Tag: environment day

  • ವಿಶ್ವಪರಿಸರ ದಿನ- ರಾಜಭವನದಲ್ಲಿ ರುದ್ರಾಕ್ಷಿ ಸಸಿ ನೆಟ್ಟ ರಾಜ್ಯಪಾಲರು

    ವಿಶ್ವಪರಿಸರ ದಿನ- ರಾಜಭವನದಲ್ಲಿ ರುದ್ರಾಕ್ಷಿ ಸಸಿ ನೆಟ್ಟ ರಾಜ್ಯಪಾಲರು

    ಬೆಂಗಳೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರಾಜಭವನದ ಅಂಗಳದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರುದ್ರಾಕ್ಷಿ ಹಾಗೂ ಕೆಂಡ ಸಂಪಿಗೆ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಕರೆ ನೀಡಿದರು.

    ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರಾಜಭವನದಲ್ಲಿ ಯುವ ಮತ್ತು ಸಬಲೀಕರಣ ಕ್ರೀಡಾ ಇಲಾಖೆ, ಜಿಲ್ಲಾಡಳಿತ, ವಿವಿಧ ಕಾಲೇಜು ಅಧಿಕಾರಿಗಳು ಸಹಯೋಗದಲ್ಲಿ ಭಾನುವಾರ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದನ್ನೂ ಓದಿ: ಬೆಂಗಳೂರಿನಲ್ಲಿ ಈದ್ಗಾ ಮೈದಾನ ವಿವಾದ- ಗ್ರೌಂಡ್‍ನಲ್ಲಿ ಹಿಂದೂ ಸಂಘಟನೆಯ ಮುಖಂಡರ ಹೈಡ್ರಾಮಾ

    ರುದ್ರಾಕ್ಷಿ, ಕೆಂಡಸಂಪಿಗೆ, ಮನೋರಂಜನಿ ಜಾತಿಯ 20 ಸಸಿಗಳನ್ನು ರಾಜಭವನದಲ್ಲಿ ನೆಡಲಾಯಿತು. ಗೌರವಾನ್ವಿತ ರಾಜ್ಯಪಾಲರೊಂದಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆಯುಕ್ತರಾದ ನಟರಾಜ್, ಎನ್ ಎಸ್ ಎಸ್ ವಿದ್ಯಾರ್ಥಿಗಳು ಹಾಗೂ ಸ್ವಯಂ ಸೇವಕರು ರಾಜಭವನದಲ್ಲಿ ಸಸಿ ನೆಟ್ಟು, ಪರಿಸರ ಸಂರಕ್ಷಣೆ ಮಾಡುವುದಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

     

  • ಗಿಡ ನೆಟ್ಟು ಮಾದರಿಯಾದ ಸಿನಿಮಾ ಸ್ಟಾರ್ಸ್

    ಗಿಡ ನೆಟ್ಟು ಮಾದರಿಯಾದ ಸಿನಿಮಾ ಸ್ಟಾರ್ಸ್

    ಬೆಂಗಳೂರು: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತವಾಗಿ ಸೆಲೆಬ್ರೆಟಿಗಳು ಗಿಡನೆಟ್ಟು ಪರಿಚರ Pಕುರಿತಾಗಿ ಕೆಲವು ಸಾಲುಗಳನ್ನು ಬರೆದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಶುಭಕೋರಿದ್ದಾರೆ. ಮನುಷ್ಯದ ಜೀವನದಲ್ಲಿ ಪ್ರಕೃತಿ ಬಹಳ ಮುಖ್ಯ, ಪರಿಸರ ಆರೋಗ್ಯವಾಗಿದ್ದರೆ ಮಾನವರ ಮುಂದಿನ ಪೀಳಿಗೆ ಆರೋಗ್ಯವಾಗಿರಲು ಸಾಧ್ಯ ಎಂಬ ಸಂದೇಶ ಸಾರಿದ್ದಾರೆ.

    ನಮ್ಮ ಜೀವನ ಪರಿಸರ ಇರುವವರೆಗೆ ಮಾತ್ರ ಎಂಬುದನ್ನು ಮರೆಯದಿರಿ, ನಮಗೆ ಬೇಕಾದಂತೆ ಪರಿಸರ ಬದಲಾಯಿಸುವ ಬದಲು, ಪರಿಸರಕ್ಕೆ ತಕ್ಕಂತೆ ನಾವು ಬದಲಾಗೋಣ ಎಂಬ ಸಂದೇಶವನ್ನು ಬರೆದುಕೊಂಡು ಪರಿಸರ ದಿನಾಚರಣೆಯ ಶುಭಾಶಯೊಂದಿಗೆ ಸಂದೇಶವನ್ನು ಕಿಚ್ಚ ಸುದೀಪ್ ನೀಡಿದ್ದಾರೆ. ಇದನ್ನೂ ಓದಿ:ಪೆಟ್ರೋಲ್, ಡೀಸೆಲ್ ಸುಂಕ ವಿನಾಯಿತಿ ಪ್ರಸ್ತಾಪ ಇಲ್ಲ: ಸಿಎಂ

     

    View this post on Instagram

     

    A post shared by Ragini dwivedi (@rraginidwivedi)

    ನಟ ಶರಣ್ ಸಹ ಟ್ವಿಟ್ಟರ್‌ನಲ್ಲಿ ಪರಿಸರ ದಿನಕ್ಕೆ ಶುಭಕೋರಿದರು. ಗುರುಶಿಷ್ಯರು ಚಿತ್ರದ ಸೆಟ್‍ನಲ್ಲಿ ಗಿಡ ನೆಡಲಾಗಿತ್ತು. ಆ ಫೋಟೋ ಶೇರ್ ಮಾಡಿ ಮನೆಗೊಂದು ಮರ, ಮನಸ್ಸಿಗೊಂದು ನೆಮ್ಮದಿ. ಗುರುಶಿಷ್ಯರು ಚಿತ್ರದ ಶೂಟಿಂಗ್ ದಿನಗಳಲ್ಲಿ ಒಂದು ಪುಟ್ಟ ತೆಂಗಿನ ಸಸಿ ನೆಟ್ಟಿದ್ದ ನೆನಪುಗಳು ಎಂದು ಮೆಲುಕು ಹಾಕಿದ್ದಾರೆ.

     

    View this post on Instagram

     

    A post shared by Allu Arjun (@alluarjunonline)

    ಹೆಚ್ಚಿನ ಮರಗಳನ್ನು ನೆಡೋಣ, ಪರಿಸರ ಸ್ನೇಹಿ ಕೆಲಸಗಳಿಗೆ ಹೊಂದಿಕೊಳ್ಳೋಣ ಎಂದು ತೆಲುಗು ನಟ ಅಲ್ಲು ಅರ್ಜುನ್ ಗಿಡವೊಂದನ್ನು ನೆಡುವ ಫೋಟೋವನ್ನು ಹಂಚಿಕೊಳ್ಳುವ ಮೂಲಕವಾಗಿ ಮೂಲಕ ಪರಿಸರ ದಿನಕ್ಕೆ ಶುಭಕೋರಿದರು. ಸ್ಯಾಂಡಲ್‍ವುಡ್ ನಟ ಸತೀಶ್ ನಿನಾಸಂ ಹಚ್ಚ ಹಸಿರಿನ ವಾತಾವರಣದಲ್ಲಿ ಕುಳಿತು ಕ್ಲೀಕ್ಕಿಸಿಕೊಂಡಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಸೇರ್ ಮಾಡಿಕೊಂಡು ಪರಿಸರ ದಿನಾಚರಣೆ ಶುಭಕೋರಿದ್ದಾರೆ.

    ಪರಿಸರ ದಿನಾಚರಣೆಯ ಅಂಗವಾಗಿ ಸುಮಾರು 150 ಗಿಡಗಳನ್ನು ನೆಟ್ಟಿದ್ದೇವೆ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಹಸಿರಾಗಿಡೋಣ ಎಂದು ಬರೆದುಕೊಂಡು ಕೆಲವು ಫೋಟೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಳ್ಳುವ ಮೂಲಕ ಸ್ಯಾಂಡಲ್‍ವುಡ್ ನಟಿ ರಾಗಿಣಿ ಪರಿಸರ ದಿನವನ್ನು ಆಚರಿಸಿದ್ದಾರೆ.

    ಬಾಲಿವುಡ್‍ನಲ್ಲಿ ಕರೀನಾ ಕಪೂರ್, ಅಜಯ್ ದೇವಗನ್, ಸಿದ್ಧಾರ್ಥ್ ಮಲ್ಹೋತ್ರಾ, ವರುಣ್ ಧವನ್, ಸೋನಾಲಿ ಬೇಂದ್ರೆ, ಶಿಲ್ಪಾ ಶೆಟ್ಟಿ ಸೇರಿದಂತೆ ಹಲವರು ಪರಿಸರ ದಿನಕ್ಕೆ ವಿಶ್ ಮಾಡಿದ್ದಾರೆ.

  • 100 ಮರಗಳನ್ನು ನೆಟ್ಟು ಪರಿಸರ ದಿನ ಆಚರಣೆ

    100 ಮರಗಳನ್ನು ನೆಟ್ಟು ಪರಿಸರ ದಿನ ಆಚರಣೆ

    ತುಮಕೂರು/ ಚಿಕ್ಕೋಡಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ಹಾಗೂ ಪುರಸಭೆ ಹಾಗೂ ಸಂಕೇಶ್ವರ ಫೌಂಡೇಶನ್  100ಕ್ಕೂ ಹೆಚ್ಚು ಮರಗಳನ್ನೂ ನೆಡಲಾಯಿತ್ತು. ತುಮಕೂರಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅವರು ಸಸಿ ನೆಟ್ಟು ನೀರುಣಿಸಿದರು.

    ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಪರಿಸರ ದಿನದ ನಿಮಿತ್ತವಾಗಿ 100 ಕ್ಕೂ ಹೆಚ್ಚು ಮರಗಳನ್ನ ನೆಡಲಾಯಿತು. ಸಂಕೇಶ್ವರ ಪುರಸಭೆ ಮುಖ್ಯಾಧಿಕಾರಿ ಆದ ಜಗದೀಶ್ ಈಟಿ ಸಹಕಾರದೊಂದಿಗೆ ಸುಮಾರು 100 ಕ್ಕೂ ಹೆಚ್ಚು ಮರಗಳನ್ನ ಸಂಕೇಶ್ವರದ ದನಗಳ ಪೇಟೆ ಹಾಗೂ ಎಸ್ ಡಿ ವಿ ಎಸ್ ಶಾಲಾ ಮೈದಾನದಲ್ಲಿ ನೆಡಲಾಯಿತು. ಇದನ್ನೂ ಓದಿ: ಮೃಗಾಲಯಗಳನ್ನ ಉಳಿಸಿ ಬೆಳೆಸಿ: ದರ್ಶನ್ ಮನವಿ

    ಕೊರೊನಾ ಸಂದರ್ಭದಲ್ಲಿ ಹಣ ನೀಡಿ ಆಕ್ಸಿಜನ್ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಹೆಚ್ಚಿನ ಮರಗಳನ್ನ ನೆಟ್ಟರೇ ಮಾತ್ರ ಮುಂದಿನ ದಿನಗಳಲ್ಲಿ ಉತ್ತಮ ಆಕ್ಸಿಜನ್ ಸಿಗಲು ಸಾಧ್ಯ ಇಲ್ಲವಾದಲ್ಲಿ ಪರಿಸ್ಥಿತಿ ಸಾಕಷ್ಟು ಹದಗೆಡಲಿದೆ ಎಂದು ಪುರಸಭೆ ಸದಸ್ಯ ಹಾಗೂ ವೈದ್ಯರಾಗಿರುವ ಡಾ ಮಂದಾರ ಹಾವಳ್ ಹೇಳಿದ್ದಾರೆ. ಈ ಸಂದರ್ಭದಲ್ಲಿ ಎಸ್‍ಡಿವಿಎಸ್ ಕಾಲೇಜಿನ ಪ್ರಾಂಶುಪಾಲರಾದ ಮುನ್ನೊಳೀ ಕ್ರೀಡಾ ಪ್ರೇಮಿ ಅಮಿತ್ ಘಸ್ತಿ ಹಾಗೂ ಸಂಕೇಶ್ವರ ಫ್ರೆಂಡ್ಸ್ ಫೌಂಡೆಶನ ಸದಸ್ಯರಾದ ಉಮೇಶ್ ಗೊಟುರೆ ಲಾಡಜಿ ಮುಲ್ತಾನಿ,ಪ್ರಭಾಕರ ಪಾಟೀಲ್ ಕುಮಾರ ಸೌoಸುದ್ದಿ ,ದಯಾನಂದ್ ಆಲೂರೆ ವಿನಯ ಬಕಾಯಿ ಆನಂದ ಶಿರಕೋಳಿ, ರೋಹಿತ್,ಮಹೇಂದ್ರ ಮಾಳಗಿ ಅರಣ್ಯ ಇಲಾಖೆಯ ಮಲೀಕ್ ಮುಲ್ತಾನಿ ಉಪಸ್ಥಿತರಿದ್ದರು. ಇದನ್ನೂ ಓದಿ: ಖಾಸಗಿ ಅನುದಾನ ರಹಿತ ಶಿಕ್ಷಕರಿಗೆ ಸರ್ಕಾರದಿಂದ ಪ್ಯಾಕೇಜ್ ಘೋಷಣೆ- ಸಿಎಂಗೆ ಬಸವರಾಜ ಹೊರಟ್ಟಿ ಅಭಿನಂದನೆ

    ಕೋವಿಡ್ ಸೋಂಕು ಇರುವುದರಿಂದ ವಿಶ್ವ ಪರಿಸರ ದಿನಾಚರಣೆಯನ್ನು ತುಮಕೂರಿನಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ. ಜಿಲ್ಲಾದ್ಯಂತ ಗಿಡಗಳನ್ನು ನೆಟ್ಟು ಹಸಿರನ್ನು ಬೆಳೆಸಿ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮಕ್ಕಳಲ್ಲಿ ಮರಗಿಡಗಳನ್ನು ಬೆಳೆಸುವ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿದಾಗ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಉಳಿಸಲು ಸಾಧ್ಯ ವಾಗುತ್ತದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಕರೆ ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ವಂಶಿಕೃಷ್ಣ, ಉಪ ವಿಭಾಗಾಧಿಕಾರಿ ಅಜಯ್, ತಹಶಿಲ್ದಾರ್ ಮೋಹನ್, ಮತ್ತಿತರರು ಹಾಜರಿದ್ದರು.

  • ಪರಿಸರ ದಿನಾಚರಣೆಗೆ 20 ಲಕ್ಷ ಖರ್ಚು

    ಪರಿಸರ ದಿನಾಚರಣೆಗೆ 20 ಲಕ್ಷ ಖರ್ಚು

    ಬೆಂಗಳೂರು: ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಲಕ್ಷ ಲಕ್ಷ ದುಂದು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.

    ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.

    ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ ಪರಿಸರ ದಿನಾಚರಣೆಯನ್ನು ಆಚರಣೆ ಮಾಡಲಾಗಿದೆ.

    ಯಾವ್ಯಾವುದಕ್ಕೆ ಎಷ್ಟೆಷ್ಟು ವೆಚ್ಚ?
    * ತಿಂಡಿ – 1,77,975 ರೂ.
    * ಊಟ – 4,44,000 ರೂ.
    * ಸೌಂಡ್ ಮಿಕ್ಸರ್ ವ್ಯವಸ್ಥೆ – 1,10,250 ರೂ.
    * ತ್ಯಾಜ್ಯ ನಿರ್ವಹಣೆ ತಂಡ – 1,05,000 ರೂ.
    * ಸ್ಟೇಜ್ – 1,01,250 ರೂ.
    * ವೀಡಿಯೋಗ್ರಾಫರ್ – 94,920 ರೂ.
    * ಫೋಟೋಗ್ರಾಫರ್ – 47,460 ರೂ.
    * ಹೂಗುಚ್ಛ + ಹಣ್ಣಿನ ಬುಟ್ಟಿ – 94,500 ರೂ.
    * ಪ್ರೆಸ್ ಕಿಟ್ – 20,000 ರೂ.
    * ಫ್ಲವರ್ ಪಾಟ್ – 30,000 ರೂ.
    * ಹಣ್ಣು + ಡ್ರೈ ಫ್ರೂಟ್ಸ್ – 15,750 ರೂ.

    ಈ ರೀತಿಯಾ ಒಟ್ಟಾಗಿ 20.45 ಲಕ್ಷ ರೂ. ಹಣ ಖರ್ಚಾಗಿದೆ. ಇದರಿಂದ ಸಾರ್ವಜನಿಕರು ಸರಳವಾಗಿ ಮಾಡಬೇಕಿದ್ದ ಪರಿಸರ ದಿನಾಚರಣೆಯನ್ನು ಈ ರೀತಿಯಾಗಿ ಅದ್ಧೂರಿಯಾಗಿ ಮಾಡಿ ಸುಮ್ಮನೆ ಲಕ್ಷ ಲಕ್ಷ ಹಣವನ್ನು ದುಂದು ವೆಚ್ಚ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಪರಿಸರ ಉಳಿಸೋಕೆ ಕೊಪ್ಪಳ ಗೆಳೆಯರ ಬಳಗದಿಂದ ಮಹತ್ವದ ಕಾರ್ಯ!

    ಪರಿಸರ ಉಳಿಸೋಕೆ ಕೊಪ್ಪಳ ಗೆಳೆಯರ ಬಳಗದಿಂದ ಮಹತ್ವದ ಕಾರ್ಯ!

    ಕೊಪ್ಪಳ: ಪರಿಸರ ದಿನಾಚರಣೆ ದಿನ ಒಂದು ಸಸಿ ನೆಟ್ಟು ಫೋಟೋಗೆ ಫೋಸ್ ಕೊಟ್ಟು ಕೆಲವರು ಸುಮ್ನಾಗ್ಬಿಡ್ತಾರೆ. ಆದ್ರೆ ಈ ಗೆಳೆಯರ ಬಳಗ ಪರಿಸರ ಉಳಿಸೋಕೆ ಬೆಳೆಸೋಕೆ ಪರಿಸರ ದಿನಾಚರಣೆ ಅಗತ್ಯವಿಲ್ಲಾ ಎನ್ನುವಂತೆ ಕೆಲಸ ಮಾಡ್ತಿದೆ.

    ಹೌದು. ಕೊಪ್ಪಳದ ಗಂಗಾವತಿಯಲ್ಲಿ ಈ ಗೆಳೆಯರ ಬಳಗದ ಕೆಲಸ ಇದೀಗ ಎಲ್ಲರ ಗಮನ ಸೆಳೆದಿದೆ. ಪ್ರತೀ ದಿನ ಗೆಳೆಯರೆಲ್ಲಾ ಒಂದು ಕಡೆ ಸೇರಿ ಟೀ ಕುಡಿದು ಮಾತಾಡಿ ಟೈಮ್ ಪಾಸ್ ಮಾಡಿ ಹೋಗ್ತಿದ್ದರು ಅಂತಾ ಎಲ್ಲರೂ ಅನ್ಕೊಂಡಿದ್ರು. ಆದ್ರೆ ಇವತ್ತು ಇವರು ಮಾಡಿದ ಈ ಕೆಲಸ ಎಲ್ಲರ ಮೆಚ್ಚುಗೆ ಗಳಿಸಿದೆ. ಇದನ್ನೂ ಓದಿ: ನಿಸರ್ಗ ರಕ್ಷಣೆಗೆ ಪಣತೊಟ್ಟ ನರಗುಂದ ಯುವಕರು

    ಸುಮ್ನೆ ಕೂತ್ಕೊಂಡು ಟೈಮ್ ಪಾಸ್ ಮಾಡಿ ಮನೆಗೆ ಹೋಗುವುದಕ್ಕಿಂತ ಏನಾದ್ರೂ ಮಾಡ್ಬೇಕು ಅಂತಾ ಡಿಸೈಡ್ ಮಾಡಿ. ಟೀ ಕುಡಿಯೋಕೆ ಬರುವ ಎಲ್ಲರೂ ಸೇರಿ ಅರಣ್ಯ ಪ್ರದೇಶದಲ್ಲಿ ಬೀಜವನ್ನು ಬಿತ್ತಿ, ಸಸಿ ಬೆಳಸುವ ಕಾರ್ಯವನ್ನು ಮಾಡಲು ಮುಂದಾಗಿದ್ದಾರೆ. ಇಷ್ಟಕ್ಕೂ ಈ ಟೀ ಕುಡಿದು ಟೈಮ್ ಪಾಸ್ ಮಾಡಿ ಹೋಗುತ್ತಿದ್ದವರು ಪೊಲೀಸರು, ಶಿಕ್ಷಕರು, ಪತ್ರಕರ್ತರು, ಸಂಘ ಸಂಸ್ಥೆ ಹೀಗೆ ಹಲವಾರು ಗೆಳೆಯರ ಬಳಗದವರು ಸೇರಿ ಈ ಮಹತ್ವದ ಕೆಲಸವನ್ನು ಮಾಡುತ್ತಿದ್ದಾರೆ. ಇದನ್ನೂ ಓದಿ: ದರ್ಶನ್ ಅಭಿಮಾನಿಗಳು ಗಿಡ ನೆಡೋದರಲ್ಲಿ ಬ್ಯುಸಿ!

    ನಾವು ಹಚ್ಚುವ 500 ಬೀಜಗಳಲ್ಲಿ 50 ಆದ್ರೂ ಬೆಳೆದು ಮರವಾದ್ರೆ ಅದೇ ಖುಷಿ ಅಂತ ಅವರು ಹೇಳುತ್ತಿದ್ದಾರೆ.

  • ಟೈಮ್ ಪಾಸ್ ಮಾಡೋರನ್ನ ತೆಗೆದು, ಕಷ್ಟದಲ್ಲಿರೋರಿಗೆ ಕೆಲ್ಸ ಕೊಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

    ಟೈಮ್ ಪಾಸ್ ಮಾಡೋರನ್ನ ತೆಗೆದು, ಕಷ್ಟದಲ್ಲಿರೋರಿಗೆ ಕೆಲ್ಸ ಕೊಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

    ಬೆಂಗಳೂರು: ಟೈಮ್ ಪಾಸ್ ಮಾಡೋ ಹಲವು ನೌಕರರು ವಿಧಾನಸೌಧದಲ್ಲಿ ಇದ್ದಾರೆ. ಅವರನ್ನು ತೆಗೆದು ಹಾಕಿ ಕಷ್ಟ ಪಡುವವರಿಗೆ ಕೆಲಸ ನೀಡಿ ಅಂತ ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

    ಅವರು ಇಂದು ಜೆಪಿ ನಗರದ ಮನೆ ಮುಂದೆ ಇರುವ ಪಾರ್ಕ್ ನಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಅಚರಿಸಿದರು. ಈ ಕಾರ್ಯಕ್ರಮದಲ್ಲಿ ಜಯನಗರ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಕೂಡ ಭಾಗಿಯಾಗಿದ್ದರು.

    ಬಳಿಕ ಮಾತನಾಡಿದ ಸಿಎಂ, ನಮ್ಮ ಸರ್ಕಾರ ಪರಿಸರಕ್ಕೆ ಹೆಚ್ಚು ಮಹತ್ವ ನೀಡುತ್ತೆ. ಇಂದು ನನ್ನ ಮನೆ ಮುಂದೆ ಇರೋ ಪಾರ್ಕ್‍ನಲ್ಲಿ ಗಿಡ ನೆಟ್ಟಿದ್ದೇನೆ. ಹಾಗೆಯೇ ರಾಜ್ಯದ ಪ್ರತಿಯೊಬ್ಬರು ಅವರ ಮನೆ ಮುಂದೆ ಗಿಡ ನೆಡುವುದರ ಮೂಲಕ ನಮ್ಮ ಸುತ್ತಮುತ್ತಲಿನ ಪರಿಸರ ಕಾಪಾಡಬೇಕು. ಅದು ನಮ್ಮೆಲ್ಲರ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದ್ರು.

    ಇದೇ ವೇಳೆ ಮನೆ ಮುಂದೆಯೇ ಜನತಾದರ್ಶನ ಮಾಡಿದ ಸಿಎಂ ಆಕ್ಸಿಡೆಂಟ್ ಚಿಕಿತ್ಸೆಗೆ ಹಣವಿಲ್ಲದೆ ಪರದಾಡುತ್ತಿದ್ದ ಕುಟುಂಬಕ್ಕೆ ಆಸ್ಪತ್ರೆ ವೆಚ್ಚ ಭರಿಸುವುದಾಗಿ ಭರವಸೆಯನ್ನ ನೀಡಿದ್ರು. ಡಿಪ್ಲೋಮಾ ಮಾಡಿದ್ರು ಕೆಲಸವಿಲ್ಲದೆ ಅಲೆದಾಡುತ್ತಿದ್ದ ಮಹಿಳೆಗೆ ವಿಧಾನಸೌಧದಲ್ಲಿ ಕೆಲಸ ನೀಡಿ. ಟೈಮ್ ಪಾಸ್ ಮಾಡೋ ಹಲವು ನೌಕರರು ಇದ್ದಾರೆ. ಅವರನ್ನು ತೆಗೆದು ಹಾಕಿ ಕಷ್ಟ ಪಡುವವರಿಗೆ ವಿಧಾನಸೌದದಲ್ಲಿ ಕೆಲಸ ನೀಡಿ ಅಂತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.