Tag: Electric Vehicle

  • Explainer| ಅಪರೂಪದ ಭೂ ಖನಿಜ ರಫ್ತಿಗೆ ಚೀನಾ ನಿಷೇಧ: ಭಾರತದ ಮೇಲೆ ಪರಿಣಾಮ ಏನು?

    Explainer| ಅಪರೂಪದ ಭೂ ಖನಿಜ ರಫ್ತಿಗೆ ಚೀನಾ ನಿಷೇಧ: ಭಾರತದ ಮೇಲೆ ಪರಿಣಾಮ ಏನು?

    ರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಚೀನಾ (China) ಈಗ ಭಾರತ, ಅಮೆರಿಕದ ಸೇರಿದಂತೆ ವಿವಿಧ ದೇಶಗಳಿಗೆ ಅಪರೂಪದ ಭೂಮಿಯ ಮ್ಯಾಗ್ನೆಟ್‌ಗಳ ರಫ್ತಿಗೆ ನಿರ್ಬಂಧ ಹೇರಿದೆ. ನಿರ್ಬಂಧದದಿಂದ ಭಾರತ (India) ಸೇರಿದಂತೆ ವಿಶ್ವದ ಎಲೆಕ್ಟ್ರಿಕ್‌ ವಾಹನ (Electric Vehicle) ಉದ್ಯಮದ ಮೇಲೆ ಭಾರೀ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ಚೀನಾ ಈ ನಿರ್ಧಾರ ಕೈಗೊಂಡಿದ್ದು ಯಾಕೆ? ಭಾರತದ ಮೇಲೆ ಏನು ಪರಿಣಾಮ ಬೀರಲಿದೆ ಇತ್ಯಾದಿ ವಿಚಾರಗಳನ್ನು ಇಲ್ಲಿ ವಿವರಿಸಲಾಗಿದೆ.

    ಚೀನಾ ನಿರ್ಬಂಧ ಹೇರಿದ್ದು ಯಾಕೆ?
    ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಡೊನಾಲ್ಡ್‌ ಟ್ರಂಪ್‌ (Donald Trump) ವಿಶ್ವದ ಮೇಲೆ ತೆರಿಗೆ ಸಮರ ಆರಂಭಿಸಿದ್ದರು. ತೆರಿಗೆ ಸಮರ ಆರಂಭಿಸಿದ ಬೆನ್ನಲ್ಲೇ ಹಲವು ರಾಷ್ಟ್ರಗಳು ಅಮೆರಿಕದಿಂದ ಆಮದಾಗುವ ವಸ್ತುಗಳ ಮೇಲೆ ತೆರಿಗೆ ಕಡಿಮೆ ಮಾಡಲು ಮಾತುಕತೆ ಆರಂಭಿಸಿದ್ದವು. ಆದರೆ ಪ್ರತಿಷ್ಠೆಗೆ ಬಿದ್ದ ಚೀನಾ ಅಮೆರಿಕದ ವಸ್ತುಗಳ ಮೇಲೆ ಮತ್ತಷ್ಟು ಸುಂಕ ವಿಧಿಸಿತು. ಇದಕ್ಕೆ ಪ್ರತಿಯಾಗಿ ಅಮೆರಿಕವೂ ಸುಂಕ ವಿಧಿಸಿತು. ಇದರಿಂದಾಗಿ ಚೀನಾ ಆರ್ಥಿಕತೆಯ ಮೇಲೆ ಪೆಟ್ಟು ಬಿತ್ತು. ಷೇರು ಮಾರುಕಟ್ಟೆ ಪತನ ಹೊಂದಿತು. ವಿದೇಶಿ ಹೂಡಿಕೆಗಳು ಹಿಂದಕ್ಕೆ ಸರಿದವು. ಈ ಬೆನ್ನಲ್ಲೇ ಈಗ ವಿದೇಶಗಳಿಗೆ ಅಪರೂಪದ ಭೂ ಖನಿಜ (Rare Earth Minerals) ರಫ್ತು ಮಾಡಲು ನಿರ್ಬಂಧ ಹೇರಿದೆ.

    ಚೀನಾವೇ ಸೂಪರ್‌ ಪವರ್!
    ಈ ನಿರ್ಬಂಧದ ಪ್ರಕಾರ ಏಳು ಅಪರೂಪದ ಭೂಮಿಯ ಅಂಶಗಳು (REEs) ಮತ್ತು ಸಂಬಂಧಿತ ಆಯಸ್ಕಾಂತಗಳ ರಫ್ತು ಮಾಡಲು ನಿರ್ಬಂಧ ಹೇರಲಾಗಿದೆ. ಅಂತರರಾಷ್ಟ್ರೀಯ ಇಂಧನ ಸಂಸ್ಥೆ ಮತ್ತು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (2025) ಪ್ರಕಾರ, ಚೀನಾ ವಿಶ್ವದ REEs ನ 60% ಉತ್ಪಾದಿಸುತ್ತದೆ ಮತ್ತು ಜಾಗತಿಕ ಸಂಸ್ಕರಣಾ ಸಾಮರ್ಥ್ಯದ 90% ಅನ್ನು ನಿಯಂತ್ರಿಸುತ್ತದೆ.

    ಸಮರಿಯಮ್, ಗ್ಯಾಡೋಲಿನಿಯಮ್, ಟೆರ್ಬಿಯಂ, ಡಿಸ್ಪ್ರೋಸಿಯಮ್, ಲುಟೇಷಿಯಮ್, ಸ್ಕ್ಯಾಂಡಿಯಮ್ ಮತ್ತು ಯಟ್ರಿಯಮ್ ಸೇರಿದಂತೆ ನಿರ್ಣಾಯಕ ವಸ್ತುಗಳು ವಿದ್ಯುತ್ ಮೋಟಾರ್‌ಗಳು, ಬ್ರೇಕಿಂಗ್ ವ್ಯವಸ್ಥೆಗಳು, ಸ್ಮಾರ್ಟ್‌ಫೋನ್‌ಗಳು, ಏರೋಸ್ಪೇಸ್ ಘಟಕಗಳು ಮತ್ತು ಕ್ಷಿಪಣಿ ತಂತ್ರಜ್ಞಾನದಲ್ಲಿ ಅತ್ಯಗತ್ಯ.

    ಏನಿದು ಅಪರೂಪದ ಭೂ ಖನಿಜ?
    ಆವರ್ತಕ ಕೋಷ್ಟಕದಲ್ಲಿ ಇರುವ 17 ಲೋಹಗಳ ಗುಂಪನ್ನು ಅಪರೂಪದ ಭೂ ಖನಿಜಗಳು ಎಂದು ಕರೆಯಲಾಗುತ್ತದೆ. ಈ ಖನಿಜ ನಿಕ್ಷೇಪಗಳು ವಿಶ್ವದ ಕೆಲ ದೇಶಗಳಲ್ಲಿ ಮಾತ್ರ ಲಭ್ಯವಿದೆ. ಈ ಖನಿಜಗಳು ಕಾಂತೀಯ ಮತ್ತು ವಾಹಕ ಗುಣಲಕ್ಷಣಗಳನ್ನು ಒಳಗೊಂಡಂತೆ ಅವುಗಳ ವಿಶಿಷ್ಟ ಗುಣಲಕ್ಷಣಗಳಿಂದಾಗಿ ಇವು ಮೌಲ್ಯಯುತವಾಗಿವೆ. ಇದನ್ನೂ ಓದಿ: ಟೆಸ್ಲಾಗೆ 2 ಶೋ ರೂಂ ತೆರೆಯುವ ಆಸಕ್ತಿ ಇದೆ, ಆದ್ರೆ ಭಾರತದಲ್ಲೇ ಕಾರು ಉತ್ಪಾದಿಸುವ ಆಸಕ್ತಿ ಇಲ್ಲ: ಹೆಚ್‌ಡಿಕೆ

    ಎಲೆಕ್ಟ್ರಿಕ್‌ ವಾಹನಗಳಿಗೆ ಪೆಟ್ಟು:
    ಚೀನಾದ ಅಪರೂಪದ ಭೂಮಿಯ ಮ್ಯಾಗ್ನೆಟ್ ರಫ್ತನ್ನು ನಿಷೇಧಿಸಿದೆ. ಇದರಿಂದಾಗಿ ಭಾರತದ ಆಟೋ ವಲಯಕ್ಕೆ, ವಿಶೇಷವಾಗಿ ವಿದ್ಯುತ್ ವಾಹನ (EV) ಉದ್ಯಮಕ್ಕೆ ಪೆಟ್ಟು ಬೀಳುವ ಸಾಧ್ಯತೆಯಿದೆ. ದೇಶದ ಅಪರೂಪದ ಭೂಮಿಯ ಮ್ಯಾಗ್ನೆಟ್ ಪೂರೈಕೆಯ 80% ಕ್ಕಿಂತ ಹೆಚ್ಚು ಚೀನಾದಿಂದಲೇ ಆಮದಾಗುತ್ತಿದೆ. ಚೀನಾದ ನಿರ್ಧಾರದಿಂದ ಉತ್ಪಾದನೆಗೆ ಸಮಸ್ಯೆಯಾಗಬಹುದು.

    ಇವಿ ಮೋಟಾರ್‌ಗಳಿಗೆ ಅಪರೂಪದ ಭೂಮಿಯ ಆಯಸ್ಕಾಂತಗಳು ಅವಶ್ಯಕ. ಪ್ರತಿ ವಾಹನವು ಅಂದಾಜು ಸುಮಾರು 1–2 ಕೆಜಿ ವರೆಗೆ ಈ ವಸ್ತುಗಳನ್ನು ಬಳಸುತ್ತದೆ. ಮೋಟಾರುಗಳನ್ನು  ನಿಯೋಡೈಮಿಯಮ್, ಕಬ್ಬಿಣ ಮತ್ತು ಬೋರಾನ್‌ನಿಂದ ತಯಾರಿಸಲಾಗುತ್ತದೆ. ಇವು EV ಮೋಟಾರ್‌ಗಳಿಗೆ ಅವಶ್ಯಕ. ಏಕೆಂದರೆ ಅವು ಮೋಟಾರ್‌ಗಳನ್ನು ಹಗುರಗೊಳಿಸುತ್ತವೆ ಮತ್ತು ವಾಹನಗಳ ಶಕ್ತಿಯನ್ನು ಹೆಚ್ಚಿಸುತ್ತವೆ. ಇದರಿಂದಾಗಿ ಇವಿಗಳು ವೇಗವಾಗಿ ಚಲಿಸಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲದೇ ಬ್ಯಾಟರಿಗಳು ಹೆಚ್ಚು ಕಾಲ ಬಾಳಿಕೆ ಬರುವಂತೆ ಮಾಡುತ್ತದೆ. ಇದನ್ನೂ ಓದಿ: ಐತಿಹಾಸಿಕ ಕ್ಷಣಕ್ಕೆ ಭಾರತ ಸಜ್ಜು – ಜೂ.10ರಂದು ಭಾರತದ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಶುರು

    ದ್ವಿಚಕ್ರ ವಾಹನ ಕಂಪನಿಗಳಿಗೆ ಸಮಸ್ಯೆ:
    ಭಾರತದಲ್ಲಿ ಇವಿ ಕಾರುಗಳಿಗೆ ಹೋಲಿಸಿದರೆ ಇವಿ ದ್ವಿಚಕ್ರ ವಾಹನಗಳು ಈಗ ಭಾರೀ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ. ಚೀನಾದ ನಿರ್ಧಾರದಿಂದ ದಾಸ್ತಾನುಗಳು ಬೇಗ ಖಾಲಿಯಾಗಬಹುದು. ಇವಿ ಬ್ಯಾಟರಿಗೆ ಬೇಕಾದ ಕಚ್ಚಾ ವಸ್ತುಗಳ ಸಮಸ್ಯೆಯಿಂದ ಉತ್ಪಾದನೆ ಕಡಿಮೆಯಾಗಬಹುದು. ಮುಂದೆ ಬುಕ್‌ ಮಾಡಿದರೂ ಸರಿಯಾದ ಸಮಯಕ್ಕೆ ದ್ವಿಚಕ್ರ ವಾಹನಗಳು ಗ್ರಾಹಕರ ಕೈಗೆ ಸೇರದೇ ಇರಬಹುದು. ಮುಖ್ಯವಾಗಿ ಬಜಾಜ್ ಆಟೋ, ಟಾಟಾ ಮೋಟಾರ್ಸ್, ಟಿವಿಎಸ್ ಮೋಟಾರ್ಸ್ ಮತ್ತು ಓಲಾ ಎಲೆಕ್ಟ್ರಿಕ್‌ನಂತಹ ಪ್ರಮುಖ ಆಟೋಮೊಬೈಲ್ ಸಂಸ್ಥೆಗಳ ಮೇಲೆ ಪರಿಣಾಮ ಬೀಳುವ ಸಾಧ್ಯತೆಯಿದೆ.

    ಬೇರೆ ಎಲ್ಲಿ ಬಳಕೆಯಾಗುತ್ತೆ?
    ಅಪರೂಪದ ಭೂಮಿಯ ಆಯಸ್ಕಾಂತಗಳನ್ನು ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ವಿಂಡ್ ಟರ್ಬೈನ್‌ಗಳು, ವಿಮಾನಗಳು ಮತ್ತು ಕ್ಷಿಪಣಿಗಳಲ್ಲಿಯೂ ಬಳಸಲಾಗುತ್ತದೆ. ಬ್ರೇಕ್‌ಗಳು, ವೈಪರ್‌ಗಳು, ಆಡಿಯೊ ಸಿಸ್ಟಮ್‌ಗಳು, ಪವರ್ ವಿಂಡೋಗಳು,  ಸ್ಪೀಡೋಮೀಟರ್‌ಗಳು, ನೀರಿನ ಪಂಪ್‌ಗಳು ಮತ್ತು ಸ್ವಯಂಚಾಲಿತ ಪ್ರಸರಣಗಳಂತಹ ಅನೇಕ ಕಾರು ಭಾಗಗಳಲ್ಲಿಯೂ ಬಳಸಲಾಗುತ್ತದೆ.

    ಕೋವಿಡ್‌ ಸಮಯಯದಲ್ಲಿ ಏನಾಗಿತ್ತು?
    ಚೀನಾದಲ್ಲ ಲಾಕ್‌ಡೌನ್‌ ಘೋಷಣೆ ಮಾಡಿದ್ದರಿಂದ ಹಲವಾರು ಫ್ಯಾಕ್ಟರಿಗಳು ಬಂದ್‌ ಆಗಿತ್ತು. ಸಪ್ಲೈ ಚೈನ್‌ ವ್ಯವಸ್ಥೆಯ ಮೇಲೆ ಪೆಟ್ಟು ಬಿದ್ದರಿಂದ ಸರಿಯಾದ ಸಮಯದಲ್ಲಿ ಕಚ್ಚಾ ವಸ್ತುಗಳು ರಫ್ತಾಗದ ಕಾರಣ ಭಾರತದ ಅಟೋಮೊಬೈಲ್‌ ಕಂಪನಿಗಳಿಗೆ ಕಾರು ಉತ್ಪಾದನೆಗೆ ಸಮಸ್ಯೆಯಾಗಿತ್ತು. ಬುಕ್ಕಿಂಗ್‌ ಮಾಡಿದ ಬಳಿಕ 8-9 ತಿಂಗಳು ಕಳೆದರೂ ವಾಹನ ಗ್ರಾಹಕರ ಕೈಗೆ ಸಿಕ್ಕಿರಲಿಲ್ಲ. ಭಾರತದ ಜಿಡಿಪಿಯಲ್ಲಿ ಅಟೋ ಕ್ಷೇತ್ರ ಕೊಡುಗೆ ದೊಡ್ಡದಿದೆ. ಅಟೋ ಕ್ಷೇತ್ರಕ್ಕೆ ಹಿನ್ನಡೆಯಾದರೆ ಅಟೋಮೊಬೈಲ್‌ ಕಂಪನಿಗಳಿಗೆ ಮಾತ್ರವಲ್ಲ ಇತರ ಉದ್ಯಮಗಳ ಮೇಲೂ ಪರಿಣಾಮ ಬೀರುತ್ತದೆ.

  • ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಕ್ರಮ – ಸಿಎನ್‌ಜಿ ಆಟೋಗಳಿಗೆ ಬ್ರೇಕ್, ಇವಿಗೆ ಮಾತ್ರ ಆದ್ಯತೆ?

    ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಕ್ರಮ – ಸಿಎನ್‌ಜಿ ಆಟೋಗಳಿಗೆ ಬ್ರೇಕ್, ಇವಿಗೆ ಮಾತ್ರ ಆದ್ಯತೆ?

    ನವದೆಹಲಿ: ಹತ್ತು ವರ್ಷ ಹಳೆಯ ಡೀಸೆಲ್, ಹದಿನೈದು ವರ್ಷಗಳ ಹಳೆಯ ಪೆಟ್ರೋಲ್ ವಾಹನಗಳನ್ನು ದೆಹಲಿ ಸರ್ಕಾರ (Delhi Government) ಸಂಪೂರ್ಣವಾಗಿ ನಿಷೇಧಿಸಿತ್ತು. ಇದೀಗ ವಾಯುಮಾಲಿನ್ಯ ನಿಯಂತ್ರಿಸುವ ದೃಷ್ಟಿಯಿಂದ ಸಿಎನ್‌ಜಿ (CNG) ಚಾಲಿತ ಆಟೋಗಳ ನೋಂದಣಿ ರದ್ದು ಮಾಡಲು ನಿರ್ಧರಿಸಿದೆ.

    ವಾಯುಮಾಲಿನ್ಯ (Air Pollution) ನಿಯಂತ್ರಣಕ್ಕಾಗಿ ದೆಹಲಿ ಸರ್ಕಾರ ಹೊಸ ಇವಿ ನೀತಿಯನ್ನು ಜಾರಿ ಮಾಡಲು ಮುಂದಾಗಿದೆ. ಶೀಘ್ರದಲ್ಲಿ ಈ ಸಂಬಂಧ ಹೊಸ ಮಸೂದೆ ಮಂಡನೆಯಾಗುವ ಸಾಧ್ಯತೆಯಿದೆ. ಹೊಸ ನೀತಿಯ ಪ್ರಕಾರ ಈ ವರ್ಷದ ಆ.15ರಿಂದ ಸಿಎನ್‌ಜಿ ಆಟೋ ನೋಂದಣಿಯನ್ನು ನಿಲ್ಲಿಸಲಾಗುತ್ತದೆ. ಇದೇ ವೇಳೆ ಸಿಎನ್‌ಜಿ ಆಟೋಗಳ ನವೀಕರಣಕ್ಕೂ ಸರ್ಕಾರ ಬ್ರೇಕ್ ಹಾಕಲು ನಿರ್ಧರಿಸಿದೆ.ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆ ರಿಸಲ್ಟ್: ಪಾಸಾದವರಿಗೆ ವಿಶ್ ಮಾಡಿ, ಫೇಲ್ ಆದವರಿಗೆ ಧೈರ್ಯ ತುಂಬಿದ ಸಿಎಂ

    ಹೊಸ ನೀತಿಯಡಿ ಎಲ್ಲಾ ನವೀಕರಿಸಿದ ಅಥವಾ ಬದಲಿ ಪರವಾನಗಿಗಳನ್ನು ವಿದ್ಯುತ್ ಆಟೋಗಳಿಗೆ ಮಾತ್ರ ನೀಡಲಾಗುತ್ತದೆ. ಆಟೋರಿಕ್ಷಾಗಳಲ್ಲದೆ, ನಾಗರಿಕ ಸೇವೆಗಳಿಗೆ ಬಳಸುವ ಇಂಧನ ಚಾಲಿತ ವಾಹನಗಳನ್ನು ಸಹ ಈ ನೀತಿಯಡಿ ಗುರಿಯಾಗಿಸಿಕೊಂಡಿದೆ. ಹೆಚ್ಚು ಮಹತ್ವಾಕಾಂಕ್ಷೆಯ ಪ್ರಸ್ತಾವನೆಯಲ್ಲಿ, ಹೊಸ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ಚಾಲಿತ ದ್ವಿಚಕ್ರ ವಾಹನಗಳ ನೋಂದಣಿಯನ್ನು 2026ರ ಆ.15ರಿಂದ ನಿಷೇಧಿಸಬೇಕು ಎಂದು ಕರಡು ಹೇಳುತ್ತದೆ.

    ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (Delhi Municipal Corporation), ನವದೆಹಲಿ ಮುನ್ಸಿಪಲ್ ಕೌನ್ಸಿಲ್ ಮತ್ತು ದೆಹಲಿ ಜಲಮಂಡಳಿ ನಿರ್ವಹಿಸುವ ಎಲ್ಲಾ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ಚಾಲಿತ ಕಸ ಸಂಗ್ರಹಣಾ ವಾಹನಗಳನ್ನು ಹಂತ ಹಂತವಾಗಿ ಸ್ಥಗಿತಗೊಳಿಸಲು ಇದು ಶಿಫಾರಸು ಮಾಡುತ್ತದೆ. ಇವುಗಳನ್ನು 2027ರ ಡಿ.31ರೊಳಗೆ ಸಂಪೂರ್ಣವಾಗಿ ವಿದ್ಯುತ್ ಚಾಲಿತವಾಗಿ ಪರಿವರ್ತಿಸಲಾಗುವುದು.

    ದೆಹಲಿ ಸಾರಿಗೆ ನಿಗಮ ಮತ್ತು ದೆಹಲಿ ಇಂಟಿಗ್ರೇಟೆಡ್ ಮಲ್ಟಿ-ಮೋಡಲ್ ಟ್ರಾನ್ಸಿಟ್ ಸಿಸ್ಟಮ್ ನಿರ್ವಹಿಸುವ ಎಲ್ಲಾ ಇಂಟ್ರಾ-ಸಿಟಿ ಬಸ್‌ಗಳು ಇನ್ಮುಂದೆ ವಿದ್ಯುತ್ ಚಾಲಿತವಾಗಿರಬೇಕು ಎಂದು ನೀತಿಯು ಪ್ರಸ್ತಾಪಿಸುತ್ತದೆ. ಅಂತರ-ರಾಜ್ಯ ಮಾರ್ಗಗಳಿಗೆ ಬಿಎಸ್-ವಿಐ ಕಂಪ್ಲೈಂಟ್ ಬಸ್‌ಗಳನ್ನು ಮಾತ್ರ ಅನುಮತಿಸಲಾಗುತ್ತದೆ. ಹೊಸ ನೀತಿಯಡಿಯಲ್ಲಿ ನಗರ ಬಳಕೆಗಾಗಿ ಯಾವುದೇ ಹೊಸ ಪಳೆಯುಳಿಕೆ ಇಂಧನ ಆಧಾರಿತ ಬಸ್‌ಗಳನ್ನು ಖರೀದಿಸಲಾಗುವುದಿಲ್ಲ.

    ಕರಡು ಇನ್ನೂ ಪರಿಶೀಲನೆಯಲ್ಲಿದ್ದು, ದೆಹಲಿ ಸಚಿವ ಸಂಪುಟದ ಮುಂದೆ ಇಡುವ ಮೊದಲು ವಿಶೇಷವಾಗಿ ದ್ವಿಚಕ್ರ ವಾಹನಗಳ ಪ್ರಸ್ತಾವನೆಗೆ ಸಂಬಂಧಿಸಿದಂತೆ ಕೆಲವು ಬದಲಾವಣೆಗಳಿಗೆ ಒಳಗಾಗಬಹುದು. ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮಾ.31 ರಂದು ಮುಕ್ತಾಯಗೊಂಡ ಪ್ರಸ್ತುತ ಇವಿ (Electric Vehicles) ನೀತಿಯ ಹೊಸ ಆವೃತ್ತಿಯನ್ನು ಅಂತಿಮಗೊಳಿಸಲು 15 ದಿನಗಳವರೆಗೆ ವಿಸ್ತರಿಸಲಾಗಿದೆ. ಪಳೆಯುಳಿಕೆ ಇಂಧನ ಚಾಲಿತ ವಾಹನಗಳನ್ನು ಎಲ್ಲಾ ವಿಭಾಗಗಳಲ್ಲಿ ಆಕ್ರಮಣಕಾರಿಯಾಗಿ ಬದಲಾಯಿಸುವ ಮೂಲಕ ದೆಹಲಿಯ ವಾಯುಮಾಲಿನ್ಯವನ್ನು ತೀವ್ರವಾಗಿ ಕಡಿಮೆ ಮಾಡುವುದು ಈ ನೀತಿಯ ಗುರಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: ಭಾರತೀಯ ಷೇರುಪೇಟೆಯಲ್ಲಿ ಚೇತರಿಕೆ – ಜಾಗತಿಕ ಮಾರುಕಟ್ಟೆಯಲ್ಲೂ ಕಡಿಮೆಯಾದ ಒತ್ತಡ

  • ಭಾರತೀಯ ಆಟೋ ಕ್ಷೇತ್ರಕ್ಕೆ ಹಸಿರು ಬಲ – ಕೇಂದ್ರದ ಒತ್ತಾಸೆಯಿಂದ ಇವಿ ವಾಹನ ಮಾರಾಟ ಹೆಚ್ಚಳ: ಹೆಚ್‌ಡಿಕೆ

    ಭಾರತೀಯ ಆಟೋ ಕ್ಷೇತ್ರಕ್ಕೆ ಹಸಿರು ಬಲ – ಕೇಂದ್ರದ ಒತ್ತಾಸೆಯಿಂದ ಇವಿ ವಾಹನ ಮಾರಾಟ ಹೆಚ್ಚಳ: ಹೆಚ್‌ಡಿಕೆ

    ನವದೆಹಲಿ: ಭಾರತೀಯ ಆಟೋ ಮೊಬೈಲ್ (Indian Automobile) ಕ್ಷೇತ್ರವು ಪರಿಸರ ಸ್ನೇಹಿ ಹೆಜ್ಜೆಗಳ ಮೂಲಕ ಸುರಕ್ಷಿತ, ದಕ್ಷತೆ ಹಾಗೂ ಕ್ಷಮತೆಯ ಭವಿಷ್ಯಕ್ಕೆ ನಾಂದಿ ಹಾಡಿದ್ದು, ಮುಂಬರುವ ದಿನಗಳಲ್ಲಿ ದೇಶೀಯ ವಾಹನ ಕ್ಷೇತ್ರ ಅದ್ಭುತಗಳಿಗೆ ಸಾಕ್ಷಿಯಾಗಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಹೇಳಿದರು.

    ನವದೆಹಲಿಯಲ್ಲಿ ಶನಿವಾರ ಭಾರತೀಯ ಆಟೋಮೊಬೈಲ್ ಡೀಲರ್ಸ್ ಫೆಡರೇಶನ್ (Federation of Automobile Dealers Associations-FADA) 13ನೇ ಆಟೋ ಶೃಂಗಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಇದನ್ನೂ ಓದಿ:  BBK 11: ಕಿಚ್ಚನ ಕೊನೆಯ ಪಂಚಾಯ್ತಿಯಲ್ಲಿ ಡಬಲ್ ಎಲಿಮಿನೇಷನ್‌ಗೆ ಬಲಿಯಾಗೋದು ಯಾರು?

    ದೇಶದಲ್ಲಿ ಹಸಿರು, ಸುರಕ್ಷಿತ ಮತ್ತು ಹೆಚ್ಚು ಪರಿಣಾಮಕಾರಿ ಭವಿಷ್ಯವನ್ನು ರೂಪಿಸುವಲ್ಲಿ ಭಾರತದ ವಾಹನ ಕ್ಷೇತ್ರದ ಪರಿವರ್ತಕ ಪಾತ್ರ ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸದ್ಯದ ಅಗತ್ಯತೆಗಳನ್ನು ಪೂರೈಸಿಕೊಳ್ಳುತ್ತಾ ನಾಳೆಯ ಚಲನಶೀಲತೆಯನ್ನು ಬಲವಾಗಿ ರೂಪಿಸುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಭಾರತೀಯ ವಾಹನ ಕ್ಷೇತ್ರ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದರು.

    ಆಟೋ ಕ್ಷೇತ್ರವು ಅತ್ಯುತ್ತಮ ಬೆಳವಣಿಗೆ ದರವನ್ನು ದಾಖಲಿಸಿದೆ. 2024ರಲ್ಲಿ ಭಾರತವು 26.1 ದಶಲಕ್ಷ ವಾಹನಗಳನ್ನು ಚಿಲ್ಲರೆ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದೆ. ವರ್ಷದಿಂದ ವರ್ಷಕ್ಕೆ ಸರಾಸರಿ ಶೇ.9ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ ಎಂದು ಉಲ್ಲೇಖಿಸಿದರು. ಇದನ್ನೂ ಓದಿ: Champions Trophy 2025 | ಟೀಂ ಇಂಡಿಯಾ ಪ್ರಕಟ – ರೋಹಿತ್‌ ಸಾರಥಿ, 15 ತಿಂಗಳ ಬಳಿಕ ಶಮಿ ಕಂಬ್ಯಾಕ್‌

    ಜಾಗತಿಕ ಮಟ್ಟದಲ್ಲಿ ನಿರಂತರ ಅನಿಶ್ಚಿತತೆಯ ಹೊರತಾಗಿಯೂ ಭಾರತೀಯ ವಾಹನೋದ್ಯಮವು ಸುಸ್ಥಿರವಾಗಿ ಅಭಿವೃದ್ಧಿ ಹೊಂದುತ್ತಿದೆ. ಸಾಂಪ್ರದಾಯಿಕ ಮತ್ತು ಎಲೆಕ್ಟ್ರಿಕ್ ವಾಹನ ಎರಡರಲ್ಲೂ ಗಮನಾರ್ಹ ಮೈಲಿಗಲ್ಲುಗಳನ್ನು ಸಾಧಿಸುತ್ತಿದೆ. ಇದು ಅತ್ಯಂತ ಹರ್ಷದಾಯಕ ಸಂಗತಿ ಎಂದು ಅವರು ಹೇಳಿದರು. ಇದನ್ನೂ ಓದಿ: ಸತತ ಸೋಲಿನ ಬಳಿಕ ಬಿಸಿ ಮುಟ್ಟಿಸಿದ ಬಿಸಿಸಿಐ – ಟೀಂ ಇಂಡಿಯಾ ಆಟಗಾರರಿಗೆ ಮತ್ತೊಂದು ಟಫ್‌ ರೂಲ್ಸ್‌

    ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ದಾಖಲೆ:
    ದೇಶದಲ್ಲಿ ವಾಯುಮಾಲಿನ್ಯ ಶೂನ್ಯ ಮಟ್ಟಕ್ಕೆ ಇಳಿಸುವ ಎಲೆಕ್ಟ್ರಿಕ್ ವಾಹನಗಳ ಮಾರಾಟ ದೊಡ್ಡ ಪ್ರಮಾಣದಲ್ಲಿ ಆಗುತ್ತಿದೆ. 2023ರಲ್ಲಿ 10,22,994 ಎಲೆಕ್ಟ್ರಿಕ್ ವಾಹನಗಳು ಮಾರಾಟವಾಗಿದ್ದವು. 2024ರಲ್ಲಿ 14,08,245 ವಾಹನಗಳು ಮಾರಾಟ ಆಗಿದ್ದು, 5.59% ಹೆಚ್ಚಳ ಆಗಿದೆ. ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ಹಾಗೂ ಪರಿಸರ ಸ್ನೇಹಿಯಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ಪರಿಣಾಮಕಾರಿ ಕ್ರಮಗಳಿಗೆ ಈ ಸಾಧನೆ ಸಾಕ್ಷಿಯಾಗಿದೆ ಎಂದು ಸಚಿವರು ಹೇಳಿದರು.

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ದೊಡ್ಡ ಮಟ್ಟದ ಉತ್ತೇಜನ ನೀಡುತ್ತಿದೆ. ಉತ್ಪಾದನಾ ಸಂಪರ್ಕ ಉತ್ತೇಜನ (ಪಿಎಲ್‌ಐ) ಮತ್ತು ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ವಾಹನಗಳ ವೇಗದ ಅಳವಡಿಕೆ ಮತ್ತು ತಯಾರಿಕೆ (ಫೇಮ್-II) ಯೋಜನೆಯಂತಹ ಪ್ರಮುಖ ನೀತಿಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಪಿಎಲ್‌ಐ ಯೋಜನೆಯಡಿ 25,938 ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, ಸೆಪ್ಟೆಂಬರ್ 2024ರ ವೇಳೆಗೆ 20,715 ಕೋಟಿ ರೂ. ಹೂಡಿಕೆ ಮತ್ತು 10,472 ಕೋಟಿ ರೂ.ನಷ್ಟು ಹೆಚ್ಚಿನ ಮಾರಾಟ ವಹಿವಾಟು ನಡೆದಿದೆ ಎಂದು ಅವರು ಹೇಳಿದರು.

    ಭಾರತೀಯ ಆಟೋಮೊಬೈಲ್ ಡೀಲರ್ಸ್ ಫೆಡರೇಶನ್ ಅಧ್ಯಕ್ಷ ಸಿ.ಎಸ್ ವಿಘ್ನೇಶ್ವರ್ ಸೇರಿದಂತೆ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದರು.

  • ಸ್ವಚ್ಛ ಭಾರತ್ ಮಿಷನ್ ಯೋಜನೆ – ಕೋಲಾರ ನಗರಸಭೆಯಲ್ಲಿ ಭಾರಿ ಗೋಲ್‌ಮಾಲ್!

    ಸ್ವಚ್ಛ ಭಾರತ್ ಮಿಷನ್ ಯೋಜನೆ – ಕೋಲಾರ ನಗರಸಭೆಯಲ್ಲಿ ಭಾರಿ ಗೋಲ್‌ಮಾಲ್!

    ಕೋಲಾರ: ಸ್ವಚ್ಛ ಭಾರತ್ ಮಿಷನ್ (Swachh Bharat Mission) ಯೋಜನೆಯಡಿ ನಗರದ ತ್ಯಾಜ್ಯ ನಿರ್ವಹಣೆಗೆ 8 ಎಲೆಕ್ಟ್ರಿಕ್‌ ವಾಹನಗಳನ್ನು (Electric Vehicle) ಖರೀದಿಸಿದ್ದು, ಇದರಲ್ಲಿ ಭಾರಿ ಅವ್ಯವಹಾರ ನಡೆದಿರುವುದು ಸಾರ್ವಜನಿಕರ ಹುಬ್ಬೇರಿಸುವಂತೆ ಮಾಡಿದೆ. 16 ಸಾವಿರದ ರೂ ಚಾರ್ಜಿಂಗ್ ಪಿನ್‌ಗೆ 5 ಲಕ್ಷ ರೂ. ಬಿಲ್ ತೋರಿಸಿರುವ ಭಾರೀ ಗೋಲ್‌ಮಾಲ್ ನಡೆದಿದೆ.

    ನಾಲ್ಕೈದು ತಿಂಗಳು ಕಳೆದರೂ ನಿಂತಲ್ಲೇ ನಿಂತಿರುವ ಕಸ ಎತ್ತುವ ವಾಹನಗಳು, ಮತ್ತೊಂದೆಡೆ ಚಾರ್ಜಿಂಗ್ ಪಾಯಿಂಟ್‌ನಲ್ಲಿ (Charging Point) ಆಗಿರುವ ಗೋಲ್ ಮಾಲ್ ಕುರಿತು ನಗರಸಭೆಯಲ್ಲಿ ಸದಸ್ಯರು ಆರೋಪಿಸಿದ್ದಾರೆ. ಘನ ತ್ಯಾಜ್ಯ ವಿಲೇವಾರಿಗಾಗಿ ಸುಮಾರು 8 ಎಲೆಕ್ಟ್ರಿಕ್‌ ವಾಹನಗಳನ್ನು ಖರೀದಿಸಿದ್ದಾರೆ. ಇದರ ಜೊತೆಗೆ ವಾಹನಗಳ ಚಾರ್ಜಿಂಗ್‌ಗಾಗಿ ಖರೀದಿ ಮಾಡಿರುವ ಚಾರ್ಜಿಂಗ್ ಪಾಯಿಂಟ್‌ನ ಮೊತ್ತದ ಬಗ್ಗೆ ಅವ್ಯವಹಾರದ ಶಂಕೆಯನ್ನು ವ್ಯಕ್ತಪಡಿಸಿದ್ದು, ಜೊತೆಗೆ ತನಿಖೆಗೆ ಒತ್ತಾಯಿಸಿದ್ದಾರೆ.ಇದನ್ನೂ ಓದಿ: Bilkis Bano case | ಕಟು ಟೀಕೆಯನ್ನು ಆದೇಶದಿಂದ ತೆಗೆಯುವಂತೆ ಗುಜರಾತ್ ಮಾಡಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

    ನಗರಸಭೆ ಅಧಿಕಾರಿಗಳು 2023ರ ಡಿಸೆಂಬರ್‌ನಲ್ಲಿ ಸ್ವಚ್ಛ ಭಾರತ್ ಮಿಷನ್ 1 ಯೋಜನೆಯಡಿ, ಘನತ್ಯಾಜ್ಯ ವಸ್ತು ನಿರ್ವಹಣೆ ಸಂಬಂಧ ಎಲೆಕ್ಟ್ರಿಕ್‌ ವಾಹನಗಳ ಚಾರ್ಜಿಂಗ್ ಪಾಯಿಂಟ್ ಖರೀದಿಗಾಗಿ ಜಿಲ್ಲಾಧಿಕಾರಿಗಳಿಗೆ ಕ್ರಿಯಾಯೋಜನೆಗೆ ಆಡಳಿತಾತ್ಮಕ ಅನುಮೋದನೆ ಸಲಿಸಿದ್ದರು. ಅದರಲ್ಲಿ ಎರಡು ಉಪಕರಣ ಖರೀದಿಗೆ ಬರೋಬ್ಬರಿ 8 ಲಕ್ಷ ರೂ. ಆಗಬಹುದೆಂದು ಅಂದಾಜು ಮೊತ್ತವನ್ನು ನಗರಸಭೆ ನಮೂದಿಸಿತ್ತು.

    ಜಿಲ್ಲಾಧಿಕಾರಿಯು ಕೆಲ ಷರತ್ತುಗಳೊಂದಿಗೆ ಜ.1ರಂದು ಕ್ರಿಯಾಯೋಜನೆಗೆ ಅನುಮೋದನೆಯನ್ನು ನೀಡಿದ್ದರು. ಎರಡು ಉಪಕರಣಗಳಿಗೆ ಬಿಲ್ 6.77 ಲಕ್ಷ ರೂ. ಹಾಗೂ ಜಿಎಸ್‌ಟಿ 1.22 ಲಕ್ಷ ಸೇರಿ ಒಟ್ಟು 8 ಲಕ್ಷ ರೂ.ಗಳಿಗೆ ಖರೀದಿ ಮಾಡಿದ್ದಾರೆ. ಆದರೆ ಇದೇ ಉಪಕರಣಕ್ಕೆ ಕಂಪನಿಯ ವೆಬ್‌ಸೈಟ್‌ನಲ್ಲಿರುವ ಮೌಲ್ಯ ಒಂದಕ್ಕೆ 16,500 ರೂ. ಆಗಿರುವುದರಿಂದ ಸದಸ್ಯರು ಇದರಲ್ಲಿ ದೊಡ್ಡಮಟ್ಟದ ಗೋಲ್ ಮಾಲ್ ನಡೆಸಿದ್ದಾರೆ ಎಂಬ ಆರೋಪ ಮಾಡಿದ್ದಾರೆ.

    ನಗರಸಭೆ ಖರೀದಿ ಮಾಡಿರುವ ಜಾರ್ಜಿಂಗ್ ಪಾಯಿಂಟ್ ಒಂದಕ್ಕೆ 3.38 ಲಕ್ಷ ರೂ.ನಂತೆ ಖರೀದಿಸಲಾಗಿದೆ. ಎರಡಕ್ಕೂ ಜಿಎಸ್‌ಟಿ ಸೇರಿ ಬರೋಬ್ಬರಿ 7.99 ಲಕ್ಷ ರೂ. ಬಿಲ್ ಆಗಿದೆ. ಖರೀದಿ ಮಾಡಿರುವ ಬೋಲ್ಟ್ ಅರ್ತ್ ಕಂಪನಿಯ ಈ ಜಾರ್ಜಿಂಗ್ ಪಾಯಿಂಟ್‌ನ ಮಾರುಕಟ್ಟೆ ಮೌಲ್ಯ ಒಂದಕ್ಕೆ ಕೇವಲ 16,500 ರೂ. ಇದೆ. ಬೋಲ್ಟ್ ಅರ್ತ್ ಕಂಪನಿಯ ವೆಬ್‌ಸೈಟ್ ಪರಿಶೀಲಿಸಿದಾಗಲೂ ಇದೇ ಮಾಹಿತಿ ಲಭ್ಯವಾಗಿದೆ.

    ಇದಕ್ಕೆ ಸಂಬಂಧಿಸಿದಂತೆ ಶಾಸಕ ಕೊತ್ತೂರು ಮಂಜುನಾಥ್, ಈ ಉಪಕರಣಗಳನ್ನು ನಗರಸಭೆ ಹೆಸರಿನಲ್ಲಿ ಬೆಂಗಳೂರಿನ ಇನ್‌ಫ್ಯಾಂಟ್ರಿ ರಸ್ತೆ ಬಳಿಯ ಅಲ್ಫಾ ಟೆಕ್ನಾಲಾಜಿಸ್‌ನಿಂದ ಜುಲೈ 19ರಂದು ಖರೀದಿಸಿರುವ ಬಗ್ಗೆ ಮಾಹಿತಿಯಿದ್ದು, ಜಾರ್ಜಿಂಗ್ ಪಾಯಿಂಟ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಇದು ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

    ಒಂದು ಚಾರ್ಜಿಂಗ್ ಪಾಯಿಂಟ್ ಉಪಕರಣವನ್ನು ಕೋಲಾರ ನಗರಸಭೆ ಕಚೇರಿಯ ಆವರಣದಲ್ಲಿ ಅಳವಡಿಸಲಾಗಿದೆ. ಮತ್ತೊಂದು ಉಪಕರಣವನ್ನು ಕೆಂದಟ್ಟಿಯ ಎಸ್‌ಟಿಪಿ ಘಟಕದಲ್ಲಿ ಅಳವಡಿಸಲಾಗಿದೆ. ಇನ್ನು ಜಾರ್ಜಿಂಗ್ ಪಾಯಿಂಟ್‌ನಲ್ಲಿ ಯಾವುದೇ ರೀತಿಯ ಗೋಲ್ ಮಾಲ್ ನಡೆದಿಲ್ಲ, ಥರ್ಢ್ ಪಾರ್ಟಿ ಪರಿಶೀಲನೆ ಸಹ ನಡೆಸಲಾಗಿದೆ. ಪ್ಯಾಕೇಜ್ ಸಿಸ್ಟಮ್‌ನಲ್ಲಿ ಖರೀದಿ ಮಾಡಲಾಗಿದ್ದು, ಇದರಲ್ಲಿ ಯಾವುದೇ ಲೋಪವಾಗಿಲ್ಲ. ಇನ್ನು ನೊಂದಣಿಯಾಗದೆ ನಿಂತಿರುವ ವಾಹನವನ್ನು ಕೂಡಲೇ ನೋಂದಣಿ ಮಾಡಿಸಿ ವಾಹನಗಳನ್ನು ನಗರದ ಸ್ವಚ್ಛತೆಗೆ ಕಳುಹಿಸುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

    ಒಟ್ಟಿನಲ್ಲಿ ಸ್ವಚ್ಛ ಭಾರತ್ ಮಿಷನ್‌ನಲ್ಲಿ ಖರೀದಿ ಮಾಡಿರುವ ಜಾರ್ಜಿಂಗ್ ಪಾಯಿಂಟ್ ಬಗ್ಗೆ ಹಾಗೂ ಗೋಲ್ ಮಾಲ್ ಕುರಿತು ನಗರ ಸಭೆ ಸದಸ್ಯರೇ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಪರಿಶೀಲನೆ ಮಾಡಿ ಸತ್ಯಾಸತ್ಯೆಯನ್ನು ಹೊರತರಬೇಕು ಎಂಬುದು ಜನರ ಆಶಯವಾಗಿದೆ.ಇದನ್ನೂ ಓದಿ: ರಾಜ್ಯದಲ್ಲಿ ಸಿಬಿಐ ಡೈರೆಕ್ಟ್ ಎಂಟ್ರಿಗೆ ಬ್ರೇಕ್ – ʻರಕ್ಷಣಾತ್ಮಕʼ ಆಟಕ್ಕಿಳಿದ ಸಿದ್ದರಾಮಯ್ಯ ಸರ್ಕಾರ!

  • ಎಲೆಕ್ಟ್ರಿಕ್ ವಾಹನಗಳು ಆರ್ಥಿಕತೆಯ ಮೇಲೆ ಹೇಗೆ ಪ್ರಭಾವ ಬೀರುತ್ತೆ?

    ಎಲೆಕ್ಟ್ರಿಕ್ ವಾಹನಗಳು ಆರ್ಥಿಕತೆಯ ಮೇಲೆ ಹೇಗೆ ಪ್ರಭಾವ ಬೀರುತ್ತೆ?

    ಸಾರಿಗೆ ಮತ್ತು ವಾಹನಗಳು ಆಧುನಿಕ ಜೀವನದ ಪ್ರಮುಖ ಅವಶ್ಯಕತೆಗಳಲ್ಲಿ ಒಂದಾಗಿದೆ. ವಾಹನ ಇಲ್ಲದ ಮನೆಗಳು ಕಾಣಸಿಗುವುದು ಬಲು ಅಪರೂಪವೇ ಸರಿ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಗಾಡಿಗಳು ಚಾಲ್ತಿಯಲ್ಲಿವೆ. ಅದರೊಂದಿಗೆ ಹೊಸದಾಗಿ ಎಲೆಕ್ಟ್ರಿಕ್ ಗಾಡಿಗಳು ಕೂಡಾ ಸೇರಿಕೊಂಡಿವೆ. ಪೆಟ್ರೋಲ್ ಮತ್ತು ಡಿಸೇಲ್‌ ಗಾಡಿಗಳು ಹೆಚ್ಚು ಮಾಲಿನ್ಯವನ್ನು ಉಂಟುಮಾಡುತ್ತದೆ. ಆದರೆ ಎಲೆಕ್ಟ್ರಿಕ್ ವಾಹನಗಳು (Electric Vehicles) ಇದಕ್ಕೆ ತದ್ವಿರುದ್ಧವಾಗಿದೆ. ಹಾಗಿದ್ರೆ ಇದರಿಂದಾಗುವ ಪ್ರಯೋಜನಗಳೇನು? ಇದರಲ್ಲಿ ಏನಾದರೂ ದುಷ್ಪರಿಣಾಮಗಳಿವೆಯಾ? ಇದು ಆರ್ಥಿಕತೆಯಲ್ಲಿ ಹೇಗೆ ಸಹಾಯ ಮಾಡುತ್ತದೆ ಎಂಬುದರ ಬಗ್ಗೆ ಕಿರು ವಿವರಗಳು ಇಲ್ಲಿವೆ.

    ಕಡಿಮೆ ಚಾಲನೆಯ ವೆಚ್ಚಗಳು:
    ಇವಿ ವಾಹನಗಳ ಚಾಲನೆಯ ವೆಚ್ಚ ಪೆಟ್ರೋಲ್ ಮತ್ತು ಡೀಸೆಲ್‌ ವಾಹನಕ್ಕಿಂತ ಕಡಿಮೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬದಲು ಇವಿ ವಾಹನಗಳು ವಿದ್ಯುಚ್ಛಕ್ತಿಯನ್ನು ಬಳಸುತ್ತದೆ. ಇವಿ ವಾಹನಗಳು ಬ್ಯಾಟರಿಗಳನ್ನು ಒಳಗೊಂಡಿದ್ದು, ಇದನ್ನು ವಿದ್ಯುತ್‌ ಮೂಲಕ ಚಾರ್ಜ್ ಮಾಡಿಕೊಳ್ಳಬಹುದಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಿಂತ ಕಡಿಮೆ ದರದಲ್ಲಿ ಇವಿ ವಾಹನಗಳನ್ನು ಚಾರ್ಜ್ ಮಾಡಿಕೊಳ್ಳಬಹುದು.

    ತೆರಿಗೆ ಮತ್ತು ಆರ್ಥಿಕ ಪ್ರಯೋಜನಗಳು:
    ಇವಿ (EV) ವಾಹನಗಳನ್ನು ಖರೀದಿಸಲು ನೋಂದಣಿ ಶುಲ್ಕ ಮತ್ತು ರಸ್ತೆ ತೆರಿಗೆ ಪೆಟ್ರೋಲ್ ಅಥವಾ ಡೀಸೆಲ್‌
    ವಾಹನಗಳಿಗಿಂತ ಕಡಿಮೆಯಾಗಿದೆ. ನೀವು ಯಾವ ರಾಜ್ಯದಲ್ಲಿದ್ದೀರಾ ಎಂಬ ಆಧಾರದ ಮೇಲೆ ಸರ್ಕಾರವು ಅನೇಕ ನೀತಿ ನಿಯಮಗಳನ್ನು ರಚಿಸುತ್ತದೆ. ಕೆಲವು ಪ್ರೋತ್ಸಾಹದ ಕುರಿತು ಕೆಲವು ಅಂಶಗಳನ್ನು ಈ ಕೆಳಗೆ ನೀಡಲಾಗಿದೆ.

    1)ಖರೀದಿ ಪ್ರೋತ್ಸಾಹ:
    ಇವಿ ವಾಹನ ವೆಚ್ಚದಲ್ಲಿ ಬಳಕೆದಾದರಿಗೆ ನೇರ ರಿಯಾಯಿತಿಯನ್ನು ನೀಡಲಾಗುತ್ತದೆ.
    2)ಕೂಪನ್:
    ಮೊತ್ತವನ್ನು ನಂತರ ಮರುಪಾವತಿ ಮಾಡುವ ಹಣಕಾಸಿನ ಪ್ರೋತ್ಸಾಹವನ್ನು ನೀಡಲಾಗುತ್ತದೆ.
    3)ಬಡ್ಡಿ ರಿಯಾಯಿತಿ:
    ಸಾಲವನ್ನು ಪಡೆಯಬೇಕಾದರೆ ಬಡ್ಡಿ ದರದಲ್ಲಿ ರಿಯಾಯಿತಿ ನೀಡಲಾಗುತ್ತದೆ.
    4)ರಸ್ತೆ ತೆರಿಗೆ ವಿನಾಯಿತಿ:
    ವಾಹನ ಖರೀದಿಯ ಸಮಯದಲ್ಲಿ ರಸ್ತೆ ತೆರಿಗೆಯನ್ನು ಮನ್ನಾ ಮಾಡಲಾಗುತ್ತದೆ.
    5)ನೋಂದಣಿ ಶುಲ್ಕ ವಿನಾಯಿತಿ:
    ಹೊಸ ಇವಿ ವಾಹನ ಖರೀದಿ ವೇಳೆ ಅನ್ವಯವಾಗುವ ಒಂದು ಬಾರಿಯ ನೋಂದಣಿ ಶುಲ್ಕವನ್ನು ಮನ್ನಾ ಮಾಡಲಾಗುತ್ತದೆ.
    6) ಇತರೆ:
    ಇವಿ ವಾಹನಗಳನ್ನು ಖರೀದಿಸುವ ಸಮಯದಲ್ಲಿ ಬಡ್ಡಿ ರಹಿತ ಸಾಲಗಳು, ಟಾಪ್‌ಅಪ್ ಸಬ್ಸಿಡಿಗಳು ಮುಂತಾದವುಗಳ್ನು ಸಹಿತ ಪಡೆದುಕೊಳ್ಳಹುದು.

    ಪೆಟ್ರೋಲ್ ಮತ್ತು ಡೀಸೆಲ್ ದುಷ್ಪರಿಣಾಮಗಳು:
    ಪಳೆಯುಳಿಕೆ ಇಂಧನಗಳು ಇತ್ತೀಚಿಗೆ ಸರಿಯಾಗಿ ಲಭ್ಯವಾಗದಿರುವುದು ಒಂದೆಡೆಯಾದರೆ ಈ ಇಂಧನಗಳು ವಾಹನಗಳಿಂದ ವಿಷಕಾರಿ ಹೊಗೆಯನ್ನು ಹೊರಸೂಸುವುದರಿಂದ ಸಾರ್ವಜನಿಕರ ಮೇಲೆ ದೀರ್ಘಕಾಲೀನ ಪರಿಣಾಮಗಳು ಬೀರುತ್ತದೆ. ಇವಿ ವಾಹನಗಳಲ್ಲಿ ಈ ರೀತಿಯಾದ ವಿಷಕಾರಿ ಹೊಗೆ ಹೊರಸೂಸದಿರುವುದರಿಂದ ಪರಿಸರ ಸ್ನೇಹಿಯಾಗಿದ್ದು, ಜನರ ಆರೋಗ್ಯದ ದೃಷ್ಟಿಯಿಂದಲೂ ಉತ್ತಮವಾಗಿದೆ ಎಂದು ಹೇಳಬಹುದು. ಪೆಟ್ರೋಲ್ ಮತ್ತು ಡೀಸೆಲ್‌ ವಾಹನಗಳು ಇವಿ ವಾಹನಗಳಿಗಿಂತ ಸುಮಾರು 3ಪಟ್ಟು ಹೆಚ್ಚು ಇಂಗಾಲದ ಡೈಆಕ್ಸೈಡ್ ಅನ್ನು ಹೊರಸೂಸುತ್ತದೆ.

    ಇವಿ ವಾಹನಗಳ ಚಾಲನೆ ಸುಲಭ ಮತ್ತು ಸೌಂಡ್ ರಹಿತವಾಗಿರುತ್ತದೆ:
    ಇವಿ ವಾಹನಗಳ ಚಾಲನೆ ಅತ್ಯಂತ ಸುಲಭವಾಗಿದ್ದು, ಈ ವಾಹನಗಳು ಗೇರ್‌ಗಳನ್ನು ಹೊಂದಿರುವುದಿಲ್ಲ. ಆಕ್ಸಿಲರೇಟರ್, ಬ್ರೇಕ್ ಮತ್ತು ಸ್ಟೇರಿಂಗ್ ಅನ್ನು ಹೊಂದಿರುತ್ತದೆ. ಈ ವಾಹನಗಳನ್ನು ನಾವು ಬಯಸಿದಾಗ ಚಾರ್ಜ್ ಮಾಡಿಕೊಳ್ಳಬಹುದಾಗಿದೆ. ಅಲ್ಲದೇ ಇದನ್ನು ಸಾರ್ವಜನಿಕ ಸ್ಥಳಗಳಲ್ಲಿಯೂ ಚಾರ್ಜ್ ಮಾಡಿಕೊಳ್ಳಲು ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಈ ವಾಹನಗಳು ಯಾವುದೇ ಶಬ್ಧವನ್ನು ಹೊರಸೂಸುವುದಿಲ್ಲ. ಇದು ಶಬ್ದ ಮಾಲಿನ್ಯವನ್ನು ಕಡಿಮೆ ಮಾಡುತ್ತದೆ.

    ಇವಿ ವಾಹನಗಳ ಹೆಚ್ಚಳದಿಂದಾಗಿ ಲಿಥಿಯಂ ಬೇಡಿಕೆ ಹೆಚ್ಚಾಗುತ್ತದೆ. ದೇಶಗಳು ತಮ್ಮ ಗಮನವನ್ನು ಕಚ್ಚಾ ತೈಲದಿಂದ ಲಿಥಿಯಂ ಗಣಿಗಾರಿಕೆಗೆ ಬದಲಾಯಿಸುತ್ತವೆ. ಇದರಿಂದಾಗಿ ತೈಲ ರಫ್ತು ಮತ್ತು ಆಮದು ಮಾಡುವ ದೇಶಗಳ ಮೇಲೆ ಭಾರೀ ಪರಿಣಾಮ ಬೀರುತ್ತದೆ.

    ತೈಲ ಉತ್ಪಾದನೆ ಮಾಡುವ ದೇಶಗಳ ಮೇಲೆ ಏನು ಪರಿಣಾಮ?
    ತೈಲ ರಫ್ತು ಮಾಡುವ ದೇಶಗಳಾದ ಯುಎಇ, ಸೌದಿ ಅರೇಬಿಯಾ, ಕುವೈತ್ ಮುಂತಾದ ದೇಶಗಳಿಗೆ ಇವಿ ವಾಹನ ಖರೀದಿಯಿಂದ ನಕರಾತ್ಮಕ ಪರಿಣಾಮ ಬೀರುತ್ತದೆ. ಏಕೆಂದರೆ ಆ ದೇಶಗಳ ಆರ್ಥಿಕತೆಯು ತೈಲ ರಫ್ತಿನ ಮೇಲೆ ಹೆಚ್ಚು ಅವಲಂಬಿತವಾಗಿರುತ್ತವೆ. ಸೌದಿ ಅರೇಬಿಯಾ ವಿಶ್ವದ 15%ನಷ್ಟು ತೈಲವನ್ನು ಒಳಗೊಂಡಿದೆ. ಇವಿ ವಾಹನಗಳ ಹೆಚ್ಚು ಬಳಕೆಯಿಂದ ತೈಲ ಬೇಡಿಕೆಗಳು ಕಡಿಮೆಯಾಗುತ್ತದೆ. ಹೀಗಾಗಿ ಯುಎಇ ತೈಲ ರಫ್ತಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿದ್ದು, ಜಿಡಿಪಿಗೆ ಕೊಡುಗೆ ನೀಡುವ ಸಲುವಾಗಿ ಇತರ ಕೈಗಾರಿಕೆಗಳ ಮೇಲೆ ಕೇಂದ್ರಿಕರಿಸುತ್ತಿದೆ. ತೈಲ ಉದ್ಯಮವನ್ನು ಹೊರತುಪಡಿಸಿ ಯುಎಇ ಪ್ರವಾಸೋದ್ಯಮಕ್ಕೆ ಹೆಚ್ಚಿನ ಮಹತ್ವ ನೀಡಿದೆ.

    ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲೆ ಪರಿಣಾಮ ಏನು?
    ಪ್ರಸ್ತುತ ಹೆಚ್ಚಿನ ದೇಶಗಳು ತೈಲಕ್ಕೆ ಅವಲಂಬಿತವಾಗಿದ್ದು, ತೈಲವನ್ನು ಆಮದು ಮಾಡಿಕೊಳ್ಳುತ್ತಿವೆ. ಇವಿ ವಾಹನಗಳು ಹೆಚ್ಚು ಬಳಕೆಯಾದರೆ ತೈಲ ಆಮದು ಮಾಡಿಕೊಳ್ಳುವ ದೇಶಗಳು ತಮ್ಮ ಹಣಕಾಸಿನ ಕೊರತೆಯನ್ನು ಭರಿಸಬಹುದು. ಅಲ್ಲದೇ ಜಿಡಿಪಿಯನ್ನು ಹೆಚ್ಚಿಸಬಹುದು. ಲಿಥಿಯಂ ಆಮದು ಹೆಚ್ಚಾಗಿದ್ದರೂ, ಪೆಟ್ರೋಲ್ ಆಮದಿಗಿಂತ ಇದು ಉತ್ತಮವಾಗಿದೆ. ಇದರ ಜೊತೆಗೆ ಲಿಥಿಯಂ ಗಣಿಗಾರಿಕೆಗೆ ಹೆಚ್ಚಿನ ಆದ್ಯತೆ ನೀಡಿದರೆ ಭವಿಷ್ಯದಲ್ಲಿ ಲಿಥಿಯಂ ಆಮದು ಮಾಡಿಕೊಳ್ಳುವುದನ್ನು ಕಡಿಮೆ ಮಾಡಬಹುದು.

    ಉದ್ಯೋಗದ ಮೇಲೆ ಪರಿಣಾಮ ಏನು?
    ಇಂಧನ ಉತ್ಪಾದನೆಗಿಂತ ಎಲೆಕ್ಟ್ರಿಕ್ ವಾಹನ ಉತ್ಪಾದನೆಗೆ ವಿಭಿನ್ನ ಕೌಶಲ್ಯಗಳ ಅಗತ್ಯವಿರುವುದರಿಂದ ಕಾರ್ಮಿಕರ ಮಾರ್ಕೆಟ್‌ನಲ್ಲಿ ಹಲವಾರು ಬದಲಾವಣೆಗಳಾಗುತ್ತವೆ. ಸಾಮಾನ್ಯವಾಗಿ ಎಲೆಕ್ಟ್ರಿಕ್ ವಾಹನಗಳನ್ನು ತಯಾರಿಸಲು ಕಡಿಮೆ ಕಾರ್ಮಿಕರು ಬೇಕಾಗಿರುವುದರಿಂದ ಇದು ಉದ್ಯೋಗದ ಮೇಲೆ ನಕರಾತ್ಮಕ ಪರಿಣಾಮ ಬೀರುತ್ತದೆ.

    ಕಾರ್ಪೊರೇಟ್ ವಲಯ ಮತ್ತು ಹಣಕಾಸು ಮಾರುಕಟ್ಟೆಗಳ ಮೇಲೆ ಪರಿಣಾಮ:
    ಇವಿ ವಾಹನ ಬಳಕೆಯಿಂದಾಗಿ ತೈಲ ಮತ್ತು ಅನಿಲ ಪರಿಶೋಧನೆ, ತೈಲ ವ್ಯಾಪಾರ ಮತ್ತು ವಾಹನ ಬಿಡಿಭಾಗಗಳ ಲಾಭವು ಗಮನಾರ್ಹವಾಗಿ ಕಡಿಮೆಯಾಗುತ್ತಾ ಹೋಗುತ್ತದೆ. ಇದರಿಂದ ಕಂಪನಿಯ ಷೇರು ಬೆಲೆ ಕೂಡ ಕುಸಿಯುತ್ತದೆ. ಹೀಗಾಗಿ ಇದು ಹೂಡಿಕೆದಾರರನ್ನು ಆಕರ್ಷಿಸುವುದಿಲ್ಲ. ಮತ್ತೊಂದೆಡೆ ಎಲೆಕ್ಟ್ರಿಕ್‌ ವಾಹನ ಸಂಬಂಧಿತ ಕಂಪನಿಗಳು ಅದರಲ್ಲೂ ಬ್ಯಾಟರಿ ಕಂಪನಿಗಳು ಲಾಭ ಮತ್ತು ಷೇರು ಬೆಲೆಗಳಲ್ಲಿ ಹೆಚ್ಚಳವನ್ನು ಕಾಣುತ್ತದೆ. ಇಷ್ಟು ಮಾತ್ರವಲ್ಲದೇ ಚಾರ್ಜಿಂಗ್ ಸ್ಟೇಷನ್ ಪ್ರೊವೈಡರ್ ಕಂಪನಿಗಳು ಕೂಡಾ ಗಣನೀಯವಾಗಿ ಬೇಡಿಕೆಯಲ್ಲಿ ಹೆಚ್ಚಳವನ್ನು ಕಾಣುತ್ತದೆ.

    ವಿದ್ಯುತ್ ಬೇಡಿಕೆ:
    ಇವಿ ವಾಹನಗಳನ್ನು ಚಾರ್ಜ್ ಮಾಡುವ ಸಲುವಾಗಿ ಹೆಚ್ಚಿನ ವಿದ್ಯುತ್ ಬಳಕೆಯಾಗುತ್ತದೆ. ಇದರಿಂದ ವಿದ್ಯುತ್ ಬೇಡಿಕೆ ಹೆಚ್ಚಾಗುತ್ತದೆ. ವಿದ್ಯುತ್ ಪೂರೈಕೆಯು ಸೌರ, ಗಾಳಿ ಮತ್ತು ಜೈವಿಕ ಅನಿಲಗಳಿಂದ ಪೂರೈಸಿದರೆ ಉತ್ತಮ. ಯಾಕೆಂದರೆ ಹೆಚ್ಚುವರಿ ಪೂರೈಕೆಯನ್ನು ಈಡೇರಿಸಲು ಕಲ್ಲಿದ್ದಲ್ಲನ್ನು ಬಳಸಿದರೆ ಕಾರ್ಬನ್ ಅನ್ನು ಕಡಿಮೆ ಮಾಡುವ ಗುರಿಯನ್ನು ತಲುಪಲು ಸಾಧ್ಯವಿಲ್ಲ.

    ಭಾರತ ಸರ್ಕಾರವು 2030ರ ವೇಳೆಗೆ ದೇಶದ ವಾಹನ ಸಮೂಹದ 30%ನಷ್ಟು ವಿದ್ಯುದ್ದೀಕರಣವನ್ನು ಸಾಧಿಸುವ ಗುರಿಯನ್ನು ಹೊಂದಿದೆ ಮತ್ತು ಇವಿ ಉದ್ಯಮದ ಬೆಳವಣಿಗೆಯನ್ನು ಬೆಂಬಲಿಸುವ ಸಲುವಾಗಿ ಹಲವಾರು ಪ್ರೋತ್ಸಾಹ ಮತ್ತು ನೀತಿಗಳನ್ನು ಪರಿಚಯಿಸಿದೆ. ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ, ಹೈಡ್ರೋಜನ್ ಇಂಧನದ ಅಳವಡಿಕೆ ಮತ್ತು ಬದಲಾಗುತ್ತಿರುವ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಸಲುವಾಗಿ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಉದ್ಯಮಕ್ಕೆ ಪ್ರಮುಖ ಉತ್ತೇಜನ ನೀಡಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ 2070ರ ವೇಳೆಗೆ ಶಕ್ತಿ ಪರಿವರ್ತನೆ ಮತ್ತು ನಿವ್ವಳ ಶೂನ್ಯ ಗುರಿಗಳನ್ನು ಹೊಂದಿರುವ ನಿರ್ಣಾಯಕ ಬಂಡವಾಳ ಹೂಡಿಕೆಗಾಗಿ 35,000 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದ್ದಾರೆ. ಇದನ್ನೂ ಓದಿ: ವಿದೇಶಕ್ಕೆ ಭಾರತದ ಬ್ರಹ್ಮೋಸ್‌ – ಶಸ್ತ್ರಾಸ್ತ ರಫ್ತು ಎಷ್ಟಿತ್ತು? ಎಷ್ಟು ಏರಿಕೆಯಾಗಿದೆ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳುನಾಡಿನಲ್ಲಿ ಓಲಾದಿಂದ 7,614  ಕೋಟಿ  ಹೂಡಿಕೆ- ಸಿಎಂ ಸ್ಟಾಲಿನ್‌ ಸಹಿ

    ತಮಿಳುನಾಡಿನಲ್ಲಿ ಓಲಾದಿಂದ 7,614 ಕೋಟಿ ಹೂಡಿಕೆ- ಸಿಎಂ ಸ್ಟಾಲಿನ್‌ ಸಹಿ

    ಚೆನ್ನೈ: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ (Electric Vehicle) ಉತ್ಪಾದನೆ ಹೆಚ್ಚಿಸುವ ದೃಷ್ಟಿಯಿಂದ ತಮಿಳುನಾಡು (Tamil Nadu) ಸರ್ಕಾರ ಓಲಾ ಎಲೆಕ್ಟ್ರಿಕ್ ಮೊಬಿಲಿಟಿ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದು, 7,614 ಕೋಟಿ ರೂ. ಹೂಡಿಕೆಯ 20 GW ಬ್ಯಾಟರಿ ಸಾಮರ್ಥ್ಯದ ಉತ್ಪಾದನಾ ಘಟಕ ನಿರ್ಮಾಣಕ್ಕೆ ಸಿಎಂ ಎಂ.ಕೆ ಸ್ಟಾಲಿನ್ (MK Stalin) ಸಹಿ ಹಾಕಿದರು.

    ತಮಿಳುನಾಡು ಸರ್ಕಾರವು ಫೆ. 14ರಂದು ತನ್ನ ಎಲೆಕ್ಟ್ರಿಕ್ ವೆಹಿಕಲ್ (ಇವಿ) ನೀತಿ 2023 ಅನ್ನು ಅನಾವರಣಗೊಳಿಸಿತು. ಇವಿ ಉದ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ 50,000 ಕೋಟಿ ರೂ.ಗಳಷ್ಟು ಹೂಡಿಕೆಗಳನ್ನು ಗಳಿಸುವ ಮತ್ತು 1.50 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಸರ್ಕಾರ ಹೊಂದಿದೆ.

    ಹೊಸ ಒಪ್ಪಂದದಿಂದ 3,111 ಜನರಿಗೆ ಹೊಸ ಉದ್ಯೋಗ ಸಿಗಲಿದೆ ಎಂದು ನಿರೀಕ್ಷೆ ಮಾಡಿದ್ದು, ರಾಜ್ಯದಲ್ಲಿ 4 ಚಕ್ರದ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಗಣನೀಯವಾಗಿ ಹೆಚ್ಚಲಿದೆ. ಇದರಿಂದ ಮಾಲಿನ್ಯದ ಪ್ರಮಾಣ ತಗುಲಿದ್ದು, ಪೆಟ್ರೋಲ್, ಡಿಸೇಲ್ ಮೇಲಿನ ಅವಲಂಬನೆಯೂ ಕಡಿಮೆಯಾಗಲಿದೆ. ಇದನ್ನೂ ಓದಿ: ಕೊನೆ ಉಸಿರೆಳೆಯುತ್ತಿರುವ ಬಿಜೆಪಿ ಸರ್ಕಾರಕ್ಕೆ ಟಿಪ್ಪು, ಭಯೋತ್ಪಾದನೆ, ಎಸ್‍ಡಿಪಿಐ ಆಕ್ಸಿಜನ್ ಆಗ್ತಿದೆ: ಯುಟಿ ಖಾದರ್

    ಶೆ. 100ರಷ್ಟು ರಸ್ತೆ ತೆರಿಗೆ ವಿನಾಯಿತಿಯೊಂದಿಗೆ ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಅಳವಡಿಕೆಗೆ ಸರ್ಕಾರ ಉತ್ತೇಜನ ನೀಡುತ್ತಿದ್ದು, ಕಳೆದ 5 ವರ್ಷಗಳಲ್ಲಿ ರಾಜ್ಯವು ಏಥರ್ ಎಲೆಕ್ಟ್ರಿಕ್ ಮತ್ತು ಓಲಾ ಎಲೆಕ್ಟ್ರಿಕ್ ಸೇರಿದಂತೆ ಹೊಸ ಕಂಪನಿಗಳಿಗೆ ಅವಕಾಶ ನೀಡುತ್ತಿದ್ದು EV ಉತ್ಪಾದನಾ ಕೇಂದ್ರವಾಗಿ ರೂಪಾಂತರಗೊಳ್ಳುತ್ತಿದೆ. ಇದನ್ನೂ ಓದಿ: ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಯಲ್ಲಿ ವಾರ್ಷಿಕ ಪರೀಕ್ಷೆ ಬರೆದ ಮಹಿಳೆ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ಬೆಂಕಿಗಾಹುತಿ

    ಮಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ಬೆಂಕಿಗಾಹುತಿ

    ಮಂಗಳೂರು: ಎಲೆಕ್ಟ್ರಿಕ್ ಸ್ಕೂಟರ್‌ಗಳ ಶೋರೂಂ ಒಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ನಾಗುರಿಯಲ್ಲಿದ್ದ ಒಕಿನಾವ ಕಂಪನಿಯ ಸ್ಕೂಟರ್ ಶೋ ರೂಂನಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ.

    ಬೆಂಕಿ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಶೋ ರೂಂನಲ್ಲಿದ್ದ 10ಕ್ಕೂ ಹೆಚ್ಚು ಸ್ಕೂಟರ್‌ಗಳು ಸುಟ್ಟು ಹೋಗಿವೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಇದನ್ನೂ ಓದಿ: ಮದುವೆಗೆ ಬುಲ್ಡೋಜರ್ ಮೇಲೆ ವರ ಬಂದಿದ್ದಕ್ಕೆ ಡ್ರೈವರ್‌ಗೆ ಬಿತ್ತು ಫೈನ್

    ನಿನ್ನೆ ರಾತ್ರಿ ಸ್ಕೂಟರ್‌ಗಳ ಬ್ಯಾಟರಿಯನ್ನು ಶೋರೂಮ್ ಸಿಬ್ಬಂದಿ ಚಾರ್ಜ್ ಮಾಡಲು ಇಟ್ಟಿದ್ದರು. ಅದರಲ್ಲಿ ಕಿಡಿ ಉಂಟಾಗಿ ಇಡೀ ಶೋರೂಮ್ ಹೊತ್ತಿ ಉರಿದಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪೋಸ್ಟರ್ ಹರಿದಿದ್ದಕ್ಕೆ DYFI ಕಾರ್ಯಕರ್ತನ ಮೇಲೆ ಹಲ್ಲೆ – 25 ಮಂದಿ ವಿರುದ್ಧ ಕೇಸ್, ಐವರು ವಶಕ್ಕೆ

    Live Tv

  • 5 ವರ್ಷಗಳಲ್ಲಿ ಎಲೆಕ್ಟ್ರಿಕ್‌ ವಾಹನಗಳ ಕ್ಷೇತ್ರದಲ್ಲಿ ಭಾರತ ನಂ.1: ಗಡ್ಕರಿ

    5 ವರ್ಷಗಳಲ್ಲಿ ಎಲೆಕ್ಟ್ರಿಕ್‌ ವಾಹನಗಳ ಕ್ಷೇತ್ರದಲ್ಲಿ ಭಾರತ ನಂ.1: ಗಡ್ಕರಿ

    – ದೇಶದ ಗ್ರೀನರ್‌ ಎಕಾನಮಿಯ ಸಂಶೋಧನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ
    – ಪ್ರಸಕ್ತ ರಾಜಕಾರಣದಲ್ಲಿ ಅನಂತಕುಮಾರ್‌ ಅವರ ಕೊರತೆ ಎದ್ದು ಕಾಣುತ್ತಿದೆ

    ಬೆಂಗಳೂರು: ಎಲೆಕ್ಟ್ರಿಕ್‌ ವಾಹನಗಳ ಕ್ಷೇತ್ರದಲ್ಲಿ ಆಗುತ್ತಿರುವ ಸಂಶೋಧನೆಗಳನ್ನು ನೋಡಿದಲ್ಲಿ ಮುಂದಿನ 5 ವರ್ಷಗಳಲ್ಲಿ ಭಾರತ ದೇಶ ವಿಶ್ವದಲ್ಲೇ ಮೊದಲ ಸ್ಥಾನ ಪಡೆಯುವುದರಲ್ಲಿ ಸಂಶಯವಿಲ್ಲ. ಈ ಕ್ಷೇತ್ರದಲ್ಲೂ ಬೆಂಗಳೂರು ನಗರ ಪ್ರಮುಖ ಪಾತ್ರವಹಿಸಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

    ಇವಿ ಹಾಗೂ ಗ್ರೀನ್‌ ಹೈಡ್ರೋಜನ್‌ ನಂತಹ ಹಲವಾರು ಕ್ರಾಂತಿಕಾರಿ ಆವಿಷ್ಕಾರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯ ಅದರಲ್ಲೂ ಬೆಂಗಳೂರು ನಗರ ದೇಶದ ಗ್ರೀನ್‌ ಎಕಾನಮಿಗೆ ಅಪಾರ ಕೊಡುಗೆ ನೀಡುತ್ತಿದೆ ಎಂದು ತಿಳಿಸಿದರು.

    ನಗರದ ಆರ್‌ ವಿ ಶಿಕ್ಷಕರ ಕಾಲೇಜಿನ ಸಭಾಂಗಣದಲ್ಲಿ ದಿವಂಗತ ಅನಂತಕುಮಾರ್‌ ಅವರ 3ನೇ ಪುಣ್ಯತಿಥಿಯ ಸ್ಮರಣಾರ್ಥ ಆಯೋಜಿಸಲಾಗಿದ್ದ ಅನಂತಕುಮಾರ್‌ ಸ್ಮಾರಕ ಉಪನ್ಯಾಸದಲ್ಲಿ ವರ್ಚುಯಲ್‌ ಆಗಿ ಭಾಗವಹಿಸಿ ಅವರು ಮಾತನಾಡಿದರು.

    ಅನಂತಕುಮಾರ್‌ ಅವರೊಂದಿಗೆ ತಮಗಿದ್ದ ಆತ್ಮೀಯ ಕ್ಷಣಗಳನ್ನು ಹಂಚಿಕೊಂಡ ಅವರು, ದೇಶದ ಪ್ರಸಕ್ತ ರಾಜಕಾರಣದಲ್ಲಿ ಅನಂತಕುಮಾರ್‌ ಅವರ ಕೊರತೆ ಎದ್ದು ಕಾಣುತ್ತಿದೆ. ದೇಶ ಅದರಲ್ಲೂ ದಕ್ಷಿಣ ಭಾರತದಲ್ಲಿ ಭಾರತೀಯ ಜನತಾ ಪಕ್ಷದ ಬೆಳವಣಿಗೆಯಲ್ಲಿ ಅನಂತಕುಮಾರ್‌ ಅವರ ಕೊಡುಗೆ ಅಪಾರ. ಅವರು ಕರ್ನಾಟಕ ರಾಜ್ಯದ ಬಿಜೆಪಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನಾವು ಹಲವು ಲೋಕಸಭಾ ಕ್ಷೇತ್ರಗಳಲ್ಲಿ ಗೆಲವು ಸಾಧಿಸಿದೆವು. ಈ ಮೂಲಕ ಭಾರತೀಯ ಜನತಾ ಪಕ್ಷ ದಕ್ಷೀಣ ಭಾರತದಲ್ಲಿ ತನ್ನ ಖಾತೆಯನ್ನು ತೆರೆಯಲು ಸಾಧ್ಯವಾಯಿತು ಎಂದು ಹೇಳಿದರು.

    ವಿಶ್ವದಲ್ಲೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷವಾಗಿ ಬೆಳೆಯುವಲ್ಲಿ ಅನಂತಕುಮಾರ್‌ ಅವರಂತಹ ಸದಸ್ಯರ ಕೊಡುಗೆ ಬಹಳ ಅಪಾರವಾಗಿದೆ. ಕಳೆದ ಎರಡು ವರ್ಷಗಳಲ್ಲಿ ಅನಂತಕುಮಾರ್‌, ಅರುಣ್‌ ಜೇಟ್ಲಿ ಹಾಗೂ ಸುಷ್ಮಾ ಸ್ವರಾಜ್‌ ನಂತಹ ಪ್ರಮುಖರನ್ನು ಕಳೆದುಕೊಂಡು ಪಕ್ಷ ಬಡವಾಗಿದೆ. ಅನಂತಕುಮಾರ್‌ ಅವರಿಗೆ ಇನ್ನು ರಾಜಕಾರಣದಲ್ಲಿ ಬಹಳಷ್ಟು ಅವಕಾಶವಿತ್ತು. ಅವರ ಅನಾರೋಗ್ಯದ ಬಗ್ಗೆ ತಿಳಿದುಕೊಳ್ಳುವಲ್ಲಿ ಆದ ತಡದಿಂದಾಗಿ ಅವರನ್ನು ಅಕಾಲಿಕವಾಗಿ ಕಳೆದುಕೊಳ್ಳಬೇಕಾಯಿತು ಎಂದು ದು:ಖ ವ್ಯಕ್ತಪಡಿಸಿದರು.

    ಸಾಮಾಜಿಕ ಕಳಕಳಿ ಅಪಾರ: ಸಾಮಾನ್ಯ ಕಾರ್ಯಕರ್ತರೇ ಪಕ್ಷದ ಶಕ್ತಿ ಎಂದು ನಂಬಿದ್ದ ಅನಂತಕುಮಾರ್‌ ಅವರು ಅಪಾರ ಸಾಮಾಜಿಕ ಕಾಳಜಿಯನ್ನು ಹೊಂದಿದ್ದರು. ಅವರು ತಮ್ಮ ಪತ್ನಿ ಡಾ ತೇಜಸ್ವಿನಿ ಅನಂತಕುಮಾರ್‌ ಅವರೊಂದಿಗೆ ಸೇರಿ ಪ್ರಾರಂಭಿಸಿದ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ ದೇಶದ ಲಕ್ಷಾಂತರ ಮಕ್ಕಳ ಹಸಿವನ್ನು ಇಂದಿಗೂ ನೀಗಿಸುತ್ತಿದೆ ಎಂದರು. ಇದನ್ನೂ ಓದಿ: ಮೃತ ಪೋಷಕರ ವಿವಾಹಿತ ಹೆಣ್ಣು ಮಕ್ಕಳು ಸರ್ಕಾರಿ ನೌಕರಿ ಪಡೆಯಲು ಅರ್ಹರು: ಯುಪಿ ಸರ್ಕಾರ

    ಬೆಂಗಳೂರು ನಗರದ ಕೊಡುಗೆ ಅಪಾರ: ದೇಶದಲ್ಲಿ ಗ್ರೀನ್‌ ಎಕಾನಮಿ ಬಹಳ ವೇಗವಾಗಿ ಅಭಿವೃದ್ದಿಗೊಳ್ಳುತ್ತಿದೆ. ಇವಿ ಹಾಗೂ ಗ್ರೀನ್‌ ಹೈಡ್ರೋಜನ್‌ ನಂತಹ ಕ್ಷೇತ್ರಗಳಲ್ಲಿ ಬೆಂಗಳೂರು ನಗರದ ಸ್ಟಾರ್ಟ್‌ ಅಪ್‌ ಗಳು ಪ್ರಮುಖ ಸಂಶೋಧನೆಯನ್ನು ಕೈಗೊಂಡಿವೆ. ಕರ್ನಾಟಕ ರಾಜ್ಯದಲ್ಲಿ ಇಥೆನಾಲ್‌ ಉತ್ಪಾದನೆ ಹೆಚ್ಚಾಗಿದೆ. ಫ್ಲೇಕ್ಸ್‌ ಇಂಜಿನ್‌ ಹಾಗೂ ಎಲೆಕ್ಟ್ರಿಕ್‌ ವಾಹನಗಳ ಅಭಿವೃದ್ದಿಯಲ್ಲಿ ಹಲವಾರು ಸಂಶೋಧನೆಗಳು ನಡೆಯುತ್ತಿವೆ. ಈ ಸಂಶೋಧನೆಗಳಲ್ಲಿ ಬೆಂಗಳೂರು ನಗರದ ಕೊಡುಗೆ ಬಹಳಷ್ಟಿದೆ. ಮುಂಬರುವ ದಿನಗಳಲ್ಲಿ ದೇಶದಲ್ಲಿ ಹಸಿರು ಆರ್ಥಿಕತೆ ಅಭಿವೃದ್ದಿಯಾಗಲಿದ್ದು, ಅದರಲ್ಲಿ ಬೆಂಗಳೂರು ನಗರದ ಸ್ಟಾರ್ಟ್‌ ಅಪ್‌ಗಳು ನೇತೃತ್ವ ವಹಿಸಲಿದೆ ಎಂದರು.

    ಒಳನಾಡು ಜಲಸಾರಿಗೆಗೆ ಹೆಚ್ಚಿನ ಮಹತ್ವ: ದೇಶದಲ್ಲಿ ಸಾಗಾಣಿಕೆ ವೆಚ್ಚ ಹೆಚ್ಚಿದೆ. ಇದನ್ನು ಮಾಡುವ ನಿಟ್ಟಿನಲ್ಲಿ ಈಗಾಗಲೇ ಅಂತರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ. ಅದೇ ರೀತಿಯಲ್ಲಿ ಒಳನಾಡು ಜಲಸಾರಿಗೆಗೆ ಮಾರ್ಗಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಮುಂದಿನ 2 ವರ್ಷದಲ್ಲಿ ಎಲೆಕ್ಟ್ರಿಕ್‌ ವಾಹನಗಳ ಬೆಲೆ ಪೆಟ್ರೋಲ್‌ ವಾಹನದಷ್ಟೇ ಆಗಲಿದೆ: ಗಡ್ಕರಿ

    ಬೆಂಗಳೂರು ರಿಂಗ್‌ ರಸ್ತೆ: ಅನಂತಕುಮಾರ್‌ ಅವರ ಬಹುದಿನಗಳ ಕನಸಾಗಿದ್ದ ಬೆಂಗಳೂರು ರಿಂಗ್‌ ರಸ್ತೆಯ ನಿರ್ಮಾಣದ ಬಗ್ಗೆ ಈಗಾಗಲೇ ಚರ್ಚೆಯನ್ನು ನಡೆಸಲಾಗಿದೆ. ಚುನಾವಣೆಯ ನೀತಿ ಸಂಹಿತೆಯ ನಂತರ ಕರ್ನಾಟಕ ರಾಜ್ಯಕ್ಕೆ ಆಗಮಿಸಲಿದ್ದು ರಿಂಗ್‌ ರಸ್ತೆಯ ಕಾಮಗಾರಿ ಪ್ರಾರಂಭದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದರು.

    ಕಾರ್ಯಕ್ರಮದಲ್ಲಿ ಅದಮ್ಯ ಚೇತನ ಮುಖ್ಯಸ್ಥೆ ಡಾ ತೇಜಸ್ವಿನಿ ಅನಂತಕುಮಾರ್‌, ಅನಂತಕುಮಾರ್ ಪ್ರತಿಷ್ಠಾನದ ಅಧ್ಯಕ್ಷ ಪಿ ವಿ ಕೃಷ್ಣ ಭಟ್, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ ಗಂಗಾಧರ, ಪ್ರೊ ಹೆಚ್ ಎಸ್ ನಾಗರಾಜ್, ಪುತ್ರಿಯರಾದ ಐಶ್ವರ್ಯ ಮತ್ತು ವಿಜೇತ ಅನಂತಕುಮಾರ್, ಅದಮ್ಯ ಚೇತನ ಸಂಸ್ಥೆಯ ಟ್ರಸ್ಟಿಗಳಾದ ಹೆಚ್‌ ಎನ್ ನಂದಕುಮಾರ್‌ ಮತ್ತು ಪ್ರದೀಪ್‌ ಓಕ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

  • ವಿದ್ಯುತ್ ಚಾಲಿತ ವಾಹನ ಬಳಕೆ ಮಾಡಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗುತ್ತೆ: ನಾರಾಯಣ ಗೌಡ

    ವಿದ್ಯುತ್ ಚಾಲಿತ ವಾಹನ ಬಳಕೆ ಮಾಡಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗುತ್ತೆ: ನಾರಾಯಣ ಗೌಡ

    -ವಿದ್ಯುತ್ ಚಾಲಿತ ವಾಹನ ರೈಡ್ ಮಾಡಿದ ಸಚಿವರು

    ಬೆಂಗಳೂರು: ವಿದ್ಯುತ್ ಚಾಲಿತ ವಾಹನ ಬಳಕೆ ಮಾಡಿದರೆ ಮುಂದಿನ ದಿನಗಳಲ್ಲಿ ಪೆಟ್ರೋಲ್ ಬೆಲೆ ಕಡಿಮೆಯಾಗುತ್ತದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ ಅಭಿಪ್ರಾಯಪಟ್ಟಿದ್ದಾರೆ.

    ವಿಶ್ವ ವಿದ್ಯುತ್ ಚಾಲಿತ ವಾಹನ ದಿನಾಚರಣೆ-2021 ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ವಿದ್ಯುತ್ ಚಾಲಿತ ವಾಹನಗಳ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ನಾರಾಯಣ ಗೌಡ ರ್ಯಾಲಿಗೆ ಹಸಿರು ನಿಶಾನೆ ತೋರಿದರು. ಜೊತೆಗೆ ಸಚಿವರುಗಳು ವಾಹನ ಚಾಲನೆ ಮಾಡಿ ಪರಿಸರ ಸ್ನೇಹಿ ವಾಹನಗಳ ಬಳಕೆ ಹೆಚ್ಚಾಗಲಿ ಎಂದರು.

    ರ್ಯಾಲಿಯನ್ನು ಉದ್ಘಾಟಿಸಿ ಮಾತನಾಡಿದ ನಾರಾಯಣ ಗೌಡ, ನಮ್ಮ ಶರೀರವನ್ನು, ನಮ್ಮ ಪರಿಸರವನ್ನು ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ವಿದ್ಯುತ್ ಚಾಲಿತ ವಾಹನಗಳ ಬಳಕೆ ಹೆಚ್ಚಾಗಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿದ್ಯುತ್ ವಾಹನಗಳ ಖರೀದಿಗೆ ಸಬ್ಸಿಡಿ ನೀಡುತ್ತಿದೆ ಎಂದರು. ಇದನ್ನೂ ಓದಿ: ಕಲಬುರಗಿಯಲ್ಲಿ ಮೈತ್ರಿಗೆ ಸಿದ್ದರಾಮಯ್ಯ ವಿರೋಧ- ಮಾಜಿ ಸಿಎಂ ಲೆಕ್ಕಾಚಾರ ಏನು?

    ಈ ಮೊದಲು ಸಚಿವರು ಪರಿಸರ ಸ್ನೇಹಿ ವಾಹನ ಬಳಸಿ ಎನ್ನುವ ನಾಮಫಲಕಗಳನ್ನು ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಇಂಧನ ಸಚಿವ ಸುನಿಲ್ ಕುಮಾರ್, ವಿದ್ಯುತ್ ಚಾಲಿತ ವಾಹನಗಳು ಭವಿಷ್ಯಕ್ಕೆ ಅನಿವಾರ್ಯವಾಗಬೇಕು. ಕೇಂದ್ರ ಹಾಗೂ ರಾಜ್ಯ ವಿದ್ಯುತ್ ಚಾಲಿತ ವಾಹನಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತದೆ. ಸದ್ಯ 136 ಕಡೆ ವಿದ್ಯುತ್ ರೀಚಾರ್ಜಿಂಗ್ ಸೆಂಟರ್ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ 500 ಕ್ಕೂ ಹೆಚ್ಚು ಚಾರ್ಜಿಂಗ್ ಸೆಂಟರ್ ಮಾಡುವ ಯೋಜನೆಯಿದೆ ಎಂದರು.

    ಸಚಿವ ಮುನಿರತ್ನ ಮಾತನಾಡಿ, ಹೊಸದಾಗಿ ರಿಚಾರ್ಜ್ ಪಾಯಿಂಟ್ ಗಳನ್ನು ಪೆಟ್ರೋಲ್ ಬಂಕ್ ಬಳಿಯೇ ಮಾಡಬೇಕು ಎಂದು ಇಂಧನ ಸಚಿವರಿಗೆ ಮನವಿ ಮಾಡಿದ್ರು. ಈ ಮೂಲಕ 40% ಪೆಟ್ರೋಲ್ ಬಳಕೆ ಕಡಿಮೆ ಮಾಡಬೇಕು. ವಾಹನಗಳ ದರ ಪೆಟ್ರೋಲ್ ಬಳಕೆಯ ವಾಹನಗಳಿಗಿಂತ ಕಡಿಮೆ ಮಾಡಬೇಕು. ವಾಹನ ಕಂಪನಿಗಳಿಗೆ ಬೆಲೆ ಕಡಿಮೆ ಮಾಡಲು ಕೋರುತ್ತೇನೆ ಎಂದರು. ಇದನ್ನೂ ಓದಿ: ಹೆಚ್‍ಡಿಕೆಗೆ ಕಲಬುರಗಿ ಮೈತ್ರಿ ಪವರ್ – ಮೇಯರ್ ಪಟ್ಟದ ಬೇಡಿಕೆ ಅಸ್ತ್ರ ಏಕೆ?

  • ಭಾರತಕ್ಕೆ ಎಂಜಿಯ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ – ಬೆಲೆ, ಮೈಲೇಜ್ ಎಷ್ಟು?

    ಭಾರತಕ್ಕೆ ಎಂಜಿಯ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ – ಬೆಲೆ, ಮೈಲೇಜ್ ಎಷ್ಟು?

    ನವದೆಹಲಿ: ಪ್ರತಿಷ್ಠಿತ ಎಂಜಿ ಮೋಟಾರ್ಸ್ ತನ್ನ ಕಂಪನಿಯ ಮೊದಲ ಎಲೆಕ್ಟ್ರಿಕ್ ಎಸ್‍ಯುವಿ ಕಾರನ್ನು ಎಂಜಿ ಝಡ್‍ಎಸ್ ಇವಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ.

    ಈಗಾಗಲೇ ಹುಂಡೈ ಕಂಪನಿಯವರು ಕೋನಾ ಹೆಸರಿನ ಎಲೆಕ್ಟ್ರಿಕ್ ವಾಹನವನ್ನು ಭಾರತದಲ್ಲಿ ಅನಾವರಣಗೊಳಿಸಿದ್ದು, ಇದಕ್ಕೆ ಸ್ಪರ್ಧೆ ನೀಡುವ ನಿಟ್ಟಿನಲ್ಲಿ ಎಂಜಿ ಮೋಟಾರ್ಸ್ ಅವರು ತಮ್ಮ ಕಂಪನಿಯ ಎಲೆಕ್ಟ್ರಿಕ್ ವಾಹನವನ್ನು ಬಿಡುಗಡೆ ಮಾಡಿದೆ.

    ಈ ಎಂಜಿ ಜಡ್‍ಎಸ್ ಇವಿ ತುಂಬಾ ಸ್ಟೈಲಿಶ್ ಲುಕ್‍ನಲ್ಲಿ ಡಿಸೈನ್ ಮಾಡಿದ್ದು, ಒಂದು ಬಾರಿ ಚಾರ್ಜ್ ಮಾಡಿದರೆ ಸುಮಾರು 340 ಕಿ.ಮೀ ಚಲಿಸಬಲ್ಲ ಸಾಮರ್ಥ್ಯವನ್ನು ಹೊಂದಿದೆ. ಈ ಕಾರಿನಲ್ಲಿ 44.5 ಕಿಲೋವ್ಯಾಟ್ ಲಿಥಿಯಂ ಬ್ಯಾಟರಿಯನ್ನು ಅಳವಡಿಸಿದ್ದು, 50 ಕಿ.ವ್ಯಾ ಡಿಸಿ ಚಾರ್ಜರ್ ನಲ್ಲಿ ಕೇವಲ 40 ನಿಮಿಷಗಳಲ್ಲಿ ಶೇ.80 ರಷ್ಟು ಚಾರ್ಜ್ ಆಗುತ್ತದೆ. ಅಲ್ಲದೇ ಕಾರಿನ ಜೊತೆ ಕಂಪನಿಯವರು 7.4 ಕಿ.ವ್ಯಾ ಡಿಸಿ ಚಾರ್ಜರ್ ಅನ್ನು ನೀಡುತ್ತಿದ್ದು, ಇದನ್ನು ಬಳಸಿ ಚಾರ್ಜ್ ಮಾಡಿದರೆ 7 ಗಂಟೆಯಲ್ಲಿ ಸಂಪೂರ್ಣ ಚಾರ್ಜ್ ಆಗುತ್ತದೆ.

    ಎಂಜಿ ಜಡ್‍ಎಸ್ ಇವಿ ಎಸ್‍ಯುವಿ ಎಲೆಕ್ಟ್ರಿಕ್ ಕಾರನ್ನು ಭಾರತದದ್ಯಾಂತ ಸುಮಾರು 1 ಲಕ್ಷ ಕಿ.ಮೀ ಡ್ರೈವ್ ಮಾಡಿ ಪರೀಕ್ಷೆ ಮಾಡಲಾಗಿದೆ ಎಂದು ಎಂಜಿ ಮೋಟಾರ್ಸ್ ಕಂಪನಿ ತಿಳಿಸಿದೆ. ಈ ಕಾರು ಬ್ಯಾಟರಿ ಪವರ್ ಬಳಸಿಕೊಂಡು ಕೇವಲ ಎಂಟು ಸೆಕೆಂಡ್‍ಗಳಲ್ಲಿ 100 ಕಿ.ಮೀ ಸ್ಪೀಡ್‍ಗೆ ತಲುಪಬಲ್ಲ ಸಾಮರ್ಥ್ಯ ಹೊಂದಿದೆ. ಇದರ ಜೊತೆಗೆ ಎಂಜಿ ಮೋಟಾರ್ಸ್ ಶೋರೂಮ್‍ಗಳು ಭಾರತದಲ್ಲಿ ದೆಹಲಿ, ಹೈದರಾಬಾದ್, ಮುಂಬೈ, ಬೆಂಗಳೂರು ಮತ್ತು ಅಹಮದಾಬಾದ್‍ನಲ್ಲಿ ಇದ್ದು, ಮುಂದಿನ 5 ವರ್ಷಗಳಲ್ಲಿ ಪ್ರಮುಖ ಮೆಟ್ರೋ ನಗರಗಳಲ್ಲಿ ಪ್ರತಿ 5 ಕಿ.ಮೀ ಮತ್ತು ಹೆದ್ದಾರಿಗಳಲ್ಲಿ ಪ್ರತಿ 25 ಕಿ.ಮೀ.ಗೆ 1 ಚಾರ್ಜಿಂಗ್ ಸ್ಟೇಷನ್ ಅನ್ನು ತೆರೆಯಲು ಕಂಪನಿ ಯೋಜನೆ ರೂಪಿಸಿದೆ.

    ಈ ಕಾರು ಈ ಹಿಂದೆ ಎಂಜಿ ಮೋಟಾರ್ಸ್ ಬಿಡುಗಡೆ ಮಾಡಿದ ಎಂಜಿ ಹೆಕ್ಟರ್ ಕಾರಿಗಿಂತ ಸ್ವಲ್ಪ ಚಿಕ್ಕದಾಗಿದ್ದು, ಇತ್ತೀಚಿನ ತಂತ್ರಜ್ಞಾನವನ್ನು ಬಳಸಿಕೊಂಡು ಇಂಟಿರಿಯರ್ ಡಿಸೈನ್ ಮಾಡಲಾಗಿದೆ. ಈ ಕಾರು 4314 ಮಿಮೀ (14 ಅಡಿ) ಉದ್ದ, 1809 ಮಿಮೀ (5 ಅಡಿ) ಅಗಲ ಮತ್ತು 1620 ಮಿಮೀ (5 ಅಡಿ) ಎತ್ತರವನ್ನು ಇದೆ. ಈ ಕಾರು ಹುಂಡೈ ಕಂಪನಿಯ ಕ್ರೆಟಾ ಕಾರಿಗಿಂತ ದೊಡ್ಡಾಗಿದೆ.

    ಈ ಕಾರನ್ನು ಸ್ಪೋರ್ಟ್ ಕಾರ್ ರೀತಿಯಲ್ಲಿ ಡಿಸೈನ್ ಮಾಡಿದ್ದು, ಕಪ್ಪು ಮತ್ತು ಸಿಲ್ವರ್ ಬಣ್ಣದಲ್ಲಿ ಕಾರಿನ ಒಳಭಾಗವನ್ನು ಬಹಳ ಆಕರ್ಷಣೀಯವಾಗಿ ಕಾಣುವಂತೆ ವಿನ್ಯಾಸ ಮಾಡಲಾಗಿದೆ. ಇದರ ಜೊತೆ 8.0 ಇಂಚಿನ ಟಚ್‍ಸ್ಕ್ರೀನ್ ಸಿಸ್ಟಮ್ ನೀಡಲಾಗಿದ್ದು ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಸಪೋರ್ಟ್ ಮಾಡುತ್ತದೆ. ಮೊಬೈಲ್ ಚಾರ್ಜರ್ ಮತ್ತು ಬ್ಲೂಟೂತ್ ಮತ್ತು ಹಿಂಬದಿಯ ಕ್ಯಾಮೆರಾವನ್ನು ನೀಡಲಾಗಿದೆ.

    ಬೆಲೆ ಎಷ್ಟು?
    ಕಂಪನಿ ಕಾರಿನ ಬೆಲೆಯನ್ನು ನಿಖರವಾಗಿ ತಿಳಿಸಿಲ್ಲ. ಆದರೆ ಮೂಲಗಳ ಪ್ರಕಾರ 20 ಲಕ್ಷ ರೂ. ಇರಬಹುದು ಎಂದು ಅದಾಜಿಸಲಾಗಿದೆ. ಜನವರಿಯಿಂದ ಈ ಕಾರು ಮಾರಾಟವಾಗಲಿದೆ.