Tag: Election 2019

  • ಲೋಕ ಸಮರದಲ್ಲಿ ಜಂಟಿ ಹೋರಾಟ ಫಿಕ್ಸ್-ಕೈ, ತೆನೆ ಕ್ಷೇತ್ರ ಹಂಚಿಕೆ ಬಹುತೇಕ ಅಂತಿಮ

    ಲೋಕ ಸಮರದಲ್ಲಿ ಜಂಟಿ ಹೋರಾಟ ಫಿಕ್ಸ್-ಕೈ, ತೆನೆ ಕ್ಷೇತ್ರ ಹಂಚಿಕೆ ಬಹುತೇಕ ಅಂತಿಮ

    ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯನ್ನು ಘೋಷಿಸಿಕೊಂಡಿದ್ದು, ಕ್ಷೇತ್ರಗಳ ಹಂಚಿಕೆ ಬಹುತೇಕ ಅಂತಿಮವಾಗಿದೆ.

    ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟವಾಗಿತ್ತು. ಹಾಲಿ ಸಂಸದರು ತಮ್ಮ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಹೈಕಮಾಂಡ್ ಮುಂದೆ ಅಸಮಾಧಾನ ಹೊರ ಹಾಕಿದ್ದರು. ಇದೀಗ ಬಹುತೇಕ ಕ್ಷೇತ್ರಗಳ ಹಂಚಿಕೆಯಾಗಿದ್ದು, ಕಾಂಗ್ರೆಸ್‍ಗೆ 20 ಸೀಟ್, ಜೆಡಿಎಸ್‍ಗೆ 8 ಸೀಟ್ ಎಂಬ ಮಾಹಿತಿ ಲಭ್ಯವಾಗಿದೆ. ಹಳೆ ಮೈಸೂರು ಭಾಗದಲ್ಲಿ ಮೂರು, ಬೆಂಗಳೂರು, ಮಲೆನಾಡು ಭಾಗದಲ್ಲಿ ತೆನೆಗೆ ಒಂದೊಂದು ಸೀಟು ಮತ್ತು ಉತ್ತರ ಕರ್ನಾಟಕದಲ್ಲಿ 3 ಕ್ಷೇತ್ರ ಬಿಟ್ಟುಕೊಡಲು ಕೈ ಚಿಂತನೆ ನಡೆಸಿದೆ.

    ಯಾವ ಕ್ಷೇತ್ರಗಳು?:
    ಮೈಸೂರು, ಮಂಡ್ಯ, ಹಾಸನ, ಬೆಂಗಳೂರು ಉತ್ತರ, ಶಿವಮೊಗ್ಗ, ಬೀದರ್, ವಿಜಯಪುರ, ರಾಯಚೂರು ಕೂಡ ಜೆಡಿಎಸ್ ತೆಕ್ಕೆಗೆ ಸಿಗಲಿದೆ. ಜೆಡಿಎಸ್ ತನ್ನ ಅನುಕೂಲಕ್ಕೆ ತಕ್ಕಂತೆ ಸೀಟು ಹಂಚಿಕೊಂಡಿದ್ದು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳನ್ನು ತನ್ನ ತೆಕ್ಕೆಯಲ್ಲೇ ಕಾಂಗ್ರೆಸ್ ಉಳಿಸಿಕೊಂಡಿದೆ. ದೋಸ್ತಿಗಳ ಸೀಟು ಹಂಚಿಕೆ ಬಹುತೇಕ ಅಂತಿಮವಾಗಿದ್ದು, ಅಧಿಕೃತ ಘೋಷಣೆ ಮಾಡಬೇಕಿದೆ. ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ವರಿಷ್ಠ ದೇವೇಗೌಡರು ಹೇಳಿದ್ದಾರೆ. ಬೆಂಗಳೂರು ಉತ್ತರದಿಂದ ದೇವೇಗೌಡರು ಮತ್ತು ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಸಾಧ್ಯತೆಗಳಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಮ್ಮ ಪಕ್ಷದಿಂದ ರಾಜ್ಯದ 28 ಕ್ಷೇತ್ರಗಳಿಂದ ಸ್ಪರ್ಧೆ: ಉಪೇಂದ್ರ

    ನಮ್ಮ ಪಕ್ಷದಿಂದ ರಾಜ್ಯದ 28 ಕ್ಷೇತ್ರಗಳಿಂದ ಸ್ಪರ್ಧೆ: ಉಪೇಂದ್ರ

    -ಅಭ್ಯರ್ಥಿಗಳ ಆಯ್ಕೆ ಹೇಗಿರುತ್ತೆ?

    ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಗೆ ನಮ್ಮ ಪಕ್ಷದಿಂದ 28 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಎಂದು ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಮತ್ತು ಅಧ್ಯಕ್ಷ ಉಪೇಂದ್ರ ಹೇಳಿದ್ದಾರೆ.

    ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಗುರುತು ಆಟೋ ಆಗಿದ್ದು, ಅಧಿಕಾರಕ್ಕಾಗಿ ನಾನು ಪಕ್ಷ ಮಾಡಿಲ್ಲ. ಜನರಿಗೆ ಒಳ್ಳೆಯದಾಗಬೇಕು ಮತ್ತು ವ್ಯವಸ್ಥೆ ಬದಲಾವಣೆ ಆಗಬೇಕು ಅನ್ನೋದು ನಮ್ಮ ಗುರಿಯಾಗಿದೆ. ಪ್ರತಿಯೊಬ್ಬರಿಗೂ ಬದಲಾವಣೆ ಬೇಕು ಅನ್ನಿಸುತ್ತಿದೆ. ಹಾಗಾಗಿ ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

    ಚುನಾವಣಾ ಪ್ರಣಾಳಿಕೆ ಎಂಬ ಪರಿಕಲ್ಪನೆ ತಪ್ಪು. ನಿಜವಾದ ಪ್ರಣಾಳಿಕೆ ಏನು ಎಂಬುದು ಜನರಿಗೆ ಗೊತ್ತಿದೆ. ನಮ್ಮ ಅಭ್ಯರ್ಥಿ ಜನರೊಂದಿಗೆ ಚರ್ಚಿಸಿ ಮಾಹಿತಿ ಸಂಗ್ರಹಿಸುತ್ತಾರೆ. ಹಾಗಾಗಿ ಅಭ್ಯರ್ಥಿಗಳೇ ನಮ್ಮ ಪಕ್ಷದ ಪ್ರಣಾಳಿಕೆ ಆಗಿರುತ್ತಾರೆ. ಈ ವಿಷಯಲ್ಲಿ ನಾವು ಒಬ್ಬಿಬ್ಬರ ಅಭಿಪ್ರಾಯವನ್ನು ಪಡೆದುಕೊಳ್ಳಲ್ಲ. ಶೇ.55ರಷ್ಟು ಜನರ ಅಭಿಪ್ರಾಯವನ್ನು ನಮ್ಮ ಪಕ್ಷ ಒಪ್ಪಿಕೊಳ್ಳಲಿದೆ. ಅದರಂತೆಯೇ ಕೆಲಸವನ್ನು ಮಾಡಲಿದೆ ಎಂದು ಉಪೇಂದ್ರ ಚುನಾವಣಾ ತಯಾರಿಯನ್ನು ಬಿಚ್ಚಿಟ್ಟರು.

    ಸಂವಿಧಾನದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಲು ಇಂತಹದೇ ವಿದ್ಯಾರ್ಹತೆ ಇರಬೇಕೆಂದು ಹೇಳಿಲ್ಲ. ಆಡಳಿತ ನಡೆಸಲು ಕೆಎಎಸ್, ಐಎಎಸ್ ಅಂತಹ ಅಧಿಕಾರಿಗಳು ಅಡಳಿತ ವರ್ಗದಲ್ಲಿರುತ್ತಾರೆ. ನಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಮತ್ತು ನಮ್ಮನ್ನು ಪ್ರತಿನಿಧಿಸುವ ವ್ಯಕ್ತಿಯನ್ನು ಗೆಲ್ಲಿಸಬೇಕು. ಹಾಗಾಗಿ ಅಭ್ಯರ್ಥಿಗಳೇ ನಮ್ಮ ಚುನಾವಣಾ ಪ್ರಣಾಳಿಕೆ ಆಗಿರುತ್ತಾರೆ ಎಂದು ಹೇಳಿದರು.

    ನಮ್ಮ ಪಕ್ಷದಿಂದ ಎರಡು ಪ್ರಣಾಳಿಕೆ ಇರುತ್ತದೆ. ಪಕ್ಷದಿಂದ ಸ್ಪರ್ಧೆ ಮಾಡುವ ಇಚ್ಚಿಸುವ ನಾಯಕರು ತಮ್ಮ ಪ್ರಣಾಳಿಕೆ ಮೂಲಕ ಬನ್ನಿ. ಪ್ರಣಾಳಿಕೆಯಲ್ಲಿ ನೀವು ಹೇಗೆ ಕೆಲಸ ಮಾಡುತ್ತೀರಿ? ಜನರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಹೇಗೆ ನಿಲ್ಲುತ್ತೀರಿ ಎಂಬುದನ್ನು ನಮಗೆ ತೋರಿಸಬೇಕು. ಒಬ್ಬ ವ್ಯಕ್ತಿಯನ್ನು ಈ ಕ್ಷೇತ್ರದಿಂದ ಚುನಾವಣೆಗೆ ನಿಲ್ಲುತ್ತಿದ್ದಾರೆಂದು ಒಂದು ಚಿಕ್ಕ ಸಮೀಕ್ಷೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಸಮೀಕ್ಷೆಯಲ್ಲಿ ಉತ್ತಮ ಪ್ರತಿಕ್ರಿಯೆ ಬರದೇ ಇದ್ದಲ್ಲಿ ಅಂತವರನ್ನು ರಿಜೆಕ್ಟ್ ಮಾಡಲಾಗುವುದು. ಪಕ್ಷದ ಎಲ್ಲಾ ಚಟುವಟಿಕೆಗಳು ಪಾರದರ್ಶಕವಾಗಿ ಇರಲಿವೆ. ಗೆದ್ದ ಬಳಿಕ ಏನು ಕೆಲಸ ಮಾಡುತ್ತಾರೆ ಎಂಬುದರ ಬಗ್ಗೆ ಅಫಡವಿಟ್ ಪಡೆದುಕೊಳ್ಳುತ್ತೇವೆ. ಚುನಾವಣೆಯಲ್ಲಿ ನಾನು ಸ್ಪರ್ಧಿಸುವ ಬಗ್ಗೆ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದು ತಿಳಿಸಿದರು.

    https://youtu.be/ZqLSa6pP7LU

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಪ್ಪ ಮಕ್ಕಳ ತಂಟೆಗೆ ಹೋಗಬೇಡಿ-ಬಿಜೆಪಿ ಹೈಕಮಾಂಡ್‍ಗೆ ಕೊಟ್ಟಿದ್ಯಾರು ಎಚ್ಚರ..!?

    ಅಪ್ಪ ಮಕ್ಕಳ ತಂಟೆಗೆ ಹೋಗಬೇಡಿ-ಬಿಜೆಪಿ ಹೈಕಮಾಂಡ್‍ಗೆ ಕೊಟ್ಟಿದ್ಯಾರು ಎಚ್ಚರ..!?

    ಬೆಂಗಳೂರು: ಸದ್ಯ ಬಿಜೆಪಿಯದ್ದು ಅಕ್ಷರಶಃ ಬೆಂಕಿ ಜೊತೆಗಿನ ಸರಸ. ಅದಕ್ಕೆ ಕಾರಣನೂ ಇದೆ. ಮೇಲ್ನೋಟಕ್ಕೆ ಬಿಜೆಪಿ ಸರ್ಕಾರ ಉರುಳಿಸೋಕೆ ಆಪರೇಶನ್ ನಡೆಸ್ತಿದೆ ಅನ್ನೋದಷ್ಟೇ ಗೊತ್ತಾಗುತ್ತಿದೆ. ಆದ್ರೆ ಇದರ ಸಾಧಕ ಬಾಧಕಗಳನ್ನ ಬಗ್ಗೆ ವಿಶ್ಲೇಷಣೆ ಮಾಡ್ತಾ ಹೋದ್ರೆ ಬಿಜೆಪಿ ಅದೆಂಥಾ ರಿಸ್ಕ್ ತೆಗೆದುಕೊಂಡಿದೆ ಅನ್ನೋದು ಗೊತ್ತಾಗುತ್ತದೆ. ಈಗಾಗಲೇ ಬಿಜೆಪಿಯ ಒಂದು ವರ್ಗ ನೇರವಾಗಿ ಅಮಿತ್ ಶಾ ಮತ್ತು ಮೋದಿಗೆ ಒಂದು ಎಚ್ಚರಿಕೆಯ ಸಂದೇಶ ರವಾನಿಸಿದೆಯಂತೆ. ಬೆಂಕಿ ಜೊತೆ ಯಾವುದೇ ಕಾರಣಕ್ಕೂ ಆಟ ಆಡೋದು ಬೇಡ ಅನ್ನೋ ಸೂಕ್ಷ್ಮ ಸಂಗತಿಯನ್ನ ಹೈಕಮಾಂಡ್ ಆಪರೇಷನ್ ಕಮಲಕ್ಕೆ ಮುಂದಾದ ನಾಯಕರಿಗೆ ಸೂಚಿಸಿದೆಯಂತೆ.

    ಆಪರೇಶನ್ ಮಾಡೋದಕ್ಕೆ ಏನೂ ತೊಂದರೆಯಿಲ್ಲ. ಒಂದು ವೇಳೆ ಆಪರೇಶನ್ ಫೇಲ್ಯೂರ್ ಆದ್ರೆ ಮಾತ್ರ ಬಿಜೆಪಿಗೆ ದೊಡ್ಡ ಹೊಡೆತ ಕೊಡುತ್ತೆ ಅಂತ ಈಗಾಗಲೇ ಒಂದು ವರ್ಗದ ಹೈಕಮಾಂಡ್‍ಗೆ ಸಂದೇಶ ತಲುಪಿಸಿದೆ. ಅದಕ್ಕಾಗಿನೇ ಈ ಬಾರಿ ಕೊನೆ ಕ್ಷಣದವರೆಗೂ ಗುಟ್ಟು ಬಿಟ್ಟುಕೊಡದೇ ಸೀಕ್ರೆಟ್ ಆಗಿಯೇ ಮಾಡಲಾಗಿತ್ತು. 2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಪದೇ ಪದೇ ಅಪ್ಪ-ಮಕ್ಕಳನ್ನ ಟಾರ್ಗೆಟ್ ಮಾಡ್ತನೇ ಇದ್ದರು. ಕುಮಾರಸ್ವಾಮಿ ಮತ್ತು ದೇವೇಗೌಡರನ್ನ ಟೀಕೆ ಮಾಡಿದ್ದರು. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಲೂ ಇದೂ ಒಂದು ಕಾರಣ ಅನ್ನೋ ಮಾತಿದೆ. ಯಾಕಂದ್ರೆ ಅಪ್ಪ-ಮಕ್ಕಳನ್ನ ಸಿದ್ದು ಹೀಯಾಳಿಸಿದ್ದಕ್ಕೆ ಒಕ್ಕಲಿಗರು ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದರು ಎನ್ನಲಾಗುತ್ತೆ.

    ಬಿಜೆಪಿ ವಿರುದ್ಧ ಒಕ್ಕಲಿಗರು ತಿರುಗಿಬೀಳ್ತಾರಾ..!?:
    ಆವತ್ತು ಹೆಚ್‍ಡಿಡಿ-ಹೆಚ್‍ಡಿಕೆಯನ್ನ ಸಿದ್ದು ಟಾರ್ಗೆಟ್ ಮಾಡಿದ್ದಕ್ಕೇನೆ ಒಕ್ಕಲಿಗರ ಪ್ರಾಬಲ್ಯ ಇರುವ ಜಿಲ್ಲೆಗಳಲ್ಲಿ ಜೆಡಿಎಸ್ ಕ್ಲೀನ್ ಸ್ವೀಪ್ ಮಾಡಿತ್ತು ಅಂತ ಹೇಳಲಾಗುತ್ತೆ. ಕಾಂಗ್ರೆಸ್ ವಿರುದ್ಧದ ಸಿಟ್ಟಿಗೆ ಸಿಡಿದೆದ್ದು ಜೆಡಿಎಸ್‍ಗೆ ಮತ ಹಾಕಿರಬಹುದು ಅನ್ನೋ ಮಾತಿದೆ. ಈಗ ಬಿಜೆಪಿ ಇದೆ ಕೆಲಸವನ್ನ ಮಾಡ್ತಾ ಇದೆ. ಈಗ ಸರ್ಕಾರ ಬಿದ್ದು ಹೋದ್ರೆ ಒಕ್ಕಲಿಗರ ಕೋಪ ಬಿಜೆಪಿ ಕಡೆಗೆ ತಿರುಗಬಹುದು ಎನ್ನಲಾಗ್ತಿದೆ. ಈ ಭಯ ಬಿಜೆಪಿಯ ಒಂದು ವರ್ಗಕ್ಕೆ ಈಗಾಗಲೇ ಕಾಡೋಕೆ ಶುರುವಾಗಿದ್ಯಂತೆ. ಇದನ್ನ ಹೈಕಮಾಂಡ್ ಗಮನಕ್ಕೂ ತರಲಾಗಿದೆ ಎಂಬ ಮಾಹಿತಿಗಳು ಲಭ್ಯವಾಗುತ್ತಿವೆ.

    ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ, ತುಮಕೂರು ಮೈಸೂರು ಭಾಗಗಳಲ್ಲಿ ಒಕ್ಕಲಿಗರ ಪ್ರಾಬಲ್ಯವಿದೆ. ಬಿಜೆಪಿ ಸರ್ಕಾರ ಬೀಳಿಸೋಕೆ ಹೋದ್ರೆ ಒಕ್ಕಲಿಗರ ಕೋಪ ಬಿಜೆಪಿ ಕಡೆಗೆ ತಿರುಗಬಹುದು. ಇದ್ರಿಂದ ಬಿಜೆಪಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಐದರಿಂದ ಆರು ಕ್ಷೇತ್ರಗಳಲ್ಲಿ ಹಿನ್ನಡೆ ಉಂಟಾಗಬಹುದು ಅಥವಾ ಕಳೆದುಕೊಳ್ಳಬೇಕಾಗಬಹುದು ಅಂತ ಬಿಜೆಪಿಯ ಒಂದು ವರ್ಗ ಹೈಕಮಾಂಡ್‍ಗೆ ವಿಷಯವನ್ನು ರವಾನಿಸಿದೆ ಎನ್ನಲಾಗುತ್ತಿದೆ.

    ಜೇನುಗೂಡಿಗೆ ಕಲ್ಲು:
    ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನ ಕೆಡವಿದ್ರೆ ಬಿಜೆಪಿಗೆ ಇಂತದ್ದೊಂದು ಆತಂಕ ಇದ್ಯಂತೆ. ಇದೊಂದು ರೀತಿಯಲ್ಲಿ ಜೇನುಗೂಡಿಗೆ ಕಲ್ಲೆಸೆದಂತೆ ಅಂತ ಹೇಳಲಾಗ್ತಿದೆ. ಮತ್ತೊಂದು ಕಡೆ ಈಗ ಲಿಂಗಾಯತರು ಕೂಡ ಸಂಪೂರ್ಣವಾಗಿ ಬಿಜೆಪಿ ಕಡೆಗಿಲ್ಲ. ಈಗ ಬಿಎಸ್‍ವೈ ಲಿಂಗಾಯತರ ಏಕೈಕ ಸರದಾರನಾಗಿ ಉಳಿದಿಲ್ಲ. ಹೀಗಾಗಿ ಈಗ ಒಕ್ಕಲಿಗರ ಜೇನುಗೂಡಿಗೆ ಕೈ ಹಾಕಿದ್ರೆ ಎಲ್ಲಿ ಲೋಕಸಭಾ ಚುನಾವಣೆಗೆ ಎಫೆಕ್ಟ್ ಆಗುತ್ತಾ ಅನ್ನೋ ಭಯ ಕೆಲ ಬಿಜೆಪಿ ನಾಯಕರಿಗಿದ್ಯಂತೆ. ಅದಕ್ಕಾಗಿನೇ ಪಕ್ಕಾ ಆಪರೇಷನ್ ಸಕ್ಸಸ್ ಆಗೋದಾದ್ರೆ ಮಾತ್ರ ಕೈ ಹಾಕಿ ಅಂತ ಹೈಕಮಾಂಡ್ ಹೇಳಿದೆ ಎನ್ನಲಾಗ್ತಿದೆ. ಇದರ ಜೊತೆಗೆ ಯಡಿಯೂರಪ್ಪನವರನ್ನ ಸಂಪೂರ್ಣವಾಗಿ ನಂಬಿಕೊಂಡು ಹೋದ್ರು ಕಷ್ಟ ಅನ್ನೋ ಎಚ್ಚರಿಕೆಯನ್ನ ಹೈಕಮಾಂಡ್‍ಗೆ ಆ ವರ್ಗ ತಲುಪಿಸಿದೆ ಎನ್ನಲಾಗ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲೋಕಸಭೆ ಚುನಾವಣೆ ಗೆಲ್ಲಲು ಅಮಿತ್ ಶಾ ಹೊಸ ಮಂತ್ರ ‘ಮಿಷನ್ 41’!

    ಲೋಕಸಭೆ ಚುನಾವಣೆ ಗೆಲ್ಲಲು ಅಮಿತ್ ಶಾ ಹೊಸ ಮಂತ್ರ ‘ಮಿಷನ್ 41’!

    -ಕರ್ನಾಟಕದ ಓರ್ವ ನಾಯಕನಿಗೆ ಸಿಕ್ತು ‘ಮಿಷನ್ 41’ನಲ್ಲಿ ಎಂಟ್ರಿ!
    -ಮೂವರ ನಾಯಕತ್ವದಲ್ಲಿ ‘ಮಿಷನ್ 41’ ಕಾರ್ಯಾಚರಣೆ!

    ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲ ರಾಜಕೀಯ ಪಕ್ಷಗಳು ಗೆಲುವಿನ ರೂಪುರೇಷಗಳನ್ನು ಸಿದ್ಧಪಡಿಸುತ್ತಿವೆ. ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡಿದ್ದು, ಲೋಕಸಭೆ ಚುನಾವಣೆಯತ್ತ ತನ್ನ ಚಿತ್ತವನ್ನು ಹರಿಸಿದೆ. ಆಡಳಿತ ರೂಢ ಬಿಜೆಪಿ ಸಹ ಮತ್ತೊಮ್ಮೆ ಮೋದಿ ಪಿಎಂ ಎಂಬ ಹೇಳಿಕೆ ಮೂಲಕವೇ ಚುನಾವಣೆ ಪ್ರಚಾರಕ್ಕೆ ಹೆಜ್ಜೆ ಇಟ್ಟಿದೆ. ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ‘ಮಿಷನ್ 41’ ಎಂಬ ಹೊಸ ಅಸ್ತ್ರವನ್ನು ಪ್ರಯೋಗಿಸಲು ಮುಂದಾಗಿದ್ದಾರೆ.

    ಈಗಾಗಲೇ ಚುನಾವಣಾ ಚಾಣಕ್ಯ ಅಮಿತ್ ಶಾ ದೇಶದಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದು, ಪಕ್ಷ ಸಂಘಟನೆಯಲ್ಲಿ ಬ್ಯುಸಿಯಾಗಿದ್ದಾರೆ. ದೇಶದ ರಾಜಧಾನಿಯಲ್ಲಿ ಸಾಲು ಸಾಲು ಸಭೆಗಳನ್ನು ಅಮಿತ್ ಶಾ ಅವರು ನಡೆಸುತ್ತಿದ್ದು, ಎಲ್ಲ ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಚುನಾವಣಾ ತಯಾರಿ ಸೇರಿದಂತೆ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ಜನರತ್ತ ತಲುಪಿಸಿ ಎಂಬ ಸಂದೇಶವನ್ನು ರವಾನಿಸಿದ್ದಾರಂತೆ. ಈ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲಿಯೂ ಬಿಜೆಪಿ ನಾಯಕರು ತಮ್ಮ ಜಿಲ್ಲೆಗಳಲ್ಲಿ ಸಭೆಗಳನ್ನು ಮಾಡುತ್ತಿದ್ದಾರೆ.

    ಏನದು ಮಿಷನ್ 41?
    ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಅಮಿತ್ ಶಾ 41 ಜನರ ವಿಶೇಷ ತಂಡವನ್ನು ರಚನೆ ಮಾಡಿಕೊಂಡಿದ್ದಾರೆ. ಈ ತಂಡ ಮೂರು ವಿಭಾಗಗಳಾಗಿ ವಿಂಗಡಿಸಲಾಗಿದ್ದು, ಮೂವರ ನಾಯಕತ್ವದಲ್ಲಿ ಕಾರ್ಯನಿರ್ವಹಿಸಲಿದೆ. ಈ ತಂಡಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷರಾಗಲಿದ್ದಾರೆ. ಮೂರು ತಂಡಗಳಿಗೂ ಬಿಜೆಪಿ ನಾಯಕರಾದ ರಾಜನಾಥ್ ಸಿಂಗ್, ಅರುಣ್ ಜೇಟ್ಲಿ ಮತ್ತು ನಿತಿನ್ ಗಡ್ಕರಿ ತಂಡಗಳನ್ನು ಮುನ್ನಡೆಸಲಿದ್ದಾರೆ.

    ಚುನಾವಣಾ ಪ್ರಣಾಳಿಕೆ ಕಮೀಟಿಯ ಅಧ್ಯಕ್ಷರಾಗಿ ರಾಜನಾಥ್ ಸಿಂಗ್, ಚುನಾವಣಾ ಪ್ರಚಾರ ಕಮೀಟಿಗೆ ವಿತ್ತ ಸಚಿವ ಅರುಣ್ ಜೇಟ್ಲಿ ಮತ್ತು ಸಂಕಲ್ಪ ಪತ್ರ (ವಿವಿಧ ಭಾಗಗಳಲ್ಲಿ ಪ್ರಣಾಳಿಕೆಯ ಪ್ರಚಾರ) ಕಮೀಟಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ನೇಮಿಸಲಾಗಿದೆ. ರಾಜನಾಥ್ ಸಿಂಗ್ ಅವರ ಕಮೀಟಿ 20 ಸದಸ್ಯರನ್ನು ಒಳಗೊಂಡಿದ್ರೆ, ಅರುಣ್ ಜೇಟ್ಲಿ ಕಮೀಟಿ 8 ಮತ್ತು ನಿತಿನ್ ಗಡ್ಕರಿ ಕಮೀಟಿ 13 ಸದಸ್ಯರನ್ನು ಒಳಗೊಂಡಿದೆ.

    ಚುನಾವಣಾ ಪ್ರಣಾಳಿಕೆ ಕಮೀಟಿ: ರಾಜನಾಥ್ ಸಿಂಗ್ (ಅಧ್ಯಕ್ಷರು), ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಮನ್, ಥಾವರಚಂದ್ ಗೆಹ್ಲೋಟ್, ರವಿಶಂಕರ್ ಪ್ರಸಾದ್, ಪೀಯೂಬ್ ಗೋಯಾಲ್, ಮುಖ್ತರ್ ನಕಯಿ, ಕೆ.ಜಿ.ಅಲಫೊಂಸ್, ಶಿವರಾಜ್ ಸಿಂಗ್ ಚೌಹಾಣ್, ಕಿರಣ್ ರಿಜೂಜು, ಸುಶೀಲ್ ಮೋದಿ, ಕೇಶವ್ ಪ್ರಸಾದ್, ಅರ್ಜುನ್ ಮುಂಡಾ, ರಾಮ್ ಮಾಧವ್, ಭೂಪೇಂದ್ರ ಯಾದವ್, ನಾರಾಯಾಣ ರಾಣೆ, ಮೀನಾಕ್ಷಿ ಲೇಖಿ, ಸಂಜಯ್ ಪಸ್ವಾನ್, ಹರಿ ಬಾಬು ಮತ್ತು ರಾಜೇಂದ್ರ ಮೋಹನ್ ಸಿಂಗ್.

    ಚುನಾವಣಾ ಪ್ರಚಾರ ಕಮೀಟಿ: ಅರುಣ್ ಜೇಟ್ಲಿ ಟೀಂ, ಪೀಯೂಬ್ ಗೋಯಾಲ್, ರಾಜವರ್ಧನ್ ರಾಥೋಡ, ಅನಿಲ್ ಜೈನ್, ಮಹೇಶ್ ಶರ್ಮಾ, ಸತೀಶ್ ಉಪಾದ್ಯಯ, ರಾಜೀವ್ ಚಂದ್ರಶೇಖರ್ ಮತ್ತು ಶತ್ರುಘ್ಞಾ ಸಿನ್ಹಾ.

    ಸಂಕಲ್ಪ ಪತ್ರ : ನಿತಿನ್ ಗಡ್ಕರಿ, ಕೈಲಾಶ್, ಸದಾನಂದ ಗೌಡ, ಕಲರಾಜ್ ಮಿಶ್ರಾ, ಶಿವ ಪ್ರಸಾದ್ ಶುಕ್ಲಾ, ವಿಜಯ್ ಸಾಪಲಾ, ಎಸ್.ಎಸ್. ಅಹಲುವಾಲಿಯಾ, ಬಂಡಾರ ದತ್ತಾತ್ರೇಯ, ಸರದಾರ್ ಆರ್.ಪಿ. ಸಿಂಗ್ ಮತ್ತು ಭೂಪೇಂದ್ರ ಸಿಂಗ್.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಸುಷ್ಮಾ ಸ್ವರಾಜ್

    ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಸುಷ್ಮಾ ಸ್ವರಾಜ್

    ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

    ಮಧ್ಯಪ್ರದೇಶದ ಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುಷ್ಮಾ ಸ್ವರಾಜ್ ಅವರು ಈ ಕುರಿತು ಹೇಳಿಕೆ ನೀಡಿದ್ದು, ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಾರದು ಎಂದು ತೀರ್ಮಾನ ಮಾಡಿದ್ದೇನೆ. ಆದರೆ ಈ ಕುರಿತು ಪಕ್ಷ ಅಂತಿಮ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

    ತಮ್ಮ ತೀರ್ಮಾನದ ಕುರಿತು 66 ವರ್ಷದ ಸುಷ್ಮಾ ಅವರು ಪಕ್ಷದ ಮುಖಂಡರಿಗೆ ಮಾಹಿತಿ ನೀಡಿದ್ದಾಗಿ ಸ್ಪಷ್ಟನೆ ನೀಡಿದ್ದು, ಅವರ ಈ ತೀರ್ಮಾನಕ್ಕೆ ಆರೋಗ್ಯ ಸಮಸ್ಯೆಯೇ ಕಾರಣ ಎನ್ನಲಾಗಿದೆ.

    ಸುಷ್ಮಾ ಸ್ವರಾಜ್ ಅವರು ಮಧ್ಯಪ್ರದೇಶದ ವಿದಿಶಾ ಕ್ಷೇತ್ರದ ಸಂಸದರಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಸುಷ್ಮಾ ಸ್ವರಾಜ್ ಅವರು ಪಾರ್ಲಿಮೆಂಟರಿಗೆ ಗೈರಾಗಿದ್ದ ಕುರಿತ ಪ್ರಶ್ನೆ ಮಾಡಿ ಕ್ಷೇತ್ರದಲ್ಲಿ ಪೋಸ್ಟರ್ ಚಳುವಳಿ ಮಾಡಲಾಗಿತ್ತು. ಈ ಪ್ರತಿಭಟನೆ ಕುರಿತು ಇಂದು ಮಾಧ್ಯಮಗಳು ಪ್ರಶ್ನೆ ಮಾಡಿದ ವೇಳೆ ಸುಷ್ಮಾ ಸ್ವರಾಜ್ ತಮ್ಮ ನಿರ್ಧಾರವನ್ನು ಪ್ರಕಟಿಸಿದರು. ಆದರೆ ಸುಷ್ಮಾ ಸ್ವರಾಜ್ ಅವರ ಕಾರ್ಯಕ್ಷಮತೆ, ವಿದೇಶಿ ವ್ಯವಹಾರದಲ್ಲಿನ ಅವರ ಕೌಶಲ್ಯಗಳು ಹಾಗೂ ಸದನದಲ್ಲಿನ ಅವರ ನಿರ್ವಹಣೆಯನ್ನು ಗಮನದಲ್ಲಿಟ್ಟುಕೊಂಡು ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಸಾಧ್ಯತೆಗಳಿವೆ.

    ಕುಟುಂಬ ಮೂಲಗಳ ಮಾಹಿತಿ ಅನ್ವಯ ಸುಷ್ಮಾ ಸ್ವರಾಜ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಈ ಸಂಬಂಧ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ ಸುಷ್ಮಾ ಅವರು ತಮ್ಮ ಜೀವನದಲ್ಲಿ 11 ಚುನಾವಣೆಗಳನ್ನು ಎದುರಿಸಿದ್ದು, ಅವರ ನಿರ್ಧಾರದ ಹಿಂದೆ ರಾಜಕೀಯ ಕಾರಣಗಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. 2016 ರಲ್ಲಿ ಕಿಡ್ನಿ ಕಸಿಗೆ ಒಳಗಾಗಿದ್ದ ಸುಷ್ಮಾ ಸ್ವರಾಜ್ ಅವರು ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಅಮೇಥಿಯಲ್ಲಿ 10 ಸಾವಿರ ಸೀರೆ ಹಂಚಿದ್ರು ಸ್ಮೃತಿ ಇರಾನಿ!

    ಅಮೇಥಿಯಲ್ಲಿ 10 ಸಾವಿರ ಸೀರೆ ಹಂಚಿದ್ರು ಸ್ಮೃತಿ ಇರಾನಿ!

    ಲಕ್ನೋ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಬರೋಬ್ಬರಿ 10 ಸಾವಿರ ಸೀರೆಗಳನ್ನು ಹಂಚಿದ್ದಾರೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸಚಿವೆ ಸೀರೆ ಹಂಚಲು ಮುಂದಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸುತ್ತಿದ್ದಾರೆ.

    ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿನಿಧಿಸುವ ಕ್ಷೇತ್ರ ಇದಾಗಿದ್ದು, ಈ ಬಾರಿ ಚುನಾವಣೆಯಲ್ಲಿ ಸ್ಮೃತಿ ಇರಾನಿ ಅಮೇಥಿ ಕ್ಷೇತ್ರದಿಂದಲೇ ಕಣಕ್ಕಿಳಿಯಲ್ಲಿದ್ದಾರೆ. ಅಮೇಥಿ ಕ್ಷೇತ್ರದ ರಾಜಕಾರಣದಲ್ಲಿ ಸಕ್ರಿಯರಾಗಿರುವ ಸ್ಮೃತಿ ಇರಾನಿ ಅಲ್ಲಿನ ಜನತೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

    ಸ್ಮೃತಿ ಇರಾನಿ ಅವರು ತಮ್ಮ ಆಪ್ತ ವಿಜಯ್ ಗುಪ್ತಾರ ಮುಖಾಂತರ ಶನಿವಾರ ಕಾರ್ಯಕ್ರಮದಲ್ಲಿ ಸೀರೆಗಳನ್ನು ವಿತರಣೆ ಮಾಡಲಾಗಿದೆ. ಅಮೇಥಿಯ ಬೂತ್ ಮಟ್ಟದ ಕಾರ್ಯಕರ್ತೆಯರಿಗೂ ಸೀರೆಗಳನ್ನು ನೀಡಲಾಗಿದೆ.

    ಪ್ರತಿ ಹೋಳಿ ಹಬ್ಬ ಮತ್ತು ದೀಪಾವಳಿಗೆ ಸ್ಮೃತಿ ಇರಾನಿ ಅವರು ಕ್ಷೇತ್ರದ ಸೋದರಿಯರಿಗೆ ಸೀರೆಗಳನ್ನು ನೀಡುವ ಮೂಲಕ ಶುಭಾಶಯ ತಿಳಿಸುತ್ತಾರೆ. ಹಾಗೆಯೇ ಈ ವರ್ಷವೂ ಸೀರೆಗಳನ್ನು ವಿತರಣೆ ಮಾಡಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಅಂತರಗಳಿಂದ ಸೋತ್ರೂ ಜನರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಕ್ಷೇತ್ರದ ಜನರು ಸ್ಮೃತಿ ಇರಾನಿ ಅವರನ್ನು ದೀದಿ (ಅಕ್ಕ) ಎಂದು ಕರೆಯುತ್ತಾರೆ ಎಂದು ಅಮೇಥಿಯ ಬಿಜೆಪಿ ಜಿಲ್ಲಾಧ್ಯಕ್ಷ ಉಮಾಶಂಕರ್ ಪಾಂಡೆ ತಿಳಿಸಿದ್ದಾರೆ.

    2014ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಮೃತಿ ಇರಾನಿ ಸ್ಪರ್ಧೆ ಮಾಡಿದ್ದರು. 2014ರಲ್ಲಿ ಅಮೇಥಿ ಕ್ಷೇತ್ರ ಇಡೀ ದೇಶದ ಗಮನವನ್ನ ಸೆಳೆದಿತ್ತು. 1998ರಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿ ಸಂಜಯ್ ಸಿಂಗ್ ಗೆಲುವು ಸಾಧಿಸಿದ್ದರು. ತದನಂತರ ಎದುರಾದ ಎಲ್ಲ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಜಯಭೇರಿ ಸಾಧಿಸಿದೆ. ಸ್ಮೃತಿ ಇರಾನಿ ಅವರು 2014ರ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರಿಗೆ ತೀವ್ರ ಪೈಪೋಟಿಯನ್ನು ನೀಡಿದ್ದರು. ರಾಹುಲ್ ಗಾಂಧಿ 4,08,651 ಮತಗಳನ್ನು ಪಡೆದ್ರೆ ಸ್ಮೃತಿ ಇರಾನಿ 3,00,748 ಮತ ಪಡೆಯುವ ಮೂಲಕ ಸೋಲು ಕಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೋದಿ ವಿರುದ್ಧ ರಾಗಾ ರಣಕಹಳೆ

    ಮೋದಿ ವಿರುದ್ಧ ರಾಗಾ ರಣಕಹಳೆ

    -ಕಾಂಗ್ರೆಸ್ ಹಿರಿಯರ ನಾಯಕರ ಸಭೆ ಹಿಂದಿನ ರಹಸ್ಯವೇನು?

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯುದ್ಧ ಸಾರಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಲೋಕಸಭೆ ಚುನಾವಣೆಗೆ ಭರ್ಜರಿ ತಾಲೀಮು ಮಾಡುತ್ತಿದ್ದಾರೆ. ಇತ್ತಿಚೇಗೆ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಿದ್ದ ರಾಹುಲ್ ಈಗ ಮತ್ತೊಮ್ಮೆ ಹಿರಿಯ ನಾಯಕರ ಸಭೆ ಕರೆದಿದ್ದಾರೆ.

    ಲೋಕಸಭೆ ಚುನಾವಣೆಗೆ ಎಳೆಂಟು ತಿಂಗಳು ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ರಣ ಕಹಳೆ ಮೊಳಗಿಸಿದ್ದಾರೆ. ರಫೇಲ್ ಯುದ್ದ ವಿಮಾನ ಖರೀದಿಯಲ್ಲಿ ಭಾರೀ ಹಗರಣ ನಡೆದಿದೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ ದೇಶದಲ್ಲಿ ಸಂಚಲನ ಮೂಡಿಸುತ್ತಿದ್ದಾರೆ. ಆಡಳಿತ ಪಕ್ಷದ ಮೇಲೆ ಮುಗಿಬಿದ್ದಿರುವ ಕಾಂಗ್ರೆಸ್ ನ ಯುವರಾಜ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆಲವು ಸಾಧಿಸಲು ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ.

    ವಾರದ ಹಿಂದಷ್ಟೇ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಸಿದ್ದ ರಾಹುಲ್ ಗಾಂಧಿ ಈಗ ಮತ್ತೆ ಕಾಂಗ್ರೆಸ್ ಹಿರಿಯ ನಾಯಕರ ಸಭೆ ಕರೆದಿದ್ದಾರೆ. ಎಲ್ಲ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಕಮೀಟಿ ಅಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರು ಹಾಗೂ ರಾಜ್ಯ ಉಸ್ತುವಾರಿಗಳ ಸಭೆ ಕರೆದಿದ್ದಾರೆ. ಬೆಳಗ್ಗೆ ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಸಭೆ ಏರ್ಪಾಡು ಮಾಡಲಾಗಿದ್ದು ರಾಹುಲ್ ಗಾಂಧಿ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯದಿಂದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಉಸ್ತುವಾರಿ ಕೆ.ಸಿ ವೇಣುಗೋಪಾಲ ಹಾಗೂ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಗಿಯಾಗಲಿದ್ದಾರೆ.

    ರಾಜ್ಯ ರಾಜಕಾರಣಕ್ಕೆ ಬೀಳುತ್ತಾ ಬ್ರೇಕ್?
    ಈಗಾಗಲೇ ಕರ್ನಾಟಕದಲ್ಲಿ ಮೈತ್ರಿ ಮಂತ್ರ ಪಠಿಸಿರುವ ರಾಹುಲ್ ಗಾಂಧಿ ರಾಷ್ಟ್ರೀಯ ಮಟ್ಟದಲ್ಲೂ ಮಹಾಮೈತ್ರಿ ಮಾಡಿಕೊಳ್ಳಲು ಪ್ಲಾನ್ ಮಾಡಿದ್ದಾರೆ. ಈಗಾಗಲೇ ಹಲವು ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್ ಗೆ ಬೆಂಬಲವೂ ನೀಡಿದ್ದು, ಇನ್ನುಳಿದ ಸಾಧ್ಯಸಾಧ್ಯತೆ ಕುರಿತು ಹಿರಿಯ ನಾಯಕರೊಂದಿಗೆ ರಾಹುಲ್ ಚರ್ಚಿಸಲಿದ್ದಾರೆ. ಕಾಂಗ್ರೆಸ್ ಬಲಿಷ್ಠ ಹಾಗೂ ದುರ್ಬಲ ಹೊಂದಿರುವ ರಾಜ್ಯಗಳ ಕುರಿತು ಚರ್ಚೆ ನಡೆಸಿ ಅಲ್ಲಿರುವ ಪ್ರಾದೇಶಿಕ ಪಕ್ಷಗಳ ಜೊತೆ ಮೈತ್ರಿ ಕುರಿತು ಚರ್ಚೆ ನಡೆಯಲಿದೆ. ಮೈತ್ರಿ ಜೊತೆಗೆ ಸೀಟು ಹೊಂದಾಣಿಕೆ ಹಾಗೂ ಮೋದಿ ಸರ್ಕಾರದ ರಾಜ್ಯ ಮಟ್ಟದಲ್ಲಿ ಕಾರ್ಯತಂತ್ರ ರೂಪಿಸುವ ಬಗ್ಗೆ ರಾಹುಲ್ ಗಾಂಧಿ ದೀರ್ಘ ಸಮಾಲೋಚನೆ ನಡೆಸಲಿದ್ದಾರೆ.

    ಆಪರೇಷನ್ ಕಮಲದ ಭೀತಿಯಲ್ಲಿ ಹೈರಾಣಗಿರುವ ರಾಜ್ಯ ಕಾಂಗ್ರೆಸ್ ನಾಯಕರು ಇಂದು ಮತ್ತೊಮ್ಮೆ ಹೈಕಮಾಂಡ್ ಮನೆ ಕದ ತಟ್ಟುವ ಸಾಧ್ಯತೆ ಇದೆ. ನಿಗಮ ಮಂಡಳಿ ನೇಮಕ ಸಂಪುಟ ವಿಸ್ತರಣೆ ಹೈಕಮಾಂಡ್ ತಡೆ ನೀಡಿದ ಬೆನ್ನೆಲ್ಲೆ ದೊಡ್ಡ ಮಟ್ಟದ ಅಸಮಾಧಾನ ಹೊರ ಬಂದಿದೆ. ಹೈಕಮಾಂಡ್ ಬಿಸಿ ಮುಟ್ಟಿಸಲೇಂದು ಮೊನ್ನೆ ಚೆನೈ ನತ್ತ ಮುಖ ಮಾಡಿದ ಕೆಲ ಶಾಸಕರು ಮುಂದಿನ ಪರಿಣಾಮದ ಬಗ್ಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರಂತೆ.

    ಶಾಸಕ ಎಂಟಿಬಿ ನಾಗರಾಜ್ ಸೇರಿ ಹಲವರು ಬಹಿರಂಗ ಹೇಳಿಕೆ ನೀಡಿದ್ದಾರೆ. ಈ ಪರಿಸ್ಥಿತಿ ಯನ್ನು ಗಂಭೀರವಾಗಿ ಪರಿಗಣಿಸಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ ಜೊತೆಗೆ ಚರ್ಚೆ ಮಾಡುವ ಸಾಧ್ಯತೆ ಇದೆ. ಅಕ್ಟೋಬರ್ 10 ಕ್ಕೆ ಸಂಪುಟ ವಿಸ್ತರಣೆಗೆ ಕಾದರೆ ಮೈತ್ರಿ ಸರ್ಕಾರಕ್ಕಿರುವ ಆಪತ್ತಿನ ಬಗ್ಗೆ ರಾಹುಲ್ ಗಾಂಧಿ ಗಮನಕ್ಕೆ ತರಲಿದ್ದಾರೆ. ಇದರ ಜೊತೆಗೆ ರಾಜ್ಯದ ಹಲವು ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿ ಶೀಘ್ರ ಸಂಪುಟ ವಿಸ್ತರಣೆ ಒಪ್ಪಿಗೆ ಪಡೆದುಕೊಳ್ಳುವ ಸಾಧ್ಯತೆ ಕೂಡಾ ಇದೆ.

    ಲೋಕಸಭೆ ಚುನಾವಣೆ ದೃಷ್ಟಿಯಿಂದ ಮಾದರಿ ಸರ್ಕಾರ ಎನ್ನಿಸಿಕೊಂಡಿರುವ ರಾಜ್ಯ ಮೈತ್ರಿ ಸರ್ಕಾರದ ಮೇಲೆ ನಿರೀಕ್ಷೆ ಇಟ್ಟುಕೊಂಡಿರುವ ರಾಹುಲ್ ಗಾಂಧಿ ಸರ್ಕಾರ ಉಳಿಸಿಕೊಳ್ಳಲು ಮುಂದೇನು ಪ್ಲಾನ್ ಮಾಡುತ್ತಾರೆ ಎಂಬುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv