Tag: Eye Hospital

  • ‘ಮಿಂಟೋ’ ಆಸ್ಪತ್ರೆಯ ಕರ್ಮಕಾಂಡ – ಆಸ್ಪತ್ರೆಗೆ ಬೀಗ ಹಾಕಿ ರಸ್ತೆಯಲ್ಲೇ ರೋಗಿಗಳಿಗೆ ಚಿಕಿತ್ಸೆ

    ‘ಮಿಂಟೋ’ ಆಸ್ಪತ್ರೆಯ ಕರ್ಮಕಾಂಡ – ಆಸ್ಪತ್ರೆಗೆ ಬೀಗ ಹಾಕಿ ರಸ್ತೆಯಲ್ಲೇ ರೋಗಿಗಳಿಗೆ ಚಿಕಿತ್ಸೆ

    – ಊಟದ ಸಮಯ ಎಂದು ರೋಗಿಗಳನ್ನು ಹೊರಗಡೆ ಕಳುಹಿಸಿ ಆಸ್ಪತ್ರೆಗೆ ಬೀಗ

    ಬೆಂಗಳೂರು: ಇಲ್ಲಿನ ಮಿಂಟೋ ಆಸ್ಪತ್ರೆ (Minto Hospital) ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಾಗಿದೆ. ಆದರೆ ಈಗ ಊಟದ ಸಮಯ ಎಂದು ಆಸ್ಪತ್ರೆಗೆ ಬೀಗ ಹಾಕಿ ರಸ್ತೆಯಲ್ಲೇ ರೋಗಿಗಳಿಗೆ ಚಿಕಿತ್ಸೆ ನೀಡಿ ಅಮಾನವೀಯ ವರ್ತನೆ ತೋರಿದ್ದಾರೆ. ಇದರಿಂದ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಸಿಗದೆ ಆಸ್ಪತ್ರೆ ಮುಂಭಾಗ ರೋಗಿಗಳು ನರಳಾಡುತ್ತಿದ್ದಾರೆ.

    ರಾಜಧಾನಿ ಬೆಂಗಳೂರಿನಲ್ಲಿ (Bengaluru) ಇರುವ ಅತಿದೊಡ್ಡ ಕಣ್ಣಿನ ಆಸ್ಪತ್ರೆ (Eye Hospital) ಎಂದರೆ ಅದು ಮಿಂಟೋ ಆಸ್ಪತ್ರೆ. ಉಚಿತವಾಗಿ ಚಿಕಿತ್ಸೆ ಸಿಗುತ್ತದೆ ಎಂದು ದೂರದ ಊರುಗಳಿಂದ ಜನ ಬರುತ್ತಾರೆ. ಎಂತಹದ್ದೇ ಸಂದರ್ಭದಲ್ಲೂ ಆದರೂ ಸೂಕ್ತ ಸಮಯಕ್ಕೆ ಚಿಕಿತ್ಸೆ ಕೊಡುವುದು ಆಸ್ಪತ್ರೆಗಳ ಕರ್ತವ್ಯ. ಆದರೆ ಕೆ.ಆರ್ ಮಾರ್ಕೆಟ್ ಬಳಿಯ ಮಿಂಟೋ ಆಸ್ಪತ್ರೆಯಲ್ಲಿ ವೈದ್ಯರು ತಮ್ಮ ಕರ್ತವ್ಯವನ್ನು ಮರೆತು ಅಮಾನವೀಯವಾಗಿ ನಡೆದುಕೊಳ್ಳುತ್ತಿದ್ದಾರೆ. ವೈದ್ಯರು ಊಟ ಮಾಡುವ ಸಮಯ ಎಂದು ರೋಗಿಗಳನ್ನು ಹೊರಗಡೆ ಕಳುಹಿಸಿ ಆಸ್ಪತ್ರೆಗೆ ಬೀಗ ಹಾಕಿದ್ದಾರೆ. ಇದನ್ನೂ ಓದಿ: ಬಿಜೆಪಿಯಿಂದ 2, ಜೆಡಿಎಸ್‌ನಿಂದ 4 ಮಂದಿ ಕಾಂಗ್ರೆಸ್‌ಗೆ ಮತ ಹಾಕಲು ಸಿದ್ದರಿದ್ದಾರೆ: ಡಿಕೆಶಿ

    ಮಿಂಟೋ ಆಸ್ಪತ್ರೆಗೆ ಬೀಗ ಹಾಕಿದ ಸಮಯದಲ್ಲಿ ಸಂಜಯ್ ಗಾಂಧಿ ಆಸ್ಪತ್ರೆಯಿಂದ ಎಮರ್ಜೆನ್ಸಿ ಕೇಸ್ ಬಂದರೂ ಸಹ ಆಸ್ಪತ್ರೆಯ ಬೀಗ ತೆಗೆದು ಚಿಕಿತ್ಸೆ ಕೊಟ್ಟಿಲ್ಲ. ಬದಲಾಗಿ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿಯೇ ಅಂಬುಲೆನ್ಸ್ ಒಳಗಡೆಯೇ ಚಿಕಿತ್ಸೆ ಕೊಟ್ಟಿದ್ದಾರೆ. ಆಸ್ಪತ್ರೆಗೆ ಬೀಗ ಹಾಕಿದ ಕಾರಣ ನೂರಾರು ರೋಗಿಗಳು ಆಸ್ಪತ್ರೆ ಮುಂಭಾಗ ಗೇಟ್ ಬಳಿ ಚಿಕಿತ್ಸೆಗಾಗಿ ಕಾಯುತ್ತಿದ್ದಾರೆ. ವೈದ್ಯರ ಬೇಜವಾಬ್ದಾರಿ ನಿರ್ಲಕ್ಷ್ಯಕ್ಕೆ ರೋಗಿಗಳು ನಲುಗಿ ಹೋಗಿದ್ದಾರೆ. ಇದನ್ನೂ ಓದಿ: ಲೋಕಸಭೆ ಚುನಾವಣೆ: RSS ಹಿನ್ನೆಲೆಯುಳ್ಳ ಅಭ್ಯರ್ಥಿಗಳು ಬಿಜೆಪಿಯಿಂದ ಕಣಕ್ಕೆ?

    ಆಸ್ಪತ್ರೆಗೆ ಬೀಗ ಹಾಕಿರುವ ಕಾರಣ ನೂರಾರು ರೋಗಿಗಳು ಚಿಕಿತ್ಸೆಗಾಗಿ ಹಂಬಲಿಸುತ್ತಾ ಇದ್ದ ಹಿನ್ನೆಲೆಯಲ್ಲಿ ‘ಪಬ್ಲಿಕ್ ಟಿವಿ’ ವೈದ್ಯರ ನಿರ್ಲಕ್ಷ್ಯ, ಬೇಜವಾಬ್ದಾರಿತನವನ್ನು ಪ್ರಶ್ನೆ ಮಾಡಿದ ಬಳಿಕ ಗೇಟ್ ಓಪನ್ ಮಾಡಿ ರೋಗಿಗಳನ್ನು ಒಳಗಡೆ ಬಿಟ್ಟಿದ್ದಾರೆ. ಇನ್ನು ಈ ಕುರಿತು ರೋಗಿಗಳು ಹಾಗೂ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ. ರೋಗಿಗಳಿಗಿಂತ ಇವರಿಗೆ ಊಟನೇ ಹೆಚ್ಚಾಗಿದೆ. ಊಟದ ಸಮಯ ಎಂದು ಒಂದೂವರೆ ಗಂಟೆ ಆಸ್ಪತ್ರೆಗೆ ಬೀಗ ಹಾಕಿಕೊಂಡರೆ ಎಮರ್ಜೆನ್ಸಿ ಇರುವ ರೋಗಿಗಳ ಪರಿಸ್ಥಿತಿ ಏನಾಗಬೇಡ? ರಸ್ತೆಯಲ್ಲೇ ಚಿಕಿತ್ಸೆ ಕೊಡುತ್ತಿದ್ದಾರೆ. ಐಸಿಯು, ಬೆಡ್ ಬೇಡವೇ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಮ ಮಂದಿರಕ್ಕೆ 11 ಕೋಟಿ ದೇಣಿಗೆ ನೀಡಿದ್ದ ವಜ್ರ ಉದ್ಯಮಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್‌

    ಸರ್ಕಾರ ಮತ್ತು ವೈದ್ಯಕೀಯ ಶಿಕ್ಷಣ ನಿಜಕ್ಕೂ ಈ ಆಸ್ಪತ್ರೆ ಮೇಲೆ ನಿಗಾ ವಹಿಸಬೇಕಿದೆ. ಸುಸಜ್ಜಿತ ಕಟ್ಟಡ, ವೈದ್ಯಕೀಯ ಸೌಲಭ್ಯ ಇದ್ದರೂ ಈ ರೀತಿ ನಿರ್ಲಕ್ಷ್ಯ ಮಾಡಿ ಬೀಗ ಹಾಕಿ ರಸ್ತೆಯಲ್ಲೆ ಚಿಕಿತ್ಸೆ ಕೊಡೋದು ಎಷ್ಟು ಸರಿ? ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವರು ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸುತ್ತಾರಾ ಎಂದು ಕಾದು ನೋಡಬೇಕಿದೆ. ಇದನ್ನೂ ಓದಿ: ರೈತರನ್ನು ಹಿಮ್ಮೆಟ್ಟಿಸಲು ʻಶಬ್ದಾಸ್ತ್ರʼ ಪ್ರಯೋಗ – ಇದು ಹೇಗೆ ಕೆಲಸ ಮಾಡುತ್ತೆ?

  • ಪಟಾಕಿ ತಂದ ಆಪತ್ತು – ಮಕ್ಕಳ ಬಾಳಲ್ಲಿ ಕತ್ತಲೆ ತಂದ ಬೆಳಕಿನ ಹಬ್ಬ, 78 ಮಂದಿಗೆ ಗಾಯ

    ಪಟಾಕಿ ತಂದ ಆಪತ್ತು – ಮಕ್ಕಳ ಬಾಳಲ್ಲಿ ಕತ್ತಲೆ ತಂದ ಬೆಳಕಿನ ಹಬ್ಬ, 78 ಮಂದಿಗೆ ಗಾಯ

    ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮಾಚರಣೆಯಲ್ಲಿ ಪಟಾಕಿ ಸಿಡಿತದಿಂದ 78 ಮಂದಿ ಗಾಯಗೊಂಡಿದ್ದಾರೆ.

    ಪಟಾಕಿ ಸಿಡಿತದಿಂದ ಹನಿಗೊಂಡವರು ಇದೀಗ ಮಿಂಟೋ ಆಸ್ಪತ್ರೆ, ನಾರಾಯಣ ನೇತ್ರಾಲಯ, ನೇತ್ರದಾಮ, ಶಂಕರ್ ಕಣ್ಣಿನ ಆಸ್ಪತ್ರೆ, ಅಸ್ಟರ್ ಸಿಎಂಐ, ಮೋದಿ ಕಣ್ಣಿನ ಆಸ್ಪತ್ರೆ, ವಿಕ್ಟೋರಿಯಾ ಸುಟ್ಟ ಗಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಸಿನಿಮಾಗಿಂತ ಸುದ್ದಿಯಲ್ಲೇ ಉಳಿದು ಬಿಡ್ತಾರಾ ‘ಮಫ್ತಿ’ ಖ್ಯಾತಿಯ ನಿರ್ದೇಶಕ ನರ್ತನ್

    DEEPAVALI

    ಪ್ರತಿ ವರ್ಷ ದೀಪಾವಳಿ ವೇಳೆ ಪಟಾಕಿ ಸಿಡಿಸಿ ಜನರು ಸಂಭ್ರಮಿಸುತ್ತಾರೆ. ಪಟಾಕಿ ಹೊಡೆಯುವ ವೇಳೆ ಅದೆಷ್ಟೋ ಮಂದಿ ಗಾಯಗೊಳ್ಳುತ್ತಾರೆ. ಅದರಲ್ಲಿಯೂ ಮಕ್ಕಳೇ ಹೆಚ್ಚಾಗಿ ಹಾನಿಗೊಳಗಾಗುತ್ತಾರೆ. ಅದರಂತೆ ಈ ಬಾರಿ ಕೂಡ 5 ರಿಂದ 18 ವರ್ಷದ ಒಳಗಿನ ಮಕ್ಕಳೇ ಪಟಾಕಿ ಸಿಡಿತಕ್ಕೆ ಹೆಚ್ಚಾಗಿ ಗಾಯಗೊಂಡಿದ್ದಾರೆ. ಸದ್ಯ ಬೆಳಕು ಚೆಲ್ಲಾಬೇಕಿದ್ದ ದೀಪಾವಳಿ, ಈ ಮಕ್ಕಳ ಬಾಳಲ್ಲಿ ಕತ್ತಲೆ ತಂದಿದೆ. ಇದೀಗ ಮಿಂಟೋ ಆಸ್ಪತ್ರೆ ಸೇರಿದಂತೆ ನಗರದ ಹಲವು ಕಣ್ಣಿನ ಆಸ್ಪತ್ರೆಯಲ್ಲಿ 78 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಕೋಟಿ ಮೀರಿತು ಕನ್ನಡ ಗಾಯನಕ್ಕೆ ಕಂಠ ನೋಂದಣಿ – 1.50 ಕೋಟಿ ನೋಂದಣಿ ಮೀರುವ ನಿರೀಕ್ಷೆ

    ನಗರದ ಯಾವ್ಯಾವ ಕಣ್ಣಿನ ಆಸ್ಪತ್ರೆಯಲ್ಲಿ ಎಷ್ಟೆಷ್ಟು ಪಟಾಕಿ ಹಾನಿ ಪ್ರಕರಣ?
    1. ಮಿಂಟೋ ಆಸ್ಪತ್ರೆ – 17 ಕೇಸ್
    2. ನಾರಾಯಣ ನೇತ್ರಾಲಯ – 23 ಕೇಸ್
    3. ನೇತ್ರಧಾಮ – 20 ಕೇಸ್
    4. ಶಂಕರ್ ಕಣ್ಣಿನ ಆಸ್ಫತ್ರೆ – 13 ಕೇಸ್
    5. ಅಸ್ಟರ್ ಸಿಎಂಐ – 3 ಕೇಸ್ .
    6. ಮೋದಿ ಕಣ್ಣಿನ ಆಸ್ಫತ್ರೆ – 1 ಕೇಸ್
    7. ವಿಕ್ಟೋರಿಯಾ ಸುಟ್ಟ ಗಾಯ ಆಸ್ಪತ್ರೆ – 1 ಕೇಸ್

    Live Tv
    [brid partner=56869869 player=32851 video=960834 autoplay=true]