Tag: environment

  • ಕಾರಿಗೆ ಸಗಣಿ ಲೇಪನ – ಮಾಲಕಿಯ ಉಪಾಯಕ್ಕೆ ನೆಟ್ಟಿಗರಿಂದ ಮೆಚ್ಚುಗೆ

    ಕಾರಿಗೆ ಸಗಣಿ ಲೇಪನ – ಮಾಲಕಿಯ ಉಪಾಯಕ್ಕೆ ನೆಟ್ಟಿಗರಿಂದ ಮೆಚ್ಚುಗೆ

    ಅಹಮದಾಬಾದ್: ಇತ್ತಿಚಿಗೆ ಸಾಮಾಜಿಕ ಜಾಲತಾಣದಲ್ಲಿ ಸಗಣಿ ಹಚ್ಚಿದ ಕಾರೊಂದು ಭಾರಿ ಸುದ್ದಿಯಾಗಿತ್ತು. ಈಗ ಆ ಕಾರಿನ ಮಾಲಕಿ ಸಿಕ್ಕಿದ್ದು, ಯಾಕೆ ಸಗಣಿ ಹಚ್ಚಿದ್ದೇನೆ ಎನ್ನುವ ವಿಚಾರವನ್ನು ಬಹಿರಂಗ ಮಾಡಿದ್ದಾರೆ.

    ಅಹಮದಾಬಾದ್‍ನ ಸೀಜಾಲ್ ಷಾ ತನ್ನ ಟೊಯೋಟಾ ಆಲ್ಟಿಸ್ ಕಾರಿನ ಎಲ್ಲಾ ಹೊರ ಭಾಗಗಳಿಗೂ ಸಗಣಿಯ ಲೇಪನ ಮಾಡಿದ್ದರು. ಇದನ್ನು ರೂಪೇಶ್ ಗೌರಂಗಾ ದಾಸ್ ಎಂಬುವವರು ಫೋಟೋ ತೆಗೆದು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ಈ ಬಾರಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು ಜನರು ಬಿರು ಬಿಸಲಿನಿಂದ ಪಾರಾಗಲು ನಾನಾ ರೀತಿಯ ಸರ್ಕಸ್ ಮಾಡುತ್ತಿದ್ದಾರೆ. ಇದಕ್ಕೆ ಸೀಜಾಲ್ ಷಾ ತಮ್ಮ ಕಾರನ್ನು ತಂಪಾಗಿ ಇಡಲು ಹಸುವಿನ ಸಗಣಿಯನ್ನು ಕಾರಿನ ಹೊರಭಾಗಕ್ಕೆ ಲೇಪನ ಮಾಡಿದ್ದಾರೆ.

    ಈ ವಿಚಾರದ ಬಗ್ಗೆ ಮಾತನಾಡಿರುವ ಸೀಜಾಲ್ ಷಾ, “ಈ ರೀತಿ ಸಗಣಿ ಲೇಪನ ಮಾಡುವುದರಿಂದ ನನ್ನ ಕಾರು ತಂಪಾಗಿ ಇರುತ್ತದೆ. ಜೊತೆಗೆ ಪರಿಸರ ಮಾಲಿನ್ಯವನ್ನು ತಡೆಗಟ್ಟಲು ಸಹಾಯವಾಗುತ್ತದೆ. ಕಾರಿನಲ್ಲಿ ಎಸಿ ಬಳಸುವುದರಿಂದ ಹಾನಿಕಾರಕ ಅನಿಲಗಳು ಬಿಡುಗಡೆಯಾಗಿ ಪರಿಸರ ಮಾಲಿನ್ಯವಾಗುತ್ತದೆ. ಅದಕ್ಕೆ ನಾನು ಕಾರನ್ನು ಚಲಿಸುವಾಗ ಎಸಿಯನ್ನು ಹಾಕಿಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

    ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಾನು ನನ್ನ ಮನೆಯ ಗೋಡೆಗಳಿಗೆ ಮತ್ತು ನೆಲಗಳಿಗೆ ಸಗಣಿ ಹಾಕಿಸುತ್ತೇನೆ. ಮನೆಯಲ್ಲಿ ತಂಪಾದ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಕಾರಿಗೂ ಲೇಪನ ಮಾಡಿದರೆ ಹೇಗೆ ಎಂದು ಆಲೋಚಿಸಿದೆ. ಈ ಕಾರಣಕ್ಕೆ ನಾನು ಕಾರಿಗೂ ಸಗಣಿ ಮಾಡಿದೆ ಎಂದು ತಿಳಿಸಿದ್ದಾರೆ.

    ಸಗಣಿ ಹಚ್ಚಿದ ಕಾರಿನ ಫೋಟೋ ವೈರಲ್ ಆಗಿದ್ದು ನೆಟ್ಟಿಗರು ಮಾಲಕಿಯ ಐಡಿಯಾಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

  • ಪರಿಸರ ಪ್ರೇಮಿಯ ವಿವಾಹ ಮಹೋತ್ಸವಕ್ಕೆ ಒಂದಾದ ಗ್ರಾಮಸ್ಥರು

    ಪರಿಸರ ಪ್ರೇಮಿಯ ವಿವಾಹ ಮಹೋತ್ಸವಕ್ಕೆ ಒಂದಾದ ಗ್ರಾಮಸ್ಥರು

    ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಹನುಮಂತಾಪುರ ಗೊಲ್ಲರಹಟ್ಟಿ ಗ್ರಾಮದಲ್ಲಿ ಪರಿಸರ ಪ್ರೇಮಿಯೊಬ್ಬರ ವಿವಾಹ ಮಹೋತ್ಸವಕ್ಕೆ ಇಡೀ ಊರೇ ಮಧುವಣಗಿತ್ತಿಯಂತೆ ಸಜ್ಜುಗೊಂಡಿದ್ದು, ಅದ್ಧೂರಿಯಾಗಿ ಮದುವೆ ಮಾಡಿಸಿದ್ದಾರೆ.

    ಕಾಟಪ್ಪ ಮತ್ತು ಜ್ಯೋತಿ ಸೇರಿದಂತೆ ಇನ್ನೂ ಎರಡು ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 2018 ಆಗಸ್ಟ್ 15 ರಂದು ಗ್ರಾಮದ ಯೋಧ ಚಂದ್ರಪ್ಪನ ಜೊತೆ ಸ್ವಾತಂತ್ರ್ಯೋತ್ಸವ ಆಚರಿಸಿದ ಗ್ರಾಮಸ್ಥರು ಅಂದು 30ಕ್ಕೂ ಹೆಚ್ಚು ಸಸಿಗಳನ್ನ ನೆಟ್ಟಿದ್ದರು. ನೆಟ್ಟ ಸಸಿಗಳು ಹಾಳಾಗಬಾರದು, ಅದನ್ನು ಸಂರಕ್ಷಣೆ ಮಾಡಬೇಕು ಎಂದು ಗ್ರಾಮದ ಯುವಕ ಕಾಟಪ್ಪರಿಗೆ ಜವಾಬ್ದಾರಿ ನೀಡಿದ್ದರು. ಅಂದಿನಿಂದ ಕಾಟಪ್ಪ ಪ್ರತಿನಿತ್ಯ ಸಸಿಗಳಿಗೆ ನೀರೆರೆದು ಪೋಷಣೆ ಮಾಡುತ್ತಿದ್ದಾರೆ. ಅಲ್ಲದೆ ಗ್ರಾಮದಲ್ಲಿ ಕುಡಿವ ನೀರಿಗೆ ಸಮಸ್ಯೆ ಇದ್ದರೂ ಕಾಟಪ್ಪ ಮನಗೆ ನೀರು ತೆಗೆದುಕೊಂಡು ಹೋಗದೆ ಹಗಲು-ರಾತ್ರಿ ಪರಿಸರ ಸಂರಕ್ಷಣೆಯಲ್ಲಿ ತೊಡಗಿದ್ದರು.

    ಕಾಟಪ್ಪನ ಶ್ರದ್ಧೆ ಕಂಡ ಗ್ರಾಮಸ್ಥರು ಅವರಿಗೆ ಸನ್ಮಾನ ಮಾಡಬೇಕು ಎಂದು ಯೋಚನೆ ಮಾಡಿದ್ದರು. ಅದೇ ವೇಳೆಗೆ ಗ್ರಾಮದ ಯೋಧ ಚಂದ್ರಪ್ಪ, ಕಾಟಪ್ಪನಿಗೆ ಮದುವೆ ವಯಸ್ಸಾಗಿದೆ, ಮನೆಯಲ್ಲೂ ಬಡತನವಿದೆ. ಹೀಗಿರುವಾಗ ಸನ್ಮಾನಕ್ಕಿಂತ ಪರಿಸರ ಪ್ರೇಮಿಯ ವಿವಾಹ ಮಹೋತ್ಸವ ಮಾಡೋಣ ಎಂದು ಗ್ರಾಮಸ್ಥರ ಜೊತೆ ಚರ್ಚಿಸಿದ್ದಾರೆ. ಹೀಗಾಗಿ ಇಡೀ ಗ್ರಾಮ ಒಂದಾಗಿ ವಿವಾಹ ಮಹೋತ್ಸವ ನೆರವೇರಿಸಲಾಯಿತು ಎಂದು ಗ್ರಾಮಸ್ಥ ಮಹಾಲಿಂಗ ಹೇಳಿದ್ದಾರೆ.

    ಕಾಟಪ್ಪನ ವಿವಾಹಕ್ಕೆ ಇಡೀ ಊರೇ ಒಂದಾಗಿದೆ. ಗ್ರಾಮಸ್ಥರೆಲ್ಲ ಸೇರಿ ಊರಿನಲ್ಲಿ ಸ್ವಚ್ಛತಾ ಕಾರ್ಯ ಮಾಡಿದ್ದಾರೆ. ಕಾಟಪ್ಪನ ಜೊತೆ ಇನ್ನೂ ಎರಡು ಬಡ ಜೋಡಿಯ ಮದುವೆಯೂ ನಡೆದಿದೆ. ವಿಶೇಷ ವಿವಾಹ ಮಹೋತ್ಸವಕ್ಕೆ ಚಿತ್ರದುರ್ಗ ಮರುಘಾ ಮಠದ ಶ್ರೀ ಮುರುಘಾ ಶರಣರು ಸಾಕ್ಷಿಯಾಗಿದ್ದರು. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿರುವ ಯೋಧ ಚಂದ್ರಪ್ಪ, ಪ್ರತಿ ಬಾರಿ ರಜೆ ಮೇಲೆ ಊರಿಗೆ ಬಂದಾಗ ಇಂತಹ ಸಮಾಜ ಸೇವೆ ಮಾಡುತ್ತಲೇ ಇರುತ್ತಾರೆ.

    ನಾವು ಸೈನಿಕರು ಸ್ವಚ್ಛತೆಗೆ ಒತ್ತು ನೀಡುತ್ತೇವೆ. ಅದಕ್ಕೆ ನಮ್ಮ ಗ್ರಾಮವೂ ಸ್ವಚ್ಛವಾಗಿರಬೇಕೆಂದು ಈ ರೀತಿಯ ಕೆಲಸ ಮಾಡುತ್ತಿದ್ದೇವೆ. ಇದಕ್ಕೆ ಇಡೀ ಗ್ರಾಮದ ಯುವಕರ, ಹಿರಿಯರ ಸಹಕಾರ, ಮಾರ್ಗದರ್ಶನ ಇದೆ ಎಂದು ಸೈನಿಕ ಡಿ.ಚಂದ್ರಪ್ಪ ಹೇಳಿದ್ದಾರೆ.

  • ಚಾಮರಾಜನಗರದಲ್ಲೊಂದು ವಿಶೇಷ ಮದ್ವೆ – ಜೋಡಿಯಿಂದ ಅತಿಥಿಗಳಿಗೆ ಸಸಿ ಗಿಫ್ಟ್

    ಚಾಮರಾಜನಗರದಲ್ಲೊಂದು ವಿಶೇಷ ಮದ್ವೆ – ಜೋಡಿಯಿಂದ ಅತಿಥಿಗಳಿಗೆ ಸಸಿ ಗಿಫ್ಟ್

    ಚಾಮರಾಜನಗರ: ಸಾಮಾನ್ಯವಾಗಿ ಮದುವೆ ಅಂದಮೇಲೆ ಬಂದ ಅಥಿತಿಗಳಿಗೆ ತಾಂಬೂಲದ ವೇಳೆ ಉಡುಗೊರೆಗಳನ್ನು ಕೊಡುವುದು ಸಾಮಾನ್ಯ. ಆದರೆ ಇಲ್ಲೊಂದು ಮದುವೆ ಮನೆಯಲ್ಲಿ ಅತಿಥಿಗಳಿಗೆ ಪರಿಸರ ರಕ್ಷಣೆಯ ಬಗ್ಗೆ ಪಾಠ ಮಾಡುವುದರ ಜೊತೆಗೆ, ಪರಿಸರ ಸಂರಕ್ಷಣೆಗೆಂದು ಒಂದು ಗಿಫ್ಟ್ ಕೂಡ ನೀಡಿದ್ದಾರೆ.

    ಮರ ಬೆಳೆಸಿ ಪರಿಸರ ರಕ್ಷಿಸಿ ಎನ್ನುವ ಸಂದೇಶದೊಂದಿಗೆ ದಿವ್ಯಜ್ಯೋತಿ ಮತ್ತು ನಂದೀಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಧುನಿಕರಣ ಜನರನ್ನು ಆವರಿಸುತ್ತಿರುವ ದಿನಗಳಲ್ಲಿ ಪರಿಸರವೂ ಕೂಡ ನಾಶವಾಗುತ್ತಿದೆ. ಈ ಪರಿಸರದ ಅವನತಿ ಆಗಬಾರದು ಎಂದು ನವ ಜೋಡಿಗಳು ಹಾಗೂ ಅವರ ಪೋಷಕರು ಜನರಿಗೆ ಪರಿಸರದ ಪಾಠ ಹೇಳಿ ಕೊಡುವುದರ ಜೊತೆಗೆ ಬಂದಿದ್ದ ಅತಿಥಿಗಳಿಗೆ ತಾಂಬೂಲದ ಜೊತೆಗೆ ಸಸಿಗಳನ್ನು ಉಡುಗೊರೆಯನ್ನಾಗಿ ನೀಡಿದ್ದಾರೆ.

    ಚಾಮರಾಜನಗರ ಜಿಲ್ಲೆಯ ವ್ಯಾಪ್ತಿಯ ಬಂಡೀಪುರ, ಬಿಳಿಗಿರಿ ರಂಗನಬೆಟ್ಟ, ಮಲೆಮಹದೇಶ್ವರ ಬೆಟ್ಟದ ಕಾಡುಗಳು ಬೆಂಕಿ ಬಿದ್ದು ನಾಶವಾಗಿತ್ತು. ಈ ರೀತಿ ಕಾಡು ನಾಶವಾದರೆ ನಮ್ಮ ಪರಿಸರ ಸಂಪೂರ್ಣವಾಗಿ ಹಾಳಾಗುತ್ತದೆ. ಹೀಗಾಗಿ ಪರಿಸರಕ್ಕೆ ನಮ್ಮದೊಂದು ಕಾಣಿಕೆ ಇರಲಿ ಎಂದು ಬಂದ ಅಥಿತಿಗಳಿಗೆ ಬೇವು, ಸಿಲ್ವರ್, ಸೀಬೆ, ನಿಂಬೆ ಸೇರಿದಂತೆ ಇತರೆ ಜಾತಿಯ ಗಿಡಗಳನ್ನು ಉಡುಗೊರೆಯನ್ನಾಗಿ ನೀಡಿದ್ದಾರೆ ಎಂದು ಮದುವೆಗೆ ಬಂದ ಅತಿಥಿ ರವೀಶ್‍ಮೂರ್ತಿ ಹೇಳಿದ್ದಾರೆ.

  • ಮತದಾನದ ಬಳಿಕ ಗಿಡ ನೆಟ್ಟು ಪರಿಸರ ಪ್ರೇಮ ಮೆರೆದ ಜನ

    ಮತದಾನದ ಬಳಿಕ ಗಿಡ ನೆಟ್ಟು ಪರಿಸರ ಪ್ರೇಮ ಮೆರೆದ ಜನ

    ಕೋಲಾರ: ಲೋಕಸಭಾ ಚುನಾವಣೆ 2ನೇ ಹಂತದ ಮತದಾನ ರಾಜ್ಯದ 14 ಕ್ಷೇತ್ರಗಳಲ್ಲಿ ಭರದಿಂದ ಸಾಗಿದ್ದು, ಕೋಲಾರ ಗ್ರಾಮವೊಂದರ ಜನರು ಮತ ಚಲಾಯಿಸಿದ ನಂತರ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ.

    ಕೋಲಾರ ತಾಲ್ಲೂಕು ಉರುಟ ಅಗ್ರಹಾತ ಗ್ರಾಮದಲ್ಲಿ ವಿಶಿಷ್ಟವಾಗಿ ಮತದಾನ ಮಾಡಲಾಗಿದ್ದು, ಮತದಾನ ಬಳಿಕ ಪ್ರತಿಯೊಬ್ಬರು ಗಿಡ ನೆಡುವ ಮೂಲಕ ಪರಿಸರ ಪ್ರೇಮ ತೋರಿದರು. ಮತಹಾಕಿದ ವ್ಯಕ್ತಿ ತಮಗೆ ನೆರವಾಗದಿದ್ದರೂ, ಐದು ವರ್ಷಕ್ಕೆ ಗಿಡವೊಂದು ನೆರವಿಗೆ ಬರುತ್ತದೆ ಎಂಬ ವಿಶಿಷ್ಟ ನಂಬಿಕೆ ಅಡಿ ವಿಶಿಷ್ಟ ಕಾರ್ಯಕ್ರಮವನ್ನ ಗ್ರಾಮಸ್ಥರು ಕೈಗೊಂಡಿದ್ದರು.

    ಶತಾಯುಷಿ ಮತದಾನ: ಇತ್ತ ಜಿಲ್ಲೆಯ ಮಾಲೂರು ತಾಲೂಕಿನ ಮುತ್ತುಗದಹಳ್ಳಿ ಗ್ರಾಮದ ಶತಾಯುಷಿ ಮುನಿಯಮ್ಮ (106) ಅವರು ಮತದಾನ ಮಾಡಿದರು. ಗ್ರಾಮದ 13ರ ಮತಗಟ್ಟೆಗೆ ಮೊಮ್ಮಗನ ಸಹಾಯದಿಂದ ಬಂದ ಅವರು ಮತದಾನ ಮಾಡಿದರು. ಆ ಮೂಲಕ ಶತಾಯುಷಿಯಾಗಿ ಈ ವಯಸ್ಸಿನಲ್ಲೂ ಉತ್ಸಾಹವನ್ನು ತೋರಿ ಬಹುಮಂದಿಗೆ ಪ್ರೇರಣೆ ಆದ್ರು.

  • ಪ್ಲಾಸ್ಟಿಕ್ ನಿರ್ಮೂಲನೆಗೆ ಜನಮನ್ನಣೆ- ವಿದೇಶಿ ಉಡುಪು ಧರಿಸೋದೇ ಇಲ್ಲ ಚಿತ್ರದರ್ಗದ ಎಚ್.ಕೆ ಸ್ವಾಮಿ

    ಪ್ಲಾಸ್ಟಿಕ್ ನಿರ್ಮೂಲನೆಗೆ ಜನಮನ್ನಣೆ- ವಿದೇಶಿ ಉಡುಪು ಧರಿಸೋದೇ ಇಲ್ಲ ಚಿತ್ರದರ್ಗದ ಎಚ್.ಕೆ ಸ್ವಾಮಿ

    ಚಿತ್ರದುರ್ಗ: ಪರಿಸರ ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ. ಇದು ಪುಸ್ತಕಕ್ಕೆ ಉಳಿದುಕೊಂಡುಬಿಟ್ಟಿದೆ. ಆದ್ರೆ, ಚಿತ್ರದುರ್ಗದ ಪಬ್ಲಿಕ್ ಹೀರೋ ಸ್ವಾಮಿ ಅವರು 10 ವರ್ಷಗಳಿಂದ ನಿರಂತರವಾಗಿ ಪರಿಸರ ರಕ್ಷಣೆ ಮಾಡೋದರ ಜೊತೆಗೆ ಜಾಗೃತಿ ಮೂಡಿಸ್ತಿದ್ದಾರೆ.

    ಚಿತ್ರದುರ್ಗದ ಎಚ್.ಎ.ಕೆ. ಸ್ವಾಮಿ, ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಸತತ 10 ವರ್ಷಗಳಿಂದಲೂ ಪರಿಸರ ಜಾಗೃತಿ ಮೂಡಿಸ್ತಿದ್ದಾರೆ. ವರ್ಷದ 365 ದಿನವೂ ವಾಯುಮಾಲಿನ್ಯ, ಜಲಮಾಲಿನ್ಯ ಹಾಗು ಶಬ್ದಮಾಲಿನ್ಯ ಮಾಡದಂತೆ ಶಾಲಾ, ಕಾಲೇಜುಗಳ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಪರಿಸರ ಹಾನಿಗೆ ಕಡಿವಾಣ ಹಾಕಲು ವಿವಿಧ ಪರ್ಯಾಯ ಆಚರಣೆಗಳನ್ನು ಮಾಡುವಂತೆ ಜನನಿಬಿಡ ಪ್ರದೇಶಗಳಲ್ಲಿ 1,200ಕ್ಕೂ ಅಧಿಕ ಜಾಗೃತಿ ಕಾರ್ಯಕ್ರಮ ಮಾಡಿದ್ದಾರೆ.

    ಕೆಮಿಕಲ್ ಮಿಶ್ರಿತ ಗಣಪತಿಗಳನ್ನು ವಿಸರ್ಜನೆ ಮಾಡದಂತೆ, ಪ್ಲಾಸ್ಟಿಕ್ ಬಳಸದಂತೆ ಕಾಳಜಿ ವಹಿಸ್ತಿದ್ದಾರೆ. ಪ್ಲಾಸ್ಟಿಕ್ ನಿರ್ಮೂಲನ ಆಂದೋಲನ ಅಪಾರ ಜನಮನ್ನಣೆ ಗಳಿಸಿದೆ. ಬರೀ ಹೇಳೋದಷ್ಟೇ ಅಲ್ಲ. ಇದನ್ನ ತಾವೂ ಪಾಲಿಸ್ತಿದ್ದಾರೆ. ಈಗಲೂ ಸೈಕಲ್ ಸವಾರಿ ಮಾಡುತ್ತಾರೆ. ಸ್ವದೇಶಿ ಉಡುಪುಗಳನ್ನೇ ಧರಿಸ್ತಾರೆ ಅಂತ ಸ್ಥಳೀಯ ನಾಗರಾಜ್ ಬೆದ್ರೆ ಹೇಳಿದ್ದಾರೆ.

    https://www.youtube.com/watch?v=QEI5E4CL0pY

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 35 ವರ್ಷಗಳಿಂದ ಪರಿಸರ ಉಳಿಸುತ್ತಿರುವ ಪಬ್ಲಿಕ್ ಹೀರೋ ಜಯವಂತ್ ಬಾಂಬೂಲೆ

    35 ವರ್ಷಗಳಿಂದ ಪರಿಸರ ಉಳಿಸುತ್ತಿರುವ ಪಬ್ಲಿಕ್ ಹೀರೋ ಜಯವಂತ್ ಬಾಂಬೂಲೆ

    ಧಾರವಾಡ: ಹಸಿರೇ ಉಸಿರು ಹೀಗಂತ ಹೇಳೋರೇ ಜಾಸ್ತಿ. ಆದರೆ ಆ ಹಸಿರನ್ನ ಉಸಿರಂತೆ ಕಾಪಾಡುವವರ ಸಂಖ್ಯೆ ವಿರಳ. ಆದರೆ 35 ವರ್ಷಗಳಿಂದ ಪರಿಸರ ಜಾಗೃತಿ ಮೂಡಿಸುತ್ತಿರುವ ಜಯವಂತ್ ಬಾಂಬೂಲೆ ಅವರು ಇವತ್ತಿನ ನಮ್ಮ ಪಬ್ಲಿಕ್ ಹೀರೋ.

    ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ನಿವಾಸಿ ಜಯವಂತ್ ಬಾಂಬೂಲೆ. ಇವರು ಕಳೆದ 35 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ‘ಅರಣ್ಯ ಪ್ರೇರಕ’ ರಾಗಿ ಕೆಲಸ ಮಾಡುತ್ತಿದ್ದಾರೆ. ಗುತ್ತಿಗೆ ಆಧಾರದಲ್ಲಿ 250 ರೂಪಾಯಿ ಸಂಬಳ ಇದ್ದಾಗ ಈ ಕೆಲಸಕ್ಕೆ ಸೇರಿಕೊಂಡಿರುವ ಇವರಿಗೆ ಈಗ 9 ಸಾವಿರ ಸಂಬಳ. ಈ ಸಂಬಳ ಜೀವನಕ್ಕೆ ಸಾಕಾಗುವುದಿಲ್ಲ. ಆದರೂ ಕೆಲಸ ತೃಪ್ತಿ ಕೊಡುತ್ತಿದೆ ಅಂತ ಕೆಲಸ ಮುಂದುವರಿಸಿದ್ದಾರೆ. ಯಾಕೆಂದರೆ ಪರಿಸರ ಹಾಗೂ ಅರಣ್ಯ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

    ಅರಣ್ಯ ಇಲಾಖೆ ನೀಡುವ ಸಸಿಗಳನ್ನ ರೈತರಿಗೆ ನೀಡಿ, ಅವರಿಗೆ ಅರಣ್ಯ ಬೆಳೆಸಿದರೆ ಆಗುವ ಉಪಯೋಗದ ಬಗ್ಗೆ ತಿಳುವಳಿಕೆ ನೀಡುತ್ತಾ ಬಂದಿದ್ದೇನೆ. ಇಲ್ಲಿವರೆಗೆ ಸುಮಾರು ಲಕ್ಷ ರೈತರಿಗೆ ಈ ಬಗ್ಗೆ ಜಾಗೃತಿಯನ್ನ ಮೂಡಿಸಿದ್ದೇನೆ. ಇದಲ್ಲದೇ ತಾಲೂಕಿನ ಪ್ರತಿಯೊಂದು ಶಾಲೆಗೆ ಹೋಗಿ ಮಕ್ಕಳಿಗೆ ಕೂಡಾ ಈ ಬಗ್ಗೆ ತಿಳಿಸುತ್ತಿದ್ದೇನೆ. ಅದರ ಜೊತೆಗೆ ಮಕ್ಕಳಿಗೆ ಪರಿಸರ ಹಾಗೂ ಅರಣ್ಯದ ಬಗ್ಗೆ ರಸಪ್ರಶ್ನೆಗಳನ್ನ ಇಟ್ಟು, ಉತ್ತರ ಹೇಳುವ ಮಕ್ಕಳಿಗೆ ಪೆನ್ನು ಅಂಕಲಿಪಿಗಳನ್ನ ನೀಡಲಾಗುತ್ತದೆ ಎಂದು ಜಯವಂತ್ ಬಾಂಬೂಲೆ ಹೇಳಿದ್ದಾರೆ.

    ಮೊದಲು ಈ ಕೆಲಸವನ್ನ ಅವರು ನಡೆದುಕೊಂಡೇ ಹೋಗಿ ಮಾಡುತ್ತಿದ್ದರು. ಸದ್ಯ ಜಯವಂತ್ ಅವರ ಸಹೋದರ ಕೊಡಿಸಿದ ಸ್ಕೂಟಿಯಲ್ಲಿ ಹೋಗಿ ಮಕ್ಕಳಿಗೆ ಹಾಗೂ ರೈತರಿಗೆ ತಿಳಿಸುತ್ತಿದ್ದಾರೆ. ತನ್ನ ಸ್ಕೂಟಿಯ ಮೇಲೆಲ್ಲ ಪರಿಸರ ಜಾಗೃತಿಯ ಘೋಷ ವಾಕ್ಯಗಳನ್ನ ಬರೆಸಿದ್ದಾರೆ. ಒಂದು ಕಡೆ ಕಾಡು ಬೆಳೆಸಿ ನಾಡು ಉಳಿಸಿ ಎಂದು ಬರೆದಿದ್ದರೆ, ಇನ್ನೊಂದು ಕಡೆ, ಅರಣ್ಯ ರಕ್ಷಣೆಯೇ ನಮ್ಮೆಲ್ಲರ ಹೊಣೆ ಎಂದು ಬರೆಸಿದ್ದಾರೆ.

    ಇವತ್ತಿನ ದಿನಮಾನಗಳಲ್ಲಿ ತನ್ನ ಮನೆ ಕೆಲಸ ಬಿಟ್ಟು ಈ ರೀತಿ ಜಾಗೃತಿ ಮೂಡಿಸುವವರು ಅತೀ ವಿರಳ. ಇವರ ಈ ಕಾರ್ಯ ಇದೇ ರೀತಿ ಮುಂದುವರೆಯಲಿ ಎಂಬುದೇ ಎಲ್ಲರ ಆಶಯವಾಗಿದೆ.

    https://www.youtube.com/watch?v=mPI5MfUNVkE

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಪೊಲೀಸರ ಕೈಯಲ್ಲಿ ಲಾಠಿ ಬದಲು ಪೊರಕೆಯಿಂದ ಪರಿಸರ ಸ್ವಚ್ಛತಾ ಕಾರ್ಯ

    ಪೊಲೀಸರ ಕೈಯಲ್ಲಿ ಲಾಠಿ ಬದಲು ಪೊರಕೆಯಿಂದ ಪರಿಸರ ಸ್ವಚ್ಛತಾ ಕಾರ್ಯ

    ಯಾದಗಿರಿ: ಖಾಕಿ ಬಟ್ಟೆ ಧರಿಸಿ ಕೈಯಲ್ಲಿ ಲಾಠಿ ಹಿಡಿದುಕೊಂಡು ಕರ್ತವ್ಯಕ್ಕೆ ಹಾಜರಾಗುತ್ತಿದ್ದ ಖಾಕಿ ಪಡೆ ಇಂದು ಪೊರಕೆ ಹಿಡಿದು ಸ್ವಚ್ಛತಾ ಕಾಳಜಿ ಮೆರೆದಿದ್ದಾರೆ.

    ಹೌದು, ಯಾದಗಿರಿ ನಗರದ ವಿವಿಧೆಡೆ ಪೊಲೀಸರು ಕೈಯಲ್ಲಿ ಪೊರಕೆ ಹಿಡಿದು ಚರಂಡಿ, ರಸ್ತೆ ಮೇಲಿದ್ದ ರಾಶಿ ರಾಶಿ ಕಸವನ್ನು ತೆಗೆದು ನಗರದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದರು. ಅಷ್ಟೇ ಅಲ್ಲದೇ ನಗರದ ಜನರಿಗೆ, ಸ್ವಚ್ಛತೆ ಕಾಳಜಿ ಪ್ರತಿಯೊಬ್ಬರು ತೊರಬೇಕು, ಪ್ರತಿಯೊಬ್ಬರು ಸ್ವಚ್ಛತಾ ಕಾಳಜಿ ವಹಿಸಿದರೆ ರೋಗ ಮುಕ್ತ ಸಮಾಜ ನಿರ್ಮಾಣ ಸಾಧ್ಯವೆಂದು ಸಂದೇಶ ಸಾರಿದರು.

    ನಿತ್ಯವು ಆರೋಪಿಗಳನ್ನು ಹುಡುಕುವುದು, ಭದ್ರತೆಗೆಂದು ಲಾಠಿ ಹಿಡಿದುಕೊಂಡು ಖಾಕಿ ಪಡೆಗಳು ಕರ್ತವ್ಯ ನಿರ್ವಹಿಸುತ್ತಾರೆ. ಆದರೆ ಇಂದು ಕರ್ತವ್ಯದ ಜಂಜಾಟ ಬಿಟ್ಟು ಪೊಲೀಸರು ಬೆಳ್ಳಂಬೆಳಗ್ಗೆ ಪೊರಕೆ ಹಿಡಿದು ಚರಂಡಿ ಸ್ವಚ್ಛತೆ ಮಾಡಿದರು. ಯಾದಗಿರಿಯ ಎಸ್‍ಪಿ ಯಡಾ ಮಾರ್ಟಿನ್ ನೇತೃತ್ವದಲ್ಲಿ ಈ ಸ್ವಚ್ಛತಾ ಅಭಿಯಾನ ನಡೆಸಲಾಯಿತು.

    ಯಾದಗಿರಿ ಎಸ್ಪಿ ಯಡಾ ಮಾರ್ಟಿನ್, ಡಿವೈಎಸ್ಪಿ ಪಾಂಡುರಂಗ, ನಗರಸಭೆ ಪೌರಾಯುಕ್ತ ಸಂಗಪ್ಪ ಉಪಾಸೆ, ಪೊಲೀಸ್ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ವೈದ್ಯರು ಕೂಡ ಖಾಕಿ ಪಡೆಗಳ ಜೊತೆ ಕೈಜೋಡಿಸಿದರು. ನಗರದ ಸುಭಾಷ್ ವೃತ್ತ, ಚಿತ್ತಾಪುರ ರಸ್ತೆ, ಹಳೆ ಬಸ್ ನಿಲ್ದಾಣ ಹಾಗೂ ಮೊದಲಾದ ಕಡೆ ಸ್ವಚ್ಛ ಮಾಡಿದರು. ಖುದ್ದು ಎಸ್ಪಿ ಯಡಾ ಮಾರ್ಟಿನ್ ಅವರು ಚರಂಡಿ ಹಾಗೂ ರಸ್ತೆ ಬದಿ ಇದ್ದ ತ್ಯಾಜ್ಯವನ್ನು ಕೈಯಿಂದ ತೆಗೆದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಸಿ ನೆಟ್ಟು ಗುಡ್ಡಗಳಿಗೆ ಹಸಿರ ಹೊದಿಕೆ ಹಾಕಿದ್ದಾರೆ ಅಂಕೋಲಾದ ಸಸ್ಯವಿಜ್ಞಾನಿ ತುಳಸಿಗೌಡ

    ಸಸಿ ನೆಟ್ಟು ಗುಡ್ಡಗಳಿಗೆ ಹಸಿರ ಹೊದಿಕೆ ಹಾಕಿದ್ದಾರೆ ಅಂಕೋಲಾದ ಸಸ್ಯವಿಜ್ಞಾನಿ ತುಳಸಿಗೌಡ

    ಕಾರವಾರ: ಪರಿಸರ ಪ್ರೇಮಕ್ಕೆ ಸಾಲುಮರದ ತಿಮ್ಮಕ್ಕರ ಹೆಸರಿಗೆ ಪರ್ಯಾಯ ಹೆಸರಿಲ್ಲ. ಆದ್ರೆ, ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ 82 ವರ್ಷದ ವೃದ್ಧೆ ತುಳಸಿಗೌಡ ಅವರು ಸದ್ದಿಲ್ಲದೇ ಪ್ರಕೃತಿ ರಕ್ಷಣೆ ನಿಂತಿದ್ದಾರೆ.

    82 ವರ್ಷದ ತುಳಸಿ ಗೌಡ ಅವರು ಕಳೆದ 57 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರಿ ಮಾಡಿಕೊಂಡಿದ್ದಾರೆ. ಲಕ್ಷಾಂತರ ಗಿಡಗಳನ್ನು ನೆಟ್ಟು ಬೋಳು ಬಿದ್ದ ಗುಡ್ಡಗಳಿಗೆ ಹಸಿರ ಹೊದಿಕೆ ಹೊದಿಸಿದ್ದಾರೆ. ಬಾಲ್ಯದಲ್ಲೇ ಅಪ್ಪ, ಮದುವೆಯಾದ ಬಳಿಕ ಗಂಡನ ಕಳೆದುಕೊಂಡ್ರೂ ಕಾಡಿನ ಕಟ್ಟಿಗೆ ಮಾರಿ ಬದುಕು ಕಟ್ಟಿಕೊಂಡ್ರು. ಈ ವೇಳೆ ಅರಣ್ಯ ಇಲಾಖೆಯಿಂದ ಸಸಿ ನೆಡುವ ಕಾರ್ಯಕ್ಕೆ ಸೇರಿಕೊಂಡ್ರು.

    ಕಾಡಿನಿಂದ ತಂದ ಬೀಜಗಳನ್ನು ಸಸಿ ಮಾಡಿ ಶಾಲೆ ಆವರಣ, ರಸ್ತೆ, ಗುಡ್ಡ ಬೆಟ್ಟದಲ್ಲಿ ನೆಟ್ಟು ಪೋಷಿಸ ತೊಡಗಿದ್ರು. ಒಂದೇ ವರ್ಷದಲ್ಲಿ 30 ಸಾವಿರ ಸಸಿಗಳನ್ನು ನೆಟ್ಟು ಅರಣ್ಯ ಇಲಾಖೆಯಿಂದ ಹಣ ನೀಡದಿದ್ದರೂ, ಅವುಗಳ ರಕ್ಷಣೆಯನ್ನು ಮಾಡಿದ್ರು. 300ಕ್ಕೂ ಹೆಚ್ಚು ಕಾಡು ಮರಗಳ ಬಗ್ಗೆ ಮಾಹಿತಿ ಇರುವ ಇವರು `ಸಸ್ಯ ವಿಜ್ಞಾನಿ’ ಎಂದೇ ಪ್ರಸಿದ್ಧಿ ಪಡೆದಿದ್ದಾರೆ.

    ಇವರ ಶ್ರಮ ಹಾಗೂ ಉತ್ಸಾಹವನ್ನು ಪರಿಗಣಿಸಿ ಅಂದಿನ ಅರಣ್ಯಾಧಿಕಾರಿ ಅ.ನಾ.ಯಲ್ಲಪ್ಪ ರೆಡ್ಡಿಯವರು ಮಾಸ್ತಿಕಟ್ಟೆ ಅರಣ್ಯವಲಯವನ್ನು ಪೋಷಿಸುವ ಕೆಲಸ ಕೊಡಿಸಿದ್ದರು. ಹೀಗೆ ಈಕೆಯ ಜೀವಮಾನದಲ್ಲಿ ಲಕ್ಷಗಟ್ಟಲೇ ಸಸಿಗಳನ್ನು ನೆಟ್ಟು ಪೋಷಿಸಿ ಬೆಳೆಸಿದ್ದಾರೆ. ಇವರ ಸಾಧನೆ ರಾಜ್ಯೋತ್ಸವ, ಕೇಂದ್ರ ಸರ್ಕಾರದ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ.

    https://www.youtube.com/watch?reload=9&v=uD76cqidkWw

  • ನಿಸರ್ಗ ರಕ್ಷಣೆಗೆ ಪಣತೊಟ್ಟ ನರಗುಂದ ಯುವಕರು

    ನಿಸರ್ಗ ರಕ್ಷಣೆಗೆ ಪಣತೊಟ್ಟ ನರಗುಂದ ಯುವಕರು

    ಗದಗ: ವಾರಾಂತ್ಯ ಬಂದರೆ ಯುವಕರು ಮೋಜು ಮಸ್ತಿ ಮಾಡುತ್ತಾರೆ ಎನ್ನುವ ಮಾತು ಪ್ರಚಲಿತದಲ್ಲಿದೆ. ಆದರೆ ಗದಗ ಜಿಲ್ಲೆಯ ನರಗುಂದ ಪಟ್ಟಣದ ಯುವಕರು. ಇವರಿಗೆ ವೀಕೆಂಡ್ ಅಂದ್ರೆ ಮೋಜು ಮಸ್ತಿಯಲ್ಲ. ಅದು ಇವರ ಪಾಲಿಗೆ ಪರಿಸರ ಜಾಗೃತಿಯ ದಿನ. ಪ್ರತಿ ಭಾನುವಾರ ಪರಿಸರ ಸಂರಕ್ಷಣೆಗೆ ಮೀಸಲಿಟ್ಟಿ ಕೆಲಸ ಮಾಡುತ್ತಿದ್ದಾರೆ.

    `ನಿಸರ್ಗ ಸೇವಕರು’ ಎನ್ನುವ ಹೆಸರನ್ನು ತಮ್ಮ ತಂಡಕ್ಕೆ ಕಟ್ಟಿಕೊಂಡಿರುವ ಈ ಯುವಕರು ವಾರಾಂತ್ಯದ ದಿನಗಳಲ್ಲಿ ಪಿಕಾಸಿ, ಗುದ್ದಲಿ ಹಿಡಿದು ಸಸಿಗಳನ್ನ ನೆಡುತ್ತ ಜನರಲ್ಲಿ ಈ ಪರಿಸರ ಜಾಗ್ರತಿ ಮೂಡಿಸುತ್ತಿದ್ದಾರೆ.

    ಮೂಲತಃ ನೌಕರರು, ವ್ಯಾಪಾರಸ್ಥರು, ರೈತಾಪಿ ಜನ ಆಗಿರುವ ಈ ಗುಂಪಿನ ಸದಸ್ಯರು ಕಳೆದ ಒಂದು ವರ್ಷದಿಂದ ನರಗುಂದ ಪಟ್ಟಣ ಹಾಗೂ ಸುತ್ತಲಿನ ಹಳ್ಳಿಗಳ ಪ್ರಮುಖ ಬೀದಿ, ಸರ್ಕಾರಿ, ಅರೆಸರ್ಕಾರಿ ಕಚೇರಿಗಳು, ದೇವಸ್ಥಾನ, ಮಠ ಮಸೀದಿ, ಮಂದಿರಗಳ ಬಯಲು ಜಾದಲ್ಲಿ ನೂರಾರು ಸಸಿಗಳನ್ನ ನೆಟ್ಟು, ಪೋಷಿಸುತ್ತಿದ್ದಾರೆ.

    ಪ್ರತಿ ಭಾನುವಾರ ಬೆಳಗ್ಗೆ 7.30 ರಿಂದ ಮಧ್ಯಾಹ್ನ 12 ಗಂಟೆವರೆಗೆ ಶ್ರಮದಾನ ಮಾಡುತ್ತಿದ್ದಾರೆ. ನಿಸರ್ಗ ಉಳಿವಿಗೆ ಕನಸು ಕಟ್ಟಿಕೊಂಡ ಯುವಕರ ಈ ಸೇವೆಯನ್ನ ನರಗುಂದದ ಸಾರ್ವಜನಿಕರು ಹಾಗೂ ಗಣ್ಯ ವ್ಯಕ್ತಿಗಳು ಮುಕ್ತ ಕಂಠದಿಂದ ಹೊಗಳುತ್ತಿದೆ.

    https://www.youtube.com/watch?v=5rfRymnLGFo

  • ದರ್ಶನ್ ಕೆಲಸವನ್ನು ಹಾಡಿಹೊಗಳಿದ ಹಿರಿಯ ನಟಿ!

    ದರ್ಶನ್ ಕೆಲಸವನ್ನು ಹಾಡಿಹೊಗಳಿದ ಹಿರಿಯ ನಟಿ!

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ 1,800ಕ್ಕೂ ಹೆಚ್ಚು ವಿವಿಧ ಜಾತಿಯ ಹಾಗೂ ಅಪರೂಪದ ತಳಿಯ ಸಸ್ಯಗಳನ್ನು ನೆಡಲು ಮುಂದಾಗಿದ್ದಕ್ಕೆ ಹಿರಿಯ ನಟಿ ಸುಮಲತಾ ಅಂಬರೀಷ್ ಟ್ವಿಟ್ಟರಿನಲ್ಲಿ ಹೊಗಳಿದ್ದಾರೆ.

    ನಾನು ಒಬ್ಬ ಪ್ರಾಣಿ ಪ್ರಿಯನಾಗಿ 13 ವರ್ಷದಿಂದ ಅಪರೂಪದ ಪ್ರಾಣಿ-ಪಕ್ಷಿಗಳನ್ನು ಸಾಕುತ್ತಿದ್ದೇನೆ. ಆದರೆ ಈ ವರ್ಷ ನಾನು ನನ್ನ ಫಾರ್ಮ್ ಹೌಸನ್ನು ಹಸಿರು ಮಾಡಲು ನಿರ್ಧರಿಸಿದ್ದೇನೆ. ನಾನು 1,800ಕ್ಕೂ ಹೆಚ್ಚು ವಿವಿಧ ಜಾತಿಯ ಹಾಗೂ ಅಪರೂಪದ ತಳಿಯ ಸಸಿಗಳನ್ನು ಖರೀದಿ ಮಾಡಿದ್ದೇನೆ. ನನ್ನ ಸ್ನೇಹಿತರು ಕೂಡ ಈ ಸಸಿ ನೆಡಲು ನನಗೆ ಸಹಾಯ ಮಾಡುತ್ತಿದ್ದಾರೆ ಎಂದು ದರ್ಶನ್ ಹೇಳಿದ್ದಾರೆ.

    ಪರಿಸರ ಉಳಿಸಲು ನನ್ನ ಕಡೆಯಿಂದ ಇದು ಒಂದು ಕೊಡುಗೆ ಆಗಿದೆ. ಅರಣ್ಯ ಇಲಾಖೆ ನನನ್ನು ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡುವ ಮೊದಲೇ ನಾನು ಈ ಮಹತ್ವದ ಕಾರ್ಯ ಕೈಕೊಂಡಿದ್ದೆ ಎಂದು ದರ್ಶನ್ ತಿಳಿಸಿದ್ದಾರೆ.

    ದರ್ಶನ್ ಅವರ ಈ ನಿರ್ಧಾರಕ್ಕೆ ಹಿರಿಯ ನಟಿ ಸುಮಲತಾ ಅಂಬರೀಷ್ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಟ್ವಿಟ್ಟರಿನಲ್ಲಿ, “ದರ್ಶನ್ ತಮ್ಮ ಸಾವಿರಾರು ಅಭಿಮಾನಿಗಳಿಗೆ ಬಾಸ್ ಆಗಲು ಈ ಒಂದು ಉದಾಹರಣೆ ಸಾಕು” ಎಂದು ಸುಮಲತಾ ಅಂಬರೀಷ್ ಟ್ವೀಟ್ ಮಾಡಿದ್ದಾರೆ.

    ದಿನನಿತ್ಯದ ಜೀವನದಲ್ಲಿ ದರ್ಶನ್‍ಗೆ ಪ್ರಾಣಿ- ಪಕ್ಷಿಗಳು ಅವಿಭಾಜ್ಯ ಅಂಗ. ದರ್ಶನ್ ಲಕ್ಷಾಂತರ ಖರ್ಚು ಮಾಡಿ ಮೈಸೂರು ಮೃಗಾಲಯದಲ್ಲಿ ಹುಲಿ ಆನೆಯನ್ನ ದತ್ತು ಪಡೆದು ಸಲಹುತ್ತಿದ್ದಾರೆ. ವರ್ಷಕ್ಕೆ ಒಮ್ಮೆಯಾದ್ರೂ ಕಾಡಿಗೆ ಪ್ರವಾಸ ಬೆಳೆಸಿ ಪೃಕೃತಿ ಮಡಿಲಲ್ಲಿ ಆಶ್ರಯಿಸುತ್ತಾರೆ. ಆದ್ದರಿಂದ ಈಗ ದರ್ಶನ್ ಕೂಡ ಕಾಡು ರಕ್ಷಣಾ ಜಾಗೃತಿ ಅಭಿಯಾನಕ್ಕೆ ಮನಃಪೂರ್ತಿ ಕೈಜೋಡಿಸಿದ್ದಾರೆ.

    ಕಾಡು ಹಾಗೂ ವನ್ಯಜೀವಿಗಳ ಬಗ್ಗೆ ಸಾಕಷ್ಟು ಪ್ರೀತಿ ತೋರಿಸಿದ ಹಿನ್ನೆಲೆಯಲ್ಲಿ ಮೈಸೂರು ಮೃಗಾಲಂಯದ ಬ್ರಾಂಡ್ ಅಂಬಾಸಿಡರ್ ಆಗಿ ದರ್ಶನ್ ಅವರನ್ನು ಅರಣ್ಯ ಇಲಾಖೆ ರಾಯಭಾರಿಯನ್ನಾಗಿ ಆಯ್ಕೆ ಮಾಡಿತ್ತು.