Tag: Eid

  • ಶಾರುಖ್ ನೋಡಲು ಮನೆಮುಂದೆ ಜನಸಾಗರ: ಅಭಿಮಾನಿಗಳಿಗೆ ಲಾಠಿ ರುಚಿ

    ಶಾರುಖ್ ನೋಡಲು ಮನೆಮುಂದೆ ಜನಸಾಗರ: ಅಭಿಮಾನಿಗಳಿಗೆ ಲಾಠಿ ರುಚಿ

    ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ (Shah Rukh Khan) ನನ್ನು ನೋಡಲು ಅವರ ಮನೆ ಮುಂದೆ ನಿನ್ನೆ ಅಭಿಮಾನಿಗಳ (Fans) ಜಮಾಯಿಸಿದ್ದರು. ಈದ್ ಹಬ್ಬದ ಪ್ರಯುಕ್ತವಾಗಿ ಸೇರಿದ್ದ ಅಭಿಮಾನಿಗಳು ತುಂಬಾ ಹೊತ್ತು ನೆಚ್ಚಿನ ನಟನಿಗಾಗಿ ಕಾದರು. ಮನೆ ಮುಂದೆ ಜನಸಾಗರವೇ ಹರಿದು ಬಂದಿದ್ದರಿಂದ ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

    ಶಾರುಖ್ ಮನೆ ಮುಂದೆ ಪೊಲೀಸರು ಬ್ಯಾರಿಕೇಡ್ ಹಾಕಿ ಅಭಿಮಾನಿಗಳನ್ನು ಕಂಟ್ರೋಲ್ ಮಾಡುತ್ತಿದ್ದರೆ, ಮತ್ತೊಂದು ಕಡೆ ಅಭಿಮಾನಿಗಳ ಸಂಖ್ಯೆ ಹೆಚ್ಚಾಗುತ್ತಲೇ ಹೋಯಿತು. ಕೊನೆಗೂ ಶಾರುಖ್ ಮನೆಯ ಟೆರಸ್ ಏರಿ ಬಂದು ಅಭಿಮಾನಿಗಳತ್ತ ಕೈ ಬೀಸಿದರು. ಎಲ್ಲರಿಗೂ ಈದ್ ಶುಭಾಶಯ ಹೇಳಿದರು.

    ಐದತ್ತು ನಿಮಿಷ ನೆರೆದಿದ್ದ ಅಭಿಮಾನಿಗಳತ್ತ ಕೈ ಬೀಸುತ್ತಲೇ ಇದ್ದರು. ನಮಸ್ಕಾರ ಮಾಡಿದರೆ, ಕೃತಜ್ಞತೆ ಹೇಳಿದರು. ಜೊತೆಗೆ ತಮ್ಮ ಕಿರಿ ಮಗನನ್ನು ಅವರು ಕರೆದುಕೊಂಡು ಬಂದಿದ್ದರಿಂದ, ಅವನಿಗೂ ಅಭಿಮಾನಿಗಳಿಗೆ ವಿಶ್ ಮಾಡಲು ಹೇಳಿದರು. ನಂತರ ಮನೆಯೊಳಗೆ ತೆರಳಿದರು. ಶಾರುಖ್ ಹೋದರೂ, ಅಭಿಮಾನಿಗಳು ಹೋಗಲಿಲ್ಲ. ಹಾಗಾಗಿ  ಲಾಠಿ ರುಚಿ ತೋರಿಸಿ, ಅಭಿಮಾನಿಗಳನ್ನು ಅಲ್ಲಿಂದ ಕಳುಹಿಸಬೇಕಾಯಿತು.

  • ಈದ್ ಪಾರ್ಟಿಗೆ ಬಂದ ಗೆಳೆಯ ಬಿರಿಯಾನಿ ಜೊತೆ 1.45 ಲಕ್ಷದ ಚಿನ್ನವನ್ನೂ ನುಂಗಿದ

    ಈದ್ ಪಾರ್ಟಿಗೆ ಬಂದ ಗೆಳೆಯ ಬಿರಿಯಾನಿ ಜೊತೆ 1.45 ಲಕ್ಷದ ಚಿನ್ನವನ್ನೂ ನುಂಗಿದ

    ಚೆನ್ನೈ: ಈದ್ ಹಬ್ಬದ ಪ್ರಯುಕ್ತ ಸ್ನೇಹಿತರನ್ನು ಮನೆಗೆ ಔತಣಕ್ಕೆಂದು ಆಹ್ವಾನಿಸಿದ್ದ ವೇಳೆ 32 ವರ್ಷದ ವ್ಯಕ್ತಿಯೋರ್ವ ಬಿರಿಯಾನಿ ಜೊತೆಗೆ 1.45 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ನುಂಗಿದ್ದಾನೆ. ನಂತರ ಆತನ ಹೊಟ್ಟೆಯನ್ನು ವೈದ್ಯರು ಸ್ಕ್ಯಾನಿಂಗ್ ಮಾಡಿದಾಗ ಆಭರಣಗಳು ಪತ್ತೆಯಾಗಿದೆ.

    ಆಭರಣದ ಅಂಗಡಿಯಲ್ಲಿ ಕೆಲಸ ಮಾಡುವ ವ್ಯಕ್ತಿಯೋರ್ವ ಮೇ 3ರಂದು ಈದ್ ಪ್ರಯುಕ್ತ ತನ್ನ ಸ್ನೇಹಿತರನ್ನು ಔತಣಕ್ಕೆಂದು ಮನೆಗೆ ಕರೆದಿದ್ದರು. ಈ ವೇಳೆ ಬಿರಿಯಾನಿ ಜೊತೆಗೆ 1.45 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವ್ಯಕ್ತಿಯೋರ್ವ ನುಂಗಿ ಹಾಕಿದ್ದಾನೆ. ಅಲ್ಲದೇ ಈ ಸಮಯದಲ್ಲಿ ಆತ ಮದ್ಯ ಸೇವಿಸಿದ್ದ. ಇದನ್ನೂ ಓದಿ: ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಸುವುದು ಮೂಲಭೂತ ಹಕ್ಕಲ್ಲ: ಅರ್ಜಿ ವಜಾ

    ಊಟ ಮುಗಿದು ಅತಿಥಿಗಳು ಮನೆಗೆ ತೆರಳಿದ ನಂತರ ಬೀರುವಿನಲ್ಲಿದ್ದ ವಜ್ರದ ನೆಕ್ಲೇಸ್, ಚಿನ್ನದ ಸರ ಮತ್ತು ವಜ್ರದ ಪೆಂಡೆಂಟ್ ಕಾಣೆಯಾಗಿರುವುದನ್ನು ಗಮನಿಸಿದ್ದಾರೆ. ಈ ಕುರಿತಂತೆ ಅತಿಥಿಗಳನ್ನು ವಿಚಾರಿಸಿದಾಗ, ಯುವತಿಯೊಬ್ಬಳು ತನ್ನ ಸ್ನೇಹಿತೆಯ ಗೆಳೆಯ ಚಿನ್ನಾಭರಣಗಳನ್ನು ಕದ್ದಿರಬಹುದು ಎಂದು ಶಂಕಿಸಿ ವಿರುಗಂಬಾಕ್ಕಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಇದನ್ನೂ ಓದಿ: ಮೋದಿ ಏನೇ ಮಾಡಿದರೂ, ವಿಜ್ಞಾನ ಸುಳ್ಳು ಹೇಳುವುದಿಲ್ಲ: ರಾಹುಲ್ ಗಾಂಧಿ 

    ನಂತರ ಮೇ 4 ರಂದು ಬುಧವಾರ ಆತನನ್ನು ಪೊಲೀಸರು ವಿಚಾರಣೆ ನಡೆಸಿದಾಗ, ಆರೋಪಿ ತಪ್ಪೋಪ್ಪಿಕೊಂಡಿದ್ದಾನೆ. ಬಳಿಕ ಪೊಲೀಸರು ಆತನ ಹೊಟ್ಟೆಯನ್ನು ಸ್ಕ್ಯಾನ್ ಮಾಡಿಸಿದಾಗ ಆಭರಣಗಳು ಹೊಟ್ಟೆಯಲ್ಲಿರುವುದು ದೃಢಪಟ್ಟಿದೆ. ಇದೀಗ ವೈದ್ಯರು ಆತನಿಗೆ ಎನಿಮಾ (ಮಲ ಮತ್ತು ಉದರವಾಯುವನ್ನು ಹೊರಹಾಕಲು ಎನಿಮಾ ಚಿಕಿತ್ಸೆ ನೀಡಲಾಗುತ್ತದೆ) ನೀಡಿದ್ದು, ಗುರುವಾರ ಆತನಿಂದ 95,000 ರೂ.ಮೌಲ್ಯದ ಸರ ಹಾಗೂ 25,000 ರೂ.ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಆದರೆ ಪೆಂಡೆಂಟ್ ಆತನ ಹೊಟ್ಟೆಯಲ್ಲಿಯೇ ಉಳಿದಿದ್ದು, ಅದನ್ನು ಹೊರ ತೆಗೆಯಲು ವೈದ್ಯರು ಆತನಿಗೆ ಔಷಧಿ ನೀಡಿದ್ದಾರೆ.

  • ದೇಶದ ಪರಿಸ್ಥಿತಿ ಚೆನ್ನಾಗಿಲ್ಲ, ಭಯಪಡಬೇಡಿ, ಹೋರಾಟ ಮುಂದುವರೆಸಿ: ಮಮತಾ ಬ್ಯಾನರ್ಜಿ

    ದೇಶದ ಪರಿಸ್ಥಿತಿ ಚೆನ್ನಾಗಿಲ್ಲ, ಭಯಪಡಬೇಡಿ, ಹೋರಾಟ ಮುಂದುವರೆಸಿ: ಮಮತಾ ಬ್ಯಾನರ್ಜಿ

    ಕೋಲ್ಕತ್ತಾ: ದೇಶದ ಪ್ರಸ್ತುತ ಪರಿಸ್ಥಿತಿ ಚೆನ್ನಾಗಿಲ್ಲ. ಆದರೂ ಭಯ ಪಡಬೇಡಿ. ಹೋರಾಟ ಮುಂದುವರಿಸಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದರು.

    ಕೋಲ್ಕತ್ತಾದಲ್ಲಿ ರಂಜಾನ್‌ ನಿಮಿತ್ತ ನಡೆದ ಈದ್-ಉಲ್-ಫಿತರ್ ಪ್ರಾರ್ಥನೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ನಡೆಯುತ್ತಿರುವ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಭಯಪಡಬೇಡಿ. ಉತ್ತಮ ಭವಿಷ್ಯಕ್ಕಾಗಿ ಎಲ್ಲರೂ ಒಂದಾಗುವಂತೆ ಅವರು ಕರೆ ನೀಡಿದರು.

    ದೇಶದಲ್ಲಿ ನಡೆಯುತ್ತಿರುವ ಪ್ರತ್ಯೇಕತೆಯ ರಾಜಕೀಯ ಸ್ವಾಗತಾರ್ಹವಲ್ಲ. ಇಂದು ದೇಶವನ್ನು ಒಡೆದು ಆಳುವ ನೀತಿ ನಡೆಯುತ್ತಿದೆ. ಈ ಒಡೆದು ಆಳುವ ನೀತಿ ಸರಿಯಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಇಲಿ ಕಚ್ಚಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ ಯುಪಿ ಸಚಿವ – ಚಿಕಿತ್ಸೆ ಬಳಿಕ ಡಿಸ್ಚಾರ್ಜ್

    ಈದ್ ಪ್ರಾರ್ಥನೆಗಾಗಿ ನೆರೆದಿದ್ದ ಸುಮಾರು 14,000 ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು, ನಮ್ಮ ಪಕ್ಷ ಹಾಗೂ ಸರ್ಕಾರ ನಿಮಗೆ ಯಾವುದೇ ರೀತಿಯ ದುಃಖವನ್ನುಂಟು ಮಾಡುವ ಕೆಲಸವನ್ನು ಮಾಡುವುದಿಲ್ಲ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಮಸೀದಿ ಹೊರಗೆ ನಿಂತಿದ್ದ ಭದ್ರತಾ ಪಡೆಗಳ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ

  • ಈದ್ ಹಬ್ಬದಂದು ಆರತಿ ಮಾಡಬೇಡಿ: ರಾಜ್ ಠಾಕ್ರೆ ಮನವಿ

    ಈದ್ ಹಬ್ಬದಂದು ಆರತಿ ಮಾಡಬೇಡಿ: ರಾಜ್ ಠಾಕ್ರೆ ಮನವಿ

    ಮುಂಬೈ: ರಂಜಾನ್‌ ಈದ್ ದಿನದಂದು ಆರತಿ ಸೇರಿದಂತೆ ಹಬ್ಬದ ಆಚರಣೆಗೆ ಅಡ್ಡಿಪಡಿಸುವ ಯಾವುದನ್ನೂ ಮಾಡಬೇಡಿ ಎಂದು ಮಹಾರಾಷ್ಟ್ರ ನವ ನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್‍ ಠಾಕ್ರೆ ತಮ್ಮ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾಳೆ ಈದ್. ಈ ಬಗ್ಗೆ ಇದರ ಬಗ್ಗೆ ಈಗಾಗಲೇ ಮಾತನಾಡಿದ್ದೇನೆ. ಮುಸ್ಲಿಂ ಸಮುದಾಯವು ಈ ಹಬ್ಬವನ್ನು ಸಂಭ್ರಮದಿಂದ ಆಚರಿಸಬೇಕು. ಈ ಹಿಂದೆ ನಿರ್ಧರಿಸಿದ ಪ್ರಕಾರವಾಗಿ ಈ ಹಬ್ಬದ ದಿನ ಆರತಿ ಮಾಡಬೇಡಿ ಎಂದ ಅವರು, ಧ್ವನಿವರ್ಧಕಗಳ ಸಮಸ್ಯೆ ಧಾರ್ಮಿಕವಲ್ಲ. ಆದರೆ ಸಾಮಾಜಿಕವಾಗಿದೆ. ಮುಂದಿನ ಹಂತವನ್ನು ನಾಳೆ ತಿಳಿಸುತ್ತೇನೆ ಎಂದು ತಿಳಿಸಿದರು.

    ಈದ್ ನಂತರ ಮಹಾರಾಷ್ಟ್ರದ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದು ಹಾಕದಿದ್ದರೆ ಮುಸ್ಲಿಂ ಧಾರ್ಮಿಕ ಸ್ಥಳಗಳ ಹೊರಗೆ ಹನುಮಾನ್ ಚಾಲೀಸಾವನ್ನು ಪಠಿಸಬೇಕಾಗಿತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಮೇ 3ರೊಳಗೆ ಧ್ವನಿವರ್ಧಕಗಳನ್ನು ತೆಗೆದುಹಾಕದಿದ್ದರೆ, ಮಹಾರಾಷ್ಟ್ರದ ಶಕ್ತಿಯನ್ನು ತೋರಿಸುತ್ತೇವೆ: ರಾಜ್ ಠಾಕ್ರೆ

    loud speaker

    ಮೇ 3 ರಂದು ಈದ್ ಇದೆ. ಹಬ್ಬವನ್ನು ಹಾಳು ಮಾಡಲು ನಾನು ಬಯಸುವುದಿಲ್ಲ, ಆದರೆ ಮೇ 4ರ ನಂತರ ನಾವು ಕೇಳುವುದಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ನಾವು ಡಬಲ್ ಪವರ್‍ನಿಂದ ಹನುಮಾನ್ ಚಾಲೀಸಾವನ್ನು ಪಠಿಸುತ್ತೇವೆ. ನಮ್ಮ ವಿನಂತಿಯನ್ನು ನೀವು ಅರ್ಥಮಾಡಿಕೊಳ್ಳದಿದ್ದರೆ, ನಾವು ಅದನ್ನು ನಮ್ಮ ರೀತಿಯಲ್ಲಿ ನಿಭಾಯಿಸುತ್ತೇವೆ ಎಂದಿದ್ದರು. ಇದನ್ನೂ ಓದಿ: ನನ್ನ ಬಂಧನದ ಹಿಂದೆ ಪ್ರಧಾನಿ ಕಾರ್ಯಾಲಯದ ಗೋಡ್ಸೆ ಭಕ್ತ ಕೈವಾಡವಿದೆ: ಜಿಗ್ನೇಶ್‌ ಮೇವಾನಿ

  • ಸಹಜ ಸ್ಥಿತಿಯತ್ತ ಕಾಶ್ಮೀರ – ಫೋನ್, ಇಂಟರ್‌ನೆಟ್ ಸೇವೆ ಆರಂಭ

    ಸಹಜ ಸ್ಥಿತಿಯತ್ತ ಕಾಶ್ಮೀರ – ಫೋನ್, ಇಂಟರ್‌ನೆಟ್ ಸೇವೆ ಆರಂಭ

    ಶ್ರೀನಗರ: ಕೇಂದ್ರ ಸರ್ಕಾರ 370ನೇ ವಿಧಿ ರದ್ದುಗೊಳಿಸಿದ ಬಳಿಕ ಕಾಶ್ಮೀರದಲ್ಲಿ ಅಹಿತಕರ ಘಟನೆಗಳು ನಡೆಯಬಾರದೆಂದು ಮುನ್ನೆಚ್ಚರಿಕಾ ಕ್ರಮವಾಗಿ ಫೋನ್ ಹಾಗೂ ಇಂಟರ್‍ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಜನಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ಈ ಸೇವೆ ಮತ್ತೆ ಆರಂಭವಾಗಿದೆ.

    ಇಂದು ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಹಿನ್ನೆಲೆಯಲ್ಲಿ ಶುಕ್ರವಾರದ ಪ್ರಾರ್ಥನೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಏನಾದರೂ ಹಿಂಸಾಚಾರ ನಡೆಯಬಹುದೆಂದು ಭದ್ರತಾ ಸಿಬ್ಬಂದಿ ಕಣಿವೆ ರಾಜ್ಯದ ಎಲ್ಲಾ ಕಡೆಗಳಲ್ಲು ಭದ್ರತೆ ಒದಗಿಸುತ್ತಿದ್ದಾರೆ.

    ಶ್ರೀನಗರದಲ್ಲಿರುವ ಮುಖ್ಯ ಜಾಮಾ ಮಸೀದಿಯ ಬಾಗಿಲನ್ನು ಮುಚ್ಚಲಾಗಿದೆ. ಆದರೆ ನಗರದ ಕೆಲ ಸಣ್ಣ ಮಸೀದಿಯಲ್ಲಿ ಮಸ್ಲಿಮರು ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ಹಾಗೆಯೇ ಶಾಂತಿಯುತವಾಗಿ ಪ್ರಾರ್ಥನೆ ಸಲ್ಲಿಸಿ, ಯಾವುದೇ ಗಲಾಟೆಗಳು ನಡೆಯದಂತೆ ಜನರು ನೋಡಿಕೊಂಡರೆ ಮಸೀದಿ ಬಾಗಿಲನ್ನು ಮತ್ತೆ ತೆರೆಯಲು ಅವಕಾಶ ನೀಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಒಮರ್ ಅಬ್ದುಲ್ಲಾ ಸೇರಿದಂತೆ ಸುಮಾರು 400 ರಾಜಕೀಯ ನಾಯಕರು ಗೃಹ ಬಂಧನದಲ್ಲೇ ಇದ್ದಾರೆ.

    ಗುರುವಾರದಂದು ರಾಜ್ಯಪಾಲರಾದ ಸತ್ಯಪಾಲ್ ಮಲಿಕ್ ಅವರು ಪ್ರತಿಕ್ರಿಯಿಸಿ, ನಗರದಲ್ಲಿ ಶಾಂತಿಯನ್ನು ಜನರು ಹೀಗೆ ಕಾಯ್ದುಕೊಂಡು ಬಂದರೆ ಶುಕ್ರವಾರದ ಪ್ರಾರ್ಥನೆ ಹಾಗೂ ಈದ್ ಹಬ್ಬಕ್ಕೆ ಹೇರಿರುವ ನಿರ್ಬಂಧವನ್ನು ಸಡಿಲಿಸಲಾಗುವುದು ಎಂದು ಹೇಳಿದ್ದಾರೆ.

    ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಕಾಶ್ಮೀರ ವಿಚಾರದಲ್ಲಿ ಸರ್ಕಾರ ತೆಗೆದುಕೊಂಡ ನಿರ್ಧಾರದ ಬಗ್ಗೆ ಮಾತನಾಡುವಾಗ, ಸೋಮವಾರ ನಡೆಯುವ ಈದ್ ಹಬ್ಬದ ಸಂಭ್ರಮಕ್ಕೆ ಸರ್ಕಾರ ಯಾವುದೇ ಅಡ್ಡಿಯಾಗದಂತೆ ನೋಡಿಕೊಳ್ಳುತ್ತದೆ ಎಂದು ಭರವಸೆ ನೀಡಿದ್ದಾರೆ. ಹಾಗೆಯೇ 370ನೇ ವಿಧಿಯಿಂದ ಸ್ವಾತಂತ್ರ್ಯ ಸಿಕ್ಕಿರುವುದು ವಾಸ್ತವ್ಯ. ಆದರೆ ಈ ಹಿನ್ನೆಲೆ ತೆಗೆದುಕೊಂಡಿರುವ ಮುನ್ನೆಚ್ಚರಿಕಾ ಕ್ರಮಗಳಿಂದ ಜನರು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಹೇಳಿದ್ದರು.

    ಕಾಶ್ಮೀರ ಕಣಿವೆಯಲ್ಲಿ ಕಫ್ರ್ಯೂ ಹಾಕಿದ್ದರೂ ಈದ್ ಹಬ್ಬದ ಹಿನ್ನೆಲೆ ರಾಜ್ಯದಿಂದ ಹೊರಗಿರುವ ಕಾಶ್ಮೀರಿ ನಿವಾಸಿಗಳು ಕುಟುಂಬಸ್ಥರ ಜೊತೆ ಹಬ್ಬ ಆಚರಿಸಲು ವಿಮಾನಗಳ ಮೂಲಕ ಶ್ರೀನಗರಕ್ಕೆ ಬರುತ್ತಿದ್ದಾರೆ.

  • ನಾನು ಹಿಂದೂ, ನಾನ್ಯಾಕೆ ಈದ್ ಆಚರಿಸಬೇಕು – ಸಿಎಂ ಯೋಗಿ ಆದಿತ್ಯನಾಥ್ ಪ್ರಶ್ನೆ

    ನಾನು ಹಿಂದೂ, ನಾನ್ಯಾಕೆ ಈದ್ ಆಚರಿಸಬೇಕು – ಸಿಎಂ ಯೋಗಿ ಆದಿತ್ಯನಾಥ್ ಪ್ರಶ್ನೆ

    ಲಕ್ನೋ: ನಾನೊಬ್ಬ ಹಿಂದೂವಾಗಿದ್ದು, ನಾನು ಈದ್ ಹಬ್ಬವನ್ನು ಆಚರಣೆ ಮಾಡುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.

    ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸಮಾಜವಾದಿ ಪಕ್ಷವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಅವರು, ನಾನೊಬ್ಬ ಅಪ್ಪಟ ಹಿಂದೂ. ಹೀಗಾಗಿ ನಾನು ಯಾಕೆ ಈದ್ ಆಚರಣೆ ಮಾಡಬೇಕು. ನನಗೆ ನನ್ನ ಧರ್ಮದ ಮೇಲೆ ಹೆಮ್ಮೆ, ಗೌರವವಿರುವಾಗ ನಾನ್ಯಾಕೆ ಇತರ ಧರ್ಮದ ಹಬ್ಬಗಳನ್ನು ಆಚರಿಸಲಿ?. ನಾನು ಪ್ರಾರ್ಥನೆ ಮಾಡಲು ಜನಿವಾರಧಾರಿಯೂ ಅಲ್ಲ. ಮಂಡಿಯೂರಿ ಪ್ರಾರ್ಥನೆ ಸಲ್ಲಿಸುವವನೂ ಅಲ್ಲ. ಹಾಗೆಯೇ ಟೋಪಿ ಧರಿಸುವವನೂ(ಮುಸ್ಲಿಂ ಟೋಪಿ) ಅಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಾಮೀನು ಸಿಕ್ಕರೂ 5,500 ಕ್ರಿಮಿನಲ್‍ಗಳು ಯುಪಿ ಜೈಲಿನಿಂದ ಹೊರಬರುತ್ತಿಲ್ಲ!

    ನಾನು ಸಮಾಜವಾದಿ ಪಕ್ಷಗಳಂತೆ ಅಲ್ಲ. ಹಿಂದೂ ಧರ್ಮದವನೆಂಬ ಹೆಮ್ಮೆ ನನಗಿದೆ. ಹೀಗಾಗಿ ಈದ್ ಆಚರಣೆ ಮಾಡುವ ಉದ್ದೇಶವಿಲ್ಲ. ಆದರೆ ಈ ಆಚರಣೆಗೆ ನನ್ನ ಸಂಪೂರ್ಣ ಸಹಕಾರ ಇದೆ. ಈ ಶಾಂತಿಯುತವಾಗಿ ಹಬ್ಬದ ಆಚರಣೆ ಸಂಬಂಧವಾಗಿ ಯಾವುದೇ ಅಹಿತರ ಘಟನೆ ನಡೆಯದಂತೆ ರಾಜ್ಯದಲ್ಲಿ ಭದ್ರತೆ ಒದಗಿಸುತ್ತೇನೆ ಎಂದು ಹೇಳಿದ್ದಾರೆ.


    ಈ ಹಿಂದೆ ಯೋಗಿ ಅವರು, ಹೋಳಿ ಹಬ್ಬ ವರ್ಷಕ್ಕೊಮ್ಮೆ ಬರುವ ಕಾರಣ ಅದಕ್ಕೆ ಗೌರವ ಕೊಡಬೇಕು. ಆದ್ರೆ ನಮಾಜ್, ಪ್ರಾರ್ಥನೆ ಪ್ರತೀ ದಿನವೂ ನಡೆಯುತ್ತದೆ. ಹೀಗಾಗಿ ನಮಾಜ್ ಅವಧಿಯನ್ನು ಬದಲಿಸಬೇಕೆಂದು ಹೇಳಿದ್ದರು. ಇದನ್ನೂ ಓದಿ: ನನ್ನ ಅರೆಸ್ಟ್ ಮಾಡಿ, ಎನ್‍ಕೌಂಟರ್ ನಲ್ಲಿ ಸಾಯಲು ಇಷ್ಟವಿಲ್ಲ- ಯುಪಿ ಪೊಲೀಸರಿಗೆ ಕೊಲೆ ಆರೋಪಿ ಶರಣು

    ಯೋಗಿ ಸೂಚನೆ ಮೇರೆಗೆ ಹೋಳಿ ಪ್ರಯುಕ್ತ ಇಮಾಮ್ ಎ ಈದ್ಗಾ ಮೌಲಾನಾ ಖಲೀದ್ ರಶೀದ್ ಫಿರಂಗಿ ಮಾಹ್ಲಿ ಅವರು ವಿವಿಧ ಮಸೀದಿಗಳ ಇಮಾಮರಿಗೆ, ವಿಶೇಷವಾಗಿ ಕೋಮು ಸೂಕ್ಷ್ಮ ಮಸೀದಿಗಳ ಇಮಾಮಗೆ, ಶುಕ್ರವಾರದ ಪ್ರಾರ್ಥನೆಯನ್ನು ಅರ್ಧಗಂಟೆಯಿಂದ ಒಂದು ಗಂಟೆಯ ವರೆಗೆ ಮುಂದಕ್ಕೆ ಹಾಕುವಂತೆ ಕೇಳಿಕೊಂಡಿದ್ದರು.

    ಹಿಂದೆ ಹೋಳಿ ವೇಳೆ ನಮಾಜ್ ಸಮಯದಲ್ಲಿ ಮಸೀದಿಗೆ ಪ್ರಾರ್ಥನೆಗೆ ತೆರಳುತ್ತಿದ್ದ ಮುಸ್ಲಿಮರ ಮೇಲೆ ಬಣ್ಣವನ್ನು ಎರಚುತ್ತಿದ್ದರು. ಇದರಿಂದಾಗಿ ಕೋಮು ಗಲಾಟೆ ಸೃಷ್ಟಿಯಾಗುತಿತ್ತು. ಗಲಾಟೆ ನಡೆಯದೆ ಇರಲು ಕೋಮು ಸೂಕ್ಷ್ಮ ಪ್ರದೇಶದಲ್ಲಿ ನಮಾಜ್ ಸಮಯವನ್ನು ಬದಲಾವಣೆ ಮಾಡಿ ಸಹಕಾರ ನೀಡಿದ್ದರು.

  • ಗೆಳತಿ ಕತ್ರೀನಾಗೆ ಡಿಫೆರೆಂಟ್ ಸ್ಟೈಲಿನಲ್ಲಿ ಈದ್ ವಿಶ್ ಮಾಡಿದ ಸಲ್ಲು!

    ಗೆಳತಿ ಕತ್ರೀನಾಗೆ ಡಿಫೆರೆಂಟ್ ಸ್ಟೈಲಿನಲ್ಲಿ ಈದ್ ವಿಶ್ ಮಾಡಿದ ಸಲ್ಲು!

    ಮುಂಬೈ: ಬಾಲಿವುಡ್ ಮಾಜಿ ಪ್ರೇಮಿಗಳಾದ ಸಲ್ಮಾನ್ ಖಾನ್ ಮತ್ತು ಕತ್ರೀನಾ ಕೈಫ್ ಸುದೀರ್ಘ ಆರು ವರ್ಷಗಳ ಬಳಿಕ ಒಂದಾಗಿ ಟೈಗರ್ ಜಿಂದಾ ಹೈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ನಡುವೆ ಹ್ಯಾಂಡ್ ಸಮ್ ಸಲ್ಮಾನ್ ತಮ್ಮ ಮಾಜಿ ಗೆಳತಿ ಸುಂದರಿ ಕತ್ರೀನಾಗೆ ತಮ್ಮದೇ ಆದ ಶೈಲಿಯಲ್ಲಿ ಈದ್ ಮುಬಾರಕ್ ಹೇಳಿದ್ದಾರೆ.

    ಸಲ್ಮಾನ್ ತಮ್ಮ ಇನ್ ಸ್ಟಾಗ್ರಾಂನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ವಿಡಿಯೋದಲ್ಲಿ ಸಲ್ಮಾನ್ ಹೊಟೇಲೊಂದರ ಮಹಡಿಯ ಮೇಲೆ ನಿಂತು ಕತ್ರೀನಾಗೆ ಕಾಗದದಲ್ಲಿ ತಯಾರಿಸಿದ ರಾಕೆಟ್ ಬಿಡುತ್ತಾರೆ. ಈ ಕಾಗದದ ರಾಕೆಟ್ ನೇರವಾಗಿ ಕತ್ರೀನಾಗೆ ತಾಗುತ್ತದೆ. ಕತ್ರೀನಾ ಆ ರಾಕೆಟ್ ಕೈಗೆತ್ತಿಕೊಂಡು ಅತ್ತಿತ್ತ ನೋಡಿ ಅದನ್ನು ಓಪನ್ ಮಾಡ್ತಾರೆ. ಕಾಗದದಲ್ಲಿ `ಈದ್ ಮುಬಾರಕ್’ ಎಂದು ಬರೆಯಲಾಗಿರುತ್ತದೆ.

    ಯಾವಾಗಲೂ ಸಿಂಪಲ್ ಐಡಿಯಾಗಳಿಂದ ಡಿಫೆರೆಂಟ್ ಆಗಿ ಕಾಣಿಸಿಕೊಳ್ಳುವ ಸಲ್ಮಾನ್ ಮತ್ತೊಮ್ಮೆ ತಾವೆಷ್ಟು ಸಿಂಪಲ್ ಎಂಬುದನ್ನು ವಿಡಿಯೋ ಮುಖಾಂತರ ತೋರಿಸಿದ್ದಾರೆ. ಸದ್ಯ ಸಲ್ಮಾನ್ ಮತ್ತು ಕತ್ರೀನಾ ನಟಿಸುತ್ತಿರುವ ಟೈಗರ್ ಜಿಂದಾ ಹೈ ಸಿನಿಮಾ ಡಿಸೆಂಬರ್‍ನಲ್ಲಿ ತೆರೆಕಾಣಲಿದೆ.

    ಇದನ್ನೂ ಓದಿ: 2-3 ವರ್ಷಗಳಲ್ಲಿ ನಾನು ತಂದೆಯಾಗಲಿದ್ದೇನೆ: ಸಲ್ಮಾನ್ ಖಾನ್

    ರಂಜಾನ್ ನಲ್ಲಿ ತೆರೆಕಂಡಿದ್ದ `ಟ್ಯೂಬ್‍ಲೈಟ್’ ಸಿನಿಮಾ ಸಿನಿರಸಿಕರನ್ನು ಸೆಳೆಯುವಲ್ಲಿ ವಿಫಲವಾಗಿತ್ತು. ಅಂತೆಯೇ ಕತ್ರೀನಾ ನಟನೆಯ `ಜಗ್ಗಾ ಜಾಸೂಸ್’ ಸಹ ಬಾಕ್ಸ್ ಆಫೀಸ್‍ನಲ್ಲಿ ಧೂಳೆಬ್ಬಿಸಲು ವಿಫಲಗೊಂಡಿತ್ತು. ಈಗ ಇಬ್ಬರೂ ಸ್ಟಾರ್‍ಗಳು ಜೊತೆಯಾಗಿ `ಟೈಗರ್ ಜಿಂದಾ ಹೈ’ ಸಿನಿಮಾದಲ್ಲಿ ನಟಿಸುತ್ತಿದ್ದು, ಇದ್ರಿಂದ ಇಬ್ಬರಿಗೂ ಬ್ರೇಕ್ ಸಿಗುವ ಚಾನ್ಸ್ ಗಳಿವೆ.

    ಇದನ್ನೂ ಓದಿ: ಮಾಜಿ ಗೆಳತಿಗೆ ಭರ್ಜರಿ ಬರ್ತ್ ಡೇ ಗಿಫ್ಟ್ ಕೊಟ್ಟ ಸಲ್ಮಾನ್ ಖಾನ್

    `ಟೈಗರ್ ಜಿಂದಾ ಹೈ’ ಬಳಿಕ ರೆಮೊ ಡಿಸೋಜಾ ನಿರ್ಮಾಣದ ಡ್ಯಾನ್ಸ್ ಆಧಾರಿತ ಸಿನಿಮಾದಲ್ಲಿ ಸಲ್ಮಾನ್ ಖಾನ್ ನಟಿಸಲಿದ್ದಾರೆ. ಈ ಚಿತ್ರದಲ್ಲಿ ಸಲ್ಮಾನ್ ಗೆ ಜೊತೆಯಾಗಿ ಜಾಕ್ವೇಲಿನ್ ಫರ್ನಾಂಡೀಸ್ ಕಾಣಿಸಿಕೊಳ್ಳಲಿದ್ದಾರೆ. ಇನ್ನೂ ಕತ್ರೀನಾ ಸಹ ಶಾರೂಖ್ ಖಾನ್ ಮತ್ತು ಅನುಷ್ಕಾ ಶರ್ಮಾ ಅಭಿನಯಿಸುತ್ತಿರುವ ಹೆಸರಿಡದ ಸಿನಿಮಾದಲ್ಲಿ ಬ್ಯುಸಿಯಾಗಲಿದ್ದಾರೆ.

    ಇದನ್ನೂ ಒದಿ: ಈ ನಟನಿಂದ ವೇಯ್ಟ್ ಲಾಸ್ ಟಿಪ್ಸ್ ಪಡೆಯಲಿದ್ದಾರಂತೆ ಸಲ್ಮಾನ್ ಖಾನ್!

    https://www.instagram.com/p/BYP8GXTBzKo/?taken-by=beingsalmankhan

    https://www.instagram.com/p/BTYmDmphp_6/?taken-by=beingsalmankhan

    https://www.instagram.com/p/BXYP7znAZEy/?taken-by=katrinakaif