Tag: Electric

  • ದೇಶದ ಮೊದಲ ಎಲೆಕ್ಟ್ರಿಕ್‌ ಡಬ್ಬಲ್ ಡೆಕ್ಕರ್ ಬಸ್‌ ಇಂದಿನಿಂದ ಕಾರ್ಯಾರಂಭ – ಏನಿದರ ವಿಶೇಷತೆ?

    ದೇಶದ ಮೊದಲ ಎಲೆಕ್ಟ್ರಿಕ್‌ ಡಬ್ಬಲ್ ಡೆಕ್ಕರ್ ಬಸ್‌ ಇಂದಿನಿಂದ ಕಾರ್ಯಾರಂಭ – ಏನಿದರ ವಿಶೇಷತೆ?

    ಮುಂಬೈ: ದೇಶದ ಮೊದಲ ಡಬ್ಬಲ್ ಡೆಕ್ಕರ್ ಹವಾನಿಯಂತ್ರಿತ (ಎಸಿ) ಬಸ್ ಸೇರಿದಂತೆ 2 ಎಲೆಕ್ಟ್ರಿಕ್‌ ಬಸ್‌ಗಳು ಮುಂಬೈನಲ್ಲಿ ಇಂದಿನಿಂದ ಕಾರ್ಯಾರಂಭ ಮಾಡಿವೆ.

    ಈ ಬಸ್‌ಗಳು ಉತ್ತಮ ಆಕರ್ಷಣೆಯಾಗಿದ್ದು, ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡಲಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಬಸ್‌ಗಳಲ್ಲಿ 1 ಆ್ಯಪ್ (ತಂತ್ರಾಂಶ) ನಿಯಂತ್ರಿತ ಆಗಿದ್ದು, ಮತ್ತೊಂದು ನಿಯಂತ್ರಿತ ಎಲೆಕ್ಟಿಕ್ ಡಬ್ಬಲ್ ಡೆಕ್ಕರ್ ಬಸ್ ಆಗಿದೆ.

    ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಹಾಗೂ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈ ಬಸ್‌ಗಳಿಗೆ ಚಾಲನೆ ನೀಡಲಿದ್ದಾರೆ. ಮುಂಬೈ ನಗರ ಸಾರ್ವಜನಿಕ ಸಾರಿಗೆ ನಗರದಾದ್ಯಂತ ಆಪ್ ಆಧಾರಿತ ಬಸ್ ಸೇವೆ ನೀಡಲು ಯೋಜನೆ ರೂಪಿಸಿದೆ.

    ಇತ್ತೀಚೆಗೆ ದೆಹಲಿಯ ಕೇಜ್ರಿವಾಲ್ ನೇತೃತ್ವದ ಸರ್ಕಾರ ಸುಮಾರು 200 ಎಲೆಕ್ಟ್ರಿಕ್‌ ಬಸ್‌ಗಳಿಗೆ ಚಾಲನೆ ನೀಡಿತ್ತು.

    Live Tv
    [brid partner=56869869 player=32851 video=960834 autoplay=true]

  • 24 ಗಂಟೆಯೊಳಗೆ ರೈತರ ಪಂಪ್‍ಸೇಟ್‍ಗೆ ಟ್ರಾನ್ಸ್​ಫಾರ್ಮರ್ ವ್ಯವಸ್ಥೆ ಮಾಡಿ: ಸುನಿಲ್ ಕುಮಾರ್

    24 ಗಂಟೆಯೊಳಗೆ ರೈತರ ಪಂಪ್‍ಸೇಟ್‍ಗೆ ಟ್ರಾನ್ಸ್​ಫಾರ್ಮರ್ ವ್ಯವಸ್ಥೆ ಮಾಡಿ: ಸುನಿಲ್ ಕುಮಾರ್

    ಕಲಬುರಗಿ: ಗ್ರಾಮೀಣ ಭಾಗದಲ್ಲಿ ದುರಸ್ತಿಗೊಳಗಾದ ವಿದ್ಯುತ್ ಟ್ರಾನ್ಸ್​ಫಾರ್ಮರ್(ಪರಿವರ್ತಕ)ಗಳ ಬದಲಾವಣೆಯನ್ನು 24 ಗಂಟೆಯೊಳಗೆ ಮಾಡಲೇಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

    ನಗರದ ಜೆಸ್ಕಾಂ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಜೆಸ್ಕಾಂ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಯಾವುದೇ ಕಾರಣವಿಲ್ಲದೇ ಟ್ರಾನ್ಸ್​ಫಾರ್ಮರ್ ಬದಲಾವಣೆ ಪ್ರಕ್ರಿಯೆಯಲ್ಲಿ ವಿಳಂಬ ಮಾಡಬಾರದು ಎಂದು ತಾಕೀತು ಮಾಡಿದರು. ಟ್ರಾನ್ಸ್​ಫಾರ್ಮರ್ ಬದಲಾವಣೆ ಸಂಬಂಧ ರೈತರಲ್ಲಿ ಕೆಲ ಸಿಬ್ಬಂದಿ ಹಣದ ಬೇಡಿಕೆ ಇಡುತ್ತಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಮುಂದಿನ ದಿನಗಳಲ್ಲಿ ಯಾರಾದರೂ ಇಂತಹ ಬೇಡಿಕೆ ಇಟ್ಟಲ್ಲಿ, ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿ, ಇಂತಹ ಪ್ರಕರಣಗಳ ಕೈಬಿಡುವಂತೆ ಯಾರಾದರೂ ಪ್ರಭಾವಿ ವ್ಯಕ್ತಿಗಳ ಮೂಲಕ ನನ್ನ ಮೇಲೆ ಒತ್ತಡ ಹೇರಲು ಮುಂದಾದರೆ ನಾನು ಯಾವುದಕ್ಕೂ ಜಗ್ಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

    ಗಂಗಾ ಕಲ್ಯಾಣ ಯೋಜನೆಯಡಿ ನೋಂದಾಯಿತ ಫಲಾನುಭವಿ ರೈತರ ಪಂಪ್‍ಸೇಟ್‍ಗಳಿಗೆ ಯಾವುದೇ ವಿಳಂಬವಿಲ್ಲದೇ 30 ದಿನಗಳಲ್ಲಿ ವಿದ್ಯುತ್ ಪೂರೈಸಬೇಕು. ಇತ್ತೀಚೆಗೆ ತೋಟದ ಮನೆಗಳು ಹೆಚ್ಚಾಗುತ್ತಿದ್ದು, ಆದರೆ ಈ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವುದು ಸವಾಲಾಗಿದೆ. ಪುಟ್ಟ-ಪುಟ್ಟ ಮಕ್ಕಳು, ಜಾನುವಾರುಗಳು ಇಂತಹ ಮನೆಗಳಲಿದ್ದು, ರಾತ್ರಿ ವೇಳೆ ಕತ್ತಲೆಯಲ್ಲಿ ದಿನದೂಡಬೇಕಾಗಿದೆ. ಇಂತಹ ತೋಟದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವೈಜ್ಞಾನಿಕವಾಗಿ ಕ್ರಮಕೈಗೊಳ್ಳಬೇಕು. ಮೊದಲು ಜಿಲ್ಲೆಯಲ್ಲಿ ತೋಟದ ಮನೆಗಳು ಎಷ್ಟು ಇವೆ ಎಂಬುವುದನ್ನು ಸಮೀಕ್ಷೆ ಮಾಡಬೇಕು. ಬಳಿಕ ಯಾವ ವಿಧಾನದ ಮೂಲಕ ಈ ತೋಟದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬಹುದು ಎಂಬುದರ ಬಗ್ಗೆ ಮೂರು ತಿಂಗಳಲ್ಲಿ ಯೋಜನೆ ರೂಪಿಸುವಂತೆ ಜೆಸ್ಕಾಂ ಅಧಿಕಾರಿಗಳಿಗೆ ಸಚಿವರು ಸಲಹೆ ನೀಡಿದರು.ಇದನ್ನೂ ಓದಿ: ಸಾಲಬಾಧೆ ತಾಳದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ

    ನಿರಂತರವಾಗಿ 7 ತಾಸು ರೈತರ ಪಂಪ್‍ಸೇಟ್‍ಗಳಿಗೆ ವಿದ್ಯುತ್ ಪೂರೈಕೆಯಾಗಬೇಕು. ವಿದ್ಯುತ್ ಪೂರೈಕೆ ಕೇವಲ ದಾಖಲೆಗಳಲ್ಲಿರಬಾರದು, ಅದು ಕಾರ್ಯರೂಪದಲ್ಲಿರಬೇಕು. ಈ ಸಂಬಂಧ ಅಧಿವೇಶನ ಸಂದರ್ಭದಲ್ಲಿ ಎಲ್ಲಾ ಶಾಸಕರ ಸಭೆ ಕರೆದು ಚರ್ಚಿಸುವುದಾಗಿ ತಿಳಿಸಿದ ಅವರು, ಸಭೆಯಲ್ಲಿ ಶಾಸಕರು ಜಿಲ್ಲೆಯ ವಿದ್ಯುತ್ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದರೆ, ಅಂತಹ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವುದಾಗಿ ತಿಳಿಸಿದರು. ಜೆಸ್ಕಾಂ ಗ್ರಾಹಕರ ಸಹಾಯವಾಣಿ-1912ಗೆ ಬರುವ ದೂರು ಕರೆಗಳಿಗೆ ಪೂರಕವಾಗಿ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಕೇವಲ ತಾಂತ್ರಿಕ ಕಾರಣ ನೀಡಿ, ಗ್ರಾಹಕರ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ ಎಂದು ಖಾರವಾಗಿ ಹೇಳಿದ ಸಚಿವರು, ಈ ಸಂಬಂಧ ತಮಗೆ ನಿತ್ಯ ಕರೆಗಳು ಬರುತ್ತಿದ್ದು, ಮುಂದಿನ ದಿನಗಳಲ್ಲಿ ಇಂತಹ ಕರೆಗಳು ಬಾರದಂತೆ ನೋಡಿಕೊಳ್ಳಿ ಎಂದರು.

    ಜೆಸ್ಕಾಂ ವ್ಯಾಪ್ತಿಯಲ್ಲಿ 33 ಕೆ.ವಿ.ಯ 54 ವಿದ್ಯುತ್ ಉಪಕೇಂದ್ರ ಸ್ಥಾಪಿಸುತ್ತಿರುವುದು ಉತ್ತಮ ಕಾರ್ಯ. ಆದರೆ, ಕಲಬುರಗಿ ಜಿಲ್ಲೆಗೆ 17 ಉಪಕೇಂದ್ರಗಳನ್ನು ನೀಡಿ, ಇನ್ನಿತರ ಜಿಲ್ಲೆಗಳನ್ನು ಕಡೆಗಣಿಸಲಾಗುತ್ತಿದೆ. ಜೆಸ್ಕಾಂ ವ್ಯಾಪ್ತಿಯ ರಾಯಚೂರ ಜಿಲ್ಲೆಗೆ ಒಂದೂ ಉಪಕೇಂದ್ರವನ್ನೂ ಮಂಜೂರು ಮಾಡದಿರುವ ಬಗ್ಗೆ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕೇವಲ ಕಲಬುರಗಿಗೆ ಪ್ರಾಧಾನ್ಯತೆ ನೀಡಬಾರದು. ಇತರ ಜಿಲ್ಲೆಗಳನ್ನೂ ಸಮನಾಗಿ ಪರಿಗಣಿಸಬೇಕು. ಜಿಲ್ಲೆಯ ಹಲವು ಗ್ರಾಮೀಣ ಕುಟುಂಬಗಳಿಗೆ ವಿದ್ಯುತ್ ಸಂಪರ್ಕವೇ ಇಲ್ಲ. ಹೀಗಾಗಿ ಕತ್ತಲೆಯಲ್ಲಿರುವ ಹಲವು ಕುಟುಂಬಳಿಗೆ ರಾಜ್ಯ ಸರ್ಕಾರದ ಬೆಳಕು ಯೋಜನೆ ತಲುಪಿಸಿ, 100 ದಿನಗಳೊಳಗಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಈ ಸಂಬಂಧ ಗ್ರಾಮ ಪಂಚಾಯತ್‍ನಿಂದ ಗ್ರಾಹಕರು ನಿರಾಪೇಕ್ಷಣಾ ಪತ್ರ ಪಡೆಯುವ ಅಗತ್ಯವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಇದನ್ನೂ ಓದಿ: ಸಾಲಬಾಧೆ ತಾಳದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಕುಡಿಯುವ ನೀರಿನ ಉದ್ದೇಶಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿದ್ಯುತ್ ಸಂಪರ್ಕ ಕೋರಿ ಸಲ್ಲಿಸುವ ಪ್ರಸ್ತಾವನೆಗಳಿಗೆ ಆಯಾ ವರ್ಷದ ಬೇಸಿಗೆ ಕಾಲದಲ್ಲಿ ಸಮಸ್ಯೆಯಾಗದಂತೆ, ಜನವರಿ ಮಾಹೆಯಲ್ಲಿಯೇ ಸಂಪರ್ಕ ಕಲ್ಪಿಸಬೇಕು. ಇದೇ ತಿಂಗಳ 24ರ ನಂತರ ಮತ್ತೇ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದು, ಆ ಸಂದರ್ಭದಲ್ಲಿ ರೈತರು, ಗ್ರಾಹಕರಿಂದ ಯಾವುದೇ ದೂರ ಬರದಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು. ಬಳಿಕ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಕೆಳ ಹಂತದ ಅಧಿಕಾರಿಗಳು ಇದೇ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: ಪ್ಯಾರಾಲಂಪಿಕ್ಸ್ ಕ್ರೀಡಾಪಟುಗಳನ್ನು ಭೇಟಿ ಮಾಡಿ ಅಭಿನಂದಿಸಿದ ಪ್ರಧಾನಿ

    ರಿಚಾರ್ಜ್ ಘಟಕಗಳ ಸ್ಥಾಪನೆ:
    ರಾಜ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ರಿಚಾರ್ಜ್ ಸೆಂಟರ್‍ಗಳನ್ನು ಸ್ಥಾಪಿಸಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ಉಲ್ಲೇಖಿಸಿದರು. ರಾಜ್ಯದಲ್ಲಿ ಒಟ್ಟು 500 ಘಟಕಗಳ ಸ್ಥಾಪನೆಗೆ ಚಿಂತನೆ ನಡೆದಿದೆ. ಕಲ್ಯಾಣ ಕರ್ನಾಟಕ ಎಂಬ ಮಾತು ಕೇವಲ ಭಾಷಣದ ವಸ್ತುವಾಗದಂತೆ ನಿಜವಾಗಲೂ ಕಲ್ಯಾಣವನ್ನು ಮಾಡುವುದನ್ನು ಕಾರ್ಯರೂಪಕ್ಕೆ ತರಲು ಎಲ್ಲ ಅಧಿಕಾರಿಗಳು ಜೊತೆಗೂಡಿ ಶ್ರಮಿಸಬೇಕು ಎಂದು ತಿಳಿಹೇಳಿದರು.

    ಈ ಸಭೆಯಲ್ಲಿ ಶಾಸಕ ಬಸವರಾಜ ಮತ್ತಿಮಡು, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯ್ಕ್, ಕೆಪಿಟಿಸಿಎಲ್‍ನ ವ್ಯವಸ್ಥಾಪಕ ನಿರ್ದೇಶಕಿ ಮಂಜುಳಾ, ಪ್ರಾದೇಶಿಕ ಆಯುಕ್ತರಾದ ಡಾ.ಎನ್.ವಿ.ಪ್ರಸಾದ, ಜೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಪಾಂಡ್ವೆ, ಇಂಧನ ಇಲಾಖೆಯ ಜಂಟಿ ನಿರ್ದೇಶಕ ಕೆ.ಪರಮೇಶ್ ಮತ್ತು ಜೆಸ್ಕಾಂನ ವ್ಯಾಪ್ತಿಯ ಜಿಲ್ಲೆಗಳ ಅಧಿಕಾರಿಗಳು ಇದ್ದರು.

  • ಮಜ್ಜಿಗೆ ಕಡೆಯುವಾಗ ವಿದ್ಯುತ್ ಅವಘಡಕ್ಕೆ ಯುವಕ ಬಲಿ

    ಮಜ್ಜಿಗೆ ಕಡೆಯುವಾಗ ವಿದ್ಯುತ್ ಅವಘಡಕ್ಕೆ ಯುವಕ ಬಲಿ

    ಹಾಸನ: ಮಜ್ಜಿಗೆ ಕಡೆಯುವಾಗ ವಿದ್ಯುತ್ ತಗುಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೇಲೂರು ತಾಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ನಡೆದಿದೆ.

    ಶರತ್ (25) ಮೃತ ದುರ್ದೈವಿಯಾಗಿದ್ದಾನೆ. ಮಜ್ಜಿಗೆ ಕಡೆಯುವಾಗ ವಿದ್ಯುತ್ ಶಾಕ್ ಹೊಡೆದು ಯುವಕ ಪ್ರಾಣ ಬಿಟ್ಟಿದ್ದಾನೆ. ಶರತ್ ಆಲೂರು ತಾಲೂಕಿನ ಜಿ ಬೆಳ್ಳೂರು ಗ್ರಾಮದ ಉಮೇಶ್ ಎಂಬುವರ ಮಗನಾಗಿದ್ದಾನೆ. ಇದನ್ನೂ ಓದಿ: ಕಾಂಗ್ರೆಸ್ಸಿಗೆ ಬರೋರಿದ್ರೆ ಅರ್ಜಿ ಹಾಕಲಿ, ಆಮೇಲೆ ಕೂತು ಮಾತನಾಡೋಣ: ಡಿಕೆಶಿ

    ಶರತ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದನು. ಕೊರೊನಾ ಹಿನ್ನೆಲೆಯಲ್ಲಿ ಕೆಲಸ ಇಲ್ಲದ ಕಾರಣ ಅರೇಹಳ್ಳಿ ಬಳಿಯ ದೊಡ್ಡ ಸಾಲಾವರದ ತನ್ನ ದೊಡ್ಡಮ್ಮನವರ ಮನೆಗೆ ಬಂದಿದ್ದ. ಎಂದಿನಂತೆ ಮಜ್ಜಿಗೆ ಕಡಿಯುತ್ತಿದ್ದಂತ ಸಂದರ್ಭದಲ್ಲಿ, ಮಜ್ಜಿಗೆ ಮಿಕ್ಸಿಗೆ ಇರುವ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಅರೇಹಳ್ಳಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ಮಂಗಳೂರಿನ ವಿನಂತಿ ಹರಿಕಾಂತ

  • ರಾಜ್ಯದ ಆಟೋಮೊಬೈಲ್  ಕ್ಷೇತ್ರದಲ್ಲಿ ಎಲೆಕ್ಟ್ರಿಕ್ ಕ್ರಾಂತಿಗೆ ದಿನಗಣನೆ : ಅಶ್ವತ್ಥನಾರಾಯಣ

    ರಾಜ್ಯದ ಆಟೋಮೊಬೈಲ್ ಕ್ಷೇತ್ರದಲ್ಲಿ ಎಲೆಕ್ಟ್ರಿಕ್ ಕ್ರಾಂತಿಗೆ ದಿನಗಣನೆ : ಅಶ್ವತ್ಥನಾರಾಯಣ

    – ಜಾಗತಿಕ ತಂತ್ರಜ್ಞಾನ ಆಡಳಿತ ಶೃಂಗಸಭೆ
    – ಪೆಟ್ರೋಲ್ ಬಂಕ್‍ಗಳು ಇರುವಂತೆಯೇ ಚಾರ್ಜಿಂಗ್ ಪಾಯಿಂಟ್

    ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಎಲೆಕ್ಟ್ರೀಕರಣ ಮಾಡುವುದು ಸೇರಿದಂತೆ ಆಡಳಿತ, ಅಭಿವೃದ್ಧಿ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳಲಾಗುವುದು ಎಂದು ವಿಜ್ಞಾನ-ತಂತ್ರಜ್ಞಾನ, ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಂಗಳವಾರ ಹೇಳಿದರು.

    ಜಪಾನ್ ನಲ್ಲಿ ನಡೆಯುತ್ತಿರುವ ಜಾಗತಿಕ ತಂತ್ರಜ್ಞಾನ ಆಡಳಿತ ಶೃಂಗಸಭೆಯಲ್ಲಿ ವರ್ಚುಯಲ್ ನಲ್ಲಿ ಪ್ರಧಾನ ಭಾಷಣ ಮಾಡಿದ ಅವರು; ಈಗಾಗಲೇ ಬೆಂಗಳೂರು ಮೆಟ್ರೋ ವಿದ್ಯುತ್‍ನಿಂದಲೇ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇತರೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯೂ ಎಲೆಕ್ಟ್ರೀಕರಣ ಆಗಲಿದೆ. ಜತೆಗೆ, ಸರಕಾರದ ಮಟ್ಟದಲ್ಲೂ ಪೆಟ್ರೋಲ್-ಡೀಸೆಲ್ ವಾಹನಗಳಿಗೆ ಬದಲು ಎಲೆಕ್ಟ್ರಿಕ್ ವಾಹನಗಳನ್ನೇ ಬಳಸಲಾಗುವುದು. ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ದಿನಗಣನೆ ಶುರುವಾಗಿದೆ ಎಂದರು.

    ಸಾಂಪ್ರದಾಯಿಕ ಮೂಲಗಳ ಜತೆಗೆ ಅಸಂಪ್ರದಾಯಿಕ ಮೂಲಗಳಿಂದ ಕರ್ನಾಟಕ ಉತ್ತಮ ರೀತಿಯಲ್ಲಿ ವಿದ್ಯುತ್ ಉತ್ಪಾದನೆ ಮಾಡುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಹೀಗಾಗಿ ಕೈಗಾರಿಕೆ ಹೂಡಿಕೆಗೆ ಇದಕ್ಕಿಂತ ಉತ್ತಮ ರಾಜ್ಯ ಮತ್ತೊಂದಿಲ್ಲ. ವಿದ್ಯುತ್ ಸ್ವಾವಲಂಭನೆ ಸಾಧಿಸುವ ಮೂಲಕ ರಾಜ್ಯದ ಆಟೋಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿಯೇ ಆಗುತ್ತಿದೆ. ಇನ್ನು ಕೆಲ ದಿನಗಳಲ್ಲಿಯೇ ರಾಜ್ಯದ ಉದ್ದಗಲಕ್ಕೂ ಎಲೆಕ್ಟ್ರಿಕ್ ವಾಹನಗಳೇ ರಸ್ತೆಗಳ ಮೇಲೆ ರಾರಾಜಿಸಲಿವೆ ಎಂದು ಹೇಳಿದರು.

    ಎಲೆಕ್ಟ್ರಿಕ್ ವಾಹನ ಮತ್ತು ಇಆರ್&ಡಿ ನೀತಿ:
    ಹೊಸ ತಲೆಮಾರಿನ ವಾಹನಗಳಿಗೆ ಪೂರಕವಾದ ಎಲ್ಲ ವ್ಯವಸ್ಥೆಗಳನ್ನು ರಾಜ್ಯ ಸರಕಾರ ಮಾಡಿದೆ. ಇಡೀ ದೇಶದಲ್ಲಿಯೇ ಮೊತ್ತ ಮೊದಲಿಗೆ ಎಲೆಕ್ಟ್ರಿಕ್ ವಾಹನ ನೀತಿಯನ್ನು ಜಾರಿಗೆ ತಂದ ರಾಜ್ಯವೆಂದರೆ ಕರ್ನಾಟಕ ಮಾತ್ರ. ಇದಕ್ಕೆ ಪೂರಕವಾಗಿ ಕೆಲ ದಿನಗಳ ಹಿಂದೆ ಇಆರ್&ಡಿ (ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ) ನೀತಿಯನ್ನು ಜಾರಿಗೆ ತರಲಾಗಿದೆ. ಇಂಥ ನೀತಿಯನ್ನು ಅಳವಡಿಸಿಕೊಂಡ ಭಾರತದ ಮೊದಲ ರಾಜ್ಯ ಕರ್ನಾಟವೇ ಆಗಿದೆ ಎಂದರು.

    ಇನ್ನು ಕೆಲ ದಿನಗಳಲ್ಲಿಯೇ ಎಲ್ಲೆಲ್ಲೂ ಪೆಟ್ರೋಲ್ ಬಂಕ್‍ಗಳು ಇರುವಂತೆಯೇ ವಾಹನಗಳಿಗೆ ಬೇಕಾದ ಚಾರ್ಜಿಂಗ್ ಪಾಯಂಟ್‍ಗಳು ಹಾಗೂ ಬ್ಯಾಟರಿ ಬ್ಯಾಂಕ್ ಕಾಣಸಿಗಲಿವೆ. ನಮ್ಮಲ್ಲಿ ನೂರಕ್ಕೆ ನೂರರಷ್ಟು ವಿದ್ಯುತ್ ಸ್ವಾವಲಂಬನೆ ಇರುವುದರಿಂದ ಇದು ಸಾಧ್ಯವಾಗುತ್ತಿದೆ ಎಂದು ಡಾ.ಅಶ್ವತ್ಥನಾರಾಯಣ ನುಡಿದರು.

    ಕರ್ನಾಟಕವನ್ನು ದೇಶದ ಅತ್ಯುತ್ತಮ ಕೈಗಾರಿಕಾ ನೆಲೆಯಾಗಿಸುವ ನಿಟ್ಟಿನಲ್ಲಿ ಸರಕಾರ ವಿದೇಶಿ ಬಂಡವಾಳ ಹೂಡಿಕೆ, ಆವಿಷ್ಕಾರ, ತಂತ್ರಜ್ಞಾನ, ಮೂಲಸೌಕರ್ಯಕ್ಕೆ ಹೆಚ್ಚು ಒತ್ತು ನೀಡಿದೆಯಲ್ಲದೆ, ವಿವಿಧ ನೀತಿಗಳನ್ನು ಜಾರಿಗೆ ತರುವ ಮೂಲಕ ಆಮೂಲಾಗ್ರ ಸುಧಾರಣೆಗಳನ್ನು ಜಾರಿಗೊಳಿಸಿದೆ. ಕೋವಿಡ್ಡೋತ್ತರ ಕಾಲದಲ್ಲಿ ರಾಜ್ಯದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಸರಕಾರ ಅತ್ಯಗತ್ಯವಾದ ಎಲ್ಲ ಉಪ ಕ್ರಮಗಳನ್ನು ಕೈಗೊಂಡಿದ್ದು, ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದರು.

    ಮೂಲಸೌಕರ್ಯವೆಂದರೆ, ಮುಖ್ಯವಾಗಿ ವಿದ್ಯುತ್, ರಸ್ತೆ, ನೀರು ಇತ್ಯಾದಿಗಳನ್ನು ಆದ್ಯತೆಯ ಮೇರೆಗೆ ಒದಗಿಸುವುದು ಹಾಗೂ ಕೈಗಾರಿಕಾ ಪೂರಕ ವ್ಯವಸ್ಥೆ, ಹೂಡಿಕೆದಾರ ಸ್ನೇಹಿ ನೀತಿ ಇತ್ಯಾದಿಗಳ ಮೂಲಕ ಕರ್ನಾಟಕವು ಹೂಡಿಕೆದಾರರ ನೆಚ್ಚಿನ ತಾಣವಾಗಿದೆ ಎಂದರು ಡಿಸಿಎಂ.

    ಶೃಂಗದಲ್ಲಿ ವಲ್ರ್ಡ್ ಎಕಾನಾಮಿಕ್ ಫೋರಂ ಕ್ರಿಸ್ಟೋಫ್ ವುಲ್ಫ್, ಬಿಸ್ನೆಸ್ ಎಕ್ಸ್‍ಪರ್ಟ್ ಆಂಡ್ರೆ ಆಂಡೋನಿಯನ್, ಟೆಕ್ನಾಲಜಿ ನಿಪುಣ ಯಾಶಿಫುಮಿ ಕಾಟೋ, ಲಾಜಿಸ್ಟಿಕ್ಸ್ ಪರಿಣಿತರಾದ ಮಾರಿಯಮ್ ಅಲ್-ಫೌಂಡ್ರೆ ಮುಂತಾದವರು ವರ್ಚುವಲ್ ಸಭೆಯಲ್ಲಿ ಪಾಲ್ಗೊಂಡು ತಮ್ಮ ವಿಚಾರಗಳನ್ನು ಮಂಡಿಸಿದರು.

  • ಬೆಂಗ್ಳೂರಿನಲ್ಲಿ ವಿದ್ಯುತ್‍ಗೆ ಮತ್ತೊಬ್ಬ ಬಾಲಕ ಬಲಿ

    ಬೆಂಗ್ಳೂರಿನಲ್ಲಿ ವಿದ್ಯುತ್‍ಗೆ ಮತ್ತೊಬ್ಬ ಬಾಲಕ ಬಲಿ

    ಬೆಂಗಳೂರು: ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ.

    ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು.

    ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಕ್ಷಯ್ ಇಂದು ಮೃತಪಟ್ಟಿದ್ದಾನೆ. ಶಾಲಾ ಮಂಡಳಿ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಈ ಹಿಂದೆ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಎಲ್‍ಆರ್ ಬಂಡೆಯಲ್ಲಿ ಆಟವಾಡುತ್ತಿದ್ದ ಬಾಲಕ ವಿಕ್ರಂ, ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದನು. ನಂತರ ಮತ್ತಿಕೆರೆಯ ನೇತಾಜಿ ಸರ್ಕಲ್ ಬಳಿ ವಿದ್ಯುತ್ ತಗುಲಿ ಲಿಖಿಲ್(14) ಮೃತಪಟ್ಟಿದ್ದನು.

  • ಗಣೇಶ ವಿಸರ್ಜನೆ ವೇಳೆ ಭಜರಂಗದಳದ ತಾಲೂಕು ಸಂಚಾಲಕ ದುರ್ಮರಣ

    ಗಣೇಶ ವಿಸರ್ಜನೆ ವೇಳೆ ಭಜರಂಗದಳದ ತಾಲೂಕು ಸಂಚಾಲಕ ದುರ್ಮರಣ

    ದಾವಣಗೆರೆ: ಗಣಪತಿ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಗೆ ವಿದ್ಯುತ್ ತಗುಲಿದ ಪರಿಣಾಮ ಭಜರಂಗ ದಳದ ತಾಲೂಕು ಸಂಚಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ನಡೆದಿದೆ.

    ಹರಪನಹಳ್ಳಿ ನಿವಾಸಿ ಭಜರಂಗಿ ಹನುಮಂತು (27) ಮೃತಪಟ್ಟ ದುರ್ದೈವಿ. ಭಾನುವಾರ ರಾತ್ರಿ ಪಟ್ಟಣದ ಹಿಂದೂ ಮಹಾ ಗಣಪತಿ ವಿಸರ್ಜನೆಯನ್ನು ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮೆರವಣಿಗೆ ಮುಗಿಸಿ ತಡರಾತ್ರಿ 11 ಸುಮಾರಿಗೆ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ಹೋಗುತ್ತಿರುವಾಗ ಮಿನಿ ವಿಧಾನಸೌಧದ ಬಳಿ ಟ್ರ್ಯಾಕ್ಟರ್ ಗೆ ವಿದ್ಯುತ್ ತಂತಿ ತಗುಲಿದೆ. ಕೂಡಲೇ ಟ್ರಾಕ್ಟರ್ ನಲ್ಲಿದ್ದ ಹಲವರು ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಹನುಮಂತು ಇಳಿಯುವ ಹೊತ್ತಿಗೆ ಟ್ರಾಕ್ಟರ್ ಗೆ ವಿದ್ಯುತ್ ಸ್ಪರ್ಶಿಸಿದ್ದರಿಂದ ತೀವ್ರವಾಗಿ ಅಸ್ವಸ್ಥಗೊಂಡಿದ್ದರು.

    ಕೂಡಲೇ ಸಂಘಟನೆಯ ಯುವಕರು ಹನುಮಂತುರವರನ್ನು ಆಸ್ಪತ್ರೆಗೆ ಸಾಗಿಯಲು ಯತ್ನಿಸಿದಾದರೂ ಮಾರ್ಗಮಧ್ಯೆಯೇ ಅಸುನೀಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗಣಪನನ್ನು ಕಾಯುತ್ತಿದ್ದ ಯುವಕ ವಿದ್ಯುತ್ ಶಾಕ್‍ಗೆ ಬಲಿ!

    ಗಣಪನನ್ನು ಕಾಯುತ್ತಿದ್ದ ಯುವಕ ವಿದ್ಯುತ್ ಶಾಕ್‍ಗೆ ಬಲಿ!

    ರಾಮನಗರ: ಬೀದಿಯಲ್ಲಿ ಕೂರಿಸಿದ್ದ ಗಣಪನನ್ನು ಕಾಯುತಿದ್ದ ಯುವಕನೊಬ್ಬ ವಿದ್ಯುತ್ ತಗುಲಿ ಮೃತಪಟ್ಟ ಧಾರೂಣ ಘಟನೆ ರಾಮನಗರ ತಾಲೂಕಿನ ಜಾಲಮಂಗಲದಲ್ಲಿ ನಡೆದಿದೆ.

    ಚೇತನ್ ಕುಮಾರ್ (16) ಮೃತ ದುರ್ದೈವಿ. ಜಾಲಮಂಗಲದಲ್ಲಿ ಬೀದಿಯಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಯನ್ನು ಚೇತನ್ ಸೇರಿದಂತೆ ನಾಲ್ಕು ಮಂದಿ ಕಾವಲು ಕಾಯುತ್ತಿದ್ದರು. ಶನಿವಾರವೂ ಸಹ ಕಾವಲು ಕಾಯುತ್ತಿದ್ದಾಗ, ಮೂತ್ರ ವಿಸರ್ಜನೆಗೆಂದು ಚೇತನ್ ತೆರಳಿದ್ದನು. ಈ ವೇಳೆ ಬೀದಿ ಲೈಟ್‍ಗೆ ಅಳವಡಿಸಿದ್ದ ವಿದ್ಯುತ್ ತಂತಿ ತಗಲು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪ್ರತ್ಯೇಕ ಕಡೆ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಕಾರ್ಮಿಕ ಹಾಗೂ ಇಬ್ಬರು ರೈತರ ಸಾವು

    ಪ್ರತ್ಯೇಕ ಕಡೆ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಕಾರ್ಮಿಕ ಹಾಗೂ ಇಬ್ಬರು ರೈತರ ಸಾವು

    ಕಾರವಾರ: ವಿದ್ಯುತ್ ತಂತಿ ತಗುಲಿ ಪ್ರತ್ಯೇಕ ಕಡೆ ಮೂವರು ಸಾವನ್ನಪ್ಪಿದ ಘಟನೆ ಯಲ್ಲಾಪುರ ನಗರ ಹಾಗೂ ದುಂಡ್ಯಾನಕೊಪ್ಪ ಗ್ರಾಮದಲ್ಲಿ ನಡೆದಿದೆ.

    ನಾಗರಾಜ್ ಚನ್ನಪ್ಪ ಕಲಸೂರು(35) ಮೃತಪಟ್ಟ ಕಾರ್ಮಿಕ. ನಾಗರಾಜ್ ಮೂಲತಃ ಕಲಘಟಗಿ ತಾಲೂಕಿನ ತಂಬೂರು ಗ್ರಾಮದವರಾಗಿದ್ದಾರೆ ಎಂದು ತಿಳಿದು ಬಂದಿದೆ.  ಕಾರ್ಮಿಕ ಯಲ್ಲಾಪುರ ನಗರದ ಅರಣ್ಯ ಇಲಾಖೆ ಕಟ್ಟಡ ನಿರ್ಮಾಣದ ವೇಳೆ ಕಟ್ಟಡದ ಮೇಲ್ಭಾಗದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಗೋಪಾಲ ಭಟ್ (60) ಹಾಗೂ ಗೋಪಾಲಕೃಷ್ಣ ರಾಮಚಂದ್ರ ಹೆಗಡೆ (50) ಮೃತ ರೈತರಾಗಿದ್ದಾರೆ.ಇವರು ಯಲ್ಲಾಪುರ ತಾಲೂಕಿನ ಡುಂಡ್ಯಾನಕೊಪ್ಪ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡಿ ಬರುತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಯಲ್ಲಾಪುರದಲ್ಲಿ ಪ್ರತ್ಯೇಕ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ಸಾವನ್ನಪ್ಪಿದ್ದು, ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.