Tag: engegement

  • ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಗಾಯಕಿ – ಧನಂಜಯ್ ಜೊತೆ ಅಖಿಲಾ ನಿಶ್ಚಿತಾರ್ಥ

    ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಗಾಯಕಿ – ಧನಂಜಯ್ ಜೊತೆ ಅಖಿಲಾ ನಿಶ್ಚಿತಾರ್ಥ

    ಬೆಂಗಳೂರು: ತನ್ನ ಸುಮಧುರ ಕಂಠದಿಂದಲೇ ಮನೆಮಾತಾಗಿರುವ ಗಾಯಕಿ ಅಖಿಲಾ ಪಜಿಮಣ್ಣು ಅವರು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ನೀಡಿದ್ದು, ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಿದ್ದ ‘ಕನ್ನಡ ಕೋಗಿಲೆ’ಯ ಮೂಲಕ ಮನೆಮಾತಾಗಿದ್ದ ಗಾಯಕಿ ಅಖಿಲಾ ಪಜಿಮಣ್ಣು ಅವರ ನಿಶ್ಚಿತಾರ್ಥ ಕಾರ್ಯಕ್ರಮ ನೆರವೇರಿದೆ. ಈ ಕುರಿತು ಸಿಂಗರ್ ತಮ್ಮ ಇನ್‍ಸ್ಟಾದಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ.

    ಧನಂಜಯ್ ಶರ್ಮಾ ಎಂಬವರ ಜೊತೆ ಅಖಿಲಾ ನಿಶ್ಚಿತಾರ್ಥ ನೆರವೇರಿದೆ. ಎಂಗೇಜ್ಮೆಂಟ್ ಕಾರ್ಯಕ್ರಮದ ಸಂಪೂರ್ಣ ವೀಡಿಯೋವನ್ನು ಅಖಿಲಾ ತಮ್ಮ ಇನ್ ಸ್ಟಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಮೂಲಕ ತಾನು ಎಂಗೇಜ್ ಆಗಿರುವ ವಿಚಾರವನ್ನು ತಮ್ಮ ಅಭಿಮಾನಿಗಳಲ್ಲಿ ಹಂಚಿಕೊಂಡಿದ್ದಾರೆ.

    ಅಖಿಲಾ ಅವರು ಈ ಶುಭಸುದ್ದಿಯ ವೀಡಿಯೋ ಹಂಚಿಕೊಳ್ಳುತ್ತಿದ್ದಂತೆಯೇ ಅಭಿಮಾನಿಗಳು ಅವರಿಗೆ ಶುಭ ಹಾರೈಸಿದ್ದಾರೆ. ಅಲ್ಲದೆ ಕೆಲವರು ಲವ್ ಅಥವಾ ಅರೇಂಜ್ ಮ್ಯಾರೇಜ್ ಅಂತ ಪ್ರಶ್ನೆ ಮಾಡಿದ್ದಾರೆ.

  • ನಿಶ್ಚಿತಾರ್ಥ ಜೋಡಿಯಿಂದ ಬಾವಿಯ ಮೆಟ್ಟಿಲಿನಲ್ಲಿ ಪ್ರಿ ವೆಡ್ಡಿಂಗ್ ಸೆಲ್ಫಿ – ಆಯತಪ್ಪಿ ಬಿದ್ದು ಯುವತಿ ಸಾವು

    ನಿಶ್ಚಿತಾರ್ಥ ಜೋಡಿಯಿಂದ ಬಾವಿಯ ಮೆಟ್ಟಿಲಿನಲ್ಲಿ ಪ್ರಿ ವೆಡ್ಡಿಂಗ್ ಸೆಲ್ಫಿ – ಆಯತಪ್ಪಿ ಬಿದ್ದು ಯುವತಿ ಸಾವು

    ಚೆನ್ನೈ: ಇತ್ತೀಚೆಗಷ್ಟೇ ನಿಶ್ಚಿತಾರ್ಥವಾದ ಜೋಡಿಯೊಂದು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಬಾವಿಗೆ ಬಿದ್ದ ಘಟನೆ ಚೆನ್ನೈನಲ್ಲಿ ನಡೆದಿದೆ.

    ಈ ಘಟನೆ ಪಟ್ಟಾಭಿರಾಮ್ ಎಂಬಲ್ಲಿ ಸೋಮವಾರ ನಡೆದಿದ್ದು, ಅವಘಡದಲ್ಲಿ ಯುವತಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ. ಆದರೆ ಯುವಕ ಮಾತ್ರ ರೈತನ ಸಹಾಯದಿಂದಾಗಿ ಪ್ರಾಣಾಪಾಯದಿಂದಾಗಿ ಪಾರಾಗಿದ್ದು, ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    ಮೃತ ದುರ್ದೈವಿ ಯುವತಿಯನ್ನು ಟಿ ಮರ್ಸಿ ಸ್ಟೆಪ್ಪಿ(24) ಎಂದು ಗುರುತಿಸಲಾಗಿದೆ. ಪಟ್ಟಾಭಿರಾಮ್ ಬಳಿಯ ಗಾಂಧಿನಗರ ನಿವಾಸಿಯಾಗಿರುವ ಈಕೆಗೆ ಕೆಲ ದಿನಗಳ ಹಿಂದೆಯಷ್ಟೇ ಡಿ ಅಪ್ಪು(24) ಎಂಬಾತನ ಜೊತೆ ಮದುವೆ ನಿಶ್ಚಿತಾರ್ಥವಾಗಿತ್ತು. ಈತ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದನು. ಇವರಿಬ್ಬರ ಮದುವೆ ಜನವರಿಯಲ್ಲಿ ನಿಗದಿಯಾಗಿತ್ತು. ಆದರೆ ಅದಕ್ಕೂ ಮೊದಲೇ ಯುವತಿ ಮೃತಪಟ್ಟಿದ್ದು, ಇದೀಗ ಇಬ್ಬರ ಕುಟುಂಬ ಶೋಕದಲ್ಲಿ ಮುಳುಗಿದೆ.

    ನಡೆದಿದ್ದೇನು..?
    ಸೋಮವಾರ ಮರ್ಸಿಯನ್ನು ಆಕೆಯ ಮನೆಯಿಂದಲೇ ಅಪ್ಪು ತನ್ನ ಬೈಕಿನಲ್ಲಿ ಕರೆದುಕೊಂಡು ಹೋಗಿದ್ದು, ಇಬ್ಬರೂ ಕೆಲ ಹೊತ್ತು ಸುತ್ತಾಡಿದ್ದಾರೆ. ಬಳಿಕ 3 ಗಂಟೆ ಸುಮಾರಿಗೆ ವಂದಲುರ್-ಮಿಂಜುರ್ ಸಮೀಪ ಇರುವ ಕೃಷಿ ಭೂಮಿಯತ್ತ ತೆರಳಿದ್ದಾರೆ. ಹಾಗೆಯೇ ಅಲ್ಲಿರುವ ಬಾವಿಯೊಂದನ್ನು ಗಮನಿಸಿದ್ದು, ಇಬ್ಬರೂ ಬಾವಿ ಬಳಿ ತೆರಳಿ ಅದರ ಸುತ್ತಮುತ್ತ ಸೆಲ್ಫಿ ತೆಗೆದುಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಇದು ಪುರಾತನ ಕಾಲದ ಬಾವಿಯಾಗಿದ್ದು, ಇಳಿಯಲು ಮೆಟ್ಟಿಲುಗಳಿದ್ದವು. ಹೀಗಾಗಿ ಇಬ್ಬರೂ ಸೆಲ್ಫಿ ತೆಗೆದುಕೊಂಡ ಬಳಿಕ ಮೆಟ್ಟಿಲುಗಳ ಮೂಲಕ ಇಳಿದು ಅದರಲ್ಲಿ ಕುಳಿತುಕೊಂಡು ಮತ್ತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಹೀಗೆ ಫೋಟೋ ತೆಗೆಯುತ್ತಿದ್ದಾಗ ಮರ್ಸಿ ಆಯತಪ್ಪಿ ಬಾವಿಯೊಳಗೆ ಬಿದ್ದಿದ್ದಾಳೆ. ಪರಿಣಾಮ ಆಕೆಯ ತಲೆ ಬಾವಿ ಗೋಡೆಗೆ ಹೊಡೆದು ನಂತರ ನೀರಿಗೆ ಬಿದ್ದಿದ್ದಾಳೆ. ಮರ್ಸಿ ಬೀಳುತ್ತಿದ್ದಂತೆಯೇ ಆಕೆಯನ್ನು ಹಿಡಿಯಲು ಅಪ್ಪು ಪ್ರಯತ್ನಿಸಿದ್ದು, ಆತನೂ ಬಾವಿಗೆ ಬಿದ್ದಿದ್ದಾನೆ.

    ಈ ವೇಳೆ ಅಪ್ಪು ಜೋರಾಗಿ ಕಿರುಚಾಡಿದ್ದಾನೆ. ಚೀರಾಟ ಆಲಿಸಿದ ಅಲ್ಲೇ ಇದ್ದ ರೈತ ಸದಗೋಪನ್ ಬಾವಿ ಬಳಿ ಓಡಿ ಬಂದಿದ್ದು, ಅದರೊಳಗೆ ವ್ಯಕ್ತಿ ಇರುವುದನ್ನು ಕಂಡು ಹಾರಿದ್ದಾರೆ. ಅಲ್ಲದೆ ಅಪ್ಪುವನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಆದರೆ ಈ ಸಮಯದಲ್ಲಿ ರೈತನಿಗೆ ಮರ್ಸಿ ನೀರಿನಲ್ಲಿ ಅದಾಗಲೇ ಮುಳುಗಿದ್ದರಿಂದ ಕಾಣಿಸಿರಲಿಲ್ಲ. ಕೂಡಲೇ ಅಗ್ನಿಶಾಮಕ ದಳದವರಿಗೂ ಮಾಹಿತಿ ನೀಡಿದ್ದು ಅವರು ಕೂಡ ಸ್ಥಳಕ್ಕೆ ದೌಡಾಯಿಸಿದ್ದು, ನಂತರ ಮರ್ಸಿ ಮೃತದೇಹವನ್ನು ಬಾವಿಯಿಂದ ಹೊರತೆಗೆದಿದ್ದಾರೆ.

    ಘಟನೆ ಸಂಬಂಧ ಮುಪುಡುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಇತ್ತ ಅಪ್ಪು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತನಿಖೆ ಮುಂದುವರಿದಿದೆ.

  • ಚಂದನ್- ನಿವೇದಿತಾ ಅದ್ಧೂರಿ ನಿಶ್ಚಿತಾರ್ಥ

    ಚಂದನ್- ನಿವೇದಿತಾ ಅದ್ಧೂರಿ ನಿಶ್ಚಿತಾರ್ಥ

    ಮೈಸೂರು: ಗಾಯಕ ಚಂದನ್ ಶೆಟ್ಟಿ ಮತ್ತು ಬಾರ್ಬಿ ಗರ್ಲ್  ನಿವೇದಿತಾ ಗೌಡ ನಿಶ್ವಿತಾರ್ಥ ಇಂದು ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಅದ್ಧೂರಿಯಾಗಿ ನಡೆದಿದೆ.

    ಈ ಶುಭಸಮಾರಂಭದಲ್ಲಿ ಎರಡೂ ಕುಟುಂಬದ ಸದಸ್ಯರು ಹಾಗೂ ಆಪ್ತರಷ್ಟೇ ಭಾಗಿಯಾಗಿದ್ದರು. ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಅಭಿಮಾನಿಗಳ ಮುಂದೆ ಗೆಳತಿ ನಿವೇದಿತಾರಿಗೆ ಪ್ರಪೋಸ್ ಮಾಡಿದ್ದರು. ವೇದಿಕೆಯಲ್ಲಿಯೇ ರಿಂಗ್ ತೊಡಿಸಿ ತಮ್ಮ ಪ್ರೇಮ ವಿಚಾರವನ್ನು ಚಂದನ್ ಅಧಿಕೃತವಾಗಿ ಹೇಳಿಕೊಂಡಿದ್ದರು. ಇದೀಗ ಚಂದನ್, ನಿವೇದಿತಾಗೆ ಮತ್ತೊಮ್ಮೆ ರಿಂಗ್ ತೊಡಿಸಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

    ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಎಂದು ಹೇಳಿಕೊಂಡು ಬರುತ್ತಿದ್ದರು. ಈ ಮಧ್ಯೆ ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ ಎಂಬಿತ್ಯಾದಿ ಸುದ್ದಿಗಳು ಹರಿದಾಡಿದ್ದವು. ಆದರೆ ಚಂದನ್ ನಿವೇದಿತಾ ಎಲ್ಲಿಯೂ ತಮ್ಮ ಸಂಬಂಧದ ಬಗ್ಗೆ ಸ್ಪಷ್ಟವಾಗಿ ಹೇಳಿಕೊಂಡಿರಲಿಲ್ಲ.

    ಯುವ ದಸರಾದಲ್ಲಿ ಚಂದನ್ ರಿಂಗ್ ತೊಡಿಸುವ ಮೂಲಕ ಎಲ್ಲರೂ ಹುಬ್ಬೇರುವಂತೆ ಮಾಡಿದ್ದರು. ಸಾರ್ವಜನಿಕ ವೇದಿಕೆಯಲ್ಲಿ ಈ ರೀತಿ ಪ್ರೇಮ ನಿವೇದನೆ ಸಲ್ಲಿಸಿದ್ದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗಳು ನಡೆದಿದ್ದವು.