Tag: engagement

  • ಇನ್ಸ್ಟಾದಲ್ಲಿ ಯುವತಿಗೆ ಲೈಕ್, ನಿಶ್ಚಿತಾರ್ಥ ಮಾಡಿಕೊಂಡಿದ್ದ ಹುಡುಗಿಯಿಂದ ತರಾಟೆ – ಯುವಕ ಆತ್ಮಹತ್ಯೆ

    ಇನ್ಸ್ಟಾದಲ್ಲಿ ಯುವತಿಗೆ ಲೈಕ್, ನಿಶ್ಚಿತಾರ್ಥ ಮಾಡಿಕೊಂಡಿದ್ದ ಹುಡುಗಿಯಿಂದ ತರಾಟೆ – ಯುವಕ ಆತ್ಮಹತ್ಯೆ

    ಮಂಗಳೂರು: ಇನ್ಸ್ಟಾಗ್ರಾಂನಲ್ಲಿ (Instagram) ಪರಿಚಯವಾಗಿದ್ದ ಹುಡುಗಿಗೆ ಲೈಕ್ ಕೊಟ್ಟಿದ್ದಕ್ಕೆ ಯುವಕನೊಂದಿಗೆ ನಿಶ್ಚಿತಾರ್ಥ (Engagement) ಮಾಡಿಕೊಂಡಿದ್ದ ಯುವತಿ ಆತನನ್ನು ತರಾಟೆಗೆ ತೆಗೆದುಕೊಂಡಿದ್ದು, ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳದ (Bantwal) ಪೂಂಜಾಲಕಟ್ಟೆಯ ಕುಕ್ಕಿಪ್ಪಾಡಿ ಎಂಬಲ್ಲಿ ನಡೆದಿದೆ.

    ಚೇತನ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಚೇತನ್‌ಗೆ ಕುಂದಾಪುರದ ಚೈತನ್ಯ ಎಂಬ ಯುವತಿ ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದಳು. ಬಳಿಕ ಪ್ರೀತಿಸಿ 8 ತಿಂಗಳ ಹಿಂದೆ ಇವರಿಬ್ಬರಿಗೂ ನಿಶ್ಚಿತಾರ್ಥವಾಗಿತ್ತು. ಜ.21ರಂದು ಚೇತನ್ ತನ್ನ ಪರಿಚಯದ ಯುವತಿಗೆ ಇನ್ಸ್ಟಾಗ್ರಾಂನಲ್ಲಿ ಲೈಕ್ ನೀಡಿದ್ದ. ಇದನ್ನು ಪ್ರಶ್ನಿಸಲು ನಿಶ್ಚಿತಾರ್ಥ ಮಾಡಿಕೊಂಡ ಯುವತಿ ಚೇತನ್ ಮನೆಗೆ ಬಂದಿದ್ದಳು. ಈ ವೇಳೆ ಚೇತನ್ ತಾಯಿ ಮನೆಯಲ್ಲಿ ಇರಲಿಲ್ಲ. ಚೇತನ್ ಓರ್ವನೇ ಇದ್ದ. ಲೈಕ್ ನೀಡಿದ್ದಕ್ಕೆ ಯುವತಿ ಚೇತನ್‌ನನ್ನು ತರಾಟೆಗೆ ತೆಗೆದುಕೊಂಡಿದ್ದಳು. ಇದರಿಂದ ಮನನೊಂದ ಚೇತನ್ ಯುವತಿ ಮನೆಯಲ್ಲಿ ಇರುವ ಸಂದರ್ಭದಲ್ಲೇ ಮನೆಯೊಳಗೆ ತೆರಳಿ ಮನೆಯ ಮೇಲ್ಛಾವಣಿಗೆ ಬಟ್ಟೆ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂಓದಿ: ಹೀರಣ್ಯಕೇಶಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸ್ಥಾನಕ್ಕೆ ಶಾಸಕ ನಿಖಿಲ್‌ ಕತ್ತಿ ರಾಜೀನಾಮೆ

    ಬಳಿಕ ಚೇತನ್ ತಾಯಿಗೆ ಚೈತನ್ಯ ಕರೆ ಮಾಡಿ ಮಲಗಿದ್ದಾತ ಏಳುತ್ತಿಲ್ಲ ಎಂದು ಹೇಳಿ ಕರೆಸಿಕೊಂಡಿದ್ದಾಳೆ. ಬಳಿಕ ಮನೆಯ ಮೆಲ್ಛಾವಣಿಯಲ್ಲಿ ನೇಣು ಬಿಗಿದ ಕುಣಿಕೆ ಸಿಕ್ಕಿದೆ. ನೇಣು ಬಿಗಿದ ಬಳಿಕ ಚೇತನ್‌ನನ್ನು ಯುವತಿಯೇ ಕೆಳಗೆ ಇಳಿಸಿದ್ದಳು. ಘಟನೆ ಸಂಬಂಧ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇದನ್ನೂಓದಿ: ನಕಲಿ ಫೈನಾನ್ಸ್ ರಿಕವರಿ ಟೀಂನಿಂದ ವಸೂಲಿ ದಂಧೆ – ನಾಲ್ವರು ಆರೋಪಿಗಳ ಬಂಧನ

     

  • ಅನಯಾ ವಸುಧಾ ಜೊತೆ ಚಾರ್ಲಿ-777 ನಿರ್ದೇಶಕ ಕಿರಣ್ ರಾಜ್ ಎಂಗೇಜ್

    ಅನಯಾ ವಸುಧಾ ಜೊತೆ ಚಾರ್ಲಿ-777 ನಿರ್ದೇಶಕ ಕಿರಣ್ ರಾಜ್ ಎಂಗೇಜ್

    ಮಂಗಳೂರು: ಕನ್ನಡದ ಸೂಪರ್ ಹಿಟ್ ಸಿನಿಮಾ ಚಾರ್ಲಿ-777 ಚಿತ್ರದ ನಿರ್ದೇಶಕ ಕಿರಣ್ ರಾಜ್ (Kiranraj) ಅವರು ಅನಯಾ ವಸುಧಾ (Anaya Vasudha) ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

    ಮಂಗಳೂರಿನ (Mangaluru) ಖಾಸಗಿ ಹೋಟೆಲ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಉಂಗುರ ಬದಲಾಯಿಸುವುದರ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಸ್ನೇಹಿತರು ಫ್ಯಾಮಿಲಿಯವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಜಮ್ಮು-ಕಾಶ್ಮೀರ | ವರ್ಷಪೂರ್ತಿ ಸಂಪರ್ಕ ಕಲ್ಪಿಸುವ ಝಡ್-ಮೋರ್ಹ್ ಸುರಂಗ ಮಾರ್ಗ ಉದ್ಘಾಟಿಸಿದ ಮೋದಿ

    ಕಿರಣ್ ರಾಜ್ ಮಂಗಳೂರು ಗಡಿಭಾಗ ಕಾಸರಗೋಡು ಮೂಲದವರಾಗಿದ್ದು, ಅನಯ ವಸುಧಾ ಕೂಡ ಕಾಸರಗೋಡು ಮೂಲದವರು. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ 777 ಸಿನಿಮಾವನ್ನು ಕಿರಣ್ ನಿರ್ದೇಶನ ಮಾಡಿ ಸಣ್ಣ ಪಾತ್ರವೊಂದರಲ್ಲಿ ಅಭಿನಯಿಸಿದ್ದರು. ವಿಭಿನ್ನ ಕಥಾ ಹಂದರವಿದ್ದ, ಚಾರ್ಲಿ ಸಿನಿಮಾ ಸೂಪರ್ ಹಿಟ್ ಆಗಿ ಕಿರಣ್ ಅವರಿಗೆ ಚಂದನವನದಲ್ಲಿ ಹೆಸರು ತಂದುಕೊಟ್ಟಿತ್ತು. ಇದನ್ನೂ ಓದಿ: ಹಿಂದೂ ಅನ್ನೋದು ಅವಮಾನಕರ ಶಬ್ದ – ಚಿಂತಕ ಕೆ.ಎಸ್ ಭಗವಾನ್ ಮತ್ತೆ ವಿವಾದಾತ್ಮಕ ಹೇಳಿಕೆ

  • ಸರಳವಾಗಿ ನಡೆಯಿತು ರಕ್ಷಿತಾ ಪ್ರೇಮ್ ಸಹೋದರನ ನಿಶ್ಚಿತಾರ್ಥ

    ಸರಳವಾಗಿ ನಡೆಯಿತು ರಕ್ಷಿತಾ ಪ್ರೇಮ್ ಸಹೋದರನ ನಿಶ್ಚಿತಾರ್ಥ

    ಸ್ಯಾಂಡಲ್‌ವುಡ್ ನಟಿ ರಕ್ಷಿತಾ ಪ್ರೇಮ್ (Rakshitha Prem) ಸಹೋದರ ರಾಣಾ (Raana) ಅವರು ಸಿಂಪಲ್ ಆಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ‘ಏಕ್ ಲವ್ ಯಾ’ (Ek Love Ya) ನಟ ರಾಣಾ ನಿಶ್ಚಿತಾರ್ಥದ ಫೋಟೋವನ್ನು ರಕ್ಷಿತಾ ಪ್ರೇಮ್ ಶೇರ್ ಮಾಡಿ ಹೊಸ ಜೋಡಿಗೆ ಶುಭಕೋರಿದ್ದಾರೆ. ಇದನ್ನೂ ಓದಿ:ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌- ಹೀರೋ ಆಗಿ ಚಿತ್ರರಂಗಕ್ಕೆ ಡ್ರೋನ್‌ ಪ್ರತಾಪ್‌ ಎಂಟ್ರಿ

    ‘ಏಕ್ ಲವ್ ಯಾ’ ಸಿನಿಮಾ ಮೂಲಕ ನಾಯಕ ನಟನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಾಣಾ ಇದೀಗ ಸರಳವಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಸಂಭ್ರಮದಲ್ಲಿ ರಕ್ಷಿತಾ ಪ್ರೇಮ್ ಮತ್ತು ಕುಟುಂಬಸ್ಥರು ಭಾಗಿಯಾಗಿದ್ದಾರೆ. ಭಾವಿ ಪತ್ನಿ ಜೊತೆಗಿನ ರಾಣಾ ಫೋಟೋ ನೋಡಿ ಫ್ಯಾನ್ಸ್‌ ಕೂಡ ಶುಭ ಹಾರೈಸಿದ್ದಾರೆ.

    ಇನ್ನೂ ರಾಣಾ ಮದುವೆಯಾಗುತ್ತಿರುವ ಹುಡುಗಿಯ ವಿವರ ಇನ್ನಷ್ಟೇ ರಿವೀಲ್ ಆಗಬೇಕಿದೆ. ಮದುವೆ ಕುರಿತು ಮಾಹಿತಿ ಕುಟುಂಬಸ್ಥರು ರಿವೀಲ್ ಮಾಡುವವರೆಗೂ ಕಾಯಬೇಕಿದೆ. ಇದನ್ನೂ ಓದಿ:BBK 11: ತಾಕತ್ತು ಇದ್ದರೆ ತಡೆಯಿರಿ ನೋಡೋಣ- ಶಿಶಿರ್‌ಗೆ ಚೈತ್ರಾ ಅವಾಜ್

  • 2ನೇ ಮದುವೆಗೆ ಸಜ್ಜಾದ ‘ಜೊತೆ ಜೊತೆಯಲಿ’ ನಟಿ ಮಾನಸ ಮನೋಹರ್‌

    2ನೇ ಮದುವೆಗೆ ಸಜ್ಜಾದ ‘ಜೊತೆ ಜೊತೆಯಲಿ’ ನಟಿ ಮಾನಸ ಮನೋಹರ್‌

    ಕಿರುತೆರೆಯ ಜನಪ್ರಿಯ ‘ಜೊತೆ ಜೊತೆಯಲಿ’ (Jothe Jotheyali) ಸೀರಿಯಲ್ ನಟಿ ಮಾನಸ ಮನೋಹರ್ (Mansa Manohar) ಅವರು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಎರಡನೇ ಮದುವೆಗೆ ನಟಿ ಸಜ್ಜಾಗಿದ್ದಾರೆ. ನಿಶ್ಚಿತಾರ್ಥ (Engagement) ಖುಷಿಯಲ್ಲಿರುವ ಮಾನಸ ಅವರು ಎಂಗೇಜ್ ಆಗಿರುವ ಸುಂದರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ:Bigg Boss ಸ್ಪರ್ಧಿಗೆ ಹೃದಯಾಘಾತ- ಆಸ್ಪತ್ರೆಗೆ ದಾಖಲು

    ಪ್ರಸ್ತುತ ‘ಲಕ್ಷ್ಮಿ ನಿವಾಸ’ (Lakshmi Nivasa) ಸೀರಿಯಲ್‌ನಲ್ಲಿ ನಟಿಸುತ್ತಿರುವ ಮಾನಸ ಅವರು ಪ್ರೀತಮ್ ಚಂದ್ರ (Preetham Chandra) ಎಂಬುವವರ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಭಾವಿ ಪತಿ ಜೊತೆಗಿನ ಕೆಲ ಫೋಟೋಗಳನ್ನು ಹಂಚಿಕೊಂಡಿರುವ ಮಾನಸಗೆ ಇದು 2ನೇ ಮದುವೆನಾ? ಎಂಬ ಪ್ರಶ್ನೆಗಳು ಅಭಿಮಾನಿಗಳಿಂದ ಎದುರಾಗಿದೆ. ಕಾಮೆಂಟ್ ಬಾಕ್ಸ್‌ನಲ್ಲಿ ಪ್ರಶ್ನೆಗಳ ಸುರಿಮಳೆಯನ್ನೇ ಹರಿಸಿದ್ದಾರೆ. ಅದಕ್ಕೆ ನಟಿ ಕೂಡ ಹೌದು, ಇದು ನನಗೆ 2ನೇ ಮದುವೆ (Second Wedding) ಎಂದು ಪಾಸಿಟಿವ್ ಆಗಿ ರಿಯಾಕ್ಟ್ ಮಾಡಿದ್ದಾರೆ.

    ಎಲ್ಲರ ಸಂದೇಹಗಳಿಗೆ ಉತ್ತರ ಇದೆ. ಇದು ನನ್ನ ಎರಡನೇ ಮದುವೆ. ಕೆಲವು ಬಾರಿ ದೈಹಿಕವಾಗಿ ಮದುವೆಯಾಗುತ್ತೇವೆ ಆದರೆ ಯಾವುದೇ ಭಾವನಾತ್ಮಕ ಸಂಬಂಧವನ್ನು ಹೊಂದಿರುವುದಿಲ್ಲ. ನಾವು ಎಲ್ಲರ ಒಳಿತಿಗಾಗಿ ಮುಂದುವರಿಯಬೇಕು. ನಾವು ಮದುವೆಯಾಗುತ್ತಿದ್ದೇವೆ. ನನಗೆ ಯಾವುದೇ ಅಪರಾಧ ಎನಿಸುತ್ತಿಲ್ಲ. ಆದರೆ ಕೃತಜ್ಞತೆ ಮಾತ್ರ ಇದೆ. ಆದ್ದರಿಂದ ಅದನ್ನು ವ್ಯಕ್ತಪಡಿಸುತ್ತಿದ್ದೇನೆ ಎಂದು ನೆಟ್ಟಿಗರೊಬ್ಬರ ಕಾಮೆಂಟ್‌ಗೆ ನಟಿ ಸ್ಪಷ್ಟನೆ ಕೊಟ್ಟಿದ್ದಾರೆ.

     

    View this post on Instagram

     

    A post shared by Mansa manohar (@itsme_mansamanohar)

    ಇನ್ನೂ ಮಾನಸ ಭಾವಿ ಪತಿ ಪ್ರೀತಮ್ ಚಂದ್ರ ಅವರು ಫುಟ್ ಬಾಲ್ ಪ್ಲೇಯರ್ ಆಗಿದ್ದಾರೆ. ಅವರು ಫುಟ್ ಬಾಲ್ ಅಕಾಡೆಮಿ ಕೂಡ ನಡೆಸುತ್ತಿದ್ದಾರೆ. ಸದ್ಯದಲ್ಲೇ ಮಾನಸ ಮತ್ತು ಪ್ರೀತಮ್‌ ಮದುವೆ ಜರುಗಲಿದೆ. ಅಂದಹಾಗೆ, ಮಾನಸ ಅವರು ‘ಲಕ್ಷ್ಮಿ ನಿವಾಸ’ ಸೀರಿಯಲ್‌ನಲ್ಲಿ ಹೀರೋ ಸಿದ್ದೇಗೌಡರ ಅತ್ತಿಗೆ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ‘ಶಾಂಭವಿ’ ಎಂಬ ಸೀರಿಯಲ್‌ನಲ್ಲಿ ‘ಬಿಗ್ ಬಾಸ್ ಕನ್ನಡ 11’ರಲ್ಲಿ (Bigg Boss Kannada 11) ಸ್ಪರ್ಧಿಯಾಗಿರುವ ಐಶ್ವರ್ಯಾ (Aishwarya) ನಟಿಸುತ್ತಿದ್ದ ಪಾತ್ರಕ್ಕೆ ಮಾನಸ ಎಂಟ್ರಿ ಕೊಟ್ಟಿದ್ದಾರೆ. ಐಶ್ವರ್ಯಾ ಕೈಬಿಟ್ಟ ಪಾತ್ರಕ್ಕೆ ಮಾನಸ ಜೀವ ತುಂಬುತ್ತಿದ್ದಾರೆ.

  • ‘ಪಾರು’ ಖ್ಯಾತಿಯ ಮಾನ್ಸಿ ಜೋಶಿ ನಿಶ್ಚಿತಾರ್ಥ

    ‘ಪಾರು’ ಖ್ಯಾತಿಯ ಮಾನ್ಸಿ ಜೋಶಿ ನಿಶ್ಚಿತಾರ್ಥ

    ಕಿರುತೆರೆಯ ಜನಪ್ರಿಯ ‘ಪಾರು’ (Paaru) ಸೀರಿಯಲ್‌ನಲ್ಲಿ ಖಳನಾಯಕಿಯಾಗಿ ನಟಿಸಿದ್ದ ಮಾನ್ಸಿ ಜೋಶಿ (Mansi Joshi) ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ರಾಘವ್ ಎಂಬುವವರ ಜೊತೆ ನಟಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥ ಸುಂದರ ಫೋಟೋಗಳನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ:ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಹಿರಿಯ ನಟಿ ಶ್ರುತಿ ಕುಟುಂಬದ ಮನೆ ಮಗಳು

     

    View this post on Instagram

     

    A post shared by Mansi Joshi (@mansi._.joshi)


    ಸದ್ಯ ತೆಲುಗು, ತಮಿಳು ಸೀರಿಯಲ್‌ಗಳಲ್ಲಿ ಬ್ಯುಸಿಯಿರುವ ನಟಿ ಮಾನ್ಸಿ (Mansi) ಅವರು ಸಾಫ್ಟ್‌ವೇರ್ ಇಂಜಿನಿಯರ್ ರಾಘವ್ ಜೊತೆ ಬೆಂಗಳೂರಿನ ಬನಶಂಕರಿಯಲ್ಲಿ ಅದ್ಧೂರಿಯಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಈ ಸಮಾರಂಭ ಜರುಗಿದೆ.

    ಇನ್ನೂ ಮುಂದಿನ ವರ್ಷ ಫೆಬ್ರವರಿಯಲ್ಲಿ ಮಾನ್ಸಿ ಮದುವೆ ನಡೆಯಲಿದೆ. ಅಂದಹಾಗೆ, ಇವರು ನಟಿ ಮೋಕ್ಷಿತಾ ಪೈ (Mokshitha Pai) ಅವರ ಆತ್ಮೀಯ ಗೆಳತಿ. ಮೋಕ್ಷಿತಾ ಬಿಗ್ ಬಾಸ್‌ಗೆ (Bigg Boss Kannada 11) ಹೋಗಿರೋದ್ರಿಂದ ಅವರನ್ನು ಮಿಸ್ ಮಾಡಿಕೊಂಡಿದ್ದಾರೆ. ಇನ್ನೂ ಈ ಹೊಸ ಜೋಡಿಗೆ ಅಭಿಮಾನಿಗಳು ಶುಭಹಾರೈಸಿದ್ದಾರೆ.

  • ನಿಶ್ಚಿತಾರ್ಥ ಮಾಡಿಕೊಂಡ ‘ಬಿಗ್ ಬಾಸ್’ ವಿನ್ನರ್ ಮಂಜು ಪಾವಗಡ- ಮದುವೆ ಡೇಟ್‌ ಫಿಕ್ಸ್

    ನಿಶ್ಚಿತಾರ್ಥ ಮಾಡಿಕೊಂಡ ‘ಬಿಗ್ ಬಾಸ್’ ವಿನ್ನರ್ ಮಂಜು ಪಾವಗಡ- ಮದುವೆ ಡೇಟ್‌ ಫಿಕ್ಸ್

    ‘ಬಿಗ್ ಬಾಸ್ ಕನ್ನಡ 8’ರ ವಿನ್ನರ್ (Bigg Boss Kannada 8) ಮಂಜು ಪಾವಗಡ (Manju Pavagada) ಅವರು ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ನಂದಿನಿ (Nandini) ಎಂಬುವವರ ಜೊತೆ ಮಂಜು ಪಾವಗಡ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.‌ ಇದನ್ನೂ ಓದಿ:ಬಳ್ಳಾರಿ ಜೈಲಿನಲ್ಲಿರುವ ಆರೋಪಿ ದರ್ಶನ್‌ಗೆ ಬೆನ್ನು ನೋವು

    ನಟ ಮಂಜು ಪಾವಗಡ ಅವರು ಹಸೆಮಣೆ (Wedding) ಏರೋಕೆ ರೆಡಿಯಾಗಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ನಂದಿನಿ ಜೊತೆ ಸದ್ದಿಲ್ಲದೇ ನಟ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಗುರುಹಿರಿಯರು ನಿಶ್ಚಯಿಸಿದ ಮದುವೆ ಇದಾಗಿದ್ದು, ನವೆಂಬರ್ 13 ಮತ್ತು 14ರಂದು ಪಾವಗಡದಲ್ಲಿ ಮದುವೆ ನಡೆಯಲಿದೆ.

    ಇನ್ನೂ ಮಂಜು ಪಾವಗಡ ಅವರು ಬಿಗ್ ಬಾಸ್ ಕನ್ನಡ 8ರ ವಿನ್ನರ್ ಆಗಿದ್ದರು. ಬಳಿಕ ‘ಅಂತರಪಟ’ ಎಂಬ ಸೀರಿಯಲ್‌ನಲ್ಲಿ ವಿಲನ್ ಆಗಿ ನಟಿಸಿದ್ದರು. ರುದ್ರಾಕ್ಷಿಪುರ, ಚಂದನ್ ಶೆಟ್ಟಿ ಜೊತೆ ಎಲ್ರ ಕಾಲೆಳಿಯುತ್ತೆ ಕಾಲ, 45, ಕೋಮಲ್ ಜೊತೆ ಎಲಾ ಕುನ್ನಿ ಸೇರಿದಂತೆ ಹಲವು ಚಿತ್ರಗಳಲ್ಲಿ ಮಂಜು ನಟಿಸಿದ್ದಾರೆ.

  • ‘ಕೆಜಿಎಫ್‌ 2’ ಸಿಂಗರ್‌ ಜೊತೆ ಎಂಗೇಜ್‌ ಆದ ‘ಸಿಂಗಾರ ಸಿರಿಯೇ’ ಖ್ಯಾತಿಯ ಪ್ರಮೋದ್‌ ಮರವಂತೆ

    ‘ಕೆಜಿಎಫ್‌ 2’ ಸಿಂಗರ್‌ ಜೊತೆ ಎಂಗೇಜ್‌ ಆದ ‘ಸಿಂಗಾರ ಸಿರಿಯೇ’ ಖ್ಯಾತಿಯ ಪ್ರಮೋದ್‌ ಮರವಂತೆ

    ‘ಕಾಂತಾರ’ ಸಿನಿಮಾದಲ್ಲಿನ ‘ಸಿಂಗಾರ ಸಿರಿಯೇ’ ಖ್ಯಾತಿಯ ಲಿರಿಕ್ಸ್ ರೈಟರ್ ಪ್ರಮೋದ್ ಮರವಂತೆ (Pramod Maravante) ಗುಡ್ ನ್ಯೂಸ್ ಕೊಟ್ಟಿದ್ದಾರೆ. ‘ಕೆಜಿಎಫ್ 2’ ಚಿತ್ರದ ಸಿಂಗರ್ ಸುಚೇತ (Suchetha Basrur) ಜೊತೆ ಪ್ರಮೋದ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ FIR ದಾಖಲು

    ನಿಶ್ಚಿತಾರ್ಥದ (Engagement) ಸಂಭ್ರಮದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ, ‘ರಾಗಕ್ಕೆ ಪದ ಸೇರಿದೆ ಬದುಕೊಂದು ಹಾಡಾಗಿದೆ’ ಎಂದು ಸಾಲುಗಳನ್ನು ಬರೆದು ಭಾವಿ ಪತ್ನಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ.

    ಪ್ರಮೋದ್ ಭಾವಿ ಪತ್ನಿಯ ಹೆಸರು ಸುಚೇತ ಬಸ್ರೂರು, ಕೆಜಿಎಫ್ 2 ಚಿತ್ರದಲ್ಲಿ ‘ಗಗನ ನೀ ಭುವನ ನೀ’ ಎಂಬ ಹಾಡನ್ನು ಸೊಗಸಾಗಿ ಹಾಡುವ ಮೂಲಕ ಸದ್ದು ಮಾಡಿದ್ದರು. ಇವರು ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸೊಸೆಯಾಗಿದ್ದಾರೆ. ಅವರ ಅಕ್ಕನ ಮಗಳು ಸುಚೇತ ಜೊತೆ ಪ್ರಮೋದ್ ಉಂಗುರದ ಮುದ್ರೆ ಒತ್ತಿದ್ದಾರೆ. ಸದ್ಯದಲ್ಲೇ ಮದುವೆ ಕುರಿತು ಅಪ್‌ಡೇಟ್‌ ಹಂಚಿಕೊಳ್ಳಲಿದ್ದಾರೆ.

    ಅಂದಹಾಗೆ, ಸಿಂಗಾರ ಸಿರಿಯೇ, ಚೆಂದ ಚೆಂದ ನನ್ನ ಹೆಂಡ್ತಿ, ಮತ್ತು ‘ಸೀತಾರಾಮ’ ಸೀರಿಯಲ್‌ನ ಟೈಟಲ್ ಟ್ರ್ಯಾಕ್‌ಗೆ ಪ್ರಮೋದ್ ಸಾಹಿತ್ಯ ಬರೆದಿದ್ದಾರೆ. ಸಾಕಷ್ಟು ಸಿನಿಮಾಗಳ ಹಾಡಿಗೆ ಲಿರಿಕ್ಸ್ ಬರೆಯುವ ಮೂಲಕ ಗಮನ ಸೆಳೆದಿದ್ದಾರೆ.

  • ಬಹುಕಾಲದ ಗೆಳೆಯನ ಜೊತೆ ತೆಲುಗು ನಟಿ ಮೇಘಾ ಆಕಾಶ್‌ ನಿಶ್ಚಿತಾರ್ಥ

    ಬಹುಕಾಲದ ಗೆಳೆಯನ ಜೊತೆ ತೆಲುಗು ನಟಿ ಮೇಘಾ ಆಕಾಶ್‌ ನಿಶ್ಚಿತಾರ್ಥ

    ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಮೇಘಾ ಆಕಾಶ್ (Actress Megha Akash)  ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಬಹುಕಾಲದ ಗೆಳೆಯನ ಜೊತೆ ನಟಿ ಮೇಘಾ ಆ.22ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ (Engagement) ಸುಂದರ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ.

    ಭಾವಿ ಪತಿ ಜೊತೆಗಿನ ರೊಮ್ಯಾಂಟಿಕ್ ಫೋಟೋ ಹಂಚಿಕೊಂಡು, ನನ್ನ ಹಾರೈಕೆ ನಿಜವಾಯಿತು. ನನ್ನ ಜೀವನದ ಪ್ರೀತಿಯ ಜೊತೆ ಎಂಗೇಜ್ ಆಗಿದ್ದೇನೆ ಎಂದು ನಟಿ ಅಧಿಕೃತವಾಗಿ ತಿಳಿಸಿದ್ದಾರೆ. ಇದನ್ನೂ ಓದಿ:ಮರ್ಡರ್ ಮಿಸ್ಟ್ರಿ ಸಿನಿಮಾದಲ್ಲಿ ‘ಜಿಂಗೋ’ ಆದ ಡಾಲಿ

     

    View this post on Instagram

     

    A post shared by Megha Akash (@meghaakash)

    ಮೇಘಾ ಆಕಾಶ್ ಅವರು ಕಳೆದ 6 ವರ್ಷಗಳಿಂದ ಸಾಯಿ ವಿಷ್ಣು ಅವರನ್ನು ಪ್ರೀತಿಸುತ್ತಿದ್ದರು. ಆ.22ರಂದು ಗುರುಹಿರಿಯರ ಸಮ್ಮುಖದಲ್ಲಿ ನಟಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ವರ್ಷದ ಅಂತ್ಯದಲ್ಲಿ ನಟಿಯ ಮದುವೆ ಜರುಗಲಿದೆ. ಸದ್ಯ ಈ ಹೊಸ ಜೋಡಿಗೆ ಫ್ಯಾನ್ಸ್ ಶುಭಕೋರುತ್ತಿದ್ದಾರೆ.

    ಅಂದಹಾಗೆ, ರಜನಿಕಾಂತ್ (Rajanikanth) ನಟನೆಯ ಪೆಟ್ಟಾ, ಸಲ್ಮಾನ್ ಖಾನ್ (Salman Khan) ನಟನೆಯ ರಾಧೆ, ರವಿ ತೇಜಾ ಜೊತೆ ರಾವಣಾಸುರ ಸೇರಿದಂತೆ ಹಲವು ಸಿನಿಮಾಗಳಲ್ಲಿ ಮೇಘಾ ಆಕಾಶ್ ನಟಿಸಿದ್ದಾರೆ.

  • ಫ್ಯಾನ್ಸ್‌ಗೆ ಗುಡ್‌ ನ್ಯೂಸ್-‌ ಶೋಭಿತಾ ಜೊತೆ ಸಮಂತಾ ಮಾಜಿ ಪತಿ ನಿಶ್ಚಿತಾರ್ಥ

    ಫ್ಯಾನ್ಸ್‌ಗೆ ಗುಡ್‌ ನ್ಯೂಸ್-‌ ಶೋಭಿತಾ ಜೊತೆ ಸಮಂತಾ ಮಾಜಿ ಪತಿ ನಿಶ್ಚಿತಾರ್ಥ

    ಟಾಲಿವುಡ್ ನಟ ನಾಗಚೈತನ್ಯ (Nagachaitanya) ಇಂದು (ಆ.8) ಹೈದರಾಬಾದ್‌ನ ತಮ್ಮ ನಿವಾಸದಲ್ಲಿ ನಟಿ ಶೋಭಿತಾ (Sobhita) ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಸಿಹಿಸುದ್ದಿಯನ್ನು ನಾಗಾರ್ಜುನ ಅಕ್ಕಿನೇನಿ ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ:ದರ್ಶನ್‌ ಪ್ರಕರಣದ ಬಗ್ಗೆ ಇತ್ತೀಚೆಗೆ ಗೊತ್ತಾಯ್ತು: ಶರ್ಮಿಳಾ ಮಾಂಡ್ರೆ

    ನಮ್ಮ ಮಗ ನಾಗಚೈತನ್ಯ ಮತ್ತು ಶೋಭಿತಾ ಅವರೊಂದಿಗೆ ಇಂದು ಬೆಳಗ್ಗೆ 9:42ಕ್ಕೆ ನಡೆದ ನಿಶ್ಚಿತಾರ್ಥವನ್ನು ಘೋಷಿಸಲು ನಾವು ಸಂತೋಷಪಡುತ್ತೇವೆ. ಶೋಭಿತಾಳನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ಖುಷಿಯಾಗುತ್ತಿದೆ. ಈ ಜೋಡಿಗೆ ಅಭಿನಂದನೆಗಳು. ಅವರಿಗೆ ಜೀವನಪೂರ್ತಿ ಸಂತೋಷ ಮತ್ತು ಪ್ರೀತಿಯಿಂದ ಕೂಡಿರಲಿ ಎಂದು ಹಾರೈಸುತ್ತೇನೆ. ದೇವರು ಒಳ್ಳೆಯದು ಮಾಡಲಿ. 8-8-8 ಪ್ರೀತಿಯ ಆರಂಭ ಎಂದು ಈ ಜೋಡಿಗೆ ನಾಗಾರ್ಜುನ ಶುಭಕೋರಿದ್ದಾರೆ.

    ಸಮಂತಾ (Samantha) ಜೊತೆಗಿನ ಡಿವೋರ್ಸ್ (Divorce) ನಂತರ ಶೋಭಿತಾ ಜೊತೆ ನಾಗಚೈತನ್ಯ ಹೆಸರು ಕೇಳಿ ಬಂದಿತ್ತು. ಆಗಾಗ ಶೋಭಿತಾ ಜೊತೆ ನಾಗಚೈತನ್ಯ ವಿದೇಶಕ್ಕೆ ತೆರಳುತ್ತಿದ್ದರು. ಆ ಫೋಟೋಗಳು ವೈರಲ್ ಆಗಿತ್ತು. ಈಗ ನಿಶ್ಚಿತಾರ್ಥ ಸುದ್ದಿ ಮೂಲಕ ಕ್ಲ್ಯಾರಿಟಿ ಸಿಕ್ಕಿದೆ. ಸದ್ಯ ಈ ವಿಷ್ಯ ಕೇಳಿ ಸಮಂತಾ ಫ್ಯಾನ್ಸ್‌ ಶಾಕ್‌ ಆಗಿದ್ದಾರೆ.

    ಅಂದಹಾಗೆ, ಸಮಂತಾ ಜೊತೆಗಿನ ಹಲವು ವರ್ಷಗಳ ಪ್ರೀತಿಗೆ ನಾಗಚೈತನ್ಯ 2021ರಲ್ಲಿ ಡಿವೋರ್ಸ್ ಪಡೆಯುವ ಮೂಲಕ ಬೇರೆಯಾದರು.

  • ನಿಶ್ಚಿತಾರ್ಥ ಸುದ್ದಿ ಬಹಿರಂಗವಾಗಲು ಅಮ್ಮ ಕಾರಣ ಎಂದ ನಟಿ ಅದಿತಿ

    ನಿಶ್ಚಿತಾರ್ಥ ಸುದ್ದಿ ಬಹಿರಂಗವಾಗಲು ಅಮ್ಮ ಕಾರಣ ಎಂದ ನಟಿ ಅದಿತಿ

    ತ್ತೀಚೆಗಷ್ಟೇ ನಟಿ ಅದಿತಿ ರಾವ್ ಹೈದರ್ ಮತ್ತು ತೆಲುಗು ನಟ ಸಿದ್ಧಾರ್ಥ ಎಂಗೇಜ್ ಆದ ವಿಷಯ ಬಹಿರಂಗವಾಗಿತ್ತು. ಆಪ್ತರಿಗೂ ಈ ವಿಷಯ ತಿಳಿಸದೇ ಕೇವಲ ಕುಟುಂಬಸ್ಥರು ಸೇರಿ ನಿಶ್ಚಿತಾರ್ಥ ಕಾರ್ಯಕ್ರಮವನ್ನು  ಮುಗಿಸಿದ್ದರು. ಇದು ಗಾಸಿಪ್ ರೀತಿಯಲ್ಲಿ ಹರಡಿತ್ತಾದರೂ, ಯಾರೂ ವಿಷಯವನ್ನು ಖಚಿತ ಪಡಿಸಿರಲಿಲ್ಲ. ನಂತರ ಅದಿತಿ ಅವರೇ ಈ ವಿಷಯ ಹಂಚಿದ್ದರು.

    ಹೌದು, ನಿಶ್ಚಿತಾರ್ಥದ ವಿಷಯವು ಬಹಿರಂಗವಾಗಲು ತಮ್ಮ ತಾಯಿಯೇ ಕಾರಣ ಎಂದಿದ್ದಾರೆ ನಟಿ. ನಾನು ಎಂಗೇಜ್ ಮೆಂಟ್ ಮಾಡಿಕೊಂಡ ವಿಷಯವನ್ನು ಯಾರಿಗೂ ಹೇಳಿರಲಿಲ್ಲ. ಆದರೂ, ಗೊತ್ತಾಗಿತ್ತು. ಅಮ್ಮನಿಗೆ ಪದೇ ಪದೇ ಕಾಲ್ ಮಾಡಿ ಕೇಳುತ್ತಿದ್ದರು. ಹಾಗಾಗಿ ಅವರೇ ಈ ವಿಷಯವನ್ನು ತಿಳಿಸಿ ಬಿಡು ಅಂದಿದ್ದರು ಎಂದಿದ್ದಾರೆ ಅದಿತಿ.

    ಆಗಿದ್ದು ನಿಶ್ಚಿತಾರ್ಥವಾದರೂ, ಸೋಷಿಯಲ್ ಮೀಡಿಯಾದಲ್ಲಿ ಅದಿತಿ ರಾವ್ ಹೈದರಿ(Aditi Rao Hydari) ಸಿದ್ಧಾರ್ಥ್  (Siddarth) ಸದ್ದಿಲ್ಲದೇ ಮದುವೆಯಾ ಆಗಿದ್ದಾರೆ ಎಂದು ಸುದ್ದಿ ಆಗಿತ್ತು. ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿರುವ ಶ್ರೀರಂಗಪುರಂನಲ್ಲಿರುವ ಶ್ರೀ ರಂಗನಾಯಕ ಸ್ವಾಮಿ ದೇವಸ್ಥಾನದಲ್ಲಿ ಸಿಂಪಲ್ ಆಗಿ ಈ ಜೋಡಿ ಮದುವೆಯಾಗಿದೆ ಎಂದು ಸುದ್ದಿ ಹಬ್ಬಿಸಿದ್ದರು.

    ಇರಾ ಖಾನ್ ಮದುವೆಯಲ್ಲಿ ಕಾಣಿಸಿಕೊಂಡಿದ್ದ ಅದಿತಿ ಮತ್ತು ಸಿದ್ಧಾರ್ಥ ಅವರ ಫೋಟೋವನ್ನೇ ಮದುವೆ ಫೋಟೋ ಎಂದು ವೈರಲ್ ಮಾಡಲಾಗಿತ್ತು. ಶೂಟಿಂಗ್ ಎಂದು ಸುಳ್ಳು ಹೇಳಿ ಇಬ್ಬರೂ ಮದುವೆ ಆಗಿದ್ದಾರೆ ಎಂದು ಆರೋಪಿಸಲಾಗಿತ್ತು. ನಂತರ ಎಲ್ಲದಕ್ಕೂ ಅದಿತಿ ಉತ್ತರ ನೀಡಿದ್ದರು. ಹಿ ಸೇಡ್ ಎಸ್.. ಎಂಗೇಜ್ಡ್’ (Engaged) ಎಂದು ಸಿದ್ಧಾರ್ಥನ ಜೊತೆಗಿರುವ ಫೋಟೋ ಹಂಚಿಕೊಂಡಿದ್ದರು.

    ಈ  ಜೋಡಿ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿತ್ತು. ಆದರೆ ಈ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ. ಆದರೆ ಸಿದ್ಧಾರ್ಥ್ ಜೊತೆಗಿನ ಖಾಸಗಿ ಫೋಟೋ ಹಂಚಿಕೊಂಡು ಹೊಸ ವರ್ಷದಂದು ಮದುವೆ (Wedding) ಬಗ್ಗೆ ಸುಳಿವು ನೀಡಿದ್ದರು ಅದಿತಿ ರಾವ್.

     

    ನ್ಯೂ ಇಯರ್ ಸಂಭ್ರಮವನ್ನು ನಟಿ ಅದಿತಿ- ಸಿದ್ಧಾರ್ಥ್ ಜೋಡಿ ವಿದೇಶದಲ್ಲಿ ಸೆಲೆಬ್ರೇಟ್ ಮಾಡಿದ್ದರು. ಈ ಕುರಿತ ಇಬ್ಬರೂ ಕೂಡ ಚೆಂದದ ಫೋಟೋ ಶೇರ್ ಮಾಡಿ ಅಭಿಮಾನಿಗಳಿಗೆ ಶುಭಕೋರಿದ್ದರು. ಈ ಮೂಲಕ ಎಂಗೇಜ್ ಆಗಿರೋದು ಖಚಿತವಾಗಿತ್ತು. ಫೋಟೋ ಶೇರ್ ಮಾಡ್ತಿದ್ದಂತೆ ಮದುವೆ ಯಾವಾಗ ಎಂದು ಫ್ಯಾನ್ಸ್ ಕಾಮೆಂಟ್ ಮಾಡಿದ್ದರು.