Tag: england

  • ಕೇವಲ ವೋಟಿಗಾಗಿ ನನ್ನನ್ನು ಭಾರತಕ್ಕೆ ಕರೆತರಲು ಪ್ರಯತ್ನಿಸಲಾಗ್ತಿದೆ: ಕೇಂದ್ರದ ವಿರುದ್ಧ ಮಲ್ಯ ಕಿಡಿ

    ಕೇವಲ ವೋಟಿಗಾಗಿ ನನ್ನನ್ನು ಭಾರತಕ್ಕೆ ಕರೆತರಲು ಪ್ರಯತ್ನಿಸಲಾಗ್ತಿದೆ: ಕೇಂದ್ರದ ವಿರುದ್ಧ ಮಲ್ಯ ಕಿಡಿ

    ಲಂಡನ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತಗಳನ್ನು ಗಳಿಸಲು ನನ್ನನ್ನು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಮದ್ಯ ದೊರೆ ವಿಜಯ್ ಮಲ್ಯ ಹೇಳಿದ್ದಾರೆ.

    ಬ್ರಿಟನ್ ನಲ್ಲಿರುವ ವಿಜಯ್ ಮಲ್ಯ ಅವರ ಆಸ್ತಿಯನ್ನು ವಶಪಡಿಸಿಕೊಳ್ಳುವುದಕ್ಕೆ ಬ್ರಿಟನ್ ಕೋರ್ಟ್ ಜಾರಿ ಆದೇಶ ಹೊರಡಿಸಿದೆ. ನ್ಯಾಯಾಲಯದ ತೀರ್ಪಿಗೆ ತಲೆಬಾಗಿದ್ದು, ಅಧಿಕಾರಿಗಳಿಗೆ ಸಹಕರಿಸುವುದಾಗಿ ವಿಜಯ್ ಮಲ್ಯ ತಿಳಿಸಿದ್ದಾರೆ.

    ಬ್ರಿಟಿಷ್ ಫಾರ್ಮುಲಾ ಒನ್ ರೇಸ್ ವೇಳೆ ಪಾಲ್ಗೊಂಡಿದ್ದ ಮಲ್ಯ ಅವರನ್ನು ಮಾಧ್ಯಮವೊಂದು ಮಾತನಾಡಿಸಿದ್ದು ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.

    ಭಾರತದ 13 ಬ್ಯಾಂಕ್ ಗಳ ಸಾಲ ಮರುಪಾವತಿಗಾಗಿ ಇಂಗ್ಲೆಂಡಿನಿಂದ ಗಡಿಪಾರು ಮಾಡುವಂತೆ ಆಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರವು ರಾಜಕೀಯ ಉದ್ದೇಶದಿಂದ ನನ್ನನ್ನು ಇಂಗ್ಲೆಂಡ್ ನಿಂದ ಭಾರತಕ್ಕೆ ಕರೆತರಲು ಯತ್ನಿಸುತ್ತಿದೆ. ಈ ವರ್ಷ ಚುನಾವಣಾ ವರ್ಷವಾಗಿರುವುದರಿಂದ ಈ ರೀತಿ ಮಾಡಿದರೆ ಮತಗಳು ಹೆಚ್ಚಿಗೆ ಸಿಗುತ್ತವೆ ಎಂದು ಕೇಂದ್ರ ಸರ್ಕಾರ ಭಾವಿಸಿದೆ ಎಂದು ಆರೋಪಿಸಿದರು.

    ಇಂಗ್ಲೆಂಡಿನಲ್ಲಿರುವ ನನ್ನ ಆಸ್ತಿಯ ವಿವರಗಳ ಬಗ್ಗೆ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿದ್ದೇನೆ. ನನ್ನಲ್ಲಿ ಕೆಲವೊಂದು ಕಾರುಗಳು, ಚಿನ್ನಾಭರಣಗಳು ಇವೆ. ಅದನ್ನು ವಶಕ್ಕೆ ಪಡೆಯಲು ನೀವು ನನ್ನ ಮನೆಗೆ ಬರಬೇಕಿಲ್ಲ. ದಿನಾಂಕ, ಸಮಯ ಹಾಗೂ ಸ್ಥಳವನ್ನು ತಿಳಿಸಿದರೆ ನಾನೇ ಅವುಗಳನ್ನು ತಮ್ಮ ವಶಕ್ಕೆ ನೀಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಎಸ್‍ಬಿಐನಿಂದ 963 ಕೋಟಿ ರೂ. ಮೌಲ್ಯದ ವಿಜಯ್‍ಮಲ್ಯ ಆಸ್ತಿ ವಶ!

    ನನ್ನ ಹೆಸರಿನಲ್ಲಿರುವ ಆಸ್ತಿಗಳನ್ನು ಮಾತ್ರ ಬ್ಯಾಂಕ್‍ಗಳು ವಶಕ್ಕೆ ಪಡೆಯಬಹುದೇ ಹೊರತು ಇತರೆ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸಾಧ್ಯವಾಗುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

    ವಿಜಯ ಮಲ್ಯ ಇಂಗ್ಲೆಂಡಿನಲ್ಲಿರುವ ಬೆಲೆ ಬಾಳುವ ಆಸ್ತಿಗಳನ್ನು ತಮ್ಮ ಹೆಸರಿನಲ್ಲಿರಿಸಿಕೊಳ್ಳದೇ ಕುಟುಂಬ ಸದಸ್ಯರ ಹೆಸರಿನಲ್ಲಿರಿಸಿದ್ದಾರೆ.

  • ಹುಟ್ಟುಹಬ್ಬದ ಸಂಭ್ರಮಕ್ಕೂ ಮುನ್ನ ಧೋನಿ ವಿಶೇಷ ಸಾಧನೆ

    ಹುಟ್ಟುಹಬ್ಬದ ಸಂಭ್ರಮಕ್ಕೂ ಮುನ್ನ ಧೋನಿ ವಿಶೇಷ ಸಾಧನೆ

    ಲಂಡನ್: ಟೀಂ ಇಂಡಿಯಾ ಮಾಜಿ ನಾಯಕರ ಎಂಎಸ್ ಧೋನಿ ಇಂದು 37ನೇ ವಸಂತಕ್ಕೆ ಕಾಲಿಟ್ಟಿದ್ದು, ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿರುವ ಧೋನಿ ಶುಕ್ರವಾರ ನಡೆದ 2ನೇ ಟಿ20 ಪಂದ್ಯ ಆಡುವ ಮೂಲಕ 500 ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ಆಡಿದ ಭಾರತದ 3ನೇ ಆಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.

    ಇದುವೆರೆಗೂ ಧೋನಿ 497 ಅಂತರಾಷ್ಟ್ರೀಯ ಪಂದ್ಯಗಳನ್ನು ಟೀಂ ಇಂಡಿಯಾ ಪರ ಆಡಿದ್ದು, 3 ಪಂದ್ಯದಲ್ಲಿ ಏಷ್ಯಾ ತಂಡವನ್ನು ಪ್ರತಿನಿಧಿಸಿದ್ದಾರೆ. ಇದರೊಂದಿಗೆ ಧೋನಿ 500 ಪ್ಲಸ್ ಅಂತರಾಷ್ಟ್ರೀಯ ಪಂದ್ಯಗಳನ್ನಾಡಿರುವ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್(664) , ರಾಹುಲ್ ದ್ರಾವಿಡ್ (509) ಸಹ ಸ್ಥಾನ ಪಡೆದಿದ್ದು, ಶ್ರೀಲಂಕಾ ಆಟಗಾರ ಮಹೇಲಾ ಜಯವರ್ಧನೆ (652), ಕುಮಾರ ಸಂಗಾಕ್ಕರ (594), ಜಯಸೂರ್ಯ (586), ರಿಕಿ ಪಾಟಿಂಗ್ (560), ಶಾಹೀದ್ ಆಫ್ರಿದಿ (524) ಮತ್ತು ಜಾಕ್ ಕಾಲೀಸ್ (519) ಸ್ಥಾನ ಪಡೆದಿದ್ದಾರೆ.

    ಧೋನಿ 90 ಟೆಸ್ಟ್ ಪಂದ್ಯ, 318 ಏಕದಿನ ಪಂದ್ಯ ಹಾಗೂ 92 ಟಿ20 ಪಂದ್ಯಗಳನ್ನು ಆಡಿದ್ದಾರೆ. 2014 ರಲ್ಲಿ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಪಡೆದಿರುವ ಅವರು 4,876 ರನ್ ಗಳಿಸಿದ್ದು, ಏಕದಿನ ಮಾದರಿಯಲ್ಲಿ 9,967 ರನ್ ಹಾಗೂ ಟಿ20 ಯಲ್ಲಿ 1,487 ರನ್ ಗಳಿಸಿದ್ದಾರೆ. ವಿಶೇಷವಾಗಿ ಧೋನಿ ಐಸಿಸಿ ಏರ್ಪಡಿಸಿರುವ ಮೂರು ಮಾದರಿಯ ಪ್ರತಿಷ್ಠಿತ ಕಪ್ ಗಳನ್ನು ಗೆದ್ದ ಏಕೈಕ ನಾಯಕರಾಗಿದ್ದಾರೆ. ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ 2007ರ ಟಿ20 ವಿಶ್ವಕಪ್, 2011 ರ ಏಕದಿನ ವಿಶ್ವಕಪ್ ಹಾಗೂ 2013 ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದು ಬೀಗಿದೆ.

    ಇನ್ನು ಎಂಎಸ್ ಧೋನಿ ತಮ್ಮ 37 ನೇ ಹುಟ್ಟುಹಬ್ಬದ ಸಂಭ್ರಮವನ್ನು ಪತ್ನಿ ಸಾಕ್ಷಿ ಹಾಗೂ ಪುತ್ರಿ ಜೀವಾ ಸೇರಿದಂತೆ ಟೀಂ ಇಂಡಿಯಾ ಕೆಲ ಆಟಗಾರರೊಂದಿಗೆ ಆಚರಣೆ ಮಾಡಿಕೊಂಡಿದ್ದು, ಹಲವು ಸ್ಟಾರ್ ಆಟಗಾರರು ಸಾಮಾಜಿಕ ಜಾಲತಾಣದಲ್ಲಿ ಧೋನಿ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ. ಪ್ರಮುಖವಾಗಿ ಟೀಂ ಇಂಡಿಯಾ ಮಾಜಿ ಆಟಗಾರರ ವಿರೇಂದ್ರ ಸೆಹ್ವಾಗ್ ತಮ್ಮ ಟ್ವೀಟ್ ನಲ್ಲಿ ಧೋನಿ ಫೋಟೋ ಟ್ವೀಟ್ ಮಾಡಿ ಶುಭಕೋರಿದ್ದು ಎಲ್ಲರ ಗಮನ ಸೆಳೆದಿದೆ.

     

  • ಇಂಗ್ಲೆಂಡ್ ವಿರುದ್ಧದ ಏಕದಿನ ಟೂರ್ನಿಯಿಂದಲೂ ಬುಮ್ರಾ ಔಟ್

    ಇಂಗ್ಲೆಂಡ್ ವಿರುದ್ಧದ ಏಕದಿನ ಟೂರ್ನಿಯಿಂದಲೂ ಬುಮ್ರಾ ಔಟ್

    ಲಂಡನ್: ಗಾಯದ ಸಮಸ್ಯೆಯಿಂದ ಇಂಗ್ಲೆಂಡ್ ವಿರುದ್ಧದ ಟಿ20 ಕ್ರಿಕೆಟ್ ಟೂರ್ನಿಗೆ ಅಲಭ್ಯರಾಗಿದ್ದ ವೇಗಿ ಜಸ್‍ಪ್ರೀತ್ ಬುಮ್ರಾ ಏಕದಿನ ಸರಣಿಯಿಂದಲೂ ಹೊರಬಿದ್ದಿದ್ದಾರೆ. ಸದ್ಯ ಬುಮ್ರಾ ಸ್ಥಾನಕ್ಕೆ ವೇಗಿ ಶಾರ್ದೂಲ್ ಠಾಕೂರ್ ಆಯ್ಕೆ ಮಾಡಿದ್ದಾಗಿ ಬಿಸಿಸಿಐ ತಿಳಿಸಿದೆ.

    ಐರ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯ ಫೀಲ್ಡಿಂಗ್ ವೇಳೆ ಬುಮ್ರಾ ಬಲಗೈ ಹೆಬ್ಬೆರಳಿಗೆ ಗಾಯವಾಗಿತ್ತು. ಇದರಿಂದ ಅವರು ಇಂಗ್ಲೆಂಡ್ ಟೂರ್ನಿಯ ಮೂರು ಪಂದ್ಯಗಳ ಟಿ20 ಪಂದ್ಯಗಳಿಂದ ಹೊರಗುಳಿದಿದ್ದರು. ಈ ವೇಳೆ ಅವರು ಏಕದಿನ ಟೂರ್ನಿಯ ವೇಳೆ ಚೇತರಿಕೊಳ್ಳವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಸಂಪೂರ್ಣವಾಗಿ ಬುಮ್ರಾ ಗಾಯದ ಸಮಸ್ಯೆಯಿಂದ ಹೊರಬರಲು ಸಾಧ್ಯವಾಗದ ಕಾರಣ ಏಕದಿನ ಟೂರ್ನಿಗೂ ಅಲಭ್ಯರಾಗಿದ್ದಾರೆ.

    24 ವರ್ಷದ ಬುಮ್ರಾ ಬುಧವಾರ ಗಾಯದ ಸಮಸ್ಯೆಗೆ ಸರ್ಜರಿಗೆ ಒಳಗಾಗಿದ್ದರು. ಸರ್ಜರಿ ಯಶಸ್ವಿಯಾಗಿದ್ದು, ಅವರಿಗೆ ವಿಶ್ರಾಂತಿಯ ಅಗತ್ಯ ಇರುವುದಾಗಿ ವೈದ್ಯರು ಸಲಹೆ ನೀಡಿದ್ದಾರೆ.

    ಇದೇ ವೇಳೆ ವಾಷಿಂಗ್ಟನ್ ಸುಂದರ್ ಬಲ ಮೊಣಕಾಲಿಗೆ ಗಾಯವಾಗಿ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಗೆ ಅಲಭ್ಯರಾಗಿದ್ದರು. ಇನ್ನು ಟೀಂ ಇಂಡಿಯಾ 70 ದಿನಗಳ ಪ್ರವಾಸವನ್ನು ಕೈಗೊಂಡಿದ್ದು, ಈ ಅವಧಿಯಲ್ಲಿ ಟಿ20, ಏಕದಿನ ಹಾಗೂ ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಜುಲೈ 12 ರಂದು ಏಕದಿನ ಪಂದ್ಯ ಆರಂಭವಾಗಲಿದೆ. ಉಳಿದಂತೆ ಟಿ20, ಏಕದಿನ ಟೂರ್ನಿ ಬಳಿಕ ಆಗಸ್ಟ್ 1 ರಿಂದ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ.

    ಜೂನ್ 24 ರಂದು ಐಸಿಸಿ ಬಿಡುಗಡೆ ಮಾಡಿದ್ದ ಏಕದಿನ ಬೌಲರ್ ಶ್ರೇಯಾಂಕ ಪಟ್ಟಿಯಲ್ಲಿ ಬುಮ್ರಾ ಮೊದಲ ಸ್ಥಾನ ಪಡೆದಿದ್ದು, ಯಜುವೇಂದ್ರ ಚಹಲ್ 8ನೇ ಸ್ಥಾನ ಪಡೆದಿದ್ದಾರೆ.

  • ಕೆಎಲ್ ರಾಹುಲ್ ಟೀಂ ಇಂಡಿಯಾ ಕ್ರಿಕೆಟ್‍ನ ಮುಂದಿನ ದೊಡ್ಡ ಸ್ಟಾರ್ – ಸುನಿಲ್ ಗವಾಸ್ಕರ್

    ಕೆಎಲ್ ರಾಹುಲ್ ಟೀಂ ಇಂಡಿಯಾ ಕ್ರಿಕೆಟ್‍ನ ಮುಂದಿನ ದೊಡ್ಡ ಸ್ಟಾರ್ – ಸುನಿಲ್ ಗವಾಸ್ಕರ್

    ನವದೆಹಲಿ: ಟೀಂ ಇಂಡಿಯಾ ಪರ ಯುವ ಆಟಗಾರ ಕೆಎಲ್ ರಾಹುಲ್ ಉತ್ತಮ ಪ್ರದರ್ಶನ ನೀಡುತ್ತಿದ್ದು, ಭವಿಷ್ಯದ ಕ್ರಿಕೆಟ್ ನಲ್ಲಿ ಮುಂದಿನ ಸ್ಟಾರ್ ಆಟಗಾರ ಆಗಲಿದ್ದಾರೆ ಎಂದು ಮಾಜಿ ಆಟಗಾರ ಸುನಿಲ್ ಗವಾಸ್ಕರ್ ಅಭಿಪ್ರಾಯ ಪಟ್ಟಿದ್ದಾರೆ.

    ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ವೃತ್ತಿ ಜೀವನದ ಎರಡನೇ ಶತಕಗಳಿಸಿದ ರಾಹುಲ್ ಟೀಂ ಇಂಡಿಯಾ ಗೆಲುವಿಗೆ ಕಾರಣರಾಗಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟೂರ್ನಿಯಿಂದಲೂ ಕೆಎಲ್ ರಾಹುಲ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಪಂದ್ಯದ ವೇಳೆ ಎದುರಾಳಿ ತಂಡ ಸಮರ್ಥ ಬೌಲಿಂಗ್ ದಾಳಿಯ ನಡುವೆಯೂ ನಾಯಕ ಆಟಗಾರರ ಬ್ಯಾಟಿಂಗ್ ಗೆ ಮೆಚ್ಚುಗೆ ಸೂಚಿಸಿದ್ದರು ಎಂದು ತಿಳಿಸಿದ್ದಾರೆ.

    ಕುಲ್‍ದೀಪ್ ಯಾದವ್ ಸಹ ತಮ್ಮ ಬೌಲಿಂಗ್ ನಲ್ಲಿ ಮ್ಯಾಜಿಕ್ ಮಾಡಿದ್ದು, ಇಂಗ್ಲೆಂಡ್ ತಂಡದ ಆಟಗಾರರು ಕುಲ್‍ದೀಪ್ ಯಾದವ್ ಬೌಲಿಂಗ್ ದಾಳಿಯನ್ನು ಎದುರಿಸಲು ವಿಫಲರಾಗಿದ್ದರು. ಮುಖ್ಯವಾಗಿ ಇಂಗ್ಲೆಂಡ್ ತಂಡದ ಆಟಗಾರರದ ಜೋ ರೂಟ್, ಬೆನ್‍ಸ್ಟೋರಂತಹ ಸ್ಫೋಟಕ ಆಟಗಾರನನ್ನು ಸಹ ಕಟ್ಟಿಹಾಕಲು ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ.

    ಟೀಂ ಇಂಡಿಯಾ ತಂಡವನ್ನು ರೈಡ್ ಮಾಡಲು ಸಿದ್ಧವಿರುವ ಕಾರಿಗೆ ಹೋಲಿಕೆ ಮಾಡಿರುವ ಅವರು ಚಾಲಕ ವಿರಾಟ್ ಕೊಹ್ಲಿ ತಂಡವನ್ನು ಸಮರ್ಥವಾಗಿ ಮುನ್ನಡೆಸಿದ್ದು, ತಂಡದ ಗೆಲುವು ಪಡೆಯಲು ಪ್ರಮುಖ ಕಾರಣ. ಸದ್ಯ ಟೀಂ ಇಂಡಿಯಾ ಉತ್ತಮ ತಂಡವನ್ನು ಹೊಂದಿದೆ ಎಂದಿದ್ದಾರೆ.

    ಸದ್ಯ ಟೀಂ ಇಂಡಿಯಾ ಆಟಗಾರರು ಟಿ20 ಸರಣಿ ಗೆಲುವಿನ ನಿರೀಕ್ಷೆಯಲ್ಲಿದ್ದು, ಮೊದಲ ಪಂದ್ಯ ಸೋತಿರುವ ಇಂಗ್ಲೆಂಡ್ ಇಂದು ರಾತ್ರಿ ನಡೆಯಲಿರುವ ಪಂದ್ಯದಲ್ಲಿ ಗೆಲುವು ದಾಖಲಿಸಬೇಕಾದ ಒತ್ತಡದಲ್ಲಿದೆ.

  • ಧೋನಿ ಫೋಟೋ ಶೇರ್ ಮಾಡಿ ರೋಮಾಂಚನಕಾರಿ ಅನುಭವ ಹಂಚಿಕೊಂಡ ವಿರಾಟ್ ಕೊಹ್ಲಿ

    ಧೋನಿ ಫೋಟೋ ಶೇರ್ ಮಾಡಿ ರೋಮಾಂಚನಕಾರಿ ಅನುಭವ ಹಂಚಿಕೊಂಡ ವಿರಾಟ್ ಕೊಹ್ಲಿ

    ಲಂಡನ್: ಮ್ಯಾಂಚೆಸ್ಟರ್ ಓಲ್ಡ್ ಟ್ರಾಫರ್ ಅಂಗಳದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧ ಟಿ20 ಪಂದ್ಯದಲ್ಲಿ ಗೆಲುವು ಪಡೆದು ಬೀಗುತ್ತಿರುವ ಟೀಂ ಇಂಡಿಯಾ, ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿ ಕೈ ವಶ ಪಡಿಸಿಕೊಳ್ಳುವ ವಿಶ್ವಾಸದಲ್ಲಿದೆ.

    ಇದೇ ವೇಳೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಧೋನಿ ಸೇರಿದಂತೆ ತಂಡದ ಆಟಗಾರರಿರುವ ಫೋಟೋ ಶೇರ್ ಮಾಡಿ ತಮ್ಮ ರೋಮಾಂಚನಕಾರಿ ಅನುಭವವನ್ನು ಹಂಚಿಕೊಂಡಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಕೊಹ್ಲಿ, ತಂಡದ ಇತರೇ ಸದಸ್ಯರೊಂದಿಗೆ ದೇಶವನ್ನು ಪ್ರತಿನಿಧಿಸಲು ನಡೆಯುವುದು ಹೆಮ್ಮೆ ಎನಿಸುತ್ತದೆ. ಈ ವೇಳೆ ಅಭಿಮಾನಿಗಳ ಬೆಂಬಲ ರೋಮಾಂಚನಕಾರಿಯಾಗಿರುತ್ತದೆ. ಅದನ್ನು ಪದಗಳಲ್ಲಿ ವಿವರಿಸುವುದು ಕಷ್ಟಸಾಧ್ಯ ಎಂದು ಟ್ವೀಟ್ ಮಾಡಿದ್ದಾರೆ.

    ಸದ್ಯ ಟೀಂ ಇಂಡಿಯಾ ಸತತ 6 ನೇ ಟಿ20 ಸರಣಿಯ ಗೆಲುವಿನ ವಿಶ್ವಾಸದಲ್ಲಿದ್ದು, ಕಳೆದ ಸೆಪ್ಟೆಂಬರ್ ತಿಂಗಳಿಂದ ಆಡಿರುವ ಎಲ್ಲಾ ಸರಣಿಗಳನ್ನು ಗೆದ್ದು ಬೀಗಿದೆ. ಅಂದರೆ ನ್ಯೂಜಿಲೆಂಡ್ ವಿರುದ್ಧ ಸರಣಿಯನ್ನು 2-1 ಬಳಿಕ ನಡೆದ ಶ್ರೀಲಂಕಾ ವಿರುದ್ಧ ಸರಣಿ(3-0), ದಕ್ಷಿಣ ಆಫ್ರಿಕಾ (2-1), ನಿದಾಸ್ ತ್ರಿಕೋನಸರಣಿ ಮತ್ತು ಐರ್ಲೆಂಡ್ ವಿರುದ್ಧದ ಸರಣಿಯನ್ನು (2-0) ಯಿಂದ ಗೆದ್ದುಕೊಂಡಿತ್ತು.

    ಸದ್ಯ ಇಂಗ್ಲೆಂಡ್ ವಿರುದ್ಧದ ಸರಣಿ ಗೆಲುವು ಸಾಧಿಸಿದರೆ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾದೊಂದಿಗೆ 2ನೇ ಸ್ಥಾನ ಹಂಚಿಕೊಳ್ಳಲಿದೆ. ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಸರಣಿಯಲ್ಲಿ ಆಸೀಸ್ 3-0 ಅಂತರದಿಂದ ಸೋಲುಂಡರೆ ಟೀಂ ಇಂಡಿಯಾ ಶ್ರೇಯಾಂಕ ಪಟ್ಟಿಯಲ್ಲಿ 3ನೇ ಸ್ಥಾನದಿಂದ 2ನೇ ಸ್ಥಾನಕ್ಕೆ ಏರಲಿದೆ. ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಸದ್ಯ ಪಾಕ್ ಮೊದಲ ಸ್ಥಾನ ಪಡೆದಿದೆ.

  • ಇಂಗ್ಲೆಂಡ್ ವಿರುದ್ಧದ ಟಿ20 ಟೂರ್ನಿಗೆ ದೀಪಕ್ ಚಾಹರ್, ಕೃನಾಲ್ ಪಾಂಡ್ಯಗೆ ಬುಲಾವ್

    ಇಂಗ್ಲೆಂಡ್ ವಿರುದ್ಧದ ಟಿ20 ಟೂರ್ನಿಗೆ ದೀಪಕ್ ಚಾಹರ್, ಕೃನಾಲ್ ಪಾಂಡ್ಯಗೆ ಬುಲಾವ್

    ಮುಂಬೈ: ಬಹು ನಿರೀಕ್ಷಿತ ಇಂಗ್ಲೆಂಡ್ ವಿರುದ್ಧ ಕ್ರಿಕೆಟ್ ಟೂರ್ನಿಯಲ್ಲಿ ಗಾಯಗೊಂಡು ಅಲಭ್ಯರಾದ ವೇಗಿ ಜಸ್‍ಪ್ರೀತ್ ಬುಮ್ರಾ ಹಾಗೂ ವಾಷಿಂಗ್ಟನ್ ಸುಂದರ್ ಸ್ಥಾನಕ್ಕೆ ಬಿಸಿಸಿಐ ಬದಲಿ ಆಟಗಾರನ್ನು ಆಯ್ಕೆ ಮಾಡಿದೆ.

    ವೇಗಿ ಬುಮ್ರಾ ಅವರ ಸ್ಥಾನದಲ್ಲಿ ಟಿ20 ಸರಣಿಗೆ ದೀಪಕ್ ಚಾಹರ್ ಸ್ಥಾನ ಪಡೆದಿದ್ದು, ಇದೇ ವೇಳೆ ವಾಷಿಂಗ್ಟನ್ ಸುಂದರ್ ಸ್ಥಾನದಲ್ಲಿ ಟಿ20 ಪಂದ್ಯಗಳಿಗೆ ಕೃನಾಲ್ ಪಾಂಡ್ಯ, ಏಕದಿನ ಪಂದ್ಯಗಳಿಗೆ ಅಕ್ಷರ್ ಪಟೇಲ್ ಸ್ಥಾನ ಪಡೆದಿದ್ದಾರೆ.

    ಐರ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯ ಫೀಲ್ಡಿಂಗ್ ವೇಳೆ ಬುಮ್ರಾ ಬಲಗೈ ಹೆಬ್ಬೆರಳಿಗೆ ಗಾಯವಾಗಿತ್ತು. ಇದರಿಂದ ಅವರು ಇಂಗ್ಲೆಂಡ್ ಟೂರ್ನಿಯ ಮೂರು ಪಂದ್ಯಗಳ ಟಿ20 ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇನ್ನು ಸುಂದರ್ ಬಲ ಮೊಣಕಾಲಿಗೆ ಗಾಯವಾಗಿದ್ದು, ಐರ್ಲೆಂಡ್ ವಿರುದ್ಧದ 2ನೇ ಪಂದ್ಯಕ್ಕೂ ಮುನ್ನ ನಡೆದ ತರಬೇತಿ ಫುಟ್ಬಾಲ್ ಪಂದ್ಯದ ವೇಳೆ ಗಾಯಗೊಂಡಿದ್ದರು.

    ಸದ್ಯ ಬುಮ್ರಾ ಐಸಿಸಿ ಬೌಲರ್ ಶ್ರೇಯಾಂಕ ಪಟ್ಟಿಯಲ್ಲಿ 10ನೇ ಸ್ಥಾನ ಪಡೆದಿದ್ದು, ಟೀಂ ಇಂಡಿಯಾ ಪರ ಯಜುವೇಂದ್ರ ಚಹಲ್, ಬುಮ್ರಾ ಮಾತ್ರ ಮೊದಲ 10 ಬೌಲರ್ ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಇನ್ನು ಜುಲೈ 3 ರಂದು ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯ ನಡೆಯಲಿದ್ದು, ಜುಲೈ 12 ರಂದು ಏಕದಿನ ಪಂದ್ಯ ನಡೆಯಲಿದೆ. ಉಳಿದಂತೆ ಟಿ20, ಏಕದಿನ ಟೂರ್ನಿ ಬಳಿಕ ಆಗಸ್ಟ್ 1 ರಿಂದ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ.

  • ಇಂಗ್ಲೆಂಡ್ ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಡಬಲ್ ಆಘಾತ!

    ಇಂಗ್ಲೆಂಡ್ ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಡಬಲ್ ಆಘಾತ!

    ಲಂಡನ್: ಇಂಗ್ಲೆಂಡ್ ವಿರುದ್ಧ ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಭಾರೀ ಆಘಾತ ಎದುರಾಗಿದ್ದು, ತಂಡದ ಪ್ರಮುಖ ಬೌಲರ್ ಜಸ್‍ಪ್ರೀತ್ ಬುಮ್ರಾ ಹಾಗೂ ಯುವ ಆಟಗಾರ ವಾಷಿಂಗ್ಟನ್ ಸುಂದರ್ ಟಿ20 ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.

    ಐರ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯ ಫೀಲ್ಡಿಂಗ್ ವೇಳೆ ಬುಮ್ರಾ ಬಲಗೈ ಹೆಬ್ಬೆರಳಿಗೆ ಗಾಯವಾಗಿದೆ. ಇದರಿಂದ ಅವರು ಇಂಗ್ಲೆಂಡ್ ಟೂರ್ನಿಯ ಮೂರು ಪಂದ್ಯಗಳ ಟಿ20 ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಟೀಂ ಇಂಡಿಯಾ ಪಾಲಿಗೆ ಪ್ರಮುಖ ಡೆತ್ ಬೌಲರ್ ಆಗಿದ್ದ ಬುಮ್ರಾ ಗಾಯದ ಸಮಸ್ಯೆಯಿಂದ ಗುರುವಾರ ತರಬೇತಿಗೆ ಹಾಜರಾಗಿರಲಿಲ್ಲ, ಅಲ್ಲದೇ ಐರ್ಲೆಂಡ್ ವಿರುದ್ಧ 2ನೇ ಟಿ20 ಪಂದ್ಯದಲ್ಲಿಯೂ ಕಣಕ್ಕೆ ಇಳಿದಿರಲಿಲ್ಲ.

     

    ಸದ್ಯ ಬುಮ್ರಾ ಐಸಿಸಿ ಬೌಲರ್ ಶ್ರೇಯಾಂಕ ಪಟ್ಟಿಯಲ್ಲಿ 10ನೇ ಸ್ಥಾನ ಪಡೆದಿದ್ದು, ಟೀಂ ಇಂಡಿಯಾ ಪರ ಯಜುವೇಂದ್ರ ಚಹಲ್, ಬುಮ್ರಾ ಮಾತ್ರ ಮೊದಲ 10 ಬೌಲರ್ ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಆದರೆ ಸದ್ಯ ಗಾಯದ ಸಮಸ್ಯೆಯಿಂದ ಜುಲೈ 12 ರಂದು ಆರಂಭವಾಗುವ ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯಗಳಿಗೂ ಮುನ್ನ ಗುಣಮುಖರಾಗುವ ಸಾಧ್ಯತೆ ಇದೆ. ಉಳಿದಂತೆ ಟಿ20, ಏಕದಿನ ಟೂರ್ನಿ ಬಳಿಕ ಆಗಸ್ಟ್ 1 ರಿಂದ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ.

    ಇನ್ನು ಸುಂದರ್ ಬಲ ಮೊಣಕಾಲಿಗೆ ಗಾಯವಾಗಿದ್ದು, ಐರ್ಲೆಂಡ್ ವಿರುದ್ಧದ 2ನೇ ಪಂದ್ಯಕ್ಕೂ ಮುನ್ನ ನಡೆದ ತರಬೇತಿ ಫುಟ್ಬಾಲ್ ಪಂದ್ಯದ ವೇಳೆ ಗಾಯಗೊಂಡಿದ್ದಾರೆ. ಸದ್ಯ ಇಬ್ಬರ ಆಟಗಾರರ ಸ್ಥಾನದಲ್ಲಿ ಶರ್ದುಲ್ ಠಾಕೂರ್ ಹಾಗೂ ದೀಪಕ್ ಠಾಕೂರ್ ಅವರ ಹೆಸರನ್ನು ಬಿಸಿಸಿಐ ಸೂಚಿಸುವ ಸಾಧ್ಯತೆ ಇದೆ.

  • ಇಂಗ್ಲೆಂಡ್ ಕ್ಲಬ್ ಕ್ರಿಕೆಟ್ – 11 ಎಸೆತಗಳಲ್ಲಿ 1 ರನ್ ಗೆ 7 ವಿಕೆಟ್ ಪತನ

    ಇಂಗ್ಲೆಂಡ್ ಕ್ಲಬ್ ಕ್ರಿಕೆಟ್ – 11 ಎಸೆತಗಳಲ್ಲಿ 1 ರನ್ ಗೆ 7 ವಿಕೆಟ್ ಪತನ

    ಲಂಡನ್ : ಕಳೆದ ಒಂದು ವಾರದ ಹಿಂದೆ 481 ರನ್ ಸಿಡಿಸಿ ಇತಿಹಾಸ ಸೃಷ್ಟಿಸಿದ್ದ ಇಂಗ್ಲೆಂಡ್ ಕ್ರಿಕೆಟ್ ತಂಡದ ಬೆನ್ನಲ್ಲೇ ಇಂಗ್ಲೆಂಡ್ ಕ್ಲಬ್ ಕ್ರಿಕೆಟ್ ಪಂದ್ಯದಲ್ಲಿ ಮತ್ತೊಂದು ಐತಿಹಾಸಿಕ ಇನ್ನಿಂಗ್ಸ್ ದಾಖಲಾಗಿದೆ.

    ಇಂಗ್ಲೆಂಡ್ ನ ಇಸಿಬಿ ನ್ಯಾಷನಲ್ ಕ್ಲಬ್ ಚಾಂಪಿಯನ್ ಶಿಪ್ ಟೂರ್ನಿಯಲ್ಲಿ ಸ್ಥಳೀಯ ತಂಡಗಳಾದ ಪೀಟರ್ ಬರೋಗ್ ಹಾಗೂ ಹೈ ವೈಕೊಂಬ್ ಸಿಟಿ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ದಾಖಲೆ ನಿರ್ಮಾಣವಾಗಿದೆ. 12 ಎಸೆತಗಳಲ್ಲಿ ಕೇವಲ 3 ರನ್ ಗಳಿಸುವ ಗುರಿಯಯನ್ನು ಹೊಂದಿದ್ದ ಹೈ ವೈಕೊಂಬ್ ಸಿಟಿ ತಂಡಗಳ ಕೇವಲ 1 ರನ್ ಗೆ 7 ರನ್ ಗೆ ಏಳು ವಿಕೆಟ್ ಕಳೆದುಕೊಂಡು ಸೋಲುಂಡಿದೆ.

    ಮೊದಲು ಬ್ಯಾಟಿಂಗ್ ನಡೆಸಿದ ಪೀಟರ್ ಬರೋಗ್ ತಂಡ ಎದುರಾಳಿ ತಂಡಕ್ಕೆ 189 ರನ್ ಗುರಿ ನೀಡಿತ್ತು. ಈ ಮೊತ್ತವನ್ನು ಬೆನ್ನತ್ತಿದ್ದ ಹೈ ವೈಕೂಂಬ್ ತಂಡ 186 ರನ್ ಗಳಿಸಿ 3 ವಿಕೆಟ್ ಕಳೆದುಕೊಂಡು ಗೆಲುವಿನ ನಿರೀಕ್ಷೆಯಲ್ಲಿತ್ತು. ಆದರೆ ಈ ವೇಳೆ ಉತ್ತಮ ಬೌಲಿಂಗ್ ದಾಳಿ ನಡೆಸಿದ ಪೀಟರ್ ಬರೋಗ್ ತಂಡದ ಬೌಲರ್ ಕೀರಾನ್ ಜೋನ್ಸ್ 38 ಓವರ್ ನ ಮೊದಲ ಎಸೆತದಲ್ಲಿ 1 ರನ್ ನೀಡಿ, ಬಳಿಕ 4 ಎಸೆತಗಳಲ್ಲಿ 4 ವಿಕೆಟ್ ಪಡೆದು ತಂಡದಲ್ಲಿ ಮಿಂಚಿದ್ದರು. ಬಳಿಕ 39 ಓವರ್ ಬೌಲ್ ಮಾಡಿದ ಸ್ಪೀನ್ ಬೌಲರ್ 16 ವರ್ಷದ ದನ್ಯಾಯಾಲ್ ಮಲಿಕ್ 1 ರನ್ ಮಾತ್ರ ನೀಡಿ 3 ವಿಕೆಟ್ ಪಡೆದು ತಂಡದ ಗೆಲುವಿಗೆ ಕಾರಣರಾದರು ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

    ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವ ಗೆಲುವು ಪಡೆದ ಪೀಟರ್ ಬರೋಗ್ ತಂಡ ಇಸಿಬಿ ಕ್ಲಬ್ ಚಾಂಪಿಯನ್ ಪಟ್ಟವನ್ನು ಪಡೆದಿದೆ. ಪಂದ್ಯದ ಕೊನೆಯ ಓವರ್ ಬೌಲ್ ಮಾಡಿದ್ದ ಇಸಿಬಿ ಕ್ಲಬ್ ಚಾಂಪಿಯನ್ ಟೂರ್ನಿಯಲ್ಲಿ ಒಟ್ಟು 13 ತಂಡಗಳು ಭಾಗವಹಿಸಿದ್ದವು.

  • ಇಂಗ್ಲೆಂಡ್ ಏಕದಿನ ಸರಣಿಗೆ ಸ್ಥಾನ ಪಡೆದ ಸುರೇಶ್ ರೈನಾ

    ಇಂಗ್ಲೆಂಡ್ ಏಕದಿನ ಸರಣಿಗೆ ಸ್ಥಾನ ಪಡೆದ ಸುರೇಶ್ ರೈನಾ

    ಮುಂಬೈ: ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯದ ಟೂರ್ನಿಗೆ ಅಂಬಟಿ ರಾಯುಡು ಸ್ಥಾನದಲ್ಲಿ ಸುರೇಶ್ ರೈನಾ ಅವರನ್ನು ಬಿಸಿಸಿಐ ಆಯ್ಕೆ ಮಾಡಿದೆ.

    ಬೆಂಗಳೂರಿನಲ್ಲಿ ನಡೆದ ಫಿಟ್ನೆಸ್ ಪರೀಕ್ಷೆಯಲ್ಲಿ ಅಂಬಟಿ ರಾಯುಡು ಫೇಲ್ ಆಗಿ ಟೂರ್ನಿಯಿಂದ ಹೊರಬಿದ್ದಿದ್ದರು. ಸದ್ಯ ರಾಯುಡು ಸ್ಥಾನಕ್ಕೆ ರೈನಾ ಕಮ್ ಬ್ಯಾಕ್ ಮಾಡಿದ್ದಾರೆ.

    32 ವರ್ಷದ ಅಂಬಟಿ ರಾಯುಡು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಭರ್ಜರಿ ಪ್ರದರ್ಶನ ನೀಡಿದ್ದರು. ಅಲ್ಲದೇ ಬಿಸಿಸಿಐ ಆಯ್ಕೆ ಸಮಿತಿ ರಾಯುಡುರನ್ನು ಇಂಗ್ಲೆಂಡ್ ವಿರುದ್ಧ ಸರಣಿಗೆ ಆಯ್ಕೆ ಮಾಡಿತ್ತು. ಆದರೆ ಶುಕ್ರವಾರ ನಡೆದ ಫಿಟ್ನೆಸ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದರು. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ 43ರ ಸರಾಸರಿಯಲ್ಲಿ 602 ರನ್ ಗಳಿಸಿದ್ದ ರಾಯುಡು ಉತ್ತಮ ಫಾರ್ಮ್ ಹೊಂದಿದ್ದರು.

    ಕಳೆದ ಬಾರಿ ಫಿಟ್ನೆಸ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದ ರೈನಾ ಈ ಬಾರಿ ಫಿಟ್ನೆಸ್ ಪರೀಕ್ಷೆ ಪಾಸ್ ಮಾಡಿ ಮತ್ತೆ ಟೀಂ ಇಂಡಿಯಾ ಕಮ್ ಮಾಡಲು ಯಶಸ್ವಿ ಆಗಿದ್ದಾರೆ. 2015 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೊನೆಯ ಏಕದಿನ ಪಂದ್ಯವಾಡಿದ್ದ ರೈನಾ ಬಳಿಕ ತಂಡದಲ್ಲಿ ಸ್ಥಾನಗಳಿಸಲು ವಿಫಲರಾಗಿದ್ದರು. ಆದರೆ ಟಿ20 ಮಾದರಿಯಲ್ಲಿ ತಂಡವನ್ನು ಪ್ರತಿನಿಧಿಸಿದ್ದರು. ಇಂಗ್ಲೆಂಡ್ ವಿರುದ್ಧ ಟಿ20 ಏಕದಿನ ಸರಣಿ ಜುಲೈ 12 ರಂದು ಆರಂಭವಾಗಲಿದ್ದು, ಒಟ್ಟು ಮೂರು ಪಂದ್ಯಗಳ ಸರಣಿ ಜುಲೈ 17 ರಂದು ಮುಕ್ತಾಯಗೊಳ್ಳಲಿದೆ.

    ಟೀಂ ಇಂಡಿಯಾ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಸುರೇಶ್ ರೈನಾ, ಎಂಎಸ್ ಧೋನಿ (ಕೀಪರ್), ದಿನೇಶ್ ಕಾರ್ತಿಕ್, ಯಜುವೇಂದ್ರ ಚಹಲ್, ಕುಲ್ ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಜಸ್‍ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸಿದ್ದಾರ್ಥ್ ಕೌಲ್, ಉಮೇಶ್ ಯಾದವ್.

  • ಬೆಂಗಳೂರು ಟೆಸ್ಟ್ ನಿಂದ ಹೊರಬಿದ್ದ ವೇಗಿ ಮೊಹಮ್ಮದ್ ಶಮಿ: ಏನಿದು ಯೋ- ಯೋ ಫಿಟ್‍ನೆಸ್ ಟೆಸ್ಟ್?

    ಬೆಂಗಳೂರು ಟೆಸ್ಟ್ ನಿಂದ ಹೊರಬಿದ್ದ ವೇಗಿ ಮೊಹಮ್ಮದ್ ಶಮಿ: ಏನಿದು ಯೋ- ಯೋ ಫಿಟ್‍ನೆಸ್ ಟೆಸ್ಟ್?

    ಬೆಂಗಳೂರು: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅಫ್ಘಾನ್ ವಿರುದ್ಧ ಐತಿಹಾಸಿಕ ಟೆಸ್ಟ್ ಪಂದ್ಯದಿಂದ ಕೈಬಿಡಲಾಗಿದ್ದು, ಬೆಂಗಳೂರಿನಲ್ಲಿ ನಡೆದ ಯೋ ಯೋ ಫಿಟ್‍ನೆಸ್ ಪರೀಕ್ಷೆಯಲ್ಲಿ ವಿಫಲರಾಗಿದ್ದರಿಂದ ಶಮಿ ತಂಡದಲ್ಲಿ ಅವಕಾಶ ಕಳೆದುಕೊಂಡಿದ್ದಾರೆ ಎಂದು ಆಯ್ಕೆ ಸಮಿತಿ ಮಾಹಿತಿ ನೀಡಿದೆ.

    ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಆಯ್ಕೆ ಸಮಿತಿ, ವೇಗಿ ಮೊಹಮ್ಮದ್ ಶಮಿ ಬದಲಾಗಿ ಯುವ ವೇಗಿ ನವದೀಪ್ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದಾಗಿ ತಿಳಿಸಿದೆ.

    ಮೊಹಮ್ಮದ್ ಶಮಿರನ್ನು ತಂಡದಿಂದ ಕೈಬಿಡುತ್ತಿದಂತೆ ಟೀಂ ಇಂಡಿಯಾ `ಎ’ ತಂಡದ ವೇಗಿಗಳಾದ ಮೊಹಮ್ಮದ್ ಸಿರಾಜ್ ಹಾಗೂ ರಜನೀಸ್ ಗುರ್ಬಾನಿ ಅವರನ್ನು ಸಹ ತರಬೇತಿಗೆ ಹಾಜರಾಗುವಂತೆ ಆಯ್ಕೆ ಸಮಿತಿ ಸೂಚಿಸಿದೆ.

    ಸದ್ಯ ಆಯ್ಕೆ ಸಮಿತಿಯ ಆಹ್ವಾನದ ಮೇರೆಗೆ ಮೊಹಮ್ಮದ್ ಸಿರಾಜ್ ಹಾಗೂ ರಜನೀಸ್ ಗುರ್ಬಾನಿ ಅವರು ತರಬೇತಿಗೆ ಹಾಜರಾಗಿದ್ದು, ಇದೇ ವೇಳೆ ಉತ್ತರ ಪ್ರದೇಶದ ವೇಗಿ ಅಂಕಿತ್ ರಜಪೂತ್ ಅವರಿಗೆ ಆಹ್ವಾನ ನೀಡಿದ್ದರು ಆರೋಗ್ಯ ಸಮಸ್ಯೆಯಿಂದ ಅಭ್ಯಾಸದಲ್ಲಿ ತೊಡಗಿಕೊಂಡಿಲ್ಲ. ಉಳಿದಂತೆ ಟೀಂ ಇಂಡಿಯಾ ಹಾಗೂ ಅಫ್ಘಾನಿಸ್ತಾನದ ವಿರುದ್ಧ ಏಕೈಕ ಟೆಸ್ಟ್ ಪಂದ್ಯ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 14 ರಿಂದ ಆರಂಭವಾಗಲಿದೆ.

    ಇದೇ ವೇಳೆ ಆಯ್ಕೆ ಸಮಿತಿ ಭಾರತದ `ಎ’ ತಂಡದ ಬ್ಯಾಟ್ಸ್‍ಮನ್ ಇಶಾನ ಕಿಶಾನ್ ರನ್ನು ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡಿಸ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಿದೆ. ಅಂದಹಾಗೇ ಈ ಸರಣಿಗೆ ತಮಿಳುನಾಡು ಯುವ ಬ್ಯಾಟ್ಸ್‍ಮನ್ ಸಂಜು ಸ್ಯಾಮ್ಸನ್ ರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಸ್ಯಾಮ್ಸನ್ ಕೂಡ ಯೋ ಯೋ ಫಿಟ್ ನೆಸ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಸರಣಿಯಿಂದ ಹೊರ ಉಳಿದಿದ್ದಾರೆ.

    ಏನಿದು ಯೋ ಯೋ ಫಿಟ್‍ನೆಸ್ ಟೆಸ್ಟ್:
    ಕ್ರಮಬದ್ಧ ಹಾಗೂ ವೇಗವಾಗಿ ಓಡುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯ ವನ್ನು ಈ ಪರೀಕ್ಷೆಯಲ್ಲಿ ಆಟಗಾರ ತೋರಿಸಬೇಕಾಗುತ್ತದೆ. ಯೊಯೊ ಫಿಟ್‍ನೆಸ್ 20 ಮೀ ಅಳತೆಯಲ್ಲಿ ಎರಡು ಕೋನ್ ಗಳನ್ನು ನೇರವಾಗಿ ಇರಿಸಲಾಗಿರುತ್ತದೆ. ಆಟಗಾರ ಒಂದು ಲೈನ್ ನಿಂದ ಓಟವನ್ನು ಆರಂಭಿಸಬೇಕು. ಎರಡೂ ಲೈನ್ ನಲ್ಲಿಟ್ಟ ಕೋನ್ ಗಳನ್ನು ಬೀಪ್ ಧ್ವನಿ ಅನುಸರಿಸಿ ಸುತ್ತಬೇಕು. ಒಟ್ಟಾರೆ ಮೂರು ಬೀಪ್ ಧ್ವನಿ ಒಳಗಾಗಿ ಸುತ್ತಬೇಕು. ಈ ಬೀಪ್ ಸ್ಟಾರ್ಟ್, ಟರ್ನ್ ಹಾಗೂ ಫಿನಿಶ್ ಸೂಚನೆಯಾಗಿರುತ್ತದೆ. ಪ್ರತೀ ಬಾರಿ ಸುತ್ತಿದಾಗಲೂ ಬೀಪ್ ಧ್ವನಿಯ ಅಂತರ ಕಡಿಮೆಯಾಗುತ್ತ ಹೋಗುತ್ತದೆ. 2 ಬಾರಿ ಬೀಪ್ ಸಮಯದೊಳಗೆ 40 ಮೀ ಕ್ರಮಿಸಲಾಗದೇ ಹೋದರೆ ಪರೀಕ್ಷೆ ಮುಕ್ತಾಯಗೊಳ್ಳುತ್ತದೆ. ಲ್ಯಾಪ್ಸ್ ಹಾಗೂ ಓಟದ ವೇಗ ಆಧರಿಸಿ ಅಂಕ ನೀಡಿ ಆಯ್ಕೆ ಮಾಲಾಗುತ್ತದೆ.

    https://www.youtube.com/watch?v=qEgHX_W0qsc