Tag: education

  • ಡಾಕ್ಟರ್, ಎಂಜಿನಿಯರ್ ಬಿಟ್ಟು ಧಾರ್ಮಿಕ ಶಿಕ್ಷಣದತ್ತ ಮುಖ ಮಾಡಿದ ಖಾದರ್ ಪುತ್ರಿ

    ಡಾಕ್ಟರ್, ಎಂಜಿನಿಯರ್ ಬಿಟ್ಟು ಧಾರ್ಮಿಕ ಶಿಕ್ಷಣದತ್ತ ಮುಖ ಮಾಡಿದ ಖಾದರ್ ಪುತ್ರಿ

    ಮಂಗಳೂರು: ಶಾಸಕರು ಹಾಗೂ ಸಚಿವರ ಮಕ್ಕಳು ಸಾಮಾನ್ಯವಾಗಿ ದೊಡ್ಡ ಸಂಬಳ ಗಳಿಸುವ ಡಾಕ್ಟರ್, ಎಂಜಿನಿಯರ್ ಗಳಾಗಲು ಬಯಸುತ್ತಾರೆ. ಆದರೆ ರಾಜ್ಯದ ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಪುತ್ರಿ ಧಾರ್ಮಿಕ ಶಿಕ್ಷಣದತ್ತ ಮುಖ ಮಾಡಿದ್ದಾರೆ. ಅದಕ್ಕೆ ಕಾರಣವಾಗಿದ್ದು ಯು.ಟಿ ಖಾದರ್ ಹೇಳಿಕೊಂಡಿದ್ದ ಹರಕೆ.

    ಎಂಟು ವರ್ಷಗಳ ಹಿಂದೆ ಖಾದರ್ ಕುಟುಂಬ ಮೆಕ್ಕಾ ಯಾತ್ರೆ ಕೈಗೊಂಡಿದ್ದಾಗ ಜನಜಂಗುಳಿಯಲ್ಲಿ ಹತ್ತು ವರ್ಷದ ಮಗಳು ನಸೀಮಾ ನಾಪತ್ತೆಯಾಗಿದ್ದಳು. ಕಾಬಾದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದಾಗ ಘಟನೆ ನಡೆದಿದ್ದರಿಂದ ಎಲ್ಲಿ ಹುಡುಕಿದರೂ, ಪುತ್ರಿ ಸಿಕ್ಕಿರಲಿಲ್ಲ. ಕೊನೆಗೆ ತನ್ನ ಮಗಳು ಸಿಕ್ಕರೆ ಧಾರ್ಮಿಕ ಶಿಕ್ಷಣ ಕಲಿಸುವುದಾಗಿ ಹರಕೆ ಹೇಳಿಕೊಂಡಿದ್ದರು.

    ಅಂದು ರಾತ್ರಿಯೇ ಪಾಕಿಸ್ತಾನ ಮೂಲದ ಕುಟುಂಬದ ಜೊತೆಗಿದ್ದ ಪುತ್ರಿ ಅಚಾನಕ್ಕಾಗಿ ಪತ್ತೆಯಾಗಿದ್ದಳು. ಹರಕೆ ಹೇಳಿಕೊಂಡಂತೆ ಆಗ ಶಾಸಕರಾಗಿದ್ದ ಖಾದರ್ ಪುತ್ರಿಯನ್ನು ಕೇರಳದ ಕಾಸರಗೋಡಿನಲ್ಲಿ ಧಾರ್ಮಿಕ ಶಿಕ್ಷಣಕ್ಕೆ ಸೇರಿಸಿದ್ದರು. ಅಲ್ಲದೆ ಖುರಾನ್ ಕಂಠಪಾಠ ಮಾಡಿಸಿದ್ದರು. ಧಾರ್ಮಿಕ ಶಿಕ್ಷಣ ಪಡೆಯುವ ಇವರು ಮುಂದೆ ಧರ್ಮ ಪ್ರಚಾರ ಕಾರ್ಯಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

    ವಿಶೇಷ ಅಂದರೆ ಮಾಮೂಲಿ ಶಾಲೆ ಬಿಟ್ಟು ಧಾರ್ಮಿಕ ಶಿಕ್ಷಣಕ್ಕೆ ಸೇರಿದ್ದ ನಸೀಮಾ ಬಳಿಕ ಅದಕ್ಕೆ ಹೊಂದಿಕೊಂಡಿದ್ದಳು. ಈಗ ಧಾರ್ಮಿಕ ಶಿಕ್ಷಣದ ಜೊತೆ 9ನೇ ಕ್ಲಾಸ್ ಕಲಿಯುತ್ತಿರುವ ನಸೀಮಾ, ಈ ಬಾರಿ ದುಬೈನಲ್ಲಿ ನಡೆಯುವ ಖುರಾನ್ ಕಂಠಪಾಠ ಸ್ಪರ್ಧೆಗೆ ಭಾರತದ ಏಕೈಕ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾಳೆ.

    ಶೈಖಾ ಫಾತಿಮಾ ಬಿನ್ ಮುಬಾರಕ್ ಹೆಸರಿನ ಅಂತಾರಾಷ್ಟ್ರೀಯ ದುಬೈ ಹೋಲಿ ಕುರಾನ್ ಅವಾರ್ಡ್ ಸ್ಪರ್ಧೆ ನ.4ರಿಂದ 16ರ ವರೆಗೆ ದುಬೈನಲ್ಲಿ ನಡೆಯಲಿದ್ದು, ಆರು ತಿಂಗಳ ವಿವಿಧ ಪ್ರಕ್ರಿಯೆಗಳ ಬಳಿಕ ವಿಶ್ವದ 63 ಸ್ಪರ್ಧಾಳುಗಳ ಜೊತೆಗೆ ಭಾರತದಿಂದ ನಸೀಮಾ ಅವರನ್ನು ಏಕೈಕ ಪ್ರತಿನಿಧಿಯಾಗಿ ಯುಎಇ ಸರಕಾರ ಆಯ್ಕೆ ಮಾಡಿದೆ. ಮಹಿಳೆಯರಿಗಾಗಿ ಇರುವ ಸ್ಪರ್ಧೆಯಲ್ಲಿ ಗೆದ್ದವರಿಗೆ 50 ಲಕ್ಷ ರೂ. ಬಹುಮಾನ ಇದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಇಂದಿನಿಂದಲೇ ಶಿಕ್ಷಕರ ವರ್ಗಾವಣೆ ಆರಂಭ: ಎನ್. ಮಹೇಶ್

    ಇಂದಿನಿಂದಲೇ ಶಿಕ್ಷಕರ ವರ್ಗಾವಣೆ ಆರಂಭ: ಎನ್. ಮಹೇಶ್

    ಚಾಮರಾಜನಗರ: ಇಂದಿನಿಂದಲೇ ಶಿಕ್ಷಕರ ವರ್ಗಾವಣೆ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಎನ್ ಮಹೇಶ್ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿಕ್ಷಕರ ವರ್ಗಾವಣೆಯಲ್ಲಿ ಸಣ್ಣಪುಟ್ಟ ಗೊಂದಲಗಳು ಇದ್ದವು. ಹೀಗಾಗಿ ವರ್ಗಾವಣೆಯನ್ನು ಎರಡು ದಿನಗಳ ಕಾಲ ತಡೆ ಹಿಡಿಯಲಾಗಿತ್ತು. ಇದೀಗ ಕಾನೂನು ತಜ್ಞರ ಅಭಿಪ್ರಾಯ ಪಡೆದ ನಂತರ ಗೊಂದಲ ಬಗೆಹರಿದಿದೆ. ಶಿಕ್ಷಕರ ಅನುಕೂಲ ಹಾಗೂ ಶಾಲೆಯ ಸಮರ್ಪಕ ನಿರ್ವಹಣೆಗೆ ವರ್ಗಾವಣೆ ಮಾಡಲಾಗುತ್ತಿದೆ. ಒಂದು ವೇಳೆ ಶಿಕ್ಷಕರು ವರ್ಗಾವಣೆ ಮಾಡಬೇಡಿ ಎಂದು ಹೇಳುವುದಕ್ಕೆ ಗಂಭೀರವಾದ ಕಾರಣ, ಮಾನವೀಯತೆ, ಆಡಳಿತಾತ್ಮಕ ಕಾರಣಗಳನ್ನು ಹೊಂದಿರಬೇಕು. ಆ ಕಾರಣಗಳನ್ನು ಬಿಓ ಮೂಲಕ ಆನ್‍ಲೈನ್ ಅಲ್ಲಿ ನಮಗೆ ಅಪ್ಲೋಡ್ ಮಾಡಬೇಕು ಎಂದು ಹೇಳಿದರು.

    ಬಿಓಗಳಿಗೆ ಮೊದಲೇ ಎಚ್ಚರಿಕೆಯನ್ನು ನೀಡಿದ್ದೇನೆ. ಈಗಲೂ ಕೂಡ ಎಚ್ಚರಿಕೆಯನ್ನು ನೀಡುತ್ತಿದ್ದೇನೆ. ಒಂದು ಸಣ್ಣ ತಪ್ಪನ್ನು ಮಾಡದೇ ಇಲಾಖೆಗೆ ತಿಳಿಸಬೇಕು. ಲೋಪ ಎಸಗಿದರೆ ಬಿಓಗಳನ್ನು ಸ್ಥಳದಲ್ಲಿ ಅಮಾನತು ಮಾಡುತ್ತೇನೆ ಎಂದು ತೀವ್ರವಾಗಿ ಎಚ್ಚರಿಕೆಯನ್ನು ನೀಡಿದರು.

    ಈಗಾಗಲೇ ಶಿಕ್ಷಕರ ವರ್ಗಾವಣೆಗೆ 2 ಸಾವಿರ ತಿರಸ್ಕಾರಗಳು ಬಂದಿದೆ. ಅದರಲ್ಲಿ 100-150 ಶಿಕ್ಷಕರ ವರ್ಗಾವಣೆ ಬೇಡವೆಂದು ಗಂಭೀರವಾದ ಕಾರಣಗಳನ್ನು ಹೊಂದಿದೆ. ಮಾನವೀಯತೆಯಿಂದ ಸ್ವೀಕರಿಸಿ ಇನ್ನುಳಿದ ವರ್ಗಾವಣೆ ಪ್ರಕ್ರಿಯೆಯನ್ನು ಪ್ರಾರಂಭ ಮಾಡುತ್ತೇವೆ. ವರ್ಗಾವಣೆ ಇಂದಿನಿಂದಲೇ ಶುರುವಾಗುತ್ತೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸ್ವಚ್ಛ ಕ್ಯಾಂಪಸ್ ವಿಭಾಗದಲ್ಲಿ ರೇವಾ ವಿವಿಗೆ ದೇಶದಲ್ಲೇ 6ನೇ ರ‍್ಯಾಂಕ್

    ಸ್ವಚ್ಛ ಕ್ಯಾಂಪಸ್ ವಿಭಾಗದಲ್ಲಿ ರೇವಾ ವಿವಿಗೆ ದೇಶದಲ್ಲೇ 6ನೇ ರ‍್ಯಾಂಕ್

    ಬೆಂಗಳೂರು: ವಿಶಾಲ ಕ್ಯಾಂಪಸ್ ಹೊಂದಿರುವ ರೇವಾ ವಿಶ್ವವಿದ್ಯಾಲಯಕ್ಕೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಂಎಚ್‌ಆರ್‌ಡಿ) `ಸ್ವಚ್ಛ ಕ್ಯಾಂಪಸ್’ಗಾಗಿ 6ನೇ ರ‍್ಯಾಂಕ್ ನೀಡಿ ಪುರಸ್ಕರಿಸಿದೆ.

    ಎಂಎಚ್‌ಆರ್‌ಡಿ ರಾಷ್ಟ್ರೀಯ ಮಟ್ಟದಲ್ಲಿ ವಿಶ್ವವಿದ್ಯಾಲಯಗಳ ಸಮೀಕ್ಷೆ ನಡೆಸಿದ್ದು, ರೇವಾ ವಿಶ್ವವಿದ್ಯಾಲಯವೂ ಸ್ಥಾನ ಗಿಟ್ಟಿಸಿಕೊಂಡಿದೆ. ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಸಚಿವ ಪ್ರಕಾಶ್ ಜಾವಡೇಕರ್ ಅವರು ರ‍್ಯಾಂಕಿಂಗ್ ಪ್ರಮಾಣ ಪತ್ರವನ್ನು ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಪಿ.ಶ್ಯಾಮರಾಜು ಅವರಿಗೆ ನೀಡಿ ಗೌರವಿಸಿದ್ದಾರೆ.

    ಈ ಕುರಿತು ಮಾತನಾಡಿದ ಡಾ.ಪಿ.ಶ್ಯಾಮರಾಜು ಅವರು, ನಮ್ಮ ವಿಶ್ವವಿದ್ಯಾಲಯ ಪರಿಸರ ಸ್ನೇಹಿಯಾಗಿದ್ದು, ಪ್ಲಾಸ್ಟಿಕ್ ಬ್ಯಾನರ್ ಗಳನ್ನು ಬಳಕೆ ನಿಷೇಧಿಸಿದ್ದೇವೆ. ವಿದ್ಯಾರ್ಥಿಗಳ ಸಂಖ್ಯೆ ಅನುಗುಣವಾಗಿ ನಿರ್ಮಿಸಿರುವ ಶೌಚಾಲಯ, ನೀರಿನ ವ್ಯವಸ್ಥೆ, ಮಳೆ ನೀರಿನ ಕೊಯ್ಲು, ಸೌರಶಕ್ತಿ ಬಳಕೆ, ಉದ್ಯಾನ ಪರಿಗಣಿಸಿ ಎಂಎಚ್‌ಆರ್‌ಡಿಯು ರ‍್ಯಾಂಕಿಂಗ್ ನೀಡಿದೆ ಎಂದು ತಿಳಿಸಿದ್ದಾರೆ.

    ದೇಶದಲ್ಲಿ ಒಟ್ಟು 6,029 ವಿದ್ಯಾಲಯಗಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ್ದವು. ಹಲವಾರು ಹಂತಗಳ ಮೂಲಕ 205 ಶಿಕ್ಷಣ ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿತ್ತು. ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತು (ಎಐಸಿಟಿಇ), ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಅಧಿಕಾರಿಗಳ ತಂಡ ಕಾಲೇಜುಗಳಿಗೆ ಭೇಟಿ ನೀಡಿ ಕ್ಯಾಂಪಸ್ ಪರಿಶೀಲಿಸಿತ್ತು. ಆ ತಂಡ ಅಂತಿಮವಾಗಿ 51 ಶಿಕ್ಷಣ ಸಂಸ್ಥೆಗಳಿಗೆ ವಿವಿಧ ರೀತಿಯ ಪ್ರಶಸ್ತಿ ನೀಡಿ ಗೌರವಿಸಿದೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮುಂದೆ ಎಲೆಕ್ಟ್ರಿಕ್, ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಓದಿದವರಿಗೆ ಬಂಪರ್!

    ಮುಂದೆ ಎಲೆಕ್ಟ್ರಿಕ್, ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಓದಿದವರಿಗೆ ಬಂಪರ್!

    ನವದೆಹಲಿ: ಐಟಿ ಕಂಪೆನಿಗಳಿಂದಾಗಿ ಸಾಫ್ಟ್ ವೇರ್ ಎಂಜಿನಿಯರಿಂಗ್ ಓದಿದವರಿಗೆ ಬೇಡಿಕೆ ಈಗ ಹೆಚ್ಚಿದೆ. ಆದರೆ ಈ ಟ್ರೆಂಡ್ ಮುಂದಿನ ದಿನಗಳಲ್ಲಿ ಬದಲಾವಣೆಯಾಗಲಿದ್ದು ಎಲೆಕ್ಟ್ರಿಕ್, ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಓದಿದವರಿಗೆ ಬಂಪರ್ ಹೊಡೆಯುವ ಸಾಧ್ಯತೆಯಿದೆ.

    ಹೌದು, ಭರತದಲ್ಲಿ ಮುಂದೆ ಆಟೋಮೊಬೈಲ್ ಕ್ಷೇತ್ರದಲ್ಲಿ ಕ್ರಾಂತಿ ಆಗಲಿದ್ದು, ಎಲೆಕ್ಟ್ರಿಕ್ ವಾಹನಗಳು ರಸ್ತೆಗೆ ಇಳಿಯಲಿದೆ. ಹೀಗಾಗಿ ಎಲ್ಲ ಆಟೋಮೊಬೈಲ್ ಕಂಪೆನಿಗಳು ಎಲೆಕ್ಟ್ರಿಕ್ ವಾಹನಗಳನ್ನು ತಯಾರಿಸಲು ಮುಂದಾಗುತ್ತಿದ್ದು ಈ ಕ್ಷೇತ್ರಕ್ಕೆ ಈಗ ಪ್ರತಿಭಾನ್ವಿತರ ಕೊರತೆ ಉಂಟಾಗಿದೆ. ಇದನ್ನೂ ಓದಿ:ಎಲೆಕ್ಟ್ರಿಕ್ ವಾಹನಗಳಿಗೆ ಯಾವುದೇ ಪರ್ಮಿಟ್ ಇಲ್ಲ: ನಿತಿನ್ ಗಡ್ಕರಿ

     

    ಎಲೆಕ್ಟ್ರಿಕ್, ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ವಿಭಾಗದಲ್ಲಿ ಈಗ 5 ಸಾವಿರಕ್ಕೂ ಹೆಚ್ಚು ಮಂದಿಯ ಬೇಡಿಕೆ ಇದ್ದು, ಮುಂದಿನ ಎರಡು ವರ್ಷದಲ್ಲಿ ಈ ಸಂಖ್ಯೆ 15 ಸಾವಿರ ತಲುಪುವ ಸಾಧ್ಯತೆಯಿದೆ ಎಂದು ದೇಶದ ದೊಡ್ಡ ಉದ್ಯೋಗ ಪೋರ್ಟಲ್ ಸಂಸ್ಥೆಯಾಗಿರುವ ಟೀಮ್‍ಲೀಸ್ ಅಂದಾಜಿಸಿದೆ.

    ಈಗಾಗಲೇ ಭಾರತದಲ್ಲಿ 1 ಸಾವಿರಕ್ಕೂ ಹೆಚ್ಚು ಎಂಜಿನಿಯರ್ ಗಳು ಎಲೆಕ್ಟ್ರಿಕ್ ವಾಹನವನ್ನು ಅಭಿವೃದ್ಧಿ ಪಡಿಸುವ ಸಂಬಂಧ ಈ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಟಾಟಾ ಮೋಟಾರ್ಸ್, ಮರ್ಸಿಡಿಸ್ ಬೆಂಜ್, ಮಹೀಂದ್ರಾ, ಮಾರುತಿ ಕಂಪೆನಿಗಳು ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ತುದಿಗಾಲಿನಲ್ಲಿ ನಿಂತಿದೆ. ಇದನ್ನೂ ಓದಿ:  2030ರ ವೇಳೆಗೆ ಭಾರತದಲ್ಲಿ ಒಂದೇ ಒಂದು ಪೆಟ್ರೋಲ್, ಡೀಸೆಲ್ ಕಾರು ಮಾರಾಟವಾಗಲ್ಲ

    ಮಹೀಂದ್ರಾ ಮತ್ತು ಮಹೀಂದ್ರಾ ಕಂಪೆನಿಯ ಚೀಫ್ ಪೀಪಲ್ ಆಫೀಸರ್ ರಾಜೇಶ್ವರ್ ತ್ರಿಪಾಠಿ ಪ್ರತಿಕ್ರಿಯಿಸಿ, ಎಲೆಕ್ಟ್ರಿಕ್ ವಾಹನ ಕ್ಷೇತ್ರ ಉದಯೋನ್ಮುಕ ಉದ್ಯಮವಾಗಿದ್ದು, ಪ್ರತಿಭಾನ್ವಿತರನ್ನು ಹುಡುಕುವುದು ಬಹಳ ಸವಾಲಿನ ಕೆಲಸ. ಮುಂದಿನ ದಿನದಲ್ಲಿ ಈ ಕ್ಷೇತ್ರ ಭಾರೀ ಸಂಖ್ಯೆಯ ಉದ್ಯೋಗಿಗಳನ್ನು ಬೇಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಲೀಟರ್ ಪೆಟ್ರೋಲ್ ಬೆಲೆ 55 ರೂ., ಡೀಸೆಲ್ 50 ರೂ. ಆಗುತ್ತೆ: ಗಡ್ಕರಿ

    ಮುಂದಿನ 2 ವರ್ಷದಲ್ಲಿ 15 ಸಾವಿರ ಮಂದಿಯ ಬೇಡಿಕೆಯಿದೆ. ಆದರೆ 10 ಸಾವಿರ ಮಂದಿಯ ಪೂರೈಕೆ ಮಾತ್ರ ಆಗಲಿದೆ. ಸದ್ಯಕ್ಕೆ ಈಗ 1 ಸಾವಿರ ಎಂಜಿನಿಯರ್ ಗಳು ಮಾತ್ರ ಎಲೆಕ್ಟ್ರಿಕ್ ವಾಹನ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಆಟೋಮೊಬೈಲ್ ಕಂಪೆನಿಗಳು ಈಗಾಗಲೇ ಐಐಟಿ, ಎನ್‍ಐಟಿಕೆ ಮತ್ತು ಕೇಂದ್ರ ಸರ್ಕಾರದ ಅನುದಾನ ಪಡೆಯುವ ಕಾಲೇಜುಗಳಿಗೆ ಭೇಟಿ ನೀಡಿ ಕ್ಯಾಂಪಸ್ ಸೆಲೆಕ್ಷನ್ ಮಾಡುತ್ತಿದೆ ಎಂದು ಟೀಮ್ ಲೀಸ್ ಸಹ ಸಂಸ್ಥಾಪಕ ಋತುಪರ್ಣ ಚಕ್ರವರ್ತಿ ಹೇಳಿದ್ದಾರೆ. ಇದನ್ನೂ ಓದಿ: ಇನ್ನು ಐದು ವರ್ಷದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 30 ರೂ. ಆಗುತ್ತೆ!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶಿಕ್ಷಣಕ್ಕೆ ಸಹಾಯ ಮಾಡಿ ಅನ್ನುತ್ತಿದ್ದಾಳೆ ಪ್ರತಿಭಾವಂತ ಬಾಲಕಿ

    ಶಿಕ್ಷಣಕ್ಕೆ ಸಹಾಯ ಮಾಡಿ ಅನ್ನುತ್ತಿದ್ದಾಳೆ ಪ್ರತಿಭಾವಂತ ಬಾಲಕಿ

    ಬೆಂಗಳೂರು: ಶಿಕ್ಷಣಕ್ಕಾಗಿ ಸಹಾಯ ಮಾಡಿ ಅಂತಾ 13 ವರ್ಷದ ಬಾಲಕಿ ಇಂದು ‘ಬೆಳಕು’ ಕಾರ್ಯಕ್ರಮಕ್ಕೆ ಬಂದಿರುವ ವಿದ್ಯಾರ್ಥಿನಿ ಹೆಸರು ಭವ್ಯಶ್ರೀ.

    ಬೆಂಗಳೂರು ಹೊರವಲಯದ ಅನೇಕಲ್ ತಾಲೂಕಿನ ನೆರಳೂರಿನಲ್ಲಿ ವಾಸಿಸುತ್ತಿದ್ದಾಳೆ. ತಂದೆ 8 ವರ್ಷಗಳ ಹಿಂದೆ ತೀರಿ ಹೋಗಿದ್ದು ತಾಯಿ ಯಲ್ಲಮ್ಮ ಮಗಳ ಶಿಕ್ಷಣಕ್ಕಾಗಿ ಕೂಲಿ ಕೆಲಸ ಮಾಡಿ ಆನೇಕಲ್‍ನ ಸ್ವಾಮಿ ವಿವೇಕಾನಂದ ಶಾಲೆಗೆ ಸೇರಿಸಿದ್ದಾರೆ.

    ಆಟ ಪಾಠದಲ್ಲಿ ತುಂಬಾ ಚೂಟಿಯಾಗಿರುವ ಭವ್ಯಶ್ರೀ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ತಾಯಿ ಯಲ್ಲಮ್ಮಗೆ ಕಣ್ಣಿನ ಕ್ಯಾನ್ಸರ್ ಕೊನೆ ಹಂತ ತಲುಪಿದ್ದು ತನ್ನ ಕೆಲಸ ತಾನು ಮಾಡಿಕೊಳ್ಳಲಾಗದ ಪರಿಸ್ಥಿತಿಯಲ್ಲಿದ್ದಾರೆ. ತಾಯಿ ಯಲ್ಲಮ್ಮಗೆ ಚಿಕಿತ್ಸೆ ಪಡೆಯಲು ಆಗದೇ, ಮಗಳ ವಿದ್ಯಾಭ್ಯಾಸಕ್ಕೆ ಶುಲ್ಕ ಪಾವತಿಸಲಾಗದೇ ಸಂಕಷ್ಟ ಅನುಭವಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಭವ್ಯಶ್ರೀ ತಾಯಿಯನ್ನು ನೋಡಿಕೊಳ್ಳೋದ್ರ ಜೊತೆಗೆ ವಿದ್ಯಾಭ್ಯಾಸ ಮುಂದುವರಿಸಬೇಕಾಗಿದೆ.

    ಕಡು ಬಡತನದಲ್ಲಿರುವ ಈ ಕುಟುಂಬಕ್ಕೆ ಸೋದರಮಾವ ಆಸರೆಯಾಗಿದ್ದಾರೆ. ವಿದ್ಯಾರ್ಥಿನಿ ಭವ್ಯಶ್ರೀ ವಿದ್ಯಾಭ್ಯಾಸಕ್ಕೆ ಹಾಗೂ ತಾಯಿಯ ಆರೈಕೆಗೆ ಹಣವಿಲ್ಲದೆ ಪರದಾಡುತ್ತ ನೆರವಿಗಾಗಿ ಅಂಗಲಾಚುತ್ತಿದ್ದಾಳೆ. ಯಾರಾದ್ರೂ ದಾನಿಗಳು ಸಹಾಯ ಮಾಡಿ ಎಂದು ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮ ಮೂಲಕ ನೆರವು ಬಯಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=CJKaHx7Sw0A

  • ಶಿಕ್ಷಕಿಯಾಗಿ ಸ್ಲಂ ಮಕ್ಕಳಿಗೆ ವಿದ್ಯೆ ಕಲಿಸಬೇಕೆಂಬ ಕನಸು ಕಂಡಿರುವ ಯುವತಿಗೆ ಬೇಕಿದೆ ಸಹಾಯ

    ಶಿಕ್ಷಕಿಯಾಗಿ ಸ್ಲಂ ಮಕ್ಕಳಿಗೆ ವಿದ್ಯೆ ಕಲಿಸಬೇಕೆಂಬ ಕನಸು ಕಂಡಿರುವ ಯುವತಿಗೆ ಬೇಕಿದೆ ಸಹಾಯ

    ಬೆಳಗಾವಿ: ಕೊಳಚೆ ಪ್ರದೇಶದಲ್ಲಿ ವಾಸಮಾಡುತ್ತಿದ್ದರು, ಉನ್ನತ ವ್ಯಾಸಂಗ ಪಡೆದು ತನ್ನಂತೆ ಸ್ಲಂನಲ್ಲಿ ವಾಸಿಸುವ ಮಕ್ಕಳಿಗೆ ಶಿಕ್ಷಣ ನೀಡಬೇಕೆಂಬ ಬೆಳಗಾವಿಯ ವಿದ್ಯಾರ್ಥಿನಿ ಕನಸಿಗೆ ಬಡತನ ಅಡ್ಡಿಯಾಗಿದೆ.

    ಮನೆಯಲ್ಲಿ ಬಡತನವಿದ್ದರೂ ಅಂಜಲಿ ಕೊಂಡುರ್ ತನ್ನ ಕಷ್ಟಗಳನ್ನ ಬದಿಗಿರಿಸಿ ಎಸ್‍ಎಸ್‍ಎಲ್‍ಸಿಯಲ್ಲಿ ಶೇಕಡಾ 78.88% ಹಾಗೂ ಪಿಯುಸಿ ಕಲಾ ವಿಭಾಗದಲ್ಲಿ ಶೇಕಡಾ 82.66% ಅಂಕ ಪಡೆದು ಇಡೀ ಕಾಲೇಜಿಗೆ ಫಸ್ಟ್ ರ‍್ಯಾಂಕ್‌ ಪಡೆದು ಕೀರ್ತಿ ತಂದುಕೊಟ್ಟಿದ್ದಾಳೆ.

    ಬೆಳಗಾವಿಯ ಕಣಬರ್ಗಿಯ ಸ್ಲಂನ ಸಣ್ಣ ಗುಡಿಸಲು ಮನೆಯಲ್ಲಿ ಇಬ್ಬರು ಸಹೋದರರು ಮತ್ತು ತಾಯಿ ಜೊತೆ ಅಂಜಲಿ ವಾಸವಿದ್ದಾಳೆ. ಎಲ್ಲರಂತೆ ಶಾಲೆಗೆ ತೆರಳಿ ಉತ್ತಮ ಶಿಕ್ಷಣ ಪಡೆಯಬೇಕೆಂಬ ಮಗಳ ಕನಸಿಗೆ ತಾಯಿ ರೇಣುಕಾ ಬೆಂಬಲ ನೀಡಿದ ಪರಿಣಾಮ ಶಿಕ್ಷಣ ಈಗ ಕಷ್ಟದಲ್ಲಿ ಸಾಗಿಕೊಂಡು ಬಂದಿದೆ.

    10 ವರ್ಷಗಳ ಹಿಂದೆ ತಂದೆ ಮಹೇಶ್ ಕುಡಿತದ ಚಟಕ್ಕೆ ಬಿದ್ದು ತೀರಿಹೋಗಿದ್ದು, ಇಡೀ ಸಂಸಾರದ ಜವಾಬ್ದಾರಿಯನ್ನು ತಾಯಿ ರೇಣುಕಾ ನೋಡಿಕೊಳ್ಳುತ್ತಿದ್ದಾರೆ. ಊರೂರು ತೆರಳಿ ವಾಲೆ, ಬಳೆ, ಪುಸ್ತಕ ಮಾರಾಟ ಮಾಡಿ ಬಂದ ಹಣದಿಂದ ಮೂರು ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುತ್ತಿದ್ದಾರೆ.

    ಸ್ಲಂನಲ್ಲಿ ಯಾರೂ ಓದದೇ ಇದ್ದರೂ ಛಲದಿಂದ ಓದಿ ಸಾಧಿಸಿ ತೋರಿಸಿರುವ ಪ್ರತಿಭೆಯಾಗಿರುವ ಅಂಜಲಿ ಮುಂದೆ ಓದಿ ಟೀಚರ್ ಆಗಿ ಸ್ಲಂನ ಮಕ್ಕಳಿಗೆ ವಿದ್ಯೆ ಕಲಿಸಬೇಕೆಂಬ ಕನಸು ಕಂಡಿದ್ದಾಳೆ. ಆದರೆ ಉನ್ನತ ವ್ಯಾಸಂಗ ಪಡೆಯಲು ಬಡತನ ಅಡ್ಡಿಯಾಗಿದೆ. ಮೂರು ಮಕ್ಕಳನ್ನು ಕಷ್ಟ ಪಟ್ಟು ಓದಿಸುತ್ತಿರುವ ತಾಯಿ, ಅಂಜಲಿಯ ಮುಂದಿನ ವಿದ್ಯಾಭ್ಯಾಸಕ್ಕೆ ಹಣ ಒದಗಿಸಲಾಗದೇ ಓದನ್ನು ನಿಲ್ಲಿಸಿದ್ದಾಳೆ.

    ಅಂಜಲಿಗೆ ಶಿಕ್ಷಕಿಯಾಗಬೇಕೆಂಬ ಕನಸು ಇದ್ದು, ಯಾರಾದರು ದಾನಿಗಳು ಮುಂದಿನ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಿ ಎಂದು ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದ ಮೂಲಕ ತಾಯಿ ರೇಣುಕಾ ಕೇಳಿಕೊಳ್ಳುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=N7Wztkxi_tU

  • ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಪಣ-ಸಂಬಳದ ಅರ್ಧ ಹಣ ಶಾಲೆಗೆ ಮೀಸಲಿಟ್ಟ ಶಿಕ್ಷಕ

    ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಪಣ-ಸಂಬಳದ ಅರ್ಧ ಹಣ ಶಾಲೆಗೆ ಮೀಸಲಿಟ್ಟ ಶಿಕ್ಷಕ

    ಗದಗ: ಅನೇಕ ಶಿಕ್ಷಕರು ಬಿಲ್ ಮತ್ತು ಬೆಲ್‍ಗೆ ಸೀಮಿತರಾಗಿದ್ದಾರೆ ಅನ್ನೋ ಆರೋಪ ಇದೆ. ಆದರೆ ಗದಗನ ನರೇಗಲ್ ಶಾಲೆಯ ಶಿಕ್ಷಕ ಡಿ.ಎಚ್.ಪರಂಗಿ ಅವರು ತಮ್ಮ ಆದಾಯದ ಅರ್ಧದಷ್ಟು ಹಣವನ್ನು ಬಡಮಕ್ಕಳ ಶಿಕ್ಷಣ, ಪರಿಸರ, ಸಾಮಾಜಿಕ ಕಾರ್ಯಕ್ಕೆ ಖರ್ಚು ಮಾಡುತ್ತಿದ್ದಾರೆ.

    ಪರಂಗಿಯವರು ತಾವೇ ಶಿಕ್ಷಕರನ್ನು ನೇಮಿಸಿಕೊಂಡು ಇಂಗ್ಲಿಷ್ ಮೀಡಿಯಮ್‍ನ ಎಲ್‍ಕೆಜಿ, ಯುಕೆಜಿ ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿ ನೀಡುತ್ತಿದ್ದಾರೆ. ಶಾಲೆಯ ಎಲ್ಲ ಮಕ್ಕಳಿಗೆ ಬಟ್ಟೆ, ಟೈ, ಶೂ, ಬ್ಯಾಗ್ ಹಾಗೂ ನೋಟ್‍ಬುಕ್ ಹಾಗೂ ಸಿಬ್ಬಂದಿಗೆ ತಮ್ಮ ಸ್ವಂತ ಹಣದಲ್ಲಿ ವೇತನ ನೀಡುತ್ತಿದ್ದಾರೆ. ಲ್ಯಾಪ್‍ಟಾಪ್, ಪ್ರೊಜೆಕ್ಟರ್, ಬ್ಲೂಟೂತ್, ಟಿವಿ ಖರೀದಿಸಿ 5 ರಿಂದ 7 ನೇ ತರಗತಿ ಮಕ್ಕಳಿಗೆ ಪಾಠ ಮಾಡುವ ವ್ಯವಸ್ಥೆ ಕಲ್ಪಿಸಿದ್ದಾರೆ.

    ಭಿಕ್ಷೆ ಬೇಡುವ ಮಕ್ಕಳನ್ನ ಶಾಲೆಗೆ ಕರೆತಂದು, ಅಕ್ಷರ ಪಾತ್ರೆ ನೀಡಿದ್ದಾರೆ. ಗುಳೆ ಹೋಗುವ ಕುಟುಂಬದ ಮಕ್ಕಳನ್ನ ಶಾಲೆಗೆ ಸೇರಿಸುವ ನಿರಂತರ ಪ್ರಯತ್ನ ಮಾಡಿದ್ದಾರೆ. ಪ್ರತಿವರ್ಷ ಹತ್ತಾರು ಬಡ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ದತ್ತು ಪಡೆದು ಅವರ ಶಿಕ್ಷಣದ ಜವಾಬ್ದಾರಿಯನ್ನು ನಿಭಾಯಿಸುವ ಮೂಲಕ ಗುರುವಿನ ಪದಕ್ಕೆ ನಿಜವಾದ ಅರ್ಥ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=OJTqI8zOGMc

  • ರಾಮಯ್ಯ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಘಟಿಕೋತ್ಸವ

    ರಾಮಯ್ಯ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಘಟಿಕೋತ್ಸವ

    ಬೆಂಗಳೂರು: ರಾಮಯ್ಯ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಆವರಣದಲ್ಲಿ ಬಿಇ, ಬಿಆರ್ಕ್, ಎಂ.ಟೆಕ್, ಎಂ. ಆರ್ಕ್, ಎಂಬಿಎ, ಮತ್ತು ಎಂಸಿಎಯ ಘಟಿಕೋತ್ಸವ ಸಮಾರಂಭದಲ್ಲಿ ಚೆನ್ನೈನ ಅಣ್ಣಾ ವಿಶ್ವ ವಿದ್ಯಾಲಯದ ಉಪ ಕುಲಪತಿಗಳಾದ ಡಾ. ಎಂ.ಕೆ. ಸೂರಪ್ಪ ಪದವಿ ಪ್ರದಾನ ಮಾಡಿದರು.

    13 ಬಿಇ , 45 ವಿವಿಧ ಸ್ನಾತಕೋತ್ತರ ವಿಭಾಗದಲ್ಲಿ ಒಟ್ಟು 1,200 ವಿದ್ಯಾರ್ಥಿಗಳಿಗೆ ಪದವಿ ಪಡೆದರು. ಇದರಲ್ಲಿ ವಿವಿಧ ವಿಭಾಗದಲ್ಲಿ 29 ವಿದ್ಯಾರ್ಥಿಗಳಿಗೆ ಚಿನ್ನ, 16 ಬೆಳ್ಳಿ, 25 ಕಂಚಿನ ಪದಕ ಪಡೆದರು.

    ಸಮಾರಂಭದಲ್ಲಿ ಡಾ. ಎಂ.ಕೆ. ಸೂರಪ್ಪ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಆರೋಗ್ಯ, ಶಿಕ್ಷಣದಲ್ಲಿ ದೇಶ ಹಿಂದುಳಿದಿದ್ದು, ಇದರ ಕಡೆ ದೇಶ ಅಭಿವೃದ್ಧಿ ಬಗ್ಗೆ ಗಮನ ಹರಿಸಬೇಕಾಗಿದೆ. ಅಮೆರಿಕ, ಚೀನಾ, ಜಪಾನ್ ರಾಷ್ಟ್ರಗಳು ತಂತ್ರಜ್ಞಾನದಲ್ಲಿ ಅಭಿವೃದ್ಧಿ ಹೊಂದಿವೆ. ಪಾಕಿಸ್ತಾನ, ಶ್ರೀಲಂಕಾಗಿಂತ ಭಾರತ ತಂತ್ರಜ್ಞಾನದಲ್ಲಿ ಮುಂದುವರಿದಿದ್ದು ಇನ್ನು ಹೆಚ್ಚು ಆವಿಷ್ಕಾರಕ್ಕೆ ವಿದ್ಯಾರ್ಥಿಗಳು ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

    ಕೇರಳ, ಕರ್ನಾಟಕ, ಚೆನ್ನೈನಲ್ಲಿ ಸಂಭವಿಸುತ್ತಿರುವ ಪ್ರಕೃತಿ ವಿಕೋಪದಿಂದ ಮನುಕುಲ ತತ್ತರಿಸಿ ಹೋಗಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾದರೆ ವಿಜ್ಞಾನ- ತಂತ್ರಜ್ಞಾನದ ಪರಿಹಾರ ಕಂಡುಕೊಳ್ಳಬೇಕಾಗಿದೆ. ಕಳೆದ 30 ವರ್ಷಗಳಿಂದೆ ಕಾಲರಾ, ಮಲೇರಿಯಾದಂತಹ ರೋಗಗಳಿಂದ ಮಾನವ ಬಳಲುತ್ತಿದ್ದ. ಇಂದು ನಿಫಾ, ಡೆಂಗ್ಯೂ ಸೇರಿದಂತೆ ವಿವಿಧ ಮಾರಕ ರೋಗಗಳಿಗೆ ಸಂಶೋಧನೆಯಿಂದ ಪರಿಹಾರ ಕಂಡುಕೊಳ್ಳಲಾಗಿದೆ. ಹೀಗಾಗಿ ಮುಂದುವರಿಯುತ್ತಿರುವ ಕಾಲಘಟ್ಟದಲ್ಲಿ ಇಂದಿನ ಯುವಕರು ಹೊಸ ಆವಿಷ್ಕಾರಗಳಿಗೆ ಹೆಚ್ಚು ಗಮನ ಹರಿಸಿ ದೇಶ ಅಭಿವೃದ್ಧಿಯತ್ತ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

    ರಾಮಯ್ಯ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಲವು ತಂತ್ರಜ್ಞಾನದ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದು, ಹೊಸ ಹೊಸ ಆವಿಷ್ಕಾರಗಳಿಗೆ ಇನ್ನಷ್ಟು ಪ್ರಾಮುಖ್ಯತೆ ನೀಡುತ್ತಿದೆ. ಅಲ್ಲದೆ, ದೇಶ ಅಭಿವೃದ್ಧಿಗೆ ವಿಜ್ಞಾನ-ತಂತ್ರಜ್ಞಾನ ಹಾಗೂ ಆರ್ಥಿಕಾಭಿವೃದ್ಧಿಗೆ ಆವಿಷ್ಕಾರ ಪ್ರಮುಖ ಅಸ್ತ್ರವಾಗಿದೆ ಎಂದು ಅಭಿಪ್ರಾಯಪಟ್ಟರು.

    ಈ ವೇಳೆ ಗೋಕುಲ ಅಣ್ಣಾ ಎಜುಕೇಷನ್ ಫೌಂಡೆಷನ್ ಅಧ್ಯಕ್ಷ ಡಾ. ಎಂ.ಆರ್ ಜಯರಾಮ್, ರಾಮಯ್ಯ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನಿರ್ದೇಶಕರಾದ ಎಂ.ಆರ್. ರಾಮಯ್ಯ, ಎಂ.ಆರ್. ಸೀತಾರಾಮ್, ಮುಖ್ಯ ಕಾರ್ಯನಿರ್ವಣಾಧಿಕಾರಿ ಬಿ.ಎಸ್.ರಾಮಪ್ರಸಾದ್, ಪ್ರಾಂಶುಪಾಲರಾದ ಡಾ. ಎನ್.ವಿ.ಆರ್. ನಾಯ್ಡು ಸೇರಿದಂತೆ ಇತರರು ಇದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತಾಯಿಯನ್ನು ಕೊಂದ ತಂದೆಯನ್ನೇ ಜೈಲಿಗೆ ಕಳುಹಿಸಿದ ಮಗ ಗ್ರಾಮದಲ್ಲಿ ಈಗ ಹೀರೋ!

    ತಾಯಿಯನ್ನು ಕೊಂದ ತಂದೆಯನ್ನೇ ಜೈಲಿಗೆ ಕಳುಹಿಸಿದ ಮಗ ಗ್ರಾಮದಲ್ಲಿ ಈಗ ಹೀರೋ!

    ಚಿತ್ರದುರ್ಗ: ಮಗನೊಬ್ಬ ತನ್ನ ತಾಯಿಯನ್ನ ಕೊಂದ ತಂದೆಯನ್ನೆ ಜೈಲಿಗೆ ಕಳಿಸಿದ್ದು, ಆತನಿಗೆ ಅನಾಥ ಪ್ರಜ್ಞೆ ಕಾಡದಿರಲೆಂದು ಖಾಸಗಿ ಶಾಲೆಯೊಂದು ಆತನನ್ನು ದತ್ತು ಪಡೆದಿದೆ.

    ಬಗ್ಗಲರಂಗವ್ವನಹಳ್ಳಿ ಗ್ರಾಮದ ನಾಲ್ಕು ವರ್ಷದ ಬಾಲಕ ಧನುಷ್ ತಾಯಿ ಕೊಲೆಯಾದಾಗ ಕಣ್ಣಾರೆ ಕಂಡ ಸತ್ಯವನ್ನ ನ್ಯಾಯಾಧೀಶರ ಮುಂದೆ ನಿರಾತಂಕವಾಗಿ ಹೇಳಿ ಈಗ ಹೀರೋ ಆಗಿದ್ದಾನೆ.

    ಏನಿದು ಪ್ರಕರಣ?
    ಶೀಲ ಶಂಕಿಸಿ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ತಂದೆ ಕೊಲೆ ಮಾಡಿದ್ದನ್ನು ಧನುಷ್ ನೋಡಿದ್ದ. ಕೋರ್ಟ್ ವಿಚಾರಣೆಯ ವೇಳೆ ಧನುಷ್ ನನ್ನ ತಾಯಿಯನ್ನು ಕೊಲೆ ಮಾಡಿದ್ದು ತಂದೆಯೇ ಎಂದು ಹೇಳಿದ್ದ. ಈ ಹೇಳಿಕೆಯನ್ನೇ ಮುಖ್ಯ ಸಾಕ್ಷ್ಯವನ್ನಾಗಿದ ಪರಿಗಣಿಸಿದ ಚಿತ್ರದುರ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಹೆಂಡತಿಯ ಕೊಲೆ ಮಾಡಿದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

    ತನ್ನ ತಂದೆ-ತಾಯಿ ಇಬ್ಬರನ್ನು ಕಳೆದುಕೊಂಡಿರುವ ಈತನ ಸ್ಥಿತಿ ಅರಿತ ಅನಿವಾಸಿ ಭಾರತೀಯ ಮಂಜುನಾಥ್ ಚಿತ್ರದುರ್ಗ ನಗರದಲ್ಲಿರುವ ಕೆಕೆ ಇಂಟರ್‍ನ್ಯಾಷನಲ್ ಶಾಲೆಯಲ್ಲಿ ಈತನಿಗೆ ವಿದ್ಯಾಭ್ಯಾಸ ನೀಡಲು ಮುಂದಾಗಿದ್ದಾರೆ. ಆತ ಎಲ್ಲಿಯವರೆಗೆ ಓದಿದ್ರೂ ನಾನು ಸಹಾಯ ಮಾಡ್ತೀನಿ ಅಂತ ಮುಂದೆ ಬಂದಿದ್ದಾರೆ. ಅಷ್ಟೇ ಅಲ್ಲದೇ ಇಂತಹ ಪರಿಸ್ಥಿತಿಯಲ್ಲಿರೋ ಯಾವುದೇ ಮಕ್ಕಳಿಗೂ ಸಹಾಯ ಮಾಡುತ್ತೇನೆ ಎಂದಿದ್ದಾರೆ.

    ಚಿತ್ರದುರ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು, ಅನಾಥರಾಗಿರುವ ಈತನಿಗೆ ಆಧಾರ ಕಲ್ಪಿಸಲು ಮುಂದಾಗಿದ್ದು, ಸರ್ಕಾರದ ನೆರವು ಕೊಡಿಸುವ ಪ್ರಯತ್ನ ಕೂಡ ಮಾಡಿದ್ದಾರೆ. ಅಷ್ಟೇ ಅಲ್ಲದೆ ಶಾಲೆಯ ಅಧ್ಯಕ್ಷರ ಜೊತೆ ಮಾತನಾಡಿ ನಮ್ಮ ಮೊಮ್ಮಗನಿಗೆ ಇಂತಹ ದೊಡ್ಡ ಶಾಲೆಯಲ್ಲಿ ಉಚಿತ ಶಿಕ್ಷಣ ಸಿಗುವಂತೆ ಮಾಡಿದ್ದಾರೆ ಎಂದು ಬಾಲಕನ ಅಜ್ಜಿ ಶಾಂತಮ್ಮ ನ್ಯಾಯಾಧೀಶರನ್ನ ಮನಸಾರೆ ಸ್ಮರಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಎಂಜಿನಿಯರಿಂಗ್ ಗೆ ಪ್ರವೇಶ ಪಡೆದ ಬಡ ವಿದ್ಯಾರ್ಥಿನಿಗೆ ಬೇಕಿದೆ ಹಾಸ್ಟೆಲ್ ಫೀಸ್

    ಎಂಜಿನಿಯರಿಂಗ್ ಗೆ ಪ್ರವೇಶ ಪಡೆದ ಬಡ ವಿದ್ಯಾರ್ಥಿನಿಗೆ ಬೇಕಿದೆ ಹಾಸ್ಟೆಲ್ ಫೀಸ್

    ಕಾರವಾರ: ಹೆತ್ತವರು ಓದದೇ ಇದ್ರೂ ಮಕ್ಕಳನ್ನು ಓದಿಸುವ ಆಸೆ. ಎಷ್ಟೇ ಕಷ್ಟ ಬಂದ್ರೂ ಓದಿ ಸಾಧಿಸಿದ ಛಲಗಾತಿ ಪುಷ್ಪ. ಈಕೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಂದಾವರ ಗ್ರಾಮ ಪಂಚಾಯ್ತಿಯ ಶಿರೂರು ಗ್ರಾಮದ ಬಡ ಪ್ರತಿಭಾವಂತ ವಿದ್ಯಾರ್ಥಿನಿ. ತಂದೆ ಮಂಜುನಾಥ್ ನಾಯ್ಕ್, ತಾಯಿ ಸರಸ್ವತಿ. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು.

    ಓದಿನ ಪ್ರಾಮುಖ್ಯತೆ ಅರಿತಿರೋ ತಂದೆ-ತಾಯಿ ಮೀನು ಮಾರಿ, ಕೂಲಿ ಕೆಲಸ ಮಾಡಿ ಮಕ್ಕಳಿಗೆ ಶಿಕ್ಷಣವನ್ನು ನೀಡಿದ್ದಾರೆ. ಅದರ ಫಲವಾಗಿ ಬಡ ವಿದ್ಯಾರ್ಥಿನಿ ಪುಷ್ಪ ಎಸ್‍ಎಸ್‍ಎಲ್‍ಸಿಯಲ್ಲಿ 586 ಅಂಕ ಪಡೆದು, ಪಿಯುಸಿಯಲ್ಲಿ 534 ಅಂಕ ಗಳಿಸಿ ಹೆತ್ತವರಿಗೆ ಕೀರ್ತಿ ತಂದಿದ್ದಾಳೆ. ಮುಂದೆ ಎಂಜಿನಿಯರಿಂಗ್ ಓದುವ ಕನಸು ಕಂಡಿರುವ ಪುಷ್ಪ, ಸಿಇಟಿ ಮೂಲಕ ಮಂಗಳೂರಿನ ಸಹ್ಯಾದ್ರಿ ಕಾಲೇಜಿನಲ್ಲಿ ಎಂಜಿನಿಯರಿಂಗ್‍ಗೆ ಪ್ರವೇಶ ಪಡೆದುಕೊಂಡಿದ್ದಾಳೆ. ಪುಷ್ಪಾ ಪೋಷಕರು ಕಷ್ಟಪಟ್ಟು ಕಾಲೇಜು ಶುಲ್ಕ ಪಾವತಿಸಿದ್ದಾರೆ. ಆದರೆ ಪುಷ್ಪಾಳಿಗೆ ಉಳಿದುಕೊಳ್ಳುವ ಹಾಸ್ಟೆಲ್ ಶುಲ್ಕಕ್ಕೆ ನೆರವು ಬೇಕಿದೆ.

    ಕಾಲೇಜಿಗೆ ಸೇರಲು ಶುಲ್ಕ ಪಾವತಿ ಮಾಡಬೇಕಾಗಿದ್ದು, ಈ ಬಡ ಕುಟುಂಬಕ್ಕೆ ಶುಲ್ಕ ಪಾವತಿಸಲು ಅಸಾಧ್ಯವಾಗಿದೆ. ಆದರೆ ಪ್ರತಿಭಾವಂತೆ ವಿದ್ಯಾರ್ಥಿನಿ ಪುಷ್ಪ ಎಜುಕೇಷನ್ ಲೋನ್ ಮಾಡಿಯಾದರೂ ಓದುವೆನೆಂಬ ಛಲ ಹೊಂದಿದ್ದಾಳೆ. ಆದರೆ ಎಜುಕೇಷನ್ ಲೋನ್ ಪಡೆಯಲು ಮೊದಲ ಹಂತದ 50 ಸಾವಿರ ರೂಪಾಯಿಗಳ ಶುಲ್ಕವನ್ನು ಪಾವತಿ ಮಾಡಬೇಕಾಗಿದ್ದು. ಹಣವಿಲ್ಲದೇ ಈ ಬಡ ಕುಟುಂಬ ದಿಕ್ಕು ದೋಚದೇ ಕಂಗಾಲಾಗಿದೆ.

    ಎಂಜಿನಿಯರಿಂಗ್ ಮಾಡಿ ನಮ್ಮಂತೆ ಹಳ್ಳಿಯಲ್ಲಿ ಬಡತನದಲ್ಲಿದ್ದು, ಓದಬೇಕೆನ್ನುವವರಿಗೆ ಸಹಾಯ ಮಾಡಬೇಕು. ಸಮಾಜಕ್ಕೆ ನನ್ನದೇ ಆದ ಕೊಡುಗೆ ನೀಡಬೇಕೆಂಬ ಮಹಾದಾಸೆಯನ್ನು ಹೊಂದಿರುವ ಪುಷ್ಪಳ ಕನಸಿಗೆ ನೆರವು ಬೇಕಿದೆ. ಮಗಳ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಹಾಯ ಮಾಡಿ ಎಂದು ತಂದೆ-ತಾಯಿ ಬೆಳಕು ಕಾರ್ಯಕ್ರಮದ ಮೂಲಕ ಕೇಳಿಕೊಳ್ಳುತ್ತಿದ್ದಾರೆ.

    https://www.youtube.com/watch?v=8AUwAZJEOVs