Tag: education

  • ಜಿಎಸ್‍ಟಿ ಸೇವಾ ತೆರಿಗೆ: ಯಾವುದಕ್ಕೆ ಎಷ್ಟು? ದುಬಾರಿಯಾಗಲಿದೆ ಕನ್ನಡ ಸಿನಿಮಾ ಟಿಕೆಟ್ ದರ

    ಜಿಎಸ್‍ಟಿ ಸೇವಾ ತೆರಿಗೆ: ಯಾವುದಕ್ಕೆ ಎಷ್ಟು? ದುಬಾರಿಯಾಗಲಿದೆ ಕನ್ನಡ ಸಿನಿಮಾ ಟಿಕೆಟ್ ದರ

    ಶ್ರೀನಗರ: ಜುಲೈ 1ರಿಂದ ದೇಶಾದ್ಯಂತ ಜಾರಿಗೆ ಬರಲಿರುವ `ಏಕರಾಷ್ಟ್ರ, ಏಕ ತೆರಿಗೆ’ ಪರಿಕಲ್ಪನೆಯ ಜಿಎಸ್‍ಟಿಯ ಸೇವಾ ತೆರಿಗೆಯ ದರ ಅಂತಿಮಗೊಂಡಿದೆ. ನಾಲ್ಕು ಹಂತದಲ್ಲಿ ಜಿಎಸ್‍ಟಿ ದರ ಘೋಷಿಸಲಾಗಿದ್ದು, ಶೇ.5, 12, 18 ಹಾಗೂ 28ರಷ್ಟು ತೆರಿಗೆ ವಿಧಿಸಲು ಹಣಕಾಸು ಸಚಿವ ಅರುಣ್ ಜೇಟ್ಲಿ ನೇತೃತ್ವದಲ್ಲಿ ನಡೆದ ಎರಡನೇ ದಿನದ ಸಭೆಯಲ್ಲಿ ಅಂಕಿತ ಸಿಕ್ಕಿದೆ.

    ಶಿಕ್ಷಣ ಹಾಗೂ ಆರೋಗ್ಯ ಸೇವೆಗಳಿಗೆ ವಿನಾಯ್ತಿ ನೀಡಲಾಗಿದ್ದು, ಐಷಾರಾಮಿ ಜೀವನ ದುಬಾರಿಯಾಗಲಿದೆ. ಆದ್ರೆ, ಚಿನ್ನದ ಮೇಲಿನ ತೆರಿಗೆ ಇನ್ನು ಅಂತಿಮಗೊಂಡಿಲ್ಲ. ಹೀಗಾಗಿ ಜೂನ್ 3ರಂದು ಮತ್ತೊಂದು ಸುತ್ತಿನ ಜಿಎಸ್‍ಟಿ ಸಭೆ ನಡೆಯಲಿದೆ.

    ಯಾವುದಕ್ಕೆ ಎಷ್ಟು ತೆರಿಗೆ?
    ರಸ್ತೆ, ರೈಲ್ವೇ ಸೇವೆಗಳ ಮೇಲೆ ಶೇ.5 ರಷ್ಟು ತೆರಿಗೆ (ಓಲಾ, ಉಬರ್ ಕ್ಯಾಬ್ ಸೇವೆಗಳಿಗೆ ಶೇ.5 ರಷ್ಟು ತೆರಿಗೆ) ವಿಧಿಸಲಾಗಿದ್ದರೆ, ಎಸಿ ಸೌಲಭ್ಯವಿಲ್ಲದ ಹೋಟೆಲ್‍ಗಳಲ್ಲಿ ಶೇ.12 ರಷ್ಟು ತೆರಿಗೆ ಹಾಕಲಾಗಿದೆ.

    1 ಸಾವಿರ ರೂ. ಬಾಡಿಗೆ ಇರುವ ಹೋಟೆಲ್‍ಗಳಿಗೆ ತೆರಿಗೆ ಇಲ್ಲ. ಆದರೆ 2,500 ರೂ. ನಿಂದ 5000 ರೂ. ಹೊಟೇಲ್ ಬಾಡಿಗೆ ಕೊಟ್ಟರೆ ಶೇ.12ರಷ್ಟು ತೆರಿಗೆ ಕಟ್ಟಬೇಕಾಗುತ್ತದೆ. ಫೈವ್‍ಸ್ಟಾರ್ ಹೋಟೆಲ್‍ಗಳಿಗೆ ಶೇ.18 ರಷ್ಟು ತೆರಿಗೆ ವಿಧಿಸಲಾಗಿದ್ದು, 5 ಸಾವಿರ ರೂಪಾಯಿ ಮೇಲ್ಪಟ್ಟ ಹೋಟೆಲ್ ವ್ಯವಹಾರಗಳಿಗೆ ಶೇ.28ರಷ್ಟು ತೆರಿಗೆ ವಿಧಿಸಲು ಒಪ್ಪಿಗೆ ಸಿಕ್ಕಿದೆ.

    ಸಿನಿಮಾ, ಜೂಜಿನ ಮೇಲೆ ಶೇ.28ರಷ್ಟು ತೆರಿಗೆ, ಹಣಕಾಸು, ದೂರಸಂಪರ್ಕದ ಮೇಲೆ ಶೇ.18ರಷ್ಟು ತೆರಿಗೆ, ಬ್ರಾಂಡೆಂಡ್ ಬಟ್ಟೆಗಳಿಗೆ ಶೇ.18ರಷ್ಟು ತೆರಿಗೆ ವಿಧಿಸಲಾಗಿದೆ. ರೆಫ್ರಿಜರೇಟರ್, ಎಸಿ, ಟಿವಿ, ಕಾರ್ ಸೇರಿದಂತೆ ಐಷಾರಾಮಿ ವಸ್ತುಗಳಿಗೆ ಶೇ.28ರಷ್ಟು ತೆರಿಗೆ ವಿಧಿಸಲಾಗಿದ್ದು, ಶಿಕ್ಷಣ ಮತ್ತು ಆರೋಗ್ಯದ ಸೆಸ್ ರದ್ದು ಮಾಡಲಾಗಿದೆ.

    ಕನ್ನಡ ಸಿನಿಮಾ ಟಿಕೆಟ್ ರೇಟ್ ದುಬಾರಿ:
    ಜಿಎಸ್‍ಟಿ ಕಾಯ್ದೆಯಡಿ ಎಲ್ಲಾ ಭಾಷೆಯ ಚಿತ್ರಗಳಿಗೆ ಶೇ.28 ಏಕರೂಪ ಟ್ಯಾಕ್ಸ್ ವಿಧಿಸಲಾಗಿದೆ. ಇದರಿಂದಾಗಿ ಕನ್ನಡ ಚಿತ್ರ ವೀಕ್ಷಕರಿಗೆ ಹೊರೆಯಾಗಲಿದೆ ಏಕರೂಪ ಟ್ಯಾಕ್ಸ್. ಹಳೆಯ ತೆರಿಗೆಯ ನಿಯಮ ಪ್ರಕಾರ ಕನ್ನಡ ಚಿತ್ರಗಳಿಗೆ ಸರ್ಕಾರ ಮನರಂಜನಾ ತೆರಿಗೆ ವಿನಾಯ್ತಿ ನೀಡಿತ್ತು. ಇಲ್ಲಿವರೆಗೆ ಕನ್ನಡ ವೀಕ್ಷಕರು ಕೇಂದ್ರ ಸರ್ಕಾರದ ಸೇವಾ ತೆರಿಗೆ ಶೇ.15 ಹಾಗೂ ಇತರೆ ಸೆಸ್ ಸೇರಿ ಶೇ. 17 ಟ್ಯಾಕ್ಸ್ ಮಾತ್ರ ನೀಡುತ್ತಿದ್ದರು. ಆದರೆ ಜಿಎಸ್‍ಟಿಯಿಂದ ಈಗ ಕನ್ನಡ ಹಾಗೂ ಎಲ್ಲಾ ಭಾಷೆಯ ಸಿನಿಮಾಗಳಿಗೆ ಶೇ.28 ಆಗಲಿದೆ. ಇದರ ಪರಿಣಾಮ ಕನ್ನಡ ಚಿತ್ರ ವೀಕ್ಷಕರಿಗೆ ಶೇ.10 ಶೇ.11 ತೆರಿಗೆ ಹೆಚ್ಚಾಗಲಿದೆ. ಪರಭಾಷೆ ಚಿತ್ರ ಪ್ರೇಕ್ಷಕರಿಗೆ ಶೇ.3 ರಿಂದ ಶೇ.5 ತೆರಿಗೆ ಕಡಿಮೆಯಾಗಲಿದೆ .

    ಕನ್ನಡ ಮತ್ತು ಕನ್ನಡೇತರ ಸಿನಿಮಾಗಳಿಗೆ ಎಷ್ಟು ತೆರಿಗೆ ಇತ್ತು?
    ಇಲ್ಲಿಯವರೆಗೆ ಕನ್ನಡ ಸಿನಿಮಾಗಳಿಗೆ ಶೇ.100 ರಷ್ಟು ಮನರಂಜನಾ ತೆರಿಗೆ ಉಚಿತವಾಗಿದ್ದರೆ, ಕನ್ನಡೇತರ ಸಿನಿಮಾಗಳಿಗೆ ಶೇ.30 ತೆರಿಗೆ ವಿಧಿಸಲಾಗುತಿತ್ತು. ಪ್ರದರ್ಶನ ತೆರಿಗೆ ಕನ್ನಡ ಚಿತ್ರಗಳಿಗೆ 48 ರೂ. ಇದ್ದರೆ, ಕನ್ನಡೇತರ ಸಿನಿಮಾಗಳಿಗೆ 118 ರೂ. ಇತ್ತು. ಕನ್ನಡ ಮತ್ತು ಕನ್ನಡೇತರ ಸಿನಿಮಾಗಳಿಗೆ ಸೇವಾ ಶುಲ್ಕ 3 ರೂ. ಮತ್ತು ಪ್ರತಿ ಟಿಕೆಟ್ ಗೆ 1 ರೂ. ಹೆಚ್ಚುವರಿ ಶುಲ್ಕ ವಿಧಿಸಲಾಗುತಿತ್ತು.

    ಪರಿಹಾರ ಏನು?
    ದಶಕಗಳಿಂದ ಕನ್ನಡ ಚಿತ್ರಗಳಿಗೆ ಇದ್ದ ಮನರಂಜನಾ ತೆರಿಗೆ ವಿನಾಯಿತಿ ಉಳಿಸಿಕೊಳ್ಳಲು ಪರಿಹಾರವೂ ಇದೆ. ಈ ವಿನಾಯ್ತಿ ಮತ್ತೆ ಬೇಕಾದರೆ ಮೋದಿ ಸರ್ಕಾರದ ಜಿಎಸ್‍ಟಿ ಕೌನ್ಸಿಲ್‍ಗೆ ರಜ್ಯ ಸರ್ಕಾರ ಮೊರೆ ಹೋಗಬೇಕು. ಜಿಎಸ್‍ಟಿ ಕೌನ್ಸಿಲ್‍ಗೆ ತೆರಿಗೆ ಮರುಪರಿಶೀಲನೆ ಮಾಡುವ ಅಧಿಕಾರವಿದೆ. ರಾಜ್ಯ ಸರ್ಕಾರವೂ ಕೂಡ ತಮ್ಮ ತೆರಿಗೆ ಆದಾಯದಿಂದ ರೀಫಂಡ್ ಮಾಡುವ ಅವಕಾಶವಿದೆ.

    ಇದನ್ನೂ ಓದಿ: ಜಿಎಸ್‍ಟಿಯಲ್ಲಿ ದಿನಬಳಕೆಯ ವಸ್ತುಗಳಿಗೆ ಎಷ್ಟು ತೆರಿಗೆ? ಯಾವುದು ಅಗ್ಗ? ಯಾವುದು ದುಬಾರಿ?

  • ಪ್ಲಸ್ ಟು ಪರೀಕ್ಷೆಯಲ್ಲಿ 1200ಕ್ಕೆ 1180 ಅಂಕಗಳಿಸಿದ್ದ ವಿದ್ಯಾರ್ಥಿನಿ ಮಾಧ್ಯಮಗಳ ವರದಿಯಿಂದ ಮನನೊಂದು ಆತ್ಮಹತ್ಯೆ!

    ಪ್ಲಸ್ ಟು ಪರೀಕ್ಷೆಯಲ್ಲಿ 1200ಕ್ಕೆ 1180 ಅಂಕಗಳಿಸಿದ್ದ ವಿದ್ಯಾರ್ಥಿನಿ ಮಾಧ್ಯಮಗಳ ವರದಿಯಿಂದ ಮನನೊಂದು ಆತ್ಮಹತ್ಯೆ!

    ಕಣ್ಣೂರು: ಕೇರಳದ ಪ್ಲಸ್ ಟು ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕ ತೆಗೆದು ಪಾಸಾಗಿದ್ದ ವಿದ್ಯಾರ್ಥಿನಿ ಮಾಧ್ಯಮಗಳ ವರದಿಗೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಹೌದು. ಕಣ್ಣೂರು ಜಿಲ್ಲೆಯ ಮಾಲೂರಿನ ಶಿವಪುರಂ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ರಫ್ಸೀನಾ(17) ಪ್ಲಸ್ ಟು ತರಗತಿಯಲ್ಲಿ ಒಟ್ಟು 1200 ಅಂಕಗಳಿಗೆ ನಡೆದ ಪರೀಕ್ಷೆಯಲ್ಲಿ  1180 ಅಂಕಗಳಿಸಿ ಪಾಸಾಗಿದ್ದಳು. ಈಕೆಯ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿತ್ತು. ಅಭಿನಂದನೆಗಳ ಸ್ವೀಕರಿಸಿದ ಬಳಿಕ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಬುಧವಾರ ನೇಣಿಗೆ ಶರಣಾಗಿದ್ದಾಳೆ.

    ತನ್ನ ಮರಣ ಪತ್ರದಲ್ಲಿ ರಫ್ಸಿನಾ, ನನ್ನ ಜೀವನ ನನ್ನ ಆಯ್ಕೆ, ನನ್ನ ಜೀವನದಲ್ಲಿ ಬೇರೆಯವರು ಮಧ್ಯಪ್ರವೇಶಿಸುವುದು ನನಗೆ ಇಷ್ಟ ಇಲ್ಲ ಎಂದು ಬರೆದಿದ್ದಳು.

    ಮಾಧ್ಯಮಗಳ ವರದಿಯಿಂದ ಆತ್ಮಹತ್ಯೆ?
    ತೀವ್ರ ಬಡತನದಲ್ಲಿ ಓದಿ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾಳೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಒಂದು ಕೋಣೆಯ ಮನೆಯಲ್ಲಿ ವಾಸಿಸುತ್ತಿದ್ದ ರಫ್ಸೀನಾ ಬಡತನದ ವಿಷಯವನ್ನು ತನ್ನ ಸ್ನೇಹಿತರಲ್ಲೂ ಹೇಳಿರಲಿಲ್ಲ. ಮಾಧ್ಯಮಗಳು ತನ್ನ ಸಾಧನೆ ವಿಚಾರಕ್ಕಿಂತಲೂ ಬಡತನದ ವಿಚಾರವನ್ನೇ ಮುಂದಿಟ್ಟುಕೊಂಡು ಸುದ್ದಿಯನ್ನು ಪ್ರಕಟಿಸಿದ್ದಕ್ಕೆ ಬೇಸರಗೊಂಡಿದ್ದಳು.

    ಈಕೆಯ ಬಡತನವನ್ನು ನೋಡಿ ಹಲವು ಸಂಘ ಸಂಸ್ಥೆಗಳು ಶಿಕ್ಷಣಕ್ಕೆ ಸಹಕಾರವನ್ನು ನೀಡಲು ಮುಂದೆ ಬಂದಿತ್ತು. ಬುಧವಾರ ಶಿವಪುರಂ ಹೈಯರ್ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಆಕೆಯ ಮನೆಗೆ ಬಂದು ಅಭಿನಂದನೆ ಸಲ್ಲಿಸಿದ್ದರು. ಅಭಿನಂದನೆ ಸ್ವೀಕರಿಸಿದ ಬಳಿಕ ಆಕೆ ನೇಣಿಗೆ ಶರಣಾಗಿದ್ದಾಳೆ.

    ಮಾಧ್ಯಮಗಳು ಈಕೆಯ ಶಿಕ್ಷಣಕ್ಕೆ ಜನರು ಮುಂದೆ ಸಹಕಾರ ನೀಡಲಿ ಎನ್ನುವ ದೃಷ್ಟಿಯಿಂದ, ರಫ್ಸೀನಾಗೆ ಹಣಕಾಸಿನ ಸಹಾಯ ನೀಡಿದವರ ಫೋಟೋಗಳನ್ನು ಸಹ ಸುದ್ದಿಯಲ್ಲಿ ಪ್ರಸಾರ ಮಾಡಿತ್ತು. ಮಾಧ್ಯಮಗಳು ಈಕೆಯ ಸುದ್ದಿಯನ್ನು ಕವರ್ ಮಾಡಿದ ಬಗ್ಗೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಪರ, ವಿರೋಧ ಚರ್ಚೆ ಆರಂಭವಾಗಿದೆ.

  • ದಿನಕ್ಕೆ 17 ಗಂಟೆ ಪಾಠ ಮಾಡೋ ಮೇಷ್ಟ್ರು- 50 ವರ್ಷಗಳಿಂದ ಟ್ಯೂಷನ್ ಉಚಿತ

    ದಿನಕ್ಕೆ 17 ಗಂಟೆ ಪಾಠ ಮಾಡೋ ಮೇಷ್ಟ್ರು- 50 ವರ್ಷಗಳಿಂದ ಟ್ಯೂಷನ್ ಉಚಿತ

    ಬೆಂಗಳೂರು: ಇಂದಿನ ದಿನಗಳಲ್ಲಿ ಟ್ಯೂಷನ್ ಹೆಸರಿನಲ್ಲಿ ಟುಟೋರಿಯಲ್‍ಗಳು ಶಿಕ್ಷಣವನ್ನು ಒಂದು ಉದ್ಯಮ ಮಾಡಿಕೊಂಡಿವೆ. ವಿದ್ಯಾರ್ಥಿಗಳಿಂದ ಲಕ್ಷ ಲಕ್ಷ ಹಣವನ್ನು ಪೀಕ್ತಿವೆ. ಅದ್ರೆ ಇಲ್ಲೊಬ್ರು ಮೇಷ್ಟ್ರು ಮಾತ್ರ ಫ್ರೀಯಾಗಿಯೇ ತಮ್ಮ ಜ್ಞಾನವನ್ನು ಧಾರೆ ಎರೆಯುತ್ತಿದ್ದಾರೆ. ಇವರೇ ಇಂದಿನ ನಮ್ಮ ಪಬ್ಲಿಕ್ ಹಿರೋ.

    ಹೌದು. ಬೆಂಗಳೂರಿನ ಸಂಜಯ್ ನಗರದ ನಿವಾಸಿ 73 ವರ್ಷದ ರಾಜಶೇಖರಯ್ಯ ಮೇಷ್ಟ್ರು ಹೆಚ್‍ಎಎಲ್‍ನ ನಿವೃತ್ತ ನೌಕರರು. ಕಳೆದ 50 ವರ್ಷಗಳಿಂದ ಮನೆಯಲ್ಲಿ `ರಶ್ಮಿ’ ಹೆಸರಿನಲ್ಲಿ ಟುಟೋರಿಯಲ್ ನಡೆಸುತ್ತಿದ್ದು, ಪಿಯುಸಿ, ಬಿಕಾಂ, ಬಿಬಿಎಂ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಫ್ರೀಯಾಗಿ ಟ್ಯೂಷನ್ ಹೇಳಿಕೊಡ್ತಾ ಇದ್ದಾರೆ.

    ರಾಜಶೇಖರಯ್ಯ ಅವರು ವಿದ್ಯಾರ್ಥಿಯಾಗಿದ್ದಾಗ ಗುರುಗಳಾದ ಟಿ ಆರ್ ಶಾಮಣ್ಣನವರು, `ನಿನ್ನ ಜ್ಞಾನವನ್ನು ಜೀವನ ಪೂರ್ತಿ ವಿದ್ಯಾರ್ಥಿಗಳಿಗೆ ಧಾರೆ ಎರೆಯಬೇಕೆಂದು’ ಭಾಷೆ ಪಡೆದಿದ್ರಂತೆ. ಅಂದಿನಿಂದ ಇವತ್ತಿನವರೆಗೂ ಕೊಟ್ಟ ಭಾಷೆಯಂತೆ ನಡೆದುಕೊಳ್ಳುತ್ತಿದ್ದಾರೆ. ಈವರೆಗೆ ಸುಮಾರು 15 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಇವರ ಬಳಿ ಟ್ಯೂಷನ್ ಪಡೆದಿದ್ದು, ದೇಶ ವಿದೇಶಗಳಲ್ಲಿ ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಮಾಡ್ತಿದ್ದಾರೆ. ಬೆಳಗ್ಗೆ 5 ಗಂಟೆಗೆ ಟ್ಯೂಷನ್ ಶುರುಮಾಡಿದ್ರೆ ರಾತ್ರಿ 10 ಗಂಟೆವರೆಗೂ ಟ್ಯೂಷನ್ ಹೇಳಿಕೊಡ್ತಾರೆ.

    https://www.youtube.com/watch?v=LEN-VJ3XoPQ&spfreload=5

     

  • ನಾಲ್ಕನೇ ಕ್ಲಾಸ್‍ಗೆ ಶಾಲೆ ಬಿಟ್ರೂ ಓದು ನಿಲ್ಲಲಿಲ್ಲ – ಟಿವಿ ಬೆಳಕಲ್ಲೇ ಓದಿ ಸಾಧನೆಗೈದ ಛಲಗಾತಿ ನಮ್ಮ ಪಬ್ಲಿಕ್ ಹೀರೋ

    ನಾಲ್ಕನೇ ಕ್ಲಾಸ್‍ಗೆ ಶಾಲೆ ಬಿಟ್ರೂ ಓದು ನಿಲ್ಲಲಿಲ್ಲ – ಟಿವಿ ಬೆಳಕಲ್ಲೇ ಓದಿ ಸಾಧನೆಗೈದ ಛಲಗಾತಿ ನಮ್ಮ ಪಬ್ಲಿಕ್ ಹೀರೋ

    ಹಾಸನ: ಇವತ್ತಿನ ನಮ್ಮ ಪಬ್ಲಿಕ್ ಹೀರೋ ಶಾಲೆಗೆ ಹೋಗಿದ್ದು 4ನೇ ಕ್ಲಾಸ್ ವರೆಗೆ ಮಾತ್ರ. ಆ ಬಳಿಕ ಬಡತನದಿಂದಾಗಿ ಶಾಲೆ ಮೆಟ್ಟಿಲನ್ನೇ ಏರಲಿಲ್ಲ. ಮನೆಯಲ್ಲೇ ಕಷ್ಟಪಟ್ಟು ಓದಿ ಬಿಎಡ್ ಮಾಡಿ, ಈಗ ಮೊರಾರ್ಜಿ ಶಾಲೆಯಲ್ಲಿ ಟೀಚರ್ ಆಗಿದ್ದಾರೆ. ಇವರ ಒಂದೊಂದು ಹೆಜ್ಜೆಯೂ ಖಂಡಿತಾ ನಿಮಗೆಲ್ಲಾ ಸ್ಫೂರ್ತಿ ಆಗುತ್ತದೆ.

    ಮೂಲತಃ ಅರಸೀಕೆರೆ ತಾಲೂಕಿನ ಕಾಮೇನಹಳ್ಳಿ ಗ್ರಾಮದವರಾದ ವಿಜಯಕುಮಾರಿ ಡಿ.ಎಸ್ ನಮ್ಮ ಪಬ್ಲಿಕ್ ಹೀರೋ. ಕಾಳಿಬಾಯಿ ಶಂಕರ್‍ನಾಯ್ಕ್ ದಂಪತಿಯ ಮೂವರು ಹೆಣ್ಣುಮಕ್ಕಳಲ್ಲಿ ಇವರೇ ಕೊನೆಯವರು. ನಾಲ್ಕನೇ ಕ್ಲಾಸ್ ಬಳಿಕ ಶಾಲೆಗೆ ಹೋಗಲು ಆಗಲಿಲ್ಲ. ಮನೆಯಲ್ಲೇ ಅಪ್ಪ-ಅಮ್ಮನಿಗೆ ಕೃಷಿ ಕೆಲಸದಲ್ಲಿ ಸಹಾಯ ಮಾಡಿಕೊಂಡಿದ್ದರು. ಆದರೂ ಓದುವ ಆಸೆ ಬೆಟ್ಟದಷ್ಟಿತ್ತು. ಮನೆಯಲ್ಲೇ ಯಾರಿಗೂ ಗೊತ್ತಾಗದಂತೆ ಸಹೋದರಿಯ ಪುಸ್ತಕಗಳನ್ನು ಓದುತ್ತಿದ್ದರು.

    ಒಮ್ಮೆ ಹಕ್ಕಿಪಿಕ್ಕಿ ಜನಾಂಗದ ಯುವತಿ ಮನೆಯಲ್ಲಿಯೇ ಓದಿಕೊಂಡು ಪಿಹೆಚ್‍ಡಿ ಪದವಿ ಪಡೆದ ವಿಚಾರ ಇವರ ಮನಸ್ಸಿನ ಮೇಲೆ ಪರಿಣಾಮ ಬೀರಿತು. ಆಮೇಲೆ 10 ವರ್ಷಗಳ ನಂತರ 2005ರಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಕಟ್ಟಿ ಮೊದಲ ಪ್ರಯತ್ನದಲ್ಲೇ ಪಾಸ್ ಮಾಡಿದ್ರು. ನಂತರ ಕಾಲೇಜಿಗೆ ಹೋಗೋಣ ಅಂದರೆ ಅಕ್ಕನ ಬಾಣಂತನದಿಂದ ಹೋಗಲು ಆಗಲಿಲ್ಲ. ದೊಡ್ಡಪ್ಪನ ಮನೆಯಲ್ಲಿ ಎಲ್ಲರೂ ಟಿವಿ ನೋಡಲು ಲೈಟ್ ಆಫ್ ಮಾಡಿದ್ರೆ ವಿಜಯಕುಮಾರಿ ಮಾತ್ರ ಆ ಟಿವಿ ಬೆಳಕಲ್ಲೇ ಓದಿದ್ದಾರೆ.

    ಛಲ ಬಿಡದೇ ಮನೆಯಲ್ಲೇ ಓದಿ ಮತ್ತೆ ಪಿಯುಸಿ ಪಾಸ್ ಮಾಡಿದ್ರು. ಆಮೇಲೆ ಹಿಂದಿ ಬಿಎಡ್‍ನಲ್ಲಿ ಫಸ್ಟ್ ಕ್ಲಾಸ್‍ನಲ್ಲಿ ಪಾಸ್ ಆದ್ರು. ಇವರ ಯಶೋಗಾಥೆ ನಿಲ್ಲೋದಿಲ್ಲ ನಂತರ ನಡೆದ ಸಿಇಟಿಯಲ್ಲಿ ರಾಜ್ಯಕ್ಕೆ ನಂಬರ್ ಒನ್ ಸ್ಥಾನ ಪಡೆದು ಈಗ ಚನ್ನರಾಯಪಟ್ಟಣದ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಹಿಂದಿ ಶಿಕ್ಷಕಿಯಾಗಿದ್ದಾರೆ. ಇವರ ಈ ಸಾಧನೆ ಹಿಂದೆ ಗಂಡನ ಶ್ರಮ ದೊಡ್ಡದಿದೆ.

    ಹಿಂದಿ ಶಿಕ್ಷಕಿಯಾಗಿರೋ ಇವರು ಶಾಲಾಮಕ್ಕಳಿಗೂ ಅಚ್ಚುಮೆಚ್ಚು. ಕಂಪ್ಯೂಟರ್ ಕಲಿತಿದ್ದಾರೆ. ಡಿಟಪಿ ಮಾಡ್ತಾರೆ. ಸಿಇಟಿ ಪರೀಕ್ಷೆ ತೆಗೆದುಕೊಂಡವರಿಗೆ ಕೋಚಿಂಗ್ ಕೊಡ್ತಾರೆ. ತಾವು ಹೋದಲೆಲ್ಲಾ ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಕೇಳಿಕೊಳ್ಳುತ್ತಾರೆ. ಶಾಲೆ ಬಿಟ್ಟು 12 ವರ್ಷಗಳ ನಂತರವೂ ತನ್ನ ಗುರಿ ಸಾಧಿಸಿದ ಇವರು ನಿಜಕ್ಕೂ ನಮ್ಮ ಪಬ್ಲಿಕ್ ಹೀರೋ ಅನ್ನೋದಕ್ಕೆ ಹೆಮ್ಮೆ ಆಗುತ್ತೆ. ಶಾಲೆ ಬಿಟ್ಟ ಹೆಣ್ಣು ಮಕ್ಕಳು ಈ ಹೀರೋ ನೋಡಿ ಒಂದಿಷ್ಟು ಸಾಧನೆ ಮಾಡಿದರೆ ಅದಕ್ಕಿಂತ ಹೆಮ್ಮೆ ಮತ್ತೊಂದಿಲ್ಲ.

    https://youtu.be/sQJ7Xz4BJeA

  • ಪಿಯು ಫಲಿತಾಂಶ: ಮೂರು ವಿಭಾಗದ ಟಾಪ್ 10 ಟಾಪರ್ ಲಿಸ್ಟ್ ಇಲ್ಲಿದೆ

    ಪಿಯು ಫಲಿತಾಂಶ: ಮೂರು ವಿಭಾಗದ ಟಾಪ್ 10 ಟಾಪರ್ ಲಿಸ್ಟ್ ಇಲ್ಲಿದೆ

    ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ ಕಳೆದ ವರ್ಷಕ್ಕಿಂತ ಈ ಬಾರಿ ಶೇ.4.82 ಫಲಿತಾಂಶ ಇಳಿಕೆಯಾಗಿದ್ದು, ಈ ವರ್ಷ 52.38 ಫಲಿತಾಂಶ ದಾಖಲಾಗಿದೆ. 6,84,490 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 3,55,697 ಮಂದಿ ಉತ್ತೀರ್ಣರಾಗಿದ್ದಾರೆ.

    ಕಲಾ ವಿಭಾಗದಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಬಳ್ಳಾರಿಯ ಕೊಟ್ಟೂರು ಹಿಂದೂ ಕಾಲೇಜು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಚೈತ್ರಾ ಬಿ. 589 ಅಂಕಗಳಿಸಿ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.

    ಕಾಮರ್ಸ್ ವಿಭಾಗದಲ್ಲಿ ಇಬ್ಬರು ಟಾಪರ್ ಆಗಿದ್ದು, ಬೆಂಗಳೂರಿನ ವಿಜಯನಗರದ ಆರ್‍ಎನ್‍ಎಸ್ ಕಾಲೇಜಿನ ಶ್ರೀನಿಧಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಳಿಕೆಯ ಸತ್ಯಸಾಯಿ ಕಾಲೇಜಿನ ಸಾಯಿ ಸಮರ್ಥ್ 595 ಅಂಕಗಳಿಸಿದ್ದಾರೆ.

    ವಿಜ್ಞಾನ ವಿಭಾಗದಲ್ಲಿ  ಇಬ್ಬರು ಟಾಪರ್ ಆಗಿದ್ದು, ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ಸೃಜನಾ ಎನ್ ಮತ್ತು ಕುಂದಾಪುರದ ಎಸ್‍ವಿ ಕಾಲೇಜಿನ ರಾಧಿಕಾ ಪೈ 596 ಅಂಕಗಳಿಸಿದ್ದಾರೆ.

    ಹೀಗಾಗಿ ಇಲ್ಲಿ ಮೂರು ವಿಭಾಗದಲ್ಲಿನ ಟಾಪ್ 10 ಟಾಪರ್‍  ಪಟ್ಟಿಯನ್ನು ನೀಡಲಾಗಿದೆ.

    ಕಲಾ ವಿಭಾಗ

    ವಾಣಿಜ್ಯ ವಿಭಾಗ

    ವಿಜ್ಞಾನ ವಿಭಾಗ

    ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ?

     

     

  • ಪಿಯು ಫಲಿತಾಂಶ: ಉಡುಪಿ ಫಸ್ಟ್, ದಕ್ಷಿಣಕನ್ನಡ ಸೆಕೆಂಡ್, ಬೀದರ್ ಲಾಸ್ಟ್

    ಪಿಯು ಫಲಿತಾಂಶ: ಉಡುಪಿ ಫಸ್ಟ್, ದಕ್ಷಿಣಕನ್ನಡ ಸೆಕೆಂಡ್, ಬೀದರ್ ಲಾಸ್ಟ್

    ಬೆಂಗಳೂರು: 2016- 17 ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಎಂದಿನಂತೆ ಬಾಲಕಿಯರು ಮೇಲುಗೈ ಸಾಧಿಸಿದ್ದು, ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ, ಉತ್ತರ ಕನ್ನಡ ತೃತೀಯ ಸ್ಥಾನವನ್ನು ಪಡೆದರೆ, ಬೀದರ್ ಕೊನೆಯ ಸ್ಥಾನವನ್ನು ಪಡೆದಿದೆ.

    ಮಲ್ಲೇಶ್ವರಂನಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶವನ್ನು ಪ್ರಕಟಿಸಿದರು.

    ಕಳೆದ ವರ್ಷಕ್ಕಿಂತ ಈ ಬಾರಿ ಶೇ.4.82 ಫಲಿತಾಂಶ ಇಳಿಕೆಯಾಗಿದ್ದು, ಈ ಬಾರಿ ಈ ವರ್ಷ 52.38 ಫಲಿತಾಂಶ ದಾಖಲಾಗಿದೆ. 6,84,490 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 3,55,697 ಮಂದಿ ಉತ್ತೀರ್ಣರಾಗಿದ್ದಾರೆ.

    2,01,273 ವಿದ್ಯಾರ್ಥಿನಿಯರು ಪಾಸಾಗುವ ಮೂಲಕ ಶೇ.60.28 ಫಲಿತಾಂಶ ದಾಖಲಾಗಿದ್ದರೆ, 1,54,424 ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.44.74 ಫಲಿತಾಂಶ ದಾಖಲಾಗಿದೆ. 45,983 ಡಿಸ್ಟಿಂಕ್ಷನ್, 1,92,012 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

    ವಿಜ್ಞಾನ ವಿಭಾಗದಲ್ಲಿ ಒಟ್ಟು 1,32,262 ಮಂದಿ ಪಾಸಾಗಿದ್ದರೆ, ವಾಣಿಜ್ಯ ವಿಭಾಗದಲ್ಲಿ 1,48,269 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಕಲಾ ವಿಭಾಗ 75,166 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಒಟ್ಟು 132 ಕಾಲೇಜುಗಳು ಶೂನ್ಯ ಫಲಿತಾಂಶ ಪಡೆದಿದ್ದು, ಇದರಲ್ಲಿ  127 ಖಾಸಗಿ ಕಾಲೇಜುಗಳು ಸೇರಿವೆ.

    ಉತ್ತರ ಪತ್ರಿಕೆ ಸ್ವೀಕರಿಸಲು(ಸ್ಕ್ಯಾನಿಂಗ್ ಪ್ರತಿಗೆ) ಅರ್ಜಿ ಸಲ್ಲಿಸಲು ಮೇ 19 ಕೊನೆ ದಿನಾಂಕವಾಗಿದ್ದು, ಸ್ಕ್ಯಾನಿಂಗ್ ಪ್ರತಿ ಪಡೆಯಲು 400 ರೂಪಾಯಿ ಶುಲ್ಕ ನಿಗದಿ ಪಡಿಸಲಾಗಿದೆ. ಮರು ಮೌಲ್ಯಮಾಪನ ಅರ್ಜಿ ಸಲ್ಲಿಸಲು ಮೇ 24 ಕೊನೆ ದಿನಾಂಕವಾಗಿದ್ದು, ಮರು ಮೌಲ್ಯ ಮಾಪನಕ್ಕೆ 1 ಪತ್ರಿಕೆಗೆ ಶುಲ್ಕ-1260 ರೂಪಾಯಿ ನಿಗದಿಪಡಿಸಲಾಗಿದೆ.

    ಮರು ಏಣಿಕೆಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮೇ 24 ಆಗಿದ್ದು, ಪೂರಕ ಪರೀಕ್ಷೆ ಜೂನ್ 28ರಿಂದ ಜುಲೈ 8ರವರೆಗೆ ನಡೆಯಲಿದೆ. ಸಪ್ಲಿಮೆಂಟರಿ ಪರೀಕ್ಷೆಗೆ ಶುಲ್ಕ ಕಟ್ಟಲು ಜೂನ್ 23 ಕೊನೆ ದಿನಾಂಕವಾಗಿದೆ.

     

  • ಹಳ್ಳಿ ಹೈದನಿಗೆ ಓಲಿದ ಬಂತು ರಾಷ್ಟ್ರ ಮಟ್ಟದ ಪ್ರಶಸ್ತಿ- ಬಾಲಕನಿಗೆ ಈಗ ಭವಿಷ್ಯದ್ದೇ ಚಿಂತೆ!

    ಹಳ್ಳಿ ಹೈದನಿಗೆ ಓಲಿದ ಬಂತು ರಾಷ್ಟ್ರ ಮಟ್ಟದ ಪ್ರಶಸ್ತಿ- ಬಾಲಕನಿಗೆ ಈಗ ಭವಿಷ್ಯದ್ದೇ ಚಿಂತೆ!

    ಚಿಕ್ಕಬಳ್ಳಾಪುರ: ಬಡ ಕುಟುಂಬದಲ್ಲಿ ಜನಿಸಿದ ಬಾಲಕ. ನಟನೆ ಆನ್ನೋದು ಆತನ ಗೊತ್ತಿರಲಿಲ್ಲ. ಆದ್ರೆ ಆಕಸ್ಮಿಕವಾಗಿ ಸಿಕ್ಕ ಅವಕಾಶದಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಅತ್ಯುನ್ನತ ಬಾಲ ನಟ ಪ್ರಶಸ್ತಿ ಪಡದುಕೊಂಡ ಕನ್ನಡನಾಡಿನ ಹೆಮ್ಮೆಯ ಪ್ರತಿಭೆ. ಪ್ರಶಸ್ತಿ ಏನೋ ಬಂತು ಆದ್ರೆ ಮುಂದೇನು ಅನ್ನೋ ಭವಿಷ್ಯದ ಚಿಂತೆ ಎಂದು ಬಾಲಕನನ್ನು ಕಾಡುತ್ತಿದೆ.

    ರೈಲ್ವೇ ಚಿಲ್ಡ್ರನ್ ಅನ್ನೋ ಒಂದು ಸಾಮಾಜಿಕ ಕಳಿಕಳಿಯ ಚಿತ್ರದಲ್ಲಿ ಮನೋಜ್ಞವಾಗಿ ಅಭಿನಯಸಿ ಅತ್ಯುತ್ತಮ ರಾಷ್ಟ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದುಕೊಂಡ ಬಾಲಕನ ಹೆಸರು ಕೆ.ಮನೋಹರ್. ಮನೋಹರ್ ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಡಲಬಂಡೆ ಗ್ರಾಮದ ನಿವಾಸಿ. ಕೃಷ್ಣಪ್ಪ-ಗಾಯಿತ್ರಮ್ಮ ದಂಪತಿಯ ಪುತ್ರ. ಬದುಕಿನ ಬಂಡಿಗೆ ಕೂಲಿ ಅರಸಿ ಬೆಂಗಳೂರಿನ ಮಹಾನಗರಕ್ಕೆ ಬಂದವರು. ಈ ವೇಳೆ ಜಕ್ಕೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ 8 ನೇ ತರಗತಿ ಓದುತ್ತಿದ್ದ ಮನೋಹರ್‍ಗೆ ‘ರೈಲ್ವೇ ಚಿಲ್ಡ್ರನ್’ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿತು.

    ಕಾರಣಾಂತರಗಳಿಂದ ಮನೆ ಬಿಟ್ಟು ಹೋಗೋ ಬಹುತೇಕ ಬಾಲಕರು ರೈಲ್ವೇ ಸ್ಟೇಷನ್ ಸೇರಿ ಮಾದಕ ವಸ್ತುಗಳ ಚಟಕ್ಕೆ ದಾಸಾರಾಗಿ ಬದಕು ಹಾಳೋ ಮಾಡಿಕೊಳ್ಳೋ ಹುಡುಗರ ಬದುಕಿನ ಕಥೆ ಅನಾವಾರಣ ಮಾಡಿದ ಸಿನಿಮಾ ಕಥೆ. ಹೀಗಾಗಿ ಮನೆ ಬಿಟ್ಟು ಬರುವ ಬಾಲಕರ ಮನಃ ಪರಿವರ್ತನೆಗೆ ಅಂತಲೇ ಸಾಮಾಜಿಕ ಕಳಕಳಿಯಿಂದ ನಿರ್ಮಾಣ ಮಾಡಲಾದ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ನಟನೆ ಮನೋಹರ್ ಮಾಡಿದ್ದನು.

    ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡದುಕೊಂಡಿರೋ ಮನೋಹರ್ ಸದ್ಯ ದೊಡ್ಡಬಳ್ಳಾಪುರದ ಸರ್ಕಾರಿ ವಿದ್ಯಾರ್ಥಿನಿಲಯದಲ್ಲಿದ್ದು, ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ 10 ನೇ ತರಗತಿ ವ್ಯಾಸಂಗ ಮಾಡಲಿದ್ದಾನೆ. ತೋಡಲಬಂಡೆ ಪುಟ್ಟ ಮನೆಯಲ್ಲಿ ವಾಸವಾಗಿರೋ ಕೃಷ್ಣಪ್ಪ ಗಾಯತ್ರಮ್ಮ ದಂಪತಿಗೆ ಮಗನ ಭವಿಷ್ಯದ್ದೇ ಚಿಂತೆ. ಮಗನ ಭವಿಷ್ಯ ಹಾಗೂ ಬದುಕಿನ ಬಂಡಿಗೆ ಊರೂರು ಅಲೆದು ಕೂಲಿ ಕೆಲಸ ಮಾಡುತ್ತಿದ್ದಾರೆ. ಮಗನಿಗೆ ಪ್ರಶಸ್ತಿಗಳು ಓಲಿದು ಬಂದಿದೆ ಆಂದ್ರೂ ಆ ಪ್ರಶಸ್ತಿಗಳ ಮೌಲ್ಯ, ಬೆಲೆ ಅರಿಯಲಾಗದಷ್ಟು ಅಮಾಯಕತನ ಈ ದಂಪತಿಯದು.

    ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಭಾಜನನಾಗಿರೋ ಮನೋಹರ್ ಗೂ ಮುಂದೆ ತಾನು ಏನು? ಹೇಗೆ? ತನ್ನ ಭವಿಷ್ಯ ರೂಪಿಸಿಕೊಳ್ಳಬೇಕೆಂಬ ಪ್ರಶ್ನೆ ಕಾಡ್ತಿದೆ. ಹೀಗಾಗಿ ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಅದ್ಬುತ ನಟನೆಯಿಂದ ಅತ್ಯುನ್ನುತ ಪ್ರಶಸ್ತಿ ಗಳಿಸಿಕೊಂಡಿರೋ ಬಾಲಕನ ಭವಿಷ್ಯಕ್ಕೆ ಸಹೃದಯ ಕನ್ನಡಿಗರು ಸಹಾಯ ಮಾಡಬೇಕಿದೆ. ಮನೋಹರ್ ಶೈಕ್ಷಣಿಕ ವಿದ್ಯಾಭ್ಯಾಸದ ಜೊತೆ ಜೊತೆಗೆ ಕಲೆ, ನಟನೆ, ಅಭಿನಯದ ಸಿನಿಮಾ ರಂಗದ ಶಿಕ್ಷಣ ಕೂಡ ದೊರಕುವಂತಹ ಕೆಲಸ ಆಗಬೇಕಿದೆ.

    ಇಂದು ಮನೋಹರ್ ರಾಷ್ಟ್ರ ಮಟ್ಟದ ಅತ್ಯುತ್ತಮ ಬಾಲ ನಟ ಪ್ರಶಸ್ತಿ ಪಡೆದು ಕರುನಾಡ ಕೀರ್ತಿ ಪತಾಕೆಯನ್ನ ಹಾರಿಸಿದ್ದಾನೆ. ಆದ್ರೆ ಬಡತನದಿಂದ ಮನೋಹರ್ ಪ್ರತಿಭೆ ಬಾಡಿ ಹೋಗದಿರಲಿ. ಸಹೃದಯಿ ದಾನಿಗಳು, ಮನೋಹರ್ ಸಹಾಯಕ್ಕೆ ಸಾಥ್ ಕೊಟ್ಟು ಅವನ ಭವಿಷ್ಯ ಉಜ್ವಲವಾಗುವಂತೆ ಮಾಡಲಿ ಎಂಬುದೇ ನಮ್ಮ ಆಶಯ.

    https://www.youtube.com/watch?v=7HIYFNqTRMI

     

  • ಕ್ಯಾಂಪಸ್ ಸೆಲೆಕ್ಷನ್ ನಲ್ಲಿ ಜಾಬ್ ಸಿಗದ್ದಕ್ಕೆ ಬೆಂಗಳೂರಿನ ಪ್ರತಿಭಾವಂತ ವಿದ್ಯಾರ್ಥಿ ಆತ್ಮಹತ್ಯೆ

    ಕ್ಯಾಂಪಸ್ ಸೆಲೆಕ್ಷನ್ ನಲ್ಲಿ ಜಾಬ್ ಸಿಗದ್ದಕ್ಕೆ ಬೆಂಗಳೂರಿನ ಪ್ರತಿಭಾವಂತ ವಿದ್ಯಾರ್ಥಿ ಆತ್ಮಹತ್ಯೆ

    ಬೆಂಗಳೂರು: ಕ್ಯಾಂಪಸ್ ಸೆಲೆಕ್ಷನ್ ನಲ್ಲಿ ಕೆಲಸ ಸಿಗದ್ದಕ್ಕೆ ಮನನೊಂದು ಎಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣಾಗಿರುವ ಘಟನೆ ಬನಶಂಕರಿ 3 ನೇ ಹಂತದ ದ್ವಾರಕಾನಗರದಲ್ಲಿ ನಡೆದಿದೆ.

    ಪಿಇಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದ ಅರ್ಪಿತ್(21) ನೇಣಿಗೆ ಶರಣಾದ ವಿದ್ಯಾರ್ಥಿ. ಮಂಗಳವಾರ ಸಂಜೆ ಮನೆಯಲ್ಲಿ ಯಾರು ಇಲ್ಲದಿದ್ದಾಗ ನೇಣಿಗೆ ಶರಣಾಗಿದ್ದಾನೆ.

    ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಅರ್ಪಿತ್ ಎಂಜಿನಿಯರಿಂಗ್ ನಲ್ಲಿ ಚಿನ್ನದ ಪದಕ ಪಡೆದ ಹಿನ್ನೆಲೆಯಲ್ಲಿ ಕಾಲೇಜಿನ ಆಡಳಿತ ಮಂಡಳಿ ಅಮೆರಿಕಕ್ಕೆ ಪ್ರಾಜೆಕ್ಟ್ ಮಾಡಲು ಕಳುಹಿಸಿಕೊಟ್ಟಿತ್ತು.

    ಸ್ನೇಹಿತರಿಗೆ ಕಂಪೆನಿಗಳಲ್ಲಿ ಕೆಲಸ ಸಿಕ್ಕಿದ್ದರೂ ತನಗೆ ಕೆಲಸ ಸಿಗದ ಹಿನ್ನೆಲೆಯಲ್ಲಿ ಬೇಸರದಲ್ಲಿದ್ದ ಅರ್ಪಿತ್ ಈಗ ನೇಣಿಗೆ ಶರಣಾಗಿದ್ದು, ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮೈಸೂರು ವಿವಿ ಪ್ರಾಧ್ಯಾಪಕನಿಂದಲೇ ಅಶ್ಲೀಲ ವೆಬ್‍ಸೈಟಿಗೆ ವಿದ್ಯಾರ್ಥಿನಿಯರ ಫೋಟೋ ಅಪ್ಲೋಡ್?

    ಮೈಸೂರು ವಿವಿ ಪ್ರಾಧ್ಯಾಪಕನಿಂದಲೇ ಅಶ್ಲೀಲ ವೆಬ್‍ಸೈಟಿಗೆ ವಿದ್ಯಾರ್ಥಿನಿಯರ ಫೋಟೋ ಅಪ್ಲೋಡ್?

    ಮೈಸೂರು: ಮಾನಸ ಗಂಗೋತ್ರಿಯ  ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯರ ಭಾವಚಿತ್ರಗಳನ್ನು ಅಶ್ಲೀಲ ವೆಬ್‍ಸೈಟ್‍ಗೆ ಹಾಕಿದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈಗ ವಿಶ್ವವಿದ್ಯಾಲಯದ ಪ್ರಾಧ್ಯಾಪಕನ ವಿರುದ್ಧವೇ ವಿದ್ಯಾರ್ಥಿನಿಯರು ಅನುಮಾನ ವ್ಯಕ್ತಪಡಿಸಿ ಕುಲಸಚಿವರಿಗೆ ಪತ್ರ ಬರೆದು ದೂರು ನೀಡಿದ್ದಾರೆ.

    ವಿವಿಯ ಪರಿಸರ ವಿಜ್ಞಾನ ವಿಭಾಗದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯರು ತಮ್ಮದೇ ವಿಭಾಗದ ಪ್ರಾಧ್ಯಾಪಕ ಎ.ಜಿ.ದೇವಿಪ್ರಸಾದ್ ವಿರುದ್ಧ ಅನುಮಾನ ವ್ಯಕ್ತಪಡಿಸಿ ವಿಭಾಗದ ಮುಖ್ಯಸ್ಥರಿಗೆ ಮತ್ತು ವಿವಿ ಕುಲಸಚಿವರಿಗೆ ಪತ್ರ ಬರೆದಿದ್ದಾರೆ.

    ದೂರಿನಲ್ಲಿ ಏನಿದೆ?
    ಪ್ರಾಧ್ಯಾಪಕ ಎ.ಜಿ.ದೇವಿಪ್ರಸಾದ್ ನಮ್ಮ ಜತೆ ಅನುಚಿತವಾಗಿ ವರ್ತಿಸುತ್ತಿದ್ದರು. ನಿಮ್ಮನ್ನು ಚಾರಿತ್ರ್ಯಹೀನರು ಎಂಬುದನ್ನು ನಾನು ಸಾಬೀತು ಮಾಡುವೆ. ಇದಕ್ಕಾಗಿ ನಾನು ಯಾವುದೇ ಮಟ್ಟ ತಲುಪಲು ಸಿದ್ಧ ಎಂದು ತರಗತಿಯಲ್ಲೇ ನಮಗೆ ಬೆದರಿಕೆ ಹಾಕಿದ್ದರು. ತರಗತಿಯಲ್ಲಿ ನಡೆದ ಆಂತರಿಕ ಪರೀಕ್ಷೆಯಲ್ಲಿ ನಮಗೆ ಅತೀ ಕಡಿಮೆ ಅಂಕಗಳನ್ನು ನೀಡಿ ಸೇಡು ತೀರಿಸಿಕೊಂಡಿದ್ದರು. ತರಗತಿಯಲ್ಲಿ ಲೈಂಗಿಕ ಹಾಸ್ಯಗಳನ್ನು ಮಾಡುತ್ತಿದ್ದರು. ಈ ಹಾಸ್ಯಗಳಿಂದ ನಾವು ಮುಜುಗರಕ್ಕೆ ಒಳಗಾಗಿದ್ದೇವು. ಅಷ್ಟೇ ಅಲ್ಲದೇ ಅವರು ತನ್ನ ಜೊತೆ ಪ್ರಾಜೆಕ್ಟ್ ಮಾಡುವಂತೆ ನಮ್ಮನ್ನು ಬಲವಂತ ಮಾಡುತ್ತಿದ್ದರು. ಈ ಪ್ರಾಜೆಕ್ಟ್ ಗೆ ನಾವು ಒಪ್ಪದಿದ್ದಕ್ಕೆ ನಮ್ಮ ಮೇಲೆ ಈ ರೀತಿಯ ಸೇಡನ್ನು ತೀರಿಸಿಕೊಂಡಿದ್ದಾರೆ ಎಂದು ಸವಿಸ್ತಾರವಾಗಿ ವಿದ್ಯಾರ್ಥಿನಿಯರು ಪತ್ರದಲ್ಲಿ ದೇವಿಪ್ರಸಾದ್ ವರ್ತನೆಯನ್ನು ಉಲ್ಲೇಖಿಸಿದ್ದಾರೆ.

    ಏನಿದು ಪ್ರಕರಣ?
    ಲೋಕ್ಯಾಟೋ ಎಂಬ ವೇಶ್ಯಾವಾಟಿಕೆಯ ವೆಬ್‍ಸೈಟ್ ನಲ್ಲಿ ಮೈಸೂರು ವಿಶ್ವವಿದ್ಯಾಲಯದ ವಿಜ್ಞಾನ ವಿಭಾಗದ 10 ವಿದ್ಯಾರ್ಥಿನಿಯರ ಫೋಟೋ ಮತ್ತು ಮೊಬೈಲ್ ನಂಬರ್ ಅಪ್ಲೋಡ್ ಮಾಡಲಾಗಿತ್ತು. ಇದರಿಂದಾಗಿ ಈ ವೆಬ್‍ಸೈಟ್ ನೋಡುವ ಕಾಮುಕರು ಈ ನಂಬರ್ ಗಳಿಗೆ ಕರೆ ಮಾಡಿ ಕೆಟ್ಟದಾಗಿ ಮಾತಾಡುತ್ತಿದ್ದರು. ನಮ್ಮ ನಂಬರ್ ಬೇರೆಯವರಿಗೆ ಹೇಗೆ ಸಿಕ್ಕಿತು? ಅದರಲ್ಲೂ ಈ ರೀತಿ ಯಾಕೆ ಕೆಟ್ಟದಾಗಿ ಮಾತಾಡುತ್ತಿದ್ದಾರೆ ಅಂತಾ ವಿದ್ಯಾರ್ಥಿನಿಯರು ಪರಿಶೀಲಿಸಿದಾಗ ಅವರ ಫೋಟೋ ಮತ್ತು ನಂಬರ್ ಅನ್‍ಲೈನ್ ವೇಶ್ಯಾವಾಟಿಕೆಯ ವೆಬ್‍ಸೈಟ್‍ನಲ್ಲಿ ಇರುವುದು ಗಮನಕ್ಕೆ ಬಂದಿತ್ತು. ತಕ್ಷಣ ಈ ವಿಚಾರವನ್ನು ವಿಭಾಗದ ಮುಖ್ಯಸ್ಥರ ಗಮನಕ್ಕೆ ತಂದು ನಂತರ ವಿವಿಯ ಕುಲಸಚಿವರ ಗಮನಕ್ಕೆ ತರಲಾಗಿತ್ತು. ಅವರ ಅನುಮತಿಯಂತೆ ಮೈಸೂರಿನ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

    ಈ ಸುದ್ದಿ ಬೆಳಕಿಗೆ ಬಂದಾಗ ವಿವಿಯ ಒಳಗಡೆ ಇರುವ ವಿದ್ಯಾರ್ಥಿನಿಯರಿಗೆ ಪರಿಚಯ ಇರುವ ವ್ಯಕ್ತಿಗಳೇ ಈ ಕೃತ್ಯ ಎಸಗಿದ್ದಾರೆ ಎನ್ನುವ ಶಂಕೆ ಮೂಡಿತ್ತು. ಈ ಶಂಕೆಗೆ ಪೂರಕ ಎಂಬಂತೆ ವಿದ್ಯಾರ್ಥಿನಿಯರು ಈಗ ಪ್ರಾಧ್ಯಾಪಕನ ವಿರುದ್ಧ ದೂರು ನೀಡಿದ್ದು ತನಿಖೆಯಿಂದ ನಿಜಾಂಶ ಪ್ರಕಟವಾಗಲಿದೆ.

  • ಭಿಕ್ಷಾಟನೆ ಮಾಡಿ ಮಕ್ಕಳನ್ನ ಸಾಕ್ತಿರೋ ತಂದೆ, ಸ್ಲಮ್‍ನಲ್ಲಿದ್ರೂ ಕೆಎಎಸ್ ಮಾಡ್ಬೇಕೆಂಬ ಬಿಕಾಂ ವಿದ್ಯಾರ್ಥಿಗೆ ಬೇಕಿದೆ ಸಹಾಯ

    ಭಿಕ್ಷಾಟನೆ ಮಾಡಿ ಮಕ್ಕಳನ್ನ ಸಾಕ್ತಿರೋ ತಂದೆ, ಸ್ಲಮ್‍ನಲ್ಲಿದ್ರೂ ಕೆಎಎಸ್ ಮಾಡ್ಬೇಕೆಂಬ ಬಿಕಾಂ ವಿದ್ಯಾರ್ಥಿಗೆ ಬೇಕಿದೆ ಸಹಾಯ

    ಬೆಳಗಾವಿ: ಜಿಲ್ಲೆಯ ಸ್ಲಂವೊಂದರ ಯುವಕ ಕೆಎಎಸ್ ಅಧಿಕಾರಿ ಆಗಬೇಕೆಂಬ ಗುರಿ ಹೊಂದಿದ್ದಾರೆ. ಆದರೂ ಕಿತ್ತು ತಿನ್ನುವ ಬಡತನ ವಿದ್ಯಾಭ್ಯಾಸಕ್ಕೆ ಅಡ್ಡಗಾಲು ಹಾಕುತ್ತಿದೆ.

    ಬಿಕಾಂ ವಿದ್ಯಾರ್ಥಿಯಾದ ಗಣೇಶ್ ವಿಭೂತಿ ಬೆಳಗಾವಿ ಮಹಾನಗರದ ಕಣಬರ್ಗಿ ಸ್ಲಂನಲ್ಲಿ ಹರಿದು ಹೋದ ಗುಡಿಸಲಿನಲ್ಲಿ ವಾಸವಿದ್ದಾರೆ. ಇವರ ತಂದೆ ಮನೆ ಮನೆಗೆ ತೆರಳಿ ಹಾಡು ಹೇಳಿ ಭಿಕ್ಷೆ ಬೇಡಿ ಬಂದ ಹಣದಿಂದ 5 ಮಕ್ಕಳನ್ನು ಸಾಕುತ್ತಿದ್ದಾರೆ. ತಾಯಿ ಬೇರೆಯವರ ಮನೆಗೆಲಸ, ಪಾತ್ರೆ ತೊಳೆಯುವ ಕೆಲಸ ಮಾಡುವುದರ ಜೊತೆಗೆ ಪೊರಕೆ ಮಾರಲು ಹೋಗುತ್ತಾರೆ. ಕಿತ್ತು ತಿನ್ನುವ ಬಡತನ, ಓದಲು ಆಸಕ್ತಿಯಿದ್ದರೂ ಹಣದ ಕೊರತೆ ಗಣೇಶ್‍ರನ್ನು ಕಾಡುತ್ತಿದೆ. ಆದರೂ ಛಲ ಬಿಡದ ತ್ರಿವಿಕ್ರಮನಂತೆ ಅವರಿವರ ಸಹಾಯ ಪಡೆದು ಬಿಕಾಂ ಓದುತ್ತಿದ್ದಾರೆ.

    ಐದು ಮಕ್ಕಳಿಗೂ ಊಟ ಕೊಡಿಸುವುದೇ ದೊಡ್ಡ ಸವಾಲಾಗಿರುವಾಗ ನಿನಗೆ ಓದಲು ಹಣ ಎಲ್ಲಿಂದ ತರಲಿ ಎಂದು ಪಾಲಕರು ಅಸಹಾಯಕರಾಗಿದ್ದಾರೆ. ಆದರೆ ನಾನು ಕಷ್ಟಪಟ್ಟು ಓದಿ ಮುಂದೆ ಬರಬೇಕು ಎಂದು ಗಣೇಶ್ ತನ್ನ ಕೆಎಎಸ್ ಗುರಿ ಬಗ್ಗೆ ಹೇಳಿಕೊಳ್ಳುತ್ತಾರೆ.

    ನಮ್ಮ ತಂದೆ ನಮಗೆ ವಿದ್ಯಾಭ್ಯಾಸ ನೀಡಲಿಲ್ಲ. ಅದರ ಬದಲು ತಬಲಾ ,ಹಾರ್ಮೊನಿಯಂ ನೀಡಿದರು. ಆದರೆ ಮಗ ಗಣೇಶ್ ಓದುವಲ್ಲಿ ಆಸಕ್ತಿ ತೋರಿದ್ದಾನೆ ಎಂದು ಗಣೇಶ್ ಅವರ ತಂದೆ ಹೇಳುತ್ತಾರೆ. ಕಂದೀಲು ಬೆಳಕಿನಲ್ಲಿ ಓದಿದ ಗಣೇಶ್ ಹಠ ಮಾತ್ರ ಬಿಟ್ಟಿಲ್ಲ. ಕೆಎಎಸ್ ಮಾಡಿ ತಮ್ಮ ಜನರ ಬದುಕಿಗೆ ಆಸರೆಯಾಗಬೇಕೆಂಬುದೇ ಗಣೇಶ್ ಅವರ ಜೀವನದ ಮುಖ್ಯ ಗುರಿ.

    https://www.youtube.com/watch?v=QMEWBdErnLE