Tag: Ek Love Ya

  • ರಾಜಕೀಯಕ್ಕೆ ಬರ್ತಾರಾ ನಿರ್ದೇಶಕ ಪ್ರೇಮ್..?

    ರಾಜಕೀಯಕ್ಕೆ ಬರ್ತಾರಾ ನಿರ್ದೇಶಕ ಪ್ರೇಮ್..?

    ಬೆಂಗಳೂರು: ಭವಿಷ್ಯದಲ್ಲಿ ರಾಜಕೀಯಕ್ಕೆ ಬರಲು ಅವಕಾಶ ಸಿಕ್ಕರೆ ನೋಡೋಣ ಎನ್ನುವ ಮೂಲಕ ರಾಜಕೀಯ ಪ್ರವೇಶದ ಬಗ್ಗೆ ಚಂದನವನದ ನಟ, ನಿರ್ದೇಶಕ ಪ್ರೇಮ್ ಸುಳಿವನ್ನು ನೀಡಿದರು.

    ‘ಏಕ್ ಲವ್ ಯಾ’ ಸಿನಿಮಾ ಪ್ರಚಾರಕ್ಕಾಗಿ ಬಂದ ಪ್ರೇಮ್ ರಾಜಕೀಯ ಎಂಟ್ರಿ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನಾವು ಚುನಾವಣೆಗೆ ನಿಲ್ಲದಿದ್ದರೂ, ಜನರಿಗಾಗಿ ಕೆಲಸ ಮಾಡುತ್ತಿದ್ದೇವೆ. ಪ್ರೇಮ್ ಫೌಂಡೇಶನ್ ಟ್ರಸ್ಟ್ ಮಾಡಿದ್ದೇವೆ. ಈ ಮೂಲಕ ಹಲವು ಜನರಿಗೆ ಸಹಾಯ ಮಾಡಿದ್ದೇವೆ. ನನ್ನ ತಾಯಿ ಹೆಸರಲ್ಲಿ ವಿದ್ಯಾರ್ಥಿಗಳಿಗೆ, ರೈತರಿಗಾಗಿ ಸಹಾಯ ಮಾಡಿದ್ದೇವೆ. ಇದನ್ನು ನಾವು ಹೇಳಿಕೊಳ್ಳಬೇಕು ಎಂಬುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಕೊನೆಗೂ ತನ್ನ ಕನಸು ನೆರವೇರಿತು ಎಂದ ಪ್ರಭಾಸ್ !

    ಸಮಾಜಸೇವೆ ಎಂದರೆ ಜನರು ಇರುವಲ್ಲಿಗೆ ಹೋಗಿ ಮಾಡಬೇಕು ಎಂದು ಇಲ್ಲ. ನಮ್ಮ ಕೈಯಲ್ಲಿ ಆದ ಸಹಾಯವನ್ನು ನಾವು ಮಾಡುತ್ತಿದ್ದೇವೆ. ಅದಕ್ಕೆ ರಾಜಕೀಯಕ್ಕೆ ಬಂದು ಮಾಡಬೇಕು ಎಂಬುದಿಲ್ಲ ಎಂದು ನಕ್ಕರು.

    ರಾಜಕೀಯ ವಿಷಯಕ್ಕೆ ಬಂದ್ರೆ. ನಾನು ಮಂಡ್ಯದಲ್ಲಿ ಚುನಾವಣೆಗೆ ನಿಲ್ಲುತ್ತೇನೆ ಎಂದೇ ಎಷ್ಟೋ ಜನರು ಹೇಳುತ್ತಿದ್ದರು. ಆದರೆ ಅಲ್ಲಿ ನನ್ನ ಅಣ್ಣ ರೆಬೆಲ್ ಸ್ಟಾರ್ ಅಂಬಿ ಇರುವವರೆಗೂ ನಾನು ಆ ಕ್ಷೇತ್ರದಲ್ಲಿ ನಿಲ್ಲುವುದಿಲ್ಲ ಎಂಬುದು ಸಹ ಎಲ್ಲರಿಗೂ ತಿಳಿದಿತ್ತು. ಅವರಿಟ್ಟ ಹೆಜ್ಜೆಯನ್ನು ನಾವು ತುಳಿಯುವುದಕ್ಕೆ ಆಗುವುದಿಲ್ಲ. ಅವರು ಮಹಾನ್ ವ್ಯಕ್ತಿ. ಭವಿಷ್ಯದಲ್ಲಿ ಏನಾದರೂ ಅವಕಾಶ ಬಂದ್ರೆ ನೋಡೋಣ ಎಂದು ರಾಜಕೀಯಕ್ಕೆ ಎಂಟ್ರಿ ಬಗ್ಗೆ ಸುಳಿವನ್ನು ಕೊಟ್ಟರು.

    ನನಗೆ ಯಾವುದೇ ಪಕ್ಷಕ್ಕೆ ಸೇರಬೇಕು ಎಂಬುದಿಲ್ಲ. ಸಹಜವಾಗಿ ನನಗೆ ಎಲ್ಲ ಪಕ್ಷದಲ್ಲಿಯೂ ನನ್ನ ಹಿರಿಯರು, ಸ್ನೇಹಿತರು, ಹಿತೈಷಿಗಳು ಇದ್ದಾರೆ. ಅದಕ್ಕೆ ಇದೇ ಪಕ್ಷ ಸೇರಬೇಕು ಎಂದು ನಾನು ಹೇಳಲಾಗುವುದಿಲ್ಲ. ಪ್ರೇಮ್ ಒಬ್ಬ ರೈತರ ಮಗ ಎಂದು ಎಲ್ಲರೂ ನನಗೆ ಆರ್ಶೀವಾದವನ್ನು ಮಾಡಿದ್ದಾರೆ. ಎಲ್ಲ ಪಕ್ಷದವರು ನನ್ನನ್ನು ಪ್ರೀತಿಯಿಂದ ಕರೆಯುತ್ತಾರೆ ಎಂದರು. ಇದನ್ನೂ ಓದಿ: ಮದುವೆಗೂ ಮುನ್ನ ಬಿಂದಾಸ್ ಆಗಿ ಡ್ಯಾನ್ಸ್ ಮಾಡಿದ ವಧು – ವೀಡಿಯೋ ವೈರಲ್

    ಪ್ರಸ್ತುತ ನನ್ನ ‘ಏಕ್ ಲವ್ ಯಾ’ ಸಿನಿಮಾ ಬಿಡುಗಡೆಯಾಗುತ್ತಿದೆ. ಮುಂದೆ ಐತಿಹಾಸಿಕ ಸಿನಿಮಾ ಮಾಡಬೇಕು ಎಂದುಕೊಂಡಿದ್ದೇನೆ. ಸದ್ಯಕ್ಕೆ ನನಗೆ ತಲೆಯಲ್ಲಿ ಅದೇ ಇದೆ. ಅದರ ಕಡೆ ಹೆಚ್ಚು ಗಮನಕೊಡಬೇಕು. ಭವಿಷ್ಯದಲ್ಲಿ ರಾಜಕೀಯದ ಬಗ್ಗೆ ನೋಡೋಣ. ನೀವು ಇದ್ದೀರಾ ಅಲ್ಲ ನೀವು ಹೋಗಿ ಎಂದರೆ ಹೋಗೋಣ ಎಂದು ಹೇಳಿದರು.

  • ಅಪ್ಪುಗೆ ಅವಮಾನ ಮಾಡೋ ಉದ್ದೇಶ ಯಾವ ಕನ್ನಡಿಗರಿಗೂ ಇರಲ್ಲ: ರಚಿತಾ ರಾಮ್

    ಅಪ್ಪುಗೆ ಅವಮಾನ ಮಾಡೋ ಉದ್ದೇಶ ಯಾವ ಕನ್ನಡಿಗರಿಗೂ ಇರಲ್ಲ: ರಚಿತಾ ರಾಮ್

    ಬೆಂಗಳೂರು: ಅಪ್ಪು ಅವರಿಗೆ ಅವಮಾನ ಮಾಡುವ ಉದ್ದೇಶ ಮತ್ತು ಆಲೋಚನೆ ಯಾವ ಕನ್ನಡಿಗರಿಗೂ ಇರುವುದಿಲ್ಲ ಎಂದು ಸ್ಯಾಂಡಲ್‍ವುಡ್ ನಟಿ ರಚಿತಾ ರಾಮ್ ತಿಳಿದ್ದಾರೆ.

    ಏಕ್ ಲವ್ ಯಾ ಸಿನಿಮಾ ತಂಡ ಸಾಂಗ್ ರಿಲೀಸ್ ಕಾರ್ಯಕ್ರಮವನ್ನು ಆಯೋಜಿಸಿತ್ತು, ಈ ವೇಳೆ ನಟ ಪವರ್ ಪುನೀತ್ ರಾಜ್‍ಕುಮಾರ್ ಫೋಟೋ ಮುಂದೆ ಏಕ್ ಲವ್ ಯಾ ಸಿನಿಮಾ ತಂಡ ಶಾಂಪೇನ್ ಚಿಮ್ಮಿಸಿತ್ತು. ಹೀಗಾಗಿ ಇದೇನು ಶ್ರದ್ಧಾಂಜಲಿ ಕಾರ್ಯಕ್ರಮವೋ ಅಥವಾ ಸಂಭ್ರಮಾಚರಣೆಯ ಕಾರ್ಯಕ್ರಮವೋ ಎಂದು ಅಪ್ಪು ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ.

    ಸದ್ಯ ಈ ನಟಿ ರಚಿತಾ ರಾಮ್ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಫೋಸ್ಟ್‌ವೊಂದನ್ನು ಶೇರ್ ಮಾಡಿಕೊಳ್ಳುವ ಮೂಲಕ ಅಪ್ಪು ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ. ‘ನಿನ್ನೆಯ ಏಕ್ ಲವ್ ಯಾ ಸಿನಿಮಾದ ಸಾಂಗ್ ಲಾಂಚ್ ಕಾರ್ಯಕ್ರಮದಲ್ಲಿ ಅಪ್ಪು ಭಾವಚಿತ್ರದ ಎದುರು ಶಾಂಪೇನ್ ಬಾಟಲ್ ಓಪನ್ ಮಾಡಿ ಹಾಡನ್ನು ಬಿಡುಗಡೆಗೊಳಿಸಿರುವ ಬಗ್ಗೆ ನಿಮ್ಮೆಲ್ಲರಿಗೆ ಅಸಮಾಧಾನವಾಗಿದೆ. ಆ ಬಗ್ಗೆ ದಯವಿಟ್ಟು ಕ್ಷಮೆ ಇರಲಿ ನಾನೂ ಕೂಡ ಚಿತ್ರದ ಭಾಗವಾಗಿರುವುದರಿಂದ, ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಿಂದ ಕ್ಷಮೆ ಕೇಳುತ್ತೇನೆ. ಇದನ್ನೂ ಓದಿ:  ಅಪ್ಪುಗೆ ಅವಮಾನ ಮಾಡಲು ಯಾರಿಂದಲೂ ಸಾಧ್ಯವಿಲ್ಲ, ಮಾಡುವುದೂ ಇಲ್ಲ: ರಕ್ಷಿತಾ

    ಅಪ್ಪು ಅವರಿಗೆ ಅವಮಾನ ಮಾಡುವ ಉದ್ದೇಶ, ಆಲೋಚನೆ ಯಾವ ಕನ್ನಡಿಗರಿಗೂ ಇರುವುದಿಲ್ಲ. ಅದಾಗಿಯೂ ಉದ್ದೇಶಪೂರ್ವಕವಲ್ಲದ ತಪ್ಪನ್ನು ಅಭಿಮಾನಿಗಳು ಮನ್ನಿಸುತ್ತಾರೆಂದು ನಂಬಿದ್ದೇನೆ’ ಎಂದು ಕೇಳಿಕೊಂಡಿದ್ದಾರೆ. ಆದರೂ ಸಮಾಧಾನಗೊಳ್ಳದ ಅಪ್ಪು ಅಭಿಮಾನಿಗಳು ರಚಿತಾ ರಾಮ್ ಅವರಿಗೆ ಸಖತ್ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ:  ಅಪ್ಪುಗೆ ಅವಮಾನ ಮಾಡುವ ಉದ್ದೇಶ ಇರಲಿಲ್ಲ: ಪ್ರೇಮ್ ಕ್ಷಮೆ

     

    View this post on Instagram

     

    A post shared by Rachita Ram (@rachita_instaofficial)

    ಶುಕ್ರವಾರ ಏಕ್ ಲವ್ ಯಾ ಸಿನಿಮಾ ತಂಡ ಸಾಂಗ್ ರಿಲೀಸ್ ಕಾರ್ಯಕ್ರಮವನ್ನು ಏರ್ಪಡಿಸಿತ್ತು. ಈ ವೇಳೆ ಅಪ್ಪುಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಆದರೆ ಶ್ರದ್ಧಾಂಜಲಿ ವೇಳೆ ಅಪ್ಪು ಫೋಟೋ ಮುಂದೆ ನಟಿ ರಕ್ಷಿತಾ ಪ್ರೇಮ್ ಶಾಂಪೇನ್ ಚಿಮ್ಮಿಸಿದ್ದರು. ಈ ವೇಳೆ ಅಪ್ಪು ಅವರ ಫೋಟೋ ಎಲ್‍ಇಡಿ ಮೇಲೆ ಬಂದಿದೆ. ಈ ಸುದ್ದಿ ಪಬ್ಲಿಕ್ ಟಿವಿಯಲ್ಲಿ ಪ್ರಸಾರ ಆಗಿತ್ತು. ಇದನ್ನು ಗಮನಿಸಿದ ಸಾರಾ ಗೋವಿಂದ್ ಅವರು, ಅಪ್ಪು ಅಗಲಿಕೆ ನೋವಿನಿಂದ ಹೊರಬಂದಿಲ್ಲ. ಆದರೆ ಇಲ್ಲಿ ಅಪ್ಪು ಅವರಿಗೆ ಅವಮಾನ ಮಾಡಿದಂತಾಗಿದೆ. ಹೀಗಾಗಿ ಚಿತ್ರತಂಡ ಕೂಡಲೇ ಕ್ಷಮೆ ಕೇಳಬೇಕು ಎಂದು ಸೂಚನೆ ನೀಡಿದ್ದರು. ಅಂತೆಯೇ ಇದೀಗ ಪ್ರೇಮ್ ಹಾಗೂ ಅಕುಲ್ ಬಾಲಾಜಿ, ನಟಿ ರಕ್ಷಿತಾ ಪ್ರೇಮ್ ಸೇರಿದಂತೆ ಇಡೀ ಚಿತ್ರತಂಡ ಕ್ಷಮೆ ಕೇಳಿದೆ.

  • ತಾಂತ್ರಿಕ ಕಾರಣದಿಂದ ಎಡವಟ್ಟು ಆಗಿದೆ: ಅಕುಲ್ ಬಾಲಾಜಿ

    ತಾಂತ್ರಿಕ ಕಾರಣದಿಂದ ಎಡವಟ್ಟು ಆಗಿದೆ: ಅಕುಲ್ ಬಾಲಾಜಿ

    ಬೆಂಗಳೂರು: ತಾಂತ್ರಿಕ ಕಾರಣದಿಂದ ಎಡವಟ್ಟು ಆಗಿದೆ ಎಂದು ನಿರೂಪಕ ಅಕುಲ್ ಬಾಲಾಜಿ ಪಬ್ಲಿಕ್ ಟಿವಿ ಮೂಲಕ ರಾಜ್ಯದ ಜನತೆ ಬಳಿ ಕ್ಷಮೆ ಕೇಳಿದರು.

    ಅಪ್ಪುಗೆ ‘ಏಕ್ ಲವ್ ಯಾ’ ಚಿತ್ರತಂಡ ಅಪಮಾನ ಮಾಡಿದೆ ಎಂಬ ಆರೋಪ ಸಂಬಂಧ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅಕುಲ್ ಬಾಲಾಜಿ, ಇದನ್ನು ನಾವು ಬೇಕು ಎಂದು ಮಾಡಿಲ್ಲ. ತಾಂತ್ರಿಕ ಕಾರಣದಿಂದ ಸಣ್ಣ ಎಡವಟ್ಟು ಆಗಿದೆ. ಇದಕ್ಕೆ ರಾಜ್ಯದ ಜನತೆಗೆ ತಂಡದ ಪರವಾಗಿ ನಾನು ಕ್ಷಮೆಯನ್ನು ಕೇಳುತ್ತೇನೆ ಎಂದು ತಿಳಿಸಿದರು.

    ಯಾರು ಸಹ ಉದ್ದೇಶಪೂರ್ವಕವಾಗಿ ಮಾಡುವುದಿಲ್ಲ. ಅದು ಅಲ್ಲದೇ ಅಪ್ಪುವನ್ನು ಕಳೆದುಕೊಂಡು 15 ದಿನಗಳಾಗಿರುವ ಈ ಸಮಯದಲ್ಲಿ ಯಾರು ಈ ರೀತಿ ಮಾಡುವುದಿಲ್ಲ. ಆದರೆ ತಾಂತ್ರಿಕ ಕಾರಣದಿಂದ ಈ ಸಮಸ್ಯೆ ಸಂಭವಿಸಿದೆ. ಅಪ್ಪುವಿಗೆ ಶ್ರದ್ಧಾಂಜಲಿ ಅರ್ಪಿಸಿ ನಂತರ ನಾವು ಕಾರ್ಯಕ್ರಮವನ್ನು ಮಾಡಿದ್ದೇನೆ. ಎಲ್ಲರಿಗೂ ಈ ವಿಚಾರ ನೋವಾಗಿದೆ. ಅವರನ್ನು ಸ್ಫೂರ್ತಿಯಾಗಿ ತೆಗೆದುಕೊಂಡು ನಾವು ಮುಂದೆ ಹೋಗುತ್ತೇವೆ ಎಂದು ಈ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದೆವು ಎಂದು ತಿಳಿಸಿದರು. ಇದನ್ನೂ ಓದಿ: ಅಪ್ಪುಗೆ ಅವಮಾನ ಮಾಡುವ ಉದ್ದೇಶ ಇರಲಿಲ್ಲ: ಪ್ರೇಮ್ ಕ್ಷಮೆ

    ರಕ್ಷಿತಾ ಅವರು ಶ್ಯಾಂಪೇನ್ ಓಪನ್ ಮಾಡುವಾಗ ಸಾಂಗ್ ಬರಬೇಕಿತ್ತು. ಆದರೆ ಸಾಂಗ್ ಗೂ ಮೊದಲು ಪ್ರೇಮ್ ಅವರು ಅಪ್ಪು ಬಗ್ಗೆ ಅದ್ಭುತವಾಗಿ ಹೇಳಿದಂತಹ ಮಾತುಗಳು ಬರುತ್ತೆ ಎಂದು ತಿಳಿದುಕೊಂಡಿರಲಿಲ್ಲ. ಅದಕ್ಕೆ ಶ್ಯಾಂಪೇನ್ ಓಪನ್ ಮಾಡಿದ್ದು ಹೊಂದಾಣಿಕೆಯಾಗಿಲ್ಲ ಎಂದು ತಿಳಿಸಿದರು.

    ಸಣ್ಣ ಪುಟ್ಟ ದೋಷಗಳು ಇರುತ್ತೆ!

    ನಾನು ಕಾರ್ಯಕ್ರಮವನ್ನು ನಿರೂಪಣೆ ಮಾಡಲು ಹೋಗಿದ್ದೆ. ಇದು ಪೂರ್ತಿ ತಂಡ ನಿರ್ಧರಿಸಿದೆ. ಇದು ಲೈವ್ ಆಗಿದ್ದರಿಂದ ನಮ್ಮ ಕೈಯಲ್ಲಿ ಏನೂ ಇರಲಿಲ್ಲ. ನಾವು ರೆಕಾರ್ಡ್ ಶೋ ಆಗಿದ್ದರೆ ಏನಾದರೂ ಮಾಡಬಹುದಿತ್ತು. ಎಲ್ಲ ಕಾರ್ಯಕ್ರಮದಲ್ಲಿಯೂ ಸಣ್ಣ ಪುಟ್ಟ ದೋಷಗಳು ಇರುತ್ತೆ. ರೆಕಾರ್ಡ್ ಆಗಿದ್ದರೆ ಎಡಿಟಿಂಗ್ ಸಮಯದಲ್ಲಿ ಬದಲಾವಣೆ ಮಾಡುತ್ತಾರೆ. ಆದರೆ ಇದು ಲೈವ್ ಆಗಿದ್ದರಿಂದ ಆ ರೀತಿ ಮಾಡಲು ಸಾಧ್ಯವಾಗಲಿಲ್ಲ. ಇದು ತಾಂತ್ರಿಕ ಕಾರಣದಿಂದ ಆಗಿರುವ ತಪ್ಪಾಗಿದೆ ಎಂದು ತಿಳಿಸಿದರು.

    ಒಳ್ಳೆಯ ಗೆಳೆಯ

    ಯಾರಿಗೂ ಅಪ್ಪು ಅವರನ್ನು ಮರೆಯುವುದಕ್ಕೆ ಆಗುವುದಿಲ್ಲ. ಅವರು ನನ್ನ ಒಳ್ಳೆಯ ಗೆಳೆಯ ಸಹ ಆಗಿದ್ದರು. ಏನೇ ಆದರೂ ಕೆಲಸ ಮಾಡಬೇಕು, ಮುಂದೆ ಹೋಗಬೇಕು ಎಂದು ಅವರು ಯಾವಾಗಲೂ ಹೇಳುತ್ತಿದ್ದರು. ಆ ಒಂದು ಮಾತನ್ನು ತೆಗೆದುಕೊಂಡು ನಾವು ಮುಂದೆ ಹೋದೆವು ಎಂದು ನೆನೆದರು.

    ಚಿಯರ್ಸ್ ಮಾಡಿದ ತಕ್ಷಣ ಸಾಂಗ್ ಬರುತ್ತೆ ಎಂದುಕೊಂಡಿದ್ದೆವು. ಆದರೆ ಬೇರೆ ಬಂದಿದ್ದರಿಂದ ಅದು ಮ್ಯಾಚ್ ಆಗಿಲ್ಲ. ನಾವು ಯಾರು ಬೇಕು ಎಂದು ಈ ರೀತಿ ಮಾಡಿಲ್ಲ. ನಾವು ಅಪ್ಪುಗೆ ತುಂಬಾ ಹತ್ತಿರದವರು. ಎಲ್ಲರೂ ಅರ್ಥ ಮಾಡಿಕೊಳ್ಳುತ್ತಾರೆ ಎಂದುಕೊಂಡಿದ್ದೇವೆ. ಈ ರೀತಿ ಆಗಬಾರದು ಎಂದು ನಾವು ತಿಳಿದುಕೊಳ್ಳುತ್ತೇವೆ ಆದರೆ ಆಗಿದೆ. ಅದಕ್ಕೆ ನಾವು ಕ್ಷಮೆ ಕೇಳುತ್ತೇನೆ ಎಂದರು. ಇದನ್ನೂ ಓದಿ: ಅಪ್ಪು ಭಾವಚಿತ್ರಕ್ಕೆ ಮುತ್ತಿಟ್ಟು ಅಜ್ಜಿ ಭಾವುಕ – ವೀಡಿಯೋ ವೈರಲ್

    ‘ಏಕ್ ಲವ್ ಯಾ’ ಸಿನಿಮಾದ ಸಾಂಗ್ ರಿಲೀಸ್ ಕಾರ್ಯಕ್ರಮದಲ್ಲಿ ಶ್ಯಾಂಪೇನ್ ಬಾಟಲ್ ಓಪನ್ ಮಾಡಬೇಕಾದಾಗ ಪುನೀತ್ ಅವರ ಫೋಟೋ ಬ್ಯಾಗ್ರೌಂಡ್ ನಲ್ಲಿ ಬಂದಿದ್ದು, ಈ ಹಿನ್ನೆಲೆ ಅಭಿಮಾನಿಗಳು ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಇದು ಶ್ರದ್ಧಾಂಜಲಿ ಕಾರ್ಯಕ್ರಮನಾ ಅಥವಾ ಪಾರ್ಟಿನಾ ಎಂದು ವಿರೋಧವನ್ನು ವ್ಯಕ್ತಪಡಿಸಿ ಸಿನಿಮಾ ತಂಡದವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಲಾಗಿತ್ತು. ಈ ಹಿನ್ನೆಲೆ ತಂಡ ಕ್ಷಮೆಯನ್ನು ಕೇಳುತ್ತಿದ್ದು, ಇದು ಬೇಕೆಂದು ಮಾಡಿಲ್ಲ ಎಂದು ಹೇಳುತ್ತಿದ್ದಾರೆ.

  • ಏಕ್ ಲವ್ ಯಾ ಸಿನಿಮಾ ತಂಡದಿಂದ ಅಪ್ಪುಗೆ ಅವಮಾನ- ಶಾಂಪೇನ್ ಚಿಮ್ಮಿಸಿ ಸಂಭ್ರಮ

    ಏಕ್ ಲವ್ ಯಾ ಸಿನಿಮಾ ತಂಡದಿಂದ ಅಪ್ಪುಗೆ ಅವಮಾನ- ಶಾಂಪೇನ್ ಚಿಮ್ಮಿಸಿ ಸಂಭ್ರಮ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರ ಫೋಟೋ ಮುಂದೆ ‘ಏಕ್ ಲವ್ ಯಾ’ ಸಿನಿಮಾ ತಂಡ ಶಾಂಪೇನ್ ಚಿಮ್ಮಿಸಿ ಸಂಭ್ರಮಮಾಚರಣೆ ಮಾಡಿರುವುದು ಅಪ್ಪು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

    ಏಕ್ ಲವ್ ಯಾ ಸಿನಿಮಾ ತಂಡ ಸಾಂಗ್ ರಿಲೀಸ್ ಕಾರ್ಯಕ್ರಮವನ್ನು ಆಯೋಜಿಸಿತ್ತು, ಈ ವೇಳೆ ಅಪ್ಪುಗೆ ಶ್ರದ್ಧಾಂಜಲಿ ಅರ್ಪಿಸಲಾಯಿತ್ತು. ಆದರೆ ಶ್ರದ್ಧಾಂಜಲಿ ವೇಳೆ ಅಪ್ಪು ಫೋಟೋ ಮುಂದೆ ನಟಿ ರಕ್ಷಿತಾ ಶಾಂಪೇನ್ ಚಿಮ್ಮಿಸಿದ್ದಾರೆ. ಈ ವೇಳೆ ಅಪ್ಪು ಫೋಟೋ ಎಲ್ ಇಡಿ ಮೇಲೆ ಬಂದಿದೆ. ಈ ಕುರಿತಾಗಿ ಚಿತ್ರತಂಡ ಕ್ಷಮೆ ಕೇಳ ಬೇಕು ಎಂದು ಸಾರಾಗೋವಿಂದ್ ಅವರು  ಹೇಳಿದ್ದರು.

    ಅಪ್ಪು ಅಗಲಿಕೆ ನೋವಿನಿಂದ ಹೊರ ಬಂದಿಲ್ಲ. ಆದರೆ ಏಕ್ ಲವ್ ಯಾ ಸಿನಿಮಾ ತಂಡ ಅಪ್ಪು ಫೋಟೋ ಮುಂದೇ ಶಾಂಪೇನ್ ಚಿಮ್ಮಿಸಿ ಸಂಭ್ರಮಾಚರಣೆ ಮಾಡಿ ಎಡವಟ್ಟು ಮಾಡಿಕೊಂಡಿದೆ. ಶಾಂಪೇನ್ ಚಿಮ್ಮಿಸುವ ವೇಳೆ ಹಾಡು ಪ್ರಸಾರವಾಗಿದೆ. ಇದರಿಂದ ಅಪ್ಪು ಫೋಟೋಗೆ ಅವಮಾನ ಮಾಡಿದಂತಾಗಿದೆ. ಈ ಕುರಿತಾಗಿ ಎಲ್ಲೆಡೆ ಆಕ್ರೋಶವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಅಪ್ಪು ನೇತ್ರದಾನದಿಂದ ಇನ್ನೂ 10 ಮಂದಿಗೆ ದೃಷ್ಟಿ ನೀಡಲು ವೈದ್ಯರ ಪ್ರಯತ್ನ!

    ಈ ಕುರಿತಾಗಿ ನಿರ್ದೇಶಕ ಪ್ರೇಮ್ ಪಬ್ಲಿಕ್ ಟಿವಿ ಮೂಲಕವಾಗಿ ಕ್ಷಮೆ ಕೇಳಿದ್ದಾರೆ. ನಮಗೆ ಗೊತ್ತಿಲ್ಲದೆ ತಪ್ಪು ಆಗಿದೆ. ಅಪ್ಪುಗೆ ಅವಮಾನ ಮಾಡುವ ಉದ್ದೇಶ ಇರಲಿಲ್ಲ. ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ ಎಂದಿದ್ದಾರೆ.

  • ಪ್ರೇಮಿಗಳ ದಿನಕ್ಕೆ ಪ್ರೇಮ್ ಉಡುಗೊರೆ – ‘ಏಕ್ ಲವ್ ಯಾ’ ಲಿರಿಕಲ್ ಸಾಂಗ್ ರಿಲೀಸ್

    ಪ್ರೇಮಿಗಳ ದಿನಕ್ಕೆ ಪ್ರೇಮ್ ಉಡುಗೊರೆ – ‘ಏಕ್ ಲವ್ ಯಾ’ ಲಿರಿಕಲ್ ಸಾಂಗ್ ರಿಲೀಸ್

    ಬೆಂಗಳೂರು: ಸ್ಟಾರ್ ಡೈರೆಕ್ಟರ್ ಪ್ರೇಮ್ ನಿರ್ದೇಶನದ ‘ಏಕ್ ಲವ್ ಯಾ’ ಸೆಟ್ಟೇರಿದ ದಿನದಿಂದಲೂ ಸಖತ್ ಸುದ್ದಿಯಲ್ಲಿರುವ ಸಿನಿಮಾ. ಬಹಳ ವರ್ಷಗಳ ನಂತರ ಶೋಮ್ಯಾನ್ ಪ್ರೇಮ್ ಲವ್ ಸಬ್ಜೆಕ್ಟ್ ಕೈಗೆತ್ತಿಕೊಂಡಿದ್ದು ಮತ್ತೊಂದು ಸೂಪರ್ ಡೂಪರ್ ಹಿಟ್ ನೀಡುವ ಎಲ್ಲಾ ಲಕ್ಷಣಗಳೂ ಕಂಡು ಬರುತ್ತಿದ್ದು, ಪ್ರೇಮಿಗಳ ದಿನದಂದು ಏಕ್ ಲವ್ ಯಾ ಲಿರಿಕಲ್ ಸಾಂಗ್ ಬಿಡುಗಡೆ ಮಾಡಿದ್ದಾರೆ.

    ಈ ಬಾರಿ ತಮ್ಮ ಕುಟುಂಬದ ಸದಸ್ಯನಿಗೆ ಪ್ರೇಮ್ ಆಕ್ಷನ್ ಕಟ್ ಹೇಳುತ್ತಿದ್ದು, ರಕ್ಷಿತಾ ಪ್ರೇಮ್ ಸಹೋದರ ರಾಣಾ ಈ ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ಗೆ ನಾಯಕ ನಟನಾಗಿ ಎಂಟ್ರಿ ಕೊಡುತ್ತಿದ್ದಾರೆ. ಮೇಕಿಂಗ್ ಟೀಸರ್ ಮೂಲಕ ಸಿನಿಮಾದ ಸಣ್ಣ ಝಲಕ್ ತೋರಿಸಿ ನಿರೀಕ್ಷೆ ಹುಟ್ಟಿಸಿದ್ದ ‘ಏಕ್ ಲವ್ ಯಾ’ ಚಿತ್ರತಂಡ. ಇದೀಗ ಪ್ರೇಮಿಗಳ ದಿನಕ್ಕೆ ಉಡುಗೊರೆಯಾಗಿ ಚಿತ್ರದ ಯಾರೇ ಯಾರೇ ಲಿರಿಕಲ್ ಹಾಡು ಬಿಡುಗಡೆ ಮಾಡಿ ಮ್ಯೂಜಿಕಲ್ ಟ್ರೀಟ್ ನೀಡಿದೆ.

    ನಿರ್ದೇಶಕ ಪ್ರೇಮ್ ಸಾಹಿತ್ಯದಲ್ಲಿ ಅರಳಿರುವ ಈ ಹಾಡಿಗೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಮ್ಯೂಸಿಕ್ ಮ್ಯಾಜಿಕ್, ಅರ್ಮಾನ್ ಮಲ್ಲಿಕ್ ದನಿ ಬೆರೆತು ಹಾಡಿನ ಶ್ರೀಮಂತಿಕೆಯನ್ನು ದುಪ್ಪಟ್ಟು ಮಾಡಿದೆ. ಸದ್ಯ ಸಖತ್ ವೈರಲ್ ಆಗುತ್ತಿರುವ ಈ ಹಾಡು ಪ್ರೇಮಿಗಳ ಆಂಥಮ್ ಆಗುತ್ತಿದೆ.

    ರಕ್ಷಿತಾಸ್ ಫಿಲ್ಮಂ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಸಿನಿಮಾಗೆ ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಬಂಡವಾಳ ಹೂಡಿದ್ದಾರೆ. ಅದ್ಧೂರಿಯಾಗಿ ಮೂಡಿ ಬರ್ತಿರುವ ‘ಏಕ್ ಲವ್ ಯಾ’ ಸಿನಿಮಾದಲ್ಲಿ ನಾಯಕಿಯರಾಗಿ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ, ರಚಿತಾ ರಾಮ್ ನಟಿಸಿದ್ದಾರೆ. ನಾಲ್ಕು ಭಾಷೆಯಲ್ಲಿ ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ಮಹೆನ್ ಸಿಂಹ ಕ್ಯಾಮೆರಾ ನಿರ್ದೇಶನವಿದೆ.

  • ಸಿಗರೇಟ್ ಸೇದೋದಂತೆ, ಲಿಪ್‍ಕಿಸ್ ಅಂತೆ – ರಚಿತಾ ವಿರುದ್ಧ ಹುಚ್ಚ ವೆಂಕಟ್ ಫೈರ್

    ಸಿಗರೇಟ್ ಸೇದೋದಂತೆ, ಲಿಪ್‍ಕಿಸ್ ಅಂತೆ – ರಚಿತಾ ವಿರುದ್ಧ ಹುಚ್ಚ ವೆಂಕಟ್ ಫೈರ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಚಿತಾ ರಾಮ್ ವಿರುದ್ಧ ಫೈರಿಂಗ್ ಸ್ಟಾರ್ ನಟ ಹುಚ್ಚ ವೆಂಕಟ್ ವಾಗ್ದಾಳಿ ನಡೆಸಿದ್ದಾರೆ.

    ಪ್ರೇಮ್ ನಿರ್ದೇಶನದ ‘ಏಕ್ ಲವ್ ಯಾ’ ಸಿನಿಮಾದ ಟ್ರೈಲರ್ ಪ್ರೇಮಿಗಳ ದಿನದಂದು ಬಿಡುಗಡೆಯಾಗಿದ್ದು, ಭಾರೀ ಸದ್ದು ಮಾಡುತ್ತಿದೆ. ಈ ಟ್ರೈಲರ್ ವಿಚಾರವಾಗಿ ಮಾತನಾಡಿರುವ ಹುಚ್ಚ ವೆಂಕಟ್ ರಚಿತಾ ರಾಮ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಟ್ರೈಲರ್‍ನಲ್ಲಿ ನಾಯಕ ರಾನಾ ಜೊತೆಗೆ ರಚಿತಾ ರಾಮ್ ಲಿಪ್‍ಲಾಕ್ ಹಾಗೂ ಸಿಗರೇಟ್ ಸೇದುವ ದೃಶ್ಯ ನೋಡಿದ ವೆಂಕಟ್ ವಿಡಿಯೋ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ. ಜೊತೆಗೆ ನಿರ್ದೇಶಕ ಪ್ರೇಮ್ ಅವರಿಗೆ ಒಂದಿಷ್ಟು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಧಮ್ ಎಳೆದು, ಲಿಪ್ ಕಿಸ್ ಕೊಟ್ಟು ಕಣ್ಣೀರಿಟ್ಟ ರಚಿತಾ ರಾಮ್

     ವೆಂಕಟ್ ಹೇಳಿದ್ದೇನು?
    ನನ್ ಮಗಂದ್ ಡೈಲಾಗ್… ಇದು ರಚಿತಾ ರಾಮ್ ಅವರಿಗೆ ಹೇಳುತ್ತಿರೋದು. ಯಾಕ್ರೀ.. ಯಾಕ್ರೀ.. ಈ ಥರಹದ ಪಾತ್ರಗಳನ್ನು ಮಾಡಿ ಜನರ ಮನಸ್ಸನ್ನು ಹಾಳು ಮಾಡ್ತೀರಾ? ನೀವು ಮಾಡಿರುವುದು ಏನು? ಸಿಗರೇಟ್ ಸೇದುವುದಂತೆ, ಲಿಪ್‍ಕಿಸ್ ಅಂತೆ… ಇದರಿಂದ ಏನಾಗುತ್ತೆ? ಮಕ್ಕಳಿಂದ ಹಿಡಿದು ಹೆಣ್ಣು ಮಕ್ಕಳು ಚಿತ್ರಮಂದಿರದಲ್ಲಿ ಕುಳಿತು ಸಿನಿಮಾ ನೋಡೋಕಾಗುತ್ತಾ? ಹೆಣ್ಣು ಮಕ್ಕಳಿಗೆ ಮುಜುಗರ ಆಗುವುದಿಲ್ಲವಾ? ಡೈರೆಕ್ಟರ್ ಕೊಟ್ರೂ ಅದಕ್ಕೆ ಮಾಡಿದ್ವಿ ಎಂದು ಎಲ್ಲವನ್ನೂ ಡೈರೆಕ್ಟರ್ ಮೇಲೆ ಹಾಕ್ತೀರಾ. ನಿಮಗೆ ಇಷ್ಟವಿಲ್ಲ ಅಂದರೆ ಡೈರೆಕ್ಟರ್ ಬಲವಂತ ಮಾಡಲು ಸಾಧ್ಯವಿಲ್ಲ. ಯಾಕ್ ಈ ಥರಾ ಮಾಡ್ತೀರಾ? ಇದನ್ನೂ ಓದಿ: “ಹೆಣ್ಣು ಮಕ್ಳು ಬಾರ್‌ಗೆ ಹೋಗ್ಬಾರ್ದಾ”: ರಚಿತಾ ರಾಮ್

    ಕಳೆದ ಸಿನಿಮಾದಲ್ಲೂ (ಐ ಲವ್ ಯೂ) ಹೀಗೆ ಮಾಡಿದ್ರಿ. ಈ ಸಿನಿಮಾದಲ್ಲೂ ಮಾಡಿದ್ದೀರಾ. ನಿಮ್ಮ ಪ್ರತಿಭೆಯನ್ನು ತೋರಿಸೋಕೆ ಬೇರೆ ದಾರಿ ಇಲ್ವಾ? ನಿಮಗೆ ಪ್ರತಿಭೆ ಇದ್ದರೆ ಬೇರೆ ಕಡೆಗೆ ತೋರಿಸಿ. ಹೀಗೆ ಮಾಡೋದನ್ನು ಪ್ರತಿಭೆ ಅಂತರಾ? ನನ್ ಮಗಂದ್ ತೂ….

    ಇಂತ ಸೀನ್‍ಗಳಿಂದ ಎಷ್ಟೋ ಜನ ಹಾಳಾಗುತ್ತಾರೆ ಅಂತ ನಿಮಗೆ ಗೊತ್ತಾ? ಒಂದು ಗಂಡಸು ಡ್ರಿಂಕ್ಸ್ ಮಾಡಿ ಸಿಗರೇಟ್ ಸೇದಿದ್ರೇನೆ ತಪ್ಪು. ಅಂತಹದ್ರಲ್ಲಿ ನೀವು ಸಿಗರೇಟ್ ಸೇದೋದು, ಲಿಪ್ ಕಿಸ್ ಮಾಡೋದು ಅಂದ್ರೆ ಏನ್ ಅರ್ಥ? ಇಲ್ಯಾರೂ ಕೇಳೋರು ಇಲ್ವಾ? ಇದರಿಂದ ನಿಮ್ಮ ಮನೆಯಲ್ಲಿನ ಮಕ್ಕಳಿಂದ ಹಿಡಿದು ಪ್ರತಿಯೊಬ್ಬರು ನೋವು ಅನುಭವಿಸುತ್ತಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ.

    ಈ ಹಿಂದೆ ಕನ್ನಡ ಇಂಡಸ್ಟ್ರಿ ಅಂದರೆ ಹೇಗಿತ್ತು? ಕನ್ನಡ ಇಂಸ್ಟ್ರಿ ಅಂದ್ರೆ ಒಂದೇ ಒಂದು ಅಶ್ಲೀಲ ಇಲ್ಲ ಎನ್ನುವಂತಿತ್ತು. ಇವತ್ತು ಏನೆಲ್ಲಾ ಆಗಿದೆ ನೋಡಿ. ಪ್ರೇಮ್ ನಿನಗೆ ಇದು ಬೇಕಿತ್ತಾ? ಈ ರೀತಿಯ ಶಾಟ್ ಇಡೋದು ಬೇಕಿತ್ತಾ? ಇದ್ರಿಂದ ನೀನು ಜನರಿಗೆ ತೋರಿಸೋದಾದ್ರೂ ಏನು? ಆ ದೃಶ್ಯವನ್ನು ತೆಗೆದು ಹಾಕು.

    ರಚಿತಾ ರಾಮ್ ಅವ್ರೆ ನಾಳೆ ನೀವು ಮದ್ವೆ ಆಗ್ಬೇಕು. ನಿಮ್ಮ ಗಂಡ ಇದನ್ನ ನೋಡಬೇಕು. ನೋಡಿ ನಿಮಗೇನ್ ಅಂತಾನೆ. ಬೇಶ್ ಎನ್ನುತ್ತಾನಾ? ಚಿಕ್ಕ ಕಾರಣ ಸಿಕ್ರೆ ಸಾಕು ಡಿವೋರ್ಸ್ ಕೊಡ್ತಾರೆ. ಅಂಥ್ರದಲ್ಲಿ ನೋಡಿ ನೀವು ಏನ್ ಮಾಡ್ತಾ ಇದ್ದೀರಾ? ಸಿನಿಮಾ ರಂಗವೇ ನಿಮಗೆ ಕೊನೆಯಲ್ಲ. ನೀವು ಮದ್ವೆ ಆಗ್ಬೇಕು, ತಾಯಿ ಆಗಬೇಕು ನೆನಪಿರಲಿ.

    ರಚಿತಾ ರಾಮ್ ಅವ್ರ ತಂದೆ-ತಾಯಿಗೂ ನನ್ನದೊಂದು ವಿನಂತಿ. ಇನ್ಮೇಲೆ ನಿಮ್ಮ ಮಗಳಿಗೆ ನೀವು ಬುದ್ಧಿ ಹೇಳಿ. ನಾನು ಎಲ್ಲ ರೀತಿ ಹೇಳಿ ಮುಗಿಸಿದ್ದೇನೆ. ಲಿಪ್‍ಕಿಸ್ ಸೀನ್‍ಗಳನ್ನು ನಿಮಗೆ ನೋಡೋಕೆ ಆಗುತ್ತಾ? ಈ ವಿಚಾರದಲ್ಲಿ ನಿಮ್ಮನ್ನ ಎಳೆದಿದ್ದಕ್ಕೆ ತಪ್ಪು ತಿಳಿಯಬೇಡಿ.

    ಸಿನಿಮಾದಿಂದ ಲಿಪ್‍ಲಾಕ್, ಸಿಗರೇಟ್ ಸೇದುವ ಸೀನ್ ತೆಗೆದುಹಾಕಬೇಕು. ಕನ್ನಡ ಇಂಡಸ್ಟ್ರಿ ಇಷ್ಟು ಕೆಟ್ಟ ಮಟ್ಟಕ್ಕೆ ಇಳಿಯುವುದು ನನಗೆ ಇಷ್ಟವಿಲ್ಲ. ಇಲ್ಲಿ ಕಲೆಗೆ ಬೆಲೆ ಕೊಡಲಾಗುತ್ತದೆ. ಹೆಣ್ಣು ಮಕ್ಕಳು ಡ್ರಿಂಕ್ಸ್ ಮಾಡೋದು, ಪಾರ್ಟಿ ಮಾಡೋದು ಸಿರಿಯಲ್‍ಗಳಲ್ಲೂ ಬಂದಿದೆ. ಈ ಬಗ್ಗೆ ಯಾರೂ ಯಾಕೆ ಹೋರಾಟ ಮಾಡುತ್ತಿಲ್ಲ?

    ಆ ಬಂದು ಸೀನ್ ತೆಗೆದು ಹಾಕಿದ್ರೆ ಸಿನಿಮಾ ಓಡಲ್ವಾ? ಸಿನಿಮಾದ ಹೀರೋಗೆ ಅಣ್ಣನಾಗಿ ಹೇಳುತ್ತಿದ್ದೇನೆ, ನೀನು ಫಸ್ಟ್ ಟೈಮ್ ನಾಯಕನಾಗಿ ಕನ್ನಡ ಇಂಡಸ್ಟ್ರಿ ಬರುತ್ತಿದ್ದಿಯಾ. ಉತ್ತಮ ಸಿನಿಮಾದೊಂದಿಗೆ ಕಾಲಿಡು. ನಾನು ಮಾಡುವ ಸಿನಿಮಾದಲ್ಲಿ ಐಟಂ ಸಾಂಗ್ ಹಾಕ್ತಾರೆ ಎನ್ನುವ ಭಯದಿಂದ ಅನೇಕರು ನನ್ನ ಕೈಬಿಟ್ಟಿದ್ದಾರೆ. ಯಾಕಂದ್ರೆ ನಾನು ಸಿನಿಮಾ ಕಥೆಯನ್ನು ಸಂಪೂರ್ಣವಾಗಿ ಓದಿ ಓಕೆ ಎನ್ನುತ್ತೇನೆ. ಕೆಟ್ಟ ಸೀನ್ ಇದ್ರೆ ಸಿನಿಮಾ ಬೇಡ ರಿಜೆಕ್ಟ್ ಮಾಡ್ತೀನಿ.

    ರಚಿತಾ ರಾಮ್ ಅವ್ರೆ ಎಷ್ಟೋ ನಟಿಯರ ಜೀವನ ಹಾಳಾಗಿದೆ. ನೀವು ಅರ್ಥ ಮಾಡಿಕೊಂಡು ಪಾತ್ರ ನಿರ್ವಹಿಸಿ.

  • “ಹೆಣ್ಣು ಮಕ್ಳು ಬಾರ್‌ಗೆ ಹೋಗ್ಬಾರ್ದಾ”: ರಚಿತಾ ರಾಮ್

    “ಹೆಣ್ಣು ಮಕ್ಳು ಬಾರ್‌ಗೆ ಹೋಗ್ಬಾರ್ದಾ”: ರಚಿತಾ ರಾಮ್

    – ಸಿಗರೇಟ್‍ನಲ್ಲಿಯೂ ಕಿಕ್ ಇದೆ

    ಬೆಂಗಳೂರು: ಡಿಂಪಲ್ ಬೆಡಗಿ ರಚಿತಾ ರಾಮ್ ‘ಏಕ್ ಲವ್ ಯಾ’ ಚಿತ್ರದಲ್ಲಿ ಸಿಗರೇಟ್ ಸೇದುವ ಮೂಲಕ ಹಾಗೂ ಲಿಪ್ ಕಿಸ್ ಮಾಡುವ ಮೂಲಕ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಇದೀಗ ಹೆಣ್ಣು ಮಕ್ಕಳು ಬಾರ್‌ಗೆ ಹೋಗಬಾರದಾ ಎಂದು ಹೇಳಿದ್ದಾರೆ.

    ಪ್ರೇಮಿಗಳ ದಿನದಂದು ರಚಿತಾ ಅಭಿನಯದ ‘ಏಕ್ ಲವ್ ಯಾ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಚಿತ್ರದ ಟೀಸರ್ ಬಿಡುಗಡೆಯಾದ ತಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ರಚಿತಾ ಅವರು ನಟಿಸಿದ ಬೋಲ್ಡ್ ದೃಶ್ಯಗಳು ವೈರಲ್ ಆಗಿದೆ. ಇದನ್ನೂ ಓದಿ: ಧಮ್ ಎಳೆದು, ಲಿಪ್ ಕಿಸ್ ಕೊಟ್ಟು ಕಣ್ಣೀರಿಟ್ಟ ರಚಿತಾ ರಾಮ್

    ಟೀಸರ್ ಬಿಡುಗಡೆಯಾದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಚಿತಾ, ಈ ಚಿತ್ರದಲ್ಲಿ ನನಗೆ ಎರಡು ಮೇಜರ್ ಹಾಡಿದೆ. ಒಂದು ಎಣ್ಣೆ ಹಾಡು ಇದೆ. ಗಂಡು ಮಕ್ಕಳಿಗೆ ಮಾತ್ರ ಬ್ರೇಕಪ್ ಇರಲ್ಲ, ಹೆಣ್ಣು ಮಕ್ಕಳಿಗೂ ಬ್ರೇಕಪ್ ಆಗುತ್ತೆ. ಗಂಡು ಮಕ್ಕಳು ಮಾತ್ರ ಬಾರ್‍ಗೆ ಹೋಗಬೇಕಾ? ಹೆಣ್ಣು ಮಕ್ಕಳು ಬಾರ್‌ಗೆ ಹೋಗಬಾರದಾ? ಹೆಣ್ಣು ಮಕ್ಕಳು ಬಾರ್‍ಗೆ ಹೋಗಬಾರದು ಎಂದು ಬೋರ್ಡ್ ಹಾಕಿದ್ದಾರಾ? ಎಂಬ ಹಾಡಿಗೆ ನಾನು ಡ್ಯಾನ್ಸ್ ಮಾಡಿದ್ದೇನೆ ಎಂದರು.

    ಈ ಚಿತ್ರದಲ್ಲಿ ನಾನು ಮಾಡದಿರುವ ಪಾತ್ರದಲ್ಲಿ ನಟಿಸಿದ್ದೇನೆ. ನಾನು ಇದುವರೆಗೂ ಯಾವುದೇ ಚಿತ್ರದಲ್ಲಿ ಸಿಗರೇಟ್ ಸೇದಿಲ್ಲ. ಈ ಚಿತ್ರದ ಸೀನ್‍ವೊಂದರಲ್ಲಿ ಸಿಗರೇಟ್ ಸೇದಬೇಕು ಎಂದಾಗ ಜನರು ನೋಡಿದ ತಕ್ಷಣ ‘ಇವಳು ದಿನಾ ಸಿಗರೇಟ್ ಸೇದುತ್ತಾಳಾ’ ಎಂದು ಎನಿಸಬೇಕು. ಏಕೆಂದರೆ ಸೀನ್ ನೋಡಿದ ತಕ್ಷಣ ಜನರಿಗೆ ಇಷ್ಟವಾಗಬೇಕು. ಏನೇ ಮಾಡೋಕ್ಕೆ ಬಂದರೆ ಅದನ್ನು ಅಚ್ಚುಕಟ್ಟಾಗಿ ಕಲಿತು ಮಾಡಬೇಕು ಎಂಬುದು ನನ್ನ ಆಸೆ ಎಂದು ರಚಿತಾ ಸಿಗರೇಟ್ ದೃಶ್ಯದ ಬಗ್ಗೆ ಮಾತನಾಡಿದರು.

    ಈ ಚಿತ್ರದಲ್ಲಿ ನಾನು ಎರಡು ಸಿಗರೇಟ್ ಪ್ಯಾಕೇಟ್ ವೇಸ್ಟ್ ಮಾಡಿದ್ದೇನೆ. ನಾನು ಮೊದಲ ಬಾರಿಗೆ ಸಿಗರೇಟ್ ಸೇದಿದಾಗ 5 ನಿಮಿಷದವರೆಗೂ ಕೆಮ್ಮಿದ್ದೆನೆ. ಆಗ ನನಗೆ ಸಿಗರೇಟ್‍ನಲ್ಲಿಯೂ ಕಿಕ್ ಇದೆ ಎಂಬುದು ತಿಳಿಯಿತು. ಚಿತ್ರದಲ್ಲಿ ಸಿಗರೇಟ್ ಸೇದಬೇಕು ಎಂದಾಗ ಚಿತ್ರತಂಡ ಅದನ್ನು ಹೇಗೆ ಹಿಡಿದುಕೊಳ್ಳಬೇಕು. ಹೇಗೆ ಸೇದಬೇಕು ಎಂಬುದು ಹೇಳಿಕೊಟ್ಟಿದ್ದರು ಎಂದು ರಚಿತಾ ತಿಳಿಸಿದರು.

    ಇದೇ ವೇಳೆ ಮಾತನಾಡಿದ ಅವರು, ನಿರ್ದೇಶಕ ಪ್ರೇಮ್ ಅವರ ಜೊತೆ ಇದು ನನ್ನ ಮೊದಲ ಚಿತ್ರ. ಪ್ರೇಮ್ ಅವರು ನನಗೆ ಒಳ್ಳೆಯ ಪಾತ್ರವನ್ನು ನೀಡಿದ್ದಾರೆ. ಪ್ರೇಮ್ ಅವರ ನಿರ್ದೇಶನದ ‘ಕರಿಯಾ’, ‘ಜೋಗಿ’, ‘ಎಕ್ಸ್‌ಕ್ಯೂಸ್ ಮಿ’ ನನಗೆ ತುಂಬಾ ಇಷ್ಟ. ಅದರಲ್ಲಿ ಎಕ್ಸ್‌ಕ್ಯೂಸ್ ಮಿ ಚಿತ್ರ ತುಂಬಾನೇ ಇಷ್ಟ. ಈ ಹಿಂದೆ ‘ದಿ-ವಿಲನ್’ ಚಿತ್ರದಲ್ಲಿ ಒಂದು ಹಾಡಿನಲ್ಲಿ ನಾನು ಚಿಕ್ಕ ದೃಶ್ಯದಲ್ಲಿ ನಟಿಸಿದೆ. ಈಗ ಪ್ರೇಮ್ ಅವರು ಈ ಚಿತ್ರದ ಬಗ್ಗೆ ಹೇಳಿದ್ದರು. ಆಗ ನಾನು ಈ ಚಿತ್ರವನ್ನು ಒಪ್ಪಿಕೊಂಡೆ ಎಂದು ರಚಿತಾ ಹೇಳಿದರು.

    ಪ್ರೇಮ್ ಅವರ ನಿರ್ದೇಶನದಲ್ಲಿ ಕೆಲಸ ಮಾಡಬೇಕೆಂಬ ತುಂಬಾ ಆಸೆ ಇತ್ತು. ಪ್ರೇಮ್ ಅವರು ಪಾತ್ರಗಳನ್ನು ತುಂಬಾ ಚೆನ್ನಾಗಿ ಬರೆಯುತ್ತಾರೆ. ಈ ಚಿತ್ರದಲ್ಲಿ ನನ್ನ ಪಾತ್ರ ಕೂಡ ತುಂಬಾ ಚೆನ್ನಾಗಿತ್ತು. ಹಾಗಾಗಿ ನಾನು ಈ ಚಿತ್ರವನ್ನು ಒಪ್ಪಿಕೊಂಡೆ. ಇದರ ಜೊತೆ ರಕ್ಷಿತಾ ಅವರ ಬ್ಯಾನರಿನಲ್ಲಿ ಕೆಲಸ ಮಾಡಲು ಖುಷಿಯಿದೆ. ಈ ಮೊದಲು ರಕ್ಷಿತಾ ಅವರು ತಮ್ಮ ಬ್ಯಾನರಿನಲ್ಲಿ ‘ಜೋಗಯ್ಯ’ ಸಿನಿಮಾವನ್ನು ಮಾಡಿದ್ದು, ‘ಏಕ್ ಲವ್ ಯಾ’ ಅವರ ಎರಡನೇ ಚಿತ್ರ ಎಂದರು.

  • ಧಮ್ ಎಳೆದು, ಲಿಪ್ ಕಿಸ್ ಕೊಟ್ಟು ಕಣ್ಣೀರಿಟ್ಟ ರಚಿತಾ ರಾಮ್

    ಧಮ್ ಎಳೆದು, ಲಿಪ್ ಕಿಸ್ ಕೊಟ್ಟು ಕಣ್ಣೀರಿಟ್ಟ ರಚಿತಾ ರಾಮ್

    ಬೆಂಗಳೂರು: ಐ ಲವ್ ಯು ಸಿನಿಮಾದಲ್ಲಿ ಸಖತ್ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡು ಡಿಂಪಲ್ ಕ್ವೀನ್ ರಚಿತಾ ರಾಮ್ ಸಖತ್ ಸದ್ದು ಮಾಡಿದ್ದರು. ಈಗ ಮತ್ತೆ ತಮ್ಮ ಹೊಸ ಸಿನಿಮಾದಲ್ಲಿ ಹಿಂದೆಂದೂ ಕಾಣಿಸಿಕೊಳ್ಳ ಪಾತ್ರದಲ್ಲಿ ನಟಿಸಿ ಮತ್ತೆ ಎಲ್ಲೆಡೆ ಸುದ್ದಿಯಾಗಿದ್ದಾರೆ.

    ಹೌದು. ರಚಿತಾ ತಮ್ಮ ಹೊಸ ಚಿತ್ರ `ಏಕ್ ಲವ್ ಯಾ’ ಸಿನಿಮಾದಲ್ಲಿ ಮತ್ತೆ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇಂದು ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಅದರಲ್ಲೂ ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡ ರಚಿತಾ ಸಿಗರೇಟ್ ಸೇದಿ, ಹೀರೋಗೆ ಲಿಪ್ ಕಿಸ್ ಕೊಟ್ಟ ದೃಶ್ಯ ಎಲ್ಲೆಡೆ ಸಖತ್ ಸದ್ದು ಮಾಡುತ್ತಿದೆ.

    ರಚಿತಾ ರಾಮ್ ಸಿಗರೇಟ್ ಸೇದುವ ದೃಶ್ಯದ ಮೂಲಕ ಟೀಸರ್ ಆರಂಭವಾಗುತ್ತದೆ. ನಾಯಕ ರಾಣಾಗೆ ರಚಿತಾ ಲಿಪ್ ಕಿಸ್ ಮಾಡುವ ದೃಶ್ಯದೊಂದಿಗೆ ಟೀಸರ್ ಮುಗಿಯುತ್ತದೆ. 1 ನಿಮಿಷ 40 ಸೆಕೆಂಡ್‍ಗಳ ಟೀಸರ್ ನಲ್ಲಿ ರಾಣಾ ಆ್ಯಕ್ಷನ್ ಹಾಗೂ ರಚಿತಾ ಲುಕ್ ಎಲ್ಲರ ಗಮನ ಸೆಳೆದಿದೆ.

    `ಏಕ್ ಲವ್ ಯಾ’ ಚಿತ್ರಕ್ಕೆ ನಿರ್ದೇಶಕ ಪ್ರೇಮ್ ಆ್ಯಕ್ಷನ್ ಕಟ್ ಹೇಳಿದ್ದು, ನಟಿ ರಕ್ಷಿತಾ ಪ್ರೇಮ್ ನಿರ್ಮಾಣ ಮಾಡುತ್ತಿದ್ದು, ಅವರ ಸಹೋದರ ರಾಣಾ ನಾಯಕನಾಗಿ ಅಭಿನಯಿಸಿದ್ದಾರೆ. ಇತ್ತೀಚೆಗೆ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿ ಎಲ್ಲೆಡೆ ಸಾಕಷ್ಟು ಸದ್ದು ಮಾಡಿತ್ತು. ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಅವರ ಸಂಗೀತ ಸಂಯೋಜನೆಯಲ್ಲಿ ಚಿತ್ರದ ಹಾಡುಗಳು ಮೂಡಿಬಂದಿದ್ದು, ಟೀಸರ್ ಆರಂಭದಲ್ಲಿ ಪುಲ್ವಾಮಾದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಅರ್ಪಿಸಲಾಗಿದೆ.

    ಐ ಲವ್ ಯು ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಜೊತೆ ನಟಿ ರಚಿತಾ ರಾಮ್ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡು ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ನಂತರದ ದಿನಗಳಲ್ಲಿ ಸ್ವತಃ ರಚಿತಾ ಅವರೇ, ‘ಇನ್ನುಮುಂದೆ ಅಂಥ ದೃಶ್ಯಗಳಲ್ಲಿ ಕಾಣಿಸಿಕೊಳ್ಳಲ್ಲ’ ಎಂದು ಹೇಳಿಕೊಂಡಿದ್ದರು. ಈಗ ರಚಿತಾ ಬಿಂದಾಸ್ ಆಗಿ ಸಿಗರೇಟ್ ಸೇದುತ್ತಿರುವ ಫೊಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

    ಈ ಕುರಿತು ಪ್ರೇಮ್ ಸಹ ಖಚಿತಪಡಿಸಿದ್ದು, ಇದು ನಮ್ಮ ಏಕ್ ಲವ್ ಯಾ ಚಿತ್ರದ ಸ್ಟಿಲ್. ಹೇಗೆ ಹೊರಬಂತೋ ನಮಗೂ ಗೊತ್ತಿಲ್ಲ. ಈ ಚಿತ್ರದಲ್ಲಿ ರಚಿತಾ ರಾಮ್ ಸಿಗರೇಟ್ ಸೇದುವ ದೃಶ್ಯವಿದೆ. ಟೀಸರ್‍ನಲ್ಲಿ ಇನ್ನಷ್ಟು ಅಚ್ಚರಿಗಳು ಕಾದಿವೆ. ಹಿಂದೆಂದೂ ಕಾಣಿಸಿಕೊಳ್ಳದ ಪಾತ್ರದಲ್ಲಿ ರಚಿತಾ ಕಾಣಿಸಿಕೊಂಡಿದ್ದಾರೆ ಎಂದು ಹೇಳಿದ್ದರು.