Tag: eyes

  • ರಾತ್ರಿ ಮಲಗಿದ್ದಾಗ ಕಣ್ಣಿಗೆ ಫೆವಿಕ್ವಿಕ್‌ ಅಂಟು – ಬೆಳಗ್ಗೆ ಕಣ್ಣು ತೆರೆಯಲಾಗದೇ ಒದ್ದಾಡುತ್ತಿದ್ದ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

    ರಾತ್ರಿ ಮಲಗಿದ್ದಾಗ ಕಣ್ಣಿಗೆ ಫೆವಿಕ್ವಿಕ್‌ ಅಂಟು – ಬೆಳಗ್ಗೆ ಕಣ್ಣು ತೆರೆಯಲಾಗದೇ ಒದ್ದಾಡುತ್ತಿದ್ದ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

    – ಸಹಪಾಠಿಗಳಿಂದಲೇ ಕೃತ್ಯ ಆರೋಪ

    ಭುವನೇಶ್ವರ: ಒಡಿಶಾದ (Odisha) ಕಂಧಮಾಲ್ ಜಿಲ್ಲೆಯ 8 ಹಾಸ್ಟೆಲ್ ವಿದ್ಯಾರ್ಥಿಗಳು ನಿದ್ರಿಸುತ್ತಿದ್ದಾಗ ಅವರ ಕಣ್ಣುಗಳಿಗೆ ಫೆವಿಕ್ವಿಕ್ (Fevikwik) ಎಂಬ ಅಂಟು ಸುರಿದ ಕಾರಣ ಅವರ ಕಣ್ಣಿಗಳಿಗೆ ಗಾಯಗಳಾಗಿವೆ. ಕಣ್ಣನ್ನೇ ತೆರೆಯಲಾಗದಂತಹ ಪರಿಸ್ಥಿತಿಯಲ್ಲಿದ್ದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಫಿರಿಂಗಿಯಾ ಬ್ಲಾಕ್‌ನ ಸಲಗುಡದಲ್ಲಿರುವ ಸೆಬಾಶ್ರಮ್ ಶಾಲೆಯಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ರಾತ್ರಿ ಮಲಗಿ ಬೆಳಗ್ಗೆ ಎದ್ದ ವಿದ್ಯಾರ್ಥಿಗಳಿಗೆ ಕಣ್ಣು ತೆರೆಯಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಅವರನ್ನು ಗೋಚಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಫುಲ್ಬಾನಿಯಲ್ಲಿರುವ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಇದನ್ನೂ ಓದಿ: ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಮೇಘಸ್ಫೋಟ – ಬೆಳೆ ಹಾನಿ, ಅವಶೇಷಗಳಡಿ ಹೂತುಹೋದ ವಾಹನಗಳು

    ಅಂಟು ಮಕ್ಕಳ ಕಣ್ಣುಗಳಿಗೆ ಹಾನಿಯನ್ನುಂಟು ಮಾಡಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಕ್ಕಿರುವುದರಿಂದ ಅಪಾಯ ಏನೂ ಇಲ್ಲ. ಎಲ್ಲರೂ ಆರೋಗ್ಯವಾಗಿದ್ದು, ಒಬ್ಬ ವಿದ್ಯಾರ್ಥಿಯನ್ನು ಡಿಸ್ಚಾರ್ಜ್‌ ಮಾಡಲಾಗಿದೆ. ಆದರೆ, ಇತರ ಏಳು ಮಂದಿ ವೈದ್ಯರ ನಿಗಾದಲ್ಲಿದ್ದಾರೆ.

    ಘಟನೆಯ ನಂತರ, ಜಿಲ್ಲಾಡಳಿತವು ಶಾಲಾ ಮುಖ್ಯೋಪಾಧ್ಯಾಯ ಮನೋರಂಜನ್ ಸಾಹು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಹಾಸ್ಟೆಲ್ ಒಳಗೆ ಘಟನೆ ಹೇಗೆ ಸಂಭವಿಸಿತು ಎಂಬುದನ್ನು ಪತ್ತೆಹಚ್ಚಲು ಮತ್ತು ವಾರ್ಡನ್‌ಗಳು, ಸೂಪರಿಂಟೆಂಡೆಂಟ್ ಸೇರಿದಂತೆ ಸಿಬ್ಬಂದಿ ಸದಸ್ಯರ ಪಾತ್ರವನ್ನು ಪರಿಶೀಲಿಸಲು ತನಿಖೆ ಪ್ರಾರಂಭಿಸಲಾಗಿದೆ. ಇದನ್ನೂ ಓದಿ: ನಿರ್ಲಕ್ಷಕ್ಕೊಳಗಾಗಿದ್ದ ಈಶಾನ್ಯ ಭಾರತ ಈಗ ಅಭಿವೃದ್ಧಿಯ ಎಂಜಿನ್‌: ಮೋದಿ

    ಮಕ್ಕಳು ಕ್ಯಾಂಪಸ್ ಒಳಗೆ ಅಂಟು ಹೇಗೆ ಸಂಗ್ರಹಿಸಿದರು? ಈ ಕೃತ್ಯದ ಹಿಂದಿನ ಉದ್ದೇಶದ ಬಗ್ಗೆಯೂ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಕಂಧಮಲ್‌ನ ಕಲ್ಯಾಣ ಅಧಿಕಾರಿ ಆಸ್ಪತ್ರೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ್ದಾರೆ.

  • ‘ಜೆನ್ನಾರಿಸ್ ಬಯೋನಿಕ್ ವಿಷನ್ ಸಿಸ್ಟಮ್’ – ಅಂಧರ ಪಾಲಿಗೆ ಭರವಸೆಯ ಬೆಳಕು!

    ‘ಜೆನ್ನಾರಿಸ್ ಬಯೋನಿಕ್ ವಿಷನ್ ಸಿಸ್ಟಮ್’ – ಅಂಧರ ಪಾಲಿಗೆ ಭರವಸೆಯ ಬೆಳಕು!

    ಸ್ಟ್ರೇಲಿಯಾದ (Australia) ಮೊನಾಶ್ ವಿಶ್ವವಿದ್ಯಾನಿಲಯದ ಸಂಶೋಧಕರು ವಿಶ್ವದ ಮೊದಲ ಬಯೋನಿಕ್ ಕಣ್ಣುಗಳನ್ನು (Bionic Eye) ಅಭಿವೃದ್ಧಿಪಡಿಸಿದ್ದಾರೆ. ‘ಜೆನ್ನಾರಿಸ್ ಬಯೋನಿಕ್ ವಿಷನ್ ಸಿಸ್ಟಮ್’ ಎಂದು ಕರೆಯಲ್ಪಡುವ ಈ ಆವಿಷ್ಕಾರವು ಕುರುಡುತನದಿಂದ ಬಳಲುತ್ತಿರುವ ಕೋಟ್ಯಂತರ ಜನರಿಗೆ ಭರವಸೆಯ ಬೆಳಕಾಗಿದೆ. 

    ಇದು ಅತ್ಯಾಧುನಿಕ ತಂತ್ರಜ್ಞಾನವಾಗಿದ್ದು, ಅಂಧರಿಗೆ ದೃಷ್ಟಿಯನ್ನು ನೀಡಲಿದೆ. ಈ ಮೂಲಕ ದೃಷ್ಟಿ ಹೀನರ ಬಾಳಲ್ಲಿ ಕ್ರಾಂತಿಯನ್ನು ಉಂಟುಮಾಡಲಿದೆ ಎಂದು ವಿಜ್ಞಾನಿಗಳು ಭರವಸೆ ವ್ಯಕ್ತಪಡಿಸಿದ್ದಾರೆ. ಈ ತಂತ್ರಜ್ಞಾನ ನೇರವಾಗಿ ಮೆದುಳಿನ (Brain) ದೃಷ್ಟಿ ಕೇಂದ್ರಕ್ಕೆ ಸಂಕೇತಗಳನ್ನು ಕಳುಹಿಸುತ್ತದೆ. ಈ ಮೂಲಕ ವ್ಯಕ್ತಿಗೆ ಚಿತ್ರಗಳನ್ನು ಹಾಗೂ ವಸ್ತುಗಳನ್ನು ಗ್ರಹಿಸಲು ಸಹಕರಿಸುತ್ತದೆ.

    ಈ ತಂತ್ರಜ್ಞಾನವನ್ನು ಪ್ರಾಣಿಗಳ ಮೇಲೆ ಪ್ರಯೋಗ ಮಾಡಿ ಅಧ್ಯಯನದಲ್ಲಿ ಭರವಸೆಯ ಫಲಿತಾಂಶವನ್ನು ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಇದೀಗ ಬಯೋನಿಕ್ ಕಣ್ಣನ್ನು ಮನುಷ್ಯನ ಮೇಲೆ ಕ್ಲಿನಿಕಲ್ ಪ್ರಯೋಗಕ್ಕಾಗಿ ತಯಾರಿ ಮಾಡಿಕೊಳ್ಳಲಾಗಿದೆ. 

    ಜೆನ್ನಾರಿಸ್ ಬಯೋನಿಕ್ ವಿಷನ್ ಸಿಸ್ಟಮ್ ಹೇಗೆ ಕಾರ್ಯನಿರ್ವಹಿಸುತ್ತದೆ? 

    ಜೆನ್ನಾರಿಸ್ ಬಯೋನಿಕ್ ವಿಷನ್ ಸಿಸ್ಟಮ್ ಒಂದು ದಶಕದ ಸಂಶೋಧನೆಯ ಫಲವಾಗಿದೆ. ಸಾಮಾನ್ಯವಾಗಿ ಕಣ್ಣುಗಳಿಂದ ಮೆದುಳಿಗೆ ದೃಶ್ಯ ಮಾಹಿತಿಯನ್ನು ರವಾನಿಸುವ ಹಾನಿಗೊಳಗಾದ ನರಗಳನ್ನು ಬೈಪಾಸ್ ಮಾಡುವ ಮೂಲಕ ಇದು ಕಾರ್ಯನಿರ್ವಹಿಸುತ್ತದೆ.

    ಪ್ರಾಣಿಗಳ ಮೇಲೆ ಯಶಸ್ವಿ ಅಧ್ಯಯನ

    ಈ ತಂತ್ರಜ್ಞಾನ‌ವನ್ನು ಕುರಿಗಳ ಮೇಲೆ ನಡೆಸಿದ ಪ್ರಯೋಗದಲ್ಲಿ  ಸ್ವಲ್ಪ ಮಟ್ಟಿನ ಯಶಸ್ಸು ಸಿಕ್ಕಿದೆ. ಮುಂಬರುವ ದಿನಗಳಲ್ಲಿ ಮನುಷ್ಯನ ಮೇಲಿನ ಪ್ರಯೋಗಗಳು ಯಶಸ್ವಿಯಾದರೆ ವ್ಯಾಪಕವಾಗಿ ಅಳವಡಿಕೆ ಸಾಧ್ಯವಾಗಲಿದೆ. 

    ದೃಷ್ಟಿ ಮರುಸ್ಥಾಪನೆಗೆ ಇದು ಹೇಗೆ ಸಹಾಯ ಮಾಡುತ್ತದೆ? 

    ಈ ತಂತ್ರಜ್ಞಾನವು ಮೆದುಳಿಗೆ ವಿದ್ಯುತ್ ಪ್ರಚೋದನೆಯನ್ನು ನೀಡುವ ವೈರ್‌ಲೆಸ್ ತಂತ್ರಜ್ಞಾನವನ್ನು ಒಳಗೊಂಡಿರುತ್ತದೆ. ಇದೆ ರೀತಿಯ ಹೆಬ್ಬೆರಳಿನ ಗಾತ್ರದಷ್ಟಿರುವ 11 ಇಂಪ್ಲಾಂಟ್‌ಗಳನ್ನು ಮೆದುಳಿನ ಮೇಲ್ಮೈಯಲ್ಲಿ ಇರಿಸಿ ಈ ಮೂಲಕ ಮೆದುಳಿನ ಕೋಶಗಳನ್ನು ಉತ್ತೇಜಿಸುತ್ತದೆ. ಈ ಮೂಲಕ ಅಂದ ವ್ಯಕ್ತಿಗೆ ದೃಷ್ಟಿ ನೀಡಲು ಇದು ಸಹಕಾರಿಯಾಗಲಿದೆ. 

    ಇದರಲ್ಲಿದೆ ಮೈಕ್ರೋ ಕ್ಯಾಮೆರಾ!

    ಜೆನ್ನಾರಿಸ್ ಉಪಕರಣದಲ್ಲಿ ಒಂದು ಸಣ್ಣ ಕ್ಯಾಮೆರಾ ಇದೆ. ಕ್ಯಾಮೆರಾದಿಂದ ಸೆರೆಹಿಡಿಯಲಾದ ಚಿತ್ರಗಳನ್ನು ಸಂಕೇತಗಳನ್ನು ನಂತರ 11 ಇಂಪ್ಲಾಂಟ್ ಸಾಧನಗಳಿಗೆ ರವಾನಿಸುತ್ತದೆ. ಈ‌ ಮೂಲಕ ಚಿತ್ರಗಳನ್ನು ಮೆದುಳಿನ ದೃಷ್ಟಿ ವಿಭಾಗಕ್ಕೆ ಈ ತಂತ್ರಜ್ಞಾನ ತಲುಪಿಸಲಿದೆ. 

    ಹೆಚ್ಚು ನೈಸರ್ಗಿಕ ಹಾಗೂ ನೈಜ ದೃಷ್ಟಿ ಅನುಭವವನ್ನು ಇದರಿಂದ ಪಡೆಯಲು ಸಾಧ್ಯವಿದೆ. ಈ ವ್ಯವಸ್ಥೆಯು ಪ್ರಸ್ತುತ ಮಾನವ ಕಣ್ಣಿನ 130-ಡಿಗ್ರಿ ಶ್ರೇಣಿಗಿಂತ ಸ್ವಲ್ಪ ಕಡಿಮೆಯಾದ 100-ಡಿಗ್ರಿ ಕ್ಷೇತ್ರವನ್ನು ಒದಗಿಸುತ್ತದೆ. ಹಿಂದಿನ ಫ್ಲಾಟ್-ಸೆನ್ಸಾರ್ ತಂತ್ರಜ್ಞಾನಗಳು ಕೇವಲ 70-ಡಿಗ್ರಿ ಶ್ರೇಣಿಯನ್ನು ಮಾತ್ರ ನೀಡುತ್ತಿತ್ತು. 

    ಈ ತಂತ್ರಜ್ಞಾನದಲ್ಲಿ ಹೆಚ್ಚು ಸ್ಪಂದಿಸುವ ನ್ಯಾನೊವೈರ್‌ಗಳ ಬಳಕೆಯು ಚಿತ್ರಗಳನ್ನು ಪ್ರಕ್ರಿಯೆಗೊಳಿಸಲು ಬೇಕಾದ ಸಮಯವನ್ನು ಬಹಳವಾಗಿ ಕಡಿಮೆ ಮಾಡಿದೆ. ಈ ಅದ್ಭುತ ಅಧ್ಯಯನವು ಕುರುಡುತನದ ಚಿಕಿತ್ಸೆಯ ಭವಿಷ್ಯದಲ್ಲಿ ಅತ್ಯಂತ ಪ್ರಯೋಜನಕಾರಿ ಎಂದೆನಿಸಲಿದೆ.

    ವಿಶ್ವದಾದ್ಯಂತ ಸುಮಾರು 31 ಕೋಟಿ ಅಂಧರು ಇದ್ದಾರೆ. ಅವರಲ್ಲಿ ಕೆಲವರಿಗೆ ದಾನಿಗಳ ಮೂಲಕ ದೃಷ್ಟಿ ನೀಡುವ ಯತ್ನ ಆಗುತ್ತಿದೆ. ಕೆಲವು ದೇಶಗಳಲ್ಲಿ ಜನರ ತಿಳುವಳಿಕೆ ಹಾಗೂ ಜಾಗೃತಿಯ ಕೊರತೆಯಿಂದ ಕಡಿಮೆ ಜನ ಮಾತ್ರ ಕಣ್ಗಳನ್ನು ದಾನ ಮಾಡುತ್ತಿದ್ದಾರೆ. ಇದೀಗ ನೂತನ ತಂತ್ರಜ್ಞಾನ ಅಂಧರ ಸಂಖ್ಯೆಯನ್ನು ಕಡಿಮೆ ಮಾಡುವ ಭರವಸೆ ಮೂಡಿಸಿದೆ. 

  • ರಾಮಲಲ್ಲಾರ ಕಣ್ಣನ್ನು ಚಿನ್ನದ ಉಳಿ, ಬೆಳ್ಳಿ ಸುತ್ತಿಗೆಯಲ್ಲಿ ಮಾಡಿದ್ದೇನೆ: ‌ಶಿಲ್ಪಿ ಅರುಣ್‌ ಯೋಗಿರಾಜ್

    ರಾಮಲಲ್ಲಾರ ಕಣ್ಣನ್ನು ಚಿನ್ನದ ಉಳಿ, ಬೆಳ್ಳಿ ಸುತ್ತಿಗೆಯಲ್ಲಿ ಮಾಡಿದ್ದೇನೆ: ‌ಶಿಲ್ಪಿ ಅರುಣ್‌ ಯೋಗಿರಾಜ್

    ಬೆಂಗಳೂರು: ಸುಮಾರು 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಬಾಲಕರಾಮ ನೆಲೆಯಾಗಿದ್ದಾರೆ. ಈ ರಾಮಲಲ್ಲಾನ ವಿಗ್ರಹ ನೋಡಿದರೆ ಸಾಕ್ಷಾತ್‌ ರಾಮನೇ ಬಂದು ನಿಂತಿರುವಂತೆ ಭಾಸವಾಗುತ್ತದೆ. ಇನ್ನು ಕಣ್ಣುಗಳನ್ನು ನೋಡಿದರೆ ನೀವು ಕೂಡ ಒಂದು ಬಾರಿ ಕಳೆದುಹೋಗುವುದತೂ ಪಕ್ಕಾ. ಈ ಕಣ್ಣುಗಳ ಕೆತ್ತನೆಯ ವೇಳೆ ತನಗಾದ ಅನುಭವವನ್ನು ಶಿಲ್ಪಿ ಅರುಣ್‌ ಯೋಗಿರಾಜ್‌ (Arun Yogiraj) ಅವರು ಪಬ್ಲಿಕ್‌ ಟಿವಿ ಜೊತೆ ಹಂಚಿಕೊಂಡಿದ್ದಾರೆ.

    ಅಯೋಧ್ಯೆಯಿಂದ ಬೆಂಗಳೂರಿಗೆ ವಾಪಸ್‌ ಆಗ್ತಿದ್ದಂತೆಯೇ ಹೆಚ್‌.ಆರ್‌ ರಂಗನಾಥ್‌ (HR Ranganath) ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಅವರು, ಕಣ್ಣಗಳನ್ನು ಗರ್ಭಗುಡಿ ಹೊರಗಡೆ ಕೆತ್ತಲಾಗಿದೆ. ಅದಕ್ಕಂತಲೇ ನೇತ್ರಮಿಲನ ಎಂಬ ಕಾರ್ಯಕ್ರಮದ ಮೂಲಕ ಮುಹೂರ್ತ ಫಿಕ್ಸ್‌ ಮಾಡಿದ್ದರು. ಇದಕ್ಕೂ ಮುನ್ನ ಸರಯೂ ನದಿಯಲ್ಲಿ ಸ್ನಾನ ಮಾಡಿಸಿ ಮುಖ ಕ್ಲೋಸ್‌ ಮಾಡಿದೆವು. ನಂತರ ಅವರು ಜೇನುತಪ್ಪ, ಹಳದಿ ಎಲ್ಲಾ ಹಾಕಿ ಕಣ್ಮುಚ್ಚಿ ಬಿಡುತ್ತಿದ್ದರು. ಈ ಕಣ್ಣುಗಳನ್ನು ಚಿನ್ನದ ಉಳಿ ಮತ್ತು ಬೆಳ್ಳಿ ಸುತ್ತಿಗೆಯಲ್ಲಿ ಮಾಡಿರುತ್ತೇನೆ ಎಂದು ಹೇಳಿದರು.

    ಈ ಕಣ್ಣುಗಳನ್ನು ಕೆತ್ತನೆ ಮಾಡುವಾಗ ತುಂಬಾ ಭಯ ಆಗಿತ್ತು. ಈ ಸಮಯದಲ್ಲಿ ನಾನು ನನ್ನ ತಂದೆಯನ್ನು ತುಂಬಾ ಮಿಸ್‌ ಮಾಡಿಕೊಳ್ಳುತ್ತಿದ್ದೆ. ಅವರ ಬಳಿ ನಾನು ಹೆಂಗೆ ಮಾಡಿದ್ದೇನೆ ಅಪ್ಪ ಅಂತಾ ಕೇಳಬೇಕಿತ್ತು. ಆದರೆ ಅಲ್ಲಿ ಯಾರೂ ಇರಲಿಲ್ಲ. ನಾನೊಬ್ಬನೇ ಇದ್ದೆ. ಭಯ ತಡೆದುಕೊಳ್ಳಲು ಆಗದೆ ಕೊನೆಗೆ ನನ್ನ ಸಹಪಾಠಿಗಳ ಜೊತೆ ಕಣ್ಣಿನ ಬಗ್ಗೆ ಹೇಳಿಕೊಂಡೆ ಎಂದರು.

    ಪ್ರಭಾವಳಿಯ ತೀರ್ಮಾನ ಮಾಡಿದ್ದು ಯಾರು..?: ಪ್ರಭಾವಳಿಯ ತೀರ್ಮಾನವನ್ನು ನಾನೇ ಮಾಡಿದ್ದಾಗಿದೆ. ವಿಷ್ಣುವಿನ ಒಂದು ರೂಪ ಆಗಿರುವುದರಿಂದ ಪ್ರಭಾವಳಿಯಲ್ಲಿ ದಶಾವತಾರ ತಗೊಂಡೆ ಎಂದು ಹೇಳಿದರು. ಇದನ್ನೂ ಓದಿ: ರಾಮಲಲ್ಲಾ ಮೂರ್ತಿ ಕೆತ್ತಲು ಆಯ್ಕೆಯಾಗಿದ್ದು ಹೇಗೆ?- ಶಿಲ್ಪಿ ಅರುಣ್‌ ಯೋಗಿರಾಜ್‌ ವಿವರಿಸಿದ್ದು ಹೀಗೆ

    ಮುಂದೆ ಏನು?: ಕೊಡುವ ಜವಾಬ್ದಾರಿಗಳನ್ನು ಮುಂದೆ ಹೇಗೆ ನಡೆಸಿಕೊಂಡು ಹೋಗಬೇಕಲು ಎಂಬುದು ನನ್ನ ಮುಂದಿರುವ ಚಾಲೆಂಜ್‌ ಆಗಿದೆ. ಉನ್ನತ ಮಟ್ಟದಲ್ಲಿ ಹೇಗೆ ಕೆಲಸ ಮಾಡಿ ವಾಪಸ್ ಕೊಡಬಹುದು ಎಂಬುದಷ್ಟೇ ನನ್ನ ಯೋಚನೆಗಳಾಗಿವೆ ಎಂದು ತಿಳಿಸಿದರು.

    ಒಟ್ಟಿನಲ್ಲಿ ಪ್ರಪಂಚದ ಅತೀ ಅದೃಷ್ಟವಂತ ನಾನು ಅಂತಾ ಅರುಣ್‌ ಯೋಗಿರಾಜ್‌ ಹೇಳಿದರು. ನಮ್ಮ ಕುಟುಂಬ ಸಾಕಷ್ಟು ವರ್ಷಗಳಿಂದ ಈ ಕೆಲಸ ಮಾಡಿಕೊಂಡು ಬರುತ್ತಿದೆ. ಇಂದು ಅಷ್ಟು ದೊಡ್ಡ ದೇವಸ್ಥಾನಕ್ಕೆ ನಾನೇ ವಿಗ್ರಹ ಮಾಡಿಕೊಟ್ಟೆ ಎಂಬುದನ್ನು ನನಗೆ ನಂಬೋಕೆ ಆಗ್ತಿಲ್ಲ. ವಿಗ್ರಹವನ್ನು ತೆಗೆದುಕೊಂಡು ಹೋಗುತ್ತಿದ್ದಾಗ ನನಗೆ ಮಗುವನ್ನು ಅರಮನೆಗೆ ತಂದಂತೆ ಭಾಸವಾಗ್ತಿತ್ತು ಎಂದರು.

    ಫೋಟೋಗಳಲ್ಲಿ ನೋಡುವುದಕ್ಕಿಂತಲೂ ರಾಮಲಲ್ಲಾರನ್ನು ಎದುರುಗಡೆ ನೋಡುವುದಕ್ಕೂ ತುಂಬಾ ವ್ಯತ್ಯಾಸಗಳಿವೆ. ನಾನೇ ಮಾಸ್ಕ್‌ ಹಾಕಿಕೊಂಡು ಹೋಗಿ ಎಲ್ಲರನ್ನೂ ಹೇಗಿದೆ ವಿಗ್ರಹ ಎಂದು ಕೇಳುತ್ತಿದ್ದೆ. ಎಲ್ಲರೂ ತುಂಬಾ ಚೆನ್ನಾಗಿದೆ ಅಂತ ಹೇಳಿದರು. ಅವತ್ತು ಹೋಗಿ ಒಳ್ಳೆ ನಿದ್ದೆ ಮಾಡಿದೆ ಎಂದರು.

  • ಬಾಕ್ಸ್‌ನಲ್ಲಿ ಕಣ್ಣು, ಕಿವಿ ಮೆದುಳು ಸಂಗ್ರಹಿಸಿಟ್ಟ ದುಷ್ಕರ್ಮಿಗಳು

    ಬಾಕ್ಸ್‌ನಲ್ಲಿ ಕಣ್ಣು, ಕಿವಿ ಮೆದುಳು ಸಂಗ್ರಹಿಸಿಟ್ಟ ದುಷ್ಕರ್ಮಿಗಳು

    ಮುಂಬೈ: ಕಟ್ಟಡದ ನೆಲಮಾಳಿಗೆಯಲ್ಲಿ ಬೀಗ ಹಾಕಲಾಗಿದ್ದ ಅಂಗಡಿಯೊಂದರಲ್ಲಿ ಮೃತ ದೇಹದ ಭಾಗಗಳು ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

    ಕಳೆದೆರಡು ದಿನಗಳಿಂದ ಅಂಗಡಿಯಿಂದ ದುರ್ವಾಸನೆ ಬರುತ್ತಿತ್ತು. ಈ ಕುರಿತಾಗಿ ಮಹಾರಾಷ್ಟ್ರದ ನಾಸಿಕ್ ನಗರದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆಗ ಪರಿಶೀಲನೆ ಮಾಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.

    ನಡೆದಿದ್ದೇನು?: ಮೂರ್ನಾಲ್ಕು ದಿನಗಳಿಂದ ಬೀಗ ಹಾಕಲಾಗಿದ್ದ ಅಂಗಡಿಯೊಂದರಿಂದ ದುರ್ನಾತ ಬರುತ್ತಿತ್ತು. ಅಕ್ಕಪಕ್ಕದವರಿಗೆ ಅನುಮಾನ ಉಂಟಾಗಿ ಪೊಲೀಸರಿಗೆ ಈ ವಿಷಯ ತಿಳಿಸಿದ್ದರು. ಆಗ ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಂಗಡಿಯ ಬಾಗಿಲು ಒಡೆದು ನೆಲಮಾಳಿಗೆಯನ್ನು ಪರಿಶೀಲನೆ ಮಾಡಿದ್ದಾರೆ.

    ತುಂಬಿಡಲಾಗಿದ್ದ ಗುಜರಿ ವಸ್ತುಗಳ ಮಧ್ಯೆ ಒಂದು ಬಾಕ್ಸ್‌ನಲ್ಲಿ ಮನುಷ್ಯರ ಕಣ್ಣು, ಕಿವಿ, ಮೆದುಳು, ಮುಖದ ಕೆಲವು ಭಾಗಗಳು ಪತ್ತೆಯಾಗಿವೆ. ಮಾನವನ ದೇಹದ ಭಾಗಗಳನ್ನು ವಶಕ್ಕೆ ತೆಗೆದುಕೊಂಡಿದ್ದೇವೆ. ಅಂಗಡಿಯ ಮಾಲೀಕನ ಇಬ್ಬರು ಪುತ್ರರು ವೈದ್ಯರಾಗಿದ್ದಾರೆ. ವೈದ್ಯಕೀಯ ಉದ್ದೇಶಗಳಿಗಾಗಿ ಸಂರಕ್ಷಿಸಿಟ್ಟಿರುವ ಸಾಧ್ಯತೆಯಿದೆ. ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಮುಂಬೈ ನಾಕಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

  • ಡಾರ್ಕ್ ಸರ್ಕಲ್‍ಗೆ ಇಲ್ಲಿದೆ ಪರಿಹಾರ

    ಡಾರ್ಕ್ ಸರ್ಕಲ್‍ಗೆ ಇಲ್ಲಿದೆ ಪರಿಹಾರ

    ಹೊಳೆಯುವ ಕಣ್ಣುಗಳ ಕೆಳಗೆ ಕಪ್ಪಾಗಿದ್ದರೆ, ನಿಮ್ಮ ಅಂದಕ್ಕೆ ಕಪ್ಪು ಚುಕ್ಕೆಯಾಗುತ್ತದೆ. ಡಾರ್ಕ್ ಸರ್ಕಲ್ ಸಮಸ್ಯೆ ಪ್ರತಿಯೊಬ್ಬರಿಗೂ ಕಾಡುತ್ತದೆ. ಕಣ್ಣಿನ ಕೆಳಗೆ ಕಪ್ಪಾಗುವುದು ಕೇವಲ ಮಹಿಳೆಯರಲ್ಲೇ ಅಲ್ಲದೇ ಪುರುಷರಲ್ಲು ಹೆಚ್ಚಾಗಿ ಕಂಡು ಬರುತ್ತದೆ. ಈ ಸಮಸ್ಯೆ ಇಲ್ಲಿದೆ ಪರಿಹಾರ

    * ಎಳೆ ಸೌತೆಕಾಯಿಯನ್ನು ಕತ್ತರಿಸಿಕೊಂಡು ನಿಮ್ಮ ಎರಡೂ ಕಣ್ಣುಗಳ ಮೇಲೆ ಇಟ್ಟುಕೊಳ್ಳಿ ನಿಮ್ಮ ಕಣ್ಣುಗಳು ಹೆಚ್ಚು ತಾಜಾತನದಿಂದ ಕೂಡಿರುತ್ತದೆ.  ಇದನ್ನೂ ಓದಿ: ದೇಹದ ತೂಕ ಮುಜುಗರ ಉಂಟುಮಾಡುತ್ತಿದೆಯಾ? ರಾಮಬಾಣದಂತಿವೆ ಈ ಮನೆಮದ್ದುಗಳು

    * ಟೊಮೆಟೋ ರಸ, ನಿಂಬೆ ಹಣ್ಣಿನ ರಸವನ್ನು ಚೆನ್ನಾಗಿ ಮಿಶ್ರಣ ಮಾಡಿ. ಕಣ್ಣುಗಳ ಸುತ್ತ ಹಚ್ಚಿ ಸುಮಾರು ಅರ್ಧ ಗಂಟೆಯವರೆಗೆ ಇದನ್ನು ಹಾಗೆ ಬಿಟ್ಟು, ಆಮೇಲೆ ತಂಪಾದ ನೀರಿನಿಂದ ಮುಖ ತೊಳೆದುಕೊಳ್ಳಬೇಕು. ಇದನ್ನೂ ಓದಿ: ಹೊಟ್ಟೆ ಸಮಸ್ಯೆ ನಿವಾರಣೆಗೆ ಇಲ್ಲಿದೆ ಮನೆಮದ್ದು

    * ಹತ್ತಿಯನ್ನು ರೋಸ್ ವಾಟರ್‌ನಲ್ಲಿ ಮುಳುಗಿಸಿ ಕಣ್ಣಿನ ಸುತ್ತ ಇಟ್ಟುಕೊಳ್ಳಿ ಇದರಿಂದ ಬಹುತೇಕ ಕಣ್ಣುಗಳ ಸಮಸ್ಯೆಗಳು ಬಗೆಹರಿಯುತ್ತವೆ. ಇದನ್ನೂ ಓದಿ: ದೇಹದ ತೂಕ ಮುಜುಗರ ಉಂಟುಮಾಡುತ್ತಿದೆಯಾ? ರಾಮಬಾಣದಂತಿವೆ ಈ ಮನೆಮದ್ದುಗಳು

    * ಆಲೂಗಡ್ಡೆ ರಸವನ್ನು ಹತ್ತಿಯ ಸಹಾಯದಿಂದ ಕಣ್ಣುಗಳ ಮೇಲೆ 10 ನಿಮಿಷಗಳ ಕಾಲ ಬಿಡಿ. ನಂತರ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದನ್ನೂ ಓದಿ: ಬಾಯಿ ದುರ್ವಾಸನೆ ಬರುತ್ತಿದ್ಯಾ? ಹಾಗಿದ್ರೆ ಈ ಮನೆ ಮದ್ದು ಬಳಕೆ ಮಾಡಿ

    * ಮಲಗುವ ಮೊದಲು ಕೊಬ್ಬರಿ ಎಣ್ಣೆಯಿಂದ ಮಸಾಜ್ ಮಾಡಿಕೊಳ್ಳಿ. ಇದರಿಂದ ಚರ್ಮ ಹೊಳಿಪಿನಿಂದ ಕೂಡಿರುತ್ತದೆ. ಇದನ್ನೂ ಓದಿ: ಮಜ್ಜಿಗೆಯಲ್ಲಿದೆ ಮದ್ದಿನ ಗುಣ- ಪ್ರತಿನಿತ್ಯ ಒಂದು ಲೋಟ ಮಜ್ಜಿಗೆ ಕುಡಿದು ನೋಡಿ

    * ಕ್ಯಾರೆಟ್, ಬಿಟ್ರೂಟ್‍ಗಳಂತಹ ಹಸಿ ತರಕಾರಿಗಳನ್ನು ಹೆಚ್ಚು ಸೇವಿಸಿ. ವಿಟಮಿನ್ ಮತ್ತು ಮಿನರಲ್ಸ್‍ಗಳಿಂದ ಕೂಡಿದ ತರಕಾರಿಗಳು ದೇಹವನ್ನೂ ಕೂಡ ಆರೋಗ್ಯಯುತವಾಗಿಡುತ್ತದೆ. ಇದನ್ನೂ ಓದಿ: ಅಂದಕಷ್ಟೇ ಅಲ್ಲ ಉತ್ತಮ ಆರೋಗ್ಯಕ್ಕೂ ಧರಿಸಿ ಕಾಲ್ಗೆಜ್ಜೆ

  • ಇಬ್ಬರ ಬಾಳಿಗೆ ಬೆಳಕಾದ ಅಪ್ಪು

    ಇಬ್ಬರ ಬಾಳಿಗೆ ಬೆಳಕಾದ ಅಪ್ಪು

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಪುನೀತ್ ಕಣ್ಣುಗಳನ್ನ ಇಬ್ಬರಿಗೆ ಯಶಸ್ವಿಯಾಗಿ ಜೋಡಿಸಲಾಗಿದೆ.

    PUNEET RAJKUMAR

    ಪುನೀತ್ ಅವರು ದಾನ ಮಾಡಿದ್ದ ಕಣ್ಣುಗಳನ್ನು ನಿನ್ನೆ ಒಬ್ಬರಿಗೆ, ಇಂದು ಒಬ್ಬರಿಗೆ ನೀಡಲಾಗಿತ್ತು. ಚಿಕಿತ್ಸೆ ಯಶಸ್ವಿಯಾಗಿದೆ. ಸಾವಿನಲ್ಲೂ ಸಾರ್ಥಕತೆ ಮೆರೆದ ಪುನೀತ್ ರಾಜ್‍ಕುಮಾರ್ ಅವರು ತಂದೆ ರಾಜ್‍ಕುಮಾರ್ ಹಾದಿಯಲ್ಲೇ ಸಾಗಿದ್ದಾರೆ. ವೈದ್ಯರು ಪುನೀತ್ ಕಣ್ಣುಗಳನ್ನ ಇಬ್ಬರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

    ನಾರಾಯಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ನಿನ್ನೆ ಒಬ್ಬರಿಗೆ ಆಪರೇಷನ್ ಮಾಡಲಾಗಿದೆ ಮತ್ತು ಇಂದು ಮತ್ತೊಬ್ಬರಿಗೆ ಆಪರೇಷನ್ ಮಾಡಲಾಗಿದೆ. ಈ ಮೂಲಕ ಪುನೀತ್ ಅವರ ಎರಡೂ ಕಣ್ಣುಗಳ ಅಳವಡಿಕೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಸಾವಿನ ಬಳಿಕವೂ ಇಬ್ಬರ ಬಾಳಿನಲ್ಲಿ ಅಪ್ಪು ಬೆಳಕಾಗಿದ್ದಾರೆ. ನಾರಾಯಣ ನೇತ್ರಾಲಯ ವೈದ್ಯರು ಮಂಗಳವಾರ ಶಸ್ತ್ರಚಿಕಿತ್ಸೆ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಸಂಪೂರ್ಣ ಮಾಹಿತಿ ನೀಡಲಿದ್ದಾರೆ. ಇದನ್ನೂ ಓದಿ: ನನ್ನ ಮಗುವನ್ನು ಕಳೆದುಕೊಂಡಿದ್ದೇನೆ – ಬಿಕ್ಕಿ ಬಿಕ್ಕಿ ಅತ್ತ ಶಿವಣ್ಣ

    PUNEET

    ಪುನೀತ್ ರಾಜ್‍ಕುಮಾರ್ ಅವರು ನಿಧನರಾದ ಬಳಿಕ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ನೀಡಲಾಗಿತ್ತು. ಇದೀಗ ಅವರ ಕಣ್ಣುಗಳಿಂದ ಇಬ್ಬರ ಬಾಳಲ್ಲಿ ಬೆಳಕು ಮೂಡಿದೆ. ಇಂದು ಪುನೀತ್ ರಾಜ್‍ಕುಮಾರ್ ಅವರ ಅಂತ್ಯಕ್ರಿಯೆಯನ್ನು ಈಡಿಗ ಸಂಪ್ರದಾಯದ ಮೂಲಕವಾಗಿ ನೆರವೇರಿಸಲಾಗಿದೆ. ಪುನೀತ್ ಅವರನ್ನು ಕಳೆದುಕೊಂಡ, ಅಭಿಮಾನಿಗಳು, ಕುಟುಂಬಸ್ಥರು, ಕಲಾವಿದರು ಕಣ್ಣೀರು ಹಾಕುತ್ತಿದ್ದಾರೆ. ಇದನ್ನೂ ಓದಿ: ಪುನೀತ್ ಸಾವು ದೊಡ್ಡ ಅನ್ಯಾಯ: ಸೃಜನ್ ಲೋಕೇಶ್ 

  • ಕಣ್ಣಿಗೆ ಖಾರದ ಪುಡಿ ಎರಚಿ ಯುವಕನ ಬರ್ಬರ ಕೊಲೆ

    ಕಣ್ಣಿಗೆ ಖಾರದ ಪುಡಿ ಎರಚಿ ಯುವಕನ ಬರ್ಬರ ಕೊಲೆ

    ರಾಯಚೂರು: ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಯುವಕನ ಮೇಲೆ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿಚಿನ್ನದಗಣಿ ಪಟ್ಟಣದಲ್ಲಿ ನಡೆದಿದೆ.

    ಹನೀಫ್ (30) ಕೊಲೆಯಾದ ಯುವಕನಾಗಿದ್ದಾನೆ. ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿಚಿನ್ನದಗಣಿ ಪಟ್ಟಣದಲ್ಲಿ ಹಾಡಹಗಲೇ ಯುವಕನೋರ್ವನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

    ಪಟ್ಟಣದ ಹೊಸ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಿಂದ ಯುವಕನ ಕೊಲೆ ನಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಟ್ಟಿ ಸಿಪಿಐ ಮಹಾಂತೇಶ್ ಸಜ್ಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಜನ್ಮದಿನಾಚರಣೆಯ ಸಂಭ್ರಮದಲ್ಲಿ ಸಿಂಪಲ್ ನಟಿ ಶ್ವೇತಾ ಶ್ರೀವಾತ್ಸವ್

     

    ಆಟೋಮೊಬೈಲ್ ಅಂಗಡಿ ನಡೆಸುತ್ತಿದ್ದ ಹನೀಫ್ ಜೊತೆ ಕೆಲ ಮೆಕಾನಿಕ್‍ಗಳು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡಿದ್ದರು. ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.

  • ಕಣ್ಣುಗಳನ್ನು ಕಿತ್ತು, ಗಂಟಲು ಸೀಳಿ ಲಾರಿ ಚಾಲಕನನ್ನು ಫ್ಯಾನಿಗೆ ನೇತಾಕಿದ ಕ್ರೂರಿ

    ಕಣ್ಣುಗಳನ್ನು ಕಿತ್ತು, ಗಂಟಲು ಸೀಳಿ ಲಾರಿ ಚಾಲಕನನ್ನು ಫ್ಯಾನಿಗೆ ನೇತಾಕಿದ ಕ್ರೂರಿ

    – ಚಾಲಕನ ಪತ್ನಿ ಜೊತೆ ಕೊಲೆಗಾರನ ಅಕ್ರಮ ಸಂಬಂಧದ ಶಂಕೆ
    – ಕೊಲೆಗೈದು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ

    ಭೋಪಾಲ್: ಲಾರಿ ಚಾಲಕನೋರ್ವನ ಕತ್ತು ಸೀಳಿ, ಕಣ್ಣುಗಳನ್ನು ಕಿತ್ತು ಕೊಲೆಗೈದು, ಆತ ಆತ್ಮಹತ್ಯೆ ಮಾಡಿಕೊಂಡಂತೆ ಬಿಂಬಿಸಲು ಆತನನ್ನು ಫ್ಯಾನಿಗೆ ನೇತಾಕಿದ ಕೊಲೆಗಾರ ಪರಾರಿಯಾದ ಘಟನೆ ಮಧ್ಯಪ್ರದೇಶದ ಮನಪುರ ಪಟ್ಟಣದಲ್ಲಿ ನಡೆದಿದೆ.

    ಮನಪುರದ ಸೊಂದಿಯಾ ಮೊಹಲ್ಲಾದ ನಿವಾಸಿ ಲಾರಿ ಚಾಲಕ ರವಿ(27) ಮೃತ ದುರ್ದೈವಿ. ಆರೋಪಿ ಬಗ್ಗೆ ಇನ್ನು ಮಾಹಿತಿ ಲಭ್ಯವಾಗಿಲ್ಲ. ಸೊಂದಿಯಾ ಮೊಹಲ್ಲಾದ ಅಪಾರ್ಟ್‍ಮೆಂಟ್ ಒಂದರಲ್ಲಿ ರವಿ ತನ್ನ ಪತ್ನಿ ಕವಿತಾ ಹಾಗೂ ಇಬ್ಬರು ಮಕ್ಕಳ ಜೊತೆ ವಾಸವಾಗಿದ್ದನು. ಶುಕ್ರವಾರ ಪತ್ನಿ ಹಾಗೂ ಮಕ್ಕಳು ಸಂಬಂಧಿಕರ ಮನೆಗೆ ತೆರೆಳಿದ್ದ ವೇಳೆ ದುಷ್ಕರ್ಮಿ ಮನೆಗೆ ನುಗ್ಗಿ ರವಿಯನ್ನು ಬರ್ಬರವಾಗಿ ಕೊಲೆಗೈದಿದ್ದಾನೆ.

    ಮೊದಲು ರವಿಯ ಕತ್ತು ಸೀಳಿ ಕೊಲೆಗೈದು, ಬಳಿಕ ಆತನ ಎರಡು ಕಣ್ಣುಗಳನ್ನೂ ಕಿತ್ತು ಆರೋಪಿ ಕ್ರೂರತೆ ಮೆರೆದಿದ್ದಾನೆ. ಅಷ್ಟೇ ಅಲ್ಲದೆ ಇದು ಕೊಲೆಯಲ್ಲ ಆತ್ಮಹತ್ಯೆ ಎಂದು ಬಿಂಬಿಸಲು ರವಿಯ ಮೃತದೇಹವನ್ನು ಫ್ಯಾನಿಗೆ ನೇತಾಕಿ, ನೇಣಿಗೆ ಶರಣಾಗಿರುವ ರೀತಿ ಕಾಣುವಂತೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.

    ಇತ್ತ ಅಕ್ಕಪಕ್ಕದ ಮನೆಯವರು ರವಿ ಕುಟುಂಬವೆಲ್ಲ ಸಂಬಂಧಿಕರ ಮನೆಗೆ ತೆರಳಿದ್ದಾರೆ, ಮನೆಯಲ್ಲಿ ಯಾರೂ ಇಲ್ಲ ಎಂದು ಭಾವಿಸಿದ್ದರು. ಆದರೆ ಘಟನೆ ನಡೆದ ಮರುದಿನ ರವಿ ಮನೆ ಬಳಿ ಹೋಗುತ್ತಿದ್ದ ನೆರೆ ಮನೆಯವರು ಅನುಮಾನ ಬಂದು ಕಿಟಕಿಯಲ್ಲಿ ನೋಡಿದಾಗ ರವಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

    ತಕ್ಷಣ ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಅಲ್ಲದೇ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ರವಿ ಪತ್ನಿ ಜೊತೆ ಕೊಲೆಗಾರನ ಅಕ್ರಮ ಸಂಬಂಧವಿರಬಹುದು ಎಂದು ಶಂಕಿಸಿದ್ದಾರೆ. ಜೊತೆಗೆ ಹಣ ಅಥವಾ ಆಸ್ತಿ ವಿಚಾರಕ್ಕೆ ಕೊಲೆ ಮಾಡಲಾಗಿದೆ ಎಂಬ ಮಾತುಗಳು ಕೂಡ ಕೇಳಿಬಂದಿದೆ.

  • ಅನುಮತಿ ಇಲ್ಲಾಂದ್ರೂ ಗಣಪನ ಕೂರಿಸಿದ್ರು – ಪಟಾಕಿ ಕಿಡಿಗೆ ಎಎಸ್‍ಐ ಕಣ್ಣೇ ಹೋಯ್ತು

    ಅನುಮತಿ ಇಲ್ಲಾಂದ್ರೂ ಗಣಪನ ಕೂರಿಸಿದ್ರು – ಪಟಾಕಿ ಕಿಡಿಗೆ ಎಎಸ್‍ಐ ಕಣ್ಣೇ ಹೋಯ್ತು

    ಬೆಂಗಳೂರು: ನಗರದಲ್ಲಿ ಗಣೇಶನ ವಿಸರ್ಜನೆ ವೇಳೆ ಪಟಾಕಿ ಹೊಡೆದಿದ್ದರಿಂದ ಅದರ ಕಿಡಿ ಎಎಸ್‍ಐ ಕಣ್ಣಿಗೆ ಬಿದ್ದು, ಗಂಭೀರವಾಗಿ ಗಾಯವಾಗಿರುವ ಘಟನೆ ನಡೆದಿದೆ.

    ಈ ಘಟನೆ ಭಾನುವಾರ ಗಣೇಶನ ವಿಸರ್ಜನೆ ವೇಳೆ ನಡೆದಿದ್ದು, ತಡವಾಗಿ ಬೆಳಕಿಗೆ ಬೆಂದಿದೆ. ಆರ್.ಟಿ ನಗರದದಲ್ಲಿ ಗಣೇಶನನ್ನು ಕೂರಿಸಲು ಪೋಲೀಸರ ಅನುಮತಿಯನ್ನು ಕೇಳಿದ್ದಾರೆ. ಆದರೆ ಪೊಲೀಸರು ಇದಕ್ಕೆ ಒಪ್ಪದೆ ನಿರಾಕರಿಸಿದ್ದರು. ಇದನ್ನೂ ಓದಿ: ಗಣಪತಿ ವಿಸರ್ಜನೆ ವೇಳೆ ಎಸ್‍ಐರನ್ನು ಹೊತ್ತು ಕುಣಿದ ವಿಡಿಯೋ ವೈರಲ್

    ಪೊಲೀಸರು ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೊಡದಿದ್ದರೂ ಆರ್.ಟಿ.ನಗರ ಪೋಸ್ಟ್ ಆಫೀಸ್ ಮುಂಭಾಗದ ರಸ್ತೆಯಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಲಾಗಿತ್ತು. ಭಾನುವಾರ ಸಂಜೆ ಗಣೇಶನ ವಿಸರ್ಜನೆ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಪಟಾಕಿ ಮತ್ತು ಡಿಜೆಯನ್ನು ಕೂಡ ಏರ್ಪಡಿಸಲಾಗಿತ್ತು.

    ಪೊಲೀಸರು ಬಂದು ಪಟಾಕಿ ಹೊಡೆಯದೆ ಗಣೇಶ ವಿಸರ್ಜನೆ ಮಾಡಿ ಎಂದು ಸೂಚಿಸಿದ್ದಾರೆ. ಆದ್ರೆ ಅವರ ಮಾತನ್ನು ಲೆಕ್ಕಿಸದೆ ಹುಡುಗರ ಗುಂಪು ಪಟಾಕಿಯನ್ನು ಸಿಡಿಸಿದ್ದಾರೆ. ಇದೇ ವೇಳೆ ಅಲ್ಲಿಗೆ ಆಗಮಿಸಿದ್ದ ಎಎಸ್‍ಐ ನಾರಾಯಣಪ್ಪ ಅವರ ಬಲಗಣ್ಣಿಗೆ ಪಟಾಕಿ ಕಿಡಿ ತಗುಲಿ ಗಂಭೀರವಾಗಿ ಗಾಯವಾಗಿದೆ. ನಂತರ ಸಹ ಪೊಲೀಸರು ತಕ್ಷಣವೇ ನಾರಾಯಣಪ್ಪನನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು.

    ಕಣ್ಣಿಗೆ ಬಲವಾಗಿ ಗಾಯವಾಗಿದ್ದರಿಂದ ಕಣ್ಣನ್ನು ಕಳೆದುಕೊಂಡಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಬಳಿಕ ಅವರನ್ನು ಬೇರೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸದ್ಯ ಸಹ ಪೊಲೀಸರು ಅವರನ್ನು ಮನೆಗೆ ಕರೆದುಕೊಂಡು ಹೋಗಿದ್ದು, ಇದೀಗ ನಾರಾಯಣಪ್ಪ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ವೈದ್ಯರು 18 ದಿನಗಳ ಬಳಿಕ ಆಪರೇಷನ್ ಮಾಡಬೇಕು ಎಂದು ಹೇಳಿದ್ದಾರೆ ಅಂತ ತಿಳಿದುಬಂದಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆಸ್ತಿಗಾಗಿ ಬೆರಳುಗಳಿಂದ ತಂದೆಯ ಕಣ್ಣುಗುಡ್ಡೆಯನ್ನೇ ಕಿತ್ತ ಪಾಪಿ ಮಗ!

    ಆಸ್ತಿಗಾಗಿ ಬೆರಳುಗಳಿಂದ ತಂದೆಯ ಕಣ್ಣುಗುಡ್ಡೆಯನ್ನೇ ಕಿತ್ತ ಪಾಪಿ ಮಗ!

    ಬೆಂಗಳೂರು: ಆಸ್ತಿ ಬರೆದುಕೊಡಲಿಲ್ಲ ಅಂತಾ ಪಾಪಿ ಮಗನೊಬ್ಬ ತಂದೆಯ ಕಣ್ಣು ಕಿತ್ತು ಹಾಕಿರುವ ಪೈಶಾಚಿಕ ಕೃತ್ಯ ಜೆ.ಪಿ.ನಗರದ ಶಾಕಾಂಬರಿ ಬಡವಾಣೆಯಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಸುಮಾರು 12.30ಕ್ಕೆ ಈ ಭಯಾನಕ ಘಟನೆ ನಡೆದಿದೆ.

    ಚೇತನ್ ಎಂಬಾತ ತನ್ನ ಬೆರಳುಗಳಿಂದಲೇ 65 ವರ್ಷದ ತಂದೆ ಪರಮೇಶ್ ಅವರ ಕಣ್ಣು ಕಿತ್ತು ಹಾಕಿದ್ದಾನೆ. ವಿಧಾನಸೌಧದ ಮುಖ್ಯ ಕಾರ್ಯದರ್ಶಿಗಳ ಕಚೇರಿಯ ನಿವೃತ್ತ ನೌಕರರಾಗಿರುವ ಪರಮೇಶ್ ಶಾಕಾಂಬರಿ ನಗರದಲ್ಲಿ ಸ್ವಂತ ಮನೆ ಮಾಡಿಕೊಂಡು ನಿವೃತ್ತಿ ಜೀವನ ನಡೆಸುತ್ತಿದ್ದರು. ಎರಡನೇ ಮಗನಾಗಿರುವ ಚೇತನ್ ಆಸ್ತಿಯಲ್ಲಿ ಪಾಲು ಬೇಕೆಂದು ತಂದೆಯೊಂದಿಗೆ ಜಗಳ ಮಾಡಿದ್ದಾನೆ. ಈ ವೇಳೆ ತನ್ನ ಬೆರಳುಗಳ ಉಗುರಿನ ಸಹಾಯದಿಂದ ಕಣ್ಣು ಗುಡ್ಡೆಯನ್ನು ಕಿತ್ತು ಬಿಸಾಕಿದ್ದಾನೆ. ಮತ್ತೊಂದು ಕಣ್ಣು ಸಂಪೂರ್ಣ ರಕ್ತಮಯವಾಗಿದೆ.

    ಘಟನೆ ಬಳಿಕ ಭಯಬೀತನಾದ ಚೇತನ್ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಸ್ಥಳೀಯರು ಚೇತನ್ ನನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ. ಮಗನ ಹಲ್ಲೆಯಿಂದ ಗಾಯಗೊಂಡಿದ್ದ ಪರಮೇಶ್ ಅವರನ್ನು ಜೆ.ಪಿ.ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪರಮೇಶ್ ರನ್ನು ನೋಡಿದ ವೈದ್ಯರು ಎರಡು ಕಣ್ಣುಗಳು ಸಂಪೂರ್ಣ ಹಾನಿಗೊಳಗಾಗಿವೆ ಎಂದು ತಿಳಿಸಿದ್ದಾರೆ.

    ಚೇತನ್ ಓರ್ವ ಡ್ರಗ್ ಅಡಿಕ್ಟ್ ಆಗಿದ್ದು, ಮನೆಯಲ್ಲಿ ಹಣಕ್ಕಾಗಿ ಪೋಷಕರನ್ನು ಪದೇ ಪದೇ ಪೀಡಿಸುತ್ತಿದ್ದನಂತೆ. ಪೋಷಕರು ಹಣ ಕೊಡದೇ ಇದ್ದಾಗ ಆಸ್ತಿಯಲ್ಲಿ ಪಾಲು ಬೇಕೆಂದು ಹಠ ಹಿಡಿದಿದ್ದಾನೆ. ಒಂದು ವೇಳೆ ಆಸ್ತಿಯಲ್ಲಿ ಭಾಗ ನೀಡಿದ್ರೆ ಹಾಳು ಮಾಡ್ತಾನೆ ಅಂತಾ ಪೋಷಕರು ಪಾಲು ನೀಡಿರಲಿಲ್ಲ ಎಂಬ ಮಾಹಿತಿಗಳು ಲಭ್ಯವಾಗಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv