Tag: elder couple

  • ಪಿಂಚಣಿ ಬಾರದೆ ವೃದ್ಧ ದಂಪತಿ ಪರದಾಟ – ಇಳಿವಯಸ್ಸಿನಲ್ಲಿ ನಿತ್ಯ ಕಚೇರಿಗಳಿಗೆ ಅಲೆದಾಟ

    ಪಿಂಚಣಿ ಬಾರದೆ ವೃದ್ಧ ದಂಪತಿ ಪರದಾಟ – ಇಳಿವಯಸ್ಸಿನಲ್ಲಿ ನಿತ್ಯ ಕಚೇರಿಗಳಿಗೆ ಅಲೆದಾಟ

    ರಾಯಚೂರು: ಕಳೆದ ನಾಲ್ಕು ತಿಂಗಳಿಂದ ಸಂಧ್ಯಾ ಸುರಕ್ಷಾ ಯೋಜನೆಯ ಪಿಂಚಣಿ (Pension) ಹಣ ಬಾರದೆ ಜಿಲ್ಲೆಯ ವೃದ್ಧ ದಂಪತಿ ಪರದಾಟ ನಡೆಸಿದ್ದಾರೆ.

    ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣ ನಿವಾಸಿಗಳಾದ 75 ವರ್ಷದ ಬಸಮ್ಮ ಕರಿಯಪ್ಪ ಅವರಿಗೆ ಪಿಂಚಣಿ ಸಮಸ್ಯೆ ಎದುರಾಗಿದ್ದು, ನಾಲ್ಕು ತಿಂಗಳಿಂದ ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿದ್ದಾರೆ. ಇಳಿವಯಸ್ಸಿನ ದಂಪತಿ ತಮ್ಮ ಔಷಧಿ ಖರ್ಚಿಗೂ ಹಣವಿಲ್ಲದೆ ಪರದಾಡುತ್ತಿದ್ದಾರೆ.ಇದನ್ನೂ ಓದಿ: BBK 11: ಕೊಟ್ಟ ಮಾತಿನಂತೆ ಹನುಮಂತನಿಗೆ ಗಿಫ್ಟ್ ಕಳುಹಿಸಿದ ಕಿಚ್ಚ

    ಆಧಾರ್ ಕಾರ್ಡ್ (Aadhar Card) ಹಾಗೂ ತಾಂತ್ರಿಕ ಸಮಸ್ಯೆ ಕಾರಣಕ್ಕೆ ನಾಲ್ಕು ತಿಂಗಳಿಂದ ವೃದ್ಧೆ ಬಸಮ್ಮ ಅವರಿಗೆ ಪಿಂಚಣಿ ಹಣ ಬಂದಿಲ್ಲ. ಹೀಗಾಗಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ತಮ್ಮ ಅಳಲು ತೋಡಿಕೊಂಡಿದ್ದಾರೆ. ಕವಿತಾಳ ಪಟ್ಟಣ ಪಂಚಾಯಿತಿಯಲ್ಲಿ ಸರಿಯಾದ ಪ್ರತಿಕ್ರಿಯೆ ಸಿಗದೇ ಜಿಲ್ಲಾಧಿಕಾರಿ ಕಚೇರಿಗೆ ಬಂದು ದೂರು ನೀಡಿದ್ದಾರೆ. ಸಂಧ್ಯಾ ಸುರಕ್ಷಾ ಪಿಂಚಣಿ ಯೋಜನೆಯಡಿ ಪ್ರತಿ ತಿಂಗಳು ಬರುವ 1,200 ರೂ. ಕೊಡಿಸುವಂತೆ ಮನವಿ ಮಾಡಿದ್ದಾರೆ.

    ಒಂದೇ ಪಟ್ಟಣದ ಒಂದೇ ಹೆಸರಿನ ಇನ್ನೋರ್ವ ವೃದ್ಧೆಗೆ ಇವರ ಪಿಂಚಣಿ ಹಣ ಹೋಗುತ್ತಿರುವುದಾಗಿ ಆರೋಪಿಸಿದ್ದಾರೆ. ಅದೇ ಪಟ್ಟಣದ ಬಸಮ್ಮ ಕರಿಯಪ್ಪ ಎಂಬ ಹೆಸರಿರುವ ಇನ್ನೋರ್ವ ವೃದ್ಧೆಯ ಖಾತೆಗೆ ಇವರ ಆಧಾರ್ ಕಾರ್ಡ್ ಲಿಂಕಾಗಿದೆ. ಹಾಗಾಗಿ ಹಣ ಬರುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಕಂಪ್ಯೂಟರ್ ಆಪರೇಟರ್ ಯಡವಟ್ಟಿನಿಂದ ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿದ್ದು ಔಷಧಿ, ಮನೆ ಖರ್ಚಿಗೆ ಹಣವಿಲ್ಲದೆ ಪರದಾಡುತ್ತಿದ್ದಾರೆ. ಪಿಂಚಣಿ ಹಣ ಖಾತೆಗೆ ಕೂಡಲೇ ಜಮಾ ಮಾಡುವಂತೆ ಆಗ್ರಹಿಸಿದ್ದಾರೆ.ಇದನ್ನೂ ಓದಿ: ಬಳ್ಳಾರಿ| ಶಾಲೆಯ ಪಕ್ಕದ ಹಳ್ಳದಲ್ಲಿದ್ದ ಎರಡು ಮೊಸಳೆ ಸೆರೆ

  • ಪತ್ನಿಯ ನಡವಳಿಕೆ ಮೇಲೆ ಸಂಶಯಗೊಂಡು ಚೂಪಾದ ಆಯುಧದಿಂದ ಚುಚ್ಚಿಕೊಂದ ವೃದ್ಧ

    ಪತ್ನಿಯ ನಡವಳಿಕೆ ಮೇಲೆ ಸಂಶಯಗೊಂಡು ಚೂಪಾದ ಆಯುಧದಿಂದ ಚುಚ್ಚಿಕೊಂದ ವೃದ್ಧ

    ಲಕ್ನೋ: ವೃದ್ಧನೊಬ್ಬ ತನ್ನ ಪತ್ನಿಯ ನಡವಳಿಕೆಯ ಮೇಲೆ ಅನುಮಾನಗೊಂಡು ಅವರನ್ನು ಚೂಪಾದ ಆಯುಧದಿಂದ ಚುಚ್ಚಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯ ಅಸೋಥರ್ ಪ್ರದೇಶದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ಲಲಿತಾ ದೇವಿ (66) ಕೊಲೆಗೀಡಾದ ವೃದ್ಧೆ. ಶಿವ ಬರನ್ (75) ಕೊಲೆಗೈದ ವೃದ್ಧ. ದಂಪತಿ ಈ ಒಂದು ವಿಚಾರಕ್ಕಾಗಿ ಕಳೆದ 5 ತಿಂಗಳಿಂದ ಜಗಳವಾಡುತ್ತಿದ್ದರು. ಈ ಹಿನ್ನೆಲೆ ಆರೋಪಿಯು ಲಲಿತಾ ಅವರನ್ನು ಕೊಲೆಗೈದಿದ್ದು, ವರಾಂಡಾದಲ್ಲಿ ಗ್ರಾಮಸ್ಥರು ವೃದ್ಧೆಯ ರಕ್ತವನ್ನು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ವೇಳೆ ಗ್ರಾಮಸ್ಥರು ಮಂಚದ ಕೆಳಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಂತ್ರಸ್ತೆಯ ಶವವನ್ನು ಕಂಡುಕೊಂಡಿದ್ದಾರೆ. ನಂತರದಲ್ಲಿ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮಗನ ಕಾಯಿಲೆ ಗುಣಪಡಿಸ್ತೀನೆಂದು ಮಹಿಳೆ ಮೇಲೆ ಸ್ವಯಂಘೋಷಿತ ದೇವಮಾನವ ರೇಪ್

    ವಿಚಾರಣೆಯ ಸಮಯದಲ್ಲಿ ಆರೋಪಿ ವೃದ್ಧನು ತಪ್ಪೊಪ್ಪಿಕೊಂಡಿದ್ದಾನೆ. ತನಗೆ ಸ್ವಲ್ಪ ಸಮಯದಿಂದ ಲಲಿತಾಳ ನಡುವಳಿಕೆ ಬಗ್ಗೆ ಅನುಮಾನವಿತ್ತು. ಅವಳು ಹೊರಗಡೆ ಹೋದಾಗಲೆಲ್ಲಾ ಒಬ್ಬ ವ್ಯಕ್ತಿ ಜೊತೆ ತಿರುಗುತ್ತಿದ್ದಳು ಎಂದು ಬಹಿರಂಗಪಡಿಸಿದ್ದಾನೆ. ಈ ವಿಷಯದ ಬಗ್ಗೆ ಆಗಾಗ ವೃದ್ಧ ದಂಪತಿಯ ನಡುವೆ ಜಗಳಗಳು ನಡೆಯುತ್ತಿದ್ದವು. ಹಾಗಾಗಿ ಬುಧವಾರ ರಾತ್ರಿ ಲಲಿತಾ ಅವರು ವರಾಂಡಾದಲ್ಲಿ ಗಾಢ ನಿದ್ದೆಯಲ್ಲಿದ್ದಾಗ ಕೊಲೆ ಮಾಡಿದ್ದಾನೆ.ಇದನ್ನೂ ಓದಿ: ವಿಮಾನ ಪತನದ ಸ್ಥಳದಲ್ಲಿ 16 ಮೃತದೇಹ ಪತ್ತೆ- ಪ್ರಯಾಣಿಕರೆಲ್ಲರೂ ಮೃತಪಟ್ಟಿರುವ ಶಂಕೆ

    ಪೊಲೀಸ್ ಅಧೀಕ್ಷಕ (ಎಸ್‍ಪಿ), ರಾಜೇಶ್ ಕುಮಾರ್ ಸಿಂಗ್, ಆರೋಪಿಯು ತನ್ನ ಹೆಂಡತಿಯ ನಡುವಳಿಕೆಯ ಬಗ್ಗೆ ಅನುಮಾನ ಹೊಂದಿದ್ದಕ್ಕಾಗಿ ಹರಿತವಾದ ಆಯುಧದಿಂದ ಕೊಂದಿದ್ದಾನೆ. ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.

  • ವೃದ್ಧ ದಂಪತಿಯ ಭೀಕರ ಹತ್ಯೆ – ಮನೆಯಲ್ಲಿದ್ದ ಚಿನ್ನಾಭರಣ, ನಗದು ದರೋಡೆ

    ವೃದ್ಧ ದಂಪತಿಯ ಭೀಕರ ಹತ್ಯೆ – ಮನೆಯಲ್ಲಿದ್ದ ಚಿನ್ನಾಭರಣ, ನಗದು ದರೋಡೆ

    ಚಿಕ್ಕಬಳ್ಳಾಪುರ: ವೃದ್ಧ ದಂಪತಿಯನ್ನು ಭೀಕರವಾಗಿ ಕೊಲೆ ಮಾಡಿ ಮನೆಯಲ್ಲಿದ್ದ ಚಿನ್ನಾಭರಣ, ನಗದು ದೋಚಿದ ಘಟನೆ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದ ಕಾಮಾಟಿಗರ ಪೇಟೆಯಲ್ಲಿ ನಡೆದಿದೆ.

    ಕಾಮಟಿಗರಪೇಟೆ ಬಡಾವಣೆಯ ಶ್ರೀನಿವಾಸಲು(77) ಹಾಗೂ ಪದ್ಮಾವತಿ(70) ಕೊಲೆಯಾದ ದಂಪತಿ. ಶ್ರೀನಿವಾಸಲು ರನ್ನು ಎಳೆದು ತಂದು ಬಾತ್‍ರೂಮ್‍ನಲ್ಲಿ ಹತ್ಯೆ ಮಾಡಲಾಗಿದೆ. ಪತ್ನಿ ಪದ್ಮಾವತಿಯನ್ನು ಮನೆಯ ಹಾಲ್‍ನಲ್ಲಿ ಬಲವಾದ ಆಯುಧದಿಂದ ತಲೆಗೆ ಹೊಡೆದು ಹತ್ಯೆ ಮಾಡಲಾಗಿದೆ.

    ಎಂದಿನಂತೆ ಇಂದು ಬೆಳಿಗ್ಗೆ ಮನೆಯ ಕೆಲಸದಾಳು ಮನೆ ಬಳಿ ಬಂದು ಬಾಗಿಲು ಬಡಿದರೆ ವೃದ್ಧ ದಂಪತಿ ಬಾಗಿಲು ತೆಗೆದಿಲ್ಲ. ಇದರಿಂದ ಕೆಲಸದಾಳು ಮನೆಯ ಹಿಂಬದಿಯಿಂದ ಬಂದು ಇನ್ನೊಂದು ಡೋರ್ ನೋಡಿದರೆ ಅದು ತೆರೆದಿತ್ತು, ಅನುಮಾನದಿಂದ ಒಳಗೆ ಹೋಗಿ ನೋಡಿದಾಗ ಕೆಲಸದಾಳಿಗೆ ಒಳಗೆ ಇಬ್ಬರು ಕೊಲೆಯಾಗಿರುವ ಭಯಾನಕ ದೃಶ್ಯ ಕಂಡುಬಂದಿದೆ.

    ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಶಿಡ್ಲಘಟ್ಟ ನಗರ ಠಾಣೆ ಪೊಲೀಸರು ಹಾಗೂ ಚಿಕ್ಕಬಳ್ಳಾಪುರ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಪರಿಶೀಲನೆ ನಡೆಸಿದರು. ಮನೆಯ ಮೇಲಿನ ಗವಾಕ್ಷಿ ಕಿಟಕಿಯ ಮೂಲಕ ಮನೆಯ ಒಳಗೆ ಇಳಿದಿರುವ ದುಷ್ಕರ್ಮಿಗಳು, ಮನೆಯಲ್ಲಿದ್ದ ವೃದ್ಧ ದಂಪತಿಯನ್ನು ಹತ್ಯೆ ಮಾಡಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿರುವ ವಿಷಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಡಿಕೆಶಿ ಪಾಕಿಸ್ತಾನ ಪರ ಹೇಳಿಕೆ ಕೊಡುವವರ ಪರವೋ ಅಥವಾ ಭಾರತ ಮಾತೆಯ ಪರವೋ: ರೇಣುಕಾಚಾರ್ಯ

    ಘಟನೆ ಕುರಿತು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ಪ್ರಕರಣದಲ್ಲಿ ಆರೋಪಿಗಳ ಪತ್ತೆಗೆ 4 ತಂಡಗಳನ್ನು ನೇಮಕ ಮಾಡಲಾಗಿದೆ. ಬಡಾವಣೆಯಲ್ಲಿ ಯಾರ ತಂಟೆಗೂ ಹೋದವರಲ್ಲ. ಆದರೂ ಮನೆಯ ಒಳಗೆ ನುಗ್ಗಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಕೊಲೆ ಪ್ರಕರಣ ಭೇದಿಸಲು ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದು, ವಿವಿಧ ದೃಷ್ಟಿಕೋನದಿಂದ ತನಿಖೆ ನಡೆಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಬಾಹುಬಲಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ವಿರೋಧಿಸಿ ಶ್ರವಣಬೆಳಗೊಳದಲ್ಲಿ ಮೌನ ಪ್ರತಿಭಟನೆ

  • 3 ವರ್ಷಗಳಿಂದ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಜೀವನ- ವೃದ್ಧ ದಂಪತಿ ಮನೆಗೆ ಬೆಳಕಾದ ಕಿಚ್ಚ

    3 ವರ್ಷಗಳಿಂದ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಜೀವನ- ವೃದ್ಧ ದಂಪತಿ ಮನೆಗೆ ಬೆಳಕಾದ ಕಿಚ್ಚ

    ಬೆಂಗಳೂರು: ಸ್ಯಾಂಡಲ್‍ವುಡ್‍ನ ಕಿಚ್ಚ ಸುದೀಪ್ ಲಾಕ್‍ಡೌನ್ ಸಮಯದಲ್ಲಿ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಾ ಬಂದಿದ್ದಾರೆ. ಇದೀಗ ಕೆಲ ವರ್ಷಗಳಿಂದ ಬೆಳಕಿಲ್ಲದ ಮನೆಗೆ ಸುದೀಪ್ ಬೆಳಕಾಗುವ ಮೂಲಕ ಸಹಾಯದ ಹಸ್ತ ಚಾಚಿದ್ದಾರೆ. ಇದನ್ನೂ ಓದಿ: ನಾಲ್ಕು ಸರ್ಕಾರಿ ಶಾಲೆಗಳನ್ನ ದತ್ತು ಪಡೆದ ಕಿಚ್ಚ ಸುದೀಪ್

    ಸುದೀಪ್ ಅವರು ತಮ್ಮ ಚಾರಿಟೇಬಲ್ ಟ್ರಸ್ಟ್ ಮೂಲಕ ಅನೇಕರಿಗೆ ಸಹಾಯ ಮಾಡುತ್ತಿದ್ದಾರೆ. ಟ್ರಸ್ಟ್ ಕೂಡ ಕೆಲವು ತಿಂಗಳಿನಿಂದ ಸಮಾಜ ಸೇವೆಯಲ್ಲಿ ನಿರತವಾಗಿದೆ. ಇದೀಗ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಸಿದ್ಧಾಪುರ ಗ್ರಾಮದಲ್ಲಿ ವೃದ್ಧ ದಂಪತಿಗೆ ಸಹಾಯ ಮಾಡಿದ್ದಾರೆ.

    ವೃದ್ಧ ದಂಪತಿ ಮೂರು ವರ್ಷಗಳ ಹಿಂದೆ ಮನೆ ಕಟ್ಟಿಸಿಕೊಂಡಿದ್ದರು. ಆದರೆ ಅದಕ್ಕೆ ವಿದ್ಯುತ್ ಸಂಪರ್ಕ ಮಾಡಿಕೊಳ್ಳಲಾಗದೆ ಅಂದಿನಿಂದ ಅಂದರೆ ಸುಮಾರು ಮೂರು ವರ್ಷದಿಂದ ಕತ್ತಲಲ್ಲಿಯೇ ಜೀವನ ಸಾಗಿಸುತ್ತಿದ್ದರು. ಈ ವಿಷಯ ಸುದೀಪ್ ಚಾರಿಟೇಬಲ್ ಟ್ರಸ್ಟ್ ಗಮನಕ್ಕೆ ಬಂದಿದೆ.

    ಟ್ರಸ್ಟ್ ನ ಯುವಕರು ತಕ್ಷಣ ವೃದ್ಧ ದಂಪತಿಯಾದ ರಾಧಮ್ಮ ಹಾಗೂ ನಾಗರಾಜು ಅವರ ಮನೆಗೆ ಭೇಟಿ ನೀಡಿದ್ದಾರೆ. ನಂತರ ಅವರ ಸಮಸ್ಯೆಯನ್ನು ಆಲಿಸಿ, ತಾವೇ ತಮ್ಮ ಖರ್ಚಿನಲ್ಲಿ ವಿದ್ಯುತ್ ಸಂಪರ್ಕ ಹಾಕಿಸಿಕೊಟ್ಟಿದ್ದಾರೆ. ಅಲ್ಲದೇ ವಿದ್ಯುತ್ ಸಂಪರ್ಕಕ್ಕೆ ಬೇಕಾದ ಅನುಮತಿಗಳನ್ನೂ ಸಹ ಅವರೇ ತೆಗೆದುಕೊಂಡಿದ್ದಾರೆ.

    ವೃದ್ಧ ದಂಪತಿ ತಮ್ಮ ವಿಕಲಾಂಗ ಮೊಮ್ಮಗನೊಂದಿಗೆ ವಾಸಿಸುತ್ತಿದ್ದಾರೆ. ಟ್ರಸ್ಟ್ ಮೂಲಕ ಸುದೀಪ್ ಸಹಾಯ ಮಾಡಿದ್ದಕ್ಕೆ ಕಿಚ್ಚನಿಗೆ ಮತ್ತು ಟ್ರಸ್ಟ್ ಯುವಕರಿಗೆ ವೃದ್ಧ ದಂಪತಿ ಕೈಮುಗಿದು ಧನ್ಯವಾದ ತಿಳಿಸಿದ್ದಾರೆ. ಅಭಿಮಾನಿಗಳು ವೃದ್ಧ ದಂಪತಿಗೆ ಸಹಾಯ ಮಾಡಿರುವ ವಿಡಿಯೋವನ್ನು ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದು, ಸುದೀಪ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.