Tag: european leaders

  • ಪುಟಿನ್‌-ಝೆಲೆನ್ಸ್ಕಿ ಮೊದಲು ನೇರ ಮಾತುಕತೆ ನಡೆಸಬೇಕು – ಬ್ರೋಕರ್‌ ಕೆಲಸದಿಂದ ಹಿಂದೆ ಸರಿಯಲು ಟ್ರಂಪ್‌ ನಿರ್ಧಾರ

    ಪುಟಿನ್‌-ಝೆಲೆನ್ಸ್ಕಿ ಮೊದಲು ನೇರ ಮಾತುಕತೆ ನಡೆಸಬೇಕು – ಬ್ರೋಕರ್‌ ಕೆಲಸದಿಂದ ಹಿಂದೆ ಸರಿಯಲು ಟ್ರಂಪ್‌ ನಿರ್ಧಾರ

    ವಾಷಿಂಗ್ಟನ್‌: ರಷ್ಯಾ-ಉಕ್ರೇನ್‌ ಯುದ್ಧ (Russia Ukraine War) ಕೊನೆಗೊಳಿಸಲು ಶತಪ್ರಯತ್ನ ನಡೆಸುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಈಗ‌ ಇದ್ದಕ್ಕಿದ್ದಂತೆ ಯೂಟರ್ನ್‌ ಹೊಡೆದಿದ್ದಾರೆ. ಯುದ್ಧ ಕೊನೆಗೊಳಿಸುವ ಪ್ರಯತ್ನದಲ್ಲಿ ನೇರ ಹಸ್ತಕ್ಷೇಪದಿಂದ ಹಿಂದೆ ಸರಿಯಲು ಟ್ರಂಪ್‌ ನಿರ್ಧರಿಸಿದ್ದಾರೆ. ಅಮೆರಿಕದ ಮಧ್ಯಸ್ಥಿಕೆ ಇಲ್ಲದೇ ಪುಟಿನ್‌ – ಝಲೆನ್ಸ್ಕಿ ಮೊದಲು ಮುಖಾಮುಖಿ ಭೇಟಿಯಾಗಬೇಕು, ನೇರ ಮಾತುಕತೆ ನಡೆಸಬೇಕು ಎಂದು ಹೇಳಿದ್ದಾರೆ.

    ಶ್ವೇತಭವನದ (White House) ಆಡಳಿತಾಧಿಕಾರಿಗಳು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಕುರಿತು ಮಾತನಾಡಿದ್ದಾರೆ. ಮುಂದಿನ ಹಂತದ ಶಾಂತಿ ಮಾತುಕತೆಗಳಲ್ಲಿ ಟ್ರಂಪ್‌ ನೇರವಾಗಿ ಭಾಗಿಯಾಗದಿರಲು ನಿರ್ಧರಿಸಿದ್ದಾರೆ. ಬದಲಾಗಿ ರಷ್ಯಾ ಅಧ್ಯಕ್ಷ ಪುಟಿನ್‌, ಉಕ್ರೇನ್‌ ಅಧ್ಯಕ್ಷ ಝಲೆನ್ಸ್ಕಿ (Volodymyr Zelenskyy) ಮೊದಲು ಪರಸ್ಪರ ಭೇಟಿಯಾಗಬೇಕೆಂದು ಅವರು ಬಯಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾ ಮೇಲೆ ಒತ್ತಡ ಹೇರಲು ಭಾರತದ ಮೇಲೆ ಸುಂಕ – ವೈಟ್‌ ಹೌಸ್‌

    ಟ್ರಂಪ್‌ ದೃಷ್ಟಿಕೋನದಲ್ಲಿ ಯುದ್ಧ ಕೊನೆಗೊಳಿಸುವ ಮುಂದಿನ ಹೆಜ್ಜೆ ಪುಟಿನ್‌, ಝಲೆನ್ಸ್ಕಿ ನಡುವಿನ ದ್ವಿಪಕ್ಷೀಯ ಸಭೆ. ಈ ಸಭೆ ನಿಜವಾಗ್ಲೂ ನಡೆಯುತ್ತದೆಯೋ, ಇಲ್ಲವೋ? ಅನ್ನೋದು ಖಚಿತವಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲಿಸಲು ಮುಂದಾದ ಟ್ರಂಪ್‌ಗೆ ಯುರೋಪಿಯನ್ ಒಕ್ಕೂಟ ಬೆಂಬಲ – ನಾಳೆಯ ಸಭೆ ಮೇಲೆ ನಿಗಾ

    ಟ್ರಂಪ್‌ ಉತ್ತರವೇನು?
    ರೇಡಿಯೋವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಖುದ್ದು ಮಾತನಾಡಿದ ಟ್ರಂಪ್‌, ಇಬ್ಬರೂ ಮಾತುಕತೆಗೆ ತಯಾರಿ ನಡೆಸುತ್ತಿದ್ದಾರೆ. ದ್ವಿಪಕ್ಷೀಯ ಸಭೆಯಲ್ಲಿ ಏನಾಗುತ್ತದೆ ಎಂಬುದನ್ನು ನಾನು ಕಾದು ನೋಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಚೀನಾವನ್ನ ಎದುರಿಸಬೇಕಾದ್ರೆ ಭಾರತ-ಅಮೆರಿಕ ಸಂಬಂಧವನ್ನ ಹಳಿಗೆ ತನ್ನಿ – ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಮತ್ತೆ ಎಚ್ಚರಿಕೆ

    ಶ್ವೇತಭವನದಲ್ಲಿ ಏನಾಗಿತ್ತು?
    ಇತ್ತೀಚೆಗಷ್ಟೇ ಶ್ವೇತಭವನದಲ್ಲಿ ಉಕ್ರೇನ್‌ ಮತ್ತು ಯುರೋಪಿಯನ್‌ ಒಕ್ಕೂಟದ ನಾಯಕರ ಜೊತೆ ಟ್ರಂಪ್‌ ಸಭೆ ನಡೆಸಿದ್ದರು. ಸಭೆ ಮುಗಿದ ಬಳಿಕ ಟ್ರಂಪ್‌ ಈ ಎಲ್ಲಾ ನಾಯಕರನ್ನು ತನ್ನ ಓವಲ್ ಕಚೇರಿಯ ಕ್ಯಾಬಿನ್‌ಗೆ ಕರೆಸಿ ರಷ್ಯಾದ ಅಧ್ಯಕ್ಷ ಪುಟಿನ್‌ಗೆ ನೇರವಾಗಿ ಕರೆ ಮಾಡಿದ್ದರು. ರಷ್ಯಾ ಮತ್ತು ಉಕ್ರೇನಿಯನ್ ನಿಯೋಗಗಳ ನಡುವೆ ನೇರ ಮಾತುಕತೆಗಳನ್ನು ಮುಂದುವರಿಸಲು ಪುಟಿನ್‌ಗೆ ಕರೆ ನೀಡಿದ್ದರು. ಇಬ್ಬರು ನಾಯಕರ ಮಧ್ಯೆ ಒಟ್ಟು 40 ನಿಮಿಷಗಳ ಮಾತುಕತೆ ನಡೆದಿತ್ತು. ಈ ವೇಳೆ ಇತ್ತೀಚಿನ ಅಲಾಸ್ಕಾ ಭೇಟಿಯ ಸಮಯದಲ್ಲಿ ಟ್ರಂಪ್ ನೀಡಿದ ಆತಿಥ್ಯ ಮತ್ತು ಅಲಾಸ್ಕಾದಲ್ಲಿ ನಡೆದ ಶೃಂಗಸಭೆಯಲ್ಲಿ ಸಾಧಿಸಿದ ಪ್ರಗತಿಗೆ ಪುಟಿನ್‌ ಟ್ರಂಪ್‌ಗೆ ಧನ್ಯವಾದ ಹೇಳಿದರು. ಇದನ್ನೂ ಓದಿ: ಝೆಲೆನ್‌ಸ್ಕಿ, EU ನಾಯಕರನ್ನು ಕಚೇರಿಗೆ ಕರೆಸಿ ಪುಟಿನ್‌ಗೆ ಕಾಲ್‌ – ಬ್ರೋಕರ್‌ ಕೆಲ್ಸ ಮಾಡಿ ಯುದ್ಧ ಕೊನೆಯಾಗಲಿದೆ ಎಂದ ಟ್ರಂಪ್‌

  • ಝೆಲೆನ್‌ಸ್ಕಿ, EU ನಾಯಕರನ್ನು ಕಚೇರಿಗೆ ಕರೆಸಿ ಪುಟಿನ್‌ಗೆ ಕಾಲ್‌ – ಬ್ರೋಕರ್‌ ಕೆಲ್ಸ ಮಾಡಿ ಯುದ್ಧ ಕೊನೆಯಾಗಲಿದೆ ಎಂದ ಟ್ರಂಪ್‌

    ಝೆಲೆನ್‌ಸ್ಕಿ, EU ನಾಯಕರನ್ನು ಕಚೇರಿಗೆ ಕರೆಸಿ ಪುಟಿನ್‌ಗೆ ಕಾಲ್‌ – ಬ್ರೋಕರ್‌ ಕೆಲ್ಸ ಮಾಡಿ ಯುದ್ಧ ಕೊನೆಯಾಗಲಿದೆ ಎಂದ ಟ್ರಂಪ್‌

    ವಾಷಿಂಗ್ಟನ್‌: ಉಕ್ರೇನ್‌- ರಷ್ಯಾ ಯುದ್ಧ ಕೊನೆಗೊಳಿಸಲು ಪ್ರಯತ್ನ ನಡೆಸುತ್ತಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಈಗ ವ್ಲಾದಿಮಿರ್‌ ಪುಟಿನ್‌ ಮತ್ತು ಝೆಲೆನ್‌ಸ್ಕಿ ಮಾತುಕತೆಗೆ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದಾರೆ.

    ಅಲಾಸ್ಕಾದಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ (Vladimir Putin) ಅವರನ್ನು ಭೇಟಿಯಾಗಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಈಗ ಶ್ವೇತಭವನದಲ್ಲಿ ಉಕ್ರೇನ್‌ ಅಧ್ಯಕ್ಷ ಝೆಲೆನ್‌ಸ್ಕಿ (Zelensky) ಮತ್ತು ಯೋಪಿಯನ್‌ ನಾಯಕರ (European Leaders) ಜೊತೆ ಸಭೆ ನಡೆಸಿದರು.

    ಝೆಲೆನ್‌ಸ್ಕಿ ಭೇಟಿ ವೇಳೆ ಮಾತನಾಡಿದ ಟ್ರಂಪ್, ಯುದ್ಧ ಕೊನೆಗೊಳ್ಳಲಿದೆ. ಅದು ಯಾವಾಗ ಕೊನೆಗೊಳ್ಳುತ್ತದೆ ಎಂದು ನಾನು ನಿಮಗೆ ಹೇಳಲಾರೆ. ಆದರೆ ಈ ಯುದ್ಧ ನಿಲ್ಲಲಿದೆ. ಪುಟಿನ್ ಯುದ್ಧ ನಿಲ್ಲಿಸಲು ಬಯಸುತ್ತಿದ್ದು ಝೆಲೆನ್ಸ್ಕಿ ಕೂಡ ಒಪ್ಪಿಕೊಂಡರೆ ಶೀಘ್ರದಲ್ಲೇ ಯುದ್ಧ ನಿಲ್ಲುತ್ತದೆ ಅಂತ ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾ ಮಾರಾಟ ಮಾಡಿದ್ದ ಅಲಾಸ್ಕಾ ಈಗ ಅಮೆರಿಕಾದ ಚಿನ್ನದ ಮೊಟ್ಟೆ!

    ಇಡೀ ಜಗತ್ತು ಈ ಯುದ್ಧದಿಂದ ಬೇಸತ್ತಿದೆ. ನಾವು ಅದನ್ನು ಕೊನೆಗೊಳಿಸುತ್ತೇವೆ. ನಾನು 6 ಯುದ್ಧಗಳನ್ನು ಕೊನೆಗೊಳಿಸಿದ್ದೇನೆ. ಅದರಲ್ಲಿ ಭಾರತ -ಪಾಕ್ ಯುದ್ಧವೂ ಒಂದು ಎಂದು ಟ್ರಂಪ್ ಹೇಳಿದರು.

    ಟ್ರಂಪ್ ಮತ್ತು ಝೆಲೆನ್ಸ್ಕಿ ಅವರೊಂದಿಗೆ ಶ್ವೇತಭವನದಲ್ಲಿ ನಡೆದ ಸಭೆಯಲ್ಲಿ ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್, ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್, ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ, ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್, ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ನ್ಯಾಟೋ ಪ್ರಧಾನ ಕಾರ್ಯದರ್ಶಿ ಮಾರ್ಕ್ ರುಟ್ಟೆ ಉಪಸ್ಥಿತರಿದ್ದರು.

    ಡೊನಾಲ್ಡ್ ಟ್ರಂಪ್ ಮತ್ತು ಯುರೋಪಿಯನ್ ನಾಯಕರ ನಡುವೆ ನಡೆದ ಮಹತ್ವದ ಮಾತುಕತೆಗಳ ನಂತರ ಪುಟಿನ್ ಮತ್ತು ಝೆಲೆನ್ಸ್ಕಿ ಶಾಂತಿ ಮಾತುಕತೆಗೆ ಒಪ್ಪಿದ್ದಾರೆ ಎಂದು ವರದಿಯಾಗಿದೆ.

    ಶ್ವೇತಭವನದಲ್ಲಿ ಏನಾಯ್ತು?
    ಆರಂಭದಲ್ಲಿ ಉಕ್ರೇನ್‌ ಮತ್ತು ಯುರೋಪಿಯನ್‌ ಒಕ್ಕೂಟದ ನಾಯಕರ ಜೊತೆ ಟ್ರಂಪ್‌ ಸಭೆ ನಡೆಸಿದರು. ಬಳಿಕ ಟ್ರಂಪ್‌ ಈ ಎಲ್ಲಾ ನಾಯಕರನ್ನು ತನ್ನ ಓವಲ್ ಕಚೇರಿಯ ಕ್ಯಾಬಿನ್‌ಗೆ ಕರೆಸಿ ರಷ್ಯಾದ ಅಧ್ಯಕ್ಷ ಪುಟಿನ್‌ಗೆ ನೇರವಾಗಿ ಕರೆ ಮಾಡಿದರು.

    ಯುರೋಪಿಯನ್ ನಾಯಕರು ಮತ್ತು ಝೆಲೆನ್ಸ್ಕಿ ಅವರೊಂದಿಗಿನ ಮಾತುಕತೆಗಳ ಬಗ್ಗೆ ಟ್ರಂಪ್ ವಿವರಿಸಿದರು. ರಷ್ಯಾ ಮತ್ತು ಉಕ್ರೇನಿಯನ್ ನಿಯೋಗಗಳ ನಡುವೆ ನೇರ ಮಾತುಕತೆಗಳನ್ನು ಮುಂದುವರಿಸಲು ಪುಟಿನ್‌ಗೆ ಕರೆ ನೀಡಿದರು. ಇಬ್ಬರು ನಾಯಕರ ಮಧ್ಯೆ ಒಟ್ಟು 40 ನಿಮಿಷಗಳ ಮಾತುಕತೆ ನಡೆಯಿತು. ಈ ವೇಳೆ ಇತ್ತೀಚಿನ ಅಲಾಸ್ಕಾ ಭೇಟಿಯ ಸಮಯದಲ್ಲಿ ಟ್ರಂಪ್ ನೀಡಿದ ಆತಿಥ್ಯ ಮತ್ತು ಅಲಾಸ್ಕಾದಲ್ಲಿ ನಡೆದ ಶೃಂಗಸಭೆಯಲ್ಲಿ ಸಾಧಿಸಿದ ಪ್ರಗತಿಗೆ ಪುಟಿನ್‌ ಟ್ರಂಪ್‌ಗೆ ಧನ್ಯವಾದ ಹೇಳಿದರು.

  • ನೀವು ನಮ್ಮೊಂದಿಗಿದ್ದೀರಿ ಎಂಬುದನ್ನು ಸಾಬೀತುಪಡಿಸಿ: ಯೂರೋಪ್‌ ನಾಯಕರಿಗೆ ಉಕ್ರೇನ್‌ ಅಧ್ಯಕ್ಷ ಕರೆ

    ನೀವು ನಮ್ಮೊಂದಿಗಿದ್ದೀರಿ ಎಂಬುದನ್ನು ಸಾಬೀತುಪಡಿಸಿ: ಯೂರೋಪ್‌ ನಾಯಕರಿಗೆ ಉಕ್ರೇನ್‌ ಅಧ್ಯಕ್ಷ ಕರೆ

    ಕೀವ್: ನೀವು ನಮ್ಮೊಂದಿಗಿದ್ದೇವೆ ಎಂಬುದನ್ನು ಸಾಬೀತುಪಡಿಸಿ, ಕತ್ತಲಿನ ವಿರುದ್ಧ ಬೆಳಕು ಜಯ ಸಾಧಿಸುತ್ತೆ ಎಂದು ಯೂರೋಪ್‌ ರಾಷ್ಟ್ರಗಳ ನಾಯಕರಿಗೆ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಭಾವಾವೇಷದಲ್ಲಿ ಕರೆ ನೀಡಿದ್ದಾರೆ.

    ಯೂರೋಪ್‌ ನಾಯಕರೊಂದಿಗೆ ವೀಡಿಯೋ ಕರೆಯಲ್ಲಿ ಮಾತನಾಡಿದ ಅವರು, ನಾವು ನಮ್ಮ ನೆಲಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿದ್ದೇವೆ. ನಮ್ಮ ದೇಶದ ಎಲ್ಲಾ ದೊಡ್ಡ ನಗರಗಳನ್ನು ಈಗ ನಿರ್ಬಂಧಿಸಲಾಗಿದೆ. ನೀವು ನಮ್ಮೊಂದಿಗಿದ್ದೀರಿ ಎಂಬುದನ್ನು ಸಾಬೀತುಪಡಿಸಿ. ನಮ್ಮನ್ನು ಇಲ್ಲಿಂದ ಹೋಗಲು ಬಿಡುವುದಿಲ್ಲ ಎಂದು ನೀವು ಸಾಬೀತುಪಡಿಸಿ. ನೀವು ನಿಜವಾಗಿಯೂ ಯುರೋಪಿಯನ್ನರು ಎಂದು ತೋರಿಸಿ. ಜೀವನವು ಸಾವಿನ ವಿರುದ್ಧ ಹಾಗೂ ಬೆಳಕು ಕತ್ತಲೆಯ ವಿರುದ್ಧ ಗೆಲ್ಲುತ್ತದೆ ಎಂದು ಭಾವುಕವಾಗಿ ನುಡಿದಿದ್ದಾರೆ. ಇದನ್ನೂ ಓದಿ: ರಷ್ಯಾ ಹಣಕಾಸು ಸಂಸ್ಥೆಗಳಿಗೆ ವೀಸಾ, ಮಾಸ್ಟರ್‌ ಕಾರ್ಡ್‌ ಬ್ಲಾಕ್‌ – ATMಗಳ ಮುಂದೆ ರಷ್ಯನ್ನರ ದಂಡು

    ಇಂದು ನಾವು ನಿಮ್ಮೆಲ್ಲರನ್ನೂ, ಯೂರೋಪಿಯನ್‌ ಒಕ್ಕೂಟದ ದೇಶಗಳನ್ನು ಒಗ್ಗೂಡಿಸಿದ್ದೇವೆ. ಇದು ನನಗೆ ಖುಷಿಯ ವಿಚಾರ. ಆದರೆ ಇದಕ್ಕಾಗಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಬೆಲೆ ತೆರಬೇಕು ಎಂದು ನನಗೆ ತಿಳಿದಿರಲಿಲ್ಲ. ರಷ್ಯಾ ಆಕ್ರಮಣ ನನಗೆ, ಪ್ರತಿಯೊಬ್ಬ ಉಕ್ರೇನಿಯನ್ನರಿಗೆ ಮತ್ತು ದೇಶಕ್ಕೆ ದೊಡ್ಡ ದುರಂತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಇಂದು ನಾವು ಮೌಲ್ಯಗಳಿಗಾಗಿ, ಹಕ್ಕುಗಳಿಗಾಗಿ, ಸ್ವಾತಂತ್ರ್ಯಕ್ಕಾಗಿ, ಸಮಾನವಾಗಿರಬೇಕೆಂಬ ಬಯಕೆಗಾಗಿ ಹೋರಾಡುತ್ತಿದ್ದೇವೆ. ರಷ್ಯಾ ಭಯೋತ್ಪಾದಕ ರಾಷ್ಟ್ರವಾಗಿದೆ. ಇದನ್ನು ಯಾರೂ ಕ್ಷಮಿಸುವುದಿಲ್ಲ, ಮರೆಯುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ವ್ಯಾಕ್ಯೂಮ್ ಬಾಂಬ್ ಪ್ರಯೋಗ ಆರೋಪ – ಏನಿದರ ವಿಶೇಷ?

    ಉಕ್ರೇನ್‌ ಮೇಲೆ ಕಳೆದ ವಾರ ರಷ್ಯಾ ಯುದ್ಧವನ್ನು ಘೋಷಿಸಿತು. ರಷ್ಯಾ ಸೇನಾ ಪಡೆ ನಿರಂತರವಾಗಿ ದಾಳಿಗಳನ್ನು ನಡೆಸುತ್ತಿದ್ದು, ಹಂತಹಂತವಾಗಿ ಉಕ್ರೇನ್‌ ಅನ್ನು ಅತಿಕ್ರಮಿಸುತ್ತಿದೆ. ಇದರಿಂದ ನೂರಾರು ಸಂಖ್ಯೆಯಲ್ಲಿ ಜನರು, ಸೈನಿಕರು ಸಾಯುತ್ತಿದ್ದಾರೆ. ಇದನ್ನೂ ಓದಿ: ಊಟ ತರಲು ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ ಅದೇ ನವೀನ್‍ನ ಕೊನೆ ಮಾತು: ಶ್ರೀಕಾಂತ್