Tag: education

  • ಕಟ್ಟಡದಿಂದ ಹಾರಿ ಮಂಗ್ಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

    ಕಟ್ಟಡದಿಂದ ಹಾರಿ ಮಂಗ್ಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

    ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ನಡೆದಿದೆ.

    ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ವಳಚ್ಚಿಲ್‍ನ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಗುರುಪ್ರಸಾದ್ ಇಂದು ಮಧ್ಯಾಹ್ನದ ಸ್ಥಳೀಯ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ದೃಶ್ಯಗಳು ಸಿಸಿಟಿವಿ ಯಲ್ಲಿ ಸೆರೆಯಾಗಿದೆ.

    ಆತ್ಮಹತ್ಯೆ ಮಾಡಿಕೊಂಡ ಗುರುಪ್ರಸಾದ್ ಹಲವು ದಿನಗಳಿಂದ ಖಿನ್ನತೆ ಸಮಸ್ಯೆಯಿಂದ ಬಳಲುತ್ತಿದ್ದ ಎನ್ನಲಾಗಿದ್ದು, ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ವೇಳೆ ಸ್ಥಳೀಯರು ಗುರುಪ್ರಸಾದ್ ನ್ನು ಆಸ್ಪತ್ರೆ ಸೇರಿಸಿ ಚಿಕಿತ್ಸೆ ನೀಡಲು ಯತ್ನಿಸಿದ್ದಾರೆ. ಆದರು ಚಿಕಿತ್ಸೆ ಫಲಕಾರಿಯಾಗದೆ ಗುರುಪ್ರಸಾದ್ ಸಾವನ್ನಪ್ಪಿದ್ದಾನೆ.

    ಸದ್ಯ ಮೃತಪಟ್ಟಿರುವ ಗುರುಪ್ರಸಾದ್ ಪೋಷಕರು ತಮ್ಮ ಮಗ ಯಾವುದೇ ಒತ್ತಡದಲ್ಲಿ ಇರಲಿಲ್ಲ ಎಂದು ತಿಳಿಸಿದ್ದು, ಆದರೆ ಏಕೆ ಆತ್ಮಹತ್ಯೆ ಮಾಡಿಕೊಂಡ ಎಂಬುವುದು ತಿಳಿದಿಲ್ಲ ಎಂದು ತಿಳಿಸಿದ್ದಾರೆ. ಘಟನೆ ಕುರಿತು ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

  • ಸದ್ಯಕ್ಕೆ ಮಕ್ಕಳಿಗೆ ಉಚಿತ ಬಸ್ ಪಾಸ್ ಇಲ್ಲ

    ಸದ್ಯಕ್ಕೆ ಮಕ್ಕಳಿಗೆ ಉಚಿತ ಬಸ್ ಪಾಸ್ ಇಲ್ಲ

    ಬೆಂಗಳೂರು: ಸದ್ಯಕ್ಕೆ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ನೀಡದೇ ಇರಲು ಸರ್ಕಾರ ಮುಂದಾಗಿದೆ.

    ಪ್ರಥಮ ದರ್ಜೆ ಕಾಲೇಜು, ವೈದ್ಯಕೀಯ ಕಾಲೇಜು, ತಾಂತ್ರಿಕ ಶಿಕ್ಷಣ ಕಾಲೇಜು, ಪ್ರಾಥಮಿಕ ಶಾಲೆಗಳ ಮೂಲಭೂತ ಸೌಕರ್ಯ ಕುರಿತು ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ವಿಧಾನಸೌಧದ ಸಮಿತಿಯ ಕೊಠಡಿಯಲ್ಲಿ ಸಭೆ ನಡೆಯಿತು.

    ಸಭೆಯ ಬಳಿಕ ಮಾತನಾಡಿದ ಎಚ್‍ಡಿಕೆ, ಉಚಿತ ಬಸ್ ಪಾಸ್ ನೀಡುವ ಸಂಬಂಧ ಇಂದಿನ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ಪಾಸ್ ನೀಡಿದ್ರೆ ಎಷ್ಟು ಹಣ ಬೇಕಾಗುತ್ತೆ ಸೇರಿದಂತೆ ಇನ್ನಿತರ ಅಂಶ ಕುರಿತು ವರದಿ ನೀಡಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವರದಿ ಬಂದ ಬಳಿಕ ಉಚಿತ ಪಾಸ್ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದು ಹೇಳಿದರು.

    ಇವತ್ತು ದೊಡ್ಡ ಸವಾಲುಗಳನ್ನ ಸ್ವೀಕಾರ ಮಾಡಿದ್ದೇನೆ. ಎಲ್ಲದ್ದಕ್ಕು ಹಣ ಹೊಂದಿಸುವ ಜವಾಬ್ದಾರಿ ಇದೆ. ಹೀಗಾಗಿ ಶಿಕ್ಷಣ ಇಲಾಖೆ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ವರ್ಕೌಟ್ ಮಾಡಿ ಮಾಹಿತಿ ನೀಡಲು ಹೇಳಿದ್ದೇನೆ. ಅವರು ವರದಿ ನೀಡಿದ ಬಳಿಕ ನಿರ್ಧಾರ ಮಾಡುತ್ತೇನೆ ಎಂದು ತಿಳಿಸಿದರು.

    ಇಂದು ನಡೆದ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ, ಪ್ರಾಥಮಿಕ ಶಿಕ್ಷಣ ಸಚಿವ ಮಹೇಶ್, ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು ಭಾಗಿಯಾಗಿದ್ದರು.

    ಚನ್ನಪಟ್ಟಣದಲ್ಲಿ ಸೋಮವಾರ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ್ದ ಸಿಎಂ, ಉಚಿತ ಬಸ್ ಪಾಸ್ ಬಗ್ಗೆ ಒಂದು ತೀರ್ಮಾನಕ್ಕೆ ಬರಬೇಕು ಎಂದುಕೊಂಡಿದ್ದೇನೆ. ನಾಳೆ ನಮ್ಮ ಅಧಿಕಾರಿಗಳು ಸಭೆ ಕರೆದಿದ್ದಾರೆ. ಯಾವ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುತ್ತಾರೆ. ಅಂತಹ ಮಕ್ಕಳಿಗೆ ಮಾತ್ರ ಉಚಿತ ಬಸ್ ಪಾಸ್ ಕೊಡುತ್ತೇವೆ ಎಂದು ಹೇಳಿದ್ದರು.

    ನೀವು ರಾಜಕೀಯ ಮಾಡಿದರೆ, ನನಗೆ ರಾಜಕೀಯ ಮಾಡಲು ಗೊತ್ತಿಲ್ಲವೇ? 50 ಸಾವಿರ, 1 ಲಕ್ಷ ಡೊನೇಷನ್ ಕೊಟ್ಟು ಓದುವವರಿಗೆ ನಿಮಗೆ ಯಾಕೆ ಉಚಿತವಾದ ಪಾಸ್ ಎಂದು ಪ್ರಶ್ನಿಸಿದ್ದರು. ಆದ್ದರಿಂದ ಯಾರು ಈ ರಾಜ್ಯದ ಸರ್ಕಾರಿ ಶಾಲೆಯಲ್ಲಿ ಓದುತ್ತಾರೋ ಅಂತಹ ಮಕ್ಕಳಿಗೆ ಅಂದರೆ ಎಲ್ಲಾ ಸರ್ಕಾರಿ ಮಕ್ಕಳಿಗೂ ಉಚಿತ ಬಸ್ ಪಾಸ್ ಕೊಡುತ್ತೇವೆ. ಈ ಬಗ್ಗೆ ನಾಳೆ ಸಭೆ ಕರೆದು ಚರ್ಚೆ ಮಾಡಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದ್ದರು.

  • ಗುಡಿಸಲು ಯಾವಾಗ ಬೀಳುತ್ತೆ ಎನ್ನುವ ಚಿಂತೆಯಲ್ಲಿರೋ ಕುಟುಂಬಕ್ಕೆ ಬೇಕಿದೆ ಆಸರೆ

    ಗುಡಿಸಲು ಯಾವಾಗ ಬೀಳುತ್ತೆ ಎನ್ನುವ ಚಿಂತೆಯಲ್ಲಿರೋ ಕುಟುಂಬಕ್ಕೆ ಬೇಕಿದೆ ಆಸರೆ

    ಉಡುಪಿ: ಎಲ್ಲರಿಗೂ ಒಂದೊಂದು ಕನಸಿರುತ್ತದೆ. ಕೆಲವರದ್ದು ದೊಡ್ಡ ದೊಡ್ಡ ಕನಸು. ಇನ್ನು ಕೆಲವರದ್ದು ಚಿಕ್ಕಪುಟ್ಟ ಕನಸು. ಆ ಕನಸನ್ನು ನನಸು ಮಾಡೋಕೆ ಜೀವನದುದ್ದಕ್ಕೂ ನಾವು ಹೋರಾಟ ಮಾಡುತ್ತಾ ಇರುತ್ತೇವೆ. ಉಡುಪಿ ಜಿಲ್ಲೆ ಶಂಕರನಾರಾಯಣದ ಈ ಅಜ್ಜಿಯೂ ಅಷ್ಟೆ ಆಕೆಗೊಂದು ಕನಸಿದೆ. ಕನಸು ನನಸು ಮಾಡೋದಕ್ಕೆ ಹೋರಾಟ ಮಾಡಿ ಆಕೆಯ ವಯಸ್ಸು 85 ಆಗಿದೆ. ಆದರೆ ಆ ಕನಸು ಈವರೆಗೂ ನನಸಾಗಿಲ್ಲ.

    ಇದು ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಶಂಕರನಾರಾಯಣದ ವಯೋವೃದ್ಧೆಯ ಕಥೆ. 85 ವರ್ಷದ ಅಜ್ಜಿಯ ಹೆಸರು ಸಾತು ಬಾಯಿ. ಕರಾವಳಿಯ ಜಡಿಮಳೆಯಲ್ಲಿ ತೊಪ್ಪೆಯಾಗಿರುವ ಗುಡಿಸಲಿನಲ್ಲಿಯೇ ವಾಸವಾಗಿದ್ದಾರೆ. ಇದೇ ಗುಡಿಸಿಲಿನಲ್ಲಿ ಅಜ್ಜಿ ಸಾತುಬಾಯಿ, ಮಗಳು ಸೀತಾ ಮತ್ತು ಮೊಮ್ಮಗಳು ವಾಸವಾಗಿದ್ದಾರೆ.

    ಅಜ್ಜಿ, ಮಗಳು ಸೀತಾಳಿಗೆ ಮದುವೆ ಮಾಡಿದ್ದಾರೆ. ಆದ್ರೆ ಅಳಿಯ ಪುಟ್ಟದಾದ ಮಗುವನ್ನು ಕೈಯಲ್ಲಿಟ್ಟು ಮನೆ ಬಿಟ್ಟು ಹೋಗಿದ್ದಾನೆ. ಮಗಳು ಸೀತಾ ಸಂಸಾರದ ಜವಾಬ್ದಾರಿಯನ್ನು ಹೊತ್ತು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಇರೋದಕ್ಕೆ ಸರಿಯಾದ ಸೂರಿಲ್ಲ. ಮಳೆ ಬಂತೆಂದರೆ ನೆಮ್ಮದಿಯಾಗಿ ನಿದ್ದೆ ಮಾಡೋಕೆ ಆಗಲ್ಲ. ಮನೆಗೆ ನೀರು ತುಂಬಿಕೊಳ್ಳುತ್ತೆ. ಕೂಡಿಟ್ಟ ಹಣದಲ್ಲಿ ಮಗಳಿಗೆ ಶಿಕ್ಷಣ ಕೊಡಿಸುತ್ತಿದ್ದಾರೆ.

    ವಯಸ್ಸಾದ ಅಜ್ಜಿ ಮತ್ತು ಮಗಳನ್ನು ನೋಡಿಕೊಳ್ಳಲು ತಾಯಿ ಸೀತಾ ಪರದಾಡುತ್ತಿದ್ದು ಮನೆಯನ್ನು ಕಟ್ಟಿಕೊಳ್ಳಲು ಸ್ಥಳೀಯ ಕುಳ್ಳುಂಜೆ ಗ್ರಾಮ ಪಂಚಾಯತ್ ಸಂಪರ್ಕಿಸಿ ಆಶ್ರಯ ಯೋಜನೆಗೆ ಅರ್ಜಿ ಹಾಕಿದ್ದಾರೆ ಆದರೆ ಅಧಿಕಾರಿಗಳ ಸಹಕಾರ ಇನ್ನೂ ಸಿಕ್ಕಿಲ್ಲ. ಈ ಕುಟುಂಬದ ಕಷ್ಟ ನೋಡಿದ ಸ್ಥಳೀಯರು ಒಂದಿಷ್ಟು ಹಣ ಹೊಂದಿಸಿ ಮನೆ ಕಟ್ಟಿಕೊಡಲು ಮುಂದಾಗಿದ್ದಾರೆ ಆದ್ರೆ ಸಂಪೂರ್ಣ ವೆಚ್ಚ ಭರಿಸಲಾಗದೆ ಈಗ ಬೆಳಕು ಕಾರ್ಯಕ್ರಮಕ್ಕೆ ಬಂದಿದ್ದಾರೆ. ಸಮುದಾಯದ ಸಹಭಾಗಿತ್ವ ಗಮನಿಸಿರುವ ಬೆಳಕು ತಂಡ ಈ ಸಮಸ್ಯೆಗೆ ಪರಿಹಾರ ಹುಡುಕಲು ಮುಂದಾಗಿದೆ.

    https://www.youtube.com/watch?v=EN1IruFItq0

  • ವಿದ್ಯಾರ್ಥಿಗಳಿಗೆ ಪ್ರೀತಿಯ ವ್ಯಾಖ್ಯಾನ ತಿಳಿಸಿದ ಸಚಿವ ಜಿ.ಟಿ.ದೇವೇಗೌಡ

    ವಿದ್ಯಾರ್ಥಿಗಳಿಗೆ ಪ್ರೀತಿಯ ವ್ಯಾಖ್ಯಾನ ತಿಳಿಸಿದ ಸಚಿವ ಜಿ.ಟಿ.ದೇವೇಗೌಡ

    ಮೈಸೂರು: ಕಾಲೇಜು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ಪ್ರೀತಿ ಪ್ರೇಮದ ವ್ಯಾಖ್ಯಾನ ತಿಳಿಸಿದ್ದಾರೆ.

    ಪ್ರೀತಿ ಎಂದರೆ ಪರಸ್ಪರ ಅರಿತು ಬಾಳುವುದು. ಪ್ರೀತಿಯ ಹೆಸರಿನಲ್ಲಿ ಮನೆ ಬಿಟ್ಟು ಓಡಿ ಹೋಗುವುದು ಅಲ್ಲ. ಪರಸ್ಪರ ಆಕರ್ಷಣೆಯೇ ಪ್ರೀತಿಯಲ್ಲ. ಕೆಲ ವರ್ಷಗಳ ಹಿಂದೆ ವರನಿಗೆ ವರದಕ್ಷಿಣೆ ನೀಡುವ ಪರಿ ಪಾಠವಿತ್ತು. ಆದರೆ ಈಗ ವಧು ದಕ್ಷಿಣೆ ಕೊಟ್ಟು ಮದುವೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಸಚಿವ ಜಿ.ಟಿ ದೇವೇಗೌಡ ವಿಶ್ಲೇಷಿಸಿದ್ದಾರೆ.

    ಈಗಿನ ಕಾಲದಲ್ಲಿ ಪ್ರೀತಿಸಿ ಮದುವೆಯಾಗುವದಕ್ಕೆ ಜಾತಿಗಳು ಅಡ್ಡಿಯಿಲ್ಲ. ಆದರೆ ಆ ಜಾತಿಗಳು ನಮ್ಮ ಬದುಕಿಗೆ ಅಡ್ಡಿ ಬರುವುದಿಲ್ಲ. ಆದರೆ ಉತ್ತಮ ಗುಣಗಳು, ಉತ್ತಮ ನಡವಳಿಕೆ ಇರುವ ಜೀವನ ಸಂಗಾತಿಯನ್ನು ನೀವು ಹುಡುಕಿಕೊಳ್ಳಬೇಕು. ವಿದ್ಯಾವಂತರಾಗಿ ನೀವೇ ನಿಮ್ಮ ಸಂಗಾತಿಯ ಆಯ್ಕೆಯಲ್ಲಿ ತಪ್ಪು ದಾರಿ ತುಳಿಯಬಾರದು. ಬಹಳಷ್ಟು ಜನ ಪ್ರೀತಿಸಿ ಅದ್ಧೂರಿಯಿಂದ ಮದುವೆಯಾಗುತ್ತಾರೆ. ಆದರೆ ಮದುವೆಯಾಗಿ ಕೆಲವು ದಿನದಲ್ಲೇ ಡಿವೋರ್ಸ್ ನೀಡುತ್ತಾರೆ. ಈಗಿನ ವಕೀಲರು ಹಾಗೂ ಪೊಲೀಸರಿಗೆ ಡಿವೋರ್ಸ್ ಕೇಸ್‍ಗಳೇ ಹೆಚ್ಚಾಗುತ್ತಿದೆ. ಸಂಗಾತಿಯ ಆಯ್ಕೆಯಲ್ಲಿ ನಾವು ಒಂದು ಹೆಜ್ಜೆ ತಪ್ಪು ಇಟ್ಟರೇ, ನೀವು ವಿದ್ಯಾವಂತರು, ಪದವಿ ಪಡೆದುಕೊಂಡಿದ್ದರು ಏನು ಲಾಭ. ಹಾಗಾಗಿ ಜೀವನದಲ್ಲಿ ಪ್ರತಿಯೊಂದು ಹೆಜ್ಜೆಯನ್ನು ಅತ್ಯಂತ ಎಚ್ಚರಿಕೆಯಿಂದ ಇಡಬೇಕು ಎಂದು ಸಲಹೆ ನೀಡಿದರು.

    ಕೆಲವರಿಗೆ ಪ್ರೀತಿ ಎಂಬುದೇ ಗೊತ್ತಿಲ್ಲ. ಪ್ರೀತಿ ಎಂದರೆ ಕೆಲವರು ಯುವತಿಯರನ್ನು ಓಡಿಸಿಕೊಂಡು ಹೋಗ್ತಾರೆ. ಪ್ರೀತಿ ಎಂದರೆ ನಿಮಗೆ ಚೆನ್ನಾಗಿ ಗೊತ್ತಿರಬೇಕು. ನಿಮ್ಮ ಜೊತೆ ಹಗಲಿರಲಿ, ರಾತ್ರಿಯಿರಲಿ ಅವರು ಯಾವ ರೀತಿ ಪ್ರೀತಿಯಿಂದ, ಮನೋಭಾವದಿಂದ ಕಾಣುತ್ತಾರೋ ಆ ಪ್ರೀತಿ ಶಾಶ್ವತ. ಪೋಷಕರು ನಿಮಗೆ ಕಷ್ಟಪಟ್ಟು ಶಿಕ್ಷಣ ಕೊಡಿಸುತ್ತಾರೆ. ಪೋಷಕರಿಗೂ, ನಿಮ್ಮ ಗ್ರಾಮ, ಕಾಲೇಜಿಗೆ ಒಳ್ಳೆಯ ಹೆಸರು ಬರುವಂತೆ ಸಾಧನೆ ಮಾಡಬೇಕೆಂದು ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

  • ಸಮಾಜ ಮೆಚ್ಚಿಸುವ ಕೆಲಸ ಬೇಡ: ರಮೇಶ್‍ಕುಮಾರ್

    ಸಮಾಜ ಮೆಚ್ಚಿಸುವ ಕೆಲಸ ಬೇಡ: ರಮೇಶ್‍ಕುಮಾರ್

    – ರೇವಾ ವಿಶ್ವವಿದ್ಯಾನಿಲಯದಲ್ಲಿ ಕುವೆಂಪು ಸಭಾಂಗಣ ಲೋಕಾರ್ಪಣೆ

    ಬೆಂಗಳೂರು: ಸಮಾಜವನ್ನು ಮೆಚ್ಚಿಸುವ ಕೆಲಸ ಮಾಡುವುದಕ್ಕಿಂತ, ಸಮಾಜಕ್ಕೆ ಏನಾದರೂ ಕೊಡುಗೆ ನೀಡುವುದು ಇಂದಿನ ಅವಶ್ಯವಾಗಿದೆ. ನಮ್ಮ ನಂತರವೂ ನಾವು ಬದುಕಲು ಬಯಸಿದರೆ, ಅದು, ನಾವು ಸಮಾಜಕ್ಕೇನು ಕೊಡುಗೆ ನೀಡಿದ್ದೇವೆ ಎನ್ನುವುದನ್ನು ಅವಲಂಬಿಸಿರುತ್ತದೆ ಎಂದು ವಿಧಾನಸಭಾ ಸಭಾಪತಿ ಕೆ.ಆರ್. ರಮೇಶ್‍ಕುಮಾರ್ ಮಾರ್ಮಿಕವಾಗಿ ನುಡಿದರು.

    ರೇವಾ ವಿಶ್ವವಿಶ್ವವಿದ್ಯಾನಿಲಯದ ಆವರಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕುವೆಂಪು ಸಭಾಂಗಣ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಬುದ್ಧ, ಅಶೋಕ, ಕಾರ್ಲ್ ಮಾರ್ಕ್ಸ್, ನೆಲ್ಸನ್‍ಮಂಡೆಲಾ, ಮಹಾತ್ಮ ಗಾಂಧಿ, ಅಬ್ದುಲ್ ಕಲಾಂ, ಬೋಸ್. ಮುಂತಾದವರು ಕೇವಲ ಒಂದು ಸಮುದಾಯ, ಪ್ರದೇಶ, ದೇಶಕ್ಕೆ ಸೀಮಿತರಾದವರಲ್ಲ. ಇವರೆಲ್ಲ ವಿಶ್ವಚೇತನಗಳು, ಇವರು ಸಮಾಜಕ್ಕಾಗಿ ಸ್ವಾರ್ಥವನ್ನು ತ್ಯಜಿಸಿದ್ದಾರೆ. ಆದ್ದರಿಂದಲೇ ಇಂದಿಗೂ ಅವರು ಜೀವಂತವಾಗಿದ್ದಾರೆ ಎಂದರು.

    ದುರದೃಷ್ಟವಶಾತ್ ಇಂದು ಜನರು ಚಲಚಿತ್ರ ನಟರ ಬಗ್ಗೆ ತಿಳಿದುಕೊಂಡ ಈ ಮಹಾನ್ ವ್ಯಕ್ತಿಗಳ ಬಗ್ಗೆ ತಿಳಿದುಕೊಂಡಿಲ್ಲ ಎಂದು ಹಾಸ್ಯ ಮಿಶ್ರಿತ ಖೇದ ವ್ಯಕ್ತಪಡಿಸಿದರು. ಇತ್ತೀಚೆಗೆ ನಮ್ಮಲ್ಲಿ ಬದಲಾಗುತ್ತಿರುವ ನಡತೆಗಳಿಂದಾಗಿ ನಮ್ಮ ಸಾಂಸ್ಕೃತಿಕ ಮೌಲ್ಯಗಳು ನಾಶವಾಗುತ್ತಿವೆ. ಯಾವುದೇ ಕಾರಣಕ್ಕೂ ಸಾಂಸ್ಕೃತಿಕ ಮೌಲ್ಯಗಳು ಮಾತ್ರ ನಾಶವಾಗಬಾರದು. ನಾವು ಹಿಂದೆ ಹೇಗಿದ್ದೆವು, ನಮ್ಮ ಸುತ್ತಮುತ್ತಲಿನವರೊಂದಿಗೆ ನಮ್ಮ ವರ್ತನೆ ಹೇಗಿದೆ ಎನ್ನುವುದನ್ನು ಅರಿತುಕೊಳ್ಳುವುದು ಅವಶ್ಯವಾಗಿದೆ ಎಂದ ಅವರು ಸಾಂಸ್ಕೃತಿಕ ಮೌಲ್ಯಗಳು ಒಬ್ಬ ವ್ಯಕ್ತಿಯನ್ನು ಉನ್ನತ ಸ್ಥಾನಕ್ಕೆ ಕೊಂಡ್ಯೊಯುತ್ತವೆ ಎನ್ನುವುದಕ್ಕೆ ನಿದರ್ಶನವಾಗಿ ಡಾ. ಶ್ಯಾಮರಾಜು ನಿಲ್ಲುತ್ತಾರೆ ಎಂದು ಹೇಳಿದರು.

    ಕುವೆಂಪು ಸಭಾಂಗಣ ಕುರಿತು ಮಾತನಾಡಿದ ಅವರು, ಕುವೆಂಪು ಅವರ ಹೆಸರಿನಿಂದ ಲೋಕಾರ್ಪಣೆಗೊಂಡ ಈ ಸಭಾಂಗಣ ಸಾಂಸ್ಕೃತಿಕ ಮೌಲ್ಯಗಳು ಮತ್ತು ಆಧುನಿಕ ಸಾಧನಗಳ ಸಂಯೋಜನೆ. ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು ಒಳಗೊಂಡಿದ್ದು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಚಾರಸಂಕಿರಣಗಳನ್ನು ನಡೆಸುವುದಕ್ಕೆ ಸೂಕ್ತವಾಗಿದೆ ಎಂದರು.

    ರೇವಾ ವಿಶ್ವವಿದ್ಯಾನಿಲಯವು ಸಮಾಜ ಸೇವೆಯ ಆಧಾರದ ಮೇಲೆ ಮಾನವೀಯ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಒಳಗೊಂಡ ಶಿಕ್ಷಣ ನೀಡುತ್ತಿರುವುದು ಸಂತೋಷ ವಿಷಯ. ಮುಂದಿನ ದಿನಗಳಲ್ಲಿ ರೇವಾ ವಿವಿ ಈ ಸಮಾಜಕ್ಕೆ ಕುವೆಂಪು, ಕಲಾಂರಂಥ ಅನೇಕ ಮಹನೀಯರ ಕೊಡುಗೆ ನೀಡಲಿ ಎಂದು ಹಾರೈಸಿದರು.

    ಉಪ ಸಭಾಪತಿ ಎಂ. ಕೃಷ್ಣಾ ರೆಡ್ಡಿ ಮಾತನಾಡಿ, ಒಬ್ಬ ವ್ಯಕ್ತಿಯ ಆಯುಷ್ಯದಲ್ಲಿ ದಲ್ಲಿ 25 ವರ್ಷ ಕಲಿಕೆಗೆ ಮೀಸಲಾಗಿರುತ್ತವೆ. ಈ ಅವಧಿಯಲ್ಲಿ ಏನನ್ನು ಕಲಿತ್ತಿದ್ದೇವೆ ಎನ್ನುವುದರ ಆಧಾರದ ಮೇಲೆ ಮುಂದಿನ 75 ವರ್ಷಗಳು ಸಾಗುತ್ತವೆ. ಬೋಧಕರ ಕೈಯಲ್ಲಿ ವಿದ್ಯಾರ್ಥಿಗಳ ಭವಿಷ್ಯವಿರುವುದರಿಂದ ಅವರು, ದೇಶಪ್ರೇಮ, ಮಾನವೀಯ ಮೌಲ್ಯಗಳು ಮತ್ತು ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಮಾಡಬೇಕಾಗಿದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಉತ್ತಮ ವ್ಯಕ್ತಿತ್ವ ನಿರ್ಮಾಣವಾಗುತ್ತದೆ ಎಂದ ಅವರು, ಕುವೆಂಪು ಅವರು ಒಂದು ವಿಶ್ವವಿದ್ಯಾನಿಲಯಕ್ಕೆ ಸಮವಾಗಿದ್ದಾರೆ. ಅವರ ಹೆಸರಿನಲ್ಲಿ ಸಭಾಂಗಣ ನಿರ್ಮಿಸಿರುವುದು ರೇವಾ ವಿವಿಯು ಮಾನವೀಯ ಮೌಲ್ಯಗಳಿಗೆ ನೀಡುವ ಮಹತ್ವದ ಸೂಚಕವಾಗಿದೆ ಎಂದು ಹೊಗಳಿದರು.

    ರೇವಾ ವಿವಿ ಕುಲಪತಿ ಡಾ. ಪಿ. ಶ್ಯಾಮರಾಜು ಮಾತನಾಡಿ, ರೇವಾ ವಿವಿಯ ಘನತೆ ಹೆಚ್ಚುತ್ತಿದೆ. ಇದಕ್ಕೆಲ್ಲ ನಿಮ್ಮ ಪರಿಶ್ರಮ ಕಾರಣವಾಗಿದೆ. ಜೊತೆಗೆ ಇದನ್ನು ಕಾಪಾಡಿಕೊಂಡುವ ಹೋಗುವ ಹೊಣೆಯು ನಿಮ್ಮ ಮೇಲಿದೆ ಎಂದು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ತಿಳಿಸಿದರು.

    ಕಾರ್ಯಕ್ರಮದಲ್ಲಿ ರೇವಾ ವಿವಿಯ ವಿಶ್ರಾಂತ ಕುಲಪತಿ ಡಾ. ವಿ.ಜಿ. ತಳವಾರ್, ರಿಜಿಸ್ಟ್ರಾರ್ ಡಾ. ಎಂ. ಧನಂಜಯ, ಡಾ. ಎನ್. ರಮೇಶ್, ಡಾ. ಬೀನಾ ಜಿ, ಡಾ. ಶುಭಾ ಎ. ವೇದಿಕೆ ಮೇಲಿದ್ದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ರೇವಾ ವಿವಿಯ ಪ್ರದರ್ಶನ ಕಲಾ ವಿಭಾಗದ ಮಾಯಾ ಮತ್ತು ಮುದ್ರಾ ಅವರಿಂದ ಕತಕ್, ಸ್ವಾತಿ ತಿರುನಾಳ ಸಂಗಡಿಗರಿಂದ ಮೋಹಿನಿ ಆಟ್ಟಂ ಮತ್ತು ಭರತನಾಟ್ಯದಲ್ಲಿ ಅರ್ಧನಾರೀಶ್ವರ ರೂಪಕವನ್ನು ಪ್ರದರ್ಶಿಸಲಾಯಿತು.

  • ಅಸ್ತಿತ್ವವೇ ಇಲ್ಲದ ಜಿಯೋ ಸಂಸ್ಥೆಗೆ ಉತ್ಕೃಷ್ಟ ಸ್ಥಾನಮಾನ ಸಿಕ್ಕಿದ್ದು ಹೇಗೆ? ಶಿಕ್ಷಣ ಸಂಸ್ಥೆಗಳಿಗೆ ಏನು ಲಾಭ?

    ಅಸ್ತಿತ್ವವೇ ಇಲ್ಲದ ಜಿಯೋ ಸಂಸ್ಥೆಗೆ ಉತ್ಕೃಷ್ಟ ಸ್ಥಾನಮಾನ ಸಿಕ್ಕಿದ್ದು ಹೇಗೆ? ಶಿಕ್ಷಣ ಸಂಸ್ಥೆಗಳಿಗೆ ಏನು ಲಾಭ?

    ನವದೆಹಲಿ: ಅಸ್ತಿತ್ವವೇ ಇಲ್ಲದ ಜಿಯೋ ಶಿಕ್ಷಣ ಸಂಸ್ಥೆಗೆ ಉತ್ಕೃಷ್ಟ ಸ್ಥಾನಮಾನ ನೀಡಿದ ನಿರ್ಧಾರಕ್ಕೆ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಈ ಕುರಿತು ಸ್ಪಷ್ಟನೆ ನೀಡಿದೆ.

    ಸೋಮವಾರದಂದು ಕೇಂದ್ರ ಸರ್ಕಾರ ಮೂರು ಖಾಸಗಿ ಮತ್ತು ಮೂರು ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಉತ್ಕೃಷ್ಟ ಶಿಕ್ಷಣ ಸಂಸ್ಥೆಗಳೆಂದು ಪ್ರಕಟಿಸಿತ್ತು. ಈ ಪ್ರಕಟಣೆಯಲ್ಲಿ ದೇಶದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗಳಾದ ಮದ್ರಾಸ್ ಐಐಟಿ ಮತ್ತು ಐಐಟಿ ಖರಗ್‍ಪುರ ಪಟ್ಟಿಯಲ್ಲಿ ಸ್ಥಾನ ನೀಡಿರಲಿಲ್ಲ. ಅಲ್ಲದೇ ಇನ್ನೂ ಅಸ್ತಿತ್ವಕ್ಕೇ ಬಾರದ ಜಿಯೋ ಶಿಕ್ಷಣ ಸಂಸ್ಥೆಯನ್ನು ಪಟ್ಟಿಯಲ್ಲಿ ಸೇರಿಸಲಾಗಿತ್ತು.

    ಈ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಆ ಸುಬ್ರಮಣ್ಯಂ ಅವರು, ಗ್ರೀನ್ ಫೀಲ್ಡ್ ಕೆಟಗರಿ ಅಡಿಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ. ತಮ್ಮ ಶಿಕ್ಷಣ ಸಂಸ್ಥೆಗಳನ್ನು ಹೇಗೆ ಶ್ರೇಷ್ಠ ಶಿಕ್ಷಣ ಸಂಸ್ಥೆಗಳನ್ನಾಗಿ ಮಾಡಲಾಗುತ್ತದೆ ಎನ್ನುವ ದೂರದೃಷ್ಟಿ ಯೋಜನೆಗಳನ್ನು ಪರಿಗಣಿಸಿ ಕೇಂದ್ರ ಸರ್ಕಾರ ಉತ್ಕೃಷ್ಟ ಸ್ಥಾನಮಾನ ನೀಡಿದೆ. ಈ ಯೋಜನೆಯಲ್ಲಿ ಸ್ಥಾನಮಾನ ಹೊಂದಿದ ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಆರ್ಥಿಕ ನೆರವು ಸಿಗುವುದಿಲ್ಲ ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

    ಇಂತಹ ಶಿಕ್ಷಣ ಸಂಸ್ಥೆಗಳು ಸರ್ಕಾರದಿಂದ ಯಾವುದೇ ಆರ್ಥಿಕ ನೆರವು ಪಡೆಯದೇ ಸ್ವಂತತ್ರವಾಗಿ ಕಾರ್ಯನಿರ್ವಹಿಸುತ್ತವೆ. ಇಂತಹ ಸಂಸ್ಥೆಗಳಿಗೆ ಸರ್ಕಾರದ ನೀತಿಗಳಿಂದ ಕೊಂಚ ರಿಯಾಯಿತಿ ಮಾತ್ರ ದೊರೆಯುತ್ತದೆ. ಆಯಾ ಶಿಕ್ಷಣ ಸಂಸ್ಥೆಗಳು ಇಲಾಖೆಗೆ ನೀಡಿರುವ ವಿಷನ್ ಡಾಕ್ಯುಮೆಂಟ್ ಆಧಾರದ ಮೇರೆಗೆ ಶ್ರೇಷ್ಠ ಸ್ಥಾನಮಾನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಪ್ರತಿಕ್ರಿಯಿಸಿ, ನಮ್ಮ ದೇಶದಲ್ಲಿ ಒಟ್ಟು 800 ವಿಶ್ವವಿದ್ಯಾಲಯಗಳಿವೆ. ಆದರೆ ವಿಶ್ವದ ಅಗ್ರಗಣ್ಯ ವಿಶ್ವವಿದ್ಯಾನಿಲಯಗಳ ಪೈಕಿ 100 ಹಾಗೂ 200 ರೊಳಗೆ ಒಂದು ಸಹ ಇಲ್ಲ. ಇದು ಅತ್ಯಂತ ಬೇಸರದ ಸಂಗತಿಯಾಗಿದೆ. ಕೇಂದ್ರ ಸರ್ಕಾರ ಪ್ರಕಟಿಸಿದ 6 ಉತ್ಕೃಷ್ಟ ಶಿಕ್ಷಣ ಸಂಸ್ಥೆಗಳ ಮೂಲಕ ವಿಶ್ವದ ಅಗ್ರಗಣ್ಯ ವಿಶ್ವವಿದ್ಯಾಲಯಗಳು ಪಟ್ಟಿಯಲ್ಲಿ ಸೇರುವುದಕ್ಕೆ ಈ ಪ್ರಕಟಣೆ ಅತ್ಯಂತ ಮಹತ್ವದಾಗಿದೆ ಎಂದು ತಿಳಿಸಿದ್ದಾರೆ.

    ಸರ್ಕಾರ ಪ್ರಕಟಿಸಿದ್ದ ಉತ್ಕೃಷ್ಟ ಶಿಕ್ಷಣ ಸಂಸ್ಥೆಗಳ ಪೈಕಿ, ಸರ್ಕಾರಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಐಐಟಿ ಬಾಂಬೆ, ಐಐಟಿ ದೆಹಲಿ ಮತ್ತು ಐಐಎಸ್‍ಸಿ ಬೆಂಗಳೂರು ಶಿಕ್ಷಣ ಸಂಸ್ಥೆಗಳು ಸ್ಥಾನ ಪಡೆದುಕೊಂಡಿದ್ದವು. ಖಾಸಗಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಬಿಟ್ಸ್ ಪಿಲಾನಿ ಮತ್ತು ಮಣಿಪಾಲ ವಿಶ್ವವಿದ್ಯಾಲಯಗಳು ಸ್ಥಾನಪಡೆದುಕೊಂಡಿದ್ದರೆ, ಗ್ರೀನ್ ಫೀಲ್ಡ್ ಕೆಟಗರಿ ವಿಭಾಗದಿಂದ ಜಿಯೋ ಶಿಕ್ಷಣ ಸಂಸ್ಥೆ ಸ್ಥಾನಗಳಿಸಿದೆ.

    ಉತ್ಕೃಷ್ಟ ಶಿಕ್ಷಣ ಸಂಸ್ಥೆಗಳನ್ನು ಹೆಸರಿಸಲು ಕೇಂದ್ರ ಸರ್ಕಾರ ಈ ನಾಲ್ಕು ಅಂಶಗಳನ್ನು ಮಾನದಂಡವಾಗಿ ಪರಿಗಣಿಸಿತ್ತು.
    1. ಶಿಕ್ಷಣ ಸಂಸ್ಥೆಯ ಕಟ್ಟಡಗಳನ್ನು ನಿರ್ಮಿಸುವುದಕ್ಕೆ ಭೂಮಿಯನ್ನು ಹೊಂದಿರುವುದು.
    2. ಉನ್ನತ ಮಟ್ಟದ ಅರ್ಹತೆಯುಳ್ಳ ಅನುಭವಿ ಬೋಧಕ ತಂಡವನ್ನು ಹೊಂದಿರುವುದು.
    3. ಶಿಕ್ಷಣ ಸಂಸ್ಥೆಗೆ ಬೇಕಾಗುವ ಆರ್ಥಿಕ ಬಂಡವಾಳವನ್ನು ಹೂಡಲು ಶಕ್ತವಾದ ಸಂಸ್ಥೆಗಳು.
    4. ಶಿಕ್ಷಣ ಯೋಜನೆಯಲ್ಲಿ ಕಾರ್ಯತಂತ್ರ ರೂಪಿಸಿ ವಾರ್ಷಿಕ ಮೈಲುಗಲ್ಲನ್ನು ಸ್ಥಾಪಿಸುವ ಕಾರ್ಯಕ್ಷಮತೆ ಹೊಂದಿರುವ ಶಿಕ್ಷಣ ಸಂಸ್ಥೆಗಳು.

    ಗ್ರೀನ್ ಫೀಲ್ಡ್ ಕೆಟಗರಿ ಸ್ಥಾನ ಪಡೆಯಲು ಒಟ್ಟು 11 ಶಿಕ್ಷಣ ಸಂಸ್ಥೆಗಳು ಅರ್ಜಿ ಸಲ್ಲಿಸಿದ್ದು, ಇವುಗಳ ಪೈಕಿ ಜಿಯೋ ಸಂಸ್ಥೆ ಮಾತ್ರ ಆಯ್ಕೆಯಾಗಿದೆ.

    ಏನೇನು ವಿಶೇಷ ಸೌಲಭ್ಯ ಸಿಗುತ್ತೆ?
    ಈ ಸ್ಥಾನಮಾನದಿಂದ ಶಿಕ್ಷಣ ಸಂಸ್ಥೆಗಳಿಗೆ ಸಂಪೂರ್ಣ ಸ್ವಾಯತ್ತತೆ ದೊರೆಯಲಿದೆ. ಮೂರು ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ಮುಂದಿನ ಐದು ವರ್ಷಗಳಲ್ಲಿ 1000 ಕೋಟಿ ರೂ. ಅನುದಾನ ದೊರೆಯಲಿದೆ. ಆದರೆ, ಖಾಸಗಿ ಸಂಸ್ಥೆಗಳಿಗೆ ಈ ಅನುದಾನ ಸಿಗುವುದಿಲ್ಲ.

    ಏನು ಲಾಭ?
    ಆರೂ ಸಂಸ್ಥೆಗಳಿಗೆ ಸಂಪೂರ್ಣ ಸ್ವಾಯತ್ತತೆ ಸಿಗುವ ಕಾರಣ ಯಾವುದೇ ನಿರ್ಧಾರ ತೆಗೆದುಕೊಳ್ಳಬಹುದು. ಯಾವುದೇ ಹೊಸ ಕೋರ್ಸ್ ಆರಂಭಕ್ಕೆ ಅವಕಾಶವಿದೆ. ವಿದೇಶದ ಬೋಧಕರನ್ನು ನೇಮಿಸಲು ಅವಕಾಶದ ಜೊತೆಗೆ ವಿದೇಶಿ ವಿದ್ಯಾರ್ಥಿಗಳ ಸೇರ್ಪಡೆಗೆ ಸ್ವಾತಂತ್ರ್ಯವಿದೆ. ಸರಕಾರದ ಅನುಮತಿ ಇಲ್ಲದೆಯೇ ಯಾವುದೇ ವಿದೇಶಿ ಶಿಕ್ಷಣ ಸಂಸ್ಥೆಗಳ ಜತೆ ಮಾತುಕತೆ ನಡೆಸಬಹುದು.

  • ರಾಜಕೀಯ ವೈಷಮ್ಯದಿಂದ ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಪುರ್ತಗೇರಿ ಗ್ರಾಮಸ್ಥರು!

    ರಾಜಕೀಯ ವೈಷಮ್ಯದಿಂದ ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಪುರ್ತಗೇರಿ ಗ್ರಾಮಸ್ಥರು!

    ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಪುರ್ತಗೇರಿ ಗ್ರಾಮಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಮೂಲಭೂತ ಸೌಲಭ್ಯಗಳು ಮರೀಚಿಕೆಯಾಗಿದೆ. ಇದರಿಂದಾಗಿ ಗ್ರಾಮಸ್ಥರು ಯಾವ ಸರ್ಕಾರ ಬಂದರೂ ನಮಗೆ ಮಾತ್ರ ಯಾವುದೆ ಸೌಲಭ್ಯ ಮಾತ್ರ ಸಿಗುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕುತ್ತಿದ್ದಾರೆ.

    ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಪುರ್ತಗೇರಿ ಗ್ರಾಮವು, ಶಾಸಕ ಜಿ.ಎಸ್. ಪಾಟೀಲ್, ಮಾಜಿ ಸಚಿವ ಕಳಕಪ್ಪ ಬಂಡಿ, ಶ್ರೀಶೈಲಪ್ಪ ಬಿದರೂರ್ ಹಾಗೂ ಜ್ಞಾನದೇವ ದೊಡ್ಡಮೇಟಿ ಅಲ್ಲದೇ ಅನೇಕ ಘಟಾನುಘಟಿ ನಾಯಕರುಗಳು ಆಡಳಿತ ಮಾಡಿದ ಕ್ಷೇತ್ರ. ಗ್ರಾಮದಲ್ಲಿನ ದುಸ್ಥಿತಿ ನೋಡಿದರೇ, ಈ ನಾಯಕರುಗಳು ಇಷ್ಟು ವರ್ಷಗಳ ಕಾಲ ಯಾವ ರೀತಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂಬುದು ಉದಾಹರಣೆಯಾಗಿದೆ.

    ರಾಂಪೂರ ಗ್ರಾಮ ಪಂಚಾಯತ ವ್ಯಾಪ್ತಿಗೆ ಒಳಪಡುವ ಈ ಗ್ರಾಮದಲ್ಲಿ 400 ರಿಂದ 450 ಮನೆಗಳಿವೆ. ಸುಮಾರು 1,100 ಮಂದಿ ಕನಿಷ್ಠ ಸೌಲಭ್ಯಗಳಿಂದಲೂ ವಂಚಿತರಾಗಿ ಬದುಕು ಸಾಗಿಸುತ್ತಿದ್ದಾರೆ. ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಹೋಗಲು ಹಾಗೂ ಸಾರ್ವಜನಿಕರು ಓಡಾಡಲು 3 ಕಿಲೋ ಮೀಟರ್ ದೂರವಿರುವ ಗಜೇಂದ್ರಗಡ ಪಟ್ಟಣಕ್ಕೆ ನಡೆದುಕೊಂಡೇ ಹೋಗಬೇಕು. ಇಲ್ಲವೇ ಸೈಕಲ್, ಬೈಕ್ ಅಥವಾ ಟಂ ಟಂ ವಾಹನಗಳಿಗೆ ಅವಲಂಬಿತರಾಗಬೇಕು. ಗಜೇಂದ್ರಗಡದಲ್ಲಿ ಬಸ್ ಡಿಪೋ ಇದ್ರೂ 3 ಕಿ.ಮೀ ದೂರವಿರುವ ಪುರ್ತಗೇರಿ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿಲ್ಲ.

    ರಾಜಕೀಯ ವೈಷ್ಯಮ್ಯದಿಂದ ಊರು ಅಭಿವೃದ್ಧಿಯಾಗದೇ ಜನ ಪರಿತಪಿಸುತ್ತಿದ್ದಾರೆ. ಬೇರೆ ಅಭಿವೃದ್ಧಿ ಬೇಡ ನಮ್ಮ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ಬಸ್ ಸೌಲಭ್ಯ ಕಲ್ಪಿಸಿ ಕೊಡಿ ಎಂದು ದೂರದ ಗದಗದಿಂದ ನಮ್ಮ ಬೆಳಕು ಕಾರ್ಯಕ್ರಮಕ್ಕೆ ಬಂದಿದ್ದಾರೆ.

    https://www.youtube.com/watch?v=oU1jbaXy9Ms

  • ಅಜ್ಜ-ಅಜ್ಜಿಯ ಆಸರೆಯಲ್ಲಿರುವ ವಿದ್ಯಾಳ ವಿದ್ಯಾಭ್ಯಾಸಕ್ಕೆ ಬೇಕಿದೆ ನೆರವು

    ಅಜ್ಜ-ಅಜ್ಜಿಯ ಆಸರೆಯಲ್ಲಿರುವ ವಿದ್ಯಾಳ ವಿದ್ಯಾಭ್ಯಾಸಕ್ಕೆ ಬೇಕಿದೆ ನೆರವು

    ಹಾವೇರಿ: ಮನೆಯಲ್ಲಿ ಕಿತ್ತು ತಿನ್ನುವ ಬಡತನ. ಜೊತೆಗೆ ಕೈಲಾಗದಿರುವ ವಯಸ್ಸಾದ ದಂಪತಿ. ತಂದೆ ತಾಯಿಯನ್ನು ಕಳೆದುಕೊಂಡ ಈ ಅನಾಥ ಮಕ್ಕಳಿಗೆ ಈಗ ಅಜ್ಜ-ಅಜ್ಜಿಯೇ ಆಸರೆ. ಹೌದು ಇದು ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕರೂರು ಗ್ರಾಮದ ಕರುಣಾಜನಕ ಕಥೆ.

    ವಿದ್ಯಾ ಮತ್ತು ವಿಜಯ್ ಚಿಕ್ಕ ವಯಸ್ಸಿನಲ್ಲಿಯೇ ತಂದೆ-ತಾಯಿಯನ್ನು ಕಳೆದುಕೊಂಡ ನತದೃಷ್ಠರು. ಆದರೆ ಇವರನ್ನು ಅನಾಥರನ್ನಾಗಿಸದೇ ಈ ಅಜ್ಜಸ-ಅಜ್ಜಿ ಸಾಕಿ ಸಲುಹಿದ್ದಾರೆ. ವಿದ್ಯೆ ಬುದ್ಧಿಯನ್ನೂ ಕಲಿಸಿದ್ದಾರೆ. ವಿದ್ಯಾ ಮತ್ತು ವಿಜಯ್‍ಗೆ ಶಿಕ್ಷಣ ಕೊಡಿಸುವಲ್ಲಿ ಅಜ್ಜ ಕಾಂತಪ್ಪ, ಅಜ್ಜಿ ಗಿರಿಜಮ್ಮನ ಅವಿರತ ಪರಿಶ್ರಮ ಇದೆ. ಇದರ ಪರಿಣಾಮವಾಗಿ ವಿದ್ಯಾ ಎಸ್‍ಎಸ್‍ಎಲ್‍ಸಿಯಲ್ಲಿ 66%, ಪಿಯುಸಿಯಲ್ಲಿ 86% ಹಾಗೂ ಬಿಎ ಪದವಿಯಲ್ಲಿ 80% ಅಂಕ ಪಡೆದಿರುವ ಪ್ರತಿಭಾವಂತೆ.

    ಸಣ್ಣ ವಯಸ್ಸಿನಲ್ಲಿಯೇ ತಂದೆ-ತಾಯಿ ಇಲ್ಲದ ತಬ್ಬಲಿ ಮಕ್ಕಳಿಗೆ ಅಜ್ಜ-ಅಜ್ಜಿ ಆಸರೆಯಾಗಿ ಜಮೀನಿನಲ್ಲಿ ಕೂಲಿ ಕೆಲಸ ಮಾಡಿಕೊಂಡು ವಿದ್ಯಾ ಹಾಗೂ ವಿಜಯ್ ಗೆ ಶಿಕ್ಷಣ ಕೊಡಿಸಿದ್ದಾರೆ. ಈಗ ಅಜ್ಜ-ಅಜ್ಜಿಗೆ ವಯಸ್ಸಾಗಿದೆ. ವಿಜಯ್ ಹೆಸ್ಕಾಂ ಕಚೇರಿಯಲ್ಲಿ ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಾ ಮನೆಯನ್ನು ನಡೆಸುತ್ತಿದ್ದಾನೆ. ಆದರೆ ವಿದ್ಯಾ ಎಂಎ, ಬಿಎಡ್ ಓದಿ ಶಿಕ್ಷಕಿಯಾಗಬೇಕೆಂಬ ಕನಸು ಕಂಡಿದ್ದಾಳೆ. ಆದ್ರೆ ಬಡ ಪ್ರತಿಭಾವಂತೆಗೆ ಮುಂದೆ ಓದುವ ಆಸೆಗೆ ಬಡತನ ಅಡ್ಡಿಯಾಗಿದೆ.

    ಬಡತನದಲ್ಲಿಯೂ ವಿದ್ಯೆಯ ಮಹತ್ವನ್ನು ಅರಿತಿರುವ ವಿದ್ಯಾ ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದ ಮೂಲಕ ತನ್ನ ವಿದ್ಯಾಭ್ಯಾಸ ಕನಸನ್ನು ನನಸು ಮಾಡಿಕೊಳ್ಳುವ ತವಕದಲ್ಲಿದ್ದಾರೆ. ಯಾರಾದ್ರೂ ದಾನಿಗಳು ಬಡ ಪ್ರತಿಭಾವಂತೆಗೆ ಸಹಾಯ ಮಾಡುತ್ತಾರೆಂಬ ವಿಶ್ವಾಸ ನಮ್ಮದು.

    https://www.youtube.com/watch?v=hKfGWTvhXcE

  • ದೋಸ್ತಿ ಬಜೆಟ್‍ನಲ್ಲಿ ಶಿಕ್ಷಣಕ್ಕೆ ಸಿಕ್ಕಿದ್ದು ಏನು?

    ದೋಸ್ತಿ ಬಜೆಟ್‍ನಲ್ಲಿ ಶಿಕ್ಷಣಕ್ಕೆ ಸಿಕ್ಕಿದ್ದು ಏನು?

    ಬೆಂಗಳೂರು: ಸಮ್ಮಿಶ್ರ ಸರ್ಕಾದ ಮೊದಲ ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿಯರು ಪ್ರಾಥಮಿಕ, ಪ್ರೌಢ ಮತ್ತು ಉನ್ನತ ಶಿಕ್ಷಣಕ್ಕೆ ಒಟ್ಟು 26,581 ಕೋಟಿ ರೂ. ಹಣವನ್ನು ಮೀಸಲಿಟ್ಟಿದ್ದಾರೆ.

    ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ:
    * ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳ ಕಟ್ಟಡಗಳ ದುರಸ್ತಿಗಾಗಿ ವಿಶೇಷ ಪ್ಯಾಕೇಜ್ ಮೂಲಕ 150 ಕೋಟಿ ರೂ.

    * ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ರಾಜ್ಯ ತರಬೇತಿ ಕೇಂದ್ರಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ, ತರಬೇತಿ ಕೇಂದ್ರಗಳನ್ನು ಬಲವರ್ಧಿಸುವ ಉದ್ದೇಶದಿಂದ 5 ಕೋಟಿ ರೂ. ಅನುದಾನ.

    * ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮ ತರಗತಿಗಳ ಜೊತೆಗೆ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸಿಲಾಗುವುದು. ಇದರಿಂದಾಗಿ ಹೆಚ್ಚು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಆಕರ್ಷಿಸಬಹುದಾಗಿದೆ. ಆರಂಭಿಕವಾಗಿ 1,000 ಶಾಲೆಗಳಲ್ಲಿ ಇಂತಹ ಪ್ರಯೋಗ ನಡೆಸಲಾಗುವುದು.

    * ರಾಜ್ಯದ 48 ಸಾವಿರ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಮತ್ತು ಮಕ್ಕಳ ಹಾಜರಾತಿಯ ನಿಗಾವಹಿಸಲು ಬಯೋಮೆಟ್ರಿಕ್ ಸಾಧನಗಳನ್ನು ಅಳವಡಿಸಲಾಗುವುದು. ಈ ಯೋಜನೆಯನ್ನು ಮುಂದಿನ 3 ವರ್ಷಗಳಲ್ಲಿ ಜಾರಿಗೊಳಿಸಲಾಗುವುದು. ಈ ಉದ್ದೇಶಕ್ಕಾಗಿ ಪ್ರಸಕ್ತ ಸಾಲಿನಲ್ಲಿ 5 ಕೋಟಿ ರೂಪಾಯಿ ಅನುದಾನ ಮೀಸಲು.

    * ಪ್ರಸ್ತುತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಆಯ್ದ 4,100 ಸರ್ಕಾರಿ ಪ್ರಾಥಮಿಕ ಶಾಲೆಗಳ ಆವರಣಕ್ಕೆ ಸ್ಥಳಾಂತರಿಸಿ `ಬಾಲಸ್ನೇಹಿ ಕೇಂದ್ರ’ಗಳನ್ನಾಗಿ ಬಲವರ್ಧಿಸಲಾಗುವುದು. ಹಂತಹಂತವಾಗಿ ಕಾರ್ಯಸಾಧ್ಯತೆಯನುಸಾರ ಇತರೆ ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ/ಯು.ಕೆ.ಜಿ. ತರಗತಿಗಳನ್ನು ಪ್ರಾರಂಭಿಸಲಾಗುವುದು. ಇದರಿಂದ ಸರ್ಕಾರಿ ಶಾಲೆಗಳಲ್ಲಿನ ದಾಖಲಾತಿ ಪ್ರಮಾಣವು ಹೆಚ್ಚಾಗುವುದರೊಂದಿಗೆ ಮಕ್ಕಳ ಕಲಿಕೆ ಗುಣಮಟ್ಟವನ್ನು ವೃದ್ಧಿಸಬಹುದು.

    * 1 ಕಿ.ಮೀ ವ್ಯಾಪ್ತಿಯಲ್ಲಿರುವ ಮತ್ತು ದಾಖಲಾತಿ ಕಡಿಮೆ ಇರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳನ್ನು ಹತ್ತಿರದ ಶಾಲೆಯೊಂದಿಗೆ ವಿಲೀನಗೊಳಿವುದು. ಈಗಾಗಲೇ 1 ಕಿ.ಮೀ ವ್ಯಾಪ್ತಿಯಲ್ಲಿ ಕಡಿಮೆ ದಾಖಲಾತಿ ಹೊಂದಿರುವ 28,847 ಸರ್ಕಾರಿ ಮತ್ತು ಅನುದಾನಿತ ಶಾಲೆಗಳನ್ನು ಗುರುತಿಸಲಾಗಿದ್ದು, ಈ ಶಾಲೆಗಳನ್ನು ಹತ್ತಿರದ 8,530 ಸರ್ಕಾರಿ ಶಾಲೆಗಳೊಂದಿಗೆ ವಿಲೀನಗೊಳಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು.

    ಉನ್ನತ ಶಿಕ್ಷಣ:
    * ರಾಜ್ಯದ ಸರ್ಕಾರಿ ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ಇತರೆ ದುರಸ್ಥಿ ಕಾರ್ಯಗಳಿಗೆ ವಿಶೇಷ ಪ್ಯಾಕೇಜ್ ಮುಖಾಂತರ 250 ಕೋಟಿ ರೂ. ಅನುದಾನ.

    * ನಮ್ಮ ರಾಜ್ಯದಲ್ಲಿರುವ ವಿಶ್ವವಿದ್ಯಾನಿಲಗಳು ವೃತ್ತಿ ಪೂರಕ ಶಿಕ್ಷಣಗಳನ್ನು ನೀಡುತ್ತಿಲ್ಲವಾಗಿರುವುದರಿಂದ ಪದವೀಧರರನ್ನು ನೇರವಾಗಿ ಉದ್ಯೋಗಕ್ಕೆ ತೆಗೆದುಕೊಳ್ಳಲು ತೊಂದರೆಯಾಗಿದೆ. ಸಾಂಪ್ರದಾಯಿಕ ಶಿಕ್ಷಣ ವ್ಯವಸ್ಥೆಯಿಂದ ಹೊರತಾದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತರಲು ಉದ್ದೇಶಿಸಿ ಕೌಶಲ್ಯವೇ ಬುನಾದಿಯಾದ ಹೊಸ ವಿಶ್ವವಿದ್ಯಾನಿಲಯಗಳನ್ನು ತೆರೆಯಲು ತೀರ್ಮಾನ ಕೈಗೊಂಡಿದೆ.

    * ರಾಜ್ಯದಲ್ಲಿರುವ ಪ್ರಾಥಮಿಕ ಶಾಲಾ ಹಂತದಲ್ಲೇ ಕ್ರೀಡೆಯನ್ನು ಪಠ್ಯಕ್ರಮದಲ್ಲಿ ಸೇರಿಸಲಾಗಿದ್ದು, ಆದರೆ ಉನ್ನತ ಶಿಕ್ಷಣದಲ್ಲಿ ಸಾಂಪ್ರದಾಯಿಕ ವ್ಯವಸ್ಥೆಯ ಪದವಿ ಇದ್ದರೆ ಒಳ್ಳೆಯದು ಎಂಬ ಭಾವನೆಯಿಂದ ಬಹುತೇಕ ವಿದ್ಯಾರ್ಥಿಗಳು ಕ್ರೀಡೆ ಮತ್ತು ಅಂಗಸಾಧನೆಯನ್ನು ಒಂದು ವಿಷಯವಾಗಿ ಕಲಿಯಲು ಮುಂದೆ ಬರುತ್ತಿಲ್ಲ. ಹೀಗಾಗಿ ತುಮಕೂರು ಜಿಲ್ಲೆಯಲ್ಲಿ ಕ್ರೀಡೆ ಮತ್ತು ಅಂಗಸಾಧನೆಗೆ ಸಂಬಂಧಿಸಿದ ವಿಶ್ವವಿದ್ಯಾನಿಲಯವನ್ನು ಖಾಸಗಿ ಸಹಭಾಗಿತ್ವದಲ್ಲಿ ತೆರೆಯಲು ಯೋಜನೆ ರಚಿಸಲಾಗಿದೆ. ಇದಕ್ಕೆ ಪೂರಕವಾಗಿ ತುಮಕೂರು ಜಿಲ್ಲೆಯಲ್ಲಿ ಕ್ರೀಡೆ ಮತ್ತು ಅಂಗಸಾಧನೆಗಳಿಗೆ ಬೇಕಾದಂತಹ ಉಪಕರಣ ಮತ್ತು ಇತರೆ ವಸ್ತುಗಳನ್ನು ತಯಾರು ಮಾಡುವ ಘಟಕ ಸ್ಥಾಪನೆ ಹಾಗೂ ಪ್ರಾಥಮಿಕ ಕಾರ್ಯಗಳಿಗಾಗಿ 3 ಕೋಟಿ ರೂಪಾಯಿಗಳನ್ನು ಮೀಸಲೀರಿಸಿದೆ.

    * ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಲಕ್ಷಾಂತರ ಭದ್ರತಾ ಸಿಬ್ಬಂದಿಗಳು ದುಡಿಯುತ್ತಿದ್ದಾರೆ. ಆದರೆ ಸರ್ಕಾರದಲ್ಲಿ ನೇಮಕವಾಗುವ ಹಾಗೂ ಖಾಸಗಿ ಕ್ಷೇತ್ರದಲ್ಲಿ ಸೇವೆ ಒದಗಿಸುವ ಭದ್ರತಾ ಸಿಬ್ಬಂದಿಗಳಿಗೆ ಅಗತ್ಯವಾದ ತರಬೇತಿಗಳನ್ನು ನೀಡುತ್ತಿರುವುದಿಲ್ಲ. ಇದೀಗ ಭದ್ರತೆಯ ಪರಿಕಲ್ಪನೆಯಲ್ಲಿ ಅನೇಕ ಬದಲಾವಣೆಗಳಾಗಿದ್ದು, ಸೈಬರ್ ಕ್ರೈಂ ಇದರಲ್ಲಿ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ `ತಾಯಿನಾಡು ಭದ್ರತಾ ವಿಶ್ವವಿದ್ಯಾನಿಲಯ’ವನ್ನು ಖಾಸಗಿ ಸಹಭಾಗಿತ್ವದೊಂದಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಆರಂಭಿಸಲು ಉದ್ದೇಶಿಸಿದ್ದು, ಇದಕ್ಕಾಗಿ 3 ಕೋಟಿ ರೂಪಾಯಿಯನ್ನು ಅನುದನವನ್ನು ನೀಡಿದೆ.

    * ನಮ್ಮ ಈಗೀನ ಪ್ರವಾಸೋದ್ಯಮವು ಸಂಘಟಿತವಾಗಿ ಒಂದು ಉದ್ಯಮದ ರೂಪದಲ್ಲಿರುವುದಿಲ್ಲ. ಅಲ್ಲದೇ ಅಗತ್ಯವಿರುವಷ್ಟು ಉದ್ಯೋಗವನ್ನು ನಿರೀಕ್ಷಿತ ಮಟ್ಟದಲ್ಲಿ ಕಲ್ಪಿಸಿರುವುದಿಲ್ಲ. ಪ್ರವಾಸೋದ್ಯಮ ಎಂದರೆ ಉತ್ತಮವಾಗಿ ತರಬೇತಿ ಹೊಂದಿದ, ವಿವಿಧ ಭಾಷೆಯಲ್ಲಿ ಪ್ರವಾಸಿ ಸ್ಥಳದ ಬಗ್ಗೆ ವಿವರವಾದ ಮಾಹಿತಿ ನೀಡುವ ಉತ್ತಮ ಮಾರ್ಗದರ್ಶಿಗಳು ಇರಬೇಕು. ಪ್ರವಾಸಿಗರೊಂದಿಗೆ ಸೌಜನ್ಯದಿಂದ ವರ್ತಿಸುವ ಸಿಬ್ಬಂದಿಗಳಿರಬೇಕು. ಪ್ರವಾಸೋದ್ಯಮವನ್ನು ಲಾಭದಾಯಕವಾಗಿ ನಡೆಸುವ ವ್ಯವಹಾರಿಕ ಜ್ಞಾನ ಇರಬೇಕು. ಸರ್ಕಾರವು ಪ್ರವಾಸಿ ತಾಣಗಳಲ್ಲಿ ರಸ್ತೆ, ಶೌಚಾಲಯ ಇತ್ಯಾದಿ ಮೂಲಸೌಕರ್ಯಗಳನ್ನು ಒದಗಿಸಬಹುದು. ಆದರೆ ಪ್ರವಾಸಿ ಸ್ಥಳ ಮತ್ತು ಪ್ರವಾಸಿಗಳ ಮಧ್ಯೆ ಇರುವ ಮುಖ್ಯ ಕೊಂಡಿಯಾದ ಭಾವನಾತ್ಮಕವಾಗಿ ಬೆಸೆಯುವ ಮಾನವ ಸಂಪನ್ಮೂಲವನ್ನು ಸೃಜಿಸಲಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಮಾನವ ಸಂಪನ್ಮೂಲವನ್ನು ಸೃಜಿಸಲಾಗುದಿಲ್ಲ. ಈ ಹಿನ್ನೆಲೆಯಲ್ಲಿ ಮಾನವ ಸಂಪನ್ಮೂಲವನ್ನು ನಿರಂತರವಾಗಿ ತರಬೇತಿಯ ಮುಖಾಂತರ ಉತ್ತೇಜಿಸಲು ಖಾಸಗಿ ಸಹಭಾಗಿತ್ವದಲ್ಲಿ ಒಂದು ಪ್ರವಸೋದ್ಯಮ ವಿಶ್ವವಿದ್ಯಾನಿಲಯವನ್ನು ಐತಿಹಾಸಿಕ ಸ್ಥಳವಾದ ಹಂಪಿಯಲ್ಲಿ ಆರಂಭಿಸಲು ಉದ್ದೇಶಿಸಿ 3 ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದೆ.

  • ಮೊಮ್ಮಗನ ಶಿಕ್ಷಣದ ಭವಿಷ್ಯದ ಕನಸು ಕಾಣುತ್ತಿರುವ ಅಜ್ಜಿಗೆ ನೆರವು ಬೇಕಿದೆ

    ಮೊಮ್ಮಗನ ಶಿಕ್ಷಣದ ಭವಿಷ್ಯದ ಕನಸು ಕಾಣುತ್ತಿರುವ ಅಜ್ಜಿಗೆ ನೆರವು ಬೇಕಿದೆ

    ಹಾಸನ: ಕುಡಿತದ ಚಟಕ್ಕೆ ಬಿದ್ದವರು ಮನ, ಮನೆಯನ್ನು ಮಾರಿಕೊಳ್ಳುವರು ಎಂಬ ಮಾತಿದೆ. ಆ ಮಾತಿಗೆ ಪೂರಕವಂತೆ ಈ ವರದಿ ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತಿದ್ದೇವೆ. ಹೌದು ಹಾಸನ ಜಲ್ಲೆ ಶೆಟ್ಟಿ ಹಳ್ಳಿ ಗ್ರಾಮದ ವೃದ್ಧಾಶ್ರಮದಲ್ಲಿರುವ ವೃದ್ಧೆಯ ಕರುಣಾಜನಕ ಕಥೆ ಇದು.

    ಹಾಸನದ ನಿವಾಸಿಯಾಗಿರುವ ಜಯಲಕ್ಷ್ಮಮ್ಮ ಆಸ್ತಿ ಪಾಸ್ತಿ ಹೊಂದಿದ್ದ ಐಶ್ವರ್ಯವಂತ, ಗಂಡ ಮತ್ತು ಮಗನೊಂದಿಗೆ ಸುಖ ಸಂಸಾರದ ಜೀವನ ನಡೆಸುತ್ತಿದ್ದರು. ಗಂಡ ತೀರಿಹೋದ ನಂತರ ಮಗನಿಗೆ ಆಸರೆಯಾಗಿದ್ದರು. ಮಗನಿಗೆ ಮದುವೆ ಮಾಡಿ ಮಗ ಮತ್ತು ಸೊಸೆ, ಮೊಮ್ಮಗನೊಂದಿಗೆ ವಾಸ ಮಾಡುತ್ತಿದ್ದರು. ಮಗ ನವೀನ್ ಬರೋಬ್ಬರಿ 40 ಆಟೋಗಳ ಮಾಲೀಕನಾಗಿದ್ದ. ಆದರೆ ಕುಡಿತದ ಚಟಕ್ಕೆ ಬಿದ್ದು ಆಸ್ತಿ ಮನೆಯನ್ನು ಮಾರಿಬಿಟ್ಟ. ಮಗನ ಕುಡಿತದ ಚಟಕ್ಕೆ ಬೇಸತ್ತ ಪತ್ನಿ ಬೆಂಗಳೂರಿನಲ್ಲಿ ರೈಲಿಗೆ ತಲೆಕೊಟ್ಟಿದ್ದಾರೆ.

    ಆದರೆ ಮಗ ಎರಡನೇ ಮದ್ವೆಯಾಗಿ ವೃದ್ಧೆ ತಾಯಿಯ ತಾಳಿಯನ್ನು ಕಸಿದುಕೊಂಡು ಕುಡಿತಕ್ಕೆ ಮಾರಿಕೊಂಡು ಬಳಿಕ ಸ್ವತಃ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಮಗನ ಸಾವನ್ನು ಕಂಡು ವೃದ್ಧೆ ಜಯಲಕ್ಷ್ಮಮ್ಮ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ಅದೃಷ್ಟವಶಾತ್ ಕೆಲದಿನಗಳ ಕಾಲ ಕೋಮಾದಲ್ಲಿದ್ದು ಮರಳಿ ಪ್ರಜ್ಞೆ ಪಡೆದುಕೊಂಡಿದ್ದಾರೆ. ಮಗನ ಎರಡನೇ ಪತ್ನಿ ಮನೆಯೂ ಸಹ ತವರು ಸೇರಿದ್ದು, ಸದ್ಯ ಅಜ್ಜಿ ಮೊಮ್ಮಗ ಇಬ್ಬರು ಬೀದಿ ಪಾಲಾಗಿದ್ದಾರೆ.

    ಸದ್ಯ ಸ್ವಂತ ಇರಲು ಮನೆ ಇಲ್ಲ, ತಿನ್ನಲೂ ಊಟ ಇಲ್ಲದ ಪರಿಸ್ಥಿತಿಯಲ್ಲಿರುವ ಅಜ್ಜಿ ಜಯಲಕ್ಷಮ್ಮ ಸ್ಥಳೀಯರ ಸಹಾಯದಿಂದ ಮೊಮ್ಮಗನಿಗೆ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಉತ್ತಮ ವಿದ್ಯಾಭ್ಯಾಸ ಕೊಡಿಸುತ್ತಿದ್ದರು. 4ನೇ ತರಗತಿಯಲ್ಲಿ ಓದುತ್ತಿದ್ದ ಪ್ರಜ್ವಲ್‍ಗೆ ಪರೀಕ್ಷಾ ಶುಲ್ಕ ಕಟ್ಟಿಲ್ಲವೆಂದು ಶಾಲೆಯವರು ಪರೀಕ್ಷೆಗೆ ಕೂರಿಸದೆ ಹೊರ ಹಾಕಿದ್ದರು. ಇದರಿಂದ ಈಗ ದಾರಿ ಕಾಣದೇ ಕಂಗಾಲಾಗಿರುವ ಅಜ್ಜಿ, ಮೊಮ್ಮಗನನ್ನು ಅನಾಥಾಶ್ರಮವೊಂದಕ್ಕೆ ಸೇರಿಸಿ ತಾನೂ ಕೂಡ ವೃದ್ಧಾಶ್ರಮದಲ್ಲಿ ಆಶ್ರಯ ಪಡೆದಿದ್ದಾರೆ.

    ಇಷ್ಟೆಲ್ಲ ಕಷ್ಟಗಳ ನಡುವೆ ಶಿಕ್ಷಣದ ಮಹತ್ವ ಅರಿತಿರುವ ಈ ಅಜ್ಜಿ ನನಗೆ ಏನೂ ಬೇಡ ನಾನು ಅನಾಥಾಶ್ರಮದಲ್ಲಿ ಜೀವಿಸುತ್ತೇನೆ. ನನ್ನ ಮೊಮ್ಮಗ ಪ್ರಜ್ವಲ್‍ಗೆ ವಿದ್ಯಾಭ್ಯಾಸ ಕೊಡಿಸಿ ಅವನ ಭವಿಷ್ಯ ಪ್ರಜ್ವಲಿಸುವಂತೆ ಮಾಡಿ ಎಂದು ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮಕ್ಕೆ ಬಂದಿದ್ದಾರೆ.