Tag: elderly

  • ಟ್ಯೂಶನ್‍ಗೆ ಬರುತ್ತಿದ್ದ ಬಾಲಕಿಯರಿಗೆ ಟೀಚರ್ ತಂದೆಯಿಂದಲೇ ಕಿರುಕುಳ

    ಟ್ಯೂಶನ್‍ಗೆ ಬರುತ್ತಿದ್ದ ಬಾಲಕಿಯರಿಗೆ ಟೀಚರ್ ತಂದೆಯಿಂದಲೇ ಕಿರುಕುಳ

    ಚಂಡೀಗಢ: ಟ್ಯೂಶನ್‍ಗೆಂದು ಬರುತ್ತಿದ್ದ ಬಾಲಕಿಯರಿಗೆ ಟೀಚರ್ ತಂದೆಯೇ ಲೈಂಗಿಕ ಕಿರುಕುಳ ನೀಡುತ್ತಿದ್ದ ಘಟನೆ ಛತ್ತೀಸ್‍ಗಢದ (Chhattisgarh) ದುರ್ಗ್ ಜಿಲ್ಲೆಯಲ್ಲಿ ನಡೆದಿದೆ.

    11 ಮತ್ತು 12 ವರ್ಷ ಬಾಲಕಿಯರು ಆರೋಪಿಯನ್ನು ತಮ್ಮ ಟ್ಯೂಶನ್ ಟೀಚರ್ ತಂದೆ ಎಂದು ತಿಳಿಸಿದ್ದಾರೆ. ಆಸಾರಾಮ್ ಬಾಪು ನಗರದಲ್ಲಿ ಮಹಿಳೆಯೊಬ್ಬರು ನಡೆಸುತ್ತಿದ್ದ ಟ್ಯೂಶನ್‍ಗೆ 11-12 ವರ್ಷದ ಬಾಲಕಿಯರು ಬರುತ್ತಿದ್ದರು. ಈ ವೇಳೆ ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪದಡಿ ಇದೀಗ ಮಹಿಳೆಯ ತಂದೆಯನ್ನು ಬಂಧಿಸಲಾಗಿದೆ ಎಂದು ಮುಖ್ಯ ಪೊಲೀಸ್ ಅಧೀಕ್ಷಕ (ಸಿಎಸ್‍ಪಿ) ಕಂಟೋನ್ಮೆಂಟ್ ಪ್ರಭಾತ್ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ನನ್ನನ್ನು ದೀದಿ ಮಾ ಅಂತ ಕರೆಯಿರಿ – ಕುಟುಂಬ ತ್ಯಜಿಸಿದ ಬಿಜೆಪಿ ನಾಯಕಿ ಉಮಾ ಭಾರತಿ

    ಅಸಾರಾಂ ಬಾಪು ನಗರದಲ್ಲಿರುವ (Asaram Bapu Nagar) ಭಿಲಾಯಿಯ ಜಮುಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ (Bhilai’s Jamul police station area) ಈ ಘಟನೆ ನಡೆದಿದೆ. ಮನೆಯ ಸುತ್ತಮುತ್ತಲಿರುವ ಮಕ್ಕಳಿಗೆ ಮಹಿಳೆಯೊಬ್ಬರು ಟ್ಯೂಶನ್ ಹೇಳಿಕೊಡುತ್ತಿದ್ದರು. ಈ ಮಧ್ಯೆ ಮನೆಕೆಲಸವನ್ನು ಮಾಡಲು ಒಳಗೆ ಹೋದಾಗ, ಮಹಿಳೆಯ ತಂದೆ ಹುಸೇನ್ ಚಾಕೊಲೇಟ್ ನೀಡಿ ಬಾಲಕಿಯರಿಗೆ ಕಿರುಕುಳ ನೀಡುತ್ತಿರುತ್ತಾನೆ ಎಂದು ಐದನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ಕುಟುಂಬಸ್ಥರಿಗೆ ಈ ಬಗ್ಗೆ ತಿಳಿಸಿದ್ದಾಳೆ. ಇದಾದ ಬಳಿಕ ಇತರ ಹುಡುಗಿಯರು ಕೂಡ ಈ ವಿಚಾರವನ್ನು ಮನೆಯವರ ಬಳಿ ಹೇಳಿಕೊಂಡಿದ್ದಾರೆ.

    ಬಳಿಕ ಅನೇಕ ಬಾಲಕಿಯರ ಕುಟುಂಬಸ್ಥರು ಜಮುಲ್ ಪೊಲೀಸ್ ಠಾಣೆಗೆ ಆಗಮಿಸಿ ಶಹದತ್ ಹುಸೇನ್ ವಿರುದ್ಧ ದೂರು ದಾಖಲಿಸಿ, ಆತನನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ದೂರಿನನ್ವಯ ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆತನ ವಿರುದ್ಧ ಸೆಕ್ಷನ್ 354 ಮತ್ತು ಪೋಕ್ಸೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಮತ್ತು ಈ ಸಂಬಂಧ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಮೆರಿಕದ ಬಾರ್‌ ಬಳಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ -12 ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • ಜಮೀನು ವಿವಾದ – ಬೆಳ್ಳಂಬೆಳಗ್ಗೆ ಟವರ್ ಏರಿ ವೃದ್ಧನ ಹೈಡ್ರಾಮಾ

    ಜಮೀನು ವಿವಾದ – ಬೆಳ್ಳಂಬೆಳಗ್ಗೆ ಟವರ್ ಏರಿ ವೃದ್ಧನ ಹೈಡ್ರಾಮಾ

    ಚಿಕ್ಕಬಳ್ಳಾಪುರ: ಜಮೀನು ವಿವಾದ ಹಿನ್ನೆಲೆ ವೃದ್ಧನೋರ್ವ ಬೆಳ್ಳಂಬೆಳಗ್ಗೆ ಟವರ್ ಏರಿ ಕುಳಿತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೈಡ್ರಾಮಾ ಮಾಡಿದ್ದಾನೆ.

    ಚಿಕ್ಕಬಳ್ಳಾಪುರ ನಗರದ ಪತ್ರಕರ್ತರ ಭವನದ ಮುಂಭಾಗ ಘಟನೆ ನಡೆದಿದ್ದು, ವೃದ್ಧನನ್ನು ನಲ್ಲಕದಿರೇನಹಳ್ಳಿ ಗ್ರಾಮದ ನರಸಿಂಹಪ್ಪ ಎಂದು ಗುರುತಿಸಲಾಗಿದೆ. ಜಮೀನು ವಿವಾದ ಕುರಿತಂತೆ ಸಮಸ್ಯೆ ಬಗೆಹರಿಸುವಂತೆ ವೃದ್ಧನೋರ್ವ ಟವರ್ ಏರಿ ಕುಳಿತುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯೊಡ್ಡಿದ್ದನು. ಅಲ್ಲದೇ ಈ ವೇಳೆ ಸ್ಥಳಕ್ಕೆ ಎಸಿ ಸಂತೋಷ್ ಕುಮಾರ್ ಹಾಗೂ ಹಾಗೂ ತಹಶೀಲ್ದಾರ್ ಗಣಪತಿ ಶಾಸ್ತ್ರೀ ಬರುವಂತೆ ವೃದ್ಧ ಪಟ್ಟು ಹಿಡಿದಿದ್ದನು. ಇದನ್ನೂ ಓದಿ: ಪೊಲೀಸರಿಗಿಂತ ಇಡಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ: ಮೋದಿ ವಿರುದ್ಧ ಅಶೋಕ್ ಗೆಹ್ಲೋಟ್ ಕಿಡಿ

    ನಂತರ ಸ್ಥಳಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರ ನಗರ ಠಾಣಾ ಪೊಲೀಸರು, ಹರಸಾಹಸ ಪಟ್ಟು, ವೃದ್ಧನ ಮನವೊಲಿಕೆ ಮಾಡಿ ಕೆಳಗಿಳಿಸಿದರು. ಬಳಿಕ ವೃದ್ಧ ನರಸಿಂಹಯ್ಯನನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದೊಯ್ದರು. ಇದೀಗ ವೃದ್ಧ ಟವರ್ ಏರಿದ್ದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ನಾಗರಪಂಚಮಿಗೆ ಅರಿಶಿಣ ಎಲೆಯ ಸಿಹಿ ಕಡುಬು ಮಾಡಿ ಸವಿಯಿರಿ

    Live Tv
    [brid partner=56869869 player=32851 video=960834 autoplay=true]

  • ಬಾಯಿಯಿಂದ ನೀರು ಉಗುಳಿ ಬಟ್ಟೆ ಇಸ್ತ್ರಿ – ವೃದ್ಧನ ವೀಡಿಯೋ ವೈರಲ್

    ಬಾಯಿಯಿಂದ ನೀರು ಉಗುಳಿ ಬಟ್ಟೆ ಇಸ್ತ್ರಿ – ವೃದ್ಧನ ವೀಡಿಯೋ ವೈರಲ್

    ಸಾಮಾನ್ಯವಾಗಿ ಕಬ್ಬಿಣದ ಇಸ್ತ್ರಿ ಪೆಟ್ಟಿಗೆಯಿಂದ ಇಸ್ತ್ರಿ ಮಾಡುವಾಗ ಬಟ್ಟೆಯ ಮೇಲೆ ನೀರನ್ನು ಸಿಂಪಡಿಸಿ ಇಸ್ತ್ರಿ ಮಾಡುವುದನ್ನು ನಾವು ನೋಡಿರುತ್ತೇವೆ. ಆದರೆ ವ್ಯಕ್ತಿಯೋರ್ವ ಬಟ್ಟೆಯ ಮೇಲೆ ನೀರನ್ನು ಉಗುಳಿ ವಿಭಿನ್ನವಾಗಿ ಇಸ್ತ್ರಿ ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

     

    View this post on Instagram

     

    A post shared by THE ADULT SOCIETY (@adultsociety)

    ಈ ವೀಡಿಯೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಲಾಗಿದ್ದು, ವಯಸ್ಸಾದ ವ್ಯಕ್ತಿಯೊರ್ವ ಬಟ್ಟೆ ಇಸ್ತ್ರಿ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಇಸ್ತ್ರಿ ಮಾಡುವ ಮುನ್ನ ಕೈಯಲ್ಲಿ ನೀರು ತುಂಬಿದ ಬಟ್ಟಲು ಹಿಡಿದುಕೊಂಡು, ನೀರನ್ನು ಕುಡಿದು ನಂತರ ಬಾಯಿಯೊಳಗಿದ್ದ ನೀರನ್ನು ಮತ್ತೆ ಬಟ್ಟೆಯ ಮೇಲೆ ಉಗುಳಿ ಇಸ್ತ್ರಿ ಮಾಡುವುದನ್ನು ವೀಡಿಯೋದಲ್ಲಿ ನೋಡಬಹುದಾಗಿದೆ. ಇದನ್ನೂ ಓದಿ: ಹೆತ್ತ ತಾಯಿಯ ಕತ್ತು ಸೀಳಿ ಕೊಂದು, ರೈಲ್ವೆ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಗ

    ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಈ ವೀಡಿಯೋವನ್ನು ಇಲ್ಲಿಯವರೆಗೂ ಸುಮಾರು (3 ಮಿಲಿಯನ್) 30 ಲಕ್ಷಕ್ಕಿಂತಲೂ ಹೆಚ್ಚು ಮಂದಿ ವೀಕ್ಷಿಸಿದ್ದು, ಬಹಳ ಅಸಹ್ಯಕರವಾಗಿದೆ ಎಂದು ಹಲವರು ಕಾಮೆಂಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಾರತ ಸೇರಿದಂತೆ 4 ದೇಶಗಳ ರಾಯಭಾರಿಗಳನ್ನು ವಜಾಗೊಳಿಸಿದ ಝೆಲೆನ್ಸ್ಕಿ

    Live Tv
    [brid partner=56869869 player=32851 video=960834 autoplay=true]

  • ಮಕ್ಕಳ ಸಮ್ಮುಖದಲ್ಲಿಯೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವೃದ್ಧ ಜೋಡಿ

    ಮಕ್ಕಳ ಸಮ್ಮುಖದಲ್ಲಿಯೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವೃದ್ಧ ಜೋಡಿ

    ಮೈಸೂರು: ಇಳಿ ವಯಸ್ಸಿನ ಅಜ್ಜ, ಅಜ್ಜಿ ಜೋಡಿಯೊಂದು ಮಕ್ಕಳ ಸಮ್ಮುಖದಲ್ಲಿಯೇ ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕವಾಗಿ ಎಲ್ಲಡೆ ಸುದ್ದಿಯಾಗಿದೆ.

    85 ವರ್ಷದ ಮುಸ್ತಫಾ, 65 ವರ್ಷ ಫಾತಿಮಾ ಬೇಗಂ ಕೈ ಹಿಡಿದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ವೃದ್ಧ ಜೋಡಿ ಮೈಸೂರಿನ ಉದಯಗಿರಿಯ ಗೌಸಿಯಾನಗರದ ನಿವಾಸಿಗಳಾಗಿದ್ದಾರೆ. ಕುಟುಂಬಸ್ಥರ ಸಮ್ಮುಖದಲ್ಲಿ ಮನೆಯಲ್ಲೇ ಮದುವೆಯಾಗಿ ಸತಿಪತಿಗಳಾದ ಈ ಜೋಡಿ ನವಜೀವಕ್ಕೆ ಪಾದಾರ್ಪಣೆ ಮಾಡಿದ್ದಾರೆ.

    ಕುರಿ ಸಾಕಾಣಿಕೆ ಮಾಡಿ ಜೀವನ ನಡೆಸುತ್ತಿದ್ದ ಮುಸ್ತಫಾ ತನ್ನ 9 ಮಕ್ಕಳಿಗೆ ಮದುವೆ ಮಾಡಿದ್ದಾರೆ. ಎರಡು ವರ್ಷಗಳ ಹಿಂದೆ ಪತ್ನಿ ಖುರ್ಷಿದ್ ಬೇಗಂರನ್ನು ಕಳೆದುಕೊಂಡು ಗೌಸಿಯಾನಗರದಲ್ಲಿ ಒಂಟಿ ಜೀವನ ಸಾಗಿಸುತ್ತಿದ್ದರು. ಒಂಟಿ ಜೀವನಕ್ಕೆ ಜೊತೆಗಾರ್ತಿ ಬೇಕೆಂದು ಹಂಬಲಿಸಿದ್ದ ಅಜ್ಜನಿಗೆ ಜೊತೆಯಾಗಿ ಒಬ್ಬರು ಬಾಳ ಸಂಗಾತಿ ಸಿಕ್ಕಿದ್ದಾರೆ. ಇದನ್ನೂ ಓದಿ: UP Election: ಭಾರತದ ಅತಿ ಎತ್ತರದ ಮನುಷ್ಯ ಸಮಾಜವಾದಿ ಪಕ್ಷ ಸೇರ್ಪಡೆ

    ಫಾತಿಮಾ ಅದೇ ಏರಿಯಾದಲ್ಲಿ ಒಂಟಿಯಾಗಿ ಜೀವನ ಸಾಗಿಸುತ್ತಿದ್ದರು. ಮುಸ್ತಫಾ ತನ್ನನ್ನು ಮದುವೆಯಾಗುವಂತೆ ಫಾತಿಮಾ ಬೇಗಂರನ್ನು ಕೇಳಿಕೊಂಡಿದ್ದಾರೆ. ಒಂಟಿಯಾಗಿದ್ದ ಫಾತಿಮಾ, ಮುಸ್ತಫಾ ಅವರ ಮನವಿಗೆ ನಿರಾಸೆ ಮಾಡದೆ ಮದುವೆಯಾಗಲು ಒಪ್ಪಿಗೆ ನೀಡಿದ್ದಾರೆ. ಇಳಿ ವಯಸ್ಸಿನಲ್ಲಿ ಮದುವೆಯಾಗಲು ಇಚ್ಛಿಸಿದ ತಂದೆಗೆ ಮಕ್ಕಳು ಶುಭ ಹಾರೈಸಿದ್ದಾರೆ. ಇದನ್ನೂ ಓದಿ: UP Election – ಅಮಿತ್ ಶಾ ಮನೆ-ಮನೆ ಪ್ರಚಾರ

    ಈ ವಯಸ್ಸಿನಲ್ಲಿ ಮುಸ್ತಫಾ ಅವರ ನಿರ್ಧಾರ ಇಡೀ ಕುಟುಂಬಕ್ಕೆ ಅಚ್ಚರಿ ಎನಿಸಿದರೂ ತಂದೆಯ ನಿರ್ಧಾರಕ್ಕೆ ಜೈ ಎಂದ ಮಕ್ಕಳು ನಿಖಾ (ಮದುವೆ) ಮಾಡಿದ್ದಾರೆ. ಮನೆಯಲ್ಲೇ ಮಕ್ಕಳು, ಮೊಮ್ಮಕ್ಕಳ ಸಮ್ಮುಖದಲ್ಲಿ ಫಾತಿಮಾ ಬೇಗಂರನ್ನು ಮುಸ್ತಫಾ ವರಿಸಿದ್ದಾರೆ.

  • ಮಕ್ಕಳ ನಿರ್ಲಕ್ಷ್ಯ- ಬೇಸತ್ತ ವೃದ್ಧ ತಂದೆ, ತಾಯಿ ಆತ್ಮಹತ್ಯೆ

    ಮಕ್ಕಳ ನಿರ್ಲಕ್ಷ್ಯ- ಬೇಸತ್ತ ವೃದ್ಧ ತಂದೆ, ತಾಯಿ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ಮಕ್ಕಳ ನಿರ್ಲಕ್ಷ್ಯ ವರ್ತನೆಯಿಂದ ಮನನೊಂದ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ನಡೆದಿದೆ.

    ಮಾರೇಗೌಡ (62) ಗಂಗಮ್ಮ ( 55) ಮೃತರಾಗಿದ್ದಾರೆ. ಈ ವೃದ್ಧ ದಂಪತಿ ಕಳೆದ ಭಾನುವಾರ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಈಗ ಇಬ್ಬರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ:  ಬಿಜೆಪಿಯವರ ಗೂಂಡಾಗಿರಿಯನ್ನು ನಾವು ಸಹಿಸುವುದಿಲ್ಲ: ಬಿ.ಕೆ.ಹರಿಪ್ರಸಾದ್

    ಮೃತ ವೃದ್ದ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದು, ಹಿರಿಯ ಮಗ ರಿಸರ್ವ್ ಪೊಲೀಸ್ ಇನ್ಸ್‌ಪೆಕ್ಟರ್‌ ಆಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಕಿರಿಯ ಮಗ ಹಾದ್ರಿಪುರ ಗ್ರಾಮದಲ್ಲಿ ಬೇರೆ ವಾಸವಾಗಿದ್ದರು. ಮಾರೇಗೌಡರು ವಿಶೇಷಚೇತನರಾಗಿದ್ದು, ಪತ್ನಿ ಗಂಗಮ್ಮ ಆರೈಕೆ ಮಾಡುತ್ತಿದ್ದರು. ಮಕ್ಕಳು ತಮ್ಮನ್ನು ನೋಡಿಕೊಳ್ಳುತ್ತಿಲ್ಲವೆಂಬ ನೋವು ಕೊರಗು ಇಬ್ಬರನ್ನು ಕಾಡುತ್ತಿತ್ತಂತೆ. ಇದನ್ನೂ ಓದಿ:  ಸ್ಟೇಡಿಯಂನಲ್ಲಿ ಮಹಿಳಾ ಪ್ರೇಕ್ಷಕರು ಇದ್ದಾರೆ, ಪ್ರಸಾರ ಮಾಡಬೇಡಿ – ಅಫ್ಘಾನಿಸ್ಥಾನದಲ್ಲಿ ಐಪಿಎಲ್ ಬ್ಯಾನ್

    ಮೊದಲಿಂದಲೂ ಹಾದ್ರಿಪುರ ಗ್ರಾಮದಲ್ಲಿ ಕಿರಿಯ ಮಗನ ಜೊತೆ ಇಬ್ಬರು ವಾಸವಾಗಿದ್ದರು. ಆದರೆ ಇತ್ತೀಚೆಗೆ ಕಿರಿಯ ಮಗ ಸಹ ಅಪ್ಪ ಅಮ್ಮನನ್ನ ಬಿಟ್ಟು ಬೇರೆ ಮನೆ ಮಾಡಿಕೊಂಡಿದ್ದನಂತೆ. ಈ ವಿಚಾರಕ್ಕೆ ಮನನೊಂದು ವೃದ್ದ ದಂಪತಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಯುವಾಗ ಎದ್ದುಕುಳಿತ ವೃದ್ಧೆ

    ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಯುವಾಗ ಎದ್ದುಕುಳಿತ ವೃದ್ಧೆ

    ನವದೆಹಲಿ: ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗ ಕೊನೆ ಕ್ಷಣದಕಲ್ಲಿ ವೃದ್ಧೆ ಕಣ್ಣುಬಿಟ್ಟು ಕುಳಿತಿರುವ ಘಟನೆ ನಡೆದಿದೆ.

    ಶಾಕುಂತಲಾ(76) ಕೊರೊನಾದಿಂದ ಮೃತಪಟ್ಟಿದ್ದರು ಎಂದು‌ ವೈದ್ಯರು ತಿಳಿಸಿದ್ದರು. ಮಹಾರಾಷ್ಟ್ರದ ಬಾರಾಮತಿ ಜಿಲ್ಲೆಯ ಮುಧಲೆ ಗ್ರಾಮದ ನಿವಾಸಿಯಾಗಿದ್ದು, ಕಳೆದ ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು.

    ಶಾಕುಂತಲಾ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲು ಬಾರಾಮತಿಗೆ ಕರೆದುಕೊಂಡು ಬಂದಿದ್ದರು. ಆದರೆ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಶಾಕುಂತಲಾ ಪ್ರಜ್ಞೆತಪ್ಪಿದ್ದರು. ಆದರೆ ಇದನ್ನು ತಿಳಿಯದ ಕುಟುಂಬಸ್ಥರು ಶಾಕುಂತಲಾ ಸಾವನ್ನಪ್ಪಿದಳು ಎಂದು ಗ್ರಾಮದವರಿಗೆ ತಿಳಿಸಿದರು. ಅದರಂತೆ ಗ್ರಾಮದಲ್ಲಿ ಅಂತಿಮ ಸಂಸ್ಕಾರಕ್ಕೆ ಸಿದ್ದತೆ ನಡೆಸಲು ಸೂಚಿಸಿದ್ದರು. ಅದರಂತೆ ಗ್ರಾಮಸ್ಥರು ತಯಾರಿ ಮಾಡಿಕೊಂಡಿದ್ದರು.

    ಆದರೆ ಶಕುಂತಲಾ ಏಕಾಏಕಿ ಕಣ್ಣು ಬಿಟ್ಟು ಎದ್ದು ಕುಳಿತು ಕಣ್ಣೀರು ಹಾಕಿದ್ದಾರೆ. ಕುಟುಂಬಸ್ಥರು ಶಕುಂತಲಾ ಎದ್ದು ಕುಳಿತಿರುವುದನ್ನು ಆಶ್ಚರ್ಯ ಪಟ್ಟಿದ್ದಾರೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ ಎಂದು ವರದಿಯಾಗಿದೆ.

  • ಫುಟ್‍ಪಾತ್ ಮೇಲೆ ವಾಹನಗಳ ಹಾವಳಿ- ಬೀದಿಗಿಳಿದ ಹಿರಿಯ ನಾಗರಿಕರು

    ಫುಟ್‍ಪಾತ್ ಮೇಲೆ ವಾಹನಗಳ ಹಾವಳಿ- ಬೀದಿಗಿಳಿದ ಹಿರಿಯ ನಾಗರಿಕರು

    ಬೆಂಗಳೂರು: ನಗರದಲ್ಲಿ ಫುಟ್ ಪಾತ್ ಗಳ ಪರಿಸ್ಥಿತಿ ಹೇಗಿದೆ ಅನ್ನೋದನ್ನು ಎಲ್ಲರೂ ನೋಡಿದ್ದೀವಿ. ಫುಟ್ ಪಾತ್ ಮೇಲೆ ನಡೆಯೋದಕ್ಕಿಂತ ರೋಡಲ್ಲೇ ನಡೆದು ಹೋಗಬಹುದೇನೋ ಅನ್ನುವ ಮಟ್ಟಿಗೆ ಫುಟ್ ಪಾತ್ ಅನ್ನು ದ್ವಿಚಕ್ರ ವಾಹನ ಸವಾರರು ಆಕ್ರಮಿಸಿಕೊಂಡಿರುತ್ತಾರೆ. ಆದರೆ ಇದನ್ನು ತಡೆಯಲು ವೃದ್ಧರಿಬ್ಬರು ಪಣ ತೊಟ್ಟಿದ್ದಾರೆ.

    ಹೌದು. ನಗರದ ಇಟ್ಟಮಡು ಜಂಕ್ಷನ್ ಬಳಿಯ ಅಕ್ಕಪಕ್ಕದ ಮನೆಯ ವೃದ್ಧರಾದ ಸುಬ್ರಮಣ್ಯಂ ಹಾಗೂ ಉಷಾ ಶ್ರೀಕಂಠನ್, ಪ್ರತಿ ದಿನ ಇದೇ ರಸ್ತೆಯಲ್ಲಿ ಓಡಾಡುತ್ತಾರೆ. ಆದರೆ ಇಲ್ಲಿನ ಫುಟ್ ಪಾತ್ ಮೇಲೆ ವಾಹನ ಚಾಲನೆಯಿಂದಾಗಿ ವೃದ್ಧರು, ಮಕ್ಕಳು ಮತ್ತು ವಿದ್ಯಾರ್ಥಿಗಳು ಗಾಬರಿ ಒಳಗಾಗುತ್ತಿದ್ದರು. ಹೀಗಾಗಿ ಸವಾರರಿಗೆ ರೂಲ್ಸ್ ಬ್ರೇಕ್ ಮಾಡಿಬೇಡಿ ಎಂದು ಎಂದು ವೃದ್ಧರು ಮನವಿ ಮಾಡುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.

    ಇಬ್ಬರು ವೃದ್ಧರು ಕೈಯಲ್ಲಿ ಒಂದು ಬೋರ್ಡ್ ಹಿಡಿದು, ಫುಟ್ ಪಾತ್ ಮೇಲೆ ಬರೋ ಗಾಡಿ ಸವಾರರಿಗೆ ಬುದ್ಧಿ ಹೇಳುತ್ತಿದ್ದಾರೆ. ಕೆಲವರು ಸರಿ  ಎಂದು ಹೋದರೆ ಇನ್ನೂ ಕೆಲವರು ಇವರನ್ನು ಛೇಡಿಸಿ ಹೋಗುತ್ತಾರೆ. ಅದರೂ ಸುಮಾರು ಮೂರು- ನಾಲ್ಕು ಗಂಟೆಗಳ ಕಾಲ ರಸ್ತೆ ಬದಿಯ ಫುಟ್ ಪಾತ್ ಮೇಲೆ ನಿಂತು ನಿಯಮ ಪಾಲನೆ ಮಾಡುವಂತೆ ಬೈಕ್ ಸವಾರರಲ್ಲಿ ಕೇಳಿಕೊಳ್ಳುತ್ತಿದ್ದಾರೆ.

    ಜಾಗೃತಿ ಮೂಡಿಸಲು ಕಾರಣವೇನು?:
    ಒಂದು ದಿನ ಇವರು ತಮ್ಮ ನಾಯಿ ಜೊತೆಗೆ ಫುಟ್ ಪಾತ್ ಮೇಲೆ ವಾಕ್ ಮಾಡುವಾಗ ದ್ವಿಚಕ್ರ ವಾಹನ ಟಚ್ ಆಗಿದೆ. ಸ್ವಲ್ವದರಲ್ಲೇ ಒಂದು ಅನಾಹುತ ತಪ್ಪಿದೆ. ಇದನ್ನು ಇಲ್ಲಿಗೆ ಬಿಡಬಾರದು ಎಂದು ಪೊಲೀಸರಿಗೆ ಮಾಹಿತಿ ನೀಡಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ನಾವೇ ಇದರ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ತೀರ್ಮಾನಿಸಿ “ಟೂ ವೀಲರ್ಸ್ ಪ್ಲೀಸ್ ಯೂಸ್ ರೋಡ್ ನೋ ಫುಟ್ ಪಾತ್ “ಅನ್ನೊ ಬೋರ್ಡ್ ಹಿಡಿದುಕೊಂಡು ಗಂಟೆಗಳ ಕಾಲ ನಿಂತು ವಾಹನ ಸವಾರರಿಗೆ ಬುದ್ಧಿ ಹೇಳುತ್ತಿದ್ದಾರೆ. ಈ ಒಂದು ಘಟನೆಯೇ ವೃದ್ಧರು ಈ ವಯಸ್ಸಿನಲ್ಲಿ ಇಂತಹ ನಿರ್ಧಾರ ತೆಗೆದುಕೊಳ್ಳಲು ಕಾರಣವಾಗಿದೆ.

    ಪರದೇಶಕ್ಕೆ ಹೋದಾಗ ನಮ್ಮವರೇ ನಿಯಮ ಪಾಲನೆ ಮಾಡುತ್ತಾರೆ. ಆದರೆ ನಮ್ಮ ದೇಶದಲ್ಲೇ ಈ ರೀತಿ ಮಾಡಿಲ್ಲ ಎಂದರೆ ಅದು ನಮ್ಮ ದೇಶಕ್ಕೆ ನಾವು ಮಾಡೋ ಅವಮಾನ. ಇನ್ನೂ ಕೆಲ ದಿನಗಳಲ್ಲೇ ನಮ್ಮ ಈ ಫುಟ್ ಪಾತ್ ಅನ್ನು ವೆಹಿಕಲ್ ಫ್ರೀ ಮಾಡುತ್ತೇವೆ ಎಂದು ವೃದ್ಧರು ಭರವಸೆ ನೀಡಿದ್ದಾರೆ. ಇದಕ್ಕೆ ಪೊಲೀಸ್ ಇಲಾಖೆಯೂ ಕೈ ಜೋಡಿಸಿದರೆ ಪಾದಚಾರಿಗಳಿಗೆ ಒಳಿತು ಮಾಡಿದಂತಾಗುತ್ತದೆ ಎಂಬುದು ಸಾರ್ವಜನಿಕರ ಆಶಯವಾಗಿದೆ.

  • ಸುರಪುರದ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು

    ಸುರಪುರದ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು

    ಯಾದಗಿರಿ: ಸಕಾಲಕ್ಕೆ ವೈದ್ಯರು ಚಿಕಿತ್ಸೆ ನೀಡದ ಹಿನ್ನೆಲೆ ಬಾಣಂತಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

    ಲಕ್ಷ್ಮಿ ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟ ಬಾಣಂತಿ. ಸುರಪುರ ತಾಲೂಕಿನ ರುಕ್ಮಾಪುರ ಗ್ರಾಮದ ನಿವಾಸಿಯಾದ ಲಕ್ಷ್ಮಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಸುಕಿನ ಜಾವವೇ ಲಕ್ಷ್ಮಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಲಕ್ಷ್ಮಿ ಮಗುವಿಗೆ ಜನ್ಮ ನೀಡಿದ ಖುಷಿಯಲ್ಲಿದ್ದರು. ಹೆರಿಗೆ ನಂತರ ಮತ್ತೆ ಲಕ್ಷ್ಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.

    ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ತೋರಿದ ಕಾರಣ ಬಾಣಂತಿ ಮೃತಪಟ್ಟಿದ್ದಾಳೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆದರೆ ಆಸ್ಪತ್ರೆ ವೈದ್ಯರು ಬಾಣಂತಿ ಶ್ವಾಸಕೋಶದ ಸಮಸ್ಯೆದಿಂದ ಬಳಲಿ ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv