Tag: Employees

  • ಕಂಬದಲ್ಲಿ ನೇತಾಡುವಂತೆ ಮಾಡ್ತೀನಿ – ಚೆಸ್ಕಾಂ ನೌಕರನಿಗೆ ಪೊಲೀಸ್ ಆವಾಜ್

    ಕಂಬದಲ್ಲಿ ನೇತಾಡುವಂತೆ ಮಾಡ್ತೀನಿ – ಚೆಸ್ಕಾಂ ನೌಕರನಿಗೆ ಪೊಲೀಸ್ ಆವಾಜ್

    – ಬಿಲ್ ಕಟ್ಟದ್ದಕ್ಕೆ ವಿದ್ಯುತ್ ಸಂಪರ್ಕ ಕಡಿತ
    – ಬೆಸ್ಕಾಂ ನೌಕರನಿಗೇ ಪೊಲೀಸ್ ಆವಾಜ್

    ಹಾಸನ: ಇನ್ನೊಂದ್ಸಲ ವಿದ್ಯುತ್ ಸಂಪರ್ಕ ಕಟ್ ಮಾಡಲು ಬನ್ನಿ. ನೀವು ಕಂಬದಲ್ಲಿ ನೇತಾಡುತ್ತಿರಬೇಕು ಹಾಗೇ ಮಾಡ್ತೀನಿ ಎಂದು, ಬಿಲ್ ಕಟ್ಟದವರ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಚೆಸ್ಕಾಂ ನೌಕರನಿಗೆ ಪೊಲೀಸರೊಬ್ಬರು ಆವಾಜ್ ಹಾಕಿದ್ದಾರೆ.

    ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಘಟನೆ ನಡೆದಿದ್ದು, ವಿದ್ಯುತ್ ಬಿಲ್ ಸಂಗ್ರಹಿಸಲು ಚೆಸ್ಕಾಂ ಸಿಬ್ಬಂದಿ ಬುಧವಾರ ಬೆಳಗ್ಗೆ ಪೊಲೀಸ್ ಕ್ವಾಟ್ರಸ್‍ಗೆ ತೆರಳಿದ್ದಾರೆ. ಈ ವೇಳೆ ಬಿಲ್ ಕಟ್ಟದವರ ಮನೆಯ ವಿದ್ಯುತ್ ಸಂಪರ್ಕವನ್ನು ಚೆಸ್ಕಾಂ ಸಿಬ್ಬಂದಿ ಕಡಿತಗೊಳಿಸಿದ್ದಾರೆ. ಇದರಿಂದ ಕೆರಳಿದ ಸಮವಸ್ತ್ರದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು,”ಇನ್ನೊಂದ್ಸಲ ಕ್ವಾಟ್ರಸ್‍ಗೆ ಲೈನ್ ಕಟ್ ಮಾಡಲು ಬನ್ನಿ ಮಾಡ್ತೀನಿ. ಕಳ್ಳರನ್ನೆಲ್ಲ ಬಿಟ್ಟು ಇಲ್ಲಿ ಬಂದಿದ್ದೀರಾ ಎಂದು ನಡು ಬೀದಿಯಲ್ಲೇ” ಆವಾಜ್ ಹಾಕಿದ್ದಾರೆ.

    ಈ ವೇಳೆ ಚೆಸ್ಕಾಂ ಸಿಬ್ಬಂದಿ ಮತ್ತು ಪೊಲೀಸ್ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ. ಇಬ್ಬರು ಸರ್ಕಾರಿ ನೌಕರರ ಮಾತಿನ ಚಕಮಕಿ ವಿಡಿಯೋ ಸ್ಥಳೀಯರ ಮೊಬೈಲ್‍ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

  • ಸ್ವಚ್ಛತೆ ಕಾಪಾಡದಿದ್ರೆ ಒದ್ದು ಬಿಹಾರಕ್ಕೆ ಕಳಿಸ್ತೀನಿ: ಉಮೇಶ್ ಕತ್ತಿ

    ಸ್ವಚ್ಛತೆ ಕಾಪಾಡದಿದ್ರೆ ಒದ್ದು ಬಿಹಾರಕ್ಕೆ ಕಳಿಸ್ತೀನಿ: ಉಮೇಶ್ ಕತ್ತಿ

    ಚಿಕ್ಕೋಡಿ: ಸ್ವಚ್ಛತೆ ಕಾಪಾಡದಿದ್ದರೆ ಒದ್ದು ಬಿಹಾರಕ್ಕೆ ಓಡಿಸುತ್ತೇನೆ ಎಂದು ಸ್ವಚ್ಛತಾ ನೌಕರರನ್ನು ಹುಕ್ಕೇರಿ ಶಾಸಕ ಉಮೇಶ್ ಕತ್ತಿ ತರಾಟೆಗೆ ತೆಗೆದುಕೊಂಡಿದ್ದರು.

    ಬೆಳಗಾವಿ ಜಿಲ್ಲೆ ಹುಕ್ಕೇರಿ ಬಸ್ ನಿಲ್ದಾಣಕ್ಕೆ ಶಾಸಕ ಉಮೇಶ್ ಕತ್ತಿ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣದ ವ್ಯವಸ್ಥೆ ನೋಡಿ ಗರಂ ಆದ ಶಾಸಕ ಕತ್ತಿ ಅಧಿಕಾರಿಗಳನ್ನ ಹಾಗೂ ಸ್ವಚ್ಛತೆ ಮಾಡುತ್ತಿದ್ದ ಕಾರ್ಮಿಕರನ್ನ ತರಾಟೆಗೆ ತೆಗೆದುಕೊಂಡರು.

    ಸ್ವಚ್ಛತೆ ಕಾಪಾಡದಿದ್ದರೆ ಒದ್ದು ಬಿಹಾರಕ್ಕೆ ಓಡಿಸುತ್ತೇನೆ ಎಂದು ಸ್ವಚ್ಛತಾ ನೌಕರನನ್ನ ತೀವ್ರ ತರಾಟೆಗೆ ತೆಗೆದುಕೊಂಡರು. ಅಷ್ಟೇ ಅಲ್ಲದೇ ಬಸ್ ನಿಲ್ದಾಣದ ಅಸ್ವಚ್ಛತೆ ಕಂಡು ಸ್ವಚ್ಛತೆ ಕಾಪಾಡದ ಬಿಹಾರ ಮೂಲದ ಗುತ್ತಿಗೆದಾರನ ಲೈಸೆನ್ಸ್ ರದ್ದು ಮಾಡಲು ಸೂಚನೆ ನೀಡಿದರು. ಜೊತೆಗೆ ಸ್ಥಳೀಯರಿಗೆ ಸ್ವಚ್ಛತೆಯ ಗುತ್ತಿಗೆ ನೀಡುವಂತೆ ಒತ್ತಾಯಿಸಿದರು.

    ಬಸ್ ನಿಲ್ದಾಣದಲ್ಲಿ ವೃದ್ಧರು ಹಾಗೂ ಹಿರಿಯರಿಗೆ ಅನುಕೂಲವಾಗುವ ಆಸನಗಳ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಸಂಕೇಶ್ವರ ಡಿಪೋ ಮ್ಯಾನೇಜರ್ ನಾಡಗೌಡ, ಬಿಜೆಪಿ ಮುಖಂಡರಾದ ಗುರು ಕುಲಕರ್ಣಿ, ಸದಾ ಮರಬಸ್ಸನವರ, ರಾಜು ಮುನ್ನೋಳಿ, ಶೇಖರ್ ತರೀಕರ ಸೇರಿದಂತೆ ಹಲವರು ಹಾಜರಿದ್ದರು.

  • ನಮ್ಮ ಬೇಡಿಕೆಗಳಿಗೆ ಸ್ಪಂದಿಸದ ಸರ್ಕಾರ, ಇದ್ದು ಸತ್ತಂತೆ: ಸಾರಿಗೆ ನೌಕರರ ಆಕ್ರೋಶ

    ನಮ್ಮ ಬೇಡಿಕೆಗಳಿಗೆ ಸ್ಪಂದಿಸದ ಸರ್ಕಾರ, ಇದ್ದು ಸತ್ತಂತೆ: ಸಾರಿಗೆ ನೌಕರರ ಆಕ್ರೋಶ

    ಬೆಂಗಳೂರು: ನಮ್ಮ ಬೇಡಿಕೆಗಳಿಗೆ ಸ್ಪಂದಿಸದ ಸರ್ಕಾರ ಇದ್ದು ಸತ್ತಂತೆ ಎಂದು ಸರ್ಕಾರದ ವಿರುದ್ಧ ಸಾರಿಗೆ ನೌಕರರು ತಮ್ಮ ಆಕ್ರೋಶವನ್ನ ಹೊರ ಹಾಕಿದ್ದಾರೆ.

    ನಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು, ಸರ್ಕಾರಿ ಸೌಲಭ್ಯಗಳನ್ನ ಕಲ್ಪಿಸಬೇಕು ಅಂತ ಇವತ್ತು ಸಾರಿಗೆ ನೌಕರರು ರೋಡಿಗಿಳಿದು ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಪ್ರತಿಭಟನೆಯನ್ನ ನಡೆಸಿದರು. ನಗರದ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ಸಾರಿಗೆ ನೌಕರರು ಸರ್ಕಾರದ ಧೋರಣೆಯನ್ನು ಖಂಡಿಸಿದರು.

    ನಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ದೀರ್ಘಕಾಲ ಉಪವಾಸ ಮಾಡುತ್ತೇವೆ. ಮುಂದಿನ ಹೋರಾಟದ ಸ್ವರೂಪ ತುಂಬಾ ಗಂಭೀರವಾಗಿರುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಸಿದರು. ಉಪವಾಸ ಇದ್ದು ನಾವು ಸಾಯುತ್ತೇವೆ. 1 ಲಕ್ಷ 25 ಸಾವಿರ ಸಾರಿಗೆ ನೌಕರರು ಸತ್ತರೆ ಸರ್ಕಾರ ಎಚ್ಚೆತ್ತು, ಉಳಿದವರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಲಿ ಎಂದು ತಮ್ಮ ನೋವನ್ನು ವ್ಯಕ್ತಪಡಿಸಿದರು.

    ಸಾರಿಗೆ ನೌಕರರ ಪ್ರತಿಭಟನೆಗೆ ವಿವಿಧ ಮಠದ ಮಠಾಧೀಶರು ಕೂಡ ಬೆಂಬಲ ಸೂಚಿಸಿದರು. ಸಾರಿಗೆ ನೌಕರರು ಶಿಫ್ಟ್ ಗಳನ್ನ ಹೊಂದಿಸಿಕೊಂಡು, ಯಾರು ಕರ್ತವ್ಯಕ್ಕೆ ಗೈರಾಗದೆ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸಂಚಾರ ವ್ಯವಸ್ಥೆ ವ್ಯತಯವಾಗಲಿಲ್ಲ.

  • ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಸಾರಿಗೆ ನೌಕರರ ಬೃಹತ್ ಕಾಲ್ನಡಿಗೆ ಜಾಥಾ

    ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಸಾರಿಗೆ ನೌಕರರ ಬೃಹತ್ ಕಾಲ್ನಡಿಗೆ ಜಾಥಾ

    ಬೆಂಗಳೂರು: ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಸಾರಿಗೆ ನೌಕರರು ಬೆಂಗಳೂರಿನಲ್ಲಿ ಇಂದು ಬೃಹತ್ ಕಾಲ್ನಡಿಗೆ ಜಾಥಾ ನಡೆಸಿದರು.

    ಲಾಲ್ ಬಾಗ್ ಗೇಟ್‍ನ ಕೆಂಗಲ್ ಹನುಮಂತಯ್ಯ ವೃತ್ತದಿಂದ ಕೆ.ಎಸ್.ಆರ್.ಟಿ.ಸಿ ಕೇಂದ್ರ ಕಚೇರಿಯವರೆಗೆ ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಕಾಲ್ನಡಿಗೆ ಜಾಥಾ ನಡೆಸಿದರು. ಈ ಕಾಲ್ನಡಿಗೆ ಜಾಥಾದಲ್ಲಿ ಹಿರಿಯ ಸಾಹಿತಿ ಹಂ.ಪ ನಾಗರಾಜಯ್ಯ, ಕರವೇ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿಗೌಡ ಭಾಗಿಯಾಗಿದ್ದರು.

    ಜಾಥಾದಲ್ಲಿ ಸಾವಿರಾರು ನೌಕರರು ನಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ ಸರ್ಕಾರಕ್ಕೆ ವರದಿ ನೀಡಿ ಎಂದು ಒತ್ತಾಯಿಸಿ, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ನಂದೀಶ್ ರೆಡ್ಡಿ ಅವರು, ನೌಕರರ ವಿಷಯ ಕುರಿತು ಸಿಎಂ ಗಮನಕ್ಕೆ ತರುತ್ತೇನೆ. ಸಾರಿಗೆ ನೌಕರರ ಬಹಳ ದಿನಗಳ ಬೇಡಿಕೆ ಇದು. ಕಾನೂನಿನ ನಿಯಮಗಳಂತೆ ಶಾಶ್ವತ ಪರಿಹಾರ ಕೊಡಬೇಕು ಎಂದು ಸಿಎಂ ಅವರಿಗೆ ನನ್ನ ಮನವಿಯೂ ಇದೆ ಎಂದು ಹೇಳಿದರು.

  • ಬೀದಿಗೆ ಬಿದ್ದ ಗಾರ್ಮೆಂಟ್ಸ್ ನೌಕರರು

    ಬೀದಿಗೆ ಬಿದ್ದ ಗಾರ್ಮೆಂಟ್ಸ್ ನೌಕರರು

    ಬೆಂಗಳೂರು: ವ್ಯವಹಾರದಲ್ಲಿ ನಷ್ಟದಲ್ಲಿದೆ ಅಂತಾ ಗಾರ್ಮೆಂಟ್ಸ್ ಗೆ ಬೀಗ ಹಾಕುಲು ಮಾಲೀಕರು ನಿರ್ಧಾರ ಮಾಡಿರುವ ಹಿನ್ನಲೆಯಲ್ಲಿ ಸಾವಿರಾರು ನೌಕರರು ಬೀದಿಗೆ ಬಂದಿದ್ದಾರೆ.

    ಬೆಂಗಳೂರಿನ ಗೋರಗುಂಟೆ ಪಾಳ್ಯದಲ್ಲಿರುವ ‘ಟೆಕ್ಸ್ ಪೋರ್ಟ್ ಓವರ್ಸಿಸಿ’ ಅನ್ನೋ ಗಾರ್ಮೆಂಟ್ಸ್ ಫ್ಯಾಕ್ಟರಿ ಏಕಾಎಕಿ ಮುಚ್ಚಲು ನಿರ್ಧಾರ ಮಾಡಿದ್ದಾರೆ. ಇದರಿಂದ ಆತಂಕಗೊಂಡಿರುವ ನೌಕರರು ಕಳೆದ ಮೂರು ದಿನದಿಂದ ಕಂಪನಿಯ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ.

    ಕಂಪನಿಯ ಮಾಲೀಕರು ಹೀಗೆ ಏಕಾಏಕಿಯಾಗಿ ಕಂಪನಿ ಕ್ಲೋಸ್ ಮಾಡಿದ್ರೇ ನಾವೂ ಹೇಗೆ ಜೀವನ ಮಾಡೋದು ಅಂತಾ ಪ್ರಶ್ನಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಮಹಿಳಾ ನೌಕರರು ಭಾಗಿಯಾಗಿದ್ದಾರೆ. ಕಂಪನಿ ಕ್ಲೋಸ್ ಮಾಡ್ತಿರೋದ್ರಿಂದ ಮೂರು ತಿಂಗಳ ವೇತನ ನೀಡಿ ಎಂದು ನೌಕರರು ಆಗ್ರಹಿಸಿದ್ದಾರೆ. ಆದರೆ ಮಾಲೀಕರು ಮಾತ್ರ ಕೇವಲ ಒಂದು ತಿಂಗಳ ಸಂಬಳ ನೀಡುತ್ತೇವೆ ಅಂತಾ ಪಟ್ಟು ಹಿಡಿದಿದ್ದಾರೆ.

  • ಪಿಎಫ್ ಕೇಳಿದ್ದಕ್ಕೆ ಕಂಪನಿಯಿಂದ 30 ಮಂದಿ ಕಾರ್ಮಿಕರನ್ನ ಹೊರಹಾಕಿದ್ರು

    ಪಿಎಫ್ ಕೇಳಿದ್ದಕ್ಕೆ ಕಂಪನಿಯಿಂದ 30 ಮಂದಿ ಕಾರ್ಮಿಕರನ್ನ ಹೊರಹಾಕಿದ್ರು

    ಚಿಕ್ಕಬಳ್ಳಾಪುರ: ಕಂಪನಿ ಕಡೆಯಿಂದ ಪಿಎಫ್(ಭವಿಷ್ಯ ನಿಧಿ) ಕಟ್ಟುತ್ತಿಲ್ಲ ಯಾಕೆ ಎಂದು ಕೇಳಿದ 30 ಮಂದಿ ಕಾರ್ಮಿಕರನ್ನು ಕೆಲಸದಿಂದ ಹೊರಹಾಕಿದ್ದಾರೆ ಎಂದು ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

    ಸ್ಯಾಮ್ಕೋ ಕಂಪನಿಯಲ್ಲಿ ಕಳೆದ 2 ವರ್ಷಗಳಿಂದ ಚಿಕ್ಕಬಳ್ಳಾಪುರ ಮೂಲದ 24 ಮಂದಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಲಸಕ್ಕೆ ಸೇರಿದಾಗ 11,000 ಸಂಬಳ, ಇಎಸ್‍ಐ ಹಾಗೂ ಪಿಎಫ್ ಸೌಲಭ್ಯ ನೀಡುವುದಾಗಿ ಕೆಲಸ ಕೊಟ್ಟಿದ್ದ ಕಂಪನಿಯವರು, ಈಗ ತಿಂಗಳಿಗೆ 7,000 ಸಂಬಳ ಮಾತ್ರ ಕೊಡುತ್ತಿದ್ದಾರೆ.

    ಇಷ್ಟು ದಿನ ಪಿಎಫ್ ಕಟ್ಟುತ್ತಿದ್ದೇವೆ ಎಂದು ಹೇಳಿದ್ದ ಕಂಪನಿ ಈಗ ಕಟ್ಟಿಲ್ಲ ಎಂದು ಹೇಳುತ್ತಿದ್ದಾರೆ. ಹೀಗಾಗಿ ಪ್ರಶ್ನೆ ಮಾಡಿದ ಕಾರ್ಮಿಕರನ್ನು ಹೊರಹಾಕಿದ ಮ್ಯಾನೇಜರ್ ಕಂಪನಿ ಓಳಗೆ ಬಾರದಂತೆ ಬೀಗ ಜಡಿದಿದ್ದಾರೆ. ಇದರಿಂದ ಕಾರ್ಮಿಕರು ಪ್ರತಿಭಟನೆ ನಡೆಸಿದರು.

    ಈ ವಿಷಯ ತಿಳಿದು ಸ್ಥಳಕ್ಕೆ ಬಂದ ನಂದಿಗಿರಿಧಾಮ ಪೊಲೀಸರು, ಕಾರ್ಮಿಕರು ಹಾಗೂ ಮ್ಯಾನೇಜರ್ ನಡುವೆ ಮಾತುಕತೆ ನಡೆಸಿದ್ದು, ಸಮಸ್ಯೆ ಬಗೆಹರಿಸಲು ಮುಂದಾಗಿದ್ದಾರೆ. ಆದರೆ ಕಂಪನಿಯಲ್ಲಿ ತಮಿಳುನಾಡಿನವರಿಗೊಂದು ನ್ಯಾಯ ಕನ್ನಡಿಗರಿಗೊಂಡು ನ್ಯಾಯ ಎಂಬಂತೆ, ಅವರಿಗೆ ಮಾತ್ರ ಅಪಾಯಿಂಟ್‍ಮೆಂಟ್ ಲೆಟರ್, ಐಡಿ ಕಾರ್ಡ್, ಪಿಎಫ್ ಎಲ್ಲಾ ಕೊಡುತ್ತಿದ್ದಾರೆ, ನಮಗೆ ಕೊಡುತ್ತಿಲ್ಲ ಎಂದು ದೂರಿದ್ದಾರೆ.

  • ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಆಫರ್

    ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಆಫರ್

    ಶಿವಮೊಗ್ಗ: ಸರ್ಕಾರಿ ನೌಕರರಿಗೆ ಬಂಪರ್ ಆಫರ್ ನೀಡಲು ರಾಜ್ಯ ಸರ್ಕಾರಿ ನೌಕರರ ಸಂಘ ಮುಂದಾಗಿದೆ.

    ಇದುವರೆಗೆ ಸೈನಿಕರಿಗೆ ಮಿಲಿಟರಿ ಕ್ಯಾಂಟೀನ್, ಪೊಲೀಸರಿಗೆ ಪೊಲೀಸ್ ಕ್ಯಾಂಟೀನ್ ಮೂಲಕ ರಿಯಾಯಿತಿ ದರದಲ್ಲಿ ದಿನಬಳಕೆ ವಸ್ತುಗಳನ್ನು ನೀಡಲಾಗಿತ್ತು. ಇದೇ ಮಾದರಿಯಲ್ಲಿ ಸರ್ಕಾರಿ ನೌಕರರ ಕ್ಯಾಂಟೀನ್ ಆರಂಭಿಸಿ ಸರ್ಕಾರಿ ನೌಕರರಿಗೆ ಶೇಕಡಾ 10 ರಿಂದ 40ರಷ್ಟು ರಿಯಾಯಿತಿ ದರದಲ್ಲಿ ದಿನಬಳಕೆ ವಸ್ತುಗಳನ್ನು ನೀಡಲು ಸರ್ಕಾರಿ ನೌಕರರ ಸಂಘ ತೀರ್ಮಾನಿಸಿದೆ.

    ನಗರದಲ್ಲಿ ಇಂದು ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು, ಪ್ರಾಯೋಗಿಕವಾಗಿ ಆರಂಭದಲ್ಲಿ ಶಿವಮೊಗ್ಗದಲ್ಲಿ ಸರ್ಕಾರಿ ನೌಕರರ ಕ್ಯಾಂಟೀನ್ ಆರಂಭಿಸಲಾಗುವುದು. ಬಳಿಕ ಇತರೆ ಜಿಲ್ಲೆಗಳಿಗೂ ಕ್ಯಾಂಟೀನ್ ವಿಸ್ತರಿಸಲಾಗುವುದು ಎಂದು ಹೇಳಿದರು.

  • ಸಹೋದ್ಯೋಗಿಗಳ ಜೊತೆ ಕಬಡ್ಡಿ ಆಡಿದ ಎಸ್‍ಪಿ ರವಿ.ಡಿ ಚೆನ್ನಣ್ಣನವರ್

    ಸಹೋದ್ಯೋಗಿಗಳ ಜೊತೆ ಕಬಡ್ಡಿ ಆಡಿದ ಎಸ್‍ಪಿ ರವಿ.ಡಿ ಚೆನ್ನಣ್ಣನವರ್

    ಬೆಂಗಳೂರು: ಕರ್ನಾಟಕದ ಖಡಕ್ ಪೊಲೀಸ್ ಅಧಿಕಾರಿ ಎಂದೇ ಖ್ಯಾತರಾಗಿರುವ ಎಸ್‍ಪಿ ರವಿ. ಡಿ ಚನ್ನಣ್ಣನವರ್ ಅವರು ತಮ್ಮ ಸಹೋದ್ಯೋಗಿ ಜೊತೆ ಕಬಡ್ಡಿ ಆಟ ಆಡಿ ತಮ್ಮ ಬಾಂಧವ್ಯವನ್ನು ಮೆರೆದಿದ್ದಾರೆ.

    ಬೆಂಗಳೂರು ಹೊರವಲಯ ಬ್ಯಾಡರಹಳ್ಳಿ ಪೊಲೀಸ್ ಮೈದಾನದಲ್ಲಿ, ವಾರ್ಷಿಕ ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ ಸಿಕ್ಕಿದೆ. ಈ ವೇಳೆ ಕಬಡ್ಡಿ ಆಟ ಆಡಿ ದೇಶಿಯ ಕ್ರೀಡೆಗೆ ಒತ್ತು ನೀಡಿದ್ದಾರೆ. ಸಹೋದ್ಯೋಗಿಗಳ ಜೊತೆ ಆಟಕ್ಕೂ ಸೈ, ಕಾನೂನು ಪಾಲನೆಗೂ ಸೈ ಎನ್ನುವಂತೇ ಬೆಂಗಳೂರು ಗ್ರಾಮಾಂತರ ಎಸ್‍ಪಿ ರವಿ.ಡಿ ಚನ್ನಣ್ಣನವರ್ ಅಧಿಕಾರಿಗಳ ಜೊತೆ ಅಂಗಳದಲ್ಲಿ ಕಾದಾಟ ನಡೆಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ

    ಎಸ್‍ಪಿ ರವಿ.ಡಿ ಚೆನ್ನಣ್ಣವರ್ ಅವರಿಗೆ ನೆಲಮಂಗಲ ಉಪವಿಭಾಗದ ಪೊಲೀಸ್ ಸಿಬ್ಬಂದಿಗಳು ಸಾಥ್ ನೀಡಿದ್ದಾರೆ. ಕಬಡ್ಡಿ ಆಟದ ಹಲವಾರು ತಂತ್ರಗಳನ್ನು ಬಳಸಿ ಆಟ ವಾಡುತ್ತಿರುವುದು ಕಂಡು ಬಂದಿದ್ದು, ಕ್ರೀಡಾಪಟುಗಳಿಗೆ ಇನ್ನಷ್ಟು ಹುರುಪು ತಂದಿದೆ.

  • ಎರಡು ವರ್ಷದಿಂದ ಪ್ರಶಸ್ತಿ ಸ್ವೀಕರಿಸಲು ಕಾಯ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ

    ಎರಡು ವರ್ಷದಿಂದ ಪ್ರಶಸ್ತಿ ಸ್ವೀಕರಿಸಲು ಕಾಯ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ

    ಮೈಸೂರು: ಅರಣ್ಯ ಇಲಾಖೆ ಸಿಬ್ಬಂದಿಗೆ ಪ್ರಶಸ್ತಿ ಕೊಡಲು ಸಿಎಂ ಯಡಿಯೂರಪ್ಪ ಅವರಿಗೆ ಸಮಯ ಸಿಗುತ್ತಿಲ್ಲ. ಹಾಗಾಗಿ ಪ್ರಶಸ್ತಿ ಸ್ವೀಕರಿಸಲು ಎರಡು ವರ್ಷದಿಂದ ಸಿಬ್ಬಂದಿ ಕಾಯುತ್ತಿದ್ದಾರೆ.

    ಪೊಲೀಸ್ ಇಲಾಖೆ ಮಾದರಿಯಲ್ಲಿ ಅರಣ್ಯ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ನೀಡಲಾಗುತ್ತದೆ. ಇದಕ್ಕಾಗಿ ಪ್ರಶಸ್ತಿ ಪಟ್ಟಿ ಕೂಡ ಪ್ರಕಟವಾಗಿದೆ. 2017ರಲ್ಲಿ ಸರ್ಕಾರದಿಂದ ಅರಣ್ಯ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಕೊಡಲು ನಿರ್ಧಾರ ಮಾಡಲಾಗಿತ್ತು.

    2018ರಲ್ಲಿ 25 ಸಿಬ್ಬಂದಿಗೆ ಪ್ರಶಸ್ತಿ ನೀಡುವುದಾಗಿ ಪಟ್ಟಿ ಬಿಡುಗಡೆ ಮಾಡಲಾಗಿತ್ತು. ಪ್ರತಿ ವರ್ಷ ಮಾರ್ಚ್ 21 ವಿಶ್ವ ಅರಣ್ಯ ದಿನದಂದು ಪದಕ ವಿತರಿಸುವುದಾಗಿ ನಿರ್ಧರಿಸಲಾಗಿತ್ತು. ಆದರೆ 2018ರಲ್ಲಿ ಮಾರ್ಚ್ ನಿಂದ ಸೆಪ್ಟೆಂಬರ್ ಗೆ ಈ ಕಾರ್ಯಕ್ರಮ ಮುಂದೂಡಲಾಗಿತ್ತು. ಮತ್ತೆ ಸೆಪ್ಟೆಂಬರ್ ನಿಂದ ಮುಂದೂಡಲಾಗಿತ್ತು.

    ಇದೀಗ 2019ರ ಪಟ್ಟಿ ಕೂಡ ಪ್ರಕಟವಾಗಿ ನವೆಂಬರ್ ಬಂದರು ಪದಕ ಮಾತ್ರ ವಿತರಣೆ ಆಗಿಲ್ಲ. ಅರಣ್ಯ ಇಲಾಖೆಗೆ ಪ್ರಶಸ್ತಿ ಕೊಡಲು ಸಿಎಂಗೆ ಇಷ್ಟೊಂದು ನಿರುತ್ಸಾಹವೆ ಅಥವಾ ಸಮಯವೇ ಸಿಗುತ್ತಿಲ್ಲವೇ ಎಂಬ ಪ್ರಶ್ನೆ ಮೂಡಿದೆ.

  • ಕಚೇರಿಯಲ್ಲೂ ಹೆಲ್ಮೆಟ್ ಕಡ್ಡಾಯ – ಸರ್ಕಾರಿ ನೌಕರರ ಫೋಟೋ ವೈರಲ್

    ಕಚೇರಿಯಲ್ಲೂ ಹೆಲ್ಮೆಟ್ ಕಡ್ಡಾಯ – ಸರ್ಕಾರಿ ನೌಕರರ ಫೋಟೋ ವೈರಲ್

    ಲಕ್ನೋ: ಉತ್ತರ ಪ್ರದೇಶದ ಬಾಂಡಾದಲ್ಲಿನ ವಿದ್ಯುತ್ ವಿಭಾಗದ ನೌಕರರು ತಮ್ಮ ಕಚೇರಿ ಕಟ್ಟಡದಲ್ಲೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಕುಳಿತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ.

    ದೇಶದಲ್ಲಿ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯ. ಆದರೆ ಈ ಕಚೇರಿಯಲ್ಲಿ ಮೇಲ್ಛಾವಣಿಯಿಂದ ಉದುರುವ ಸಿಮೆಂಟ್‌ನಿಂದ ತಲೆಯನ್ನು ಸುರಕ್ಷಿತವಾಗಿ ಇಟ್ಟಿಕೊಳ್ಳಲು ವಿದ್ಯುತ್ ವಿಭಾಗದ ನೌಕರರು ಕಚೇರಿಯೊಳಗೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸುತ್ತಿದ್ದಾರೆ.

    ಈ ವಿಚಾರದ ಬಗ್ಗೆ ಮಾತನಾಡಿರುವ ಅಲ್ಲಿನ ಅಧಿಕಾರಿಯೊಬ್ಬರು, ಕಚೇರಿಯ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದೆ. ಇದನ್ನು ದುರಸ್ತಿಗೊಳಿಸಿ ಎಂದು ಮನವಿ ಮಾಡಿದ್ದರೂ ಈ ಬಗ್ಗೆ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಮೇಲ್ಛಾವಣಿಯಿಂದ ಸಿಮೆಂಟ್ ತುಣುಕುಗಳು ಉದುರಿ ಒಂದಷ್ಟು ಸಿಬ್ಬಂದಿ ತಲೆಗೆ ಗಂಭೀರ ಗಾಯಗಳಾಗಿವೆ. ಇದಾದ ನಂತರದಲ್ಲಿ ಎಚ್ಚೆತ್ತುಕೊಂಡಿರುವ ನೌಕರರು ಕಚೇರಿಯಲ್ಲಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

    ಕಚೇರಿಯಲ್ಲಿ ದಾಖಲೆಯನ್ನು ಇಟ್ಟುಕೊಳ್ಳಲು ಕೂಡ ಸ್ಥಳವಿಲ್ಲ. ಒಂದು ಬೀರಿನ ವ್ಯವಸ್ಥೆಯಿಲ್ಲ. ಫೈಲ್‌ಗಳು ಮಳೆ ಬಂದು ನೆನೆಯಬಾರದು ಎಂದು ಸಿಬ್ಬಂದಿ ರಟ್ಟನ್ನು ಸುತ್ತಿ ಇಟ್ಟುಹೋಗುತ್ತಿದ್ದಾರೆ. ಕಟ್ಟಡ ಯಾವಾಗ ಬೀಳುತ್ತೆ ಎಂಬುದು ಗೊತ್ತಿಲ್ಲ. ಜೀವವನ್ನು ಕೈಯಲ್ಲಿ ಇಟ್ಟುಕೊಂಡು ಅಲ್ಲಿನ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ.

    ನಾನೂ ಎರಡು ವರ್ಷದ ಹಿಂದೆ ಈ ಕಚೇರಿಗೆ ವರ್ಗಾವಣೆ ಆಗಿ ಬಂದ ದಿನದಿಂದಲೂ ಈ ಕಚೇರಿಯಲ್ಲಿ ಇದೇ ಪರಿಸ್ಥಿತಿ ಇದೆ. ಈ ವಿಚಾರದ ಬಗ್ಗೆ ಮೇಲಿನ ಅಧಿಕಾರಿಗಳಿಗೆ ನಾವು ನಿರಂತರವಾಗಿ ದೂರು ನೀಡುತ್ತಿದ್ದೇವೆ. ಆದರೆ ಅಧಿಕಾರಿಗಳು ಈ ವಿಚಾರದ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಲ್ಲಿನ ಹಿರಿಯ ಅಧಿಕಾರಿಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.