Tag: england

  • 76 ರನ್‍ಗಳಿಸಿ ರನೌಟ್ ಆದ್ರೂ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ!

    76 ರನ್‍ಗಳಿಸಿ ರನೌಟ್ ಆದ್ರೂ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ!

    ಓವಲ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ ಟೀಂ ಇಂಡಿಯಾ ಸೋತಿದ್ದರೂ ಭಾರತದ ಪರ ಭರ್ಜರಿಯಾಗಿ ಆಡಿದ್ದ ಹಾರ್ದಿಕ್ ಪಾಂಡ್ಯ ಹೊಸ ದಾಖಲೆ ಬರೆದಿದ್ದಾರೆ.

    ಐಸಿಸಿ ಆಯೋಜಿಸಿದ್ದ ಟೂರ್ನಿಯ ಫೈನಲ್ ನಲ್ಲಿ ಅತಿ ಕಡಿಮೆ ಎಸೆತದಲ್ಲಿ ಅರ್ಧಶತಕಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾಂಡ್ಯ ಪಾತ್ರರಾಗಿದ್ದಾರೆ.

    32 ಎಸೆತಗಳಲ್ಲಿ ಅರ್ಧಶತಕ ಗಳಿಸಿ ಆಸ್ಟ್ರೇಲಿಯಾ ವಿಕೆಟ್ ಕೀಪರ್ ಆಡಂ ಗಿಲ್‍ ಕ್ರಿಸ್ಟ್ ದಾಖಲೆಯನ್ನು ಪಾಂಡ್ಯ ಮುರಿದಿದ್ದಾರೆ. 1999ರಲ್ಲಿ ಪಾಕ್ ವಿರುದ್ಧದ ಇಂಗ್ಲೆಂಡಿನ ಲಾರ್ಡ್ಸ್  ನಲ್ಲಿ ನಡೆದ ವಿಶ್ವಕಪ್ ಫೈನಲ್‍ನಲ್ಲಿ ಗಿಲ್‍ ಕ್ರಿಸ್ಟ್ 33 ಎಸೆತದಲ್ಲಿ 50 ರನ್ ಹೊಡೆದ್ದರು.

    ಇಂದಿನ ಪಂದ್ಯದಲ್ಲಿ ಹಫೀಸ್ 34 ಎಸೆತದಲ್ಲಿ ಅರ್ಧಶತಕ ಹೊಡೆಯುವ ಮೂಲಕ ವೇಗದ ಅರ್ಧಶತಕ ಹೊಡೆದವರ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಅಲಂಕರಿಸಿದ್ದಾರೆ.

    ಹಾರ್ದಿಕ್ ಪಾಂಡ್ಯ 76 ರನ್( 43 ಎಸೆತ, 4 ಬೌಂಡರಿ, 6 ಸಿಕ್ಸರ್) ಸಿಡಿಸಿದ್ದಾಗ ರನೌಟ್‍ಗೆ ಬಲಿಯಾದರು.

    ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ನಿಗದಿತ 50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 338 ರನ್ ಗಳಿಸಿದ್ದರೆ ಭಾರತ 30.3 ಓವರ್ ಗಳಲ್ಲಿ 158 ರನ್‍ಗಳಿಗೆ ಆಲೌಟ್ ಆಯ್ತು. 180 ರನ್‍ಗಳಿಂದ ಪಂದ್ಯವನ್ನು ಗೆಲ್ಲುವ ಮೂಲಕ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಮೊದಲ ಬಾರಿಗೆ ಗೆದ್ದುಕೊಂಡ ಸಾಧನೆ ಮಾಡಿತು.

    ಇದನ್ನೂ ಓದಿ:ಪಾಕಿಸ್ತಾನಕ್ಕೆ 14 ಕೋಟಿ ರೂ.: ಭಾರತ ಮತ್ತು ಉಳಿದ ತಂಡಗಳಿಗೆ ಎಷ್ಟು ನಗದು ಬಹುಮಾನ?

     

     

     

  • ಪಾಕಿಸ್ತಾನಕ್ಕೆ 14 ಕೋಟಿ ರೂ.: ಭಾರತ ಮತ್ತು ಉಳಿದ ತಂಡಗಳಿಗೆ ಎಷ್ಟು ನಗದು ಬಹುಮಾನ?

    ಪಾಕಿಸ್ತಾನಕ್ಕೆ 14 ಕೋಟಿ ರೂ.: ಭಾರತ ಮತ್ತು ಉಳಿದ ತಂಡಗಳಿಗೆ ಎಷ್ಟು ನಗದು ಬಹುಮಾನ?

    ದುಬೈ: ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ಪಾಕಿಸ್ತಾನ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ನಗದು ಬಹುಮಾನ ಸಿಕ್ಕಿದೆ.

    ಈ ಟೂರ್ನಿಗೆ ಒಟ್ಟು 4.5 ದಶಲಕ್ಷ ಡಾಲರ್(ಅಂದಾಜು 28 ಕೋಟಿ ರೂ.) ನಗದು ಬಹುಮಾನ ನೀಡುವುದಾಗಿ ಐಸಿಸಿ ತಿಳಿಸಿದ್ದು, ದ್ವಿತೀಯ ಸ್ಥಾನಿ ಭಾರತಕ್ಕೆ 1.1 ದಶಲಕ್ಷ ಡಾಲರ್(ಅಂದಾಜು 7ಕೋಟಿ ರೂ.) ಬಹುಮಾನ ಸಿಕ್ಕಿದೆ.

    ಸೆಮಿಫೈನಲ್‍ನಲ್ಲಿ ಸೋತ ಇಂಗ್ಲೆಂಡ್ ಮತ್ತು ಬಾಂಗ್ಲಾದೇಶಕ್ಕೆ 4.50 ಲಕ್ಷ ಡಾಲರ್(ಅಂದಾಜು 2.8 ಕೋಟಿ ರೂ.) ಸಿಕ್ಕಿದರೆ, ಗುಂಪಿನಲ್ಲಿ ಮೂರನೇ ಸ್ಥಾನವನ್ನು ಪಡೆದ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾಗೆ 90 ಸಾವಿರ ಡಾಲರ್(ಅಂದಾಜು 57 ಲಕ್ಷ ರೂ.), ಗುಂಪಿನಲ್ಲಿ ಕೊನೆಯ ಸ್ಥಾನವನ್ನು ಪಡೆದ ಶ್ರೀಲಂಕಾ ಮತ್ತು ನ್ಯೂಜಿಲೆಂಡ್‍ಗೆ 60 ಸಾವಿರ ಡಾಲರ್( ಅಂದಾಜು 38 ಲಕ್ಷ ರೂ.) ಬಹುಮಾನ ಸಿಕ್ಕಿದೆ.

    2013ರ ಟೂರ್ನಿಗೆ ಹೋಲಿಸಿದರೆ ಈ ಬಾರಿಯ ಐಸಿಸಿ ಬಹುಮಾನದ ಮೊತ್ತವನ್ನು ಹೆಚ್ಚಿಸಿದ್ದು, ಒಟ್ಟು 5 ಲಕ್ಷ ಡಾಲರ್(ಅಂದಾಜು 3 ಕೋಟಿ ರೂ.) ಹೆಚ್ಚಿನ ಅನುದಾನವನ್ನು ನೀಡಿತ್ತು. ಜೂನ್1 ರಿಂz ಆರಂಭಗೊಂಡ ಟೂರ್ನಿ ಜೂನ್ 18ರವರೆಗೆ ಇಂಗ್ಲಡಿನಲ್ಲಿ ನಡೆದಿತ್ತು.

    2013ರಲ್ಲಿ ಇಂಗ್ಲೆಂಡಿನಲ್ಲಿ ನಡೆದ ಚಾಂಪಿಯನ್ಸ್ ಟ್ರೋಪಿ ಪಂದ್ಯಾಟದಲ್ಲಿ ಫೈನಲ್ ನಲ್ಲಿ ಇಂಗ್ಲೆಂಡ್ ತಂಡವನ್ನು 5 ರನ್ ಗಳಿಂದ ಸೋಲಿಸಿ ಭಾರತ ಚಾಂಪಿಯನ್ ಪಟ್ಟವನ್ನು ಆಲಂಕರಿಸಿತ್ತು.

     

  • ಇಂಗ್ಲೆಂಡ್: ಅರಿಯಾನಾ ಗ್ರಾಂಡೇ ಸಂಗೀತ ಕಾರ್ಯಕ್ರಮದಲ್ಲಿ ಬಾಂಬ್ ಸ್ಫೋಟ – 19 ಮಂದಿ ಸಾವು

    ಇಂಗ್ಲೆಂಡ್: ಅರಿಯಾನಾ ಗ್ರಾಂಡೇ ಸಂಗೀತ ಕಾರ್ಯಕ್ರಮದಲ್ಲಿ ಬಾಂಬ್ ಸ್ಫೋಟ – 19 ಮಂದಿ ಸಾವು

    ಲಂಡನ್: ಇಂಗ್ಲೆಂಡ್‍ನ ಮ್ಯಾಂಚೆಸ್ಟರ್ ಅರೇನಾದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಪಾಪ್ ಗಾಯಕಿ ಅರಿಯಾನ ಗ್ರಾಂಡೇ ಸಂಗೀತ ಕಾರ್ಯಕ್ರಮದಲ್ಲಿ ಬಾಂಬ್ ಸ್ಫೋಟಗೊಂಡು ಕನಿಷ್ಠ 19 ಮಂದಿ ಬಲಿಯಾಗಿದ್ದಾರೆ.

    ಘಟನೆಯಲ್ಲಿ 50ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾತ್ರಿ 3 ಗಂಟೆಗೆ ಈ ಘಟನೆ ನಡೆದಿದ್ದು, ಸ್ಫೋಟದ ಸದ್ದಿಗೆ ಕಾರ್ಯಕ್ರಮದಲ್ಲಿ ನೆರೆದಿದ್ದ ಜನ ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಕಾಲ್ತುಳಿತ ಸಂಭವಿಸಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ.

    ಬಾಂಬ್ ಸ್ಫೋಟವಾದ ಸ್ಥಳದಲ್ಲಿ ತುರ್ತು ಸೇವೆ ಒದಗಿಸಲಾಗುತ್ತಿದ್ದು ಹಲವರು ಮೃತಪಟ್ಟಿದ್ದರೆ, ಹಲವರಿಗೆ ಗಾಯಗಳಾಗಿವೆ. ಆ ಸ್ಥಳದಲ್ಲಿ ಶೀಘ್ರ ಕಾರ್ಯಾಚರಣೆ ಕೈಗೊಳ್ಳುತ್ತಿದ್ದು ಗಾಯಾಳುಗಳ ಬಗ್ಗೆ ಶೀಘ್ರವೇ ಮಾಹಿತಿ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ಸಂಗೀತ ಕಾರ್ಯಕ್ರಮದಲ್ಲಿ ಎರಡು ಬಾರಿ ದೊಡ್ಡ ಶಬ್ದ ಕೇಳಿಸಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಇದೊಂದು ಭಯೋತ್ಪಾದನಾ ಕೃತ್ಯ ಎಂದು ಪರಿಗಣಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

    https://twitter.com/ArianaGrande/status/866849021519966208

    https://www.youtube.com/watch?v=4UyH__FSlbo

     

  • ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲೋ ತಂಡಕ್ಕೆ ಎಷ್ಟು ಕೋಟಿ ಸಿಗುತ್ತೆ?

    ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲೋ ತಂಡಕ್ಕೆ ಎಷ್ಟು ಕೋಟಿ ಸಿಗುತ್ತೆ?

    ದುಬೈ: ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ಬಹುಮಾನ ರೂಪದಲ್ಲಿ ಸಿಗಲಿದೆ.

    ಈ ಟೂರ್ನಿಗೆ ಐಸಿಸಿ ಒಟ್ಟು 4.5 ದಶಲಕ್ಷ ಡಾಲರ್(ಅಂದಾಜು 28 ಕೋಟಿ ರೂ.) ಬಹುಮಾನ ನೀಡಲಿದ್ದು, ದ್ವಿತೀಯ ಸ್ಥಾನಿ ತಂಡಕ್ಕೆ 1.1 ದಶಲಕ್ಷ ಡಾಲರ್(ಅಂದಾಜು 7ಕೋಟಿ ರೂ.)ಬಹುಮಾನ ಸಿಗಲಿದೆ.

    ಸೆಮಿಫೈನಲ್‍ನಲ್ಲಿ ಸೋತ ಎರಡೂ ತಂಡಗಳಿಗೆ 4.50 ಲಕ್ಷ ಡಾಲರ್(ಅಂದಾಜು 2.8 ಕೋಟಿ ರೂ.) ಸಿಕ್ಕಿದರೆ, ಗುಂಪಿನಲ್ಲಿ ಮೂರನೇ ಸ್ಥಾನವನ್ನು ಪಡೆಯುವ ಎರಡು ತಂಡಕ್ಕೆ 90 ಸಾವಿರ ಡಾಲರ್(ಅಂದಾಜು 57 ಲಕ್ಷ ರೂ.), ಗುಂಪಿನಲ್ಲಿ ಕೊನೆಯ ಸ್ಥಾನವನ್ನು ಪಡೆದ ತಂಡಕ್ಕೆ 60 ಸಾವಿರ ಡಾಲರ್( ಅಂದಾಜು 38 ಲಕ್ಷ ರೂ.) ಬಹುಮಾನ ಸಿಗಲಿದೆ.

    2013ರ ಟೂರ್ನಿಗೆ ಹೋಲಿಸಿದರೆ ಈ ಬಾರಿಯ ಐಸಿಸಿ ಬಹುಮಾನದ ಮೊತ್ತವನ್ನು ಹೆಚ್ಚಿಸಿದ್ದು, ಒಟ್ಟು 5 ಲಕ್ಷ ಡಾಲರ್(ಅಂದಾಜು 3 ಕೋಟಿ ರೂ.) ಹೆಚ್ಚಿನ ಅನುದಾನವನ್ನು ನೀಡಿದೆ. ಜೂನ್1 ರಿಂದ ಜೂನ್ 18ರವರೆಗೆ ಇಂಗ್ಲೆಂಡಿನಲ್ಲಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿ ನಡೆಯಲಿದೆ.

    2013ರಲ್ಲಿ ಇಂಗ್ಲೆಂಡಿನಲ್ಲಿ ನಡೆದ ಚಾಂಪಿಯನ್ಸ್ ಟ್ರೋಪಿ ಪಂದ್ಯಾಟದಲ್ಲಿ ಫೈನಲ್ ನಲ್ಲಿ ಇಂಗ್ಲೆಂಡ್ ತಂಡವನ್ನು 5 ರನ್ ಗಳಿಂದ ಸೋಲಿಸಿ ಭಾರತ ಚಾಂಪಿಯನ್ ಪಟ್ಟವನ್ನು ಆಲಂಕರಿಸಿತ್ತು.

    ಇದನ್ನೂ ಓದಿ: ಐಪಿಎಲ್ ಕ್ರಿಕೆಟ್: ಟಿವಿ ಸ್ಕ್ರೀನ್‍ನಲ್ಲಿ ಕಾಣೋ ಕೆಂಪು, ಹಸಿರು ಪಟ್ಟಿಯ ಅರ್ಥ ಏನು?
    ಇದನ್ನೂ ಓದಿ: ಐಪಿಎಲ್‍ನ ಜಸ್ಟ್ 10 ಸೆಕೆಂಡ್ ಜಾಹಿರಾತಿಗೆ ಎಷ್ಟು ಹಣ? ನಗದು ಬಹುಮಾನ ಎಷ್ಟು?

  • ಆಲೂಗೆಡ್ಡೆ ಸಿಪ್ಪೆ ಸುಲಿಯಿರಿ, ಒತ್ತಡ ಕಡಿಮೆ ಮಾಡಿ ಹಾಯಾಗಿ ಇರಿ!

    ಆಲೂಗೆಡ್ಡೆ ಸಿಪ್ಪೆ ಸುಲಿಯಿರಿ, ಒತ್ತಡ ಕಡಿಮೆ ಮಾಡಿ ಹಾಯಾಗಿ ಇರಿ!

    ಲಂಡನ್: ನೀವು ಸಿಕ್ಕಾಪಟ್ಟೆ ಒತ್ತಡದಲ್ಲಿದ್ದೀರಾ? ಒತ್ತಡ ಕಡಿಮೆ ಮಾಡಲು ನಾನಾ ತಂತ್ರ ಮಾಡ್ತಾ ಇದ್ದೀರಾ? ಹಾಗಾದ್ರೆ ನಿಮಗೆ ಇಲ್ಲಿದೆ ಸುಲಭದ ಉಪಾಯ. ಆಲೂಗೆಡ್ಡೆಯ ಸಿಪ್ಪೆಯನ್ನು ಸುಲಿದರೆ ನಿಮ್ಮ ಒತ್ತಡ ಕಡಿಮೆಯಾಗುತ್ತಂತೆ.

    ಹೌದು, ಇಂಗ್ಲೆಂಡಿನ ಲಂಡನ್ ನಗರದಲ್ಲಿರುವ ಪ್ರಸಿದ್ಧ ಅಂಗಡಿಯೊಂದು ಜನರಿಗೆ ಆಲೂಗೆಡ್ಡೆಯ ಸಿಪ್ಪೆಯನ್ನು ಸುಲಿಯುವುದು ಹೇಗೆ ಎನ್ನುವ ಪಾಠವನ್ನು ಹೇಳಿಕೊಡುತ್ತಿದ್ದು, ಸಕತ್ ಕ್ಲಿಕ್ ಆಗಿದ್ದು ವಿದೇಶಿ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದೆ.

    ಡಬ್ ಆವರ್ ಹೆಸರಿನಲ್ಲಿ ಆಲೂಗೆಡ್ಡೆ ಸಿಪ್ಪೆ ಸುಲಿಯುವ ವಿಶಿಷ್ಟ ಕಾರ್ಯಕ್ರಮವನ್ನು ಅಂಗಡಿಯೊಂದು ಆಯೋಜಿಸಿದೆ. ಜನರಲ್ಲಿ ಒತ್ತಡ ಕಡಿಮೆ ಮಾಡಲು ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿರುವುದಾಗಿ ಅಂಗಡಿ ತಿಳಿಸಿದೆ.

    ಈ ವಿಶೇಷ ಕಾರ್ಯಕ್ರಮದಲ್ಲಿ ಸಿಪ್ಪೆಯನ್ನು ಸುಲಭವಾಗಿ ಸುಲಿಯಲು ಪ್ರಸ್ತುತ ಮಾರುಕಟ್ಟೆಯಲ್ಲಿ ಸಿಗುವ ಸಾಧನಗಳನ್ನು ನೀಡಲಾಗುತ್ತಿಲ್ಲ. ಬದಲಾಗಿ ಕಷ್ಟಪಟ್ಟು ಸುಲಿಯಲೆಂದೇ ಜನರಿಗೆ ಇಲ್ಲಿ ಚಾಕು ನೀಡಲಾಗುತ್ತದೆ.

    ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವ್ಯಕ್ತಿಯೊಬ್ಬರು ಅಭಿಪ್ರಾಯ ಹಂಚಿಕೊಂಡಿದ್ದು, ನಾವು ಹುಟ್ಟಿದ ಬಳಿಕ ಇದೂವರೆಗೂ ಆಲೂಗೆಡ್ಡೆಯ ಸಿಪ್ಪೆಯನ್ನು ಸುಲಿದಿಲ್ಲ. ಈಗ ನನಗೆ ಬಹಳ ಸಂತೋಷವಾಗುತ್ತಿದೆ. ಸಿಪ್ಪೆ ಸುಲಿಯುವುದರಿಂದ ನನಗೆ ಧ್ಯಾನ ಮಾಡಿದಷ್ಟೇ ಅನುಭವ ಆಗಿದೆ ಎಂದು ಹೇಳಿದ್ದಾರೆ.

    ಮತ್ತೊಬ್ಬರು ಪ್ರತಿಕ್ರಿಯಿಸಿ, ಆಲೂಗೆಡ್ಡೆ ಸುಲಿಯವುದು ಎಷ್ಟು ಖುಷಿ ನೀಡಿದೆ ಎಂದರೆ ಈಗ ಇಮೇಲ್ ಚೆಕ್ ಮಾಡುವುದೇ ಮರೆತು ಹೋಗಿದೆ ಎಂದು ತಮಗೆ ಆದ ಅನುಭವವನ್ನು ಹಂಚಿಕೊಂಡಿದ್ದಾರೆ.

  • 13 ವರ್ಷಗಳ ಹಿಂದೆ ದ್ರಾವಿಡ್ ನಿರ್ಮಿಸಿದ್ದ ದಾಖಲೆ ಮುರಿದ ಪೂಜಾರ

    13 ವರ್ಷಗಳ ಹಿಂದೆ ದ್ರಾವಿಡ್ ನಿರ್ಮಿಸಿದ್ದ ದಾಖಲೆ ಮುರಿದ ಪೂಜಾರ

    ರಾಂಚಿ: ಮೂರನೇ ಟೆಸ್ಟ್ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಅವರು 502 ಬಾಲ್‍ಗಳನ್ನು ಎದುರಿಸಿ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಮರಿಯುವ ಮೂಲಕ ಟೀಂ ಇಂಡಿಯಾ ಪರ ಅತ್ಯಧಿಕ ಬಾಲನ್ನು ಎದುರಿಸಿದ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಚೇತೇಶ್ವರ ಪೂಜಾರ 4ನೇ ದಿನದಾಟದಲ್ಲಿ 502 ಎಸೆತಗಳನ್ನು ಎದುರಿಸಿ 202 ರನ್(21 ಬೌಂಡರಿ) ಬಾರಿಸುವ ಮೂಲಕ ಪಾಕ್ ವಿರುದ್ಧ ದ್ರಾವಿಡ್ ನಿರ್ಮಿಸಿದ್ದ ದಾಖಲೆಯನ್ನು ಮುರಿದಿದ್ದಾರೆ.

    2004ರ ಏಪ್ರಿಲ್‍ನಲ್ಲಿ ರಾಹುಲ್ ದ್ರಾವಿಡ್ ಪಾಕಿಸ್ತಾನ ವಿರುದ್ಧ ರಾವಲ್ಪಿಂಡಿಯಲ್ಲಿ ನಡೆದ ಮೂರನೇ ಟೆಸ್ಟ್ ನ ಮೊದಲನೇ ಇನ್ನಿಂಗ್ಸ್ ನಲ್ಲಿ 270 ರನ್(495 ಎಸೆತ, 34 ಬೌಂಡರಿ, 1 ಸಿಕ್ಸರ್) ಬಾರಿಸಿದ್ದರು. ಈಗ ಪೂಜಾರ 502 ಬಾಲ್‍ಗಳನ್ನು ಫೇಸ್ ಮಾಡುವ ಮೂಲಕ 13 ವರ್ಷದ ಹಿಂದೆ ದ್ರಾವಿಡ್ ನಿರ್ಮಿಸಿದ್ದ ದಾಖಲೆಯನ್ನು ಮುರಿದಿದ್ದಾರೆ. ದ್ರಾವಿಡ್ ದ್ವಿಶತಕ ಸಾಧನೆಯಿಂದಾಗಿ ಭಾರತ ಈ ಪಂದ್ಯವನ್ನು ಇನ್ನಿಂಗ್ಸ್ ಮತ್ತು 131 ರನ್‍ಗಳಿಂದ ಗೆದ್ದುಕೊಂಡಿತ್ತು. ವಿಶೇಷ ಏನೆಂದರೆ ಇವರಿಬ್ಬರು ಆರಂಭಿಕ ಆಟಗಾರು ಔಟಾದ ಬಳಿಕ ಬಂದು ಈ ಸಾಧನೆ ಮಾಡಿದ್ದಾರೆ.

    ಇಂಗ್ಲೆಂಡಿನ ಆಟಗಾರನಿಗೆ ವಿಶ್ವದಾಖಲೆಯ ಪಟ್ಟ:
    ಅತಿ ಹೆಚ್ಚು ಬಾಲನ್ನು ಎದುರಿಸಿದ ವಿಶ್ವ ದಾಖಲೆ ಇಂಗ್ಲೆಂಡಿನ ಸರ್ ಲಿನೋನಾರ್ಡ್ ಹಟ್ಟನ್ ಹೆಸರಿನಲ್ಲಿದೆ. 1938ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 847 ಬಾಲಿಗೆ ಹಟ್ಟನ್ 364 ರನ್ ಹೊಡೆದಿದ್ದರು.

    ಮೂರನೇ ಅತ್ಯಧಿಕ ಸ್ಕೋರ್: ಚೇತೇಶ್ವರ ಪೂಜಾರ ಅವು ಈ ಸಾಧನೆಯ ಜೊತೆಗೆ ಆಸ್ಟ್ರೇಲಿಯಾ ವಿರುದ್ಧ ಎರಡು ದ್ವಿಶತಕ ಹೊಡೆದ ಸಚಿನ್, ಲಕ್ಷ್ಮಣ್ ಅವರ ಕ್ಲಬ್ ಸೇರಿದ್ದಾರೆ. ಪೂಜಾರ ಈ ಹಿಂದೆ 2013ರಲ್ಲಿ ಹೈದರಬಾದ್‍ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್ ನಲ್ಲಿ 202 ರನ್ ಗಳಿಸಿದ್ದರು. ಪೂಜಾರ ಇಂಗ್ಲೆಂಡ್ ವಿರುದ್ಧದ ಅಹಮದಾಬಾದ್‍ನಲ್ಲಿ ನಡೆದ ಟೆಸ್ಟ್ ನಲ್ಲಿ ವೈಯಕ್ತಿಕ ಗರಿಷ್ಠ 206 ರನ್ ಬಾರಿಸಿದ್ದರು.

    ಭಾರತದ ಭಾರೀ ಮೊತ್ತ: ಮೂರನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 360 ರನ್‍ಗಳಿಸಿದ್ದ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 210 ಓವರ್‍ಗಳಲ್ಲಿ 9 ವಿಕೆಟ್ ನಷ್ಟಕ್ಕೆ 603 ರನ್‍ಗಳಿಸಿದ್ದಾಗ ಡಿಕ್ಲೇರ್ ಮಾಡಿಕೊಂಡಿದೆ. ನಿನ್ನೆ 130 ರನ್‍ಗಳಿಸಿದ್ದ ಪೂಜಾರ ಇಂದು ದ್ವಿಶತಕ ಹೊಡೆದರೆ, 18 ರನ್‍ಗಳಿಸಿದ್ದ ವೃದ್ಧಿಮಾನ್ ಸಹಾ ಇಂದು 117 ರನ್(233 ಎಸೆತ, 8 ಬೌಂಡರಿ, 1 ಸಿಕ್ಸರ್) ಬಾರಿಸಿ ಔಟಾದರು.

    ಇವರಿಬ್ಬರು ಏಳನೇ ವಿಕೆಟ್‍ಗೆ 466 ಎಸೆತಗಳಲ್ಲಿ 199 ರನ್ ಜೊತೆಯಾಟವಾಡುವ ಮೂಲಕ ಭಾರತ ಭಾರೀ ಮೊತ್ತವನ್ನು ಪೇರಿಸಿದೆ. ಜಡೇಜಾ ಔಟಾಗದೇ 54 ರನ್(55 ಎಸೆತ, 5 ಬೌಂಡರಿ, 2 ಸಿಕ್ಸರ್) ಬಾರಿಸಿದರೆ, ಉಮೇಶ್ ಯಾದವ್ 16 ರನ್ ಹೊಡೆದರು.

    ಬೈ 14, ಲೆಗ್ ಬೈ 5 ರನ್ ನೀಡಿ ಇತರೇ ರೂಪದಲ್ಲಿ 19 ರನ್ ಬಿಟ್ಟುಕೊಟ್ಟ ಕಾರಣ ಭಾರತ 600 ರನ್‍ಗಳ ಗಡಿಯನ್ನು ದಾಟಿತ್ತು.

    ಕುತೂಹಲ ಘಟ್ಟದಲ್ಲಿ ಟೆಸ್ಟ್: ನಾಲ್ಕನೇಯ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 7.2 ಓವರ್‍ಗಳಲ್ಲಿ 2 ವಿಕೆಟ್ ಕಳೆದುಕೊಂಡು 23 ರನ್ ಗಳಿಸಿದೆ. ಡೇವಿಡ್ ವಾರ್ನರ್ ಮತ್ತು ನಥನ್ ಲಿಯಾನ್ ಔಟಾಗಿದ್ದು, ಕ್ರೀಸ್‍ನಲ್ಲಿ ಮ್ಯಾಟ್ ರೇನ್ ಷಾ ಇದ್ದಾರೆ. ಎರಡು ವಿಕೆಟ್‍ಗಳನ್ನು ಜಡೇಜಾ ಕಬಳಿಸಿದ್ದಾರೆ. ನಾಳೆ ಕೊನೆಯ ದಿನವಾಗಿದ್ದು ಪಂದ್ಯ ಏನಾಗಲಿದೆ ಎನ್ನುವ ಕುತೂಹಲ ಹೆಚ್ಚಾಗಲಿದೆ.

    77 ಓವರ್ ಎಸೆದ ಕೀಫ್: ಸ್ಪಿನ್ನರ್ ಸ್ಟೀವ್ ಓ ಕೀಫ್ ಮೊದಲ ಇನ್ನಿಂಗ್ಸ್ ನಲ್ಲಿ 77 ಓವರ್ ಎಸೆಯುವ ಮೂಲಕ ಆಸ್ಟ್ರೇಲಿಯಾ ಪರವಾಗಿ ಭಾರತದ ವಿರುದ್ಧ ಅತಿ ಹೆಚ್ಚು ಓವರ್ ಎಸೆದ ಬೌಲರ್ ಆಗಿದ್ದಾರೆ. ಕೀಫ್ 77 ಓವರ್‍ನಲ್ಲಿ 17 ಓವರ್ ಮೇಡನ್ ಮಾಡಿ 199 ರನ್ 3 ವಿಕೆಟ್ ಕಿತ್ತಿದ್ದಾರೆ.

  • ಆರ್‍ಸಿಬಿ 12 ಕೋಟಿ ನೀಡಿ ಟೈಮಲ್ ಮಿಲ್ಸ್ ಅವರನ್ನೇ ಖರೀದಿಸಿದ್ದು ಯಾಕೆ?

    ಆರ್‍ಸಿಬಿ 12 ಕೋಟಿ ನೀಡಿ ಟೈಮಲ್ ಮಿಲ್ಸ್ ಅವರನ್ನೇ ಖರೀದಿಸಿದ್ದು ಯಾಕೆ?

    ಬೆಂಗಳೂರು: ಐಪಿಎಲ್ 10ನೇ ಆವೃತ್ತಿಗಾಗಿ ರಿಟ್ಜ್ ಕಾರ್ಲಟನ್ ಹೋಟೆಲ್‍ನಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು ಇಂಗ್ಲೆಂಡಿನ ವೇಗಿ ಟೈಮಲ್ ಮಿಲ್ಸ್ ಅವರನ್ನು 12 ಕೋಟಿ ರೂ. ನೀಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಖರೀದಿಸಿದೆ.

    ಬಿಡ್‍ನಲ್ಲಿ ಟೈಮಲ್ ಮಿಲ್ಸ್ ಅವರಿಗೆ 50 ಲಕ್ಷ ರೂ. ಮೂಲ ಬೆಲೆ ನಿಗದಿಯಾಗಿತ್ತು. ಆದರೆ ಇವರ ಹೆಸರು ಬಂದಾಗ ಪಂಜಾಬ್, ಮುಂಬೈ, ದೆಹಲಿ ತಂಡಗಳು ಖರೀದಿಸಲು ಆಸಕ್ತಿ ತೋರಿಸಿತ್ತು. ಕೋಲ್ಕತ್ತಾ ತಂಡ 10 ಕೋಟಿ ರೂ. ಬಿಡ್ ಮಾಡಿತ್ತು. ಕೊನೆಗೆ ಆರ್‍ಸಿಬಿ 12 ಕೋಟಿ ರೂ. ನೀಡಿ ಖರೀದಿ ಮಾಡಿದೆ.

    ಆಸ್ಟ್ರೇಲಿಯಾದ ಮೈಕಲ್ ಸ್ಟಾರ್ಕ್ ಈ ಬಾರಿ ಐಪಿಎಲ್‍ನಿಂದ ಹೊರಗೆ ಉಳಿಯಲು ನಿರ್ಧರಿಸಿದ್ದರು. ಭಾನುವಾರ ಈ ನಿರ್ಧಾರ ಪ್ರಕಟಿಸಿದ ಹಿನ್ನೆಲೆಯಲ್ಲಿ ಆರ್‍ಸಿಬಿ ವೇಗದ ಬೌಲರ್ ಕೊರತೆ ನೀಗಿಸಲು ಮಿಲ್ಸ್ ಅವರನ್ನು ಖರೀದಿಸಿದೆ. ಆರ್‍ಸಿಬಿ ಸ್ಟಾರ್ಕ್ ಅವರನ್ನು 5 ಕೋಟಿ ರೂ. ಬಿಡ್ ಮಾಡಿ ಖರೀದಿತ್ತು.

    ಟೈಮಲ್ ಮಿಲ್ಸ್ ಖರೀದಿಸಿದ್ದು ಯಾಕೆ?
    1992ರ ಆಗಸ್ಟ್ 12ರಂದು ಜನಿಸಿದ ಮಿಲ್ಸ್ 2016 ಜುಲೈನಲ್ಲಿ ಶ್ರೀಲಂಕಾ ವಿರುದ್ಧ ಮೊದಲ ಪಂದ್ಯವನ್ನು ಆಡಿದ್ದಾರೆ. ಎಡಗೈ ಬೌಲರ್, ಬಲಗೈ ಬ್ಯಾಟ್ಸ್ ಮನ್ ಆಗಿರುವ ಮಿಲ್ಸ್ ಇದೂವರೆಗೆ ಒಟ್ಟು 4 ಟಿ20 ಪಂದ್ಯ ಆಡಿದ್ದು, 3 ವಿಕೆಟ್ ಪಡೆದಿದ್ದಾರೆ. 32 ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ 36.55 ಸರಾಸರಿಯಲ್ಲಿ 55 ವಿಕೆಟ್ ಪಡೆದಿದ್ದಾರೆ. ಅಷ್ಟೇ ಅಲ್ಲದೇ ಗಂಟೆಗೆ 145 ಕಿ.ಮೀ ವೇಗದಲ್ಲಿ ಮಿಲ್ಸ್ ಬೌಲಿಂಗ್ ಮಾಡುತ್ತಿರುವ ಕಾರಣ ಆರ್‍ಸಿಬಿ ದುಬಾರಿ ಮೊತ್ತವನ್ನು ನೀಡಿ ಖರೀದಿಸಿದೆ.

  • ಇಂದು ನಡೆಯಲಿದೆ 357 ಕ್ರಿಕೆಟಿಗರ ಅದೃಷ್ಟ ಪರೀಕ್ಷೆ!

    ಇಂದು ನಡೆಯಲಿದೆ 357 ಕ್ರಿಕೆಟಿಗರ ಅದೃಷ್ಟ ಪರೀಕ್ಷೆ!

    ಬೆಂಗಳೂರು: ಐಪಿಎಲ್ ಸೀಸನ್ 10ರ ಹರಾಜು ಪ್ರಕ್ರಿಯೆ ಇಂದು ಬೆಂಗಳೂರಿನ ರಿಟ್ಜ್ ಕಾರ್ಲಟನ್ ಹೋಟೆಲ್‍ನಲ್ಲಿ ನಡೆಯಲಿದೆ. ಈ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 357 ಕ್ರಿಕೆಟಿಗರು ತಮ್ಮ ಅದೃಷ್ಟ ಪರೀಕ್ಷಿಸಿಕೊಳ್ತಿದ್ದು, ಇದರಲ್ಲಿ 227 ಮಂದಿ ಭಾರತೀಯ ಆಟಗಾರರೇ ಇದ್ದಾರೆ.

    ಉಳಿದಂತೆ 130 ಮಂದಿ ವಿದೇಶಿ ಆಟಗಾರರು ಹರಾಜಿಗೆ ಲಭ್ಯ ಇದ್ದಾರೆ. ಇದರಲ್ಲಿ ಅಫ್ಘಾನಿಸ್ತಾನದ ಐವರು ಆಟಗಾರರು ಹರಾಜಿಗೆ ಇರೋದು ಈ ಬಾರಿ ವಿಶೇಷ. ಐಪಿಎಲ್ ಫ್ರಾಂಚೈಸಿಗಳಿಗೆ ಬೇಕಾಗಿರೋದು 76 ಆಟಗಾರರು ಮಾತ್ರ. ಐಪಿಎಲ್‍ನ ಒಟ್ಟು 8 ಫ್ರಾಂಚೈಸಿಗಳು ಪಾಲ್ಗೊಳ್ಳುತ್ತಿದ್ದು, ಯಾರು ಯಾವ ತಂಡದ ಪಾಲಾಗಲಿದ್ದಾರೆ ಅನ್ನೊದು ಕುತೂಹಲ ಮೂಡಿಸಿದೆ. ಎಲ್ಲರ ಕಣ್ಣು ಇಂಗ್ಲೆಂಡ್‍ನ ಬೆನ್ ಸ್ಟೋಕ್ಸ್, ನ್ಯೂಜಿಲೆಂಡ್‍ನ ಗ್ರಾಂಡ್‍ಹೋಮ್, ಆಫ್ರಿಕಾದ ಕಾಗಿಸೋ ರಬಾಡಾ, ಇಮ್ರಾನ್ ತಾಹೀರ್, ಲಂಕಾದ ಅಸಿಲಾ ಗುಣರತ್ನೆ, ಭಾರತದ ಇಶಾಂತ್ ಶರ್ಮಾ ಮೇಲಿದೆ.

    ಇನ್ನು ಆಟಗಾರರನ್ನು ಕೊಳ್ಳಲು ಯಾವ ಯಾವ ಫ್ರಾಂಚೈಸಿ ಬಳಿ ಎಷ್ಟೆಷ್ಟು ಹಣ ಇದೆ ಅನ್ನೋದನ್ನು ನೋಡೋದಾದ್ರೆ,

    1. ಕಿಂಗ್ಸ್ ಇಲೆವೆನ್ ಪಂಜಾಬ್ – 23.35 ಕೋಟಿ
    2. ಡೆಲ್ಲಿ ಡೇರ್ ಡೆವಿಲ್ಸ್ – 21.5 ಕೋಟಿ
    3. ಸನ್ ರೈಸರ್ಸ್ ಹೈದ್ರಾಬಾದ್ – 20.9 ಕೋಟಿ
    4. ಕೊಲ್ಕೊತಾ ನೈಟ್ ರೈಡರ್ಸ್ – 19.75 ಕೋಟಿ
    5. ಜೈಸಿಂಗ್ ಪುಣೆ ಸೂಪರ್ ಜೈಂಟ್ಸ್ – 19.01 ಕೋಟಿ
    6. ಗುಜರಾತ್ ಲಯನ್ಸ್ – 14.35 ಕೋಟಿ
    7. ರಾಯಲ್ ಚಾಲೆಂಜರ್ಸ್ ಬೆಂಗಳೂರು – 12.82 ಕೋಟಿ
    8. ಮುಂಬೈ ಇಂಡಿಯನ್ಸ್ – 11.55 ಕೋಟಿ

  • ಬ್ಯಾಟಿಂಗ್ ವೈಫಲ್ಯದ ಬಗ್ಗೆ ಕೇಳಿದ್ದಕ್ಕೆ ಮಾಧ್ಯಮಗಳಿಗೆ ಕೊಹ್ಲಿ ಮರು ಪ್ರಶ್ನೆ ಎಸೆದಿದ್ದು ಹೀಗೆ: ವಿಡಿಯೋ ನೋಡಿ

    ಬ್ಯಾಟಿಂಗ್ ವೈಫಲ್ಯದ ಬಗ್ಗೆ ಕೇಳಿದ್ದಕ್ಕೆ ಮಾಧ್ಯಮಗಳಿಗೆ ಕೊಹ್ಲಿ ಮರು ಪ್ರಶ್ನೆ ಎಸೆದಿದ್ದು ಹೀಗೆ: ವಿಡಿಯೋ ನೋಡಿ

    ಬೆಂಗಳೂರು: ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ತಂಡದ ನಾಯಕ ವಿರಾಟ್ ಕೊಹ್ಲಿ ಅಲ್ಪಮೊತ್ತಕ್ಕೆ ಔಟಾಗುತ್ತಿದ್ದು ಈ ಸಂಬಂಧ ಪತ್ರಕರ್ತರು ಕೇಳಿದ ಪ್ರಶ್ನೆಗೆ ಕೊಹ್ಲಿ ಈ ರೀತಿ ಉತ್ತರ ನೀಡಿದ್ದಾರೆ.

    `ನಾನು ಹೆಚ್ಚು ರನ್ ಗಳಿಸಿದ ಸಂದರ್ಭದಲ್ಲಿ ಹೋ.. ಕ್ರಿಕೆಟ್ ಜಗತ್ತಿನಲ್ಲೇ ಕೊಹ್ಲಿ ಕ್ರಾಂತಿ ಮೂಡಿಸಿದ್ದಾರೆ ಅಂತ ಹೇಳ್ತಿರ ಹೊರತು ಬೇರೆ ಏನೂ ಕೇಳಲ್ಲ. ಆದ್ರೆ ಆದರೆ ಈಗ ನಾನು ರನ್ ಗಳಿಸಿದೇ ಇರುವುದು ನಿಮಗೆ ಸಮಸ್ಯೆಯಾಗಿ ಕಾಣುತ್ತಿದೆಯೇ ಎಂದು ಮರು ಪ್ರಶ್ನೆಯನ್ನು ಎಸೆದರು. ನನ್ನಂತೆಯೇ ಉಳಿದವರ ಆಟದತ್ತನೂ ಗಮನ ಕೊಡಿ. ಒಂದು ಟೀಂ ನಲ್ಲಿ 10 ಮಂದಿ ಆಟಗಾರರಿದ್ದಾರೆ. ನಾನೇ ಎಲ್ಲವನ್ನೂ ಮಾಡಿ ಮುಗಿಸಿದರೆ ಇನ್ನುಳಿದವರು ಏನು ಮಾಡುತ್ತಾರೆ ಎಂದು ಪ್ರಶ್ನಿಸಿದರು.

    ಆರಂಭಿಕ ಬ್ಯಾಟ್ಸ್ ಮನ್ ಆಗಿ ಕಣಕ್ಕೆ ಇಳಿದ ಕೊಹ್ಲಿ ಮೂರು ಪಂದ್ಯದಲ್ಲಿ ಒಟ್ಟು 52 ರನ್ ಗಳಿಸಿದ್ದರು. ಈ ಹಿನ್ನೆಲೆಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಸರಣಿಯಲ್ಲಿ ನನ್ನ ಆಟದ ಬಗ್ಗೆ ಸಂತೋಷವಿದೆ. ಒಂದು ವೇಳೆ ಎರಡೂ ಪಂದ್ಯಗಳಲ್ಲಿ 70 ರನ್ ಗಳಿಸಿದ್ದರೆ ನೀವು ಈ ಪ್ರಶ್ನೆಯನ್ನು ಕೇಳುತ್ತಿದ್ರಾ ಅಂತಾ ಪ್ರಶ್ನಿಸಿದ ಅವರು, ಸರಣಿ ಆಟಗಳ ಬಗ್ಗೆ ಖುಷಿ ಪಡಿ. ಅದೇ ನಮಗೆ ಗೆಲುವು ತಂದುಕೊಡುತ್ತೆ ಅಂತಾ ಕೊಹ್ಲಿ ಹೇಳಿದ್ದಾರೆ.

    ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಇಂಗ್ಲೆಂಡ್-ಟೀಂ ಇಂಡಿಯಾ ನಡುವಿನ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 2 ರನ್ ಗೆ ಔಟಾಗಿದ್ದರು. ಈ ಪಂದ್ಯದಲ್ಲಿ ಸುರೇಶ್ ರೈನಾ, ಎಂಎಸ್ ಧೋನಿ, ಯುವರಾಜ್ ಸಿಂಗ್ ಅಬ್ಬರದ ಬ್ಯಾಟಿಂಗ್ ನಿಂದಾಗಿ ಭಾರತ 202 ರನ್ ಗಳಿಸಿತ್ತು. ಜತೆಗೆ ಇಂಗ್ಲೆಂಡ್ ತಂಡವನ್ನು 127 ರನ್ ಗಳಿಗೆ ಆಲೌಟ್ ಮಾಡುವ ಮೂಲಕ 75 ರನ್ ಗಳಿಂದ ಜಯಗಳಿಸಿತ್ತು.

  • 8 ರನ್‍ಗಳಿಗೆ 8 ವಿಕೆಟ್ ಪತನ: ಇದು ಚಹಲ್ ಕಮಾಲ್- ಭಾರತಕ್ಕೆ ಸರಣಿ

    ಬೆಂಗಳೂರು: ಯಜುವೇಂದ್ರ ಚಹಲ್ ಅವರ ಮಾರಕ ಬೌಲಿಂಗ್‍ನಿಂದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ 75 ರನ್‍ಗಳ ಭರ್ಜರಿ ಜಯ ಸಾಧಿಸಿದೆ. ಟೆಸ್ಟ್, ಏಕದಿನ ಸರಣಿಯನ್ನು ಗೆದ್ದುಕೊಂಡಿದ್ದ ಭಾರತ ಈಗ ಟಿ20 ಸರಣಿಯನ್ನು ಗೆದ್ದುಕೊಂಡಿದೆ.

    ಗೆಲ್ಲಲು 203 ರನ್‍ಗಳ ಕಠಿಣ ಗುರಿಯನ್ನು ಪಡೆದ ಇಂಗ್ಲೆಂಡ್ 13.3 ಓವರ್ ಗಳಲ್ಲಿ 119 ರನ್‍ಗಳಿಗೆ 3 ವಿಕೆಟ್ ಕಳೆದುಕೊಂಡು ಉತ್ತಮ ಸ್ಥಿತಿಯಲ್ಲಿತ್ತು. ಆದರೆ ಚಹಲ್ ಸ್ಪಿನ್ ದಾಳಿಗೆ ತತ್ತರಿಸಿದ ಆಂಗ್ಲರು 8 ರನ್ ಅಂತರದಲ್ಲಿ 8 ವಿಕೆಟ್ ಕಳೆದುಕೊಳ್ಳುವ ಮೂಲಕ 16.3 ಓವರ್‍ಗಳಲ್ಲಿ 127 ರನ್ ಗಳಿಗೆ ಆಲೌಟ್ ಆಯ್ತು.

    ಚಹಲ್ ಕಮಾಲ್: ಬಿಲ್ಲಿಂಗ್ಸ್, ಮಾರ್ಗನ್ ರನ್ನು ಔಟ್ ಮಾಡಿದ ಚಹಲ್ ರೂಟ್ ಅವರನ್ನು ಎಲ್‍ಬಿ ಬಲೆಗೆ ಕೆಡವಿದರು. ಇಲ್ಲಿಂದ ಆಂಗ್ಲರ ಪತನ ಆರಂಭವಾಯಿತು. ನಂತರ ಬಂದ ಬಟ್ಲರ್ ಕೊಹ್ಲಿ ಗೆ ಕ್ಯಾಚ್ ನೀಡಿ ಹೊರ ನಡೆದರು. ಚಹಲ್ ಎಸೆತವನ್ನು ಸಿಕ್ಸರ್‍ಗೆ ಬೆನ್ ಸ್ಟೋಕ್ ಅಟ್ಟಿದ್ದರೂ ಸುರೇಶ್ ರೈನಾ ಬೌಂಡರಿ ಗೆರೆಯ ಬಳಿ ಹಿಡಿದ ಅತ್ಯುತ್ತಮ ಕ್ಯಾಚ್‍ಗೆ ಔಟಾದರು. ಇದಾದ ಬಳಿಕ ಮೊಯಿನ್ ಅಲಿ ಕೊಹ್ಲಿ ಕ್ಯಾಚ್ ನೀಡಿದರೆ ಕ್ರಿಸ್ ಜೊರ್ಡನ್ ಅವರನ್ನು ಧೋನಿ ಸ್ಟಂಪ್ ಔಟ್ ಮಾಡಿದರು. ಅಂತಿಮವಾಗಿ 4 ಓವರ್ ಕೋಟಾ ಮುಗಿದಾಗ ಚಹಲ್ 25 ರನ್ ನೀಡಿ 6 ವಿಕೆಟ್ ಪಡೆದಿದ್ದರು.

    ಇಂಗ್ಲೆಂಡ್ ಪರ ಜೇಸನ್ ರೋ 32 ರನ್, ಜೋ ರೂಟ್ 42 ರನ್, ನಾಯಕ ಇಯಾನ್ ಮಾರ್ಗನ್ 40 ರನ್ ಹೊಡೆದರು. ಬುಮ್ರಾ ಮೂರು ವಿಕೆಟ್ ಪಡೆದರೆ ಅಮಿತ್ ಮಿಶ್ರಾ 1 ವಿಕೆಟ್ ಪಡೆದರು

    ವಿಕೆಟ್ ಪತನಗೊಂಡಿದ್ದು ಹೀಗೆ:
    1-8, 2-55, 3-119, 4-119, 5-119, 6-123, 7-127, 8-127, 9-127, 10-127

    ಸಿಕ್ಸರ್, ಬೌಂಡರಿ ಅಬ್ಬರ: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಬ್ ಏರ್ ಸೌಲಭ್ಯ ಅಳವಡಿಕೆಯಾದ ನಡೆದ ಮೊದಲ ಅಂತರಾಷ್ಟ್ರೀಯ ಪಂದ್ಯದಲ್ಲಿ ಭಾರತದ ಬ್ಯಾಟ್ಸ್ ಮನ್‍ಗಳು ರನ್ ಸುರಿಮಳೆಗೈದಿದ್ದರು. ಟಾಸ್ ಸೋತು ಬ್ಯಾಟಿಂಗ್ ಇಳಿದ ಭಾರತ ಆರಂಭದಲ್ಲಿ ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡರೂ ಸುರೇಶ್ ರೈನಾ, ಧೋನಿ ಅರ್ಧಶತಕ, ಕೊನೆಯಲ್ಲಿ ಯುವರಾಜ್ ಅಬ್ಬರದ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಅಂತಿಮವಾಗಿ 6 ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿತ್ತು.

    ಎರಡನೇ ಓವರ್‍ನ ಮೊದಲ ಎಸೆತದಲ್ಲಿ ನಾಯಕ ಕೊಹ್ಲಿ ಜೊರ್ಡನ್ ಬೌಲಿಂಗ್‍ನಲ್ಲಿ ರನೌಟ್ ಆದರು. ಆರಂಭದಲ್ಲಿ ಕುಸಿತ ಕಂಡರೂ ಎರಡನೇ ವಿಕೆಟ್‍ಗೆ ರಾಹುಲ್ ಮತ್ತು ರೈನಾ 6.1 ಓವರ್ನಲ್ಲಿ 61 ರನ್ ಕಲೆ ಹಾಕಿ ಭದ್ರವಾದ ಇನ್ನಿಂಗ್ಸ್ ಕಟ್ಟಿದರು.

    22 ರನ್(18 ಎಸೆತ, 2 ಬೌಂಡರಿ, 1ಸಿಕ್ಸರ್) ಗಳಿಸಿದ್ದ ರಾಹುಲ್ ಔಟಾದಾಗ ತಂಡದ ಮೊತ್ತ 65 ಆಗಿತ್ತು. ಧೋನಿ ಕ್ರೀಸ್‍ಗೆ ಬಂದ ಮೇಲೆ ಸಿಕ್ಸರ್, ಬೌಂಡರಿ ಸಿಡಿಯಲು ಆರಂಭವಾಯಿತು.

    ರೈನಾ ಮತ್ತು ಧೋನಿ 37 ಎಸೆತದಲ್ಲಿ 55 ರನ್ ಜೊತೆಯಾಟವಾಡಿದರು. 39 ಎಸೆತದಲ್ಲಿ ಅರ್ಧಶತಕ ಹೊಡೆದ ರೈನಾ ಅಂತಿಮವಾಗಿ 63 ರನ್(45 ಎಸೆತ, 2 ಬೌಂಡರಿ, 5 ಸಿಕ್ಸರ್) ಗಳಿಸಿದ್ದಾಗ ಮೊರ್ಗನ್‍ಗೆ ಕ್ಯಾಚ್ ನೀಡಿ ಹೊರ ನಡೆದರು.

    ಯುವರಾಜ್ ಬಂದ ಕೂಡಲೇ ಆಕ್ರಮಣಕಾರಿ ಆಟಕ್ಕೆ ಮುಂದಾದರು. ಪರಿಣಾಮ ಜೊರ್ಡನ್ ಎಸೆದ 18ನೇ ಓವರ್ ನಲ್ಲಿ ಯುವರಾಜ್ ಮೂರು ಸಿಕ್ಸರ್ ಒಂದು ಬೌಂಡರಿ ಚಚ್ಚಿದರು. ಈ ಓವರ್ನಲ್ಲಿ ಧೋನಿ ಮತ್ತು ಯುವಿ 24 ರನ್ ಸೊರೆಗೈದರು. ಉತ್ತಮವಾಗಿ ಆಡುತ್ತಿದ್ದ ಯುವರಾಜ್ ಸಿಂಗ್ 27 ರನ್( 10 ಎಸೆತ, 1 ಬೌಂಡರಿ,1 ಸಿಕ್ಸರ್) ಗಳಿಸಿದ್ದಾಗ ಮಿಲ್ಸ್ ಎಸೆದ ಸ್ಲೋ ಬಾಲಿಗೆ ಕೀಪರ್ಗೆ ಕ್ಯಾಚ್ ನೀಡಿ ಹೊರ ನಡೆದರು. ಇವರಿಬ್ಬರು 28 ಎಸೆತದಲ್ಲಿ 57 ರನ್ ಚಚ್ಚುವ ಮೂಲಕ ತಂಡದ ಮೊತ್ತವನ್ನು 170 ರನ್‍ಗಳ ಗಡಿ ದಾಟಿಸಿದರು.

    ಧೋನಿ 56 ರನ್(36 ಎಸೆತ,5 ಬೌಂಡರಿ, 2 ಸಿಕ್ಸರ್) ಹೊಡೆದು ಔಟಾದರೆ, 11 ರನ್(4 ಎಸೆತ, 1 ಸಿಕ್ಸರ್) ಗಳಿಸಿದ್ದ ಹಾರ್ದಿಕ್ ಪಾಂಡ್ಯಾ ಇನ್ನಿಂಗ್ಸ್ ಕೊನೆಯ ಬಾಲ್‍ನಲ್ಲಿ ರನ್ ಔಟಾದರು. ಕೊನೆಯಲ್ಲಿ ರಿಶಬ್ ಪಂತ್ 6 ರನ್ ಗಳಿಸಿ ಔಟಾಗದೇ ಉಳಿದರು. 12 ಸಿಕ್ಸರ್, 11 ಬೌಂಡರಿ ಸಿಡಿದರೆ, ಇತರೇ ರೂಪದಲ್ಲಿ 15 ರನ್ ಟೀಂ ಇಂಡಿಯಾಗೆ ಬಂತು.

    ಭಾರತದ ರನ್ ಏರಿದ್ದು ಹೀಗೆ:
    50 ರನ್ – 5.5 ಓವರ್
    100 ರನ್ – 12.1 ಓವರ್
    150 ರನ್ – 16.5 ಓವರ್
    200 ರನ್ – 19.5 ಓವರ್
    202 ರನ್ – 20 ಓವರ್

    ಕಾನ್ಪುರದಲ್ಲಿ ನಡೆದ ಮೊದಲ ಪಂದ್ಯವನ್ನು ಇಂಗ್ಲೆಂಡ್ 7 ವಿಕೆಟ್‍ನಿಂದ ಗೆದ್ದಿದ್ದರೆ, ನಾಗ್ಪುರದಲ್ಲಿ ನಡೆದ ಎರಡನೇ ಪಂದ್ಯವನ್ನು ಭಾರತ ಜಸ್‍ಪ್ರೀತ್ ಬುಮ್ರಾ ಅವರ ಅಮೋಘ ಬೌಲಿಂಗ್ ಪ್ರದರ್ಶನದಿಂದಾಗಿ 5ರನ್‍ಗಳ ರೋಚಕ ಜಯವನ್ನು ಸಾಧಿಸಿತ್ತು.

    ಯಜುವೇಂದ್ರ ಚಹಲ್ ಪಂದ್ಯಶ್ರೇಷ್ಠ ಮತ್ತು ಸರಣಿಯಲ್ಲಿ 8 ವಿಕೆಟ್ ಕಿತ್ತ ಹಿನ್ನೆಲೆಯಲ್ಲಿ ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾದರು.