Tag: Ex CM Siddaramaiah

  • ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕಿದ ಉಮಾಶ್ರೀ

    ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕಿದ ಉಮಾಶ್ರೀ

    ಬಾಗಲಕೋಟೆ: ಜಿಲ್ಲೆಯಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಅಭಿನಂದನಾ ಸಮಾರಂಭದಲ್ಲಿ ಮಾಜಿ ಸಚಿವೆ ಉಮಾಶ್ರೀ ಅವರು ಮಾಜಿ ಸಿಎಂ ಸಿದ್ದರಾಮಯ್ಯನವರ ಜೊತೆ ಕಾಣಿಸಿಕೊಂಡಿದ್ದಾರೆ.

    ಅಭಿನಂದನಾ ಕಾರ್ಯಕ್ರಮಕ್ಕೂ ಮುನ್ನ ಜಮಖಂಡಿ ನಗರದ ರಾಯಲ್ ಪ್ಯಾಲೆಸ್ ಸ್ಕೂಲ್ ನಲ್ಲಿ ಭೋಜನವನ್ನು ಆಯೋಜಿಸಲಾಗಿತ್ತು. ಈ ವೇಳೆ ಸಿದ್ದರಾಮಯ್ಯ ಮತ್ತು ಉಮಾಶ್ರೀ ಒಟ್ಟಿಗೆ ಭೋಜನ ಮಾಡಿದರು.

    ಈ ಕಾರ್ಯಕ್ರಮಕ್ಕೂ ಮುನ್ನ ಬೆಳಗಾವಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಲೋಕಸಭೆ ಚುನಾವಣೆ ಕಾಂಗ್ರೆಸ್ ಪಕ್ಷದಿಂದ ತಯಾರಿ ನಡೆದಿದೆ. ಆದರೆ ಕರ್ನಾಟಕದಿಂದ ರಾಹುಲ್ ಗಾಂಧಿ ಸ್ಪರ್ಧೆ ಮಾಡಲ್ಲ. ಅವು ಉತ್ತರ ಪ್ರದೇಶದ ಅಮೇಥಿಯಿಂದಲೇ ಸ್ಪರ್ಧಿಸುತ್ತಾರೆ. ಪಕ್ಷದಿಂದ ಇಂತಹ ಚಿಂತನೆ ಕೂಡ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಸಂಪುಟ ವಿಸ್ತರಣೆ ಬಳಿಕ ಉಂಟಾಗಿರುವ ಅಸಮಾಧಾನದ ಬಗ್ಗೆ ಪ್ರತಿಕ್ರಿಯೆ ನೀಡಿ, ರಮೇಶ ಜಾರಕಿಹೊಳಿ, ಬಿ ಸಿ ಪಾಟೀಲ್ ಅವರ ಅಸಮಾಧಾನ ಸಹಜ. ಆದರೆ ಎಲ್ಲರು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತಾರೆ. ರಮೇಶ ಜಾರಕಿಹೊಳಿ ಅವರೊಂದಿಗೆ ನಾನು ಮಾತುಕತೆ ಮಾಡುತ್ತೇನೆ. ಆದರೆ ಮಾಜಿ ಸಿಎಂ ಯಡಿಯೂರಪ್ಪ ಅವರು ಹಗಲು ಕನಸು ಕಾಣುತ್ತಿದ್ದಾರೆ. ಯಡಿಯೂರಪ್ಪ ಮಾತಿಗೆ ಕಿಮ್ಮತ್ತೆ ಇಲ್ಲ. ಇತ್ತೀಚಿಗೆ ಸುಳ್ಳು ಹೇಳುವ ಪದ್ಧತಿ ಹೆಚ್ಚಾಗಿದೆ ಎಂದು ಟಾಂಗ್ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಪಕ್ಷದ ಹಿತ ನಮ್ಮೆಲ್ಲರ ಮೊದಲ ಆದ್ಯತೆಯಾಗಿರಲಿ – ಅತೃಪ್ತರಿಗೆ ಸಿದ್ದರಾಮಯ್ಯ ಸಂದೇಶ

    ಪಕ್ಷದ ಹಿತ ನಮ್ಮೆಲ್ಲರ ಮೊದಲ ಆದ್ಯತೆಯಾಗಿರಲಿ – ಅತೃಪ್ತರಿಗೆ ಸಿದ್ದರಾಮಯ್ಯ ಸಂದೇಶ

    ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಕೆಲವರಿಗೆ ಬೇಸರ ಆಗಿರುವುದು ಸಹಜ. ಆದರೆ ಪಕ್ಷದ ಹಿತ ನಮ್ಮೆಲ್ಲರ ಮೊದಲ ಆದ್ಯತೆಯಾಗಿರಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಮೂಲಕ ಪಕ್ಷದ ಮುಖಂಡರಲ್ಲಿ ಮನವಿ ಮಾಡಿದ್ದಾರೆ.

    ಸಮ್ಮಿಶ್ರ ಸರ್ಕಾರ ರಚನೆಯಾಗಿ 6 ತಿಂಗಳಿನಿಂದಲೂ ಮುಂದೂಡಿಕೆಯಲ್ಲಿದ್ದ ಎರಡನೇ ಹಂತದ ಸಚಿವ ಸಂಪುಟ ಬೇಗುದಿ ನಡುವೆ ಕೊನೆಗೂ ವಿಸ್ತರಣೆಯಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಸಚಿವ ಸಂಪುಟ ಪುನರ್ ರಚನೆ ವಿಚಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಕೆಲವರಿಗೆ ಬೇಸರ ಆಗಿರುವುದು ಸಹಜ. ಪಕ್ಷಕ್ಕೆ ನಿಷ್ಠರಾಗಿ ಉಳಿದು ತಾಳ್ಮೆಯಿಂದ ಅವಕಾಶಕ್ಕಾಗಿ ಕಾದವರನ್ನು ಕಾಂಗ್ರೆಸ್ ಪಕ್ಷ ಎಂದೂ ನಿರಾಶೆಗೊಳಿಸಿಲ್ಲ. ಪಕ್ಷದ ಹಿತ ನಮ್ಮೆಲ್ಲರ ಮೊದಲ ಆದ್ಯತೆಯಾಗಿರಲಿ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

    ಇದಕ್ಕೂ ಮುನ್ನ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹೊಸ ಸಚಿವರಿಗೆ ಶುಭ ಕೋರಿರುವ ಸಿದ್ದರಾಮಯ್ಯ ಅವರು, ಸಮರ್ಥರು, ಅನುಭವಿಗಳು ಮತ್ತು ಸೇವಾನಿಷ್ಠರಾಗಿರುವ ಎಲ್ಲ ನೂತನ ಸಚಿವರು ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದರು. ಅಲ್ಲದೇ ನೂತನ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಂ.ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಸಿ.ಎಸ್ ಶಿವಳ್ಳಿ, ರಹೀಂ ಖಾನ್, ಎಂಟಿಬಿ ನಾಗರಾಜ್, ಪರಮೇಶ್ವರ ನಾಯ್ಕ್, ಇ. ತುಕಾರಾಂ ಮತ್ತು ಆರ್.ಬಿ ತಿಮ್ಮಾಪುರ ಅವರಿಗೆ ಅಭಿನಂದನೆಗಳು ಎಂದು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕ್ಯಾಬಿನೆಟ್ ವಿಸ್ತರಣೆ – ಯಾರು ಇನ್? ಯಾವ ಕೋಟಾದಲ್ಲಿ ಯಾರಿಗೆ ಸ್ಥಾನ?

    ಕ್ಯಾಬಿನೆಟ್ ವಿಸ್ತರಣೆ – ಯಾರು ಇನ್? ಯಾವ ಕೋಟಾದಲ್ಲಿ ಯಾರಿಗೆ ಸ್ಥಾನ?

    ಬೆಂಗಳೂರು: ಕೆಜಿಎಫ್ ಚಿತ್ರಕ್ಕಿಂತಲೂ ಕುತೂಹಲ ಮೂಡಿಸಿರೋ ಕ್ಯಾಬಿನೆಟ್ ವಿಸ್ತರಣೆಗೆ ಕೊನೆಗೂ ಕಾಲಕೂಡಿ ಬಂದಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವ ರಾಜ್ಯದ ಕಾಂಗ್ರೆಸ್ ನಾಯಕರು ಪಟ್ಟಿಯನ್ನು ಬಹುತೇಕ ಅಂತಿಮಗೊಳಿಸುವ ಸಾಧ್ಯತೆ ಇದೆ.

    ಸಂಪುಟ ವಿಸ್ತರಣೆ ಅಲ್ಲದೇ ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ಮಗ್ಗಲ ಮುಳ್ಳಾಗಿರುವ ಜಾರಕಿಹೊಳಿ ಬ್ರದರ್ಸ್ ಅವರನ್ನ ಒಡೆದು ಆಳಲು ಪಕ್ಷದ ಹೈಕಮಾಂಡ್ ತೀರ್ಮಾನಿಸಿದೆ ಎನ್ನಲಾಗಿದ್ದು, ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈಬಿಟ್ಟು ಮಾಜಿ ಸಚಿವ ಸತೀಶ್ ಜಾರಕಿಹೊಳಿಗೆ ಅವಕಾಶ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಉಳಿದಂತೆ ಸಚಿವ ಸ್ಥಾನ ಆಕಾಂಕ್ಷಿಗಳಾಗಿರುವ ಹೊಸ ಮುಖಗಳಿಗೆ ಈ ಬಾರಿ ಮಣೆ ಹಾಕಲು ಹೈಕಮಾಂಡ್ ಚರ್ಚೆ ನಡೆಸಿದೆ ಎನ್ನುವ ಮಾಹಿತಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ.

    ಸಂಪುಟದಿಂದ ಯಾರಿಗೆ ಕೊಕ್ ?
    * ರಮೇಶ್ ಜಾರಕಿಹೊಳಿ ಔಟ್, ಸತೀಶ್ ಜಾರಕಿಹೊಳಿ ಇನ್ (ಎಸ್‍ಪಿ ಕೋಟಾ)
    * ಆರ್. ಶಂಕರ್ ಔಟ್, ಸಿ.ಎಸ್. ಶಿವಳ್ಳಿ ಇನ್ (ಕುರುಬರ ಕೋಟಾ)

    ಹೊಸದಾಗಿ ಯಾರ ಎಂಟ್ರಿ ?
    * ಎಂ.ಬಿ. ಪಾಟೀಲ್ / ಬಿಸಿ ಪಾಟೀಲ್ (ಲಿಂಗಾಯತ ಕೋಟಾ)
    * ರಹೀಂ ಖಾನ್ (ಮುಸ್ಲಿಂ ಕೋಟಾ)
    * ತುಕಾರಾಂ (ಎಸ್‍ಟಿ ಕೋಟಾ)
    * ಭೀಮಾನಾಯ್ಕ್/ ಪರಮೇಶ್ವರ ನಾಯ್ಕ್ (ಎಸ್‍ಟಿ ಲಂಬಾಣಿಗೆ ಮತ್ತೊಂದು ಸ್ಥಾನ)
    * ಧರ್ಮಸೇನಾ / ರೂಪಾ ಶಶಿಧರ್ / ತಿಮ್ಮಾಪೂರ (ದಲಿತ ಎಡಗೈ ಕೋಟಾ)
    * 20 ನಿಗಮ ಮಂಡಳಿಗೆ ನೇಮಕ
    * 8 ಸಂಸದೀಯ ಕಾರ್ಯದರ್ಶಿ, ಓರ್ವ ದೆಹಲಿ ವಿಶೇಷ ಪ್ರತಿನಿಧಿ ನೇಮಕ

    ಸಂಪುಟ ವಿಸ್ತರಣೆ ಕಸರತ್ತು ಹಿನ್ನೆಲೆಯಲ್ಲಿ ಇಂದು ರಾಹುಲ್ ಗಾಂಧಿ ನಿವಾಸಕ್ಕೆ ತೆರಳಿದ ರಾಜ್ಯ ಕಾಂಗ್ರೆಸ್ ನಾಯಕರು ಈ ಸಂಬಂಧ ಚರ್ಚೆ ನಡೆಸಿದರು. ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಸಭೆಯಲ್ಲಿ ಭಾಗಿದ್ದರು. ಈ ವೇಳೆ ಆರು ಸಚಿವ ಸ್ಥಾನ ಭರ್ತಿ ಕುರಿತು ಚರ್ಚೆ ನಡೆಸಿದರು.

    ಈ ವೇಳೆ ಪ್ರಮುಖವಾಗಿ ವಿ. ಮುನಿಯಪ್ಪಗೆ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ ನೀಡುವ ವಿಚಾರದಲ್ಲಿ ನಾಯಕರದಲ್ಲಿ ಒಮ್ಮತ ಅಭಿಪ್ರಾಯ ಮೂಡಿಬಂತು ಎನ್ನಲಾಗಿದ್ದು, ರಾಹುಲ್ ಗಾಂಧಿ ಅವರ ಬಳಿ ಒಂದೇ ಹೆಸರು ನೀಡಿ ಅಂತಿಮ ಮುದ್ರೆ ಪಡೆದಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇಲ್ಲವೂ ಅಂದುಕೊಂಡಂತೆ ನಡೆದರೆ ನಾಳೆ ನೂತನ ಸಚಿವರ ಪ್ರಮಾಣವಚನ ಸಮಾರಂಭ ರಾಜಭವನದ ಗ್ಲಾಸ್‍ಹೌಸ್‍ನಲ್ಲಿ ನಡೆಯಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುಳ್ಳು ಹೇಳೋದ್ರಲ್ಲಿ ಸಿದ್ದರಾಮಯ್ಯ, ಎಚ್‍ಡಿಕೆಗೆ ನೊಬೆಲ್ ಕೊಡ್ಬೇಕು: ಈಶ್ವರಪ್ಪ

    ಸುಳ್ಳು ಹೇಳೋದ್ರಲ್ಲಿ ಸಿದ್ದರಾಮಯ್ಯ, ಎಚ್‍ಡಿಕೆಗೆ ನೊಬೆಲ್ ಕೊಡ್ಬೇಕು: ಈಶ್ವರಪ್ಪ

    ದಾವಣಗೆರೆ: ಸುಳ್ಳು ಹೇಳುವುದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಕುಮಾರಸ್ವಾಮಿ ನಿಸ್ಸೀಮರು. ಅವರಿಬ್ಬರಿಗೂ ನೊಬೆಲ್ ಪ್ರಶಸ್ತಿ ಕೊಡಿಸಬೇಕು ಎಂದು ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ಜೆಡಿಎಸ್ ಕಾಂಗ್ರೆಸ್ ಕೇವಲ ಅಧಿಕಾರಕ್ಕೆ ಹೊಂದಾಣಿಕೆ ಮಾಡಿಕೊಂಡಿದೆ. ಅಹಿಂದ ನಾಯಕ ಹಾಗೂ ಮಣ್ಣಿನ ಮಗ ದೇವೇಗೌಡ ಅವರು ಜಂಟಿ ಪ್ರವಾಸ ಮಾಡಲಿ. ಈ ಮೂಲಕ ರಾಜ್ಯದ ಬರದ ಬಗ್ಗೆ ಅಧಿಕಾರಿಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾರ್ಗದರ್ಶನ ನೀಡಲಿ ಎಂದು ಸಲಹೆ ನೀಡಿದರು.

    ಈ ಬಾರಿಯ ಅಧಿವೇಶನ ಉತ್ತರ ಕರ್ನಾಟಕದ ಬಗ್ಗೆ ಯಾವುದೇ ಚರ್ಚೆ ಮಾಡದೇ ವ್ಯರ್ಥ ಅಧಿವೇಶನವನ್ನು ರಾಜ್ಯ ಸರ್ಕಾರ ಮಾಡಿದೆ. ನಿಮ್ಮ ಸರ್ಕಾರ ಎಷ್ಟು ದಿನ ಇರುತ್ತೋ ಗೊತ್ತಿಲ್ಲ. ನೀವು ಘೋಷಣೆ ಮಾಡಿದ್ದನ್ನು ಜನರಿಗೆ ಬಹುಬೇಗ ನೆರವೇರಿಸಿ. 8 ದಿನಗಳ ಅಧಿವೇಶನದಲ್ಲಿ ಇಡೀ ರಾಜ್ಯದ ಯಾವುದೇ ಸಮಸ್ಯೆಗೆ ಸರ್ಕಾರ ಸ್ವಂದಿಸಿಲ್ಲ ಎಂದು ಆರೋಪಿಸಿದರು.

    ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಮಾಡಲು ಅವಕಾಶ ಕೊಟ್ಟಿಲ್ಲ. ಕಬ್ಬು ಹಾಗೂ ನೀರಾವರಿ ಬಗ್ಗೆ ಸಮಗ್ರ ಚರ್ಚೆ ನಡೆದಿಲ್ಲ. ಇತ್ತ ಕಾಂಗ್ರೆಸ್ ಶಾಸಕರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದ್ರೆ, ನಾಳೆ ಬಾ ಅಂತಾರೆ. ಸಚಿವ ಸಂಪುಟ ವಿಸ್ತರಣೆ ಮಾಡಿದ ಮಾರನೇ ದಿನ ಸರ್ಕಾರ ಉರುಳುತ್ತದೆ. ಶೀಘ್ರವೇ ಸಮ್ಮಿಶ್ರ ಸರ್ಕಾರ ಬಿದ್ದು ಹೋಗುತ್ತೆ ಎಂದು ಮತ್ತೊಮ್ಮೆ ಭವಿಷ್ಯ ನುಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮುಂದೆ ಶಾಸಕರನ್ನು ಕರೆದೊಯ್ಯುವ ಉದ್ದೇಶದಿಂದ ರೆಸಾರ್ಟ್ ಗೆ ಭೇಟಿ – ಸತೀಶ್ ಜಾರಕಿಹೊಳಿ

    ಮುಂದೆ ಶಾಸಕರನ್ನು ಕರೆದೊಯ್ಯುವ ಉದ್ದೇಶದಿಂದ ರೆಸಾರ್ಟ್ ಗೆ ಭೇಟಿ – ಸತೀಶ್ ಜಾರಕಿಹೊಳಿ

    ಬೆಳಗಾವಿ: ಸಮ್ಮಿಶ್ರ ಸರ್ಕಾರವನ್ನು ಕೆಡವಲು ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಎನ್ನುವ ಸುದ್ದಿಯ ಬೆನ್ನಲ್ಲೇ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಸತೀಶ್ ಜಾರಕಿಹೊಳಿ ಅವರು, ಬೆಳಗಾವಿ ರೆಸಾರ್ಟ್ ಗೆ ಭೇಟಿ ನೀಡಿದ್ದು ನಿಜ. ಮುಂದಿನ ದಿನಗಳಲ್ಲಿ ನಮ್ಮ ಶಾಸಕರನ್ನು ಕರೆದ್ಯೊಯವ ಉದ್ದೇಶದಿಂದ ಭೇಟಿ ನೀಡಲಾಗಿತ್ತು ಎಂದು ಹೇಳುವ ಮೂಲಕ ಬಾಂಬ್ ಸಿಡಿಸಿದ್ದಾರೆ.

    ಈ ಕುರಿತು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಅಪರೇಷನ್ ಕಮಲದ ಬಗ್ಗೆ ನಮಗೆ ಮಾಹಿತಿ ಇಲ್ಲ. ಪಕ್ಷದ ಕೆಲ ಶಾಸಕರಲ್ಲಿ ಅಸಮಾಧಾನ ಇರುವುದು ಸಾಮಾನ್ಯ. ಇದು ಎಲ್ಲಾ ಮುಖ್ಯಮಂತ್ರಿಗಳ ಸಮಯದಲ್ಲೂ ಇರುತ್ತದೆ ಅಷ್ಟೇ. ಆದರೆ ಸಿದ್ದರಾಮಯ್ಯ ಅವರ ಮೇಲೆ ಹೈಕಮಾಂಡ್ ಗೆ ದೂರು ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

    ಇದೇ ವೇಳೆ ಬೆಳಗಾವಿಯ ಸಾತೇರಿ ರೆಸಾರ್ಟ್ ಭೇಟಿ ಮಾಡಿ ಪರಿಶೀಲನೆ ನಡೆಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸ್ನೇಹಿತ ಮಗನ ಮದುವೆಗೆ ಭೇಟಿ ನೀಡಿದ್ದೆ. ಈ ವೇಳೆ ಬೆಳಗಾವಿಯ ಸಾತೇರಿ ರೆಸಾರ್ಟ್ ಗೂ ಕೂಡ ಹೋಗಿದ್ದೆ. ಮುಂದೇ ನಮ್ಮ ಶಾಸಕರನ್ನು ಕರೆದುಕೊಂಡು ಹೋಗಲು ನೆರವಾಗಲಿದೆ. ಮುಂದೆ ಶಾಸಕರನ್ನು ಟೂರ್ ಮಾಡಲಿಕ್ಕೆ ರೆಸಾರ್ಟ್ ನೋಡಿಕೊಂಡು ಬಂದಿದ್ದೆನೆ ವಿನಾಃ ಪಕ್ಷಾಂತರ ಮಾಡಲು ಕರೆದುಕೊಂಡು ಹೋಗುವುದಿಲ್ಲ ಎಂದು ಹೊಸ ಬಾಂಬ್ ಸಿಡಿಸಿದರು.

    ನಾನು ಯಾವುದೇ ಆತೃಪ್ತರ ಸಂಪರ್ಕದಲ್ಲಿ ಇಲ್ಲ. ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ನಮ್ಮ ಬೇಡಿಕೆಗಳನ್ನು ಹೈಕಮಾಂಡ್ ಅವರಿಗೆ ತಿಳಿಸಿದ್ದೇವೆ. ಸಂಪುಟ ವಿಸ್ತರಣೆ ಮಾಡಿದರೆ ಒಳ್ಳೇಯದು. ಶೀಘ್ರವೇ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಸಂಪುಟ ವಿಸ್ತರಣೆ ಮಾಡುವುದರಿಂದ ಸರ್ಕಾರದ ಆಡಳಿತ ಸುಗಮವಾಗಿ ನಡೆಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನು ಓದಿ : ರಾಜ್ಯದ ದೋಸ್ತಿ ಸರ್ಕಾರವೇ ಬೆಚ್ಚಿ ಬೀಳುವಂತಹ ಬೆಳವಣಿಗೆ – ಗುಪ್ತಚರ ಇಲಾಖೆ ನೀಡಿದ್ದ ಆಡಿಯೋ ಔಟ್

    ಕಳೆದ ಕೆಲ ದಿನಗಳಿಂದ ಸತೀಶ್ ಜಾರಕಿಹೊಳಿ ಅವರ ಸಹೋದರ ಪೌರಾಡಳಿತ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ರಮೇಶ್ ಜಾರಕಿಹೊಳಿ ಕಳೆದ ಕೆಲ ದಿನಗಳಿಂದ ಮಾಧ್ಯಮಗಳಿಂದ ದೂರವೇ ಉಳಿದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ರಮೇಶ್ ಜಾರಕಿಹೊಳಿ ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದ್ದು, ಪಕ್ಷಾಂತರದ ಬಗ್ಗೆ ಚಿಂತನೆ ನಡೆಸಲಾಗಿದೆ ಎಂಬ ಅಂಶ ಬೆಳಗಾವಿ ಕ್ಷೇತ್ರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾಂಗ್ರೆಸ್ ಅತೃಪ್ತಿ ಹಿಂದಿದ್ಯಾ ಶಾಸಕ ಡಾ.ಸುಧಾಕರ್ ಕೈವಾಡ?

    ಕಾಂಗ್ರೆಸ್ ಅತೃಪ್ತಿ ಹಿಂದಿದ್ಯಾ ಶಾಸಕ ಡಾ.ಸುಧಾಕರ್ ಕೈವಾಡ?

    ಬೆಂಗಳೂರು: ಕಾಂಗ್ರೆಸ್‍ನಲ್ಲಿ ಮತ್ತೆ ಬಿರುಕು ಭಿನ್ನಮತ ಹೊಗೆಯಾಡುತ್ತಿದ್ದು, ಕಾಂಗ್ರೆಸ್ ಅತೃಪ್ತರ ಹಿಂದೆ ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್ ಕೈವಾಡ ಇದೆ ಎಂದು ಶಾಸಕ ವಿರುದ್ಧವೇ ಹೈಕಮಾಂಡ್‍ಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

    ಶಾಸಕ ಡಾ. ಸುಧಾಕರ್ ಅವರು ನಮ್ಮ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿದ್ದಾರೆ. 2 ದಿನಗಳ ಹಿಂದೆ ಸಚಿವ ಸ್ಥಾನ ಆಕಾಂಕ್ಷಿ ಶಾಸಕರನ್ನ ಸುಧಾಕರ್ ಮನೆಗೆ ಅಹ್ವಾನಿಸಿದ್ದರು. ಇದಕ್ಕೆ ಮಣೆ ಹಾಕಿರಲಿಲ್ಲ. ಹೀಗಾಗಿ ಅತೃಪ್ತ ಶಾಸಕರು ಮುಂಬೈಗೆ ಹೋಗುತ್ತಿದ್ದಾರೆ ಎಂದು ಸುಧಾಕರ್ ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ ಎಂದು ಶಾಸಕರಾದ ಬಿ.ಸಿ ಪಾಟೀಲ್, ಎಂಟಿಬಿ ನಾಗರಾಜ್, ಸಂಗಮೇಶ್ ಕಿಡಿಕಾರಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಸುಧಾಕರ್ ಅವರ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರಲ್ಲಿ ಶಾಸಕರು ದೂರು ನೀಡಿದ್ದು, ಈ ಬೆನ್ನಲ್ಲೇ ಹೈಕಮಾಂಡ್ ಸುಧಾಕರ್ ಅವರಿಗೆ ಕರೆ ಮಾಡಿದ ಇಬ್ಬರೂ ನಾಯಕರು ತರಾಟೆಗೆ ತೆಗೆದುಕೊಂಡಿದ್ದು, ತಪ್ಪು ತಿದ್ದಿಕೊಳ್ಳಿ ಇಲ್ಲವೇ ನಾವೇ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

    ಈ ನಡುವೆ ಯಾರು ಎಲ್ಲಿಗಾದರು ಹೋಗಲಿ ಡಿಸೆಂಬರ್ 10 ರೊಳಗೆ ಸಂಪುಟ ವಿಸ್ತರಣೆ ಆಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಸಿದರು. ಪಕ್ಷದಲ್ಲಿ ಸಣ್ಣಪುಟ್ಟ ಸಮಸ್ಯೆಯನ್ನ ನಾವೇ ಬಗೆಹರಿಸಿಕೊಳ್ಳುತ್ತೇವೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಮಗೆ ವೋಟ್ ಹೆಚ್ಚು ಬಂದಿದ್ರೂ ಬಿಜೆಪಿಗೆ ಸೀಟ್ ಜಾಸ್ತಿ ಬಂದ್ವು: ಮಾಜಿ ಸಿಎಂ

    ನಮಗೆ ವೋಟ್ ಹೆಚ್ಚು ಬಂದಿದ್ರೂ ಬಿಜೆಪಿಗೆ ಸೀಟ್ ಜಾಸ್ತಿ ಬಂದ್ವು: ಮಾಜಿ ಸಿಎಂ

    ಮಂಡ್ಯ: ಈ ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ವಾಗ್ದಾಳಿಗೆ ಇಳಿದಿದ್ದೇವು. ನಾವು ಅವರ ಮೇಲೆ, ಅವರು ನಮ್ಮ ಮೇಲೆ ಆರೋಪ, ಪ್ರತ್ಯಾರೋಪ ಮಾಡಿದ್ದು ನಿಜ. ಆದರೆ ಕೋಮುವಾದಿ ಪಕ್ಷ ಅಧಿಕಾರಕ್ಕೆ ಬರಬಾರದು ಅಂತಾ ಹೈಕಮಾಂಡ್ ಸಮ್ಮಿಶ್ರ ಸರ್ಕಾರ ರಚಿಸುವಂತೆ ಆದೇಶ ನೀಡಿತ್ತು. ಹೀಗಾಗಿ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆ ಸೋಲನ್ನು ಮತ್ತೆ ನೆನಪಿಸಿಕೊಂಡರು. ನಮಗೆ ವೋಟ್ ಹೆಚ್ಚು ಬಂದಿದ್ದರೂ, ಬಿಜೆಪಿಗೆ ಸೀಟ್ ಹೆಚ್ಚು ಬಂದಿವೆ. ಬಿಜೆಪಿಯವರು ದೇಶದ ಆರ್ಥಿಕ ವ್ಯವಸ್ಥೆ ಹಾಳು ಮಾಡಿದ್ದಾರೆ. ಅವರು ವಚನ ಭ್ರಷ್ಟರಾಗಿದ್ದು, ಕೋಮುವಾದಿ ಪಕ್ಷ ಮತ್ತೆ ಭಾರತದಲ್ಲಿ ಆಡಳಿತಕ್ಕೆ ಬರಬಾರದು. ಇದಕ್ಕೆ ಕರ್ನಾಟಕದಿಂದಲೇ ಉತ್ತರ ಕೊಡಲು ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸ್ಥಾನ ಹಂಚಿಕೆ ಮಾಡಿಕೊಂಡಿದ್ದೇವೆ ಎಂದರು.

    ದೇಶದಲ್ಲಿ ಜಾತ್ಯಾತೀತ ಮತ ವಿಭಜನೆ ಆಗುತ್ತಿರುವುದರಿಂದ ಕೋಮುವಾದಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಮಾಜದಲ್ಲಿ ನೆಮ್ಮದಿಯಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ರಾಜ್ಯದಲ್ಲಿ ಮೈತ್ರಿ ಚುನಾವಣೆ ದೇಶಕ್ಕೆ ಮಾದರಿ ಆಗಲಿದ್ದು, ಲೋಕಸಭಾ ಚುನಾವಣೆಯಲ್ಲಿ ಇದನ್ನೇ ಅಳವಡಿಸಿಕೊಳ್ಳುತ್ತೇವೆ ಎಂದು ತಿಳಿಸಿದರು.

    ಹಿಂದಿ ಡೈಲಾಗ್ ಹೇಳಲು ತಡವರಿಸಿದ ಮಾಜಿ ಸಿಎಂ:
    ನಾ ಕಾವೋಂಗಾ, ನಾ ಕಾನೆದೋಂಗಾ, ಮೈ ಭಾರತ್ ಕಾ ಚೌಕಿದಾರ್ ಅಂತಾ ಹೇಳಲು ಸಿದ್ದರಾಮಯ್ಯ ತಡವರಿಸಿದ್ದಾರೆ. ಎಷ್ಟೇ ಯತ್ನಿಸಿದರೂ ಹೇಳಲು ಸಾಧ್ಯವಾಗಲಿಲ್ಲ. ಬಳಿಕ ಪಕ್ಕದಲ್ಲಿಯೇ ಸಚಿವ ಜಮೀರ್ ಅಹ್ಮದ್ ಅವರ ಸಹಾಯದಿಂದ ಕನ್ನಡಲ್ಲಿಯೇ, ನಾನು ತಿನ್ನಲ್ಲ ತಿನ್ನವುದಕ್ಕೂ ಬಿಡುವುದಿಲ್ಲ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟಾಂಗ್ ಕೊಟ್ಟರು.

    ನರೇಂದ್ರ ಮೋದಿ ಅವರು ಪ್ರಧಾನಿಯಾಗುವ ಮುಂಚೆ ದೇಶದಲ್ಲಿ ಇಷ್ಟು ಕೆಟ್ಟ ಪರಿಸ್ಥಿತಿ ಯಾವತ್ತು ಇರಲಿಲ್ಲ. ಅವರ ಆಡಳಿತ ಅವಧಿಯಲ್ಲಿ ತೈಲ ಬೆಲೆ ಗಗನಕ್ಕೇರಿದೆ. ಗ್ಯಾಸ್ ಬೆಲೆ ಏರಿಕೆಯಾಗಿದೆ. ರೂಪಾಯಿ ಮೌಲ್ಯ ಮುಂದೆ ಡಾಲರ್ ಎದುರು ಕುಸಿಯುತ್ತಿದೆ. ಅವರು ಹೇಳಿದಂತೆ ಅಚ್ಚೇದಿನ್ ಬರಲೇ ಇಲ್ಲ. ದೇಶದಲ್ಲಿ ಸದ್ಯ ಕೆಟ್ಟ ಆರ್ಥಿಕ ಪರಿಸ್ಥಿತಿ ಎದುರಾಗಿದೆ. ನೋಟ್ ಬ್ಯಾನ್ ಮಾಡಿದಾಗ ಕಪ್ಪು ಇದ್ದವರ ನಿದ್ದೆಗೆಡಿಸುತ್ತೇವೆ ಅಂತಾ ಭರವಸೆ ನೀಡಿದ್ದರು. ಆದರೆ ಹಳೇ ಹಣದಲ್ಲಿ ಶೇ.97 ಹಣ ವಾಪಸ್ ಬಂದಿದೆ. ಹಾಗಾದರೆ ಕಪ್ಪು ಹಣ ಏನಾಯಿತು ಎಂದು ಪ್ರಶ್ನಿಸಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಕುಟುಕಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಮ್ಮಿಶ್ರ ಸರ್ಕಾರದಲ್ಲಿನ ಕಚ್ಚಾಟ ಭಿನ್ನಮತ ದೆಹಲಿಯಲ್ಲಿ ಸ್ಫೋಟ!

    ಸಮ್ಮಿಶ್ರ ಸರ್ಕಾರದಲ್ಲಿನ ಕಚ್ಚಾಟ ಭಿನ್ನಮತ ದೆಹಲಿಯಲ್ಲಿ ಸ್ಫೋಟ!

    ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಿಎಂ ಕುಮಾರಸ್ವಾಮಿ ಭೇಟಿ ಮಾಡಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದಾರೆ.

    ಸಮ್ಮಿಶ್ರ ಸರ್ಕಾರ ಇಂದು 100 ದಿನಗಳ ಆಡಳಿತವನ್ನು ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

    ರಾಜ್ಯ ಸಮ್ಮಿಶ್ರ ಸರ್ಕಾರದ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ನೀಡುತ್ತಿರುವ ಹೇಳಿಕೆಗಳು ಮೈತ್ರಿ ಧರ್ಮಕ್ಕೆ ಧಕ್ಕೆಯಾಗುತ್ತಿದ್ದು, ಅನಗತ್ಯ ಹೇಳಿಕೆ ಮೂಲಕ ಸಿದ್ದರಾಮಯ್ಯ ಹಾಗೂ ಬೆಂಬಲಿಗರು ಸರ್ಕಾರಕ್ಕೆ ಮುಜುಗರ ಉಂಟು ಮಾಡುತ್ತಿದ್ದಾರೆ. ಅದ್ದರಿಂದ ಸರ್ಕಾರಕ್ಕೆ ಯಾವುದೇ ಸಮಸ್ಯೆಯಾದರೂ ಅದಕ್ಕೆ ಸಿದ್ದರಾಮಯ್ಯ ಹಾಗೂ ಬೆಂಬಲಿಗರು ನೇರ ಕಾರಣರಾಗುತ್ತಾರೆ ಎಂದು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಈ ವೇಳೆ ಉಜಿರೆ ಶಾಂತಿವನದ ವೀಡಿಯೋದಲ್ಲಿ ನೀಡಿರುವ ಹೇಳಿಕೆಯಿಂದ ಮೈತ್ರಿ ಸರ್ಕಾರದ ವಿಶ್ವಾಸಕ್ಕೆ ಧಕ್ಕೆಯಾಗಿದೆ ಎಂದು ತಿಳಿಸಿದ್ದು, ಸದ್ಯ ಸಿದ್ದರಾಮಯ್ಯ ಅವರ ವಿದೇಶಿ ಪ್ರವಾಸದಿಂದ ತೊಂದರೆಯಾಗದಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ. ಅಲ್ಲದೇ ಸರ್ಕಾರದ ವಿರುದ್ಧ ಸ್ವಪಕ್ಷಿಯರೇ ಹೇಳಿಕೆ ನೀಡಿದರೂ, ಡಿಸಿಎಂ ಪರಮೇಶ್ವರ್ ಮಾತ್ರ ಮೌನವಹಿಸಿದ್ದಾರೆ. ಇಂತಹ ಹೇಳಿಕೆಗಳಿಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂಬುವುದಾಗಿ ವರ್ತಿಸುತ್ತಿದ್ದು, ಮಾಜಿ ಸಿಎಂ ಒಂದು ರೀತಿ ಇದ್ದರೆ, ಡಿಸಿಎಂ ಒಂದು ರೀತಿ ಇರುತ್ತಾರೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡಬೇಕಾ ಅಥವಾ ಇಂತಹ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಕಾಲ ಹರಣ ಮಾಡಬೇಕೇ ಎಂದು ಪ್ರಶ್ನಿಸಿ ದೂರು ನೀಡಿದ್ದಾರೆ ಎನ್ನುವ ವಿಚಾರ ತಿಳಿದು ಬಂದಿದೆ.

    ಕಳೆದ ಕೆಲ ದಿನಗಳ ಹಿಂದೆಯೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಭಾಷಣವೊಂದರಲ್ಲಿ ಮತ್ತೆ ಸಿಎಂ ಆಗುವ ಕುರಿತು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕೆಲ ಕಾಂಗ್ರೆಸ್ ನಾಯಕರು ಬೆಂಬಲಿಸಿದ್ದರು. ಬಳಿಕ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದ ಸಿದ್ದರಾಮಯ್ಯ ಅವರು ಸಭೆಯಲ್ಲಿ ಕಾರ್ಯಕರ್ತರು ನಾನೇ ಸಿಎಂ ಎಂದು ಘೋಷಣೆ ಕೂಗುತ್ತಿದ್ದರು, ಹಾಗಾಗಿ ನಿಮ್ಮ ಆಶೀರ್ವಾದ ಇದ್ದರೆ ಆಗುತ್ತೇನೆ ಎಂದು ಹೇಳಿದ್ದೆ. ಇದರಿಂದ ಜೆಡಿಎಸ್ ಹಾಗೂ ಸಿಎಂ ಕುಮಾರಸ್ವಾಮಿಗೆ ಯಾವುದೇ ಇರುಸುಮುರುಸಾಗಲ್ಲ. ಕಾಂಗ್ರೆಸ್ ಶಾಸಕರು ಯಾರು ಬಿಜೆಪಿ ಸಂಪರ್ಕದಲ್ಲಿಲ್ಲ. ಇದು ಉಹಾಪೋಹ, ಬಿಜೆಪಿ ಎಲ್ಲ ನಾಯಕರು ನನ್ನೊಂದಿಗೂ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮನೆಗೆ ಮಾರಿ ಊರಿಗೆ ಉಪಕಾರಿ: ಈಶ್ವರನಂದ ಸ್ವಾಮೀಜಿ ಹೇಳಿಕೆಗೆ ತಿರುಗೇಟು ಕೊಟ್ಟ ಮಾಜಿ ಸಿಎಂ!

    ಮನೆಗೆ ಮಾರಿ ಊರಿಗೆ ಉಪಕಾರಿ: ಈಶ್ವರನಂದ ಸ್ವಾಮೀಜಿ ಹೇಳಿಕೆಗೆ ತಿರುಗೇಟು ಕೊಟ್ಟ ಮಾಜಿ ಸಿಎಂ!

    ಬಾಗಲಕೋಟೆ: ತನ್ನ ವಿರುದ್ಧ ಕನಕ ಪೀಠದ ಗುರುಗಳು ನೀಡಿದ ಹೇಳಿಕೆಗೆ ಇಂದು ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

    ಕನಕ ಪೀಠ ಗುರುಗಳಾದ ಈಶ್ವರನಂದ ಸ್ವಾಮೀಜಿಯವರು, ಕುರುಬ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ಕೊಡಿಸುವುದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರು ವಿಫಲರಾಗಿದ್ದಾರೆ. ಅಲ್ಲದೇ ಸಮುದಾಯದ ಯಾವೊಬ್ಬ ಶಾಸಕರ ಪರವು ದನಿ ಎತ್ತಲಿಲ್ಲ. ಸಿದ್ದರಾಮಯ್ಯನವರು ಮನೆಗೆ ಮಾರಿ ಊರಿಗೆ ಉಪಕಾರಿ ಎಂದು ಹೇಳಿಕೆ ನೀಡಿದ್ದರು.

    ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಪ್ರತಿಕ್ರಿಯಿಸಿ, ಸ್ವಾಮೀಜಿಯವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅಲ್ಲದೇ ನನ್ನ ತಂದೆ ಯಾವಾಗಲೂ ಅದೇ ರೀತಿ ಹೇಳುತ್ತಿದ್ದರು ಎಂದು ನೆನಪಿಸಿಕೊಂಡು, ಸ್ವಾಮೀಜಿಯವರ ಹೇಳಿಕೆಗೆ ನಿರ್ಲಕ್ಷದ ಉತ್ತರವನ್ನು ನೀಡಿದ್ದಾರೆ.

    ಕಾಂಗ್ರೆಸ್ ಅತೃಪ್ತ ಶಾಸಕರ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ, ಮಳೆ ನಿಂತ ಮೇಲೆ ಮರದ ಹನಿ ಬೀಳುವ ಹಾಗೇ ಅಲ್ಲಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಎಲ್ಲಾ ಅತೃಪ್ತ ಶಾಸಕರ ಜೊತೆ ಸಂಪರ್ಕದಲ್ಲಿ ಇದ್ದೇನೆ. ಯಾವುದೇ ತೊಂದರೆ ಇಲ್ಲ, ಎಲ್ಲಾ ಶಾಸಕರ ಅಸಮಾಧಾನ ಶಮನವಾಗಿದೆ ಎಂದು ಅತೃಪ್ತ ಶಾಸಕರ ಬಗ್ಗೆ ತಮ್ಮ ನಿಲುವನ್ನು ಸಮರ್ಥಿಸಿಕೊಂಡರು.

    ಬಾದಾಮಿ ಪ್ರವಾಸ ಕುರಿತು ಜಿ.ಪರಮೇಶ್ವರ್ ನೀಡಿದ ವ್ಯಂಗ್ಯ ಹೇಳಿಕೆ ಉತ್ತರಿಸದೆ, ನೋ ಕಮೆಂಟ್ಸ್ ಎಂದು ಹೇಳಿ, ಲಿಂಗಾಯತ ಪ್ರತ್ಯೇಕ ಧರ್ಮ ಕುರಿತು ಸಲ್ಲಿಸಿದ್ದ ಪ್ರಸ್ಥಾವನೆಯನ್ನು ಕೇಂದ್ರ ಸರ್ಕಾರ ಹಿಂತಿರುಗಿಸಿದ್ದರ ಬಗ್ಗೆ ಯಾವುದೇ ಹೇಳಿಕೆಯನ್ನು ನೀಡುವುದಿಲ್ಲ. ಈ ಕುರಿತು ಸರ್ಕಾರವೇ ಮುಂದಿನ ಕ್ರಮ ಕೈಗೊಳ್ಳುತ್ತದೆ. ಸಮನ್ವಯ ಸಮಿತಿಯಲ್ಲಿ ಭಾಗಿಯಾಗಿ ಚರ್ಚಿಸುತ್ತೇನೆ ಎಂದು ಪ್ರತಿಕ್ರಿಯಿಸಿದರು.

  • ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯನೇ ನೇರ ಕಾರಣ, ಪಕ್ಷದ ಪ್ರತಿಯೊಬ್ಬರಿಗೂ ಗೊತ್ತು: ಕೋಳಿವಾಡ

    ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯನೇ ನೇರ ಕಾರಣ, ಪಕ್ಷದ ಪ್ರತಿಯೊಬ್ಬರಿಗೂ ಗೊತ್ತು: ಕೋಳಿವಾಡ

    ಹಾವೇರಿ: ಸಿದ್ದರಾಮಯ್ಯ ನನಗಿಂತ 13 ವರ್ಷದ ಬಚ್ಚಾ, ಅವನಿಂದ ಕಾಂಗ್ರೆಸ್‍ಗೆ ಏನು ಅನುಕೂಲವಾಗಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಅವರು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.

    ನಾನು ಸೋತಿದ್ದೇನೆ. ಆದರೆ, ಪಕ್ಷವನ್ನು ಬಿಟ್ಟು ಹೋಗುವುದಿಲ್ಲ. 1996 ರಿಂದ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯನೇ ನೇರ ಕಾರಣ. ಇದು ಪಕ್ಷದ ಪ್ರತಿಯೊಬ್ಬರಿಗೂ ಗೊತ್ತು ಎಂದು ಅವರು ದೂರಿದ್ದಾರೆ.

    ನನ್ನ ಸೋಲಿಗೆ ಸಿಎಂ ಸಿದ್ದರಾಮಯ್ಯ ಪ್ರಚಾರ ಮಾಡದಿರುವುದೇ ಕಾರಣ. ಅವರ ಮೇಲೆ ಯಾವ ಒತ್ತಡ ಇತ್ತೋ ನನಗೆ ಗೊತ್ತಿಲ್ಲ. ನಾನು ಹರಕೆಯೆ ಕುರಿ ಆಗಿಲ್ಲ, ಬಲಿಪಶು ಆಗಿಲ್ಲ. ರಾಜಕೀಯದಲ್ಲಿ ಏನು ಬೇಕಾದ್ರೂ ಆಗಬಹುದು ಅಂತ ತಮ್ಮ ಪರ ಪ್ರಚಾರಕ್ಕೆ ಬಾರದ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಬಾಗೂರು ಮಂಜೇಗೌಡ ಪರೋಕ್ಷ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು.