Tag: Environmental Day

  • ಸಸಿ ನೆಟ್ಟು ರಂಜಾನ್ ಆಚರಿಸಿದ ರಾಯಚೂರಿನ ಜನತೆ

    ಸಸಿ ನೆಟ್ಟು ರಂಜಾನ್ ಆಚರಿಸಿದ ರಾಯಚೂರಿನ ಜನತೆ

    ರಾಯಚೂರು: ಇಂದು ಮುಸ್ಲಿಂ ಬಾಂಧವರು ಖುಷಿಯಿಂದ ಆಚರಿಸುವ ರಂಜಾನ್ ಹಬ್ಬದ ಜೊತೆಗೆ ವಿಶ್ವ ಪರಿಸರ ದಿನವೂ ಹೌದು. ಹೀಗಾಗಿ ಈ ವಿಶೇಷ ದಿನದಂದು ರಾಯಚೂರಿನ ಜನತೆ ಸಸಿಗಳನ್ನು ನೆಟ್ಟು ರಂಜಾನ್ ಹಬ್ಬವನ್ನು ಸಂಭ್ರಮಿಸುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ.

    ದೇವದುರ್ಗದ ಜಾಲಹಳ್ಳಿಯಲ್ಲಿ ಸಸಿ ನೆಡುವ ಮೂಲಕ ಪವಿತ್ರ ರಂಜಾನ್ ಹಬ್ಬವನ್ನ ಆಚರಿಸಲಾಯಿತು. ಇಲ್ಲಿನ ಜಮೀಯಾ ಮಸೀದಿಯ ಮೌಲಾನ ಮುತ್ತಾಜ್ ರಾಹೀ ಅವರ ನೇತೃತ್ವದಲ್ಲಿ ಮುಸ್ಲಿಂ ಬಾಂಧವರು ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ತಮ್ಮ ಮಕ್ಕಳನ್ನು ಯಾವ ರೀತಿ ಸಾಕಿ, ಸಾಲಹುತ್ತಾರೋ ಅದೇ ರೀತಿ ಮನೆಯ ಮುಂದೆ ಒಂದು ಗಿಡ ಬೆಳೆಸಬೇಕೆಂದು ನಿರ್ಧರಿಸಿದ್ದು, ಇಂದು ಸಾಂಕೇತಿಕವಾಗಿ ಸಸಿಗಳನ್ನ ನೆಟ್ಟು ಗಿಡ ಬೆಳೆಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

    ಕೇವಲ ಮುಸ್ಲಿಂ ಬಾಂಧವರಷ್ಟೇ ಅಲ್ಲದೆ ಹಿಂದೂಗಳು ಕೂಡ ಅವರ ಜೊತೆ ಕೈಜೋಡಿಸಿ ಪರಿಸರದ ಮೇಲಿರುವ ಕಾಳಜಿ ಮೆರೆದು ಎಲ್ಲರಿಗೂ ಮಾದರಿಯಾಗಿದ್ದಾರೆ. ಹಿಂದೂ-ಮುಸ್ಲಿಂ ಜೊತೆಗೂಡಿ ಪರಿಸರ ಕಾಳಜಿ ಮೆರೆದಿರುವುದು ವಿಶೇಷವಾಗಿತ್ತು.

    ಪವಿತ್ರ ರಂಜಾನ್ ಆಚರಣೆ ಹಿನ್ನೆಲೆ ಮುಸ್ಲಿಂ ಬಾಂಧವರು ನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸಾಮೂಹಿಕ ಪ್ರಾರ್ಥನೆ ಹಿನ್ನೆಲೆ ಮೈದಾನ ಸುತ್ತ ಪೋಲಿಸ್ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಈ ವೇಳೆ ಪ್ರಾರ್ಥನೆಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್, ಎಸ್‍ಪಿ ಡಿ.ಕಿಶೋರ್ ಬಾಬು ಸೇರಿದಂತೆ ಇತರ ಗಣ್ಯರು ಭಾಗವಹಿಸಿದ್ದು, ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ರಂಜಾನ್ ಆಚರಿಸಲಾಗುತ್ತಿದೆ.

  • #SelfiewithSapling- ಪರಿಸರ ದಿನಾಚರಣೆ ಪ್ರಯುಕ್ತ ಹೊಸ ಅಭಿಯಾನಕ್ಕೆ ಜಾವಡೇಕರ್ ಕರೆ

    #SelfiewithSapling- ಪರಿಸರ ದಿನಾಚರಣೆ ಪ್ರಯುಕ್ತ ಹೊಸ ಅಭಿಯಾನಕ್ಕೆ ಜಾವಡೇಕರ್ ಕರೆ

    ನವದೆಹಲಿ: ನಸಿ ನೆಟ್ಟು ಸೆಲ್ಫಿ ಕ್ಲಿಕ್ಕಿಸಿ(#SelfiewithSapling) ನೂತನ ಅಭಿಯಾನಕ್ಕೆ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಇಂದು ಚಾಲನೆ ನೀಡಿದ್ದಾರೆ.

    ಜೂನ್ 5ರಂದು ವಿಶ್ವಾದ್ಯಂತ ಪರಿಸರ ದಿನಾಚರಣೆ ಆಚರಿಸಲಾಗುತ್ತದೆ. ಈ ವಿಶೇಷ ದಿನದ ಅಂಗವಾಗಿ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ #SelfiewithSapling ಗಿಡ ನೆಟ್ಟು ಸೆಲ್ಫಿ ಕ್ಲಿಕ್ಕಿಸಿ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಈ ಮೂಲಕ ನಮ್ಮ ಜೀವ ಉಳಿಸುವ ಪರಿಸರವನ್ನು ನಾವು ಉಳಿಸೋಣ ಎಂದು ಎಲ್ಲರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.

    ಈ ಬಗ್ಗೆ ಟ್ವಿಟ್ಟರ್ ನಲ್ಲಿ ವೀಡಿಯೋವೊಂದನ್ನು ಶೇರ್ ಮಾಡಿರುವ ಅವರು, ಭಾರತೀಯರೆಲ್ಲರೂ ಉತ್ಸಾಹದಿಂದ ಪರಿಸರ ದಿನಾಚರಣೆಯನ್ನು ಆಚರಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆ. ನಾವು ಸೆಲ್ಫಿ ಅಭಿಯಾನಕ್ಕೆ ಕರೆ ನೀಡಿದ್ದು, ಪ್ರತಿಯೊಬ್ಬರೂ ಸಸಿ ನೆಟ್ಟು ಸೆಲ್ಫಿ ತೆಗೆದು ನಿಮ್ಮ ಸಾಮಾಜಿಕ ತಾಣಗಳಲ್ಲಿ #SelfiewithSapling ಹ್ಯಾಶ್ ಟ್ಯಾಗ್ ಜೊತೆ ಪೋಸ್ಟ್ ಮಾಡುವಂತೆ ತಿಳಿಸಿದ್ದಾರೆ.

    ನವದೆಹಲಿಯ ಪರ್ಯಾವರಣ ಭವನದಲ್ಲಿ ಬುಧವಾರ ನಡೆಯಲಿರುವ ಗಿಡ ನೆಟ್ಟು ಸೆಲ್ಫಿ ಕ್ಲಿಕ್ಕಿಸಿ ಅಭಿಯಾನ ಕಾರ್ಯಕ್ರಮದಲ್ಲಿ ಕ್ರಿಕೆಟರ್ ಕಪಿಲ್ ದೇವ್ ಮತ್ತು ನಟ ಜಾಕಿ ಶ್ರಾಫ್ ಭಾಗವಹಿಸಲಿದ್ದಾರೆ ಎಂದು ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ. ಹಾಗೆಯೇ ಕೇಂದ್ರ ಸರ್ಕಾರ `ಸ್ವಚ್ಛ ಗಾಳಿ’ ಯೋಜನೆಗೂ ಇಲ್ಲರೂ ಸಹಕಾರ ನೀಡಬೇಕು. ಪರಿಸರ ರಕ್ಷಣೆಯ ಯೋಜನೆಗಳು ಬರೀ ಸರ್ಕಾರಕ್ಕೆ ಸೀಮಿತವಾದದಲ್ಲ. ಜನರೂ ಕೂಡ ಈ ಬಗ್ಗೆ ಜವಾಬ್ದಾರಿ ವಹಿಸಿಕೊಳ್ಳಬೇಕು. ಪರಿಸರಕ್ಕೆ ಸಂಬಂಧಿಸಿದ ಯೋಜನೆಗಳು ಜನರ ಯೋಜನೆ ಎಂದು ಮೋದಿ ಸರ್ಕಾರ ನಂಬುತ್ತದೆ. ಹೀಗಾಗಿ ಕೇವಲ ಈ ಯೋಜನೆಗೆ ಮಾತ್ರವಲ್ಲ ಮುಂದೆ ಬರುವ ಸರ್ಕಾರದ ಪ್ರತಿ ಯೋಜನೆಗೂ ಜನರು ಕೈಜೋಡಿಸುತ್ತೀರಿ ಎಂದು ನಾವು ಆಶಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಈ ಬಾರಿ ವಿಶ್ವಸಂಸ್ಥೆ `ಸ್ವಚ್ಛ ಗಾಳಿ’ ಅಭಿಯಾನವನ್ನು ಆರಂಭಿಸಿದೆ. ಹೀಗಾಗಿ ನಾವೆಲ್ಲರು ಪರಿಸರವನ್ನು ಉಳಿಸುವ ಕೆಲಸ ಮಾಡಬೇಕು. ಈಗಾಗಲೇ ಕೇಂದ್ರ ಸರ್ಕಾರ ಸ್ಚಚ್ಛ ಗಾಳಿ ಮಿಷನ್‍ಗೆ ಚಾಲನೆ ನೀಡಿದೆ. ಹೀಗಾಗಿ ನಾವು ಗಾಳಿಯನ್ನು ಸ್ವಚ್ಛಗೊಳಿಸಲು ಸಸಿಗಳನ್ನು, ಗಿಡಗಳನ್ನು ಬೆಳೆಸಬೇಕು. ಆದ್ದರಿಂದ ಸಸಿಗಳನ್ನು ನೆಟ್ಟು ಅದರ ಆರೈಕೆ ಮಾಡುವುದು ಮುಖ್ಯ ಎಂದು ತಿಳಿಸಿದರು.

  • ಸಸಿಗಳನ್ನು ನೆಟ್ಟು ಬ್ಯಾಂಡ್ ಕಟ್ಟಿ ಕಲಬುರಗಿಯಲ್ಲಿ ಫ್ರೆಂಡ್‍ಶಿಪ್ ಡೇ ಆಚರಣೆ

    ಸಸಿಗಳನ್ನು ನೆಟ್ಟು ಬ್ಯಾಂಡ್ ಕಟ್ಟಿ ಕಲಬುರಗಿಯಲ್ಲಿ ಫ್ರೆಂಡ್‍ಶಿಪ್ ಡೇ ಆಚರಣೆ

    ಕಲಬುರಗಿ: ಫ್ರೆಂಡ್‍ಶಿಪ್ ಡೇ ಹಿನ್ನೆಲೆಯಲ್ಲಿ ‘ನಮ್ಮ ಸಂಕಲ್ಪ ಫೌಂಡೇಶನ್’ ಈ ದಿನವನ್ನು ಪರಿಸರ ದಿನವನ್ನಾಗಿ ಆಚರಿಸಿ, ಸಸಿಗಳನ್ನು ನೆಟ್ಟು, ಪರಿಸರ ಕಾಳಜಿ ಮೆರೆದಿದೆ.

    ಇಂದು ದೇಶದ ಎಲ್ಲೆಡೆ ಫ್ರೆಂಡ್‍ಶಿಪ್ ಡೇ ಯನ್ನು ಆಚರಿಸಲಾಗುತ್ತಿದೆ. ಹೀಗಾಗಿ ಸ್ನೇಹಿತರಿಬ್ಬರು ಪರಸ್ಪರ ಬ್ಯಾಂಡ್‍ಗಳನ್ನು ಕಟ್ಟಿ, ಸಿಹಿ ಕೊಟ್ಟು ಶುಭಾಶಯ ವಿನಿಮಯ ಮಾಡಿಕೊಳ್ಳೊದು ಕಾಮನ್. ಇದನ್ನು ಮೀರಿ ನಮ್ಮ ಸಂಕಲ್ಪ ಫೌಂಡೇಶನ್ ಸದಸ್ಯರು ಸಸಿಗಳನ್ನು ನೆಟ್ಟು ಫ್ರೆಂಡ್‍ಶಿಪ್ ಬ್ಯಾಂಡ್‍ಗಳನ್ನು ಕಟ್ಟಿ ಪರಿಸರ ಸ್ನೇಹವನ್ನು ವ್ಯಕ್ತಪಡಿಸಿದ್ದಾರೆ.

    ಇಲ್ಲಿನ ವಿಠಲ ನಗರದ ಹನುಮಾನ ದೇವಸ್ಥಾನದ ಮಹಾನಗರ ಪಾಲಿಕೆ ಉದ್ಯಾನದಲ್ಲಿ ‘ನಮ್ಮ ಸಂಕಲ್ಪ ಫೌಂಡೇಶನ್’ ಸ್ನೇಹಿತರ ದಿನಾಚರಣೆ ಆಯೋಜಿಸಿತ್ತು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ಸಸಿಗಳನ್ನು ನೆಟ್ಟು ಅವುಗಳಿಗೆ ನೀರು ಉಣಿಸುವುದರ ಮೂಲಕ ಗಿಡ ಮರಗಳನ್ನ ತಮ್ಮ ಸ್ನೇಹಿತರಂತೆ ನೋಡಿ ಅವುಗಳನ್ನ ಪ್ರತಿಯೊಬ್ಬರ ಪೋಷಿಸುವಂತೆ ಕರೆ ನೀಡಿದರು.

    ಇತ್ತೀಚಿನ ದಿನಗಳಲ್ಲಿ ಪರಿಸರದ ಬಗ್ಗೆ ಬಹುತೇಕರು ಕಾಳಜಿ ವಹಿಸುತ್ತಿಲ್ಲ. ಹೀಗಾಗಿ ಅರಣ್ಯ ಪ್ರದೇಶ ಕಡಿಮೆಯಾಗುತ್ತಿದೆ. ಸ್ವಚ್ಛಂದವಾಗಿ ಉಸಿರಾಡಲು ಕಷ್ಟವಾಗುತ್ತಿರುವ ದಿನಗಳಲ್ಲಿ ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ಮುಂದಾಗಬೇಕು. ‘ನಮ್ಮ ಸಂಕಲ್ಪ ಫೌಂಡೇಶನ್’ ರಕ್ತ ದಾನಿಗಳ ಗುಂಪಾಗಿದ್ದು, ಕಲಬುರಗಿ ಸೇರಿದಂತೆ ವಿವಿಧೆಡೆ ಉಚಿತವಾಗಿ ರಕ್ತವನ್ನು ದಾನ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಕಾರ್ಯಕ್ರಮದ ಬಳಿಕ ಪಾಲಿಕೆ ವ್ಯಾಪ್ತಿಯ ಉದ್ಯಾನದಲ್ಲಿ ವಿವಿಧ ಬಗೆಯ ಸಸಿಗಳನ್ನು ನೆಟ್ಟು ಅವುಗಳಿಗೆ ಬ್ಯಾಂಡ್‍ಗಳನ್ನು ಕಟ್ಟಲಾಯಿತು.