Tag: employment

  • ಬಲಗಾಲು, ಬಲಗೈ ಸ್ವಾದೀನ ಇಲ್ಲ, ಮಾತನಾಡಲು ಕಷ್ಟ ಆದರೂ ಓದಬೇಕೆಂಬ ಹಂಬಲ

    ಬಲಗಾಲು, ಬಲಗೈ ಸ್ವಾದೀನ ಇಲ್ಲ, ಮಾತನಾಡಲು ಕಷ್ಟ ಆದರೂ ಓದಬೇಕೆಂಬ ಹಂಬಲ

    ಚಿತ್ರದುರ್ಗ: ಹುಟ್ಟುವಾಗಲೇ ಶಾಪಗ್ರಸ್ಥರಾಗಿ ಬಲಗಾಲು, ಬಲಗೈ ಸ್ವಾದೀನ ಕಳೆದುಕೊಂಡಿದ್ದು, ಮಾತನಾಡಲು ಆಗದೇ ಕಷ್ಟ ಅನುಭವಿಸುತ್ತಿರುವ ಶಿವಕುಮಾರ್‍ಗೆ ಓದಬೇಕೆಂಬ ಹಂಬಲ ಇದೆ. ಆದ್ದರಿಂದ ಸಹಾಯ ಕೇಳಿಕೊಂಡು ನಮ್ಮ ಬೆಳಕು ಕಾರ್ಯಕ್ರಮಕ್ಕೆ ಬಂದಿದ್ದಾರೆ.

    ಜಿಲ್ಲೆಯ ಹುಲ್ಲೂರು ನಾಯಕರಹಟ್ಟಿ ಗ್ರಾಮದ ಸಾವಿತ್ರಮ್ಮನ ಅವರ ಪುತ್ರ ಶಿವಕುಮಾರ್. ಇವರು ಹುಟ್ಟುವಾಗಲೇ ವಿಕಲಚೇತನರಾಗಿ ಜನಿಸಿದ್ದಾರೆ. ಶಿವಕುಮಾರ್ ತಮ್ಮ ಬಲಗಾಲು, ಬಲಗೈ ಸ್ವಾದೀನವನ್ನು ಕಳೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಮಾತನಾಡಲು ಆಗದೇ ತೀವ್ರ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಆದರೆ ಇದ್ಯಾವುದನ್ನು ಲೆಕ್ಕಿಸದ ಶಿವಕುಮಾರ್ ಓದಬೇಕೆಂಬ ಹಂಬಲ ಹಾಗೂ ದುಡಿಯಬೇಕೆಂಬ ಛಲವನ್ನು ಇಟ್ಟುಕೊಂಡಿದ್ದಾರೆ.

    ತಂದೆ ತಾಯಿಗೆ ಹೊರೆಯಾಗಿರಲು ಇಷ್ಟಪಡದೇ ಪ್ರಥಮ ಬಿಎ ಪದವಿಯನ್ನು ಓದುತ್ತಿರುವ ಶಿವಕುಮಾರ್ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ವಿಕಲಚೇತನರಿಗೆ ನೀಡುವ ವಾಹನಕ್ಕಾಗಿ ಪರದಾಡಿದ್ದಾರೆ. ಕಾಲೇಜು ಮುಗಿಸಿ ನಂತರ ಗ್ರಾಮದಲ್ಲಿ ವ್ಯಾಪಾರ ಮಾಡಲು ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದಿಂದ ಅಂಗವಿಕಲರಿಗೆ ನೀಡುವ ನೇರ ಸಾಲಕ್ಕೂ ಅರ್ಜಿ ಸಲ್ಲಿಸಿದ್ದಾರೆ. ಆದರೆ ಸಲ್ಲಿಸಿದ ಅರ್ಜಿಗಳಿಗೆ ಮಾತ್ರ ಯಾವ ಇಲಾಖೆಯು ಪ್ರತಿಕ್ರಿಯಿಸುತ್ತಿಲ್ಲ. ಆದ್ದರಿಂದ ಪ್ರತಿದಿನ ತಾಯಿಯೊಂದಿಗೆ ಸರ್ಕಾರಿ ಕಚೇರಿಗಳಿಗೆ ಅಲೆಯುತ್ತಿರುತ್ತಾರೆ.

    ವಿಪರ್ಯಾಸ ಎಂದರೆ ಚಿತ್ರದುರ್ಗದ ಉಸ್ತುವಾರಿ ಹೊತ್ತಿರುವ ಸಚಿವರಾದ ಹೆಚ್ ಆಂಜನೇಯನವರ ತವರೂರು ಜಿಲ್ಲೆಯಲ್ಲೇ ಸೌಲಭ್ಯ ವಂಚಿತರನ್ನಾಗಿಸುತ್ತಿರುವುದು ನಾಚಿಕೆಯ ಸಂಗತಿಯಾಗಿದೆ.

    ಚಿಕ್ಕ ವಯಸ್ಸಿನಿಂದಲೂ ವಿಕಲಚೇತನ ಮಗನಿಗೆ ಊರುಗೋಲಾಗಿರುವ ತಾಯಿ ಸಾವಿತ್ರಮ್ಮ. ಮಗನಿಗಾಗಿ ಸರ್ಕಾರ ವಿದ್ಯಾರ್ಥಿ ವೇತನ ಕೊಟ್ಟು, ಪದವಿ ಪೂರ್ಣಗೊಳಿಸಲು ಸಹಕರಿಸಬೇಕು. ಸಬ್ಸಿಡಿ ಸಾಲ ಕೊಟ್ಟು ಸ್ವಾವಲಂಬಿಯಾಗಿ ಬದುಕಲು ನೆರವಾಗಬೇಕೆಂದು ಅಂಗಲಾಚುತ್ತಾ ಕಣ್ಣೀರಿಡುತ್ತಾ ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮಕ್ಕೆ ಬಂದಿದ್ದಾರೆ.

    https://www.youtube.com/watch?v=Gml-BsIW4z4

  • ಹೆಸರು ನೊಂದಾಯಿಸಿ 7 ವರ್ಷವಾದ್ರೂ ಯುವಕನಿಗೆ ಸಿಕ್ಕಿಲ್ಲ ಆಧಾರ್ ಕಾರ್ಡ್

    ಹೆಸರು ನೊಂದಾಯಿಸಿ 7 ವರ್ಷವಾದ್ರೂ ಯುವಕನಿಗೆ ಸಿಕ್ಕಿಲ್ಲ ಆಧಾರ್ ಕಾರ್ಡ್

    – ಪ್ರಧಾನಿಗೆ ಪತ್ರ ಬರೆದ್ರೂ ಪ್ರಯೋಜನವಾಗಿಲ್ಲ

    ಯಾದಗಿರಿ: ಕೇಂದ್ರ ಸರ್ಕಾರ ಸರ್ಕಾರಿ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್‍ಗೆ ಹೆಚ್ಚಿನ ಮಹತ್ವ ನೀಡುತ್ತಿದೆ. ಆದ್ರೆ ಇಲ್ಲೊಬ್ಬ ವಿದ್ಯಾರ್ಥಿ ಆಧಾರ್ ಕಾರ್ಡ್ ಪಡೆಯಲು ಹೆಸರು ನೋಂದಾಯಿಸಿ 7 ವರ್ಷ ಕಳೆದ್ರೂ ಇನ್ನೂ ಸಿಕ್ಕಿಲ್ಲ. ಪರಿಣಾಮ ಉದ್ಯೋಗದಿಂದ ವಂಚಿತರಾಗಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ್ರೂ ಪ್ರಯೋಜನವಾಗಿಲ್ಲ.

    ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣ ನಿವಾಸಿ ಮಲ್ಲಿಕಾರ್ಜುನ ಗುರಿಕಾರ, 2011ರಲ್ಲಿ ಕುಟುಂಬ ಸಮೇತರಾಗಿ ಆಧಾರ್ ಕಾರ್ಡ್‍ಗೆ ಹೆಸರು ನೋಂದಾಯಿಸಿದ್ರು. ಇವರ ಕುಟುಂಬ ಸದಸ್ಯರಿಗೆಲ್ಲಾ ಆಧಾರ್ ಕಾರ್ಡ್ ಬಂತು. ಆದ್ರೆ ಇವರಿಗೆ ಆಧಾರ್ ಸಿಕ್ಕಿಲ್ಲ. ಈ ಬಗ್ಗೆ ವಿಚಾರಿಸಿದ್ರೆ ಡಾಟಾ ಎರರ್ ಬಂದಿದೆ ಅಂತ ಕಚೇರಿಯಿಂದ ಕಚೇರಿಗಳಿಗೆ ಅಲೆದಾಡಿಸ್ತಿದ್ದಾರೆ.

    ಯಾದಗಿರಿಯಿಂದ ಬೆಂಗಳೂರಿನ ಹೆಡ್ ಆಫಿಸ್‍ಗೆ ಬಂದ್ರೂ, ದೆಹಲಿ ಅಧಿಕಾರಿಗಳಿಗೂ ಮೇಲ್ ಮಾಡಿದ್ರೂ ಆಧಾರ್ ಸಿಕ್ಕಿಲ್ಲ. ಕೊನೆಗೆ ಆಗಸ್ಟ್ 28 ರಂದು ಪ್ರಧಾನಮಂತ್ರಿ ಸಂಪರ್ಕದ ಮೇಲ್ ಐಡಿಗೆ ಪತ್ರ ಹಾಕಿದ್ರು. ಅಲ್ಲಿಂದ ಸೆಪ್ಟೆಂಬರ್ 1ರಂದು ಉತ್ತರ ಬಂತು. ಸಂಬಂಧಪಟ್ಟವರಿಗೆ ಮಾಹಿತಿ ನೀಡಿದ್ದೀವಿ. ಆಧಾರ್ ಸಿಗುತ್ತೆ ಅಂದಿದ್ರು. ಆದ್ರೆ ಇನ್ನೂ ಆಧಾರ್ ಕಾರ್ಡ್ ಮಲ್ಲಿಕಾರ್ಜುನ್ ಕೈಸೇರಿಲ್ಲ.

     

    ಇಷ್ಟಾದ್ರೂ ಸುಮ್ಮನಾಗದ ಮಲ್ಲಿಕಾರ್ಜುನ್ ಮಾಹಿತಿ ಹಕ್ಕು ಅಡಿ ಬೆಂಗಳೂರಿನ ಪ್ರಾದೇಶಿಕ ಕಚೇರಿಗೆ ಅರ್ಜಿ ಹಾಕಿದ್ರು. ಇದಕ್ಕೆ ಆರ್‍ಟಿಐ ಅಡಿ ಉತ್ತರ ನೀಡಿದ ಅಧಿಕಾರಿಗಳು ನಿಮ್ಮ ಹೆಬ್ಬೆಟ್ಟು 7 ಜನರ ಜೊತೆ ಮಿಕ್ಸ್ ಆಗಿದೆ. ಅಪಡೇಟ್ ಆಗಬೇಕು ಎಂದಿದ್ದಾರೆ. ಇಷ್ಟಕ್ಕೂ ಸುಮ್ಮನಾಗದ ಛಲಗಾರ ಮಲ್ಲಿಕಾರ್ಜುನ್, ಜಿಲ್ಲಾಧಿಕಾರಿ ಗಮನಕ್ಕೂ ತಂದಿದ್ದು, ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದಾರೆ.

    ಕಡುಬಡತನದಲ್ಲೂ ಬಿ.ಎಸ್‍ಸಿ, ಬಿ.ಎಎಡ್ ಮಾಡಿ ಎಂ.ಎಸ್‍ಸಿ ವ್ಯಾಸಂಗ ಮಾಡ್ತಿರೋ ಇವರು ಯಾರದ್ದೋ ತಪ್ಪಿಗೆ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಇನ್ನಿತರ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಆದ್ರೂ ಛಲ ಬಿಡದೆ ರಾಷ್ಟ್ರಪತಿ ಅವರಿಗೂ ಪತ್ರ ಬರೀತೀನಿ ಅಂತಿದ್ದಾರೆ.

  • 2018ರ ಒಳಗಡೆ ಕರ್ನಾಟಕದ 20 ಸೇರಿ, ದೇಶದ 800 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ!

    2018ರ ಒಳಗಡೆ ಕರ್ನಾಟಕದ 20 ಸೇರಿ, ದೇಶದ 800 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ!

    ಬೆಂಗಳೂರು: ಫಲಿತಾಂಶದಲ್ಲಿ ಕಳಪೆ ಸಾಧನೆ ಮತ್ತು ವಿದ್ಯಾರ್ಥಿಗಳ ಪ್ರವೇಶಾತಿ ಕಡಿಮೆ ಆಗುತ್ತಿರುವ ಕರ್ನಾಟಕದ 20 ಸೇರಿದಂತೆ 800 ಎಂಜಿನಿಯರಿಂಗ್ ಕಾಲೇಜುಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಒಳಗಡೆ ಬೀಗ ಬೀಳಲಿದೆ.

    ಹೌದು, ಗುಣಮಟ್ಟದಲ್ಲಿ ಕಳಪೆ ಸಾಧನೆ ತೋರಿಸುತ್ತಿರುವ ದೇಶದ 800 ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎಐಸಿಟಿಇ) ಮುಖ್ಯಸ್ಥ ಅನಿಲ್ ದತ್ತಾತ್ರೇಯ ಸಹಸ್ರಬುದೆ ತಿಳಿಸಿದ್ದಾರೆ.

    ಮೂಲಸೌಕರ್ಯ ಇಲ್ಲದ ಮತ್ತು ಸತತ 5 ವರ್ಷಗಳ ಕಾಲ ಶೇ.30ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ದಾಖಲಾಗಿರುವ ಕಾಲೇಜುಗಳನ್ನು ಮುಚ್ಚಲಾಗುತ್ತಿದೆ. ಎಐಸಿಟಿಇಯ ಕಠಿಣ ನಿಯಮಗಳಿಂದಾಗಿ ವಾರ್ಷಿಕವಾಗಿ 150ಕ್ಕೂ ಹೆಚ್ಚು ಕಾಲೇಜುಗಳನ್ನು ಮುಚ್ಚಲಾಗಿದೆ ಎಂದು ಅವರು ತಿಳಿಸಿದರು.

    2014-15 ರಿಂದ 2017-18ರ ವರೆಗೆ ಭಾರತದಲ್ಲಿ ಒಟ್ಟು 410 ಎಂಜಿನಿಯರಿಂಗ್ ಕಾಲೇಜುಗಳನ್ನು ಮುಚ್ಚಲು ಎಐಸಿಟಿಇ ಅನುಮೋದನೆ ನೀಡಿದ್ದು ಈ ಪಟ್ಟಿಯಲ್ಲಿ 20 ಕರ್ನಾಟಕದ ಕಾಲೇಜುಗಳು ಇವೆ.

    ತೆಲಂಗಾಣ, ಉತ್ತರ ಪ್ರದೇಶ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ರಾಜಸ್ಥಾನ, ತಮಿಳುನಾಡು, ಹರ್ಯಾಣ, ಗುಜರಾತ್ ಮತ್ತು ಮಧ್ಯಪ್ರದೇಶದ ರಾಜ್ಯಗಳ ಕಾಲೇಜುಗಳು ಈ ಪಟ್ಟಿಯಲ್ಲಿ ಸೇರಿದೆ. ಈ ಪಟ್ಟಿಯಲ್ಲಿ ಕೆಲ ಕಾಲೇಜುಗಳು ಸ್ವಯಂ ಪ್ರೇರಿತವಾಗಿ ಅರ್ಜಿ ಸಲ್ಲಿಸಿದೆ ಎಂದು ಅವರು ತಿಳಿಸಿದರು.

    ಬಹುತೇಕ ಎಂಜಿನಿಯರಿಂಗ್ ಕಾಲೇಜುಗಳ ಉಪನ್ಯಾಸಕರು ಎಂಟೆಕ್ ಅಥವಾ ಪಿಎಚ್‍ಡಿ ಪದವಿ ಪಡೆದಿದ್ದರೂ ಆಧುನಿಕ ಶಿಕ್ಷಣದ ತರಬೇತಿ ಹೊಂದಿಲ್ಲದ ಕಾರಣ ಉತ್ತಮ ವಿದ್ಯಾರ್ಥಿಗಳು ತಯಾರಾಗುತ್ತಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಕಾಲೇಜುಗಳಿಗೆ ಉಪನ್ಯಾಸಕರಾಗಿ ಸೇರ್ಪಡೆಯಾಗುವವರು ಕಡ್ಡಾಯವಾಗಿ 6 ತಿಂಗಳ ವಿಶೇಷ ತರಬೇತಿ ಪಡೆಯಬೇಕಾಗುತ್ತದೆ. ಅಷ್ಟೇ ಅಲ್ಲದೇ ಈಗಾಗಲೇ ಉಪನ್ಯಾಸಕ ವೃತ್ತಿಯಲ್ಲಿರುವವರು ಈ ವಿಶೇಷ ತರಬೇತಿಯನ್ನು ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅವರು ಹೇಳಿದರು.

    ಎಂಜಿನಿಯರಿಂಗ್ ಕಾಲೇಜುಗಳ ಗುಣಮಟ್ಟ ಕಡಿಮೆ ಆದಲ್ಲಿ ಅವುಗಳನ್ನು ಕಲಾ, ವಿಜ್ಞಾನ ಅಥವಾ ಪಾಲಿಟೆಕ್ನಿಕ್ ಕಾಲೇಜುಗಳಾಗಿ ರೂಪಿಸಲಾಗುತ್ತದೆ. ಉದ್ಯಮಕ್ಕೆ ತಯಾರಾಗಿರುವ ವಿದ್ಯಾರ್ಥಿಗಳನ್ನು ಎಐಸಿಟಿಇ ನಿರೀಕ್ಷಿಸುತ್ತಿದೆ. ಈ ಕಾರಣಕ್ಕೆ ಈ ವರ್ಷದಿಂದಲೇ ಎರಡು ಮತ್ತು ಮೂರನೇ ವರ್ಷದಲ್ಲಿ ಇಂಟರ್ನ್ ಶಿಪ್ ಕಡ್ಡಾಯಗೊಳಿಸಲಾಗಿದೆ. ಈ ಮೂಲಕ ಕ್ಯಾಂಪಸ್ ಸಂದರ್ಶನ ನಡೆಯುವ ಮೊದಲೇ ವಿದ್ಯಾರ್ಥಿಗಳು ಉದ್ಯೋಗ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದರು.

    ಇದನ್ನೂ ಓದಿ: ಎಂಜಿನಿಯರಿಂಗ್ ಓದುತ್ತಿರುವ ಮತ್ತು ಮುಂದೆ ಓದಲಿರುವ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್

  • ಅಂಗವಿಕಲ ಜಿಮ್ ಪಟು ಬಾಳಲ್ಲಿ ಬೆಳಕು

    ಅಂಗವಿಕಲ ಜಿಮ್ ಪಟು ಬಾಳಲ್ಲಿ ಬೆಳಕು

    ರಾಯಚೂರು: ಜಿಲ್ಲೆಯ ರಾಂಪೂರದ ಅಂಗವಿಕಲ ಜಿಮ್ ಪಟು ವೆಂಕಟೇಶ್ ತನ್ನ ಕಾಲ ಮೇಲೆ ತಾನು ನಿಲ್ಲಲು ಪರದಾಡುತ್ತಿದ್ದರು. ರಾಜ್ಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿರುವ ವೆಂಕಟೇಶ್ ಜಿಮ್ ಮುಂದುವರೆಸಲು ಹಾಗೂ ಉದ್ಯೋಗವಿಲ್ಲದೆ ಕಟ್ಟಿಗೆ ಕಡಿದು ಜೀವನ ಸಾಗಿಸುತ್ತಿದ್ದರು.

    ಬೆಳಕು ಕಾರ್ಯಕ್ರಮದಲ್ಲಿ ಮಾತು ಕೊಟ್ಟಂತೆ ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ವೆಂಕಟೇಶ್‍ಗೆ ಹಣಕಾಸಿನ ಸಹಾಯ ಮಾಡಿದ್ದಾರೆ. ಈಗ ವೆಂಕಟೇಶ್ ಗಣೇಶನ ಮೂರ್ತಿಗಳನ್ನ ಮಾಡಿ ತನ್ನ ಜೀವನ ಸಾಗಿಸುತ್ತಿದ್ದಾರೆ. ಸ್ನೇಹಿತರೊಂದಿಗೆ ಪಾರ್ಟನರ್ ಶಿಪ್ ನಲ್ಲಿ ಗಣೇಶನ ಮೂರ್ತಿ ತಯಾರಿಕೆ ಮಾಡುತ್ತಿದ್ದಾರೆ.

    ಗಣೇಶ ಮೂರ್ತಿಗಳ ಆರ್ಡರ್‍ಗಳು ಸಿಗುತ್ತಿದ್ದು, ತನ್ನ ಜೀವನ ಕಟ್ಟಿಕೊಂಡಿದ್ದಾರೆ. ಪರಿಶಿಷ್ಠ ವರ್ಗದ ಅಂಗವಿಕಲರಿಗೆ ಮೀಸಲಾದ ಅನುದಾನದ ಪಟ್ಟಿಯಲ್ಲೂ ವೆಂಕಟೇಶ್ ಆಯ್ಕೆಯಾಗಿದ್ದು, ಸದ್ಯದಲ್ಲೆ ವೆಂಕಟೇಶ್ ಬ್ಯಾಂಕ್ ಅಕೌಂಟಿಗೆ 50 ಸಾವಿರ ಹಣ ಜಮಾ ಆಗಲಿದೆ.

  • ಎಚ್.ವೈ ಮೇಟಿ ರಾಸಲೀಲೆ ಕೇಸ್: ಪ್ರಕರಣದ ಸಂತ್ರಸ್ತೆಯಿಂದ ಹೊಸ ಬಾಂಬ್

    ಎಚ್.ವೈ ಮೇಟಿ ರಾಸಲೀಲೆ ಕೇಸ್: ಪ್ರಕರಣದ ಸಂತ್ರಸ್ತೆಯಿಂದ ಹೊಸ ಬಾಂಬ್

    ಬಾಗಲಕೋಟೆ: ಮಾಜಿ ಸಚಿವ ಎಚ್.ವೈ ಮೇಟಿ ರಾಸಲೀಲೆ ಕೇಸ್‍ನಲ್ಲಿ ಭಾಗಿಯಾಗಿದ್ದಾರೆಂಬ ಆರೋಪ ಹೊತ್ತಿದ್ದ ವಿಜಯಲಕ್ಷ್ಮಿ ಆಯುಷ್ ಇಲಾಖೆಯ ಕರ್ಮಕಾಂಡದ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.

    ಬಾಗಲಕೋಟೆ ಆಯುಷ್ ಆಸ್ಪತ್ರೆಯಲ್ಲಿ ಸ್ತ್ರೀರೋಗ ಸಹಾಯಕಿಯಾಗಿದ್ದ ವಿಜಯಲಕ್ಷ್ಮಿ, ರಾಸಲೀಲೆ ಪ್ರಕರಣದ ನಂತ್ರ ಏಳು ತಿಂಗಳುಗಳ ಕಾಲ ನಾಪತ್ತೆಯಾಗಿದ್ರು. ಸದ್ಯ ದಿಢೀರ್ ಪ್ರತ್ಯಕ್ಷವಾಗಿ ಕೆಲಸಕ್ಕೆ ಮರು ನೇಮಕ ಮಾಡಿಕೊಳ್ಳಿ ಎಂದು ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಮಹೇಶ್ವರ್‍ಗೆ ಅರ್ಜಿ ಸಲ್ಲಿಸಿದ್ರು.

    ಇದನ್ನೂ ಓದಿ: ಎಚ್.ವೈ.ಮೇಟಿ ರಾಸಲೀಲೆ ಪ್ರಕರಣದ ಸಂತ್ರಸ್ತೆ ಈ ಕಾರಣಕ್ಕೆ ಗೈರಾಗಿದ್ದಂತೆ!

    ಆಯುಷ್ ಅಧಿಕಾರಿ ವಿಜಯಲಕ್ಷ್ಮಿಯರನ್ನು ಕೆಲಸಕ್ಕೆ ಮರು ನೇಮಕ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಈಗ ಹೊಸ ಬಾಂಬ್ ಸಿಡಿಸಿದ್ದು, ನನ್ನನ್ನ ಕೆಲಸಕ್ಕೆ ಮರು ನೇಮಕಾತಿ ಮಾಡಿಕೊಳ್ಳದೇ ಇದ್ದರೆ, ಇಲಾಖೆಯ ಅವ್ಯವಹಾರಗಳನ್ನು ಬಯಲಿಗೆಳಿವೆ ಎಂದು ಗುಡುಗಿದ್ದಾರೆ. ನನ್ನ ಬಳಿ ಇಲಾಖೆಯಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ದಾಖಲೆಗಳಿವೆ. ನಾಳೆವರೆಗೂ ಕಾದು ನೋಡುತ್ತೇನೆ ಒಂದು ವೇಳೆ ನೇಮಕವಾಗದೇ ಇದ್ದರೆ ದಾಖಲೆಯನ್ನು ಬಿಡುಗಡೆಗೊಳಿಸುತ್ತೇನೆ. ಜಿಲ್ಲಾ ಆಯುಷ್ ವೈದ್ಯಾಧಿಕಾರಿಯಿಂದ ನನಗೆ ಮೋಸವಾಗಿದೆ ಎಂದು ಹೇಳಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಆಯುಷ್ ಜಿಲ್ಲಾ ವೈದ್ಯಾಧಿಕಾರಿ ಡಾ.ಮಹೇಶ್ವರ್ ಗುಗ್ಗರಿ, ವಿಜಯಲಕ್ಷ್ಮಿ ಮಾಡುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ತಮ್ಮ ಬಳಿಯಿದೆ ಎಂದು ದಾಖಲೆಗಳನ್ನು ಬಹಿರಂಗಪಡಿಸಲಿ ಎಂದು ಸವಾಲ್ ಹಾಕಿದ್ದಾರೆ.

     

  • ಹಾಲು, ಪೇಪರ್ ಹಾಕಿ ಅಜ್ಜಿ-ತಂಗಿಯನ್ನ ಸಾಕ್ತಿರೋ ಆನಂದನಿಗೆ ಬೇಕಿದೆ ಸಹಾಯ

    ಹಾಲು, ಪೇಪರ್ ಹಾಕಿ ಅಜ್ಜಿ-ತಂಗಿಯನ್ನ ಸಾಕ್ತಿರೋ ಆನಂದನಿಗೆ ಬೇಕಿದೆ ಸಹಾಯ

    ಬೆಳಗಾವಿ: ಶಾಲೆ ಕಲಿತು ದೊಡ್ಡ ಅಧಿಕಾರಿಯಾಗುವ ಗುರಿ, ಆದರೆ ಕಿತ್ತು ತಿನ್ನುವ ಬಡತನ. ಚಿಕ್ಕ ವಯಸ್ಸಿನಲ್ಲಿಯೇ ತಾಯಿ ತಂದೆಯನ್ನು ಕಳೆದುಕೊಂಡ ಬಾಲಕ ಶಾಲೆ ಬಿಟ್ಟು ಹಾಲು, ಪೇಪರ್ ಹಂಚಿ ನಂತರ ಪಿವೂನ್ ಕೆಲಸ ಮಾಡುತ್ತ ಕುಟುಂಬವನ್ನ ಸಲಹುತ್ತಿದ್ದಾನೆ.

    ಈತನ ಹೆಸರು ಆನಂದ ನಾಯಿಕ. ಬೆಳಗಾವಿ ಜಿಲ್ಲೆ ಹುಕ್ಕೇರಿ ನಗರದ ನಿವಾಸಿ. ಚಿಕ್ಕ ವಯಸ್ಸಿನಲ್ಲಿಯೆ ತಂದೆ-ತಾಯಿಯನ್ನು ಕಳೆದುಕೊಂಡ ಆನಂದನಿಗೆ ಶಾಲೆ ಕಲಿತು ಉನ್ನತ ಹುದ್ದೆಯನ್ನು ಅಲಂಕರಿಸಬೇಕೆಂಬ ಗುರಿಯಿದೆ. ಬೆಳಗಾವಿಯ ಚಿಕ್ಕೂಂಬಿ ಮಠದ ಅನಾಥ ಆಶ್ರಮದಲ್ಲಿ ಇದ್ದು ಎಸ್‍ಎಸ್‍ಎಲ್‍ಸಿ ವರಗೆ ವ್ಯಾಸಂಗ ಮಾಡಿ 70% ಅಂಕ ಪಡೆದಿದ್ದಾನೆ.

    ಆದರೆ ಮನೆಯಲ್ಲಿ ಇಳಿವಯಸ್ಸಿನ ಅಜ್ಜಿ ಜೊತೆಗೆ ಚಿಕ್ಕ ವಯಸ್ಸಿನ ತಂಗಿಯ ದಿನ ಹೊಟ್ಟೆ ತುಂಬಿಸುವ ಜವಾಬ್ದಾರಿ ಆನಂದನ ಮೇಲೆದೆ. ಅಜ್ಜಿ ಹಾಗೂ ತಂಗಿಯ ಹೊಟ್ಟೆ ತುಂಬಿಸಲು ಆನಂದ ಹಾಲು, ಪೇಪರ್ ಹಂಚಿ ಸಂಘ- ಸಂಸ್ಥೆಯೊಂದರಲ್ಲಿ ಪಿವೂನ್ ಆಗಿ ಕೆಲಸ ನಿರ್ವಹಿಸುತ್ತಿದ್ದಾನೆ. ಜೊತೆಗೆ ಸಂಜೆಯಾಗುತ್ತಿದ್ದಂತೆ ಪಿಗ್ಮಿ ಕಲೆಕ್ಷನ್ ಮಾಡಿ ಬಂದ ಆದಾಯದಿಂದ ಮನೆ ನಡೆಸುತ್ತಿದ್ದಾನೆ.

    ಆನಂದ ತನ್ನ ಚಿಕ್ಕ ವಯಸ್ಸಿನಲ್ಲಿಯೇ ದೊಡ್ಡ ಜವಾಬ್ದಾರಿಯನ್ನು ಹೊತ್ತು ವ್ಯಾಸಂಗವನ್ನು ತ್ಯಜಿಸಿ ದುಡುಮೆ ಮಾಡುತ್ತಿರುವುದು ವಿಶಾದನಿಯ. ಕಲಿಯುವ ವಯಸ್ಸಿನಲ್ಲಿ ದುಡಿಯುವ ಜವಾಬ್ದಾರಿ ಬಂದಿದ್ದು ತಮ್ಮ ಕ್ಲಾಸ್‍ಮೇಟ್ ಸ್ಥಿತಿಯನ್ನು ಕಂಡು ಅಯ್ಯೋ ಅನ್ನಿಸುತ್ತದೆ ಎಂದು ಗೆಳೆಯ ಶಿವರಾಜ ಹೇಳುತ್ತಾರೆ.

    ತೊಂದರೆಯಲ್ಲಿರುವ ಆನಂದ ನಾಯಿಕ್‍ಗೆ ಶಿಕ್ಷಣ ಹಾಗೂ ಉದ್ಯೋಗಕ್ಕಾಗಿ ಸಹಾಯ ಬೇಕಾಗಿದೆ. ಸಹೃದಯ ದಾನಿಗಳು ಸಹಾಯ ಮಾಡಿದ್ದಲ್ಲಿ ವ್ಯಾಸಂಗ ಮುಂದುವರೆಸಿ ಗುರಿ ತಲುಪುವ ಹಂಬಲ ಆನಂದನದು.