Tag: excise police

  • ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ದಂಪತಿ ಬಂಧನ – 400 ಲೀಟರ್ ಸೇಂದಿ ಜಪ್ತಿ

    ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ದಂಪತಿ ಬಂಧನ – 400 ಲೀಟರ್ ಸೇಂದಿ ಜಪ್ತಿ

    ರಾಯಚೂರು: ಅಬಕಾರಿ ಪೊಲೀಸರು (Excise Police) ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ದಂಪತಿಯನ್ನು ಬಂಧಿಸಿ 400 ಲೀ. ಸೇಂದಿ ವಶಕ್ಕೆ ಪಡೆದಿದ್ದಾರೆ.ಇದನ್ನೂ ಓದಿ: ಹಿಂದೂಗಳ ಸುರಕ್ಷತೆ ಖಚಿತಪಡಿಸಿ: ಚಿನ್ಮಯ್‌ ಕೃಷ್ಣ ದಾಸ್ ಬಂಧಿಸಿದ್ದಕ್ಕೆ ಬಾಂಗ್ಲಾಗೆ ಭಾರತ ತರಾಟೆ

    ಇತ್ತೀಚಿಗೆ ಜಿಲ್ಲೆಯಲ್ಲಿ ಅಬಕಾರಿ ಅಧಿಕಾರಿಗಳು ನಿರಂತರ ದಾಳಿ ನಡೆಸುತ್ತಿದ್ದು, ಇದೀಗ ನಗರದ ಗದ್ವಾಲ್ ರಸ್ತೆಯ ವೀರಾಂಜನೇಯ ಸ್ವಾಮಿ ದೇವಸ್ಥಾನ ಬಳಿಯಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸುಮಾರು 400 ಲೀಟರ್ ಕಲಬೆರಕೆ ಸೇಂದಿ ಜಪ್ತಿ ಮಾಡಿದ್ದಾರೆ. ಅಕ್ರಮ ಮಾರಾಟದಲ್ಲಿ ತೊಡಗಿದ್ದ ಹಣಮಂತ, ಲಕ್ಷ್ಮಿ ದಂಪತಿಯನ್ನ ವಶಕ್ಕೆ ಪಡದಿದ್ದಾರೆ.

    ದಂಪತಿ ಪಾತ್ರೆ, ಸಾಮಾನುಗಳನ್ನು ಮಾರಾಟ ಮಾಡಿ ಜೀವನ ನಡೆಸುತ್ತಿದ್ದರು. ಬಳಿಕ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೆ ಹೋಗಿ ಸೇಂದಿ ಮಾರಾಟ ಮಾಡುತ್ತಿದ್ದರು. ದಿನನಿತ್ಯದಂತೆ ಬೆಳಿಗ್ಗೆ ಸೇಂದಿ ಪ್ಯಾಕ್ ಮಾಡುವಾಗ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಕಲಬೆರಕೆ ಸೇಂದಿ ಹಾಗೂ ರಾಸಾಯನಿಕ ವಸ್ತುಗಳನ್ನ ಜಪ್ತಿ ಮಾಡಿದ್ದಾರೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಅಬಕಾರಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಇದನ್ನೂ ಓದಿ: ಡಿವೋರ್ಸ್ ಬಳಿಕ ಸೆಕೆಂಡ್ ಹ್ಯಾಂಡ್ ಎಂದು ಟೀಕಿಸಿದರು: ಸಮಂತಾ

  • ಬೆಂಗಳೂರು ಮನೆಯಲ್ಲಿ ಗೋವಾ ಮದ್ಯ – 5 ಲಕ್ಷ ರೂ. ಮೌಲ್ಯದ 144 ಬಾಟಲಿ ಜಪ್ತಿ

    ಬೆಂಗಳೂರು ಮನೆಯಲ್ಲಿ ಗೋವಾ ಮದ್ಯ – 5 ಲಕ್ಷ ರೂ. ಮೌಲ್ಯದ 144 ಬಾಟಲಿ ಜಪ್ತಿ

    ಬೆಂಗಳೂರು: ನಗರದ ದಕ್ಷಿಣ ವಿಭಾಗ ಅಬಕಾರಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ 5 ಲಕ್ಷ ರೂ. ಮೌಲ್ಯದ 144 ಬಾಟಲಿ ಗೋವಾ (Goa) ಲಿಕ್ಕರ್ ಪತ್ತೆಯಾಗಿದ್ದು, ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಕತ್ರಿಗುಪ್ಪೆ (Katriguppe) ನಿವಾಸಿ ಪುರುಷೋತ್ತಮ್ ಎಂದು ಗುರುತಿಸಲಾಗಿದೆ.

    ಆರೋಪಿ ಗೋವಾದಿಂದ ಕಡಿಮೆ ಬೆಲೆಗೆ ಮದ್ಯ ತರಿಸಿಕೊಳ್ಳುತ್ತಿದ್ದ. ಗೋವಾದಲ್ಲಿರುವ ಅಂಗಡಿಯವರ ಸಂಪರ್ಕದ ಮೇರೆಗೆ ಬೆಂಗಳೂರಿಗೆ ಮದ್ಯ ತರಿಸಿಕೊಳ್ಳುತ್ತಿದ್ದ. ತನಗೆ ಬೇಕಾದಾಗಲೆಲ್ಲಾ ತಿಳಿಸಿ ಬಸ್‌ನಲ್ಲಿ ಮದ್ಯದ ಬಾಟಲ್ ಇಡುವಂತೆ ಹೇಳುತ್ತಿದ್ದ. ಬಳಿಕ ಇಲ್ಲಿಗೆ ಬರುತ್ತಿದ್ದಂತೆ ಇಳಿಸಿಕೊಳ್ಳುತ್ತಿದ್ದ. ನಂತರ ಮನೆಗೆ ತೆಗೆದುಕೊಂಡು ಹೋಗಿ ಸ್ಟಾಕ್ ಮಾಡುತ್ತಿದ್ದ. ಇದನ್ನು ಕಡಿಮೆ ಬೆಲೆಗೆ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ.ಇದನ್ನೂ ಓದಿ: ಸತತ 35 ಗಂಟೆಗಳ ಇಡಿ ದಾಳಿ ಅಂತ್ಯ – 2 ದಿನ, 5 ಅಧಿಕಾರಿಗಳಿಂದ ಮಹತ್ವದ ದಾಖಲೆ ಸಂಗ್ರಹ!

    ಅ.27 ರಂದು ಪುರುಷೋತ್ತಮ್ ದ್ವಿಚಕ್ರ ವಾಹನ ನಿಲ್ಲಿಸಿಕೊಂಡು ಬನಶಂಕರಿ ಎರಡನೇ ಹಂತದಲ್ಲಿ ನಿಂತಿದ್ದ. ಆತನ ಚಲನವಲನ ಅಬಕಾರಿ ಅಧಿಕಾರಿಗಳಿಗೆ ಅನುಮಾನ ಹುಟ್ಟಿಸಿತ್ತು. ಈ ವೇಳೆ ಬ್ಯಾಗ್ ತೆಗೆದು ಪರಿಶೀಲಿಸಿದಾಗ ಮದ್ಯದ ಬಾಟಲ್ ಪತ್ತೆಯಾಗಿದೆ. ಬಾಟಲ್ ಮೇಲೆ ಫಾರ್ ಸೇಲ್ ಇನ್ ಗೋವಾ ಓನ್ಲಿ ಎಂದು ನಮೂದಾಗಿದ್ದು ಕಂಡು ಅವುಗಳು ಗೋವಾದಲ್ಲಿ ತಯಾರಿಸಲಾಗಿದ್ದ ಮದ್ಯದ ಬಾಟಲ್ ಎಂದು ತಿಳಿದಿದೆ.

    ಬಳಿಕ ಆತನ ಮೊಬೈಲ್ ಪರಿಶೀಲಿಸಿದಾಗ ಗೋವಾ ರಾಜ್ಯದ ಮದ್ಯದ ಅಂಗಡಿ ಜೊತೆಗಿನ ನಂಟು ಬಯಲಾಗಿದೆ. ಜೊತೆಗೆ ಮದ್ಯ ತರಿಸಿದ್ದ ಬಿಲ್ಲುಗಳು ಕೂಡ ಪತ್ತೆಯಾಗಿದೆ. ನಂತರ ಕತ್ರಿಗುಪ್ಪೆ ಮನೆಗೆ ಕರೆದೊಯ್ದು ಶೋಧಿಸಿದಾಗ ಅಕ್ರಮ ಮದ್ಯದ ಬಾಟಲ್‌ಗಳು ಇರುವುದು ತಿಳಿದುಬಂದಿದೆ. ಮನೆಯಲ್ಲಿದ್ದ ಮದ್ಯದ ಬಾಟಲ್‌ಗಳನ್ನು ನೋಡಿ ಅಬಕಾರಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ.

    ಸದ್ಯ ಅಬಕಾರಿ ಕಾಯ್ದೆ 1965ರ ಕಲಂ 11, 14, 15, 38(ಎ), 43(ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.ಇದನ್ನೂ ಓದಿ: ಬೆಳಕಿನ ಹಬ್ಬ – ಶ್ರೀರಾಮನ ಪುನರಾಗಮನ!

  • ಪುಷ್ಪಾ ಸಿನಿಮಾ ರೀತಿ ಲಿಕ್ಕರ್ ಸ್ಮಗ್ಲಿಂಗ್ – 54 ಲಕ್ಷ ಮೌಲ್ಯದ ಮದ್ಯ ಜಪ್ತಿ ಮಾಡಿದ ಅಬಕಾರಿ ಪೊಲೀಸರು

    ಪುಷ್ಪಾ ಸಿನಿಮಾ ರೀತಿ ಲಿಕ್ಕರ್ ಸ್ಮಗ್ಲಿಂಗ್ – 54 ಲಕ್ಷ ಮೌಲ್ಯದ ಮದ್ಯ ಜಪ್ತಿ ಮಾಡಿದ ಅಬಕಾರಿ ಪೊಲೀಸರು

    ಬೆಳಗಾವಿ: ಪುಷ್ಪಾ ಸಿನಿಮಾ ಮಾದರಿಯಲ್ಲಿ ಲಿಕ್ಕರ್ ಸ್ಮಗ್ಲಿಂಗ್ (Liquor Smuggling) ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, 54 ಲಕ್ಷ ರೂ. ಮೌಲ್ಯದ ಮದ್ಯವನ್ನು ಅಬಕಾರಿ ಪೊಲೀಸರು (Excise Police) ಜಪ್ತಿ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

    ಖಚಿತ ಮಾಹಿತಿ ಮೇರೆಗೆ ಬೆಳಗಾವಿಯ ಸುವರ್ಣಸೌಧ ಬಳಿ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು ಖದೀಮರ ಕೈಚಳಕಕ್ಕೆ ಅಬಕಾರಿ ಪೊಲೀಸರೇ ಹೌಹಾರಿದ್ದಾರೆ. ಪುಷ್ಪಾ ಸಿನಿಮಾದಲ್ಲಿ ಹಾಲು ಪೂರೈಸುವ ಟ್ಯಾಂಕರ್‌ನಲ್ಲಿ ರಕ್ತ ಚಂದನ ಸಾಗಾಟ ಮಾಡಿದರೆ ಈ ಗ್ಯಾಂಗ್ ಪ್ಲೈವುಡ್ ಸಾಗಿಸುವ ಲಾರಿಯಲ್ಲಿ ಲಿಕ್ಕರ್ ಸ್ಮಗ್ಲಿಂಗ್ ಮಾಡಿದೆ.

    ಹೈಟೆಕ್ ಲಿಕ್ಕರ್ ಸ್ಮಗ್ಲಿಂಗ್ ಜಾಲ ಭೇದಿಸಿದ ಬೆಳಗಾವಿ ಅಬಕಾರಿ ಪೊಲೀಸರು ಲಾರಿ ಸೇರಿ 54 ಲಕ್ಷ ರೂ. ಮೌಲ್ಯದ ಬೆಳೆಬಾಳುವ ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ಸಾಗಾಟ ಮಾಡುತ್ತಿದ್ದ ಗ್ಯಾಂಗ್ ಗೋವಾದಲ್ಲಿ ಚೀಪ್ ರೇಟ್‌ಗೆ ಮದ್ಯ ಖರೀದಿಸಿ ಅಕ್ರಮವಾಗಿ ಬೇರೆ ರಾಜ್ಯಕ್ಕೆ ಸಾಗಾಟ ಮಾಡುತ್ತಿತ್ತು. ಗೋವಾದಿಂದ ಈ ಮದ್ಯವನ್ನು ಯಾವ ರಾಜ್ಯಕ್ಕೆ ಕಳುಹಿಸಲಾಗುತ್ತಿತ್ತು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಮಹಿಳೆಯ ಮೇಲೆ ಅತ್ಯಾಚಾರ ಆರೋಪ- ತೆಲಂಗಾಣ ಕಾಂಗ್ರೆಸ್ ನಾಯಕನಿಗೆ ನೋಟಿಸ್

    ಪ್ರಕರಣ ಸಂಬಂಧ ಉತ್ತರ ಪ್ರದೇಶದ ಬನಾರಸ್ ಮೂಲದ ವೀರೇಂದ್ರ ಮಿಶ್ರಾ (34) ಬಂಧನ ಮಾಡಲಾಗಿದೆ. ಪ್ರಕರಣ ಕುರಿತು ಅಬಕಾರಿ ಅಪರ ಆಯುಕ್ತ ಮಂಜುನಾಥ್ ಮಾಹಿತಿ ನೀಡಿದ್ದು ಹೈಟೆಕ್ ಆಗಿ ಗೋವಾದಿಂದ ಲಿಕ್ಕರ್ ಸ್ಮಗ್ಲಿಂಗ್ ಮಾಡುತ್ತಿದ್ದ ವಾಹನದ ಮೇಲೆ ದಾಳಿ ಮಾಡಿದ್ದೇವೆ. ಇದು ಹೈಪ್ರೋಲ್ ಹಾಗೂ ವಿಶೇಷ ಪ್ರಕರಣವಾಗಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

    ಬೆಲೆಬಾಳುವ ಮದ್ಯದ ಬಾಟಲಿಗಳನ್ನೇ ಪ್ಲೈವುಡ್ ಮಧ್ಯದಲ್ಲಿಟ್ಟು ಸಾಗಾಟ ಮಾಡುತ್ತಿದ್ದರು. ಇದು ಯಾರೂ ಪತ್ತೆ ಮಾಡದ ವಿಶೇಷ ಪ್ರಕರಣವಾಗಿದೆ. ಕಳೆದ 20 ದಿನಗಳ ಹಿಂದೆ ನಮ್ಮಿಂದ ವಾಹನ ತಪ್ಪಿಸಿಕೊಂಡಿತ್ತು. ಸದ್ಯ ವಿಶೇಷ ಕಾರ್ಯಾಚರಣೆ ಮೂಲಕ ಪ್ರಕರಣ ಭೇದಿಸಿದ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ – ಅಭಿಮಾನಿಯಿಂದ ಕುಂಕುಮ ಅಕ್ಷತೆ ಸ್ವೀಕರಿಸಿದ ಮಾಜಿ ಸಿಎಂ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಯಚೂರಿನಲ್ಲಿ ಅಬಕಾರಿ ಪೊಲೀಸರ ದಾಳಿ- ಮಹಿಳೆ ವಶ

    ರಾಯಚೂರು: ಅಕ್ರಮ ಸೇಂದಿ ತಯಾರಿಕಾ ದಂಧೆ ನಡೆಸುತ್ತಿದ್ದ ಮನೆ ಮೇಲೆ ಅಬಕಾರಿ ಪೊಲೀಸರು (Excise police) ದಾಳಿ ನಡೆಸಿ ಮಹಿಳೆಯನ್ನು ವಶಕ್ಕೆ ಪಡೆದ ಘಟನೆ ತಿಮ್ಮಾಪೂರಪೇಟೆಯಲ್ಲಿ (Timmapurpet)ನಡೆದಿದೆ.

    ಆಂಜನೇಯ ಎಂಬಾತನಿಗೆ ಸೇರಿದ ಮನೆಯಲ್ಲಿ ಅಕ್ರಮ ಸೇಂದಿ ತಯಾರಿಕಾ ದಂಧೆ ನಡೆಯುತ್ತಿತ್ತು. ಸೇಂದಿ ತಯಾರಿಕೆಯಲ್ಲಿ ತೊಡಗಿದ್ದ ಆರೋಪಿ ಮಹಿಳೆ ಪಾರ್ವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ದೆಹಲಿಯ ಬ್ರಿಟಿಷ್‌ ಹೈಕಮೀಷನ್‌ಗೆ ನೀಡಿದ ಭದ್ರತೆ ತೆಗೆದು ಯುಕೆಗೆ ಬಿಸಿ ಮುಟ್ಟಿಸಿದ ಭಾರತ

    ದಾಳಿ ವೇಳೆ 12 ಕೆ.ಜಿ ಸಿಎಚ್ ಪೌಡರ್, 2 ಲೀಟರ್ ಕಲಬೆರಕೆ ಸೇಂದಿ, 2 ಮೊಬೈಲ್ ಸೇರಿದಂತೆ ಕಲಬೆರಕೆ ಸೇಂದಿ ತಯಾರಿಕೆಗೆ ಬಳಸುತ್ತಿದ್ದ 86,100 ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

    ಈ ಸಂಬಂಧ ರಾಯಚೂರು (Raichur) ವಲಯ ಅಬಕಾರಿ ಉಪ ನಿರೀಕ್ಷಕರು ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಖರ್ಗೆ ತವರು ಜಿಲ್ಲೆಯಲ್ಲಿ ಆಪರೇಷನ್ ಹಸ್ತ- ಹಾಲಿ ಬಿಜೆಪಿ ಶಾಸಕರಿಗೆ ಗಾಳ

  • ರಾಯಚೂರು ಅಬಕಾರಿ ಪೊಲೀಸರ ದಾಳಿ – 2.77 ಲಕ್ಷ ಮೌಲ್ಯದ ಮದ್ಯ ಜಪ್ತಿ

    ರಾಯಚೂರು ಅಬಕಾರಿ ಪೊಲೀಸರ ದಾಳಿ – 2.77 ಲಕ್ಷ ಮೌಲ್ಯದ ಮದ್ಯ ಜಪ್ತಿ

    ರಾಯಚೂರು: ಅಕ್ರಮವಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಸಾಗಣೆ ಮಾಡುತ್ತಿದ್ದ ಆರೋಪಿಯನ್ನ ಅಬಕಾರಿ ಪೊಲೀಸರು ರೆಡ್‍ಹ್ಯಾಂಡ್ ಆಗಿ ಹಿಡಿದಿದ್ದಾರೆ.

    ರಾಯಚೂರು ತಾಲೂಕಿನ ಚಿಕ್ಕಮಂಚಾಲಿ ಬಳಿ ಮದ್ಯ ಸಾಗಾಟ ಮಾಡುತ್ತಿದ್ದ ಆಟೋ ಜಪ್ತಿ ಮಾಡಿದ್ದಾರೆ. ತಲಮಾರಿ ಗ್ರಾಮದ ಖಾಜಾ ಹುಸೇನ್ ಎಂಬಾತ ಅಕ್ರಮವಾಗಿ ಮದ್ಯ ಸಾಗಾಣೆ ಮಾಡುತ್ತಿದ್ದ. ದಾಳಿ ವೇಳೆ ಅಬಕಾರಿ ಪೊಲೀಸರು 2,41,920 ಲೀಟರ್ ಮದ್ಯ ಮತ್ತು 78 ಸಾವಿರ ಲೀಟರ್ ಬಿಯರ್ ಜಪ್ತಿಮಾಡಿದ್ದಾರೆ. ಇದನ್ನೂ ಓದಿ: ನಡು ರಸ್ತೆಯಲ್ಲೇ ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

    ಸುಮಾರು 2,77,996 ರೂ.ಮೌಲ್ಯದ ಮದ್ಯ ಜಪ್ತಿಯಾಗಿದೆ. ದಾಳಿ ಹಿನ್ನೆಲೆ ರಾಯಚೂರು ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅತ್ಯಾಚಾರಕ್ಕೆ ವಿರೋಧಿಸಿದ ವೃದ್ಧೆಯ ಖಾಸಗಿ ಅಂಗಗಳ ಮೇಲೆ ಹಲ್ಲೆ ನಡೆಸಿ ಕೊಲೆಗೈದ!

  • 5 ಲಕ್ಷ ಮೌಲ್ಯದ ಮಾದಕ ದ್ರವ್ಯ ಅಫೀಮು ವಶ

    5 ಲಕ್ಷ ಮೌಲ್ಯದ ಮಾದಕ ದ್ರವ್ಯ ಅಫೀಮು ವಶ

    ವಿಜಯಪುರ: ಜಿಲ್ಲೆಯ ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐದು ಲಕ್ಷ ಮೌಲ್ಯದ ಮಾದಕ ದ್ರವ್ಯ ಅಫೀಮನ್ನ ವಶಕ್ಕೆ ಪಡೆದಿದ್ದಾರೆ.

    ಕರ್ನಾಟಕ-ಮಹಾರಾಷ್ಟ್ರದ ವಿಜಯಪುರ ಜಿಲ್ಲೆಯ ಗಡಿ ಶಿರಾಡೋಣ ಗ್ರಾಮದ ಹತ್ತಿರ ರಾಜಸ್ಥಾನಕ್ಕೆ ಸೇರಿದ ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ಅಫೀಮನ್ನ ವಶಕ್ಕೆ ಪಡೆಯಲಾಗಿದೆ. ಇನ್ನೂ 12.50 ಕೆಜೆ ಅಫೀಮು ಪುಡಿ ಸಿಕ್ಕಿದ್ದು, ರಾಜಸ್ಥಾನ ಮೂಲದ ಲಾರಿ ಚಾಲಕ ಸತೀಶ್ ಚೌಧರಿಯನ್ನ ಬಂಧಿಸಲಾಗಿದೆ. ಜೊತೆಗೆ ಐದು ಲಕ್ಷ ಮೌಲ್ಯದ ಅಫೀಮು ಮತ್ತು 25 ಲಕ್ಷ ಮೌಲ್ಯದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.

    ವಿಜಯಪುರದ ಮೂಲಕ ಬೆಂಗಳೂರಿಗೆ ಅಫೀಮನ್ನು ಸಾಗಿಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ರಾಜಸ್ಥಾನ-ಮಧ್ಯಪ್ರದೇಶದ ಅಧಿಕಾರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗುವುದು. ಅಲ್ಲಿಯೂ ತನಿಖೆ ನಡೆಸುವಂತೆ ಕೋರಲಾಗುವುದು. ಜೊತೆಗೆ ಬೆಂಗಳೂರಿನಲ್ಲಿಯೂ ತನಿಖೆ ನಡೆಸಲು ಶಿಫಾರಸು ಮಾಡಲಾಗುವುದು ಎಂದು ವಿಜಯಪುರ ಅಬಕಾರಿ ಡಿಸಿ ಕೆ.ಅರುಣ್‍ಕುಮಾರ್ ಹೇಳಿದ್ದಾರೆ.

  • ಇಟ್ಟಿಗೆಗಳ ಮಧ್ಯೆ ಸಾಗಿಸುತ್ತಿದ್ದ 15 ಲಕ್ಷ ಮೌಲ್ಯದ ಗೋವಾ ಮದ್ಯ ವಶ

    ಇಟ್ಟಿಗೆಗಳ ಮಧ್ಯೆ ಸಾಗಿಸುತ್ತಿದ್ದ 15 ಲಕ್ಷ ಮೌಲ್ಯದ ಗೋವಾ ಮದ್ಯ ವಶ

    – ಮಧ್ಯಪ್ರದೇಶದ ಇಬ್ಬರು ಅರೆಸ್ಟ್

    ಚಿಕ್ಕೋಡಿ: ಲಾರಿಯಲ್ಲಿ ಇಟ್ಟಿಗೆಗಳ ಮಧ್ಯೆ ಅಕ್ರಮವಾಗಿ ಗೋವಾ ರಾಜ್ಯದಿಂದ ಗುಜರಾತ್ ರಾಜ್ಯಕ್ಕೆ ಸಾಗಾಟ ಮಾಡುತ್ತಿದ್ದ 15 ಲಕ್ಷ ರೂ. ಮೌಲ್ಯದ 600 ಅಕ್ರಮ ಮದ್ಯದ ಬಾಟಲಿಗಳನ್ನು ಚಿಕ್ಕೋಡಿ ಉಪ ವಿಭಾಗದ ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಜೊತೆಗೆ ಇಬ್ಬರನ್ನು ಅರೆಸ್ಟ್ ಮಾಡಿದ್ದು, ಮಧ್ಯಪ್ರದೇಶ ರಾಜ್ಯದ ಇಂದೋರಿನ ಧನಪಾಲಸಿಂಗ್ ತೋಮರ್, ರಾಜು ಕಂಠಿ ಬಂಧಿತರು. ಆರೋಪಿಗಳು ಲಾರಿಯಲ್ಲಿ ಇಟ್ಟಿಗೆಗಳ ಮಧ್ಯೆ ಮದ್ಯದ ಬಾಟಲಿಗಳ ಬಾಕ್ಸ್ ಗಳನ್ನು ತುಂಬಿ ಸಾಗಿಸುತ್ತಿದ್ದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ರಾಧಾನಗರ ರಸ್ತೆ ಅಂಡರ್ ಪಾಸ್ ತಿರುವಿನ ಹತ್ತಿರ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೋಲಿಸರು ದಾಳಿ ನಡೆಸಿದ್ದಾರೆ.

    ಜಪ್ತಾದ ಗೋವಾ ರಾಜ್ಯದ 15 ಲಕ್ಷ ಮೌಲ್ಯದ ಮದ್ಯ ಹಾಗೂ ವಾಹನದ ಮೌಲ್ಯ 20 ಲಕ್ಷ ಹೀಗೆ ಒಟ್ಟು 35 ಲಕ್ಷ್ಯದ ಮೌಲ್ಯ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಕುರಿತು ಚಿಕ್ಕೋಡಿ ಉಪವಿಭಾಗ ಅಬಕಾರಿ ಉಪ ಅಧೀಕ್ಷಕರು ವಿಜಯಕುಮಾರ ಹೀರೆಮಠ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

  • ಅಕ್ರಮ ಮದ್ಯ ಮಾರಾಟ ಪರಿಶೀಲನೆ- ಬೀದಿಯಲ್ಲೇ ಬಡಿದಾಡಿಕೊಂಡ ಅಬಕಾರಿ ಪೊಲೀಸರು

    ಅಕ್ರಮ ಮದ್ಯ ಮಾರಾಟ ಪರಿಶೀಲನೆ- ಬೀದಿಯಲ್ಲೇ ಬಡಿದಾಡಿಕೊಂಡ ಅಬಕಾರಿ ಪೊಲೀಸರು

    ಮಡಿಕೇರಿ: ಅಕ್ರಮ ಮದ್ಯ ಮಾರಾಟ ಪರಿಶೀಲನೆ ಮಾಡಲು ಹೋಗಿದ್ದ ಅಬಕಾರಿ ಪೊಲೀಸರು ಅಶ್ಲೀಲ ಪದಗಳಿಂದ ಒಬ್ಬರನೊಬ್ಬರು ನಿಂದಿಸಿ, ನಡು ಬೀದಿಯಲ್ಲೇ ಬಡಿದಾಡಿಕೊಂಡಿದ್ದಾರೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ಅಬಕಾರಿ ಇನ್ಸ್ ಪೆಕ್ಟರ್ ನಟರಾಜ್ ಮತ್ತು ಉಪ ಅಧೀಕ್ಷಕ ಶಿವಪ್ಪ ನಡುಬೀದಿಯಲ್ಲೇ ಹೊಡೆದಾಡಿಕೊಂಡಿದ್ದಾರೆ. ಲಾಕ್‍ಡೌನ್ ಆಗಿರುವುದರಿಂದ ಎಲ್ಲಿಯೂ ಮದ್ಯ ಮಾರುವಂತಿಲ್ಲ. ಹೀಗಾಗಿ ಗ್ರಾಮೀಣ ಭಾಗದ ಜನರು ಕಳ್ಳಬಟ್ಟಿ, ಅಕ್ರಮ ಮದ್ಯ ಮಾರಾಟಕ್ಕೆ ಮುಂದಾಗಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿವೆ. ಹೀಗಾಗಿ ಉಪ ಅಧೀಕ್ಷಕ ಶಿವಪ್ಪ ಮತ್ತು ತಂಡ ಪರಿಶೀಲನೆಗೆ ಹೋಗಿತ್ತು.

    ಈ ವೇಳೆ ಸ್ಥಳಕ್ಕೆ ಬಂದ ಅಬಕಾರಿ ಇನ್ಸ್ ಪೆಕ್ಟರ್ ನಟರಾಜ್ ಏಕಾಏಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಬಳಿಕ ಇಬ್ಬರೂ ಕೈ ಕೈ ಮಿಲಾಸಿ ಹಾದಿ ರಂಪ ಮಾಡಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿಗಳು ಎನ್ನುವುದನ್ನೂ ಮರೆತು ರಸ್ತೆಯಲ್ಲೇ ಹೊಡೆದಾಡಿಕೊಂಡಿದ್ದಾರೆ.

  • 25 ಲಕ್ಷ ಮೌಲ್ಯದ 360 ಬಾಕ್ಸ್ ಗೋವಾ ಮದ್ಯ ವಶಕ್ಕೆ

    25 ಲಕ್ಷ ಮೌಲ್ಯದ 360 ಬಾಕ್ಸ್ ಗೋವಾ ಮದ್ಯ ವಶಕ್ಕೆ

    – ನನ್ನ ಕಾರಿನಲ್ಲಿ ಬಾಟಲ್ ಸಾಗಿಸುತ್ತಿಲ್ಲ: ಮದ್ಯದ ಮತ್ತಿನ ವ್ಯಕ್ತಿ ರಂಪಾಟ

    ಬೆಳಗಾವಿ: ಗೋವಾದಿಂದ ಬೆಳಗಾವಿ ಮಾರ್ಗವಾಗಿ ಮಿನಿ ಲಾರಿ, ಕಾರು ಮೂಲಕ ಸಾಗಿಸುತ್ತಿದ್ದ 25 ಲಕ್ಷ ರೂ. ಮೌಲ್ಯದ ಮದ್ಯವನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಪ್ರದೀಪ್, ಶುಭಂ ಸೇರಿದಂತೆ 5 ಜನ ಆರೋಪಿಗಳ ಪೊಲೀಸರು ಬಂಧಿಸಿದ್ದಾರೆ. ಆದರೆ ಪ್ರಕರಣ ಪ್ರಮುಖ ಆರೋಪಿ, ಕಿಂಗ್‍ಪಿನ್ ಮಹಾರಾಷ್ಟ್ರದ ಚಂದಗಡದ ಬಾಬಾ ಪರಾರಿಯಾಗಿದ್ದಾನೆ ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

    ಕುಖ್ಯಾತ ಆರೋಪಿ ಬಾಬಾ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಣೆ ಮಾಡುತ್ತಾನೆ ಎನ್ನುವ ಆರೋಪ ಕೇಳಿಬಂದಿತ್ತು. ಈ ಬೆನ್ನಲ್ಲೇ ಆತನ ಕಾರಿನ ಮೇಲೆ ದಾಳಿ ನಡೆಸಲಾಗಿತ್ತು. ಆದರೆ ಬಾಬಾ ತಪ್ಪಿಸಿಕೊಂಡು ಹೋಗಿದ್ದ. ಬಾಬಾ ತನ್ನ ಕೃತ್ಯ ಮುಂದುವರಿಸಿದ್ದ ಎನ್ನುವುದು ತಿಳಿದು ಗುರುವಾರ ಬಂಧನಕ್ಕೆ ಯತ್ನಿಸಿದ್ದೇವು. ಈ ವೇಳೆ 5 ಜನ ಆರೋಪಿಗಳು ಸಿಕ್ಕಿಬಿದ್ದಿದ್ದು, ಬಾಬಾ ಪರಾರಿಯಾಗಿದ್ದಾನೆ ಬೆಳಗಾವಿ ಅಬಕಾರಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    ಆರೋಪಿಗಳಿಂದ ಮಿನಿ ಲಾರಿ, ಕಾರು ಹಾಗೂ 360 ಬಾಕ್ಸ್ ನಲ್ಲಿರುವ 25 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ಬಾಬಾನನ್ನು ಬಂಧಿಸಲಾಗುತ್ತದೆ ಎಂದು ತಿಳಿಸಿದರು.

    ಕಾರಿನಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ನಾನು ಮದ್ಯ ಸಾಗಿಸುತ್ತಿಲ್ಲ. ಅನಾವಶ್ಯಕವಾಗಿ ನನ್ನನ್ನು ವಶಕ್ಕೆ ಪಡೆಯಲಾಗಿದೆ ಎಂದು ವ್ಯಕ್ತಿಯೊಬ್ಬ ಅಬಕಾರಿ ಪೊಲೀಸ್ ಅಚೇರಿಯಲ್ಲಿ ರಂಪಾಟ ಮಾಡಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಳ್ಳಬಟ್ಟಿ ಕಳ್ಳರನ್ನ ಪೊಲೀಸರು ಹಿಡಿಯಲು ಹೋದಾಗ ಯುವಕ ಬಾವಿಗೆ ಬಿದ್ದು ಸಾವು!

    ಕಳ್ಳಬಟ್ಟಿ ಕಳ್ಳರನ್ನ ಪೊಲೀಸರು ಹಿಡಿಯಲು ಹೋದಾಗ ಯುವಕ ಬಾವಿಗೆ ಬಿದ್ದು ಸಾವು!

    ಬೆಳಗಾವಿ: ಕಳ್ಳಬಟ್ಟಿ ಕಳ್ಳರನ್ನು ಹಿಡಿಯಲೆಂದು ಅಬಕಾರಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ದಂಧೆಕೋರನೊಬ್ಬ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊನಗಾ ಗ್ರಾಮದ ಬಳಿ ನಡೆದಿದೆ.

    ಅಡಿವೆಪ್ಪಾ (24) ಮೃತ ದುರ್ದೈವಿ. ಇಂದು ಬೆಳಗಿನ ಜಾವ ಮೂರು ಮಂದಿ ಧಂದೆಕೋರರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬೈಕಿನಲ್ಲಿ ಕಳ್ಳಬಟ್ಟಿ ಇಟ್ಟುಕೊಂಡೇ ಅರಿವೆಪ್ಪಾ ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದ್ದಾನೆ. ಆದರೆ ಪೊಲೀಸರು ಬಿಡದೆ ಚೇಸ್ ಮಾಡಿದ್ದಾರೆ. ಈ ವೇಳೆ ಯುವಕ ಬಾವಿಗೆ ಬಿದ್ದಿದ್ದಾನೆ. ಪರಿಣಾಮ ಬಾವಿಯಲ್ಲೇ ಮೃತಪಟ್ಟಿದ್ದಾನೆ.

    ಧಂದೆಕೋರ ಸಾವನ್ನಪ್ಪಿದ್ದಕ್ಕೆ ಸಂಬಂಧಿಕರು ಅಬಕಾರಿ ಪೊಲೀಸರೇ ಹೊಡೆದು ಬಾವಿಗೆ ಹಾಕಿದ್ದಾರೆ ಎಂದು ಆರೋಪಿಸಿ, ಅಬಕಾರಿ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೇ ಅಬಕಾರಿ ಕಚೇರಿ ಸಹಾಯಕ ಏಕ್‍ನಾಥ್ ಮೇಲೆ ಕಲ್ಲೂ ತೂರಾಟ ಮಾಡಿ ಹಲ್ಲೆ ಮಾಡಿದ್ದು, ಪರಿಣಾಮ ಅವರ ತಲೆಗೆ ಗಂಭೀರವಾಗಿ ಪೆಟ್ಟಾಗಿದೆ. ಸದ್ಯಕ್ಕೆ ಗಾಯಾಳುವನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆ ನಡೆದ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಶವಪರಿಕ್ಷೆ ನಡೆಸಲು ಅಡ್ಡಿಯಾಗಿದೆ. ಸ್ಥಳಕ್ಕೆ ಕಾಕತಿ ಪೊಲೀಸರು ಬಂದು ಧಂದೆಕೋರರ ಮೇಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಇನ್ನು ಅಬಕಾರಿ ಕಚೇರಿ ಮತ್ತು ಅಧಿಕಾರಿಯ ಮೇಲೆ ಹಲ್ಲೆ ಮಾಡಿದ್ದಕ್ಕೆ ಮಾರ್ಕೆಟ್ ಪೊಲೀಸರು ಮೃತನ ಸಂಬಂಧಿಕರ ಮೇಲೆ ದೂರನ್ನು ದಾಖಲಿಸಿಕೊಂಡಿದ್ದಾರೆ.