Tag: eye surgery

  • ಉತ್ತರ ಪ್ರದೇಶ | ವೈದ್ಯರ ಯಡವಟ್ಟು – ಎಡಗಣ್ಣಿನ ಆಪರೇಷನ್‌ಗೆ ಬಂದಿದ್ದ ಬಾಲಕನಿಗೆ ಬಲಗಣ್ಣಿನ ಆಪರೇಷನ್‌!

    ಉತ್ತರ ಪ್ರದೇಶ | ವೈದ್ಯರ ಯಡವಟ್ಟು – ಎಡಗಣ್ಣಿನ ಆಪರೇಷನ್‌ಗೆ ಬಂದಿದ್ದ ಬಾಲಕನಿಗೆ ಬಲಗಣ್ಣಿನ ಆಪರೇಷನ್‌!

    ಲಕ್ನೋ: ಎಡಗಣ್ಣಿನ ಶಸ್ತ್ರಚಿಕಿತ್ಸೆಗೆ ಹೋದ 7 ವರ್ಷದ ಬಾಲಕನಿಗೆ ವೈದ್ಯರು ಬಲಗಣ್ಣಿನ ಶಸ್ತ್ರಚಿಕಿತ್ಸೆ (Eye Surgery) ಮಾಡಿದ ಘಟನೆ ಉತ್ತರ ಪ್ರದೇಶದ (Uttar Pradesh) ಗ್ರೇಟರ್ ನೋಯ್ಡಾದ ಆಸ್ಪತ್ರೆಯೊಂದರಲ್ಲಿ (Hospital) ನಡೆದಿದೆ.

    ನ.12 ರಂದು ಸೆಕ್ಟರ್ ಗಾಮಾ 1 ರ ಆನಂದ್ ಸ್ಪೆಕ್ಟ್ರಮ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಬಾಲಕನ ಎಡಗಣ್ಣಿನಿಂದ ಆಗಾಗ ನೀರು ಬರುತ್ತಿತ್ತು. ಇದಕ್ಕಾಗಿ ಬಾಲಕನ ತಂದೆ ನಿತಿನ್ ಭಾಟಿ ಆತನನ್ನು ಆಸ್ಪತ್ರೆಗೆ ತೋರಿಸಿದ್ದರು. ವೈದ್ಯರು ತಪಾಸಣೆ ನಡೆಸಿದ ನಂತರ, ಬಾಲಕನ ಕಣ್ಣಿನಲ್ಲಿ ಪ್ಲಾಸ್ಟಿಕ್ ತರಹದ ವಸ್ತುವಿದೆ. ಅದನ್ನು ಶಸ್ತ್ರಚಿಕಿತ್ಸೆ ಮೂಲಕ ಗುಣಪಡಿಸಬಹುದು ಎಂದು ತಿಳಿಸಿದ್ದರು.

    ಆಸ್ಪತ್ರೆಗೆ 45,000 ರೂ. ಹಣ ಪಾವತಿಸಿ ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡಿಸಲಾಗಿದೆ. ಬಳಿಕ ಬಾಲಕನನ್ನು ಮನೆಗೆ ಕರೆದುಕೊಂಡು ಬಂದ ಮೇಲೆ ಆತನ ತಾಯಿ ಬಲಗಣ್ಣಿನ ಶಸ್ತ್ರಚಿಕಿತ್ಸೆ ಮಾಡಿರುವುದನ್ನು ಗಮನಿಸಿದ್ದಾರೆ. ಮತ್ತೆ ವೈದ್ಯರನ್ನು ಸಂಪರ್ಕಿಸಿ ವಿಚಾರಿಸಿದಾಗ, ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಬಾಲಕನ ಕುಟುಂಬಸ್ಥರು ಆರೋಪಿಸಿದ್ದಾರೆ.

    ಈ ಸಂಬಂಧ ಬಾಲಕನ ತಂದೆ, ಗೌತಮ್ ಬುದ್ಧ ನಗರದ ಮುಖ್ಯ ವೈದ್ಯಕೀಯ ಅಧಿಕಾರಿಗೆ (CMO) ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ವೈದ್ಯರ ಪರವಾನಿಗೆಯನ್ನು ರದ್ದುಪಡಿಸಿ, ಆಸ್ಪತ್ರೆಯನ್ನು ಬಂದ್‌ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

    ಈ ಸಂಬಂಧ ತನಿಖೆ ಆರಂಭವಾಗಿದ್ದು, ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು (Police) ತಿಳಿಸಿದ್ದಾರೆ.

  • ಪೊರೆ ಚಿಕಿತ್ಸೆ ಬಳಿಕ 15 ರೋಗಿಗಳ ಕಣ್ಣಿಗೆ ಕುತ್ತು

    ಪೊರೆ ಚಿಕಿತ್ಸೆ ಬಳಿಕ 15 ರೋಗಿಗಳ ಕಣ್ಣಿಗೆ ಕುತ್ತು

    – ಮಿಂಟೋ ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ
    – ಡ್ರಗ್ ಓವರ್ ರಿಯಾಕ್ಷನಿಂದ ಮೃತಪಟ್ಟಿರಬಹುದು
    – ಈ ಪ್ರಕರಣದಲ್ಲಿ ನಮ್ಮ ತಪ್ಪಿಲ್ಲ- ವೈದ್ಯರಿಂದ ಸ್ಪಷ್ಟನೆ

    ಬೆಂಗಳೂರು: ಕಣ್ಣಿನ ಪೊರೆ ಚಿಕಿತ್ಸೆ ಬಳಿಕ 15 ರೋಗಿಗಳು ಕಣ್ಣು ಕಳೆದುಕೊಂಡಿರುವ ಘಟನೆ ನಗರದ ಮಿಂಟೋ ಆಸ್ಪತ್ರೆಯಲ್ಲಿ ನಡೆದಿದೆ.

    ಕಳೆದ ಮಂಗಳವಾರ 25 ಜನರಿಗೆ ಕಣ್ಣಿನ ಪೊರೆ ಚಿಕಿತ್ಸೆ ಮಾಡಲಾಗಿತ್ತು. ಅದರಲ್ಲಿ 15 ಜನರಿಗೆ ಕಣ್ಣು ಕಾಣುತ್ತಿಲ್ಲ, 5 ಮಂದಿಗೆ ಸ್ವಲ್ಪ ಚೇತರಿಕೆ ಕಂಡಿದೆ. ಇದಕ್ಕೆಲ್ಲ ವೈದ್ಯರ ನಿರ್ಲಕ್ಷ್ಯವೇ ಕಾರಣ ಎನ್ನುವ ಆರೋಪ ಕೇಳಿ ಬಂದಿದೆ.

    ಡ್ರಗ್ಸ್ ರಿಯಾಕ್ಷನ್‍ನಿಂದ ಈ ದುರ್ಘಟನೆ ಸಂಭವಿಸಿದೆ. ನಮಗೂ ಇದಕ್ಕೂ ಸಂಬಂಧವಿಲ್ಲ, ನಮ್ಮ ಕೆಲಸ ನಾವು ಮಾಡಿದ್ದೇವೆ ಎಂದು ವೈದ್ಯರು ಹೇಳಿದ್ದಾರೆ. ಇತ್ತ ರೋಗಿಗಳ ಸಂಬಂಧಿಕರು ಆಸ್ಪತ್ರೆ ಮುಂದೆ ಗೋಗರೆಯುತ್ತಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ. ವೈದ್ಯರು ತಮ್ಮ ತಪ್ಪನ್ನು ಒಪ್ಪಿಕೊಳ್ಳುತ್ತಿಲ್ಲ. ರೋಗಿಗಳು ಪ್ರತಿಭಟಿಸುತ್ತಾರೆ ಎಂಬುದನ್ನು ಮನಗಂಡು ರೋಗಿಗಳನ್ನು ಮನೆಗೆ ಹೊರಡಿ ಎಂದು ಒತ್ತಡ ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಒಟ್ಟು 25 ಜನರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಎಲ್ಲರ ಬಳಿಯೂ ವೈದ್ಯರು 8 ಸಾವಿರ ರೂ. ಹಣ ಪಡೆದಿದ್ದರು. ಗೋಳಾಡುತ್ತಿರುವ ರೋಗಿಗಳಿಗೆ ಡ್ರಗ್ ರಿಯಾಕ್ಷನ್ ಆಗಿದೆ ಎಂಬುದನ್ನು ಹೊರತು ಪಡಿಸಿದರೆ, ಕಣ್ಣು ಸರಿ ಹೋಗುವ ಕುರಿತು ವೈದ್ಯರು ಭರವಸೆ ನೀಡುತ್ತಿಲ್ಲ. ಶಸ್ತ್ರಚಿಕಿತ್ಸೆಗೆ ನೀವು ಸಹಿ ಹಾಕಿದ್ದೀರ, ಇದಕ್ಕೆ ನಾವು ಕಾರಣರಲ್ಲ ಎಂದು ವೈದ್ಯರು ದೂರುತ್ತಿದ್ದಾರೆ.

    ರೋಗಿಗಳಿಗೆ ನೀಡಲಾದ ಡ್ರಗ್ಸ್ ಪರೀಕ್ಷೆ ಮಾಡಲು ಲ್ಯಾಬ್‍ಗೆ ಕಳುಹಿಸಲಾಗಿದೆ. ಅಲ್ಲದೆ, ಮೇಲಾಧಿಕಾರಿಗಳಿಗೂ ಈ ಕುರಿತು ಮಾಹಿತಿ ನೀಡಲಾಗಿದೆ ಎಂದು ವೈದ್ಯರು ಹೇಳುತ್ತಿದ್ದಾರೆ.

    ಅವಾಂತರದ ಕುರಿತು ಮಿಂಟೊ ಆಸ್ಪತ್ರೆ ನಿರ್ದೇಶಕಿ ಸುಜಾತ ರಾಥೋಡ್ ಪ್ರತಿಕ್ರಿಯಿಸಿ, ರೋಗಿಗಳಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿದ್ದಾಗ ನಾನು ರಜೆಯಲ್ಲಿದ್ದೆ. ನಮ್ಮ ಸರ್ಜಿಕಲ್ ಟೀಮ್ ಚಿಕಿತ್ಸೆ ನೀಡಿದೆ. ಸೋಮವಾರ 24ಕ್ಕೂ ರೋಗಿಗಳಿಗೆ ಕಣ್ಣಿನ ಪೊರೆ ಚಿಕಿತ್ಸೆ ಮಾಡಲಾಗಿದ್ದು, ಮಂಗಳವಾರ ಬೆಳಗ್ಗೆ ರೋಗಿಗಳ ಕಣ್ಣಿನ ಪಟ್ಟಿ ಬಿಚ್ಚಿದಾಗ ರಿಯಾಕ್ಷನ್ ಆಗಿರುವುದು ಕಂಡಬಂದಿದೆ. ಮೇಲ್ನೋಟಕ್ಕೆ ಹೈ ಡ್ರಗ್ ರಿಯಾಕ್ಷನ್‍ನಿಂದ ಅವಾಂತರ ಸಂಭವಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ನಮಗೆ ಆಪರೇಷನ್ ಮಾಡಲು ಡ್ರಗ್ ಸರ್ಕಾರದಿಂದ ಬರುತ್ತದೆ. ಈ ವಿಚಾರವನ್ನು ಸರ್ಕಾರದ ಗಮನಕ್ಕೆ ಈಗಾಗಲೇ ತಂದಿದ್ದು, ಡ್ರಗ್‍ನ್ನು ವಶಕ್ಕೆ ಪಡೆಯಲಾಗಿದೆ. ಮೆಡಿಸಿನ್‍ಗಳನ್ನೂ ಲ್ಯಾಬ್‍ಗೆ ಕಳುಹಿಸಿದ್ದು, ಇನ್ನು ವರದಿ ಬಂದಿಲ್ಲ. ವರದಿ ಬಂದ ನಂತರ ಮುಂದಿನ ಚಿಕಿತ್ಸೆ ನೀಡುತ್ತೇವೆ. ಒಂದು ವೇಳೆ ಕಣ್ಣು ಬಂದಿಲ್ಲ ಎಂದರೆ ನಾವು ಜವಾಬ್ದಾರರಲ್ಲ. ಇದರಲ್ಲಿ ವೈದ್ಯರ ತಪ್ಪಿಲ್ಲ. ನಾವು ನಮ್ಮ ಕೆಲಸ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

  • ವಿಡಿಯೋ: ಮಹಿಳೆಯ ಕಣ್ಣಿನಿಂದ 70 ಮಿ.ಮೀ ಉದ್ದದ ಹುಳು ಹೊರತೆಗೆದ ವೈದ್ಯರು

    ವಿಡಿಯೋ: ಮಹಿಳೆಯ ಕಣ್ಣಿನಿಂದ 70 ಮಿ.ಮೀ ಉದ್ದದ ಹುಳು ಹೊರತೆಗೆದ ವೈದ್ಯರು

    ತಿರುವನಂತಪುರಂ: ಮಹಿಳೆಯೊಬ್ಬರ ಕಿವಿಯಿಂದ ಜೇಡರ ಹುಳು ಹೊರಬಂದ ವಿಡಿಯೋವನ್ನ ನೋಡಿದ್ರಿ. ಈಗ ಕೇರಳದ ಎರ್ನಾಕುಲಂ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರ ಕಣ್ಣಿನಿಂದ ಸುಮಾರು 70 ಮಿ.ಮೀ ಉದ್ದದ ಹುಳುವನ್ನ ವೈದ್ಯರು ಹೊರತೆಗೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ.

    56 ವರ್ಷದ ಲಲಿತಾ ಎಂಬವರು ಕಣ್ಣಿನ ಒಳಗೆ ಹಾಗೂ ಕಣ್ಣಿನ ಸುತ್ತಲೂ ನವೆಯಾಗುತ್ತಿದೆ ಅಂತ ವೈದ್ಯರ ಬಳಿ ಹೋಗಿದ್ದರು. ವೈದ್ಯರು ಲಲಿತಾ ಅವರ ಕಣ್ಣನ್ನ ಪರೀಕ್ಷಿಸಿ, ನಂತರ ಶಸ್ತ್ರಚಿಕಿತ್ಸೆ ಮಾಡಿ ಕಣ್ಣಿನಲ್ಲಿದ್ದ ಡಿರೋಫಿಲಾರಿಯಾ ಜಾತಿಗೆ ಸೇರಿದ 70 ಮಿ.ಮೀ ಉದ್ದದ ಹುಳುವನ್ನ ಹೊರತೆಗೆದಿದ್ದಾರೆ. ಈ ಹುಳು ಆನೆಕಾಲು ರೋಗ ಉಂಟುಮಾಡುತ್ತದೆ ಎನ್ನಲಾಗಿದೆ.

    ಲಲಿತಾ ಅವರಿಗೆ ಲೋಕಲ್ ಅನಸ್ತೇಶಿಯಾ ನೀಡಿ 10 ನಿಮಿಷಗಳ ಸರ್ಜರಿ ಮೂಲಕ ಹುಳುವನ್ನ ಹೊರತೆಗೆಯಲಾಗಿದೆ. ಸರ್ಜರಿಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದ್ದು, ನೋಡುಗರ ಮೈ ಜುಮ್ಮೆನಿಸುವಂತಿದೆ.

    ಇದನ್ನೂ ಓದಿ: ತಲೆನೋವೆಂದು ಬೆಂಗಳೂರಿನ ಆಸ್ಪತ್ರೆಗೆ ಹೋದಾಗ ಕಿವಿಯಿಂದ ಹೊರಬಂತು ಜೇಡ!- ವಿಡಿಯೋ ವೈರಲ್