Tag: Emotional

  • ಶಿವಣ್ಣ, ನಾನು ಮುಖ ನೋಡಿಕೊಳ್ಳಲು ನಾಚಿಕೆಯಾಗಿದೆ: ರಾಘವೇಂದ್ರ ರಾಜ್‍ಕುಮಾರ್

    ಶಿವಣ್ಣ, ನಾನು ಮುಖ ನೋಡಿಕೊಳ್ಳಲು ನಾಚಿಕೆಯಾಗಿದೆ: ರಾಘವೇಂದ್ರ ರಾಜ್‍ಕುಮಾರ್

    – ನಾವಿಬ್ಬರು ಅವನನ್ನು ಕಳುಹಿಸಿಕೊಡಬೇಕಾಯ್ತು

    ಬೆಂಗಳೂರು: ಪುನೀತ್‍ರಾಜ್‍ಕುಮಾರ್ ಅವರನ್ನು ಕಳೆದುಕೊಂಡಿರುವುದು ಅಭಿಮಾನಿಗಳು ಸೇರಿದಂತೆ ರಾಜ್‍ಕುಟುಂಬಕ್ಕೆ ಮರೆಯಲಾಗದ ನೋವಾಗಿದೆ. ನಿನ್ನೆ ನಡೆದ ಪುನೀತ್ ನುಡಿ ನಮನ ಕಾರ್ಯಕ್ರಮದಲ್ಲಿ ರಾಘವೇಂದ್ರ ರಾಜ್‍ಕುಮಾರ್ ಭಾವನಾತ್ಮಕವಾಗಿ ಮಾತನಾಡಿ ಕಣ್ಣೀರು ಹಾಕಿದ್ದಾರೆ.

    ಫಿಲ್ಮ್ ಚೇಂಬರ್ ಆಯೋಜಿಸಿದ್ದ ಪುನೀತ್ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೀವೆಲ್ಲರೂ ಸೇರಿ ನನಗೊಂದು ಸಹಾಯ ಮಾಡಿ. ನನ್ನನ್ನು ಕಳಿಸಿಕೊಟ್ಟು ಅವನನ್ನು ವಾಪಸ್ ಕರೆಸಿಕೊಳ್ಳಿ ಪ್ಲೀಸ್. ಪುನೀತ್ ಅವರನ್ನು ಹೂತಿಲ್ಲ, ಬಿತ್ತಿದ್ದೇವೆ. ಮುಂದೆ ಪುನೀತ್ ರೀತಿ ಇರುವ ನೂರಾರು ಜನ ಹುಟ್ಟಿ ಬರುತ್ತಾರೆ. ಹುಟ್ಟುವಾಗ ನನ್ನ ತಮ್ಮನಾಗಿ ಬಂದ. ವಾಪಸ್ ಹೋಗುವಾಗ ತಂದೆಯಾಗಿ ಹೋದ. ಹೇಗೆ ಬದುಕಬೇಕು ಎಂಬುದನ್ನು ನನಗೂ ಮತ್ತು ಶಿವಣ್ಣನಿಗೂ ತಿಳಿಸಿಕೊಟ್ಟು ಹೋದ. ದಯವಿಟ್ಟು ಬಂದುಬಿಡು ಕಂದಾ ಎಂದು ಹೇಳುತ್ತಾ ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ- ಸಿಎಂ ಘೋಷಣೆ

    ಇಷ್ಟು ದಿನ ಈ ನೋವನ್ನು ತಡೆದುಕೊಂಡಿದ್ದೆ. ನಾನು ಕಣ್ಣೀರು ಹಾಕಿದರೆ ಅಪ್ಪು ಪತ್ನಿ ಅಶ್ವಿನಿ, ಮಕ್ಕಳು ನೊಂದುಕೊಳ್ಳುತ್ತಾರೆ. ನನಗೆ ಮತ್ತು ಶಿವಣ್ಣನಿಗೆ ಮುಖ ನೋಡಿಕೊಳ್ಳಲು ನಾಚಿಕೆಯಾಗುತ್ತಿದೆ. ನಾವು ಅವನನ್ನು ಕಳುಹಿಸಿ ಕೊಡಬೇಕಾಯಿತಲ್ಲ. ಇಂಥಹ ಒಂದು ದಿನ ಬೇಕಾ? ಎಂದು ನಮಗೆ ಬೇಸರವಾಯಿತು. ನಮ್ಮ ದುಃಖವನ್ನು ಹೇಳಿಕೊಳ್ಳೋಣ ಎಂದರೆ ಅಪ್ಪುನನ್ನು ಅಪ್ಪ, ಅಮ್ಮನ ಹತ್ತಿರವೇ ಮಲಗಿಸಿ ಬಿಟ್ಟೆವು. ನಿನ್ನ ಜಾಗಕ್ಕೆ ನಾನು ಬರುತ್ತೇನೆ ವಾಪಸ್ ಬಂದು ಬಿಡು. ಈ ನೋವು ಮರೆಯುವ ಶಕ್ತಿ ಕೊಡು ಅಂತ ದೇವರಲ್ಲಿ ಕೇಳಲ್ಲ. ಈ ನೋವಿನ ಜೊತೆಗೆ ಬದುಕುವ ಶಕ್ತಿ ಕೊಡು ಅಂತ ಕೇಳುತ್ತೇನೆ. ಅವನು ನನ್ನ ಎದೆಯೊಳಗೆ ಇದ್ದಾನೆ ಎಂದು ರಾಘವೇಂದ್ರ ರಾಜ್‍ಕುಮಾರ್ ಹೇಳಿದರು. ಈ ಮಾತನ್ನು ಕೇಳುತ್ತಿದ್ದ ಶಿವರಾಜ್‍ಕುಮಾರ್ ಅವರು ಬಿಕ್ಕಿ ಬಿಕ್ಕಿ ಅತ್ತರು. ಇದನ್ನೂ ಓದಿ: ʼಅಪ್ಪುʼಗೆ ನನ್ನ ದೃಷ್ಟಿಯೇ ತಾಗಿತೇನೊ ಅನಿಸುತ್ತೆ: ತಮ್ಮನ ನೆನೆದು ಶಿವಣ್ಣ ಕಣ್ಣೀರು

  • ಯಾವುದೇ ಒತ್ತಡಕ್ಕೆ ಮಣಿದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿಲ್ಲ: ಬಿಎಸ್‍ವೈ

    ಯಾವುದೇ ಒತ್ತಡಕ್ಕೆ ಮಣಿದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿಲ್ಲ: ಬಿಎಸ್‍ವೈ

    – ಇನ್ನೊಬ್ಬರು ರಾಜಕೀಯವಾಗಿ ಬೆಳೆಯಲಿ ಎಂಬ ಉದ್ದೇಶದಿಂದ ರಾಜೀನಾಮೆ

    ಶಿವಮೊಗ್ಗ: ಯಾವುದೇ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿಲ್ಲ, ರಾಜಕೀಯವಾಗಿ ಇತರರು ಬೆಳೆಯಲಿ ಎಂಬ ಉದ್ದೇಶದಿಂದ ಸಿಎಂ ಸ್ಥಾನದಿಂದ ಇಳಿದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

    ಜಿಲ್ಲೆಯ ಶಿಕಾರಿಪುರದ ಕುಮದ್ವತಿ ಸಭಾಂಗಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾದ ಎರಡು ವರ್ಷದ ಅವಧಿ ಮುಗಿದ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಷಣದ ವೇಳೆ ಸ್ವಲ್ಪ ದುಃಖ ವ್ಯಕ್ತಪಡಿಸಿದ್ದೆ. ಶಿಕಾರಿಪುರ ಜನರ ಹೋರಾಟ ನೆನಪು ಮಾಡಿಕೊಳ್ಳುವ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗಿದ್ದು ನಿಜ ಎಂದರು.

    ಸರ್ಕಾರಕ್ಕೆ ಎರಡು ವರ್ಷ ಮುಗಿಯುವ ವೇಳೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಬೇರೊಬ್ಬರಿಗೆ ಅವಕಾಶ ಮಾಡಿಕೊಡಬೇಕು ಎಂಬ ಸಂಕಲ್ಪ ಮಾಡಿದ್ದೆ. ಅದರಂತೆಯೇ ನನ್ನ ಭಾಷಣ ಮುಗಿದ ಮೇಲೆ ಎಲ್ಲರಿಗೂ ಸಿಹಿ ಊಟ ಹಾಕಿಸಿ, ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ರಾಜಭವನಕ್ಕೆ ತೆರಳಿ, ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ನನಗೆ ಸಹಕಾರ ನೀಡಿದಂತೆ ಅವರಿಗೂ ಸಹಕಾರ ನೀಡಬೇಕು. ದೇಶಕ್ಕೆ ಮಾದರಿಯಾಗುವ ರೀತಿ ಅಭಿವೃದ್ಧಿ ಕಾರ್ಯಗಳ ಮೂಲಕ ರಾಜ್ಯ ನಿರ್ಮಿಸೋಣ ಎಂದು ತಿಳಿಸಿದರು. ಇದನ್ನೂ ಓದಿ: ಬೈ ಎಲೆಕ್ಷನ್‍ನಲ್ಲಿ ಸೋತ್ರೂ ನಮ್ಮ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಬಲ ಕೊಟ್ಟಿದ್ದಾರೆ: ಡಿ.ಕೆ.ಶಿವಕುಮಾರ್

    ರಾಜ್ಯದ ಉದ್ದಗಲಕ್ಕೂ ತೆರಳಿ ಪಕ್ಷ ಸಂಘಟನೆ ಮಾಡುವುದು ನನ್ನ ಏಕೈಕ ಉದ್ದೇಶ. ಪಕ್ಷದ ಪ್ರಮುಖರು ಕಾರ್ಯಕರ್ತರೊಂದಿಗೆ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವೆ, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವ ಉದ್ದೇಶ ನಮ್ಮದು. ದೇಶದಲ್ಲಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬ ಉದ್ದೇಶ ನಮ್ಮದು ಎಂದರು.

    ಶಿಕಾರಿಪುರದಲ್ಲಿ ಅತಿಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ಇತರೆ ಭಾಗಗಳಲ್ಲಿ ಕೂಡ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವ ಸಮಾಧಾನ ಇದೆ. ಜನರ ವಿಶ್ವಾಸ ಮತ್ತು ಅವರ ನಂಬಿಕೆಯನ್ನು ಉಳಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದರು.

  • ಅಪ್ಪಾಜಿಯ ಸಿಎಂ ಸ್ಥಾನ ಗಟ್ಟಿಯಾಗಿರಲೆಂದು ದೇವರಲ್ಲಿ ಪ್ರಾರ್ಥಿಸುವೆ: ಬಿಎಸ್‍ವೈ ದತ್ತು ಪುತ್ರ ವಿಶ್ವನಾಥ್

    ಅಪ್ಪಾಜಿಯ ಸಿಎಂ ಸ್ಥಾನ ಗಟ್ಟಿಯಾಗಿರಲೆಂದು ದೇವರಲ್ಲಿ ಪ್ರಾರ್ಥಿಸುವೆ: ಬಿಎಸ್‍ವೈ ದತ್ತು ಪುತ್ರ ವಿಶ್ವನಾಥ್

    ಬೆಂಗಳೂರು: ಅಪ್ಪಾಜಿ ಸಿಎಂ ಸ್ಥಾನದಿಂದ ನಿರ್ಗಮನದ ವಿಚಾರ ಚರ್ಚೆಯಾಗುತ್ತಿದೆ. ಆದರೆ ಅವರು ಐದು ವರ್ಷ ಪೂರೈಸಬೇಕು. ಸಿಎಂ ಸೀಟಿನಿಂದ ಕೆಳಗೆ ಇಳಿಯಬಾರದು. ಸಿಎಂ ಸ್ಥಾನ ಗಟ್ಟಿಯಾಗಿರಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದತ್ತು ಪುತ್ರ ವಿಶ್ವನಾಥ್ ಬಿ ತಿಳಿಸಿದ್ದಾರೆ.

    ಈ ಕುರಿತು ಮಾತನಾಡಿರುವ ಅವರು, ಅಪ್ಪಾಜಿಯವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು, ಅವರು ಸಿಎಂ ಸ್ಥಾನದಲ್ಲಿ ಮುಂದುವರಿಯಬೇಕೆಂದು ಪ್ರಾರ್ಥಿಸುತ್ತೇನೆ ಎಂದು ಭಾವುಕರಾಗಿ ನುಡಿದರು.

    ಮೂಲತಃ ಉತ್ತರ ಕರ್ನಾಟಕ ಮೂಲದ ವಿಶ್ವನಾಥ್ ಬೆಂಗಳೂರಿನಲ್ಲಿ ವಾಸವಾಗಿದ್ದರು. 2010ರಲ್ಲಿ ಬಿಎಸ್‍ವೈ ಸಿಎಂ ಆಗಿದ್ದಾಗ ಮಳೆ ಹಾನಿ ವೀಕ್ಷಿಸಲು ಗಾಳಿ ಅಂಜನೇಯ ದೇಗುಲಕ್ಕೆ ತೆರಳಿದ್ದರು. ಆಗ 11 ವರ್ಷದ ವಿಶ್ವನಾಥ್ ಸಿಎಂ ನೋಡಲು ದೇವಸ್ಥಾನದ ಗೋಡೆ ಎಗರಿ, ಸರ್ಕಸ್ ಮಾಡಿ ಸಿಎಂ ಬಳಿಗೆ ಬಂದಿದ್ದರು.

    ಈ ವೇಳೆ ಪುಟ್ಟ ಹುಡುಗನನ್ನು ನೋಡಿದ ಬಿಎಸ್‍ವೈ ಖುಷಿ ಪಟ್ಟು, ನಿನ್ನನ್ನು ನಾನು ದತ್ತು ಪಡೆದು, ವಿದ್ಯಾಭ್ಯಾಸ ನೋಡಿಕೊಳ್ಳುತ್ತೇನೆ ಎಂದು ವಿಶ್ವನಾಥ್ ಗೆ ಭರವಸೆ ಕೊಟ್ಟಿದ್ದರು. ಅಷ್ಟೇ ಅಲ್ಲ ವಿಶ್ವನಾಥ್ ಗೆ ಈಗ ಕೆಆರ್‍ಡಿಎಲ್ ನಲ್ಲಿ ಡಿ ಗ್ರೂಪ್ ನೌಕರ ಹುದ್ದೆಯನ್ನು ಕೂಡ ಕೊಡಿಸಿದ್ದಾರೆ. ಈಗ ಸಿಎಂ ಬದಲಾವಣೆಯ ಬಗ್ಗೆ ಚರ್ಚೆಯಾಗುತ್ತಿರುವ ವಿಚಾರಕ್ಕೆ ಸಿಎಂ ದತ್ತು ಪುತ್ರ ಬೇಸರ ವ್ಯಕ್ತಪಡಿಸಿದ್ದಾರೆ.

  • ಮಹಿಳೆಯ ಮಾತು ಕೇಳಿ ಭಾವುಕರಾದ ಮೋದಿ

    ಮಹಿಳೆಯ ಮಾತು ಕೇಳಿ ಭಾವುಕರಾದ ಮೋದಿ

    ನವದೆಹಲಿ: ಮಹಿಳೆಯೊಬ್ಬರ ಮಾತು ಕೇಳಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವೇದಿಕೆಯಲ್ಲಿಯೇ ಭಾವುಕರಾಗಿದ್ದಾರೆ.

    ಇಂದು ಮೋದಿ ಜನೌಷಧಿ ಕೇಂದ್ರಗಳ ಮಾಲೀಕರು ಮತ್ತು ಪ್ರಧಾನ್ ಮಂತ್ರಿ ಭಾರತೀಯ ಜನೌಶಧಿ ಪರಿಯೋಜನ (ಪಿಎಂಬಿಜೆಪಿ) ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಹನ ನಡೆಸಿದರು. ಈ ಕಾರ್ಯಕ್ರಮದಲ್ಲಿ ಮಹಿಳೆ ದೀಪಾ ಶಾ, ನಾನು ದೇವರನ್ನು ನೋಡಿಲ್ಲ. ಆದರೆ ನಿಮ್ಮಲ್ಲಿ ದೇವರನ್ನು ನೋಡುತ್ತೇನೆ ಎಂದು ಹೇಳಿದ್ದಾರೆ. ಈ ಮಾತನ್ನು ಕೇಳಿದ ಮೋದಿ ಒಂದು ಕ್ಷಣ ಭಾವುಕರಾದರು.

    ಈ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ದೀಪಾ ಶಾ, ನಾನು 2011 ರಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದೆ. ವೈದ್ಯರು ನೀವು ಗುಣವಾಗಲ್ಲ ಎಂದು ಹೇಳಿದ್ದರು. ಆದರೆ ನಾನು ಜನೌಷಧಿ ಕೇಂದ್ರದಿಂದ ಕಡಿಮೆ ಬೆಲೆಗೆ ಮಾತ್ರೆಗಳನ್ನು ತೆಗೆದುಕೊಂಡು ಸೇವಿಸಿ ಈಗ ಗುಣವಾಗಿದ್ದೇನೆ. ಜೊತೆಗೆ ತಿಂಗಳಿಗೆ 3,500 ರೂ. ಹಣವನ್ನು ಉಳಿಸಿಕೊಳ್ಳುತ್ತಿದ್ದೇನೆ. ಈ ಹಣ ನನ್ನ ಊಟದ ಮತ್ತು ತಿಂಗಳ ಬಳಕೆಗೆ ಖರ್ಚು ಮಾಡುತ್ತೇನೆ ಎಂದರು.

    ಜೊತೆಗೆ ನನಗೆ ಎಲ್ಲರೂ ಸಹಾಯ ಮಾಡಿದ್ದಾರೆ. ನಮ್ಮ ರಾಜ್ಯದ ಮುಖ್ಯಮಂತ್ರಿಯೂ ಕೂಡ ಸಹಾಯ ಮಾಡಿದ್ದಾರೆ. ನಾನು ಯಾವತ್ತು ಶಿವನನ್ನು ನೋಡಿಲ್ಲ. ಆದರೆ ನಿಮ್ಮನ್ನು ನೋಡಿದಾಗ ನನಗೆ ನಿಮ್ಮಲ್ಲಿ ಶಿವ ಕಾಣುತ್ತಾನೆ ಎಂದು ಹೇಳಿ ಅವರು ಬಿಕ್ಕಿಬಿಕ್ಕಿ ಅತ್ತಿದ್ದಾರೆ. ದೀಪಾ ಶಾ ಅಳುವುದನ್ನು ಕಂಡ ಮೋದಿ ಅವರು ಕೂಡ ಕಣ್ಣೀರು ಹಾಕಿದ್ದಾರೆ.

    ಇದಾದ ನಂತರ ಮಾತನಾಡಿದ ಮೋದಿ ಅವರು, ನೀವು ನಿಮ್ಮ ಇಚ್ಛಾಶಕ್ತಿಯಿಂದ ನಿಮ್ಮ ರೋಗವನ್ನು ಸೋಲಿಸಿದ್ದೀರಾ. ನಿಮ್ಮ ಧೈರ್ಯ ನಿಮ್ಮ ದೇವರು, ಆ ಧೈರ್ಯವೇ ನಿಮ್ಮನ್ನು ರೋಗದಿಂದ ಹೋರಬರುವ ಶಕ್ತಿ ನೀಡಿದೆ. ನಿಮ್ಮಲ್ಲಿರುವ ಈ ವಿಶ್ವಾಸ ಹೀಗೆ ಇರಲಿ ಎಂದು ವಿಡಿಯೋ ಕಾನ್ಫರೆನ್ಸ್ ಅಲ್ಲಿ ತಿಳಿಸಿದ್ದಾರೆ.

    ಇದೇ ವೇಳೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಮೋದಿ, ಕೊರೊನಾ ವೈರಸ್ ವದಂತಿಯಿಂದ ದೂರ ಇರುವಂತೆ ನನ್ನ ದೇಶದ ಜನರಲ್ಲಿ ಮನವಿ ಮಾಡುತ್ತೇನೆ. ಕೊರೊನಾ ಈ ನಿಟ್ಟಿನಲ್ಲಿ ನಾವು ವೈದ್ಯರ ಸಲಹೆಯನ್ನು ಪಾಲಿಸಬೇಕಾಗಿದೆ ಎಂದು ಕರೆ ಕೊಟ್ಟರು. ನಾವು ನಮಸ್ಕಾರ ಎಂದು ಶುಭಾಶಯ ಕೋರುವುದನ್ನು ಕೆಲವು ಕಾರಣಗಳಿಂದ ಮರೆತ್ತಿದ್ದೇವೆ. ಆದರೆ ಇಂದು ಇಡೀ ಪ್ರಪಂಚವೇ ನಮಸ್ಕಾರ ಮಾಡಿ ಆಹ್ವಾನಿಸುವುದನ್ನು ಮಾಡುತ್ತಿದೆ. ನಮಗೆ ಇದೇ ಸರಿಯಾದ ಸಮಯ ಹ್ಯಾಂಡ್‍ಶೇಕ್ ಮಾಡುವ ಬದಲು ನಮಸ್ಕಾರ ಮಾಡುವ ಅಭ್ಯಾಸವನ್ನು ಮತ್ತೊಮ್ಮೆ ಅಳವಡಿಸಿಕೊಳ್ಳಬೇಕು ಎಂದು ಮೋದಿ ತಿಳಿಸಿದ್ದಾರೆ.

    ಪ್ರತಿ ತಿಂಗಳು, ಒಂದು ಕೋಟಿ ಕುಟುಂಬಗಳು ಈ ಜನೌಷಧಿ ಕೇಂದ್ರಗಳಿಂದ ಅಗ್ಗದ ಔಷಧಿಗಳ ಲಾಭವನ್ನು ಪಡೆಯುತ್ತಿವೆ. ದೇಶಾದ್ಯಂತ 6,000 ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳು ಜನರಿಗೆ 2,000-2,500 ಕೋಟಿ ರೂ. ಗಳನ್ನು ಉಳಿಸಲು ಸಹಾಯ ಮಾಡಿದೆ ಎಂದು ಅವರು ಹೇಳಿದರು.