Tag: Electric Short Circuit

  • ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಧಗಧಗಿಸಿದ ಅಂಗಡಿಗಳು

    ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಧಗಧಗಿಸಿದ ಅಂಗಡಿಗಳು

    ಗದಗ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಾಂಪ್ಲೆಕ್ಸ್ ನ 3 ಅಂಗಡಿಗಳಲ್ಲಿ ಬೆಂಕಿ ಹೊತ್ತಿಕೊಂಡು ಧಗಧಗಿಸಿರುವ ಘಟನೆ ನಗರದ ಚೇತನಾ ಕ್ಯಾಂಟೀನ್ ಬಳಿ ನಡೆದಿದೆ.

    ಬಸನಗೌಡ ನಾಡಗೌಡ್ರ ಅವರಿಗೆ ಸೇರಿದ ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಬಟ್ಟೆ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ, ಬೆಂಕಿ ಹೊತ್ತಿಕೊಂಡಿದೆ. ಲಾಕ್‍ಡೌನ್ ಹಿನ್ನೆಲೆ ಅಂಗಡಿಗಳಲ್ಲಿ ಯಾರು ಇಲ್ಲದಕ್ಕೆ, ಅಕ್ಕ ಪಕ್ಕದ ಕಿರಾಣಿ ಹಾಗೂ ಜನರಲ್ ಸ್ಟೋರ್ ಗೂ ಬೆಂಕಿ ವ್ಯಾಪಿಸಿದೆ. ನಂತರ ದಟ್ಟವಾದ ಹೋಗೆ ಕಂಡು ಸ್ಥಳಿಯರು ಬೆರಗಾಗಿದ್ದಾರೆ.

    ತಕ್ಷಣವೇ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸ್ಥಳಿಯರು ಬೆಂಕಿ ನಂದಿಸಲು ಮುಂದಾದರು. ಈ ದುರ್ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಗದಗನ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಬೆಳ್ಳಂಬೆಳಗ್ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ – ಲಕ್ಷಾಂತರ ರೂಪಾಯಿ ವಸ್ತುಗಳು ಬೆಂಕಿಗಾಹುತಿ

    ಬೆಳ್ಳಂಬೆಳಗ್ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ – ಲಕ್ಷಾಂತರ ರೂಪಾಯಿ ವಸ್ತುಗಳು ಬೆಂಕಿಗಾಹುತಿ

    ಕೊಪ್ಪಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮೂರು ಅಂಗಡಿಗಳಿಗೆ ಬೆಂಕಿ ತಗುಲಿ ಹೊತ್ತಿ ಉರಿದಿರುವ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ.

    ಸರ್ಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಈ ಘಟನೆ ನಡೆದಿದೆ. ಬೆಳಗ್ಗೆ ಸುಮಾರು 3.30ರ ವೇಳೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಒಂದು ಅಂಗಡಿಗೆ ಬೆಂಕಿ ಹೊತ್ತಿಕೊಂಡು ಬಳಿಕ ಮತ್ತೆರಡು ಅಂಗಡಿಗಳಿಗೂ ವ್ಯಾಪಿಸಿದೆ. ಹಣ್ಣಿನ ಅಂಗಡಿ, ಚಪ್ಪಲಿ ಅಂಗಡಿ ಹಾಗೂ ವಾಚ್ ರಿಪೇರಿ ಅಂಗಡಿ ಬೆಂಕಿಗೆ ಆಹುತಿಯಾಗಿವೆ.

    ಘಟನೆ ವೇಳೆ ಅಂಗಡಿಗಳಲ್ಲಿದ್ದ ಹಣ್ಣು ಸೇರಿದಂತೆ ಲಕ್ಷಾಂತರ ರೂಪಾಯಿ ವಸ್ತುಗಳು ಸುಟ್ಟು ಕರಕಲಾಗಿವೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಈ ಕುರಿತಂತೆ ಇದೀಗ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಜಮ್ಮು ಕಾಶ್ಮೀರದ ಶಾರ್ಟ್ ಸರ್ಕ್ಯೂಟ್‍ನಲ್ಲಿ ವಿಜಯಪುರದ ಯೋಧ ನಿಧನ

    ಜಮ್ಮು ಕಾಶ್ಮೀರದ ಶಾರ್ಟ್ ಸರ್ಕ್ಯೂಟ್‍ನಲ್ಲಿ ವಿಜಯಪುರದ ಯೋಧ ನಿಧನ

    – ಒಂದೂವರೆ ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಯೋಧ

    ವಿಜಯಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‍ನಿಂದಾಗಿ ಕರ್ತವ್ಯ ನಿರತ ಬಿಎಸ್‍ಎಫ್ ಯೋಧ ಸಾವನ್ನಪ್ಪಿದ್ದಾರೆ.

    ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಯೋಧ ಶಿವಾನಂದ ಬಡಿಗೇರ(31) ನಿಧನವಾದ ಯೋಧ. ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರತ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‍ನಿಂದಾಗಿ ಯೋಧ ಸಾವನ್ನಪ್ಪಿದ್ದು, ಭಾರತೀಯ ಸೇನೆ ದೂರವಾಣಿ ಕರೆ ಮೂಲಕ ಕುಟುಂಬಸ್ಥರಿಗೆ ಮಾಹಿತಿ ನೀಡಿದೆ.

    ಶಿವಾನಂದ ಒಂದೂವರೆ ವರ್ಷದ ಹಿಂದಷ್ಟೇ ಜಿಲ್ಲೆಯ ತಾಳಿಕೋಟೆ ತಾಲೂಕಿನ ತುಂಬಗಿಯ ಪುಷ್ಪಾ ಅವರನ್ನು ವಿವಾಹವಾಗಿದ್ದ. ಶಿವಾನಂದ 14 ವರ್ಷಗಳ ಹಿಂದೆ ಸೇನೆ ಸೇರಿದ್ದರು. ಬಾಂಗ್ಲಾ, ಚೀನಾ ಗಡಿಯಲ್ಲಿ ಸೇವೆ ಸಲ್ಲಿಸಿ, ಸದ್ಯ ಜಮ್ಮು ಕಾಶ್ಮೀರದ ಗಡಿಯಲ್ಲಿ ನಿಯೋಜನೆಯಾಗಿದ್ದರು.

    ಶಿವಾನಂದ ಅವರ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಬಗ್ಗೆ ಶಿವಾನಂದ ಅವರ ಸಹೋದರ ಕಾಳಪ್ಪ ಬಡಿಗೇರಗೆ ಸೇನೆ ಮಾಹಿತಿ ನೀಡಿದೆ. ಕಾಳಪ್ಪ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಮನೆಯವರು ದುಃಖಿತರಾಗಿದ್ದಾರೆ. ಶಿವಾನಂದ ಅವರ ಪಾರ್ಥೀವ ಶರೀರವನ್ನು ಬೇಗನೆ ತರುವಂತೆ ಜಿಲ್ಲಾಡಳಿತಕ್ಕೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.