Tag: environment

  • ಚಿಕ್ಕಬಳ್ಳಾಪುರದ ನಂದಿ ಹಬ್ಬಕ್ಕೆ 40 ಲಕ್ಷ ರೂ. ಖರ್ಚು- ಜಿಲ್ಲಾಡಳಿತದ ಅಂದ ದರ್ಬಾರ್ ಗೆ ಸಾರ್ವಜನಿಕರು ಅಸಮಾಧಾನ

    ಚಿಕ್ಕಬಳ್ಳಾಪುರದ ನಂದಿ ಹಬ್ಬಕ್ಕೆ 40 ಲಕ್ಷ ರೂ. ಖರ್ಚು- ಜಿಲ್ಲಾಡಳಿತದ ಅಂದ ದರ್ಬಾರ್ ಗೆ ಸಾರ್ವಜನಿಕರು ಅಸಮಾಧಾನ

    ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿಗಿರಿಧಾಮದ ಬಳಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ವತಿಯಿಂದ ನಂದಿ ಹಬ್ಬ ಆಯೋಜನೆ ಮಾಡಲಾಗಿದೆ.

    ನಂದಿಹಬ್ಬದ ಅಂಗವಾಗಿ ಇಂದು ಮ್ಯಾರಾಥಾನ್, ಸೈಕ್ಲಿಂಗ್, ಯೋಗ, ಪಾರಂಪರಿಕ ಪರಿಸರ ನಡಿಗೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ವಿಶ್ವವಿಖ್ಯಾತ ನಂದಿಗಿರಿಧಾಮದ ತಪ್ಪಲಿನ ಹಿರೇನಹಳ್ಳಿ ಬಳಿಯ ಖಾಸಗಿ ಬಡಾವಣೆಯಲ್ಲಿ ಆಯೋಜನೆ ಮಾಡಲಾಗಿದೆ. ಬೆಳ್ಳಂಬೆಳಗ್ಗೆ ಮ್ಯಾರಾಥಾನ್ ಗೆ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಚಾಲನೆ ನೀಡಿದ್ದರು.

    ನಂದಿಗಿರಿಧಾಮದ ತಪ್ಪಲಿನ ಹಿರೇನಹಳ್ಳಿ ಬಳಿಯಿಂದ ಮ್ಯಾರಾಥಾನ್ ಆರಂಭವಾಗಿದ್ದು, ನಂದಿಗಿರಿಧಾಮದ ಸುತ್ತಳತೆಯ 16 ಕಿಲೋಮೀಟರ್ ನ ಮ್ಯಾರಾಥಾನ್ ಆಯೋಜನೆ ಮಾಡಲಾಗಿದೆ. ಮ್ಯಾರಾಥಾನ್ ಅಂಗವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, ನಂದಿಗಿರಿಧಾಮದ ಸುತ್ತ ಸಾರ್ವಜನಿಕರ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

    ಒಂದಲ್ಲ ಎರಡಲ್ಲ ಬರೋಬ್ಬರಿ 40 ಲಕ್ಷ ರೂಪಾಯಿ ಖರ್ಚು ಮಾಡಿ ಮಾಡುತ್ತಿರೋ ಚಿಕ್ಕಬಳ್ಳಾಪುರದ ನಂದಿ ಹಬ್ಬದಲ್ಲಿ ಸಂಭ್ರಮವೇ ಇಲ್ಲದಂತಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾಡಳಿತ ವತಿಯಿಂದ ಪ್ರವಾಸೋದ್ಯಮ ಇಲಾಖೆ ನೇತೃತ್ವದಲ್ಲಿ 40 ಲಕ್ಷ ರೂಪಾಯಿ ಹಣ ಖರ್ಚು ಮಾಡಿ ನಂದಿಹಬ್ಬ ಆಚರಣೆ ಮಾಡಲಾಗುತ್ತಿದೆ.

    ಸಾರ್ವಜನಿಕರಲ್ಲಿ ಅಸಮಾಧಾನ: ಈ ಎಲ್ಲಾ ಕಾರ್ಯಕ್ರಮಗಳಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಜನರಿಗೆ ಮಣೆ ಹಾಕದ ಜಿಲ್ಲಾಡಳಿತ ಬೆಂಗಳೂರಿನ ಐಷಾರಾಮಿ ಮಂದಿಗೆ ಮಣೆ ಹಾಕಿದೆ. ಜಿಲ್ಲೆಯ ಜನತೆಗೆ ಕನಿಷ್ಠ ಕಾರ್ಯಕ್ರಮಗಳಲ್ಲೊ ಭಾಗವಹಿಸುವಂತೆ ಆಹ್ವಾನವೂ ನೀಡಿಲ್ಲ. ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಎಂಬಂತೆ ಜಿಲ್ಲಾಡಳಿತ ಶಾಸಕ ಸುಧಾಕರ್ ಅಣತಿಯಂತೆ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಸಂಸ್ಥೆಗಳ ಸಹಯೋಗದೊಂದಿಗೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಎಂದು ದರ್ಬಾರ್ ನಡೆಸುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಅಸಮಾಧಾನ ತೋಡಿಕೊಂಡಿದ್ದಾರೆ.

  • ಅರಣ್ಯ ಸಚಿವರಿಂದ ಮರ ಕಡಿಯಲು ಅಸ್ತ್ರ- ಯಾರ ಅನುಮತಿಯೂ ಇಲ್ಲದೇ ಕಡಿಯಬಹುದಂತೆ ವೃಕ್ಷ!

    ಅರಣ್ಯ ಸಚಿವರಿಂದ ಮರ ಕಡಿಯಲು ಅಸ್ತ್ರ- ಯಾರ ಅನುಮತಿಯೂ ಇಲ್ಲದೇ ಕಡಿಯಬಹುದಂತೆ ವೃಕ್ಷ!

    – ರೈ ವಿರುದ್ಧ ರಾಹುಲ್‍ಗೆ ದೂರು

    ಬೆಂಗಳೂರು: ಕಾಡಿನ ರಕ್ಷಣೆ ಮಾಡಬೇಕಾದ ಅರಣ್ಯ ಸಚಿವ ರಮಾನಾಥ್ ರೈ ಟಿಂಬರ್ ಮಾಫಿಯಾಗೆ ತೆರೆಮರೆಯಲ್ಲಿ ಬೆಂಬಲ ನೀಡ್ತಿದ್ದಾರೆ ಎಂಬ ಗಂಭೀರ ಆರೋಪವೊಂದು ಕೇಳಿಬಂದಿದೆ. ಈ ಹಿಂದೆ ನಗರದಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಕೈ ಹಾಕಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪರಿಸರ ಪ್ರೇಮಿಗಳು ಸಿಡಿದೆದ್ದಿದ್ರು. ಮರ ಕಡಿಯಲಾಗುತ್ತೆ ಮತ್ತು ಪರಿಸರ ನಾಶವಾಗುತ್ತೆ ಅನ್ನೋ ಕೂಗು ಗಟ್ಟಿಯಾದಾಗ ಸರ್ಕಾರ ಈ ಯೋಜನೆಯನ್ನ ಕೈಬಿಟ್ಟಿತ್ತು.

    ಈಗ ಸದ್ದಿಲ್ಲದೇ 50ಕ್ಕೂ ಹೆಚ್ಚು ಜಾತಿಯ ಮರಗಳನ್ನು ಯಾರ ಅನುಮತಿಗೂ ಕಾಯದೆ ಕಡಿಯಬಹುದು ಅಂತಾ ಮರಗಳ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತಂದು ಆದೇಶ ಹೊರಡಿಸಲು ಸಜ್ಜಾಗಿದೆ. ಅಲ್ಲದೇ ಇದಕ್ಕಾಗಿ ಮಸೂದೆಯನ್ನು ಮಂಡಿಸಲಾಗಿದೆ. ಹಳ್ಳಿಯ ರೈತರ ಹಿತದೃಷ್ಟಿಯಿಂದ ಈ ಕಾಯ್ದೆ ಅಂತಾ ಅರಣ್ಯ ಸಚಿವ ರಮಾನಾಥ್ ರೈ ಮರ ಕಡಿಯಲು ಅಸ್ತ್ರ ಹಿಡಿದಿದ್ದಾರೆ. ಸರ್ಕಾರ ಗುಲ್‍ಮೋಹರ್, ಆಫ್ರಿಕನ್ ಟ್ಯೂಲಿಪ್, ಲಕ್ಷ್ಮಿತರು ಮರ, ನುಗ್ಗೇಕಾಯಿ ಮರ, ಬಾಗೇಮರ ಸೇರಿದಂತೆ ಐವತ್ತಕ್ಕೂ ಹೆಚ್ಚು ಜಾತಿಯ ಮರಗಳ ಹೆಸರನ್ನು ಲಿಸ್ಟ್ ಮಾಡಿಕೊಂಡಿದೆ.

    ಈ ಸಂಬಂಧ ರಮಾನಾಥ್ ರೈ ವಿರುದ್ಧ ಪರಿಸರ ಪ್ರೇಮಿಗಳು ಸಿಡಿದೆದ್ದಿದ್ದಾರೆ. ಈ ಕಾಯ್ದೆ ಜಾರಿಯಾದ್ರೆ ದೊಡ್ಡ ಹೋರಾಟವಾಗಲಿದೆ. ನಿಮ್ಮ ಸಚಿವರಿಗೆ ಬುದ್ಧಿ ಹೇಳಿ ಅಂತಾ ಪರಿಸರ ಪ್ರೇಮಿ ನಿಶಾಂತ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ.

    ಸರ್ಕಾರ ಟಿಂಬರ್ ಮಾಫಿಯಾಗೆ ಕುಮ್ಮಕ್ಕು ಕೊಡೋಕೆ ಈ ಕಾಯ್ದೆ ಜಾರಿಗೊಳಿಸಲು ಮುಂದಾಗಿದೆ ಅನ್ನೋ ಅನುಮಾನ ಮೂಡಿದೆ.

  • ಕಚೇರಿ ಆವರಣದಲ್ಲೇ ಮಿನಿ ಫಾರೆಸ್ಟ್ ಸೃಷ್ಠಿಸಿದ ಕೂಡ್ಲಗಿಯ ಅಗ್ನಿಶಾಮಕ ದಳದ ಸಿಬ್ಬಂದಿ

    ಕಚೇರಿ ಆವರಣದಲ್ಲೇ ಮಿನಿ ಫಾರೆಸ್ಟ್ ಸೃಷ್ಠಿಸಿದ ಕೂಡ್ಲಗಿಯ ಅಗ್ನಿಶಾಮಕ ದಳದ ಸಿಬ್ಬಂದಿ

    ಬಳ್ಳಾರಿ: ಬೆಂಕಿ ಆರಿಸೋದು ಅಗ್ನಿಶಾಮಕ ದಳದ ಸಿಬ್ಬಂದಿ ಕೆಲಸ. ಅದು ಎಲ್ಲರಿಗೂ ಗೊತ್ತಿದೆ. ಆದರೆ ಇಂಥ ಬೆಂಕಿ ನಂದಿರೋ ಕೈಗಳು ಪರಿಸರ ರಕ್ಷಣೆಗೆ ಮುಂದಾಗಿ ತಮ್ಮ ಕಚೇರಿ ಆವರಣದಲ್ಲೇ ಒಂದು ಮಿನಿ ಫಾರೆಸ್ಟ್ ನಿರ್ಮಿಸಿದ್ದಾರೆ. ಬಳ್ಳಾರಿ ಕೂಡ್ಲಗಿಯ ಅಗ್ನಿಶಾಮಕ ಸಿಬ್ಬಂದಿ ಮಾಡಿರೋ ಈ ಕಾರ್ಯ ಎಲ್ಲರ ಶ್ಲಾಘನೆಗೆ ಪಾತ್ರವಾಗಿದೆ.

    ಬಳ್ಳಾರಿಯ ಕೂಡ್ಲಗಿ ಅಗ್ನಿಶಾಮಕ ಠಾಣೆಯ ಎದುರಿರೋ ಜಮೀನನನ್ನು ಮಿನಿ ಫಾರೆಸ್ಟ್ ಎಂದು ಯಾಕೆ ಹೇಳ್ತಿದ್ದೀವಿ ಅಂದ್ರೆ ಈ ಆವರಣದಲ್ಲಿ ಎಲ್ಲಾ ರೀತಿಯ ಮರಗಳು, ಹೂ-ಗಿಡಗಳಿವೆ. ಬೆಂಕಿ ನಂದಿಸೋ ಕಾರ್ಯಕ್ಕಾಗಿ ದಿನದ 24 ಗಂಟೆಯೂ ಸನ್ನದ್ಧವಾಗಿರೋ ಈ ಠಾಣೆಯ ಅಗ್ನಿಶಾಮಕ ಸಿಬ್ಬಂದಿ, ತಮ್ಮ ಬಿಡುವಿನ ವೇಳೆ ಆವರಣದಲ್ಲೇ ಸಸಿ ನೆಡುವ ಮೂಲಕ ಕೃತಕ ಕಾಡನ್ನ ನಿರ್ಮಿಸಿದ್ದಾರೆ.

    ಕೂಡ್ಲಗಿ ಪಟ್ಟಣದ ಹೊರವಲಯದಲ್ಲಿರುವ ಎರಡೂವರೆ ಎಕರೆ ಜಮೀನಿನಲ್ಲಿ 65 ಮಾವಿನ ಮರ, 80 ತೆಂಗಿನ ಮರ, 50 ಸಪೋಟಾ, 50 ಸೀತಾಫಲ, ನೆರಳೆ, ತೇಗ, ಬೇವು, ಅಂಜೂರ, ನೆಲ್ಲಿ, ನಿಂಬಿಕಾಯಿ, ರಕ್ತಚಂದನ, ಸೇರಿದಂತೆ ಬಗೆ ಬಗೆಯ ಹೂ-ಹಣ್ಣಿನ ಗಿಡ ಮರಗಳನ್ನ ನೆಟ್ಟು ಪೋಷಿಸುತ್ತಿದ್ದಾರೆ. ಕಳೆದ 6 ವರ್ಷಗಳಿಂದ ಈ ಕಾರ್ಯ ನಿರಂತರವಾಗಿ ಸಾಗಿದೆ.

    ರಾಜಕೀಯ ಸುದ್ದಿಯಿಂದಲೇ ಸುದ್ದಿಯಾಗೋ ಬಳ್ಳಾರಿ, ಕೂಡ್ಲಗಿಯಲ್ಲಿ ಅರಣ್ಯ ಇಲಾಖೆ ಮಾಡಬೇಕಾದ ಕಾರ್ಯವನ್ನು ಅಗ್ನಿಶಾಮಕದಳದ ಸಿಬ್ಬಂದಿ ಮಾಡುತ್ತಿರೋದು ಶ್ಲಾಘನಾರ್ಹವೇ ಸರಿ.

  • ಮರ ಕಡಿಯುವುದನ್ನು ತಪ್ಪಿಸಲು ನೈರುತ್ಯ ರೈಲ್ವೇ ಇಲಾಖೆಯಿಂದ ಹೊಸ ಪ್ಲಾನ್

    ಮರ ಕಡಿಯುವುದನ್ನು ತಪ್ಪಿಸಲು ನೈರುತ್ಯ ರೈಲ್ವೇ ಇಲಾಖೆಯಿಂದ ಹೊಸ ಪ್ಲಾನ್

    ಹಾವೇರಿ: ಒಂದು ಹೊಸ ರಸ್ತೆಯನ್ನು ನಿರ್ಮಿಸಬೇಕೆಂದರೆ ರಸ್ತೆ ಬರುವ ದಾರಿಯಲ್ಲಿ ಮರಗಳನ್ನು ಕಡಿಯುವುದು ಅನಿವಾರ್ಯ. ಆದರೆ ನೈರುತ್ಯ ರೈಲ್ವೆ ಇಲಾಖೆಯವರು ಮರಗಳನ್ನು ಕಡಿಯುವುದನ್ನು ತಪ್ಪಿಸಿ ಬೇರೆಡೆಗೆ ಶಿಫ್ಟ್ ಮಾಡುವ ಪ್ಲಾನ್ ಮಾಡಿಕೊಂಡಿದ್ದಾರೆ.

    ರಸ್ತೆ ನಿರ್ಮಾಣಕ್ಕಾಗಿ ಹಾಗೂ ಕೆಲವು ಅಭಿವೃದ್ಧಿ ಕಾರ್ಯಗಳಿಗಾಗಿ ಮರಗಳನ್ನ ಕಡಿಯಲಾಗುತ್ತದೆ. ಆದ್ರೆ ನೈರುತ್ಯ ರೈಲ್ವೆ ಇಲಾಖೆ ಇದಕ್ಕೆ ಹೊರತಾಗಿದೆ. ಕಳೆದ ಕೆಲವು ತಿಂಗಳಿನಿಂದ ನೈರುತ್ಯ ರೈಲ್ವೆ ವಲಯ ಹುಬ್ಬಳ್ಳಿಯಿಂದ ಚಿಕ್ಕಜಾಜೂರು ದ್ವಿಪಥ ಮಾರ್ಗ ನಿರ್ಮಿಸುತ್ತಿದೆ. ಇದಕ್ಕಾಗಿ ಮರಗಳನ್ನ ಕಡಿಯೋದು ಅನಿವಾರ್ಯವಾಗಿದೆ. ಆದರೆ ಮಾರ್ಗದ ಮಧ್ಯೆ ಬರುವಂತಹ ಮರಗಳನ್ನು ಬೇರೆಡೆಗೆ ನಾಟಿ ಮಾಡಲಾಗುತ್ತಿದೆ.

    ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ರೈಲ್ವೆ ನಿಲ್ದಾಣದಲ್ಲಿದ್ದ ಸುಮಾರು 46 ಬೇವಿನಮರ, ಹೊಂಗೆ ಮರಗಳನ್ನು ಸ್ಥಳಾಂತರ ಮಾಡುತ್ತಿದ್ದಾರೆ. ಈಗಿದ್ದ ಜಾಗದಿಂದ ಕನಿಷ್ಟ 15 ರಿಂದ 20 ಮೀಟರ್ ದೂರದಲ್ಲಿ ಮರಗಳನ್ನ ನಾಟಿ ಮಾಡಲಾಗುತ್ತಿದೆ. ಈಗಾಗಲೇ 25ಕ್ಕೂ ಹೆಚ್ಚು ಮರಗಳನ್ನ ಶಿಫ್ಟ್ ಮಾಡಿದ್ದಾರೆ. ಪರಿಸರ ಉಳಿಸುವ ಉದ್ದೇಶದಿಂದ ಈ ರೀತಿಯ ಕಾರ್ಯ ಮಾಡಲಾಗುತ್ತಿದೆ.

    ಹೈದರಾಬಾದ್‍ನ ವಿಶೇಷ ತಂಡ, ತೋಟಗಾರಿಕಾ ಇಲಾಖೆ, ರೈಲ್ವೆ ಎಂಜಿನಿಯರ್ ತಿವಾರಿ ಸೇರಿದಂತೆ 15ಕ್ಕೂ ಹೆಚ್ಚು ಜನ ಈ ಕಾರ್ಯದಲ್ಲಿ ನಿರತರಾಗಿದ್ದಾರೆ. ರೈಲ್ವೆ ಇಲಾಖೆ ಪರಿಸರ ಸಂರಕ್ಷಣೆಯಲ್ಲಿ ತೊಡಗಿರೋದು ನಿಜಕ್ಕೂ ಮೆಚ್ಚುವಂತ ಕಾರ್ಯವಾಗಿದೆ. ಇದನ್ನ ಎಲ್ಲೆಡೆ ಅಳವಡಿಸಿಕೊಂಡರೆ ಮರಗಳನ್ನು ಸಂರಕ್ಷಿಸಬಹುದು ಎಂದು ರೈಲ್ವೆ ಇಲಾಖೆಯ ಈ ಕಾರ್ಯಕ್ಕೆ ಸ್ಥಳೀಯರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

  • ಸೈಕಲ್‍ನಲ್ಲೇ ಬಂದು ಪರಿಸರ ಜಾಗೃತಿ ಮೂಡಿಸ್ತಾರೆ ಕೆಎಲ್‍ಇ ಕಾಲೇಜಿನ ಪ್ರಿನ್ಸಿಪಾಲ್!

    ಸೈಕಲ್‍ನಲ್ಲೇ ಬಂದು ಪರಿಸರ ಜಾಗೃತಿ ಮೂಡಿಸ್ತಾರೆ ಕೆಎಲ್‍ಇ ಕಾಲೇಜಿನ ಪ್ರಿನ್ಸಿಪಾಲ್!

    ಬೆಳಗಾವಿ: ರಾಜ್ಯದ ಪ್ರತಿಷ್ಠಿತ ಖಾಸಗಿ ಕಾಲೇಜ್‍ನ ಪ್ರಾಂಶುಪಾಲರಾಗಿ ಲಕ್ಷಾಂತರ ರೂಪಾಯಿ ಸಂಬಳ ಪಡೆದರೂ ಇವರು ಮಾತ್ರ ಸೈಕಲ್‍ನಲ್ಲೇ ಕಾಲೇಜ್‍ಗೆ ಬರುತ್ತಾರೆ.

    ಹೌದು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕೆಎಲ್‍ಇ ಎಂಜಿನಿಯರ್ ಕಾಲೇಜ್‍ನ ಪ್ರಿನ್ಸಿಪಾಲ್ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಪ್ರತಿನಿತ್ಯ ಸೈಕಲ್ ನಲ್ಲಿ ಬಂದು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಕಾಳಜಿ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಕಾಲೇಜ್‍ಗೆ ಬಂದ ಮೇಲೂ ಕ್ಯಾಂಪಸ್ ನಲ್ಲಿ ಸೈಕಲ್ ನಲ್ಲಿ ಒಂದು ರೌಂಡ್ ಹೋಗಿ ಕೆಲಸ ಕಾರ್ಯಗಳ ಪರಿಶೀಲನೆ ನಡೆಸುತ್ತಾರೆ.

    ಖಾಸಗಿ ಕಾಲೇಜಿನಲ್ಲಿ ಲಕ್ಷ-ಲಕ್ಷ ಸಂಬಳ ಪಡೆದು ಜುಂ ಅಂತ ಕಾರ್‍ನಲ್ಲಿ ಬರದ ಸಿದ್ದರಾಮಪ್ಪ ಇಟ್ಟ ಅವರು, ಸೈಕಲ್‍ನಲ್ಲಿ ಬಂದು ಸಮಾಜದ ಆರೋಗ್ಯ, ಸ್ವಂತ ಆರೋಗ್ಯ ಎರಡನ್ನೂ ಕಾಪಾಡುತ್ತಿದ್ದಾರೆ.

     

  • ಪರಿಸರ ಸಂರಕ್ಷಣೆಗೆ ಗ್ರಾಮಸ್ಥರ ಪಣ-ಕಾಡಿನ ಜೊತೆ ಬೆಸೆದುಕೊಂಡ ಜೀವನ

    ಪರಿಸರ ಸಂರಕ್ಷಣೆಗೆ ಗ್ರಾಮಸ್ಥರ ಪಣ-ಕಾಡಿನ ಜೊತೆ ಬೆಸೆದುಕೊಂಡ ಜೀವನ

    -ಕಾರವಾರದ ಸಾತಗೇರಿ ಇವತ್ತಿನ ಪಬ್ಲಿಕ್‍ಹೀರೋ

    ಕಾರವಾರ: ಮನಸ್ಸು ಮಾಡಿದ್ರೆ ಯಾವುದು ಅಸಾಧ್ಯವಲ್ಲ ಅನ್ನೋದಕ್ಕೆ ಇವತ್ತಿನ ನಮ್ಮ ಪಬ್ಲಿಕ್ ಹೀರೋ ಸಾಕ್ಷಿಯಾಗಿದ್ದಾರೆ. ಕಾರವಾರದ ಸಾತಗೇರಿ ಗ್ರಾಮದ ಗ್ರಾಮಸ್ಥರು ಹಸಿರು ಪರಿಸರವನ್ನೇ ತಮ್ಮ ಉಸಿರಾಗಿಸಿಕೊಂಡಿದ್ದಾರೆ.

    ಕಾರವಾರದಿಂದ 25 ಕಿ.ಮೀ. ದೂರದ ಸಾತಗೇರಿ ಗ್ರಾಮದಲ್ಲಿ ಪರಿಸರ ಸಂರಕ್ಷಣೆಯೇ ಮೂಲ ಉದ್ದೇಶ. ಅದಕ್ಕಾಗಿ 187 ಮಹಿಳಾ ಸದಸ್ಯರನ್ನೊಳಗೊಂಡ ಗ್ರಾಮ ಅರಣ್ಯ ಸಮಿತಿ ರಚನೆಯಾಗಿದ್ದು, 25 ವರ್ಷಗಳಿಂದ ಅರಣ್ಯ ಸಂರಕ್ಷಣೆ ಮಾಡುತ್ತಿದ್ದಾರೆ. ಗ್ರಾಮದ ಪ್ರತಿ ಮನೆಯಲ್ಲಿ ವಿದ್ಯುತ್ ಉಳಿತಾಯಕ್ಕಾಗಿ ಸೋಲಾರ್, ಗ್ಯಾಸ್ ಬಳಸುತ್ತಿದ್ದು ಉರುವಲು ಒಲೆ ಇಲ್ಲ. ಗ್ರಾಮವೆಲ್ಲಾ ಹೊಗೆ ರಹಿತವಾಗಿದೆ. ಗ್ರಾಮದ ಪ್ರತಿ ಮನೆ, ರಸ್ತೆಯೂ ಸ್ವಚ್ಛತೆಯಿಂದ ಕೂಡಿದೆ.

    ಸುಮಾರು 70 ಮನೆಗಳಿರುವ ಈ ಗ್ರಾಮದಲ್ಲಿ 250ಕ್ಕೂ ಅಧಿಕ ಜನರಿದ್ದಾರೆ. ಗ್ರಾಮದ ಸುತ್ತ 350 ಎಕರೆಗೂ ಅಧಿಕ ಅರಣ್ಯ ಪ್ರದೇಶವಿದೆ. 1993-94ರಲ್ಲಿ ಗ್ರಾಮದ ಸುತ್ತಮುತ್ತಲ ಅರಣ್ಯಗಳ ಸಂರಕ್ಷಣೆಗಾಗಿ ಗ್ರಾಮಸ್ಥರನ್ನ ಜೊತೆಗೂಡಿಸಿಕೊಂಡು ಅರಣ್ಯ ಇಲಾಖೆ ರಚಿಸಿದ ಗ್ರಾಮ ಅರಣ್ಯ ಸಮಿತಿ ರಚನೆ 25 ವರ್ಷಗಳಿಂದ ಯಶಸ್ವಿಯಾಗಿದೆ. ಪ್ರತಿ ವಾರಕ್ಕೊಮ್ಮೆ ಸಭೆ ನಡೆಸಿ ಚರ್ಚೆ ನಡೆಸುತ್ತಾರೆ.

    ಗ್ರಾಮದ ಪ್ರತಿಯೊಬ್ಬರದ್ದೂ ಪರಿಸರ ಪ್ರೇಮ. ಗ್ರಾಮದಲ್ಲಿರುವ 25 ಎಕರೆ ಜಮೀನಿನಲ್ಲಿ ಔಷಧೀಯ ಸಸ್ಯಗಳ ಜೊತೆ ಕಾಡು ಪ್ರಾಣಿ, ಪಕ್ಷಿಗಳಿಗೆ ಬೇಕಾಗುವ ಹಣ್ಣಿನ ಗಿಡಗಳನ್ನೂ ಬೆಳೆಯಲಾಗಿದೆ. ಗ್ರಾಮಸ್ಥರ ಪರಿಸರ ಕಾಳಜಿಯಿಂದ ಪಶ್ಚಿಮ ಘಟ್ಟ ಮತ್ತಷ್ಟು ಸುಂದರವಾಗಿದೆ.

  • ಬೆಂಗಳೂರು ನಿವಾಸಿಗಳೇ ಗಮನಿಸಿ, ಮನೆ ಕಟ್ಟೋಕು ಮುನ್ನಾ ಸಸಿ ನೆಡುವುದು ಕಡ್ಡಾಯ..!

    ಬೆಂಗಳೂರು ನಿವಾಸಿಗಳೇ ಗಮನಿಸಿ, ಮನೆ ಕಟ್ಟೋಕು ಮುನ್ನಾ ಸಸಿ ನೆಡುವುದು ಕಡ್ಡಾಯ..!

    ಬೆಂಗಳೂರು: ನಗರದ ನಿವಾಸಿಗಳೇ ಸ್ವಲ್ಪ ಇತ್ತ ಗಮನಿಸಿ. ನೀವೇನಾದ್ರೂ ಸಿಲಿಕಾನ್ ಸಿಟಿಯಲ್ಲಿ ಮನೆ ಕಟ್ಟೋದಿಕ್ಕೆ ಪ್ಲಾನ್ ಮಾಡ್ತಾ ಇದ್ದೀರಾ? ಹಾಗಾದ್ರೆ ಇನ್ಮುಂದೆ ಮನೆ ಕಟ್ಟೋಕು ಮುನ್ನಾ ಸಸಿ ನೆಡುವುದು ಕಡ್ಡಾಯವಾಗಿದೆ.

    ಹೌದು. ಉದ್ಯಾನ ನಗರಿ ಎಂದು ಕರೆಸಿಕೊಳ್ಳುತ್ತಿದ್ದ ಬೆಂಗಳೂರು, ಇದೀಗ ಕಾಂಕ್ರಿಟ್ ಸಿಟಿಯಾಗಿ ಮಾರ್ಪಾಡಾಗ್ತಿದೆ. ಹಸಿರೆಂಬುದೆ ಅಪರೂಪವೆಂಬಂತಾಗಿದೆ. ಹೀಗಾಗಿ ಕೊನೆಗೂ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಬೆಂಗಳೂರನ್ನು ಮತ್ತೆ ಗಾರ್ಡನ್ ಸಿಟಿ ಮಾಡಲು ಹೊರಟಿದೆ.

    ಇನ್ಮುಂದೆ ನೀವು ಮನೆ ಕಟ್ಟೋಕು ಮುನ್ನಾ ಎರಡು ಸಸಿಗಳನ್ನು ನೆಡಲೇಬೇಕು. ಅಥವಾ ಎರಡು ಸಸಿಯನ್ನು ನೆಡುವಷ್ಟು ಜಾಗವನ್ನಾದ್ರೂ ಬಿಡಲೇಬೇಕು. ಒಂದು ವೇಳೆ ನೀವು ಈ ರೂಲ್ಸ್ ಬ್ರೇಕ್ ಮಾಡಿದ್ದೇ ಆದಲ್ಲಿ ಅಂಥವರ ವಿರುದ್ಧ ಬಿಬಿಎಂಪಿ ಕಠಿಣ ಕ್ರಮ ತೆಗೆದುಕೊಳ್ಳಲಿದೆ.

    ಇದೇನು ಹೊಸ ಕಾಯ್ದೆಯಲ್ಲ. ಗೃಹ ನಿರ್ಮಾಣ ಕಾಯ್ದೆಯಲ್ಲಿ ಮೊದಲಿನಿಂದಲೂ ಈ ನಿಯಮವಿದೆ. ಯಾರೇ ಮನೆ ಕಟ್ಟಿದ್ರು ಮಳೇ ನೀರು ಹರಿದು ಹೋಗುವುದಕ್ಕೆ ಸೂಕ್ತ ವ್ಯವಸ್ಥೆ ಮತ್ತು ಎರಡು ಸಸಿಗಳನ್ನು ನೆಡುವುದು ಕಡ್ಡಾಯ. ಆದ್ರೆ ಬಿಬಿಎಂಪಿ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಈ ನಿಯಮ ಸರಿಯಾದ ರೀತಿಯಲ್ಲಿ ಪಾಲನೆಯಾಗಿರಲಿಲ್ಲ.

    ಜನರು ಇದ್ದ ಮರಕ್ಕೂ ಕೊಡಲಿ ಏಟು ಹಾಕುತ್ತಿದ್ದರು. ಇದರಿಂದ ಪರಿಸರ ಪ್ರೇಮಿಗಳಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಕೊನೆಗೂ ನಿದ್ರೆಯಿಂದ ಎಚ್ಚೆತ್ತಿರುವ ಬಿಬಿಎಂಪಿ ಕಟ್ಟುನಿಟ್ಟಾಗಿ ಈ ಕಾಯ್ದೆಯನ್ನು ಜಾರಿಗೆ ತರಲು ಹೊರಟಿದೆ.

    ಬಿಬಿಎಂಪಿ ಹೆಚ್ಚಿನ ನಿಯಮಗಳು ಕಾಗದಕ್ಕೆ ಸೀಮಿತವಾಗಿದ್ದೆ ಹೆಚ್ಚು. ಈ ನಿಯಮವಾದ್ರೂ ಪಾಲನೆಯಾಗಿ ಬೆಂಗಳೂರು ಮತ್ತೆ ಹಸಿರಾಗುತ್ತಾ ಎಂದು ಕಾದು ನೋಡ್ಬೇಕಿದೆ.

  • ಮರ, ಗಿಡ ಬೆಳೆಸೋದಂದ್ರೆ ಪಂಚಪ್ರಾಣ – ಸೈಕಲ್‍ನಲ್ಲಿ ನೀರು ಹೊತ್ತು ಬೆಟ್ಟ ಏರ್ತಾರೆ ಚಿಕ್ಕಬಳ್ಳಾಪುರದ ಬ್ರಹ್ಮ ಚೈತನ್ಯ

    ಮರ, ಗಿಡ ಬೆಳೆಸೋದಂದ್ರೆ ಪಂಚಪ್ರಾಣ – ಸೈಕಲ್‍ನಲ್ಲಿ ನೀರು ಹೊತ್ತು ಬೆಟ್ಟ ಏರ್ತಾರೆ ಚಿಕ್ಕಬಳ್ಳಾಪುರದ ಬ್ರಹ್ಮ ಚೈತನ್ಯ

    ಚಿಕ್ಕಬಳ್ಳಾಪುರ: ಇವತ್ತಿನ ನಮ್ಮ ಪಬ್ಲಿಕ್ ಹೀರೋ ತುಂಬಾ ಡಿಫರೆಂಟ್. ತಮ್ಮ ಇಳಿ ವಯಸ್ಸಿನಲ್ಲಿಯೀ ಕಡಿದಾದ ಬೆಟ್ಟವನ್ನೇರಿ ಮರ-ಗಿಡಗಳಿಗೆ ನೀರುಣಿಸಿ, ತಮ್ಮ ಮಕ್ಕಳಿಗಿಂತಲೂ ಹೆಚ್ಚಾಗಿ ಪಾಲನೆ ಪೋಷಣೆ ಮಾಡ್ತಿದ್ದಾರೆ.

    ಜಿಲ್ಲೆಯ ಚಿಂತಾಮಣಿ ಪಟ್ಟಣದ ನಿವಾಸಿ 73 ವರ್ಷದ ಬ್ರಹ್ಮ ಚೈತನ್ಯ ಅವರು ನಮ್ಮ ಪಬ್ಲಿಕ್ ಹೀರೋ. ಪ್ಲಾಸ್ಟಿಕ್ ಕ್ಯಾನ್‍ಗಳಲ್ಲಿ ನೀರು ತುಂಬಿಕೊಂಡು, ಸೈಕಲ್ ತಳ್ಳಿಕೊಂಡು ತೀರ ಕಡಿದಾದ ಬೆಟ್ಟಗಳ ಸಾಗಿ ಮರಗಳಿಗೆ ನೀರುಣಿಸುತ್ತಿದ್ದಾರೆ.

    ಬೆಳಗ್ಗೆ ಎದ್ದರೆ ಕ್ಯಾನ್‍ಗಳಲ್ಲಿ ನೀರು ತುಂಬಿಕೊಂಡು ಕಾಡುಮಲ್ಲೇಶ್ವರ ಬೆಟ್ಟದ ತಪ್ಪಿನಲ್ಲಿರುವ ಮರಗಿಡಗಳ ಪೋಷಣೆಗೆ ಹೊರಡ್ತಾರೆ. ಕೃಷಿ ಇಲಾಖೆ ಸೇವೆಯಿಂದ ನಿವೃತ್ತರಾಗಿರೋ ಇವರು ಎಲ್ಲೆಲ್ಲಿ ಕೆಲಸ ಮಾಡಿದ್ದಾರೋ ಅಲ್ಲಿ ಎಲ್ಲ ಬಾದಾಮಿ, ಮಾವು, ನೇರಳೆ, ಗಸಗಸೆ, ಹುಣಸೆ ಹೀಗೆ 30 ಕ್ಕೂ ಹೆಚ್ಚು ಗಿಡಗಳನ್ನ ನೆಟ್ಟು ಬೆಳೆಸಿರುವುದು ವಿಶೇಷ.

    ಮೊದಲು ಬೆನ್ನಿಗೆ ನೀರು ತುಂಬಿದ ಕ್ಯಾನ್ ಕಟ್ಟಿಕೊಂಡು ಬೆಟ್ಟ ಏರುತ್ತಿದ್ದರು. ಇವರ ಕಷ್ಟ ಕಂಡ ಒಬ್ಬರು ಹಳೆಯ ಸೈಕಲ್ ದಾನ ಮಾಡಿದ್ದಾರೆ. ಹೀಗಾಗಿ ಸದ್ಯ ಪರಿಚಯಸ್ಥರ ಮನೆಯ ಸಂಪಿನಲ್ಲಿ ನೀರು ತುಂಬಿಕೊಂಡು, ಸೈಕಲ್‍ನಲ್ಲಿ ನೀರು ಕೊಂಡೊಯ್ತಿದ್ದಾರೆ. ಬಿಪಿ, ಶೂಗರ್ ಇದ್ರೂ ಆರೋಗ್ಯಕ್ಕಿಂತ ಮರಗಿಡಗಳ ಪೋಷಣೆಯಲ್ಲೇ ನೆಮ್ಮದಿ ಕಾಣ್ತಾರೆ.

    ಬ್ರಹ್ಮಚೈತನ್ಯರಿಗೆ ಎರಡು ಹೆಣ್ಣು ಹಾಗೂ ಒಬ್ಬ ಗಂಡು ಮಗನಿದ್ದಾನೆ. ಎಲ್ಲರೂ ಮದುವೆ ಮಾಡಿಕೊಂಡು ಆರಾಮಾಗಿದ್ದಾರೆ. ಮಕ್ಕಳು ಮೊಮ್ಮಕ್ಕಳ ಜೊತೆ ಹಾಯಾಗಿ ಇರಬೇಕಾದ ಈ ವಯಸ್ಸಲ್ಲಿ ಮರ ಗಿಡ ಬೆಳೆಸಿ ಪರಿಸರ ಪ್ರೇಮವನ್ನು ಎಲ್ಲರಿಗೂ ಮಾದರಿಯಾಗಿದ್ದಾರೆ.

    https://www.youtube.com/watch?v=d_deamYVCk8

  • ಸೈಕಲ್‍ನಲ್ಲೇ ಪ್ರೊಫೆಸರ್ ಓಡಾಟ-ಇಡೀ ಕಾಲೇಜಿಗೆ ಹಸಿರು ಹೊದಿಸಿದ ಶಿವಮೊಗ್ಗದ ಶಿಕ್ಷಕ

    ಸೈಕಲ್‍ನಲ್ಲೇ ಪ್ರೊಫೆಸರ್ ಓಡಾಟ-ಇಡೀ ಕಾಲೇಜಿಗೆ ಹಸಿರು ಹೊದಿಸಿದ ಶಿವಮೊಗ್ಗದ ಶಿಕ್ಷಕ

    ಶಿವಮೊಗ್ಗ: ಪರಿಸರ ಕಾಳಜಿ, ಕೇವಲ ಭಾಷಣಗಳಿಗೆ ಮಾತ್ರ ಸೀಮಿತವಾಗ್ತಿದೆ. ಆದರೆ ಪರಿಸರ ಉಳಿಸಿ ಅನ್ನೋದನ್ನು ವೈಯಕ್ತಿಕವಾಗಿ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿರುವ ಪ್ರೋಫೆಸರ್ ಒಬ್ಬರು ಕ್ಯಾಂಪಸ್‍ಗೆ ಸೈಕಲ್‍ನಲ್ಲೇ ಬರ್ತಾರೆ. ಅಷ್ಟೇ ಅಲ್ಲ, ಪರಿಸರ ಸ್ನೇಹಿ ಚಟುವಟಿಕೆಗಳಿಂದ ಎಲ್ಲರ ಗಮನ ಸೆಳೆದಿದ್ದಾರೆ.

    ಶಿವಮೊಗ್ಗದ ಜವಾಹರಲಾಲ್ ನೆಹರೂ ರಾಷ್ಟ್ರೀಯ ಎಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಎಲ್.ಕೆ.ಶ್ರೀಪತಿ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಶ್ರೀಪತಿ ಅವರು ದಿನವೂ ಸೈಕಲ್‍ನಲ್ಲೇ ಕಾಲೇಜಿಗೆ ಬರ್ತಾರೆ. 42 ಎಕರೆ ವಿಸ್ತೀರ್ಣದ ಈ ಕ್ಯಾಂಪಸ್‍ನಲ್ಲಿ 1 ಸಾವಿರಕ್ಕೂ ಹೆಚ್ಚು ಹೊಂಗೆ ಸಸಿ ನೆಟ್ಟು ಬೆಳೆಸಿದ್ದಾರೆ. ಇದಲ್ಲದೆ ಸೋಲಾರ್ ಕುಕ್ಕರ್, ಹ್ಯಾಂಡ್ ಪಂಪ್, ಸುಧಾರಿತ ಒಲೆಗಳು, ಕಿಚನ್ ವೆಸ್ಟ್ ಗ್ಯಾಸ್ ಪ್ಲಾಂಟ್, ಬಯೋ ಫಿಲ್ಟರ್, ಸಾಲಿಡ್ ವೇಸ್ಟ್ ಮ್ಯಾನೇಜ್ಮೆಂಟ್ ಇತ್ಯಾದಿ ಘಟಕಗಳನ್ನು ನಿರ್ಮಾಣ ಮಾಡಿದ್ದಾರೆ. ಇವುಗಳಿಂದ ಇಡೀ ಕ್ಯಾಂಪಸ್‍ನಿಂದ ಒಂದೇ ಒಂದು ಚೂರು ತ್ಯಾಜ್ಯ ಹೊರ ಹೋಗುವುದಿಲ್ಲ.

    2011 ರಿಂದ ಪ್ರತಿ ತಿಂಗಳು ಸುಮಾರು 400 ರಿಂದ 500 ಲೀಟರ್ ಬಯೋಡಿಸೆಲ್ ತಯಾರಿಸಿ ಇದೇ ಕಾಲೇಜಿನ ಬಸ್ಸುಗಳಿಗೆ ಬಳಸಲಾಗ್ತಿದೆ. ಕ್ಯಾಂಪಸ್‍ನಲ್ಲೇ ಜೇನು ಕೃಷಿ, ನರ್ಸರಿ ವೈವಿಧ್ಯಮಯ ಮರಗಿಡಗಳ ನಡುವೆ ಇವರ ಪಾಠ-ಪ್ರವಚನಗಳು ನಡೆಯುತ್ತವೆ. ಜೆಎನ್‍ಎನ್‍ಸಿ ಕ್ಯಾಂಪಸ್‍ಗೆ ಹಸಿರು ಹೊದಿಕೆ ಹೊದಿಸಿರುವ, ಪರಿಸರದ ಬಗ್ಗೆ ಬದ್ಧತೆಯಿಂದ ಕೆಲಸ ಮಾಡುವ ಶ್ರೀಪತಿ ನಮ್ಮ ನಡುವಿನ ಅಪರೂಪದ ಶಿಕ್ಷಕರಾಗಿದ್ದಾರೆ.

    ದೇಶ-ವಿದೇಶಗಳಲ್ಲಿ ಅಪಾರ ಶಿಷ್ಯಬಳಗ ಹೊಂದಿರುವ ಶ್ರೀಪತಿ ಇಂದಿಗೂ ಮಲೆನಾಡಿನ ಯಾವುದೇ ರೀತಿಯ ಪರಿಸರ ಹೋರಾಟಗಳಲ್ಲಿ ಅಧಿಕೃತವಾಗಿ ಮಾತನಾಡ್ತಾರೆ ಅನ್ನೋದು ಹೆಮ್ಮೆಯ ವಿಷಯ.

    https://www.youtube.com/watch?v=3KTWnzOdKb0

     

  • ಡಾ.ರಾಜ್‍ಕುಮಾರ್ ಮಣ್ಣಿನ ಪುತ್ಥಳಿ ನಿರ್ಮಾಣ: ಶಿವಣ್ಣ ಅಭಿಮಾನಿಗಳಿಗೆ ಹೇಳಿದ್ದು ಹೀಗೆ!

    ಡಾ.ರಾಜ್‍ಕುಮಾರ್ ಮಣ್ಣಿನ ಪುತ್ಥಳಿ ನಿರ್ಮಾಣ: ಶಿವಣ್ಣ ಅಭಿಮಾನಿಗಳಿಗೆ ಹೇಳಿದ್ದು ಹೀಗೆ!

    ಬೆಂಗಳೂರು: ವರನಟ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ 6 ಅಡಿ ಮಣ್ಣಿನ ಪುತ್ಥಳಿ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಶಿವರಾಜ್‍ಕುಮಾರ್ ಮಾತ್ರ ಪುತ್ಥಳಿ ನಿರ್ಮಾಣ ಮಾಡುವುದು ಬೇಡ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ರಾಜ್ ಅವರ ಮಣ್ಣಿನ ಮೂರ್ತಿ ನಿರ್ಮಾಣ ಮಾಡಿ ಅದಕ್ಕೆ ಪೂಜೆ ಮಾಡಿ ಕೆರೆಗೆ ವಿಸರ್ಜನೆ ಮಾಡಲು ದೊಡ್ಮನೆಯ ಅಭಿಮಾನಿಗಳು ಮುಂದಾಗಿದ್ದಾರೆ. ಇದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಮಣ್ಣಿನ ಪುತ್ಥಳಿಕೆಯನ್ನು ಕೆರೆಯಲ್ಲಿ ವಿಸರ್ಜನೆ ಮಾಡುವುದರಿಂದ ಪರಿಸರ ಮಾಲಿನ್ಯ ಮತ್ತು ಜಲಚರಗಳಿಗೆ ಹಾನಿ ಉಂಟಾಗುತ್ತದೆ ಎಂದು ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸ್ತಿದ್ದಾರೆ.

    ಶಿವಣ್ಣ ಹೇಳಿದ್ದು ಹೀಗೆ:
    ಅಪ್ಪಾಜಿಯ ಬಗ್ಗೆ ಜನರಿಗೆ ತುಂಬಾ ಅಭಿಮಾನವಿದೆ. ಅಪ್ಪಾಜಿ ಬದುಕಿದ್ದೇ ಅಭಿಮಾನಿಗಳಿಗೋಸ್ಕರ, ಅಪ್ಪಾಜಿ ಅವರು ನಾನು ಸತ್ತ ಮೇಲೆ ನನ್ನ ಹೂಳಲು ಜಾಗ ವೇಸ್ಟ್ ಮಾಡಬೇಡಿ. ಆ ಜಾಗವನ್ನು ಯಾರಿಗಾದ್ರೂ ಕೊಡಿ ಎಂದು ಹೇಳಿದ್ದರು. ಅಭಿಮಾನಿಗಳು ಏನೇ ಮಾಡಿದ್ರೂ ಅಪ್ಪಾಜಿಯ ಆಸೆ, ಆಕಾಂಕ್ಷೆಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಮಾಡ್ಬೇಕು. ಅಭಿಮಾನಿಗಳ ಅಭಿಮಾನದಿಂದ ಯಾರಿಗೂ ತೊಂದರೆ ಆಗಬಾರದು. ಗಣಪತಿಯನ್ನು ಪೂಜೆ ಮಾಡಿ, ವಿಸರ್ಜನೆ ಮಾಡ್ತಿವಿ. ಅಪ್ಪಾಜಿಯೇ ಮನೆಯಲ್ಲಿ ಗಣಪತಿಯನ್ನು ಪೂಜೆ ಮಾಡುತ್ತಿದ್ದರು. ಅಪ್ಪಾಜಿಯನ್ನು ಗಣಪತಿ ದೇವರಿಗೆ ಹೋಲಿಕೆ ಮಾಡಬೇಡಿ ಎಂದು ಅಭಿಮಾನಿಗಳಲ್ಲಿ ಶಿವಣ್ಣ ಮನವಿ ಮಾಡಿಕೊಂಡರು.

    ಅಪ್ಪಾಜಿಯ ಪುತ್ಥಳಿ ಮಾಡುವ ಅವಶ್ಯಕತೆಯಿಲ್ಲ. ಈಗಾಗಲೇ ಅಪ್ಪಾಜಿಯ ಪುತ್ಥಳಿಗಳು ಸಾಕಷ್ಟಿವೆ. ಅಪ್ಪಾಜಿಯನ್ನು ಅಭಿಮಾನಿಗಳು ಮನುಷ್ಯನ ರೂಪದಲ್ಲಿ ನೋಡುವುದು ಒಳ್ಳೇಯದು. ದೇವರ ರೂಪದಲ್ಲಿ ಬೇಡ. ಪರಿಸರ ನಮಗೆ ಮುಖ್ಯ. ಹಾಗಾಗಿ ಅದನ್ನು ನಾವು ಕಾಪಾಡಬೇಕು. ದಯವಿಟ್ಟು ಅಪ್ಪಾಜಿಯ ಮಣ್ಣಿನ ಪುತ್ಥಳಿ ನಿರ್ಮಾಣ ಬೇಡ. ಅಪ್ಪಾಜಿಯ ಮೂರ್ತಿ ನಿರ್ಮಾಣ ಮಾಡುವುದರಿಂದ ಇನ್ನೊಬ್ಬರಿಗೆ ತೊಂದರೆ ಆಗುವಂತಿದ್ದರೆ ಅದು ಖಂಡಿತ ಬೇಡ ಎಂದು ಶಿವಣ್ಣ ಹೇಳಿದರು.

    ಈ ರೀತಿ ಪ್ರತಿಮೆಗಳನ್ನು ಮಾಡೋದ್ರಿಂದ ಪರಿಸರ ಹಾಳಾಗುತ್ತೆ. ಉಳಿದ ಕಲಾವಿದರ ಅಭಿಮಾನಿಗಳು ಈ ಟ್ರೆಂಡ್ ಶುರು ಮಾಡಿದ್ರೆ ಪರಿಸರ ನಾಶವಾಗುತ್ತೆ ಅನ್ನೋ ಮಾತುಗಳು ಕೇಳಿ ಬರುತ್ತಿವೆ.

    https://youtu.be/IsuH0NIoeqs