ. ಹೊಸದುರ್ಗ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/