Tag: Employees

  • ಮೈಸೂರು ಚಾಮುಂಡೇಶ್ವರಿ ದೇವಸ್ಥಾನದ ನೌಕರರಿಂದ ಸರ್ಕಾರಕ್ಕೆ ಎಚ್ಚರಿಕೆ!

    ಮೈಸೂರು ಚಾಮುಂಡೇಶ್ವರಿ ದೇವಸ್ಥಾನದ ನೌಕರರಿಂದ ಸರ್ಕಾರಕ್ಕೆ ಎಚ್ಚರಿಕೆ!

    ಮೈಸೂರು: ಚಾಮುಂಡೇಶ್ವರಿ ದೇವಸ್ಥಾನದ ನೌಕರರು ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಬಾರಿಸಿದ್ದಾರೆ. ನೌಕರರ ವೇತನ ಪರಿಷ್ಕರಣೆ ಆಗದಿದ್ದಲ್ಲಿ ಮುಂಬರುವ ಆಷಾಢ ಮಾಸದ ಕಾರ್ಯಕ್ರಮಗಳ ವೇಳೆ ಕೆಲಸ ನಿಲ್ಲಿಸುವ ನಿರ್ಧಾರ ಕೈಗೊಂಡಿದ್ದಾರೆ.

    ಕೆಲಸಗಳನ್ನ ಸ್ಥಗಿತಗೊಳಿಸಿ ದೇವಸ್ಥಾನದ ಮುಂದೆ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಒಟ್ಟು 80 ನೌಕರರು ಇಂತಹ ತೀರ್ಮಾನಕ್ಕೆ ಬಂದಿದ್ದಾರೆ. ಕಳೆದ 10 ವರ್ಷಗಳಿಂದ ವೇತನ ಹೆಚ್ಚಿಸುವಂತೆ ಮಾಡಿದ ಮನವಿಗಳಿಗೆ ಸರ್ಕಾರ ಸ್ಪಂದಿಸಿಲ್ಲ. ಒಟ್ಟು 160 ನೌಕರರ ಪೈಕಿ 80 ನೌಕರರು ಕೇವಲ 5 ಸಾವಿರ ರೂಪಾಯಿ ಸಂಬಳದಲ್ಲೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಉಳಿದ 80 ನೌಕರರಿಗೆ ನೀಡುವ ವೇತನವನ್ನೇ ತಮಗೂ ನಿಗದಿ ಪಡಿಸುವಂತೆ ಒತ್ತಾಯಿಸಿದ್ದಾರೆ.

    ಚಾಮುಂಡಿ ಬೆಟ್ಟದಲ್ಲಿ ಬರುವ ಆದಾಯದಲ್ಲಿ 35%ರಷ್ಟು ಹಣವನ್ನ ನಿರ್ವಹಣೆಗೆ ಬಳಸಿಕೊಳ್ಳುವಂತೆ ಸರ್ಕಾರದ ಆದೇಶವಿದ್ದರೂ ಪಾಲಿಸುತ್ತಿಲ್ಲ. ಶೀಘ್ರದಲ್ಲೇ ವೇತನ ಪರಿಷ್ಕರಣೆ ಬೇಡಿಕೆಯನ್ನ ಈಡೇರಿಸದಿದ್ದಲ್ಲಿ ಆಷಾಢ ಮಾಸದ ವೇಳೆ ಕೆಲಸ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ್ದಾರೆ. ಹಾಗೊಂದು ವೇಳೆ ನೌಕರರು ಕೆಲಸ ಸ್ಥಗಿತಗೊಳಿಸಿದ್ದಲ್ಲಿ ಆಷಾಢ ಶುಕ್ರವಾರಗಳಲ್ಲಿ ಬೆಟ್ಟಕ್ಕೆ ಬರುವ ಲಕ್ಷಾಂತರ ಭಕ್ತರಿಗೆ ಅನಾನುಕೂಲವಾಗುತ್ತದೆ.

  • ಆರ್ ಟಿಪಿಎಸ್ ನಲ್ಲಿ ವ್ಯಾಗನರ್ ಗಳಿಗೆ ಬೂದಿ ತುಂಬುವ ಪೈಪ್ ಗಳಲ್ಲಿ ಸೋರಿಕೆ

    ಆರ್ ಟಿಪಿಎಸ್ ನಲ್ಲಿ ವ್ಯಾಗನರ್ ಗಳಿಗೆ ಬೂದಿ ತುಂಬುವ ಪೈಪ್ ಗಳಲ್ಲಿ ಸೋರಿಕೆ

    ರಾಯಚೂರು: ಶಕ್ತಿ ನಗರದಲ್ಲಿರುವ ಆರ್ ಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಹಾರುವ ಬೂದಿ ಪೈಪ್ ಸೋರಿಕೆಯಾಗಿ ಕೆಲ ಕಾಲ ಆತಂಕ ಸೃಷ್ಟಿಸಿದೆ.

    ನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಲೋಕಾ ಶೆಡ್ ಬಳಿ ವ್ಯಾಗನಾರ್ ಗಳಿಗೆ ತುಂಬುವ ಬೂದಿ ಪೈಪ್ ಗಳು ಸೋರಿಕೆಯಾಗಿದ್ದರಿಂದ ಈ ಅವಘಡ ಸಂಭವಿಸಿದೆ. ಬೂದಿ ಸೋರಿಕೆಯಾದ ಪರಿಣಾಮ ಸಂಪೂರ್ಣ ಆರ್ ಟಿಪಿಎಸ್ ಘಟಕ ಬೂದಿಯಿಂದ ಆವೃತಗೊಂಡಿದೆ. ಇದರಿಂದಾಗಿ ಘಟಕದಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ಕಂಗಲಾಗಿದ್ದು, ಹಾರೋ ಬೂದಿಯಿಂದಾಗಿ ಸಿಬ್ಬಂದಿಗಳಿಗೆ ಉಸಿರಾಟಕ್ಕೂ ತೊಂದರೆಯಾಗಿದೆ ಎಂದು ತಿಳಿದು ಬಂದಿದೆ.

    ಈ ಬೂದಿ ರಾಯಚೂರು-ಹೈದರಾಬಾದ್ ಮುಖ್ಯ ರಸ್ತೆವರೆಗೂ ಹಬ್ಬಿದ್ದರಿಂದ ಪ್ರಯಾಣಿಕರು ಸಹ ಗಾಬರಿಗೊಂಡಿದ್ದು, ಸದ್ಯ ಈಗ ವಾತಾವರಣ ಸಹಜ ಸ್ಥಿತಿಗೆ ಮರಳುತ್ತಿದೆ. ಆರ್ ಟಿಪಿಎಸ್ ಘಟಕದಲ್ಲಿ ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿರುವುದರಿಂದ ಸಿಬ್ಬಂದಿಗಳು ಆತಂಕ ಹೆಚ್ಚಾಗಿದೆ.

  • ಮೇ 30, 31ಕ್ಕೆ ದೇಶಾದ್ಯಂತ ಬ್ಯಾಂಕ್ ಬಂದ್

    ಮೇ 30, 31ಕ್ಕೆ ದೇಶಾದ್ಯಂತ ಬ್ಯಾಂಕ್ ಬಂದ್

    ಬೆಂಗಳೂರು: ಈ ತಿಂಗಳ ಅಂತ್ಯ ಅಂದ್ರೆ ಮೇ 30 ಮತ್ತು 31ರಂದು ಬ್ಯಾಂಕ್‍ಗಳ ಒಕ್ಕೂಟ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಎರಡು ದಿನ ಬ್ಯಾಂಕ್‍ಗಳು ಬಂದ್ ಆಗಲಿವೆ.

    ಪ್ರತಿ 5 ವರ್ಷಕ್ಕೊಮ್ಮೆ ವೇತನ ಹೆಚ್ಚಳ ಮಾಡಬೇಕೆಂಬ ನಿಯಮವಿದ್ರು, ಸಹ ಕಳೆದ ಒಂದು ವರ್ಷದಿಂದ ಯಾವುದೇ ರೀತಿಯ ಮಾತುಕತೆಗೆ ಸರ್ಕಾರ ಕರೆದಿಲ್ಲ. ಈಗಾಗಲೇ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿರೋ ಸಿಬ್ಬಂದಿ ಈ ತಿಂಗಳಾಂತ್ಯಕ್ಕೆ ಎರಡು ದಿನಗಳ ಕಾಲ ಬ್ಯಾಂಕ್ ಕೆಲಸ ನಿಲ್ಲಿಸಿ ಪ್ರತಿಭಟನೆ ನಡೆಸಲಿದ್ದೇವೆ ಅಂತಾರೆ ಬ್ಯಾಂಕ್ ಒಕ್ಕೂಟದ ಸದಸ್ಯರು ತಿಳಿಸಿದ್ದಾರೆ.

    ಒಂದು ವೇಳೆ ಸರ್ಕಾರ ಮತ್ತು ಐಬಿಎ (ಭಾರತೀಯ ಬ್ಯಾಂಕ್‍ಗಳ ಒಕ್ಕೂಟ) ನಮ್ಮ ಪ್ರತಿಭಟನೆಗೆ ಸ್ಪಂದಿಸದೇ ಹೋದ್ರೆ ಮುಷ್ಕರವನ್ನ ಅನಿರ್ಧಿಷ್ಟಾವದಿಗೆ ನಡೆಸಲು ಈಗಾಗಲೇ ತೀರ್ಮಾನ ಮಾಡಲಾಗಿದೆ. ಇಡೀ ದೇಶದಲ್ಲಿ ನಡೆಯೋ ಈ ಪ್ರತಿಭಟನೆಯಲ್ಲಿ ಲಕ್ಷಾಂತರ ನೌಕರರು ಪಾಲ್ಗೊಳ್ಳಲಿದ್ದಾರೆ ಎಂದು ಬ್ಯಾಂಕ್ ಅಸೋಸಿಯೇಷನ್‍ನ ಪದಾಧಿಕಾರಿ ಪಿ.ಜಿ.ಆರ್. ಬನ್ನಿಂದ್ಯಾಯ ಎಚ್ಚರಿಕೆ ನೀಡಿದ್ದಾರೆ.

  • ಒಳಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಸಾವು!

    ಒಳಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಸಾವು!

    ಉಡುಪಿ: ಒಳಚರಂಡಿ ಕಾಮಗಾರಿ ಸಂದರ್ಭದಲ್ಲಿ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.

    ಕಾಪು ತಾಲೂಕಿನ ನಗರದೊಳಗೆ ಒಳಚರಂಡಿ ಕಾಮಗಾರಿ ಸಂದರ್ಭದಲ್ಲಿ ದಾಸಪ್ಪ ಮತ್ತು ಉಮೇಶ್ ಎಂಬ ಚಿತ್ರದುರ್ಗ ಮೂಲದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಪುರಸಭೆಗೆ ಒಳಪಟ್ಟ ಒಳಚರಂಡಿ ಕಾಮಗಾರಿ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

    ಸುಮಾರು 13 ಅಡಿ ಮಣ್ಣು ಅಗಿಯುತ್ತಿದ್ದಾಗ ರಸ್ತೆಯಲ್ಲಿ ಸಂಚರಿಸುತ್ತಿದ್ದ ಘನ ವಾಹನಗಳಿಗೆ ಭೂಮಿ ಅದುರಿ ಮಣ್ಣು ಕುಸಿದಿದೆ ಎನ್ನಲಾಗಿದೆ. ಮೇಲಿನಿಂದ ಬಿದ್ದ ಭಾರೀ ಗಾತ್ರದ ಮಣ್ಣಿಗೆ ಕಾರ್ಮಿಕರು ಮೇಲೆ ಬರಲು ಸಾಧ್ಯವಾಗಲಿಲ್ಲ.

    ವಾಸುದೇವ ಶೆಟ್ಟಿ ಕಾಮಗಾರಿಯ ಗುತ್ತಿಗೆದಾರನಾಗಿದ್ದು ಯಾವುದೇ ಮುಂಜಾಗೃತಾ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಕಾರ್ಮಿಕರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾರ್ಮಿಕರನ್ನು ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ.

    ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಕೋಳಿಫಾರಂನ ಕಲುಷಿತ ನೀರಿನ ಟ್ಯಾಂಕ್ ಶುಚಿಗೊಳಿಸಲು ಹೋಗಿ 7 ಕಾರ್ಮಿಕರು ಬಲಿ!

    ಕೋಳಿಫಾರಂನ ಕಲುಷಿತ ನೀರಿನ ಟ್ಯಾಂಕ್ ಶುಚಿಗೊಳಿಸಲು ಹೋಗಿ 7 ಕಾರ್ಮಿಕರು ಬಲಿ!

    ಕೋಲಾರ: ಕೋಳಿಫಾರಂನ ಕಲುಷಿತ ನೀರಿನ ಟ್ಯಾಂಕ್ ಶುಚಿ ಮಾಡಲು ಇಳಿದ 7 ಜನ ಕೂಲಿ ಕಾರ್ಮಿಕರು ವಿಷಕಾರಿ ಅನಿಲ ಸೇವನೆಯಿಂದಾಗಿ ಉಸಿರುಗಟ್ಟಿ ಧಾರುಣವಾಗಿ ಸಾವನ್ನಪ್ಪಿ ಒರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಕೋಲಾರದ ಗಡಿ ಆಂಧ್ರಪ್ರದೇಶದಲ್ಲಿ ನಡೆದಿದೆ.

    ಕೋಲಾರ ಜಿಲ್ಲೆಯ ಗಡಿ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ಸಮೀಪದ ಮುರಂಪಲ್ಲಿ ಬಳಿ ಇಂದು ಬೆಳಗ್ಗೆ 10.30ಕ್ಕೆ ಈ ಘಟನೆ ನಡೆದಿದೆ. ವೆಂಕಟೇಶ್ವರ ಶೀತಲ ಘಟಕದಲ್ಲಿ ಸಂಗ್ರಹವಾಗಿದ್ದ ಕೊಳಚೆ ನೀರು ಸ್ವಚ್ಛ ಮಾಡಲು ಟ್ಯಾಂಕ್ ಗೆ ಇಳಿದಿದ್ದ ವೇಳೆ ಉಸಿರುಗಟ್ಟಿ ಕಾರ್ಮಿಕರು ಮೃತಪಟ್ಟಿದ್ದಾರೆ.

    ಶುದ್ಧಿ ಮಾಡಲು ಇಳಿದಿದ್ದ 7 ಜನ ಅಸ್ವಸ್ಥರನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದ್ದರೂ ಚಿಕಿತ್ಸೆ ಫಲಕಾರಿಯಾಗದೆ 7 ಜನರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸದ್ಯ ಒರ್ವನ ಸ್ಥಿತಿ ಗಂಭೀರವಾಗಿದ್ದು, ಮೃತರನ್ನ ರಮೇಶ್, ರಾಮಚಂದ್ರ, ರೆಡ್ಡಪ್ಪ, ಕೇಶವ, ಗೋವಿಂದಸ್ವಾಮಿ, ಬಾಬು ಹಾಗೂ ಶಿವ ಎಂದು ಗುರುತಿಸಲಾಗಿದ್ದು, ಮೃತರು ಪಲಮನೇರು ಮೂಲದ ಕೂಲಿ ಕಾರ್ಮಿಕರು ಎಂದು ಗುರುತಿಸಲಾಗಿದೆ.

    ಟ್ಯಾಂಕ್‍ನಲ್ಲಿ ಪ್ರತಿನಿತ್ಯ ಕೋಳಿಫಾರಂನ ತ್ಯಾಜ್ಯವನ್ನ ಶೇಖರಣೆ ಮಾಡಲಾಗುತ್ತಿತ್ತು. ಶೇಖರಣೆಯಾಗಿದ್ದ ತ್ಯಾಜ್ಯ ವಿಷಾನಿಲವಾಗಿ ಪರಿವರ್ತನೆಗೊಂಡಿದ್ದು, ಟ್ಯಾಂಕಿಗೆ ಇಳಿದ ಕಾರ್ಮಿಕರು ಎಲ್ಲರೂ ವಿಷಾನಿಲ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪೈಪ್‍ಗಳನ್ನು ಅಳವಡಿಸಲು ಕಾರ್ಮಿಕರು ಟ್ಯಾಂಕಿನೊಳಗೆ ಹೋದಾಗ ಉಸಿರಾಡಲು ತೊಂದರೆಯಾಗಿ ಅಲ್ಲಿಯೇ ಪ್ರಜ್ಞೆಯಿಲ್ಲದೆ ಬಿದ್ದಿದ್ದರು. ಆಗ ತಕ್ಷಣ ಸಹ-ಕಾರ್ಮಿಕರು ಅವರನ್ನು ಮೇಲೆತ್ತಿ ಆಸ್ಪತ್ರೆಗೆ ದಾಖಲಿಸಿದ್ದರು. ಸ್ಥಳಕ್ಕೆ ಪಲಮನೇರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

  • ಸಿಎಂಗಿಂದು ವೇತನಾ ಆಯೋಗದ ವರದಿ ಸಲ್ಲಿಕೆ – ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ ನಿರೀಕ್ಷೆ

    ಸಿಎಂಗಿಂದು ವೇತನಾ ಆಯೋಗದ ವರದಿ ಸಲ್ಲಿಕೆ – ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ ನಿರೀಕ್ಷೆ

    ಬೆಂಗಳೂರು: ಚುನಾವಣಾ ಸಮಯದಲ್ಲೇ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್ ನೀಡಲು ಮುಂದಾಗಿದೆ. ಈ ಗಿಫ್ಟ್ ಮೂಲಕ ರಾಜ್ಯದಲ್ಲಿರೋ ಸರ್ಕಾರಿ ನೌಕರರ ಜೊತೆ ಅವರ ಕುಟುಂಬದವರ ಮತವನ್ನು ಸೆಳೆಯಲು ಮಾಸ್ಟರ್ ಪ್ಲಾನ್ ಮಾಡಿದೆ.

    ಇಂದು ಎಮ್.ಆರ್. ಶ್ರೀನಿವಾಸ್ ಮೂರ್ತಿ ನೇತೃತ್ವದ ಸಮಿತಿಯಲ್ಲಿ 6 ನೇ ವೇತನ ಆಯೋಗದ ವರದಿ ಮಂಡನೆಯಾಗಲಿದೆ. ಸಮಿತಿ ಬೆಳಿಗ್ಗೆ ಸುಮಾರು 10.30ಕ್ಕೆ 6 ವೇತನ ಆಯೋಗದ ವರದಿಯನ್ನು ಮುಖ್ಯಮಂತ್ರಿಯವರಿಗೆ ಹಸ್ತಾಂತರಿಸಲಿದೆ. ಆದ್ದರಿಂದ 6 ನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಲು ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ ಎನ್ನಲಾಗಿದೆ.

    ವೇತನ ಪರಿಷ್ಕರಣೆಯ ಬಗ್ಗೆ ಬಜೆಟ್‍ನಲ್ಲಿ ಘೋಷಣೆ ಮಾಡುವ ಸಾದ್ಯತೆಗಳಿದ್ದು, ಈ ಮೂಲಕ 6 ಲಕ್ಷ ಸರ್ಕಾರಿ ನೌಕರರ ಮತ್ತು ಅವರ ಕುಟುಂಬದವರ ಮತ ಬ್ಯಾಂಕ್ ಭದ್ರ ಪಡಿಸುವ ತೀರ್ಮಾನ ಮಾಡಲಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ನಿವೃತ್ತರಾಗಲಿರೋ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಲು ಮುಂದಾಗಿದ್ದು, ಚುನಾವಣಾ ಸಮಯದಲ್ಲಿ ರಾಜ್ಯದಲ್ಲಿರೋ 5 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ವೋಟ್ ಬ್ಯಾಂಕ್ ಸೆಳೆಯೋ ಸಲುವಾಗಿ ನಿವೃತ್ತಿ ವಯಸ್ಸನ್ನು ರಾಜ್ಯ ಸರ್ಕಾರ 2 ವರ್ಷ ಹೆಚ್ಚಿಸಲು ಚಿಂತನೆ ನಡೆಸಿದೆ.

    ವರದಿಯಲ್ಲಿ ಏನು ಇರಬಹುದು?
    1. 6 ನೇ ವೇತನ ಆಯೋಗದ ಸಂಭವನೀಯ ವರದಿಯಲ್ಲಿ ಕೆಲಸದ ಸಮಯದಲ್ಲಿ ಬದಲಾವಣೆಯನ್ನು ಮಾಡಬಹುದು. ನೌಕರರಿಗೆ ವಾರಕ್ಕೆ ಎರಡು ರಜೆ, ಕೆಲ ಜಯಂತಿಗಳಿಗೆ ಇರುವ ರಜೆಗಳನ್ನು ರದ್ದು ಮಾಡಲು ಶಿಫಾರಸ್ಸು ಮಾಡಲಾಗಿದೆ.

    2. ಈ ಬಾರಿ ನೌಕರರ ವೇತನದಲ್ಲಿ ಭಾರಿ ಹೆಚ್ಚಳ ಸಾಧ್ಯತೆ ಇದೆ. ಅಂದರೆ ಕೇಂದ್ರ ಸರ್ಕಾರಿ ನೌಕರರ ಹತ್ತಿರದ ಸಂಬಳಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಬಳ ನಿಗದಿಯಾಗುವ ಸಾಧ್ಯತೆ ಇದ್ದು, ಕನಿಷ್ಠ ಮೂಲ ವೇತನ 16,350 ರೂ. ಮತ್ತು ಗರಿಷ್ಠ ಮೂಲ ವೇತನ 1,32,925 ರೂ. ನಿಗದಿಯಾಗಬಹುದು.

    3. ಐಎಎಸ್ ಅಲ್ಲದ ಅಧಿಕಾರಿಗಳಿಗೆ 95,325 ರೂ., ಗ್ರೂಪ್ ಎ ನೌಕರರಿಗೆ 48,625 ರೂ., ಗ್ರೂಪ್ ಬಿ ನೌಕರರಿಗೆ 39,425 ರೂ., ಎಪ್‍ಡಿಎ ನೌಕರರಿಗೆ 28,125 ರೂ., ಸಿ ಗ್ರೂಪ್ ನೌಕರರಿಗೆ 19,850 ರೂ., ಮತ್ತು ಡಿ ಗ್ರೂಪ್ ನೌಕರರಿಗೆ 16,350 ರೂ. ಎಂದು ಮೂಲ ಸಂಬಳ ನಿಗದಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇದನ್ನು ಓದಿ: ಎಲೆಕ್ಷನ್ ಹೊತ್ತಲ್ಲೇ ರಾಜ್ಯದ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್ ನೀಡಲು ಮುಂದಾದ ಸಿಎಂ

  • ವಿಡಿಯೋ: ಮಹಿಳಾ ಉದ್ಯೋಗಿಗಳು ಪರಸ್ಪರ ಕಪಾಳಕ್ಕೆ ಹೊಡೆಯುವಂತೆ ಶಿಕ್ಷೆ ನೀಡಿದ ಸಂಸ್ಥೆ

    ವಿಡಿಯೋ: ಮಹಿಳಾ ಉದ್ಯೋಗಿಗಳು ಪರಸ್ಪರ ಕಪಾಳಕ್ಕೆ ಹೊಡೆಯುವಂತೆ ಶಿಕ್ಷೆ ನೀಡಿದ ಸಂಸ್ಥೆ

    ಬೀಜಿಂಗ್: ಮಹಿಳಾ ಉದ್ಯೋಗಿಗಳು ಒಬ್ಬರಿಗೊಬ್ಬರು ಕಪಾಳಕ್ಕೆ ಹೊಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ.

    ಇವರೆಲ್ಲರೂ ಚೀನಾದ ನಾಂಚಂಗ್ ಜಿನ್‍ಹುವಾಯಾನ್ ಮೈಯೇ ಎಂಬ ಸೌಂದರ್ಯವರ್ಧಕಗಳ ಸಂಸ್ಥೆಯಲ್ಲಿ ಕೆಲಸ ಮಾಡೋ ಉದ್ಯೋಗಿಗಳಾಗಿದ್ದು, ಈ ವರ್ಷ ಕಳಪೆ ಪ್ರದರ್ಶನ ತೋರಿದ್ದಾರೆ ಎನ್ನಲಾಗಿದೆ. ಹೀಗಾಗಿ ಇವರ ಬಾಸ್ ನಿಮ್ಮ ಕೆಲಸ ಉಳಿಸಿಕೊಳ್ಳಬೇಕಾದ್ರೆ ಒಬ್ಬರಿಗೊಬ್ಬರು ಕಪಾಳಕ್ಕೆ ಹೊಡೆದುಕೊಳ್ಳುವಂತೆ ಶಿಕ್ಷೆ ನೀಡಿದ್ದಾರೆ.

    ಸಂಸ್ಥೆಯ 14ನೇ ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಸ್ಟೇಜ್ ಮೇಲೆ ಉದ್ಯೋಗಿಗಳು ಪರಸ್ಪರ ಕಪಾಳ ಮೋಕ್ಷ ಮಾಡಿದ್ದಾರೆ. ನೂರಾರು ಸಹೋದ್ಯೋಗಿಗಳ ಎದುರು ಸೇಲ್ಸ್ ವಿಭಾಗದ ಹಲವಾರು ಮಹಿಳಾ ಉದ್ಯೋಗಿಗಳು ಮಂಡಿಯೂರಿ ಎದುರು ಬದುರಾಗಿ ಕುಳಿತು, ತಮ್ಮ ಬಾಸ್ ಸಾಕು ಎನ್ನುವವರೆಗೆ ಕಪಾಳಕ್ಕೆ ಹೊಡೆದಿದ್ದಾರೆ.

    ಈ ವಿಡಿಯೋ ಸದ್ಯ ಆನ್‍ಲೈನ್‍ನಲ್ಲಿ ಹರಿದಾಡುತ್ತಿದ್ದು 60 ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಣೆಯಾಗಿದೆ. ಸಂಸ್ಥೆಯ ವಕ್ತಾರರೊಬ್ಬರು ಇದನ್ನ ಸಮರ್ಥಿಸಿಕೊಂಡಿದ್ದು, ಇದು ಟೀಂ ಸ್ಪಿರಿಟ್ ತೋರಿಸುತ್ತದೆ. ನಮ್ಮ ತಂಡ ಸದೃಢವಾಗಿದೆ ಎಂದಿದ್ದಾರೆ.

    ಆದ್ರೆ ಚೀನಾದ ಸಾಮಾಜಿಕ ಜಾಲತಾಣ ಬಳಕೆದಾರರು ಇದನ್ನು ಉದ್ಯೋಗಿಗಳ ನಿಂದನೆ ಎಂದು ಕರೆದಿದ್ದಾರೆ.

    https://www.youtube.com/watch?v=c9vsiW_77pM

  • ರಾಜ್ಯ ಸರ್ಕಾರದ ವಿರುದ್ಧ ರಸ್ತೆಗಿಳಿದ ಸರ್ಕಾರಿ ನೌಕರರು-ಬೃಹತ್ ಪ್ರತಿಭಟನೆ

    ರಾಜ್ಯ ಸರ್ಕಾರದ ವಿರುದ್ಧ ರಸ್ತೆಗಿಳಿದ ಸರ್ಕಾರಿ ನೌಕರರು-ಬೃಹತ್ ಪ್ರತಿಭಟನೆ

    ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವಿವಿಧ ವರ್ಗಗಳ ನೌಕರರು ಇಂದು ನಗರದ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿದರು.

    ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ್ದ 62 ವಿವಿಧ ವರ್ಗಗಳ ಸಾವಿರಾರು ನೌಕರರು ಅಹಿಂಸಾ ಸಂಘಟನೆ(ಅಲ್ಪ ಸಂಖ್ಯಾತ, ಹಿಂದುಳಿದ, ಸಾಮಾನ್ಯ ವರ್ಗ) ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ರ‍್ಯಾಲಿಯಲ್ಲಿ ಭಾಗವಹಿಸಿದ್ದರು.

    ಇಂದು ಬೆಳಗ್ಗೆ ಫ್ರೀಡಂ ಪಾರ್ಕ್ ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಅರಮನೆ ಮೈದಾನದ ವರೆಗೂ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೌಕರರು ಮುಂಬಡ್ತಿ ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿರುವ ಆದೇಶ ಜಾರಿ ಮಾಡುವಂತೆ ಎಂದು ಒತ್ತಾಯ ಮಾಡಿದರು. ಅಲ್ಲದೇ ಸುಪ್ರೀಂ ಆದೇಶವಿದ್ದರೂ ರಾಜ್ಯ ಸರ್ಕಾರ ಮುಂಬಡ್ತಿಯನ್ನು ನೀಡಲು ಹಿಂದೇಟು ಹಾಕುತ್ತಿದೆ. ರಾಜ್ಯ ಸರ್ಕಾರದ ಶೇ.82 ರಷ್ಟು ನೌಕರರಿಗೆ ಮುಂಬಡ್ತಿ ನೀಡಬೇಕು ಆಗ್ರಹಿಸಿದರು.

    ಅಲ್ಲದೇ ರಾಜ್ಯ ಸರ್ಕಾರವು ಸುಪ್ರೀಂ ಆದೇಶಕ್ಕೆ ತದ್ವಿರುದ್ಧವಾಗಿ ಕಾನೂನು ಜಾರಿಗೆ ಮಾಡಲು ನಿರ್ಧರಿಸಿದೆ. ಆದರಿಂದಲೇ ಈ ಕಾಯ್ದೆಯನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯಪಾಲರಿಗೆ ಕಡತ ರವಾನಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.