Tag: Excise Department Officers

  • ಟೈರ್ ಟ್ಯೂಬ್‍ನಲ್ಲಿ ಸಾಗಿಸುತ್ತಿದ್ದ 300 ಲೀಟರ್ ಕಳ್ಳಭಟ್ಟಿ ವಶ

    ಟೈರ್ ಟ್ಯೂಬ್‍ನಲ್ಲಿ ಸಾಗಿಸುತ್ತಿದ್ದ 300 ಲೀಟರ್ ಕಳ್ಳಭಟ್ಟಿ ವಶ

    ಚಿಕ್ಕೋಡಿ (ಬೆಳಗಾವಿ): ಟೈರ್ ಟ್ಯೂಬ್‍ನಲ್ಲಿ ಸಾಗಿಸುತ್ತಿದ್ದ 300 ಲೀಟರ್ ಕಳ್ಳಭಟ್ಟಿಯನ್ನು ಹುಕ್ಕೇರಿ ತಾಲೂಕಿನ ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಕೊರೊನಾ ವೈರಸ್ ಹರಡದಂತೆ ತಡೆದಲು ಕೇಂದ್ರ ಸರ್ಕಾರವು ದೇಶಾದ್ಯಂತ ಮೇ 3ರವರೆಗೂ ಲಾಕ್‍ಡೌನ್ ಘೋಷಿಸಿದೆ. ಇದರಿಂದಾಗಿ ಮದ್ಯ ಮಾರಾಟ ಬಂದ್ ಆಗಿದ್ದು, ಎಣ್ಣೆ ಪ್ರಿಯರು ಪರದಾಡುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಕಳ್ಳಭಟ್ಟಿ ದಂಧೆಕೋರರು ಮತ್ತೆ ಹೆಡೆ ಬಿಚ್ಚುತ್ತಿದ್ದು, ದಿನದಿಂದ ದಿನಕ್ಕೆ ಕಳ್ಳಭಟ್ಟಿ ತಯಾರಿಕೆ ಹೆಚ್ಚುತ್ತಲೇ ಇದೆ. ಇದರಿಂದಾಗಿ ಹುಕ್ಕೇರಿ ತಾಲೂಕಿನ ಅಬಕಾರಿ ಪೊಲೀಸರು ಕಳ್ಳ ಭಟ್ಟಿ ದಂಧೆಕೋರರ ಮೇಲೆ ದಾಳಿ ನಡೆಸಿ ಒಂದೇ ದಿನ ಯಮಕನಮರಡಿ ಹಾಗೂ ಹುಕ್ಕೇರಿ ಮತಕ್ಷೇತ್ರದಲ್ಲಿ 300 ಲೀಟರ್ ಕಳ್ಳಭಟ್ಟಿ ವಶಕ್ಕೆ ಪಡೆದುಕೊಡಿದ್ದಾರೆ.

    ಪ್ರತ್ಯೇಕ ಸ್ಥಳಗಳಲ್ಲಿ ಇಂದು ಪೊಲೀಸರು ದಾಳಿ ನಡೆಸಿ, ಕಳ್ಳಭಟ್ಟಿಯನ್ನ ವಶಕ್ಕೆ ಪಡೆದಿದ್ದಾರೆ. ಆದರೆ ಆರೋಪಿ ಬರುವ ಮಾಹಿತಿ ತಿಳಿದು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳಿಗೆ ಬಲೆ ಬೀಸಿದೆ.

    ಲಾಕ್‍ಡೌನ್ ಆದಾಗಿನಿಂದ ಈವರೆಗೂ ಹುಕ್ಕೇರಿ ಅಬಕಾರಿ ಠಾಣೆಯ ಅಧಿಕಾರಿಗಳು 13 ಪ್ರಕರಣಗಳಲ್ಲಿ 5 ಜನರನ್ನು ಬಂಧಿಸಿದ್ದು, 450 ಲೀಟರ್ ಕಳ್ಳಭಟ್ಟಿ ವಶಕ್ಕೆ ಪಡೆಯಲಾಗಿದೆ. ಅಲ್ಲದೇ 11 ದ್ವಿಚಕ್ರ ವಾಹನಗಳನ್ನು ಸೀಜ್ ಮಾಡಲಾಗಿದೆ. ಮಹಾರಾಷ್ಟ್ರದ ಗಡಿ ಭಾಗದಲ್ಲಿ ಮಾರುತ್ತಿದ್ದ 10 ಲೀಟರ್ ಮದ್ಯವನ್ನು ಹುಕ್ಕೇರಿ ಅಬಕಾರಿ ಪೊಲೀಸರು ಸೀಜ್ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಅಬಕಾರಿ ದಾಳಿಯಲ್ಲಿ ನಿರೀಕ್ಷಕ ಸತೀಶ್ ಕಾಗಲಿ, ಉಪ ನೀರಿಕ್ಷಕ ಮಲ್ಲೇಶ ಉಪ್ಪಾರ, ಮಲಿಕಸಾಬ್ ಪಾಶ್ಚಾಪೂರೆ, ಸಿಬ್ಬಂದಿ ಜಿ.ಡಿ.ಗಾಡೆ, ಬಸವರಾಜ, ಶಿವಾನಂದ ಚಿಕ್ಕಮಠ, ಬಸನಗೌಡ ಪಾಟೀಲ, ಕಾಡೇಶಿ ಗಡಾದ, ಉಮೇಶ್ ಕೋಳಿ, ಸುಶಾಂತ ಗುಗ್ಗರಿ ಇದ್ದರು.

  • ಅವಳಿ ನಗರದಲ್ಲಿ ಕದ್ದುಮುಚ್ಚಿ ಎಣ್ಣೆ ಮಾರಾಟ- 26 ದಿನದಲ್ಲಿ 40 ಲಕ್ಷ ಮೌಲ್ಯದ ಮದ್ಯ ವಶ

    ಅವಳಿ ನಗರದಲ್ಲಿ ಕದ್ದುಮುಚ್ಚಿ ಎಣ್ಣೆ ಮಾರಾಟ- 26 ದಿನದಲ್ಲಿ 40 ಲಕ್ಷ ಮೌಲ್ಯದ ಮದ್ಯ ವಶ

    ಹುಬ್ಬಳ್ಳಿ: ಅವಳಿ ನಗರ ಹುಬ್ಬಳ್ಳಿ-ಧಾರವಾಡದಲ್ಲಿ ಲಾಕ್‍ಡೌನ್ ಉಲ್ಲಂಘಿಸಿ ಕೆಲವೊಂದು ಮದ್ಯ ಮಾರಾಟಗಾರರು ಕದ್ದು ಮುಚ್ಚಿ ಮಾರಾಟ ಮಾಡುವುದು ಬೆಳಕಿಗೆ ಬಂದಿದೆ. ಕಳೆದ 25ದಿನಗಳಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ವಿವಿಧಕಡೆ ದಾಳಿ ನಡೆಸಿ 40 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ.

    ಮದ್ಯ ಮಾರಾಟಗಾರರು ತಮ್ಮ ಅಂಗಡಿ ಕಳ್ಳತನವಾಗಿದೆ ಎಂದು ಪ್ರತಿ ಬಿಂಬಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಯು, ನಿಮ್ಮ ಬಳಿ ಇರುವ ಮದ್ಯ ಮತ್ತು ಬೀಯರ್ ದಾಸ್ತಾನನ್ನು ಸಂರಕ್ಷಿಸಿಕೊಳ್ಳುವಂತೆ ಸೂಚಿಸಿದೆ. ಜೊತೆಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡಿರುವ ನಾಲ್ಕು ಲೈಸೆನ್ಸ್ ಗಳನ್ನು ರದ್ದುಗೊಳಿಸಲು ಹಾಗೂ ಕ್ರಮ ಜರುಗಿಸಲು ಮುಂದಾಗಿದೆ.

    ಹುಬ್ಬಳ್ಳಿಯ ಒರಿಜಿನಲ್ ಬಾರ್ ಅಂಡ್ ರೆಸ್ಟೋರೆಂಟ್, ಧಾರವಾಡದ ವೈಶಾಲಿ ಹೋಟೆಲ್, ದುರ್ಗಾ ವೈನ್ಸ್ ಧಾರವಾಡ ಹಾಗೂ ಶ್ರೀನಿಧಿ ಎಂಟಪ್ರ್ರೈಸ್‍ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆದಿತ್ತು. ಈ ಬಗ್ಗೆ ಮಾಹಿತಿ ಪಡೆದಿದ್ದ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಮದ್ಯ ವಶಕ್ಕೆ ಪಡೆದಿದ್ದರು. ಜೊತೆಗೆ ಈ ನಾಲ್ಕು ಬಾರ್ ಗಳ ಪರವಾನಿಗೆ ರದ್ದುಗೊಳಿಸಲು ಅಬಕಾರಿ ಇಲಾಖೆ ಮುಂದಾಗಿದೆ.

    ಮಾರ್ಚ್ 21ರಿಂದ ಏಪ್ರಿಲ್ 15ರವರೆಗೆ ಎರಡು ಕಳ್ಳಬಟ್ಟಿ ಅಡ್ಡೆ ಸೇರಿದಂತೆ 213 ಕಡೆಗಳಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 11 ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪೈಕಿ 9 ಆರೋಪಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈವರೆಗೂ ಜಿಲ್ಲೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 7,494 ಲೀಟರ್ ಮದ್ಯ ಹಾಗೂ 9,089 ಲೀಟರ್ ಬೀಯರ್, 2.5 ಲೀಟರ್ ನೀರು ಮಿಶ್ರಿತ ಮದ್ಯ ಸಾರ ಸೇರಿದಂತೆ ಒಟ್ಟು 40 ಲಕ್ಷ ರೂ. ಮೌಲ್ಯದ ಮದ್ಯವನ್ನು ಅಬಕಾರಿ ಇಲಾಖೆ ವಶಪಡಿಸಿಕೊಂಡಿದೆ.

    ಧಾರವಾಡ ಜಿಲ್ಲೆಯಲ್ಲಿನ ಎಲ್ಲಾ 276 ಮದ್ಯದ ಅಂಗಡಿಗಳನ್ನು ಈಗಾಗಲೇ ಬಂದ್ ಮಾಡಲಾಗಿದೆ. ಹೀಗಿದ್ದರೂ ಅಕ್ರಮ ಚಟುವಟಿಕೆ ನಡೆದಲ್ಲಿ ಅಬಕಾರಿ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಇಲಾಖೆಯ ಉಪ ಆಯುಕ್ತ ಶಿವನಗೌಡ ಮನವಿ ಮಾಡಿದ್ದಾರೆ.

  • ಲಾಕ್‍ಡೌನ್ ನಡುವೆ ಮದ್ಯ ಮಾರಾಟಕ್ಕೆ ಯತ್ನಿಸಿ ಸಿಕ್ಕಿ ಬಿದ್ದ ಮೂವರು

    ಲಾಕ್‍ಡೌನ್ ನಡುವೆ ಮದ್ಯ ಮಾರಾಟಕ್ಕೆ ಯತ್ನಿಸಿ ಸಿಕ್ಕಿ ಬಿದ್ದ ಮೂವರು

    ರಾಮನಗರ: ಹೆಮ್ಮಾರಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಆದರೆ ರಾಮನಗರ ಜಿಲ್ಲೆಯಾದ್ಯಂತ ಕಾಳಸಂತೆಯಲ್ಲಿ ಮಾರಾಟ ಹಾಗೂ ದಾಸ್ತಾನು ಮಾಡಿಕೊಂಡಿದ್ದ ಮೂರು ಕಡೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಮೂವರನ್ನು ವಶಕ್ಕೆ ಪಡೆದಿದ್ದಾರೆ.

    ಅದರಲ್ಲೂ ರಾಮನಗರ ತಾಲೂಕಿನ ಕುಂಬಾಪುರ ಗೇಟ್‍ನಲ್ಲಿನ ಬ್ಲೂ ಸ್ಟಾರ್ ಡಾಬಾ, ಲಕ್ಷ್ಮೀಪುರ, ಬಸವನ ಪುರ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ದಾಸ್ತಾನು ಮಾಡಲಾಗಿತ್ತು. ಎಣ್ಣೆ ಖರೀದಿ ಬರುವ ಮದ್ಯ ಪ್ರಿಯರಿಗೆ, ಎರಡು ಇಲ್ಲವೇ ಮೂರು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಆರೋಪಿಗಳು ಮುಂದಾಗಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದು ಆರು ಕೇಸ್ ಬಿಯರ್ ಹಾಗೂ ನಾಲ್ಕು ಕೇಸ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಲಾಕ್‍ಡೌನ್ ಆರಂಭವಾದಾಗಿನಿಂದ ಇಲ್ಲಿಯ ತನಕ ಜಿಲ್ಲೆಯಾದ್ಯಂತ ಅಬಕಾರಿ ಇಲಾಖೆ ಅಧಿಕಾರಿಗಳು 293 ಕಡೆ ದಾಳಿ ನಡೆಸಿದ್ದಾರೆ. ಈ ಮೂಲಕ 36.075 ಲೀಟರ್ ಮದ್ಯ ಮತ್ತು 61.150 ಲೀ ಬಿಯರ್ ಅನ್ನು ಜಪ್ತಿ ಪಡಿಸಿಕೊಂಡು 05 ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.