Tag: Election Ambassador

  • ಚುನಾವಣಾ ರಾಯಭಾರಿಯಾಗಿ ಖ್ಯಾತನಟ ಸತೀಶ್ ನೀನಾಸಂ ನೇಮಕ

    ಚುನಾವಣಾ ರಾಯಭಾರಿಯಾಗಿ ಖ್ಯಾತನಟ ಸತೀಶ್ ನೀನಾಸಂ ನೇಮಕ

    ನ್ನಡದ ಹೆಸರಾಂತ ನಟ ಸತೀಶ್ ನೀನಾಸಂ (Ninasam Satish) ಅವರನ್ನು ಮಂಡ್ಯ (Mandya) ಜಿಲ್ಲಾ ಮತದಾನ ಜಾಗೃತಿ ರಾಯಭಾರಿಯನ್ನಾಗಿ (Election Ambassador) ಚುನಾವಣಾ ಆಯೋಗ ನೇಮಿಸಿದೆ. ಕರ್ನಾಟಕ ವಿಧಾನಸಭೆ (Assembly) ಚುನಾವಣೆ 2023 ಜಾರಿಯಲ್ಲಿದ್ದು, ಅತೀ ಹೆಚ್ಚು ಮತದಾನ ಆಗುವ ಉದ್ದೇಶದಿಂದ ಆಯೋಗವು ಮಂಡ್ಯ ಜಿಲ್ಲೆಯವರೇ ಆಗಿರುವ ಸತೀಶ್ ಅವರನ್ನು ನೇಮಿಸಿ ಜಾಗೃತಿ ಕಾರ್ಯಕ್ರಮವನ್ನು ಶುರು ಮಾಡಿದೆ.

    ನಿನ್ನೆ ಮಂಡ್ಯದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸತೀಶ್, ‘ಜಾತಿ, ಮತ, ಕುಲ ಯಾವುದನ್ನೂ ಲೆಕ್ಕಿಸದೇ, ಆಮಿಷಗಳಿಗೆ ಒಳಗಾಗದೇ ಪ್ರಮಾಣಿಕ ವ್ಯಕ್ತಿಗಳಿಗೆ ಮತದಾನ ಮಾಡಿ, ಮತದಾನ ಅಮೂಲ್ಯವಾದದ್ದು ಅದನ್ನು ಮಾರಿಕೊಳ್ಳಬೇಡಿ ಮತ್ತು ಹಾಳು ಮಾಡಬೇಡಿ’ ಎಂದು ಅವರು ಮಾತನಾಡಿದರು. ಇದನ್ನೂ ಓದಿ:ಖುಷ್ಬೂ ಮೊದಲ ಸಂಬಂಧದ ಬಗ್ಗೆ ಶಾಕಿಂಗ್‌ ಹೇಳಿಕೆ ನೀಡಿದ ತೆಲುಗು ನಟಿ

    ಮತದಾನದ ಶಕ್ತಿಯನ್ನು ಅರಿವು ಮಾಡಿಕೊಟ್ಟ ಸತೀಶ್, ‘ಮತದಾನ ಪ್ರಕ್ರಿಯೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗಿಯಾಗಿ. ನಾನ್ಯಾಕೆ ಮತದಾನ ಮಾಡಬೇಕು ಎಂದು ಆಲೋಚಿಸುವ ಬದಲು, ಮತದಾನ ಮಾಡಿದರೆ ಎಂತಹ ರಾಷ್ಟ್ರವನ್ನು ಕಟ್ಟಬಹುದು ಎನ್ನುವುದರತ್ತ ಯೋಚಿಸಿ. ರಾಜ್ಯದಲ್ಲೇ ಮಂಡ್ಯದಲ್ಲಿ ಅತೀ ಹೆಚ್ಚು ಮತದಾನ ಆಗುವಂತೆ ಮಾಡಬೇಕಾಗಿದ್ದು ನಮ್ಮೆಲ್ಲರ ಜವಾಬ್ದಾರಿ ಆಗಿದೆ’ ಎಂದು ಸತೀಶ್ ತಿಳಿಸಿದರು.

    ಮತದಾನದ ಕುರಿತಾಗಿ ಸತೀಶ್ ಯಾವಾಗಲೂ ಜಾಗೃತಿ ಮೂಡಿಸುತ್ತಲೇ ಬಂದಿದ್ದಾರೆ. ಈ ಬಾರಿ ಚುನಾವಣೆಯ ರಾಯಭಾರಿ ಆಗಿದ್ದರಿಂದ ಮತ್ತಷ್ಟು ಜವಾಬ್ದಾರಿ ತಗೆದುಕೊಂಡು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯದಲ್ಲಿ ಮಾತ್ರವಲ್ಲ ಕರ್ನಾಟಕದ ತುಂಬಾ ಅವರ ಅಭಿಮಾನಿಗಳು ಇದ್ದು ಮುಂದಿನ ದಿನಗಳಲ್ಲಿ ಅವರು ಬೇರೆ ಬೇರೆ ಜಿಲ್ಲೆಗಳಿಗೂ ರಾಯಭಾರಿ ಆಗಲಿ ಎನ್ನುವುದು ಸತೀಶ್ ಅಭಿಮಾನಿಗಳ ಆಸೆ.

    ಸದ್ಯ ಅಶೋಕ ಬ್ಲೇಡ್, ಮ್ಯಾಟ್ನಿ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಸತೀಶ್, ಹೊಸ ರೀತಿಯ ಆಲೋಚನೆಯನ್ನು ಮಾಡಬಲ್ಲಂತ ನಟ. ವಿಭಿನ್ನ ಸಿನಿಮಾಗಳ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ಕಾರಣದಿಂದಾಗಿಯೇ ಚುನಾವಣಾ ಆಯೋಗ ಅವರಿಗೆ ಮಹತ್ತರವಾದ ಜವಾಬ್ದಾರಿಯನ್ನು ನೀಡಿದೆ.

  • ಹಾವೇರಿ ಜಿಲ್ಲಾ ಚುನಾವಣಾ ರಾಯಭಾರಿಯಾಗಿ ಹನುಮಂತ ಆಯ್ಕೆ

    ಹಾವೇರಿ ಜಿಲ್ಲಾ ಚುನಾವಣಾ ರಾಯಭಾರಿಯಾಗಿ ಹನುಮಂತ ಆಯ್ಕೆ

    -ಮತದಾನ ನಿಮ್ಮ ಹಕ್ಕು, ಮಿಸ್ ಮಾಡ್ದೆ ವೋಟ್ ಮಾಡಿ

    ಹಾವೇರಿ: ಜಿಲ್ಲೆಯ ಚಿಲ್ಲೂರು ಬಡ್ನಿ ಗ್ರಾಮದ ಗಾಯಕ ಹನುಮಂತ ಲಮಾಣಿ ಹಾವೇರಿ ಜಿಲ್ಲಾ ಚುನಾವಣಾ ರಾಯಭಾರಿಯಾಗಿ ಆಯ್ಕೆ ಆಗಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತದಾನ ಮಾಡಿಸುವ ಉದ್ದೇಶದಿಂದ ಮತದಾರರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ಗಾಯಕ ಹನುಮಂತರನ್ನು ಆಯ್ಕೆ ಮಾಡಿದೆ. ಪರಿಣಾಮ ಜಿಲ್ಲೆಯಾದ್ಯಂತ ಸಂಚರಿಸಿ ಎಲ್ಲರು ತಪ್ಪದೇ ಮತದಾನ ಮಾಡಿ, ಮತದಾನ ನಿಮ್ಮ ಹಕ್ಕು ಎಂದು ಹನುಮಂತ ಅವರು ಅರಿವು ಮೂಡಿಸಲಿದ್ದಾರೆ.

    ಚುನಾವಣೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಐಕಾನ್ ಆಗಿ ಆಯ್ಕೆ ಆಗಿರುವ ಹನುಮಂತ ಅವರು ಈಗಾಗಲೇ ಜಿಲ್ಲೆಯಲ್ಲಿ ವಿವಿ ಪ್ಯಾಟ್ ಬಗ್ಗೆ ಜಾಗೃತಿ ಮೂಡಿಸಲು ಮಾದರಿಯನ್ನು ನೀಡಿದ್ದಾರೆ. ಹನುಮಂತ ಅವರ ಗಾಯನಕ್ಕೆ ರಾಜ್ಯದ ಜನ ಮೆಚ್ಚುಗೆ ಸೂಚಿಸಿದ್ದರು. ಸರಿಗಮಪ ಶೋ ರನ್ನರ್ ಅಪ್ ಬಳಿಕ ಹನುಮಂತ ಯಾವ ಪಕ್ಷದ ಪರ ಪ್ರಚಾರ ಮಾಡಲಿದ್ದಾರೆ ಎಂಬ ಕುತೂಹಲವೂ ಮೂಡಿತ್ತು. ಅಲ್ಲದೇ ಹಲವು ಪಕ್ಷಗಳು ಅವರನನ್ನು ಸಂಪರ್ಕ ಮಾಡಲು ಪ್ರಯತ್ನ ಕೂಡ ನಡೆಸಿದ್ದರು. ಆದರೆ ಸದ್ಯ ಹನುಮಂತ ತಮ್ಮ ಫೇಮ್‍ನ್ನು ಉತ್ತಮ ಉದ್ದೇಶಕ್ಕಾಗಿ ಉಪಯೋಗಿಸಲು ಮುಂದಾಗಿದ್ದಾರೆ.

    ಜಿಲ್ಲಾ ಚುನಾವಣಾ ಆಯೋಗ ಸದ್ಯ ಹನುಮಂತ ಅವರನ್ನು ಕೇಂದ್ರವಾಗಿಸಿ ಜಾಗೃತಿ ಮೂಡಿಸುವ ವಿಡಿಯೋಗಳನ್ನು ಚಿತ್ರೀಕರಣ ಮಾಡಲು ಸಿದ್ಧತೆ ನಡೆಸಿದೆ. ಆ ಮೂಲಕ ಚುನಾವಣೆಯಲ್ಲಿ ಮತದಾನದ ಜಾಗೃತಿ ಪ್ರಚಾರದಲ್ಲಿ ಹನುಮಂತ ಅವರು ಗ್ರ್ಯಾಂಡ್ ಎಂಟ್ರಿ ಕೊಡಲು ಸಿದ್ಧರಾಗಿದ್ದಾರೆ. ಅಂದಹಾಗೇ ಇದೇ ಮೊದಲ ಬಾರಿಗೆ ಹನುಮಂತ ಅವರು ಕೂಡ ಮತದಾನ ಮಾಡಲಿದ್ದಾರೆ.