Tag: Elephant attacks

  • ಕೊಡಗಿನಲ್ಲಿ ಮತ್ತೆ ಕಾಡಾನೆಗಳ ಹಾವಳಿ – ರೈತರು ಕಂಗಾಲು

    ಕೊಡಗಿನಲ್ಲಿ ಮತ್ತೆ ಕಾಡಾನೆಗಳ ಹಾವಳಿ – ರೈತರು ಕಂಗಾಲು

    ಮಡಿಕೇರಿ: ಕೊಡಗಿನಲ್ಲಿ ಕಾಡಾನೆ ಹಾವಳಿ ಮತ್ತೆ ಹೆಚ್ಚಾಗಿದ್ದು, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕಿನ ಬಹುತೇಕ ಪ್ರದೇಶದಲ್ಲಿ ಆನೆ-ಮಾನವನ ಸಂಘರ್ಷ ಸಾಮಾನ್ಯ ಎಂಬಂತಾಗಿದೆ.

    ಜಿಲ್ಲೆಯ ಜನತೆಗೆ ವರ್ಷದ ಆಹಾರ ನೀಡುವ ಕಾಫಿ ಮತ್ತು ಭತ್ತದ ಕೊಯ್ಲಿನ ಸಂದರ್ಭದಲ್ಲಿ ಹಾಡಹಗಲೇ ಜನವಸತಿ ಪ್ರದೇಶಗಳಿಗೆ ಕಾಡಾನೆಗಳು ಲಗ್ಗೆ ಇಡುತ್ತಿರುವುದು ಸ್ಥಳೀಯರನ್ನು ಭೀತಿಗೊಳಿಸಿದೆ. ಆನೆಗಳ ಹೆದರಿಕೆಯಿಂದ ಕಾರ್ಮಿಕರು ಕೆಲಸಕ್ಕೆ ಬರಲೂ ಹಿಂದೇಟು ಹಾಕುತ್ತಿದ್ದಾರೆ. ಕಳೆದ 10 ವರ್ಷಗಳಲ್ಲಿ ಆನೆ ದಾಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ 77 ಜನ ಮೃತಪಟ್ಟಿರುವುದು ಆತಂಕ ಹುಟ್ಟಿಸಿದೆ.

    ಜಿಲ್ಲೆಯಾದ್ಯಂತ ಈಗ ಅರೆಬಿಕಾ ಕಾಫಿ ಕೊಯ್ಲು ಸೀಸನ್ ಶುರುವಾಗಿದೆ. ಅತಿವೃಷ್ಟಿ ಮಧ್ಯೆಯೂ ಉಳಿದುಕೊಂಡಿರುವ ಕಾಫಿಯನ್ನು ಕೊಯ್ಲು ಮಾಡಲೇಬೇಕಾದ ಅನಿವಾರ್ಯತೆಯಲ್ಲಿ ಬೆಳೆಗಾರರು ಇದ್ದಾರೆ. ಹಣ್ಣಾದ ಕಾಫಿಯನ್ನು ಸಮಯಕ್ಕೆ ಸರಿಯಾಗಿ ಕೀಳದಿದ್ದರೆ ನೆಲಕ್ಕೆ ಬಿದ್ದು ಹಾಳಾಗುತ್ತದೆ. ವರ್ಷದ ದುಡಿಮೆಯೂ ಕೈ ತಪ್ಪುತ್ತದೆ. ಬಹುತೇಕ ಪ್ರದೇಶಗಳಲ್ಲಿ ಭತ್ತ ಕಟಾವು ಕಾರ್ಯವೂ ನಡೆಯುತ್ತಿದೆ. ಅಕ್ಕಿ ಜಿಲ್ಲೆಯ ಪ್ರಮುಖ ಆಹಾರ ಬೆಳೆಯೂ ಆಗಿರುವುದರಿಂದ ಕಟಾವು ಕಾರ್ಯ ಆಗಲೇಬೇಕಿದೆ. ಇಂತಹ ಪರಿಸ್ಥಿತಿಯಲ್ಲಿ ಈಗ ಶುರುವಾಗಿರುವ ಕಾಡಾನೆ ಹಾವಳಿ ರೈತರನ್ನು ಕಂಗೆಡೆಸಿದೆ.

  • ಸೊಂಡಿಲಿನಿಂದ ತಿವಿದು ಕಾಡಾನೆ ದಾಳಿ, ಅದೃಷ್ಟವಶಾತ್ ಬದುಕುಳಿದ ವ್ಯಕ್ತಿ: ವಿಡಿಯೋ ನೋಡಿ

    ಸೊಂಡಿಲಿನಿಂದ ತಿವಿದು ಕಾಡಾನೆ ದಾಳಿ, ಅದೃಷ್ಟವಶಾತ್ ಬದುಕುಳಿದ ವ್ಯಕ್ತಿ: ವಿಡಿಯೋ ನೋಡಿ

    ಚೆನ್ನೈ: ಕಾಡಾನೆಯೊಂದು ಏಕಾಏಕಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಗಾಯಗೊಳಿಸಿದ ಘಟನೆ ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ನಡೆದಿದೆ.

    ನೀಲಗಿರಿ ಜಿಲ್ಲೆಯ ಕೋಲಕೊಂಬೈ ಪ್ರದೇಶದ ಕಾಲೋನಿಯೊಂದಕ್ಕೆ ಕಾಡಾನೆ ನುಗ್ಗಿತ್ತು. ಈ ವೇಳೆ ಚೀಲವನ್ನು ಹೊತ್ತು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ಓಡಿ ಬಂದು ದಾಳಿ ಮಾಡಿದೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

    ಆನೆ ದಾಳಿ ಮಾಡಿದ ದೃಶ್ಯವು ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾನವ ಹಾಗೂ ಆನೆ ಸಂಘರ್ಷವನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

    ವಿಡಿಯೋದಲ್ಲಿ ಏನಿದೆ?:
    ವ್ಯಕ್ತಿಯೊಬ್ಬರು ರಸ್ತೆ ಮಧ್ಯದಲ್ಲಿ ಚೀಲ ಹೊತ್ತುಕೊಂಡು ಹೋಗುತ್ತಿರುತ್ತಾರೆ. ಈ ವೇಳೆ ತಿರುಗಿ ನೋಡುತ್ತಿದ್ದಂತೆ ಕಾಡಾನೆ ಕಾಣಿಸುತ್ತದೆ. ಇದರಿಂದ ಗಾಬರಿಗೊಂಡ ಅವರು ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಆದರೆ ಅವರ ಎದುರಿಗೆ ಕಾಂಪೌಂಡ್ ಇರುವುದರಿಂದ ಆನೆಯ ದಾಳಿಗೆ ಗುರಿಯಾಗುತ್ತಾರೆ. ಸೊಂಡಿಲಿನಿಂದ ತಿವಿದು ಹಲ್ಲೆ ಮಾಡಿ ಅಲ್ಲಿಂದ ಮುಂದೆ ಹೋಗಿದೆ.

    ಇತ್ತೀಚೆಗಷ್ಟೇ ಕಾಡಾನೆಯೊಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಳಲಿ ಗ್ರಾಮಕ್ಕೆ ನುಗ್ಗಿತ್ತು. ಇದರಿಂದಾಗಿ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.