Tag: Electric Vehicle

  • ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಗಿಫ್ಟ್

    ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಗಿಫ್ಟ್

    ನವದೆಹಲಿ: ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಭಾರತವನ್ನು ಗ್ಲೋಬಲ್ ಹಬ್ ಮಾಡುವತ್ತ ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

    ಮುಖ್ಯಾಂಶಗಳು:
    – ಕಡಿಮೆ ದರದಲ್ಲಿ ಜನರಿಗೆ ಎಲೆಕ್ಟ್ರಿಕ್ ವಾಹನ ದೊರೆಯುವಂತಾಗಲು ಈಗ ಇರುವ ಶೇ.12 ತೆರಿಗೆ ವ್ಯಾಪ್ತಿಯ ಬದಲು ಶೇ.5ರ ತೆರಿಗೆ ವ್ಯಾಪ್ತಿ ಒಳಗಡೆ ತರಲು ಜಿಎಸ್‍ಟಿ ಕೌನ್ಸಿಲ್ ಬಳಿ ಮನವಿ ಮಾಡಲಾಗಿದೆ.

    – 2023ರ ಮಾರ್ಚ್ 31ರ ಒಳಗಡೆ ಸಾಲ ಮಾಡಿ 1.50 ಲಕ್ಷ ರೂ. ಮೌಲ್ಯದ ವಾಹನದ ಖರೀದಿಸಿದರೆ ಅದಕ್ಕೆ ಯಾವುದೇ ಬಡ್ಡಿ ಇಲ್ಲ.

    – ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ಹೆಚ್ಚಿಸುವ ಸಂಬಂಧ 2018ರಲ್ಲಿ ಫೇಮ್ ಯೋಜನೆಯನ್ನು ಪರಿಚಯಿಸಿರುವ ಕೇಂದ್ರ ಸರ್ಕಾರವು 2019-21ರ ಅವಧಿಗೆ 2ನೇ ಹಂತದ ಯೋಜನೆಯನ್ನು ಘೋಷಣೆ ಮಾಡಿದ್ದು, ಇದಕ್ಕೆ 10 ಸಾವಿರ ಕೋಟಿ ಅನುದಾನ ನೀಡಲಾಗಿದೆ.

    – ಹೆಚ್ಚಿನ ಸುಧಾರಿತ ಬ್ಯಾಟರಿ ಮತ್ತು ನೋಂದಾಯಿತ ಇ-ವಾಹನಗಳಿಗೆ ಯೋಜನೆಯಡಿ ಪ್ರೋತ್ಸಾಹ. ಜನ ಸಾಮಾನ್ಯರಿಗೆ ಕೈಗೆಟುಕುವ ಮತ್ತು ಪರಿಸರ ಸ್ನೇಹಿ ಸಾರ್ವಜನಿಕ ಸಾರಿಗೆ ಆಯ್ಕೆ ಮಾಡಲು ಒತ್ತು.

    – ಆರ್ಥಿಕ ಬೆಳವಣಿಗೆ ಮತ್ತು ಮೇಕ್ ಇನ್ ಇಂಡಿಯಾ ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ಕ್ಷೇತ್ರದಲ್ಲಿ ಲಿಥಿಯಂ ಬ್ಯಾಟರಿ, ಸೌರ ವಿದ್ಯುತ್ ಚಾರ್ಜಿಂಗ್ ಉತ್ಪಾದನೆ ಕ್ಷೇತ್ರಗಳಲ್ಲಿ ಹೂಡಿಕೆ ಸಂಬಂಧಿತವಾಗಿ ಆದಾಯ ತೆರಿಗೆ ವಿನಾಯಿತಿಗಳನ್ನು ನೀಡುವುದು.

  • 2025ರ ಒಳಗಡೆ 150 ಸಿಸಿ ಕೆಳಗಿನ ಬೈಕ್‍ಗಳನ್ನು ಎಲೆಕ್ಟ್ರಿಕ್‍ಗೆ ಪರಿವರ್ತಿಸಿ – ನೀತಿ ಆಯೋಗ ಸೂಚನೆ

    2025ರ ಒಳಗಡೆ 150 ಸಿಸಿ ಕೆಳಗಿನ ಬೈಕ್‍ಗಳನ್ನು ಎಲೆಕ್ಟ್ರಿಕ್‍ಗೆ ಪರಿವರ್ತಿಸಿ – ನೀತಿ ಆಯೋಗ ಸೂಚನೆ

    ನವದೆಹಲಿ: 2025ರ ವೇಳೆಗೆ ಎಲ್ಲ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ಎಲೆಕ್ಟ್ರಿಕ್ ಎಂಜಿನ್ ಆಗಿ ಪರಿವರ್ತಿಸುವ ಕುರಿತು ಎರಡು ವಾರಗಳಲ್ಲಿ ತಮ್ಮ ನಿರ್ಧಾರ ತಿಳಿಸುವಂತೆ ವಾಹನ ತಯಾರಿಕಾ ಕಂಪನಿಗಳಿಗೆ ನೀತಿ ಆಯೋಗದ ಸಭೆಯಲ್ಲಿ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಶುಕ್ರವಾರ ನಡೆದ ನೀತಿ ಆಯೋಗದ ‘ಥಿಂಕ್ ಟ್ಯಾಂಕ್’ ಸಭೆಯಲ್ಲಿ ಈ ನಿರ್ಧಾರದ ಕುರಿತು ಎಲೆಕ್ಟ್ರಿಕ್ ವಾಹನಗಳ ಉತ್ಪಾದಕರು ಹಾಗೂ ಸ್ಟಾರ್ಟ್ ಅಪ್ ತಯಾರಿಕರೊಂದಿಗೆ ಚರ್ಚಿಸಲಾಗಿದೆ. ಮಾಲಿನ್ಯ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳದಿದ್ದರೆ, ನ್ಯಾಯಾಲಯ ಈ ಕುರಿತು ಕ್ರಮ ಕೈಗೊಳ್ಳುತ್ತದೆ ಎಂದು ಕಂಪನಿಗಳಿಗೆ ನೀತಿ ಆಯೋಗದ ಸಭೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

    ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹಾಗೂ ಸಿಇಓ ಅಮಿತಾಬ್ ಕಾಂತ್ ಅವರ ನೇತೃತ್ವದಲ್ಲಿ ನಡೆದ ನೀತಿ ಆಯೋಗದ ‘ಥಿಂಕ್ ಟ್ಯಾಂಕ್’ ಸಭೆಯಲ್ಲಿ ಬಜಾಜ್ ಆಟೋ ಎಂಡಿ ರಾಜೀವ್ ಬಜಾಜ್, ಟಿವಿಎಸ್ ಮೋಟರ್ಸ್ ಕಂ. ಅಧ್ಯಕ್ಷ ವೇಣು ಶ್ರೀನಿವಾಸನ್, ಹೋಂಡಾ ಮೋಟರ್‍ಸೈಕಲ್ ಆಂಡ್ ಸ್ಕೂಟರ್ ಇಂಡಿಯಾದ ಅಧ್ಯಕ್ಷ ಮತ್ತು ಸಿಇಓ ಮಿನೋರು ಕಟೊ ಹಾಗೂ ಪ್ರಧಾನ ನಿರ್ದೇಶಕ ವಿಷ್ಣು ಮಾಥೂರ್ ಹಾಗೂ ಆಟೊಮೋಟಿವ್ ಕಾಂಪೋನೆಂಟ್ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಪ್ರಧಾನ ನಿರ್ದೇಶಕ ವಿನೀ ಮೆಹ್ತಾ ಸೇರಿದಂತೆ ಪ್ರಮುಖ ದ್ವಿಚಕ್ರ ವಾಹನ ಉತ್ಪಾದಕ ಸಂಸ್ಥೆಗಳ ಅಧಿಕಾರಿಗಳು ಭಾಗವಹಿಸಿದ್ದರು.

    ಈ ಕುರಿತು ಸೂಕ್ತ ನೀತಿ ಮತ್ತು ಮಾರ್ಗದರ್ಶನವಿಲ್ಲದೆ ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸಲು ಸಾಧ್ಯವಿಲ್ಲ. ನೀತಿಗಳನ್ನು ಸ್ಪಷ್ಟವಾಗಿಡಲು ಸಾಧ್ಯವಿಲ್ಲ. ಹೆಚ್ಚು ವಾಯು ಮಾಲಿನ್ಯ ಹೊಂದಿದ 15ರ ಪೈಕಿ 14 ನಗರಗಳು ಭಾರತದಲ್ಲಿವೆ. ಸರ್ಕಾರ ಮತ್ತು ಕಂಪನಿಗಳು ಈ ಕುರಿತು ಕ್ರಮ ಕೈಗೊಳ್ಳದಿದ್ದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಎಚ್ಚರಿಸಿದ್ದಾರೆ.

    2023ರ ವೇಳೆಗೆ ತ್ರಿಚಕ್ರ ವಾಹನಗಳನ್ನು ಸಂಪೂರ್ಣವಾಗಿ ಎಲೆಕ್ಟ್ರಿಕ್‍ಗೆ ಪರಿವರ್ತಿಸಬೇಕು, 2025ರ ವೇಳೆಗೆ 150 ಸಿಸಿಗಿಂತ ಕಡಿಮೆ ಎಂಜಿನ್ ಸಾಮಥ್ರ್ಯ ಹೊಂದಿರುವ ದ್ವಿಚಕ್ರ ವಾಹನಗಳನ್ನು ಎಲೆಕ್ಟ್ರಿಕ್‍ಗೆ ಪರಿವರ್ತಿಸಲು ನೀತಿ ಆಯೋಗ ಯೋಜನೆ ರೂಪಿಸಿದೆ.

    ಸಭೆ ನಂತರ ಅಮಿತಾಬ್ ಕಾಂತ್ ಈ ಕುರಿತು ಟ್ವೀಟ್ ಮಾಡಿದ್ದು, ಎಲೆಕ್ಟ್ರಿಕ್ ವಾಹನಗಳ ಕ್ರಾಂತಿ ಮಾಡಲು ನೀತಿ ಆಯೋಗದ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಜಾಗತಿಕವಾಗಿ ಎಲೆಕ್ಟ್ರಿಕ್ ವಾಹನಗಳ ಚಾಲಕನಾಗಲು ಭಾರತ ತುದಿಗಾಲಲ್ಲಿ ನಿಂತಿದೆ. ಎಲೆಕ್ಟ್ರಿಕ್ ವಾಹನಗಳು ಚಲನಶೀಲತೆ ಭವಿಷ್ಯ ಎಂದು ಎಲ್ಲರೂ ಒಪ್ಪಿಕೊಂಡಿದ್ದು, ಮೋರ್ಥ್ ಹಾಗೂ ಡಿಎಚ್‍ಐನ ಕಾರ್ಯದರ್ಶಿ ರಾಜೀವ್ ಕುಮಾರ್ ಅವರು ಸಭೆಯ ನೇತೃತ್ವ ವಹಿಸಿದ್ದರು ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

    ಭಾರತ ಈಗಾಗಲೇ ಎಲೆಕ್ಟ್ರಾನಿಕ್ಸ್ ಕ್ರಾಂತಿ ಮತ್ತು ಸೆಮಿ ಕಂಡಕ್ಟರ್ ಕ್ರಾಂತಿಯನ್ನು ತಪ್ಪಿಸಿಕೊಂಡಿದ್ದು, ವಿದ್ಯುತ್ ವಾಹನಗಳ ಕ್ರಾಂತಿಯನ್ನು ತಪ್ಪಿಸಿಕೊಳ್ಳಬಾರದು. ಈಗಿರುವ ಕಂಪನಿಗಳು ಈ ಕುರಿತು ನಿರ್ಧರಿಸದಿದ್ದರೆ ಇತರೆ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುತ್ತವೆ. ಈ ಕುರಿತು ಈಗಾಗಲೇ ಚೀನಾದಲ್ಲಿ ನಡೆದಿದೆ. ಆದರೆ, ಇದನ್ನು ಉದ್ಯಮಗಳ ಮೇಲೆ ಹೇರಲು ಸರ್ಕಾರ ಇಚ್ಛಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮೂಲಗಳ ಪ್ರಕಾರ ಸಾಂಪ್ರದಾಯಿಕ ಉತ್ಪಾದಕರಾದ ಬಜಾಜ್ ಆಟೋ, ಹೀರೋ ಮೋಟೊಕಾರ್ಪ್, ಎಚ್‍ಎಂಎಸ್‍ಐ ಹಾಗೂ ಟಿವಿಎಸ್ ಕಂಪನಿಗಳು ಈ ಕುರಿತು ವಿರೋಧ ವ್ಯಕ್ತಪಡಿಸಿದ್ದು, ಕೈನಿಟಿಕ್ ಗ್ರೀನ್ ಎನರ್ಜಿ ಮತ್ತು ಪವರ್ ಸೆಲ್ಯೂಶನ್ಸ್ ಮತ್ತು ಟಾರ್ಕ್ ಮೋಟರ್ಸ್ ಸೇರಿದಂತೆ ಇತರ ಕಂಪನಿಗಳು ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಪ್ರಾರಂಭಿಸಲಾಗುವುದು ಎಂದು ತಿಳಿಸಿವೆ.

    ವಾಯು ಮಲಿನ್ಯದ ಸಮಸ್ಯೆಯಿಂದಾಗಿ 2023ರೊಳಗೆ ಎಲೆಕ್ಟ್ರಿಕ್ ವಾಹನಗಳಿಗೆ ಪರಿವರ್ತಿಸಲು ಬಯಸುತ್ತೇವೆ ಎಂದು ರೀವೋಲ್ಟ್ ಇಂಟಲಿಕಾರ್ಪ್ ಸ್ಥಾಪಕ ರಾಹುಲ್ ಶರ್ಮಾ ತಿಳಿಸಿದ್ದಾರೆ.

    ಬಜಾಜ್ ಮತ್ತು ಟಿವಿಎಸ್ ಕಂಪನಿಗಳು ಕಳೆದ ತಿಂಗಳು ಈ ಕುರಿತು ಪ್ರತಿಕ್ರಿಯಿಸಿವೆ. ಪ್ರಸ್ತುತ ಪೆಟ್ರೋಲ್, ಗ್ಯಾಸ್ ವಾಹನಗಳನ್ನು ನಿಷೇಧಿಸಿ, 2025ರ ವೇಳೆಗೆ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳನ್ನಾಗಿ ಪರಿವರ್ತಿಸುವುದು ಅವಾಸ್ತವಿಕವಾಗಿದೆ. ಈ ರೀತಿಯ ಕ್ರಮ ಕೈಗೊಳ್ಳಲು ಇದು ಸೂಕ್ತ ಸಮಯವಲ್ಲ. ಇದರಿಂದ ದೇಶದಲ್ಲಿ ವಾಹನ ಉತ್ಪಾದನೆ ಹಳಿ ತಪ್ಪಲಿದೆ ಎಂದು ವಾದಿಸಿವೆ.

    ಸರ್ಕಾರದ ದಿಢೀರ್ ನಿರ್ಧಾರದಿಂದ ಕಂಪನಿಗಳು ಬಿಎಸ್(ಭಾರತ್ ಸ್ಟೇಜ್) 3ಯಿಂದ ಬಿಎಸ್-4ಗೆ ಎಂಜಿನ್‍ಗಳನ್ನು ಅಪ್‍ಗ್ರೇಡ್ ಮಾಡುತ್ತಿವೆ. ಇದೇ ಸಮಯದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವುದು ಹೇಗೆ ಸಾಧ್ಯ? ದರಿಂದ ಉದ್ಯಮದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸುವ ಕುರಿತು ಹೆಚ್ಚು ಜಾಗರೂಕತೆ ಮತ್ತು ವಾಸ್ತವಿಕ ಮಾರ್ಗಸೂಚಿಗಳನ್ನು ತಯಾರಿಸಬೇಕಿದೆ ಎಂದು ಹೀರೋ ಮೋಟೊಕಾರ್ಪ್ ಸರ್ಕಾರದ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದೆ.

    ವಾಹನ ಉದ್ಯಮ ಸಂಸ್ಥೆಗಳಾದ ಎಸ್‍ಐಎಎಂ ಮತ್ತು ಎಸಿಎಂಎಗಳೂ ಸಹ ಈ ಕುರಿತು ಸರ್ಕಾರಕ್ಕೆ ಸಲಹೆ ನೀಡಿದ್ದು, ಎಲೆಕ್ಟ್ರಿಕ್ ವಾಹನಗಳ ತಯಾರಿಕೆಗೆ ಸೂಕ್ತ ಮರ್ಗಸೂಚಿಗಳು ಹಾಗೂ ಪ್ರಾಯೋಗಿಕ ಸಮಯಾವಕಾಶ ನೀಡುವಂತೆ ತಿಳಿಸಿವೆ.

    ಉದ್ಯಮ ಸಂಸ್ಥೆ ಸಿಐಐ ಸಹ ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸುವ ಕುರಿತು ಗುರಿ ಮತ್ತು ಸಮಯದ ಗಡುವನ್ನು ಅಂತಿಮಗೊಳಿಸುವ ಮೊದಲು ಸರ್ಕಾರ ಸೂಕ್ತ ಸಮಾಲೋಚನೆ ನಡೆಸಬೇಕು ಎಂದು ತಿಳಿಸಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ವಿಕಲಚೇತನ ಡೆಲಿವರಿ ಬಾಯ್‍ಗೆ ಝೊಮಾಟೊದಿಂದ ಎಲೆಕ್ಟ್ರಿಕ್ ವಾಹನ ಗಿಫ್ಟ್

    ವಿಕಲಚೇತನ ಡೆಲಿವರಿ ಬಾಯ್‍ಗೆ ಝೊಮಾಟೊದಿಂದ ಎಲೆಕ್ಟ್ರಿಕ್ ವಾಹನ ಗಿಫ್ಟ್

    ನವದೆಹಲಿ: ವಿಕಲಚೇತನ ಝೊಮಾಟೊ ಡೆಲಿವರಿ ಮಾಡುವ ಯುವಕನೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸುದ್ದಿಯಾಗಿದ್ದ. ಮೂರು ಚಕ್ರದ ಸೈಕಲ್‍ನಲ್ಲಿ ಕುಳಿತು ಮನೆ ಮನೆಗೂ ಫುಡ್ ಡೆಲಿವರಿ ಮಾಡುವ ಈತನ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ವಿಡಿಯೋ ವೈರಲ್ ಆದ ಬಳಿಕ ಸಿಬ್ಬಂದಿ ಕೆಲಸಕ್ಕೆ ಮೆಚ್ಚಿದ ಝೊಮಾಟೊ ಕಂಪನಿ ಯುವಕನಿಗೆ ಎಲೆಕ್ಟ್ರಿಕ್ ವಾಹನ ನೀಡಿ ಪ್ರೋತ್ಸಾಹಿಸಿದೆ.

    ಈ ಹಿಂದೆ ಝೊಮಾಟೊ ಡೆಲಿವರಿ ಬಾಯ್ ರಾಮು ಎಲ್ಲೆಡೆ ಫೇಮಸ್ ಆಗಿದ್ದ. ಮೂರು ಚಕ್ರದ ಸೈಕಲಿನಲ್ಲಿ ಕುಳಿತು ಮನೆ ಮನೆಗೂ ಫುಡ್ ಡೆಲಿವರಿ ಮಾಡುವ ಈತನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಕಾಯಕವೇ ಕೈಲಾಸ ಅಂದುಕೊಂಡು ದುಡಿಯುತ್ತಿದ್ದ ರಾಮು ಸ್ವಾಭಿಮಾನಕ್ಕೆ ಮೆಚ್ಚಿದ ಝೊಮಾಟೊ ಕಂಪನಿ ಈತನಿಗೆ ಮೂರು ಚಕ್ರದ ಎಲೆಕ್ಟ್ರಿಕ್ ವಾಹನ ನೀಡಿ ಪುರಸ್ಕರಿಸಿದೆ.

    ಈ ಬಗ್ಗೆ ಝೊಮಾಟೊ ಫುಡ್ ಡೆಲಿವರಿ ಕಂಪೆನಿಯ ಸ್ಥಾಪಕ ಹಾಗೂ ಸಿಇಒ ದೀಪಿಂದರ್ ಗೋಯೆಲ್ ತಮ್ಮ ಟ್ವಿಟ್ಟರ್ ರಾಮುವಿನ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ರಾಮು ಎಲೆಕ್ಟ್ರಿಕ್ ವಾಹನವನ್ನು ಚಲಾಯಿಸುವ ವಿಡಿಯೋ ಹಾಗೂ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. `ನಮ್ಮ ಫುಡ್ ಡೆಲಿವರಿ ಪಾಟ್ರ್ನರ್ ರಾಮು ಸಾಹು ನಾವು ಕೊಟ್ಟ ಎಲೆಕ್ಟ್ರಿಕ್ ವಾಹನವನ್ನು ಸಹೃದಯದಿಂದ ಸ್ವೀಕರಿಸಿದ್ದಾರೆ’ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

    ರಾಮುವಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪ್ರಶಂಸೆಯ ಮಹಾಪೂರ ಹರಿದು ಬಂದಿತ್ತು. ಅಲ್ಲದೇ ಚಿಕ್ಕ ಸಮಸ್ಯೆ ಎದುರಾದರೆ ಕೆಲಸ ಕೈಬಿಡುವ ಜನರಿಗೆ ಈ ಯುವಕನ ಛಲ, ಸ್ವಾಭಿಮಾನ ಮಾದರಿಯಾಗಿದೆ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

    https://twitter.com/tfortitto/status/1129359381319962624

  • ಎಲೆಕ್ಟ್ರಿಕ್ ವಾಹನಗಳಿಗೆ ಯಾವುದೇ ಪರ್ಮಿಟ್ ಇಲ್ಲ: ನಿತಿನ್ ಗಡ್ಕರಿ

    ಎಲೆಕ್ಟ್ರಿಕ್ ವಾಹನಗಳಿಗೆ ಯಾವುದೇ ಪರ್ಮಿಟ್ ಇಲ್ಲ: ನಿತಿನ್ ಗಡ್ಕರಿ

    ನವದೆಹಲಿ: ಎಲೆಕ್ಟ್ರಿಕ್ ಮತ್ತು ಪರ್ಯಾಯ ಇಂಧನಗಳನ್ನು ಬಳಸಿ ಚಾಲನೆಯಾಗುವ ವಾಹನಗಳು ಯಾವುದೇ ಪರ್ಮಿಟ್ ಇಲ್ಲದೇ ರಸ್ತೆಗಿಳಿಯಬಹುದೆಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಪ್ರಾಧಿಕಾರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

    ಭಾರತೀಯ ವಾಹನ ತಯಾರಿಕಾ ಕಂಪನಿಗಳ ಒಕ್ಕೂಟ(ಎಸ್‍ಐಎಎಂ) ವಾರ್ಷಿಕ ಅಧಿವೇಶನದಲ್ಲಿ ಮಾತನಾಡಿದ ಅವರು ಎಲೆಕ್ಟ್ರಿಕ್ ಮತ್ತು ಪರ್ಯಾಯ ಇಂಧನ ಬಳಸಿ ಚಲಿಸುವ ವಾಹನಗಳಿಗೆ ಪ್ರೋತ್ಸಾಹ ನೀಡಲು ಎಲೆಕ್ಟ್ರಿಕಲ್ ವಾಹನ ಸೇರಿದಂತೆ, ಎಥೆನಾಲ್, ಬಯೋ ಡೀಸೆಲ್, ಸಿಎನ್‍ಜಿ ಹಾಗೂ ಬಯೋ ಇಂಧನಗಳ ಮೂಲಕ ಸಾಗುವ ವಾಹನಗಳಿಗೆ ರಸ್ತೆ ರಹದಾರಿಯನ್ನು ಸಂಪೂರ್ಣವಾಗಿ ತೆಗೆದು ಹಾಕಿದ್ದೇವೆ. ಇಂತಹ ವಾಹನಗಳಿಗೆ ಉಚಿತ ಪರ್ಮಿಟ್ ನೀಡುವ ಮೂಲಕ, ಸುಲಭವಾಗಿ ರಸ್ತೆಗಿಳಿಯುವಂತೆ ಮಾಡಲಾಗಿದೆ ಎಂದರು.

    ಆ್ಯಪ್ ಆಧಾರಿತಾ ಟ್ಯಾಕ್ಸಿ ಸೇವೆಗಳಾದ ಊಬರ್ ಹಾಗೂ ಓಲಾಗಳು ತಮ್ಮ ವಾಹನಗಳನ್ನು ಎಲೆಕ್ಟ್ರಿಕ್ ಮಾದರಿಗಳನ್ನು ಬಳಸುವ ಮೂಲಕ ರಸ್ತೆ ತೆರಿಗೆಗಳ ವಿನಾಯಿತಿ ಹೊಂದಬಹುದಾಗಿದೆ ಎಂದು ಈ ವೇಳೆ ಸಲಹೆ ನೀಡಿದರು. ಇದನ್ನೂ ಓದಿ:  2030ರ ವೇಳೆಗೆ ಭಾರತದಲ್ಲಿ ಒಂದೇ ಒಂದು ಪೆಟ್ರೋಲ್, ಡೀಸೆಲ್ ಕಾರು ಮಾರಾಟವಾಗಲ್ಲ

    ವಾಹನ ತಯಾರಿಕಾ ಸಂಸ್ಥೆಗಳು ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯಲ್ಲಿ ಮುಂದೆ ಬರುವುದಕ್ಕಾಗಿ ಈ ನಿರ್ಧಾರನ್ನು ತೆಗೆದುಕೊಳ್ಳಲಾಗಿದೆ. ಅಲ್ಲದೇ ಎಲೆಕ್ಟ್ರಿಕ್ ವಾಹನಗಳಿಗೆ ಮೇಲೆ 12% ಜಿಎಸ್‍ಟಿ ಇದೆ. ಹೀಗಾಗಿ ಮತ್ತೆ ಯಾವುದೇ ಸಬ್ಸಿಡಿ ಅವಶ್ಯಕತೆ ಇರುವುದಿಲ್ಲ ಎಂದು ಯೋಚಿಸಿದ್ದೇನೆ. ಉತ್ತಮ ವಾತಾವರಣವನ್ನು ಕಲ್ಪಿಸುವ ದೃಷ್ಟಿಯಿಂದ ಈಗಾಗಲೇ ನಮ್ಮ ಇಲಾಖೆಯು ಈ ಬಗ್ಗೆ ವರದಿ ಸಿದ್ದಪಡಿಸಿದ್ದು, ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಓಡಾಟ ಜಾಸ್ತಿಯಾಗುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇನ್ನು ಐದು ವರ್ಷದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 30 ರೂ. ಆಗುತ್ತೆ!

    ಕೇಂದ್ರ ಸರ್ಕಾರವು 2015ರಲ್ಲಿ ಜಾರಿಗೆ ತಂದ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ಧಿ ಯೋಜನೆಗೆ ಈ ನಿರ್ಧಾರವು ಸಹಾಯಕವಾಗುತ್ತದೆ. ವಾಹನಗಳ ಮೇಲಿನ ಪರ್ಮಿಟ್ ತೆಗೆದು ಹಾಕಿರುವುದರಿಂದ ವಾಹನ ತಯಾರಿಕಾ ಸಂಸ್ಥೆಗಳ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಗೆ ಒತ್ತು ನೀಡಬೇಕು ಎಂದು ಕೇಳಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಎಲೆಕ್ಟ್ರಿಕ್ ಕಾರ್ ಬಳಸಿದ ಮೊದಲ ದೇವಸ್ಥಾನ ಖ್ಯಾತಿಗೆ ತಿರುಮಲ ಸೇರ್ಪಡೆ

    ಎಲೆಕ್ಟ್ರಿಕ್ ಕಾರ್ ಬಳಸಿದ ಮೊದಲ ದೇವಸ್ಥಾನ ಖ್ಯಾತಿಗೆ ತಿರುಮಲ ಸೇರ್ಪಡೆ

    ವಿಜಯವಾಡ: ತಿರುಮಲ ತಿರುಪತಿ ದೇವಸ್ಥಾನವು ಪ್ರಪಂಚದಲ್ಲೇ ಎಲೆಕ್ಟ್ರಿಕ್ ಕಾರ್ ಬಳಸಿದ ಮೊದಲ ದೇವಸ್ಥಾನ ಎಂದು ಪರಿಗಣಿತವಾಗಿದೆ.

    ದೇವಸ್ಥಾನದ ಸಿಬ್ಬಂದಿಯ ದೈನಂದಿನ ಓಡಾಟಕ್ಕೆ ಎಲೆಕ್ಟ್ರಿಕ್ ಕಾರ್ ಗಳನ್ನು ಬಳಸಲಾಗುತ್ತದೆ. ರಾಜ್ಯ ಸರ್ಕಾರದ ಯೋಜನೆಯ ಭಾಗವಾಗಿ ರಾಜ್ಯ ನಿರ್ವಹಣೆಯ ಇಂಧನ ದಕ್ಷತಾ ಸೇವಾ ಕಂಪೆನಿ(ಇಇಎಸ್‍ಎಲ್)ಯು 350 ಎಲೆಕ್ಟ್ರಿಕ್ ಕಾರುಗಳನ್ನು ಸರ್ಕಾರಕ್ಕೆ ಸರಬರಾಜು ಮಾಡಿದೆ. ಇದರಲ್ಲಿ 50 ಕಾರುಗಳನ್ನು ತಿರುಪತಿ ದೇವಸ್ಥಾನದ ಸಿಬ್ಬಂದಿ ಬಳಕೆಗೆ ಕೊಡಲಾಗುತ್ತದೆ.

    ಎಲೆಕ್ಟ್ರಿಕ್ ವಾಹನಗಳನ್ನು ತಿಂಗಳ ಆಧಾರದ ಮೇಲೆ ಒಪ್ಪಂದದ ಪ್ರಕಾರ ಇಇಎಸ್‍ಎಲ್ ನಿಂದ ಪಡೆಯಲಾಗುತ್ತದೆ. ಮೊದಲಿಗೆ 50 ವಾಹನಗಳನ್ನು ರಾಜ್ಯಾದ್ಯಂತ ಆಯ್ಕೆ ಮಾಡಲಾದ ಜಾಗಗಳಲ್ಲಿ ಬಳಸಲಾಗುತ್ತದೆ. ಪ್ರತಿ ವಾಹನಕ್ಕೆ ತಿಂಗಳಿಗೆ 20 ಸಾವಿರ ರೂಪಾಯಿಗಳನ್ನು ಮತ್ತು ಚಾಲಕ ಹಾಗೂ ವಾಹನದ ನಿರ್ವಹಣೆಗೆ 20 ಸಾವಿರ ರೂಪಾಯಿಗಳನ್ನು ನಿಗಮವು ಪಾವತಿ ಮಾಡುತ್ತದೆ ಎಂದು ಹೊಸ ಮತ್ತು ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಮುಖ್ಯಸ್ಥ ಎಂ ಕಮಲಾಕರ್ ಬಾಬು ತಿಳಿಸಿದ್ದಾರೆ.

    ಬ್ಯಾಟರಿ ಮತ್ತು ಗೇರ್ ಗಳ ಬಗ್ಗೆ ಚಾಲಕರಿಗೆ ತರಬೇತಿಯನ್ನು ನೀಡಲಾಗುತ್ತದೆ. ಪ್ರತಿ ಕಾರಿನ ಬೆಲೆ 11 ಲಕ್ಷ ರೂ. ಆಗಿದ್ದು 6 ವರ್ಷಗಳ ಬಳಿಕ ಕಾರಿನ ಮಾಲೀಕತ್ವವನ್ನು ಸರ್ಕಾರಕ್ಕೆ ವಹಿಸಲಾಗುತ್ತದೆ. ತಿರುಪತಿ ದೇವಸ್ಥಾನ ಅಲ್ಲದೆ ತಿರುಪತಿ ಮುನಿಸಿಪಲ್ ಕಾರ್ಪೊರೇಶನ್, ಗ್ರೇಟರ್ ವಿಶಾಖಪಟ್ಟಣದ ಮುನಿಸಿಪಲ್ ಕಾರ್ಪೊರೇಶನ್ ಹಾಗೂ ಅಮರಾವತಿ ಕಾರ್ಯದರ್ಶಿಗಳ ಕಾರ್ಯಾಲಯದಲ್ಲಿ ಕೂಡ ಎಲೆಕ್ಟ್ರಿಕ್ ವಾಹನಗಳನ್ನು ಬಳಸಲಾಗುತ್ತದೆ.

    ಪ್ರಯಾಣದ ದರ ಒಂದು ಕಿಮೀ ಗೆ 2 ರೂ ಇರಲಿದೆ. ಒಂದು ಬಾರಿ ಚಾರ್ಜ್ ಮಾಡಿದರೆ 120 ಕಿಮೀ ಈ ಕಾರ್ ಚಲಿಸುತ್ತದೆ.