Tag: Elephant Camp

  • ಮೂರು ಜಿಲ್ಲೆಗಳ ಕಾಡಾನೆ ಹಾವಳಿ ತಡೆಗೆ ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ: ಈಶ್ವರ್ ಖಂಡ್ರೆ

    ಮೂರು ಜಿಲ್ಲೆಗಳ ಕಾಡಾನೆ ಹಾವಳಿ ತಡೆಗೆ ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ: ಈಶ್ವರ್ ಖಂಡ್ರೆ

    ಶಿವಮೊಗ್ಗ: ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗದ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ (Bhadra Sanctuary) ಆನೆ ಶಿಬಿರ (Elephant Camp) ಸ್ಥಾಪಿಸುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwara Khandre) ಘೋಷಿಸಿದ್ದಾರೆ.

    ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆದ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ರಜತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಈ ವೇಳೆ ರಾಜ್ಯದಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷ ಹೆಚ್ಚಾಗುತ್ತಿದೆ. ಆನೆಗಳಿಂದ ಹೆಚ್ಚಿನ ಜೀವಹಾನಿ ಮತ್ತು ಬೆಳೆ ಹಾನಿ ಸಂಭವಿಸುತ್ತಿದೆ. ಇದನ್ನು ನಿಯಂತ್ರಿಸಲು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆ ವಿಹಾರಧಾಮ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ವನ್ಯಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ನಾವು ದಾಳಿ ಮಾಡುವ ಮೊದಲೇ ಅಪರಾಧ ಕೃತ್ಯಗಳನ್ನ ಬಿಟ್ಟುಬಿಡಿ: ರೌಡಿಗಳಿಗೆ ಎಸ್ಪಿ ಖಡಕ್ ವಾರ್ನಿಂಗ್

    ಈ ಆನೆ ವಿಹಾರಧಾಮದ ಸುಮಾರು 5 ಸಾವಿರ ಎಕರೆ ಪ್ರದೇಶದಲ್ಲಿ ಆನೆಗಳಿಗೆ ಇಷ್ಟವಾದ ಬಿದಿರು, ಹಲಸು, ಹುಲ್ಲು ಇತ್ಯಾದಿ ಸಸ್ಯಗಳನ್ನು ಬೆಳೆಸಲಾಗುವುದು. ಇದರ ಸುತ್ತಲೂ ಬ್ಯಾರಿಕೇಡ್ ಅಳವಡಿಸಿ ಸೆರೆ ಹಿಡಿದ ಆನೆಗಳನ್ನು ಇಲ್ಲಿ ತಂದು ಬಿಡಲಾಗುವುದು. ಇದರಿಂದ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಿನ ಹೊರಗೆ ಇರುವ ಆನೆಗಳಿಂದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಲಿದೆ ಎಂದಿದ್ದಾರೆ.

    ಕಾರ್ಯಕ್ರಮದಲ್ಲಿ ರೈತರನ್ನು ಒಕ್ಕಲೆಬ್ಬಿಸದಂತೆ ಸಚಿವರಿಗೆ ರೈತರಿಂದ ಮನವಿ ಸಲ್ಲಿಸಲಾಯಿತು. ಇದರೊಂದಿಗೆ ಕಾಡಾನೆ ದಾಳಿಗೆ ಸಾವನ್ನಪ್ಪಿರುವ ವ್ಯಕ್ತಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು. ಕಾಡಾನೆಯಿಂದ ಆಗುವ ಬೆಳೆ ನಷ್ಟಕ್ಕೆ ಪರಿಹಾರ ಕೊಡಬೇಕು. ಕಾಡಾನೆಗಳನ್ನು ಗ್ರಾಮಗಳಿಗೆ, ರೈತರ ಜಮೀನಿಗೆ ಬರದಂತೆ ತಡೆಯಲು ಕ್ರಮವಹಿಸಬೇಕು ಎಂದು ರೈತರು ಮನವಿ ಮಾಡಿದರು. ಇದನ್ನೂ ಓದಿ: ಬೆಂಗ್ಳೂರಿನ ಮೂರು ಕಾಲೇಜುಗಳಿಗೆ ಬಾಂಬ್ ಬೆದರಿಕೆ – ಪೊಲೀಸರಿಂದ ತೀವ್ರ ಶೋಧ

  • ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಣ್ಯ ಇಲಾಖೆ ಭರದ ಸಿದ್ಧತೆ – 18 ಆನೆಗಳು ಗುರುತು

    ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಣ್ಯ ಇಲಾಖೆ ಭರದ ಸಿದ್ಧತೆ – 18 ಆನೆಗಳು ಗುರುತು

    ಮಡಿಕೇರಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2024ಕ್ಕೆ (Mysuru Dasara 2024) ಅರಣ್ಯ ಇಲಾಖೆಯ ಸಿದ್ಧತೆ ಭರದಿಂದ ಸಾಗುತ್ತಿದೆ. ದಸರಾ ಗಜಪಡೆ ಆಯ್ಕೆ ಪ್ರಕ್ರಿಯೆಯಲ್ಲಿ ಅರಣ್ಯ ಇಲಾಖೆ (Forest Department) ನಿರತವಾಗಿದ್ದು, ದಸರಾ ಮಹೋತ್ಸವದ ಕೇಂದ್ರ ಬಿಂದುವಾಗಿ 18 ಆನೆಗಳನ್ನ (Elephant) ಗುರುತಿಸಲಾಗಿದೆ ಅಂತ ಸಂಬಂಧಪಟ್ಟ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

    ದಸರಾ ಮಹೋತ್ಸವದ 2 ತಿಂಗಳ ಮುಂಚಿತವಾಗಿ ಗಜಪಡೆ (Gajapade) ಮೈಸೂರಿಗೆ ಆಗಮಿಸಲಿದೆ. ಆಗಸ್ಟ್ 9 ಅಥವಾ 11ಕ್ಕೆ ಗಜಪಯಣಕ್ಕೆ ಚಾಲನೆ ನೀಡಲು ಚಿಂತನೆ ನಡೆಸಲಾಗಿದೆ. ಸಾಕಾನೆಗಳ ಅಯ್ಕೆಯಾದ ಹಿನ್ನೆಲೆಯಲ್ಲಿ ದುಬಾರೆ ಶಿಬಿರದ ಮಾವುತರು ಹಾಗೂ ಕವಾಡಿಗಳು ಚಾಮುಂಡೇಶ್ವರಿ ತಾಯಿ ಸೇವೆ ಮಾಡಲು ಕಾತರದಿಂದ ಕಾಯುತ್ತಿದ್ದಾರೆ. ಇದನ್ನೂ ಓದಿ: ಮುಡಾ ಅಕ್ರಮ ಕೇಸ್‌: ಚರ್ಚೆಗೆ ಅವಕಾಶ ಇಲ್ಲವೆಂದು ಸ್ಪೀಕರ್ ರೂಲಿಂಗ್ – ವಿಧಾನಸಭೆಯಲ್ಲಿ ಗದ್ದಲ, ಮಾತಿನ ಚಕಮಕಿ

    ನಾಡಹಬ್ಬ ದಸರೆಯ ಜಂಬೂ ಸವಾರಿಯಲ್ಲಿ ಭಾಗವಹಿಸುವ ಆನೆಗಳ ಆಯ್ಕೆ ಪ್ರಕ್ರಿಯೆಯನ್ನು ಅರಣ್ಯ ಇಲಾಖೆ ಪೂರ್ಣಗೊಳಿಸಿದ್ದು, ಕೊಡಗು ಜಿಲ್ಲೆಯ ದುಬಾರೆ ಸಾಕಾನೆ ಶಿಬಿರದ 5 ಕಾಡಾನೆಗಳು ಆಯ್ಕೆಯಾಗಿವೆ. ಧನಂಜಯ, ಗೋಪಿ, ಕಂಜನ್, ಸುಗ್ರೀವ ಮತ್ತು ಪ್ರಶಾಂತ್ ಆನೆಗಳು ಆಯ್ಕೆಯಾಗಿವೆ. ಆನೆಗಳ ಆಯ್ಕೆಗೆ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ಇಲಾಖೆಯ ತಜ್ಞರ ತಂಡ ಮೈಸೂರು, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಆನೆಯ ಶಿಬಿರಗಳಿಗೆ ತೆರಳಿ ಅವುಗಳ ಆರೋಗ್ಯ ಮತ್ತು ಕಾರ್ಯಕ್ಷಮತೆಯನ್ನು ಗಮನಿಸಿ ಆಯ್ಕೆ ಪ್ರಕ್ರಿಯೆ ಮಾಡಿದೆ. ಆದರೆ ಈ ಪಟ್ಟಿಯನ್ನು ಮೇಲಾಧಿಕಾರಿಗಳ ಒಪ್ಪಿಗೆಯ ನಂತರ ಆನೆಗಳ ಅಂತಿಮ ಪಟ್ಟಿ ಆಯಾ ಶಿಬಿರ ವ್ಯಾಪ್ತಿಯ ಅರಣ್ಯಾಧಿಕಾರಿಗಳಿಗೆ ಕಳುಹಿಸಲು ಇಲಾಖೆ ನಿರ್ಧರಿಸಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

    ಇನ್ನೂ ಈ ಬಾರಿ ಆನೆಗಳಿಗೆ ಹೆಚ್ಚಿನ ತರಬೇತಿ ನೀಡಲು ಇಲಾಖೆ ನಿರ್ಧರಿಸಿದೆ. ಹೀಗಾಗಿ 60 ದಿನಗಳ ಮುಂಚಿತವಾಗಿ ಆನೆಗಳನ್ನು ಕರೆತರಲು ಗಜಪಯಣ ಆಗಸ್ಟ್ 2ನೇ ವಾರದಲ್ಲಿ ಮೈಸೂರಿನತ್ತ ಹೊರಡಲಿದೆ. ಇದನ್ನೂ ಓದಿ: ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ನೆರವಾಗುವ ಸ್ಕೈಡೆಕ್ ಪ್ಲಾಟ್ ಫಾರ್ಮ್ ಪರಿಚಯಿಸಿದ ಆಸ್ಟರಿಯಾ

    ಜೊತೆಗೆ ಎರಡು ಹಂತದಲ್ಲಿ ಗಜಪಯಣ ಸಾಗಲಿದೆ. ಒಂದೆಡೆ ಈಗಾಗಲೇ ಆನೆಗಳ ಆಯ್ಕೆ ಪ್ರಕ್ರಿಯೆ ಮುಗಿದಿದ್ದರೆ ಮತ್ತೊಂದೆಡೆ ದಸರಾಕ್ಕೆ ತೆರಳುವ ಖುಷಿಯಲ್ಲಿ ಆನೆ ಆಯ್ಕೆಯಾಗುವ ಮಾವುತರು ಇದ್ದಾರೆ. ಹಲವು ಬಾರಿ ಪಟ್ಟದ ಆನೆಯಾಗಿ ಕಾರ್ಯ ನಿರ್ವಹಿಸಿರುವ ಧನಂಜಯ ಆನೆಯ ಮಾವುತ ಭಾಸ್ಕರ್ ತೀವ್ರ ಸಂತಸ ವ್ಯಕ್ತಪಡಿಸಿದ್ದು ದಸರಾಕ್ಕೆ ತೆರಳಿ ಅಲ್ಲಿ ತಾಯಿ ಚಾಮುಂಡೇಶ್ವರಿ ಸೇವೆ ಮಾಡುವುದೇ ದೊಡ್ಡ ಸೌಭಾಗ್ಯ. ಅದಕ್ಕಾಗಿ ಕಾತರರಾಗಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಒಲಿಂಪಿಕ್ಸ್‌ ಕ್ರೀಡಾಕೂಟ ವೀಕ್ಷಣೆಗೆ ಬಂದಿದ್ದ ಆಸ್ಟ್ರೇಲಿಯಾ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌!

  • ಕೊಡಗಿನಲ್ಲಿ 3ನೇ ಸಾಕಾನೆ ಶಿಬಿರ ಲೋಕಾರ್ಪಣೆ – ಹಾರಂಗಿ ವಿಶೇಷತೆ ಏನು?

    ಕೊಡಗಿನಲ್ಲಿ 3ನೇ ಸಾಕಾನೆ ಶಿಬಿರ ಲೋಕಾರ್ಪಣೆ – ಹಾರಂಗಿ ವಿಶೇಷತೆ ಏನು?

    ಮಡಿಕೇರಿ: ಪ್ರವಾಸಿಗರ ಸ್ವರ್ಗ, ಹಚ್ಚ ಹಸಿರ ಬೆಟ್ಟ ಗುಡ್ಡಗಳ ಸುಂದರ ಪ್ರಕೃತಿಯ ತವರು ಕೊಡಗಿನಲ್ಲಿ(Kodagu) ಮೂರನೇ ಸಾಕಾನೆ ಶಿಬಿರ(Elephant Camp)ಲೋಕಾರ್ಪಣೆಗೊಂಡಿದೆ.

    ಜಿಲ್ಲೆಯಲ್ಲಿ ಇಲ್ಲಿಯವರೆಗೆ ದುಬಾರೆ ಹಾಗೂ ಮತ್ತಿಗೋಡಿನಲ್ಲಿ ಸಾಕಾನೆ ಶಿಬಿರಗಳಿದ್ದವು. ಈ ಸಾಲಿಗೆ ಈಗ ಹಾರಂಗಿ(Harangi) ಸಾಕಾನೆ ಶಿಬಿರವೂ ಸೇರ್ಪಡೆಗೊಂಡಿದೆ.

    ದುಬಾರೆ ಸಾಕಾನೆ ಶಿಬಿರದಲ್ಲಿ(Dubare Elephant Camp) ಬರೋಬ್ಬರಿ 32 ಸಾಕಾನೆಗಳಿತ್ತು. ಆದರೆ ಇಷ್ಟೊಂದು ಆನೆಗಳ ಒತ್ತಡ ತಡೆದುಕೊಳ್ಳಲು ಆ ಶಿಬಿರಕ್ಕೆ ಸಾಧ್ಯವಾಗುತ್ತಿರಲಿಲ್ಲ. ಅಷ್ಟೇ ಅಲ್ಲದೇ ಸಾಕಾನೆ ಶಿಬಿರದಲ್ಲಿ ಇಂತಿಷ್ಟೇ ಆನೆಗಳಿರಬೇಕು ಎಂಬ ಸುಪ್ರಿಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸ ಸಾಕಾನೆ‌ ಶಿಬಿರವನ್ನು ತೆರೆಯಲಾಗಿದೆ. ಈಗಾಗಲೇ ದುಬಾರೆಯಿಂದ 7 ಸಾಕಾನೆಗಳನ್ನು ಶಿಫ್ಟ್ ಮಾಡಲಾಗಿದೆ.

    ಮತ್ತಿಗೋಡು, ದುಬಾರೆ ಸಾಕಾನೆ ಶಿಬಿರಗಳಿಗಿಂತ ವಿಭಿನ್ನವಾಗಿದೆ ಈ ಹಾರಂಗಿ ಸಾಕಾನೆ ಶಿಬಿರ. ಈ ಸಾಕಾನೆ ಶಿಬಿರ ಹಾರಂಗಿ ಜಲಾಶಯದ ಹಿನ್ನೀರಿನ ಸುಂದರ ಪ್ರಕೃತಿಯ ಮಡಿಲಲ್ಲಿ ಇರುವುದು ವಿಶೇಷ. ಸುಮಾರು 2 ಸಾವಿರ ಎಕ್ರೆ ವಿಶಾಲವಾದ ಅರಣ್ಯ ಪ್ರದೇಶದಲ್ಲಿ ಈ ಶಿಬಿರವನ್ನು ತೆರೆಯಲಾಗಿದೆ. ಇದನ್ನೂ ಓದಿ: ಅಂದು ಬ್ರಿಟಿಷರ ತರಕಾರಿ ತೋಟ, ಇಂದು ವಿಶ್ವ ಪ್ರಸಿದ್ಧ ಪ್ರವಾಸಿ ಗಾರ್ಡನ್‌

     

    ಹಿನ್ನೀರು ಪ್ರದೇಶದಲ್ಲಿ ಆನೆಗಳ ಮಜ್ಜನ, ಆನೆಗಳ ಆಹಾರ, ಆನೆ ಸವಾರಿ ಮೊದಲಾದ ಚಟುವಟಿಕೆಗಳಿವೆ. ಶಿಬಿರದಲ್ಲಿ ಬಗೆ ಬಗೆಯ ಮರಗಳ ವೃಕ್ಷೋಧ್ಯಾನ ತಲೆ ಎತ್ತುತ್ತಿದೆ. ಜೊತೆಗೆ ಮಕ್ಕಳಿಗೆ ಆಡವಾಡಲು ಪ್ರತ್ಯೇಕ ಆಟದ ಸ್ಥಳಾವಕಾಶವಿದೆ. ಅಷ್ಟೇ ಅಲ್ಲದೇ ಬೋಟಿಂಗ್ ಅನುಭವ ಕೂಡ ಇಲ್ಲಿ ಸಿಗಲಿದೆ.

    ಜಲಾಶಯದ ಹಿನ್ನೀರು ಪ್ರದೇಶದಲ್ಲಿ ಕುಳಿತು ಸೂರ್ಯಾಸ್ತಮಾನದ ದೃಶ್ಯವನ್ನು ಕಣ್ತುಂಬಿಕೊಳ್ಳಬಹುದು. ಈ ನೂತನ ಶಿಬಿರದಿಂದ ಸ್ಥಳೀಯ ವ್ಯಾಪಾರ ಉದ್ಯಮಕ್ಕೂ ಪುನಶ್ಚೇತನ ಸಿಗಲಿದೆ. ಕೊಡಗು ಪ್ರವಾಸೋದ್ಯಮಕ್ಕೆ(Kodagu Tourism) ಮತ್ತೊಂದು ಗರಿ ಎಂಬಂತೆ ಸೇರ್ಪಡೆಯಾಗಿರುವ ಹಾರಂಗಿ ಸಾಕಾನೆ ಶಿಬಿರ ಮತ್ತಷ್ಟು ಪ್ರವಾಸಿಗರನ್ನು ಆಕರ್ಷಿಸುವುದರಲ್ಲಿ ಎರಡು ಮಾತಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಉತ್ತರಪ್ರದೇಶ ಪ್ರವಾಸೋದ್ಯಮಕ್ಕೆ ಶಿವಮೊಗ್ಗದ ಸಕ್ರೆಬೈಲಿನಿಂದ ಹೋಗುತ್ತೆ 5 ಆನೆಗಳು

    ಉತ್ತರಪ್ರದೇಶ ಪ್ರವಾಸೋದ್ಯಮಕ್ಕೆ ಶಿವಮೊಗ್ಗದ ಸಕ್ರೆಬೈಲಿನಿಂದ ಹೋಗುತ್ತೆ 5 ಆನೆಗಳು

    ಶಿವಮೊಗ್ಗ: ಸಕ್ರೆಬೈಲು ಆನೆ ಬಿಡಾರದಲ್ಲಿ ಈಗ ಶೋಕಛಾಯೆ ವ್ಯಕ್ತವಾಗಿದೆ. ಕಳೆದ ತಿಂಗಳು ಕಾಡಾನೆ ದಾಳಿಯಲ್ಲಿ ಬಿಡಾರದ ಹಿರಿಯಾನೆ ಟಸ್ಕರ್ ಮೃತಪಟ್ಟಿತ್ತು. ಈ ದು:ಖ ಮರೆಯಾಗುವ ಮುನ್ನವೇ ಇಲ್ಲಿಂದ ವಿವಿಧ ವಯೋಮಾನದ ಐದು ಆನೆಗಳನ್ನು ಉತ್ತರ ಪ್ರದೇಶ ರಾಜ್ಯಕ್ಕೆ ಕಳುಹಿಸಲು ಸಿದ್ಧತೆ ನಡೆದಿದೆ.

    ಶಿವಮೊಗ್ಗ ಸಮೀಪ ಇರುವ ಸಕ್ರೆಬೈಲು ಆನೆ ಬಿಡಾರದಲ್ಲಿನ ಆನೆಗಳನ್ನು ಉತ್ತರ ಪ್ರದೇಶದ ಪ್ರವಾಸೋದ್ಯಮ ಅಭಿವೃದ್ಧಿಗೆ ಕಳಿಸಲಾಗುತ್ತಿದೆ. ಪ್ರವಾಸಿಗರ ಆಕರ್ಷಣೆಯಾಗಿರುವುದು ಬಿಡಾರದಲ್ಲಿನ 22 ಆನೆಗಳಿದ್ದು, ಇವುಗಳಲ್ಲಿ ಈಗ ಉತ್ತರ ಪ್ರದೇಶಕ್ಕೆ ಕೊಡಲು ಐದು ಆನೆಗಳನ್ನು ಗುರುತಿಸಲಾಗಿದೆ. ರಾಜ್ಯದಿಂದ ಐದು ಆನೆಗಳನ್ನು ಒಟ್ಟಿಗೆ ಬೇರೆ ರಾಜ್ಯಕ್ಕೆ ಕೊಡುಗೆಯಾಗಿ ಕೊಡುತ್ತಿರುವುದು ಇದೇ ಮೊದಲಾಗಿದೆ.

    ಒಂದೂವರೆ ವರ್ಷದ ಪಾರ್ವತಿ, ನಾಲ್ಕು ವರ್ಷದ ಕಿರಣ, ಐದು ವರ್ಷದ ಭಾಸ್ಕರ, ಹದಿಮೂರು ವರ್ಷದ ಅಮೃತಾ, ಮೂವತ್ತು ವರ್ಷದ ರಾಘವೇಂದ್ರ ಈಗ ಉತ್ತರ ಪ್ರದೇಶಕ್ಕೆ ಹೊರಡಲಿರುವ ಆನೆಗಳು. ಈ ಆನೆಗಳನ್ನು ಪ್ರದೇಶದ ದುದ್ವಾ ರಾಷ್ಟ್ರೀಯ ಅಭಯಾರಣ್ಯದಲ್ಲಿ ಸಫಾರಿಗಾಗಿ ಬಳಸಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ.

    ಈ ಐದು ಆನೆಗಳಿಗೆ ಹೊಂದಿಕೊಳ್ಳಲು ಉತ್ತರ ಪ್ರದೇಶದ ಮಾವುತರು ಇಲ್ಲಿಗೆ ಬಂದು ತರಬೇತಿ ಪಡೆಯಲಿದ್ದಾರೆ. ನಂತರ ನವೆಂಬರ್ ಮೊದಲ ವಾರದಲ್ಲಿ ಈ ಆನೆಗಳನ್ನು ಸಾಗಿಸಲಾಗುವುದು. ಇಲ್ಲಿಂದ ಕೆಲ ಮಾವುತರು ಅಲ್ಲಿಗೆ ತೆರಳಿ ಆನೆಗಳು ಹೊಂದಿಕೊಂಡ ನಂತರ ಹಿಂತಿರುಗಲಿದ್ದಾರೆಂದು ವನ್ಯಜೀವಿ ವಿಭಾಗ ಇಲಾಖೆ ಅರಣ್ಯಾಧಿಕಾರಿ ಮುಕುಂದ್ ರಾಜ್ ತಿಳಿಸಿದರು.

     

  • ತಾಯಿಯಿಂದ ಬೇರ್ಪಟ್ಟ ಆನೆಮರಿಗೆ ಕೊನೆಗೂ ಸಿಕ್ತು ಆಶ್ರಯ

    ತಾಯಿಯಿಂದ ಬೇರ್ಪಟ್ಟ ಆನೆಮರಿಗೆ ಕೊನೆಗೂ ಸಿಕ್ತು ಆಶ್ರಯ

    ಕೊಡಗು: ತಾಯಿಯಿಂದ ಬೇರ್ಪಟ್ಟು ಅಡವಿಯ ಮಡಿಲಲ್ಲಿ ಒಂಟಿಯಾಗಿದ್ದ ಮುದ್ದಾದ ಮರಿಯಾನೆಗೆ ಕೊನೆಗೂ ಆಶ್ರಯ ಸಿಕ್ಕಿದೆ. ಅನಾಥವಾಗಿದ್ದ ಮರಿಯಾನೆಯನ್ನು ನಾಗರಹೊಳೆಯ ಅರಣ್ಯಾಧಿಕಾರಿಗಳು ಹಿಡಿದು ಕೊಡಗಿನ ತಿತಿಮತಿಯ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ನೀಡಿದ್ದಾರೆ. ಮುದ್ದಾದ ಮರಿಯಾನೆಯನ್ನು ಮಾವುತರು ಪಾಲನೆ ಪೋಷಣೆ ಮಾಡುತ್ತಿದ್ದಾರೆ.

    ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮೇಟಿಕೊಪ್ಪೆ ವನ್ಯಜೀವಿ ವಲಯದಲ್ಲಿ 20 ದಿನದ ಆನೆ ಮರಿಯೊಂದು ತಾಯಿಯಿಂದ ಬೇರ್ಪಟ್ಟು ಅನಾಥವಾಗಿ ಅಲೆದಾಡುತ್ತಿತ್ತು. ಸದ್ಯ ಮರಿ ಆನೆ ತಿತಿಮತಿಯ ಮತ್ತಿಗೋಡು ಸಾಕಾನೆ ಶಿಬಿರದಲ್ಲಿ ಮಾವುತ ಶಿವು ಎಂಬವರ ಆರೈಕೆಯಲ್ಲಿದೆ. ದಿನಕ್ಕೆ 10 ಲೀಟರ್ ಹಾಲನ್ನು ನಿಪ್ಪಲ್ ಮೂಲಕ ಆನೆ ಮರಿಗೆ ನೀಡಲಾಗುತ್ತಿದೆ. ಮತ್ತಿಗೋಡು ಶಿಬಿರದ ಸಿಬ್ಬಂದಿ ಹಾಗೂ ಪಶುವೈದ್ಯರು ಮರಿಯಾನೆಯ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ. ಇದೀಗ ಮರಿಯಾನೆಗೆ 1.5 ತಿಂಗಳಾಗಿದೆ.

    ಒಟ್ಟಾರೆ ತಾಯಿಯಿಂದ ದೂರಾಗಿ, ತಾಯಿ ಪ್ರೀತಿ ಮರಿಚಿಕೆಯಾದ ಮುದ್ದಾದ ಆನೆಮರಿಗೆ ಮತ್ತಿಗೋಡು ಸಾಕಾನೆ ಶಿಬಿರದ ಅರಣ್ಯ ಇಲಾಖೆ ಸಿಬ್ಬಂದಿಯ ಪ್ರೀತಿ ಸಿಕ್ಕಿದೆ. ಎಲ್ಲರ ಪ್ರೀತಿಗೆ ಪಾತ್ರವಾಗಿರುವ ಮರಿಯಾನೆ ತುಂಟಾಟವಾಡುತ್ತಾ ಶಿಬಿರದಲ್ಲಿ ಕಾಲ ಕಳೆಯುತ್ತಿದೆ.