Tag: Ex-Navy Officer

  • ನೌಕಾಪಡೆ 8 ಮಾಜಿ ಸಿಬ್ಬಂದಿಯ ಮರಣದಂಡನೆಗೆ ವಿರೋಧ – ಭಾರತದ ಮನವಿ ಸ್ವೀಕರಿಸಿದ ಕತಾರ್

    ನೌಕಾಪಡೆ 8 ಮಾಜಿ ಸಿಬ್ಬಂದಿಯ ಮರಣದಂಡನೆಗೆ ವಿರೋಧ – ಭಾರತದ ಮನವಿ ಸ್ವೀಕರಿಸಿದ ಕತಾರ್

    ನವದೆಹಲಿ: ಗೂಢಾಚಾರದ ಆರೋಪದ ಮೇಲೆ ಕಳೆದ ತಿಂಗಳು ಶಿಕ್ಷೆಗೆ ಗುರಿಯಾಗಿದ್ದ 8 ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗೆ (Ex-Navy Personnel) ಮರಣದಂಡನೆ ವಿಧಿಸುವುದರ ವಿರುದ್ಧ ಭಾರತ (India) ಸಲ್ಲಿಸಿದ್ದ ಮೇಲ್ಮನವಿಯನ್ನು ಕತಾರ್ (Qatar) ನ್ಯಾಯಾಲಯ ಸ್ವೀಕರಿಸಿದೆ.

    ಭಾರತದ ನೌಕಾಪಡೆಯ 8 ಮಾಜಿ ಸಿಬ್ಬಂದಿಗೆ ಮರಣದಂಡನೆ ವಿಧಿಸಿರುವುದನ್ನು ವಿರೋಧಿಸಿ ಭಾರತ ಸಲ್ಲಿಸಿದ ಮೇಲ್ಮನವಿಯನ್ನು ಕತಾರ್ ನ್ಯಾಯಾಲಯ ಪರಿಶೀಲಿಸಿದ ನಂತರ ವಿಚಾರಣೆಯ ದಿನಾಂಕವನ್ನು ನಿಗದಿಪಡಿಸುತ್ತದೆ ಎಂದು ಮೂಲಗಳು ತಿಳಿಸಿವೆ.

    ವರದಿಗಳ ಪ್ರಕಾರ ಗೂಢಾಚಾರಿಕೆ ಆರೋಪದ ಮೇಲೆ ಕತಾರ್‌ನ ಗುಪ್ತಚರ ಸಂಸ್ಥೆಯು 2022ರ ಆಗಸ್ಟ್‌ನಲ್ಲಿ ಭಾರತದ ನೌಕಾಪಡೆ 8 ಮಾಜಿ ಸಿಬ್ಬಂದಿಯನ್ನು ಬಂಧಿಸಿತು. ಆದರೆ ಕತಾರ್‌ನ ಅಧಿಕಾರಿಗಳು ಅವರ ವಿರುದ್ಧದ ಆರೋಪಗಳನ್ನು ಇನ್ನೂ ಬಹಿರಂಗಪಡಿಸಿಲ್ಲ. ಅವರ ಜಾಮೀನು ಅರ್ಜಿಗಳನ್ನು ಹಲವಾರು ಬಾರಿ ತಿರಸ್ಕರಿಸಲಾಗಿತ್ತು. ಕಳೆದ ತಿಂಗಳು ಅವರ ವಿರುದ್ಧದ ತೀರ್ಪನ್ನು ಕತಾರ್‌ನ ಪ್ರಥಮ ನಿದರ್ಶನದ ನ್ಯಾಯಾಲಯವು ಪ್ರಕಟಿಸಿತು. ಇದನ್ನೂ ಓದಿ: ಇಸ್ರೇಲ್-ಹಮಾಸ್ ನಡ್ವೆ ಇಂದಿನಿಂದ ಕದನ ವಿರಾಮ – 13 ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್‌ ಸಿದ್ಧತೆ

    ಕಮಾಂಡರ್ ಪೂರ್ಣೇಂದು ತಿವಾರಿ, ಕಮಾಂಡರ್ ಸುಗುಣಾಕರ್ ಪಕಾಲ, ಕಮಾಂಡರ್ ಅಮಿತ್ ನಾಗ್ಪಾಲ್, ಕಮಾಂಡರ್ ಸಂಜೀವ್ ಗುಪ್ತಾ, ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕ್ಯಾಪ್ಟನ್ ಸೌರಭ್ ವಸಿಷ್ಟ್ ಮತ್ತು ನಾವಿಕ ರಾಗೇಶ್ ಗೋಪಕುಮಾರ್ ಬಂಧಿತ ಭಾರತೀಯ ನೌಕಾಪಡೆಯ ಮಾಜಿ ಯೋಧರು.

    ಎಲ್ಲಾ ಮಾಜಿ ನೌಕಾಪಡೆಯ ಅಧಿಕಾರಿಗಳು ಭಾರತೀಯ ನೌಕಾಪಡೆಯಲ್ಲಿ 20 ವರ್ಷಗಳವರೆಗಿನ ವಿಶಿಷ್ಟ ಸೇವಾ ದಾಖಲೆಯನ್ನು ಹೊಂದಿದ್ದಾರೆ ಮತ್ತು ಪಡೆಯಲ್ಲಿ ಬೋಧಕರನ್ನು ಒಳಗೊಂಡಂತೆ ಪ್ರಮುಖ ಹುದ್ದೆಗಳನ್ನು ಹೊಂದಿದ್ದಾರೆ. ಇದನ್ನೂ ಓದಿ: ತಾಂತ್ರಿಕ ಅಡಚಣೆ – ಉತ್ತರಕಾಶಿ ಸುರಂಗದಲ್ಲಿ ಸಿಲುಕಿದವರ ರಕ್ಷಣೆ ವಿಳಂಬ

  • ಮಗನಿಂದಲೇ ಮಾಜಿ ನೌಕಾಪಡೆ ಅಧಿಕಾರಿಯ ಹತ್ಯೆ – ದೇಹದ ಭಾಗಗಳು ಕೊಳದಲ್ಲಿ ಪತ್ತೆ

    ಮಗನಿಂದಲೇ ಮಾಜಿ ನೌಕಾಪಡೆ ಅಧಿಕಾರಿಯ ಹತ್ಯೆ – ದೇಹದ ಭಾಗಗಳು ಕೊಳದಲ್ಲಿ ಪತ್ತೆ

    ಕೋಲ್ಕತ್ತಾ: ಮಾಜಿ ನೌಕಾಪಡೆ ಅಧಿಕಾರಿಯೊಬ್ಬರನ್ನು (Ex-Navy Officer) ತನ್ನ ಮಗನೇ (Son) ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಕೋಲ್ಕತ್ತಾದಲ್ಲಿ (Kolkata) ನಡೆದಿದೆ. ಮಾಜಿ ಅಧಿಕಾರಿಯ ಮೃತದೇಹ ಛಿದ್ರವಾದ ಸ್ಥಿತಿಯಲ್ಲಿ ಬುರುಯಿರ್‌ಪುರ ಪ್ರದೇಶದ ಕೊಳದಲ್ಲಿ ಪತ್ತೆಯಾಗಿದೆ.

    ಮೃತ ವ್ಯಕ್ತಿಯನ್ನು ಉಜ್ವಲ್ ಚಕ್ರವರ್ತಿ (55) ಎಂದು ಗುರುತಿಸಲಾಗಿದೆ. ಅವರು 2000 ಇಸವಿಯಲ್ಲಿ ನಿವೃತ್ತರಾದ ಭಾರತೀಯ ನೌಕಾಪಡೆಯ ಮಾಜಿ ನಾನ್ ಕಮಿಷನ್ಡ್ ಅಧಿಕಾರಿ ಎಂದು ಪೊಲೀಸರು ತಿಳಿಸಿದ್ದಾರೆ.

    CRIME

    ವರದಿಗಳ ಪ್ರಕಾರ ಚಕ್ರವರ್ತಿ ಅವರು ನಾಪತ್ತೆಯಾಗಿರುವುದಾಗಿ ನವೆಂಬರ್ 15 ರಂದು ಅವರ ಕುಟುಂಬದ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದಾರೆ. ಇದಾದ ಬಳಿಕ ಬುರುಯಿರ್‌ಪುರದ ಕೊಳದಲ್ಲಿ ಪ್ಲಾಸ್ಟಿಕ್‌ನಲ್ಲಿ ಸುತ್ತಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ಸಿಎಂ ಮಂಗಳೂರಿನಲ್ಲಿ ಇರುವಾಗಲೇ ಸ್ಕೆಚ್ – ಟೈಮರ್ ಕೈಕೊಟ್ಟು ದಾರಿ ಮಧ್ಯೆ ಬಾಂಬ್ ಸ್ಫೋಟ

    ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು, ಮಾಜಿ ಅಧಿಕಾರಿಯ ಹತ್ಯೆಯನ್ನು ಅವರ ಮಗನೇ ನಡೆಸಿರುವುದಾಗಿ ತಿಳಿದುಬಂದಿದೆ. ಉಜ್ವಲ್ ಚಕ್ರವರ್ತಿ ಮದ್ಯವ್ಯಸನಿಯಾಗಿದ್ದು, ತನ್ನ ಮಗನ ಮೇಲೆ ನಿರಂತರವಾಗಿ ಹಲ್ಲೆ ನಡೆಸುತ್ತಿದ್ದರು. ನವೆಂಬರ್ 14ರಂದು ಜಗಳ ಅತಿರೇಕಕ್ಕೆ ಹೋಗಿದ್ದು, ಮಗ ಪ್ರತೀಕಾರವಾಗಿ ತಂದೆಯ ಮೇಲೆ ದಾಳಿ ಮಾಡಿದ್ದಾನೆ. ಇದರಿಂದ ಉಜ್ವಲ್ ಚಕ್ರವರ್ತಿ ಸಾವನ್ನಪ್ಪಿದ್ದಾರೆ.

    crime

    ತಂದೆಯ ಕೊಲೆಯ ಬಳಿಕ ಅವರ ಛಿದ್ರವಾದ ಮೃತದೇಹವನ್ನು ಪ್ಲಾಸ್ಟಿಕ್‌ನಲ್ಲಿ ಸುತ್ತಿ, ಕೊಳದಲ್ಲಿ ಎಸೆದಿದ್ದಾರೆ. ಮಗನ ಕೃತ್ಯಕ್ಕೆ ಆತನ ತಾಯಿ ಕೂಡಾ ಸಹಾಯ ಮಾಡಿರುವುದಾಗಿ ತಿಳಿದುಬಂದಿದೆ. ಇದೀಗ ಘಟನೆಯ ಬಗ್ಗೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಇದನ್ನೂ ಓದಿ: ಜೈಪುರದಲ್ಲೊಂದು ಅಮಾನುಷ ಕೃತ್ಯ – ದಂಪತಿಗೆ ಚಪ್ಪಲಿ ಹಾರ ಹಾಕಿ, ಮೂತ್ರ ಕುಡಿಸಿದ್ರು

    Live Tv
    [brid partner=56869869 player=32851 video=960834 autoplay=true]