Tag: Executive Meeting

  • ಎರಡು ವರ್ಷಗಳ ನಂತರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ – ಪ್ರಮಖರು ಭಾಗಿ

    ಎರಡು ವರ್ಷಗಳ ನಂತರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ – ಪ್ರಮಖರು ಭಾಗಿ

    ನವದೆಹಲಿ: ಬಹುತೇಕ ಎರಡು ವರ್ಷಗಳ ನಂತರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ದೆಹಲಿಯಲ್ಲಿ ಇಂದು ಆರಂಭಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವು ಪ್ರಮುಖ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದಾರೆ.

    ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ನರೇಂದ್ರ ಮೋದಿ ಅವರಿಗೆ ಹೂವಿನ ಹಾರ ಹಾಕಿ ಸ್ವಾಗತಿಸಲಾಯಿತು. ಇಂದು ಮೋದಿ ಮತ್ತು ಜೆ.ಪಿ.ನಡ್ಡಾ ಅವರು ಪಕ್ಷದ ಕುರಿತು ಮಾತನಾಡಲಿದ್ದು, ಪಂಜಾಬ್, ಉತ್ತರಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆ ಕುರಿತು ಈ ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸುವ ಸಾಧ್ಯತೆ ಇದೆ. ಜೊತೆಗೆ ದೇಶದಲ್ಲಿ ನಡೆದಂತಹ ಉಪಚುನಾವಣೆಯ ಸೋಲಿನ ಕುರಿತು ಅವಲೋಕನ ನಡೆಯಲಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಚೆನ್ನೈನಲ್ಲಿ ವರುಣನ ಆರ್ಭಟ – ಪ್ರವಾಹದ ಎಚ್ಚರಿಕೆ

    ರಾಷ್ಟ್ರೀಯ ಕಾರ್ಯಕಾರಣಿಯ ಪ್ರತಿ 3 ತಿಂಗಳಿಗೊಮ್ಮೆ ನಡೆಯಬೇಕು. ಆದರೆ, ದೇಶದಲ್ಲಿ ಕೊರೊನಾದಿಂದಾಗಿ ಕಾರ್ಯಕಾರಣಿ ಸಭೆ ನಡೆದಿರಲಿಲ್ಲ. ಇದೀಗ ಬಹುತೇಕ ಎರಡು ವರ್ಷಗಳ ನಂತರ ಈ ಸಭೆ ನಡೆಯುತ್ತಿದೆ. ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಕೇಂದ್ರದ ಸಚಿವರು, ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರು, ಪ್ರಮುಖ ಮುಖಂಡರು, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.

    ಕರ್ನಾಟಕದಿಂದ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್, ಸಚಿವರಾದ ಕೆ.ಎಸ್.ಈಶ್ವರಪ್ಪ, ಆರ್ ಅಶೋಕ್, ಗೋವಿಂದ ಕಾರಜೋಳ, ಡಾ. ಸಿ.ಎನ್.ಅಶ್ವತ್ಥನಾರಾಯಣ್, ಕೋಟ ಶ್ರೀನಿವಾಸ್ ಪೂಜಾರಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡ: ದಾರಿಯಲ್ಲಿ ಐದು ಗ್ರಾನೈಡ್ ಪತ್ತೆ!

  • ಗ್ರಾಮ ಪಂಚಾಯಿತಿ ಮಟ್ಟದಿಂದಲೂ ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ- ಸಿ.ಟಿ.ರವಿ

    ಗ್ರಾಮ ಪಂಚಾಯಿತಿ ಮಟ್ಟದಿಂದಲೂ ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ- ಸಿ.ಟಿ.ರವಿ

    ಮಂಗಳೂರು: ಮುಂದಿನ ಚುನಾವಣೆಗಳಲ್ಲಿ ನಾವು ಗೆಲವು ಸಾಧಿಸಲಿದ್ದು, ಇದರಿಂದಾಗಿ ಗ್ರಾಮ ಪಂಚಾಯತ್‍ನಿಂದಲೂ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹರಿಹಾಯ್ದಿದ್ದಾರೆ.

    ನಗರದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ, ಮುಂದಿನ 4 ವಿಧಾನಪರಿಷತ್, 2 ವಿಧಾನಸಭೆ ಉಪ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವುವಾಗಲಿದೆ. ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಈ ಮೂಲಕ ಗ್ರಾಮ ಪಂಚಾಯತಿ ಮಟ್ಟದಿಂದಲೂ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಅವರು ತಿಳಿಸಿದ್ದಾರೆ.

    ಮಂಗಳೂರಿನಲ್ಲಿ ಬಿಜೆಪಿ ರಾಜ್ಯಕಾರ್ಯಕಾರಿಣಿ ಭರ್ಜರಿಯಾಗೇ ನಡೆಯುತ್ತಿದ್ದು, ಸಮಾರಂಭವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದ್ದಾರೆ. ಮಂಗಳೂರಿನ ಸಿವಿ ರಮಣ ಪೈ ಹಾಲ್ ನಲ್ಲಿ ಸಮಾರಂಭ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸದಾನಂದ ಗೌಡ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ.

    20 ವರ್ಷಗಳ ನಂತರ ಮಂಗಳೂರಿನಲ್ಲಿ ರಾಜ್ಯಕಾರ್ಯಕಾರಿಣಿ ಸಭೆಯಾಗುತ್ತಿದೆ. ರಾಜ್ಯಾಧ್ಯಕ್ಷರಾದ ಬಳಿಕ ನಳಿನ್ ಕುಮಾರ್ ಕಟೀಲ್ ಪಕ್ಷ ಬಲಪಡಿಸಿದ್ದಾರೆ. ಎರಡು ವರ್ಷಗಳ ಬಳಿಕ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತದೆ. 2014 ರಲ್ಲಿ ಬಿಜೆಪಿ 104 ಸೀಟ್ ಗಳಿಸಿತ್ತು. ದೇಶದ ಇತಿಹಾಸದಲ್ಲಿ ಮೊದಲಬಾರಿಗೆ 18 ಮಂದಿ ಆಡಳಿತ ಪಕ್ಷದ ಸದಸ್ಯರು ಬಿಜೆಪಿಗೆ ಸೇರಿದ್ದರು. 18 ಜನರ ಸಹಕಾರದಿಂದ ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂದು ಕೋರ್ ಕಮಿಟಿ ಉದ್ಫಾಟನಾ ಸಮಾರಂಭದಲ್ಲಿ ಸಿಎಂ ಸ್ಮರಿಸಿದ್ದಾರೆ.

    ಬಿಜೆಪಿ ಕಾರ್ಯಕರ್ತರು ಚುನಾವಣೆಯನ್ನು ಹಗುರವಾಗಿ ತೆಗೆದುಕೊಳ್ಳಬಾರದು. ಅಭ್ಯರ್ಥಿಗಳ ಗೆಲುವಿಗೆ ಸಂಪೂರ್ಣ ಶ್ರಮವನ್ನು ಹಾಕಬೇಕು ಎಂದು ಇದೇ ವೇಳೆ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ. ಮಂಗಳೂರಿನಲ್ಲಿ ಕಾರ್ಯಕಾರಣಿ ಸಭೆ ಭರ್ಜರಿಯಾಗಿ ನಡೆಯುತ್ತಿದ್ದು, ಮಂಗಳೂರು ಸಂಪೂರ್ಣವಾಗಿ ಲೈಟಿಂಗ್ಸ್‍ನಿಂದ ಕಂಗೊಳಿಸುತ್ತಿದೆ. ಪೂರ್ತಿ ಬಿಜೆಪಿಮಯವಾಗಿದೆ.