Tag: eye

  • ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬಾಲಕ ಸಾವು

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬಾಲಕ ಸಾವು

    – ವೈದ್ಯ ಪೊಲೀಸರ ವಶಕ್ಕೆ

    ಬೆಂಗಳೂರು: ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬಾಲಕ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಸರ ಘಟ್ಟದಲ್ಲಿ ನಡೆದಿದೆ.

    ತಮಿಳುನಾಡು ಮೂಲದ ಶಂಕರ್ ಮೃತಪಟ್ಟ ಬಾಲಕ. ಶಂಕರ್ ಗೆ ಬಲಗಣ್ಣಿನಲ್ಲಿ ಸಮಸ್ಯೆ ಇದ್ದ ಕಾರಣ ಹೆಸರಘಟ್ಟ ರಸ್ತೆಯ ಮಂಜುನಾಥ ಕಣ್ಣಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಶಸ್ತ್ರಚಿಕಿತ್ಸೆ ನಡೆಸಿದ ಕೆಲವೇ ಗಂಟೆಗಳಲ್ಲಿ ಉಸಿರಾಟದ ಸಮಸ್ಯೆಯಿಂದ ಬಾಲಕ ಶಂಕರ್ ಮೃತಪಟ್ಟಿದ್ದಾನೆ. ಶಸ್ತ್ರಚಿಕಿತ್ಸೆ ವೇಳೆ ಅತಿಯಾದ ಓವರ್ ಡೋಸ್ ನೀಡಿದ್ದೇ ಬಾಲಕನ ಸಾವಿಗೆ ಕಾರಣ ಅಂತ ಪೋಷಕರು ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಸ್ಪತ್ರೆ ವೈದ್ಯ ಮಂಜುನಾಥ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

  • ಶಿಕ್ಷಕಿ ಕ್ರೌರ್ಯಕ್ಕೆ ಕಣ್ಣು ಕಳೆದುಕೊಂಡ ಎಲ್‍ಕೆಜಿ ವಿದ್ಯಾರ್ಥಿ

    ಶಿಕ್ಷಕಿ ಕ್ರೌರ್ಯಕ್ಕೆ ಕಣ್ಣು ಕಳೆದುಕೊಂಡ ಎಲ್‍ಕೆಜಿ ವಿದ್ಯಾರ್ಥಿ

    ಹಾಸನ: ಶಿಕ್ಷಕಿಯೊಬ್ಬರ ಕ್ರೌರ್ಯಕ್ಕೆ ವಿದ್ಯಾರ್ಥಿಯೋರ್ವ ಕಣ್ಣು ಕಳೆದುಕೊಂಡ ಘಟನೆ ಜಿಲ್ಲೆಯ ಹೊರವಲಯದ ಎಲ್‍ವಿಜಿಎಸ್ ಶಾಲೆಯಲ್ಲಿ ನಡೆದಿದೆ.

    ವಿದ್ಯಾರ್ಥಿ ಮನಿಷ್ ದೃಷ್ಟಿ ಕಳೆದುಕೊಂಡಿದ್ದಾನೆ. ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಗಿರಿಜಾ ಅವರ ವಿರುದ್ಧ ಈ ಆರೋಪ ಕೇಳಿಬಂದಿದೆ. ಮನಿಷ್ ಎಲ್‍ಕೆಜಿಯಲ್ಲಿ ವ್ಯಾಸಂಗ ವಾಡುತ್ತಿದ್ದಾನೆ. ಅಗಸ್ಟ್ 13ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶಾಲೆಯಲ್ಲಿ ಶಿಕ್ಷಕಿ ಮನಿಷ್ ಕಣ್ಣಿಗೆ ಕಬ್ಬಿಣದ ಸ್ಕೇಲ್‍ನಿಂದ ಹಲ್ಲೆ ಮಾಡಿದ್ದಾರೆ. ಹೀಗಾಗಿ ನಮ್ಮ ಮಗನಿಗೆ ಕಣ್ಣು ಕಳೆದುಕೊಳ್ಳುವ ಸ್ಥಿತಿ ಬಂದಿದೆ ಎಂದು ಪೋಷಕರು ಶಿಕ್ಷಕಿ ವಿರುದ್ಧ ಆರೋಪಿಸಿದ್ದಾರೆ.

    ಶಿಕ್ಷಕಿ ಹಲ್ಲೆ ನಡೆಸಿದ ದಿನದಿಂದ ವಿದ್ಯಾರ್ಥಿ ಕಣ್ಣು ನೋವು ಎಂದು ಹೇಳುತ್ತಿದ್ದನು. ಹೀಗಾಗಿ ವೈದ್ಯರ ಬಳಿ ಚಿಕಿತ್ಸೆಗೆ ಪೋಷಕರು ವಿದ್ಯಾರ್ಥಿಯನ್ನು ಕರೆದುಕೊಂಡ ಹೋದಾಗ ಆತನ ಕಣ್ಣಿಗೆ ಬಲವಾಗಿ ಹಾನಿಯಾಗಿದೆ ಎಂಬ ಸತ್ಯಾಂಶ ಹೊರಬಿದ್ದಿದೆ. ಹೀಗಾಗಿ ಶಿಕ್ಷಕಿಯ ಕ್ರೌರ್ಯಕ್ಕೆ ವಿದ್ಯಾರ್ಥಿ ಕಣ್ಣು ಕಳೆದುಕೊಂಡಿದ್ದಾನೆ. ಇದರಿಂದ ಪೋಷಕರು ಶಿಕ್ಷಕಿ ಹಾಗೂ ಶಾಲಾ ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದಿದ್ದಾರೆ.

    ಹಾಗೆಯೇ ಈ ಬಗ್ಗೆ ಪೊಲೀಸರಿಗೆ ಶಿಕ್ಷಕಿ ಹಾಗೂ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರು ದೂರು ನೀಡಿದ್ದಾರೆ. ಸದ್ಯ ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕಣ್ಣು, ಕಿಡ್ನಿ ಮಾರುತ್ತೇನೆ ನನಗೆ ಸಾಲ ತೀರಿಸಲು ದುಡ್ಡು ಕೊಡಿ – ಬೋರ್ಡ್ ಹಿಡಿದು ಅಲೆಯುತ್ತಿರುವ ರೈತ

    ಕಣ್ಣು, ಕಿಡ್ನಿ ಮಾರುತ್ತೇನೆ ನನಗೆ ಸಾಲ ತೀರಿಸಲು ದುಡ್ಡು ಕೊಡಿ – ಬೋರ್ಡ್ ಹಿಡಿದು ಅಲೆಯುತ್ತಿರುವ ರೈತ

    ತುಮಕೂರು: ಕಣ್ಣು, ಕಿಡ್ನಿ ಮಾರುತ್ತೇನೆ, ನನಗೆ ಸಾಲ ತೀರಿಸಲು ದುಡ್ಡು ಕೊಡಿ ಎಂದು ಬೋರ್ಡ್ ಹಿಡಿದು ಶಿರಾ ತಾಲೂಕಿನಲ್ಲಿ ರೈತರೊಬ್ಬರು ಬೀದಿ ಬೀದಿ ಅಲೆಯುತ್ತಿದ್ದಾರೆ.

    ಮೂರ್ನಾಲ್ಕು ಬೋರ್ ವೆಲ್ ಕೊರೆದರೂ ಕೂಡ ರೇಷ್ಮೆ ಬೆಳೆ ಕೈ ಹತ್ತದೆ ಸಾಲ ಮಾಡಿದ ರೈತ ಚಂದ್ರಶೇಖರ್ ನಂತರ ಆ ಸಾಲವನ್ನು ತೀರಿಸಲಾಗದೆ ವಿಷವನ್ನು ಕುಡಿದಿದ್ದರು. ಅದೃಷ್ಟವಾಶಾತ್ ಬದುಕಿ ಬಂದು ಈಗ ಕೈ ಸಾಲ ಮಾಡಿ ಬ್ಯಾಂಕ್ ಸಾಲ ತೀರಿಸಿದ್ದರು. ಈಗ ಕೈ ಸಾಲ ತೀರಿಸಲಾಗದೆ ಕಿಡ್ನಿ ಮಾರುವ ಹಂತಕ್ಕೆ ಬಂದು ತುಲುಪಿದ್ದಾರೆ.

    ಶಿರಾ ತಾಲೂಕಿನ ಮಾಗೂಡಿನ ರೈತನಾದ ಚಂದ್ರಶೇಖರ್ 15 ವರ್ಷದ ಹಿಂದೆ ಪಿಎಲ್‍ಡಿ ಹಾಗೂ ಡಿಸಿಸಿ ಬ್ಯಾಂಕಿನಲ್ಲಿ ಸಾಲ ಮಾಡಿದ್ದರು. ನಂತರ ಹಂತಹಂತವಾಗಿ ಸಾಲ ತೀರಿಸಿದ್ದರೂ ಕ್ಲಿಯರೆನ್ಸ್ ಸಿಗದೆ ಪಹಣಿಯಲ್ಲು ಇನ್ನೂ ಸಾಲವಿದೆ ಎಂದು ಬರುತ್ತಿದ್ದು ಜಮೀನನ್ನು ಉಪಯೋಗಿಸಿಕೊಂಡು ಮರುಸಾಲವೂ ಮಾಡಲಾಗದ ಪರಿಸ್ಥಿತಿ ತುಲುಪಿದ್ದಾರೆ.

    ಇನ್ನೊಂದಡೆ ಕೈ ಸಾಲ ವಿಪರೀತ ಬೆಳೆದು 10ನೇ ತರಗತಿ ಓದುತ್ತಿರುವ ಮಗಳ ವಿದ್ಯಾಭ್ಯಾಸಕ್ಕೂ ಹಣವಿಲ್ಲದಂತೆ ಪರಿತಪಿಸುವ ಹಂತಕ್ಕೆ ತಲುಪಿದ್ದಾರೆ. ಈಗ ಕಿಡ್ನಿ ಮಾರಾಟ ಕಾನೂನು ಬಾಹಿರ ಎಂದು ಗೊತ್ತಿದ್ದರೂ ಬೇರೆ ದಾರಿ ಕಾಣದೆ ಇತ್ತ ಜೀವನವನ್ನೂ ನಡೆಸಲಾಗದೆ ತುತ್ತು ಅನ್ನಕ್ಕೂ ಕೈ ಚಾಚುತ್ತಿದ್ದಾರೆ.

  • ಸರಿಗಮಪದ ಋತ್ವಿಕ್ ಗೆ ಕಣ್ಣು ದಾನ ಮಾಡಲು ಮುಂದಾದ ವೃದ್ಧ

    ಸರಿಗಮಪದ ಋತ್ವಿಕ್ ಗೆ ಕಣ್ಣು ದಾನ ಮಾಡಲು ಮುಂದಾದ ವೃದ್ಧ

    ಬಳ್ಳಾರಿ: ಸಂಗೀತಕ್ಕೆ ಮನಸೋಲದ ಮನಸ್ಸುಗಳೇ ಇಲ್ಲ ಎನ್ನುವ ಮಾತಿದೆ. ಈ ಮಾತು ಇದೀಗ ಮತ್ತೊಮ್ಮೆ ರುಜುವಾಗಿದೆ. ಏಕೆಂದರೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಕನ್ನಡದ ಸರಿಗಮಪದಲ್ಲಿ ತನ್ನ ಹಾಡಿನಿಂದಲೇ ಎಲ್ಲರ ಗಮನ ಸೆಳೆದಿರುವ ಋತ್ವಿಕ್ ಕಂಠಸಿರಿಗೆ ಕರಗಿರುವ ವೃದ್ಧರೊಬ್ಬರು, ತಮ್ಮ ಕಣ್ಣುಗಳನ್ನೆ ಗಾಯಕನಿಗೆ ದಾನ ಮಾಡಲು ಮುಂದಾಗಿದ್ದಾರೆ.

    ಸರಿಗಮಪ ಕಾರ್ಯಕ್ರಮದಲ್ಲಿ ಕಣ್ಣುಗಳು ಇಲ್ಲದಿದ್ದರೂ ತಮ್ಮ ಕಂಠಸಿರಿಯಿಂದಲೇ ಎಲ್ಲರ ಕಣ್ಮನ ಸೆಳೆದಿರುವ ಗಾಯಕ ಋತ್ವಿಕ್ ಗೆ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನ 74 ವರ್ಷದ ವೃದ್ಧ ಸಿದ್ದಲಿಂಗನಗೌಡ ಕಣ್ಣುಗಳನ್ನು ದಾನ ಮಾಡಲು ಮುಂದೆ ಬಂದಿದ್ದಾರೆ.

    ದೃಷ್ಟಿ ವಿಕಲ ಚೇತನರಾಗಿದ್ದರೂ ತಮ್ಮ ಅದ್ಭುತ ಕಂಠಸಿರಿಯಿಂದಲೇ ಅಪಾರ ಅಭಿಮಾನಿಗಳನ್ನು ಋತ್ವಿಕ್ ಗಳಿಸಿದ್ದಾರೆ. ಹಾಡುಗಳನ್ನು ಕೇಳುತ್ತಾ ಅವರ ಅಭಿಮಾನಿಯಾದ ಕೊಟ್ಟೂರಿನ ಸಿದ್ದಲಿಂಗನಗೌಡ ಕಣ್ಣುಗಳನ್ನ ದಾನ ಮಾಡಲು ಹಠ ಹಿಡಿದಿದ್ದಾರೆ. ಅದಕ್ಕಾಗಿ ಸಿದ್ದಲಿಂಗನಗೌಡ ಸಿಕ್ಕ ಸಿಕ್ಕವರಲ್ಲಿ ತನ್ನ ಕಣ್ಣು ದಾನದ ಆಸೆ ಹೊರಹಾಕುತ್ತಿದ್ದಾರೆ.

    ಸಾಯುವ ಮುನ್ನ ಶ್ರೇಷ್ಠವಾದ ಕೆಲಸ ಮಾಡು ಎಂದು ನಮ್ಮ ಅಪ್ಪ ಹೇಳಿದ್ದಾರೆ. ಅದರಂತೆ ನಾನು ಅಂಧ ಹಾಡುಗಾರ ಋತ್ವಿಕ್ ಗೆ ಕಣ್ಣುದಾನ ಮಾಡಲು ಸಿದ್ಧನಾಗಿದ್ದೇನೆ. ಒಂದು ತಿಂಗಳ ಹಿಂದೆ ನನ್ನ ದೇಹ, ಕಣ್ಣುಗಳನ್ನ ಬಳ್ಳಾರಿ ಸರ್ಕರಿ ಆಸ್ಪತ್ರೆಗೆ ಬರೆದುಕೊಟ್ಟಿದ್ದೇನೆ. ನನ್ನ ಸಾವಿನ ನಂತರ ನನ್ನ ಕಣ್ಣುಗಳನ್ನು ಋತ್ವಿಕ್‍ಗೆ ಅಳವಡಿಸಬಹುದು ಎಂದು ಮನವಿ ಮಾಡಬೇಕು ಅಂತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪತಿಯ ಸಾವಿನಲ್ಲಿಯೂ ಸಾರ್ಥಕತೆ ಮೆರೆದ 8 ತಿಂಗಳ ಗರ್ಭಿಣಿ

    ಪತಿಯ ಸಾವಿನಲ್ಲಿಯೂ ಸಾರ್ಥಕತೆ ಮೆರೆದ 8 ತಿಂಗಳ ಗರ್ಭಿಣಿ

    ಬೆಂಗಳೂರು: ಪತಿಯ ಸಾವಿನಲ್ಲಿಯೂ 8 ತಿಂಗಳ ಗರ್ಭಿಣಿಯೊಬ್ಬರು ಸಾರ್ಥಕತೆ ಮೆರೆದಿದ್ದಾರೆ. ಹೌದು, ಮಗುವಿನ ಜನನದ ಕನಸು ಕಂಡವಳಿಗೆ ಗಂಡನ ಸಾವಿನ ಸುದ್ದಿ ಭರಸಿಡಿಲು ಬಡಿದಂತಾಗಿತ್ತು. ಇಂತಹ ಆಘಾತದಲ್ಲಿಯೂ ಪತ್ನಿ ಪತಿಯ ಕಿಡ್ನಿ, ಹೃದಯ ಹಾಗೂ ಕಣ್ಣುಗಳನ್ನು ದಾನ ಮಾಡಿದ್ದಾರೆ.

    ಗರ್ಭಿಣಿಯ ಪತಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಯಶವಂತಪುರದ ಸ್ಪರ್ಶ ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪತಿ ಬದುಕಿ ಬರುತ್ತಾರೆ ಎಂಬ ನಿರೀಕ್ಷೆಯಲ್ಲಿಯೇ ಅವರು ದಿನ ದೂಡುತ್ತಿದ್ದರು. ಆದರೆ ಶನಿವಾರ ನಿರೀಕ್ಷೆ ಹುಸಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರ ಪತಿ ಮೃತಪಟ್ಟಿದ್ದಾರೆ.

    ಪತಿಯ ಸಾವಿನ ಸುದ್ದಿ ಕೇಳಿದ್ದ ಪತ್ನಿಗೆ ಶಾಕ್ ಆಗಿತ್ತು. ಕೆಲವೇ ತಿಂಗಳಿಗೆ ಮಗುವಿಗೆ ಜನ್ಮ ನೀಡಲಿರುವ ಅವರಿಗೆ ಪತಿಯ ಅಗಲಿಕೆ ಭಾರೀ ನೋವು ತಂದಿತ್ತು. ನೋವಿಗೆ ಎದೆಗುಂದದೆ ಪತಿಯ ಕಿಡ್ನಿ, ಹೃದಯ ಹಾಗೂ ಕಣ್ಣಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಅವರ ನಿರ್ಧಾರಿಂದಾಗಿ ಇಂದು ನಾಲ್ಕೈದು ಜನರಿಗೆ ಮರು ಜೀವ ಸಿಕ್ಕಂತಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಚಂದದ ಕಣ್ಣಿಗೆ ಮನೆಯಲ್ಲಿಯೇ ಆರೈಕೆ ಮಾಡಿ

    ಚಂದದ ಕಣ್ಣಿಗೆ ಮನೆಯಲ್ಲಿಯೇ ಆರೈಕೆ ಮಾಡಿ

    ಸಾಮಾನ್ಯವಾಗಿ ಎಲ್ಲರಿಗೂ ಕಣ್ಣಿನ ಸುತ್ತ ಕಪ್ಪು ಕಲೆಗಳು ಕಾಣಿಸಿಕೊಳ್ಳುತ್ತವೆ. ಅದು ಹೆಚ್ಚಾಗಿ ವಯಸ್ಕರಲ್ಲಿ ಕಾಣಿಸಿಕೊಳ್ಳುತ್ತದೆ. ಸರಿಯಾಗಿ ನಿದ್ದೆ ಮಾಡದೇ, ಕಣ್ಣಿಗೆ ಸರಿಯಾಗಿ ಆರೈಕೆ ಮಾಡದೇ ಇರುವುದರಿಂದ ಕಣ್ಣಿನ ಸುತ್ತ ಕಪ್ಪು ಕಲೆಯಾಗುತ್ತದೆ. ಅದರಲ್ಲೂ ಕಂಪ್ಯೂಟರ್ ಮುಂದೆ ಹೆಚ್ಚಾಗಿ ಕುಳಿತು ಕೆಲಸ ಮಾಡುವುದರಿಂದ ಕಣ್ಣಿನ ಸುತ್ತ ಡಾರ್ಕ್ ಸರ್ಕಲ್ ಬರುತ್ತದೆ. ಆದ್ದರಿಂದ ಇದನ್ನು ತಡೆಯಲು ಮನೆಯಲ್ಲಿಯೇ ಮದ್ದು ಮಾಡಬಹುದು.

    ಕಣ್ಣಿನ ಅಂದಕ್ಕೆ ಮನೆಮದ್ದು:
    * ಪ್ರತಿದಿನ ಕಡಿಮೆ ಎಂದರೆ 7 ಗಂಟೆ ನಿದ್ದೆ ಮಾಡಬೇಕು.
    * ಸೌತೆಕಾಯಿಯ ರಸವನ್ನು ಪ್ರತಿದಿನ ಕಣ್ಣಿನ ಸುತ್ತ ಹಚ್ಚಿ ಮತ್ತು 15 ನಿಮಿಷದ ನಂತರ ನೀರಿನಿಂದ ತೊಳೆಯಿರಿ.
    * ಪ್ರತಿ ದಿನದ ಒತ್ತಡ ಮತ್ತು ಆತಂಕಗಳನ್ನು ಕಡಿಮೆ ಮಾಡಿಕೊಳ್ಳುವುದು ಕೂಡ ಕಪ್ಪು ವೃತ್ತ ತಡೆಯಲು ಉತ್ತಮ ವಿಧಾನವಾಗಿದೆ.

    * ತಣ್ಣಗಿನ ಟೀ ಬ್ಯಾಗ್ ಅನ್ನು ಕಣ್ಣಿನ ಕೆಳಭಾಗದಲ್ಲಿ ಇಡುವುದರಿಂದ ಕೂಡ ಕಣ್ಣಿನ ಕಪ್ಪು ಕಲೆಗಳು ಮಾಯವಾಗುತ್ತವೆ.
    * ದಿನಕ್ಕೆ 10 ಲೋಟ ನೀರು ಕುಡಿಯಬೇಕು. ನೀರಿನಾಂಶ ಹೆಚ್ಚಾದಷ್ಟು ಕಣ್ಣಿನ ಸುತ್ತ ಇರೋ ಕಲೆಗಳನ್ನು ಹೋಗಲಾಡಿಸಬಹುದು.

    * ನಿಂಬೆ ಹಣ್ಣು ಮತ್ತು ಸೌತೆ ಕಾಯಿಯನ್ನು ಸಮಪ್ರಮಾಣದಲ್ಲಿ ಮಿಶ್ರಣ ಮಾಡಿ ಅದರ ರಸವನ್ನು ಪ್ರತಿದಿನ ಹಚ್ಚಿ. 15 ನಿಮಿಷದ ನಂತರ ನೀರಿನಲ್ಲಿ ತೊಳೆದುಕೊಂಡರೆ ಕಪ್ಪು ವೃತ್ತ ಕಡಿಮೆಯಾಗುತ್ತದೆ.
    * ಕೆಲಸ, ಕಾಲೇಜು ಮುಗಿಸಿ ಮನೆಗೆ ಹೋದಾಗ ಬೆಚ್ಚಗಿನ ಅಥವಾ ತಣ್ಣನೆ ನೀರಿನಿಂದ ಕಣ್ಣನ್ನು ತೊಳೆಯಿರಿ. ಇದರಿಂದ ರಕ್ತ ಸಂಚಲನ ಸುಗಮವಾಗಿಸುವುದರ ಮೂಲಕ ಕಪ್ಪು ವೃತ್ತ ಹೋಗುತ್ತದೆ.

    * ಪುದೀನಾ ಎಲೆಗಳನ್ನು ಜಜ್ಜಿ ಅದನ್ನು ಕಣ್ಣಿನ ಕೆಳಭಾಗಕ್ಕೆ ಹಚ್ಚಿ. 10 ರಿಂದ 15 ನಿಮಿಷ ಬಿಟ್ಟು ತೊಳೆಯಿರಿ. ಈ ರೀತಿ ಮಾಡಿದರೆ ಕಪ್ಪು ಕಲೆಗಳು ಕಡಿಮೆಯಾಗುತ್ತವೆ.
    * ಆಲೂಗಡ್ಡೆ ಮತ್ತು ಸೌತೆಕಾಯಿ ಮಿಶ್ರಣದ ರಸವನ್ನು ಬಳಿದರೆ ಕಣ್ಣಿನ ಸುತ್ತಲು ಇರುವ ಕಪ್ಪು ಕಲೆಯನ್ನು ಹೋಗಲಾಡಿಸಬಹುದು.

    * ಕಿತ್ತಳೆ ರಸವನ್ನು ಗ್ಲಿಸರಿನ್ ಜೊತೆ ಬೆರೆಸಿ ವಾರದಲ್ಲಿ 3 ಬಾರಿ ಕಣ್ಣಿನ ಸುತ್ತ ಹಚ್ಚಿ. ಬಳಿಕ 20 ನಿಮಿಷದ ನಂತರ ತೊಳೆಯಿರಿ. ಇದರಿಂದ ಕಣ್ಣಿನ ಸುತ್ತಲು ಇರುವ ಕಪ್ಪು ಕಲೆಗಳನ್ನು ಹೋಗಲಾಡಿಸಿ.


    * ಮಲಗುವ ಮೊದಲು ಬಾದಾಮಿ ಮತ್ತು ಹಾಲನ್ನು ಮಿಶ್ರ ಮಾಡಿ ಅದನ್ನು ಕಣ್ಣಿನ ಸುತ್ತಲು ಹಚ್ಚಿ. ಮಾರನೆಯ ದಿನ ಬೆಳಗ್ಗೆ ತಣ್ಣನೆಯ ನೀರಿನಿಂದ ತೊಳೆಯಿರಿ.

    * ತಾಜಾ ಹಣ್ಣು, ಮೊಸರು, ಬೇಳೆಕಾಳುಗಳು, ಕೆನೆ ತೆಗೆದ ಹಾಲು, ಸೊಪ್ಪುಗಳು ಮತ್ತು ಬೀನ್ಸ್ ಇವುಗಳನ್ನು ಹೆಚ್ಚಾಗಿ ತಿನ್ನಬೇಕು. ಅದರಲ್ಲೂ ಪೈನಾಪಲ್ ಹಣ್ಣಿನ ಜ್ಯೂಸ್ ತುಂಬಾ ಒಳ್ಳೆಯದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನವರಾತ್ರಿ ಮಹಿಮೆ – ಕಣ್ಣು ಬಿಟ್ಟ ದೇವಿ: ವಿಡಿಯೋ ವೈರಲ್

    ನವರಾತ್ರಿ ಮಹಿಮೆ – ಕಣ್ಣು ಬಿಟ್ಟ ದೇವಿ: ವಿಡಿಯೋ ವೈರಲ್

    ಹಾಸನ: ಜಿಲ್ಲೆಯ ಅರಸೀಕರೆ ತಾಲೂಕಿನ ಬೆಂಡೆಕೆರೆ ಗ್ರಾಮದ ಭದ್ರಕಾಳಿ ಮೂರ್ತಿ ಕಣ್ಣುಬಿಟ್ಟಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಬೆಂಡೆಕೆರೆ ಗ್ರಾಮದ ವೀರಭದ್ರೇಶ್ವರ ದೇವಾಲಯದಲ್ಲಿ ಈ ಭದ್ರಕಾಳಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಕಳೆದ ಮಹಾಲಯ ಅಮಾವಾಸ್ಯೆ ದಿನದಂದು ದೇವಸ್ಥಾನದ ಪೂಜೆ ಸಂದರ್ಭದಲ್ಲಿ ಭದ್ರಕಾಳಿ ಮೂರ್ತಿಯು ಕಣ್ಣು ಬಿಟ್ಟಂತೆ ಗೋಚರಿಸಿದೆ. ತಕ್ಷಣ ಭಕ್ತಾದಿಯೊಬ್ಬರು ಅದನ್ನು ತಮ್ಮ ಮೊಬೈಲ್‍ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಜನ ತಂಡೋಪತಂಡವಾಗಿ ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ.

    ಬೆಂಡೆಕೆರೆ ಗ್ರಾಮದ ಹೊರಭಾಗದಲ್ಲಿ ಈ ದೇವಾಲಯ ಇದ್ದು, ಅಮವಾಸ್ಯೆಗಳಂದು ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಈ ಮಹಾಲಯ ಅಮಾವಾಸ್ಯೆಯ ದಿನದಂದು ಭದ್ರಕಾಳಿ ಕಣ್ಣು ತೆರೆದಿದ್ದು, ಆ ವಿಡಿಯೋ ತಡವಾಗಿ ವೈರಲ್ ಆಗಿದೆ. ಈ ಹಿಂದೆಯೂ ಕೂಡ ಅಮವಾಸ್ಯೆ ದಿನ ಈ ರೀತಿಯ ಪವಾಡ ನಡದಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

    ವೀರಭದ್ರೇಶ್ವರ ದೇವಾಲಯದಲ್ಲಿ ಈ ಭದ್ರಕಾಳಿ ಮೂರ್ತಿ ಇದೆ. ಈ ಹಿಂದೆ ದೇವಿ ಮೂರ್ತಿ ಕಣ್ಣು ಬಿಟ್ಟಾಗ ಫೋಟೋವನ್ನು ತೆಗೆದಿದ್ದೆ. ಈಗ ಮಹಾಲಯ ಅಮಾವಾಸ್ಯೆ ದಿನ ಸಂಜೆ ಕುಂಕುಮ ತೆಗೆದುಕೊಂಡು ಬರೋಣ ಎಂದು ದೇವಾಲಯದ ಬಳಿ ಹೋಗಿದ್ದೆ. ಆಗ ದೇವಿ ಕಣ್ಣು ಬಿಟ್ಟು ಗೋಚರಿಸುತ್ತಿತ್ತು. ಅದನ್ನು ವಿಡಿಯೋ ಮಾಡಿದ್ದೇವೆ. ನಾನು ಮಾತ್ರವಲ್ಲ ಅಲ್ಲಿದ್ದ ಹತ್ತಾರು ಜನರು ಅದನ್ನು ನೋಡಿದ್ದಾರೆ ಎಂದು ಸ್ಥಳೀಯ ಚಂದ್ರು ಅವರು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=M2rIA8MjG90

  • ಕೂದಲಿನ ಸೌಂದರ್ಯಕ್ಕೆ ಮಾರು ಹೋಗಿ ಕಣ್ಣಿಗೆ ಕುತ್ತು ತಂದುಕೊಂಡ ಬಾಲಕಿಯರು

    ಕೂದಲಿನ ಸೌಂದರ್ಯಕ್ಕೆ ಮಾರು ಹೋಗಿ ಕಣ್ಣಿಗೆ ಕುತ್ತು ತಂದುಕೊಂಡ ಬಾಲಕಿಯರು

    ಕೊಪ್ಪಳ: ಕೂದಲಿನ ಸೌಂದರ್ಯಕ್ಕೆ ಮಾರು ಹೋಗಿ ಬಾಲಕಿ ಹಾಗೂ ಯುವತಿ ಕಣ್ಣಿಗೆ ಕುತ್ತು ತಂದುಕೊಂಡ ಘಟನೆ ಕೊಪ್ಪಳದಲ್ಲಿ ನಡೆದಿದೆ.

    ಗಂಗಾವತಿ ತಾಲೂಕಿನ ಜಂಗಮರ ಕಲ್ಗುಡಿ ಹಾಗೂ ಹಣವಾಳ ಗ್ರಾಮದಲ್ಲಿ ಪ್ರತ್ಯೇಕವಾಗಿ ಇಂತಹ ಘಟನೆ ನಡೆದಿದೆ. ಹಣವಾಳ ಗ್ರಾಮದ ಅನಿತಾ, ಜಂಗಮರ ಕಲ್ಗುಡಿ ಗ್ರಾಮದ ಚಾತುರ್ಯ ಕಣ್ಣಿಗೆ ಕುತ್ತು ತಂದುಕೊಂಡವರಾಗಿದ್ದು, ಇದೀಗ ಗಂಗಾವತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಅನಿತಾ ಹಾಗೂ ಚಾತುರ್ಯನ ಅಮ್ಮಂದಿರು ನಮ್ಮ ಮಕ್ಕಳ ಕೂದಲು ಕಪ್ಪಾಗಿ ಆಗುತ್ತವೆ ಅಲ್ಲದೇ ತಲೆಯಲ್ಲಿ ಹೇನಿನ ಸಮಸ್ಯೆ ಇರಲ್ಲ ಎಂದು ಸೀತಾಫಲ ಹಣ್ಣಿನ ಬೀಜವನ್ನು ಮಿಕ್ಸಿಯಲ್ಲಿ ಹಾಕಿ ಅದನ್ನು ಪೇಸ್ಟ್ ಮಾಡಿ ರಾತ್ರಿ ತಲೆಗೆ ಹಚ್ಚಿದ್ದಾರೆ. ಆದರೆ ಆ ಬೀಜದ ವಿಷಭರಿತ ರಾಸಾಯನಿಕವು ಕಣ್ಣಿನ ಒಳಗೆ ಹೋಗಿ ಕಣ್ಣುಗಳು ಮಂಜು ಮಂಜಾಗಿ ಕಂಡಿವೆ.

    ಸದ್ಯ ಇದರಿಂದ ಆತಂಕಗೊಂಡ ಪೋಷಕರು ಗಂಗಾವತಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇಬ್ಬರಿಗೆ ಕಣ್ಣಿನ ಚಿಕಿತ್ಸೆ ಮಾಡಿದ ವೈದ್ಯರು, ಯುವತಿ ಮತ್ತು ಬಾಲಕಿಯನ್ನು ಕಣ್ಣಿನ ದೋಷದಿಂದ ಪಾರು ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವ್ಯಕ್ತಿ ಕಣ್ಣಿನಿಂದ 15 ಸೆ.ಮೀ ಉದ್ದದ ಹುಳ ತೆಗೆದ ವೈದ್ಯರು

    ವ್ಯಕ್ತಿ ಕಣ್ಣಿನಿಂದ 15 ಸೆ.ಮೀ ಉದ್ದದ ಹುಳ ತೆಗೆದ ವೈದ್ಯರು

    ಉಡುಪಿ: 60 ವರ್ಷದ ವ್ಯಕ್ತಿಯೊಬ್ಬರ ಕಣ್ಣಿನಿಂದ 15 ಸೆ.ಮೀ ಉದ್ದದ ಹುಳವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರಗೆ ತೆಗೆಯಲಾಗಿದೆ.

    ಹಲವು ದಿನಗಳಿಂದ ಬಲಗಣ್ಣಿನ ನೋವಿನಿಂದ ಬಳಲುತ್ತಿದ್ದ ವ್ಯಕ್ತಿ, ಕುಂದಾಪುರದ ನ್ಯೂ ಮೆಡಿಕಲ್ ಸೆಂಟರಿನ ನೇತ್ರ ತಜ್ಞರಾದ ಡಾ. ಶ್ರೀಕಾಂತ್ ಶೆಟ್ಟಿಯವರನ್ನು ಸಂಪರ್ಕಿಸಿದ್ದಾರೆ. ವೈದ್ಯರು ಕಣ್ಣಿನ ತಪಾಸಣೆ ಮಾಡಿದಾಗ ಬಲಗಣ್ಣಿನ ಒಳಗೆ ಜೀವಂತವಾಗಿ ಹರಿದಾಡುತ್ತಿರುವ ಹುಳವನ್ನು ಪತ್ತೆಹಚ್ಚಿದ್ದಾರೆ.

    ಕಣ್ಣಿನ ಒಳಗಿರುವ ಹುಳವನ್ನು ಔಷಧಿಗಳ ಮೂಲಕ ಸಾಯಿಸಿ ತೆಗೆದರೆ ಕಣ್ಣಿನ ಒಳಗೆ ಊತ ಬಂದು ದೃಷ್ಟಿಗೆ ತೊಂದರೆ ಆಗುವ ಸಾಧ್ಯತೆ ಇತ್ತು. ಆ ಹುಳವನ್ನು ಒಂದು ಬದಿಗೆ ಬರುವಂತೆ ಮಾಡಿ ನಂತರ ಶಸ್ತ್ರ ಚಿಕಿತ್ಸೆಯ ಮೂಲಕ ಜೀವಂತ ಹುಳವನ್ನು ತೆಗೆದಿದ್ದಾರೆ.

    ಈ ಹುಳು ವುಚೆರಿಯಾ ಬ್ಯಾನ್ಕ್ರಾಫ್ಟಿ ಎನ್ನುವ ಜಾತಿಯದಾಗಿದ್ದು, ಇದು ಸೊಳ್ಳೆಗಳ ಮೂಲಕ ಹರಡುತ್ತದೆ ಎನ್ನಲಾಗಿದೆ. ಸೊಳ್ಳೆಗಳು ಕಚ್ಚಿದಾಗ ಇದರ ಲಾರ್ವಾಗಳು ರಕ್ತದಲ್ಲಿ ಸೇರಿ ಅಲ್ಲೇ ಬೆಳೆದು ಮೊಟ್ಟೆಯನ್ನಿಡುತ್ತವೆ. ಅಪರೂಪಕ್ಕೆ ಈ ಮೊಟ್ಟೆಗಳು ಕಣ್ಣಿನಲ್ಲಿ ಸೇರಿ ಅಲ್ಲೇ ಬೆಳೆದು ಹುಳುವಾಗಿ ಪರಿವರ್ತನೆ ಆಗುವ ಸಾಧ್ಯತೆಗಳಿವೆ. ಹುಳ ತೆಗೆದ ನಂತರ ರೋಗಿಯು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೃಷ್ಟಿ ಕಳೆದುಕೊಂಡ ಬಾಲಕಿಯ ಕಣ್ಣಿನ ಆಪರೇಷನ್ ಗೆ ಬೇಕಿದೆ ಸಹಾಯ

    ದೃಷ್ಟಿ ಕಳೆದುಕೊಂಡ ಬಾಲಕಿಯ ಕಣ್ಣಿನ ಆಪರೇಷನ್ ಗೆ ಬೇಕಿದೆ ಸಹಾಯ

    ಮಂಡ್ಯ: ನಗರದ ಕಾಳಿಕಾಂಭ ದೇವಾಲಯದ ಬಳಿಯಿರುವ ಡವರಿ ಕಾಲೋನಿಯ ನಿವಾಸಿ ತುಳಸಿ ಅವರ 5 ವರ್ಷದ ಪುತ್ರಿ ಆರತಿ. ಕಣ್ಣು ಕಳೆದುಕೊಂಡಿರುವ ಆರತಿ ತಾಯಿಯ ಆಸರೆ ಇಲ್ಲದೇ ಒಂದು ಹೆಜ್ಜೆಯೂ ಇಡುವಂತಿಲ್ಲ.

    ಮೂರು ತಿಂಗಳ ಹಿಂದೆ ಆಟವಾಡುವಾಗ ಬಾಲಕಿ ಆರತಿ, ಎಡಗಣ್ಣಿಗೆ ಕಡ್ಡಿ ತಗಲಿದ ಪರಿಣಾಮ ಸಂಪೂರ್ಣ ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾಳೆ. ಆರತಿ ತಂದೆ ಮಾರುತಿ ತೀರಿ ಹೋಗಿದ್ದಾರೆ. ಹಾಗಾಗಿ ಮಗಳ ಚಿಕಿತ್ಸಾ ವೆಚ್ಚವೆಲ್ಲ ತುಳಸಿಯವರ ಹೆಗಲ ಮೇಲಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆಯಾದ್ರೂ ಪ್ರಯೋಜನವಾಗಿಲ್ಲ. ಆದರೆ ಕಣ್ಣಿನ ಆಪರೇಷನ್ ಮಾಡಿಸಿದರೆ ದೃಷ್ಟಿ ಬರಬಹುದೆಂದು ವೈದ್ಯರು ಭರವಸೆ ನೀಡಿದ್ದಾರೆ.

    ಗಂಡು ದಿಕ್ಕು ಇಲ್ಲದ ಈ ಕುಟುಂಬಕ್ಕೆ ತಾಯಿಯೇ ಆಸರೆಯಾಗಿದ್ದು, ಮಗಳನ್ನು ಸಾಕಲು ಮದುವೆ ಸಮಾರಂಭಗಳಲ್ಲಿ ಎಲೆ ಎತ್ತುವ ಕೆಲಸ ಮಾಡಿ ಮಗಳನ್ನ ಸಾಕುತ್ತಿದ್ದಾರೆ. ಕೂಡಿಟ್ಟ ಹಣದಲ್ಲಿ ಮಗಳ ಕಣ್ಣಿಗೆ ಚಿಕಿತ್ಸೆಗೆ ಕೊಡಿಸಿದ್ದಾರೆ. ಆದ್ರೆ ಇದೀಗ ಆಪರೇಷನ್‍ಗೆ 80 ಸಾವಿರದಷ್ಟು ಹಣ ಹೊಂದಿಸಲಾಗದೇ ಕಂಗಲಾಗಿದ್ದಾರೆ.

    ಮಗಳ ದೃಷ್ಟಿ ಸರಿಹೋಗಲು ಆಪರೇಷನ್ ಅವಶ್ಯಕತೆ ಇದ್ದೂ, ಯಾರಾದ್ರೂ ದಾನಿಗಳು ಆಪರೇಷನ್‍ಗೆ ಸಹಾಯ ಮಾಡಿ ಎಂದು ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದಿಂದ ಸಹಾಯ ಬಯಸುತ್ತಿದ್ದಾರೆ.

    https://www.youtube.com/watch?v=ZjDrDsAIXWk