Tag: election campaign

  • ರಂಗೇರಿದ ಚನ್ನಪಟ್ಟಣ ಉಪಕಣ – ಪತಿ ನಿಖಿಲ್‌ ಪರ ಮತಬೇಟೆಗಿಳಿದ ಪತ್ನಿ ರೇವತಿ

    ರಂಗೇರಿದ ಚನ್ನಪಟ್ಟಣ ಉಪಕಣ – ಪತಿ ನಿಖಿಲ್‌ ಪರ ಮತಬೇಟೆಗಿಳಿದ ಪತ್ನಿ ರೇವತಿ

    ರಾಮನಗರ: ಚನ್ನಪಟ್ಟಣ ಉಪಚುನಾವಣೆ (Channapatna By Election) ಅಖಾಡ ರಂಗೇರಿದೆ. ಉಭಯ ನಾಯಕರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಹಾಗೂ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಪ್ರತ್ಯೇಕವಾಗಿ ಹಳ್ಳಿ, ಹಳ್ಳಿಗೆ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದಾರೆ.

    ಮತಬೇಟೆಗಿಳಿದ ನಿಖಿಲ್‌ ಪತ್ನಿ:
    ಸೋಮವಾರವಾದ ಇಂದು ಸಹ 10ಕ್ಕೂ ಹೆಚ್ಚು ಗ್ರಾಮದಲ್ಲಿ ಪುತ್ರನ ಪರ ಮತಯಾಚನೆ ನಡೆಸಲಿದ್ದರೆ, ನಿಖಿಲ್‌ 15 ಹಳ್ಳಿಗಳಲ್ಲಿ ಪ್ರಚಾರ ಕಾರ್ಯ ಹಮ್ಮಿಕೊಂಡಿದ್ದಾರೆ. ಚನ್ನಪಟ್ಟಣದ ಹೆಚ್.ಬ್ಯಾಡರಳ್ಳಿ, ಬೊಮ್ಮನಾಯಕನಹಳ್ಳಿ ಹಾಗೂ ಬೇವೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಮತಯಾಚನೆ ನಡೆಸುತ್ತಿದ್ದಾರೆ. ಇದರೊಂದಿಗೆ ಪತ್ನಿ ರೇವತಿ ಕೂಡ ನಿಖಿಲ್‌ ಪರವಾಗಿ ಮತಬೇಟೆಗಿಳಿದಿದ್ದಾರೆ. ಮೈತ್ರಿ ಅಭ್ಯರ್ಥಿ ನಿಖಿಲ್ ಪರ ಬೆಳ್ಳಂ ಬೆಳಗ್ಗೆಯಿಂದಲೇ ಪತ್ನಿ ರೇವತಿ (Revathi Nikhil) ಪ್ರಚಾರ ಶುರು ಮಾಡಿದ್ದಾರೆ. ಚನ್ನಪಟ್ಟಣದ ಮಹಿಳಾ ಕಾಲೇಜು ಮುಂಭಾಗ ವಿದ್ಯಾರ್ಥಿಗಳಿಗೆ ಕರಪತ್ರ ಹಂಚಿ ನಿಖಿಲ್‌ಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ. ನಿಖಿಲ್‌ ಪತ್ನಿ ರೇವತಿ ಅವರಿಗೆ ಜೆಡಿಎಸ್ ಮಹಿಳಾ ಕಾರ್ಯಕರ್ತರು ಸಾಥ್‌ ನೀಡಿದ್ದಾರೆ. ಇದನ್ನೂ ಓದಿ: ಕೇರಳದಲ್ಲೂ ವಕ್ಫ್ ವಿವಾದ – ಒಂದೇ ಗ್ರಾಮದ 610 ಕುಟುಂಬಗಳಿಗೆ ಆಸ್ತಿ ಕಳೆದುಕೊಳ್ಳುವ ಭೀತಿ

    ಇನ್ನೂ ಪ್ರಚಾರದ ವೇಳೆ ಮಾತನಾಡಿರುವ ನಿಖಿಲ್‌, ಕುಮಾರಸ್ವಾಮಿ ಎರಡು ಬಾರಿ ಈ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ರೈತರ ಸಾಲಮನ್ನಾ ಮಾಡಿದ ಕೀರ್ತಿ ಕುಮಾರಸ್ವಾಮಿ ಅವರಿಗೆ ಸಲ್ಲುತ್ತೆ. ದೇವೇಗೌಡರು ಕಳೆದ 30 ವರ್ಷಗಳಿಂದ ಹಿಂದೆ ನಿರ್ಣಯ ಮಾಡಿ ಇಗ್ಗಲೂರು ಡ್ಯಾಂ ಮಾಡಿದ್ರು. ಕೆಲವರು 17ಕೆರೆ ತುಂಬಿಸಿದ್ದೇವೆ ಅಂತ ಪ್ರಚಾರ ತೆಗೆದುಕೊಳ್ತಾರೆ. ಆದರೆ ಸದಾನಂದಗೌಡರವರ ಕಾಲದಲ್ಲಿ ಆ ಕೆರೆಗಳನ್ನ ತುಂಬಿಸಿದ್ದು. ವಿ. ಸೋಮಣ್ಣ ಅವರು ಅನುದಾನ ಕೊಟ್ಟು ಕೆರೆಗಳಿಗೆ ಮರುಜೀವ ನೀಡಿದ್ರು. ಕುಮಾರಸ್ವಾಮಿಯವರೂ ಸುಮಾರು 100ಕ್ಕೂ ಹೆಚ್ಚು ಕೆರೆಗಳನ್ನ ತುಂಬಿಸಿದ್ದಾರೆ ಎಂದು ಹೆಚ್‌ಡಿಕೆ ಸಾಧನೆಯನ್ನ ಬಣ್ಣಿಸಿದ್ರು. ಇದನ್ನೂ ಓದಿ: ಉತ್ತರಾಖಂಡದಲ್ಲಿ ಕಮರಿಗೆ ಉರುಳಿದ ಬಸ್‌ – ಕನಿಷ್ಠ 20 ಮಂದಿ ದಾರುಣ ಸಾವು

    ಈ ಹಿಂದೆ ಕುಮಾರಸ್ವಾಮಿ ಅವರು ಸಾರಾಯಿ, ಲಾಟರಿ ನಿಷೇಧ ಮಾಡಿದ್ರು. ಇತ್ತೀಚಿನ ಆನ್ಲೈನ್ ಗೇಮಗಳಿಗೆ ಯುವಕರು ಬಲಿ ಆಗ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಅಂದ್ರೆ ಮತ್ತೆ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಬೇಕು. ಚನ್ನಪಟ್ಟಣ ತಾಲೂಕಿನಲ್ಲಿ ಅತಿಹೆಚ್ಚು ಹಾಲು ಉತ್ಪಾದನೆ ಆಗುತ್ತೆ. ಸರ್ಕಾರ ರೈತರಿಗೆ ಸರಿಯಾದ ಬೆಂಬಲ ಬೆಲೆ ಕೊಡ್ತಿಲ್ಲ. ಹಾಗಾಗಿ ಈ ಬಾರಿ ಒಂದು ಅವಕಾಶ ಮಾಡಿಕೊಡಿ. ಈ ಚುನಾವಣೆಯ ಸ್ಪರ್ಧೆ ಅನಿರೀಕ್ಷಿತ. ಕಾಂಗ್ರೆಸ್ ಅಭ್ಯರ್ಥಿ ನಾಲ್ಕು ಬಾರಿ ಶಾಸಕರಾಗಿದ್ದಾರೆ. ನನಗೆ ಒಂದು ಅವಕಾಶ ಕೊಟ್ಟು ನೋಡಿ. ಈ ಭಾಗದಲ್ಲಿ ಒಂದು ಕೈಗಾರಿಕೆ ನಿರ್ಮಾಣ ಮಾಡಿ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡ್ತೇವೆ ಎಂದು ನಿಖಿಲ್‌ ಆಶ್ವಾಸನೆ ನೀಡಿದರು. ಇದನ್ನೂ ಓದಿ: ಅನುಮತಿ ಇಲ್ಲದೆ ನೌಟಂಕಿ ಕಾರ್ಯಕ್ರಮ ಆಯೋಜನೆ – ಗ್ರಾಮ ಮುಖ್ಯಸ್ಥನ ಪ್ರತಿನಿಧಿಗೆ ಎಂಜಲು ನೆಕ್ಕಿಸಿದ ಪೊಲೀಸರು

  • ಮಮತಾಗೆ ನಿಮ್ಮ ಬೆಲೆ ಎಷ್ಟು ಎಂದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ 24 ಗಂಟೆ ಪ್ರಚಾರದಿಂದ ನಿಷೇಧ

    ಮಮತಾಗೆ ನಿಮ್ಮ ಬೆಲೆ ಎಷ್ಟು ಎಂದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ 24 ಗಂಟೆ ಪ್ರಚಾರದಿಂದ ನಿಷೇಧ

    ನವದೆಹಲಿ: ಚುನಾವಣಾ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾಮರ್ಜಿ (Mamata Banerjee) ಅವರಿಗೆ ನಿಮ್ಮ ಬೆಲೆ ಎಷ್ಟು ಎಂದು ಪ್ರಶ್ನಿಸಿದ್ದ ಪಶ್ಚಿಮ ಬಂಗಾಳದ ತಮ್ಲುಕ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ (Abhijit Gangopadhyay) ಹೇಳಿಕೆಯನ್ನು ಚುನಾವಣಾ ಆಯೋಗ ಖಂಡಿಸಿದೆ. ಅಲ್ಲದೇ 24 ಗಂಟೆಗಳ ಚುನಾವಣಾ ಪ್ರಚಾರ ನಡೆಸದಂತೆ ನಿರ್ಬಂಧ ಹೇರಿದೆ.

    ಕೋಲ್ಕತ್ತಾ ಹೈಕೋರ್ಟ್ ನ್ಯಾಯಧೀಶರಾಗಿದ್ದ ಅಭಿಜಿತ್ ಗಂಗೋಪಾಧ್ಯಾಯ ಅವರು ರಾಜೀನಾಮೆ ನೀಡಿ ಬಿಜೆಪಿಯಿಂದ (BJP) ಚುನಾವಣೆಗೆ ಸ್ಪರ್ಧಿಸಿದ್ದಾರೆ. ಸಾರ್ವಜನಿಕ ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಟೀಕಿಸುವ ಭರದಲ್ಲಿ ನಿಮ್ಮ ಬೆಲೆ ಎಷ್ಟು ಎಂದು ಕೇಳಿದ್ದರು. ಈ ಹೇಳಿಕೆ ವಿರುದ್ಧ ದೂರು ನೀಡಿದ್ದ ಟಿಎಂಸಿ, ಇದು ಬಿಜೆಪಿ ಅಭ್ಯರ್ಥಿಯ ಸ್ತ್ರೀ ದ್ವೇಷದ ನಡವಳಿಕೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ. ನ್ಯಾಯಾಂಗದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದ ಅವರು, ಮಹಿಳೆಯರ, ವಿಶೇಷವಾಗಿ ಅಧಿಕಾರದ ಸ್ಥಾನದಲ್ಲಿರುವ ಮಹಿಳೆಯ ಘನತೆಯ ಮೇಲೆ ದಾಳಿ ಮಾಡಲು ಕೀಳು ಮಟ್ಟದ ದಾರಿ ಆರಿಸಿಕೊಂಡಿರುವುದು ದುರಾದೃಷ್ಟಕರ ಎಂದು ಹೇಳಿತ್ತು. ಇದನ್ನೂ ಓದಿ: ವೈಯಕ್ತಿಕ ಕೆಲಸಗಳಿಗಾಗಿ ವಸಂತ ಬಂಗೇರ ಯಾವತ್ತೂ ನನ್ನ ಬಳಿ ಬಂದಿಲ್ಲ: ಸಿಎಂ

    ದೂರಿನ ಅನ್ವಯ ಪ್ರತಿಕ್ರಿಯಿಸಿರುವ ಆಯೋಗ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಇದರಲ್ಲಿ ಅಭಿಜಿತ್ ಗಂಗೋಪಾಧ್ಯಾಯರ ಹೇಳಿಕೆಯನ್ನು ಮತ್ತೊಮ್ಮೆ ಪರಿಶೀಲಿಸಿದೆ. ಅವರು ‘ಕೆಳಮಟ್ಟದ ವೈಯಕ್ತಿಕ ದಾಳಿಯನ್ನು’ ಮಾಡಿದ್ದಾರೆ ಎಂದು ಮನವರಿಕೆಯಾಗಿದೆ. ಈ ಮೂಲಕ ಅವರು ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಿದೆ. ಇದನ್ನೂ ಓದಿ: ಸರ್ಕಾರ‌ 1 ವರ್ಷ ಪೂರೈಸಿದ್ದು ಮುಖ್ಯವಲ್ಲ, ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿರುವುದು ಮುಖ್ಯ: ಡಿಕೆಶಿ

    ಅಭಿಜಿತ್ ಗಂಗೋಪಾಧ್ಯಾಯರ ದುರ್ನಡತೆಯನ್ನು ಆಯೋಗವು ಬಲವಾಗಿ ಖಂಡಿಸುತ್ತದೆ. ಮೇ 21ರ ಸಂಜೆ 5 ಗಂಟೆಯಿಂದ ಜಾರಿಗೆ ಬರುವಂತೆ ಮುಂದಿನ 24 ಗಂಟೆಗಳ ಕಾಲ ಪ್ರಚಾರ ಮಾಡದಂತೆ ನಿರ್ಬಂಧಿಸಿದೆ. ಮುಂದೆ ಸಾರ್ವಜನಿಕವಾಗಿ ಮಾತನಾಡುವಾಗ ಜಾಗರೂಕರಾಗಿರಲು ಆಯೋಗವು ಅಭಿಜಿತ್ ಗಂಗೋಪಾಧ್ಯಾಯರಿಗೆ ಕಟ್ಟುನಿಟ್ಟಾಗಿ ಎಚ್ಚರಿಸುತ್ತದೆ ಎಂದು ತಿಳಿಸಿದೆ.  ಇದನ್ನೂ ಓದಿ: ಡಿಕೆಶಿ ಇನ್ನುಮುಂದೆ ಪೆನ್‌ಡ್ರೈವ್ ಬಗ್ಗೆ ಮಾತನಾಡೋದೆ ಬೇಡ: ಜಿ.ಸಿ ಚಂದ್ರಶೇಖರ್

  • ಜೈಲಿನಿಂದ ಹೊರ ಬರುತ್ತಿದ್ದಂತೆ ಟೆಂಪಲ್ ರನ್ – ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕೇಜ್ರಿವಾಲ್!

    ಜೈಲಿನಿಂದ ಹೊರ ಬರುತ್ತಿದ್ದಂತೆ ಟೆಂಪಲ್ ರನ್ – ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕೇಜ್ರಿವಾಲ್!

    ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) 50 ದಿನಗಳ ಬಳಿಕ ಬಿಡುಗಡೆಯಾಗಿದ್ದಾರೆ. ವಿವಿಧೆಡೆ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮುನ್ನವೇ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದು ಶುಕ್ರವಾರ ಸಂಜೆಯಷ್ಟೇ ದೆಹಲಿಯಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸಿದ್ದ ಕೇಜ್ರಿವಾಲ್ ಇಂದು (ಮೇ 11) ಬೆಳಗ್ಗೆ 11 ಗಂಟೆ ವೇಳೆಗೆ ಹನುಮಾನ್ ಮಂದಿರಕ್ಕೆ (Hanuman Temple) ಭೇಟಿ ನೀಡಿದ್ದಾರೆ. ಪತ್ನಿಯೊಂದಿಗೆ ದೆಹಲಿಯ ಕನೌಟ್ ಪ್ಲೇಸ್‌ (Delhi’s Connaught Place) ನಗರದಲ್ಲಿರುವ ಹನುಮಾನ್ ಮಂದಿರಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ ಹಾಗೂ ಎಎಪಿ ಕಾರ್ಯಕರ್ತರೂ ಪಾಲ್ಗೊಂಡಿದ್ದಾರೆ. ಪೂಜೆ ವೇಳೆ ಮಂದಿರದ ಸುತ್ತ ಬಿಗಿ ಭದ್ರತೆ ನಿಯೋಜಿಸಲಾಗಿತ್ತು.

    ಸಂಜೆ ರೋಡ್ ಶೋ:
    ಮಧ್ಯಂತರ ಜಾಮೀನು ಪಡೆದ ಮರುದಿನದಿಂದಲೇ ಚುನಾವಣಾ ಕಾರ್ಯಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಕೇಜ್ರಿವಾಲ್ ದೇವಸ್ಥಾನದ ಪೂಜಾ ಕಾರ್ಯಗಳು ಮುಗಿಯುತ್ತಿದ್ದಂತೆ ಆಪ್ ಕಾರ್ಯಕರ್ತರೊಂದಿಗೆ ಅಲ್ಲಿಯೇ ಸಭೆ ನಡೆಸಿದ್ದಾರೆ. ಮೇ 11 ರಂದು ಸಂಜೆ 5 ಗಂಟೆ ವೇಳೆಗೆ, ದಕ್ಷಿಣ ದೆಹಲಿಯಲ್ಲಿ ಆಪ್ ನಿಂದ ಆಯೋಜನೆಗೊಂಡ ರೋಡ್ ಶೋನಲ್ಲಿಯೂ (AAP Road Show) ಕೇಜ್ರಿವಾಲ್ ಭಾಗವಹಿಸಲಿದ್ದಾರೆ.

    ಜೂ.1 ರ ವರೆಗೆ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಮೇ 25 ರಂದು ದೆಹಲಿಯ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ಎಎಪಿ ಮತ್ತು ಇಂಡಿಯಾ ಬ್ಲಾಕ್ ಪರ ಕೇಜ್ರಿವಾಲ್ ಪ್ರಚಾರ ಮಾಡಲಿದ್ದಾರೆ.

    ಕೇಂದ್ರದ ವಿರುದ್ಧ ವಾಗ್ದಾಳಿ:
    ಇನ್ನೂ ಜೈಲಿನಿಂದ ಹೊರಬರುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕೇಜ್ರಿವಾಲ್, ನಿಮ್ಮೆಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ನೀವು ನನಗೆ ನಿಮ್ಮ ಆಶೀರ್ವಾದವನ್ನು ನೀಡಿದ್ದೀರಿ. ನಾನು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಅವರಿಂದಲೇ ನಾನು ನಿಮ್ಮ ಮುಂದೆ ಇದ್ದೇನೆ. ನಾವು ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕಾಗಿದೆ ಎಂದು ಕರೆ ನೀಡಿದ್ದಾರೆ.

  • ಚುನಾವಣಾ ಪ್ರಚಾರದ ಹಕ್ಕು ಮೂಲಭೂತವಲ್ಲ- ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

    ಚುನಾವಣಾ ಪ್ರಚಾರದ ಹಕ್ಕು ಮೂಲಭೂತವಲ್ಲ- ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

    ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ. ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ” ಎಂದು ತನಿಖಾ ಸಂಸ್ಥೆ ಹೇಳಿದೆ.

    ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮಧ್ಯಂತರ ಜಾಮೀನಿಗೆ ಸಂಬಂಧಿಸಿದಂತೆ ಶುಕ್ರವಾರ ಸುಪ್ರೀಂಕೋರ್ಟ್ (Supreme Court) ಮಧ್ಯಂತರ ಆದೇಶ ನೀಡುವ ಸಾಧ್ಯತೆ ಇದೆ. ಈ ಹಿನ್ನೆಲೆ ಅದಕ್ಕೂ ಮುನ್ನ ಇಡಿ ಉಪ ನಿರ್ದೇಶಕಿ ಭಾನು ಪ್ರಿಯಾ ಅವರು ಅಫಿಡವಿಟ್ ಸಲ್ಲಿಸಿದ್ದಾರೆ.

    ಚುನಾವಣೆಗಾಗಿ ಪ್ರಚಾರ ಮಾಡುವ ಹಕ್ಕು ಮೂಲಭೂತ, ಸಾಂವಿಧಾನಿಕ ಅಥವಾ ಕಾನೂನುಬದ್ಧ ಹಕ್ಕಲ್ಲ. ಈವರೆಗೂ ಯಾವುದೇ ರಾಜಕೀಯ ನಾಯಕನು ಚುನಾವಣಾ ಸ್ಪರ್ಧಿಸುವ ಅಭ್ಯರ್ಥಿಯಲ್ಲದಿದ್ದರೇ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ಪಡೆದಿಲ್ಲ. ಚುನಾವಣಾ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡಿದರೆ ಯಾವುದೇ ರಾಜಕಾರಣಿಯನ್ನು ಬಂಧಿಸಲು ಮತ್ತು ನ್ಯಾಯಾಂಗ ಬಂಧನದಲ್ಲಿಡಲು ಸಾಧ್ಯವಿಲ್ಲ. ಇದನ್ನೂ ಓದಿ: ಶುಕ್ರವಾರ ಕೇಜ್ರಿವಾಲ್ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ

    ಕಳೆದ ಮೂರು ವರ್ಷಗಳಲ್ಲಿ ಸುಮಾರು 123 ಚುನಾವಣೆಗಳು ನಡೆದಿವೆ ಮತ್ತು ಚುನಾವಣಾ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡಿದರೆ ಯಾವುದೇ ರಾಜಕಾರಣಿಯನ್ನು ಬಂಧಿಸಲಾಗುವುದಿಲ್ಲ ಮತ್ತು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗುವುದಿಲ್ಲ. ಏಕೆಂದರೆ ವರ್ಷಪೂರ್ತಿ ಚುನಾವಣೆಗಳು ನಡೆಯುತ್ತವೆ ಎಂದು ಇಡಿ ತನ್ನ ಅಫಿಡವಿಟ್ ನಲ್ಲಿ ಹೇಳಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ವಿಶೇಷ ರಿಯಾಯಿತಿ ಕಾನೂನು ಮತ್ತು ಸಮಾನತೆಗೆ ಅಸಹ್ಯಕರವಾಗಿದೆ ಎಂದು ಅದು ಸೇರಿಸಿದೆ.

  • ಏ. 28, 29ಕ್ಕೆ ಕರ್ನಾಟಕಕ್ಕೆ ಪ್ರಧಾನಿ- 2 ದಿನ ಉತ್ತರ ಕರ್ನಾಟಕದಲ್ಲಿ ಮತಯಾಚನೆ

    ಏ. 28, 29ಕ್ಕೆ ಕರ್ನಾಟಕಕ್ಕೆ ಪ್ರಧಾನಿ- 2 ದಿನ ಉತ್ತರ ಕರ್ನಾಟಕದಲ್ಲಿ ಮತಯಾಚನೆ

    ಬೆಂಗಳೂರು: ಲೋಕಸಭಾ ಚುನಾವಣೆ (Loksabha Elections 2024) ನಿಮಿತ್ತ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ ಮತ್ತು ಸೋಮವಾರ ಕರ್ನಾಟಕದಲ್ಲಿ ಮತ್ತೆ ಪ್ರವಾಸ ಮಾಡಲಿದ್ದಾರೆ. ಒಟ್ಟು 2 ದಿನಗಳ ಕಾಲ ಪ್ರಧಾನಿ ಮೋದಿ ರಾಜ್ಯದಲ್ಲಿ ಪ್ರಚಾರ ಮಾಡಲಿದ್ದು, ಈ ವೇಳೆ ಐದು ಜಿಲ್ಲೆಗಳಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಾಳೆ, ನಾಡಿದ್ದು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಪ್ರಧಾನಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

    ರಾಜ್ಯದಲ್ಲಿ ಸಂಚರಿಸಲಿರುವ ನರೇಂದ್ರ ಮೋದಿ ಉತ್ತರ ಕರ್ನಾಟಕದಲ್ಲಿ ಬಿಜೆಪಿ (BJP) ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ನಾಳೆ ದಾವಣಗೆರೆ, ಉತ್ತರ ಕನ್ನಡ ಮತ್ತು ಬೆಳಗಾವಿಯಲ್ಲಿ ಬಹಿರಂಗ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಂದು ಬೆಳಗಾವಿಯಲ್ಲಿ ವಾಸ್ತವ್ಯ ಹೂಡಲಿದ್ದು, ಮರು ದಿನ ಕಲಬುರಗಿ, ಬಳ್ಳಾರಿ, ರಾಯಚೂರು, ಕೊಪ್ಪಳದಲ್ಲಿ ಆಯೋಜಿಸುವ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲೇ ಅತಿ ಹೆಚ್ಚು – ಯಾವ ಕ್ಷೇತ್ರದಲ್ಲಿ ಎಷ್ಟು ವೋಟಿಂಗ್?

    ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ಎರಡು ದಿನಗಳಲ್ಲಿ ಆ ಕ್ಷೇತ್ರಗಳ ಅಭ್ಯರ್ಥಿಗಳ ಪರ 6 ರ್ಯಾಲಿ ನಡೆಸಲಿದ್ದಾರೆ. ಮೋದಿಯ ಎರಡು ದಿನದ ಪ್ರಚಾರ ರಾಜ್ಯ ನಾಯಕರಲ್ಲಿ ಶಕ್ತಿ ತುಂಬಲಿದೆ. ಮೋದಿ ಆಗಮನ ಹಿನ್ನೆಲೆಯಲ್ಲಿ ಕೇಸರಿ ಕಲಿಗಳಲ್ಲಿ ರಣೋತ್ಸಾಹ ತುಂಬಿದೆ.

    ಮೋದಿ ಕಾರ್ಯಕ್ರಮ ಎಲ್ಲಿಲ್ಲಿ..?
    ಏಪ್ರಿಲ್ 28:
    * ಬೆಳಗಾವಿ ಸಮಾವೇಶ (ಬೆಳಗ್ಗೆ 11 ಗಂಟೆಗೆ)
    * ಶಿರಸಿಯಲ್ಲಿ ಸಮಾವೇಶ (ಮಧ್ಯಾಹ್ನ 01 ಗಂಟೆಗೆ)
    * ದಾವಣಗೆರೆ ಸಮಾವೇಶ (ಮಧ್ಯಾಹ್ನ 03 ಗಂಟೆಗೆ)
    * ಹೊಸಪೇಟೆ ಸಮಾವೇಶ (ಸಂಜೆ 5 ಗಂಟೆಗೆ)

    ಏಪ್ರಿಲ್ 29
    * ಬಾಗಲಕೋಟೆ ಸಮಾವೇಶ (ಮಧ್ಯಾಹ್ನ 12.15 ಗಂಟೆಗೆ)

    ಮೋದಿ ಅಲೆ+ ಅಭಿವೃದ್ಧಿ+ದೋಸ್ತಿ ಪ್ರಭಾವಗಳೇ ಈ ಭಾಗದಲ್ಲೂ ಬೂಸ್ಟ್ ಆಗಲಿದೆ. ಪಂಚ ಸಮಾವೇಶಗಳಲ್ಲೂ ರಾಜ್ಯ ಕಾಂಗ್ರೆಸ್ ವೈಫಲ್ಯಗಳೇ ಮೋದಿ ಬ್ರಹ್ಮಾಸ್ತ್ರಗಳಾಗಿವೆ. ಬೆಳಗಾವಿಯಲ್ಲಿ ಮೋದಿ ಒಂದು ದಿನ ವಾಸ್ತವ್ಯ ಹೂಡುವ ಮೂಲಕ ಇಲ್ಲಿಂದಲೇ ಉತ್ತರ ಕರ್ನಾಟಕ ಭಾಗದ ಚುನಾವಣೆ ರಣತಂತ್ರ ಹೆಣೆಯಲಿದ್ದಾರೆ. ಈ ಭಾಗದ ಲೋಕಸಭಾ ಕ್ಷೇತ್ರಗಳ ಚುನಾವಣಾ ರಣಕಹಳೆ ಮೊಳಗಿಸಲು ಮೋದಿ ಮಾಸ್ಟರ್ ಪ್ಲಾನ್ ಮಾಡಲಿದ್ದಾರೆ.. ಬಿಜೆಪಿಯ ಭದ್ರಕೋಟೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಿಸಲು ಗೆಲುವಿನ ಯಾತ್ರೆ ಮುಂದುವರಿಸಲಿದ್ದಾರೆ.

  • ಇಂದು ಕೇರಳದ ಚುನಾವಣಾ ಪ್ರಚಾರಕ್ಕೆ ರಾಹುಲ್‌ ಗಾಂಧಿ ಗೈರು

    ಇಂದು ಕೇರಳದ ಚುನಾವಣಾ ಪ್ರಚಾರಕ್ಕೆ ರಾಹುಲ್‌ ಗಾಂಧಿ ಗೈರು

    ತಿರುವನಂತಪುರಂ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಕೇರಳದಲ್ಲಿ ನಡೆಯಬೇಕಿದ್ದ ಚುನಾವಣಾ ಪ್ರಚಾರವನ್ನು ರದ್ದುಗೊಳಿಸಿದ್ದಾರೆ.

    ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಂಗಾಮಿ ಅಧ್ಯಕ್ಷ, ಯುಡಿಎಫ್ ಸಂಚಾಲಕ ಎಂಎಂ ಹಾಸನ್, ಸೋಮವಾರ ನಡೆಯಬೇಕಿದ್ದ ಗಾಂಧಿಯವರ ಎಲ್ಲಾ ಸಾರ್ವಜನಿಕ ಸಭೆಗಳನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

    ಸತ್ನಾ ಮತ್ತು ರಾಂಚಿಯಲ್ಲಿ ರಾಹುಲ್ ಗಾಂಧಿ ಪ್ರಚಾರಕ್ಕೆ ಸಿದ್ಧರಾಗಿದ್ದರು. ಆದರೆ ಏಕಾಏಕಿ ಅವರ ಆರೋಗ್ಯದಲ್ಲಿ ಏರಪೇರಾಗಿದ್ದರಿಂದ ಅವರು ಭಾಗವಹಿಸಲಿಲ್ಲ. ಪ್ರಸ್ತುತ ನವದೆಹಲಿಯಲ್ಲಿ ಇದ್ದು, ಬರಲು ಸಾಧ್ಯವಾಗುತ್ತಿಲ್ಲ ಎಂದು ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದರು.

    ರಾಹುಲ್ ಗಾಂಧಿಯವರು ವಯನಾಡ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ. ಕೇರಳದ 20 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 26 ರಂದು ಚುನಾವಣೆ ನಡೆಯಲಿದೆ.

  • Exclusive: ಪ್ರತಿದಿನ 50 ಕೋಟಿ ಕಾಸು ಮಾಡದೇ ಡಿಕೆಶಿ ಮಲಗೋದಿಲ್ಲವಂತೆ: ಹೆಚ್‌ಡಿಕೆ ಬಾಂಬ್‌

    Exclusive: ಪ್ರತಿದಿನ 50 ಕೋಟಿ ಕಾಸು ಮಾಡದೇ ಡಿಕೆಶಿ ಮಲಗೋದಿಲ್ಲವಂತೆ: ಹೆಚ್‌ಡಿಕೆ ಬಾಂಬ್‌

    – ಮತ್ತೆ ಜೈಲಿಗೆ ಹೋಗುವ ಪರಿಸ್ಥಿತಿ ಬರಬಹುದು ಎಂದ ಮಾಜಿ ಸಿಎಂ

    ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ದಿನಕ್ಕೆ 50 ಕೋಟಿ ರೂ. ಇಲ್ಲದೇ ಮನೆಗೆ ಹೋಗಿ ನಿದ್ರೆ ಮಾಡೋದಿಲ್ಲವಂತೆ. ಇದನ್ನ ನಾನಲ್ಲ ಜನ ಹೇಳ್ತಾರೆ, ಕಾಂಗ್ರೆಸ್‌ನವರೇ ಮಾತಾಡ್ತಾರೆ ಅಂತ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಹೊಸ ಬಾಂಬ್‌ ಸಿಡಿಸಿದ್ದಾರೆ.

    ಚುನಾವಣಾ ಪ್ರಚಾರದ ವೇಳೆ ʻಪಬ್ಲಿಕ್ ಟಿವಿʼಗೆ (Public TV) ನೀಡಿದ ಸಂದರ್ಶನದಲ್ಲಿ ಅವರು ಮೈತ್ರಿ ಅನಿವಾರ್ಯತೆ ಕುರಿತು ಮಾತನಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ. ಸಿ.ಎನ್‌ ಮಂಜುನಾಥ್‌ (Dr. CN Manjunath) ಗೆದ್ದೇ ಗೆಲ್ತಾರೆ ಎಂಬ ವಿಶ್ವಾಸ ವ್ಯಕ್ಯಪಡಿಸಿರುವ ಅವರು, ಡಿಕೆ ಶಿವಕುಮಾರ್‌ ಮತ್ತೆ ಜೈಲಿಗೆ ಹೋಗುವ ಪರಿಸ್ಥಿತಿ ಬರಬಹುದು ಎಂದು ಭವಿಷ್ಯ ನುಡಿದಿದ್ದಾರೆ.

    ಮುಂದುವರಿದು, ಕಾಂಗ್ರೆಸ್‌ನವರು (Congress) 10 ವರ್ಷ ಈ ಸರ್ಕಾರ ಇರುತ್ತೆ ಅಂತಾ ಹೇಳಿದ್ದಾರೆ. ಈ ಹಿಂದೆಯೂ 20 ವರ್ಷ ನಮ್ಮ ಸರ್ಕಾರ ಇರುತ್ತೆ ಅಂತಾ ಹೇಳಿದ್ದರು. ಇತಿಹಾಸ ತೆಗೆದು ನೋಡಿದ್ರೆ, ಏನಾಗಿದೆ ಅಂತಾ ಗೊತ್ತಾಗುತ್ತೆ. ಈಗ 136 ಪ್ಲಸ್‌ ಪ್ಲಸ್‌ ಪ್ಲಸ್‌ ಸೀಟ್‌ ಇದೆ ಅಂತಾರೆ. ಈ ಹಿಂದೆ ನಮಗೆ ಕಾಂಗ್ರೆಸ್‌ ಬೆಂಬಲ ಕೊಟ್ಟಾಗ ಎಷ್ಟಿತ್ತು? ಲೋಕಸಭಾ ಚುನಾವಣೆ (Lok Sabha Elections) ಆದ್ಮೇಲೆ ಎಷ್ಟು ದಿನ ಸರ್ಕಾರ ಇರುತ್ತೆ ಅಂತ ಗೊತ್ತಾಗುತ್ತೆ ಎಂದು ಭವಿಷ್ಯ ನುಡಿದಿದ್ದಾರೆ.

    ಬೆಂಗಳೂರಲ್ಲಿ (Bengaluru) ಸ್ಕ್ವೇರ್‌ಫಿಟ್‌ಗೆ 100 ರೂ. ಫಿಕ್ಸ್‌ ಮಾಡಿದ್ದಾರಂತೆ, ಪ್ರತಿ ದಿನಕ್ಕೆ 50 ಕೋಟಿ ರೂ. ಇಲ್ಲದೇ ಮನೆಗೆ ಹೋಗಿ ನಿದ್ರೆ ಮಾಡೋದಿಲ್ಲವಂತೆ. ಜನ ಮಾತ್ರ ಅಲ್ಲ, ಕಾಂಗ್ರೆಸ್‌ನವರೇ ಇದನ್ನ ಹೇಳ್ತಾರೆ. ಇಂಥವರು ಒಕ್ಕಲಿಗರನ್ನ ಉದ್ಧಾರ ಮಾಡ್ತಾರಾ? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಅಣಕು ಮತ ಎಣಿಕೆ ವೇಳೆ ಬಿಜೆಪಿಗೆ ಹೆಚ್ಚುವರಿ ಮತ – ವರದಿ ಸುಳ್ಳೆಂದ ಚುನಾವಣಾ ಆಯೋಗ

    ಮತ್ತೆ ಜೈಲಿಗೆ ಹೋಗಬಹುದು?
    ಡಿಕೆ ಶಿವಕುಮಾರ್‌ ಮತ್ತೆ ಜೈಲಿಗೆ ಹೋಗುವ ಪರಿಸ್ಥಿತಿ ಬರಬಹುದು. ಅವರು ಎಲ್ಲ ಅರಗಿಸಿಕೊಳ್ಳುವ ಶಕ್ತಿ ಇದೆ ಅಂತಾ ಹೇಳ್ತಾರೆ. ಅವರಿಗೆ ಹಣದಿಂದ ಯಾರನ್ನ ಬೇಕಾದರೂ ಕೊಂಡುಕೊಳ್ಳಬಹುದು ಅನ್ನೋ ಉದ್ಧಟತನ ಇರೋದು ಸತ್ಯ. ಅದರಿಂದ ನಾನು ಏನೇ ತಪ್ಪು ಮಾಡಿದರೂ ಅರಗಿಸಿಕೊಳ್ಳುವ ಶಕ್ತಿಯಿದೆ ಅನ್ನೋದು ಅವರ ಅಭಿಪ್ರಾಯ. ಮುಂದೆ ಭಗವಂತ ಅವರನ್ನ ನೋಡಿಕೊಳ್ತಾನೆ. ಇದನ್ನೂ ಓದಿ: ಲಂಡನ್‌, ದುಬೈನಲ್ಲಿ ಮನೆ.. 5 ಕೋಟಿ ಮೌಲ್ಯದ ಚಿನ್ನ; ದ. ಗೋವಾ ಬಿಜೆಪಿ ಅಭ್ಯರ್ಥಿ 1,400 ಕೋಟಿ ಒಡತಿ

    ಮೈತ್ರಿ ಯಾಕೆ ಅನಿವಾರ್ಯ ಆಯ್ತು?
    ಇಂದಿನ ರಾಜಕೀಯ ಬೆಳವಣಿಗೆ ಹಾಗೂ ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶದಿಂದ ಮೈತ್ರಿ ಅನಿವಾರ್ಯ ಅನ್ನಿಸಿತು. ಕಳೆದ ಬಾರಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ನಿರೀಕ್ಷೆ ಮಾಡಿತ್ತು. ನಾವೂ ಸಹ ಅದ್ಭುತವಾಗಿ ಪಂಚರತ್ನ ಯಾತ್ರೆ ಮಾಡಿದ್ದರಿಂದ ಹೆಚ್ಚಿನ ಸ್ಥಾನಗಳನ್ನ ನಿರೀಕ್ಷೆ ಮಾಡಿದ್ದೆವು. ಅದು ಸಾಧ್ಯವಾಗಲಿಲ್ಲ. ಆದ್ರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮರುಕ್ಷಣದಿಂದಲೇ ಭ್ರಷ್ಟ ವ್ಯವಸ್ಥೆ ಆರಂಭವಾಯಿತು. ಯಾವ ಸರ್ಕಾರದಲ್ಲೂ ಇಂತಹ ಕೆಟ್ಟ ಆಡಳಿತ ನೋಡಲಿಲ್ಲ. ಅಧಿಕಾರಕ್ಕೆ ಬಂದ ಮರುಕ್ಷಣದಿಂದಲೇ ಅಧಿಕಾರಿಗಳ ವರ್ಗಾವಣೆಗೆ ದುಡ್ಡು ಫಿಕ್ಸ್ ಮಾಡಿ ಲೂಟಿ ಮಾಡುವ ಕೆಲಸ ಶುರುವಾಯ್ತು. ಈ ರಾಜ್ಯವನ್ನ ಯಾವ ಮಟ್ಟಕ್ಕೆ ದಿವಾಳಿ ಮಾಡಬಹುದು ಅನ್ನೋದನ್ನ ನೆನಸಿಕೊಂಡಾಗ, ಪ್ರತಿಯೊಬ್ಬರಿಗೂ ಆತಂಕ ಆಗುತ್ತೆ. ಈ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳಿಗೂ ಮೈತ್ರಿ ಅನಿವಾರ್ಯವಾಯಿತು ಎಂದು ತಿಳಿಸಿದ್ದಾರೆ.

    ಈ ಬಾರಿ ಮೈತ್ರಿ ಪಕ್ಷ ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರಗಳನ್ನೂ ಗೆಲ್ಲುವ ಗುರಿ ಹಾಕಿಕೊಂಡಿದೆ. ಕನಿಷ್ಠ 20ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ಹೆಚ್‌ಡಿಕೆ ಶಪಥ ಮಾಡಿದ್ದಾರೆ. ಇದನ್ನೂ ಓದಿ: ರಾಮನವಿಯಂದು ಕೇಸರಿ ಶಾಲು,ರಾಮನ ಬಾವುಟ ಹಿಡಿದು ಕೆರಗೋಡಿಗೆ ಹೆಚ್‌ಡಿಕೆ ಭೇಟಿ

  • Exclusive: ನಾವೇ ಮಂಜುನಾಥ್‌ರನ್ನ ಬಿಜೆಪಿಯಿಂದ ನಿಲ್ಲಿಸಿದ್ದು: ಕುಮಾರಸ್ವಾಮಿ

    Exclusive: ನಾವೇ ಮಂಜುನಾಥ್‌ರನ್ನ ಬಿಜೆಪಿಯಿಂದ ನಿಲ್ಲಿಸಿದ್ದು: ಕುಮಾರಸ್ವಾಮಿ

    ಬೆಂಗಳೂರು/ಶಿವಮೊಗ್ಗ: ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಆಗಿದೆ. ಡಾ.ಸಿ.ಎನ್‌ ಮಂಜುನಾಥ್‌ (Dr. CN Manjunath) ಯಾವ ಪಕ್ಷದ ಸಿಂಬಲ್‌ನಲ್ಲಿ ನಿಂತರೂ ಒಂದೇ. ರಾಜಕೀಯ ತಂತ್ರಗಾರಿಕೆ ವರ್ಕೌಟ್‌ ಆಗಬೇಕು ಅನ್ನೋ ಕಾರಣಕ್ಕೆ ನಾವೇ ಮಂಜುನಾಥ್‌ರನ್ನ ಬಿಜೆಪಿಯಿಂದ ನಿಲ್ಲಿಸಿದ್ವಿ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

    ಶಿವಮೊಗ್ಗದಲ್ಲಿಂದು ಚುನಾವಣಾ ಪ್ರಚಾರಕ್ಕೆ (Shivamogga Election Campaign) ತೆರಳಿದ್ದ ವೇಳೆ ʻಪಬ್ಲಿಕ್ ಟಿವಿʼಗೆ (Public TV) ನೀಡಿದ ಸಂದರ್ಶನದಲ್ಲಿ ಅವರು ಮೈತ್ರಿ ಅನಿವಾರ್ಯತೆಗಳ ಕುರಿತು ಮಾತನಾಡಿದ್ದಾರೆ. ಅಲ್ಲದೇ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಂಜುನಾಥ್‌ ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಲಂಡನ್‌, ದುಬೈನಲ್ಲಿ ಮನೆ.. 5 ಕೋಟಿ ಮೌಲ್ಯದ ಚಿನ್ನ; ದ. ಗೋವಾ ಬಿಜೆಪಿ ಅಭ್ಯರ್ಥಿ 1,400 ಕೋಟಿ ಒಡತಿ

    ಈ ಬಾರಿ ಮಂಜುನಾಥ್‌ ಗೆಲ್ಲೋದ್ರಲ್ಲಿ ಸಂಶಯವೇ ಇಲ್ಲ. ಬೆಂಗಳೂರು ಗ್ರಾಮಾಂತರ (Bengalruu Rural) ಭಾಗದ ಜನರಿಗೆ ಮಂಜುನಾಥ್‌ ಅವರ ಬಗ್ಗೆ ವಿಶೇಷ ಅಭಿಮಾನ ಇದೆ. ಅವರು ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯೇ ಇದಕ್ಕೆ ಕಾರಣ. ಮಂಜುನಾಥ್‌ ಅವರಿಂದ ಆ ಭಾಗದಲ್ಲಿ ಜೀವ ಪಡೆದ ಜನ ಇಂದಿಗೂ ಅವರನ್ನು ನೆನಸುತ್ತಾರೆ. ಹಾಗಾಗಿ ಮಂಜುನಾಥ್‌ ಗೆದ್ದೇ ಗೆಲ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

    ಬುದ್ಧಿವಂತ ಅಳಿಯನಿಗೆ ರಾಜಕೀಯ ಬೇಕಿತ್ತಾ?
    ದೇವೇಗೌಡರ (HD Devegowda) ಬುದ್ಧಿವಂತ ಅಳಿಯ ಮಂಜುನಾಥ್‌ ರಾಜಕಾರಣಕ್ಕೆ ಬರಬೇಕು ಅಂತ ಇರಲಿಲ್ಲ. ಆದ್ರೆ ಬುದ್ಧಿವಂತ ದೇವೇಗೌಡರ ಕುಟುಂಬ ಲೆಕ್ಕಾಚಾರ ಮಾಡಿ ಬಿಜೆಪಿಯಿಂದ ನಿಲ್ಲಿಸಿದೆ ಎಂದು ಹೆಚ್‌ಡಿಕೆ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಇದೊಂದು ಭಾವನಾತ್ಮಕ ಕ್ಷಣ- ಚುನಾವಣಾ ಪ್ರಚಾರದ ಬ್ಯುಸಿನಲ್ಲೂ ಸೂರ್ಯ ತಿಲಕ ವೀಕ್ಷಿಸಿದ PM

    ಮಂಜುನಾಥ್ ಅವರು ರಾಜಕೀಯಕ್ಕೆ ಬರಬೇಕು ಅಂತಾ ಇರಲಿಲ್ಲ. ಹಲವು ಜನರು ರಾಜಕೀಯಕ್ಕೆ ಬರುವುದು ಸೂಕ್ತ ಅಂತಾ ವಿಶ್ಲೇಷಣೆ ಮಾಡಿದರು. ಆಗ ಮಂಜುನಾಥ್‌ ಹೆಸರು ಮುನ್ನೆಲೆಗೆ ಬಂತು. ಅಲ್ಲದೇ ಬಿಜೆಪಿಗೂ ಉತ್ತಮ ಅಭ್ಯರ್ಥಿಯನ್ನು ಕೊಟ್ಟ ಹೆಸರು ಬರುತ್ತೆ ಅಂತಾ ಹೇಳಿದಾಗ, ನಾನೇ ಅವರನ್ನು ಮನವೊಲಿಸುವ ಜವಾಬ್ದಾರಿ ತೆಗೆದುಕೊಂಡೆ. ದೇವೇಗೌಡರನ್ನೂ ಮನವೊಲಿಸುವ ಕೆಲಸ ಮಾಡಿದೆ. ರಾಜಕೀಯ ತಂತ್ರಗಾರಿಕೆ ವರ್ಕೌಟ್ ಆಗಬೇಕು ಅಂತ ನಾವೇ ಅವರನ್ನ ಬಿಜೆಪಿಯಿಂದ ನಿಲ್ಲಿಸಿದ್ವಿ ಎಂದು ತಿಳಿಸಿದ್ದಾರೆ.

    ಮೈತ್ರಿ ಯಾಕೆ ಅನಿವಾರ್ಯ ಆಯ್ತು?
    ಇಂದಿನ ರಾಜಕೀಯ ಬೆಳವಣಿಗೆ ಹಾಗೂ ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶದಿಂದ ಮೈತ್ರಿ ಅನಿವಾರ್ಯ ಅನ್ನಿಸಿತು. ಕಳೆದ ಬಾರಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ನಿರೀಕ್ಷೆ ಮಾಡಿತ್ತು. ನಾವೂ ಸಹ ಅದ್ಭುತವಾಗಿ ಪಂಚರತ್ನ ಯಾತ್ರೆ ಮಾಡಿದ್ದರಿಂದ ಹೆಚ್ಚಿನ ಸ್ಥಾನಗಳನ್ನ ನಿರೀಕ್ಷೆ ಮಾಡಿದ್ದೆವು. ಅದು ಸಾಧ್ಯವಾಗಲಿಲ್ಲ. ಆದ್ರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮರುಕ್ಷಣದಿಂದಲೇ ಭ್ರಷ್ಟ ವ್ಯವಸ್ಥೆ ಆರಂಭವಾಯಿತು. ಯಾವ ಸರ್ಕಾರದಲ್ಲೂ ಇಂತಹ ಕೆಟ್ಟ ಆಡಳಿತ ನೋಡಲಿಲ್ಲ. ಅಧಿಕಾರಕ್ಕೆ ಬಂದ ಮರುಕ್ಷಣದಿಂದಲೇ ಅಧಿಕಾರಿಗಳ ವರ್ಗಾವಣೆಗೆ ದುಡ್ಡು ಫಿಕ್ಸ್ ಮಾಡಿ ಲೂಟಿ ಮಾಡುವ ಕೆಲಸ ಶುರುವಾಯ್ತು. ಈ ರಾಜ್ಯವನ್ನ ಯಾವ ಮಟ್ಟಕ್ಕೆ ದಿವಾಳಿ ಮಾಡಬಹುದು ಅನ್ನೋದನ್ನ ನೆನಸಿಕೊಂಡಾಗ, ಪ್ರತಿಯೊಬ್ಬರಿಗೂ ಆತಂಕ ಆಗುತ್ತೆ. ಈ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳಿಗೂ ಮೈತ್ರಿ ಅನಿವಾರ್ಯವಾಯಿತು ಎಂದು ತಿಳಿಸಿದ್ದಾರೆ.

    ಈ ಬಾರಿ ಮೈತ್ರಿ ಪಕ್ಷ ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರಗಳನ್ನೂ ಗೆಲ್ಲುವ ಗುರಿ ಹಾಕಿಕೊಂಡಿದೆ. ಕನಿಷ್ಠ 20ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ಹೆಚ್‌ಡಿಕೆ ಶಪಥ ಮಾಡಿದ್ದಾರೆ. ಇದನ್ನೂ ಓದಿ: ಹಲವು ಸಮಸ್ಯೆಗಳ ನಡುವೆ ಯಶಸ್ವಿಯಾಗಿ 3ನೇ ಲೋಕಸಭಾ ಚುನಾವಣೆ ನಡೆಸಿದ ಭಾರತ!

  • ಉರಿಬಿಸಿಲಿನಲ್ಲಿ ಗೋಧಿ ಕಟಾವು ಮಾಡಿ ಮತಯಾಚಿಸಿದ ಹೇಮಾ ಮಾಲಿನಿ

    ಉರಿಬಿಸಿಲಿನಲ್ಲಿ ಗೋಧಿ ಕಟಾವು ಮಾಡಿ ಮತಯಾಚಿಸಿದ ಹೇಮಾ ಮಾಲಿನಿ

    ಲಕ್ನೋ: ಉತ್ತರಪ್ರದೇಶದಲ್ಲಿ ಲೋಕಸಭಾ ಚುನಾವಣಾ (Loksabha Election 2024) ಪ್ರಚಾರದ ಭರಾಟೆ ಜೋರಾಗಿದೆ. ಮತದಾರರನ್ನು ಒಲಿಸಿಕೊಳ್ಳಲು ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದೆ ಹೇಮಾ ಮಾಲಿನಿಯವರು (Hema Malini) ಮತಯಾಚನೆ ಮಾಡಿರುವ ವೀಡಿಯೋವೊಂದು ವೈರಲ್‌ ಆಗುತ್ತಿದೆ.

    ಬಲದೇವ್ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಹೇಮಾಮಾಲಿನಿ ಅವರು ಉರಿಬಿಸಿಲಿನಲ್ಲಿಯೂ ಕೆಲ ಮಹಿಳೆಯರ ಜೊತೆ  ಗದ್ದೆಯಲ್ಲಿ ಗೋಧಿ ಕೊಯ್ಲು ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

    ವೀಡಿಯೋದಲ್ಲೇನಿದೆ..?: ಚುನಾವಣಾ ಪ್ರಚಾರದ ವೇಳೆ ಬಲದೇವ್ ಪ್ರದೇಶದ ಹಯಾತ್‌ಪುರ ಗ್ರಾಮದಲ್ಲಿ ಕೆಲ ಮಹಿಳೆಯರು ಬಿಸಿಲಲ್ಲಿ ಗದ್ದೆಯಲ್ಲಿ ಗೋಧಿ ಕೊಯ್ಲು ಮಾಡುತ್ತಿದ್ದರು. ಗೋಧಿ ಕೊಯ್ಲು ಮಾಡುತ್ತಿರುವ ಮಹಿಳೆಯರನ್ನು ನೋಡಿದ ಹೇಮಾ ಮಾಲಿನಿ, ತನ್ನ ಕಾರನ್ನು ನಿಲ್ಲಿಸಿ ಹೊಲಕ್ಕೆ ಇಳಿದಿದ್ದಾರೆ. ಬಳಿಕ ಮಹಿಳೆಯೊಬ್ಬರ ಕೈಯಿಂದ ಕುಡುಗೋಲು ತೆಗೆದುಕೊಂಡು ಗೋಧಿ ಕೊಯ್ಲು ಮಾಡಿದರು. ಇದನ್ನೂ ಓದಿ: ವಿಭಿನ್ನವಾಗಿ ಚುನಾವಣಾ ಪ್ರಚಾರಕ್ಕಿಳಿದ ಪದ್ಮಶ್ರೀ ಪುರಸ್ಕೃತ ಸ್ವತಂತ್ರ ಅಭ್ಯರ್ಥಿ!

    ಮಹಿಳೆಯರೊಂದಿಗೆ ಫೋಟೋ: ಹೊಲದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಶೇಕ್‌ಹ್ಯಾಂಡ್ ಕೊಡುವುದರಿಂದ ಹಿಡಿದು ಅವರ ಜೊತೆ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಅಲ್ಲದೆ ಕಳೆದ 10 ವರ್ಷಗಳಿಂದ ನಾನು ನಿಯಮಿತವಾಗಿ ಭೇಟಿಯಾಗುತ್ತಿರುವ ರೈತರೊಂದಿಗೆ ಮಾತನಾಡಲು ಇಂದು ನಾನು ಹೊಲಗಳಿಗೆ ಹೋಗಿದ್ದೇನೆ. ಅವರೊಂದಿಗೆ ಕಳೆದ ಸಮಯ ಅತ್ಯಂತ ಖುಷಿ ಕೊಟ್ಟಿತು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಹಿಳೆಯರನ್ನು ಹೇಗೆ ಗೌರವಿಸಬೇಕೆಂಬುದನ್ನು ಮೋದಿ ನೋಡಿ ಕಲಿಯಿರಿ: ಹೇಮಾ ಮಾಲಿನಿ

    ಮಥುರಾ ಲೋಕಸಭಾ ಕ್ಷೇತ್ರದಿಂದ ಹೇಮಾ ಮಾಲಿನಿ ಅವರನ್ನು ಬಿಜೆಪಿ ಸತತ ಮೂರನೇ ಬಾರಿಗೆ ಕಣಕ್ಕಿಳಿಸಿದೆ. 1991 ರಿಂದ 1999 ರವರೆಗೆ ನಾಲ್ಕು ಬಾರಿ ಬಿಜೆಪಿ ಮಥುರಾದಿಂದ ಗೆದ್ದಿದೆ. 2004ರಲ್ಲಿ ಮಥುರಾ ಕ್ಷೇತ್ರ ಕಾಂಗ್ರೆಸ್ ಪಾಲಾಯಿತು. 2009 ರಲ್ಲಿ, ಆರ್‌ಎಲ್‌ಡಿಯ ಜಯಂತ್ ಚೌಧರಿ ಮಥುರಾದಿಂದ ಸಂಸದರಾದರು. 2014ರಲ್ಲಿ ಬಿಜೆಪಿ ಹೇಮಾ ಮಾಲಿನಿ ಅವರನ್ನು ಕಣಕ್ಕಿಳಿಸಿ ಗೆದ್ದಿತ್ತು. 2019 ರ ಚುನಾವಣೆಯಲ್ಲಿ, ಹೇಮಾ ಅವರ ಪತಿ ನಟ ಧರ್ಮೇಂದ್ರ ಕೂಡ ಅವರ ಪರವಾಗಿ ಪ್ರಚಾರ ಮಾಡಿದರು.

  • ಏ.16ರಿಂದ ಮಂಡ್ಯದಲ್ಲಿ ಹೆಚ್‌ಡಿಕೆ ಪ್ರಚಾರ – ʻಕೈʼ ಕಟ್ಟಿಹಾಕಲು ದಳಪತಿ ಪ್ಲ್ಯಾನ್‌ ಏನು?

    ಏ.16ರಿಂದ ಮಂಡ್ಯದಲ್ಲಿ ಹೆಚ್‌ಡಿಕೆ ಪ್ರಚಾರ – ʻಕೈʼ ಕಟ್ಟಿಹಾಕಲು ದಳಪತಿ ಪ್ಲ್ಯಾನ್‌ ಏನು?

    ಮಂಡ್ಯ: ರಣ ಬಿಸಿಲಿನ ಕಾವು ಹೆಚ್ಚಾದ್ದಂತೆ ಮಂಡ್ಯ ಲೋಕ ಅಖಾಡದ ಕಾವು ಜೋರಾಗ್ತಿದೆ. ಮೈತ್ರಿ ಅಭ್ಯರ್ಥಿಯನ್ನ ಸೋಲಿಸಲೇಬೇಕೆಂದು ಪಣ ತೊಟ್ಟಿರುವ ʻಕೈʼಪಡೆ ಹಳ್ಳಿ ಹಳ್ಳಿಗಳಲ್ಲಿ ಭರ್ಜರಿ ಪ್ರಚಾರ ನಡೆಸ್ತಿದೆ. ಕಾಂಗ್ರೆಸ್ ನ ಕ್ಯಾಂಪೇನ್ (Congress Election Campaign) ಸ್ಪೀಡ್ ಹೆಚ್ಚಾಗ್ತಿದ್ದಂತೆ ಅಲರ್ಟ್ ಆಗಿರುವ ಮೈತ್ರಿ ಅಭ್ಯರ್ಥಿ ದೋಸ್ತಿ ನಾಯಕರೊಂದಿಗೆ ಮತ್ತೆ ಮಂಡ್ಯ ಪ್ರಚಾರ ಅಖಾಡಕ್ಕೆ ಧುಮುಕಲು ರೆಡಿಯಾಗಿದ್ದಾರೆ‌. ಆ ಮೂಲಕ ಕೈ ಅಭ್ಯರ್ಥಿ ಮಣಿಸುವ ಪ್ಲ್ಯಾನ್‌ ಮಾಡಿದ್ದಾರೆ.

    ಮಂಡ್ಯ ಲೋಕಸಭಾ ಅಖಾಡ ದಿನೇ ದಿನೇ ರಂಗೇರುತ್ತಿದೆ. ಅದರಲ್ಲಿಯೂ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಮೈತ್ರಿ ಅಭ್ಯರ್ಥಿಯಾಗಿ ಅಖಾಡಕ್ಕೆ ಧುಮುಕಿರುವುದರಿಂದ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕೈ ಪಡೆ, ಹೆಚ್ಡಿಕೆ ಸೋಲಿಸಿ ಮಣ್ಣು ಮುಕ್ಕಿಸಲೇಬೇಕೆಂದು ಪಣ ತೊಟ್ಟಿದೆ. ಜಿಲ್ಲೆಯಾದ್ಯಂತ ಭರ್ಜರಿ ಕ್ಯಾಂಪೇನ್ ನಡೆಸುತ್ತಿರುವ ಕೈ ಅಭ್ಯರ್ಥಿ ಸ್ಟಾರ್ ಚಂದ್ರು (Star Chandru) ಈಗಾಗಲೇ 3ನೇ ಸುತ್ತಿನ ಪ್ರಚಾರ ಆರಂಭಿಸಿದ್ದಾರೆ. ಮತ್ತೊಂದೆಡೆ ಸಚಿವರು, ಶಾಸಕರು ಸೇರಿದಂತೆ ಕೈ ನಾಯಕರು ಕ್ಯಾಂಪೇನ್ ನಲ್ಲಿ ತೊಡಗಿದ್ದಾರೆ. ಇದೀಗ ಕೈ ಪಡೆಯ ಪ್ರಚಾರದ ವೇಗ ಅರಿತಿರುವ ದೋಸ್ತಿ ಅಭ್ಯರ್ಥಿ ಹೆಚ್‌ಡಿಕೆ ಖುದ್ದು ತಾವೇ ಕ್ಯಾಂಪೇನ್ (Election Campaign) ಅಖಾಡಕ್ಕೆ ಧುಮುಕಲು ಸಜ್ಜಾಗಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 8 ದಿನ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮಿಂಚಿನ ವೇಗದಲ್ಲಿ ಪ್ರಚಾರ ನಡೆಸಲು ಡೇಟ್ ಕೂಡ ಫಿಕ್ಸ್ ಮಾಡಿಕೊಂಡಿದ್ದಾರೆ.

    ಮಂಡ್ಯದಲ್ಲಿ ಯಾವಾಗ-ಎಲ್ಲಿಲ್ಲಿ ಪ್ರಚಾರ?
    ಮಂಡ್ಯ ಲೋಕಸಭಾ ಕ್ಷೇತ್ರ 8 ವಿಧಾನಸಭಾ ಕ್ಷೇತ್ರಗಳನ್ನ ಒಳಗೊಂಡಿದ್ದು, 8 ಕ್ಷೇತ್ರದಲ್ಲಿಯೂ ಸಮಾವೇಶ ನಡೆಸಿ ಮತದಾರರ ಗಮನ ಸೆಳೆಯಲು, ಮತದಾರರ ಮನೆ, ಮನ ತಲುಪಲು ಹೆಚ್‌ಡಿಕೆ ಮುಂದಾಗಿದ್ದಾರೆ. ಆದ್ದರಿಂದ ಏ.16 ರಿಂದ ಏ.24ರ ವರೆಗೆ ಪ್ರಚಾರ ಸಮಾವೇಶ ನಡೆಸಲು ರೆಡಿಯಾಗಿದ್ದಾರೆ. ಏ.16 ಮಳವಳ್ಳಿ, 17 ಕೆ.ಆರ್ ಪೇಟೆ, 18 ಕೆ.ಆರ್ ನಗರ, 19 ಮೇಲುಕೋಟೆ, 21 ಶ್ರೀರಂಗಪಟ್ಟಣ, 22 ನಾಗಮಂಗಲ, 23 ಮದ್ದೂರು, 24 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಆ ಮೂಲಕ ಕೈ ಅಭ್ಯರ್ಥಿಗೆ ಸೋಲುಣಿಸಿ, ಕೈ ನಾಯಕರಿಗೆ ಟಕ್ಕರ್ ಕೊಡಲು ಮಾಜಿ ಸಿಎಂ ಕುಮಾರಸ್ವಾಮಿ ರೆಡಿಯಾಗಿದ್ದಾರೆ. ಹೆಚ್‌ಡಿಕೆ ಜೊತೆ ಬಿಜೆಪಿಯ ರಾಜ್ಯ ನಾಯಕರು ಸಮಾವೇಶದಲ್ಲಿ ಭಾಗಿಯಾಗಲಿದ್ದು, ದೋಸ್ತಿ ಪಡೆ ಒಟ್ಟಾಗಿ ಕಾಂಗ್ರೆಸ್ ಮಣಿಸಲು ತಯಾರಾಗಿದ್ದಾರೆ.

    ಇನ್ನೂ ಹೆಚ್‌ಡಿಕೆ ಒಂದು ಕಡೆ ತಾಲೂಕು ಮಟ್ಟದಲ್ಲಿ ಬೃಹತ್ ಸಮಾವೇಶದ ಮೂಲಕ ಕ್ಯಾಂಪೇನ್ ಮಾಡಿದ್ರೆ, ಇತ್ತ ಪುತ್ರ ನಿಖಿಲ್ ತಂದೆ ಗೆಲುವಿಗಾಗಿ ಜಿಲ್ಲೆಯ ಎಲ್ಲ ಕ್ಷೇತ್ರದಲ್ಲಿಯೂ ಹೋಬಳಿವಾರು ಸಭೆ, ರೋಡ್ ಶೋಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಶನಿವಾರದಿಂದಲೇ ನಿಖಿಲ್ ಅಖಾಡಕ್ಕೆ ಧುಮುಕಲಿದ್ದಾರೆ. ಅದರ ಜೊತೆ ಆಯಾ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಶಾಸಕರು ಸ್ಥಳೀಯ ಮೈತ್ರಿ ನಾಯಕರು, ಕಾರ್ಯಕರ್ತರೊಂದಿಗೆ ಹಳ್ಳಿ ಹಳ್ಳಿಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಇಂದಿನಿಂದಲೇ ಶಾಸಕ, ಮಾಜಿ ಶಾಸಕರು ತಮ್ಮ ನಾಯಕ, ಮೈತ್ರಿ ಅಭ್ಯರ್ಥಿ ಹೆಚ್ಡಿಕೆ ಪರ ಕ್ಯಾಂಪೇನ್ ನಲ್ಲಿ ತೊಡಗುತ್ತಿದ್ದಾರೆ.

    ಕೈ‌ ಪಡೆಯ ಕ್ಯಾಂಪೇನ್ ಸ್ಪೀಡ್ ಕಂಡ ದೋಸ್ತಿ ಪಡೆ ಹೈ ಅಲರ್ಟ್ ಆಗಿದೆ. ಖುದ್ದು ತಾವು ಅಖಾಡಕ್ಕೆ ಧುಮುಕುವ ಮೂಲಕ ಕೈ ಪಡೆಗೆ ಸೋಲಿಣಿಸಲು ಸರ್ವ ಪ್ರಯತ್ನ ಮಾಡಲು ಪ್ಲ್ಯಾನ್‌ ಮಾಡಿಕೊಂಡಿದೆ. ಆದ್ರೆ ಮತದಾರರು ಯಾರಿಗೆ ಜೈ ಅಂತಾನೆ, ಯಾರಿಗೆ ಕೈ ಕೊಡ್ತಾನೆ ಎಂದು ಚುನಾವಣೆ ನಡೆದು ಫಲಿತಾಂಶ ಬರುವವರೆಗೂ ಕಾಯಬೇಕಿದೆ.