Tag: electricity price

  • ರಾಜ್ಯದ ಜನತೆಗೆ ಕರೆಂಟ್‌ ಶಾಕ್‌ – ಫಿಕ್ಸೆಡ್ ಚಾರ್ಜ್ ದರ 25 ರೂ. ಏರಿಕೆ

    ರಾಜ್ಯದ ಜನತೆಗೆ ಕರೆಂಟ್‌ ಶಾಕ್‌ – ಫಿಕ್ಸೆಡ್ ಚಾರ್ಜ್ ದರ 25 ರೂ. ಏರಿಕೆ

    ಬೆಂಗಳೂರು: ಕಳೆದ ವಾರ ಇಂಧನ ಇಲಾಖೆಯ ಸಿಬ್ಬಂದಿ ಪಿಂಚಣಿ ಗ್ರಾಚ್ಯುಟಿಯನ್ನು ಸರ್ಕಾರ ಪಾವತಿ ಮಾಡದೇ ಇರೋದಕ್ಕೆ ಗ್ರಾಹಕರಿಗೆ 36 ಪೈಸೆಯಂತೆ ಪ್ರತಿ ಯೂನಿಟ್‌ಗೆ ಕೆಇಆರ್‌ಸಿ ದರ ಏರಿಕೆ ಬರೆ ಹಾಕಿತ್ತು. ಇದರ ಬೆನ್ನಲ್ಲೇ ಇಂದು ವಾರ್ಷಿಕ ವಿದ್ಯುತ್ ದರ ಏರಿಕೆ ಆದೇಶ ಹೊರಡಿಸಿದೆ. ವಿದ್ಯುತ್ ಶುಲ್ಕ ಇಳಿಸಿ ನಿಗದಿತ ಶುಲ್ಕ ಏರಿಸಿ ಗ್ರಾಹಕರಿಗೆ ಮತ್ತೊಂದು ಶಾಕ್ ಕೊಟ್ಟಿದೆ. ‌

    ಏನಿದೆ ಆದೇಶದಲ್ಲಿ?
    * ಇದುವರೆಗೆ ಗೃಹಬಳಕೆ ನಿಗದಿತ 120 ರೂ. ಇತ್ತು. ಇನ್ಮುಂದೆ 145 ರೂ.ಗೆ ಜಂಪ್ ಆಗಲಿದೆ. ಅಂದರೆ, 25 ರೂ. ಏರಿಕೆಯಾಗಿದೆ.
    * ಬೃಹತ್ ಕೈಗಾರಿಕೆ ವಾಣಿಜ್ಯ ಉದ್ದೇಶದ ವಿದ್ಯುತ್ ಬಳಕೆಯ ಮೇಲಿದ್ದ ಡಿಮ್ಯಾಂಡ್ ಚಾರ್ಜ್ 340 ರೂ.ನಿಂದ 345 ರೂ.ಗೆ ಏರಿಕೆಯಾಗಿದೆ.
    * ಎಲ್-ಟಿ- ಸಣ್ಣ ಕೈಗಾರಿಕೆಗೆ 140 ರೂ. ಇದ್ದಿದ್ದು -150 ರೂ.ಗೆ ಡಿಮ್ಯಾಂಡ್ ಚಾರ್ಜ್ ಏರಿಕೆಯಾಗಿದೆ.  ಇದನ್ನೂ ಓದಿ: ನಂದಿನಿ ಹಾಲಿನ ದರ 4 ರೂ. ಹೆಚ್ಚಳ – ರೈತರಿಗೆ ಪೂರ್ಣ ಹಣ ವರ್ಗಾವಣೆಗೆ ಕ್ಯಾಬಿನೆಟ್ ತೀರ್ಮಾನ

    ಇಳಿಕೆ ಏನು?
    * ಗೃಹಬಳಕೆಯ ವಿದ್ಯುತ್‌ಗೆ 2025-26ರಲ್ಲಿ 10 ಪೈಸೆ ಹಾಗೂ 2027-28ಕ್ಕೆ 5 ಪೈಸೆ ಕಡಿತ
    *ಹೆಚ್‌ಟಿ ವಾಣಿಜ್ಯದಲ್ಲಿ ಮಾಲ್ ಹಾಗೂ 5ಸ್ಟಾರ್ ಹೋಟೆಲ್‌ಗಳಿಗೆ ಪ್ರತಿ ಯೂನಿಟ್‌ನಲ್ಲಿ 205 ಪೈಸೆಗಳಷ್ಟು ಕಡಿತ
    * ಇವಿ ಚಾರ್ಜಿಂಗ್ ಸ್ಟೇಷನ್‌ಗಳಿಗೆ ಪ್ರತಿ ಯೂನಿಟ್‌ಗೆ 4.50 ರಷ್ಟು ಕಡಿಮೆ ದರದಲ್ಲಿ ಮುಂದುವರಿಕೆ
    ಇದನ್ನೂ ಓದಿ: ಹಾಲಿನ ದರ ಏರಿಕೆ – ಇಂದು ಕ್ಯಾಬಿನೆಟ್‌ನಲ್ಲಿ ತೀರ್ಮಾನ, 2-3 ರೂ. ಹೆಚ್ಚಳ ಸಾಧ್ಯತೆ?

    ಸೋಲಾರ್ ಅಳವಡಿಕೆಗೆ ಪ್ರೋತ್ಸಾಹ
    ಸೋಲಾರ್ ಅಳವಡಿಸಿಕೊಂಡ ಗೃಹಬಳಕೆಯ ಗ್ರಾಹಕರಿಗೆ 10 ಕಿಲೋವ್ಯಾಟ್ ವರೆಗೆ ಅನ್ವಯವಾಗುವಂತೆ ಪ್ರತಿ ಕಿಲೋ ವ್ಯಾಟ್‌ಗೆ 25 ರೂಪಾಯಿ ರಿಯಾಯಿತಿ.

  • ಚುನಾವಣೆ ಹೊತ್ತಲ್ಲೇ ವಿದ್ಯುತ್‌ ದರ ಇಳಿಕೆ

    ಚುನಾವಣೆ ಹೊತ್ತಲ್ಲೇ ವಿದ್ಯುತ್‌ ದರ ಇಳಿಕೆ

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಗ್ರಾಹಕರಿಗೆ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಬೆಸ್ಕಾಂ (Bescom), ಮೆಸ್ಕಾಂ (Mescom) ವ್ಯಾಪ್ತಿಯಲ್ಲಿ ವಿದ್ಯುತ್‌ ದರ (Electricity Price) ಇಳಿಕೆ ಮಾಡಿ ಸರ್ಕಾರ (Karnataka Government) ಆದೇಶ ಹೊರಡಿಸಿದೆ.

    ಈ ಕುರಿತು ಟ್ವೀಟ್‌ ಮಾಡಿರುವ ಇಂಧನ ಸಚಿವ ಸುನಿಲ್‌ ಕುಮಾರ್‌ (Sunil Kumar) ಅವರು, ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಪಂಚಮಸಾಲಿ ಸಮಾಜಕ್ಕೆ 2D ಮೀಸಲಾತಿ – ಸಂಪುಟ ಸಭೆಯಲ್ಲಿ ನಿರ್ಧಾರ

    ಬೆಸ್ಕಾಂ ವ್ಯಾಪ್ತಿಯಲ್ಲಿ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ ಎಂದು ಟ್ವೀಟ್‌ ಮಾಡಿ ತಿಳಿಸಿದ್ದಾರೆ.

    ಇತ್ತೀಚೆಗಷ್ಟೇ ಇಂಧನ ಹೊಂದಾಣಿಕೆಯ ಶುಲ್ಕವನ್ನು ಪರಿಸ್ಕರಿಸಿ ಆದೇಶ ಹೊರಡಿಸಲಾಗಿತ್ತು. ಇದರಿಂದ ವಿದ್ಯುತ್‌ ದರ ಏರಿಕೆಯಾಗಿ ಗ್ರಾಹಕರಿಗೆ ಹೊರೆಯಾಗಿತ್ತು. ಈ ವೇಳೆ ಸರ್ಕಾರದ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದರು. ಇದನ್ನೂ ಓದಿ: ಕಳಸಾ ಬಂಡೂರಿ ಯೋಜನೆಗೆ ಗ್ರೀನ್ ಸಿಗ್ನಲ್ – ಡಿಪಿಆರ್ ಚುನಾವಣೆಗೆ ಮಾತ್ರ ಮೀಸಲಾಗಬಾರದು: ರೈತರ ಆಗ್ರಹ

    ಈಗ ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಇದರಿಂದ ವಿದ್ಯುತ್‌ ದರ ಇಳಿಕೆ ಆಗಲಿದೆ.

    Live Tv
    [brid partner=56869869 player=32851 video=960834 autoplay=true]

  • ವಿದ್ಯುತ್ ದರ ಏರಿಕೆ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ

    ವಿದ್ಯುತ್ ದರ ಏರಿಕೆ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ

    ಧಾರವಾಡ: ಪೇಡಾ ನಗರಿಯಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ಎಸ್‍ಯುಸಿಐ ಸಂಘಟನೆ ಕಾರ್ಯಕರ್ತರು ಧಾರವಾಡದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

    ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆ ಜೊತೆಗೆ ಅಗತ್ಯ ವಸ್ತುಗಳ ಬೆಲೆ ಕೂಡ ಏರಿಕೆಯಾಗುತ್ತಿದ್ದು, ಇದೀಗ ಸರ್ಕಾರ ವಿದ್ಯುತ್ ದರವನ್ನೂ ಏರಿಕೆ ಮಾಡಿ ಬಡವರಿಗೆ ಗಾಯದ ಮೇಲೆ ಬರೆ ಎಳೆದಿದೆ ಎಂದು ಆರೋಪಿಸಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ವಿಗ್ರಹ ಮಾಡೋದು ಹರಾಮ್, ಆದ್ರೇ ಜೀವನೋಪಾಯಕ್ಕೆ ಅದು ಅನಿವಾರ್ಯ: ಉಮರ್ ಷರೀಫ್

    ಕೇಂದ್ರದ ಪ್ರಧಾನಿ ಮೋದಿ ಸರ್ಕಾರ ಬೆಲೆ ಏರಿಕೆ ನೀತಿಯನ್ನು ಅನುಸರಿಸಿ ಬಡವರಿಗೆ ನಿತ್ಯ ತೊಂದರೆ ಕೊಡುತ್ತಿದೆ. ತೈಲ ಬೆಲೆ ಏರಿಕೆಯಿಂದಾಗಿ ಮಧ್ಯಮ ವರ್ಗದ ಜನ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಬಡವರು ಕಂಗಾಲಾಗಿದ್ದಾರೆ. ಇದನ್ನೂ ಓದಿ: ಹಲಾಲ್‌ ಆಯ್ತು ಈಗ ಮುಸ್ಲಿಮರು ಕೆತ್ತನೆ ಮಾಡಿದ ವಿಗ್ರಹ ಪ್ರತಿಷ್ಠಾಪಿಸದಂತೆ ಅಭಿಯಾನ

    ಇದೀಗ ಗಾಯದ ಮೇಲೆ ಬರೆ ಎಂಬಂತೆ ವಿದ್ಯುತ್ ದರವನ್ನು ಸರ್ಕಾರ ಹೆಚ್ಚಳ ಮಾಡಿದೆ. ಕೂಡಲೇ ಸರ್ಕಾರ ಬೆಲೆ ಏರಿಕೆ ನೀತಿಯನ್ನು ಕೈ ಬಿಟ್ಟು ಬಡವರ ಹಿತ ಕಾಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.