Tag: EMI

  • ಆಟೋ EMI ಕಟ್ಟಲು ಸ್ನೇಹಿತೆಯನ್ನು ಕೊಂದು ಮಾಂಗಲ್ಯ ಸರ ಕದ್ದ ಖತರ್‌ನಾಕ್ ಚಾಲಕ

    ಆಟೋ EMI ಕಟ್ಟಲು ಸ್ನೇಹಿತೆಯನ್ನು ಕೊಂದು ಮಾಂಗಲ್ಯ ಸರ ಕದ್ದ ಖತರ್‌ನಾಕ್ ಚಾಲಕ

    – ಆಟೋ ಚಾಲಕ, ಸಾಥ್‌ ಕೊಟ್ಟ ಗೆಳತಿ ಅರೆಸ್ಟ್‌ – ಮತ್ತಿಬ್ಬರು ನಾಪತ್ತೆ

    ಚಿಕ್ಕಬಳ್ಳಾಪುರ: ಬೆಂಗಳೂರಿನ (Bengaluru) ಆಟೋ ಚಾಲಕನೊರ್ವ ಆಟೋ ಇಎಂಎ ಸಾಲ ತೀರಿಸಲು ತನ್ನಿಬ್ಬರು ಸ್ನೇಹಿತೆಯರನ್ನೇ ಬಳಸಿಕೊಂಡು ಪ್ರೀಪ್ಲಾನ್ ಮಾಡಿ, ಹಳೆಯ ಸ್ನೇಹಿತೆಯನ್ನೇ ಹತ್ಯೆಗೈದ ಘಟನೆ ಚಿಕ್ಕಬಳ್ಳಾಪುರದಲ್ಲಿ (Chikkaballapura) ನಡೆದಿದೆ. ಪಾಪಿ ಆಟೋ ಚಾಲಕನನ್ನು ಈಗ ಪೊಲೀಸರು ಬಂಧಿಸಿದ್ದಾರೆ.

    ಆ.16 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಪೊಲೀಸ್ ಠಾಣೆಯ ನಾಮಗೊಂಡ್ಲು ಗ್ರಾಮದ ಸೇತುವೆಯೊಂದರ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿತ್ತು. ಅಪರಿಚಿತ ಶವ ಬೆನ್ನತ್ತಿದ್ದ ಪೊಲೀಸರಿಗೆ ಕಾಣೆಯಾದ ಮಹಿಳೆಯರ ಪ್ರಕರಣಗಳ ಹುಡುಕಾಟ ನಡೆಸಿದಾಗ ಆಕೆ ಆಂಧ್ರದ ಹಿಂದೂಪುರದ ಅರ್ಚನಾ ಎಂಬುದು ಗೊತ್ತಾಗಿತ್ತು. ಹಿಂದೂಪುರ ಪೊಲೀಸ್‌ ಠಾಣೆಯಲ್ಲಿ ಕಾಣೆಯಾದ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಹೇಮಾವತಿ ನದಿಗೆ ಬಿದ್ದ ಕಾರು – ಇಬ್ಬರ ಶವ ಪತ್ತೆ, ಮತ್ತಿಬ್ಬರು ಕೊಚ್ಚಿ ಹೋಗಿರೋ ಶಂಕೆ

    ಗೌರಿಬಿದನೂರು ಸಿಪಿಐ ಸತ್ಯನಾರಾಯಣ್ ಹಾಗೂ ಮಂಚೇನಹಳ್ಳಿ ಪಿಎಸ್‍ಐ ಆಕೆಯ ಸಿಡಿಆರ್ ಪರಿಶೀಲನೆ ಮಾಡಿದಾಗ ಕಾಣೆಯಾದ ದಿನದಂದು ಆರ್ಚನಾಳಿಗೆ ರಾಕೇಶ್ ಎಂಬಾತ ಹಲವು ಬಾರಿ ಕರೆ ಮಾಡಿರೋದು ಗೊತ್ತಾಗಿದೆ. ಹೀಗಾಗಿ ಮೂಲತಃ ಗೌರಿಬಿದನೂರಿನ ವಿರೂಪಸಂದ್ರದ ಬೆಂಗಳೂರಿನಲ್ಲಿ ಆಟೋ ಚಾಲಕನಾಗಿರುವ ರಾಕೇಶ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಆಟೋ ಚಾಲಕ ರಾಕೇಶ್ ತನ್ನ ಆಟೋ ಇಎಂಐನ್ನ ಮೂರು ತಿಂಗಳಿಂದ ಕಟ್ಟಿಲ್ಲ, ಹಾಗೂ ಬೈಕ್ ಮೇಲೆ 30,000 ಸಾಲ ಮಾಡಿದ್ದು, ಅದು ಸಹ ತೀರಿಸಲು ಹಣ ಇಲ್ಲ. ಕೈ ಸಾಲ ಬೇರೆ ಮಾಡಿಕೊಂಡಿದ್ದು ಸಾಲಗಾರನಾಗಿದ್ದು ಸಾಲ ತೀರಿಸಲು ಸ್ನೇಹಿತೆಯನ್ನ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

    ಕೊಲೆಯಾದ ಅರ್ಚನಾ ಶುಭಸಮಾರಂಭಗಳಲ್ಲಿ ಮದುವೆ ಮನೆಗಳಲ್ಲಿ ಸ್ವಾಗತಕಾರಳಾಗಿ ಕೆಲಸ ಮಾಡುತ್ತಿದ್ದಳು. ಹಲವು ವರ್ಷಗಳ ಹಿಂದೆ ಕೊಲೆ ಮಾಡಿದ ಆಟೋ ಚಾಲಕ ಸಹ ಮದುವೆ ಮನೆಗಳಲ್ಲಿ ಆಡುಗೆ ಕೆಲಸ ಮಾಡಿಕೊಂಡಿದ್ದ. ಅಂದಿನಿಂದಲೂ ಅರ್ಚನಾ ಹಾಗೂ ರಾಕೇಶ್ ಅಣ್ಣ ತಂಗಿಯ ಸಂಬಂಧದಂತೆ ಸ್ನೇಹಿತರಾಗಿದ್ದರಂತೆ. ಇತ್ತೀಚೆಗೆ ವಿಡಿಯೋ ಕಾಲ್ ಮಾಡಿ ಮಾತನಾಡುವ ವೇಳೆ ರಾಕೇಶ್ ಅರ್ಚನಾಳ ಕತ್ತಲ್ಲಿ ಲಕ ಲಕ ಹೊಳೆಯುತ್ತಿದ್ದ ಮಾಂಗಲ್ಯ ಸರದ ಮೇಲೆ ಕಣ್ಣು ಹಾಕಿದ್ದ. ಹಾಗಾಗಿ ಬೆಂಗಳೂರಿನಲ್ಲಿ ಪರಿಚಯವಾಗಿದ್ದ ತನ್ನ ಮತ್ತೊಬ್ಬ ಸ್ನೇಹಿತಾ ನಿಹಾರಿಕಾ ಬಳಿ ತನ್ನ ಕಷ್ಟ ಹೇಳಿಕೊಂಡಿದ್ದ. ತಾನು ಸಿಕ್ಕಾಪಟ್ಟೆ ಸಾಲ ಮಾಡಿಕೊಂಡಿದ್ದೇನೆ. ಆಟೋ ಇಎಂಐ ಸಹ ಕಟ್ಟಿಲ್ಲ, ಹಾಗಾಗಿ ನನ್ನ ಫ್ರೆಂಡ್ ಅರ್ಚನಾ ಹತ್ರ ಚಿನ್ನದ ಸರ ಇದೆ ಅವಳನ್ನ ಸಾಯಿಸಿ ಆದ್ರೂ ಸರ ಕದ್ದು ಸಾಲ ತೀರಿಸಬೇಕು ನೀನು ನನಗೆ ಸಹಾಯ ಮಾಡು ಅಂತ ಕೇಳಿಕೊಂಡಿದ್ದನಂತೆ.

    ನಿಹಾರಿಕಾ ನಾನು ಬರೋಕೆ ಆಗಲ್ಲ ನನ್ನ ಪ್ರಾಣ ಸ್ನೇಹಿತೆ ಅಂಜಲಿ ಅಂತಾ ಇದಾಳೆ ಅವಳನ್ನ ಕರೆದುಕೊಂಡು ಹೋಗು ಅಂತ ಅಂಜಲಿನಾ ಕಳಿಸಿಕೊಟ್ಟಿದ್ದಾಳೆ. ಇನ್ನೂ ಅಂಜಲಿ ತಾನೊಬ್ಬಳೇ ಯಾಕೆ ಅಂತ ತನ್ನ ಸ್ನೇಹಿತ ನವೀನ್‌ ಎಂಬಾತನನ್ನ ಸಹ ಕರೆದುಕೊಂಡು ಬಂದು ಕೊಲೆ ಮಾಡಿದ್ದಾರೆ. ರಾಕೇಶ್ ಆಟೋದಲ್ಲಿ ಆದ್ರೆ ಮರ್ಡರ್ ಮಾಡೋಕೆ ಆಗಲ್ಲ ಅಂತ ಕಾರಿನಲ್ಲಿ ಆದ್ರೆ ಕೆಲಸ ಸುಲಭ ಅಂತ ಯೋಚನೆ ಮಾಡಿ, ಅಂಜಲಿ ವಾಸವಿದ್ದ ಪಿಜಿ ಮಾಲೀಕಿಗೆ ಸ್ನೇಹಿತೆಯನ್ನ ನೊಡೋಕೆ ಹಿಂದೂಪುರಕ್ಕೆ ಹೋಗಿ ಬರ್ತಿವಿ ಅಂತ ಪಿಜಿ ಮಾಲೀಕಿಯ ಇಟಿಯೋಸ್ ಕಾರನ್ನ ತೆಗೆದುಕೊಂಡು ಹೋಗಿದ್ದ.

    ಆಗಸ್ಟ್ 14 ರಂದು ಬೆಂಗಳೂರಿನಿಂದ ರಾಕೇಶ್, ಅಂಜಲಿ ಹಾಗೂ ನವೀನ್ ಮೂವರು ಸೀದಾ ಹಿಂದೂಪುರಕ್ಕೆ ಹೋಗಿ ಅರ್ಚನಾಳನ್ನ ಬಾ ಊಟಕ್ಕೆ ಹೋಗಿ ಬರೋಣ ಅಂತ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾರು ಹತ್ತಿಸಿಕೊಂಡಿದ್ದಾರೆ. ರಾಕೇಶ್ ಹಾಗೂ ಎಲ್ಲರೂ ಹಿಂದೂಪುರದಲ್ಲೇ ಫೋನ್‍ಗಳನ್ನ ಸ್ವಿಚ್ ಅಫ್ ಮಾಡಿಕೊಂಡಿದ್ದಾರೆ. ಹಿಂದೂಪುರದಿಂದ ಆರಂಭವಾದ ಕಾರು ಜರ್ನಿ ಗೌರಿಬಿದನೂರು ಮಂಚೇನಹಳ್ಳಿ ಮಾರ್ಗವಾಗಿ ಚಿಕ್ಕಬಳ್ಳಾಪುರ ಹಾಗೂ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಂಜೆಯವರೆಗೂ ಸಾಗಿದ್ದು ಸಂಜೆ ಕತ್ತಲಾಗುತ್ತಿದ್ದಂತೆ ಆಂಧ್ರದ ಚಿಲಮತ್ತೂರು ಬಳಿ ಕಾರಿನಲ್ಲಿದ್ದ ಅರ್ಚನಾಳ ಕುತ್ತಿಗೆಗೆ ವೇಲ್ ನಿಂದ ಬಿಗಿದು ಕೊಲೆ ಮಾಡಿ ಮೃತದೇಹವನ್ನ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಮಗೊಂಡ್ಲು ಗ್ರಾಮದ ಬಳಿ ದೊಡ್ಡ ಸೇತುವೆಯೊಂದರ ಬಳಿ ಬಿಸಾಕಿ ಪರಾರಿಯಾಗಿದ್ದರು.

    ಅರ್ಚನಾಳನ್ನ ಕೊಲೆ ಮಾಡಿ ಕದ್ದಿದ್ದ ಮಾಂಗಲ್ಯಸರ ಹಾಗೂ ಬಂಗಾರದ ಕಿವಿಯ ಒಲೆಯನ್ನ ಫೈನಾನ್ಸ್‌ ಒಂದರಲ್ಲಿ 2.19 ಲಕ್ಷ ರೂ.ಗೆ ಅಡಮಾನ ಇಟ್ಟಿದ್ದರು. ಬಂದ ಹಣದಿಂದ ಆಟೋ ಇಎಂಐ ಹಾಗೂ ಕೈ ಸಾಲ ತೀರಿಸಿ ಉಳಿದ ಹಣದಲ್ಲಿ ಎಲ್ಲರೂ ಮೋಜು ಮಸ್ತಿ ಮಾಡಿಕೊಂಡಿದ್ದರು. ಈಗ ರಾಕೇಶ್ ಹಾಗೂ ಅಂಜಲಿಗೆ ಪೊಲೀಸರು ಜೈಲು ದರ್ಶನ ಮಾಡಿಸಿದ್ದಾರೆ. ಉಳಿದ ಇಬ್ಬರು ಆರೋಪಿಗಳಾದ ನವೀನ್ ಹಾಗೂ ನಿಹಾರಿಕಾಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆಯಲ್ಲಿ ಹಸುಗೂಸನ್ನು ಹತ್ಯೆಗೈದಿದ್ದ ಪಾಪಿ ತಾಯಿ ಅರೆಸ್ಟ್‌

  • ಸತತ 3ನೇ ಬಾರಿ ರೆಪೋ ದರ ಇಳಿಕೆ – ಗೃಹ ಸಾಲ, ಇಎಂಐ ಸೌಲಭ್ಯದಾರರಿಗೆ ಗುಡ್‌ನ್ಯೂಸ್‌

    ಸತತ 3ನೇ ಬಾರಿ ರೆಪೋ ದರ ಇಳಿಕೆ – ಗೃಹ ಸಾಲ, ಇಎಂಐ ಸೌಲಭ್ಯದಾರರಿಗೆ ಗುಡ್‌ನ್ಯೂಸ್‌

    ನವದೆಹಲಿ: ದೇಶದ ಜಿಡಿಪಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಸತತ 3ನೇ ಬಾರಿಗೆ ರೆಪೋ ದರ (Repo Rate) ಕಡಿತಗೊಳಿಸಿದೆ. ನಿರೀಕ್ಷೆಗೂ ಮೀರಿ 50 ಬೇಸಿಸ್ ಪಾಯಿಂಟ್‌ ಕಡಿತಗೊಳಿಸಿದ್ದು ರೆಪೋ ಬಡ್ಡಿ ದರ ಶೇ.6 ರಿಂದ ಶೇ.5.50ಕ್ಕೆ ಇಳಿಕೆಯಾಗಿದೆ.

    ಆರ್‌ಬಿಐನ ಹಣಕಾಸು ನೀತಿ ಸಮಿತಿಯು (MPC) ಸಭೆಯ ಬಳಿಕ 50 ಮೂಲಾಂಶದಷ್ಟು (ಬೇಸಿಸ್‌ ಪಾಯಿಂಟ್‌) ರೆಪೋ ದರ ಕಡಿಮೆ ಮಾಡಲು ನಿರ್ಧರಿಸಿರುವುದಾಗಿ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ತಿಳಿಸಿದ್ದಾರೆ.

    ಇದರಿಂದ ಸಾಲ (Loan) ಮತ್ತು ಇಎಂಐಗಳ (EMI) ಬಡ್ಡಿ ದರವೂ ಇಳಿಕೆಯಾಗಲಿದೆ. ಜೊತೆಗೆ ಹೊಸ ಸಾಲಗಾರರಿಗೆ ಗೃಹ ಸಾಲಗಳು, ವಾಹನದ ಮೇಲಿನ ಸಾಲಗಳು ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ. ಆಟೊ ಮೋಬೈಲ್, ಕಾರ್ಪೊರೇಟ್ ಸಾಲಗಳ ಮೇಲಿನ ಮರುಪಾವತಿ ಕಂತುಗಳಲ್ಲಿಯೂ ಇಳಿಕೆಯಾಗುವ ನಿರೀಕ್ಷೆ ಇದೆ.

    ರೆಪೋ ದರದಲ್ಲಿ ಶೇ 0.25ರಷ್ಟು ಇಳಿಕೆ ಆಗಬಹುದೆಂದು ತಜ್ಞರು ನಿರೀಕ್ಷಿಸಿದ್ದರು. ಆದ್ರೆ ಆರ್‌ಸಿಬಿ ನಿರೀಕ್ಷೆಗೂ ಮೀರಿ ಇಳಿಕೆ ಮಾಡಿದೆ. ಜಿಡಿಪಿಯು 4 ವರ್ಷದ ಕನಿಷ್ಠ ಮಟ್ಟ ಶೇ 6.5ಕ್ಕೆ ಕುಸಿದಿತ್ತು. ಹೀಗಾಗಿ ಜಿಡಿಪಿ ಉತ್ತೇಜನಕ್ಕೆ ಕ್ರಮ ಕೈಗೊಳ್ಳುವ ಭಾಗವಾಗಿ ರೆಪೋ ದರ ಕಡಿತಗೊಳಿಸಿದೆ. ಇದು ಕಳೆದ ಮೂರು ವರ್ಷಗಳಲ್ಲಿ ಹೆಚ್ಚಿನ ಇಳಿಕೆ ಕೂಡ ಆಗಿದೆ ಎಂದು ತಿಳಿದುಬಂದಿದೆ. 2022ರ ಆಗಸ್ಟ್ 5 ರಂದು ರೆಪೋ ದರವು ಶೇ 5.40ರಷ್ಟಿತ್ತು.

    ಈ ವರ್ಷದ ಫೆಬ್ರವರಿಯಿಂದ ಆರ್‌ಬಿಐ ರೆಪೋ ದರದಲ್ಲಿ 100 ಮೂಲಾಂಶದಷ್ಟು ಕಡಿತ ಮಾಡಿದೆ. ಏಪ್ರಿಲ್‌ನಲ್ಲಿ 25 ಬೇಸಿಸ್‌ ಪಾಯಿಂಟ್‌ ಕಡಿತಗೊಳಿಸಲಾಗಿತ್ತು. ಆಗ ರೆಪೋ ದರ ಶೇ. 6ಕ್ಕೆ ಇಳಿದಿತ್ತು.

    ರೆಪೋ ರೇಟ್ ಎಂದರೇನು?
    ವಾಣಿಜ್ಯ ಬ್ಯಾಂಕ್‌ಗಳ ರಿಸರ್ವ್ ಬ್ಯಾಂಕ್‍ನಿಂದ ಪಡೆಯುವ ಅಲ್ಪಾವಧಿ ಸಾಲದ ಮೇಲಿನ ಬಡ್ಡಿ ದರಕ್ಕೆ ರೆಪೋ ದರ ಎನ್ನುತ್ತಾರೆ. ರೆಪೋ ದರ ಕಡಿಮೆಯಾದರೆ ಬ್ಯಾಂಕ್‌ಗಳು ಕಡಿಮೆ ಬಡ್ಡಿ ದರದಲ್ಲಿ ಹೆಚ್ಚಿನ ಹಣವನ್ನು ಪಡೆಯಬಹುದು. ಬ್ಯಾಂಕ್‍ಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್‌ಬಿಐನಿಂದ ಹಣ ಪಡೆಯುತ್ತಿರುತ್ತವೆ. ರೆಪೋ ರೇಟ್‌ ಜಾಸ್ತಿ ಇದ್ದರೆ ಬ್ಯಾಂಕ್‌ಗಳು ಸಾಲದ ಮೇಲಿನ ಬಡ್ಡಿ ದರವನ್ನು ಏರಿಕೆ ಮಾಡುತ್ತದೆ. ಇದರಿಂದ ವಾಹನ ಸಾಲ, ಗೃಹ ಸಾಲ್ಯ ಇತ್ಯಾದಿ ಸಾಲಗಳ ಬಡ್ಡಿ ದರ ಏರುತ್ತದೆ.

    ರಿವರ್ಸ್ ರೆಪೋ: ವಾಣಿಜ್ಯ ಬ್ಯಾಂಕುಗಳು ಆರ್‌ಬಿಐನಲ್ಲಿ ಇಡುವ ಠೇವಣಿಗಳ ಮೇಲೆ ಪಡೆಯುವ ಬಡ್ಡಿದರವೇ ವಿರುದ್ಧ ರೆಪೋ ರೇಟ್. ಆರ್‍ಐನಲ್ಲಿ ಠೇವಣಿ ಇಡುವುದು ಬ್ಯಾಂಕುಗಳಿಗೆ ಸುರಕ್ಷಿತ. ರಿವರ್ಸ್‌ ರೆಪೋ ದರ ಹೆಚ್ಚಾದಾಗ ಬ್ಯಾಂಕುಗಳು ಹೆಚ್ಚಿನ ಮೊತ್ತವನ್ನು ಆರ್‌ಬಿಐಗೆ ವರ್ಗಾಯಿಸುತ್ತದೆ.

    ಉದಾಹರಣೆಗೆ:
    HDFC ಬ್ಯಾಂಕಿನಿಂದ 8.70% ಬಡ್ಡಿದರದಲ್ಲಿ 30 ವರ್ಷಗಳಿಗೆ 50 ಲಕ್ಷ ರೂ. ಗೃಹಸಾಲ ಪಡೆದರೆ
    ಪ್ರಸ್ತುತ EMI: 39,136 ರೂ. ಇದೆ

    ಹೊಸ ರೆಪೋ ದರ ಇಳಿಕೆ ನಂತರ
    ಹೊಸ EMI: 37,346 ರೂ. ಇರಲಿದೆ
    ಮಾಸಿಕ ಉಳಿತಾಯ: 1,790 ರೂ.
    ವಾರ್ಷಿಕ ಉಳಿತಾಯ: 21,480 ರೂ.

  • ಲೋನ್ ಕೊಡದೇ 10 ತಿಂಗಳು 4.20 ಲಕ್ಷ EMI ಕಟ್ಟಿಸಿಕೊಂಡ ಕಂಪನಿ – ಫೈನಾನ್ಸ್ ಮುಂದೆ ದಂಪತಿ ಪ್ರತಿಭಟನೆ

    ಲೋನ್ ಕೊಡದೇ 10 ತಿಂಗಳು 4.20 ಲಕ್ಷ EMI ಕಟ್ಟಿಸಿಕೊಂಡ ಕಂಪನಿ – ಫೈನಾನ್ಸ್ ಮುಂದೆ ದಂಪತಿ ಪ್ರತಿಭಟನೆ

    ಹಾವೇರಿ: ಹೌಸಿಂಗ್ ಲೋನ್ ಕೊಡುವುದು ಲೇಟಾಗಿದ್ದಕ್ಕೆ ಫೈನಾನ್ಸ್ ಮುಂದೆ ದಂಪತಿ ಪ್ರತಿಭಟನೆ ಮಾಡಿದ ಘಟನೆ ಹಾವೇರಿ ನಗರದಲ್ಲಿರುವ ಹಿಂದೂಜಾ ಫೈನಾನ್ಸ್ ಮುಂದೆ ನಡೆದಿದೆ.

    ಬಾಗಿಲು ಮುಚ್ಚಲು ಬಿಡದೆ ಒಳಗೆ ಕುಳಿತು ಹಿಂದೂಜಾ ಫೈನಾನ್ಸ್ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಿರ್ಮಲಾ ಶರಣಯ್ಯ ಮಹಂತಿಮಠ ಮಹಿಳೆಯಿಂದ ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಫೈನಾನ್ಸ್ ವಿರುದ್ಧ ದೂರು ನೀಡಲಾಗಿದೆ.

    ಲೋನ್ ಕೊಡುವುದಾಗಿ ನಂಬಿಸಿ ಲೋನ್ ಕೊಡದೆ, 10 ತಿಂಗಳು ಇಎಂಐ ಕಟ್ಟಿಸಿಕೊಂಡಿದ್ದಾರೆ. ಇದುವರೆಗೆ 4.20 ಲಕ್ಷ ಹಣ ಇಎಂಐ ಕಟ್ಟಿದ್ದೇವೆ. ಆದರೂ, ಲೋನ್ ಕೊಟ್ಟಿಲ್ಲಾ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಹಾವೇರಿ ಶಿವಾಜಿನಗರದ ಶ್ರೀಪಾದ ರೇವಣಕರ್‌ಗೆ ಸೇರಿದ ಮನೆಯನ್ನು 40 ಲಕ್ಷಕ್ಕೆ ಖರೀದಿಗೆ ಒಪ್ಪಂದ ಮಾಡಿಕೊಂಡಿದ್ದರು. ಒಪ್ಪಂದ ಪತ್ರ ನೀಡಿ ಸಾಲಕ್ಕೆ ಅರ್ಜಿ ಹಾಕಿದ್ದರು. ದಾಖಲೆ ಪರಿಶೀಲನೆ ಮಾಡಿ 37.43 ಲಕ್ಷ ಸಾಲ ಹೌಸ್ ಲೋನ್ ಮಂಜೂರು ಮಾಡಿ ಚೆಕ್ ಸಹ ಫೈನಾನ್ಸ್ ನೀಡಿತ್ತು. ಸಮಯಕ್ಕೆ ಸರಿಯಾಗಿ ಬ್ಯಾಂಕ್‌ಗೆ ಹೋಗಿ ಹಣ ಪಡೆಯದೇ ಇದ್ದಿದ್ದರಿಂದ, ಅವಧಿ ಮುಗಿದ ನಂತರ ಬ್ಯಾಂಕ್ ಗೆ ಹಣ ಪಡೆಯಲು ಹೋದಾಗ ರೀಪ್ರೇಸ್ ಮಾಡಿಕೊಂಡು ಬರಲು ಕೆನರಾ ಬ್ಯಾಂಕ್ ಸಿಬ್ಬಂದಿ ಹೇಳಿದ್ದಾರೆ. ಆದರೆ, ಫೈನಾನ್ಸ್ ಸಿಬ್ಬಂದಿ ಹೊಸ ಚೆಕ್ ಕೊಡಲು ಲೇಟ್ ಮಾಡಿದ್ದಕ್ಕೆ ಫೈನಾನ್ಸ್ ಮುಂದೆ ಪ್ರತಿಭಟನೆ ಮಾಡಿದ್ದಾರೆ, ಹಾವೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

  • ಎಸ್‌ಬಿಐ MCLR ಏರಿಕೆ – ದುಬಾರಿಯಾಗಲಿದೆ EMI- ಎಷ್ಟಿತ್ತು? ಎಷ್ಟು ಏರಿಕೆ?

    ಎಸ್‌ಬಿಐ MCLR ಏರಿಕೆ – ದುಬಾರಿಯಾಗಲಿದೆ EMI- ಎಷ್ಟಿತ್ತು? ಎಷ್ಟು ಏರಿಕೆ?

    ನವದೆಹಲಿ: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (SBI) ತನ್ನ ಮಾರ್ಜಿನಲ್ ಕಾಸ್ಟ್-ಆಧಾರಿತ ಸಾಲದ ದರವನ್ನು (MCLR) ಹೆಚ್ಚಳ ಮಾಡಿದೆ. ಇದರಿಂದಾಗಿ ಬ್ಯಾಂಕ್‌ನ ಸಾಲದ ಇಎಂಐ (EMI) ಏರಿಕೆಯಾಗಲಿದೆ.

    ಆಯ್ದು ಅವಧಿಗೆ ಅನುಗುಣವಾಗಿ 5-10 ಬೇಸಿಸ್‌ ಪಾಯಿಂಟ್ಸ್‌ ಹೆಚ್ಚಳ ಮಾಡಿದೆ. ಇದರಿಂದಾಗಿ ಗೃಹ ಸಾಲ, ವಾಹನ ಸಾಲ, ಗ್ರಾಹಕರ ಸಾಲ ಏರಿಕೆಯಾಗಲಿದೆ.

     

    ಎಸ್‌ಬಿಐ ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. ಆರ್‌ಬಿಐ (RBI) ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ನಡೆದ ಹಣಕಾಸು ನೀತಿ ಸಮಿತಿ (MPC) ಸಭೆಯಲ್ಲಿ ರೆಪೋ ದರವನ್ನು ಏರಿಸದೇ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲಾಗಿತ್ತು.

    ಈಗಾಗಲೇ ಸಾಲ ಪಡೆದಿರುವ ಗ್ರಾಹಕರು ತಮ್ಮ ಮುಂದಿನ ಕಂತುಗಳನ್ನು ಹೆಚ್ಚಿನ ದರದಲ್ಲಿ ಪಾವತಿಸಬೇಕಾಗುತ್ತದೆ.

    ಹಿಂದೆ ಎಷ್ಟಿತ್ತು? ಎಷ್ಟು ಏರಿಕೆಯಾಗಲಿದೆ?

  • ಇಎಂಐ ಕಟ್ಟು ಎಂದಿದ್ದಕ್ಕೆ ಖಾಸಗಿ ಫೈನಾನ್ಸ್ ಕಂಪನಿಯ ಉದ್ಯೋಗಳ ಮೇಲೆ ಬಿಸಿ ಎಣ್ಣೆ ಎರಚಿದ

    ಇಎಂಐ ಕಟ್ಟು ಎಂದಿದ್ದಕ್ಕೆ ಖಾಸಗಿ ಫೈನಾನ್ಸ್ ಕಂಪನಿಯ ಉದ್ಯೋಗಳ ಮೇಲೆ ಬಿಸಿ ಎಣ್ಣೆ ಎರಚಿದ

    ಜೈಪುರ: ಇಎಂಐ (EMI) ಕಟ್ಟು ಎಂದು ಹೇಳಿದ ಫೈನಾನ್ಸ್ ಕಂಪನಿಯ ಇಬ್ಬರು ಉದ್ಯೋಗಿಗಳ ಮೇಲೆ ವ್ಯಕ್ತಿಯೊಬ್ಬ ಬಿಸಿ ಎಣ್ಣೆಯನ್ನು (Hot Oil) ಎರಚಿ ಪರಾರಿಯಾಗಿರುವ ಘಟನೆ ರಾಜಸ್ಥಾನದ (Rajasthan) ಜುಂಜುನು ಎಂಬಲ್ಲಿ ನಡೆದಿದೆ. ದಾಳಿಗೊಳಗಾದ ಇಬ್ಬರು ಉದ್ಯೋಗಿಗಳಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

    ವರದಿಗಳ ಪ್ರಕಾರ ಜುಂಜುನುವಿನ ರಾಝಿ ಸತಿ ರಸ್ತೆಯಲ್ಲಿರುವ ಖಾಸಗಿ ಬ್ಯಾಂಕ್ ಶಾಖೆಯ ಬಳಿ ಈ ಘಟನೆ ನಡೆದಿದೆ. ಆರೋಪಿ ವ್ಯಕ್ತಿ ಸುರೇಂದ್ರ ಸ್ವಾಮಿ ಫೈನಾನ್ಸ್ ಕಂಪನಿಯಲ್ಲಿ ವೈಯಕ್ತಿಕ ಸಾಲ (Loan) ಪಡೆದಿದ್ದು, ಇಎಂಐ ವಸೂಲಿಗಾಗಿ ಬಂದಿದ್ದ ಇಬ್ಬರು ನೌಕರರು ಕುಲದೀಪ್ ಹಾಗೂ ನವೀನ್ ಮೇಲೆ ಬಿಸಿ ಎಣ್ಣೆ ಎರಚಿದ್ದಾನೆ.

    ಆರೋಪಿಯು ವಾರ್ಡ್ ನಂ.44ರ ಖೈತಾನ್ ಕಾ ಮೊಹಲ್ಲಾದ ನಿವಾಸಿಯಾಗಿದ್ದು, ಕುಲದೀಪ್ ಮತ್ತು ನವೀನ್ ಇಬ್ಬರೂ ಇಎಂಐ ಕೇಳಲು ಸ್ವಾಮಿ ಮನೆಗೆ ಬಂದಿದ್ದರು. ಆದರೆ ಸ್ವಾಮಿ ಅವರನ್ನು ರಾಣಿ ಸತಿ ರಸ್ತೆಯಲ್ಲಿರುವ ಖಾಸಗಿ ಬ್ಯಾಂಕ್ ಬಳಿ ಭೇಟಿಯಾಗುವಂತೆ ಕರೆದಿದ್ದಾನೆ. ಇದನ್ನೂ ಓದಿ: ದತ್ತಜಯಂತಿಯಂದು ದತ್ತಪೀಠ ಮಾರ್ಗದಲ್ಲಿ ಮೊಳೆ ಸುರಿದಿದ್ದ ಇಬ್ಬರ ಬಂಧನ

    ಸ್ವಾಮಿ ಅವರನ್ನು ಭೇಟಿಯಾದ ಬಳಿಕ ಅವರ ನಡುವೆ ವಾಗ್ವಾದ ಪ್ರಾರಂಭವಾಗಿದೆ. ಈ ವೇಳೆ ಸಿಟ್ಟಾದ ಸ್ವಾಮಿ ಹತ್ತಿರದ ಅಂಗಡಿಯ ಬಾಣಲೆಯಲ್ಲಿದ್ದ ಬಿಸಿ ಎಣ್ಣೆಯನ್ನು ಜಗ್‌ನಲ್ಲಿ ತೆಗೆದುಕೊಂಡು ಅವರಿಬ್ಬರ ಮೇಲೆ ಎರಚಿದ್ದಾನೆ. ಬಳಿಕ ಸ್ವಾಮಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ದಾಳಿಯಿಂದಾಗಿ ತೀವ್ರವಾದ ಸುಟ್ಟ ಗಾಯಗಳಾಗಿ ಉದ್ಯೋಗಿಗಳಿಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

    ಘಟನೆಯ ಬಳಿಕ ಆರೋಪಿ ಸುರೇಂದ್ರ ಸ್ವಾಮಿ ತಲೆಮರೆಸಿಕೊಂಡಿದ್ದಾನೆ. ಕುಲದೀಪ್ ಅವರಿಗೆ ಚಿಕಿತ್ಸೆ ನೀಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ನವೀನ್ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊತ್ವಾಲಿ ಪೊಲೀಸರು ಸುರೇಂದ್ರ ಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ತಿಂಡಿ ಪ್ಯಾಕೆಟ್‍ನಲ್ಲಿ 500 ರೂ. ನೋಟುಗಳು – ಕಿರಾಣಿ ಅಂಗಡಿಗಳಿಗೆ ಮುಗಿಬಿದ್ದ ಜನ

    Live Tv
    [brid partner=56869869 player=32851 video=960834 autoplay=true]

  • ರೆಪೋ ರೇಟ್ ಏರಿಸಿದ ಆರ್‌ಬಿಐ – ಹೆಚ್ಚಳವಾಗಲಿದೆ ಲೋನ್, ಇಎಂಐಗಳ ಬಡ್ಡಿ ದರ

    ರೆಪೋ ರೇಟ್ ಏರಿಸಿದ ಆರ್‌ಬಿಐ – ಹೆಚ್ಚಳವಾಗಲಿದೆ ಲೋನ್, ಇಎಂಐಗಳ ಬಡ್ಡಿ ದರ

    ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ರೆಪೋ ದರವನ್ನು ಶೇ.4.90 ರಷ್ಟು ಏರಿಕೆ ಮಾಡಿದೆ. ರೆಪೋ ರೇಟ್ ಏರಿಕೆ ಮಾಡಿದ ಬೆನ್ನಲ್ಲೇ ಸಾಲ ಮತ್ತು ಇಎಂಐಗಳ ಬಡ್ಡಿ ದರ ಏರಿಕೆಯಾಗಲಿದೆ.

    RBI ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ನಡೆದ ಹಣಕಾಸು ನೀತಿ ಸಮಿತಿ (MPC) ಸಭೆಯಲ್ಲಿ ಎಲ್ಲ 6 ಸದಸ್ಯರು ರೆಪೋ ದರ ಹೆಚ್ಚಳಕ್ಕೆ ಒಪ್ಪಿಗೆ ನೀಡಿದರು. ಡಾಲರ್ ಎದುರು ರೂಪಾಯಿ ಕುಸಿತಗೊಳ್ಳುತ್ತಿರುವ ನಡುವೆ ನಿಯಂತ್ರಣ ಕ್ರಮವಾಗಿ ರೆಪೋ ರೇಟ್ ಏರಿಕೆ ಮಾಡಲು ಸಭೆಯಲ್ಲಿ ನಿರ್ಣಯಿಸಲಾಗಿದೆ. ಇದನ್ನೂ ಓದಿ: ಮತ್ತೆ ಶುರುವಾಯ್ತು ಜಹಾಗೀರ್‌ಪುರಿಯಲ್ಲಿ ಕಲ್ಲು ತೂರಾಟ – ವಾಹನಗಳು ಧ್ವಂಸ

    ಏಪ್ರಿಲ್ ತಿಂಗಳ, ಚಿಲ್ಲರೆ ಹಣದುಬ್ಬರ ದರ ಶೇ.7.79 ರಷ್ಟಿದ್ದು, ಇದು 8 ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಇದರಿಂದ ಎಚ್ಚರಿಕೆ ಕ್ರಮ ಕೈಗೊಂಡಿರುವ ಆರ್‌ಬಿಐ ಹಣದುಬ್ಬರ ನಿಯಂತ್ರಿಸಲು ಹಲವು ಕ್ರಮ ಕೈಗೊಂಡಿದೆ. ಇದರಲ್ಲಿ ರೆಪೋ ದರ ಏರಿಕೆಯೂ ಒಂದು ಪ್ರಮುಖ ಕ್ರಮವಾಗಿದೆ.

    ಎಂಪಿಸಿ ಹಣಕಾಸು ನೀತಿ ಸಭೆಯು ಜೂನ್ 6 ರಿಂದ 8ರವೆರೆಗೆ ಒಟ್ಟು 3 ದಿನ ನಡೆಯಲಿದೆ. ಈ ಹಿಂದೆ ಮೇ 4 ರಂದು ರೆಪೋ ದರವನ್ನು ಏರಿಕೆ ಮಾಡಲಾಗಿತ್ತು. 40 ಬೇಸಿಸ್ ಪಾಯಿಂಟ್ ಏರಿಕೆ ಮಾಡುವ ಮೂಲಕ ಶೇ.4.40ಕ್ಕೆ ಹೆಚ್ಚಿಸಲಾಗಿತ್ತು. ನಗದು ಮೀಸಲು ಅನುಪಾತವನ್ನು 50 ಬೇಸಿಸ್ ಪಾಯಿಂಟ್ ಏರಿಕೆ ಮಾಡಿ ಶೇ.4.50ಕ್ಕೆ ಹೆಚ್ಚಿಸಲಾಗಿತ್ತು. ಈ ಬೆನ್ನಲ್ಲೇ ಸಾಲಗಳ ಮೇಲಿನ ಬಡ್ಡಿ ದರವೂ ಹೆಚ್ಚಳವಾಗಿತ್ತು. ಇದೀಗ ಮತ್ತೆ 50 ಬೇಸಿಸ್ ಪಾಯಿಂಟ್ ಏರಿಕೆ ಮಾಡಿ ಶೇ.4.90 ಹೆಚ್ಚಿಸಲಾಗಿದೆ. ಇದನ್ನೂ ಓದಿ: ಮೊಬೈಲ್, ಲ್ಯಾಪ್‌ಟಾಪ್, ಕ್ಯಾಮೆರಾ ಎಲ್ಲದಕ್ಕೂ ಇನ್ಮುಂದೆ ಒಂದೇ ಚಾರ್ಜರ್!

    ಮೇ 4 ರಂದು ಆರ್‌ಬಿಐ ರೆಪೋ ರೇಟ್ 40 ಬೇಸಿಸ್ ಪಾಯಿಂಟ್ ಹೆಚ್ಚಳ ಘೋಷಿಸಿತು. ಆ ಬಳಿಕ ಸಾರ್ವಜನಿಕ, ಖಾಸಗಿ ಬ್ಯಾಂಕ್, ಫೈನಾನ್ಸ್ ಕಂಪನಿಗಳು, ಗೃಹ ಸಾಲ ಸೇರಿದಂತೆ ಇತರೆ ಎಲ್ಲ ಸಾಲಗಳ ಮೇಲಿನ ಬಡ್ಡಿದರ ಏರಿಕೆಯಾಗಿದೆ. ಈಗಾಗಲೇ ಸಾಲ ಪಡೆದಿರುವ ಗ್ರಾಹಕರ ಇಎಂಐ ಹೆಚ್ಚಳವಾಗಿದೆ. ಇದೀಗ ಮತ್ತೆ ರೆಪೋ ರೇಟ್ ಹೆಚ್ಚಳವಾಗಿರುವದರಿಂದ ಸಾಲಗಾರರಿಗೆ ಮತ್ತೆ ಬಡ್ಡಿ ಹೊರೆ ಹೆಚ್ಚಲಿದ್ದು, ಇದು ಸಾಲಗಾರರ ಮೇಲೆ ನೇರ ಪರಿಣಾಮ ಬೀರಲಿದೆ.

    ರೆಪೋ ರೇಟ್ ಎಂದರೇನು?
    ವಾಣಿಜ್ಯ ಬ್ಯಾಂಕ್‌ಗಳ ರಿಸರ್ವ್ ಬ್ಯಾಂಕ್‍ನಿಂದ ಪಡೆಯುವ ಅಲ್ಪಾವಧಿ ಸಾಲದ ಮೇಲಿನ ಬಡ್ಡಿ ದರಕ್ಕೆ ರೆಪೋ ದರ ಎನ್ನುತ್ತಾರೆ. ರೆಪೋ ದರ ಕಡಿಮೆಯಾದರೆ ಬ್ಯಾಂಕ್‌ಗಳು ಕಡಿಮೆ ದರದಲ್ಲಿ ಹೆಚ್ಚಿನ ಹಣವನ್ನು ಪಡೆಯಬಹುದು. ಬ್ಯಾಂಕ್‍ಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್‌ಬಿಐನಿಂದ ಹಣ ಪಡೆಯುತ್ತಿರುತ್ತವೆ.

  • ಬೈಕ್ ಇಎಂಐ ಕಟ್ಟಲು ಹಣವಿಲ್ಲದೇ ಸರಗಳ್ಳತನ – ಆರೋಪಿಗಳು ಅಂದರ್

    ಬೈಕ್ ಇಎಂಐ ಕಟ್ಟಲು ಹಣವಿಲ್ಲದೇ ಸರಗಳ್ಳತನ – ಆರೋಪಿಗಳು ಅಂದರ್

    ತುಮಕೂರು: ಬೈಕ್ ಇಎಂಐ ಕಟ್ಟಲು ಹಣವಿಲ್ಲದೇ ಸರಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ.

    ಬಂಧಿತ ಆರೋಪಿಗಳು ಸೂರ್ಯ ಹಾಗೂ ಸಂದೀಪ್ ಇತ್ತೀಚೆಗೆ ಸ್ಪೋರ್ಟ್ಸ್ ಬೈಕೊಂದನ್ನು ಖರೀದಿಸಿದ್ದರು. ಆದರೆ ಇಎಂಐ ಕಟ್ಟಲು ಹಣವಿಲ್ಲದೇ ಸರಗಳ್ಳತನಕ್ಕೆ ಮುಂದಾಗಿದ್ದರು. ಇದನ್ನೂ ಓದಿ: ಭಾರತಕ್ಕೆ ಗಟ್ಸ್ ಇಲ್ಲ ಅನ್ನೋರು ಮೊದಲು ಉಕ್ರೇನ್ ಗಡಿವರೆಗೆ ತಲುಪಿ ಧಮ್ ತೋರಿಸಬೇಕಿತ್ತು: ಸುಜಯ್

    ಸರಗಳ್ಳತನವನ್ನು ಗಮನಿಸಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ 45 ಗ್ರಾಂ. ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಹುಳಿಯದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಆಪರೇಷನ್ ಗಂಗಾ ಯಶಸ್ಸಿಗೆ ಭಾರತದ ಜಾಗತಿಕ ಪ್ರಭಾವವೇ ಕಾರಣ: ಮೋದಿ

  • ಲಾಕ್‍ಡೌನ್ ಅವಧಿಯ ಸಾಲ ಮರುಪಾವತಿ – ಕೇಂದ್ರಕ್ಕೆ ಕೊನೆ ಅವಕಾಶ ನೀಡಿದ ಸುಪ್ರೀಂಕೋರ್ಟ್

    ಲಾಕ್‍ಡೌನ್ ಅವಧಿಯ ಸಾಲ ಮರುಪಾವತಿ – ಕೇಂದ್ರಕ್ಕೆ ಕೊನೆ ಅವಕಾಶ ನೀಡಿದ ಸುಪ್ರೀಂಕೋರ್ಟ್

    ನವದೆಹಲಿ: ಲಾಕ್‍ಡೌನ್ ಅವಧಿಯ ಸಾಲ ಮರುಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಎರಡು ವಾರಗಳ ಕಾಲಾವಕಾಶ ನೀಡಿದ್ದು, ಇದು ಕೊನೆಯ ಅವಕಾಶ ಎಂದು ಹೇಳಿದೆ.

    ಇಂದು ವಿಚಾರಣೆ ಮುಂದುವರಿಸಿದ ಸುಪ್ರೀಂಕೋರ್ಟ್ ನ್ಯಾಯಪೀಠ, ಇನ್ನೂ ಎರಡು ವಾರಗಳಲ್ಲಿ ಏನಾಗುತ್ತದೆ ಎಂದು ಕಾದುನೋಡಲು ನಾವು ಕೇಂದ್ರಕ್ಕೆ ಸಮಯ ನೀಡುತ್ತಿದ್ದೇವೆ. ಕೇಂದ್ರ ಹಾಗೂ ಆರ್‍ ಬಿಐ ಸೂಕ್ತ ಯೋಜನೆಯೊಂದಿಗೆ ಸಮಸ್ಯೆಯನ್ನು ಬಗೆಹರಿಸಲು ಇದೊಂದು ಕೊನೆಯ ಅವಕಾಶವಾಗಿದೆ ಎಂದು ಎಚ್ಚರಿಸಿದೆ.

    ಇಂದು ಕೇಂದ್ರ ಸರ್ಕಾರ ಹಾಗೂ ಆರ್ ಬಿಐ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಈಗಾಗಲೇ ಎರಡರಿಂದ ಮೂರು ಸುತ್ತುಗಳ ಸಭೆಗಳನ್ನು ನಡೆಸಲಾಗಿದೆ. ಸಾಲ ಮರು ಪಾವತಿ ಅಂತಿಮ ದಿನಾಂಕದ ಬಗ್ಗೆ ಗೊಂದಲಗಳು ವ್ಯಕ್ತವಾಗಿದೆ. ಅದನ್ನು ಪರಿಶೀಲಿಸಲಾಗುತ್ತದೆ. ಇದಕ್ಕಾಗಿ ಎರಡು ವಾರಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು.

    ಮನವಿಗೆ ಸ್ಪಂದಿಸಿದ ಸುಪ್ರೀಂಕೋರ್ಟ್, ಮುಂದಿನ ಹಂತಗಳಲ್ಲಿ ವಿಚಾರಣೆ ಮುಂದೂಡುವುದಿಲ್ಲ. ಕೇಂದ್ರ ಮತ್ತು ಆರ್ ಬಿಐ ಸಲಹೆ ಆಧರಿಸಿ ಸೂಕ್ತ ಆದೇಶವನ್ನು ನೀಡಲಿದ್ದೇವೆ ಎಂದು ಪೀಠ ಹೇಳಿದೆ.

    ಲಾಕ್‍ಡೌನ್ ಅವಧಿಯಲ್ಲಿ ಮುಂದೂಡಲ್ಪಟ್ಟ ಇಎಂಐಗಳ ಮೇಲಿನ ಬಡ್ಡಿಯ ಮೇಲಿನ ಬಡ್ಡಿ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಇದೇ ವೇಳೆ ಸಾಲ ಮರುಪಾವತಿಗೆ ಅಗಸ್ಟ್ 31 ಕ್ಕೆ ಆರ್‍ಬಿಐ ನೀಡಿದ್ದ ವಿನಾಯಿತಿ ಮುಕ್ತಾಯವಾಗಿದ್ದು, ಆರ್ಥಿಕ ಸಂಕಷ್ಟದ ನಡುವೆ ಸಾಲ ಮರು ಪಾವತಿ ಬಗ್ಗೆ ಕೋರ್ಟ್ ವಿಚಾರಣೆ ನಡೆಸುತ್ತಿದೆ.

  • ಫ್ಲ್ಯಾಟ್ ಇಎಂಐ ಸುಶಾಂತ್ ಪಾವತಿಸಿಲ್ಲ: ಅಂಕಿತಾ ಲೋಖಂಡೆ

    ಫ್ಲ್ಯಾಟ್ ಇಎಂಐ ಸುಶಾಂತ್ ಪಾವತಿಸಿಲ್ಲ: ಅಂಕಿತಾ ಲೋಖಂಡೆ

    -ಬ್ಯಾಂಕ್ ಸ್ಟೇಟಮೆಂಟ್ ಫೋಟೋ ಹಂಚಿಕೊಂಡ ನಟಿ

    ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ನಾನು ಖರೀದಿಸಿದ ಫ್ಲ್ಯಾಟ್ ಇಎಂಐ ಪಾವತಿಸಿಲ್ಲ ಎಂದು ನಟಿ ಅಂಕಿತಾ ಲೋಖಂಡೆ ಹೇಳಿದ್ದು, ಬ್ಯಾಂಕ್ ಸ್ಟೇಟಮೆಂಟ್ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸದ್ಯ ಅಂಕಿತಾ ವಾಸವಾಗಿರುವ ಫ್ಲ್ಯಾಟ್ ಇಎಂಐ ಸುಶಾಂತ್ ಖಾತೆಯಿಂದ ಪಾವತಿ ಆಗಿದೆ ಎಂದು ಸುದ್ದಿಗಳು ಬಿತ್ತರವಾದ ಹಿನ್ನೆಲೆಯಲ್ಲಿ ಅಂಕಿತಾ ತಮ್ಮ ಬ್ಯಾಂಕ್ ವ್ಯವಹಾರ ಹಾಗೂ ಫ್ಲ್ಯಾಟ್ ಖರೀದಿಯ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

    https://www.instagram.com/p/CD4Tsc5BNhP/

    ನಾನು ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಮತ್ತು ಪಾರದರ್ಶಕವಾಗಿರಲು ಇಚ್ಛಿಸುತ್ತೇನೆ. ನಾನು ವಾಸವಾಗಿರುವ ಫ್ಲ್ಯಾಟ್ ಇಎಂಐ ನನ್ನ ಬ್ಯಾಂಕ್ ಖಾತೆಯಿಂದಲೇ (01/012019 ರಿಂದ 01/03/2020) ಪಾವತಿಸಿದ್ದೇನೆ. ಸುಶಾಂತ್ ಸಾವಿಗೆ ನ್ಯಾಯ ಸಿಗಲಿ ಎಂಬದಕ್ಕೆ ನನ್ನ ಧ್ವನಿ ಎತ್ತಿದ್ದೇನೆ ಎಂದು ಅಂಕಿತಾ ಇನ್‍ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಪೊಲೀಸರಿಗೆ ದೂರು ನೀಡಿದ ಸುಶಾಂತ್ ಮಾಜಿ ಮ್ಯಾನೇಜರ್ ದಿಶಾ ತಂದೆ

    https://www.instagram.com/p/CD4T4fEBcJs/

    ಸುಶಾಂತ್ ಖಾತೆಯಿಂದಲೇ ಅಂಕಿತಾ ವಾಸವಾಗಿರುವ ಫ್ಲ್ಯಾಟ್ ಇಎಂಐ ಕಡಿತಗೊಂಡಿದೆ. ಆ ಫ್ಲ್ಯಾಟ್ ಸುಶಾಂತ್ ಹೆಸರಿನಲ್ಲಿ ರಿಜಿಸ್ಟರ್ ಆಗಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿತ್ತು. ಸುಶಾಂತ್ ಜೊತೆ ಮೊದಲು ಕೆಲಸ ಮಾಡಿದ್ದ ರಜತ್ ಮೇವಾಟಿ, ಪಂಕಜ್ ದುಬೆ ಮತ್ತು ದೀಪೇಶ್ ಸಾವಂತ್ ಮೂವರನ್ನು ಇಡಿ ವಿಚಾರಣೆ ನಡೆಸಿದೆ. ಮುಂದಿನ ವಾರ ಸುಶಾಂತ್ ಕುಟುಂಸ್ಥರನ್ನ ಇಡಿ ವಿಚಾರಣೆ ನಡೆಸಲಿದೆ. ಈಗಾಗಲೇ ಸುಶಾಂತ್ ಗೆಳತಿ, ನಟಿ ರಿಯಾ ಚಕ್ರವರ್ತಿಯನ್ನು ಎರಡು ಬಾರಿ ಇಡಿ ವಿಚಾರಣೆ ನಡೆಸಿದೆ. ಇದನ್ನೂ ಓದಿ: ಸುಶಾಂತ್ ಖಾತೆಯಿಂದ ರಿಯಾ ಅಕೌಂಟ್‍ಗೆ ಹೋಗಿದ್ದ ಹಣ ಪತ್ತೆ ಹಚ್ಚಿದ ಇಡಿ

  • ಯಾವೆಲ್ಲ ಸಾಲಕ್ಕೆ ಬ್ಯಾಂಕ್‍ಗಳಿಂದ ವಿನಾಯಿತಿ? ಇಎಂಐ ಮೇಲೆ ಬಡ್ಡಿ ಇರುತ್ತಾ?

    ಯಾವೆಲ್ಲ ಸಾಲಕ್ಕೆ ಬ್ಯಾಂಕ್‍ಗಳಿಂದ ವಿನಾಯಿತಿ? ಇಎಂಐ ಮೇಲೆ ಬಡ್ಡಿ ಇರುತ್ತಾ?

    ನವದೆಹಲಿ: ಲಾಕ್‍ಡೌನ್ ಹಿನ್ನೆಲೆಯಲ್ಲಿ ಮೂರು ತಿಂಗಳ ಮಟ್ಟಿಗೆ ಸಾಲದ ಕಂತು ಪಾವತಿಸುವುದಿಂದ ವಿನಾಯಿತಿ ಘೋಷಿಸಿ ದೇಶದ ಸರ್ಕಾರಿ ಸ್ವಾಮ್ಯದ ಬ್ಯಾಂಕ್‍ಗಳು ಅಧಿಕೃತ ಘೋಷಣೆ ಮಾಡಿವೆ.

    ಎಸ್‍ಬಿಐ, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಕಾರ್ಪೋರೇಷನ್ ಬ್ಯಾಂಕ್, ಯುಕೋ ಬ್ಯಾಂಕ್ ಸೇರಿ 16 ಬ್ಯಾಂಕ್‍ಗಳು ಮೇ 31ರವರೆಗೆ ಸಾಲಗಳ ಮೇಲಿನ ತಿಂಗಳ ಕಂತು ಪಾವತಿಯಿಂದ ವಿನಾಯಿತಿ ಘೋಷಿಸಿವೆ. ಈ ಮೂಲಕ ಶುಕ್ರವಾರವಷ್ಟೇ ಆರ್‌ಬಿಐ ನೀಡಿದ್ದ ಆದೇಶಗಳನ್ನು ಜಾರಿಗೊಳಿಸಿವೆ.

    ಕೊರೋನಾ ಲಾಕ್‍ಡೌನ್‍ನಿಂದ ಆರ್ಥಿಕ ಹಿಂಜರಿತ ಶುರುವಾಗುವ ಲಕ್ಷಣ ಕಂಡುಬರುತ್ತಿವೆ. ಹೀಗಾಗಿ ಕೆಲ ರಾಜ್ಯಗಳು ಸರ್ಕಾರಿ ನೌಕರರ ವೇತನ ಕಡಿತಗೊಳಿಸಲು ಮುಂದಾಗಿವೆ. ತೆಲಂಗಾಣದಲ್ಲಿ ಸರ್ಕಾರಿ ನೌಕರರು, ಜನಪ್ರತಿನಿಧಿಗಳ, ವೇತನವನ್ನು ಅರ್ಧಕ್ಕರ್ಧ ಕಡಿತ ಮಾಡಿದೆ. ಮಹಾರಾಷ್ಟ್ರದಲ್ಲೂ ಸರ್ಕಾರಿ ನೌಕರರ ಈ ತಿಂಗಳ ವೇತನ ಕಡಿತಕ್ಕೆ ಆದೇಶ ಹೊರಬಿದ್ದಿದೆ.

    ಯಾವೆಲ್ಲ ಸಾಲಗಳ ಪಾವತಿ ಮುಂದೂಡಿಕೆ?
    ಕೃಷಿ ಸಾಲ, ಬೆಳೆ ಸಾಲ, ವಾಹನ ಸಾಲ, ಗೃಹ ಸಾಲ, ವೈಯಕ್ತಿಕ ಸಾಲ, ಚಿಲ್ಲರೆ ಸಾಲ, ಆಭರಣ ಸಾಲ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಸಾಲ, ಕೆಲ ಬ್ಯಾಂಕ್‍ಗಳ ಕ್ರೆಡಿಟ್ ಕಾರ್ಡ್ ಕಂತಿನ ಪಾವತಿಗೂ ವಿನಾಯಿತಿ ಅನ್ವಯವಾಗುತ್ತದೆ.

    ಸಾಲ ಪಾವತಿ ಮುಂದೂಡಿಕೆ ಹೇಗೆ?
    3 ತಿಂಗಳು ಅಂದರೆ ಮೇ 31ರವರೆಗೆ ಸಾಲದ ಕಂತು ಕಟ್ಟಬೇಕಿಲ್ಲ. ಆದರೆ ಈ ಮೂರು ತಿಂಗಳ ಅವಧಿಯಲ್ಲಿ ಪ್ರತಿ ತಿಂಗಳ ಕಂತಿನ ಮೇಲೆ ಬಡ್ಡಿ ಅನ್ವಯ ಆಗುತ್ತದೆ. ಮೇ 31ರ ಬಳಿಕ ಕಂತು ಕಟ್ಟಲು ನಿರ್ಧರಿಸಿದ್ರೆ ಆಗ ಮೂರು ತಿಂಗಳ ಕಂತಿನ ಜೊತೆಗೆ ಬಡ್ಡಿಯನ್ನೂ ಒಟ್ಟಿಗೆ ಪಾವತಿಸಬೇಕಾಗುತ್ತದೆ. ಸಾಲ ಪಾವತಿ ವಿಳಂಬ ಕಾರಣಕ್ಕಾಗಿ ದಂಡಗಳನ್ನು ಹಾಕುವುದಿಲ್ಲ. ಕ್ರೆಡಿಟ್ ಸ್ಕೋರ್ ಮೇಲೆ ಪರಿಣಾಮ ಬೀರುವುದಿಲ್ಲ.