Tag: election code of conduct

  • ಬಂಧನಕ್ಕೆ ವಾರಂಟ್ ಹೊರಡಿಸಬೇಕಾಗುತ್ತೆ – ಶ್ರೀರಾಮುಲುಗೆ ಹೈಕೋರ್ಟ್ ಎಚ್ಚರಿಕೆ

    ಬಂಧನಕ್ಕೆ ವಾರಂಟ್ ಹೊರಡಿಸಬೇಕಾಗುತ್ತೆ – ಶ್ರೀರಾಮುಲುಗೆ ಹೈಕೋರ್ಟ್ ಎಚ್ಚರಿಕೆ

    ಬೆಂಗಳೂರು: ಚುನಾವಣಾ ನೀತಿ ಸಂಹಿಂತೆ (Election Code of Conduct) ಉಲ್ಲಂಘನೆ ಪ್ರಕರಣದಲ್ಲಿ ಮಾಜಿ ಸಚಿವ ಶ್ರೀರಾಮುಲು (B.Sriramulu) ಅವರನ್ನು ಹೈಕೋರ್ಟ್ (High Court of Karnataka) ತರಾಟೆ ತೆಗೆದುಕೊಂಡಿದೆ.

    ತಮ್ಮ ವಿರುದ್ಧ ದಾಖಲಾಗಿರುವ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ರದ್ದು ಪಡಿಸಬೇಕು ಎಂದು ಶ್ರೀರಾಮುಲು ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದನ್ನೂ ಓದಿ: ಕೋವಿಡ್ ವೇಳೆ ಮೋದಿ ಸಹಕಾರ ಸ್ಮರಿಸಿದ ಸಿಜೆಐ ಚಂದ್ರಚೂಡ್

    ಈ ವೇಳೆ ನ್ಯಾಯಮೂರ್ತಿಗಳು ಅರ್ಜಿದಾರರು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಎಷ್ಟು ಬಾರಿ ಹಾಜರಾಗಿದ್ದಾರೆ? ಎಷ್ಟು ಬಾರಿ ಸಮನ್ಸ್ ಜಾರಿ ಮಾಡಲಾಗಿದೆ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಸರ್ಕಾರದ ಪರ ವಕೀಲರು, ನಾಲ್ಕು ಬಾರಿ ಸಮನ್ಸ್ ಜಾರಿಯಾಗಿದ್ದು, ಒಂದು ಬಾರಿಯೂ ಅರ್ಜಿದಾರರು ಹಾಜರಾಗಿಲ್ಲ ಎಂದು ಉತ್ತರಿಸಿದ್ದಾರೆ.

    ಈ ವೇಳೆ ನ್ಯಾಯಮೂರ್ತಿಗಳು, ಸಚಿವರಾಗಲಿ, ಮಾಜಿ ಸಚಿವರಾಗಲಿ, ಕೇಸ್ ದಾಖಲಾದ ನಂತರ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಬೇಕು. ಮುಂದಿನ ವಿಚಾರಣೆ ವೇಳೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಬೇಕು. ಒಂದು ವೇಳೆ ಹಾಜರಾಗದಿದ್ದಲ್ಲಿ ಬಂಧನಕ್ಕೆ ವಾರಂಟ್ (Warrant) ಹೊರಡಿಸಬೇಕಾಗುತ್ತದೆ ಎಂದು ಚಾಟಿ ಬೀಸಿದರು.

    ಅನುಮತಿ ಪಡೆಯದೇ ಅಭ್ಯರ್ಥಿ ಪರ ಚುನಾವಣಾ ರ‍್ಯಾಲಿ ನಡೆಸಿದ ಆರೋಪವನ್ನು ಶ್ರೀರಾಮುಲು ಅವರು ಎದುರಿಸುತ್ತಿದ್ದಾರೆ. ಈ ಸಂಬಂಧ 2023ರ ಏ.28 ರಂದು ಚುನಾವಣಾ ಆಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಇದನ್ನೂ ಓದಿ: ಅಕ್ಬರ್‌, ಸೀತಾ ಸಿಂಹಗಳಿಗೆ ಮರುನಾಮಕರಣ ಮಾಡಿ- ಕೋಲ್ಕತ್ತಾ ಹೈಕೋರ್ಟ್‌ ಸೂಚನೆ

  • ದಸರಾಗೆ ನೀತಿ ಸಂಹಿತೆ ಅಡ್ಡಿ ಇಲ್ಲ- ಚುನಾವಣಾ ಆಯೋಗ

    ದಸರಾಗೆ ನೀತಿ ಸಂಹಿತೆ ಅಡ್ಡಿ ಇಲ್ಲ- ಚುನಾವಣಾ ಆಯೋಗ

    ಮೈಸೂರು: ವಿಶ್ವವಿಖ್ಯಾತ ದಸರಾಗೆ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದ್ದು, ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ.

    ಈ ಕುರಿತು ಶನಿವಾರ ಮೈಸೂರು ಜಿಲ್ಲಾ ಚುನಾವಣಾಧಿಕಾರಿ ಅಭಿರಾಮ್.ಜಿ.ಶಂಕರ್ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು. ಈ ಹಿನ್ನೆಲೆ ರಾಜ್ಯ ಚುನಾವಣಾ ಆಯೋಗ 2018ರ ಆದೇಶದಂತೆ ಕ್ಷೇತ್ರ ವ್ಯಾಪ್ತಿಯಲ್ಲಿ ಮಾತ್ರ ನೀತಿ ಸಂಹಿತೆ ಜಾರಿ ಮಾಡಿ ಆದೇಶ ಹೊರಡಿಸಿದೆ. ಹೀಗಾಗಿ ಮೈಸೂರು ದಸರಾದ ಎಲ್ಲ ಕಾರ್ಯಕ್ರಮಗಳಿಗೆ ನೀತಿ ಸಂಹಿತೆಯಿಂದ ವಿನಾಯಿತಿ ದೊರೆತಿದೆ.

    ಇದರಿಂದ ಉಪಸಮಿತಿ ಸೇರಿದಂತೆ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಂತಾಗಿದೆ. ಆದೇಶದ ಬಗ್ಗೆ ಮೈಸೂರು ಜಿಲ್ಲಾ ಚುನಾವಣಾಧಿಕಾರಿ ಅಭಿರಾಮ್.ಜಿ.ಶಂಕರ್ ಅಧಿಕೃತ ಮಾಹಿತಿ ನೀಡಿದ್ದಾರೆ.

  • ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ವಿಚಾರಣೆ- ಬೆಳಿಗ್ಗೆಯಿಂದ ನಗರ ಸಂಚಾರ ಮಾಡಿದ ಪೂಜಾಗಾಂಧಿ

    ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ವಿಚಾರಣೆ- ಬೆಳಿಗ್ಗೆಯಿಂದ ನಗರ ಸಂಚಾರ ಮಾಡಿದ ಪೂಜಾಗಾಂಧಿ

    ರಾಯಚೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ನಟಿ ಪೂಜಾಗಾಂಧಿ ರಾಯಚೂರಿಗೆ ಬಂದಿದ್ದು, ಬೆಳಿಗ್ಗೆಯಿಂದ ನಗರ ಸಂಚಾರ ನಡೆಸಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಓಡಾಡಿದ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.

    ನಗರದ ತೀನ್ ಕಂದಿಲ್ ವೃತ್ತದಲ್ಲಿ ಸಾಧಿಕ್ ಟೀ ಅಂಗಡಿಯಲ್ಲಿ ಟೀ ಕುಡಿದು, ಟೀ ಅಂಗಡಿ ಮಾಲೀಕನೊಂದಿಗೆ ಸೆಲ್ಫಿ ತೆಗೆದುಕೊಂಡರು. ಬಳಿಕ ಆರ್‍ಟಿಓ ವೃತ್ತದ ಬಳಿಯ ವೈಟ್ ಹೌಸ್ ಎಕ್ಸಿಬಿಷನ್ ಗೆ ತೆರಳಿ ಅಭಿಮಾನಿಗಳೊಂದಿಗೆ ಮಾತನಾಡಿದರು. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಯೋಚನೆ ಮಾಡಿಲ್ಲ ಅಂತ ಪೂಜಾಗಾಂಧಿ ತಿಳಿಸಿದರು.

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಯಚೂರು ನಗರ ಕ್ಷೇತ್ರಕ್ಕೆ ಬಿಎಸ್‍ಆರ್ ಕಾಂಗ್ರೆಸ್ ನಿಂದ ಪೂಜಾಗಾಂಧಿ ಸ್ಪರ್ಧಿಸಿದ್ದರು. ಚುನಾವಣಾ ಪ್ರಚಾರಕ್ಕೆ ಅನುಮತಿಯಿಲ್ಲದ ವಾಹನ ಬಳಿಸಿದ್ದ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಎದುರಿಸುತ್ತಿದ್ದಾರೆ.

    ಪ್ರಕರಣದ ವಿಚಾರಣೆ ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಜೆಎಂಎಫ್ ಸಿ-2 ರಲ್ಲಿ ವಿಚಾರಣೆ ನಡೆಯಲಿದ್ದು ಪದೇ ಪದೇ ವಿಚಾರಣೆಗೆ ಗೈರಾದ ಹಿನ್ನೆಲೆ ಅಕ್ಟೋಬರ್ 26 ರಂದು ಸುಮಾರು 6 ಗಂಟೆ ಕಾಲ ಕೋರ್ಟ್ ಕಸ್ಟಡಿಗೆ ಒಳಪಡಿಸಿದ್ದ ನ್ಯಾಯಾಧೀಶರು ಮುಂದೆ ವಿಚಾರಣೆಗೆ ಗೈರಾಗದಂತೆ ಎಚ್ಚರಿಕೆ ನೀಡಿದ್ದರು.