Tag: education

  • ತನ್ನಿಬ್ಬರು ಮಕ್ಕಳಿಗೆ ಶಿಕ್ಷಣ ಕೊಡಿಸುವ ಆಸೆ ಹೊಂದಿರುವ ತಾಯಿಗೆ ಬೇಕಿದೆ ಸಹಾಯ

    ತನ್ನಿಬ್ಬರು ಮಕ್ಕಳಿಗೆ ಶಿಕ್ಷಣ ಕೊಡಿಸುವ ಆಸೆ ಹೊಂದಿರುವ ತಾಯಿಗೆ ಬೇಕಿದೆ ಸಹಾಯ

    ಹಾಸನ: ಕಳೆದ ಏಳು ವರ್ಷಗಳ ಹಿಂದೆ ಗಂಡನನ್ನು ಕಳೆದುಕೊಂಡಿರುವ ಮಹಿಳೆಯೊಬ್ಬರು, ತನ್ನ ಇಬ್ಬರು ಮಕ್ಕಳಿಗೆ ಶಿಕ್ಷಣ ಕೊಡಿಸಲು ಸಾಧ್ಯವಾಗದ ಅಸಹಾಯಕ ಸ್ಥಿತಿಯಲ್ಲಿ ಬೆಳಕು ಕಾರ್ಯಕ್ರಮಕ್ಕೆ ಸಹಾಯ ಕೇಳಿಕೊಂಡು ಬಂದಿದ್ದಾರೆ.

    ಮೂಲತಃ ಮಂಗಳೂರಿನ ಪಡುಬಿದ್ರೆಯ ಮುಲ್ಕಿಯ ಪ್ರಭಾವತಿ ಅವರು ಕುಮಾರಜ್ಯೋಗೆ ಎಂಬವರನ್ನು ಮದುವೆಯಾಗಿದ್ದರು. ಮದುವೆ ಬಳಿಕ ಹಾಸನ ತಾಲೂಕಿನ ಬಸ್ತಿಹಳ್ಳಿ ಗ್ರಾಮಕ್ಕೆ ವಲಸೆ ಬಂದು ನೆಲೆಸಿದ್ದರು. ಆದರೆ ಕುಡಿತದ ಚಟ ಹೊಂದಿದ್ದ ಪತಿ ಕುಮಾರಜ್ಯೋಗೆ 7 ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಈ ವೇಳೆಗೆ ದಂಪತಿಗೆ ಇಬ್ಬರು ಮಕ್ಕಳಾಗಿತ್ತು. ಪತಿ ಮರಣ ನಂತರ ಇಬ್ಬರು ಚಿಕ್ಕಮಕ್ಕಳೊಂದಿಗೆ ಪ್ರಭಾವತಿ ಅವರು ದಿಕ್ಕುತೋಚದಂತಾಗಿ ಜೀವನ ನಡೆಸಿದ್ದಾರೆ.

     

    ಪತಿ ಆಕಾಲಿಕ ಮರಣದಿಂದ ಇಬ್ಬರು ಮಕ್ಕಳ ಜವಾಬ್ದಾರಿ ಹೊತ್ತ ಇವರು, ಭಿಕ್ಷೆ ಬೇಡಿ ತಮ್ಮ ಮಕ್ಕಳನ್ನು ಬೆಳೆಸಿದ್ದಾರೆ. ಸದ್ಯ ಸರ್ಕಾರದಿಂದ ನೀಡಿರುವ ಒಂದು ಪುಟ್ಟ ಮನೆಯಲ್ಲಿ ಜೀವನ ನಡೆಸುತ್ತಿದ್ದಾರೆ. ತನ್ನ ಮಕ್ಕಳು ನನ್ನಂತೆ ಭಿಕ್ಷಾಟನೆಗೆ ಹೋಗಬಾರದು ಎಂಬ ಕನಸು ಹೊಂದಿರುವ ಪ್ರಭಾವತಿ ಅವರು ಗುಜರಿ ಹಾಯುವ ಕೆಲಸ ಮಾಡುತ್ತ ಜೀವನ ನಡೆಸುತ್ತಿದ್ದಾರೆ.

    ಸದ್ಯ ಪ್ರಭಾವತಿ ಅವರ ಮೊದಲ ಮಗ ಮಂಜುನಾಥ್ ಬಸ್ತಿಹಳ್ಳಿಯ ಸಮೀಪದ ಮೊಸಳೆಹೊಸಳ್ಳಿ ಗ್ರಾಮದ ಶಾಲೆಯಲ್ಲಿ 7ನೇ ತರಗತಿ ಹಾಗೂ ಮಗಳು ಕೀರ್ತಿ 6ನೇ ತರಗತಿಯಲ್ಲಿ ಓದುತ್ತಿದ್ದಾರೆ. ಜೀವನ ನಿರ್ವಹಣೆ ಕಷ್ಟ ಇರುವ ಸಮಯದಲ್ಲಿ ಪ್ರಭಾವತಿ ಅವರು ಕಷ್ಟಪಟ್ಟು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸಿದ್ದಾರೆ. ಶಾಲೆಗೆ ತೆರಳಲು ಬಸ್ ಸೌಲಭ್ಯ ಇದ್ದರೂ ಬಸ್ ಪಾಸ್ ಪಡೆಯಲು ಇಲ್ಲದ ಕಾರಣ 5 ಕಿಮೀ ದೂರದ ಶಾಲೆಗೆ ದಿನನಿತ್ಯ ಕಷ್ಟಪಟ್ಟು ಹೋಗುತ್ತಿದ್ದಾರೆ.

    ಬಡತನದ ಕಹಿಯನ್ನ ಜೀವನದ ಆರಂಭದಲ್ಲಿಯೇ ಅರಿತಿರುವ ಮಂಜುನಾಥ್ ಹಾಗೂ ಕೀರ್ತಿ ಶಿಕ್ಷಣದಲ್ಲಿ ಮುಂದಿದ್ದಾರೆ. ಬಾಲಕಿ ಕೀರ್ತಿ ಸಣ್ಣ ವಯಸ್ಸಿನಾವಳದ ಕಾರಣ ಆಕೆಗೆ ಬಡತನದ ಸ್ಥಿತಿಯ ಅರಿವಿಲ್ಲ. ಆದರೆ ಇಬ್ಬರು ಉತ್ತಮ ಶಿಕ್ಷಣ ಪಡೆಯುವ ಕನಸು ಹೊಂದಿದ್ದಾರೆ. 9ನೇ ತರಗತಿ ಇರಬೇಕಿದ್ದ ಮಂಜುನಾಥ್ ಬಡತನದ ಕಾರಣದಿಂದ 7ನೇ ತರಗತಿ ವ್ಯಾಸಂಗ ನಡೆಸುತ್ತಿದ್ದಾನೆ. ದಿನನಿತ್ಯದ ಊಟಕ್ಕೂ ಕಷ್ಟ ಪಡುತ್ತಿರುವ ಈ ಕುಟುಂಬಕ್ಕೆ ದಾನಿಗಳು ಸಹಾಯ ಮಾಡಿ ಎಂದು ನೆರೆಹೊರೆಯವರೂ ಮನವಿ ಮಾಡಿದ್ದಾರೆ. ಪತಿ ಕಳೆದು ಕೊಂಡು ತನ್ನಿಬ್ಬರು ಮಕ್ಕಳಿಗೆ ಭಿಕ್ಷೆ ಬೇಡಿಯಾದ್ರೂ ಶಿಕ್ಷಣ ಕೊಡಿಸಬೇಕು ಎನ್ನುವ ಪ್ರಭಾವತಿ ವರಿಗೆ ಸಹಾಯದ ಅವಶ್ಯಕತೆ ಇದೆ.

    https://youtu.be/SLX5W03K18s

  • ನಾವೆಲ್ಲ ಖಾದಿ ಹಾಕ್ತೀವಿ, ಆದ್ರೆ ಒಳಗಡೆ ಯಂತ್ರದಿಂದ ತಯಾರಿಸಿದ ಬನಿಯನ್ ಹಾಕ್ತೀವಿ: ಸಿಎಂ

    ನಾವೆಲ್ಲ ಖಾದಿ ಹಾಕ್ತೀವಿ, ಆದ್ರೆ ಒಳಗಡೆ ಯಂತ್ರದಿಂದ ತಯಾರಿಸಿದ ಬನಿಯನ್ ಹಾಕ್ತೀವಿ: ಸಿಎಂ

    ಗದಗ: ನಾವೆಲ್ಲ ಖಾದಿ ಹಾಕ್ತೀವಿ, ಆದ್ರೆ ಒಳಗಡೆ ಮಷಿನ್ ನಿಂದ ತಯಾರಿಸಿದ ಬನಿಯನ್ ಹಾಕ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

    ಗದಗ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ವಿವಿ ಉದ್ಘಾಟನಾ ಸಮಾರಂಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಟೀಲ್ ಪುಟ್ಟಪ್ಪ ಅವರನ್ನ ಶ್ಲಾಘಿಸಿ, ನಾವೆಲ್ಲ ಖಾದಿ ಹಾಕ್ತೀವಿ, ಆದ್ರೆ ಒಳಗಡೆ ಮಷಿನ್ ನಿಂದ ತಯಾರಿಸಿದ ಬನಿಯನ್ ಹಾಕ್ತೀವೆ. ಆದ್ರೆ ಪಾಟೀಲ್ ಪುಟ್ಟಪ್ಪ ಅವರು ಹಾಗಲ್ಲ. ಅಪ್ಪಟ ಗಾಂಧಿವಾದಿಯಾಗಿದ್ದರೆಂದು ನೆನೆದರು. ಗ್ರಾಮೀಣಾಭಿವೃದ್ಧಿಗೆ ಸರ್ಕಾರದಿಂದ ಸಹಾಯಕ್ಕೆ ಸಿದ್ಧವಾಗಿದ್ದೇವೆ. ಆದ್ರೆ ಅಭಿವೃದ್ಧಿ ನಿರೀಕ್ಷಿತ ಹಾದಿಯಲ್ಲಿರಬೇಕೆಂದು ಹೇಳಿದರು.

    ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಕಡಿಮೆ ಇದೆ. ಸಮಾಜದಲ್ಲಿ ಶಿಕ್ಷಣದಿಂದ ವಂಚಿತರಾದವರು ಹಿಂದೆ ಇರ್ತಾರೆ. ಈ ತಾರತಮ್ಯ ಯಾವಾಗ್ಲೂ ಇದೆ. ಶತಶತಮಾನದಿಂದ ಬಹುಸಂಖ್ಯಾತ ಜನ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಬಸವಣ್ಣನವರ ಕಾಲದಲ್ಲಿ ಮಾತ್ರ ಮಹಿಳೆಯರಿಗೆ ಸಮಾನ ಸ್ಥಾನಮಾನವಿತ್ತು. ಆದರೆ ಈಗ ಮತ್ತೆ ಪ್ರತಿಭೆ ವಿಕಾಸಕ್ಕೆ ಅವಕಾಶ ಸಿಗುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.

    ಪ್ರತಿಭೆ ಯಾರ ಸ್ವತ್ತು ಅಲ್ಲ, ಒಂದು ವರ್ಗಕ್ಕೆ ಸೀಮಿತವೂ ಅಲ್ಲ. ಅವಕಾಶ ಸಿಕ್ಕಾಗ ಮಾತ್ರ ಸುಪ್ತ ಪ್ರತಿಭೆಯ ಅನಾವರಣ ಸಾಧ್ಯವಾಗುತ್ತೆ. ಗ್ರಾಮಗಳ ಸಬಲೀಕರಣಕ್ಕೆ ಇಂದು ಅನೇಕ ಪ್ರಯತ್ನಗಳು ನಡೆದಿವೆ. ಅಧಿಕಾರ, ಸಂಪತ್ತು ಹಂಚಿಕೆಯಾಗಬೇಕು. ಹಳ್ಳಿಯ ಜನರು ಬೆಳವಣಿಗೆಯಾಗಲು ಗ್ರಾಮೀಣಾಭಿವೃದ್ಧಿ ವಿವಿ ಮೂಲಕ ಸಂಶೋಧನೆ ನಡೆಯಬೇಕೆಂದು ಮನವಿ ಮಾಡಿದರು.

    ಅಧ್ಯಯನ ಮತ್ತು ಸಂಶೋಧನೆ ಒಟ್ಟಿಗೆ ಹೋದಾಗ ಮಾತ್ರ ವಿವಿಯ ಕಾರ್ಯ ಸಾರ್ಥಕವಾಗುತ್ತೆ. ಏನು ಮಾಡಿದ್ರೆ ಗ್ರಾಮಗಳ ವಿಕಾಸವಾಗುತ್ತೆ ಅಂತ ವಿಶ್ವವಿದ್ಯಾಲಯದವರಿಗೆ ಅರ್ಥವಾಗಿರಬೇಕು. ಎಷ್ಟು ಶಿಕ್ಷಣ ಪಡೆದಿದ್ದೇವೆ ಅನ್ನೋದು ಮುಖ್ಯವಲ್ಲ. ಸಮಾಜಕ್ಕೆ ಸ್ಪಂದಿಸುವ ಮನಸ್ಥಿತಿ ಬೆಳೆಯಬೇಕು. ಶಿಕ್ಷಣದಲ್ಲಿ ನೈತಿಕತೆ ಇದ್ರೆ ಮಾತ್ರ ಜ್ಞಾನ ವಿಕಾಸವಾಗುತ್ತೆ. ಗದಗದಲ್ಲಿರೋ ಗ್ರಾಮೀಣಾಭಿವೃದ್ಧಿ ವಿವಿ ರಾಜ್ಯ ಹಾಗೂ ರಾಷ್ಟ್ರಕ್ಕೆ ಮಾದರಿಯಾಗಬೇಕು ಎಂದು ಹಾರೈಸಿದರು.

  • ಲಿಂಗಾಯತ, ವೀರಶೈವರಿಗೆ ಅಲ್ಪಸಂಖ್ಯಾತ ಸ್ಥಾನ ಸಿಕ್ಕಿದ್ರೆ ಯಾವ ಸೌಲಭ್ಯ ಸಿಗುತ್ತೆ?

    ಲಿಂಗಾಯತ, ವೀರಶೈವರಿಗೆ ಅಲ್ಪಸಂಖ್ಯಾತ ಸ್ಥಾನ ಸಿಕ್ಕಿದ್ರೆ ಯಾವ ಸೌಲಭ್ಯ ಸಿಗುತ್ತೆ?

    ಬೆಂಗಳೂರು: ರಾಜ್ಯದ ರಾಜಕೀಯ ಹಾಗೂ ಧಾರ್ಮಿಕ ವಲಯದಲ್ಲಿ ಕೋಲಾಹಲ ಸೃಷ್ಟಿಸಿದ್ದ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೊನೆಗೂ ಸಿದ್ದರಾಮುಯ್ಯ ನೇತೃತ್ವದ ರಾಜ್ಯಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇದೇ ವೇಳೆ ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ಸಿಕ್ಕಿದ್ರೆ ಹೆಚ್ಚು ಸೌಲಭ್ಯ ಸಿಗುತ್ತೆ ಎನ್ನವು ಚರ್ಚೆ ನಡೆಯುತ್ತದೆ. ಆದರೆ ಪ್ರತ್ಯೇಕ ಧರ್ಮ ಸ್ಥಾನ ಜೊತೆಗೆ ಯಾವ ಸೌಲಭ್ಯಗಳಿ ಸಿಗುತ್ತೆ ಎಂಬುದರ ಮಾಹಿತಿ ಇಲ್ಲಿದೆ.

    ರಾಜ್ಯ ಸರ್ಕಾರ ಪ್ರತ್ಯೇಕ ಧರ್ಮ ಸ್ಥಾನಮಾನ ವಿಚಾರದಲ್ಲಿ ಕೆಲವು ನಿರ್ಣಯಗಳನ್ನು ಕೈಗೊಂಡಿದೆ. ಒಂದು ವೇಳೆ ಕೇಂದ್ರ ರಾಜ್ಯ ಸರ್ಕಾರದ ಶಿಫಾರಸಿಗೆ ಒಪ್ಪಿಗೆ ನೀಡಿದರು ಅಲ್ಪ ಸಂಖ್ಯಾತರಿಗೆ ಸಿಗುವ ವಿಶೇಷ ಸೌಲಭ್ಯಗಳು ಲಿಂಗಾಯತ, ವೀರಶೈವರಿಗೆ ಸಿಗುವುದಿಲ್ಲ. ಉದ್ಯೋಗದಲ್ಲೂ ಯಾವುದೇ ಸೌಲಭ್ಯಗಳು ಸಿಗಲ್ಲ. ಆದರೆ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅಲ್ಪಸಂಖ್ಯಾತರಿಗೆ ಇರುವ ಸೌಲಭ್ಯ ಸಿಗುತ್ತೆ.

    ಲಿಂಗಾಯತ, ವೀರಶೈವರಿಗೆ ಅಲ್ಪಸಂಖ್ಯಾತ ಸ್ಥಾನಮಾನದಿಂದ ಹಾಲಿ ಇರುವ ಪ್ರವರ್ಗ ಬದಲಾಗುವುದಿಲ್ಲ. ಪ್ರಸ್ತುತ ಇರುವ 3ಬಿ ಅಡಿಯಲ್ಲಿಯೇ ಲಿಂಗಾಯತ, ವೀರಶೈವ ಸಮುದಾಯ ಮುಂದುವರೆಯುತ್ತದೆ. ಲಿಂಗಾಯತ, ವೀರಶೈವರಿಗೆ ಅಲ್ಪಸಂಖ್ಯಾತ ಸ್ಥಾನ ಸಿಕ್ಕರೇ ಮುಸ್ಲಿಮರಿಗೆ ಹಾಲಿ ಇರುವ ಸೌಲಭ್ಯಗಳಿಗೆ ಯಾವುದೇ ಧಕ್ಕೆ ಉಂಟಾಗುವುದಿಲ್ಲ. ರಾಜ್ಯದಲ್ಲಿ ಮುಸ್ಲಿಮರಿಗೆ ಪ್ರಸ್ತುತ 4%ರಷ್ಟು ಮೀಸಲಾತಿ ನೀಡಲಾಗಿದೆ. ಇದನ್ನು ಓದಿ: ಬಸವ ತತ್ವ ಪರಿಪಾಲಕರಿಗೆ ಪ್ರತ್ಯೇಕ ಧರ್ಮ- ಕ್ಯಾಬಿನೆಟ್ ಸಭೆಯ ಇನ್‍ಸೈಡ್ ಸ್ಟೋರಿ ಇಲ್ಲಿದೆ

    ಸಚಿವ ಸಂಪುಟದ ನಿರ್ಣಯಗಳೇನು?
    * ಬಸವ ತತ್ವ ಒಪ್ಪಿ ಬರುವವರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ
    * ಲಿಂಗಾಯತ ಮತ್ತು ವೀರಶೈವ, ಬಸವತತ್ವದಡಿ ನಂಬಿಕೆ ಇರುವವರಿಗೆ ಅನ್ವಯ
    * ಪ್ರತ್ಯೇಕ ಧರ್ಮಕ್ಕೆ ಒಳಗಾಗುವವರಿಗೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ
    * ಕರ್ನಾಟಕ ಅಲ್ಪಸಂಖ್ಯಾತ ಕಾಯ್ದೆಯ ಸೆಕ್ಷನ್ 2ಡಿ ಅಡಿ ಶಿಫಾರಸು
    * ಕೇಂದ್ರದ ಅಲ್ಪಸಂಖ್ಯಾತ ಆಯೋಗದ 2 (ಸಿ) ಕಾಯ್ದೆ ಅನ್ವಯ

    ಅಲ್ಪಸಂಖ್ಯಾತರ ಸ್ಥಾನಮಾನ ಯಾರಿಗೆ?
    * ರಾಜ್ಯ ಸರ್ಕಾರವೇನೋ ಶಿಫಾರಸು ಮಾಡಿದೆ ಆದ್ರೆ ಕೇಂದ್ರ ಸಂಪುಟ ಒಪ್ಪಿಗೆ ನೀಡಬೇಕು
    * ಅಲ್ಪಸಂಖ್ಯಾತರ ಸ್ಥಾನಮಾನ ಬೇಕಾದರೆ ವೀರಶೈವರು ಕೂಡ ಬಸವ ತತ್ವ ಪಾಲನೆ ಮಾಡಬೇಕು
    * ವೀರಶೈವರು ತಮ್ಮದೇ ಆದ ತತ್ವ ಸಿದ್ಧಾಂತ ಹೊಂದಿರುವುದರಿಂದ ಬಸವ ತತ್ವ ಅನುಕರಣೆ ಅಸಾಧ್ಯ
    * ಅಲ್ಪಸಂಖ್ಯಾತರ ಸ್ಥಾನಮಾನ ಸಿಕ್ಕಿದ್ರೆ, ಲಿಂಗಾಯತರು ಮತ್ತು ವೀರಶೈವರು ಹಿಂದುಗಳಲ್ಲ! ಇದನ್ನು ಓದಿ: ಸಿಎಂ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ: ರಂಭಾಪುರಿ ಶ್ರೀ

  • ಬೆಳಕಿಗಾಗಿ ಹಂಬಲಿಸುತ್ತಿರೋ ಯಕ್ಷಗಾನ ಕಲಾವಿದನ ಕುಟುಂಬಕ್ಕೆ ಸಹಾಯ ಮಾಡಿ ಪ್ಲೀಸ್

    ಬೆಳಕಿಗಾಗಿ ಹಂಬಲಿಸುತ್ತಿರೋ ಯಕ್ಷಗಾನ ಕಲಾವಿದನ ಕುಟುಂಬಕ್ಕೆ ಸಹಾಯ ಮಾಡಿ ಪ್ಲೀಸ್

    ಕಾರವಾರ: ಕಲಾವಿದರ ಬದುಕೇ ಹಾಗೆ, ತನ್ನ ಜೀವನವನ್ನೇ ಧಾರೆಯೆರೆದು ಕಲಾಪೋಷಣೆಗೆ ನಿಲ್ಲುವ ಇವರು ತಮ್ಮ ಬದುಕನ್ನೇ ಕತ್ತಲಾಗಿಸಿಕೊಂಡು ಕಲಾ ಆರಾಧನೆ ಮಾಡುತ್ತಾರೆ.

    ಹೊನ್ನಾವರ ತಾಲೂಕಿನ ನಿವಾಸಿಯಾಗಿರುವ ಮಂಜುನಾಥ್ ಭಂಡಾರಿ ಮೂರು ತಲೆಮಾರುಗಳಿಂದ ಯಕ್ಷಗಾನದ ಹಿಮ್ಮೇಳಕ್ಕೆ ಜೀವ ತುಂಬಿ ಇದಕ್ಕಾಗಿ ಇಡೀ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಆದ್ರೆ ಮಂಜುನಾಥ್ ಅವರ ಬಾಳಲ್ಲಿ ಬರ ಸಿಡಿಲಿನಂತೆ ಅನಾರೋಗ್ಯ ಆವರಿಸಿದೆ. ಒಂಬತ್ತು ವರ್ಷಗಳು ಕಳೆದರೂ ಈ ಕೂಪದಿಂದ ಹೊರಬರಲಾಗದೇ ಇಡೀ ಕುಟುಂಬ ಬಡತನ ಬದುಕು ಸಾಗಿಸುತ್ತಿದ್ದು ಬೆಳಕಿಗಾಗಿ ಹಂಬಲಿಸುತ್ತಿದೆ.

    ಮೃದಂಗ, ಚಂಡೆ ವಾದಕರಾಗಿ ಇದರ ತಯಾರಿಕೆಯನ್ನು ಸಹ ಮಾಡುತ್ತಿರುವ ಈ ಕಲೆ ಮುತ್ತಜ್ಜನಿಂದ ಬಳುವಳಿಯಾಗಿ ಬಂದಿದೆ. ಮಂಜುನಾಥರ ತಂದೆ ಪ್ರಭಾಕರ್ ಪಾಂಡುರಂಗ ಭಂಡಾರಿ ಕೂಡ ಕರಾವಳಿ ಭಾಗದಲ್ಲಿ ಪ್ರಸಿದ್ಧ ಮೃದಂಗ ವಾದಕರಾಗಿದ್ದು, 2002ರಲ್ಲಿ ಅಂದಿನ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಸಹ ನೀಡಿ ಸನ್ಮಾನಿಸಿತ್ತು.

    ಮಂಜುನಾಥ್ ಭಂಡಾರಿಯವರು ಮೃದಂಗ, ಚಂಡೆ ವಾದನದ ಜೊತೆಗೆ ಮಣ್ಣಿನ ಕಲಾಕೃತಿ ರಚನೆಯಲ್ಲಿಯೂ ಸಿದ್ಧಹಸ್ತರು. ಹೀಗಾಗಿ ಅನೇಕ ಸನ್ಮಾನಗಳಿಗೆ ಭಾಜನರಾಗಿದ್ದಾರೆ. ಇನ್ನು ತನ್ನ ಮಡದಿ ಶಾರದಾ, ತಂದೆ ಪಾಂಡುರಂಗ ಭಂಡಾರಿ, ಇಬ್ಬರು ಹೆಣ್ಣುಮಕ್ಕಳಾದ ಮಧುರ, ಮಾನಸಾ ಎಂಬವರೊಂದಿಗೆ ಕಲಾರಾಧನೆ ಮೂಲಕ ನೆಮ್ಮದಿ ಜೀವನ ನಡೆಸುತ್ತಿದ್ದರು. ಆದ್ರೆ ಈಗ ಇವರಿಗೆ ವಾತ ಹಾಗೂ ಮೂಳೆ ಸಮಸ್ಯೆ ಎದುರಾಗಿ ತನ್ನ ದೇಹದ ಶಕ್ತಿ ಕಳೆದುಕೊಳ್ಳುವ ಜೊತೆಗೆ ಕೈಗಳ ಮೂಳೆ ಬೆಳೆದು ಸ್ವಾಧೀನ ಇಲ್ಲದಂತಾಗಿ ಇಡೀ ಕುಟುಂಬದ ಜವಾಬ್ದಾರಿ ಹೊತ್ತ ಇವರು ದಿನದ ತುತ್ತಿಗೂ ಕಷ್ಟಪಡುವಂತಾಗಿದೆ.

    ಚಿಕಿತ್ಸೆಗಾಗಿ ಕೂಡಿಟ್ಟ ಸಾವಿರಾರು ರೂಪಾಯಿಗಳನ್ನು ಖರ್ಚು ಮಾಡಿ ಬಲಗೈಗೆ ರಾಡ್ ಹಾಕುವ ಮೂಲಕ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆದ್ರೆ ಗುಣಮುಖವಾಗುವ ಬದಲು ಕೈಯಲ್ಲಿದ್ದ ಹಣ ಖಾಲಿಯಾಗಿ ಇತ್ತ ಮೃದಂಗ, ಚಂಡೆಯ ಬಾರ್ ಕಟ್ಟಲೂ ಶಕ್ತನಾಗದೇ ಈ ಕೆಲಸವನ್ನೇ ಬಿಡುವಂತಾಯ್ತು. ಮಂಜುನಾಥ್ ಅವರ ಕಷ್ಟಕ್ಕೆ ಯಕ್ಷಾಭಿಮಾನಿಗಳು ಧನ ಸಹಾಯ ಮಾಡಿ ಮತ್ತಷ್ಟು ಚಿಕಿತ್ಸೆಗೆ ಸಹಕರಿಸಿದ್ರು. ಇದರಿಂದ ಸ್ವಲ್ಪ ಮಟ್ಟಿಗೆ ಆರೋಗ್ಯ ಸುಧಾರಿಸಿದೆ. ಆದರೆ ಬೆಳದು ನಿಂತ ಹಿರಿಯ ಮಗಳು ಮಧುರಾ ಅವರಿವರ ಸಹಾಯದಿಂದ ಬಿಎಡ್ ಮಾಡಿ ಎಂಎ ಮಾಡುತ್ತಿದ್ದಾರೆ. ಎರಡನೇ ಮಗಳು ಮಾನಸ ಅಂತಿಮ ಬಿಕಾಂ ಓದುತ್ತಿದ್ದು, ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಹಣ ಹೊಂದಿಸಲು ಕಷ್ಟಪಡುತ್ತಿದ್ದು ಬೆಳಕು ಕಾರ್ಯಕ್ರಮದ ಮೂಲಕ ಸಹಾಯ ಬೇಡಿದ್ದಾರೆ.

    ಮಂಜುನಾಥ್ ಭಂಡಾರಿ ಕಳೆದ ಒಂಬತ್ತು ವರ್ಷಗಳಿಂದ ಅಕಾಲಿಕ ರೋಗದಿಂದಾಗಿ ಮೃದಂಗ, ಚಂಡೆ ತೆಯಾರಿಕೆಯನ್ನು ಮಾಡಲಾಗದೇ ಜೀವನಕ್ಕೆ ಆಧಾರವಾಗಿದ್ದ ಕಸುಬನ್ನು ಬಿಟ್ಟು ಪಾಶ್ರ್ವ ವಾಯು ಪೀಡಿತ ತಂದೆ, ಇಬ್ಬರ ಮಕ್ಕಳ ಶಿಕ್ಷಣ ನೋಡಿಕೊಳ್ಳಲು ಪರದಾಡುತ್ತಿದ್ದಾರೆ. ಇತ್ತ ಅವರ ಚಿಕಿತ್ಸೆ ಜೊತೆಯಲ್ಲಿ ಮಕ್ಕಳ ಓದಿಗೆ ಸಹಾಯ ಮಾಡಿದ್ದಲ್ಲಿ ಅವರ ಉದ್ಯೋಗದಿಂದ ಜೀವನ ನಡೆಸಬಹುದಾಗಿದ್ದು ಕಷ್ಟಗಳು ದೂರವಾಗುತ್ತವೆ ಎಂಬವುದು ಅಭಿಮಾನಿಗಳ ಹಂಬಲ.

    ಮೂರು ತಲೆಮಾರುಗಳಿಂದ ಯಕ್ಷಗಾನ ಲೋಕಕ್ಕೆ ತನ್ನದೇ ಆದ ಸೇವೆಯನ್ನು ಈ ಕುಟುಂಬ ನೀಡುತ್ತಾ ಬಂದಿದೆ. ಇವರ ಈ ಸೇವೆಯನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ಸರ್ಕಾರ ನೀಡಿದೆ. ಒಂಬತ್ತು ವರ್ಷದ ವನವಾಸದಲ್ಲಿ ಅಭಿಮಾನಿಗಳ ಹೊರತಾಗಿ ಸರ್ಕಾರ ಮಾತ್ರ ಈ ಕುಟುಂಬದ ಸಹಾಯಕ್ಕೆ ಬರಲಿಲ್ಲ. ತಮ್ಮ ಆರೋಗ್ಯ, ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯಕ್ಕೆ ಯಾರಾದರೂ ಸಹಾಯ ಮಾಡಬಹುದು ಎನ್ನುವ ನಿರೀಕ್ಷೆಯಲ್ಲಿ ಮಂಜುನಾಥ್ ಭಂಡಾರಿ ಇದ್ದಾರೆ.

     

    https://youtu.be/0MfO9F_5xyg

  • ಹೆಣ್ಣಿನ ಮನೋಬಲ ದೃಢವಾಗಿದ್ದು, ಸಾಮಾಜಿಕ ಮತ್ತು ಆರ್ಥಿಕವಾಗಿ ಈಗ ಬದಲಾಗಿದ್ದಾಳೆ: ಗೀತಾ ಮಹಾದೇವ ಪ್ರಸಾದ್

    ಹೆಣ್ಣಿನ ಮನೋಬಲ ದೃಢವಾಗಿದ್ದು, ಸಾಮಾಜಿಕ ಮತ್ತು ಆರ್ಥಿಕವಾಗಿ ಈಗ ಬದಲಾಗಿದ್ದಾಳೆ: ಗೀತಾ ಮಹಾದೇವ ಪ್ರಸಾದ್

    ಬೆಂಗಳೂರು: ಹೆಣ್ಣಿನ ಮನೋಬಲ ದೃಢವಾಗಿದ್ದು, ಸಾಮಾಜಿಕ ಮತ್ತು ಆರ್ಥಿಕವಾಗಿ ಈಗ ಬದಲಾಗಿದ್ದಾಳೆ ಎಂದು ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಖಾತೆಯ ಸಚಿವೆ ಗೀತಾ ಮಹಾದೇವ ಪ್ರಸಾದ್ ತಿಳಿಸಿದ್ದಾರೆ.

    ಮೈಸೂರು ರಸ್ತೆಯ ರಾಜರಾಜೇಶ್ವರಿ ಗ್ರೂಪ್ ಆಫ್ ಇನ್ಸ್ ಟ್ಯೂಷನ್ ನಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಹಿಂದೆ ಹೆಣ್ಣಿನ ಸಾಧನೆ ಅಡ್ಡಿಯಾಗುತಿತ್ತು. ಆದರೆ ಈಗ ತನ್ನ ಎಲ್ಲ ಸಂಕೋಲೆಗಳಿಂದ ಬಿಡಿಸಿಕೊಂಡು ಸಾಧನೆ ಮಾಡಿದ್ದಾಳೆ ಎಂದು ಹೇಳಿದರು.

    ಪೈಲೆಟ್, ಟ್ರೈನ್ ಡ್ರೈವರ್, ಬಾಹ್ಯಾಕಾಶದಲ್ಲಿ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿ ಹೆಣ್ಣು ತನ್ನ ಛಾಪನ್ನು ಮೂಡಿಸಿದ್ದಾಳೆ. ಹೆಣ್ಣಿನಿಂದಾಗಿ ಈ ಕುಟುಂಬಗಳು ಬದಲಾಗುತ್ತಿದ್ದು, ಈ ಮೂಲಕ ದೇಶದ ಅಭಿವೃದ್ಧಿಗೆ ನೆರವಾಗುತ್ತಿದ್ದಾಳೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಕೆಂಪು ಮತ್ತು ಹಳದಿ ಬಣ್ಣದ ಬಟ್ಟೆಯನ್ನು ಧರಿಸಿ ನಿಂತುಕೊಳ್ಳುವ ಮೂಲಕ ಕರ್ನಾಟಕ ಧ್ವಜವನ್ನು ನಿರ್ಮಿಸಿದ್ದರು.

  • ಹುತಾತ್ಮ ಪಿಎಸ್‍ಐ ಮಲ್ಲಿಕಾರ್ಜುನ್ ಬಂಡೆ ಮಕ್ಕಳನ್ನ ದತ್ತು ಪಡೆದ ಅಮಿತ್ ಶಾ

    ಹುತಾತ್ಮ ಪಿಎಸ್‍ಐ ಮಲ್ಲಿಕಾರ್ಜುನ್ ಬಂಡೆ ಮಕ್ಕಳನ್ನ ದತ್ತು ಪಡೆದ ಅಮಿತ್ ಶಾ

    ಕಲಬುರಗಿ: ಹುತಾತ್ಮ ಪಿಎಸ್‍ಐ ಮಲ್ಲಿಕಾರ್ಜುನ್ ಬಂಡೆ ಅವರ ಇಬ್ಬರು ಮಕ್ಕಳಾದ ಶಿವಾನಿ ಮತ್ತು ಸಾಯಿರನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದತ್ತು ಪಡೆದಿದ್ದಾರೆ. ಇಬ್ಬರು ಮಕ್ಕಳ ಪೂರ್ಣ ಪ್ರಮಾಣದ ಶಿಕ್ಷಣದ ವೆಚ್ಚವನ್ನ ಬಿಜೆಪಿಯೇ ನೋಡಿಕೊಳ್ಳಲ್ಲಿದೆ ಅಂತಾ ಭರವಸೆ ನೀಡಿದ್ದಾರೆ.

    ಸೋಮವಾರದಂದು ಸೇಡಂ ರಸ್ತೆಯ ಇಎಸ್‍ಐ ಆಸ್ಪತ್ರೆಯ ಆಡಿಟೋರಿಯಂನಲ್ಲಿ ನಡೆದಿದ್ದ ಬಿಜೆಪಿ ವಿಭಾಗೀಯ ಮಟ್ಟದ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯಲ್ಲಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಬಂಡೆ ಮಕ್ಕಳ ಪರಿಸ್ಥಿತಿಯ ಬಗ್ಗೆ ಹಾಗೂ ಸರ್ಕಾರ ತಿಂಗಳಿಗೆ ಕೇವಲ ಒಂದು ಸಾವಿರ ರೂಪಾಯಿ ಹಣ ಮಾತ್ರ ನೀಡುತ್ತಿದೆ. ಇದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ ಅಂತಾ ಶಾ ಗಮನಕ್ಕೆ ತಂದಿದ್ದರು. ಇದಕ್ಕೆ ತಕ್ಷಣವೇ ಸ್ಪಂದಿಸಿದ ಶಾ, ಮಕ್ಕಳ ಶಿಕ್ಷಣದ ಸಂಪೂರ್ಣ ವೆಚ್ಚ ಪಕ್ಷವೇ ಭರಿಸುವುದರ ಜೊತೆಗೆ ಇಬ್ಬರು ಮಕ್ಕಳನ್ನ ದತ್ತು ಪಡೆಯುವುದಾಗಿ ಘೋಷಣೆ ಮಾಡಿದರು.

    ಪಿಎಸ್‍ಐ ಮಲ್ಲಿಕಾರ್ಜುನ ಬಂಡೆ 2014ರ ಜನವರಿ 8ರಂದು ಶಾರ್ಪ್ ಶೂಟರ್ ಮುನ್ನಾ ಜೊತೆ ನಡೆದಿದ್ದ ಗುಂಡಿನ ಕಾಳಗದಲ್ಲಿ ಎದೆಗೆ ಗುಂಡೇಟು ಬಿದ್ದು ಸುಮಾರು ವಾರಗಳ ಕಾಲ ಆಸ್ಪತ್ರೆಯಲ್ಲಿ ಜೀವನ್ಮರಣದ ಮಧ್ಯೆ ಹೋರಾಟ ನಡೆಸಿ ಹುತಾತ್ಮರಾಗಿದ್ದರು. ನಂತರ ಮಕ್ಕಳ ಜವಬ್ದಾರಿ ಪತ್ನಿ ಮಲ್ಲಮ್ಮ ಬಂಡೆ ಹೆಗಲಿಗೆ ಬಿದ್ದಿತ್ತು. ಆದರೆ ಮಲ್ಲಮ್ಮ ಬಂಡೆ ಕೂಡ ಬ್ರೇನ್ ಟ್ಯೂಮರ್‍ನಿಂದ ಬಳಲುತ್ತ ಚಿಕಿತ್ಸೆ ಪಡೆಯುತ್ತಿದ್ದರು. 2016 ಜುಲೈ 9ರಂದು ಮಲ್ಲಮ್ಮ ಕೂಡ ವಿಧಿವಶರಾಗಿದ್ದರು.

    ಹೀಗಾಗಿ ಅಮಿತ್ ಶಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕ ಬಂಡೆಯವರ ಇಬ್ಬರು ಮಕ್ಕಳನ್ನ ದತ್ತು ಪಡೆದಿದೆ.

  • Exclusive -ಮೈಸೂರು ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ

    Exclusive -ಮೈಸೂರು ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ

    ಬೆಂಗಳೂರು: ಕೊನೆಗೂ ಮೈಸೂರು ಮುಕ್ತ ವಿಶ್ವವಿದ್ಯಾಲಯದ ಬಿಕ್ಕಟ್ಟು ಶೀಘ್ರವೇ ಅಂತ್ಯವಾಗುವ ಸಮಯ ಹತ್ತಿರ ಬಂದಿದ್ದು ಪದವಿ ಮುಗಿಸಿ ಗೊಂದಲದಲ್ಲಿದ್ದ ವಿದ್ಯಾರ್ಥಿಗಳಿಗೂ ರಿಲೀಫ್ ಸಿಗುವ ಸುದ್ದಿ ಪ್ರಕಟವಾಗಿದೆ.

    ಈ ಸಿಹಿಸುದ್ದಿಯನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವರಾದ ಪ್ರಕಾಶ್ ಜಾವಡೇಕರ್ ಅವರೇ ಪಬ್ಲಿಕ್ ಟಿವಿ ಜೊತೆಗೆ ಹಂಚಿಕೊಂಡಿದ್ದಾರೆ. ಹೊಸ ಮಾರ್ಗಸೂಚಿಗಳೊಂದಿಗೆ ಮೈಸೂರು ಮುಕ್ತ ವಿಶ್ವ ವಿದ್ಯಾಲಯ ಮತ್ತೆ ಆರಂಭವಾಗಲಿದ್ದು ತಪ್ಪು ಮಾಡಿದ ಅಧಿಕಾರಿಗಳಿಗೆ ಕಠಿಣ ಶಿಕ್ಷೆ ಕೊಟ್ಟು ಪದವಿ ಮುಗಿಸಿ ಗೊಂದಲದಲ್ಲಿರುವ ವಿದ್ಯಾರ್ಥಿಗಳಿಗೆ ಪದವಿ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

    ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಬ್ರಿಡ್ಜ್ ಕೋರ್ಸ್ ನಡೆಸಿ ಅದರ ಜೊತೆಗೆ ಒಂದು ಪರೀಕ್ಷೆ ನಡೆಸಲಾಗುತ್ತದೆ. ಆ ಮೂಲಕ ನಿಜವಾಗಿಯೂ ಪದವಿ ಮುಗಿಸಿದ್ದಾರೋ ಇಲ್ಲವೋ ಎನ್ನುವುದನ್ನು ಪರಿಶೀಲಿಸಿ ಅವರ ಪದವಿಯನ್ನು ನೀಡಲಾಗುತ್ತದೆ. ಮುಂದಿನ ವಾರ ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಈ ಎಲ್ಲ ವಿಚಾರದ ಬಗ್ಗೆ ಚರ್ಚೆ ನಡೆಸಿ  ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

    https://youtu.be/CAKZXF9tw0w

  • ಬೆಳಕು ಇಂಪ್ಯಾಕ್ಟ್: ತಬ್ಬಲಿ ಕುಟುಂಬಕ್ಕೆ ಕೊನೆಗೂ ಸಿಕ್ತು ಸೂರಿನ ಆಸರೆ

    ಬೆಳಕು ಇಂಪ್ಯಾಕ್ಟ್: ತಬ್ಬಲಿ ಕುಟುಂಬಕ್ಕೆ ಕೊನೆಗೂ ಸಿಕ್ತು ಸೂರಿನ ಆಸರೆ

    ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ತುಮ್ಮರಮಟ್ಟಿ ಗ್ರಾಮದ ವಿಠ್ಠಲ್ ಹನಮರ್, ತನ್ನ ಸಹೋದರಿಯರಾದ ಶಿಲ್ಪಾ ಹಾಗೂ ಲಕ್ಷ್ಮಿ ಮೂವರು ತಂದೆ ತಾಯಿ ಕಳೆದುಕೊಂಡ ತಬ್ಬಲಿಗಳು. ತಂಗಿಯರ ಓದಿಗಾಗಿ, ಅಣ್ಣ ತನ್ನ ಓದು ಬಿಟ್ಟು ಕೂಲಿ ಮಾಡ್ತಾ ಅವರ ಶಿಕ್ಷಣಕ್ಕೆ ಸಹಾಯ ಮಾಡುತ್ತಿದ್ದರು. ಮೂವರು ಶಾಶ್ವತ ಸೂರಿಲ್ಲದೇ ಅಜ್ಜಿಯ ಮನೆಯಲ್ಲೇ ವಾಸವಾಗಿದ್ದರು. ಹೀಗಾಗಿ ಈ ನೊಂದ ಕುಟುಂಬ ಸಹೋದರಿಯರ ವಿದ್ಯಾಭ್ಯಾಸ ಹಾಗೂ ಸೂರಿಗಾಗಿ ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮಕ್ಕೆ ಬಂದಿದ್ದರು.

    ಸೂರಿಲ್ಲದೇ ಸಂಕಷ್ಟ ಅನುಭವಿಸುತ್ತಿದ್ದ ಈ ತಬ್ಬಲಿ ಕುಟುಂಬದ ಪರಿಸ್ಥಿತಿಯನ್ನು ಕಂಡಂತಹ ಬೀಳಗಿ ಶಾಸಕ ಜೆ.ಟಿ ಪಾಟೀಲ್, ಬೆಳಕು ಕಾರ್ಯಕ್ರಮದಲ್ಲಿ ಮಾತು ಕೊಟ್ಟಂತೆ ತಬ್ಬಲಿ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ. ಸೂರಿಲ್ಲದೇ ಕಂಗಲಾಗಿದ್ದ ಈ ಬಡ ತಬ್ಬಲಿ ಕುಟುಂಬಕ್ಕೆ ಸ್ವಂತ ಸೂರು ನಿರ್ಮಿಸಿಕೊಳ್ಳಲು ಪಕ್ಕದ ಅಂನಗವಾಡಿ ಪುನರ್‍ವಸತಿ ಕೇಂದ್ರದಲ್ಲಿ 33*33 ಚದರ ಅಡಿ ಜಾಗವನ್ನು ನೀಡಿ, ಮನೆ ನಿರ್ಮಾಣಕ್ಕೆ ಹಾಗೂ ಬಡ ಪ್ರತಿಭಾವಂತ ಯುವತಿಯರ ವಿದ್ಯಾಭ್ಯಾಸದ ಶಿಕ್ಷಣಕ್ಕೆ ತಮ್ಮ ಸಂಸ್ಥೆಯ ಮೂಲಕ ಸಹಾಯ ಮಾಡುವ ಭರವಸೆ ನೀಡಿದ್ದಾರೆ.

    ನೊಂದ ಕುಟುಂಬಕ್ಕೆ ನೆರವಾಗಲು ಇಚ್ಛಾಶಕ್ತಿ ತೋರಿದ ಬೀಳಗಿ ಕ್ಷೇತ್ರದ ಶಾಸಕ ಜೆ.ಟಿ ಪಾಟೀಲ್ ಹಾಗೂ ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮಕ್ಕೆ ಸೋದರ, ಸೋದರಿಯರು ಧನ್ಯವಾದ ತಿಳಿಸಿದ್ದಾರೆ.

    https://youtu.be/Lgbie2WWimY

  • ಬಡಮಕ್ಕಳ ಬದುಕು ರೂಪಿಸಲು ಪಣ – ಬೆಳಗಿನ ಜಾವ 4 ಗಂಟೆಗೆ ಬಂದು ಮಕ್ಕಳನ್ನ ಓದಿಸೋ ಮೇಷ್ಟ್ರು

    ಬಡಮಕ್ಕಳ ಬದುಕು ರೂಪಿಸಲು ಪಣ – ಬೆಳಗಿನ ಜಾವ 4 ಗಂಟೆಗೆ ಬಂದು ಮಕ್ಕಳನ್ನ ಓದಿಸೋ ಮೇಷ್ಟ್ರು

    ರಾಯಚೂರು: ಸರ್ಕಾರಿ ಶಾಲೆ ಆರಂಭವಾದ್ರೂ ಸರಿಯಾದ ಟೈಮ್‍ಗೆ ಮೇಷ್ಟ್ರು ಬರಲ್ಲ ಎಂಬ ಮಾತುಗಳು ಕೇಳಿ ಬರುತ್ತವೆ. ಇದಕ್ಕೆ ಅಪವಾದ ಇವತ್ತಿನ ನಮ್ಮ ಪಬ್ಲಿಕ್ ಹೀರೋ ಮೌನೇಶ್ ಮೇಷ್ಟ್ರು.

    ಮೌನೇಶ್ ಕುಂಬಾರ್ ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಸರ್ಜಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಧ್ಯಾಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತನ್ನಂತೆ ಬಡ ಮಕ್ಕಳು ವಿದ್ಯಾಭ್ಯಾಸದಿಂದ ಹಿಂದುಳಿಯಬಾರದು ಅಂತ ಶಪಥತೊಟ್ಟು ಶ್ರಮಿಸ್ತಿದ್ದಾರೆ. “ಎದ್ದೇಳು ಮಂಜುನಾಥ” ಅಂತ ಯೋಜನೆ ರೂಪಿಸಿ ಮುಂಜಾನೆಯೇ ಎದ್ದು ನಾಲ್ಕೈದು ಗಂಟೆಗೆ 5 ಕಿ.ಮೀ ದೂರದ ಲಿಂಗಸುಗೂರಿನಿಂದ ಸರ್ಜಾಪೂರಕ್ಕೆ ಬರುತ್ತಾರೆ. ಒಂದು ವೇಳೆ ಶಿಕ್ಷಕರು ಬರಲಿಲ್ಲ ಅಂದ್ರೆ ವಿದ್ಯಾರ್ಥಿಗಳೇ ತಾವು ಓದ್ತಿರೋ ಬಗ್ಗೆ ಮಿಸ್ ಕಾಲ್ ಕೊಡಬೇಕು.

    ಸರ್ಜಾಪೂರದ ಈ ಶಾಲೆ ಯಾವ ಖಾಸಗಿ ಶಾಲೆಗೂ ಕಡಿಮೆಯೇನಲ್ಲ. ವಿಜ್ಞಾನ, ಗಣಿತ ಹಾಗೂ ಭಾಷಾ ಪ್ರಯೋಗಾಲಯಗಳು ಇಡೀ ಜಿಲ್ಲೆಗೆ ಮಾದರಿಯಾಗಿವೆ. ಹೆಡ್‍ಮೇಷ್ಟ್ರು ಮೌನೇಶ್ ಅವರ ಈ ಕಾರ್ಯಕ್ಕೆ ಶಾಲೆಯ 8 ಜನ ಸಹ ಶಿಕ್ಷಕರು ಸಾಥ್ ನೀಡಿದ್ದಾರೆ.

    ಸರ್ಜಾಪೂರದ ಜೊತೆಗೆ ಕುಪ್ಪಿಗುಡ್ಡ ಗ್ರಾಮ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಅಧ್ಯಯನ ಮಾಡ್ತಿದ್ದು, ಇಲ್ಲಿನ ಪಾಠ ಪ್ರವಚನದ ಗುಣಮಟ್ಟ ಕಂಡು ಲಿಂಗಸುಗೂರು ತಾಲೂಕು ಕೇಂದ್ರದಿಂದಲೂ ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಾರೆ.