ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ (Independence Day) ಹಾಗೂ ವರಮಹಾಲಕ್ಷ್ಮಿ ಹಬ್ಬ (Varamahalakshmi Festival) ಹೀಗೆ ಸಾಲು ಸಾಲು ರಜೆ (Holiday) ಹಿನ್ನೆಲೆ ತಮ್ಮ ತಮ್ಮ ಊರಿಗೆ ತೆರಳಿದ್ದ ಜನ ಇಂದು (ಭಾನುವಾರ) ಬೆಂಗಳೂರಿಗೆ (Bengaluru) ವಾಪಸ್ ಆಗಿದ್ದಾರೆ. ಈ ಹಿನ್ನೆಲೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಸೇರಿದಂತೆ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಕಿಲೋ ಮೀಟರ್ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ.
ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ, ಆ.16ರಂದು ವರಮಹಾಲಕ್ಷ್ಮಿ ಹಬ್ಬ ಮತ್ತು 2 ದಿನ ವೀಕೆಂಡ್ ಇದ್ದ ಹಿನ್ನೆಲೆ ಜನರು ತಮ್ಮ ಊರಿನತ್ತ ಮುಖ ಮಾಡಿದ್ದರು. ಇದೀಗ ಕೆಲಸದ ಸಲುವಾಗಿ ಮತ್ತೆ ಬೆಂಗಳೂರಿಗೆ ಜನರು ಆಗಮಿಸುತ್ತಿದ್ದಾರೆ. ಈ ಸಂದರ್ಭ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದ್ದು, ಬೆಂಗಳೂರು ನಗರ ಪ್ರವೇಶಿಸಲು ಪ್ರಯಾಣಿಕರು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವ ವಿ.ಸೋಮಣ್ಣರ ಕಾರ್ಯಾಲಯ ವಿವಾದ ಸುಖಾಂತ್ಯ
ಮಂಡ್ಯ: ಬೆಂಗಳೂರು- ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿ (Bengaluru- Mysuru Expressway) ಯಲ್ಲಿ ಅಪಘಾತ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ರಾಮನಗರದ ನಂತರ ಇದೀಗ ಮಂಡ್ಯ ವ್ಯಾಪ್ತಿಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಪರಿಶೀಲನೆ ನಡೆಸುತ್ತಿದ್ದಾರೆ. ಈ ವೇಳೆ ವೃದ್ಧೆಯೊಬ್ಬರು ಎಡಿಜಿಪಿ ಮುಂದೆ ತಮ್ಮ ಅಳಲುತೋಡಿಕೊಂಡಿದ್ದಾರೆ.
ವೃದ್ಧೆ ಹೇಳಿದ್ದೇನು..?: ಸ್ವಾಮಿ ಇವರು ಮಾಡಿರೋ ಕೆಲಸಕ್ಕೆ ನನ್ನ ಗುಡಿಸಲಿಗೆ ನೀರು ಬರುತ್ತಿದೆ. ಇವರು ಸರ್ವಿಸ್ ರಸ್ತೆಯ ಚರಂಡಿಯನ್ನು ಸರಿಯಾಗಿ ಮಾಡಿಲ್ಲ. ಮಳೆ ನೀರು ಎಲ್ಲಾ ನನ್ನ ಗುಡಿಸಲಿಗೆ ಬರುತ್ತಿದೆ. ನೋಡಿ ಸ್ವಾಮಿ ನೆಮ್ಮದಿಯಾಗಿ ಬದುಕೋಕೆ ಆಗುತ್ತಿಲ್ಲ. ಅವರಿಗೆ ಹೇಳಿ ಸರಿ ಮಾಡಿಸಿ ಸ್ವಾಮಿ ಎಂದು ವೃದ್ಧೆ ಮನವಿ ಮಾಡಿಕೊಂಡಿದ್ದಾರೆ. ವೃದ್ಧೆಯ ಮಾತು ಕೇಳಿರುವ ಎಡಿಜಿಪಿ ಸರಿ ಮಾಡಿಸುವ ಭರವಸೆ ನೀಡಿದರು.
ಇತ್ತ ಜನರು ಕೂಡ ಎಡಿಜಿಪಿ ಅಲೋಕ್ ಕುಮಾರ್ ಗೆ ದೂರು ನೀಡಿದ್ದಾರೆ. ಸರ್ವಿಸ್ ರಸ್ತೆಯನ್ನು ಸಹ ಇವರು ಸರಿಯಾಗಿ ಮಾಡಿಲ್ಲ. ಸರ್ವಿಸ್ ರಸ್ತೆಯಲ್ಲಿ ಚರಂಡಿಗಳು ಆಗಿಲ್ಲ. ಬೇಡದ ಸ್ಥಳದಲ್ಲಿ ರಸ್ತೆ ಹಂಪ್ಸ್ ಹಾಕಿದ್ದಾರೆ. ಬೇಕಾಗಿರುವ ಸ್ಥಳದಲ್ಲಿ ರಸ್ತೆ ಹಮ್ಸ್ ಹಾಕಿಲ್ಲ. ಇದರಿಂದ ಹೆಚ್ಚು ಅಪಘಾತಗಳು ಆಗುತ್ತಿವೆ ಎಂದು ದೂರಿದ್ದಾರೆ.
ಜನರ ದೂರು ಸ್ವೀಕರಿಸಿರುವ ಅಲೋಕ್ ಕುಮಾರ್, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆಲ ತಪ್ಪುಗಳಿಂದ ಅಪಘಾತಗಳು ಹೆಚ್ಚಾಗುತ್ತಿವೆ. ಜನರು ನಿಮ್ಮ ಜೊತೆಗೆ ಪೊಲೀಸ್ ಇಲಾಖೆಗೆ ಬೈಯ್ಯುತ್ತಾರೆ. ಆಗಿರುವ ತಪ್ಪುಗಳನ್ನು ಸರಿಪಡಿಸಬೇಕು. ತಿರುವು ಇರುವ ಕಡೆ ನಾಮ ಫಲಕ ಹಾಕಬೇಕು. ಸರ್ವಿಸ್ ರಸ್ತೆಯಲ್ಲಿ ಲೋಪಗಳನ್ನು ಸರಿಪಡಿಸಿ. ಅಪಘಾತ ಪ್ರಕರಣಗಳನ್ನು ತಡೆಯುವುದು ಹೆದ್ದಾರಿ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆಯ ಕರ್ತವ್ಯ ಎಂದಿದ್ದಾರೆ.
ಅಪಘಾತ ಪ್ರಕರಣಗಳ ಅಂಕಿ-ಅಂಶ: 2023 ರ ಜನವರಿಯಿಂದ ಜೂನ್ 26 ರ ರಾತ್ರಿ 9 ಗಂಟೆಗೆವರೆಗೆ ಮೈ-ಬೆಂ ದಶಪಥ ಹೆದ್ದಾರಿಯಲ್ಲಿ ನಡೆದಿರುವ ಅಪಘಾತ ಪ್ರಕರಣಗಳ ಅಂಕಿ ಅಂಸಗಳು ಇಂತಿವೆ. ಮಾರಾಣಾಂತಿಕ ಅಪಘಾತ ಪ್ರಕರಣಗಳ ಸಂಖ್ಯೆ- 61, ಮಾರಾಣಾಂತಿಕವಲ್ಲ ಅಪಘಾತ ಪ್ರಕರಣ- 210, ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ- 64, ಅಪಘಾತದಲ್ಲಿ ಗಾಯಗೊಂಡವರ ಸಂಖ್ಯೆ- 335 ಆಗಿದೆ.