Tag: education

  • ಮಕ್ಕಳಿಗೆ ಹೈಟೆಕ್ ಶಿಕ್ಷಣ, ಮಾದರಿ ಶಾಲೆಯನ್ನಾಗಿಸಿದ ಟೀಚರ್ಸ್- ಇದು ಟೀಚರ್ಸ್ ಡೇ ಸ್ಪೆಷಲ್

    ಮಕ್ಕಳಿಗೆ ಹೈಟೆಕ್ ಶಿಕ್ಷಣ, ಮಾದರಿ ಶಾಲೆಯನ್ನಾಗಿಸಿದ ಟೀಚರ್ಸ್- ಇದು ಟೀಚರ್ಸ್ ಡೇ ಸ್ಪೆಷಲ್

    ಹಾವೇರಿ: ಇಂದು ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ 129ನೇ ಜನ್ಮದಿನ. ಇತ್ತೀಚೆಗೆ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಿಂದ ಶಿಕ್ಷಕರ ಮೇಲಿನ ಗೌರವ ಕಡಿಮೆಯಾಗ್ತಿದೆ. ಆದ್ರೆ ಹಾವೇರಿಯ ಹಿರೇಕೆರೂರು ತಾಲೂಕಿನ ಹೊಸಕಟ್ಟಿ ಗ್ರಾಮದ ಶಿಕ್ಷಕರು ಎಲ್ಲರಿಗೂ ಮಾದರಿಯಾಗಿದ್ದಾರೆ.

    ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಹೊಸಕಟ್ಟಿ ಗ್ರಾಮದ ಸರ್ಕಾರಿ ಪ್ರಾಥಾಮಿಕ ಶಾಲೆಯ ವಿಶೇಷ ಅಂದ್ರೆ ಎಲ್ಲಾ ಮಕ್ಕಳಿಗೆ ಡಿಜಿಟಲ್ ಶಿಕ್ಷಣದ ಜೊತೆಗೆ ಸ್ಮಾರ್ಟ್ ಕ್ಲಾಸ್‍ಗಳಾಗಿವೆ. ಕಳೆದ ವರ್ಷ 130 ವಿದ್ಯಾರ್ಥಿಗಳಿದ್ದ ಈ ಶಾಲೆಯಲ್ಲಿ ಇದೀಗ 230ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ.

    ಕೇವಲ ಒಂದು ವರ್ಷದಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಲು ಶಾಲೆಯ 9 ಜನ ಶಿಕ್ಷಕರ ಆಸಕ್ತಿ ಕಾರಣವಾಗಿದೆ. ಶಾಲೆಯಲ್ಲಿ ಬೋಧನ ಮಟ್ಟ ಸುಧಾರಣೆಯಾಗಿದ್ದು, ವಿದ್ಯಾರ್ಥಿಗಳಲ್ಲಿ ಶಿಕ್ಷಕರು ಉತ್ಸಾಹ ತುಂಬುತ್ತಿದ್ದಾರೆ. ಶನಿವಾರ ಮತ್ತು ಭಾನುವಾರವೂ ಒಬ್ಬೊಬ್ಬ ಶಿಕ್ಷಕರು ಮಕ್ಕಳಿಗೆ ವಿಶೇಷ ಪಾಠ ಪ್ರವಚನ ಮಾಡುತ್ತಾರೆ.

    ಶಿಕ್ಷಕರ ಈ ಕಾರ್ಯಕ್ಕೆ ಗ್ರಾಮಸ್ಥರೂ ಸಾಥ್ ನೀಡಿದ್ದಾರೆ. ಸಭೆ ಕರೆದು ಶಾಲೆಯ ಕುಂದುಕೊರತೆ ಚರ್ಚಿಸಿ, ಮಕ್ಕಳಿಗೆ ಬೇಕಾದ ಕಂಪ್ಯೂಟರ್, ಆಟದ ವಸ್ತುಗಳು, ಪೀಠೋಪಕರಣಗಳನ್ನ ಕೊಡುಗೆಯಾಗಿ ನೀಡಿದ್ದಾರೆ. ಶಿಕ್ಷಕರ ದಿನಾಚರಣೆಯ ಇವತ್ತಿನ ಸುಸಂದರ್ಭದಲ್ಲಿ ಹೊಸಕಟ್ಟಿ ಶಾಲೆಯ ಶಿಕ್ಷಕರು ಮತ್ತು ಗ್ರಾಮಸ್ಥರ ಕಾರ್ಯ ಶ್ಲಾಘನಾರ್ಹವಾಗಿದೆ.

     

  • 2018ರ ಒಳಗಡೆ ಕರ್ನಾಟಕದ 20 ಸೇರಿ, ದೇಶದ 800 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ!

    2018ರ ಒಳಗಡೆ ಕರ್ನಾಟಕದ 20 ಸೇರಿ, ದೇಶದ 800 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ!

    ಬೆಂಗಳೂರು: ಫಲಿತಾಂಶದಲ್ಲಿ ಕಳಪೆ ಸಾಧನೆ ಮತ್ತು ವಿದ್ಯಾರ್ಥಿಗಳ ಪ್ರವೇಶಾತಿ ಕಡಿಮೆ ಆಗುತ್ತಿರುವ ಕರ್ನಾಟಕದ 20 ಸೇರಿದಂತೆ 800 ಎಂಜಿನಿಯರಿಂಗ್ ಕಾಲೇಜುಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಒಳಗಡೆ ಬೀಗ ಬೀಳಲಿದೆ.

    ಹೌದು, ಗುಣಮಟ್ಟದಲ್ಲಿ ಕಳಪೆ ಸಾಧನೆ ತೋರಿಸುತ್ತಿರುವ ದೇಶದ 800 ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎಐಸಿಟಿಇ) ಮುಖ್ಯಸ್ಥ ಅನಿಲ್ ದತ್ತಾತ್ರೇಯ ಸಹಸ್ರಬುದೆ ತಿಳಿಸಿದ್ದಾರೆ.

    ಮೂಲಸೌಕರ್ಯ ಇಲ್ಲದ ಮತ್ತು ಸತತ 5 ವರ್ಷಗಳ ಕಾಲ ಶೇ.30ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ದಾಖಲಾಗಿರುವ ಕಾಲೇಜುಗಳನ್ನು ಮುಚ್ಚಲಾಗುತ್ತಿದೆ. ಎಐಸಿಟಿಇಯ ಕಠಿಣ ನಿಯಮಗಳಿಂದಾಗಿ ವಾರ್ಷಿಕವಾಗಿ 150ಕ್ಕೂ ಹೆಚ್ಚು ಕಾಲೇಜುಗಳನ್ನು ಮುಚ್ಚಲಾಗಿದೆ ಎಂದು ಅವರು ತಿಳಿಸಿದರು.

    2014-15 ರಿಂದ 2017-18ರ ವರೆಗೆ ಭಾರತದಲ್ಲಿ ಒಟ್ಟು 410 ಎಂಜಿನಿಯರಿಂಗ್ ಕಾಲೇಜುಗಳನ್ನು ಮುಚ್ಚಲು ಎಐಸಿಟಿಇ ಅನುಮೋದನೆ ನೀಡಿದ್ದು ಈ ಪಟ್ಟಿಯಲ್ಲಿ 20 ಕರ್ನಾಟಕದ ಕಾಲೇಜುಗಳು ಇವೆ.

    ತೆಲಂಗಾಣ, ಉತ್ತರ ಪ್ರದೇಶ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ರಾಜಸ್ಥಾನ, ತಮಿಳುನಾಡು, ಹರ್ಯಾಣ, ಗುಜರಾತ್ ಮತ್ತು ಮಧ್ಯಪ್ರದೇಶದ ರಾಜ್ಯಗಳ ಕಾಲೇಜುಗಳು ಈ ಪಟ್ಟಿಯಲ್ಲಿ ಸೇರಿದೆ. ಈ ಪಟ್ಟಿಯಲ್ಲಿ ಕೆಲ ಕಾಲೇಜುಗಳು ಸ್ವಯಂ ಪ್ರೇರಿತವಾಗಿ ಅರ್ಜಿ ಸಲ್ಲಿಸಿದೆ ಎಂದು ಅವರು ತಿಳಿಸಿದರು.

    ಬಹುತೇಕ ಎಂಜಿನಿಯರಿಂಗ್ ಕಾಲೇಜುಗಳ ಉಪನ್ಯಾಸಕರು ಎಂಟೆಕ್ ಅಥವಾ ಪಿಎಚ್‍ಡಿ ಪದವಿ ಪಡೆದಿದ್ದರೂ ಆಧುನಿಕ ಶಿಕ್ಷಣದ ತರಬೇತಿ ಹೊಂದಿಲ್ಲದ ಕಾರಣ ಉತ್ತಮ ವಿದ್ಯಾರ್ಥಿಗಳು ತಯಾರಾಗುತ್ತಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಕಾಲೇಜುಗಳಿಗೆ ಉಪನ್ಯಾಸಕರಾಗಿ ಸೇರ್ಪಡೆಯಾಗುವವರು ಕಡ್ಡಾಯವಾಗಿ 6 ತಿಂಗಳ ವಿಶೇಷ ತರಬೇತಿ ಪಡೆಯಬೇಕಾಗುತ್ತದೆ. ಅಷ್ಟೇ ಅಲ್ಲದೇ ಈಗಾಗಲೇ ಉಪನ್ಯಾಸಕ ವೃತ್ತಿಯಲ್ಲಿರುವವರು ಈ ವಿಶೇಷ ತರಬೇತಿಯನ್ನು ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅವರು ಹೇಳಿದರು.

    ಎಂಜಿನಿಯರಿಂಗ್ ಕಾಲೇಜುಗಳ ಗುಣಮಟ್ಟ ಕಡಿಮೆ ಆದಲ್ಲಿ ಅವುಗಳನ್ನು ಕಲಾ, ವಿಜ್ಞಾನ ಅಥವಾ ಪಾಲಿಟೆಕ್ನಿಕ್ ಕಾಲೇಜುಗಳಾಗಿ ರೂಪಿಸಲಾಗುತ್ತದೆ. ಉದ್ಯಮಕ್ಕೆ ತಯಾರಾಗಿರುವ ವಿದ್ಯಾರ್ಥಿಗಳನ್ನು ಎಐಸಿಟಿಇ ನಿರೀಕ್ಷಿಸುತ್ತಿದೆ. ಈ ಕಾರಣಕ್ಕೆ ಈ ವರ್ಷದಿಂದಲೇ ಎರಡು ಮತ್ತು ಮೂರನೇ ವರ್ಷದಲ್ಲಿ ಇಂಟರ್ನ್ ಶಿಪ್ ಕಡ್ಡಾಯಗೊಳಿಸಲಾಗಿದೆ. ಈ ಮೂಲಕ ಕ್ಯಾಂಪಸ್ ಸಂದರ್ಶನ ನಡೆಯುವ ಮೊದಲೇ ವಿದ್ಯಾರ್ಥಿಗಳು ಉದ್ಯೋಗ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದರು.

    ಇದನ್ನೂ ಓದಿ: ಎಂಜಿನಿಯರಿಂಗ್ ಓದುತ್ತಿರುವ ಮತ್ತು ಮುಂದೆ ಓದಲಿರುವ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್

  • 21ನೇ ವರ್ಷಕ್ಕೆ ಸಿಎ, ಸಿಎಸ್, ಸಿಎಂಎ ಪೂರ್ಣ! ವಿಶೇಷ ಸಾಧನೆಗೈದ ಯುವಕನ ಕಥೆ ಓದಿ

    21ನೇ ವರ್ಷಕ್ಕೆ ಸಿಎ, ಸಿಎಸ್, ಸಿಎಂಎ ಪೂರ್ಣ! ವಿಶೇಷ ಸಾಧನೆಗೈದ ಯುವಕನ ಕಥೆ ಓದಿ

    ಸೂರತ್: 21 ವರ್ಷದ ಗುಜರಾತ್‍ನ ಸೂರತ್ ನಿವಾಸಿ ಆದಿತ್ಯಾ ಜಾವರ್ ಚಾರ್ಟರ್ಡ್ ಅಕೌಂಟೆಂಟ್ (ಸಿಎ), ಕಂಪನಿ ಸೆಕ್ರೇಟರಿ(ಸಿಎಸ್), ಕಾಸ್ಟ್ ಮತ್ತು ಮ್ಯಾನೇಜ್‍ಮೆಂಟ್ ಅಕೌಂಟೆನ್ಸಿ (ಸಿಎಂಎ) ಪರೀಕ್ಷೆಯನ್ನು ಪಾಸ್ ಮಾಡುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.

    ಈ ಮೊದಲು ದೆಹಲಿಯ ಸಾರ್ಥಕ್ ಅಹುಜ ಮತ್ತು ಪಲ್ಲವಿ ಸಚ್‍ದೇವ 23 ವರ್ಷದಲ್ಲಿ ಸಿಎ, ಸಿಎಸ್, ಸಿಎಂಎ ಮುಗಿಸಿದ್ದರು. ಆದರೆ ಈಗ ಸಿಎಂಎ ಅಂತಿಮ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಜಾವರ್ ತೇರ್ಗಡೆಯಾಗುವ ಮೂಲಕ ಹೊಸ ಮೈಲಿಗಲ್ಲನ್ನು ಬರೆದಿದ್ದಾರೆ.

    12ನೇ ತರಗತಿ ಮುಗಿಸಿದ ನಂತರ ಜಾವರ್ ತನ್ನ ಓದಿನ ಜೊತೆಗೆ ಸಿಎ ಓದಲು ಆರಂಭಿಸಿದರು. 15ನೇ ವರ್ಷದಲ್ಲಿ ಸಿಎ ಎಲ್ಲ ಪರೀಕ್ಷೆಯಲ್ಲಿ ತೇರ್ಗಡೆಯಾದ ಬಳಿಕ ಸಿಎಎಸ್ ಪರೀಕ್ಷೆಯನ್ನು ಕಟ್ಟಿದರು. ನಂತರ ಸಿಎಂಎ ಪರೀಕ್ಷೆ ಬರೆದು ಈಗ ಉತ್ತೀರ್ಣರಾಗಿದ್ದಾರೆ.

    ಜಾವರ್ ಸೂರತ್‍ನ ಚಾರ್ಟರ್ಡ್ ಅಕೌಂಟೆಟ್ ಆಗಿರುವ ರವಿ ಚಾವ್‍ಚರಿಯ ಹತ್ತಿರ ತರಬೇತಿ ಪಡೆದಿದ್ದಾರೆ. ಇಂದಿರಾ ಗಾಂಧಿ ರಾಷ್ಟ್ರೀಯ ವಿಶ್ವವಿದ್ಯಾಲಯದಲ್ಲಿ ಬಿಕಾಂ ಪದವಿಯನ್ನು ಓದಿರುವ ಜಾವರ್ ಈಗ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.

    ಜಾವರ್‍ನ ತಂದೆ ಮಹೇಶ್ ಜಾವರ್ ಜವಳಿ ವ್ಯಾಪಾರಿ. ಅವರು ಸಹ ಸಿಎ ಎರಡನೇ ಹಂತವನ್ನು ಪೂರ್ಣಗೊಳಿಸಿದ್ದರೂ ಕುಟುಂಬ ವ್ಯವಹಾರದಲ್ಲಿ ತೊಡಗಿರುವುದರಿಂದ ಸಿಎ ಫೈನಲ್ ಪರೀಕ್ಷೆಯನ್ನು ಬರೆದಿರಲಿಲ್ಲ. ಜಾವರ್‍ನ ತಾಯಿ ಕಳೆದ 25 ವರ್ಷಗಳಿಂದ ಶಾಲಾ ಶಿಕ್ಷಕಿಯಾಗಿದ್ದಾರೆ.

     

  • ಕಾವ್ಯಾ ಅಸಹಜವಾಗಿ ಸಾವನ್ನಪ್ಪಿದ್ದಾಳೆ: ಉಗ್ರಪ್ಪ ಕಾಲೇಜಿಗೆ ಭೇಟಿ ನೀಡಿದಾಗ ಸಿಕ್ಕಿರೋ ಸ್ಫೋಟಕ ಮಾಹಿತಿ ಇಲ್ಲಿದೆ

    ಕಾವ್ಯಾ ಅಸಹಜವಾಗಿ ಸಾವನ್ನಪ್ಪಿದ್ದಾಳೆ: ಉಗ್ರಪ್ಪ ಕಾಲೇಜಿಗೆ ಭೇಟಿ ನೀಡಿದಾಗ ಸಿಕ್ಕಿರೋ ಸ್ಫೋಟಕ ಮಾಹಿತಿ ಇಲ್ಲಿದೆ

    ಮಂಗಳೂರು: ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಕಾವ್ಯಾ ಸಾವಿನ ಪ್ರಕರಣ ಮೂಡಬಿದ್ರೆಯ ಆಳ್ವಾಸ್ ವಿದ್ಯಾಸಂಸ್ಥೆಗೆ ಕಂಟಕವಾಗುವ ಸಾಧ್ಯತೆ ಗೋಚರಿಸಿದೆ. ಕಾವ್ಯಾಳ ನಿಗೂಢ ಸಾವಿನಿಂದಾಗಿ ಆಳ್ವಾಸ್ ಶಿಕ್ಷಣ ಸಂಸ್ಥೆ ಪರವಾನಗಿ ಇಲ್ಲದೆ ವಸತಿ ಶಾಲೆ ನಡೆಸುತ್ತದೆ ಎನ್ನುವ ವಿಚಾರ ಬಹಿರಂಗಗೊಂಡಿದೆ.

    ಹೌದು. ಕಾವ್ಯ ಸಾವಿನ ಹಿನ್ನಲೆಯಲ್ಲಿ ಮಕ್ಕಳ ಮತ್ತು ಮಹಿಳಾ ದೌರ್ಜನ್ಯ ತಡೆ ಸಮಿತಿಯ ಅಧ್ಯಕ್ಷ ವಿ.ಎಸ್.ಉಗ್ರಪ್ಪ ನೇತೃತ್ವದ ತಂಡ ಆಳ್ವಾಸ್ ಶಿಕ್ಷಣ ಸಂಸ್ಥೆಗೆ ತೆರಳಿ ಪರಿಶೀಲಿಸಿದಾಗ ಈ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಅಷ್ಟೇ ಅಲ್ಲದೇ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು ಕಾವ್ಯ ಅಸಹಜವಾಗಿ ಸಾವನ್ನಪ್ಪಿದ್ದಾಳೆ ಎಂದು ಹೇಳಿದ್ದಾರೆ.

    ಭೇಟಿಯ ವೇಳೆ ರೆಸಿಡೆನ್ಶಿಯಲ್ ಸ್ಕೂಲ್ ನಡೆಸಲು ಆಳ್ವಾಸ್ ಸಂಸ್ಥೆಗೆ ಅನುಮತಿ ಇಲ್ಲದಿರುವುದನ್ನು ಉಗ್ರಪ್ಪ ಕಂಡುಕೊಂಡಿದ್ದಾರೆ. ಅಲ್ಲದೆ, ಶಿಕ್ಷಣ ಸಂಸ್ಥೆಯಲ್ಲಿ 18 ಸಾವಿರ ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆಯಿದ್ದು, ಹಾಸ್ಟೆಲಿಗೆ ಅನುಮತಿ ಇಲ್ಲದೇ ಇರುವುದರಿಂದ ಕಾನೂನು ಉಲ್ಲಂಘನೆ ಎಸಗಿರುವುದು ಬೆಳಕಿಗೆ ಬಂದಿದೆ.

    ಕಾವ್ಯಾ ಆತ್ಮಹತ್ಯೆ ಮಾಡಿಕೊಂಡ ಹಾಸ್ಟೆಲ್ ಮತ್ತು ಹೈಸ್ಕೂಲಿಗೆ ಭೇಟಿ ನೀಡಿದ ತಂಡ, ಅಲ್ಲಿನ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರನ್ನು ಪ್ರಶ್ನೆ ಮಾಡಿತು. ಬಳಿಕ ರೆಸಿಡೆನ್ಶಿಯಲ್ ಸ್ಕೂಲ್ ಬಗ್ಗೆ ಶಿಕ್ಷಣ ಅಧಿಕಾರಿಗಳು ಮತ್ತು ಆಳ್ವಾಸ್ ಆಡಳಿತ ಮಂಡಳಿಯನ್ನು ಪ್ರಶ್ನಿಸಿ ತೀವ್ರ ತರಾಟೆಗೆತ್ತಿಕೊಂಡಿದೆ. ಅನುಮತಿ ಇಲ್ಲದೇ ವಸತಿ ಶಾಲೆ ನಡೆಸುತ್ತಿರುವ ಬಗ್ಗೆ ಅಧಿಕಾರಿಗಳಿಂದ ವರದಿ ಕೇಳಲಾಗಿದ್ದು,ಅಷ್ಟೇ ಅಲ್ಲದೆ, ಕಾವ್ಯಾಳನ್ನು ಹಾಸ್ಟೆಲಿನಿಂದ ಆಸ್ಪತ್ರೆಗೆ ಕೊಂಡೊಯ್ದಿದ್ದ ವಿದ್ಯಾರ್ಥಿನಿಯರನ್ನು ಪ್ರಶ್ನಿಸಿ ಮಾಹಿತಿಯನ್ನು ತಂಡ ಪಡೆದುಕೊಂಡಿದೆ.

    ಘಟನೆ ನಡೆದಿದ್ದ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್ ಇರಲಿಲ್ಲ. ಹೀಗಾಗಿ ಆಕೆಯನ್ನು ಇತರೇ ವಿದ್ಯಾರ್ಥಿಗಳು ಆಸ್ಪತ್ರೆಗೆ ಕರೆದೊಯ್ದಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ಮಾಹಿತಿ ಪಡೆದಿದ್ದೇನೆ. ರೆಸಿಡೆನ್ಸಿಯಲ್ ಸ್ಕೂಲ್‍ಗೆ ಇರಬೇಕಾದ ಮಾನದಂಡಗಳನ್ನು ಅನುಸರಿಸದೇ ಇದ್ದ ಕಾರಣ ಕಾವ್ಯಾ ಸಾವು ಸಂಭವಿಸಿದೆ. ಹೀಗಾಗಿ ಈ ಸಾವಿಗೆ ಆಳ್ವಾಸ್ ಸಂಸ್ಥೆಯೇ ಹೊಣೆ ಹೊರಬೇಕು ಉಗ್ರಪ್ಪ ಹೇಳಿದರು.

    ಹಾಸ್ಟೆಲ್ ಸುರಕ್ಷತೆಗೆ ಸಂಬಂಧಿಸಿದ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಲಾಗಿದೆ. ಸಂಸ್ಥೆಯ ಸಿಬ್ಬಂದಿಗೆ ಕನಿಷ್ಠ ವೇತನ ನೀಡುತ್ತಿಲ್ಲ. 7 ರಿಂದ 24 ಸಾವಿರ ರೂ. ಸಂಬಳ ನೀಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಆಳ್ವಾಸ್ ಶಿಕ್ಷಣ ಸಂಸ್ಥೆಯ ಕಟ್ಟಡದಲ್ಲಿ ಲೋಪಗಳಿವೆ. ಕೆಳ ಅಂತಸ್ತಿನಲ್ಲಿ ಸ್ಕೂಲ್, ಮೇಲಂತಸ್ತಿನಲ್ಲಿ ಹಾಸ್ಟೆಲ್ ಇದೆ. ಕಾನೂನಿನಲ್ಲಿ ಇದಕ್ಕೆ ಅವಕಾಶ ಇಲ್ಲ. ಇದರಲ್ಲಿ ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆಯ ಲೋಪ ಕಂಡು ಬಂದಿದೆ. ಹೀಗಾಗಿ ಆಳ್ವಾಸ್ ಸಂಸ್ಥೆಯಿಂದ ಕಾವ್ಯಾ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಶಿಫಾರಸು ಮಾಡುತ್ತೇನೆ ಎಂದು ಅವರು ಹೇಳಿದರು.

    ಇದೇ ವೇಳೆ, ಜಿಲ್ಲೆಯಲ್ಲಿ ಸುಮಾರು 28 ವಸತಿಯುತ ಖಾಸಗಿ ಶಾಲೆಗಳು ಅನುಮತಿಯಿಲ್ಲದೆ ಕಾರ್ಯನಿರ್ವಹಿಸುತ್ತಿರುವುದೂ ಬೆಳಕಿಗೆ ಬಂದಿದ್ದು, ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಕ್ರಮ ಕೈಗೊಳ್ಳಲು ಸೂಚನೆ ನೀಡುತ್ತೇನೆ ಎಂದು ಉಗ್ರಪ್ಪ ತಿಳಿಸಿದರು.

    ಪಬ್ಲಿಕ್ ಟಿವಿಗೆ ಜೊತೆ ಮಾತನಾಡಿದ ಉಗ್ರಪ್ಪ ಅವರು ಪರಿಶೀಲನೆ ನಡೆಸಿದ ವೇಳೆ ಕಂಡುಕೊಂಡ ವಿಚಾರಗಳನ್ನು ತಿಳಿಸಿದರು. ಇದೇ ವೇಳೆ ತನಿಖೆ ನಡೆಸುವ ಸಂದರ್ಭದಲ್ಲಿ ಎಲ್ಲ ವಿಚಾರಗಳನ್ನು ನಾನು ಈಗ ಬಹಿರಂಗ ಪಡಿಸುವುದು ಅಷ್ಟು ಸರಿಯಲ್ಲ. ಸತ್ಯಾಸತ್ಯತೆ ಪೊಲೀಸ್ ತನಿಖೆಯಿಂದ ಬರಬೇಕಿದೆ. ಈ ಸಾವಿಗೆ ಅನೇಕ ಮಂದಿ ಒಂದು ರೀತಿಯಲ್ಲಿ ಕಾರಣರಾಗಿದ್ದಾರೆ ಎಂದು ಅವರು ಹೇಳಿದರು.

    ಕುಸಿದುಬಿದ್ದ ಅಧಿಕಾರಿ: ಕಾವ್ಯಾ ನಿಗೂಢ ಸಾವಿನ ಹಿನ್ನೆಲೆಯಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಸುಂದರ್ ಪೂಜಾರಿ ಕುಸಿದು ಬಿದ್ದ ಘಟನೆಯೂ ನಡೆಯಿತು. ಕಾವ್ಯ ಸಾವಿನ ಹಿನ್ನೆಲೆಯಲ್ಲಿ ಸುಂದರ್ ಪೂಜಾರಿ ಅವರನ್ನು ಉಗ್ರಪ್ಪ ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಕುಸಿದು ಬಿದ್ದ ಸುಂದರ್ ಪೂಜಾರಿ ಅವರನ್ನು ಸಭೆಯಿಂದ ಅಧಿಕಾರಿಗಳು ಆಸ್ಪತ್ರೆಗೆ ದಾಖಲಿಸಿದರು. ಕಳೆದ ವರ್ಷವೂ ಈ ಅಧಿಕಾರಿ ಉಗ್ರಪ್ಪ ಪ್ರಶ್ನೆಗೆ ಕುಸಿದು ಬಿದ್ದಿದ್ದರು.

    ಇದನ್ನೂ ಓದಿ: ವಿದ್ಯಾರ್ಥಿನಿ ಕಾವ್ಯಶ್ರೀ ನಿಗೂಢ ಸಾವು ಪ್ರಕರಣ: ಆಳ್ವಾಸ್ ಬೆನ್ನಿಗೆ ನಿಂತ ಎಚ್‍ಡಿಕೆ

    https://youtu.be/afDao6a6_FM

    https://youtu.be/HNGQPVsAIq4

     

    https://www.youtube.com/watch?v=75vzrVm8Z6w

    https://www.youtube.com/watch?v=BgvrrloxXoQ

    https://www.youtube.com/watch?v=9upWi0NOWqw

  • 38 ಸಾವಿರ ಕಾಲೇಜುಗಳ ವಿದ್ಯಾರ್ಥಿಗಳಿಗೆ ಜಿಯೋದಿಂದ ಗುಡ್‍ನ್ಯೂಸ್!

    38 ಸಾವಿರ ಕಾಲೇಜುಗಳ ವಿದ್ಯಾರ್ಥಿಗಳಿಗೆ ಜಿಯೋದಿಂದ ಗುಡ್‍ನ್ಯೂಸ್!

    ಮುಂಬೈ: ಎಲ್‍ಟಿಇ ಫೀಚರ್ ಫೋನ್ ಬಿಡುಗಡೆ ಮಾಡಿದ ಬಳಿಕ ಜಿಯೋ ಮತ್ತೊಂದು ಸಾಹಸಕ್ಕೆ ಕೈ ಹಾಕಿದ್ದು, ಈಗ ದೇಶದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಇಂಟರ್ ನೆಟ್ ನೀಡಲು ಮುಂದಾಗಿದೆ.

    ಹೌದು. ಉಚಿತ ವೈಫೈ ನೀಡುವ ಸಲುವಾಗಿ ಮಾನವ ಸಂಪನ್ಮೂಲ ಸಚಿವಾಲಯಕ್ಕೆ ಜಿಯೋ ಪ್ರಸ್ತಾವನೆಯನ್ನು ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ.

    ಮೂಲಗಳ ಪ್ರಕಾರ ಸಚಿವಾಲಯ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಆದರೂ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, ಈ ರೀತಿಯ ಪ್ರಸ್ತಾವನೆಗಳನ್ನು ಪಾರದರ್ಶಕವಾಗಿ ಟೆಂಡರ್ ಕರೆದು ಅನುಮತಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

    ದೇಶದ 38 ಸಾವಿರ ಕಾಲೇಜುಗಳಿಗೆ (ಟೆಕ್ನಿಕಲ್ ಮತ್ತು ಟೆಕ್ನಿಕಲ್ ಹೊರತಾದ) ವೈಫೈ ನೀಡುವ ಪ್ರಸ್ತಾವನೆಯನ್ನು ಜಿಯೋ ಕಳೆದ ತಿಂಗಳು ನೀಡಿದೆ. ಆನ್‍ಲೈನ್ ಮೂಲಕ ಮಾಹಿತಿಗಳನ್ನು ಹಂಚಲು ಕೇಂದ್ರ ಸರ್ಕಾರ ಎಲ್ಲ ಕಾಲೇಜುಗಳಿಗೆ ವೈಫೈ ನೀಡಲು ಮುಂದಾಗುತ್ತಿದೆ. ಆದರೆ ಈ ರೀತಿಯ ಪ್ರಸ್ತಾವನೆ ಇದೆ ಮೊದಲ ಬಾರಿಗೆ ಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

    ಈ ಯೋಜನೆಗೆ ಸಂಬಂಧಿಸಿದಂತೆ ಜಿಯೋ ಯಾವುದೇ ಹಣವನ್ನು ಪಡೆದುಕೊಳ್ಳುವುದಿಲ್ಲ. ಆದರೆ ಬೇರೆ ಕಂಪೆನಿಗಳಿಗೆ ಅವಕಾಶ ನೀಡದೇ ಅನುಮತಿ ನೀಡಲು ಸಾಧ್ಯವಿಲ್ಲ. ಹೀಗಾಗಿ ಪಾರದರ್ಶಕವಾಗಿ ಟೆಂಡರ್ ಕರೆಯಲಾಗುವುದು ಎಂದು ಅಧಿಕಾರಿ ಮಾಹಿತಿ ನೀಡಿದರು.

    ಜಿಯೋ ಉಚಿತ ವೈಫೈ ನೀಡುವ ಸಂಬಂಧವಾಗಿ ಕಳೆದ ತಿಂಗಳು ಪವರ್ ಪಾಯಿಂಟ್ ಮೂಲಕ ವಿವರಣೆ ನೀಡಿದೆ. ಈ ವಿಚಾರದ ಬಗ್ಗೆ ಮಾಧ್ಯಮಗಳು ಜಿಯೋ ಪ್ರತಿನಿಧಿಗಳನ್ನು ಸಂಪರ್ಕಿಸಿದ್ದು, ಅವರಿಂದ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.

    ಮಾನವ ಸಂಪನ್ಮೂಲ ಸಚಿವಾಲಯ ಕೇಂದ್ರಿಯ ವಿವಿಗಳಿಗೆ ಉಚಿತ ವೈಫೈ ನೀಡಲು ಪ್ರಸ್ತಾವನೆ ಸಲ್ಲಿಸಿದ್ದು ಈ ಯೋಜನೆ ಈ ವರ್ಷವೇ ಪೂರ್ಣವಾಗುವ ಸಾಧ್ಯತೆಯಿದೆ. ಸಚಿವ ಪ್ರಕಾಶ್ ಜಾವ್ಡೇಕರ್ ಕೆಲ ದಿನಗಳ ಹಿಂದೆ ಆಗಸ್ಟ್ 31ರ ಒಳಗಡೆ ದೇಶದ 38 ವಿವಿಗಳಿಗೆ ವೈಫೈ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ತಿಳಿಸಿದ್ದರು.

    ಆರಂಭದಲ್ಲಿ  ವೈಫೈ ಸಿಗೋ ವಿವಿಗಳು
    ದೆಹಲಿ, ವಿಶ್ವವಿದ್ಯಾಲಯ
    ಬನರಾಸ್, ಹಿಂದೂ ವಿಶ್ವವಿದ್ಯಾಲಯ
    ಆಲಿಗಢ, ಮುಸ್ಲಿಂ ವಿಶ್ವವಿದ್ಯಾಲಯ
    ಜಮಿಯಾ ಮಿಲಿಯಾ ಇಸ್ಲಾಮಿಯಾ , ವಿಶ್ವವಿದ್ಯಾಲಯ
    ಕೇಂದ್ರಿಯ ವಿಶ್ವವಿದ್ಯಾಲಯ, ಹಿಮಾಚಲಪ್ರದೇಶ
    ಕೇಂದ್ರಿಯ ವಿಶ್ವವಿದ್ಯಾಲಯ, ದಕ್ಷಿಣ ಬಿಹಾರ
    ಕೇಂದ್ರಿಯ ವಿಶ್ವವಿದ್ಯಾಲಯ, ಜಮ್ಮು

     

  • ಬಡತನದಲ್ಲಿ ಹುಟ್ಟಿ ಬೆಳೆದು, ಪಿಯುಸಿಯಲ್ಲಿ ಶೇ.91 ಅಂಕಗಳಿಸಿರುವ ವಿದ್ಯಾರ್ಥಿನಿಗೆ ಬೇಕಿದೆ ಆರ್ಥಿಕ ಸಹಾಯ

    ಬಡತನದಲ್ಲಿ ಹುಟ್ಟಿ ಬೆಳೆದು, ಪಿಯುಸಿಯಲ್ಲಿ ಶೇ.91 ಅಂಕಗಳಿಸಿರುವ ವಿದ್ಯಾರ್ಥಿನಿಗೆ ಬೇಕಿದೆ ಆರ್ಥಿಕ ಸಹಾಯ

    ಹಾಸನ: ಬಡತನದಲ್ಲಿ ಸಾಕಷ್ಟು ಕಷ್ಟ ಪಟ್ಟು ಪಿಯುಸಿಯಲ್ಲಿ ಶೇ.91 ಅಂಕಗಳಿಸಿರುವ ವಿದ್ಯಾರ್ಥಿನಿ ಇಂದು ಬೆಳಕು ಕಾರ್ಯಕ್ರಮಕ್ಕೆ ತನ್ನ ಉನ್ನತ ಶಿಕ್ಷಣದ ಸಹಾಯ ಕೋರಿ ಬೆಳಕು ಕಾರ್ಯಕ್ರಮ ಬಂದಿದ್ದಾರೆ.

    ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ದೊಮ್ಮರಹಟ್ಟಿ ಗ್ರಾಮದ ಉಮೇಶ್ ಎಂಬವರು ಕನ್ನಡ ಮಾಧ್ಯಮದಲ್ಲಿ ಓದಿದ್ದ ಮಗಳು ಉನ್ನತ ಶಿಕ್ಷಣ ಕಾಣುವ ಕನಸನ್ನು ಕಾಣುತ್ತಿದ್ದಾಳೆ. ಉಮೇಶರಿಗೆ ಇಬ್ಬರು ಹೆಣ್ಣು ಮಕ್ಕಳು. ಒಬ್ಬಳು ಎಸ್‍ಎಸ್‍ಎಲ್‍ಸಿ ಓದುತ್ತಿದ್ದಾಳೆ. ಇನ್ನೋಬ್ಬಳೆ ಭೂಮಿಕಾ.

    ಗ್ರಾಮದ ಸಮೀಪದ ಶಿವೇನಹಳ್ಳಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಭೂಮಿಕ, ಹೈಸ್ಕೂಲ್ ಓದಿದ್ದು 5 ಕಿಲೋಮೀಟರ್ ದೂರದ ಜಾವಗಲ್‍ನಲ್ಲಿ. ಕುಗ್ರಾಮಕ್ಕೆ ಬಸ್ ಸೌಕರ್ಯ ಇಲ್ಲದ ಕಾರಣ ಭೂಮಿಕ ಪ್ರತಿದಿನ ಸೈಕಲ್ ಮೂಲಕ 5 ಕಿಲೋಮೀಟರ್ ಹೋಗಿ ಎಸ್‍ಎಸ್‍ಎಲ್‍ಸಿಯಲ್ಲಿ ಗ್ರಾಮಕ್ಕೆ ಹೆಮ್ಮೆಯಾಗುವಂತೆ ಶೇಕಡ 95 ಅಂಕಗಳನ್ನು ಪಡೆದಿದ್ದಾಳೆ. ಮುಂದೆ ದಕ್ಷಿಣ ಕನ್ನಡದ ಉಜಿರೆಯ ಎಸ್‍ಡಿಎಂ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಕೊಡಿಸಿದ್ದಾರೆ. ಅಲ್ಲಿಯೂ ಕೂಡ ತಮ್ಮ ಗ್ರಾಮ ಮತ್ತು ಪೋಷಕರಿಗೆ ಹೆಮ್ಮೆಯಾಗುವಂತೆ ಅಂಕಗಳನ್ನು ಪಡೆದ ಭೂಮಿಕ ಶೇಕಡ 91 ಅಂಕಗಳನ್ನು ಪಡೆದು ಪೋಷಕರ ಪ್ರೀತಿಗೆ ಪಾತ್ರವಾಗಿದ್ದಾಳೆ.

    ಕಳೆದ ಮೂರು ವರ್ಷಗಳಿಂದ ಬರಪರಿಸ್ಥಿತಿ ಇರೋದ್ರಿಂದ ಸರಿಯಾಗಿ ಕೂಲಿ ಕೆಲಸವೂ ಸಿಗುತ್ತಿಲ್ಲ. ಟ್ರಾಕ್ಟರ್ ಡ್ರೈವಿಂಗ್ ಕೆಲಸ ಮಾಡಿ ಅಷ್ಟೋ ಇಷ್ಟೋ ಬಂದಿದ್ದರಲ್ಲಿ ಜೀವನ ಸಾಗಿಸುವ ಉಮೇಶ್ ಕುಟುಂಬಕ್ಕೆ ದುಬಾರಿ ಶಿಕ್ಷಣ ವ್ಯವಸ್ಥೆ ಆತಂಕ ಸೃಷ್ಟಿಸಿದೆ.

    ಪಿಯುಸಿಯಲ್ಲಿ ಭೂಮಿಕಾ ಒಟ್ಟು 540 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾಳೆ. ಈಗಾಗಲೆ ಸಿಇಟಿ ಪರಿಕ್ಷೆ ಬರೆದು ಇಂಜಿನಿಯರಿಂಗ್ ಸೀಟ್ ಸಿಕ್ಕಿದೆ. ಬೆಂಗಳೂರಿನ ಅಂಬೇಡ್ಕರ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಸೀಟು ಸಿಕ್ಕಿದ್ರೂ ಕೂಡ ಅದನ್ನ ಈಗಾಗಲೇ ಆರ್ಥಿಕ ಕೊರತೆಯಿಂದಾಗಿ ಕೈಬಿಟ್ಟಿದ್ದಾರೆ. ತಮ್ಮ ಮಗಳಿಗೆ ಮೆಡಿಕಲ್ ಓದಿಸಬೇಕು ಎನ್ನುವ ಆಸೆ ಪೋಷಕರಿಗಿದ್ದು, ಜೊತೆಗೆ ಭೂಮಿಕಾ ಈಗಾಗಲೇ ಯಾವುದೇ ಕೋಚಿಂಗ್ ಇಲ್ಲದೆ ನೀಟ್ ಪರಿಕ್ಷೆ ಕೂಡ ಬರೆದು ಫಲಿತಾಂಶಕ್ಕೆ ಕಾಯುತಿದ್ದಾಳೆ. ಕನ್ನಡ ಮಾದ್ಯಮದಲ್ಲಿ ಓದಿ ಪಿಯುಸಿಯಲ್ಲಿ ಇಂಗ್ಲೀಷ್‍ನಲ್ಲಿಯೇ ಪಾಸ್ ಮಾಡುವ ಮೂಲಕ ಸಾಧನೆ ಮಾಡಿರುವ ಭೂಮಿಕಾಗೆ ಈಗ ಮುಂದೇನು ಎಂಬ ಪ್ರಶ್ನೆ ಕಾಡುತ್ತಿದೆ.

    ಮೆಡಿಕಲ್ ಓದಬೇಕು ಎನ್ನುವ ಭೂಲಿಕಾಳ ಆಸೆಗೆ ನೀಟ್ ಪರಿಕ್ಷೆಯ ಫಲಿತಾಂಶ ಉತ್ತರ ನೀಡಲಿದೆ. ಮೆಡಿಕಲ್ ಸಿಗದಿದ್ದಲ್ಲಿ ಇಂಜಿನಿಯರಿಂಗ್ ಓದುವೆ ಎನ್ನುವ ಭೂಮಿಕ ಮತ್ತು ಆಕೆಯ ಕುಟುಂಬಸ್ಥರು ಆಕೆಯ ವಿದ್ಯಾಭ್ಯಾಸಕ್ಕಾಗಿ ಸಹಾಯಕ್ಕಾಗಿ ಕೇಳಿಕೊಂಡಿದ್ದಾರೆ.

    https://www.youtube.com/watch?v=e502cCeXTvE

  • ಶಿಕ್ಷಣ ಕ್ಷೇತ್ರದ ಮಹಾನ್ ಸುಧಾರಕ- ನಿರುದ್ಯೋಗಿಗಳು, ಅನಾಥರಿಗೆ ರಕ್ಷಕರಾಗಿರೋ ಬೆಳಗಾವಿಯ ಬಿಇಓ ಅಜಿತ್

    ಶಿಕ್ಷಣ ಕ್ಷೇತ್ರದ ಮಹಾನ್ ಸುಧಾರಕ- ನಿರುದ್ಯೋಗಿಗಳು, ಅನಾಥರಿಗೆ ರಕ್ಷಕರಾಗಿರೋ ಬೆಳಗಾವಿಯ ಬಿಇಓ ಅಜಿತ್

    ಬೆಳಗಾವಿ: ಇಂದಿನ ನಮ್ಮ ಪಬ್ಲಿಕ್ ಹೀರೋ ವೃತ್ತಿಯಲ್ಲಿ ಬಿಇಓ. ಆದರೆ ಪ್ರವೃತ್ತಿಯಲ್ಲಿ ಸಮಾಜ ಸೇವಕ ಹಾಗೂ ಶಿಕ್ಷಣ ಪ್ರೇಮಿ. ಪ್ರತಿಭಾವಂತ ಅನಾಥ ಮಕ್ಕಳನ್ನು ಗುರುತಿಸಿ ಅವರ ಶಿಕ್ಷಣಕ್ಕೆ ಸದ್ದಿಲ್ಲದೆ ಸಹಾಯ ಮಾಡ್ತಿದ್ದಾರೆ.

    ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಮೂಡಲಗಿಯ ಬಿಇಓ ಅಜಿತ್ ಮನ್ನಿಕೇರಿ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಇವರ ಪರಿಶ್ರಮದಿಂದ ಶಿಕ್ಷಣ ಕ್ಷೇತ್ರದಲ್ಲಿ ಮೂಡಲಗಿ ವಲಯ ಹಲವಾರು ವಿಷಯಗಳಲ್ಲಿ ರಾಜ್ಯದಲ್ಲಿಯೇ ಹೆಸರಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶದಲ್ಲಿ ಸತತವಾಗಿ ಮೂರು ವರ್ಷ ಪ್ರಥಮ ಸ್ಥಾನದಲ್ಲಿದೆ. ಶಾಲಾ ಹೆಣ್ಣು ಮಕ್ಕಳಿಂದ ಅವರ ಅಪ್ಪಂದಿರಿಗೆ ಪತ್ರ ಬರೆಸಿ, ಪಾಲಕರೇ ಶೌಚಾಲಯ ನಿರ್ಮಿಸಿಕೊಳ್ಳುವಂತೆ ಪ್ರೇರಣೆ ಮಾಡಿ ಯಶಸ್ಸು ಕಂಡಿದ್ದಾರೆ.

    ಪದವಿ ಪಡೆದ 368 ನಿರುದ್ಯೋಗಿಗಳನ್ನ ಗ್ರಾಮೀಣ ಭಾಗದಲ್ಲಿ ಶಿಕ್ಷಕರನ್ನಾಗಿ ನೇಮಿಸಿ ತಮ್ಮ ಸ್ವಂತ ದುಡ್ಡಿನಲ್ಲೇ ಗೌರವ ಧನ ನೀಡ್ತಿದ್ದಾರೆ. ಇದು ದೇಶದಲ್ಲಿಯೇ ಮಾದರಿ ಕೆಲಸ. ಇದರ ಜೊತೆ ಪ್ರತಿ ವರ್ಷ 60 ಪ್ರತಿಭಾವಂತ ಅನಾಥ ಮಕ್ಕಳನ್ನು ಗುರುತಿಸಿ ಅವರನ್ನು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಓದಿಸುತ್ತಿದ್ದಾರೆ. ಕಳೆದ 3 ವರ್ಷಗಳಿಂದ ಇವರ ಸೇವೆ ನಿರಂತರವಾಗಿದೆ.

    ಜಾರಕಿಹೊಳಿ ಟ್ರಸ್ಟ್ ಸೇರಿದಂತೆ ವಿವಿಧ ಸಹೃದಯಿಗಳಿಂದ, ಶಾಸಕರು, ಸಂಸದರಿಂದ ಪಡೆದ ಸಹಾಯಧನವನ್ನು ಶಿಕ್ಷಕರಿಗೆ ವೇತನ ನೀಡಲು ಮನ್ನಿಕೇರಿ ಬಳಸುತ್ತಿದ್ದಾರೆ. ಸರಳ ಸಜ್ಜನಿಕೆಗೆ ಹೆಸರಾದ ಅಜಿತ್ ಮನ್ನಿಕೇರಿ ಎಂದರೆ ಈ ಭಾಗದ ಜನರಿಗೆ ಅಚ್ಚು ಮೆಚ್ಚು.

    https://www.youtube.com/watch?v=qqKtX6cbL38

  • ಬೆಳಕು ಇಂಪ್ಯಾಕ್ಟ್: ಸಹೋದರಿಯರ ವಿದ್ಯಾಭ್ಯಾಸಕ್ಕೆ ಹಣ ಕಟ್ಟಲು ನೆರವು

    ಬೆಳಕು ಇಂಪ್ಯಾಕ್ಟ್: ಸಹೋದರಿಯರ ವಿದ್ಯಾಭ್ಯಾಸಕ್ಕೆ ಹಣ ಕಟ್ಟಲು ನೆರವು

    ದಾವಣಗೆರೆ: ಈ ಸಹೋದರಿಯರಿಗೆ ಓದು ಎಂದರೆ ಪಂಚಪ್ರಾಣ, ಶಾಲೆಯಲ್ಲಿ ಯಾರಿಗೂ ಕಮ್ಮಿ ಇಲ್ಲ ಎನ್ನುವಂತೆ ಓದುತ್ತಿದ್ದರು. ಆದ್ರೆ ವಿಧಿ ಮಾತ್ರ ಇವರ ಜೀವನದಲ್ಲಿ ಆಟವಾಡಿತ್ತು. ವಿದ್ಯಾಭ್ಯಾಸಕ್ಕೆ ಹಣ ಕಟ್ಟಲು ಹಣವಿಲ್ಲದೇ ಒದ್ದಾಡುವಂತ ಪರಿಸ್ಥಿತಿ ಬಂದೊದಗಿತ್ತು. ಆದ್ರೆ ಈ ಸಹೋದರಿಯರಿಗೆ ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮ ನೆರವಿಗೆ ಬಂದಿದೆ.

    ತಮಗೆ ಮುಂದಿನ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದು ಎನ್ನುವ ಖುಷಿಯನ್ನು ಸಹೋದರಿಯರು ವ್ಯಕ್ತಪಡಿಸುತ್ತಿದ್ದಾರೆ. ತಮ್ಮ ಮಕ್ಕಳ ಅನಂದವನ್ನು ನೋಡಿ ಅವರ ತಾಯಿಯು ಸಹ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

    ನಗರದ ಶ್ರೀರಾಮ ನಗರದ ನಿವಾಸಿಗಳಾದ ಅಂಜಿನಪ್ಪ ಹಾಗೂ ಮಂಜುಳಾ ದಂಪತಿಯ ಮಕ್ಕಳಾದ ರಂಜಿತಾ ಹಾಗೂ ರಕ್ಷಿತಾ ಸಿದ್ದಗಂಗಾ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತಿದ್ದರು. ಎಗ್ ರೈಸ್ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಅಂಜಿನಪ್ಪ ಕೆಲ ತಿಂಗಳಗಳ ಹಿಂದೆ ಕ್ಯಾನ್ಸರ್ ರೋಗಕ್ಕೆ ತುತ್ತಾದ್ರು.

    ಇದರಿಂದ ಜೀವನ ನಡೆಸುವುದೇ ಕಷ್ಟವಾಗಿದ್ದ ಸಮಯದಲ್ಲಿ ವಿದ್ಯಾಭ್ಯಾಸಕ್ಕೆ ಹಣ ಕಟ್ಟುವುದು ತುಂಬಾ ಹೊರೆಯಾಗಿತ್ತು. ಹಾಗಾಗಿ ಶಾಲೆಯ ಶುಲ್ಕ ಕಟ್ಟಲು ಕಷ್ಟವಾಗಿದ್ದಾಗ ಶಾಲೆಯನ್ನು ಬಿಟ್ಟು ರೊಟ್ಟಿ ಮಾಡಿ ತಂದೆ ತಾಯಿಗೆ ಆಸರೆಯಾಗಬೇಕು ಎಂದುಕೊಂಡಿದ್ದರು. ಆಗ ಇವರ ಆಸರೆಗೆ ಬಂದಿದ್ದು ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮ. ಈ ಕಾರ್ಯಕ್ರಮದಿಂದ ಬಡ ವಿದ್ಯಾರ್ಥಿನಿಯರ ಶಾಲಾ ಶುಲ್ಕ ಕಟ್ಟಿ ಮತ್ತೆ ಶಾಲೆಗೆ ಕಳಿಸಲಾಗಿದೆ.

    ಇನ್ನು ಸಿದ್ದಗಂಗಾ ಶಾಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗಿಂತ ಉತ್ತಮವಾದ ವಿದ್ಯಭ್ಯಾಸ ಮಾಡುತ್ತಿದ್ದು, ಶಾಲೆಗೆ ಒಳ್ಳೆಯ ಹೆಸರು ತರುತ್ತಾರೆ ಎನ್ನುವ ನೀರಿಕ್ಷೆ ಇಲ್ಲಿನ ಶಿಕ್ಷಕರು ಇಟ್ಟುಕೊಂಡಿದ್ದಾರೆ. ಇನ್ನೇನು ನಮಗೆ ಶಾಲೆಗೆ ಹೋಗುವುದು ಮರಿಚಿಕೆಯಾಗುತ್ತದೆ ಎನ್ನುವ ಸಮಯದಲ್ಲಿ ಪಬ್ಲಿಕ್ ಟಿವಿ ಇವರ ಆಸರೆಗೆ ಬಂದಿದೆ. ಶಾಲಾ ಶುಲ್ಕವನ್ನು ಕಟ್ಟಿ ವಿದ್ಯಾರ್ಥಿಗಳ ಮುಂದಿನ ವಿದ್ಯಭ್ಯಾಸಕ್ಕೆ ಸಹಾಯ ಮಾಡಿದೆ.

  • ಬೆಳಕು ಇಂಪ್ಯಾಕ್ಟ್: ಐಸ್ ಮಾರಿಕೊಂಡು ಜೀವನ ಸಾಗಿಸುತ್ತಿದ್ದ ಬಾಲಕನಿಗೆ ನೆರವಾಯ್ತು `ಬೆಳಕು’ ಕಾರ್ಯಕ್ರಮ

    ಬೆಳಕು ಇಂಪ್ಯಾಕ್ಟ್: ಐಸ್ ಮಾರಿಕೊಂಡು ಜೀವನ ಸಾಗಿಸುತ್ತಿದ್ದ ಬಾಲಕನಿಗೆ ನೆರವಾಯ್ತು `ಬೆಳಕು’ ಕಾರ್ಯಕ್ರಮ

    ದಾವಣಗೆರೆ: ಐಸ್ ಮಾರಿಕೊಂಡು ಜೀವನ ಸಾಗಿಸುತ್ತಾ ಮನೆ ಜವಬ್ದಾರಿಯ ಜೊತೆಗೆ ಓದಬೇಕು ಎನ್ನುವ ಆಸೆಯ ಜೊತೆಗೆ ಮನೆಯಲ್ಲಿ ಆಂಗವಿಕಲೆ ಅಕ್ಕನನ್ನು ತಾಯಿಯನ್ನು ನೋಡಿಕೊಳ್ಳುವ ಜವಾಬ್ದಾರಿ ಹೊಂದಿರುವ ಬಾಲಕನ ನೆರವಿಗೆ ಪಬ್ಲಿಕ್ ಟಿವಿ ಬೆಳಕು ಕಾರ್ಯಕ್ರಮ ಬಂದಿದೆ.

    ದಾವಣಗೆರೆಯ ತಿಪ್ಪೇಶ್ ಕಳೆದ ಹಲವು ವರ್ಷಗಳಿಂದ ಬಸ್ ನಿಲ್ದಾಣಗಳಲ್ಲಿ ಐಸ್ ಹಾಗೂ ಚಿಪ್ಸ್ ಮಾರಿಕೊಂಡು ಶಾಲೆಯ ಶುಲ್ಕ ಕಟ್ಟಿಕೊಂಡು ಮನೆಯನ್ನು ಸಾಗಿಸುತ್ತ ಜೀವನ ನಡೆಸುತ್ತಿದ್ದ. ಸದ್ಯ ತಿಪ್ಪೇಶ್‍ನಿಗೆ ನಗರದ ಸೋಮೇಶ್ವರ ಶಾಲೆ ಪಬ್ಲಿಕ್ ಟಿವಿಯ ಮನವಿಯ ಮೇರೆಗೆ ಉಚಿತ ಶಿಕ್ಷಣವನ್ನು ನೀಡುತ್ತಿದೆ.

    ಸೋಮೇಶ್ವರ ಶಾಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗಿಂತ ಉತ್ತಮವಾಗಿ ಓದುತ್ತಿರುವ ತಿಪ್ಪೇಶ್ ಶಿಕ್ಷಕರಿಗೆ ಅಚ್ಚುಮೆಚ್ಚು. ಶಿಕ್ಷಕರಿಗೆ ಮಾತು ಕೊಟ್ಟಂತೆ ಹೆಚ್ಚು ಅಂಕ ಪಡೆದು ಶಾಲೆಗೆ ಹಾಗೂ ತಾಯಿಗೆ ಒಳ್ಳೆಯ ಹೆಸರು ತರಬೇಕು ಎನ್ನುವ ಛಲದಿಂದ ಬಾಲಕ ತಿಪ್ಪೇಶ್ ಓದುತ್ತಿದ್ದಾನೆ. ಇನ್ನು ವಿದ್ಯಾರ್ಥಿಗೆ ಶಾಲೆಯ ಶಿಕ್ಷಕರು ಓದಲು ಎಲ್ಲಾ ರೀತಿಯ ಸಹಾಯ ಮಾಡುತ್ತೇವೆ ಅಲ್ಲದೇ ಬಡ ಮಕ್ಕಳಿಗೆ ಸಹಾಯ ಮಾಡುವ ಪಬ್ಲಕ್ ಟಿವಿಯ ಬೆಳಕು ಕಾರ್ಯಕ್ರಮದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.