Tag: Environmentalist

  • ರಾಜ್ಯಪ್ರಶಸ್ತಿ ಪುರಸ್ಕೃತ, ಪರಿಸರ ಪ್ರೇಮಿ ಎಂದೇ ಫೇಮಸ್ ಆಗಿದ್ದ ಸಾಲುಮರದ ವೀರಾಚಾರಿ ಆತ್ಮಹತ್ಯೆಗೆ ಶರಣು

    ರಾಜ್ಯಪ್ರಶಸ್ತಿ ಪುರಸ್ಕೃತ, ಪರಿಸರ ಪ್ರೇಮಿ ಎಂದೇ ಫೇಮಸ್ ಆಗಿದ್ದ ಸಾಲುಮರದ ವೀರಾಚಾರಿ ಆತ್ಮಹತ್ಯೆಗೆ ಶರಣು

    ದಾವಣಗೆರೆ: ಸಾಲುಮರದ ವೀರಾಚಾರಿ, ಪರಿಸರ ಪ್ರೇಮಿ (Environmental Lover) ಎಂದೇ ಪ್ರಸಿದ್ಧಿ ಪಡೆದ ಮಿಟ್ಲಕಟ್ಟೆ ವೀರಾಚಾರಿ (Mitlakatte Veerachari) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ರಾಜ್ಯ ಪ್ರಶಸ್ತಿ ವಿಜೇತ, ಪಬ್ಲಿಕ್ ಹೀರೋ ಆಗಿದ್ದ ಸಾಲುಮರದ ವೀರಾಚಾರಿ ಮಧ್ಯರಾತ್ರಿ ಮರಕ್ಕೆ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾರೆ. 3,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿ ದಾವಣಗೆರೆ ಜಿಲ್ಲೆಗೆ ವೀರಾಚಾರಿ ಚಿರಪರಿಚಿತರಾಗಿದ್ದರು. ಸಾಲುಮರಗಳನ್ನು ಬೆಳೆಸಿದ್ದ ಪರಿಸರ ಪ್ರೇಮಿ ಮಿಟ್ಲಕಟ್ಟೆ ಅವರಿಗೆ ಈ ಹಿಂದೆ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು (State Award Winner) ಕೂಡ ನೀಡಿತ್ತು. ಇದನ್ನೂ ಓದಿ: ದಕ್ಷ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವು ಕೇಸ್ – ಸಹಜ ಸಾವು ಎಂದ ಸಿಬಿಐ ವರದಿ ತಿರಸ್ಕೃತ

    ಮಿಟ್ಲಗಟ್ಟೆ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ (Fair Price Shop) ಬಡವರಿಗೆ ಸೂಕ್ತವಾಗಿ ಅಕ್ಕಿ ವಿತರಣೆಯಾಗುತ್ತಿಲ್ಲ ಎಂದು ನ್ಯಾಯಬೆಲೆ ಅಕ್ರಮದ ವಿರುದ್ಧ ನಿರಂತರವಾಗಿ ಕಳೆದ ಒಂದು ವರ್ಷದಿಂದ ವೀರಾಚಾರಿ ಅವರು ಹೋರಾಟ ನಡೆಸುತ್ತಿದ್ದರು. ಆದರೆ ಸೋಮವಾರ ಇದೇ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನ್ಯಾಯ ಬೆಲೆ ಅಂಗಡಿ ರದ್ದು ಮಾಡಬೇಕೋ? ಬೇಡವೇ? ಎಂಬ ಬಗ್ಗೆ ಚರ್ಚೆ ನಡೆದಿತ್ತು.

    ಈ ಹಿಂದೆ ಮಿಟ್ಲಕಟ್ಟೆ ವೀರಾಚಾರಿ ಅವರು, ನ್ಯಾಯಾಲಯದಲ್ಲಿ ನ್ಯಾಯ ಸಿಗದಿದ್ದರೆ, ಜನರಲ್ಲಿ ನ್ಯಾಯ ಸಿಗದಿದ್ದರೆ, ದೇವರಲ್ಲಿ ನ್ಯಾಯ ಸಿಗದಿದ್ದರೆ ನೇಣಿಗೆ ಶರಣಾಗುವುದಾಗಿ ವಾಗ್ದಾನ ಮಾಡಿದ್ದರು. ಇದೀಗ ವಾಗ್ದಾನದಂತೆ ಸೋಮವಾರ ರಾತ್ರಿ 2 ಗಂಟೆಗೆ ನೇಣಿಗೆ ಶರಣಾಗಿದ್ದಾರೆ.ಇದನ್ನೂ ಓದಿ: ದಕ್ಷ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವು ಕೇಸ್ – ಸಹಜ ಸಾವು ಎಂದ ಸಿಬಿಐ ವರದಿ ತಿರಸ್ಕೃತ

    ಇದೀಗ ಮಿಟ್ಲಕಟ್ಟೆ ಗ್ರಾಮದ ಯಾರು ಕೂಡ ಬರದಂತೆ ರಸ್ತೆಗಳನ್ನು ಗ್ರಾಮಸ್ಥರು ಬಂದ್ ಮಾಡಿದ್ದಾರೆ. ಜಿಲ್ಲಾಧಿಕಾರಿ ಆಹಾರ ಇಲಾಖೆ ಅಧಿಕಾರಿಗಳು ಬರುವರೆಗೂ ಶವವನ್ನು ಕುಣಿಕೆಯಿಂದ ಕೆಳಗಿಸದಂತೆ ಪಟ್ಟುಹಿಡಿದಿದ್ದಾರೆ. ಇದನ್ನೂ ಓದಿ : ಬ್ರಿಟನ್‌ನಲ್ಲಿ ಬುಗಿಲೆದ್ದ ಹಿಂದೂ, ಮುಸ್ಲಿಂ ಗಲಾಟೆ – ಹಿಂದೂ ದೇಗುಲಗಳ ಧ್ವಂಸಕ್ಕೆ ಭಾರತ ಖಂಡನೆ

    ನ್ಯಾಯಬೆಲೆ ಅಂಗಡಿ ಮಾಲೀಕ ಸಿದ್ದರಾಮಪ್ಪ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಇದೀಗ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಗ್ರಾಮಸ್ಥರನ್ನು ನ್ಯಾಯಬೆಲೆ ಅಂಗಡಿಯಿಂದ ಕಳುಹಿಸಿ, ಗ್ರಾಮದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್‌ಗೊಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪರಿಷತ್‍ನಲ್ಲಿ ನಿದ್ರೆ ಮಾಡೋರಿಗೆ ಹಾಡು ಹೇಳಿ ಎಬ್ಬಿಸಿದ ಜೆಡಿಎಸ್ ಸದಸ್ಯ ಭೋಜೇಗೌಡ

    ಪರಿಷತ್‍ನಲ್ಲಿ ನಿದ್ರೆ ಮಾಡೋರಿಗೆ ಹಾಡು ಹೇಳಿ ಎಬ್ಬಿಸಿದ ಜೆಡಿಎಸ್ ಸದಸ್ಯ ಭೋಜೇಗೌಡ

    -ಪರಿಸರ ವಾದಿಗಳ ವಿರುದ್ಧ ಕಿಡಿ

    ಬೆಂಗಳೂರು: ವಿಧಾನಪರಿಷತ್‍ನಲ್ಲಿ ಚರ್ಚೆಯ ಸಂದರ್ಭದಲ್ಲಿ ನಿದ್ದೆ ಮಾಡುತ್ತಿದ್ದವರನ್ನು ನೋಡಿ ವಿಧಾನಪರಿಷತ್ ಜೆಡಿಎಸ್ ಸದಸ್ಯ ಭೋಜೇಗೌಡರು ಏರು ಕಂಠದಲ್ಲಿ ದಾಸರ ಪದ ಹಾಡುವ ಮೂಲಕ ನಿದ್ದೆಯಿಂದ ಎಬ್ಬಿಸುವ ಕೆಲಸ ಮಾಡಿದ್ದಾರೆ.

    ನಿಯಮ 330 ಅಡಿ ನಡೆಯುತ್ತಿದ್ದ ಚರ್ಚೆ ವೇಳೆ ಫಾರೂಕ್ ಅವರೊಂದಿಗೆ ಮಾತನಾಡುತ್ತಿದ್ದ ಭೋಜೇಗೌಡರು, ಇದ್ದಕ್ಕಿದ್ದಂತೆ ಗಾಯನ ಶುರುಮಾಡಿಕೊಂಡರು. ರಾಗವಾಗಿ ಹಾಡು ಶುರು ಮಾಡಿದ ಭೋಜೇಗೌಡರು ಏರು ಕಂಠದಲ್ಲಿ ದಾಸರ ಪದ ಹಾಡಿ, ಬಹಳ ಜನ ನಿದ್ದೆ ಮಾಡ್ತಿದ್ರು ಅದಕ್ಕೆ ಹಾಡಿದೆ ಎಂದು ಸಮಜಾಯಿಷಿ ನೀಡಿದರು. ಇದನ್ನೂ ಓದಿ: ವಿಮಾನದ ಟಿಕೆಟ್‍ಗಿಂತ ಬಸ್‍ಗಳ ಟಿಕೆಟ್ ದರ ಜಾಸ್ತಿ ಇದೆ: ರಮೇಶ್ ಕುಮಾರ್

    88 ಲಕ್ಷ ಜೀವರಾಶಿಗಳ ದಾಟಿ ಬಂದ ಈ ಶರೀರ, ತಾನಲ್ಲ ತನ್ನದಲ್ಲ ಎಂದು ದಾಸರ ಪದ ಭೋಜೇಗೌಡರು ಹಾಡುತ್ತಿದ್ದಂತೆ, ಬಿಜೆಪಿ ಸದಸ್ಯರಿಂದ ಒನ್ಸ್ ಮೋರ್ ಎಂಬ ಬೇಡಿಕೆ ಕೇಳಿಬಂತು. ಈ ವೇಳೆ ಮತ್ತೆ ರಾಗವಾಗಿ ಕೀರ್ತನೆ ಹಾಡಲು ಭೋಜೇಗೌಡರು ಆರಂಭಿಸಿದರು. ಈ ಸಂದರ್ಭ ಮತ್ತೆ ಶುರು ಮಾಡಬೇಡಿ ಎಂದು ಸಭಾಪತಿ ಹೊರಟ್ಟಿ ತಮಾಷೆ ಮಾಡಿದರು.

    ಮಂಗಳೂರು, ಕರಾವಳಿ, ಉಳ್ಳಾಲ ಸುರತ್ಕಲ್ ಭಾಗದಲ್ಲಿ ಅಸಮರ್ಪಕ ಒಳಚರಂಡಿಯಿಂದ ತೀವ್ರ ಸಮಸ್ಯೆ ಇದೆ ಎಂದು ತಮ್ಮ ಭಾಗದ ಸಮಸ್ಯೆಗಳನ್ನು ಪರಿಷತ್‍ನಲ್ಲಿ ಮಂಡಿಸಿದರು. ಇದಲ್ಲದೆ ಮಂಗಳೂರು, ಕರಾವಳಿ ಪ್ರದೇಶಗಳಲ್ಲಿ ಸಾಕಷ್ಟು ಕೈಗಾರಿಕಾ ಪ್ರದೇಶಗಳಿವೆ ಇದರಿಂದ ಪರಿಸರ ನಾಶವಾಗುತ್ತಿದೆ. ಈ ಬಗ್ಗೆ ಮಾತನಾಡದೆ ಸುಮ್ಮನಿರುವ ಇವರೆಲ್ಲ ಪರಿಸರ ವಾದಿಗಳಲ್ಲ, ಪರಿಸರ ವ್ಯಾಧಿಗಳು. ನನ್ನ ಬಗ್ಗೆ ಏನು ಬೇಕಾದ್ರೂ ಬರೀರಿ, ಪರಿಸರ ವ್ಯಾಧಿಗಳಿಂದಾಗಿಯೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ ಎಂದು ಪರಿಸರ ವಾದಿಗಳ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಬಸ್ಸಿನಲ್ಲಿ ‘ಗೀತ ಗೋವಿಂದಂ’ ಸೀನ್ – ನಿದ್ದೆಗೆ ಜಾರಿದ್ದ ಯುವತಿಗೆ ಮುತ್ತಿಟ್ಟ ಅಪರಿಚಿತ ಯುವಕ!

  • 13 ವರ್ಷಗಳಲ್ಲಿ 1 ಲಕ್ಷ ಗಿಡನೆಟ್ಟ ಪರಿಸರ ಪ್ರೇಮಿ-ಜೀತ್ ಮಿಲನ್ ನಮ್ಮ ಪಬ್ಲಿಕ್ ಹೀರೋ

    13 ವರ್ಷಗಳಲ್ಲಿ 1 ಲಕ್ಷ ಗಿಡನೆಟ್ಟ ಪರಿಸರ ಪ್ರೇಮಿ-ಜೀತ್ ಮಿಲನ್ ನಮ್ಮ ಪಬ್ಲಿಕ್ ಹೀರೋ

    ಮಂಗಳೂರು: ಇವತ್ತಿನ ನಮ್ಮ ಪಬ್ಲಿಕ್ ಹೀರೋ ಸ್ವಲ್ಪ ಡಿಫೆರೆಂಟ್ ಕಾಕ್‍ಟೈಲ್ ಪಾರ್ಟಿ ಆಯೋಜನೆ ಮಾಡುವ ಇವರು ಸದಿಲ್ಲದೇ ಹಸಿರು ಕ್ರಾಂತಿಯನ್ನು ಮಾಡುತ್ತಿದ್ದಾರೆ.

    ಮಂಗಳೂರಿನ ಮೋರ್ಗನ್ಸ್ ಗೇಟ್ ನಿವಾಸಿ ಜೀತ್ ಮಿಲನ್ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಸ್ಮಶಾನದಲ್ಲಿ ಗಿಡ ನೆಟ್ಟರೆ ಯಾರೂ ಅಡ್ಡಿ ಮಾಡಲ್ಲ. ಗಿಡಗಳೂ ಚೆನ್ನಾಗಿ ಬೆಳೀತಾವೆ ಅನ್ನೋ ಉದ್ದೇಶದಿಂದ ಗಿಡಗಳನ್ನು ಹಚ್ಚಿದ್ದಾರೆ. ಹೆದ್ದಾರಿ ಬದಿ ಸೇರಿದಂತೆ ಖಾಲಿ ಇರುವ ಜಾಗದಲ್ಲಿ ಹಸಿರ ರಂಗೋಲಿ ಬಿಡಿಸಿದ್ದಾರೆ. ಕಳೆದ 13 ವರ್ಷಗಳಲ್ಲಿ ಸುಮಾರು 1 ಲಕ್ಷಕ್ಕಿಂತಲೂ ಹೆಚ್ಚು ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದಾರೆ.

    ಜೀತ್ ಅವರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಪ್ರತಿವರ್ಷ ತಮ್ಮ ಮಕ್ಕಳ ಶಾಲಾ ಪ್ರಾರಂಭೋತ್ಸವ ದಿನದಂದು ಇಡೀ ಕುಟುಂಬ ಗಿಡ ನೆಡುತ್ತದೆ. ಮೊದಲು ಅರಣ್ಯ ಇಲಾಖೆಯವರು ದುಡ್ಡು ಕೊಟ್ಟರೆ ಸಸಿ ಕೊಡ್ತಿದ್ರು. ಆದ್ರೀಗ ಇವರ ಸಮಾಜ ಸೇವೆ ನೋಡಿ, ಉಚಿತವಾಗಿ ಗಿಡ ಕೊಡ್ತಿದೆ. ಇವರಿಗೆ ಒಂದಿಷ್ಟು ಸ್ನೇಹಿತರೂ ಸಾಥ್ ನೀಡಿದ್ದಾರೆ. ಯಾವುದೇ ಪ್ರಚಾರದ ಹಂಗಿಲ್ಲದೆ ನಿಸ್ವಾರ್ಥವಾಗಿ ಬಾನೆತ್ತರಕ್ಕೆ ಮರ ಗಿಡ ಬೆಳೆಸುತ್ತಿದ್ದಾರೆ.

    https://www.youtube.com/watch?v=N4y-gkfHJS8

     

     

  • 3 ಲಕ್ಷಕ್ಕೂ ಅಧಿಕ ಗಿಡಗಳನ್ನು ನೆಟ್ಟಿದ್ದ ಪಬ್ಲಿಕ್ ಹೀರೋ ಲಕ್ಷ್ಮಣ್ ಇನ್ನಿಲ್ಲ

    3 ಲಕ್ಷಕ್ಕೂ ಅಧಿಕ ಗಿಡಗಳನ್ನು ನೆಟ್ಟಿದ್ದ ಪಬ್ಲಿಕ್ ಹೀರೋ ಲಕ್ಷ್ಮಣ್ ಇನ್ನಿಲ್ಲ

    ಬೆಂಗಳೂರು: ಶಿಕ್ಷಕ, ರಂಗಕರ್ಮಿ ಪರಿಸರವಾದಿಯಾಗಿ ಗುರಿತಿಸಿಕೊಂಡಿದ್ದ ಪಬ್ಲಿಕ್ ಹೀರೋ ಲಕ್ಷ್ಮಣ್ ವಿಧಿವಶರಾಗಿದ್ದಾರೆ.

    ಬ್ರೇನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮಣ್, ಮಂಗಳವಾರ ರಾತ್ರಿ ಉತ್ತರಹಳ್ಳಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೂರು ಲಕ್ಷಕ್ಕೂ ಅಧಿಕ ಗಿಡಗಳನ್ನು ನೆಡುವ ಮೂಲಕ ಲಕ್ಷ್ಮಣ್, ಪಬ್ಲಿಕ್ ಹೀರೋ ಕೂಡ ಆಗಿದ್ದರು.

    ಲಕ್ಷ್ಮಣ್ ಅವರು 2013 ರಲ್ಲಿ ಉತ್ತಮ ಶಿಕ್ಷಕ ಎಂದು ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದರು. 2015ರಲ್ಲಿ ರಾಜ್ಯ ಸರ್ಕಾರದ ಪರಿಸರ ಪ್ರಶಸ್ತಿ ಸಹ ಇವರಿಗೆ ಲಭಿಸಿತ್ತು. ಪರಿಸರಕ್ಕೆ ಸಂಬಂಧಿಸಿದ ಸಾಕ್ಷ್ಯ ಚಿತ್ರ, ನಾಟಕ ಅಲ್ಲದೇ ಮಕ್ಕಳ ಸಿನಿಮಾ ಕೂಡ ನಿರ್ದೇಶನ ಮಾಡಿದ್ದರು.

    https://www.youtube.com/watch?v=b_gomj5VZ8k

  • ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು

    ಬೆಂಗಳೂರು: ರಾಜ್ಯದ ಖ್ಯಾತ ಪರಿಸರ ಪ್ರೇಮಿ ಸಾಲು ಮರದ ತಿಮ್ಮಕ್ಕ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    105 ವರ್ಷ ವಯಸ್ಸಾಗಿರೋ ಇವರಿಗೆ ಉಸಿರಾಟದ ತೊಂದರೆಯಿತ್ತು. ಹೀಗಾಗಿ ಅವರನ್ನು ಜಯನಗರದ ಅಪ್ಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವು ತಿಂಗಳ ಹಿಂದಷ್ಟೇ ಅನಾರೋಗ್ಯ ಸಮಸ್ಯೆಯಿಂದಾಗಿ ಚಿಕಿತ್ಸೆ ಪಡೆದು ಡಿಸ್ಜಾರ್ಜ್ ಆಗಿದ್ದರು.

    ಇದೀಗ ಮತ್ತೆ ಉಸಿರಾಟದ ತೊಂದರೆ ಹೆಚ್ಚಾಗಿ ಕಂಡುಬಂದಿದ್ದು, ಇದೇ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.